Tag: tumkuru

  • ಸಿದ್ದಗಂಗಾ ಮಠವನ್ನು ಪವಿತ್ರ ಸ್ಥಳ ಎಂದು ಬಣ್ಣಿಸಿದ್ದರು ಮಾಜಿ ಪ್ರಧಾನಿ ವಾಜಪೇಯಿ!

    ಸಿದ್ದಗಂಗಾ ಮಠವನ್ನು ಪವಿತ್ರ ಸ್ಥಳ ಎಂದು ಬಣ್ಣಿಸಿದ್ದರು ಮಾಜಿ ಪ್ರಧಾನಿ ವಾಜಪೇಯಿ!

    ತುಮಕೂರು: ಸಿದ್ದಗಂಗಾ ಹಲವು ‘ಗಂಗಾ’ಗಳ ಸಂಗಮ ಪ್ರವಾಹ. ಇಲ್ಲಿ ಕರ್ಮ ಗಂಗಾ, ಜ್ಞಾನ ಗಂಗಾ, ಗೌರವ ಗಂಗಾ ಹಾಗೂ ಕಾರುಣ್ಯಗಂಗಾಗಳು ಸಮರಸಗೊಂಡು ಹರಿಯುತ್ತಿವೆ. ಜ್ಞಾನ ಯಜ್ಞ ನಡೆದಿದ್ದು ಶತಮಾನಗಳ ಪರ್ಯಂತ ಮುಂದುವರೆದಿದೆ. ಪೂಜ್ಯ ಶ್ರೀ ಸ್ವಾಮೀಜಿಯವರ ರೂಪದಲ್ಲಿ ಆಧ್ಯಾತ್ಮಿಕ ಶಕ್ತಿ ಶ್ರೀಮಠದ ಪರಿಸರವನ್ನೆಲ್ಲಾ ಕ್ರಿಯಾಶೀಲಗೊಳಿಸಿದೆ. ಕೇವಲ ಭೌತಿಕವಾಗಿಯಲ್ಲ. ನೈತಿಕ ಶಕ್ತಿಯ ಸ್ಫೂರ್ತಿ ಇಲ್ಲಿನ ತಾಯಿ ಬೇರಾಗಿದೆ.

    ಮನುಷ್ಯ ಒಳ್ಳೆಯವನಾಗುವುದು ಮುಖ್ಯ. ಒಳ್ಳೆಯವನಾಗುವುದು ಹೇಗೆ? ಒಂದು ಶಿಕ್ಷಣದಿಂದ ಅಥವಾ ತರಬೇತಿಯಿಂದ, ಇನ್ನೊಂದು ಸಂಸ್ಕಾರದಿಂದ. ಸರ್ಕಾರಿ ಶಾಲೆಗಳು ಶಿಕ್ಷಣವನ್ನು ನೀಡುತ್ತವೆ. ಆದರೆ ಸಂಸ್ಕಾರವನ್ನು ಕೊಡಲಾರವು. ಈ ಎರಡೂ ಅಂದರೆ ಶಿಕ್ಷಣ ಮತ್ತು ಸಂಸ್ಕಾರ ಬೇರೆ ಬೇರೆ. ಇದನ್ನೂ ಓದಿ: ಸಿದ್ದಗಂಗಾ ಶ್ರೀಗಳಿಗಾಗಿ ವಿಮಾನದಲ್ಲಿಯೇ ಕುಳಿತು ಕವನ ಬರೆದ ಅಬ್ದುಲ್ ಕಲಾಂ!

    ಕಾಲೇಜು ನೀಡುವ ಪದವಿ ಪ್ರಮಾಣ ಪತ್ರವನ್ನು ಪಡೆಯಬಹುದು. ಆದರೆ ಕಾಲೇಜನ್ನು ಬಿಟ್ಟ ನಂತರ ಎಂಥ ಜೀವನವನ್ನು ನಡೆಸಬೇಕೆಂಬುದನ್ನು ಅವರಿಂದ ಪಡೆಯಲಾಗುವುದಿಲ್ಲ. ಆದರೆ ಶ್ರೀ ಸಿದ್ದಗಂಗಾ ಮಠದಲ್ಲಿ ಶಿಕ್ಷಣ ಪಡೆದಾತ ಸಂಸ್ಕಾರಜೀವಿಯಾಗಿ ಹೊರಬರುತ್ತಾನೆ. ಅವನು ಉನ್ನತ ಯಶಸ್ಸು ಮತ್ತು ಉತ್ತಮ ಸಾಂಸ್ಕೃತಿಕ ಮೌಲ್ಯಗಳೊಂದಿಗೆ ಹೊರಬರುವುದಲ್ಲದೆ ಸಮಾಜಕ್ಕೆ ಉಪಕಾರಿಯಾಗಿ ಬಾಳುತ್ತಾನೆ. ಸಿದ್ದಗಂಗಾದಂತಹ ಕ್ಷೇತ್ರಗಳು ನಮಗೆ ಪವಿತ್ರ ಸ್ಥಳಗಳು. ಶ್ರೀಮಠ ತನ್ನ ಸೇವಾ ಚಟುವಟಿಕೆಗಳ ಮೂಲಕ ನೈತಿಕ ಜೀವನದ ಪ್ರಾಮುಖ್ಯತೆಯನ್ನು ಆಚರಿಸಿ ತೋರಿಸುತ್ತಿರುವುದು ಇತಿಹಾಸಕ್ಕೆ ಸುಯೋಗ್ಯವಾದ ನಿದರ್ಶನವಾಗಿದೆ. ಇದನ್ನೂ ಓದಿ: ಶ್ರೀಗಳ 50 ಶ್ರೀವಾಣಿಗಳು – ಕರ್ತನೆಂಬ ಅಹಂಕಾರ ಬಿಡು. ಕಿಂಕರನೆಂಬ ಭಾವ ಬೆಳೆಸಿಕೋ

    https://www.youtube.com/watch?v=2lK_EgaS96U

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶ್ರೀಗಳ ಆರೋಗ್ಯ ವಿಚಾರಿಸಿದ್ರು ಯದುವೀರ್ ಒಡೆಯರ್

    ಶ್ರೀಗಳ ಆರೋಗ್ಯ ವಿಚಾರಿಸಿದ್ರು ಯದುವೀರ್ ಒಡೆಯರ್

    ತುಮಕೂರು: ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದರಿಂದ ಕಾಯಕಯೋಗಿ ಸಿದ್ದಗಂಗಾ ಶ್ರೀಗಳನ್ನು ಇಂದು ಬೆಳಗಿನ ಜಾವ ಮಠಕ್ಕೆ ಶಿಫ್ಟ್ ಮಾಡಲಾಗಿದೆ. ಮೈಸೂರಿನ ಮಹರಾಜ ಯದುವೀರ್ ಒಡೆಯರ್ ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ.

    ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಯದುವೀರ್ ಒಡೆಯರ್, ನಾನು ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದೆ. ಹಾಗೇ ಶ್ರೀಗಳನ್ನು ನೋಡಲು ಬಂದಿದ್ದೇನೆ. ಶ್ರೀಗಳು ಆರೋಗ್ಯವಾಗಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಅಂತ ಚಾಮುಂಡೇಶ್ವರಿ ತಾಯಿಯಲ್ಲಿ ಪ್ರಾರ್ಥನೆ ಮಾಡ್ತೇನೆ. ಶ್ರೀಗಳು ವಿಶ್ರಾಂತಿಯಲ್ಲಿದ್ದರಿಂದ ಅವರನ್ನು ಎಚ್ಚರಿಸಲು ಹೋಗಲಿಲ್ಲ. ಅವರ ಜೊತೆ ಮಾತನಾಡುವ ಅವಕಾಶ ಸಿಗಲಿಲ್ಲ. ಹಾಗಾಗಿ ನಾನು ಅವರ ಆಶೀರ್ವಾದ ಪಡೆದುಕೊಂಡು, ಅವರನ್ನು ನೋಡಿಕೊಂಡು ಬಂದೆ” ಎಂದು ಹೇಳಿದರು.

    ಸ್ವಾಮೀಜಿಗಳ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಏರುಪೇರು ಬಂದಿಲ್ಲ. ರಾತ್ರಿಯಿಂದ ಮಠಕ್ಕೆ ಹೋಗುವಂತೆ ಸ್ವಾಮೀಜಿಗಳು ಸೂಚನೆ ನೀಡುತ್ತಿದ್ದರು. ಇಂದು ಅಥವಾ ನಾಳೆ ಶಿಫ್ಟ್ ಮಾಡಬೇಕಂತ ಮಠದ ಹಿರಿಯರು ಹಾಗೂ ಎಸ್‍ಪಿ ಸೇರಿ ಸಭೆ ನಡೆಸಿ ನಿರ್ಧಾರ ಮಾಡಿದ್ದೇವು. ಆದರೆ ರಾತ್ರಿಯಿಂದ ಸ್ವಾಮೀಜಿಗಳು ಮಠಕ್ಕೆ ಹೋಗಬೇಕೆಂದು ಚಡಪಡಿಸುತ್ತಿದ್ದರು. ಆದ್ದರಿಂದ ಬೆಳಗಿನ ಜಾವ ಈ ರೀತಿ ನಿರ್ಧಾರ ತೆಗೆದುಕೊಂಡು ಶಿಫ್ಟ್ ಮಾಡಲಾಗಿದೆ ಎಂದು ಕಿರಿಯ ಶ್ರೀಗಳು ತಿಳಿಸಿದ್ದಾರೆ.

    ಶ್ರೀಗಳು ಆಸ್ಪತ್ರೆಯಿಂದ ಮಠಕ್ಕೆ ಹೋಗುವ ಹಂಬಲ ವ್ಯಕ್ತಪಡಿಸಿದ್ದರು. ಹಾಗಾಗಿ ಶ್ರೀಗಳನ್ನು ಮಠಕ್ಕೆ ಶಿಫ್ಟ್ ಮಾಡಿದ್ದೇವೆ. ಆಸ್ಪತ್ರೆಯಲ್ಲಿ ನೀಡುತ್ತಿದ್ದ ಚಿಕಿತ್ಸೆ ಮಠದಲ್ಲೇ ಮುಂದುವರೆಸಿದ್ದೇವೆ. ನಿಶ್ಯಕ್ತಿ ಮತ್ತು ಉಸಿರಾಟದ ತೊಂದರೆ ಹೊರತುಪಡಿಸಿದರೆ ಬೇರೆ ಎಲ್ಲಾ ಪ್ಯಾರಾಮೀಟರ್ಸ್ ಸರಿಯಾಗಿದೆ. ಶ್ವಾಸಕೋಶದ ಸೋಂಕು ಕಡಿಮೆಯಾಗಿದೆ. ಆಪರೇಷನ್ ಮಾಡಿದ ಗಾಯ ವಾಸಿಯಾಗಿದೆ. ಭಕ್ತಾದಿಗಳು ಆತಂಕಪಡುವ ಅವಶ್ಯ ಇಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ – ಜಯದೇವ ಹೃದ್ರೋಗ ತಜ್ಞರಿಂದ ತಪಾಸಣೆ

    ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ – ಜಯದೇವ ಹೃದ್ರೋಗ ತಜ್ಞರಿಂದ ತಪಾಸಣೆ

    ತುಮಕೂರು: ಜಯದೇವ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಮಂಜುನಾಥ್ ನೇತೃತ್ವದ ನುರಿತ ವೈದ್ಯರ ತಂಡ ಸಿದ್ದಗಂಗಾ ಶ್ರೀಗಳ ಆರೋಗ್ಯ ತಪಾಸಣೆ ನಡೆಸಿದೆ. ಒಟ್ಟು ಐದು ಜನ ತಜ್ಞರ ತಂಡ ಸುಮಾರು 1 ಗಂಟೆಗಳ ಕಾಲ ಶ್ರೀಗಳ ತಪಾಸಣೆ ನಡೆಸಿ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ತಿಳಿಸಿದೆ.

    ಶ್ರೀಗಳ ಆರೋಗ್ಯ ತಪಾಸಣೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಾ. ಮಂಜುನಾಥ್ ಅವರು, ಶ್ರೀಗಳ ರಕ್ತದೊತ್ತಡ, ಹೃದಯ ಬಡಿತ ಎಲ್ಲವೂ ಸಹಜ ಸ್ಥಿತಿಗೆ ಬಂದಿದ್ದು, ಶ್ವಾಸಕೋಶದ ಸೋಂಕು ಕೂಡಾ ಕಡಿಮೆಯಾಗಿದೆ. ಆದರೆ ಶ್ರೀಗಳಿಗೆ ನಿಶ್ಯಕ್ತಿ ಇದ್ದು, ಬೆನ್ನು ಬಾಗಿರುವುದರಿಂದ ಶ್ವಾಸ ಕೋಶದ ಮೇಲೆ ಪರಿಣಾಮ ಬೀರುತ್ತಿದೆ. ಪರಿಣಾಮ ಉಸಿರಾಟಕ್ಕೆ ತೊಂದರೆಯಾಗುತ್ತಿರುವ ಕಾರಣ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದೆ. ಆದ್ರೂ ಶ್ರೀಗಳು ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದರು.

    ಶ್ರೀಗಳು ಕಣ್ಣು ಬಿಟ್ಟು ನೋಡುತ್ತಿದ್ದು, ಸಿದ್ದಗಂಗಾ ಆಸ್ಪತ್ರೆಯಲ್ಲಿ ವಿಶ್ವ ದರ್ಜೆಯ ಐಸಿಯು ವ್ಯವಸ್ಥೆ ಇದೆ. ಇದರಿಂದ ಬೇರೆ ಕಡೆ ಶಿಪ್ಟ್ ಮಾಡುವ ಅವಶ್ಯಕತೆ ಇಲ್ಲ. ರಾಜ್ಯ ಸರ್ಕಾರದ ನಿರ್ದೇಶನದಂತೆ ನಾವು ಐದು ಜನ ವೈದ್ಯರು ಬಂದಿದ್ದೇವೆ. ಶ್ರೀಗಳ ದೇಹದಲ್ಲಿ ಪ್ರೊಟೀನ್ ಅಂಶ ಏರಿಕೆಯಾಗಿರುವುದರಿಂದ ಅವರ ಆರೋಗ್ಯ ಗುಣವಾಗುತ್ತೆ ಎಂಬ ಆಶಾಭಾವನೆ ಇದೆ ಎಂದರು.

    ಸಿದ್ದಗಂಗಾ ಶ್ರೀ ಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ತುಮಕೂರಿನ ಆಸ್ಪತ್ರೆಗೆ ಸುತ್ತೂರು ಶ್ರೀ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೆಳಗೆ ಮಲಗಿದ್ದರೂ ಬಾಲಕಿಯನ್ನ ಮಾತಾಡಿಸ್ಲಿಲ್ಲ- ತುಮಕೂರಲ್ಲಿ ಹೆಲ್ತ್ ಮಿನಿಸ್ಟರ್ ದರ್ಪ

    ಕೆಳಗೆ ಮಲಗಿದ್ದರೂ ಬಾಲಕಿಯನ್ನ ಮಾತಾಡಿಸ್ಲಿಲ್ಲ- ತುಮಕೂರಲ್ಲಿ ಹೆಲ್ತ್ ಮಿನಿಸ್ಟರ್ ದರ್ಪ

    ತುಮಕೂರು: ಆಸ್ಪತ್ರೆಯಲ್ಲಿ ಸಿಗುವ ವೈದ್ಯಕೀಯ ಸೇವೆ ಹಾಗೂ ಅಧಿಕಾರಿಗಳ ಕಾರ್ಯ ವೈಖರಿಯನ್ನು ಪರಿಶೀಲನೆ ನಡೆಸಲು ಆಯಾ ಇಲಾಖೆ ಸಚಿವರು, ಉನ್ನತ ಅಧಿಕಾರಿಗಳು ಭೇಟಿ ನೀಡುವುದು ಸಾಮಾನ್ಯ. ಇದರಂತೆ ಆರೋಗ್ಯ ಸಚಿವರಾದ ಶಿವಾನಂದ ಪಾಟೀಲ್ ಅವರು ಇಂದು ಜಿಲ್ಲೆಯ ಆಸ್ಪತ್ರಗೆ ಭೇಟಿ ನೀಡಿದ್ದರು. ಆದರೆ ಸಚಿವರು ಭೇಟಿ ನೀಡಿದ ವೇಳೆಯೂ ಕೂಡ ಬಾಲಕಿಯೊಬ್ಬಳು ನೆಲದ ಮೇಲೆ ಮಲಗಿ ಚಿಕಿತ್ಸೆ ಪಡೆಯುತ್ತಿದ್ದರೂ ಸಚಿವರು ಕಂಡು ಕಾಣದಂತೆ ತೆರಳಿದ್ದಾರೆ.

    ತಮ್ಮ ಭೇಟಿ ವೇಳೆ ಆಸ್ಪತ್ರೆ ಒಳಬಂದ ಸಚಿವರು ರೋಗಿಗಳನ್ನು ವಿಚಾರಿಸದೇ ತೆರಳಿದ್ದಾರೆ. ಅಲ್ಲದೇ ಆಸ್ಪತ್ರೆಯಲ್ಲಿ ನೆಲದ ಮೇಲೆ ಬಾಲಕಿ ಮಲಗಿರುವುದನ್ನು ಕಂಡ ವೈದ್ಯರು ಮಾತನಾಡಿಸದೇ ಮುಂದೆ ಸಾಗಿದ್ದಾರೆ. ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ಎಲ್ಲಾ ವಾರ್ಡ್ ಗಳಲ್ಲಿ ಸುತ್ತಾಡಿ ಸಮಯ ವ್ಯರ್ಥ ಮಾಡಿದ್ದಾರೆ.

    ಆಸ್ಪತ್ರೆಯ ವಾರಂಡದಲ್ಲಿ ಮಲಗಿದ್ದ ಬಾಲಕಿಯನ್ನ ಸೌಜನ್ಯಕ್ಕೂ ಮಾತನಾಡಿಸದೇ ಮುಂದೆ ಸಾಗಿದರು. ಸಚಿವರು ಆಗಮಿಸುತ್ತಿದ್ದಾಗ ಬಾಲಕಿ ಮಲಗಿದ್ದಳು. ಇದನ್ನು ಕಂಡ ಓರ್ವ ಎದ್ದೇಳು ಎಂದು ಹೇಳಿದ್ದರೂ ಕೂಡ ಸಚಿವರು ಗಮನಿಸದೇ ಮುಂದೆ ಸಾಗಿದ್ದಾರೆ. ವಾರ್ಡ್ ಗಳಲ್ಲಿ ಕೂಡ ಸಂಬಂಧ ಪಟ್ಟ ಅಧಿಕಾರಿಗಳ ಹತ್ತಿರ ಮಾತ್ರ ಮಾಹಿತಿ ಪಡೆದು ತೆರಳಿದರು.

    ಈ ಕುರಿತು ಪ್ರತಿಕ್ರಿಯೆ ನೀಡಿದ ಬಾಲಕಿಯ ಅಜ್ಜಿ, ಬಾಲಕಿಗೆ ಕೆಮ್ಮು ಜ್ವರ ಇತ್ತು. ಆದ್ದರಿಂದ ವೈದ್ಯರು ಬರುತ್ತಾರೆ ಎಂದು ಕಾದು ಕುಳಿತ್ತಿದ್ದೆವು. ಬಾಲಕಿಯ ತಾಯಿ ಕೂಡ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ದಾಖಲಾಗಿದ್ದು, ಆದ್ದರಿಂದ ನಾವು ವರಾಂಡದಲ್ಲೇ ಮಲಗಿದ್ದಾಗಿ ತಿಳಿಸಿದ್ದಾರೆ.

    ಸುಳ್ವಾಡಿ ಪ್ರಕರಣದ ಸಂದರ್ಭದಲ್ಲೂ ಸಚಿವರು ಭೇಟಿ ನೀಡದೇ ಬೇಜವಾಬ್ದಾರಿ ಉತ್ತರ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮನೆಯಲ್ಲಿ ಟಿವಿ ಇಲ್ಲ, ಗೊತ್ತಿಲ್ದೆ ಬಂಡವಾಳ ಹಾಕ್ಬಿಟ್ಟೆ- ಬಂದ್‍ನಿಂದ 200-300 ನಷ್ಟ ಆಯ್ತು: ಹೂ ಮಾರುವ ವೃದ್ಧೆ

    ಮನೆಯಲ್ಲಿ ಟಿವಿ ಇಲ್ಲ, ಗೊತ್ತಿಲ್ದೆ ಬಂಡವಾಳ ಹಾಕ್ಬಿಟ್ಟೆ- ಬಂದ್‍ನಿಂದ 200-300 ನಷ್ಟ ಆಯ್ತು: ಹೂ ಮಾರುವ ವೃದ್ಧೆ

    ತುಮಕೂರು: ಎರಡು ದಿನ ಕಾರ್ಮಿಕ ಮುಷ್ಕರ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಭಾರತ್ ಬಂದ್ ಘೋಷಣೆಯಾಗಿದೆ. ಇದನ್ನು ಅರಿಯದ ಹೂ ಮಾರುವ ವೃದ್ಧೆಯೊಬ್ಬರು ತುಮಕೂರು ಬಸ್ ನಿಲ್ದಾಣಕ್ಕೆ ಬಂದು ಬಂದ್‍ನಿಂದ 200-300 ನಷ್ಟ ಆಯಿತು ಎಂದು ದುಃಖಪಡುತ್ತಿದ್ದಾರೆ.

    ವೃದ್ಧೆ ಭಾಗ್ಯಮ್ಮ ಹೊಟ್ಟೆ ಪಾಡಿಗೆ ತುಮಕೂರು ಬಸ್ ನಿಲ್ದಾಣದಲ್ಲಿ ಕುಳಿತು ಹೂ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಆದರೆ ಇಂದು ಬಂದ್ ಬಗ್ಗೆ ಮಾಹಿತಿ ಇಲ್ಲದ ಕಾರಣ ವ್ಯಾಪಾರಕ್ಕೆ ಬಂದಿದ್ದಾರೆ. ಅಲ್ಲದೇ ಬಂದ್ ಹಿನ್ನೆಲೆಯಲ್ಲಿ ಅವರ ವ್ಯಾಪಾರಕ್ಕೆ ಕುತ್ತು ಬಿದ್ದಿದೆ.

    ಬಂದ್ ಬಗ್ಗೆ ಮಾಹಿತಿಯಿಲ್ಲದೇ ಭಾಗ್ಯಮ್ಮ ಬಸ್ ನಿಲ್ದಾಣಕ್ಕೆ ಬಂದಿದ್ದಾರೆ. ಈ ವೇಳೆ ಯಾಕೋ ಬಸ್ ಸ್ಟ್ಯಾಂಡ್ ನಲ್ಲಿ ಇಂದು ಜನರೇ ಇಲ್ಲ. ಬಸ್ ಗಳು ಸರಿಯಾಗಿ ಬರುತ್ತಿಲ್ಲ ಎಂದು ಸಾರ್ವಜನಿಕರಿಗೆ ಪ್ರಶ್ನಿಸಿದ್ದಾರೆ. ಈ ವೇಳೆ ಅವರು ಇಂದು ಹಾಗೂ ನಾಳೆ ಬಂದ್ ಎಂದು ಉತ್ತರಿಸಿದ್ದಾರೆ.

    ಆಗ ಭಾಗ್ಯಮ್ಮ ಮನೆಯಲ್ಲಿ ಟಿವಿ ಇಲ್ಲ. ಗೊತ್ತಿಲ್ಲದೇ ಬಂಡವಾಳ ಹಾಕಿಬಿಟ್ಟೆ. ಈ ಬಂದ್ ನಿಂದ 200-300 ನಷ್ಟವಾಯಿತು. ಹೀಗಾದರೆ ಬಡವರ ಬಗ್ಗರು ಏನು ಮಾಡಬೇಕು. ಜನರು ಮಿನಿಸ್ಟ್ರು ಕುಳಿತು ಮಾತಾಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಹೀಗೆ ಜನರಿಗೆ ತೊಂದರೆ ಕೊಟ್ಟರೆ ಹೇಗೆ? ಈಗ ನಾನು ಬೀದಿ ಬೀದಿ ಸುತ್ತಿ ವ್ಯಾಪಾರ ಮಾಡಬೇಕು ಎಂದು ದಃಖಪಟ್ಟರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಶ್ರಾಂತಿಗೆ ತೊಂದರೆ ಹಿನ್ನೆಲೆ ಸಿದ್ದಗಂಗಾ ಶ್ರೀಗಳು ಆಸ್ಪತ್ರೆಗೆ ಶಿಫ್ಟ್: ಕಿರಿಯ ಸ್ವಾಮೀಜಿ

    ವಿಶ್ರಾಂತಿಗೆ ತೊಂದರೆ ಹಿನ್ನೆಲೆ ಸಿದ್ದಗಂಗಾ ಶ್ರೀಗಳು ಆಸ್ಪತ್ರೆಗೆ ಶಿಫ್ಟ್: ಕಿರಿಯ ಸ್ವಾಮೀಜಿ

    ತುಮಕೂರು: ಸಿದ್ದಗಂಗಾ ಮಠದ ಸಿದ್ದಗಂಗಾ ಶ್ರೀಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀಗಳು ಬೇಗ ಗುಣಮುಖರಾಗಲು ಉತ್ತಮ ಆರೈಕೆ ಅಗತ್ಯವಿದ್ದು, ಸೋಂಕು ಬೇಗ ವಾಸಿಯಾಗಬೇಕು ಎಂಬ ಉದ್ದೇಶದಿಂದ ಅವರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಿದ್ದಗಂಗಾ ಕಿರಿಯ ಶ್ರೀಗಳು ಮಾಹಿತಿ ನೀಡಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕಿರಿಯ ಶ್ರೀಗಳು, ಮಠದ ವಾತಾವರಣದಲ್ಲಿ ಶ್ರೀಗಳಿಗೆ ಸೋಂಕು ತಗಲುವ ಸಾಧ್ಯತೆ ಇದ್ದು, ಮಠಕ್ಕೆ ವಿಐಪಿಗಳು ಹೆಚ್ಚಾಗಿ ಭೇಟಿ ನೀಡುತ್ತಿದ್ದಾರೆ. ಆದ್ದರಿಂದ ಆಸ್ಪತ್ರೆಗೆ ಶಿಫ್ಟ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ನಾಡಿನ ಭಕ್ತರೂ ಇದನ್ನು ಅನ್ಯತ ತಿಳಿದುಕೊಳ್ಳಬಾರದು. ಶ್ರೀಗಳ ಆರೋಗ್ಯ ಉತ್ತಮವಾಗಿ ಚೇತರಿಕೆ ಆಗುತ್ತಿದೆ. ವಿಐಪಿಗಳ ಭೇಟಿಗೂ ಅವಕಾಶ ನಿರಾಕರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

    ಮಠದಲ್ಲಿ ನಾವು ಎಷ್ಟೇ ಜಾಗೃತಿ ವಹಿಸಿದರು ಕೂಡ ಸೋಂಕು ತಗಲುವ ಸಾಧ್ಯತೆ ಇತ್ತು. ಅಲ್ಲದೇ ಚಿಕಿತ್ಸೆಗೆ ಬೇಕಾದ ಸೌಲಭ್ಯಗಳು ಕೂಡ ಆಸ್ಪತ್ರೆಯಲ್ಲಿ ಲಭ್ಯವಾಗುವ ಕಾರಣ ಈ ನಿರ್ಧಾರ ಕೈಗೊಳ್ಳಲಾಯಿತು. ಶ್ರೀ ಗಳಿಗೆ ಎಂದಿನಂತೆ ತಪಾಸಣೆ ಹಾಗೂ ಚಿಕಿತ್ಸೆ ಆಸ್ಪತ್ರೆಯಲ್ಲೇ ಮುಂದುವರಿಯುತ್ತದೆ. ಇಂದು ರೇಲಾ ಆಸ್ಪತ್ರೆಯಿಂದ ತಜ್ಞ ವೈದ್ಯರು ಕೂಡ ಪರಿಶೀಲನೆ ನಡೆಸಿದ್ದಾರೆ. ಆದ್ದರಿಂದ ಯಾರು ಆತಂಕಕ್ಕೆ ಒಳಪಡುವ ಅಗತ್ಯವಿಲ್ಲ ಎಂದರು.

    ತುಮಕೂರು ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಹಾಗೂ ಎಸ್‍ಪಿ ಡಾ ದಿವ್ಯಾ ಗೋಪಿನಾಥ್ ನೇತೃತ್ವದಲ್ಲಿ ಆಸ್ಪತ್ರೆ ಗೆ ಶಿಫ್ಟ್ ಮಾಡಲಾಯಿತು. ಮಠದಿಂದ ಝೀರೋ ಟ್ರಾಫಿಕ್ ಮೂಲಕ ಸಿದ್ದಗಂಗಾ ಆಸ್ಪತ್ರೆಗೆ ಶ್ರೀಗಳನ್ನು ಕರೆತರಲಾಯಿತು. ಶ್ರೀಗಳ ವಿಶ್ರಾಂತಿಗೆ ತೊಂದರೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ – ಇಷ್ಟಲಿಂಗ ಪೂಜೆ ನೆರವೇರಿಸಿ, ಮಂತ್ರ ಪಠಿಸಿದ ಶ್ರೀಗಳು

    ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ – ಇಷ್ಟಲಿಂಗ ಪೂಜೆ ನೆರವೇರಿಸಿ, ಮಂತ್ರ ಪಠಿಸಿದ ಶ್ರೀಗಳು

    ತುಮಕೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡಿದ್ದು, ಇಂದು ಬೆಳಗ್ಗೆ ಇಷ್ಟಲಿಂಗ ಪೂಜೆ ನೆರವೇರಿಸಿದ ಶ್ರೀಗಳು ಮಂತ್ರ ಪಠಣ ಮಾಡಿ ಅಚ್ಚರಿ ಮೂಡಿಸಿದ್ದಾರೆ.

    ಪೂಜೆ ವೇಳೆ ಶ್ರೀಗಳ ಶಿಷ್ಯವೃಂದ ಜೊತೆ ಗೂಡಿ ಶಿವನಾಮ ಸ್ಮರಣೆ ಮಾಡಿದ ಶ್ರೀಗಳು, ಈ ಮೂಲಕ ಭಕ್ತಾಧಿಗಳಲ್ಲಿ ಇದ್ದಂತ ಆತಂಕ ದೂರ ಮಾಡಿದರು. ಬೆಳಗ್ಗೆ ಶ್ರೀಗಳ ಆರೋಗ್ಯ ತಪಾಸಣೆ ಮಾಡಿ ಮಾಧ್ಯಮಕ್ಕೆ ಮಾಹಿತಿ ನೀಡಿದ ವೈದ್ಯ ಡಾ.ಪರಮೇಶ್, ಶ್ರೀಗಳ ಶ್ವಾಸಕೋಶದಲ್ಲಿನ ಸೋಂಕು ಕಡಿಮೆ ಆಗಿರುವುದು ರಕ್ತ ಪರೀಕ್ಷೆಯಿಂದ ದೃಢಪಟ್ಟಿದೆ. ಆದ್ರು ನಾಲ್ಕು ದಿನಗಳ ಕಾಲ ಆ್ಯಂಟಿ ಬಯಾಟಿಕ್ ನೀಡಬೇಕು ಎಂದು ಸ್ಪಷ್ಟಪಡಿಸಿದ್ದರು.

    ಸಂಜೆ ಬಿಜಿಎಸ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ಅವರ ತಂಡ ಇನ್ನೊಮ್ಮೆ ಶ್ರೀಗಳ ಆರೋಗ್ಯ ತಪಾಸಣೆ ನಡೆಸಿತು. ಜೊತೆಗೆ ಜಯದೇವ ಆಸ್ಪತ್ರೆ ವೈದ್ಯ ಡಾ.ನಾಗೇಶ್ ಕೂಡಾ ಶ್ರೀಗಳ ಹೃದಯ ತಪಾಸಣೆ ಮಾಡಿದರು. ಈ ವೇಳೆ ಮಾತನಾಡಿದ ಡಾ.ರವೀಂದ್ರ ಅವರು, ಶ್ರೀಗಳು ಚೇತರಿಸಿಕೊಂಡಿದ್ದಾರೆ. ಆದರೆ ಶ್ರೀಗಳ ಶ್ವಾಸಕೋಶದಲ್ಲಿ ನೀರು ಕಡಿಮೆಯಾಗಿಲ್ಲ. ಹಾಗಾಗಿ ಸ್ವಲ್ಪ ಮಟ್ಟಿನ ಸೋಂಕು ಇದೆ. ಪ್ರೋಟಿನ್ ಅಂಶ ಕಡಿಮೆ ಇರುವುದರಿಂದ ಶ್ವಾಸಕೋಶಕ್ಕೆ ನೀರು ಸೇರಿಕೊಳ್ಳುತ್ತಿದೆ. ಅಲ್ಲದೆ ಸಾಮಾನ್ಯವಾಗಿ ದೇಹದಲ್ಲಿ 3.5 ರಿಂದ 4 ಗ್ರಾಂ ನಷ್ಟು ಪ್ರೋಟಿನ್ ಇರಬೇಕು. ಆದರೆ ಶ್ರೀಗಳ ದೇಹದಲ್ಲಿ ಕೇವಲ 2 ರಿಂದ 2.5 ಗ್ರಾಂ ನಷ್ಟು ಮಾತ್ರ ಪ್ರೋಟಿನ್ ಇದೆ. ಹಾಗಾಗಿ ಬಾಯಿ ಮತ್ತು ಟ್ಯೂಬ್ ಮೂಲಕ  ಪ್ರೋಟಿನ್ ನೀಡಲಾಗುತ್ತಿದೆ ಎಂದರು. ಉಳಿದಂತೆ ಶ್ರೀಗಳ ಪಲ್ಸ್ ಮತ್ತು ಬಿ.ಪಿ. ಸಹಜವಾಗಿದೆ. ಶ್ರೀಗಳು ಎದ್ದು ಓಡಾಡಲು ಇನ್ನು ಕೆಲ ಸಮಯ ಬೇಕಾಗಬಹುದು ಎಂದು ಸ್ಪಷ್ಟಪಡಿಸಿದರು.

    https://www.youtube.com/watch?v=pdPt-TVIzFE

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪದ್ಮ ಪ್ರಶಸ್ತಿ ಪುರಸ್ಕೃತ ಸೂಲಗಿತ್ತಿ ನರಸಮ್ಮ ಪಂಚಭೂತಗಳಲ್ಲಿ ಲೀನ

    ಪದ್ಮ ಪ್ರಶಸ್ತಿ ಪುರಸ್ಕೃತ ಸೂಲಗಿತ್ತಿ ನರಸಮ್ಮ ಪಂಚಭೂತಗಳಲ್ಲಿ ಲೀನ

    ತುಮಕೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸೂಲಗಿತ್ತಿ ನರಸಮ್ಮ ಅವರ ಅಂತ್ಯ ಸಂಸ್ಕಾರ ಇಂದು ನಗರದ ಗಂಗಸಂದ್ರ ಸರ್ಕಾರಿ ಜಮೀನಿನಲ್ಲಿ ನೆರವೇರಿತು.

    ಸಕಲ ಸರ್ಕಾರಿ ಗೌರವಗಳೊಂದಿಗೆ ಸೂಲಗಿತ್ತಿ ನರಸಮ್ಮ ಅವರಿಗೆ ಜಿಲ್ಲಾಡಳಿತವು ಅಂತಿಮ ನಮನ ಸಲ್ಲಿಸಿತು. ಅಂತ್ಯಸಂಸ್ಕಾರದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಭಾಗಿಯಾಗಿದ್ದರು. ನಗರದ ಗಾಜಿನ ಮನೆಯಿಂದ ಮೆರವಣಿಗೆ ಹೊರಟು ಗಂಗಸಂದ್ರ ಸರ್ಕಾರಿ ಜಮೀನು ತಲುಪಿತು. ಬಳಿಕ ಸಕಲ ವಿಧಿ ವಿಧಾನಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಯಿತು.

    ನರಸಮ್ಮ ಅವರ ಕುಟುಂಬಸ್ಥರ ಮನವಿಯಂತೆ ಸಮಾಧಿ ಹಾಗೂ ಸ್ಮಾರಕ ನಿರ್ಮಾಣಕ್ಕೆ ಗಂಗಸಂದ್ರದಲ್ಲಿ ಒಂದು ಎಕರೆ ಸರ್ಕಾರಿ ಜಮೀನನ್ನು ಜಿಲ್ಲಾಡಳಿತವು ನಿಗದಿ ಮಾಡಿದೆ. ಆ ಜಮೀನಿನಲ್ಲಿಯೇ ಇಂದು ಅಂತ್ಯಸಂಸ್ಕಾರ ನೆರವೇರಿತು.

    ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನರಸಮ್ಮ ಅವರಿಗೆ ಟ್ರೈಕ್ಯಾಸ್ಟಮಿ ಚಿಕಿತ್ಸೆ ಸಹ ನಡೆಸಲಾಗಿತ್ತು. ಕ್ರಮೇಣ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ನವೆಂಬರ್ 30ರಂದು ಸಿಗ್ನಲ್ ಮುಕ್ತ ಸಂಚಾರ ವ್ಯವಸ್ಥೆಯೊಂದಿಗೆ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದರು. ತುಮಕೂರು ಭಾಗದ ಜನರು ಸೂಲಗಿತ್ತಿ ನರಸಮ್ಮ ಅವರನ್ನು ದೇವರ ಸ್ವರೂಪದಂತೆ ಕಾಣುತ್ತಾರೆ. ಇವರ ಸೇವೆಯನ್ನು ಗುರುತಿಸಿರುವ ಹಲವು ಸಂಘ ಸಂಸ್ಥೆಗಳು ಈಗಾಗಲೇ ಹಲವು ಪ್ರಶಸ್ತಿಗಳು ನೀಡಿ ಗೌರವಿಸಿವೆ. ದೇವರಾಜು ಅರಸು ಪ್ರಶಸ್ತಿ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ವಯೋಶ್ರೇಷ್ಠ ಸಮ್ಮಾನ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಮೇಶ್ ಜಾರಕಿಹೊಳಿ ಪಕ್ಷ ಬಿಡೋದು ಖಚಿತ: ಮಾಜಿ ಶಾಸಕ ಕೆ.ಎನ್ ರಾಜಣ್ಣ

    ರಮೇಶ್ ಜಾರಕಿಹೊಳಿ ಪಕ್ಷ ಬಿಡೋದು ಖಚಿತ: ಮಾಜಿ ಶಾಸಕ ಕೆ.ಎನ್ ರಾಜಣ್ಣ

    ತುಮಕೂರು: ಕೈ ಪಕ್ಷದ ಬಂಡಾಯ ಶಾಸಕರ ಪೈಕಿ ಮುಂಚೂಣಿಯಲ್ಲಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪಕ್ಷ ಬಿಡೋದು ಖಚಿತ ಎಂದು ತುಮಕೂರಿನಲ್ಲಿ ಬಿಜೆಪಿ ಮಾಜಿ ಶಾಸಕ ಕೆ.ಎನ್ ರಾಜಣ್ಣ ಸುಳಿವು ನೀಡಿದ್ದಾರೆ.

    ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸೂಲಗಿತ್ತಿ ನರಸಮ್ಮ ಅಂತಿಮ ದರ್ಶನದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೆ.ಎನ್.ಆರ್, “ನನ್ನ ಪ್ರಕಾರ ಕಾಂಗ್ರೆಸ್ ನಲ್ಲಿ ಅವರು ಇರೋದಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆ.

    ರಮೇಶ್ ರಾಜೀನಾಮೆ ಕೊಡ್ತಾರಾ. ಸರ್ಕಾರ ಉರುಳಿಸ್ತಾರಾ. ಶಾಸಕರನ್ನು ಕರೆದುಕೊಂಡು ಹೋಗ್ತಾರಾ ಈ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಪಕ್ಷ ತೊರೆಯೋದು ಖಚಿತ ಎಂದು ರಾಜಣ್ಣ ಭವಿಷ್ಯ ನುಡಿದಿದ್ದಾರೆ. ಆದರೆ ಕೆಲ ಕಾಂಗ್ರೆಸ್ ಶಾಸಕರು ಅವರ ಜೊತೆ ಸಂಪರ್ಕದಲ್ಲಿ ಇದ್ದಾರೆ. ಆ ಶಾಸಕರನ್ನೂ ಕರೆದುಕೊಂಡು ಹೋಗ್ತಾರಾ ಎನ್ನುವ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಾರೆ.

    ನನಗೆ ಸತೀಶ್ ಜಾರಕಿಹೊಳಿ, ಬಿಜೆಪಿ ಬಾಲಚಂದ್ರ, ಲಖನ್ ಜಾರಕೀಹೊಳಿ ಎಲ್ಲರೂ ಆತ್ಮಿಯರೇ. ರಾಜಕೀಯ ದೃಷ್ಟಿಯಲ್ಲಿ ಅವರ ತೀರ್ಮಾನಕ್ಕೆ ಅವರೇ ಸ್ವತಂತ್ರರು. ಸರ್ಕಾರದ ಬಗ್ಗೆ ಸಿಎಂ ಕುಮಾರಸ್ವಾಮಿಯೇ ಇದು ಪರಿಸ್ಥಿತಿಯ ಪ್ರನಾಳ ಶಿಶು ಎಂದು ಹೇಳಿದ್ದಾರೆ. ಏಳೂವರೆ, ಎಂಟು ತಿಂಗಳಿಗೆ ಹುಟ್ಟಿದ್ದು ಎಷ್ಟು ವರ್ಷ ಬದುಕುತ್ತೆ ಅಂತಾ ಗೊತ್ತಿಲ್ಲ ಎಂದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದಾಖಲೆಯಿಲ್ಲದ ಬರೋಬ್ಬರಿ 12 ಕೋಟಿ ಮೌಲ್ಯದ ಅಡಿಕೆ ಜಪ್ತಿ

    ದಾಖಲೆಯಿಲ್ಲದ ಬರೋಬ್ಬರಿ 12 ಕೋಟಿ ಮೌಲ್ಯದ ಅಡಿಕೆ ಜಪ್ತಿ

    ಬೆಂಗಳೂರು: ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತುಮಕೂರಿನಲ್ಲಿ ಬರೋಬ್ಬರಿ 12 ಕೋಟಿ ಮೌಲ್ಯದ ದಾಖಲೆಗಳಿಲ್ಲದ ಅಡಿಕೆಯನ್ನು ಪತ್ತೆ ಮಾಡಿದ್ದಾರೆ.

    ದಾಖಲೆಯಿಲ್ಲದ ಹಿನ್ನೆಲೆಯಲ್ಲಿ 2 ಗೋಡೌನ್ ನಲ್ಲಿ ಸಂಗ್ರಹಿಸಿದ್ದ 4,670 ಕ್ವಿಂಟಾಲ್ ಅಡಿಕೆಯನ್ನು ಜಪ್ತಿ ಮಾಡಲಾಗಿದೆ. ಅಷ್ಟೇ ಅಲ್ಲದೇ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ 72 ಲಕ್ಷ ರೂಪಾಯಿ ದಂಡ ಕೂಡ ಹಾಕಿದ್ದಾರೆ.

    ಕಮರ್ಷಿಯಲ್ ಟ್ಯಾಕ್ಸ್ ಕಮಿಷನರ್ ನಿತೇಶ್ ಕುಮಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ದಾಳಿ ವೇಳೆ ಗೋಡೌನ್ ಸಿಬ್ಬಂದಿ ಅಧಿಕಾರಿಗಳನ್ನು ತಡೆದಿದ್ದರು. ಆರಂಭದಲ್ಲಿ ಸಿಬ್ಬಂದಿ ಭತ್ತವನ್ನು ಸಂಗ್ರಹಿಸಿದ್ದೇವೆ ಎಂದು ಹೇಳಿಕೆ ನೀಡಿದ್ದರು.

    ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದ ಅಧಿಕಾರಿಗಳು ಗೋಡೌನ್ ಒಳ ಪ್ರವೇಶಿದಾಗ ದಾಖಲೆ ಇಲ್ಲದೇ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಡಿಕೆ ಪತ್ತೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv