Tag: Turmeric

  • ಆಯುಧಪೂಜೆ ವೇಳೆ ರಾಸಾಯನಿಕಯುಕ್ತ ಅರಿಶಿಣ, ಕುಂಕುಮ ಬಳಸ್ಬೇಡಿ- ರಾಜಕೀಯ ಸ್ವರೂಪ ಪಡೆದ ಆದೇಶ

    ಆಯುಧಪೂಜೆ ವೇಳೆ ರಾಸಾಯನಿಕಯುಕ್ತ ಅರಿಶಿಣ, ಕುಂಕುಮ ಬಳಸ್ಬೇಡಿ- ರಾಜಕೀಯ ಸ್ವರೂಪ ಪಡೆದ ಆದೇಶ

    ಬೆಂಗಳೂರು: ವಿಧಾನಸೌಧ (Vidhanasoudha), ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಆಯುಧಪೂಜೆ (Ayudha Pooja) ವೇಳೆ ರಾಸಾಯನಿಕಯುಕ್ತ ಅರಿಶಿಣ, ಕುಂಕುಮ ಬಳಸದಂತೆ ಹೊರಡಿಸಿದ ಆದೇಶ ರಾಜಕೀಯ ಸ್ವರೂಪ ಪಡೆದುಕೊಂಡಿದೆ.

    ವಿಪಕ್ಷಗಳು ಇಂದು ಕೂಡ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಈ ಸರ್ಕಾರದಿಂದ ನಾಡಿಗೆ ಯಾವುದೇ ಒಳಿತು ಸಾಧ್ಯವಿಲ್ಲ ಎಂಬುದು ಇವರ ನಿರ್ಧಾರಗಳು ಸಾಬೀತು ಮಾಡ್ತಿವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದ್ದಾರೆ. ಹಿಂದೂಗಳ ಹಬ್ಬಗಳಿಗೆ ಕಂಡೀಷನ್ ಹಾಕೋ ಈ ಸರ್ಕಾರವನ್ನು ನಾವೇಕೆ ಬೀಳಿಸಬಾರದು ಎಂದು ಮಾಜಿ ಮಂತ್ರಿ ಈಶ್ವರಪ್ಪ (KS Eshwarappa) ಪ್ರಶ್ನಿಸಿದ್ದಾರೆ.

    ಇದು ತುಷ್ಟೀಕರಣದ ಒಂದು ಭಾಗ ಎಂದು ಶಾಸಕ ಮಹೇಶ್ ಟೆಂಗಿನಕಾಯಿ (Mahesh Tenginakai) ಕಿಡಿಕಾರಿದ್ದಾರೆ. ವಿಪಕ್ಷಗಳ ಈ ರಾಜಕೀಯಕ್ಕೆ ಸಿಎಂ ತಿರುಗೇಟು ನೀಡಿದ್ದಾರೆ. ಆಯುಧಪೂಜೆ ವೇಳೆ ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ,ಕುಂಕುಮ ಬಳಸಬಾರದು ಎಂಬ ಆದೇಶ ಇದೇ ಮೊದಲಲ್ಲ.. ಪಾರಂಪರಿಕಾ ಕಟ್ಟಡಗಳು ಹಾಳಾಗಬಾರದು ಎಂಬ ಉದ್ದೇಶದಿಂದ ಹಿಂದಿನ ಸರ್ಕಾರಗಳು ಪಾಲಿಸಿಕೊಂಡ ಸಂಪ್ರದಾಯವನ್ನೇ ನಾವು ಪಾಲಿಸ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಡಿ. 4ರಿಂದ 15ರ ವರೆಗೆ ಚಳಿಗಾಲದ ಅಧಿವೇಶನ

    ಅಲ್ಲದೇ 2021 ಮತ್ತು 2022ರಲ್ಲಿ ಬೊಮ್ಮಾಯಿ (Basavaraj Bommai) ಸರ್ಕಾರ ಹೊರಡಿಸಿದ್ದ ಆದೇಶ ಪ್ರತಿಗಳನ್ನು ಟ್ವಿಟ್ಟರ್‍ನಲ್ಲಿ ಹಂಚಿಕೊಂಡು ವಿಪಕ್ಷಗಳಿಗೆ ಟಕ್ಕರ್ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೇವರನ್ನು ಮೆಚ್ಚಿಸಲು ಮಗಳಿಗೆ ಅರಿಶಿಣ- ಕುಂಕುಮ ತಿನ್ನಿಸಿದ ತಂದೆ

    ದೇವರನ್ನು ಮೆಚ್ಚಿಸಲು ಮಗಳಿಗೆ ಅರಿಶಿಣ- ಕುಂಕುಮ ತಿನ್ನಿಸಿದ ತಂದೆ

    ಅಮರಾವತಿ: ದೇವರನ್ನು ಮೆಚ್ಚಿಸಲು ತಂದೆಯೊಬ್ಬ ತನ್ನ ನಾಲ್ಕು ವರ್ಷದ ಮಗಳಿಗೆ ಕುಂಕುಮ ಹಾಗೂ ಅರಿಶಿಣವನ್ನು ತಿನ್ನಿಸಲು ಯತ್ನಿಸಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

    ಆಂಧ್ರಪ್ರದೇಶದ ಆತ್ಮಕೂರು ಪುರಸಭಾ ವ್ಯಾಪ್ತಿಯ ಪೆರಾರೆಡ್ಡಿಪಲ್ಲಿ ಗ್ರಾಮದಲ್ಲಿ ಮೌಢ್ಯ ಆಚರಿಸಲಾಗಿದೆ. ಕಂಡ್ರಾ ವೇಣುಗೋಪಾಲ್ ಬಂಧಿತ ಆರೋಪಿ. ವೇಣುಗೋಪಾಲ್ ದೇವರನ್ನು ಮೆಚ್ಚಿಸಲು ಕುಂಕುಮ ಹಾಗೂ ಅರಿಶಿಣವನ್ನು ತೆಗೆದುಕೊಂಡು ಮನೆಯ ತುಂಬೆಲ್ಲಾ ಹಾಕಿದ್ದಾನೆ. ನಂತರ ಅಲ್ಲಿಯೇ ಇದ್ದ ತನ್ನ ನಾಲ್ಕು ವರ್ಷದ ಮಗಳಿಗೆ ಕುಂಕುಮಾ ಹಾಗೂ ಅರಿಶಿಣವನ್ನು ತಿನ್ನಲು ಹೇಳಿದ್ದಾನೆ. ಅವಳು ನಿರಾಕರಿಸಿದಾಗ ಬಲವಂತವಾಗಿ ಅರಿಶಿಣ ಹಾಗೂ ಕುಂಕುಮವನ್ನು ಅವಳ ಬಾಯಿಗೆ ಹಾಕಿದ್ದಾನೆ. ಇದರಿಂದಾಗಿ ಆಕೆ ಕಿರುಚುತ್ತಾ ಅಲ್ಲೇ ಕುಸಿದು ಬಿದ್ದಿದ್ದಾಳೆ.

    ಇದನ್ನು ಕೇಳಿದ ಸ್ಥಳೀಯರು ಘಟನಾ ಸ್ಥಳಕ್ಕೆ ಆಗಮಿಸಿ, ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಬಾಲಕಿಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ವೇಣುಗೋಪಾಲ್‌ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಪ್ರವಾದಿ ಕುರಿತ ಬಿಜೆಪಿ ನಾಯಕರ ಹೇಳಿಕೆ ಖಂಡಿಸಿದ ಅಮೆರಿಕ

    ಘಟನೆ ಸಂಬಂಧ ಕಳೆದ ಮೂರು ದಿನಗಳಿಂದ ವೇಣುಗೋಪಾಲ್ ತಮ್ಮ ನಿವಾಸದಲ್ಲಿ ವಿಚಿತ್ರ ಆಚರಣೆಗಳಲ್ಲಿ ತೊಡಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಆತ್ಮಕೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಎಸಿಬಿ ಶಾಕ್- ಬೆಂಗಳೂರು ಸೇರಿ 21 ಕಡೆ ದಾಳಿ

    Live Tv

  • ಅದ್ದೂರಿಯಾಗಿ ನಡೆಯುತ್ತಿದೆ ಮೌನಿ ರಾಯ್ ಅರಿಶಿನ ಶಾಸ್ತ್ರ

    ಅದ್ದೂರಿಯಾಗಿ ನಡೆಯುತ್ತಿದೆ ಮೌನಿ ರಾಯ್ ಅರಿಶಿನ ಶಾಸ್ತ್ರ

    ಮುಂಬೈ: ಬಾಲಿವುಡ್ ಕಿರುತೆರೆಯಲ್ಲಿ ನಾಗಿಣಿ ಎಂದೇ ಖ್ಯಾತಿವೊಂದಿರುವ ಮೌನಿ ರಾಯ್ ಅರಿಶಿನ ಶಾಸ್ತ್ರ ಅದ್ದೂರಿಯಾಗಿ ನಡೆಯುತ್ತಿದೆ.

    ಮೌನಿ, ಉದ್ಯಮಿ ಸೂರಜ್ ನಂಬಿಯಾರ್ ಅವರೊಂದಿಗಿನ ಸಪ್ತಪದಿ ತುಳಿಯಲು ರೆಡಿಯಾಗಿದ್ದು, ಇಂದು ಮೌನಿ ಅದ್ದೂರಿಯಾಗಿ ಹಲ್ದಿ ಮತ್ತು ಮೆಹಂದಿ ಶಾಸ್ತ್ರ ಮಾಡಿಕೊಂಡಿದ್ದಾರೆ. ಈ ಸಮಾರಂಭದ ಅಮೂಲ್ಯ ಕ್ಷಣಗಳನ್ನು ನಾಗಿಣಿ ಧಾರವಾಹಿಯ ಸಹನಟ ಅರ್ಜುನ್ ಬಿಜ್ಲಾನಿ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಗೋವಾದಲ್ಲಿ ಮೌನಿರಾಯ್ ಬ್ಯಾಚುಲರ್ ಪಾರ್ಟಿ

    ಹಲ್ದಿ ಮತ್ತು ಮೆಹಂದಿ ಶಾಸ್ತ್ರದ ಫೋಟೋಗಳನ್ನು ಜಿಯಾ ಮುಸ್ತಫಾ ಮತ್ತು ಓಂಕಾರ್ ಕಪೂರ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಇದೇ ಜನವರಿ 27 ರಂದು ಮೌನಿ ರಾಯ್ ಮತ್ತು ಸೂರಜ್ ನಂಬಿಯಾರ್ ಗೋವಾದಲ್ಲಿ ವಿವಾಹವಾಗಲಿದ್ದಾರೆ.

    ಇತ್ತೀಚೆಗೆ ಮೌನಿ ಗೋವಾದಲ್ಲಿ ಬ್ಯಾಚುಲರ್ ಪಾರ್ಟಿ ಮಾಡಿದ್ದು, ವೀಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ವೀಡಿಯೋದಲ್ಲಿ ಮೌನಿ ತನ್ನ ಸ್ನೇಹಿತರ ಜೊತೆ ಎಂಜಾಯ್ ಮಾಡಿದ್ದಾರೆ. ಅದ್ಭುತವಾದ ಡ್ಯಾನ್ಸರ್ ಆಗಿರುವ ಮೌನಿ ಹಿಂದಿ ಕಿರುತೆರೆಯಲ್ಲಿ ಫುಲ್ ಫೇಮಸ್ ಆಗಿದ್ದು, ದೇವೊನ್ ಕೆ ದೇವ್ ಮಹಾದೇವ್, ಕಸ್ತೂರಿ, ಮತ್ತು ನಾಗಿನ್ ಸೀರಿಯಲ್ ಮೂಲಕ ಖ್ಯಾತಿಯನ್ನು ಪಡೆದುಕೊಂಡಿದ್ದರು. ಅದು ಅಲ್ಲದೇ ಅವರು ರಿಯಾಲಿಟಿ ಶೋ ಗಳಲ್ಲಿಯೂ ಭಾಗವಹಿಸಿದ್ದರು. ಇದನ್ನೂ ಓದಿ: ದೈಹಿಕ ಅನ್ಯೋನ್ಯತೆ ಸಂಬಂಧದ ಪ್ರಮುಖ ಭಾಗವಲ್ಲ: ದೀಪಿಕಾ ಪಡುಕೋಣೆ

    ಸಿನಿಮಾದಲ್ಲಿಯೂ ನಟಿಸಿರುವ ಇವರು, 2018ರ ಕ್ರೀಡೆಗೆ ಸಂಬಂಧಿಸಿದ ಸಿನಿಮಾ ‘ಗೋಲ್ಡ್’ ನಲ್ಲಿ ಅಕ್ಷಯ್ ಕುಮಾರ್ ಗೆ ಜೋಡಿಯಾಗಿ ನಟಿಸಿದ್ದಾರೆ. ‘ಮೇಡ್ ಇನ್ ಚೈನಾ’ ಸಿನಿಮಾದಲ್ಲಿ ರಾಜಕುಮಾರ್ ರಾವ್ ಜೊತೆ ನಟಿಸಿದ್ದಾರೆ. ಪ್ರಸ್ತುತ ಮೌನಿ ರಣಬೀರ್ ಕಪೂರ್, ಆಲಿಯಾ ಭಟ್ ಮತ್ತು ಅಮಿತಾಬ್ ಬಚ್ಚನ್ ಜೊತೆ ನಟಿಸಿರುವ ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ನಟಿಸಿದ್ದು, ಅದರ ಬಿಡುಗಡೆಗಾಗಿ ಕಾಯುತ್ತಿದ್ದಾರೆ.

  • ಮಕ್ಕಳಿಂದ ಪರಿಸರ ಸ್ನೇಹಿ ಅರಿಶಿಣ ಗಣೇಶ ಮೂರ್ತಿ ತಯಾರಿಕೆ

    ಮಕ್ಕಳಿಂದ ಪರಿಸರ ಸ್ನೇಹಿ ಅರಿಶಿಣ ಗಣೇಶ ಮೂರ್ತಿ ತಯಾರಿಕೆ

    ಮಡಿಕೇರಿ: ಕೊಡಗಿನಲ್ಲಿ ಮಕ್ಕಳಿಂದ ತಯಾರಾಗುತ್ತೀರುವ ಪರಿಸರ ಸ್ನೇಹಿ ಅರಿಶಿಣ ಗಣೇಶ ಮೂರ್ತಿ ತಯಾರಿಕೆಗೆ ಉತ್ತಮ ಸ್ಪಂದನೆ ಸಿಗುತ್ತಿದೆ.

    ಕೊಡಗು ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ಶಾಲಾ-ಕಾಲೇಜಿನ ಇಕೋ ಕ್ಲಬ್/ಎನ್.ಎಸ್.ಎಸ್.ಘಟಕಗಳ ಮೂಲಕ ಮಕ್ಕಳು & ಸಮುದಾಯದಲ್ಲಿ ಬಣ್ಣ & ಪಿ.ಓ.ಪಿ.ರಹಿತ ಪರಿಸರ ಸ್ನೇಹಿ ಅರಿಶಿಣ ಗಣೇಶ ಮೂರ್ತಿ ತಯಾರಿಕೆಯ ಪರಿಸರ ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ. ಇದನ್ನೂ ಓದಿ:  ನಟಿ ಲೀಲಾವತಿ ಮನೆಗೆ ಭೇಟಿ ಕೊಟ್ಟ ನಟಿಯರು

    ಕೊಡಗಿನಲ್ಲಿ ಈ ಅಭಿಯಾನಕ್ಕೆ ವ್ಯಾಪಕ ಬೆಂಬಲ ದೊರೆತಿದೆ. ಕೊಡಗಿನಲ್ಲಿ ಶಾಲೆಗಳು ಆರಂಭವಾಗಿದ್ದು, ಶಿಕ್ಷಕರು ಸಾಮಾಜಿಕ ಜಾಲತಾಣ ವಾಟ್ಸಪ್ ಮೂಲಕ ಕಳುಹಿಸುತ್ತಿದ್ದಾರೆ. ಈ ಮಾಹಿತಿ ವೀಡಿಯೋ ನೋಡಿ ಮಕ್ಕಳು ತಮ್ಮ ಮನೆಯಲ್ಲೇ ಪೋಷಕರ ಜೊತೆಗೆ ಪರಿಸರ ಸ್ನೇಹಿ ಅರಿಶಿಣ ಗಣೇಶ ಮೂರ್ತಿಯನ್ನು ಉತ್ತಮವಾಗಿ ತಯಾರಿಸುತ್ತಿದ್ದಾರೆ. ಆಶಾದಾಯಕ ಬೆಳವಣಿಗೆಯಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಜಾಗೃತಿ ಆಂದೋಲನಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಈ ವಿಚಾರ ಸಂತಸ ತಂದಿದೆ ಎಂದು ಪರಿಸರ ಜಾಗೃತಿ ಆಂದೋಲನ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಟಿ.ಜಿ.ಪ್ರೇಮಕುಮಾರ್ ತಿಳಿಸಿದ್ದಾರೆ.

  • ವೀಡಿಯೋ: ಪೇಂಟ್ ರೋಲರ್‌ನಲ್ಲಿ ವಧುವಿಗೆ ಅರಿಶಿಣ ಶಾಸ್ತ್ರ ನೆರವೇರಿಸಿದ ಮಹಿಳೆ!

    ವೀಡಿಯೋ: ಪೇಂಟ್ ರೋಲರ್‌ನಲ್ಲಿ ವಧುವಿಗೆ ಅರಿಶಿಣ ಶಾಸ್ತ್ರ ನೆರವೇರಿಸಿದ ಮಹಿಳೆ!

    – ಮಹಿಳೆಯ ಐಡಿಯಾಕ್ಕೆ ಭರ್ಜರಿ ಕಮೆಂಟ್

    ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ವಕ್ಕರಿಸಿದ ಬಳಿಕ ಸಾಕಷ್ಟು ಅವಾಂತರಗಳು ನಡೆದಿದೆ. ಈ ಸಾಂಕ್ರಾಮಿಕ ರೋಗದಿಂದ ದೂರ ಇರಲು ಕೆಲವೊಂದು ನಿಯಮಗಳನ್ನು ತಾವೇ ರೂಪಿಸಿಕೊಳ್ಳುವ ಮೂಲಕ ಜೀವನ ಮುಂದುವರಿಸಲು ಹಲವು ದಾರಿಗಳನ್ನು ಕಂಡುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅನೇಕ ಮದುವೆಗಳು ರದ್ದಾದರೆ, ಇನ್ನೂ ಕೆಲವೊಂದು ಮದುವೆಗಳು ಅತ್ಯಂತ ಸರಳವಾಗಿ ನಡೆಯುತ್ತಿವೆ. ಈ ಮಧ್ಯೆ ಅರಿಶಿಣ ಶಾಸ್ತ್ರದಲ್ಲಿ ಮಹಿಳೆಯೊಬ್ಬರು ಕಂಡುಕೊಂಡ ಐಡಿಯಾ ಇದೀಗ ಭಾರೀ ಸುದ್ದಿಯಾಗಿದೆ.

    ಹೌದು. ಮಹಿಳೆಯೊಬ್ಬರು ವಧುವಿಗೆ ಪೇಂಟ್ ರೋಲರ್ ಮೂಲಕ ಅರಿಶಿಣ ಶಾಸ್ತ್ರ ನೆರವೇರಿಸಿದ್ದಾರೆ. ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

    ಹರ್ಜಿಂದರ್ ಸಿಂಗ್ ಕುಕ್ರೇಜಾ ಎಂಬವರು ತನ್ನ ಟ್ವಿಟ್ಟರ್ ಖಾತೆಯಲ್ಲಿ ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಾಮಾಜಿಕ ಅಂತರದಿಂದ ಹುಟ್ಟಿಕೊಂಡ ಹೊಸ ವಿಧಾನ! ಈ ಶಾಸ್ತ್ರ ಭಾರತದಲ್ಲಿ ವಿವಾಹದ ಪೂರ್ವದಲ್ಲಿ ನಡೆಯುತ್ತದೆ. ದಾಂಪತ್ಯ ಜೀವನಕ್ಕೆ ಕಾಲಿಡುವ ದಿನದಂದು ಬೆಳಗ್ಗೆ ವಿವಾಹಿತ ಮಹಿಳೆಯರು ಅರಿಶಿಣ, ಎಣ್ಣೆ ಹಾಗೂ ನೀರು ಮಿಕ್ಸ್ ಮಾಡಿ ವಧು-ವರನಿಗೆ ಹಚ್ಚುತ್ತಾರೆ. ಈ ರೀತಿ ಮಾಡಿದರೆ ಮದುವೆಗೆ ಮೊದಲು ಜೋಡಿಗೆ ಆಶೀರ್ವಾದ ಸಿಕ್ಕಂತಾಗುತ್ತದೆ ಎಂಬ ನಂಬಿಕೆಯಿದೆ.

    ಲೂಧಿಯಾನದಲ್ಲಿ ನಡೆದ ಅರಿಶಿಣ ಶಾಸ್ತ್ರದ 13 ಸೆಕೆಂಡಿನ ಈ ವೀಡಿಯೋದಲ್ಲಿ, ಸಂಬಂಧಿಕರೊಬ್ಬರು ವಧುವಿಗೆ ಅರಿಶಿಣ ಹಚ್ಚಲು ಪೇಂಟ್ ರೋಲರ್ ಬಳಸಿರುವುದುನ್ನು ಕಾಣಬಹುದು. ಸಾಮಾಜಿಕ ಅಂತರ ಕಾಯ್ದುಕೊಂಡು ವಧುವಿಗೆ ಅರಿಶಿಣ ಹಚ್ಚಿರುವುದನ್ನು ನೋಡಿ ಸಮಾರಂಭದಲ್ಲಿ ನೆರೆದಿದ್ದವರು ಜೋರಾಗಿ ನಕ್ಕಿದ್ದಾರೆ. ಈ ಮೂಲಕ ಕಾರ್ಯಕ್ರಮದಲ್ಲಿ ಮೋಜು ಮಾಡಿದ್ದನ್ನು ನಾವು ವೀಡಿಯೋದಲ್ಲಿ ಕಾಣಬಹುದಾಗಿದೆ.

    ಇದುವರೆಗೂ ಈ ವೀಡಿಯೋ 6 ಸಾವಿರಕ್ಕೂ ಅಧಿಕ ಬಾರಿ ವೀಕ್ಷಣೆಯಾಗಿದೆ. ಸಾವಿರಾರು ಕಮೆಂಟ್ ಗಳು ಕೂಡ ಬಂದಿವೆ. ಒಬ್ಬರು ಈ ವೀಡಿಯೋ ನೋಡಿದರೆ ನಗು ಬರುತ್ತದೆ ಎಂದು ಕಮೆಂಟ್ ಮಾಡಿದರೆ, ಇನ್ನೊಬ್ಬರು ಹಳದಿ ಪೇಂಟ್‍ಗಾಗಿ ಒಳ್ಳೆಯ ಉಪಾಯ ಕಂಡುಕೊಂಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

    https://twitter.com/jass_kukreja/status/1310673800640499715

  • ಬಿಸಿ ನೀರಿಗೆ ಉಪ್ಪು, ಅರಿಶಿಣ ಹಾಕಿ ಬಾಯಿ ಮುಕ್ಕಳಿಸಿ ಕೊರೊನಾ ಕಡಿಮೆ ಆಗುತ್ತೆ: ಶ್ರೀರಾಮುಲು

    ಬಿಸಿ ನೀರಿಗೆ ಉಪ್ಪು, ಅರಿಶಿಣ ಹಾಕಿ ಬಾಯಿ ಮುಕ್ಕಳಿಸಿ ಕೊರೊನಾ ಕಡಿಮೆ ಆಗುತ್ತೆ: ಶ್ರೀರಾಮುಲು

    -ಚೀನಾದಲ್ಲೂ ಸಾಕಷ್ಟು ಮಂದಿ ಇದನ್ನೇ ಅನುಸರಿಸಿ ಗುಣವಾಗಿದ್ದಾರೆ

    ಬಳ್ಳಾರಿ: ಈ ಹಿಂದೆ ಸೂರ್ಯನ ಕಿರಣ ಎಲ್ಲಿ ಹೆಚ್ಚು ಇರುತ್ತೋ ಅಲ್ಲಿ ಹೆಚ್ಚು ಜನ ಕೊರೊನಾ ಸೋಂಕಿನಿಂದ ಗುಣಮುಖರಾಗ್ತಾರೆ ಎಂದಿದ್ದ ಆರೋಗ್ಯ ಸಚಿವ ಶ್ರೀರಾಮುಲು ಅವರು ಇಂದು ಬಿಸಿ ನೀರಿಗೆ ಉಪ್ಪು, ಅರಿಶಿಣ ಹಾಕಿ ಬಾಯಿ ಮುಕ್ಕಳಿಸಿ ಕೊರೊನಾ ಕಡಿಮೆ ಆಗುತ್ತ ಎಂದು ಟಿಪ್ಸ್ ಕೊಟ್ಟಿದ್ದಾರೆ.

    ಇಂದು ಬಳ್ಳಾರಿಯಲ್ಲಿ ಮಾಧ್ಯಮಗಳ ಜೊತೆ ಮಾಡನಾಡಿದ ಸಚಿವರು, ಕೊರೊನಾ ಸೋಂಕಿನಿಂದ ಗುಣಮುಖರಾಗಲು ಬಿಸಿ ನೀರಿಗೆ ಉಪ್ಪು, ಅರಿಶಿಣ ಹಾಕಿ ಬಾಯಿ ಮುಕ್ಕಳಿಸಿ. ತಣ್ಣೀರಿನ ಬದಲು ಬಿಸಿ ನೀರನ್ನು ಕುಡಿಯುವುದನ್ನು ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಕೊರೊನಾ ಕಡಿಮೆ ಆಗುತ್ತದೆ. ಚೀನಾದಲ್ಲೂ ಇದೇ ರೀತಿ ಜನರು ಮಾಡಿ ಗುಣಮುಖರಾಗಿದ್ದಾರೆ. ನಾನು ವೈದ್ಯನಲ್ಲ ಆದರೆ ಯಾವುದೋ ಆರ್ಟಿಕಲ್‍ನಲ್ಲಿ ಈ ಬಗ್ಗೆ ಓದಿದ್ದೆ ಎಂದು ಸಲಹೆ ನೀಡಿದ್ದಾರೆ.

    ಈ ಹಿಂದೆ ಹಾವೇರಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀರಾಮುಲು ಅವರು, ಎಲ್ಲೆಲ್ಲಿ ಸೂರ್ಯನ ಕಿರಣ ಹೆಚ್ಚು ಬೀಳುತ್ತಿವೆಯೋ ಅಲ್ಲಿ ಕೊರೊನಾ ಸೋಂಕಿನಿಂದ ಬಳಲುತ್ತಿರುವವರು ಹೆಚ್ಚು ಗುಣಮುಖರಾಗುತ್ತಿದ್ದಾರೆ ಎಂದು ಹೇಳಿದ್ದರು.

    ಸಾಮಾಜಿಕ ಅಂತರ ಕಾಯ್ದುಕೊಳ್ಳದ ಸಚಿವರು:
    ಇಂದು ಬಳ್ಳಾರಿಯ ರೂಪನಗುಡಿ ರಸ್ತೆಯಲ್ಲಿ ಆಹಾರದ ಕಿಟ್ ವಿತರಣೆ ವೇಳೆಯಲ್ಲಿ ಸಾಮಾಜಿಕ ಅಂತರವನ್ನು ಆರೋಗ್ಯ ಸಚಿವರೇ ಮರೆತಿದ್ದರು. ಶ್ರೀರಾಮುಲು ಹಾಗೂ ಸೋಮಶೇಖರ್ ರೆಡ್ಡಿ ಅವರು ದಾನಿಗಳು ನೀಡಿದ್ದ ಆಹಾರದ ಕಿಟ್ ವಿತರಣೆಗೆ ಬಂದಿದ್ದ ವೇಳೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಕಿಟ್ ಹಂಚಿದ್ದಾರೆ. ಇತ್ತ ಸಚಿವರ ಹಿಂಬಾಲಕರಿಂದಲೂ ಸಾಮಾಜಿಕ ಅಂತರ ನಿಯಮ ಉಲ್ಲಂಘನೆ ಮಾಡಲಾಗಿದೆ.

  • ಸೌಂದರ್ಯಕ್ಕಾಗಿ ಮಾತ್ರವಲ್ಲ ಆರೋಗ್ಯವರ್ಧನೆಗಾಗಿ ಅರಿಶಿನ ಉಪಯುಕ್ತ

    ಸೌಂದರ್ಯಕ್ಕಾಗಿ ಮಾತ್ರವಲ್ಲ ಆರೋಗ್ಯವರ್ಧನೆಗಾಗಿ ಅರಿಶಿನ ಉಪಯುಕ್ತ

    ಇಂದಿನ ಫ್ಯಾಷನ್ ಯುಗದಲ್ಲಿ ಮಹಿಳೆಯರು ಹೆಚ್ಚಾಗಿ ಸೌಂದರ್ಯದ ಕಾಳಜಿಗಾಗಿ ತಲೆಕೆಡಿಸಿಕೊಳ್ಳುತ್ತಾರೆ. ಇಂದು ತರಾವರಿ ಸೌಂದರ್ಯ ವರ್ಧಕಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದರೂ ಅವುಗಳು ನೈಸರ್ಗಿಕ ಸೌಂದರ್ಯವರ್ಧಕದ ರಾಣಿಯೆಂದೇ ಕರೆಯುವ ‘ಅರಿಶಿನ’ದ ಜೊತೆ ಸ್ಪರ್ಧಿಸಲು ಸಾಧ್ಯವಾಗಿಲ್ಲ. ಚಲನಚಿತ್ರ ನಟಿಯರೂ ಸೇರಿದಂತೆ ಫ್ಯಾಷನ್ ಪ್ರಿಯ ಮಹಿಳೆಯರು ತಮ್ಮ ತ್ವಚೆಯನ್ನು ಕಾಪಾಡಿಕೊಳ್ಳಲು ಮತ್ತು ದೈಹಿಕ ಅರೋಗ್ಯವನ್ನು ಹೆಚ್ಚಿಸಿಕೊಳ್ಳಲು ಅರಿಶಿನ ಉತ್ಪನ್ನವನ್ನು ಬಳಕೆ ಮಾಡುತ್ತಾರೆ.

    ಅರಿಶಿನ ಕೇವಲ ತ್ವಚೆಯನ್ನು ಪೋಷಿಸುವುದಲ್ಲದೇ ಕಣ್ಣುಗಳ ಆರೋಗ್ಯದಲ್ಲಿಯೂ ಮಹತ್ವದ ಪಾತ್ರ ವಹಿಸುತ್ತದೆ. ಕಣ್ಣಿನಲ್ಲಿ ಧೂಳು ಸೇರಿಕೊಂಡು ಕಣ್ಣು ಉರಿ ಮತ್ತು ಕಣ್ಣು ಕೆಂಪಗಾಗಿದ್ದರೆ, ಒಂದು ಲೋಟ ನೀರಿಗೆ ಚಿಟಿಕೆ ಅರಿಶಿನ ಬೆರೆಸಿ 10 ನಿಮಿಷ ಪಕ್ಕಕ್ಕಿಡಿ. ಅರಿಶಿನ ಲೋಟದ ತಳಭಾಗದಲ್ಲಿ ಉಳಿದುಕೊಂಡು ನೀರು ತಿಳಿಯಾಗುತ್ತದೆ. ಈ ತಿಳಿನೀರನ್ನು ಕಣ್ಣಿಗೆ 2 ಹನಿ ಹಾಕುವುದರಿಂದ ಅಥವಾ ಈ ನೀರಿನಿಂದ ಕಣ್ಣುಗಳನ್ನೂ ತೊಳೆದುಕೊಳ್ಳುವುದರಿಂದ ಕಣ್ಣು ಉರಿ ಮತ್ತು ಕೆಂಪಗಾಗುವುದು ಕಡಿಮೆಯಾಗುತ್ತದೆ.

    ಅರಿಶಿನದಲ್ಲಿರುವ ಆರೋಗ್ಯವರ್ಧಕ ಅಂಶಗಳೇನು?
    1. ಅರಿಶಿನವು ಉರಿಯೂತ ಮತ್ತು ಬ್ಯಾಕ್ಟೀರಿಯಾ ನಿರೋಧಕ ಲಕ್ಷಣವನ್ನು ಹೊಂದಿದೆ.
    2. ಅರಿಶಿನವು ಆಂಟಿಸೆಪ್ಟಿಕ್ ಆಗಿರುವುದರಿಂದ ಗಾಯಗಳನ್ನು ಅತೀ ಬೇಗ ವಾಸಿಮಾಡುತ್ತದೆ.
    3. ಅರಶಿನ ಎಲ್ಲಾ ಕಾಲದಲ್ಲಿಯೂ ಎಲ್ಲಾ ತರಹದ ಚರ್ಮಕ್ಕೂ ಹೊಂದಿಕೆಯಾಗಿ ತ್ವಚೆಯನ್ನು ರಕ್ಷಿಸುವ ಅಂಶವನ್ನು ಹೊಂದಿದೆ.
    4. ಮುಖದಲ್ಲಿನ ಮೊಡವೆ ಮತ್ತು ಇತರೆ ಚರ್ಮ ಸಮಸ್ಯೆಗಳಿಗೂ ರಾಮಬಾಣ.


    5. ಮಹಿಳೆಯರಿಗೆ ಫೇಸ್‍ಪ್ಯಾಕ್ ಮತ್ತು ಬಾಡಿ ಸ್ಕ್ರಬರ್ ಗಳಲ್ಲಿ ಮುಖ್ಯ ಪದಾರ್ಥವಾಗಿದೆ.
    6. ಅರಿಶಿನದೊಂದಿಗೆ ಹಾಲಿನ ಕೆನೆ ಬೆರೆಸಿ ಮುಖಕ್ಕೆ ಹಚ್ಚುವುದರಿಂದ ಮುಖದ ಮೇಲಿನ ಗುಳ್ಳೆ ನಿವಾರಣೆಯಾಗಿ ಮುಖಕ್ಕೆ ಹೊಳಪು ತಂದುಕೊಂಡುತ್ತದೆ.
    7. ಹಾಲಿನೊಂದಿಗೆ ಅರಿಶಿನ ಪುಡಿ ಬೆರೆಸಿ ಕುಡಿಯುವುದರಿಂದ ಕೆಮ್ಮು, ಕಫ ನಿವಾರಣೆಯಾಗುತ್ತದೆ.
    8. ಅರಿಶಿನ ಪುಡಿಯೊಂದಿಗೆ, ಬೇವಿನ ಎಲೆಯನ್ನು ಅರೆದು ಚರ್ಮಕ್ಕೆ ಹಚ್ಚುವುದರಿಂದ ಫಂಗಸ್ ಸೊಂಕು ನಿವಾರಣೆಯಾಗುತ್ತದೆ.
    9. ಅರಿಶಿನ ಪುಡಿ ಹಾಗೂ ನೆಲ್ಲಿ ಕಾಯಿ ಪುಡಿಯನ್ನು ಸಮ ಪ್ರಮಾಣದಲ್ಲಿ ಬೆರೆಸಿ ಸೇವಿಸುವುದರಿಂದ ಮಧುಮೇಹ ಹತೋಟಿಗೆ ಬರುತ್ತದೆ.
    10. ಅರಿಶಿನ ಕಷಾಯವನ್ನು ಗಾಯಗಳನ್ನು ತೊಳೆಯಲು, ಬಿದ್ದಗಾಯದ ರಕ್ತ ತಡೆಗಟ್ಟಲು ಬಳಸಬಹುದು.
    11. ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಅರಿಶಿನ ಬೆರೆಸಿದ ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಕಿಬ್ಬೊಟ್ಟೆ ನೋವನ್ನು ಶಮನಗೊಳಿಸುತ್ತದೆ.

    ಹೀಗೆ ಹಲವಾರು ವೈದ್ಯಕೀಯ ಗುಣಗಳನ್ನು ಒಳಗೊಂಡಿರುವ ಅರಿಶಿನ ದಿನನಿತ್ಯ ಬಳಕೆಯ ಪ್ರಮುಖ ಪದಾರ್ಥ. ದೇವರ ಪೂಜೆಯಿಂದ ಹಿಡಿದು ಶುಭ ಕಾರ್ಯಗಳು, ಅಡುಗೆ ಮತ್ತು ಸೌಂದರ್ಯದವರೆಗೂ ಅರಿಶಿನ ಬಳಕೆ ಮಾಡದೇ ಇರುವವರೂ ಯಾರು ಇಲ್ಲ. ಬಹಳ ಹಿಂದಿನ ಕಾಲದಿಂದಲೂ ಅರಿಶಿನಕ್ಕೆ ಪ್ರಾಮುಖ್ಯತೆ ಹೆಚ್ಚಿದ್ದು, ‘ಆರೋಗ್ಯಕ್ಕೆ ಅರಿಶಿನ ಮದ್ದು’ ಎಂಬ ಶಿಫಾರಸ್ಸುಗಳು ಇಂದಿನ ಕಾಲದವರೆಗೂ ಉಪಯೋಗದಲ್ಲಿದೆ. ಎಲ್ಲಾದರೂ ಬಿದ್ದು ಗಾಯ ಮಾಡಿಕೊಂಡು ಬಂದ ಮಗುವಿಗೆ ಅಮ್ಮ ಮೊದಲು ಅರಿಶಿನ ಹಚ್ಚು ಎನ್ನುತ್ತಾಳೆ. ಅಂತಹ ಪುಟ್ಟ ಗಾಯಗಳಿಂದ ದೊಡ್ಡ ಕ್ಯಾನ್ಸರ್ ಕಾಯಿಲೆಗಳನ್ನು ನಿವಾರಿಸುವಲ್ಲಿ ಅರಿಶಿನ ಪರಿಣಾಮಕಾರಿ ಮದ್ದು. ದಿನನಿತ್ಯದ ಆಹಾರದಲ್ಲಿಯೂ ಅರಿಶಿನ ಬಳಸುತ್ತಾ ಬಂದರೆ ನಮ್ಮ ಜ್ಞಾಪಕ ಶಕ್ತಿಕೂಡ ಹೆಚ್ಚಾಗುತ್ತದೆ.

    ಆಯುರ್ವೇದದಲ್ಲಿ ಅರಿಶಿನವು ರಕ್ತ ಶುದ್ಧೀಕರಣದಲ್ಲಿ ಮುಖ್ಯವಾದುದು ಎಂದು ಹೇಳಲಾಗುತ್ತದೆ. ಅರಿಶಿನ ಬಳಕೆಯು ರಕ್ತವನ್ನು ಶುದ್ಧೀಕರಿಸುತ್ತದೆ. ಇದನ್ನು ತಿನ್ನುವ ಮೂಲಕ, ರಕ್ತದಲ್ಲಿ ಕಂಡುಬರುವ ವಿಷಕಾರಿ ವಸ್ತುಗಳು ಹೊರಬರುತ್ತವೆ ಮತ್ತು ರಕ್ತ ಪರಿಚಲನೆ ಸುಗಮವಾಗುತ್ತದೆ. ಹೃದಯದಲ್ಲಿ ರಕ್ತದ ಹರಿವು ಹೆಚ್ಚಾಗುವುದರಿಂದ ವ್ಯಕ್ತಿಗೆ ಹೃದಯದ ತೊಂದರೆಗಳು ಕಂಡು ಬರುವುದಿಲ್ಲ.

  • ಮುಖಕ್ಕೆ ಅರಿಶಿಣ ಸ್ಕ್ರಬ್ ಮಾಡಿದರೆ ಆಗುವ ಉಪಯೋಗ

    ಮುಖಕ್ಕೆ ಅರಿಶಿಣ ಸ್ಕ್ರಬ್ ಮಾಡಿದರೆ ಆಗುವ ಉಪಯೋಗ

    ಮುಖಕ್ಕೆ ಅರಿಶಿಣದ ಸ್ಕ್ರಬ್ ಮಾಡಿಕೊಳ್ಳುವುದರಿಂದ ನಿಮ್ಮನ್ನು ಸುಂದರವಾಗಿ ಕಾಣಿಸಲು ಸಹಾಯ ಮಾಡುತ್ತದೆ. ಅರಿಶಿಣದಲ್ಲಿ ಆಂಟಿಕ್ಸೆಸಿಂಡಸ್, ಆಂಟಿ ಮೈಕ್ರೊಬಿಬಲ್ ಹಾಗೂ ಆಂಟಿ ಇಂಫ್ಲೆಮೆಂಟರಿ ಅಂಶವಿರುತ್ತದೆ. ಇದು ನಿಮ್ಮ ತ್ವಚೆಯ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ.

    ಅರಿಶಿಣ ಉಪಯೋಗಿಸುವುದರಿಂದ ನಿಮ್ಮ ತ್ವಚೆಯನ್ನು ಹೊಳೆಯುವಂತೆ ಮಾಡುವುದಲ್ಲದೇ ಇನ್‍ಫೆಕ್ಷನ್ ಆಗುವುದರಿಂದ ತಡೆಯುತ್ತದೆ. ಅರಿಶಿಣದ ಫೇಸ್ ಸ್ಕ್ರಬ್ ಬಳಸುವುದರಿಂದ ತ್ವಚೆಯ ಕೊಳೆಯನ್ನು ಹೋಗಲಾಡಿಸುತ್ತದೆ.

    ಸ್ಕ್ರಬ್ ತಯಾರಿಸಲು ಏನೇನ್ ಬೇಕು?
    * ಅರಿಶಿಣ
    * ಜೇನು
    * ಸಕ್ಕರೆ

    ಸ್ಕ್ರಬ್ ತಯಾರಿಸುವುದು ಹೇಗೆ:
    ಒಂದು ಕಪ್‍ನಲ್ಲಿ 2 ದೊಡ್ಡ ಚಮಚದಲ್ಲಿ ಅರಿಶಿಣಕ್ಕೆ 2 ದೊಡ್ಡ ಚಮಚ ಜೇನು ಹಾಕಿ ದಪ್ಪವಾಗಿ ಪೇಸ್ಟ್ ತಯಾರಿಸಬೇಕು. ಪೇಸ್ಟ್ ತಯಾರಿಸಿದ ನಂತರ 1 ದೊಡ್ಡ ಚಮಚದಲ್ಲಿ ಸಕ್ಕರೆ ಹಾಕಿ ಮಿಕ್ಸ್ ಮಾಡಬೇಕು. ನಿಮ್ಮ ಸ್ಕಿನ್ ಡ್ರೈ ಆಗಿದ್ದಲ್ಲಿ ಜೇನು ಸ್ವಲ್ಪ ಜಾಸ್ತಿ ಹಾಕಿ.

    ಉಪಯೋಗಿಸುವುದು ಹೇಗೆ?
    ಮುಖಕ್ಕೆ ಸ್ಕ್ರಬ್ ಹಾಕುವ ಮೊದಲು ನಿಮ್ಮ ಮುಖವನ್ನು ಚೆನ್ನಾಗಿ ತೊಳೆದುಕೊಳ್ಳಿ. ನಂತರ ಅರಿಶಿಣದ ಪೇಸ್ಟ್ ಅನ್ನು ನಿಮ್ಮ ಮುಖಕ್ಕೆ ಹಾಗೂ ಕುತ್ತಿಗೆಗೆ ಹಾಕಿಕೊಳ್ಳಿ. ಸ್ಕ್ರಬ್ ಮುಖಕ್ಕೆ ಹಾಕಿದ ನಂತರ 2-3 ನಿಮಿಷದವರೆಗೂ ಅದನ್ನು ಉಜ್ಜಿ. ಸ್ವಲ್ಪ ಸಮಯದ ನಂತರ ನೀರಿನಿಂದ ನಿಮ್ಮ ಮುಖವನ್ನು ತೊಳೆದುಕೊಳ್ಳಿ. ವಾರದಲ್ಲಿ ಎರಡು ಬಾರಿ ಅರಿಶಿಣದ ಸ್ಕ್ರಬ್ ಉಪಯೋಗಿಸುವುದರಿಂದ ನಿಮ್ಮ ತ್ವಚೆಯ ವ್ಯತ್ಯಾಸ ನಿಮಗೆ ಗೊತ್ತಾಗುತ್ತದೆ.

    ಗಮನಿಸಿ: ಸ್ಕ್ರಬ್ ತಯಾರಿಸಲು ಮನೆಯಲ್ಲಿಯೇ ಅರಿಶಿಣದ ಪೌಡರ್ ಮಾಡಿದರೆ ಒಳ್ಳೆಯದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv