Tag: tumkuru

  • ನೀವು ತುಮಕೂರು ನಗರಕ್ಕೆ ಹೋಗ್ತಾ ಇದ್ದೀರಾ? ಹಾಗಾದ್ರೆ ಈ ಸುದ್ದಿ ಓದಿ

    ನೀವು ತುಮಕೂರು ನಗರಕ್ಕೆ ಹೋಗ್ತಾ ಇದ್ದೀರಾ? ಹಾಗಾದ್ರೆ ಈ ಸುದ್ದಿ ಓದಿ

    – ತುಮಕೂರಲ್ಲಿ ಯುಜಿಡಿ ಮುಚ್ಚೋ ಸರ್ಕಸ್
    – ಪೈಪ್ ತುಂಬಿಕೊಂಡು ಬರ್ತಿದ್ದ ಲಾರಿಯೇ ಕುಸಿದು ಬಿತ್ತು
    – ರಸ್ತೆ ಗುಂಡಿಗಳಿಂದ ಮದುವೆಗಳು ಶಿಫ್ಟ್

    ತುಮಕೂರು: ನೀವು ಬೈಕ್ ಅಥವಾ ಕಾರ್‍ನಲ್ಲೇನಾದ್ರೂ ತುಮಕೂರು ಕಡೆಗೆ ಹೋಗ್ಬೇಕಂದ್ರೆ ನಿಮ್ಮ ಅದೃಷ್ಟ ಗಟ್ಟಿಯಾಗಿದೆಯಾ ಅಂತ ಚೆಕ್ ಮಾಡ್ಕೊಂಡು ಹೋಗೋದು ಒಳ್ಳೇಯದು. ಯಾಕಂದ್ರೆ ತುಮಕೂರು ನಗರದ ರಸ್ತೆಗಳು ಭದ್ರವಾಗಿಲ್ಲ. ಯಾವಾಗ ಬೇಕಾದ್ರೂ, ಯಾವ ರಸ್ತೆಗಳು ಬೇಕಿದ್ರೂ ಕುಸಿದು ಬೀಳ್ಬಹುದು. ಪ್ರಾಣ ತೆಗೆಯೋ ತುಮಕೂರು ರಸ್ತೆ ಗುಂಡಿಗಳಿಗೆ ಮದುವೆಗಳನ್ನೇ ಶಿಫ್ಟ್ ಮಾಡೋ ಖದರ್ ಕೂಡ ಇದೆ.

    ಸ್ಮಾರ್ಟ್ ಸಿಟಿ ತುಮಕೂರು ನಗರದಲ್ಲಿ ಯುಜಿಡಿ(ಅಂಡರ್‍ಗ್ರೌಂಡ್ ಡ್ರೈನೇಜ್) ಗುಂಡಿ ಮುಚ್ಚೋ ಸರ್ಕಸ್ ನಡೆಯುತ್ತಿದೆ. ಅದು ಅಂತಿಂಥಾ ಸರ್ಕಸ್ ಅಲ್ಲ. ಸಣ್ಣ ಗುಂಡಿ ಮುಚ್ಚಲು ತುಮಕೂರು ಪಾಲಿಕೆ ಅಧಿಕಾರಿಗಳು ನಡೆಸೋ ವಾರಗಟ್ಟಲೆಯ ಭರ್ಜರಿ ಸರ್ಕಸ್. ಹೌದು, ತುಮಕೂರು ನಗರದ ರಸ್ತೆ ಅಡಿಯಲ್ಲಿರುವ ಯುಜಿಡಿ ಪೈಪ್ ಲೈನ್ ಬಹಳ ಅಶಕ್ತವಾಗಿವೆ. ಇದ್ದಕ್ಕಿದ್ದಂತೆ ಬಾಯ್ತೆರೆದು ವಾಹನ ಸವಾರರನ್ನು ಬಲಿ ಪಡೆಯುತ್ತವೆ ಯುಜಿಡಿ ರಸ್ತೆ ಗುಂಡಿಗಳು.

    ತುಮಕೂರು ನಗರದ ಶಿರಾಣಿ ರಸ್ತೆಯ ಮಾಕಂ ಕಲ್ಯಾಣ ಮಂಟಪದ ಎದುರಿನಲ್ಲೇ ಯುಜಿಡಿ ಕುಸಿದು ಬಿದ್ದಿದೆ. ಇದ್ರಿಂದ ಕಲ್ಯಾಣ ಮಂಟಪದಲ್ಲಿ ನಡೆಯಬೇಕಿದ್ದ ಮೂರು ಮದುವೆಗಳು ಬೇರೊಂದು ಕಲ್ಯಾಣ ಮಂಟಪಕ್ಕೆ ಶಿಫ್ಟಾಗಿವೆ. ಹೀಗಾಗಿ ವಧು, ವರ ತಂದೆ ತಾಯಿಗಳು ಕಲ್ಯಾಣ ಮಂಟಪದ ಎದುರು ಮದುವೆ ಬೇರೊಂದು ಕಡೆಗೆ ವರ್ಗಾಯಿಸಲಾಗಿದೆ ಅಂತ ಬ್ಯಾನರ್ ಬರೆದು ಹಾಕಿದ್ದಾರೆ.

    ಒಂದು ವಾರದ ಹಿಂದೆ ಯುಜಿಡಿ ಗುಂಡಿ ಕುಸಿದು ಬಿದ್ದು, ನಗರದ ಶೌಚಾಲಯದ ನೀರೆಲ್ಲಾ ಅಕ್ಕಪಕ್ಕದ ಕಲ್ಯಾಣ ಮಂಟಪ, ಅಂಗಡಿಗೆ ನುಗ್ಗಿದೆ. ಈ ಬಗ್ಗೆ ವಾರದ ಹಿಂದೆ ಪಾಲಿಕೆ ಅಧಿಕಾರಿಗಳಿಗೆ ದೂರು ನೀಡಿದ್ರೂ ಪ್ರಯೋಜನವಾಗಿಲ್ಲ. ಬಳಿಕ ಜನ್ರು ರೊಚ್ಚಿಗೆದ್ದಿದ್ದರಿಂದ ಅಧಿಕಾರಿಗಳು ಇಂದು ಯುಜಿಡಿ ಮುಚ್ಚಲು ಮುಂದಾಗಿದ್ರು. ಆದ್ರೆ ಇಂದು ಬೆಳಗ್ಗೆ ಪೈಪ್ ತುಂಬಿಕೊಂಡು ಬಂದ ಲಾರಿಯೊಂದು ಕೂಡ ಕುಸಿದು ಬಿತ್ತು. ಇದ್ರಿಂದ ಅಕ್ಕಪಕ್ಕದ ರಸ್ತೆಗಳಲ್ಲೆಲ್ಲಾ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬಳಿಕ ಕ್ರೇನ್ ಮೂಲಕ ಲಾರಿಯನ್ನು ಎತ್ತಿ ಪೈಪ್ ಗಳನ್ನು ಪಕ್ಕಕ್ಕೆ ಜೋಡಿಸಲಾಗಿದೆ. ಪಾಲಿಕೆ ಅಧಿಕಾರಿಗಳು ವರ್ಷಕ್ಕೆ ಮೂರ್ನಾಲ್ಕು ಬಾರಿ ಇಂತಹ ಸರ್ಕಸ್ ಮಾಡಿ ಜನರಿಗೆ ಪುಕ್ಕಟ್ಟೆ ಮನೋರಂಜನೆ ನೀಡ್ತಾರೆ ಅಂತಾರೆ ಸ್ಥಳೀಯರು.

    ಪ್ರತಿ ಬಾರಿಯೂ ಕಳಪೆ ಕಾಮಗಾರಿ ಮಾಡುವುದರಿಂದ ಪದೇ ಪದೇ ಯುಜಿಡಿ ಪೈಪ್ ಗಳು ರಸ್ತೆ ನಗರದಲ್ಲಿ ಎಲ್ಲೆಂದರಲ್ಲಿ ಕುಸಿಯುತ್ತಿವೆ. ದೂರದೃಷ್ಠಿಯ ಕೊರತೆ, ಕಮಿಷನ್ ಆಸೆಗೆ ಬಲಿಯಾಗುವ ಅಧಿಕಾರಿ ಕಾಮಗಾರಿಗಳ ಗುಣಮಟ್ಟ ಪರಿಶೀಲನೆಗೆ ಮುಂದಾಗುವುದಿಲ್ಲ. ಇದ್ರಿಂದ ಇಂತಹ ಅವಾಂತರಗಳು, ಅವಘಡಗಳು ತುಮಕೂರಿನಲ್ಲಿ ಸಾಮಾನ್ಯವಾಗಿವೆ ಅಂತ ಸ್ಥಳೀಯರು ಆರೋಪಿಸಿದ್ದಾರೆ.

  • ಕೆರೆ ಒತ್ತುವರಿ ಬಗ್ಗೆ ದೂರು ನೀಡಿದ್ದಕ್ಕೆ ಮನೆಗೆ ನುಗ್ಗಿ ಮೂವರ ಮೇಲೆ ಹಲ್ಲೆ

    ಕೆರೆ ಒತ್ತುವರಿ ಬಗ್ಗೆ ದೂರು ನೀಡಿದ್ದಕ್ಕೆ ಮನೆಗೆ ನುಗ್ಗಿ ಮೂವರ ಮೇಲೆ ಹಲ್ಲೆ

    ತುಮಕೂರು: ಮನೆಗೆ ನುಗ್ಗಿದ ಕಿಡಿಗೇಡಿಗಳು ಮೂವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಗಾನಹಳ್ಳಿಯಲ್ಲಿ ನಡೆದಿದೆ.

    ಬಸವರಾಜು (70) ಪುಟ್ಟ ವೀರಮ್ಮ (60) ಹಾಗೂ ಮಗ ಜಗದೀಶ್ ಹಲ್ಲೆಗೊಳಗಾದವರು. ಪ್ರಸನ್ನ ಹಾಗೂ ನರಸಿಂಹರಾಜು ಸಹಚರರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

    ಗ್ರಾಮದ ಕೆರೆಯನ್ನು ನರಸಿಂಹರಾಜು ಕಡೆಯವರು ಒತ್ತುವರಿ ಮಾಡಿದ್ದರು. ಇದನ್ನ ಜಗದೀಶ್ ಸರ್ಕಾರಕ್ಕೆ ತಿಳಿಸಿ ತೆರವುಗೊಳ್ಳಿಸಿದ್ದರು. ಇದರ ದ್ವೇಷಕ್ಕೆ ಮನೆಗೆ ನುಗ್ಗಿದ ಕಿಡಿಗೇಡಿಗಳು ಮನೆಯ ಬಾಗಿಲು, ಪಿಠೋಪಕರಣಗಳನ್ನ ಧ್ವಂಸಗೊಳಿಸಿದ್ದಾರೆ. ಅಲ್ಲದೇ ಮನೆಯವರ ಮೇಲೆ ಹಲ್ಲೆ ನಡೆಸಿದ್ದಾರೆ. ಪರಿಣಾಮ ಜಗದೀಶ್ ಮತ್ತು ತಂದೆ ತಾಯಿಗೆ ಗಂಭೀರ ಗಾಯಗಳಾಗಿವೆ.

    ಸದ್ಯ ಗಾಯಾಳುಗಳನ್ನು ಕೊರಟಗೆರೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

  • ತುಮಕೂರು: ಪೆಟ್ರೋಲ್ ಗೆ ಸೀಮೆಎಣ್ಣೆ ಬೆರೆಸಿದ ಆರೋಪ- ಗ್ರಾಹಕರ ಪ್ರತಿಭಟನೆ

    ತುಮಕೂರು: ಪೆಟ್ರೋಲ್ ಗೆ ಸೀಮೆಎಣ್ಣೆ ಬೆರೆಸಿದ ಆರೋಪ- ಗ್ರಾಹಕರ ಪ್ರತಿಭಟನೆ

    ತುಮಕೂರು: ಬಂಕ್‍ನಲ್ಲಿ ಪೆಟ್ರೋಲ್‍ಗೆ ಸೀಮೆಎಣ್ಣೆ ಮಿಶ್ರಣ ಮಾಡಿದ್ದಾರೆಂದು ಆರೋಪಿಸಿ ತುಮಕೂರಿನ ಗ್ರಾಹಕರು ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.

    ನಗರದ ಕೆಆರ್ ಬಡಾವಣೆಯಲ್ಲಿರುವ ಅಣೇಕಾರ್‍ನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‍ನಲ್ಲಿ ಗ್ರಾಹಕರು ಪೆಟ್ರೋಲ್ ಹಾಕಿಸಿಕೊಳ್ಳುವ ವೇಳೆ ಸೀಮೆಎಣ್ಣೆ ವಾಸನೆ ಬಂದಿದೆ. ಈ ವೇಳೆ ಆಕ್ರೋಶಗೊಂಡ ಗ್ರಾಹಕರು ಬಂಕ್‍ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ರು.

    ಎ.ಪಿ.ವಾಸುದೇವ್ ಎಂಬವರಿಗೆ ಸೇರಿದ ಬಂಕ್ ಇದಾಗಿದ್ದು, ಈ ಮೊದಲೂ ಸಹ ಪೆಟ್ರೋಲ್‍ಗೆ ಸೀಮೆಎಣ್ಣೆ ಮಿಶ್ರಣವಾಗಿತ್ತು ಎನ್ನುವ ಆರೋಪ ಕೇಳಿಬಂದಿದೆ.

  • ರೋಗಿಯಿಂದಲೇ 108 ವಾಹನ ಜಖಂ

    ರೋಗಿಯಿಂದಲೇ 108 ವಾಹನ ಜಖಂ

    ತುಮಕೂರು: ರೋಗಿಯಿಂದಲೇ 108 ವಾಹನ ಜಖಂ ಆದ ಘಟನೆ ಜಿಲ್ಲಾಸ್ಪತ್ರೆ ಮುಂಭಾಗ ತಡರಾತ್ರಿ ನಡೆದಿದೆ.

    26 ವರ್ಷದ ಗಿರೀಶ್ ತಡರಾತ್ರಿ ಗುಬ್ಬಿ ತಾಲೂಕಿನ ಕೆ.ಜಿ.ಟೆಂಪಲ್ ಬಳಿ ಬೈಕ್‍ನಿಂದ ಬಿದ್ದು ಗಾಯಗೊಂಡಿದ್ದರು. ಅವರನ್ನ ಗುಬ್ಬಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ತುಮಕೂರಿಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು. 108 ವಾಹನದಲ್ಲಿ ಗಿರೀಶ್ ಹಾಗೂ ಅವರ ಸ್ನೇಹಿತರಿಬ್ಬರನ್ನ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಗಿರೀಶ್ ಒತ್ತಾಯಿಸಿದ್ದರು. ಇದಕ್ಕೆ 108 ಸಿಬ್ಬಂದಿ ಒಪ್ಪದಿರುವುದಕ್ಕೆ ಗಲಾಟೆ ನಡೆದಿದೆ.

    ಕುಪಿತಗೊಂಡ ಮೂವರು 108 ಸಿಬ್ಬಂದಿಯ ಮುಂದೆಯೇ ವಾಹನ ಜಖಂಗೊಳಿಸಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಗಿರೀಶ್ ಹಾಗು ಸ್ನೇಹಿತರಾದ ರಾಕೇಶ್ ಹಾಗೂ ನಟರಾಜುನನ್ನು ಪೊಲೀಸರು ತಡರಾತ್ರಿಯೇ ವಶಕ್ಕೆ ಪಡೆದಿದ್ದಾರೆ. ಬಳಿಕ ಗಿರೀಶ್‍ನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

  • ಲಾರಿ, ಫಾರ್ಚೂನರ್  ಕಾರ್ ಮುಖಾಮುಖಿ: ಮೂವರ ದುರ್ಮರಣ

    ಲಾರಿ, ಫಾರ್ಚೂನರ್ ಕಾರ್ ಮುಖಾಮುಖಿ: ಮೂವರ ದುರ್ಮರಣ

    ತುಮಕೂರು: ಲಾರಿ ಮತ್ತು ಟೊಯೋಟಾ ಫಾರ್ಚೂನರ್ ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ.

    ಜಿಲ್ಲೆಯ ಶಿರಾ ಬಳಿಯ ಮಾಳಂಗಿಯ- ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ಸಂಭವಿಸಿದೆ. ಮೃತರನ್ನು ಮಹಮದ್ ಸಾದಿಕ್(52) ಸಿದ್ದಿಕ್ (50) ಹಾಗೂ ಜಾಫರ್ (26) ಎಂಬುವುದಾಗಿ ಗುರುತಿಸಲಾಗಿದೆ.

    ಮೃತರೆಲ್ಲರೂ ತಮಿಳುನಾಡು ಮೂಲದವರು ಎನ್ನಲಾಗಿದ್ದು, ಇವರು ಸೇಲಂ ನಿಂದ ಮುಂಬೈಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

    ಘಟನೆಯಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಥಳಕ್ಕೆ ಶಿರಾ ಪೊಲೀಸರು ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿ ತನಿಖೆ ನಡೆಸುತ್ತಿದ್ದಾರೆ.

  • ಮತ್ತೆ ಬಿಎಸ್‍ವೈ ವರ್ಸಸ್ ಈಶ್ವರಪ್ಪ: ತುಮಕೂರಲ್ಲಿ ರಹಸ್ಯ ಸಭೆ

    ಮತ್ತೆ ಬಿಎಸ್‍ವೈ ವರ್ಸಸ್ ಈಶ್ವರಪ್ಪ: ತುಮಕೂರಲ್ಲಿ ರಹಸ್ಯ ಸಭೆ

    ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರಿಗೆ ಈಶ್ವರಪ್ಪ ಸೆಡ್ಡುಹೊಡೆಯಲು ಮತ್ತೆ ಮುಂದಾಗಿದ್ದಾರಾ ಹೀಗೊಂದು ಪ್ರಶ್ನೆ ಈಗ ಮತ್ತೊಮ್ಮೆ ಎದ್ದಿದೆ.

    ಈಶ್ವರಪ್ಪ ಅವರು ಇಂದು ದಿಢೀರ್ ಎಂಬಂತೆ ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಸೊಗಡು ಶಿವಣ್ಣ ಅವರನ್ನು ಭೇಟಿ ಮಾಡಿ ರಹಸ್ಯ ಸಭೆ ನಡೆಸಿದ ಕಾರಣ ಈ ಪ್ರಶ್ನೆ ಈಗ ಎದ್ದಿದೆ.

    ತುಮಕೂರು ಹೊರವಲಯದಲ್ಲಿರುವ ಸೊಗಡು ನಿವಾಸದಲ್ಲಿ ಈಶ್ವರಪ್ಪ ಅವರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮುಂದಿನ ರಾಜಕೀಯ ನಡೆ ಮತ್ತು ರಾಯಣ್ಣ ಬ್ರಿಗೇಡ್ ವಿಸ್ತರಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

    ಸಭೆ ಮುಗಿದ ಬಳಿಕ ಈಗ ಬಂದೆ ಎಂದು ಹೇಳಿ ಮಾಧ್ಯಮಗಳ ಕಣ್ಣುತಪ್ಪಿಸಿ ಹಿಂದಿನ ಬಾಗಿಲಿನಿಂದ ಈಶ್ವರಪ್ಪ ತೆರಳಿದ್ದಾರೆ. ಈ ಸಭೆಯಲ್ಲಿ ಮಾಜಿ ಸಚಿವ ರವೀಂದ್ರನಾಥ್, ಭಾನುಪ್ರಕಾಶ್, ಸೋಮಣ್ಣ ಬೇವಿನಮರದ, ಸಿದ್ದರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.

    ಮಾಧ್ಯಮಗಳ ಜೊತೆ ಮಾತನಾಡಿದ ಸೊಗಡು ಶಿವಣ್ಣ, ಇಷ್ಟು ದಿನ ಕಳೆದರೂ ಕೂಡ ಇನ್ನೂ ಕೆಲ ಜಿಲ್ಲೆಗಳಲ್ಲಿ ಅಧ್ಯಕ್ಷರ ಬದಲಾವಣೆಯಾಗದಿದ್ದಕ್ಕೆ ಮತ್ತೊಮ್ಮೆ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತರುವ ಬಗ್ಗೆ ಚರ್ಚಿಸಲಾಯಿತು. ಇದರ ಜೊತೆ ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣೆ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದರು.

    ಈ ಬಗ್ಗೆ 27 ರಂದು ಬೆಂಗಳೂರಿನಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶವನ್ನ ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಭಾಗವಹಿಸುವ ಬಗ್ಗೆ ಚರ್ಚಿಸಿದ್ದಾರೆ. ಸಮಾವೇಶದಲ್ಲಿ ಬ್ರಿಗೇಡ್ ನ ಎಲ್ಲರೂ ಭಾಗವಹಿಸಲಿದ್ದಾರೆ ಎಂದು ಹೇಳಿದರು.

  • ರಾಜ್ಯಾದ್ಯಂತ `ಚಕ್ರವರ್ತಿ’ ಚಾಲೆಂಜಿಂಗ್ ಸ್ಟಾರ್ ದರ್ಶನ – ಬಾಕ್ಸ್ ಆಫೀಸ್ ಸುಲ್ತಾನನ ಸಿನಿಮಾಕ್ಕೆ ಫಿದಾ

    ರಾಜ್ಯಾದ್ಯಂತ `ಚಕ್ರವರ್ತಿ’ ಚಾಲೆಂಜಿಂಗ್ ಸ್ಟಾರ್ ದರ್ಶನ – ಬಾಕ್ಸ್ ಆಫೀಸ್ ಸುಲ್ತಾನನ ಸಿನಿಮಾಕ್ಕೆ ಫಿದಾ

    – ರಾತ್ರಿಯಿಂದಲೇ ಅಭಿಮಾನಿಗಳಿಗೆ ಸಡಗರ

    ಬೆಂಗಳೂರು: ಸ್ಯಾಂಡಲ್ ವುಡ್‍ನಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ `ಚಕ್ರವರ್ತಿ’ ಸಿನಿಮಾ ತೆರೆಗೆ ಅಪ್ಪಳಿಸಿದೆ. ಗುರುವಾರ ರಾತ್ರಿಯಿಂದಲೇ ಎಲ್ಲೆಲ್ಲೂ ಸದ್ದು ಮಾಡುತ್ತಿದೆ. ಬೆಂಗಳೂರಿನ ಮಲ್ಟಿಪ್ಲೆಕ್ಸ್ ಗಳಲ್ಲಿ ಇದೇ ಮೊದಲ ಬಾರಿಗೆ ಮಧ್ಯರಾತ್ರಿ 12 ಗಂಟೆ ಚಿತ್ರ ಪ್ರದರ್ಶನಗೊಂಡಿದೆ. ಕೇವಲ ಕರ್ನಾಟಕ ಮಾತ್ರವಲ್ಲದೇ ದೆಹಲಿ ಮತ್ತು ಗುಜರಾತ್‍ನಲ್ಲಿ ತೆರೆ ಕಂಡಿದೆ. ದೇಶದ ಒಟ್ಟು 500 ಚಿತ್ರಮಂದಿರಗಳಲ್ಲಿ ಅಭಿಮಾನಿಗಳಿಗೆ ಚಕ್ರವರ್ತಿ ದರ್ಶನ ನೀಡುತ್ತಿದ್ದಾರೆ.

    ಶಿವಮೊಗ್ಗದ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಚಕ್ರವರ್ತಿ ಸಿನೆಮಾ ಮಧ್ಯರಾತ್ರಿಯೇ ಬಿಡುಗಡೆಗೊಂಡಿದೆ. ಮಧ್ಯ ರಾತ್ರಿ ಶೋ ನೋಡಲು 8 ಗಂಟೆಯಿಂದಲೇ ಟಿಕೇಟ್ ಗಾಗಿ ಕ್ಯೂನಿಂತಿದ್ದರು. ಕೆಲ ಮಿತಿಮೀರಿದ ವರ್ತನೆ ತೋರುತ್ತಿದ್ದ ಪ್ರೇಕ್ಷಕರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

    ಹಲವು ಬಾರಿ ಲಘು ಲಾಠಿ ಪ್ರಹಾರವನ್ನೂ ಮಾಡಲಾಯಿತು. ಚಿತ್ರಮಂದಿರದ ಆವರಣದ ತುಂಬಾ ಅಭಿಮಾನಿಗಳು ದರ್ಶನ್ ಪರ ಘೋಷಣೆ ಕೂಗುತ್ತಿದ್ದರು. ಸಿನೆಮಾ ಪ್ರದರ್ಶನ ಆರಂಭವಾದ ನಂತರ ದರ್ಶನ್ ಎಂಟ್ರಿ ವೇಳೆ ಅಭಿಮಾನಿಗಳ ಘೋಷಣೆ ಮುಗಿಲು ಮುಟ್ಟಿತ್ತು.

    ತುಮಕೂರಿನಲ್ಲಿ ರಾತ್ರಿಯಿಂದಲೇ ಚಿತ್ರ ತೆರೆ ಕಂಡಿದೆ. ಗಾಯತ್ರಿ ಮತ್ತು ಮಾರುತಿ ಚಿತ್ರ ಮಂದಿರಗಳಲ್ಲಿ ಚಿತ್ರ ಪ್ರದರ್ಶನಗೊಂಡಿದ್ದು ಮಾರುತಿ ಚಿತ್ರ ಮಂದಿರದಲ್ಲಿ ರಾತ್ರಿ 12 ಗಂಟೆ ಮತ್ತು ಬೆಳಗಿನ ಜಾವ 4-30 ಕ್ಕೆ ವಿಶೇಷ ಪ್ರದರ್ಶನ ನಡೆಸಲಾಯಿತು. ಮಧ್ಯರಾತ್ರಿ 12 ರ ಶೋಗೂ ಅಭಿಮಾನಿಗಳು ಮುಗಿಬಿದ್ದು ಚಿತ್ರ ವೀಕ್ಷಿಸಿದರು. ಇನ್ನೂ ಕೆಲ ಅಭಿಮಾನಿಗಳು ತಮ್ಮ ಹೇರ್‍ಸ್ಟೈಲ್‍ನಲ್ಲಿಯೇ ಚಕ್ರವರ್ತಿ ಎಂಬ ಹೆಸರು ಮೂಡುವ ಹಾಗೆ ಹೇರ್‍ಕಟ್ ಮಾಡಿಸಿಕೊಂಡು ಗಮನ ಸೆಳೆದರು.

    ಇದನ್ನೂ ಓದಿ: ಸ್ಯಾಂಡಲ್‍ವುಡ್‍ನಲ್ಲಿ ದಾಖಲೆ ಬರೆದ ಚಕ್ರವರ್ತಿ: ಧೂಳೆಬ್ಬಿಸಿದೆ ದಚ್ಚು ದರ್ಬಾರ್

    ಇದನ್ನೂ ಓದಿ: ಯುಗಾದಿಗೆ ‘ಚಕ್ರವರ್ತಿ’ ಸಿನಿಮಾದ ಟ್ರೇಲರ್ ರಿಲೀಸ್

    ಇದನ್ನೂ ಓದಿ: ನಾವ್ ಲಾಂಗ್ ಇರೋದ್ರಿಂದ ಲಾಂಗ್ ನಮ್ಗೆ ಮ್ಯಾಚಾಗುತ್ತೆ: ಫೇಸ್ ಬುಕ್ ಲೈವ್‍ನಲ್ಲಿ ನಟ ದರ್ಶನ್

  • ಗಂಡ, ಮಗನನ್ನ ಪೂಜೆಗೆ ಕೂರಿಸಿ ಮಹಿಳೆ ಮೇಲೆ ಅತ್ಯಾಚಾರ ಯತ್ನ- ಪೂಜಾರಿಗೆ ಗ್ರಾಮಸ್ಥರಿಂದ ಧರ್ಮದೇಟು

    ಗಂಡ, ಮಗನನ್ನ ಪೂಜೆಗೆ ಕೂರಿಸಿ ಮಹಿಳೆ ಮೇಲೆ ಅತ್ಯಾಚಾರ ಯತ್ನ- ಪೂಜಾರಿಗೆ ಗ್ರಾಮಸ್ಥರಿಂದ ಧರ್ಮದೇಟು

    ತುಮಕೂರು: ಮನೆಯಲ್ಲಿ ಶಾಂತಿಯಿಲ್ಲ, ನೆಮ್ಮದಿಯಿಲ್ಲ, ಒಂದು ಪೂಜೆ ಮಾಡಿ ಅಂತ ಪೂಜಾರಿಯನ್ನ ಮನೆಗೆ ಕರೆಸಿದ್ರು. ಆದ್ರೆ ಅದೇ ಪೂಜಾರಿ ಮನೆಗೆ ಬಂದು ಪೂಜೆಗೆ ಕರೆಸಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದು ಗೂಸಾ ತಿಂದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಅಕ್ಕಳಸಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಾಗಮಂಗಲ ತಾಲೂಕಿನ ಮುಳಕಟ್ಟಮ್ಮ ದೇವಾಲಯದ ಸ್ವಯಂ ಘೋಷಿತ ಪೂಜಾರಿ, ಮಹೇಶ್ ಪೂಜಾರ್ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಕಳೆದ ಶುಕ್ರವಾರ ಅಕ್ಕಳಸಂದ್ರ ಗ್ರಾಮದ ಗೃಹಿಣಿ ಮನೆಗೆ ಪೂಜಾರಿ ಕಟ್ಟಲೇ ಮಾಡಲು ಬಂದಿದ್ದ. ಮೊದಲು ಮಹಿಳೆಯ ಗಂಡ ಹಾಗೂ ಮಗನನ್ನ ಕರ್ಪೂರ ಬೆಳಗುತ್ತಾ ಕುಳಿತಿರಬೇಕು ಅಂತ ಕೂರಿಸಿದ್ದಾನೆ. ನಂತರ ಗೃಹಿಣಿಗೆ ಕಟ್ಟಲೆ ಪೂಜೆ ಮಾಡಿಸೋಕೆ ಸ್ನಾನ ಮಾಡ್ಬೇಕು, ನಾನೇ ನೀರು ಹಾಕ್ಬೇಕು ಅಂತ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

    ವಿಷಯ ತಿಳಿಯುತ್ತಿದ್ದಂತೆ ಜೋರು ಗಲಾಟೆ ಆಗಿದೆ. ಆಮೇಲೆ ಊರಿನ ಜನರೆಲ್ಲಾ ಸೇರಿ ಪೂಜಾರಿ ಮಹೇಶ್‍ಗೆ ಚೆನ್ನಾಗಿ ಥಳಿಸಿದ್ದಾರೆ. ಕೊನೆಗೆ ಗ್ರಾಮದಲ್ಲಿ ಪಂಚಾಯ್ತಿ ಮಾಡಿ ಆರೋಪಿ ಪೂಜಾರಿಗೆ 5 ಲಕ್ಷ ದಂಡವನ್ನೂ ವಿಧಿಸಿದ್ದಾರೆ. ಆದ್ರೆ ಚೆಕ್ ಕೊಟ್ಟು ಹೋಗಿದ್ದ ಆರೋಪಿ ಹಣ ಸಂದಾಯ ಮಾಡಿಲ್ಲ. ಹೀಗಾಗಿ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಮಹೇಶ್ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ.

  • ನಾಲ್ಕನೆಯ ಮಗು ಹೆಣ್ಣಾಗುತ್ತೆ ಅನ್ನೋ ಭಯಕ್ಕೆ ಗರ್ಭಪಾತದ ಮಾತ್ರೆ ಸೇವಿಸಿ ಗರ್ಭಿಣಿ ಸಾವು

    ನಾಲ್ಕನೆಯ ಮಗು ಹೆಣ್ಣಾಗುತ್ತೆ ಅನ್ನೋ ಭಯಕ್ಕೆ ಗರ್ಭಪಾತದ ಮಾತ್ರೆ ಸೇವಿಸಿ ಗರ್ಭಿಣಿ ಸಾವು

    ತುಮಕೂರು: ಹೆಣ್ಣು ಮಗು ಜನಿಸುತ್ತದೆ ಎಂಬ ಭಯದಿಂದ ಪತಿಯ ಸಲಹೆಯ ಮೇರೆಗೆ ಗರ್ಭಪಾತದ ಮಾತ್ರೆ ಸೇವಿಸಿ ಗರ್ಭಿಣಿಯೊಬ್ಬರು ಕೊರಟಗೆರೆ ತಾಲೂಕಿನ ಕಾಮರಾಜನಹಳ್ಳಿಯಲ್ಲಿ ಮೃತಪಟ್ಟಿದ್ದಾರೆ.

    ರಾಧಾಮಣಿ(25) ಮೃತಪಟ್ಟ ಗರ್ಭಿಣಿ. ರಾಮಯ್ಯ ಮತ್ತು ರಾಧಾಮಣಿ ದಂಪತಿಗೆ ಈಗಾಗಲೇ 3 ಹೆಣ್ಣು ಮಕ್ಕಳಿದ್ದು, ನಾಲ್ಕನೆಯ ಮಗುವಿಗಾಗಿ 6 ತಿಂಗಳ ಗರ್ಭವತಿಯಾಗಿದ್ದಳು.

    ಜನಿಸಲಿರುವ ನಾಲ್ಕನೇಯ ಮಗುವು ಹೆಣ್ಣಾಗಲಿದೆ ಎನ್ನುವ ಭಯಕ್ಕೆ ಬಿದ್ದು ಗರ್ಭಪಾತದ ಮಾತ್ರೆ ಸೇವಿಸಿದ್ದಳು. ಅತಿಯಾದ ಮಾತ್ರೆಗಳ ಸೇವಿಸಿ ಅನಾರೋಗ್ಯಕ್ಕೀಡಾದ ಪರಿಣಾಮ ಶುಕ್ರವಾರ ರಾಧಾಮಣಿಯನ್ನು ಕೊರಟಗೆರೆಯಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ಮೃತ ಮಗುವನ್ನು ಹೊರ ತೆಗೆಯುವಾಗ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಂದೇ ರಾಧಾಮಣಿ ಸಾವನ್ನಪ್ಪಿದ್ದಳು.

    ಸಂಬಂಧಿಕರ ಆರೋಪ ಏನು?
    ನಗರದ ಖಾಸಗಿ ಆಸ್ಪತ್ರೆಯ ನರ್ಸ್ ಮಂಜುಳಾ ರಾಧಾಮಣಿಗೆ ಗರ್ಭಪಾತದ ಮಾತ್ರೆಗಳನ್ನು ತೆಗದುಕೊಳ್ಳುವಂತೆ ಹೇಳಿದ್ದರು. ಬಳಿಕ ಆಸ್ಪತ್ರೆಯ ನರ್ಸ್ ಗಳು ಗರ್ಭಪಾತ ಮಾಡಿಸಿದ್ದಾರೆ. ರಾಧಾಮಣಿಯ ಹೊಟ್ಟೆಗೆ ಕೈ ಹಾಕಿ ಮೃತಪಟ್ಟ ಮಗುವನ್ನು ನರ್ಸ್ ಮಂಜುಳಾ ಹೊರಗಡೆ ತೆಗೆದಿದ್ದ ಪರಿಣಾಮ ತೀವ್ರ ರಕ್ತಸ್ರಾವವಾಗಿದೆ. ಈ ಸಾವಿಗೆ ಪತಿ ರಾಮಯ್ಯ ಕಾರಣ ಎಂದು ಆರೋಪಿಸಿ ರಾಧಾಮಣಿ ಸಂಬಂಧಿಕರು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

    ಆಕ್ರೋಶಗೊಂಡ ರಾಧಾಮಣಿ ಸಂಬಂಧಿಕರು ಭಾನುವಾರ ನರ್ಸ್ ಮಂಜುಳಾ ಮನೆ ಮುಂದೆ ಪ್ರತಿಭಟನೆ ನಡೆಸಿ ಬಂಧಿಸುವಂತೆ ಆಗ್ರಹಿಸಿದರು.

  • ತುಮಕೂರು: ಲಾರಿ ಬೈಕ್ ನಡುವೆ ಅಪಘಾತ -ಇಬ್ಬರ ಸಾವು, ಹೊತ್ತಿ ಉರಿದ ಲಾರಿ

    ತುಮಕೂರು: ಲಾರಿ ಬೈಕ್ ನಡುವೆ ಅಪಘಾತ -ಇಬ್ಬರ ಸಾವು, ಹೊತ್ತಿ ಉರಿದ ಲಾರಿ

    ತುಮಕೂರು: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹಿಂಡಿಸ್ಕೆರೆ ಬಳಿ ನಡೆದಿದೆ.

    ಮೃತ ಬೈಕ್ ಸವಾರರನ್ನು ಅರುಣ್ (24) ಮತ್ತು ವಿನಯ್ ಪ್ರಸಾದ್ (25) ಎಂದು ಗುರುತಿಸಲಾಗಿದೆ. ಮೃತರು ಬೆಂಗಳೂರು ಮೂಲದವರಾಗಿದ್ದಾರೆ. ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ. ಅಪಘಾತವಾದ ರಭಸಕ್ಕೆ ಬೈಕ್ ಲಾರಿ ಕೆಳಗೆ ನುಗ್ಗಿದೆ. ಪರಿಣಾಮ ಲಾರಿಗೆ ಬೆಂಕಿ ತಗುಲಿದ್ದು, ಲಾರಿ ಭಾಗಶಃ ಸುಟ್ಟು ಕರಕಲಾಗಿದೆ.

    ಘಟನೆ ಬಗ್ಗೆ ಕೆಬಿ ಕ್ರಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.