ತುಮಕೂರು: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದೆ. ಆದರೆ ನಿಗದಿತ ಸಮಯದಲ್ಲಿ ಮಳೆ ಬಾರದೇ ರೈತನ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ. ಮುಂಗಾರಿನಲ್ಲಿ ಬಿತ್ತನೆ ಮಾಡಿದ್ದ ಹೆಸರು, ಅಲಸಂದೆ, ಉದ್ದು, ಎಳ್ಳು, ತೊಗರಿ ಈಗ ದನಕರುಗಳ ಪಾಲಾಗಿದೆ.
ತುಮಕೂರು ಜಿಲ್ಲೆ ತಿಪಟೂರು ತಾಲೂಕಿನಲ್ಲಿ ಆರಿದ್ರಾ ಮಳೆ ಕೈ ಕೊಟ್ಟ ಪರಿಣಾಮ ಕಳೆಕಟ್ಟುವ ಹಂತದಲ್ಲಿದ್ದ ಮುಂಗಾರು ಬೆಳೆಗಳು ನಷ್ಟವಾಗಿದೆ. ಅಶ್ವಿನಿ ಭರಣಿ ಮಳೆ ಚೆನ್ನಾಗಿ ಸುರಿದಿದ್ರಿಂದ ಸಂತೋಷಗೊಂಡ ರೈತರು ಹೆಸರು, ಅಲಸಂದೆ, ಉದ್ದು, ಎಳ್ಳು ಬಿತ್ತನೆ ಮಾಡಿದ್ದರು.
ಆರಂಭದಲ್ಲಿ ಮಳೆಯಾಗಿದ್ರಿಂದ ಹಚ್ಚಹಸಿರಾಗಿ ಬೆಳೆ ಬಂದಿತ್ತು. ಕಾಳುಗಟ್ಟುವ ಸಮಯದಲ್ಲಿ ಆರಿದ್ರಾ ಮಳೆ ಕೈಕೊಟ್ಟಿದ್ರಿಂದ ಬೆಳೆ ಸಂಪೂರ್ಣ ಹಾಳಾಗಿದ್ದು ರೈತರು ದನ ಕರುಗಳನ್ನ ಕಟ್ಟಿ ಮೇಯಿಸುತ್ತಿದ್ದಾರೆ. ಕಳೆದ ವರ್ಷವೂ ಸಹ ಆರಿದ್ರಾ ಮಳೆ ಕೈಕೊಟ್ಟು ಸಾವಿರಾರು ಎಕರೆ ಮುಂಗಾರು ಬೆಳೆ ನಷ್ಟವಾಗಿತ್ತು.
ಈ ವರ್ಷವೂ ಸಹ ಬೆಳೆ ಹಾಳಾಗಿದ್ರಿಂದ ಸಾವಿರಾರು ರೂಪಾಯಿ ಖರ್ಚು ಮಾಡಿ ಜಮೀನು ಹದ ಮಾಡಿ ಗೊಬ್ಬರ ಹಾಕಿ ಬೀಜ ಬಿತ್ತನೆ ಮಾಡಿದ ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಕಳೆದ ವರ್ಷದ ಬೆಳೆ ನಷ್ಟದಿಂದಾದ ಫಸಲ್ ಭೀಮಾ ಯೋಜನೆಯಡಿ ಪರಿಹಾರ ಇನ್ನೂ ಸಿಕ್ಕಿಲ್ಲ ಈ ವರ್ಷವೂ ಬೆಳೆ ನಷ್ಟವಾಗಿದ್ದು ಈ ಭಾಗದ ರೈತರು ಕಂಗಾಲಾಗಿದ್ದಾರೆ.





ಇದೇ ವೇಳೆ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡುವಲ್ಲೂ ಅನ್ಯಾಯ ಆಗಿದೆ ಎಂದು ಆರೋಪಿಸಿರುವ ಅವರು, ನಾಯಕರಿಗೆ ಎರಡು ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೆ. ಮೊದಲ ಆದ್ಯತೆ ಶಿರಾ ಶಾಸಕ ಬಿ.ಸತ್ಯನಾರಾಯಣ ಗೆ ನೀಡಿದ್ದೇವು. ಆದರೆ ಅವವರಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ನೋವಾಗಿದೆ ಎಂದರು. ಅಲ್ಲದೇ ತಮ್ಮ ಭಾಷಣ ವೇಳೆ ಕೊರಟಗೆರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಸುಧಾಕರ್ ಲಾಲ್ ಅವರ ಸೋಲನ್ನ ಪ್ರಸ್ತಾಪಿಸಿದ ಅವರು, ಸುಧಾಕರ ಲಾಲ್ ಸೋಲಬಾರದಿತ್ತು. ಅವರು ಕ್ಷೇತ್ರದಲ್ಲಿ ಒಳ್ಳೆ ಕೆಲಸ ಮಾಡಿದ್ದರು ಎಂದು ಬೇಸರ ವ್ಯಕ್ತಪಡಿಸಿದರು.







