Tag: TVS

  • 99,900 ರೂಪಾಯಿಗೆ TVS ಆರ್ಬಿಟರ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

    99,900 ರೂಪಾಯಿಗೆ TVS ಆರ್ಬಿಟರ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

    ಭಾರತದ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿ ಟಿವಿಎಸ್, ಇಂದು ‘ಟಿವಿಎಸ್ ಆರ್ಬಿಟರ್’ (TVS Orbiter) ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದೆ. ಇದರ ಬೆಲೆ ರೂ 99,900 (ಎಕ್ಸ್-ಶೋರೂಮ್, ಬೆಂಗಳೂರು; PM ಇ-ಡ್ರೈವ್ ಸ್ಕೀಮ್ ಸೇರಿದಂತೆ).

    ಆರ್ಬಿಟರ್ 3.1kWh ಬ್ಯಾಟರಿ ಪ್ಯಾಕ್‌ನೊಂದಿಗೆ ಮಾತ್ರ ಲಭ್ಯವಿದ್ದು, ಒಮ್ಮೆ ಚಾರ್ಜ್ ಮಾಡಿದರೆ 158km ಚಲಿಸುತ್ತದೆ ಎಂದು ಕಂಪನಿ ಹೇಳಿದೆ. ಆದರೆ ನಿಜವಾದ ರೇಂಜ್ ಸುಮಾರು 120 ಕಿಮೀ ನೀಡಬಹುದು. ಸ್ಕೂಟರ್‌ನ ಗರಿಷ್ಠ ವೇಗವನ್ನು ಗಂಟೆಗೆ 68 ಕಿ.ಮೀ.ಗೆ ಸೀಮಿತಗೊಳಿಸಲಾಗಿದೆ.

    ಟಿವಿಎಸ್ ಆರ್ಬಿಟರ್‌ಗೆ ಓಲಾ S1Z ಮತ್ತು ರಿವರ್ ಇಂಡೀ ಸ್ಕೂಟರ್‌ಗಳಲ್ಲಿ ನೀಡಿರುವಂತೆ 14-ಇಂಚಿನ ಮುಂಭಾಗದ ಚಕ್ರ ನೀಡಲಾಗಿದೆ. ಹಿಂಭಾಗದ ಚಕ್ರ 12 ಇಂಚಿದೆ. ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಓವರ್-ದಿ-ಏರ್ ಅಪ್‌ಡೇಟ್‌ಗಳು, ಆಂಟಿ-ಥೆಫ್ಟ್, ಕ್ರ್ಯಾಶ್ ಮತ್ತು ಜಿಯೋ-ಫೆನ್ಸಿಂಗ್ ಒಳಗೊಂಡ ಸುರಕ್ಷತಾ ಎಚ್ಚರಿಕೆಗಳನ್ನು ಕನೆಕ್ಟೆಡ್ ಆಪ್ ಮೂಲಕ ಪಡೆಯಬಹುದಾಗಿದೆ. ಈಕೋ ಮತ್ತು ಪವರ್ ಮೋಡ್‌ಗಳು, ಹಿಲ್-ಹೋಲ್ಡ್ ಅಸಿಸ್ಟ್, ಪಾರ್ಕಿಂಗ್ ಅಸಿಸ್ಟ್ (ರಿವರ್ಸ್ ಫಂಕ್ಷನ್) ಮತ್ತು ಕ್ರೂಸ್ ಕಂಟ್ರೋಲ್‌ನಂತಹ ವೈಶಿಷ್ಟ್ಯಗಳನ್ನು ಈ ಸ್ಕೂಟರ್‌ ಹೊಂದಿದೆ.

    ಆರ್ಬಿಟರ್‌ನಲ್ಲಿ ಹ್ಯಾಂಡಲ್‌ಬಾರ್-ಮೌಂಟೆಡ್ LED ಹೆಡ್‌ಲ್ಯಾಂಪ್, LED ಲೈಟ್ ಸ್ಟ್ರಿಪ್‌, ಎರಡು ಹೆಲ್ಮೆಟ್‌ಗಳನ್ನು ಇಡಬಹುದಾದ 34-ಲೀಟರ್ ಅಂಡರ್ ಸೀಟ್ ಸ್ಟೋರೇಜ್, ವಿಶಾಲವಾದ 290 ಎಂಎಂ ಫ್ಲಾಟ್ ಫ್ಲೋರ್‌ಬೋರ್ಡ್, ಮುಂತಾದ ವೈಶಿಷ್ಟ್ಯಗಳನ್ನು ನೀಡಲಾಗಿದೆ. ಆರ್ಬಿಟರ್ ನಿಯಾನ್ ಸನ್ ಬರ್ಸ್ಟ್, ಸ್ಟ್ರಾಟೋಸ್ ಬ್ಲೂ, ಲೂನಾರ್ ಗ್ರೇ, ಮಾರ್ಟಿಯನ್ ಕಾಪರ್, ಕಾಸ್ಮಿಕ್ ಟೈಟಾನಿಯಂ ಮತ್ತು ಸ್ಟೆಲ್ಲಾರ್ ಸಿಲ್ವರ್ ಎಂಬ ಆರು ಬಣ್ಣಗಳಲ್ಲಿ ಲಭ್ಯವಿದೆ.

  • ಮದ್ವೆಗೆ ಟಿವಿಎಸ್‍ನಲ್ಲಿ ಹೋಗ್ತಿದ್ದಾಗ ಖಾಸಗಿ ಬಸ್ ಡಿಕ್ಕಿ – ಓರ್ವ ದುರ್ಮರಣ

    ಮದ್ವೆಗೆ ಟಿವಿಎಸ್‍ನಲ್ಲಿ ಹೋಗ್ತಿದ್ದಾಗ ಖಾಸಗಿ ಬಸ್ ಡಿಕ್ಕಿ – ಓರ್ವ ದುರ್ಮರಣ

    ಮಂಡ್ಯ: ಮದುವೆಗೆ ಹೋಗುತ್ತಿದ್ದ ವೇಳೆ ಖಾಸಗಿ ಬಸ್ಸೊಂದು ಟಿವಿಎಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದಿದೆ.

    ಮೃತ ದುರ್ದೈವಿ ಸ್ಕೂಟರ್ ಸವಾರನನ್ನು ಹೆಬ್ಬಣಿ ಗ್ರಾಮದ ಮಹದೇವಪ್ಪ(55) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೃತರ ತಮ್ಮನ ಮಗಳು ಸಿಂಚನಾ(11) ಮತ್ತು ಮೊಮ್ಮಗಳು ಮೌಲ್ಯ(13) ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆಂದು ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

    ಮದುವೆ ಸಮಾರಂಭಕ್ಕೆಂದು ಮಳವಳ್ಳಿಗೆ ಬರುತ್ತಿದ್ದ ವೇಳೆ ಪಂಡಿತಹಳ್ಳಿಯ ಶಿಂಷಾ ತಿರುವಿನಲ್ಲಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಇನ್ನು ಘಟನೆಯಲ್ಲಿ ಮೃತಪಟ್ಟ ಮಹದೇವಪ್ಪ ಅವ್ರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡ್ಬೇಕು. ಜೊತೆಗೆ ನಿಯಮ ಮೀರಿ ವೇಗವಾಗಿ ಚಲಿಸುವ ಖಾಸಗಿ ಬಸ್ ಗಳ ಚಾಲಕರ ವಿರುದ್ಧ ಕ್ರಮ ವಹಿಸ್ಬೇಕು ಅಂತಾ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

    ಸ್ಥಳಕ್ಕೆ ಶಾಸಕ ನರೇಂದ್ರ ಸ್ವಾಮಿ ಭೇಟಿ ನೀಡಿದ್ರು. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬೆಂಗಳೂರು-ಮೈಸೂರು ಹೆದ್ದಾರಿಯ ಟಿ.ಎಂ.ಹೊಸೂರು ಗೇಟ್ ಬಳಿ ನಿನ್ನೆ ತಡರಾತ್ರಿಯಷ್ಟೇ ಸಿನಿಮೀಯ ರೀತಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ನಾಲ್ಕು ಪಲ್ಟಿ ಹೊಡೆದು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಮೂವರು ಅಪಘಾತಕ್ಕೆ ಬಲಿಯಾಗಿದ್ದಾರೆ.