Tag: tvk

  • ಕರೂರು ಕಾಲ್ತುಳಿತ ದುರಂತದ ತನಿಖೆ ಆರಂಭಿಸಿದ ಸಿಬಿಐ

    ಕರೂರು ಕಾಲ್ತುಳಿತ ದುರಂತದ ತನಿಖೆ ಆರಂಭಿಸಿದ ಸಿಬಿಐ

    ನವದೆಹಲಿ: ನಟ, ರಾಜಕಾರಣಿ ವಿಜಯ್ (Vijay) ಅವರ ಚುನಾವಣಾ ರ‍್ಯಾಲಿಯ ವೇಳೆ ಸಂಭವಿಸಿದ ಕರೂರು ಕಾಲ್ತುಳಿತ (Karur Stampede) ದುರಂತದ ತನಿಖೆಯನ್ನು ಕೇಂದ್ರ ತನಿಖಾ ದಳ (CBI) ವಹಿಸಿಕೊಂಡಿದ್ದು, ತನಿಖೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಾಲ್ತುಳಿತ ಸಂಭವಿಸಿದ ಸ್ಥಳಕ್ಕೆ ಸಿಬಿಐ ತಂಡ ಈಗಾಗಲೇ ಭೇಟಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ನೇತೃತ್ವದಲ್ಲಿ ನಡೆದ ರಾಜಕೀಯ ರ‍್ಯಾಲಿ ವೇಳೆ ಕಾಲ್ತುಳಿತ ಸಂಭವಿಸಿ 41 ಮಂದಿ ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು. ಇದನ್ನೂ ಓದಿ: ಕರ್ನೂಲ್‌ ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ – ಬಸ್‌ಗಳಲ್ಲಿ ಈ ವಸ್ತುಗಳನ್ನ ಕೊಂಡೊಯ್ಯುವಂತಿಲ್ಲ!

    ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ ಸ್ವತಂತ್ರ ತನಿಖೆಗೆ ಕೋರಿ ಅರ್ಜಿ ಸಲ್ಲಿಸಿತ್ತು. ಎಸ್‌ಐಟಿಯಲ್ಲಿ (SIT) ತಮಿಳುನಾಡಿನ ಪೊಲೀಸರೇ ಇರುವುದರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಹೇಳಿತ್ತು. ಅರ್ಜಿ ವಿಚಾರಣೆ ಬಳಿಕ ಕರೂರು ಕಾಲ್ತುಳಿತ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಇದನ್ನೂ ಓದಿ: ಜನವರಿಯಲ್ಲಿ ನನಗೆ ಶುಕ್ರದೆಸೆ ಬರುವುದು ಪಕ್ಕಾ – ಸಚಿವನಾಗುವ ಇಂಗಿತ ವ್ಯಕ್ತಪಡಿಸಿದ ಲಕ್ಷ್ಮಣ ಸವದಿ

    ಈ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ನಿವೃತ್ತ ನ್ಯಾಯಾಧೀಶರಾದ ಅಜಯ್ ರಸ್ತೋಗಿ ಅವರ ಅಧ್ಯಕ್ಷತೆಯಲ್ಲಿ ಮೂರು ಸದಸ್ಯರ ಸಮಿತಿಯನ್ನ ಕೂಡ ಸುಪ್ರೀಂ ಕೋರ್ಟ್ ರಚಿಸಿತ್ತು. ಇದನ್ನೂ ಓದಿ: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ಅಸಲಿ ಚಿನ್ನದ ಬಾಗಿಲು ತಾನೇ ಇಟ್ಟುಕೊಂಡು ತಾಮ್ರದ ಬಾಗಿಲನ್ನು ದೇಗುಲಕ್ಕೆ ಕೊಟ್ಟಿದ್ದ ಉನ್ನಿಕೃಷ್ಣನ್

  • ಕರೂರು ಕಾಲ್ತುಳಿತ ದುರಂತ – ಸಿಬಿಐ ತನಿಖೆಗೆ ಸುಪ್ರೀಂ ಆದೇಶ

    ಕರೂರು ಕಾಲ್ತುಳಿತ ದುರಂತ – ಸಿಬಿಐ ತನಿಖೆಗೆ ಸುಪ್ರೀಂ ಆದೇಶ

    – ದೇಶವನ್ನೇ ಬೆಚ್ಚಿಬೀಳಿಸಿದ ಘಟನೆ, ನಿಷ್ಪಕ್ಷಪಾತ ತನಿಖೆ ಅಗತ್ಯ; ಕೋರ್ಟ್‌

    ನವದೆಹಲಿ: ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ (Karur Stampede) ದುರಂತ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್‌ (Supreme Court) ಇಂದು ಆದೇಶಿಸಿದೆ.

    ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ ಅಂಜಾರಿಯಾ ಅವರಿದ್ದ ದ್ವಿ ಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ. ಇದನ್ನೂ ಓದಿ: TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

    TVK Vijay

    ಹೌದು. ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್‌ ನೇತೃತ್ವದಲ್ಲಿ ನಡೆದ ರಾಜಕೀಯ ರ‍್ಯಾಲಿವೇಳೆ ಕಾಲ್ತುಳಿತ ಸಂಭವಿಸಿ 41 ಮಂದಿ ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು. ಈ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ನಿವೃತ್ತ ನ್ಯಾಯಾಧೀಶರಾದ ಅಜಯ್ ರಸ್ತೋಗಿ (Ajay Rastogi) ಅವರ ಅಧ್ಯಕ್ಷತೆಯಲ್ಲಿ ಮೂರು ಸದಸ್ಯರ ಸಮಿತಿಯನ್ನ ಕೂಡ ಸುಪ್ರೀಂ ಕೋರ್ಟ್‌ ರಚಿಸಿದೆ.

    ಇದು ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ ಘಟನೆ ಎಂದಿರುವ ಕೋರ್ಟ್‌, ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಹೇಳಿದೆ. ಸುಪ್ರೀಂ ಕೋರ್ಟ್‌ನ ಆದೇಶದಿಂದ ಸಿಎಂ ಎಂ.ಕೆ ಸ್ಟಾಲಿನ್‌ ನೇತೃತ್ವದ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಇದನ್ನೂ ಓದಿ: Vijay Rally Stampede | ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ – ಬಿಗಿ ಭದ್ರತೆ

    ನಟ ದಳಪತಿ ವಿಜಯ್‌ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದಿಂದ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಬಳಿಕ ಸುಪ್ರೀಂ ಕೋರ್ಟ್‌ ಸಿಬಿಐ ತನಿಖೆಗೆ ಆದೇಶಿಸಿದೆ. ಈ ಅರ್ಜಿಗಳು ಮದ್ರಾಸ್ ಹೈಕೋರ್ಟ್‌ನ ಏಕ ನ್ಯಾಯಾಧೀಶರು ನೀಡಿದ್ದ ವಿಶೇಷ ತನಿಖಾ ದಳ ತನಿಖೆಯ ಆದೇಶವನ್ನು ಪ್ರಶ್ನಿಸಿದ್ದವು. ಅಲ್ಲದೇ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ವಿಭಾಗೀಯ ಪೀಠವು ಸಿಬಿಐ ತನಿಖೆಯನ್ನು (CBI Investigation) ತಿರಸ್ಕರಿಸಿದ್ದ ಆದೇಶವನ್ನೂ ಪ್ರಶ್ನಿಸಲಾಗಿತ್ತು. ಇದನ್ನೂ ಓದಿ: TVK Vijay Rally Stampede | ದುರಂತದಲ್ಲಿ 2 ವರ್ಷದ ಕಂದಮ್ಮ ಬಲಿ – ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

    ಕೋರ್ಟ್‌ ಹೇಳಿದೇನು?
    ವಾಸ್ತವಾಂಶ ಪರಿಶೀಲಿಸಿದಾಗ ಈ ವಿಷಯವು ನಾಗರಿಕರ ಮೂಲಭೂತ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಸಿಬಿಐಗೆ ಹಸ್ತಾಂತರಿಸಲು ನಿರ್ದೇಶಿಸಿದ್ದೇವೆ. ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ಪ್ರತಿಯೊಬ್ಬ ನಾಗರಿಕರ ಹಕ್ಕು ಎಂಬುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಕೋರ್ಟ್‌ ಹೇಳಿದೆ. ಇದನ್ನೂ ಓದಿ: Vijay Rally Stampede | 10 ವರ್ಷದ ಬಾಲಕಿ ಸಾವನ್ನ ಕಣ್ಣಾರೆ ಕಂಡೆ – ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಬೆಂಗ್ಳೂರಿನ ಪ್ರತ್ಯಕ್ಷದರ್ಶಿ

    ಎಲ್ಲಾ ರೀತಿಯ ಗೊಂದಲಗಳನ್ನ ನಿವಾರಿಸಲು ನಾವು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದೇವೆ. ನ್ಯಾಯಮೂರ್ತಿ ಅಜಯ್ ರಸ್ತೋಗಿ ಅವರು ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಅಲ್ಲದೇ ರಾಜ್ಯದ ಸ್ಥಳೀಯರಲ್ಲದ ಇಬ್ಬರು ಐಪಿಎಸ್ ಅಧಿಕಾರಿಗಳು ಸಮಿತಿಯ ಭಾಗವಾಗಿರಲಿದ್ದಾರೆ. ನಿವೃತ್ತ ನ್ಯಾಯಾಧೀಶರ ನಿರ್ದೇಶನಗಳ ಪ್ರಕಾರ ಸಮಿತಿಯು ತನ್ನದೇ ಆದ ಕಾರ್ಯವಿಧಾನಗಳನ್ನ ರೂಪಿಸಬೇಕು. ಇದರೊಂದಿಗೆ ತನಿಖೆಯ ಮಾಸಿಕ ವರದಿಯನ್ನು ಸಿಬಿಐ ಸಮಿತಿ ಮುಂದಿಡಬೇಕು ಎಂದು ಸಹ ಕೋರ್ಟ್‌ ಹೇಳಿದೆ.

  • Karur Stampede | ಸ್ವತಂತ್ರ ತನಿಖೆಗೆ ಕೋರಿ ಸುಪ್ರೀಂಗೆ ಟಿವಿಕೆ ಅರ್ಜಿ – ಅ.10ಕ್ಕೆ ವಿಚಾರಣೆ

    Karur Stampede | ಸ್ವತಂತ್ರ ತನಿಖೆಗೆ ಕೋರಿ ಸುಪ್ರೀಂಗೆ ಟಿವಿಕೆ ಅರ್ಜಿ – ಅ.10ಕ್ಕೆ ವಿಚಾರಣೆ

    ಚೆನ್ನೈ: ಕರೂರು ಕಾಲ್ತುಳಿತ (Karur Stampede) ಪ್ರಕರಣದ ತನಿಖೆ ನಡೆಸಲು ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ನಿರ್ದೇಶಿಸಿದ ಮದ್ರಾಸ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದೆ.

    ವಕೀಲರಾದ ದೀಕ್ಷಿತಾ ಗೋಹಿಲ್, ಪ್ರಾಂಜಲ್ ಅಗರ್ವಾಲ್ ಮತ್ತು ಯಶ್ ಎಸ್ ವಿಜಯ್ ಅವರು ಅರ್ಜಿ ಸಲ್ಲಿಸಿದ್ದಾರೆ. ಪೊಲೀಸ್ ನೇತೃತ್ವದ ಎಸ್‌ಐಟಿ ತನಿಖೆಯ ಬದಲು ಉನ್ನತ ನ್ಯಾಯಲಯದ ನಿವೃತ ನ್ಯಾಯಮೂರ್ತಿ ನೇತೃತ್ವದಲ್ಲಿ ಘಟನೆಯ ಸ್ವತಂತ್ರ ತನಿಖೆ ನಡೆಸಲು ಮನವಿ ಮಾಡಿದ್ದಾರೆ. ಸುಪ್ರೀಂಕೋರ್ಟ್ ಈ ಅರ್ಜಿ ವಿಚಾರಣೆಗೆ ಸಮ್ಮತಿ ಸೂಚಿಸಿದ್ದು, ಅ.10ರಂದು ವಿಚಾರಣೆ ನಡೆಸುವುದಾಗಿ ದಿನಾಂಕ ನಿಗದಿಪಡಿಸಿದೆ.ಇದನ್ನೂ ಓದಿ: ಬಿಜೆಪಿ ನಾಯಕರು ರಾಜ್ಯದಲ್ಲಿ ಬೊಗಳೋದು ಬಿಟ್ಟು ದೆಹಲಿಗೆ ಹೋಗಿ ಬೊಗಳಲಿ: ಬೋಸರಾಜು

    ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಜಿ.ಎಸ್.ಮಣಿ ಅವರು ಸುಪ್ರೀಂಕೋರ್ಟ್‌ನಲ್ಲಿ ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದು, ಈ ಪ್ರಕರಣದ ಬಗ್ಗೆ ಕೇಂದ್ರ ತನಿಖಾ ದಳ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಈ ಪೈಕಿ ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಸುಪ್ರೀಂಕೋರ್ಟ್ನಲ್ಲಿ ಮೂರು ಅರ್ಜಿಗಳು ದಾಖಲಾಗಿವೆ.

    ಈ ನಡುವೆ ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಸ್ಥರ ಭೇಟಿಯಾಗಿ ಸಾಂತ್ವನ ಹೇಳಲು ಹಾಗೂ ಕರೂರಿಗೆ ಭೇಟಿ ನೀಡಲು ನಟ ವಿಜಯ್ ಅನುಮತಿ ಕೇಳಿದ್ದಾರೆ. ತಮಿಳುನಾಡು ಪೊಲೀಸ್ ಮಹಾ ನಿರ್ದೇಶಕರಿಗೆ ಇಮೇಲ್ ಮೂಲಕ ಅನುಮತಿ ಕೇಳಿದ್ದು, ಮಂಗಳವಾರ (ಅ.7) ವಿಡಿಯೋ ಕಾಲ್ ಮೂಲಕ ಮೃತರ ಕುಟುಂಬಸ್ಥರಿಗೆ ವಿಜಯ್ ಸಾಂತ್ವಾನ ಹೇಳಿದ್ದರು.ಇದನ್ನೂ ಓದಿ: ರಾಜ್ಯದ 15 ಜಿಲ್ಲೆಗಳ 252 ಗ್ರಾ.ಪಂ.ಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆ ಅನುಷ್ಠಾನ; ನಟ ವಸಿಷ್ಠ ಸಿಂಹ ರಾಯಭಾರಿ

  • ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡ್ಬೇಡಿ: ಸ್ಟಾಲಿನ್ ವಿರುದ್ಧ ವಿಜಯ್ ಕಿಡಿ

    ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡ್ಬೇಡಿ: ಸ್ಟಾಲಿನ್ ವಿರುದ್ಧ ವಿಜಯ್ ಕಿಡಿ

    – ಬೇರೆ ಎಲ್ಲೂ ನಡೆಯದ ದುರಂತ ಕರೂರಿನಲ್ಲಿ ಮಾತ್ರ ಯಾಕಾಯ್ತು?
    – ಕಾಲ್ತುಳಿತದ ಹಿಂದಿನ ಸತ್ಯ ಶೀಘ್ರ ಬಹಿರಂಗಗೊಳ್ಳುತ್ತೆ

    ಚೆನ್ನೈ: ಕರೂರು ಕಾಲ್ತುಳಿತ (Karur Stampede) ದುರಂತ ಸಂಭವಿಸಿದ ಮೂರು ದಿನಗಳ ಬಳಿಕ ನಟ, ಟಿವಿಕೆ ಮುಖ್ಯಸ್ಥ ವಿಜಯ್ (Actor Vijay) ವಿಡಿಯೋವೊಂದನ್ನು ಹಂಚಿಕೊಂಡಿದ್ದು, ದುರಂತದ ಹಿಂದಿನ ಸತ್ಯ ಶೀಘ್ರದಲ್ಲೇ ಬಹಿರಂಗಗೊಳ್ಳುತ್ತದೆ ಎಂದಿದ್ದಾರೆ.

    ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಮೂಲಕ ಸಂದೇಶವನ್ನು ಹಂಚಿಕೊಂಡಿರುವ ಅವರು, ನನ್ನ ಜೀವನದಲ್ಲೇ ಇಂತಹ ನೋವಿನ ದಿನಗಳನ್ನು ನಾನು ಅನುಭವಿಸಿಲ್ಲ. ನಿಜಕ್ಕೂ ಈ ಸಂಗತಿಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ, ಬರೀ ನೋವೇ ತುಂಬಿಕೊಂಡಂತಾಗಿದೆ. ಜನರು ನನ್ನ ಮೇಲಿನ ಪ್ರೀತಿಯಿಂದಾಗಿ ನನ್ನನ್ನು ನೋಡಲು ಬರುತ್ತಾರೆ. ಅವರ ಪ್ರೀತಿ, ವಿಶ್ವಾಸಕ್ಕೆ ನಾನು ಯಾವಾಗಲೂ ಚಿರಋಣಿ. ಆದರೆ ಆ ಎಲ್ಲದಕ್ಕೂ ಮಿಗಿಲಾಗಿ ಜನರ ರಕ್ಷಣೆಯೇ ನನ್ನ ಮೊದಲ ಆದ್ಯತೆ. ನಾನು ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ಕೊಡುತ್ತೇನೆ. ಶೀಘ್ರದಲ್ಲಿಯೇ ಈ ಘಟನೆ ಹಿಂದಿನ ಸತ್ಯ ಬಹಿರಂಗವಾಗುತ್ತದೆ ಎಂದು ಪ್ರತಿಜ್ಞೆ ಮಾಡಿದ್ದಾರೆ.ಇದನ್ನೂ ಓದಿ: ವಿಜಯ್‌ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 41 ಸಾವು ಕೇಸ್‌ – ಟಿವಿಕೆ ನಾಯಕ ಅರೆಸ್ಟ್‌

    ಈ ಘಟನೆಗೂ ಮುನ್ನ ನಾನು ರಾಜಕೀಯವನ್ನು ಬದಿಗಿಟ್ಟು ಜನರ ಸುರಕ್ಷತೆಗಾಗಿ ಸೂಕ್ತವಾದ ಸ್ಥಳವನ್ನು ಆರಿಸಿ, ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿದ್ದೆ. ಆದರೆ ಏನಾಗಬಾರದು ಎಂದುಕೊಂಡಿದ್ದೆ, ಅದೇ ನಡೆದು ಹೋಗಿದೆ. ನಾನು ಒಬ್ಬ ಮನುಷ್ಯ. ಘಟನೆಯಲ್ಲಿ ಇಷ್ಟೊಂದು ಜನರಿಗೆ ತೊಂದರೆಯಾದಾಗ ನಾನು ಅಲ್ಲಿಯೇ ಇರಬಹುದಿತ್ತು. ಆದರೆ ನಾನಿದ್ದರೆ ಸಮಸ್ಯೆ ಇನ್ನೂ ಹೆಚ್ಚಾಗಬಹುದು ಎಂದು ತಿಳಿದು ಅಲ್ಲಿಂದ ಹೊರಟು ಹೋದೆ ಎಂದಿದ್ದಾರೆ.

    ಇದಕ್ಕೂ ಮುನ್ನ ನಾವು ಐದು ಜಿಲ್ಲೆಗಳಲ್ಲಿ ಪ್ರಚಾರ ಮಾಡಿದ್ದೇವೆ, ಆದರೆ ಕರೂರಿನಲ್ಲಿ ಯಾಕೆ ಹೀಗಾಯ್ತು? ಹೇಗಾಯ್ತು? ಜನರಿಗೆ ಎಲ್ಲ ಗೊತ್ತಿದೆ. ಅವರೆಲ್ಲವನ್ನೂ ನೋಡುತ್ತಿದ್ದಾರೆ. ಶೀಘ್ರವೇ ಎಲ್ಲ ಸತ್ಯ ಬಹಿರಂಗಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

    ಇದೇ ವೇಳೆ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರಿಗೆ ಮನವಿ ಮಾಡಿಕೊಂಡಿದ್ದು, ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ. ಆದರೆ ನನ್ನ ಬೆಂಬಲಿಗರಿಗೆ ಏನು ಮಾಡಬೇಡಿ. ನಾನು ಮನೆಯಲ್ಲಿ ಅಥವಾ ಕಚೇರಿಯಲ್ಲಿ ಇರುತ್ತೇನೆ. ನೀವು ನನ್ನ ಮೇಲೆ ಯಾವ ರೀತಿ ಬೇಕಾದರೂ ಕ್ರಮ ಕೈಗೊಳ್ಳಬಹುದು ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

    ಏನಿದು ಘಟನೆ?
    ಸೆ.27ರಂದು ತಮಿಳುನಾಡಿನ ಕರೂರಿನಲ್ಲಿ ನಟ, ರಾಜಕಾರಣಿ ವಿಜಯ್ ರ‍್ಯಾಲಿ ಹಮ್ಮಿಕೊಂಡಿದ್ದರು. ಅಂದು ಕರೂರಿಗೆ ಮಧ್ಯಾಹ್ನ ತಲುಪಬೇಕಿದ್ದ ವಿಜಯ್ ಏಳು ಗಂಟೆ ತಡವಾಗಿ ಆಗಮಿಸಿದ್ದರು. ಹೀಗಾಗಿ ಜನಸಂದಣಿ ಹೆಚ್ಚಾಗಿ, ಕಾಲ್ತುಳಿತ ಸಂಭವಿಸಿತ್ತು. ಪರಿಣಾಮ 41 ಜನರು ಸಾವನ್ನಪ್ಪಿದ್ದರು.ಇದನ್ನೂ ಓದಿ: ಕಾಲ್ತುಳಿತಕ್ಕೆ ಪೊಲೀಸರು ಹೊಣೆ – ಪತ್ರ ಬರೆದು ವಿಜಯ್‌ ಅಭಿಮಾನಿ, ಟಿವಿಕೆ ಕಾರ್ಯಕರ್ತ ಆತ್ಮಹತ್ಯೆ

  • ವಿಜಯ್‌ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 41 ಸಾವು ಕೇಸ್‌ – ಟಿವಿಕೆ ನಾಯಕ ಅರೆಸ್ಟ್‌

    ವಿಜಯ್‌ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 41 ಸಾವು ಕೇಸ್‌ – ಟಿವಿಕೆ ನಾಯಕ ಅರೆಸ್ಟ್‌

    ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ (Vijay) ಅವರ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಟಿವಿಕೆ (TVK) ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ.

    ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕರೂರ್ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಜಗನ್‌ನನ್ನು ಪೊಲೀಸರು ಬಂಧಿಸಿದ್ದು, ದುರಂತಕ್ಕೆ ಕಾರಣವಾದ ಲೋಪಗಳಿಗೆ ಅವರನ್ನೇ ಹೊಣೆಗಾರರನ್ನಾಗಿ ಮಾಡಿದ್ದಾರೆ. ಇದನ್ನೂ ಓದಿ: ಕಾಲ್ತುಳಿತಕ್ಕೆ ಪೊಲೀಸರು ಹೊಣೆ – ಪತ್ರ ಬರೆದು ವಿಜಯ್‌ ಅಭಿಮಾನಿ, ಟಿವಿಕೆ ಕಾರ್ಯಕರ್ತ ಆತ್ಮಹತ್ಯೆ

    ಈ ಹಿಂದೆ ಆತನ ವಿರುದ್ಧ ಕೊಲೆ ಯತ್ನ, ಕೊಲೆಗೆ ಸಮನಾಗದ ಅಪರಾಧಿಕ ನರಹತ್ಯೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ನಿಬಂಧನೆಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಟಿವಿಕೆ ಪ್ರಧಾನ ಕಾರ್ಯದರ್ಶಿ ಬಸ್ಸಿ ಆನಂದ್ ಮತ್ತು ಜಂಟಿ ಪ್ರಧಾನ ಕಾರ್ಯದರ್ಶಿ ನಿರ್ಮಲ್ ಶೇಖರ್ ವಿರುದ್ಧವೂ ಪ್ರಕರಣಗಳು ದಾಖಲಾಗಿವೆ.

    ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಸಲ್ಲಿಸಲಾದ ಎಫ್‌ಐಆರ್ ಪ್ರಕಾರ, ಗೊಂದಲದ ಸಮಯದಲ್ಲಿ ಒಂದು ಹಂತದಲ್ಲಿ 11 ಜನರ ಸಾವಿಗೆ ಕಾರಣವಾದ ಉದ್ದೇಶಪೂರ್ವಕ ಕೃತ್ಯಗಳಿಗೆ ವಿಜಯ್ ಅವರನ್ನೇ ಹೆಸರಿಸಲಾಗಿದೆ. ರಾಜಕೀಯ ಶಕ್ತಿಯನ್ನು ಪ್ರದರ್ಶಿಸಲು ಜಿಲ್ಲೆಗೆ ಬಂದ ನಂತರ ವಿಜಯ್ ಉದ್ದೇಶಪೂರ್ವಕವಾಗಿ ನಾಲ್ಕು ಗಂಟೆ ತಡವಾಗಿ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಇದರಿಂದಾಗಿ ಜನಸಂದಣಿಯಲ್ಲಿ ಅಶಾಂತಿ ಮತ್ತು ಅನಿಯಂತ್ರಿತ ಪರಿಸ್ಥಿತಿ ಉಂಟಾಯಿತು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದನ್ನೂ ಓದಿ: TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

    ಅಧಿಕಾರಿಗಳು ವಿಧಿಸಿದ ಷರತ್ತುಗಳನ್ನು ಉಲ್ಲಂಘಿಸಿ ವಿಜಯ್ ಅನುಮತಿಯಿಲ್ಲದೆ ರೋಡ್ ಶೋ ನಡೆಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಟಿವಿಕೆಯ ಇತರ ಹಿರಿಯ ನಾಯಕರು ಪದೇ ಪದೇ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

  • ಕಾಲ್ತುಳಿತಕ್ಕೆ ಪೊಲೀಸರು ಹೊಣೆ – ಪತ್ರ ಬರೆದು ವಿಜಯ್‌ ಅಭಿಮಾನಿ, ಟಿವಿಕೆ ಕಾರ್ಯಕರ್ತ ಆತ್ಮಹತ್ಯೆ

    ಕಾಲ್ತುಳಿತಕ್ಕೆ ಪೊಲೀಸರು ಹೊಣೆ – ಪತ್ರ ಬರೆದು ವಿಜಯ್‌ ಅಭಿಮಾನಿ, ಟಿವಿಕೆ ಕಾರ್ಯಕರ್ತ ಆತ್ಮಹತ್ಯೆ

    ಚೆನ್ನೈ: ವಿಜಯ್ (Vijay) ಅವರ ಕರೂರ್‌ ರಾಜಕೀಯ ರ‍್ಯಾಲಿಯಲ್ಲಿ ನಡೆದ ಭೀಕರ ಕಾಲ್ತುಳಿತ (Karur Stampede) ದುರಂತ ಸಂಭವಿಸಿದ ಎರಡು ದಿನಗಳ ನಂತರ ಪಕ್ಷದ ಕಾರ್ಯಕರ್ತ ಆತ್ಮಹತ್ಯೆಗೆ (Suicide) ಶರಣಾಗಿದ್ದಾನೆ.

    ತಮಿಳಗ ವೆಟ್ರಿ ಕಳಗಂ (TVK) ವಿರ್ಪಟ್ಟು ಗ್ರಾಮ ಶಾಖೆಯ ಕಾರ್ಯದರ್ಶಿ ಅಯ್ಯಪ್ಪನ್ (52) ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

     

    ಈ ಭೀಕರ ಘಟನೆಯಿಂದ ತನಗೆ ನೋವಾಗಿದೆ ಎಂದು ಭಾವನಾತ್ಮಕವಾಗಿ ಪತ್ರ ಬರೆದಿರುವ ಅವರು, ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರುವುದರ ಜೊತೆಗೆ ಪೊಲೀಸರು ಸೂಕ್ತ ವ್ಯವಸ್ಥೆಗಳನ್ನು ಒದಗಿಸಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ:  TVK Vijay Rally Stampede | ದುರಂತದಲ್ಲಿ 2 ವರ್ಷದ ಕಂದಮ್ಮ ಬಲಿ – ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

    ಮಾಹಿತಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪತ್ರವನ್ನು ವಶಪಡಿಸಿಕೊಂಡು, ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಲ್ಲುಪುರಂನ ಮುಂಡಿಯಂಬಕ್ಕಂ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

  • TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

    TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

    – ಸಿಬಿಐ ತನಿಖೆಗೆ ಆಗ್ರಹಿಸಿ ಕೋರ್ಟ್‌ ಮೆಟ್ಟಿಲೇರಿದ್ದ ನಟ ವಿಜಯ್‌ & ಟೀಂ

    ಚೆನ್ನೈ: ಕರೂರು ರಾಜಕೀಯ ರ‍್ಯಾಲಿವೇಳೆ ಸಂಭವಿಸಿದ ಕಾಲ್ತುಳಿತ ದುರಂತದ (TVK Vijay Rally Stampede) ಬಗ್ಗೆ ಸ್ವತಂತ್ರ ತನಿಖೆ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್‌ ದಳಪತಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ ನಡೆಯಲಿದೆ.

    ವಿಜಯ್ ಅವರ ಪರವಾಗಿ ತಮಿಳಗ ವೆಟ್ರಿ ಕಳಗಂ ಪಕ್ಷದ ಕಾನೂನು ತಂಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮದ್ರಾಸ್‌ ಹೈಕೋರ್ಟ್‌ನಲ್ಲಿ ನಡೆಯಲಿದೆ. ಈ ನಡುವೆ ರ‍್ಯಾಲಿಗಳಿಗೆ ಇನ್ಮುಂದೆ ಪ್ರೋಟೋಕಾಲ್‌ ತಯಾರಿಸುವವರೆಗೆ ನಟ ವಿಜಯ್‌ ರ‍್ಯಾಲಿಗೂ ಅನುಮತಿ ನೀಡದಂತೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯೂ ಇಂದೇ ವಿಚಾರಣೆಗೆ ಬರುವ ಸಾಧ್ಯತೆ. ಇದನ್ನೂ ಓದಿ: Vijay Rally Stampede | ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ – ಬಿಗಿ ಭದ್ರತೆ

    ಈ ಕುರಿತು ಮಾತನಾಡಿರುವ ಟಿವಿಕೆ ಪಕ್ಷದ ವಕೀಲ ಅರಿವಳಗನ್‌, ಕರೂರಿನಲಿ ನಡೆದ ಘಟನೆ ಹಿಂದೆ ಕ್ರಿಮಿನಲ್‌ ಪಿತೂರಿ ಇದೆ. ಆದ್ದರಿಂದ ನಾವು ರಾಜಕೀಯ ಸಂಸ್ಥೆಯ ಮೂಲಕ ತನಿಖೆ ಮಾಡೋದು ಬೇಡ. ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದೇವೆ. ನ್ಯಾಯಾಲಯವೇ ವಿಶೇಷ ತನಿಖಾ ತಂಡವನ್ನ ರಚಿಸಬೇಕು. ಇಲ್ಲದಿದ್ದರೆ ಪ್ರಕರಣವನ್ನ ಸಿಬಿಐಗೆ ವಹಿಸಬೇಕು ಅಂತ ಆಗ್ರಹಿಸಿದ್ದಾರೆ,

    ಸಾವಿನ ಸಂಖ್ಯೆ ಏರಿಕೆ
    ಇನ್ನೂ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕರೂರು ಸರ್ಕಾರಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಶಾರದಾ ಮೃತಪಟ್ಟಿದ್ದಾರೆ. ಇದನ್ನೂ ಓದಿ: TVK Vijay Rally Stampede | ದುರಂತದಲ್ಲಿ 2 ವರ್ಷದ ಕಂದಮ್ಮ ಬಲಿ – ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

    ಸಿಸಿಟಿವಿ, ಡ್ರೋನ್‌ ವಿಡಿಯೋ ಪರಿಶೀಲನೆ
    ಈಗಾಗಲೇ ಪ್ರಕರಣ ದಾಖಲಿಸಿಕೊಂಡು ಪ್ರಾಥಮಿಕ ತನಿಖೆ ಆರಂಭಿಸಿರುವ ಪೊಲೀಸರು ಕಾಲ್ತುಳಿತದ ಸ್ಥಳದಲ್ಲಿರುವ ಎಲ್ಲಾ ಸಿಸಿಕ್ಯಾಮರಾ, ಡ್ರೋನ್ ವಿಡಿಯೋ ಹಾಗೂ ಮೊಬೈಲ್‌ಗಳಲ್ಲಿ ರೆಕಾರ್ಡ್ ಮಾಡಿದ್ದ ವಿಡಿಯೋಗಳನ್ನ ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ.

  • Vijay Rally Stampede | ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ – ಬಿಗಿ ಭದ್ರತೆ

    Vijay Rally Stampede | ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ – ಬಿಗಿ ಭದ್ರತೆ

    ಚೆನ್ನೈ: ಕರೂರಿನ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ (TVK Vijay Rally Stampede) ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ ಬಂದಿದೆ.

    ಚೆನ್ನೈನಲ್ಲಿರುವ ತಮ್ಮ ನಿವಾಸಕ್ಕೆ ಬಾಂಬ್‌ ಬೆದರಿಕೆ ಬಂದ ಬೆನ್ನಲ್ಲೇ ಸ್ಥಳೀಯ ಚೆನ್ನೈ ನಗರ ಮತ್ತು ಸಿಆರ್‌ಪಿಎಫ್ (CRPF) ಸಿಬ್ಬಂದಿಯನ್ನ ಮನೆಯ ಸುತ್ತಲೂ ನಿಯೋಜಿಸಲಾಗಿದೆ. ಕಾಲ್ತುಳಿತದಲ್ಲಿ ಸಾವು ನೋವು ಸಂಭವಿಸಿದ ಹಿನ್ನೆಲೆ ಶನಿವಾರ ಮಧ್ಯರಾತ್ರಿಯಿಂದಲೇ ವಿಜಯ್‌ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ಬೆದರಿಕೆ ಬಂದ ಹಿನ್ನೆಲೆ ಶ್ವಾನದಳ ಹಾಗೂ ಬಾಂಬ್‌ ನಿಷ್ಕ್ರಿಯ ದಳಗಳಿಂದ ಮನೆಯ ಸುತ್ತಲೂ ಹಾಗೂ ಮನೆಯ ಒಳಾಂಗಣವನ್ನ ಪರಿಶೀಲನೆ ಮಾಡಲಾಗಿದೆ.

    ದುರಂತದ ಹೇಗಾಯ್ತು? ಆಮೇಲೆ ಏನಾಯ್ತು?
    ತಮಿಳುನಾಡು (Tamil Nadu) ರಾಜಕೀಯ ಪ್ರವೇಶಿಸಿರುವ ನಟ ದಳಪತಿ ವಿಜಯ್ ಕರೂರು ಜಿಲ್ಲಾ ಕೇಂದ್ರದ 2 ಕಿ.ಮೀ. ದೂರದ ವೇಲುಸ್ವಾಮಿಪುರಂನ ಹೆದ್ದಾರಿಯಲ್ಲಿ ಚುನಾವಣಾ ರ‍್ಯಾಲಿ ಹಮ್ಮಿಕೊಂಡಿದ್ದರು. ಶನಿವಾರ ರಾತ್ರಿ 7:15 ಸುಮಾರಿಗೆ ಏಕಾಏಕಿ ಕಾಲ್ತುಳಿತ ಸಂಭವಿಸಿತ್ತು. ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಪೈಕಿ 2 ವರ್ಷದ ಮಗು ಸೇರಿ 10 ಮಕ್ಕಳು, 17 ಮಹಿಳೆಯರೂ ಸೇರಿದ್ದಾರೆ. ಮೃತ 28 ಜನ ಕರೂರು ಜಿಲ್ಲೆಯವರಾಗಿದ್ದರೆ ಉಳಿದವರು ಈರೋಡ್, ತಿರುಪುರ, ಧಾರಾಪುರಂ, ಸೇಲಂ ಜಿಲ್ಲೆಯವರಾಗಿದ್ದಾರೆ.

    ಎಲ್ಲಾ 40 ಜನರ ದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿಯೇ ಸಾವನ್ನಪ್ಪಿರೋದು ಅಂತ ದೃಢವಾಗಿದೆ. ಶವಗಳ ರಾಶಿ ನೋಡಿದ ಸಚಿವ ಅನ್ಬಿಲ್ ಮಹೇಶ್ ಕಣ್ಣೀರು ಹಾಕಿದರು. ಮೃತರಿಗೆ ವಿಜಯ್ 20 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಿಸಿದರೆ.. ಸಿಎಂ ಸ್ಟಾಲಿನ್ ಅವರು ಮೃತರಿಗೆ 10 ಲಕ್ಷ ಹಾಗೂ ಗಾಯಾಳುಗಳಿಗೆ 1 ಲಕ್ಷ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಕೂಡ ಮೃತರಿಗೆ 2 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ಪ್ರಕಟಿಸಿದ್ದಾರೆ. ತಮಿಳುನಾಡು ಬಿಜೆಪಿ ಕೂಡ 1 ಲಕ್ಷ ಪರಿಹಾರ ಪ್ರಕಟಿಸಿದೆ.

    ಕರೂರು ಕಾಲ್ತುಳಿದಲ್ಲಿ ಗಾಯಾಗಳುಗಳ ಸಂಖ್ಯೆ 150ಕ್ಕೆ ಏರಿದೆ. ಕರೂರು, ತಿರುಚ್ಚಿ ಸರ್ಕಾರಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗ್ತಿದೆ. ದುರ್ಘಟನೆ ಹಿನ್ನೆಲೆಯಲ್ಲಿ ಇಡೀ ಕರೂರು ಜಿಲ್ಲೆಯಲ್ಲಿ ವ್ಯಾಪಾರ-ವಹಿವಾಟುಗಳನ್ನು ವರ್ತಕರೇ ಸ್ವಯಂಪ್ರೇರಿತರಾಗಿ ಬಂದ್ ಮಾಡಿದ್ದರು. ಕಾಲ್ತುಳಿತ ಘಟನಾ ಸ್ಥಳವಾದ ಹೆದ್ದಾರಿಯಲ್ಲಿ ಚಪ್ಪಲಿ-ಶೂಗಳ ರಾಶಿ, ಹರಿದ ಬಟ್ಟೆಗಳು, ಮುರಿದು ಹೋಗಿರುವ ಮರದ ಕಂಬಗಳು, ನಜ್ಜುಗುಜ್ಜಾಗಿರುವ ನೀರಿನ ಬಾಟೆಲ್‌ಗಳ ರಾಶಿಯೇ ಕಂಡು ಬಂದಿತ್ತು.

    ಒಬ್ಬೊಬ್ಬರದ್ದೂ ಒಂದೊಂದು ಕಣ್ಣೀರ ಕಥೆ
    ಕರೂರು ವಿಜಯ್ ರ‍್ಯಾಲಿಯಲ್ಲಿ ಸಾವನ್ನಪ್ಪಿದ್ದವರದ್ದು ಒಬ್ಬೊಬ್ಬರದ್ದು ಒಂದೊಂದು ಕಣ್ಣೀರ ಕಥೆ. ನೆಚ್ಚಿನ ನಟನ ನೋಡಲು ಪತ್ನಿ ಕಣ್ಮರೆಯಾಗಿದೆ ಅಂತ ಇಡೀ ಕುಟುಂಬ ರಾತ್ರಿಯೆಲ್ಲಾ ಹುಡುಕಾಡಿದೆ. ಆದರೆ, ಬೆಳಗ್ಗೆ ಜಿಲ್ಲಾಡಳಿತದಿಂದ ಕರೆ ಬಂದಿತ್ತು. ಆತಂಕದಲ್ಲಿ ಹೋಗಿ ನೋಡಿದಾಗ ನನ್ನ ಹೆಂಡತಿ ಹೆಣವಾಗಿದ್ದಳು ಅಂತ ಕೈಮೇಲಿನ ಅಚ್ಚೆ ನೋಡಿ ಪತಿ ಗುರುತಿಸಿದ್ದಾರೆ. ಅಂದಹಾಗೆ, ದಂಪತಿಗೆ ಒಂದು ವರ್ಷದ ಮಗು ಇದ್ದು ತಾಯಿಯನ್ನು ಕಳೆದುಕೊಂಡಿದೆ. ಆಸ್ಪತ್ರೆ ಮುಂದೆ ತಮ್ಮವರ ಕಳೆದುಕೊಂಡ ಕುಟುಂಬಸ್ಥರು ಎದೆ ಬಡಿದುಕೊಂಡು ಗೋಳಾಡ್ತಿರೋದನ್ನು ನೋಡಿದ್ರೆ ಕರುಳು ಚುರ್ ಅನ್ನಿಸುತ್ತೆ. ಈ ಮಧ್ಯೆ, ಆಪ್ತರನ್ನು ಕಳೆದುಕೊಂಡ ಕುಟುಂಬವೊಂದು ವಿಜಯ್ ನಾಶವಾಗಿ ಹೋಗ್ತಾನೆ ಅಂತ ಹಿಡಿಶಾಪ ಹಾಕಿದೆ.

  • ವಿಜಯ್‌ ಅವರದ್ದು ಏನೂ ತಪ್ಪಿಲ್ಲ, ಪೊಲೀಸ್‌ ಇಂಟೆಲಿಜೆನ್ಸ್‌ ವಿಫಲವಾಗಿದೆ: ಅಣ್ಣಾಮಲೈ ಆರೋಪ

    ವಿಜಯ್‌ ಅವರದ್ದು ಏನೂ ತಪ್ಪಿಲ್ಲ, ಪೊಲೀಸ್‌ ಇಂಟೆಲಿಜೆನ್ಸ್‌ ವಿಫಲವಾಗಿದೆ: ಅಣ್ಣಾಮಲೈ ಆರೋಪ

    – ಕರೂರು ಕಾಲ್ತುಳಿತದಲ್ಲಿ ಮೃತರ ಕುಟುಂಬಸ್ಥರಿಗೆ ತಲಾ 1 ಲಕ್ಷ ಪರಿಹಾರ ಘೋಷಿಸಿದ ಬಿಜೆಪಿ ನಾಯಕ

    ಚೆನ್ನೈ: ನಟ, ರಾಜಕಾರಣಿ ವಿಜಯ್‌ (Vijay Thalapathy) ಚುನಾವಣಾ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 1 ಲಕ್ಷ ರೂ. ಪರಿಹಾರವನ್ನು ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ (Annamalai) ಘೋಷಿಸಿದ್ದಾರೆ.

    ಕಾರೂರು (Karur Stampede) ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಅಣ್ಣಾಮಲೈ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು. ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿದ್ದ ಜನರಿಗೆ ಸಾಂತ್ವನ ಹೇಳಿದರು.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಈ ಘಟನೆ ಬಗ್ಗೆ ತೀವ್ರ ನೋವಾಗಿದೆ. ಈವರೆಗೆ ತಮಿಳುನಾಡಿನಲ್ಲಿ ಈ ರೀತಿ ಘಟನೆ ನಡೆದಿರಲಿಲ್ಲ. ಈ ದುರಂತಕ್ಕೆ ನೇರ ಹೊಣೆ ಸ್ಥಳೀಯ ಪೊಲೀಸರು ಮತ್ತು ರಾಜ್ಯ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: TVK Vijay Rally Stampede | ದುರಂತದಲ್ಲಿ 2 ವರ್ಷದ ಕಂದಮ್ಮ ಬಲಿ – ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

    ಇದರಲ್ಲಿ ನಟ, ರಾಜಕಾರಣಿ ವಿಜಯ್ ಅವರದ್ದು ಏನು ತಪ್ಪು ಇಲ್ಲ. ಸಮಾರಂಭಕ್ಕೆ ಅನುಮತಿ ನೀಡಿದ್ದು ಸ್ಥಳೀಯ ಆಡಳಿತ ಮಂಡಳಿ. 10 ಸಾವಿರ ಜನ ಸೇರುತ್ತಾರೆ, ಅನುಮತಿ ಕೊಡಿ ಅಂತ ಕೇಳಿದ್ರು ಕೊಟ್ಟಿದ್ದೇವೆ ಅಂತ ಈಗ ಅಧಿಕಾರಿಗಳು ಹೇಳುತ್ತಿದ್ದಾರೆ. ಹಾಗಾದರೆ ಪೊಲೀಸರ ಇಂಟಲಿಜೆನ್ಸ್ ವಿಫಲ ಆಗಿದೆಯಾ? ಪೊಲೀಸರಿಗೆ ಗೊತ್ತಿಲ್ಲವಾ ಅವರು ಒಬ್ಬ ಐಕಾನ್ ಸ್ಟಾರ್ ಅಂತ? ಇಲ್ಲಿನ ಡಿಸಿ ಮತ್ತು ಎಸ್‌ಪಿಯನ್ನು ಅಮಾನತು ಮಾಡಬೇಕು. ಅದರೆ, ಅದನ್ನು ರಾಜ್ಯ ಸರ್ಕಾರ ಮಾಡಿಲ್ಲ ಎಂದು ಕಿಡಿಕಾರಿದರು.

    ಕರ್ನಾಟಕದಲ್ಲಿ ಆರ್‌ಸಿಬಿ ವಿಚಾರವಾಗಿ ಒಂದು ಘಟನೆ ನಡೆದಿತ್ತು. ಅಲ್ಲಿಯೂ ಕೂಡ ರಾಜ್ಯ ಸರ್ಕಾರದ ವಿಫಲತೆ ಇತ್ತು. ಅಲ್ಲಿ ಒನ್‌ ಮ್ಯಾನ್ ತನಿಖೆಗೆ ಆದೇಶ ನೀಡಲಾಗಿತ್ತು. ಅವರು ರಾಜ್ಯ ಸರ್ಕಾರದ ವಿರುದ್ಧ ರಿಪೋರ್ಟ್ ನೀಡಲು ಸಾಧ್ಯವಿಲ್ಲ. ಅದೇ ರೀತಿ ಇಲ್ಲಿ ಕೂಡ ಆಗುತ್ತಿದೆ. ಈ ಪ್ರಕರಣವನ್ನು ಸಿಬಿಐಗೆ ಕೊಡಬೇಕು. ಸಿಬಿಐ ತನಿಖೆಯಲ್ಲಿ ಗೊತ್ತಾಗುತ್ತೆ, ಇದು ಯಾರಾದ್ರು ಹೇಳಿ ಮಾಡಿಸಿದ್ದ ಅಂತ. ಜನಸಂದಣಿಯಲ್ಲಿ ಯಾರದ್ರು ಕುಮ್ಮಕ್ಕು ಕೊಟ್ರ ಎಂಬ ಎಲ್ಲಾ ಮಾಹಿತಿ ಹೊರ ಬರುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: ಕರೂರು ಕಾಲ್ತುಳಿತ – 39 ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

    ನಮ್ಮ ಪಕ್ಷದಿಂದ ಗ್ರೌಂಡ್ ಲೆವೆಲ್‌ನಲ್ಲಿ ಕೆಲಸ ಮಾಡುತ್ತಿದ್ದೇವೆ. ಮೃತ 40 ಜನರಿಗೂ ತಲಾ ಒಂದು ಲಕ್ಷ ಪರಿಹಾರ ನೀಡಲು ಬಿಜೆಪಿಯಿಂದ ತೀರ್ಮಾನ ಮಾಡಲಾಗಿದೆ. ಒಂದು ವಾರದಲ್ಲಿ ಮೃತರ ಎಲ್ಲರ ಮನೆಗೆ ತೆರಳಿ ನಾವು ಚೆಕ್‌ ತಲುಪಿಸುತ್ತೇವೆ ಎಂದರು.

  • TVK Vijay Rally Stampede | ದುರಂತದಲ್ಲಿ 2 ವರ್ಷದ ಕಂದಮ್ಮ ಬಲಿ – ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

    TVK Vijay Rally Stampede | ದುರಂತದಲ್ಲಿ 2 ವರ್ಷದ ಕಂದಮ್ಮ ಬಲಿ – ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

    – ನಿತ್ರಾಣಗೊಂಡಿದ್ದ ಮಗುವನ್ನ ಆಸ್ಪತ್ರೆಗೆ ಹೊತ್ತು ತಂದಿದ್ದ ತಂದೆ; ಮಗು ಶವ ಹಿಡಿದು ಗೋಳಾಡಿದ ತಾಯಿ
    – ಸಾವಿನ ಸಂಖ್ಯೆ 40ಕ್ಕೆ ಏರಿಕೆ

    ಚೆನ್ನೈ: ಕಾಲ್ತುಳಿತದಲ್ಲಿ (Vijay Rally Stampede) ನಿತ್ರಾಣಗೊಂಡಿದ್ದ ಮಗುವನ್ನು ತಂದೆಯೊಬ್ಬರು ಬಿಗಿದಪ್ಪಿಕೊಂಡು ಆಸ್ಪತ್ರೆಗೆ ಓಡೋಡಿ ಬಂದಿದ್ದಾರೆ. ತನ್ನ ಉಸಿರು ಕೊಟ್ಟಾದ್ರೂ ಮಗುವನ್ನು ಉಳಿಸಿಕೊಳ್ಳಬೇಕೆಂಬ ಹಂಬಲದಲ್ಲಿದ್ದ ಮಗುವಿನ ಉಸಿರು ನಿಂತುಹೋಗಿದ್ದನ್ನು ಕಂಡು ಗೋಳಾಡಿದ್ದಾರೆ. ಇತ್ತ ಮಗುವಿನ ಸಾವು ಅರಗಿಸಿಕೊಳ್ಳಲಾದ ತಾಯಿ ಮಗುವಿನ ಮೃತದೇಹ ಅಪ್ಪಿ ಗೋಳಾಡಿದ್ದಾರೆ… ಈ ದೃಶ್ಯ ಕಂಡುಬಂದದ್ದು ತಮಿಳುನಾಡಿನ (TamilNadu) ಕರೂರಿನಲ್ಲಿ.

    ಹೌದು. ತಮಿಳುನಾಡಿನ ಕರೂರಿನಲ್ಲಿ (Karur) ನಡೆದ ಕಾಲ್ತುಳಿತ ಘೋರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಆದ್ರೆ ಈ ದುರಂತದಲ್ಲಿ 2 ವರ್ಷದ ಪುಟ್ಟ ಕಂದಮ್ಮ ಬಲಿಯಾಗಿರುವುದು ಕಟುಕರ ಕರುಳು ಸಹ ಹಿಂಡುವಂತಿತ್ತು. ಇದನ್ನೂ ಓದಿ: ಕರೂರು ಕಾಲ್ತುಳಿತ ದುರಂತ – ಮೃತರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಿಸಿದ ವಿಜಯ್

    ದುರಂತರದಲ್ಲಿ ಮೃತಪಟ್ಟ 40 ಜನರಲ್ಲಿ 10 ಮಂದಿ ಅಪ್ರಾಪ್ತರಿದ್ದಾರೆ. ಮಹಿಳೆಯರೂ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇನ್ನೂ ಕೆಲವರು 20-30 ವಯಸ್ಸಿನವರಿದ್ದಾರೆ ಎಂದು ತಿಳಿದುಬಂದಿದೆ. ಕಾಲ್ತುಳಿದ ದೃಶ್ಯಗಳು ಈಗಾಗಲೇ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಒಂದೆಡೆ ತಮ್ಮವರನ್ನ ಕಳೆದುಕೊಂಡವರ ಆಕ್ರಂದನ ಮುಗಿಲು ಮುಟ್ಟಿದೆ. ಮತ್ತೊಂದೆಡೆ ಮೃತದೇಹ ಪಡೆಯಲು ಶವಾಗಾರದ ಬಳಿ ಸಾಲುಗಟ್ಟಿ ನಿಂತಿದ್ದ ದೃಶ್ಯಗಳೂ ಕಂಡುಬಂದಿದೆ. ಇದನ್ನೂ ಓದಿ: Explainer | ಕುಂಭಮೇಳದಿಂದ ತಮಿಳುನಾಡು ದುರಂತದವರೆಗೆ – ದೇಶದ ಪ್ರಮುಖ ಕಾಲ್ತುಳಿತ ದುರಂತಗಳ ಪಟ್ಟಿ ಇಲ್ಲಿದೆ

    ಮೃತಪಟ್ಟವರು ಯಾರು? ಯಾವ ವಯಸ್ಸಿನವರು?
    ಹೇಮಲತಾ (8), ಸೈಲೆತ್ಸನಾ (8), ಸಾಯಿ ಜೀವ (4), ಧುರು ವಿಷ್ಣು (2), ಸನೂಜ್ (13), ಧರಣಿಕಾ (14), ಪಝನಿಯಮ್ಮಾಳ್ (11), ಕೋಕಿಲಾ (14), ಕೃತಿಕ್ (7) ಮತ್ತು ಕಿಶೋರ್ (17), ತಾಮರೈಕಣ್ಣನ್ (25), ಸುಕನ್ಯಾ (33), ಆಕಾಶ್ (23), ಧನುಷ್‌ಕುಮಾರ್ (24), ವಡಿವಳಗನ್ (54), ರೇವತಿ (52), ಚಂದ್ರ (40), ರಮೇಶ್ (32), ರವಿಕೃಷ್ಣನ್ (32), ಪ್ರಿಯದರ್ಶಿನಿ (35), ಮಹೇಶ್ವರಿ (45), ಮಾಲತಿ (36), ಸುಮತಿ (53), ಸಮತಿಕುಮಾರ್ (53), ಸಮತಿಕುಮಾರ್ (53) (26), ಶಂಕರ ಗಣೇಶ್ (45), ವಿಜಯರಾಣಿ (42), ಗೋಕುಲಪ್ರಿಯ (28), ಫಾತಿಮಾ ಬಾನು (29), ಜಯ (55), ಅರುಕ್ಕಣಿ (60) ಮತ್ತು ಜಯಂತಿ (43).

    ಕಾಲ್ತುಳಿತ ಸಂಭವಿಸಿದ್ದು ಏಕೆ?
    ಕಾಲಿವುಡ್ ಸೂಪರ್ ಸ್ಟಾರ್ ಕಮ್ ರಾಜಕಾರಣಿ ದಳಪತಿ ವಿಜಯ್ ತಮಿಳುನಾಡಿನ ರಾಜಕೀಯದಲ್ಲಿ ಭವಿಷ್ಯ ಕಂಡುಕೊಳ್ಳಲು ಮುಂದಾಗಿದ್ದಾರೆ. ಅದಕ್ಕಾಗಿ 2026ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಿದ್ದಾರೆ. ಅದರ ಮುಂದುವರಿದ ಭಾಗವಾಗಿ ಕರೂರಿನಲ್ಲಿ ತಮ್ಮ ತಮಿಳಿಗ ವೆಟ್ರಿ ಕಳಗಂ ಪಕ್ಷದ ರ‍್ಯಾಲಿ ಹಮ್ಮಿಕೊಂಡಿದ್ದರು. ವಿಜಯ್ ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿನಮಾನಿಗಳು, ಬೆಂಬಲಿಗರು ಸೇರಿದ್ದರು. ತಮ್ಮ ನಾಯಕನಿಗಾಗಿ ಸುಮಾರು 7 ಗಂಟೆಗಳಿಗೂ ಹೆಚ್ಚು ಕಾಲ ಕಾದು ಕುಳಿತಿದ್ದರು. ಆದ್ರೆ, ದಳಪತಿ ವಿಜಯ್ ಕಾರ್ಯಕ್ರಮದ ಸ್ಥಳಕ್ಕೆ ತಡವಾಗಿ ಆಗಮಿಸಿದ್ದರು.

    ಮಧ್ಯಾಹ್ನದ ಸುಡು ಬಿಸಿಲಿನಲ್ಲಿ ವಿಜಯ್ ಅವರಿಗಾಗಿ ಕಾಯುತ್ತಿದ್ದ ಅಭಿಮಾನಿಗಳು ಸುಸ್ತಿನಿಂದ ಬಳಲುತ್ತಿದ್ದರು. ಇನ್ನು ಇದೇ ವೇಳೆ 9 ವರ್ಷದ ಬಾಲಕಿ ಕಳೆದು ಹೋಗಿರ್ತಾಳೆ. ಆಗ ವಿಜಯ್ ಮೈಕ್ ಮೂಲಕ ಪೊಲೀಸರಿಗೆ ಮನವಿ ಮಾಡ್ತಾರೆ. ಮೈಕ್‌ನಲ್ಲಿ ಅನೌನ್ಸ್ ಮಾಡುತ್ತಲೇ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಉಸಿರಾಟದ ತೊಂದ್ರೆ ಅನುಭವಿಸಿದ ಜನರು ಮೂರ್ಛೆ ತಪ್ಪಿ ಬಿದ್ದಿದ್ದಾರೆ. ಅಂದ್ಹಾಗೆ ರ‍್ಯಾಲಿ ತಡವಾಗಿ ಸಂಜೆ ಆರಂಭವಾಗಿತ್ತು. ಹೀಗಾಗಿ ವಿಜಯ್ ನೋಡಲು ಫ್ಯಾನ್ಸ್ ಮುಗಿ ಬಿದ್ದಿದ್ರು. ಅಲ್ದೆ ರ‍್ಯಾಲಿ ವೇಳೆ ಕರೆಂಟ್ ತೆಗೆದಿದ್ದರಿಂದ ದುರಂತ ಸಂಭವಿಸಿದೆ. ಇದನ್ನೂ ಓದಿ: Vijay Rally Stampede | 10 ವರ್ಷದ ಬಾಲಕಿ ಸಾವನ್ನ ಕಣ್ಣಾರೆ ಕಂಡೆ – ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಬೆಂಗ್ಳೂರಿನ ಪ್ರತ್ಯಕ್ಷದರ್ಶಿ

    ಭಾಷಣ ಅರ್ಧಕ್ಕೆ ಮೊಟಕುಗೊಳಿಸಿದ ವಿಜಯ್
    ಒಂದು ಹಂತದಲ್ಲಿ ಪರಿಸ್ಥಿತಿ ಕೈಮೀರುತ್ತಿದ್ದಂತೆ, ನಟ ವಿಜಯ್ ತಮ್ಮ ಭಾಷಣವನ್ನ ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ. ನೂಕಾಟ, ತಳ್ಳಾಟ ಹೆಚ್ಚಾಗಿ ಉಸಿರುಗಟ್ಟಲು ಶುರುವಾಗಿದ್ದಂತೆ ನೀರಿನ ಬಾಟಲಿಗಳನ್ನು ಎಸೆದಿದ್ದಾರೆ. ಕೂಡಲೇ ಸ್ಥಳದಿಂದ ಕಾಲ್ತಿತ್ತರು. ಮೊದಲೇ ತಡವಾಗಿ ಆಗಮಿಸಿದ್ದ ವಿಜಯ್, ಸ್ಥಳಕ್ಕೆ ಬರುತ್ತಿದ್ದಂತೆ ತಳ್ಳಾಟ, ನೂಕಾಟ ಹೆಚ್ಚಾಗಿದೆ. ದುರಂತ ಬಳಿಕ ಬ್ಲಾಕ್ ಕಾರ್‌ನಲ್ಲಿ ತಿರುಚ್ಚಿ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡ ವಿಜಯ್ ಅಲ್ಲಿಂದ ಚೆನ್ನೈಗೆ ಎಸ್ಕೇಪ್ ಆಗಿದ್ರು.

    ಘಟನೆ ಸಂಬಂಧ ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದ್ದು, ಟಿವಿಕೆ ಕರೂರು ಜಿಲ್ಲಾ ಕಾರ್ಯದರ್ಶಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ. ಈ ನಟುವೆ ನಟ ವಿಜಯ್‌ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: Vijay Rally Stampede | ಮೃತಪಟ್ಟ 39 ಜನರಲ್ಲಿ 35 ಮಂದಿ ಮೃತದೇಹಗಳ ಗುರುತು ಪತ್ತೆ