Tag: tumkuru

  • ತುಮಕೂರು: ಕುರಿ ಕದಿಯಲು ಬಂದ ಕಳ್ಳನಿಗೆ ದೊಣ್ಣೆಯಿಂದ ಬಡಿದು ಕೊಲೆ

    ತುಮಕೂರು: ಕುರಿ ಕದಿಯಲು ಬಂದ ಕಳ್ಳನಿಗೆ ದೊಣ್ಣೆಯಿಂದ ಬಡಿದು ಕೊಲೆ

    ತುಮಕೂರು: ಕುರಿ ಕದಿಯಲು ಬಂದ ಕಳ್ಳನನ್ನು ಕಂಬಕ್ಕೆ ಕಟ್ಟಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದೊಡ್ಡಮಾಲೂರಿನಲ್ಲಿ ನಡೆದಿದೆ.


    ಮೃತ ಕಳ್ಳ ಆಂಧ್ರ ಮೂಲದವನು ಎನ್ನಲಾಗಿದೆ. ರಾತ್ರಿ ಮೂವರು ಕಳ್ಳರು ಸೇರಿ ದೊಡ್ಡಮಾಲೂರಿನ ರಾಮರೆಡ್ಡಿ ಎಂಬವರ ಮನೆಯಲ್ಲಿ ಕುರಿ ಕದಿಯಲು ಬಂದಿದ್ದಾರೆ. ಕಳ್ಳತನಕ್ಕೆ ಯತ್ನಿಸುವಾಗ ಮಾಲೀಕ ರಾಮರೆಡ್ಡಿ ಎಚ್ಚರಗೊಂಡಿದ್ದಾರೆ. ಈ ವೇಳೆ ಮಾಲೀಕ ಕಳ್ಳರನ್ನು ಅಟ್ಟಿಸಿಕೊಂಡು ಹೋಗಿದ್ದಾರೆ. ಆದ್ರೆ ಇಬ್ಬರು ಕಳ್ಳರು ತಪ್ಪಿಸಿಕೊಂಡು ಪರಾರಿಯಾಗಿದ್ದು, ಒಬ್ಬ ಮಾತ್ರ ಸಿಕ್ಕಿಬಿದ್ದಿದ್ದಾನೆ. ಕೈಗೆ ಸಿಕ್ಕ ಕಳ್ಳನನ್ನು ರಾಮರೆಡ್ಡಿ ಹಾಗೂ ಕುಟುಂಬದ ಸದಸ್ಯರು ಕಂಬಕ್ಕೆ ಕಟ್ಟಿ ದೊಣ್ಣೆಯಿಂದ ಮನಬದಂತೆ ಥಳಿಸಿದ್ದಾರೆ. ತೀವ್ರ ಥಳಿತಕ್ಕೊಳಗಾದ ಕಳ್ಳ ಕಟ್ಟಿದ ಕಂಬದಲ್ಲೇ ಸಾವನ್ನಪ್ಪಿದ್ದಾನೆ.

    ಕೊಡಿಗೆನಹಳ್ಳಿ ಪೊಲಿಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ರಾಮರೆಡ್ಡಿ ಸೇರಿದಂತೆ ಕುಟುಂಬ ಸದಸ್ಯರಾದ ಉಮೇಶ್, ನಾಗರಾಜು ಮತ್ತು ಬಾಬು ಎಂಬವರನ್ನು ವಶಕ್ಕೆ ಪಡೆದಿದ್ದಾರೆ.

  • ಬಸ್ ಚಾಲನೆ ಮಾಡ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ, ಸಾವು

    ಬಸ್ ಚಾಲನೆ ಮಾಡ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ, ಸಾವು

    – ಕ್ಲೀನರ್ ಸಮಯಪ್ರಜ್ಞೆಯಿಂದ 30 ಪ್ರಯಾಣಿಕರು ಪಾರು

    ತುಮಕೂರು: ಖಾಸಗಿ ಬಸ್ ಚಾಲಕನಿಗೆ ಬಸ್ ಚಾಲನೆ ಮಾಡುತ್ತಿದ್ದ ವೇಳೆಯೇ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ.

    56 ವರ್ಷದ ನಾಗರಾಜ್ ಬಸ್‍ನಲ್ಲೇ ಸಾವನ್ನಪ್ಪಿದ ಚಾಲಕ. ತುಮಕೂರಿನ ಶಿರಾ ತಾಲೂಕಿನ ಬರಗೂರು ಬಳಿಯ ಲಕ್ಕನಹಳ್ಳಿ ಬಳಿ ಈ ಘಟನೆ ನಡೆದಿದೆ. ಆಂಧ್ರದ ಅಮರಾಪುರದಿಂದ ಶಿರಾ ಮೂಲಕ ತುಮಕೂರಿಗೆ ಬರುತ್ತಿದ್ದ ಬಸ್‍ನಲ್ಲಿ ಚಾಲಕ ನಾಗರಾಜ್‍ಗೆ ಹೃದಯಾಘಾತವಾದ್ದರಿಂದ ಬಸ್ ಹಳ್ಳಕ್ಕೆ ನುಗ್ಗಿದೆ. ಈ ವೇಳೆ ಬಸ್‍ನಲ್ಲಿದ್ದ ಕ್ಲೀನರ್ ಮಾರುತಿ ಓಡಿಬಂದು ಬ್ರೇಕ್ ಹಾಕಿದ್ದರಿಂದ ಭಾರೀ ಅನಾಹುತವಾಗೋದು ತಪ್ಪಿದೆ.

    ಕ್ಲೀನರ್ ಮಾರುತಿ ಸಮಯ ಪ್ರಜ್ಞೆಯಿಂದ ಬಸ್‍ನಲ್ಲಿದ್ದ 30 ಜನ ಪ್ರಯಾಣಿಕರು ಪಾರಾಗಿದ್ದಾರೆ.

  • ಎಚ್‍ಡಿ ಕೋಟೆ,  ಮಧುಗಿರಿಯಲ್ಲಿ ಭಾರೀ ಮಳೆ

    ಎಚ್‍ಡಿ ಕೋಟೆ, ಮಧುಗಿರಿಯಲ್ಲಿ ಭಾರೀ ಮಳೆ

    ಮೈಸೂರು: ಬಿಸಿಲ ಧಗೆಯಿಂದ ಬೆಂದು ಹೋಗಿರೋ ಕರುನಾಡಿಗೆ ಮಳೆರಾಯ ತಂಪೆರೆಯುತ್ತಿದ್ದಾನೆ. ಇವತ್ತು ಮೈಸೂರು ಹಾಗೂ ತುಮಕೂರು ಜಿಲ್ಲೆಯಲ್ಲಿ ಮಳೆರಾಯ ಪ್ರತ್ಯಕ್ಷಗೊಂಡು ತಂಪೆರೆದಿದ್ದಾನೆ.

    ಮೈಸೂರಿನ ಎಚ್.ಡಿ.ಕೋಟೆಯ ಅರಣ್ಯ ಭಾಗ ಸೇರಿದಂತೆ ತಾಲೂಕಿನಾದ್ಯಂತ ಭರ್ಜರಿ ಮಳೆಯಾಗಿದೆ. ಸಂಜೆ 3 ಗಂಟೆಗೆ ಆರಂಭವಾದ ಮಳೆ ಅರ್ಧಗಂಟೆ ಸುರಿದಿದೆ.

    ತುಮಕೂರು ಜಿಲ್ಲೆಯ ಮಧುಗಿರಿಯಲ್ಲೂ ಮಳೆಯಾಗಿದೆ. ಮಧ್ಯಾಹ್ನ 2 ರಿಂದ 3 ಗಂಟೆಯವರೆಗೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಭಾನುವಾರ ರಾಮನಗರದ ಸುತ್ತಮುತ್ತಾ ತುಂತುರು ಮಳೆಯಾಗಿತ್ತು.

    ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಮಲೆನಾಡಿನಲ್ಲಿ ಮೂರು ದಿನಗಳ ಕಾಲ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೂಡ ನೀಡಿತ್ತು. ಮಳೆ ಬಿದ್ದ ಕಾರಣ ಜನ ಈಗ ಸ್ವಲ್ಪ ನಿಟ್ಟುಸಿರು ಬಿಡುತ್ತಿದ್ದಾರೆ.

    ತುಮಕೂರು, ಮಧುಗಿರಿ
    ತುಮಕೂರು, ಮಧುಗಿರಿ
    ತುಮಕೂರು, ಮಧುಗಿರಿ
    ಎಚ್‍ಡಿ ಕೋಟೆ, ಮೈಸೂರು
    ಎಚ್‍ಡಿ ಕೋಟೆ, ಮೈಸೂರು