Tag: tumkuru

  • ಮಳೆ ಕೊರತೆ: ಮೊಳಕೆ ಬಾರದ ಬಿತ್ತನೆ ಬೀಜ-ಸಂಕಷ್ಟದಲ್ಲಿ ರೈತ

    ಮಳೆ ಕೊರತೆ: ಮೊಳಕೆ ಬಾರದ ಬಿತ್ತನೆ ಬೀಜ-ಸಂಕಷ್ಟದಲ್ಲಿ ರೈತ

    ತುಮಕೂರು: ಕೊಡಗು, ಕರಾವಳಿ ಪ್ರದೇಶದಲ್ಲಿ ಮಹಾಮಳೆಗೆ ಜನರು ತತ್ತರಿಸಿದ್ದರೆ, ಇತ್ತ ತುಮಕೂರು ಜಿಲ್ಲೆಯಲ್ಲಿ ನಿಯಮಿತ ಮಳೆ ಬೀಳದೆ ಮತ್ತೆ ಬರ ಆವರಿಸುವ ಆತಂಕ ಜನರಲ್ಲಿ ಎದುರಾಗಿದೆ.

    ಮಳೆಯನ್ನೇ ನಂಬಿ ರೈತರು ಈಗಾಗಲೇ ಬಿತ್ತನೆ ಕಾರ್ಯವನ್ನು ಪೂರ್ಣಗೊಳಿಸಿದ್ದು, ಮಳೆ ಕೈಕೊಟ್ಟ ಕಾರಣದಿಂದ ಬಿತ್ತನೆ ಮಾಡಿದ್ದ ಬೆಳೆ ನೆಲಕಚ್ಚಿವೆ. ಜಿಲ್ಲೆಯಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಬಿತ್ತನೆ ಮಾಡಿದ್ದ ರಾಗಿ, ಭತ್ತ, ಶೇಂಗಾ ಮಳೆ ಇಲ್ಲದೆ ಕಮರಿ ಹೋಗಿವೆ.

    ಈಗಾಗಲೇ ಜಿಲ್ಲೆಯಲ್ಲಿ ಮುಂಗಾಯ ಕೈಕೊಟ್ಟಿದ್ದು, ಈ ವರ್ಷವಾದರು ಉತ್ತಮ ಬೆಳೆ ನಿರೀಕ್ಷೆ ಇದ್ದ ರೈತರು ನಿರಾಸೆ ಅನುಭವಿಸಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ಯೊಂದಿಗೆ ತಮ್ಮ ಅಳಲು ತೊಡಿಕೊಂಡಿರುವ ರೈತರು, ಕಳೆದ ಬಾರಿಯೂ ಮಳೆ ಕೈಕೊಟ್ಟು ನಷ್ಟ ಅನುಭವಿಸಿದ್ದೆವು. ಈ ಬಾರಿಯೂ ಬರ ಪರಿಸ್ಥಿತಿ ಮುಂದುವರಿದಿದ್ದು, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾದರು ಕೂಡ ನಮ್ಮಲ್ಲಿ ಮೋಡಗಳು ಮಾತ್ರ ಕಾಣಿಸಿಕೊಳ್ಳುತ್ತಿದೆ. ಆದರೆ ಇದುವರೆಗೂ ಒಂದು ಹನಿ ಮಳೆ ಬಂದಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

    ಬಹುತೇಕ ಸಣ್ಣ ಭೂ ಇಳುವರಿದಾರರೆ ಇರುವ ಕಾರಣ ಅಲ್ಪ ಸ್ವಲ್ಪ ಪ್ರದೇಶದಲ್ಲಿ ವೆಚ್ಚ ಮಾಡಿ ಬಿತ್ತನೆ ಮಾಡಿದ್ದ ರೈತರು ಕೈ ಚೆಲ್ಲಿ ಕೂರುವ ಪರಿಸ್ಥಿತಿ ಎದುರಾಗಿದೆ. ಇನ್ನು ಮಳೆಯ ಕೊರತೆ ಕಾರಣದಿಂದ ಜಾನುವಾರುಗಳ ಮೇವಿಗೂ ಸಮಸ್ಯೆ ಎದುರಾಗಿದ್ದು, ಹೈನುಗಾರಿಕೆಯನ್ನು ಉಪಕಸುಬಾಗಿ ಸ್ವೀಕರಿಸಿದ್ದ ರೈತ ಮಹಿಳೆಯರು ಸಂಕಷ್ಟ ಎದುರಿಸುತ್ತಿದ್ದಾರೆ. ಹಲವು ರೈತರು ಸರ್ಕಾರದ ಸಹಾಯದ ನಿರೀಕ್ಷೆಯಲ್ಲಿದ್ದು, ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರ ಸಂಕಷ್ಟಕ್ಕೆ ನೆರವು ನೀಡಬೇಕು ಎಂದು ಮನವಿ ಮಾಡಿದ್ದಾರೆ.

    ರಾಜ್ಯದ ಒಂದು ಭಾಗದಲ್ಲಿ ಭಾರೀ ಮಳೆಗೆ ಜನ ತತ್ತರಿಸಿ ಮನೆ, ಜಮೀನು ಕಳೆದು ಕೊಂಡು ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದರೆ. ಆದರೆ ಜಿಲ್ಲೆಯ ರೈತರು ಮಾತ್ರ ತಲೆ ಮೇಲೆ ಕೈ ಇಟ್ಟು ಮಳೆಗಾಗಿ ಆಕಾಶದತ್ತ ಮುಖ ಮಾಡಿ ನಿಂತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರದ ಚಾಯೆ ಕಾಣಿಸಿಕೊಂಡಿದ್ದು, ಕೋಲಾರ, ಚಿಕ್ಕಬಳ್ಳಾಪುರ, ಕೊಪ್ಪಳ, ಬಳ್ಳಾರಿ, ಕಲಬುರಗಿ ಜಿಲ್ಲೆಗಳ ಹಲವು ತಾಲೂಕು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಕೊರತೆ ಎದುರಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಂಗ್ರೆಸ್, ಜೆಡಿಎಸ್‍ನವರು ಬಟ್ಟೆ ಬಿಚ್ಚಿ ಬೇಕಾದ್ರೆ ಕುಣಿಲಿ-ನಮಗೆ ಸಂಬಂಧ ಇಲ್ಲ: ಸೋಮಣ್ಣ ವ್ಯಂಗ್ಯ

    ಕಾಂಗ್ರೆಸ್, ಜೆಡಿಎಸ್‍ನವರು ಬಟ್ಟೆ ಬಿಚ್ಚಿ ಬೇಕಾದ್ರೆ ಕುಣಿಲಿ-ನಮಗೆ ಸಂಬಂಧ ಇಲ್ಲ: ಸೋಮಣ್ಣ ವ್ಯಂಗ್ಯ

    ತುಮಕೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಸ್ ಮೈತ್ರಿ ಮಾಡಿಕೊಂಡರೆ ಮಾಡಿಕೊಳ್ಳಲಿ ಇಲ್ಲವೇ ಬಟ್ಟೆ ಬಿಚ್ಚಿ ಕುಣಿಯಲಿ, ನಮ್ಮ ಕೆಲಸ ನಾವು ಮಾಡಿಕೊಂಡು ಹೋಗುತ್ತೇವೆ ಎಂದು ಮಾಜಿ ಸಚಿವ ವಿ ಸೋಮಣ್ಣ ವ್ಯಂಗ್ಯವಾಡಿದ್ದಾರೆ.

    ಇಂದು ತುಮಕೂರು ಸಿದ್ದಗಂಗಾ ಮಠ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಮುಖ್ಯ ಮಂತ್ರಿಯಾಗಿ ಕುಮಾರಸ್ವಾಮಿ ಸಂಕಷ್ಟ ಪರಿಸ್ಥಿತಿಯಲ್ಲಿ ಇದ್ದಾರೆ. ಸಿಎಂ ಆಗಿ ಅವರು ತಮ್ಮ ಕೆಲಸ ತಾವು ಮಾಡುತ್ತಿದ್ದಾರೆ. ಆದರೆ 37 ಶಾಸಕರೊಂದಿಗೆ ಅವರೊಂದಿಗೆ ಸಂಕಷ್ಟ ಅನುಭವಿಸುತ್ತಿದ್ದು, ಮತ್ತೊಬ್ಬ ಶಾಸಕನನ್ನು ಕರೆತರುವ ಶಕ್ತಿ ಇಲ್ಲ. ಅದ್ದರಿಂದ ಅವರು ಎರವಲು ವ್ಯವಸ್ಥೆಯಲ್ಲಿ ಮುಖ್ಯಮಂತ್ರಿಯಾಗಿ ಜನರಲ್ಲಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಅವರು ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಿ ಅಥವಾ ಬಟ್ಟೆ ಬಿಚ್ಚಿ ಬೇಕಾದರು ಕುಣಿಯಲಿ ನಮಗೇ ಸಂಬಂಧವಿಲ್ಲ ಎಂದರು.

    ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ನಿಲ್ಲಿಸಿ ಜನರ ಮುಂದೇ ಹೋಗುತ್ತೇವೆ. ಆದರೆ ಜನರು ಯಾರು ಗೆಲ್ಲ ಬೇಕು ಎಂದು ತೀರ್ಮಾನಿಸುತ್ತಾರೆ. ಬಿಜೆಪಿ ಏಕಾಂಗಿಯಾಗಿ ಹೋರಾಟ ಮಾಡಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಅರೆ ಬೆತ್ತಲೆಯಾಗಿ ಸೊಂಟಕ್ಕೆ ಕಲ್ಲು ಕಟ್ಟಿಕೊಂಡು ಕಳ್ಳತನಕ್ಕೆ ಯತ್ನ!

    ಅರೆ ಬೆತ್ತಲೆಯಾಗಿ ಸೊಂಟಕ್ಕೆ ಕಲ್ಲು ಕಟ್ಟಿಕೊಂಡು ಕಳ್ಳತನಕ್ಕೆ ಯತ್ನ!

    – ಸಿಸಿಟಿವಿಯಲ್ಲಿ ಸೆರೆಯಾಯ್ತು ವಿಚಿತ್ರ ಕಳ್ಳರ ದೃಶ್ಯ

    ತುಮಕೂರು: ಅರೆ ಬೆತ್ತಲೆಯಾಗಿ ಸೊಂಟಕ್ಕೆ ಕಲ್ಲುಗಳು ತುಂಬಿರುವ ಬಟ್ಟೆಕಟ್ಟಿಕೊಂಡು ವಿಚಿತ್ರ ವೇಷದಲ್ಲಿ ಬಂದ ಕಳ್ಳರ ಗುಂಪೊಂದು ಕಳ್ಳತನಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕು ಹುಲಿಯೂರುದುರ್ಗದಲ್ಲಿ ನಡೆದಿದೆ.

    ಹುಲಿಯೂರು ದುರ್ಗದ ಶೃಂಗಾರ ಸಾಗರ ಬಡಾವಣೆಯಲ್ಲಿರುವ ನಿವೃತ್ತ ಶಿಕ್ಷಕಿ ಸಾವಿತ್ರಿ ಭಟ್ ಮನೆ ಕಳ್ಳತನ ಮಾಡಲು ಯತ್ನಿಸಿದ್ದಾರೆ. ಗುರುವಾರ ರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದು, ವಿಚಿತ್ರ ವೇಷದಲ್ಲಿ ಬರುವ ಕಳ್ಳರ ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಕಳ್ಳರ ವಿಚಿತ್ರ ವೇಷ ನೋಡುವವರಿಗೆ ಭಯ ಹುಟ್ಟಿಸುವ ಆಗಿದ್ದು, ಅರೆಬೆತ್ತಲೆಯಾಗಿ ಮನೆಯ ಬಳಿ ಸಾವಿತ್ರಿ ಅವರ ಮನೆಯೊಳಗೆ ಮೂವರು ಪ್ರವೇಶ ಮಾಡಿ ಸುಮಾರು ಒಂದೂವರೆ ಗಂಟೆಗಳ ಕಾಲ ಮನೆಯ ಬೀರು ಒಡೆಯಲು ಪ್ರಯತ್ನಿಸಿದ್ದಾರೆ. ಆದರೆ ಬೀರು ತೆರೆಯಲು ಕಳ್ಳರು ವಿಫಲರಾಗಿದ್ದು, ಬೀರು ಮೇಲಿದ್ದ ಸುಮಾರು ಐದು ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ.

    ಕಳ್ಳತನಕ್ಕೆ ಯತ್ನಿಸಿದ ವೇಳೆ ಶಿಕ್ಷಕಿ ಸಾವಿತ್ರಿ ಅವರ ಮನೆಯಲ್ಲಿ ಯಾರು ಇರಲಿಲ್ಲ. ಇದನ್ನೇ ಅನುಕೂಲ ಮಾಡಿಕೊಂಡು ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ. ಕಳ್ಳರು ಕೃತ್ಯ ಎಸಗುವ ವೇಳೆ ಯಾರಾದರು ತಮ್ಮನ್ನು ನೋಡಿದರೆ ಅವರ ಮೇಲೆ ದಾಳಿ ನಡೆಸಲು ಈ ಉಪಾಯ ಬಳಸಿದ್ದಾರೆ.

    ಘಟನೆ ಕುರಿತು ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಬಚ್ಚಲು ಮನೆಯಲ್ಲಿ ಕುಸಿದು ಪತ್ನಿ ಸಾವು – ಪತ್ನಿ ಮೃತಪಟ್ಟಿದ್ದನ್ನು ನೋಡಿ ಆತ್ಮಹತ್ಯೆ

    ಬಚ್ಚಲು ಮನೆಯಲ್ಲಿ ಕುಸಿದು ಪತ್ನಿ ಸಾವು – ಪತ್ನಿ ಮೃತಪಟ್ಟಿದ್ದನ್ನು ನೋಡಿ ಆತ್ಮಹತ್ಯೆ

    ತುಮಕೂರು: ಪತ್ನಿ ಬಚ್ಚಲು ಮನೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದನ್ನು ಕಂಡ ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಸಂಜೆ ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದ ಹಳ್ಳಿಕಾರ್ ಬೀದಿಯಲ್ಲಿ ನಡೆದಿದೆ.

    ಮೀನಾಕ್ಷಿ(23) ಹಾಗೂ ಉಮೇಶ್(28) ಮೃತ ದಂಪತಿ. ಕಳೆದ ಎರಡು ವರ್ಷದ ಹಿಂದೆಯಷ್ಟೇ ಮೀನಾಕ್ಷಿ ಹಾಗೂ ಉಮೇಶ್ ಮದುವೆಯಾಗಿತ್ತು. ಪತ್ನಿ ಮೀನಾಕ್ಷಿ ಬಚ್ಚಲು ಮನೆಯಲ್ಲಿ ಕುಸಿದು ಬಿದ್ದಿದ್ದಾರೆ. ಅಲ್ಲದೇ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನಪ್ಪಿದ್ದಾರೆ.

    ಇದನ್ನು ಕಂಡ ಪತಿ ಉಮೇಶ್ ಕೂಡ ಮದ್ಯದಲ್ಲಿ ಕಿಟನಾಶಕ ಬೆರೆಸಿಕೊಂಡು ಕುಡಿದಿದ್ದಾರೆ. ತಕ್ಷಣ ಉಮೇಶ್ ಅವರನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಉಮೇಶ್ ಕೂಡ ಮೃತಪಟ್ಟಿದ್ದಾರೆ. ಸದ್ಯ ಈ ಬಗ್ಗೆ ತುರುವೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಕುಣಿಗಲ್ ತಹಶೀಲ್ದಾರ್, ಇ.ಒ ನಡುವೆ ಕಿತ್ತಾಟ

    ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಕುಣಿಗಲ್ ತಹಶೀಲ್ದಾರ್, ಇ.ಒ ನಡುವೆ ಕಿತ್ತಾಟ

    ತುಮಕೂರು: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಆಯೋಜನೆಗೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಕುಣಿಗಲ್ ತಹಶೀಲ್ದಾರ್ ಮತ್ತು ಇ.ಒ ಪರಸ್ಪರ ಕಿತ್ತಾಟ ಮಾಡಿಕೊಂಡಿದ್ದಾರೆ.

    ಕುಣಿಗಲ್ ಪಟ್ಟಣದ ಕಂದಾಯ ಭವನದಲ್ಲಿ ಪೂರ್ವಭಾವಿ ಸಭೆ ನಡೆಯುತಿತ್ತು. ಆ ವೇಳೆ ಕುಣಿಗಲ್ ತಹಶಿಲ್ದಾರ್ ನಾಗರಾಜು ಹಾಗೂ ಇ.ಒ. ನಾರಾಯಣಸ್ವಾಮಿ ನಡುವೆ ಕಿತ್ತಾಟ ನಡೆದಿದೆ.

    ಸಭೆ ನಡೆಯುತ್ತಿದ್ದರೂ ಈ ಸಭೆಗೂ ನನಗೂ ಸಂಬಂಧವೇ ಇಲ್ಲ ಎನ್ನುವ ಹಾಗೆ ಇ.ಒ.ನಾರಾಯಣಸ್ವಾಮಿ ಕಡತಗಳಿಗೆ ಸಹಿ ಹಾಕುವುದರಲ್ಲಿ ಮಗ್ನರಾಗಿದ್ದರು. ಈ ವರ್ತನೆಗೆ ಸಿಡಿಮಿಡಿಗೊಂಡ ತಹಶೀಲ್ದಾರ್ ನಾಗರಾಜು, ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯ ಎಲ್ಲ ಜವಾಬ್ದಾರಿ ಇ.ಒ.ಸಾಹೇಬ್ರು ವಹಿಸಿಕೊಳ್ಳಬೇಕು ಎಂದಿದ್ದಾರೆ. ಅದಕ್ಕೆ ಇ.ಒ ನಾರಾಯಣಸ್ವಾಮಿ ನಾನೇಕೆ ಮಾಡಲಿ, ನೀವು ಸಮಿತಿ ಅಧ್ಯಕ್ಷರು ನೀವೇ ಜವಾಬ್ದಾರಿ ನಿರ್ವಹಿಸಿ ಎಂದು ಪ್ರತ್ಯುತ್ತರ ನೀಡಿದ್ದಾರೆ.

    ಪರಸ್ಪರ ಇಬ್ಬರ ನಡುವೆ ಮಾತಿನ ಚಕಮಕಿ ಉಂಟಾಗಿ ಗೊಂದಲ ವಾತಾವರಣ ಉಂಟಾಗಿದೆ. ಸಿಬ್ಬಂದಿ ಇಬ್ಬರ ಕಿತ್ತಾಟ ಕಂಡು ತಬ್ಬಿಬ್ಬಾಗಿದ್ದಾರೆ. ಬಳಿಕ ಮಧ್ಯಪ್ರವೇಶಿಸಿದ ಸಂಘಟನೆಗಳ ಮುಖಂಡರು ಇಬ್ಬರೂ ಅಧಿಕಾರಿಗಳನ್ನ ತರಾಟೆ ತೆಗೆದುಕೊಂಡು ಸಭೆ ಸುಗಮವಾಗಿ ಸಾಗಲು ಅನುವು ಮಾಡಿಕೊಟ್ಟರು.

  • ಪೈಸೆ ಪೈಸೆ ಕೂಡಿಟ್ಟು ಕಟ್ಟಿದ ಮನೆ ಅನ್ಯರ ಪಾಲು

    ಪೈಸೆ ಪೈಸೆ ಕೂಡಿಟ್ಟು ಕಟ್ಟಿದ ಮನೆ ಅನ್ಯರ ಪಾಲು

    -ಮನನೊಂದು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಕುಟುಂಬ

    ತುಮಕೂರು: ಬಡ ಕುಂಟುಂಬವೊಂದು ಪೈಸೆ ಪೈಸೆ ಕೂಡಿಟ್ಟು ಮನೆ ಕಟ್ಟಿದ್ದು, ಈಗ ಆ ಮನೆಯಲ್ಲಿ ವಾಸ ಮಾಡುವ ಭಾಗ್ಯ ಆ ಕುಟುಂಬಕ್ಕೆ ಬಂದಿಲ್ಲ. ಬದಲಾಗಿ ಇಡೀ ಮನೆ ಅನ್ಯ ವ್ಯಕ್ತಿಯ ಪಾಲಾಗಿದೆ. ಬಡ್ಡಿ ದಂಧೆಕೋರರ ಜೊತೆ ಸೇರಿಕೊಂಡು ಪೊಲೀಸರು ದೌರ್ಜನ್ಯ ಎಸಗಿ ಮನೆ ಖಾಲಿ ಮಾಡಿಸಿದ್ದಾರಂತೆ. ಬೀದಿಪಾಲಾದ ಈ ಕುಟುಂಬ ಪೊಲೀಸರು ಪದೇ ಪದೇ ನೀಡುತ್ತಿರುವ ಹಿಂಸೆಯಿಂದ ಬೇಸತ್ತು ದಯಾಮರಣದ ಮೊರೆ ಹೋಗಿದ್ದಾರೆ.

    ತುಮಕೂರಿನ ಸಿದ್ದಗಂಗಾ ಮಠದ ಬಳಿ ಇರುವ ಮಾರನಾಯಕನಪಾಳ್ಯದ ಕುಟುಂಬ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಬರೆದಿರುವ ದಯಾಮರಣದ ಅರ್ಜಿ ಸಲ್ಲಿಸಿದೆ. ವೃದ್ಧೆ ಸುಶೀಲ ಕುಟುಂಬ ದಯಾಮರಣದ ಮೊರೆ ಹೋಗಲು ಕ್ಯಾತಸಂದ್ರ ಪೊಲೀಸರಿಂದ ಆಗುತ್ತಿರುವ ನಿರಂತರ ದೌರ್ಜನ್ಯ ಕಾರಣವಂತೆ. ಸುಶೀಲಮ್ಮ ಸಿದ್ದಂಗ ಮಠದಲ್ಲಿ ಚಿಲ್ಲರೆ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡಿ, ಪೈಸೆ ಪೈಸೆ ಕೂಡಿಟ್ಟು ಮನೆ ಕಟ್ಟಿದ್ದರು. ಮನೆ ಕಟ್ಟುವಾಗ ಸುಶೀಲಮ್ಮಗೆ ಗೊತ್ತಿಲ್ಲದೆ ಅವರ ಮಗಳು ವೀಣಾ, ಎಮ್. ಎಲ್. ಗಂಗಾಧರ್ ಎನ್ನುವವರಿಂದ ಸಾಲ ತಂದಿದ್ದಳು ಎನ್ನಲಾಗಿದೆ. ಆದರೆ ಕಳೆದ ಒಂದು ವರ್ಷದಿಂದ ವೀಣಾ ಕಾಣೆಯಾಗಿದ್ದಾಳೆ.

    ತನ್ನ ಹಣ ವಾಪಸ್ ಕೊಡುವಂತೆ ಗಂಗಾಧರ್ ವೃದ್ಧೆ ಸುಶೀಲಮ್ಮಗೆ ದಿನನಿತ್ಯ ಕಾಟ ಕೊಡುತಿದ್ದ. ಮಗಳು ಸಾಲ ತಂದಿರುವ ಬಗ್ಗೆ ತನಗೆ ಗೊತ್ತಿಲ್ಲ ಎಂದು ಸುಶೀಲಮ್ಮ ಹೇಳಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಗಂಗಾಧರ್ ಕ್ಯಾತಸಂದ್ರ ಪೊಲೀಸರ ಮೂಲಕ ನಿರಂತರ ತಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಸುಶೀಲಮ್ಮ ಕುಟುಂಬ ಆರೋಪಿಸಿದೆ. ಗಂಗಾಧರ್ ಜೊತೆ ಸೇರಿಕೊಂಡು ಕ್ಯಾತಸಂದ್ರ ಪಿಎಸೈ ರಾಜು, ಸುಶೀಲಮ್ಮರನ್ನು ಮನೆಯಿಂದ ಖಾಲಿ ಮಾಡಿಸಿ, ಮನೆಯನ್ನು ಗಂಗಾಧರ್ ಸುಪರ್ದಿಗೆ ಕೊಡಿಸಿದ್ದಾರೆ. ಹಾಗಾಗಿ ಸುಶೀಲಮ್ಮ ತನ್ನ ಇಬ್ಬರು ಗಂಡು ಮಕ್ಕಳೊಂದಿಗೆ ಸಿದ್ದಗಂಗಾ ಮಠದ ಅಂಗಡಿಯಲ್ಲೆ ವಾಸವಿದ್ದಾರೆ.

    ಸುಶೀಲಮ್ಮರ ಹೊಸ ಮನೆಗೆ ಗಂಗಾಧರ್ ಬೀಗ ಜಡಿದಿದ್ದಾನೆ. ಇಷ್ಟಕ್ಕೆಲ್ಲಾ ಕ್ಯಾತಸಂದ್ರ ಪೊಲೀಸರ ಕುಮ್ಮಕ್ಕೆ ಕಾರಣ ಅನ್ನೊದು ಸುಶೀಲಮ್ಮರ ಆರೋಪ. ಇಷ್ಟಕ್ಕೆ ಸುಮ್ಮನಾಗದ ಕ್ಯಾತಸಂದ್ರ ಪೊಲೀಸರು ಪದೇ ಪದೇ ಈ ಕುಟುಂಬದವರನ್ನು ಠಾಣೆಗೆ ಕರೆಯಿಸಿ ಗಂಗಾಧರ್ ಕುಟುಂಬಕ್ಕೆ 10 ಲಕ್ಷ ರೂ ಕೊಡುವಂತೆ ಬೆದರಿಕೆ ಹಾಕುತ್ತಿದ್ದಾರೆ. ಅಲ್ಲದೇ ಮೇಲಿಂದ ಮೇಲೆ ವಿಚಾರಣೆಗೆ ಕರೆದು ವಶಕ್ಕೆ ಪಡೆಯುವುದು, ಸುಶೀಲಮ್ಮರ ಮಕ್ಕಳಾದ ಪ್ರದೀಪ್ ಮತ್ತು ಸಂದೀಪ್ ರ ಮೇಲೆ ಸರಗಳ್ಳತನ, ರೇಪ್ ಕೇಸ್ ಹಾಕುವ ಬೆದರಿಕೆ ಹಾಕುತ್ತಿದ್ದಾರಂತೆ. ಪೊಲೀಸರ ಈ ದೌರ್ಜನ್ಯದಿಂದ ಬೇಸತ್ತ ಈ ಕುಟುಂಬ ಈಗ ದಯಾಮರಣದ ಮೊರೆ ಹೋಗಿದೆ.

    ಸಾಲ ಕೊಟ್ಟಿದ್ದೇನೆ ಎಂದು ಹೇಳಿಕೊಳ್ಳುವ ಗಂಗಾಧರನಿಗಿಂತ ಪೊಲೀಸರ ಕಾಟವೇ ಸುಶೀಲಮ್ಮ ಕುಟುಂಬಕ್ಕೆ ಹೆಚ್ಚಾಗಿದೆ. ಹಾಗಾಗಿ ಅವರು ದಯಾಮರಣದ ಮೊರೆ ಹೋಗಿದ್ದಾರೆ. ದಯಾಮರಣಕ್ಕೆ ರಾಷ್ಟ್ರಪತಿಗಳು ಹಾಗೂ ರಾಜ್ಯಪಾಲರಿಂದ ಅನುಮತಿ ಸಿಗದೇ ಇದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡು ಜೀವ ತೊರೆಯಲು ಈ ಕುಟುಂಬ ಮುಂದಾಗಿದೆ.

  • ಕುಡಿಯಲು ದುಡ್ಡು ಕೊಡದಕ್ಕೆ ಬೆಂಕಿ ಹಚ್ಚಿಕೊಂಡು ಪತ್ನಿಯನ್ನು ತಬ್ಬಿಕೊಂಡ ಪತಿ

    ಕುಡಿಯಲು ದುಡ್ಡು ಕೊಡದಕ್ಕೆ ಬೆಂಕಿ ಹಚ್ಚಿಕೊಂಡು ಪತ್ನಿಯನ್ನು ತಬ್ಬಿಕೊಂಡ ಪತಿ

    – ಪತಿ ಸಾವು, ಹೆಂಡತಿಯ ಸ್ಥಿತಿ ಗಂಭೀರ

    ತುಮಕೂರು: ಕುಡಿಯಲು ಹಣ ನೀಡಿಲ್ಲವೆಂದು ಕುಡುಕ ಪತಿಯೊಬ್ಬ ತಾನು ಬೆಂಕಿ ಹಚ್ಚಿಕೊಂಡು ಪತ್ನಿಯನ್ನು ತಬ್ಬಿಕೊಂಡ ಘಟನೆಯೊಂದು ಕೊರಟಗರೆ ತಾಲೂಕಿನ ಕರೇ ದುಗ್ಗನಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.

    ಪತಿ ಲೋಕೇಶ್(40) ಮೃತಪಟ್ಟಿದ್ದು, ಪತ್ನಿ ಮರಿಬಸಮ್ಮ(38) ಸ್ಥಿತಿ ಗಂಭೀರವಾಗಿದೆ. ಪತಿ ಲೋಕೇಶ್ ಕುಡಿಯಲು ಹಣ ಕೊಡುವಂತೆ ಪತ್ನಿಯನ್ನು ನಿತ್ಯ ಪೀಡಿಸುತ್ತಿದ್ದನು. ಹಾಗೆಯೇ ಭಾನುವಾರ ಕೂಡ ಕುಡಿಯೋಕೆ ಪತ್ನಿ ಬಳಿ ಹಣ ಕೇಳಿದ್ದನು. ಪತ್ನಿ ಹಣ ನೀಡಲು ನಿರಾಕರಿಸಿದ್ದಕ್ಕೆ ಲೋಕೇಶ್ ಜಗಳವಾಡಿದ್ದನು.

    ಲೋಕೇಶ್ ಸೀಮೆ ಎಣ್ಣೆ ಸುರಿದುಕೊಂಡು ತನಗೆ ತಾನೇ ಬೆಂಕಿ ಹಚ್ಚಿಕೊಂಡಿದ್ದಾನೆ. ಬಳಿಕ ಉರಿಯುವ ಬೆಂಕಿಯೊಂದಿಗೆ ಪತ್ನಿಯನ್ನು ತಬ್ಬಿಕೊಂಡಿದ್ದಾನೆ. ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಮರಿಬಸಮ್ಮಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಸದ್ಯ ಈ ಬಗ್ಗೆ ಕೋಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸ್ಮಾರ್ಟ್ ಸಿಟಿ ಅಧಿಕಾರಿಗಳ ಸೋಗಿನಲ್ಲಿ ಬರುತ್ತಿದ್ದ ಖದೀಮರ ಬಂಧನ

    ಸ್ಮಾರ್ಟ್ ಸಿಟಿ ಅಧಿಕಾರಿಗಳ ಸೋಗಿನಲ್ಲಿ ಬರುತ್ತಿದ್ದ ಖದೀಮರ ಬಂಧನ

    ತುಮಕೂರು: ಸ್ಮಾರ್ಟ್ ಸಿಟಿ ಅಧಿಕಾರಿಗಳ ಸೋಗಿನಲ್ಲಿ ಬಂದು ಒಂಟಿ ಮಹಿಳೆಯರ ಮನೆ ದೋಚುತ್ತಿದ್ದ ಕಳ್ಳರನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ.

    ಗಣೇಶ್, ರಾಮಚಂದ್ರ ಹಾಗೂ ಫರಿದುಲ್ ಇಂತಿಯಾಸ್ ಬಂಧಿತ ಆರೋಪಿಗಳು. ಈ ಖದೀಮರು ಜೂನ್ 16 ರಂದು ನಗರದ ಸಿ.ಎಸ್.ಐ ಲೇಔಟನ್ ಮನೋರಮಾ ಒಂಟಿ ಮಹಿಳೆಯ ಮನೆಗೆ ಸ್ಮಾರ್ಟ್ ಸಿಟಿ ಅಧಿಕಾರಿಗಳ ಸೋಗಿನಲ್ಲಿ ಹೋಗಿದ್ದಾರೆ. ಬಳಿಕ ಚಿನ್ನಾಭರಣ ಸೇರಿದಂತೆ ಸುಮಾರು 10 ಲಕ್ಷ ರೂ. ದೋಚಿ ಪರಾರಿಯಾಗಿದ್ದರು.

    ಬಂಧಿತರು ಶಿವಮೊಗ್ಗ ಹಾಗೂ ತಮಿಳುನಾಡಿನವರಾಗಿದ್ದು, ಮೈಸೂರು ಹಾಗೂ ಬೆಂಗಳೂರಿನಲ್ಲೂ ತಲಾ ಎರಡು ಮನೆಯಲ್ಲಿ ಇದೇ ಕಳ್ಳರು ದೋಚಿದ್ದಾರೆ. ಸದ್ಯಕ್ಕೆ ತುಮಕೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ ಕದ್ದಿದ್ದ ಹಣ ಮತ್ತು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.  ಇದನ್ನು ಓದಿ: ಸ್ಮಾರ್ಟ್ ಸಿಟಿ ಅಧಿಕಾರಿಗಳಂತೆ ಬಂದು ವೃದ್ಧೆಗೆ ವಂಚಿಸಿ 20 ಲಕ್ಷ ರೂ. ಚಿನ್ನಾಭರಣ ದೋಚಿದ್ರು!

  • ಡಿವೈಡರ್ ಗೆ ಕಾರು ಡಿಕ್ಕಿ- ಆರ್ ಟಿಓ ಇನ್ಸ್ ಪೆಕ್ಟರ್ ಸ್ಥಳದಲ್ಲೇ ದುರ್ಮರಣ

    ಡಿವೈಡರ್ ಗೆ ಕಾರು ಡಿಕ್ಕಿ- ಆರ್ ಟಿಓ ಇನ್ಸ್ ಪೆಕ್ಟರ್ ಸ್ಥಳದಲ್ಲೇ ದುರ್ಮರಣ

    ತುಮಕೂರು: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಆರ್ ಟಿಓ ಇನ್ಸ್ ಪೆಕ್ಟರ್ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಬಳಿ ನಡೆದಿದೆ.

    ಚಿತ್ರದುರ್ಗದ ಆರ್ ಟಿಓ ಇನ್ಸ್ ಪೆಕ್ಟರ್ ದೇವರಾಜು(50) ಮೃತ ದುರ್ದೈವಿ. ಮುಂಜಾನೆ ಶಿರಾಗೆ ಆಗಮಿಸಿ ವಾಪಸ್ ತೆರಳುವಾಗ ಈ ಘಟನೆ ಸಂಭವಿಸಿದೆ. ಘಟನೆಯಿಂದಾಗಿ ಕಾರು ಚಾಲಕ ಅಶೋಕನಿಗೆ ಗಂಭೀರ ಗಾಯಗಳಾಗಿದ್ದು, ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಈ ಬಗ್ಗೆ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಚಲಿಸುತ್ತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ- ಚಾಲಕ ಸೇರಿ ದಂಪತಿ ಸಾವು!

    ಚಲಿಸುತ್ತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ- ಚಾಲಕ ಸೇರಿ ದಂಪತಿ ಸಾವು!

    ತುಮಕೂರು: ಚಲಿಸುತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಕ್ಯಾಂಟರಿನಲ್ಲಿದ್ದ ದಂಪತಿ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರಿನ ಶಿರಾದ ದೊಡ್ಡ ಆಲದಮರದ ಬಳಿ ನಡೆದಿದೆ.

    ಚಾಲಕ ಲೋಕೇಶ್(34), ಹನುಮಂತರಾಜು(40) ಮತ್ತು ರಾಧಾ(35) ಮೃತ ದಂಪತಿ. ಚಲಿಸುತ್ತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಕ್ಯಾಂಟರ್ ನಲ್ಲಿ ಸಿಕ್ಕಿ ಶವಗಳು ನುಜ್ಜುಗುಜ್ಜಾಗಿದೆ. ಶವಗಳನ್ನು ವಾಹನದಿಂದ ಹೊರ ತೆಗೆಯಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.

    ದಂಪತಿ ರಾಣಿಬೆನ್ನೂರಿನ ಕರೂರು ಗ್ರಾಮದವರಾಗಿದ್ದು, ಕಳ್ಳಂಬೆಳ್ಳಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.