Tag: tweet

  • ಅಫ್ಘಾನಿಸ್ತಾನಕ್ಕೆ ನಮ್ಮ ನೆರವು ಬೇಕಿದೆ: ಸೋನುಸೂದ್

    ಅಫ್ಘಾನಿಸ್ತಾನಕ್ಕೆ ನಮ್ಮ ನೆರವು ಬೇಕಿದೆ: ಸೋನುಸೂದ್

    ಮುಂಬೈ: ಅಫ್ಘಾನಿಸ್ತಾನದ ಸ್ಥಿತಿಗೆ ಮರುಗಿದ ಬಾಲಿವುಡ್ ನಟ ಸೋನು ಸೂದ್ ಅವರಿಗೆ ನಮ್ಮ ನೆರವು ಬೇಕಿದೆ ಎಂದಿದ್ದಾರೆ.

    ಅಫ್ಘಾನಿಸ್ತಾನದ ಜನರಿಗೆ ಹಾಗೂ ಅಲ್ಲಿ ನೆಲಸಿರುವ ಭಾರತೀಯರ ನೆರವಿಗೆ ನಾವೆಲ್ಲರೂ ಧಾವಿಸಬೇಕು. ಅಫ್ಘಾನಿಸ್ತಾನ ಜನ ಈಗ ಅಕ್ಷರಶಃ ಬೀದಿಗೆ ಬಂದಿದ್ದಾರೆ. ಅಫ್ಘಾನಿಯರಿಗೆ ಕೆಲಸ ಮತ್ತು ಮನೆ ನೀಡುವ ಮೂಲಕ ಅವರ ನೆರವಿಗೆ ಧಾವಿಸಬೇಕು ಎಂದು ಮನವಿ ಮಾಡಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಬರುವ ಅಫ್ಘಾನ್ನರಿಗೆ ತಾತ್ಕಾಲಿಕ ವೀಸಾ ವ್ಯವಸ್ಥೆ

    ಅಫ್ಘಾನ್‍ನಲ್ಲಿರುವ ಭಾರತೀಯರ ಪರವಾಗಿ ಸಹ ಧ್ವನಿ ಎತ್ತಿರುವ ಸೋನುಸೂದ್ ಅಫ್ಘಾನಿಸ್ತಾನದಲ್ಲಿ ನೆಲಸಿರುವ ಭಾರತೀಯರು ಸಹ ಈಗ ನಿರಾಶ್ರಿತರಾಗಿದ್ದಾರೆ. ಅವರ ಬದುಕನ್ನು ಕಟ್ಟಿಕೊಳ್ಳಲು ನಾವೆಲ್ಲ ಸಹಾಯ ಮಾಡಬೇಕು. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಅವರಿಗೆ ನಮ್ಮ ಅವಶ್ಯಕತೆಯಿದೆ ಎಂದು ಸೋನುಸೂದ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಇನ್ನಿಲ್ಲ

    ಅಫ್ಘಾನ್ ನಲ್ಲಿ ನಡೆಯುತ್ತಿರೋ ನರಮೇಧದಿಂದ ಹೈರಾಣಾಗಿರೋ ಅಫ್ಘಾನಿಸ್ತಾನದವರು ಭಾರತಕ್ಕೆ ಬರಲು ಇಚ್ಛಿಸುವವರಿಗೆ ಭಾರತದಿಂದ ತಾತ್ಕಾಲಿಕ ವೀಸಾದ ವ್ಯವಸ್ಥೆಯನ್ನ ಕಲ್ಪಿಸಲಾಗುತ್ತಿದೆ. ಕರ್ನಾಟದಲ್ಲಿರೋ ಅಪ್ಘಾನ್ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಸರ್ಕಾರ ಹೆಲ್ಪ್ ಡೆಸ್ಕ್ ವ್ಯವಸ್ಥೆ ಮಾಡಿದೆ.

    ಈ ಹೆಲ್ಪ್ ಡೆಸ್ಕ್ ಗೆ ನಿರಂತರವಾಗಿ ವಿದ್ಯಾರ್ಥಿಗಳು ಕರೆ ಮಾಡಿ ನಮ್ಮ ಪೋಷಕರನ್ನ ಭಾರತ ಹಾಗೂ ಬೆಂಗಳೂರಿಗೆ ಕರಿಸಿಕೊಡುವಂತೆ ಮನವಿ ಮಾಡುತ್ತಿದ್ದರು. ಆ ಕಾರಣಕ್ಕಾಗಿ ತಾತ್ಕಾಲಿಕ ವೀಸಾ ಆನ್‍ಲೈನ್ ನಲ್ಲಿ ವೆಬ್‍ಸೈಟ್ ಮೂಲಕ ಅಪ್ಲೈ ಮಾಡಿ ತಾತ್ಕಾಲಿಕ ವೀಸಾ ಪಡೆದುಕೊಳ್ಳಲುವಂತೆ ಸಲಹೆ ಸೂಚನೆಯನ್ನ ಎಡಿಜಿಪಿ ಉಮೇಶ್ ಕುಮಾರ್ ತಿಳಿಸಿದ್ದಾರೆ.

  • ಪ್ರಭಾಸ್ ಜೊತೆ ನಟಿಸ್ತಿದ್ದಾರಾ ಅಮಿತಾಬ್ ಬಚ್ಚನ್?

    ಪ್ರಭಾಸ್ ಜೊತೆ ನಟಿಸ್ತಿದ್ದಾರಾ ಅಮಿತಾಬ್ ಬಚ್ಚನ್?

    ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ನಟ ಬಾಹುಬಲಿ ಪ್ರಭಾಸ್ ಜೊತೆ ಹೊಸ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿ ಇದೀಗ ಬಿ-ಟೌನ್‍ನಲ್ಲಿ ಹರಿದಾಡುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಅಮಿತಾಬ್ ಬಚ್ಚನ್ ಶುಕ್ರವಾರ ಟ್ವೀಟ್ ಮಾಡಿದ್ದು, ಈ ಟ್ವೀಟ್ ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

    ಹೌದು, ಬಿಗ್-ಬಿ ಅಮಿತಾಬ್ ಬಚ್ಚನ್ ಶುಕ್ರವಾರ ಹೊಸ ಸಿನಿಮಾದ ಮುಹೂರ್ತವೊಂದಕ್ಕೆ ಹಾಜರಾಗಿದ್ದು, ಈ ಕುರಿತಂತೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಹೊಸ ಸಿನಿಮಾದ ಮುಹೂರ್ತ ಕಾರ್ಯಕ್ರಮಕ್ಕೆ ಪ್ರಯಾಣಿಸಿದೆ. ಹೊಸ ಸಿನಿಮಾ, ಹೊಸ ಆರಂಭ, ಹೊಸ ವಾತಾವರಣ, ಹೊಸತು ಯಾವಾಗಲೂ ಉತ್ಸಾಹ ತುಂಬುತ್ತದೆ. ಹೊಸತು ಎಂಬುದು ಹಳತಾಗುವುದಿಲ್ಲ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

    ಸದ್ಯ ಸಲಾರ್ ಹಾಗೂ ಅವತಾರ ಪುರುಷ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟ ಪ್ರಭಾಸ್ ಈ ಸಿನಿಮಾಗಳ ನಂತರ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೊತೆ ಹೊಸ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್ ಕೂಡ ಅಭಿನಯಿಸಲಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಈ ಚಿತ್ರದ ಮುಹೂರ್ತ ಶುಕ್ರವಾರ ನಡೆದಿದ್ದು, ಅಮಿತಾಬ್ ಬಚ್ಚನ್ ಈ ಸಿನಿಮಾದ ಮುಹೂರ್ತ ಕಾರ್ಯಕ್ರಮಕ್ಕೆ ಹೋಗಿದ್ದರು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಕುಟುಂಬ ಸಮೇತರಾಗಿ ಈ ಸಿನಿಮಾ ನೋಡಿ: ಶಿಲ್ಪಾ ಶೆಟ್ಟಿ

  • ಬದುಕಿದ್ದಾಗಲೇ ಸತ್ತಿದ್ದಾರೆ ಅಂದ ಯೂಟ್ಯೂಬ್ ಚಾನೆಲ್ – ನಟ ಸಿದ್ಧಾರ್ಥ್ ಗರಂ

    ಬದುಕಿದ್ದಾಗಲೇ ಸತ್ತಿದ್ದಾರೆ ಅಂದ ಯೂಟ್ಯೂಬ್ ಚಾನೆಲ್ – ನಟ ಸಿದ್ಧಾರ್ಥ್ ಗರಂ

    ಚೆನ್ನೈ: ಕಾಲಿವುಡ್‍ನ ಖ್ಯಾತ ನಟ ಸಿದ್ಧಾರ್ಥ್ ನಿಧನರಾಗಿದ್ದಾರೆ ಎಂದು ಇತ್ತೀಚೆಗಷ್ಟೆ ಯೂಟ್ಯೂಬ್ ಚಾನೆಲ್‍ವೊಂದು ವರದಿಮಾಡಿತ್ತು. ಈ ಕುರಿತಂತೆ ಇದೀಗ ಸಿದ್ಧಾರ್ಥ್‍ರವರು ಪ್ರತಿಕ್ರಿಯೆ ನೀಡಿದ್ದಾರೆ.

    ಚಿಕ್ಕವಯಸ್ಸಿನಲ್ಲಿಯೇ ಮೃತಪಟ್ಟ ದಕ್ಷಿಣ ಭಾರತದ ಖ್ಯಾತ ನಟ, ನಟಿಯರ ಸಾಲಿನಲ್ಲಿ ಸಿದ್ದಾರ್ಥ್ ಫೋಟೋವನ್ನು ಕೂಡ ಸೇರಿಸಿ ಯೂಟ್ಯೂಬ್ ಸುದ್ದಿಯೊಂದನ್ನು ಪ್ರಕಟಿಸಿತ್ತು. ಅಲ್ಲದೇ ಸಿದ್ದಾರ್ಥ್ ನಿಧನರಾಗಿದ್ದಾರೆ ಎಂಬ ಸುದ್ದಿ ಕೇಳಿ ಫ್ಯಾನ್ಸ್ ಕೂಡ ಗಾಬರಿಯಾಗಿದ್ದರು.

    ಈ ವಿಚಾರ ತಿಳಿದು ಸಿದ್ಧಾರ್ಥ್‍ರವರು ಯೂಟ್ಯೂಬ್‍ಗೆ ರಿಪೋರ್ಟ್ ಮಾಡಿರುವ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಲವು ವರ್ಷಗಳ ಹಿಂದೆಯೇ ನಾನು ಈ ವೀಡಿಯೋ ಬಗ್ಗೆ ಯೂಟ್ಯೂಬ್‍ಗೆ ರಿಪೋರ್ಟ್ ಮಾಡಿದ್ದೆ. ಆದರೆ ಯೂಟ್ಯೂಬ್ ತಂಡ ಕ್ಷಮಿಸಿ ಈ ವೀಡಿಯೋದಲ್ಲಿ ನಮಗೆ ಯಾವುದೇ ಸಮಸ್ಯೆ ಕಾಣಿಸುತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದರು. ಇದನ್ನು ಕಂಡು ನಾನು ಎಲಾ ಇವರಾ.. ಎಂದು ಕೊಂಡಿದ್ದೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

    ತೆಲುಗಿನ ಬೊಮ್ಮರಿಲ್ಲು, ನೂವು ವಸ್ತಾನಂಟೆ ನೇನೊದ್ದಾಂಟಾನಾ, ಆಟ ಹಾಗೂ ತಮಿಳಿನ ಜಿಗರ್ ತಾಂಡ, ಬಾಯ್ಸ್, ಓ ಮೈ ಫ್ರೆಂಡ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಬಾಲಿವುಡ್ ನಟ ಅಮೀರ್ ಖಾನ್ ಜೊತೆ ‘ರಂಗ್ ದೇ ಬಸಂತಿ’ ಸಿನಿಮಾದಲ್ಲಿ ಕೂಡ ಸ್ಕ್ರೀನ್ ಶೇರ್ ಮಾಡಿದ್ದರು. ಈ ಸಿನಿಮಾ ಬಾಲಿವುಡ್‍ನಲ್ಲಿ ಸಖತ್ ಸದ್ದು ಮಾಡಿತ್ತು. ಇದನ್ನೂ ಓದಿ: ಪ್ರಿಯಾಂಕಾಗೆ ಅಶ್ಲೀಲ ಸನ್ನೆ – ಚಕ್ರವರ್ತಿ ವಿರುದ್ಧ ವೀಕ್ಷಕರು ಗರಂ

  • ಕೊನೆಗೂ ಪೆಟ್ರೋಲ್ ನೂರರ ಗಡಿ ಕ್ರಾಸ್ ಮಾಡ್ತು – ಸೈಕಲ್ ಏರಿದ ಸನ್ನಿ ಲಿಯೋನ್

    ಕೊನೆಗೂ ಪೆಟ್ರೋಲ್ ನೂರರ ಗಡಿ ಕ್ರಾಸ್ ಮಾಡ್ತು – ಸೈಕಲ್ ಏರಿದ ಸನ್ನಿ ಲಿಯೋನ್

    ಮುಂಬೈ: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪರೋಕ್ಷವಾಗಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು  ಮಾಡಿದ್ದಾರೆ.

    ದೇಶದಲ್ಲಿ ಪೆಟ್ರೋಲ್ ಬೆಲೆ 100ರ ಗಡಿ ದಾಟಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷ ನಾಯಕರು ಧ್ವನಿ ಎತ್ತಿದ್ದಾರೆ. ಅಲ್ಲದೇ ಹಲವಾರು ಸಂಘಟನೆಗಳು ಪ್ರತಿಭಟನೆ ನಡೆಸಿದೆ. ಸದ್ಯ ಪೆಟ್ರೋಲ್ ಬೆಲೆ ಏರಿಕೆ ಜನ ಸಾಮಾನ್ಯರ ಜೀವನದ ಮೇಲೆ ಬರೆ ಎಳೆದಂತಾಗಿದೆ. ಇಷ್ಟೆಲ್ಲ ಇದ್ದರೂ ಸೆಲೆಬ್ರೆಟಿಗಳು ಮಾತ್ರ ಈ ಬಗ್ಗೆ ಬಾಯಿ ಬಿಡದೇ ಗಪ್‍ಚುಪ್ ಆಗಿದ್ದಾರೆ. ಆದರೆ ಈ ಮಧ್ಯೆ ಬಾಲಿವುಡ್ ನಟಿ ಸನ್ನಿಲಿಯೋನ್ ಪೆಟ್ರೋಲ್ ಬೆಲೆ ದುಬಾರಿಯಾಗಿರುವುದನ್ನು ವಿರೋಧಿಸಿದ್ದಾರೆ.

    ಈ ಕುರಿತಂತೆ ಸನ್ನಿಲಿಯೋನ್ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದು, ಫೋಟೋದಲ್ಲಿ ಸೈಕಲ್ ಜೊತೆ ನಿಂತು ಪೋಸ್ ನೀಡಿದ್ದಾರೆ. ಅಲ್ಲದೇ, ಕೊನೆಗೂ 100ರ ಗಡಿ ದಾಟಿಯೇ ಬಿಟ್ಟಿತು. ನಿಮ್ಮ ಆರೋಗ್ಯವನ್ನು ನೀವು ಕಾಪಾಡಿಕೊಳ್ಳಿ ಎಂದು ಕ್ಯಾಪ್ಷನ್‍ನಲ್ಲಿ ಹಾಕಿದ್ದು, ಹೊಸ ಗ್ಲಾಮ್‍ನೊಂದಿಗೆ ಸೈಕಲ್ ಎಂದು ಹ್ಯಾಶ್‍ನಲ್ಲಿ ಬರೆದುಕೊಂಡಿದ್ದಾರೆ.

    ಇತ್ತೀಚೆಗಷ್ಟೇ ಸನ್ನಿ ಲಿಯೋನ್ ಕನ್ನಡದ ಕಾಟನ್ ಪೇಟೆ ಸಿನಿಮಾದ ಹಾಡೋದರಲ್ಲಿ ನೃತ್ಯ ಮಾಡಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದು, ಈ ಮುನ್ನ ಲವ್ ಯೂ ಅಲಿಯಾ ಸಿನಿಮಾದ ಕಾಮಾಕ್ಷಿ ಕಾಮಾಕ್ಷಿ.. ಹಾಗೂ ಡಿಕೆ ಸಿನಿಮಾದ ಸೆಸಮ್ಮ.. ಎಂಬ ಐಟಂ ಸಾಂಗ್‍ಗೆ ಹೆಜ್ಜೆಹಾಕಿದ್ದರು. ಇದನ್ನೂ ಓದಿ: ನನ್ನ ಮದುವೆಗೆ ಯಾರು ಬರಲ್ಲ ಅಂತೆ: ರಮ್ಯಾ

  • ಸಿದ್ದರಾಮಯ್ಯ ಅವರ ಪಾಕಿಸ್ತಾನ ಪ್ರೇಮ ಈ ಹಿಂದೆಯೇ ಪ್ರಕಟ – ಬಿಜೆಪಿ ಟೀಕೆ

    ಸಿದ್ದರಾಮಯ್ಯ ಅವರ ಪಾಕಿಸ್ತಾನ ಪ್ರೇಮ ಈ ಹಿಂದೆಯೇ ಪ್ರಕಟ – ಬಿಜೆಪಿ ಟೀಕೆ

    ಬೆಂಗಳೂರು: ಪಾಕಿಸ್ತಾನ ಸೈನಿಕರಿಂದ ಭಾರತೀಯ ಸೈನಿಕರ ಸಾವು ಬಯಸುವ ವ್ಯಕ್ತಿಗಳನ್ನು ಬೆಂಬಲಿಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸುವ ಮೂಲಕ ಕರ್ನಾಟಕ ಬಿಜೆಪಿ ಸಿದ್ದರಾಮಯ್ಯ ವಿರುದ್ಧ ಟೀಕೆ ಮಾಡಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಡೆಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದೆ.

    ಟ್ವೀಟ್ ನಲ್ಲಿ ಏನಿದೆ?
    ಕಾಂಗ್ರೆಸ್ ಕಾರ್ಯಕರ್ತರಾಗಲು ದೇಶ, ಸೈನಿಕರ ವಿರುದ್ಧದ ನಿಲುವು ಹೊಂದಿರುವುದು ಕಡ್ಡಾಯವೇ? ಪಾಕಿಸ್ತಾನ ಸೈನಿಕರು ನಮ್ಮ ಸೈನಿಕರನ್ನು ಕೊಲ್ಲಲಿ ಎಂದ ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ಕಾನೂನು ಕ್ರಮವನ್ನು ಕಾಂಗ್ರೆಸ್ ಖಂಡಿಸುತ್ತಿದೆ. ಈ ಮೂಲಕ ಪಾಕ್ ಮೇಲಿನ ತಮ್ಮ ನಿಷ್ಠೆಯನ್ನು ಕಾಂಗ್ರೆಸ್ ನಾಯಕರು ಸಾಬೀತುಪಡಿಸಿದ್ದಾರೆ.

    ಪಾಕಿಸ್ತಾನ ಬೆಂಬಲಿಸಿದ ವ್ಯಕ್ತಿಯ ಮೇಲಿನ ಕಾನೂನು ಕ್ರಮ ಸಿದ್ದರಾಮಯ್ಯನವರಿಗೆ ನೋವು ತರುತ್ತಿದೆ ಯಾಕೆ?

    ಸಿದ್ದರಾಮಯ್ಯ ಅವರ ಪಾಕಿಸ್ಥಾನ ಪ್ರೇಮ ಈ ಹಿಂದೆಯೇ ಪ್ರಕಟವಾಗಿತ್ತು. ಪಾಕಿಸ್ತಾನವನ್ನು ಪ್ರೇಮಿಸುವ ಸಮಾಜಘಾತುಕ ಸಂಘಟನೆಗಳ ಕೇಸ್ ಹಿಂಪಡೆದಿದ್ದರು. ಈಗ ಶತ್ರುರಾಷ್ಟ್ರ ಪಾಕಿಸ್ಥಾನದ ಪರವಾಗಿ ಬರೆದ ವ್ಯಕ್ತಿಯ ವಿರುದ್ಧ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರು ತೋರ್ಪಡಿಸುತ್ತಿರುವ ಕಾಳಜಿ ದೇಶದ ಹಿತಾಸಕ್ತಿಗೆ ಮಾರಕವಾದದ್ದು.

    ಈ ಹಿಂದೆ ಗೋ ಕಳ್ಳರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ ಈಗ ಪಾಕಿಸ್ಥಾನ ಪ್ರೇಮಿಯ ಪರ ನಿಂತಿದ್ದಾರೆ. ಕಾಂಗ್ರೆಸ್ ನಾಯಕರ ಒಲವು, ನಿಲುವುಗಳೆಲ್ಲ ದೇಶದ ವಿರುದ್ಧವಾಗಿರುವವರ ಪರವಾಗಿರುತ್ತದೆ. ಸೈನಿಕರ ಸಾವು ಬಯಸುವ ವ್ಯಕ್ತಿಯನ್ನು ಅಮಾಯಕ ಎಂದು ಬಿಂಬಿಸುವ ಏಕೈಕ ಪಕ್ಷವೊಂದಿದ್ದರೆ, ಅದು ಕಾಂಗ್ರೆಸ್ ಮಾತ್ರ

    ಸುನಿಲ್ ಕುಮಾರ್ ಟೀಕೆ:
    ದೇಶದ್ರೋಹ ಎಂದರೇನು ಎಂದು ಶ್ರೀ ಸಿದ್ದರಾಮಯ್ಯರಿಂದ ಪ್ರತ್ಯೇಕವಾಗಿ ಕೇಳಬೇಕಿಲ್ಲ. ಅವರು ಸಿಎಂ ಆಗಿದ್ದಾಗ ದೇಶದ್ರೋಹದ ಹೇಳಿಕೆ ಕೊಡುವಂತವರನ್ನು ಜೊತೆಯಲ್ಲಿಟ್ಟುಕೊಂಡೆ ಕೆಲಸ ಮಾಡಿದವರು. ಅದು ನಿಮ್ಮ ಕಾಲ. ಸೈನಿಕರು, ಸೈನ್ಯದ ಬಗ್ಗೆ ದೇಶದ್ರೋಹದ ಹೇಳಿಕೆ ನೀಡಿದ್ದ ವ್ಯಕ್ತಿಯನ್ನು ಈಗ ಕಾರ್ಕಳದಲ್ಲಿ ಪೊಲೀಸ್ ಬಂಧಿಸಿದೆ. ಅತ್ತಂತೆ ನಟಿಸುವವರ ಸಮರ್ಥನೆಗೆ ನೀವು ಬೇಗ ಬರುತ್ತಿರಿ.

    ಕೆಜೆ ಹಳ್ಳಿ ಗಲಭೆ, ಮಂಗಳೂರು ಗಲಭೆ, ಬೆಂಗಳೂರಿನ ಗೌರಿಪಾಳ್ಯದಲ್ಲಿ ವೈದ್ಯರ ಮೇಲೆ ಹಲ್ಲೆ, ಹಿಂದು ಕಾರ್ಯಕರ್ತರ ಕಗ್ಗೊಲೆ, ಕೊಲೆಗಡುಕ ಎಸ್ ಡಿ ಪಿಐ, ಪಿಎಫ್ ಐ ಸಂಘಟನೆಯನ್ನು ನೀವು ಸಮರ್ಥನೆ ಮಾಡಿಕೊಳ್ಳುತ್ತೀರಿ ಎಂದು ಸುನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕರ್ತನಿಗೆ ಕಾರ್ಕಳ ಎಸ್‍ಐ ಮಧು ಹಲ್ಲೆ – ತನಿಖೆಗೆ ಸಿದ್ದರಾಮಯ್ಯ ಒತ್ತಾಯ

  • ಕಾಂಗ್ರೆಸ್ ಕಾರ್ಯಕರ್ತನಿಗೆ ಕಾರ್ಕಳ ಎಸ್‍ಐ ಮಧು ಹಲ್ಲೆ – ತನಿಖೆಗೆ ಸಿದ್ದರಾಮಯ್ಯ ಒತ್ತಾಯ

    ಕಾಂಗ್ರೆಸ್ ಕಾರ್ಯಕರ್ತನಿಗೆ ಕಾರ್ಕಳ ಎಸ್‍ಐ ಮಧು ಹಲ್ಲೆ – ತನಿಖೆಗೆ ಸಿದ್ದರಾಮಯ್ಯ ಒತ್ತಾಯ

    ಉಡುಪಿ: ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತರೊಬ್ಬರಿಗೆ ಪೊಲೀಸರು ಹಲ್ಲೆ ನಡೆಸಿರುವ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಈ ಕುರಿತಂತೆ ತನಿಖೆ ನಡೆಯಾಗಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

    ಕಾರ್ಕಳ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ಹಿರ್ಗಾನ ಎಂಬವರಿಗೆ ಕಾರ್ಕಳ ನಗರ ಪೊಲೀಸ್ ಎಸ್ ಐ ಮಧು ಹಲ್ಲೆ ನಡೆಸಿರುವುದಾಗಿ ಕಾಂಗ್ರೆಸ್ ಆರೋಪಿಸಿದೆ. ವರ್ಷದ ಹಿಂದೆ ಫೇಸ್ ಬುಕ್‍ನಲ್ಲಿ ಯೋಧರ ವಿರುದ್ಧ ರಾಧಾಕೃಷ್ಣ ನಾಯಕ್ ಪೋಸ್ಟ್ ಹಾಕಿರುವುದಾಗಿ ಆರೋಪಿಸಿ ಕಾರ್ಕಳ ಠಾಣೆಯಲ್ಲಿ ಹಿಂದೂ ಜಾಗರಣ ವೇದಿಕೆ ದೂರು ನೀಡಿತ್ತು. ವಿಚಾರಣೆಗೆ ಕಾರ್ಕಳ ಪೊಲೀಸರು ಕರೆಸಿಕೊಂಡಿದ್ದಾಗ ನನ್ನ ಅಕೌಂಟ್ ಹ್ಯಾಕ್ ಆಗಿದೆ ಎಂದು ಹೇಳಿ ಬೆಂಗಳೂರಿನೆಡೆ ಹೋಗಿದ್ದರು ಎನ್ನಲಾಗಿದೆ.

    ನಕಲಿ ಅಕೌಂಟ್ ಮಾಡಿ ಈ ಪೋಸ್ಟ್ ಹಾಕಿರುವ ಬಗ್ಗೆ, ಬೆಂಗಳೂರಿನಲ್ಲಿ ದೂರು ನೀಡಿರುವುದಾಗಿ ರಾಧಾಕೃಷ್ಣ ಹೇಳಿದ್ದರು. ನಂತರ ಇತ್ತೀಚೆಗೆ ಬೆಂಗಳೂರಿನಿಂದ ವಾಪಸಾಗಿದ್ದ ರಾಧಾಕೃಷ್ಣ ಕಾರ್ಕಳದಲ್ಲಿ ನೆಲೆಸಿದ್ದರು. ಈ ವೇಳೆ ಕಾರ್ಕಳ ಪೊಲೀಸರು ಅವರನ್ನು ತನಿಖೆಗೆ ಬರುವಂತೆ ಸೂಚನೆ ನೀಡಿದ್ದರು. ತನಿಖೆಗೆ ಹಾಜರಾದ ವೇಳೆ ರಾಧಾಕೃಷ್ಣ ಏಕವಚನ ಮತ್ತು ಉಡಾಫೆ ಮಾತುಗಳನ್ನಾಡಿರುವುದಾಗಿ ಪೊಲೀಸ್ ಮೂಲಗಳಿಂದ ಮಾಹಿತಿ ಇದೆ.

    ಎಸ್.ಐ ಮಧು ನಿಂದಿಸಿ, ಹಲ್ಲೆ ನಡೆಸಿದ್ದಾಗಿ ರಾಧಾಕೃಷ್ಣ ದೂರಿದ್ದಾರೆ. ಒಂದು ವರ್ಷದಷ್ಟು ಹಳೆಯ ಪೋಸ್ಟಿಗೆ ಮತ್ತೆ ಠಾಣೆಗೆ ಕರೆಸಿಕೊಂಡು, ಹಲ್ಲೆ ನಡೆಸಿರುವುದರ ಬಗ್ಗೆ ಆರೋಪಿಸಿದ್ದಾರೆ. ಹೃದಯದ ಕಾಯಿಲೆಯಿಂದ ಬಳಲುತ್ತಿರುವ ರಾಧಾಕೃಷ್ಣಗೆ, ಹಲ್ಲೆ ನಡೆಸಿರುವುದು ಅಮಾನವೀಯ ಎಂದು ಕಾಂಗ್ರೆಸ್ ನಾಯಕರು ಆಕ್ಷೇಪಿಸಿದ್ದಾರೆ. ಸದ್ಯ ರಾಧಾಕೃಷ್ಣ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಘಟನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವೇಶ
    ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಈ ಘಟನೆಯನ್ನು ಖಂಡಿಸಿದ್ದಾರೆ. ಉಡುಪಿ ಎಸ್.ಪಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಕಾರ್ಕಳ ಬ್ಲಾಕ್ ಕಾಂಗ್ರೆಸ್, ಉಡುಪಿ ಜಿಲ್ಲಾ ಕಾಂಗ್ರೆಸ್ ಈ ಬಗ್ಗೆ ಮುಂದೆ ಹೋರಾಟ ನಡೆಸುವ ಸಾಧ್ಯತೆ ಇದೆ.

    ಕುಂದಾಪುರ ಡಿ.ಎಸ್‍ಪಿಯನ್ನು ವಿಚಾರಣೆಗೆ ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ಘಟನೆ ಸಂಬಂಧ ಎಲ್ಲಾ ರೀತಿಯ ವಿಚಾರಣೆ ಮಾಡಲಾಗುವುದು ಎಂದು ಎಸ್.ಪಿ ವಿಷ್ಣುವರ್ಧನ್ ಮಾಹಿತಿ ನೀಡಿದರು. ಇದನ್ನೂ ಓದಿ: ಟೊಮೆಟೋ ಮಾರ್ಕೆಟ್‍ನಲ್ಲಿ ಭಾರೀ ಗಲಾಟೆ

  • ‘ಅ’ ಕಾರಕ್ಕೂ, ‘ಹ’ ಕಾರಕ್ಕೂ ವ್ಯತ್ಯಾಸ ತಿಳಿದುಕೊಳ್ಳಿ: ಅನಿತಾ ಭಟ್

    ‘ಅ’ ಕಾರಕ್ಕೂ, ‘ಹ’ ಕಾರಕ್ಕೂ ವ್ಯತ್ಯಾಸ ತಿಳಿದುಕೊಳ್ಳಿ: ಅನಿತಾ ಭಟ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಹಾಗೂ ಬಿಗ್‍ಬಾಸ್ ಸೀಸನ್-2 ರ ಸ್ಪರ್ಧಿ ಅನಿತಾ ಭಟ್‍ರವರು ಕನ್ನಡವನ್ನು ತಪ್ಪಾಗಿ ಬಳಸಿದ ನೆಟ್ಟಿಗರೊಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಕೊರೊನಾ ಲಾಕ್‍ಡೌನ್ ಸಂಕಷ್ಟದ ಬಳಿಕ ಸರ್ಕಾರಿ ಶಾಲೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದ ಟ್ವೀಟ್‍ವೊಂದಕ್ಕೆ ಅನಿತಾ ಭಟ್‍ರವರು ಹೌದು, ನಾನು ಕೂಡ ಓದಿದ್ದು ಸರ್ಕಾರಿ ಶಾಲೆಯಲ್ಲಿಯೇ ಎಂದು ಪ್ರತಿಕ್ರಿಯಿಸಿದ್ದರು.

    ಇದಕ್ಕೆ ನೆಟ್ಟಿಗರೊಬ್ಬರು ನೀವು ಓದಿದ್ದು ಸರ್ಕಾರಿ ಶಾಲೆಯಲ್ಲಿ ಸಂತೋಷ. ನಿಮ್ಮ ಮಕ್ಕಳು? ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ, ನನ್ನ ಮಕ್ಕಳನ್ನು ಸಹ ಸರ್ಕಾರಿ ಶಾಲೆಯ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸಿದ್ದೇನೆ. ಈ ಮಾತನ್ನು ಹೇಳುವ ಹೆದೆಗಾರಿಕೆ ಇರಬೇಕಲ್ಲವೇ? ನನ್ನ ರಕ್ತದ, ನನ್ನಿಂದ ಜನ್ಮ ಪಡೆದವರ ರಕ್ತದ ಕಣ ಕಣವೂ ಕನ್ನಡವೇ ಎಂದು ಹೇಳಿದ್ದಾರೆ.

    ಇದರಿಂದ ರೊಚ್ಚಿಗೆದ್ದ ಅನಿತಾ ಭಟ್‍ರವರು, ಹೆದಗಾರಿಕೆ ಅಲ್ಲ. ಎದೆಗಾರಿಕೆ, ಕನ್ನಡ ಶಾಲೆಯಲ್ಲಿ ಓದಿದರೆ ಸಾಕಾಗೋದಿಲ್ಲ. ಅ ಕಾರಕ್ಕೂ, ಹ ಕಾರಕ್ಕೂ ವ್ಯತ್ಯಾಸ ತಿಳಿದುಕೊಳ್ಳಿ, ಆಮೇಲೆ ಬೇರೆಯವರನ್ನ ಆಡಿಕೊಳ್ಳಬಹುದಂತೆ ನಮಸ್ಕಾರ.

    ಅ ಕಾರಕ್ಕೆ ಅ ಕಾರವನ್ನೇ ಉಪಯೋಗಿಸೋದು ಗ್ರಾಂಥಿಕ ಕನ್ನಡ ಅಲ್ಲ. ಯಾವುದೇ ಪ್ರದೇಶಕ್ಕೆ ಹೋದರು ಸ್ಲಾಗ್ ಹಾಗೂ ಅಸೆಟ್ ಬದಲಾಗುತ್ತೆಯೇ ಹೊರತು ವ್ಯಾಕರಣವಾಗಲಿ, ಲಿಪಿಯಾಗಲಿ, ಅಕ್ಷರಗಳಾಗಲಿ ಬದಲಾಗುವುದಿಲ್ಲ. ಇದರ ಬಗ್ಗೆ ಸ್ಪೇಸ್ ಮಾಡೋಣ ಎಂದು ಮರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ : ಬಿಗ್‍ಬಾಸ್ ಮನೆಗೆ ಪಿಕ್‍ನಿಕ್‍ಗೆ ಬಂದಂತೆ ವರ್ತನೆ- ರೊಚ್ಚಿಗೆದ್ದ ನಿಧಿ

  • ಟ್ವೀಟ್ ಡಿಲೀಟ್ ಮಾಡಿದ್ದಕ್ಕೆ ಜಗ್ಗೇಶ್ ಸ್ಪಷ್ಟನೆ

    ಟ್ವೀಟ್ ಡಿಲೀಟ್ ಮಾಡಿದ್ದಕ್ಕೆ ಜಗ್ಗೇಶ್ ಸ್ಪಷ್ಟನೆ

    ಬೆಂಗಳೂರು: ಮಗನ ಕಾರ್ ಅಪಘಾತದ ಕುರಿತು ಟ್ವೀಟ್ ಮಾಡಿದ್ದ ನಟ ಜಗ್ಗೇಶ್, ಬಳಿಕ ಡಿಲೀಟ್ ಮಾಡಿದ್ದರು. ಇದರಿಂದಾಗಿ ಹಲವು ಪ್ರಶ್ನೆಗಳು ಎದ್ದಿದ್ದವು. ಇದಕ್ಕೆ ಇದೀಗ ಜಗ್ಗೇಶ್ ಟ್ವೀಟ್ ಮೂಲಕವೇ ಸ್ಪಷ್ಟನೆ ನೀಡಿದ್ದಾರೆ.

    ಮಗನ ಕಾರ್ ಅಪಘಾತದ ಚಿತ್ರ ನೋಡಿದರೆ ನನಗೆ ಹೃದಯ ಬಡಿತ ಹೆಚ್ಚಾಗುತ್ತಿದೆ. ಕೆಟ್ಟ ಭಯ ಆವರಿಸುತ್ತದೆ. ಬೆಳಗ್ಗೆಯಿಂದ ಏನೂ ತಿನ್ನಲಾಗದೆ, ಕೆಟ್ಟ ಕಲ್ಪನೆಗಳು ನನ್ನ ಕಾಡುತ್ತಿವೆ. ಮನೆಯವರು ಅದನ್ನು ನೋಡದಂತೆ ವಿನಂತಿ ಮಾಡಿದರು. ಹೀಗಾಗಿ ಹಾಕಿದ ವಿಷಯ ಡಿಲೀಟ್ ಮಾಡಿದೆ ಎಂದು ತಿಳಿಸಿದ್ದಾರೆ.

    ಬೆಳಗ್ಗೆ ಟ್ವೀಟ್ ಮಾಡಿದ್ದ ನಟ ಜಗ್ಗೇಶ್, ಕೊರೊನಾ ಬಂದಾಗಿನಿಂದ ಹೊರ ಹೋಗಿಲ್ಲ, ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಯತಿರಾಜ್ ಮನೆಯಿಂದ ಹೋರ ಹೋಗಿದ್ದನು. ಪ್ರತಿಬಾರಿ ಅವನ ಇಷ್ಟದ ಬೆಂಗಳೂರು-ಚಿಕ್ಕಬಳ್ಳಾಪುರಕ್ಕೆ ಹೋಗಿ ಬರುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕ್ಕೆ ಕಾರ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದೆ. ರಾಯರ ದಯೆ ಹಾಗೂ ನಿಮ್ಮ ಶುಭಹಾರೈಕೆ ಯತಿರಾಜನಿಗೆ ಸಣ್ಣ ಗಾಯವೂ ಇಲ್ಲ.

    ರಾಯರು ನನ್ನ ಜೊತೆ ಸದಾ ಇರುತ್ತಾರೆ, ಇದ್ದಾರೆ. ಇಂಥ ಘಟನೆಗಳು ಚಮತ್ಕಾರ ನನ್ನ ಬದುಕಲ್ಲಿ ನಡೆಯುವುದೇ ನಾನಿದ್ದೀನೋ, ಇರುತ್ತೀನೋ ನಿನ್ನ ಜೊತೆ ಯಾವಾಗಲು ಎಂದು ರಾಯರು ಅವರ ಪವಾಡ ನಿರೂಪಿಸಲು. ನಿನ್ನೆ ಪೂಜೆಯಲ್ಲಿ ಕುಟುಂಬದ ರಕ್ಷಣೆಗೆ ಪ್ರಾರ್ಥಿಸಿದ್ದೆ. ಸದಾ ಅವರ ಸ್ಮರಣೆಯಲ್ಲೇ ಬದುಕುವ ನನಗೆ ಇದು ಮತ್ತೊಂದು ಪವಾಡ. ನಂಬಿ ಕೆಟ್ಟವರಿಲ್ಲಾ ಗುರುರಾಯರ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದರು.

    ಅಪಘಾತ ಆಗಿದ್ದೇಗೆ?: ಚಿಕ್ಕಬಳ್ಳಾಪುರ ನಗರ ಹೊರವಲಯದ ಬೆಂಗಳೂರು ಹೈದರಾಬಾದ್ ಹೈವೆಯಲ್ಲಿ ಅಗಲಗುರ್ಕಿ ಸೇತುವೆ ಬಳಿ ನಟ ಜಗ್ಗೇಶ್ ಪುತ್ರ ಯತಿರಾಜ್ ಕಾರು ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ ಯತಿರಾಜ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೈದರಾಬಾದ್ ಕಡೆಯಿಂದ ಬೆಂಗಳೂರು ಕಡೆಗೆ ಬಿಎಂಡಬ್ಲ್ಯೂ ಕಾರಿನಲ್ಲಿ ಬರ್ತಿದ್ದ ವೇಳೆ ಅಗಲಗುರ್ಕಿ ಸೇತುವೆ ಅಂತ್ಯಕ್ಕೆ ಯೂ ಟರ್ನ್ ಇದೆ. ಅಡ್ಡ ಬಂದ ನಾಯಿ/ಬೈಕ್ ತಪ್ಪಿಸಲು ಹೋಗಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರು ಚಲಿಸುತ್ತಿದ್ದ ವಿರುದ್ಧ ದಿಕ್ಕಿನ ರಸ್ತೆಗೆ ಜಂಪ್ ಮಾಡಿದೆ. ತದನಂತರ ರಸ್ತೆ ಬದಿ 200-300 ಮೀಟರ್ ದೂರ ಕಾರು ರಭಸವಾಗಿ ನುಗ್ಗಿದ್ದು, ಕೊನೆಯಲ್ಲಿ ಮರವೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ.

    ಅಪಘಾತದ ರಭಸಕ್ಕೆ ಮರದ ಕೊಂಬೆ ಸಹ ಮುರಿದಿದ್ದು, ಮರಕ್ಕೆ ಡಿಕ್ಕಿ ಹೊಡೆದು ಮತ್ತೆ ರಸ್ತೆ ಬದಿಗೆ ಉಲ್ಟಾ ತಿರುಗಿ ನಿಂತಿದೆ. ಪರಿಣಾಮ ಕಾರಿನಲ್ಲಿದ್ದ 4 ಏರ್ ಬ್ಯಾಗ್ ಗಳು ಬಿಚ್ಚಿಕೊಂಡಿವೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಯತಿರಾಜ್ ಕೆಳಗಿಳಿದಿದ್ದು ಅಷ್ಟರಲ್ಲೇ ಅಲ್ಲೇ ರಸ್ತೆ ಬದಿ ಜಮೀನಿನಲ್ಲಿ ವಿದ್ಯುತ್ ಕಂಬ ಆಳವಡಿಸುತ್ತಿದ್ದ ಕಾರ್ಮಿಕರು ಯತಿರಾಜ್ ರಕ್ಷಣೆಗೆ ಧಾವಿಸಿದ್ದಾರೆ. ತತ್ ಕ್ಷಣ ನೀರು ಕುಡಿಸಿ ಗಾಬರಿಯಾಗಿದ್ದ ಯತಿರಾಜ್ ರನ್ನ ಸಮಾಧಾನ ಮಾಡಿ ಆಟೋ ಮೂಲಕ ಕರೆದುಕೊಂಡು ಆಸ್ಪತ್ರೆಯತ್ತ ಹೋಗಿದ್ದಾರೆ. ಆದ್ರೆ ಆಸ್ಪತ್ರೆಗೆ ಹೋದ್ರಾ ಇಲ್ಲ ಎಂಬುದು ತಿಳಿದುಬಂದಿಲ್ಲ. ವಿಷಯ ತಿಳಿದು ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಘಟನಾ ಸ್ಥಳದಲ್ಲಿದ್ದ ಕಾರನ್ನ ಪೊಲೀಸ್ ಠಾಣಾ ಆವರಣಕ್ಕೆ ಶಿಫ್ಟ್ ಮಾಡಿದ್ದಾರೆ.

  • ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ – ಕುಮಾರಸ್ವಾಮಿ ಆಕ್ರೋಶ

    ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ – ಕುಮಾರಸ್ವಾಮಿ ಆಕ್ರೋಶ

    ಬೆಂಗಳೂರು: ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‍ಟಿಟ್ಯೂಟ್ ಫಾರ್ ಡೆಮಾಕ್ರಸಿ (ಪ್ರೈಡ್) ಸಂಸ್ಥೆ ಹಾಗೂ ಬಿಜೆಪಿ ವಿರುದ್ದ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸರಣಿ ಟ್ವೀಟ್ ಮಾಡಿ ಬಿಜೆಪಿ ವಿರುದ್ದ ಕಿಡಿಕಾರಿರುವ ಅವರು ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಅಂತ ಆಕ್ರೋಶ ಹೊರ ಹಾಕಿದ್ದಾರೆ.

    ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‍ಟಿಟ್ಯೂಟ್ ಫಾರ್ ಡೆಮಾಕ್ರಸಿ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು. ಇದೇ 22ರಿಂದ ಭಾಷೆಗಳ ಕಲಿಕಾ ತರಬೇತಿ ಆನ್‍ಲೈನಲ್ಲಿ ಆರಂಭವಾಗುತ್ತಿದೆ.ಇದರಲ್ಲಿ ವಿವಿಧ ರಾಜ್ಯಗಳ ಸಂಸದರು, ಶಾಸಕರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಫ್ರೆಂಚ್, ಜರ್ಮನ್, ಜಪಾನೀಸ್, ಪೊರ್ಚುಗೀಸ್, ರಷ್ಯನ್, ಸ್ಪ್ಯಾನಿಷ್‍ನನ್ನು ಕಲಿಸಲಾಗುತ್ತಿದೆ. ಇದರಲ್ಲಿ ಕನ್ನಡವನ್ನು ಸೇರಿಸಬೇಕು. ಇಲ್ಲವೇ ನಾವೆಲ್ಲರೂ ಇದನ್ನು ಧಿಕ್ಕರಿಸಬೇಕು ಎಂದು ಆಗ್ರಹ ಮಾಡಿದ್ದಾರೆ.

    ಕೇಂದ್ರ ಪ್ರತಿ ಬಾರಿ ಕನ್ನಡ ನಿರ್ಲಕ್ಷಿಸುತ್ತಿದೆ. ಇದರ ವಿರುದ್ಧ ನಾವೇ ಕೆಲವರು ಮಾತನಾಡುವಂತಾಗಿದೆ. ಕನ್ನಡ ಭಾಷೆ ವಿಚಾರದಲ್ಲಿನ ಕೇಂದ್ರದ ಇಂಥ ನಡವಳಿಕೆಗಳ ವಿರುದ್ಧ ಎಲ್ಲರೂ ಹೋರಾಡಬೇಕು. ಅವರು ನಿರ್ಲಕ್ಷಿಸುವುದು ನಾವು ಎಚ್ಚರಿಸುವುದು, ಅತ್ತು ಕರೆದು ಔತಣ ಪಡೆಯುವುದು ನಿಲ್ಲಬೇಕು. ಕನ್ನಡ ಮರೆತರೆ ಕಷ್ಟ ಎಂಬ ಸಂದೇಶ ರವಾನಿಸಬೇಕು. ಕೇಂದ್ರ ಸರ್ಕಾರ ಕನ್ನಡದ ವಿಚಾರದಲ್ಲಿ ನಿರ್ಲಕ್ಷ್ಯ ಭಾವ ತಳೆದಿದ್ದರೂ, ಬಿಜೆಪಿಯ ಯಾವೊಬ್ಬ ಸಂಸದರೂ ಇದರ ಬಗ್ಗೆ ಮಾತನಾಡಿರುವುದನ್ನು ನಾನಂತೂ ನೋಡಿಲ್ಲ. ಇಷ್ಟರಲ್ಲೇ ಜನರಿಗೆ ಅರ್ಥವಾಗಬೇಕು, ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿ ಎಂದು. ತಾವು ಕನ್ನಡ ವಿರೋಧಿಗಳಲ್ಲ ಎಂದಾದರೆ ಈಗ ಆಗಿರುವ ಪ್ರಮಾದವನ್ನು ತಾಕತ್ತಿದ್ದರೆ ಬಿಜೆಪಿ ಸರಿಪಡಿಸಲಿ ಎಂದು ಬಿಜೆಪಿ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

  • ಇಂಗ್ಲೆಂಡ್ ಟಾಪ್ ಬೌಲರ್ ಜೀವನಕ್ಕೆ ಮುಳುವಾಯ್ತು 9 ವರ್ಷ ಹಿಂದಿನ ಟ್ವೀಟ್‍

    ಇಂಗ್ಲೆಂಡ್ ಟಾಪ್ ಬೌಲರ್ ಜೀವನಕ್ಕೆ ಮುಳುವಾಯ್ತು 9 ವರ್ಷ ಹಿಂದಿನ ಟ್ವೀಟ್‍

    ಲಂಡನ್: 9 ವರ್ಷದ ಹಿಂದೆ ಮಾಡಲಾಗಿದ್ದ ಟ್ವೀಟ್‍ಗಳೇ ಈಗ ಇಂಗ್ಲೆಂಡ್ ತಂಡದ ಪ್ರತಿಭಾನ್ವಿತ ಬೌಲರ್ ಒಲಿ ರಾಬಿನ್ಸನ್ ಕ್ರಿಕೆಟ್ ಜೀವನಕ್ಕೆ ಮುಳುವಾಗಿದೆ.

    2012 ರಲ್ಲಿ ಜನಾಂಗೀಯ ನಿಂದನೆ ಮತ್ತು ಸೆಕ್ಸಿಸ್ಟ್ ಟ್ವೀಟ್ ಒಲಿ ರಾಬಿನ್ಸನ್ ಅವರನ್ನು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್‍ನಿಂದ ಅಮಾನತು ಮಾಡಿದೆ.

    ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟೆಸ್ಟ್ ಕ್ಯಾಪ್ ಧರಿಸಿದ್ದ ರಾಬಿನ್ಸನ್ ಬ್ಯಾಟಿಂಗ್ ಬೌಲಿಂಗ್‍ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಮೊದಲ ಇನ್ನಿಂಗ್ಸ್‍ನಲ್ಲಿ 4 ವಿಕೆಟ್ ಎರಡನೇ ಇನ್ನಿಂಗ್ಸ್ ನಲ್ಲಿ 3 ವಿಕೆಟ್ ಪಡೆದಿದ್ದರು. ಅಷ್ಟೇ ಅಲ್ಲದೇ ಮೊದಲ ಇನ್ನಿಂಗ್ಸ್ ನಲ್ಲಿ 42 ರನ್ ಹೊಡೆದಿದ್ದರು. ಇದನ್ನೂ ಓದಿ : ಧೋನಿ ಬಗ್ಗೆ ಅಚ್ಚರಿ ಮಾತು – ಕೊಹ್ಲಿಗೆ ಅಭಿಮಾನಿಗಳಿಂದ ಚಪ್ಪಾಳೆ

    ಈ ಪಂದ್ಯದ ಸಮಯದಲ್ಲೇ 2013ರಲ್ಲಿ ರಾಬಿನ್ಸನ್ ಮಾಡಿದ ಟ್ವೀಟ್ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿತ್ತು. ಹೀಗಾಗಿ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದ ಅವರನ್ನು ಕೈಬಿಡಲಾಗಿದೆ.

    “ಇಂಗ್ಲೆಂಡ್ ಮತ್ತು ಸಸೆಕ್ಸ್ ಬೌಲರ್ ಆಲ್ಲಿ ರಾಬಿನ್ಸನ್ ಅವರನ್ನು 2012 ಮತ್ತು 2013 ರಲ್ಲಿ ಟ್ವೀಟ್ ಹಿನ್ನೆಲೆಯಲ್ಲಿ  ಅಂತರಾಷ್ಟ್ರೀಯ ಮಾದರಿ ಪಂದ್ಯಗಳಿಂದ ಅಮಾನತು ಮಾಡಲಾಗಿದೆ” ಎಂದು ಇಸಿಬಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

    ತನ್ನ ಟ್ವೀಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಾಬಿನ್ಸನ್, ನಾನು ವರ್ಣಭೇದ ನೀತಿ ಪರ ಇಲ್ಲ ಮತ್ತು ಸೆಕ್ಸಿಸ್ಟ್ ಅಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ನನ್ನ ಈ ಟ್ವೀಟ್ ಗಳಿಗೆ ತೀವ್ರವಾಗಿ ವಿಷಾದಿಸುತ್ತೇನೆ ಮತ್ತು ಆ ರೀತಿಯ ಟೀಕೆ ಮಾಡಿದ್ದಕ್ಕೆ ನನಗೆ ನಾಚಿಕೆಯಾಗುತ್ತಿದೆ. ಆ ಸಮಯದಲ್ಲಿ ನಾನು ಚಿಂತನೆ ಮಾಡದೇ ಬೇಜವಾಬ್ದಾರಿ ನಡೆದುಕೊಂಡಿದ್ದು ಇದನ್ನು ಕ್ಷಮಿಸಲು ಸಾಧ್ಯವಿಲ್ಲ. ಈಗ ನಾನು ವ್ಯಕ್ತಿಯಾಗಿ ಪ್ರಬುದ್ಧನಾಗಿದ್ದು ಆ ಟ್ವೀಟ್‍ಗಳಿಗೆ ನಾನು ಸಂಪೂರ್ಣವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದರು.

    https://twitter.com/sawerapasha/status/1401636139656695809

    27 ವರ್ಷದ ರಾಬಿನ್ಸನ್ ಬಲಗೈ ವೇಗದ ಬೌಲರ್ ಜೊತೆಗೆ ಬಲಗೈ ಬ್ಯಾಟ್ಸ್ ಮನ್ ಆಗಿದ್ದರು. 2013ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‍ಗೆ ಪದಾರ್ಪಣೆ ಮಾಡಿದ್ದರು.