Tag: Tushar Mehta

  • ಚಂದ್ರಯಾನ-3 ರಾಷ್ಟ್ರದ ಮೆರವಣಿಗೆಯಲ್ಲಿ ಒಂದು ಮೈಲಿಗಲ್ಲನ್ನು ಪ್ರತಿನಿಧಿಸುತ್ತದೆ: ಡಿ.ವೈ ಚಂದ್ರಚೂಡ್

    ಚಂದ್ರಯಾನ-3 ರಾಷ್ಟ್ರದ ಮೆರವಣಿಗೆಯಲ್ಲಿ ಒಂದು ಮೈಲಿಗಲ್ಲನ್ನು ಪ್ರತಿನಿಧಿಸುತ್ತದೆ: ಡಿ.ವೈ ಚಂದ್ರಚೂಡ್

    ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (DY Chandrachud) ಚಂದ್ರಯಾನ-3ರ (Chandrayaan-3) ಯಶಸ್ಸನ್ನು ಐತಿಹಾಸಿಕ ಸಾಧನೆ ಎಂದು ಶ್ಲಾಘಿಸಿದ್ದು, ಇಂತಹ ಅದ್ಭುತ ಸಾಧನೆ ಮಾಡಿದ್ದಕ್ಕಾಗಿ ಇಸ್ರೋ (ISRO) ತಂಡವನ್ನು ಅಭಿನಂದಿಸಿದ್ದಾರೆ.

    ಚಂದ್ರನ ಮೇಲ್ಮೈ ಸಾಫ್ಟ್ ಲ್ಯಾಂಡಿಂಗ್ ಮಾಡಿ ಸಾಧನೆಗೈದ ರಾಷ್ಟ್ರಗಳ ಗುಂಪಿನಲ್ಲಿ ಭಾರತವನ್ನೂ ಸೇರಿಸುತ್ತದೆ. ನಮ್ಮ ಮಹಾನ್ ರಾಷ್ಟ್ರದ ಪ್ರಜೆಯಾಗಿ ನಾನು ಅಪಾರ ಹೆಮ್ಮೆಯಿಂದ ಇಂದು ಚಂದ್ರಯಾನ-3ರ ಗಮನಾರ್ಹ ಲ್ಯಾಂಡಿಂಗ್ ಅನ್ನು ನೋಡಿದೆ ಎಂದರು. ಇದನ್ನೂ ಓದಿ: ಯುವ ಕನಸುಗಾರರ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ- ಚಂದ್ರಯಾನ ಯಶಸ್ಸಿಗೆ ರಾಗಾ ಶ್ಲಾಘನೆ

    ಇದು ಹೊಸ ಮಾರ್ಗಗಳು ಮತ್ತು ವೈಜ್ಞಾನಿಕ ಸಂಶೋಧನೆ ಮತ್ತು ಅನ್ವೇಷಣೆಗೆ ಸಹಾಯ ಮಾಡುತ್ತದೆ. ನಿಜವಾಗಿ ಈ ಲ್ಯಾಂಡಿಂಗ್ ನಮ್ಮ ರಾಷ್ಟ್ರದ ಮುಂದಿನ ಮೆರವಣಿಗೆಯಲ್ಲಿ ಒಂದು ಮೈಲಿಗಲ್ಲನ್ನು ಪ್ರತಿನಿಧಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಚಂದ್ರಯಾನ-3 ಮಿಷನ್ ಸಕ್ಸಸ್: ಅಭಿನಂದನೆ ಸಲ್ಲಿಸಿದ ರಷ್ಯಾ ಬಾಹ್ಯಾಕಾಶ ಸಂಸ್ಥೆ

    ಇವರು ಮಾತ್ರವಲ್ಲದೇ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ (Tushar Mehta) ಅವರು ಸಹಾ ಯೋಜನೆಯಲ್ಲಿ ತೊಡಗಿದ್ದ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇಡೀ ರಾಷ್ಟ್ರವೇ ಈ ಸಾಧನೆಗೆ ಹೆಮ್ಮೆ ಪಡುತ್ತಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ನಾಯಕತ್ವದಲ್ಲಿ ಭಾರತ ಈಗಾಗಲೇ ಎಲ್ಲಾದರಲ್ಲೂ ಮೊದಲ ಸ್ಥಾನದಲ್ಲಿದೆ. ಈ ಮಹಾನ್ ದೇಶ ಇದೀಗ ಮತ್ತೊಂದು ಸಾಧನೆಯನ್ನು ಮಾಡಿದೆ ಎಂದರು. ಇದನ್ನೂ ಓದಿ: Chandrayaan-3: ಚಂದ್ರನ ದಕ್ಷಿಣ ಧ್ರುವದಲ್ಲಿ ಹೆಜ್ಜೆ ಇಟ್ಟ ಮೊದಲ ದೇಶ ಭಾರತ

    ದೇಶದ ಸ್ತ್ರೀ ಶಕ್ತಿಯನ್ನು ಪ್ರತಿನಿಧಿಸುವ ನಮ್ಮ ವಿಜ್ಞಾನಿಗಳಿಗೆ ದೊಡ್ಡ ಅಭಿನಂದನೆಗಳು. ಇಡೀ ರಾಷ್ಟ್ರವು ಈ ಕುರಿತು ಹೆಮ್ಮೆ ಪಡುತ್ತಿದೆ. ಭಾರತೀಯನಾಗಿರುವುದಕ್ಕೆ ಹೆಮ್ಮೆಯಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಚಂದ್ರಯಾನ-3 ಯಶಸ್ವಿ: ಇಸ್ರೋಗೆ ನಾಸಾ ಆಡಳಿತಾಧಿಕಾರಿ ಅಭಿನಂದನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಜಬ್ ವಿದ್ಯಾರ್ಥಿನಿಯರ ಪ್ರತಿಭಟನೆ ಹಿಂದೆ PFI ಪಿತೂರಿ: ಸಾಲಿಸಿಟರ್ ಜನರಲ್ ಮೆಹ್ತಾ ವಾದ

    ಹಿಜಬ್ ವಿದ್ಯಾರ್ಥಿನಿಯರ ಪ್ರತಿಭಟನೆ ಹಿಂದೆ PFI ಪಿತೂರಿ: ಸಾಲಿಸಿಟರ್ ಜನರಲ್ ಮೆಹ್ತಾ ವಾದ

    ನವದೆಹಲಿ: ಪ್ರತಿಭಟನೆ (Protest) ಮಾಡುವ ಉದ್ದೇಶದಿಂದಲೇ ಹಿಜಬ್ (Hijab) ಹೋರಾಟವನ್ನು ರೂಪಿಸಲಾಯಿತು, ಹಿಜಬ್ ವಿವಾದದ ಹಿಂದೆ ದೊಡ್ಡ ಷಡ್ಯಂತ್ರವಿದ್ದು, ಪಿಎಫ್‌ಐ (PFI) ಕೂಡಾ ಇದರಲ್ಲಿ ಭಾಗಿಯಾಗಿದೆ ಎಂದು ಕೇಂದ್ರ ಸರ್ಕಾರದ (Central Givernment) ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ (Tushar Mehta) ಅರೋಪಿಸಿದ್ದಾರೆ.

    ಹಿಜಬ್ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ (High Court) ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ವೇಳೆ ಮೆಹ್ತಾ ವಾದ ಮಂಡಿಸಿದರು. ಇದನ್ನೂ ಓದಿ: ಶಾಲೆ ಟಾರ್ಗೆಟ್ ಮಾಡಿ ಸೇನೆಯಿಂದ ಗುಂಡಿನ ದಾಳಿ – 7 ಮಕ್ಕಳು ಸೇರಿ 13 ಮಂದಿ ಸಾವು

    ಕಳೆದ ಎಂಟು ದಿನಗಳಿಂದ ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು. ಇಂದು ಎಲ್ಲ ವಕೀಲರ (Lowyer) ವಾದ ಅಂತ್ಯವಾದ ಹಿನ್ನೆಲೆಯಲ್ಲಿ ಸರ್ಕಾರದ ಪರ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಆರಂಭಿಸಿದರು. ಇದನ್ನೂ ಓದಿ: ಸ್ಟೇಟಸ್‍ನಲ್ಲಿ ಹಾಕಿದ್ದ ತಾಯಿ ಫೋಟೋ ದುರ್ಬಳಕೆ – ಕ್ಲಾಸ್‍ರೂಂನಲ್ಲಿ ಲೆಕ್ಚರರ್ ಎದುರೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು

    ಯಾವುದೇ ಧರ್ಮಾದ ಆಚರಣೆ ಇದ್ದರೂ, ಅದರ ಅನುಸರಣೆ ಮತ್ತು ಆಚರಣೆ ಕಾನೂನಿನ ಮಿತಿಯಲ್ಲಿದೆ. ರಾಜ್ಯ ಸರ್ಕಾರದ (Karnatak State Government) ಅದೇಶ ನಿರ್ದಿಷ್ಟ ಸಮುದಾಯದ, ನಿರ್ದಿಷ್ಟ ಉಡುಪು ಧರಿಸಲು ನಿಯಂತ್ರಣ ಹೇರುವುದಿಲ್ಲ, ಬದಲಿಗೆ ಸಮವಸ್ತ್ರದ ಅಗತ್ಯದ ಬಗ್ಗೆ ಸ್ಪಷ್ಟವಾಗಿ ತಿಳಿಸಿದೆ. ಆದರೆ ಹಿಜಬ್ (Hijab) ಧರಿಸುವ ಹೋರಾಟದ ಹಿಂದೆ ವ್ಯವಸ್ಥಿತ ಪಿತೂರಿ ನಡೆದಿದೆ ಎಂದು ಕೋರ್ಟ್ ಗೆ ತುಷಾರ್ ಮೆಹ್ತಾ ತಿಳಿಸಿದರು.

    ಹಿಜಬ್ ಪರ ಸಾಮಾಜಿಕ ಮಾಧ್ಯಮಗಳಲ್ಲಿ (Social Media) ಭಾರೀ ಪ್ರಚಾರ ಮಾಡಲಾಯ್ತು, ಹಿಜಬ್ ಧರಿಸಿ ಎಂದು ಒತ್ತಿ ಹೇಳಲಾಯಿತು, ಹಿಜಬ್ ಬೇಕು ಎನ್ನುವ ವಾದ ಹಠಾತ್ ಆಗಿ ಬಂದಿರುವುದಲ್ಲ, ಇದು ದುರುದ್ದೇಶದಿಂದ ವ್ಯವಸ್ಥಿತವಾಗಿ ಮಾಡಿರುವ ಕಾರ್ಯಾಚರಣೆಯಾಗಿದೆ. ಇದರಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಪಾತ್ರವೂ ಇದೆ. ಇದಕ್ಕೆ ಪೂರಕ ಸಾಕ್ಷ್ಯಗಳ ಕುರಿತು ನಾನು ಕೋರ್ಟ್ ಗೆ ದಾಖಲೆ ಸಲ್ಲಿಸಿದ್ದೇನೆ ಎಂದರು.

    ಮಕ್ಕಳು ಹಿಜಬ್ ಗಾಗಿ ಸ್ವಯಂ ಪ್ರೇರಣೆಯಿಂದ ಹೋರಾಟ ಮಾಡಿಲ್ಲ, ಅವರ ಮನವೊಲಿಸಿ ಈ ರೀತಿ ಮಾಡಲಾಯ್ತು, 2021ರ ತನಕ ಯಾವ ವಿದ್ಯಾರ್ಥಿನಿಯೂ (Students) ಕೂಡ ಹಿಜಬ್ ಧರಿಸುತ್ತಿರಲಿಲ್ಲ, ಅಥವಾ ಇಂಥದ್ದೊಂದು ಪ್ರಶ್ನೆಯೇ ಉದ್ಭವ ಆಗಿರಲಿಲ್ಲ, ಹಿಜಬ್ ನ ವಿರುದ್ಧ ಮತ್ತೊಂದು ಸಮುದಾಯದ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಶಾಲೆಗೆ ಬಂದರು ಈ ವೇಳೆ ಸರ್ಕಾರ ಹಿಜಬ್ ಗೆ ನಿಷೇಧ ಹೇರಿತು ಈ ಸಂದರ್ಭದಲ್ಲಿ ಸರ್ಕಾರದ ಆದೇಶದ ಬಳಿಕ ಈ ವಿವಾದ ಬುಗಿಲೆದ್ದಿತು ಎಂದು ವಾದಿಸಿದರು.

    Live Tv
    [brid partner=56869869 player=32851 video=960834 autoplay=true]