Tag: tweet

  • ರೈಲಿನಲ್ಲಿ ಬಂದ ಪಾರ್ಸೆಲ್‍ಗಳನ್ನು ಬೀಸಾಡಿದ ಸಿಬ್ಬಂದಿ – ವೈರಲ್ ವೀಡಿಯೋಗೆ ರೈಲ್ವೆ ಇಲಾಖೆ ಸ್ಪಷ್ಟನೆ

    ರೈಲಿನಲ್ಲಿ ಬಂದ ಪಾರ್ಸೆಲ್‍ಗಳನ್ನು ಬೀಸಾಡಿದ ಸಿಬ್ಬಂದಿ – ವೈರಲ್ ವೀಡಿಯೋಗೆ ರೈಲ್ವೆ ಇಲಾಖೆ ಸ್ಪಷ್ಟನೆ

    ಡಿಸ್ಪೂರ್: ರೈಲಿನಲ್ಲಿ ಬರುವ ಪಾರ್ಸೆಲ್‍ಗಳನ್ನು ಕೆಲಸಗಾರರು ಬೀಸಾಡುವ ವೀಡಿಯೋವೊಂದು ಇತ್ತೀಚೆಗಷ್ಟೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಈ ವೀಡಿಯೋ ಕುರಿತಂತೆ ಈಶಾನ್ಯ ಫ್ರಾಂಟಿಯರ್ ರೈಲ್ವೆ ಸ್ಪಷ್ಟನೆ ನೀಡಿದೆ.

    ಹೌದು, ಗುವಾಹಟಿ ನಿಲ್ದಾಣದಲ್ಲಿ ರೈಲ್ವೆ ನಿಲ್ದಾಣಕ್ಕೆ ರೈಲಿನಲ್ಲಿ ಬಂದ ರಾಶಿಗಟ್ಟಲೆ ಪಾರ್ಸೆಲ್‍ಗಳನ್ನು ಕೆಳಗಿಳಿಸುವಾಗ ಕೆಲಸಗಾರರು ಬೇಜವಾಬ್ದಾರಿಯಿಂದ ಇಷ್ಟಬಂದಂತೆ ಬೀಸಾಡಿದ್ದರು. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ಟ್ವೀಟ್ ಮಾಡುವ ಮೂಲಕ ರೈಲ್ವೆ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಈ ವೀಡಿಯೋ 2 ಮಿಲಿಯನ್‍ಗಿಂತಲೂ ಹೆಚ್ಚು ವೀವ್ಸ್ ಪಡೆದುಕೊಂಡಿತ್ತು.

    ರೈಲಿನಲ್ಲಿ ಬರುವ ನಿಮ್ಮ ಪಾರ್ಸೆಲ್‍ಗಳನ್ನು ಎಷ್ಟು ಚೆನ್ನಾಗಿ ಪರಿಗಣಿಸುತ್ತಾರೆ ಎಂಬುವುದನ್ನು ನೋಡಿ. ಈ ವೀಡಿಯೋ ಮಾರ್ಚ್ 22ರ ಗುವಾಹಟಿ ರೈಲ್ವೆ ನಿಲ್ದಾಣದ್ದಾಗಿದೆ. ನವದೆಹಲಿ ದಿಬ್ರುಗಢ ರಾಜಧಾನಿ ಎಕ್ಸ್‍ಪ್ರೆಸ್ (12424) ರೈಲಿನಲ್ಲಿ ಬಂದ ಈ ಪಾರ್ಸೆಲ್‍ಗಳು ಅಮೆಜಾನ್, ಫ್ಲಿಪ್‍ಕಾರ್ಟ್ ಮುಂತಾದ ಎಲ್ಲಾ ಚಿಲ್ಲರೆ ವ್ಯಾಪಾರಿಗಳಿಂದ ಬಂದಿವೆ ಎಂದು ವೀಡಿಯೋ ಜೊತೆಗೆ ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದರು. ಇದನ್ನೂ ಓದಿ: ಕೇಂದ್ರ ಸಚಿವರ ಮನೆಯಲ್ಲಿ ಗಣೇಶನಿಗೆ ಆರತಿ ಮಾಡಿದ ಮೋದಿ

    ಈ ವೀಡಿಯೋಗೆ ಅನೇಕ ಮಂದಿ ಕಾಮೆಂಟ್ ಮಾಡಿದ್ದರು. ಭಾರತೀಯ ರೈಲ್ವೆಗೆ ನಾಚಿಕೆಯಾಗಬೇಕು. ಇವರನ್ನೆಲ್ಲಾ ಗುರುತಿಸಿ ಶಿಕ್ಷೆ ನೀಡಬೇಕು. ಇದರಿಂದಾಗಿ ಅನೇಕ ಬಾರಿ ಗ್ರಾಹಕರು ಮುರಿದು ಹೋಗಿರುವ ವಸ್ತುಗಳನ್ನು ಪಡೆದು, ತೊಂದರೆ ಪಡುತ್ತಾರೆ ಎಂದು ಕಿಡಿಕಾರಿದ್ದರು.

    ಇದೀಗ ಈ ವೀಡಿಯೋಗೆ ಸ್ಪಷ್ಟನೆ ನೀಡಿರುವ ಈಶಾನ್ಯ ಫ್ರಾಂಟಿಯರ್ ರೈಲ್ವೆ, ಇದೊಂದು ಹಳೆಯ ವೀಡಿಯೋ. ಪಾರ್ಸೆಲ್‍ಗಳನ್ನು ಕೆಳಗಿಳಿಸುತ್ತಿರುವವರು ರೈಲ್ವೆ ಉದ್ಯೋಗಿಗಳಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜನಮನ ಸೆಳೆಯುತ್ತಿದೆ 60 ಸಾವಿರ ಗೋಲಿಗಳಿಂದ ಮಾಡಿದ ಗಣೇಶ ಮೂರ್ತಿ!

    ಇದು ಮಾರ್ಚ್ 2022ರ ಹಳೆಯ ವೀಡಿಯೋ ಆಗಿದ್ದು, ಗುವಾಹಟಿ ನಿಲ್ದಾಣದಲ್ಲಿ ರಾಜಧಾನಿ ಎಕ್ಸ್‍ಪ್ರೆಸ್‍ನಲ್ಲಿ ಬಂದ ಪಾರ್ಸೆಲ್‍ಗಳನ್ನು ಕೆಳಗಿಳಿಸುತ್ತಿರುವ ವ್ಯಕ್ತಿಗಳು ವಸ್ತುಗಳಿಗೆ ಸಂಬಂಧಪಟ್ಟವರಾಗಿದ್ದಾರೆ. ರೈಲ್ವೆಯು ವಿವಿಧ ಪಾರ್ಟಿಗಳಿಗೆ ಗುತ್ತಿಗೆ ಆಧಾರದ ಮೇಲೆ ಪಾರ್ಸೆಲ್ ಜಾಗವನ್ನು ಬುಕ್ಕಿಂಗ್ ನೀಡುತ್ತದೆ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆಯ ಟ್ವೀಟ್ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ನಿನ್ನೆಯಷ್ಟೇ ಬಂಧನವಾಗಿದ್ದ ನಟ ಕಮಾಲ್ ಖಾನ್ ಆಸ್ಪತ್ರೆಗೆ ದಾಖಲು

    ನಿನ್ನೆಯಷ್ಟೇ ಬಂಧನವಾಗಿದ್ದ ನಟ ಕಮಾಲ್ ಖಾನ್ ಆಸ್ಪತ್ರೆಗೆ ದಾಖಲು

    ಶಿವಸೇನ ಮುಖಂಡ ರಾಹುಲ್ ಕನ್ವಾಲ್ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ಅವಹೇಳನ ಮಾಡಿದ್ದರು ಎನ್ನುವ ಕಾರಣಕ್ಕಾಗಿ ನಟ, ಸ್ವಯಂ ಸಿನಿಮಾ ವಿಮರ್ಶಕ ಕಮಾಲ್ ಆರ್ ಖಾನ್ ಅವರನ್ನು ನಿನ್ನೆ ಪೊಲೀಸರು ಬಂಧಿಸಿ, ಕೋರ್ಟಿಗೆ ಹಾಜರು ಪಡಿಸಿದ್ದರು. ನ್ಯಾಯಾಲಯವು 14 ದಿನಗಳ ಕಾಲ ಖಾನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಜೈಲಿಗೆ ಹೋದ ಕೆಲವೇ ಗಂಟೆಗಳಲ್ಲಿ ಎದೆನೋವಿನ ಕಾರಣಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. ಸದ್ಯ ಅವರು ಮುಂಬೈನ ಶತಾಬ್ದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರಂತೆ.

    ವಿವಾದಗಳ ಮೂಲಕವೇ ಫೇಮಸ್ ಆಗಿರುವ ಬಾಲಿವುಡ್ ನಟ, ಸ್ವಯಂ ವಿಮರ್ಶಕ ಕಮಾಲ್ ಆರ್ ಖಾನ್ ಅವರನ್ನು ನಿನ್ನೆ ಮುಂಬೈ ಪೊಲೀಸರು ಬಂಧಿಸಿ, ನ್ಯಾಯಾಲಕ್ಕೆ ಹಾಜರು ಪಡಿಸಿದ್ದರು. ಬೊರಿವಲಿ ನ್ಯಾಯಾಲಯವು ಕಮಾಲ್ ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. 2020ರಲ್ಲಿ ರಾಹುಲ್ ಕನ್ವಾಲ್ ಎನ್ನುವವರ ವಿರುದ್ಧ ದ್ವೆಷಪೂರ್ಣ ಟ್ವಿಟ್ ಮಾಡಿದ್ದರು ಎನ್ನುವ ಕಾರಣಕ್ಕಾಗಿ ಕಮಾಲ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ:ಬಿಗ್ ಬಾಸ್: ಹೋಟೆಲ್ ಊಟದತ್ತ ವಾಲಿದ ಜಶ್ವಂತ್- ನಂದು ಕಣ್ಣೀರು

    ಶಿವಸೇನಾ ಪಕ್ಷದ ಸದಸ್ಯರಾಗಿರುವ ರಾಹುಲ್ ಕನ್ವಾಲ್ ವಿರುದ್ಧ 2020ರಲ್ಲಿ ಕಮಾಲ್, ಮಾನಹಾನಿ ಆಗುವಂತಹ ಬರಹವನ್ನು ಟ್ವಿಟ್ ಮಾಡಿದ್ದರಂತೆ. ಆಗ ರಾಹುಲ್, ಮುಂಬೈನ ಮಲಾಡ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಆಗ ಕಮಾಲ್ ದೇಶದಲ್ಲಿ ಇರದೇ ಇರುವ ಕಾರಣಕ್ಕಾಗಿ ಬಂಧನ ಸಾಧ್ಯವಾಗಿರಲಿಲ್ಲ. ಇದೀಗ ಕಮಾಲ್, ಮುಂಬೈ ಏರ್ ಪೋರ್ಟಿಗೆ ಬರುತ್ತಿದ್ದಂತೆಯೇ ಪೊಲೀಸರು ಬಂಧಿಸಿದ್ದರು.

    ಕನ್ನಡದ ಕೆಜಿಎಫ್ 2, ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾವನ್ನು ಜಗತ್ತೇ ಹೊಗಳುತ್ತಿದ್ದಾಗ ಇವು ಕಳಪೆ ಸಿನಿಮಾಗಳು, ಇಂತಹ ಸಿನಿಮಾಗಳನ್ನು ಹೊಗಳುತ್ತಿರುವವರಿಗೆ ತಲೆ ಸರಿ ಇಲ್ಲ ಎನ್ನುವಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು ಕಮಾಲ್. ಅಲ್ಲದೇ, ತಮ್ಮ ಜೀವನದ ಅನೇಕ ಖಾಸಗಿ ಸಂಗತಿಗಳನ್ನು ಕಮಾಲ್ ಬರೆದುಕೊಂಡು ಸುದ್ದಿ ಆಗುತ್ತಿದ್ದರು. ಇದೀಗ ಬಂಧನವಾಗಿ ಸುದ್ದಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದಯವಿಟ್ಟು ಬೆಂಗಳೂರನ್ನು ಕಾಪಾಡಿ- ಪ್ರಧಾನಿಗೆ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಮನವಿ

    ದಯವಿಟ್ಟು ಬೆಂಗಳೂರನ್ನು ಕಾಪಾಡಿ- ಪ್ರಧಾನಿಗೆ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಮನವಿ

    ಬೆಂಗಳೂರು: ಪ್ರಧಾನಿ ನರೆಂದ್ರ ಮೋದಿ ಅವರು ಕರ್ನಾಟಕಕ್ಕೆ ಬರುವ ಹಿನ್ನೆಲೆ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಅವರು ಬೆಂಗಳೂರಿನ ಸಮಸ್ಯೆಗಳ ಬಗ್ಗೆ ಹೇಳಿಕೊಂಡು, ದಯವಿಟ್ಟು ಬೆಂಗಳೂರನ್ನು ಕಾಪಾಡಿ ಎಂದು ಮೋದಿಗೆ ಟ್ವೀಟ್ ಮಾಡಿದ್ದಾರೆ.

    ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಆಗಮಿಸಲಿದ್ದು, ಈ ಹಿನ್ನೆಲೆ ಉದ್ಯಮಿ ಬೆಂಗಳೂರಿನ ಬಗ್ಗೆ ದೂರಿನ ಸರಮಾಲೆಯೇ ಮುಂದಿಟ್ಟಿದ್ದಾರೆ. ಮಳೆಗೆ ಕೆರೆಯಂತಾದ ಬೆಂಗಳೂರು. ಅತಿ ಹೆಚ್ಚು ಐಟಿಬಿಟಿ ಕಂಪನಿಗಳು ಇರುವ ಬೆಳ್ಳಂದೂರು, ಮಾರತ್ತಹಳ್ಳಿ, ಔಟರ್ ರಿಂಗ್ ರೋಡ್‌ನಲ್ಲಿ 2 ದಿನವಾದರೂ ಮಳೆ ನೀರು ತಗ್ಗಿಲ್ಲ. ಐಟಿಬಿಟಿಯಲ್ಲಿ ಕೃತಕ ನದಿಗಳು ಸೃಷ್ಟಿಯಾಗಿವೆ. ರಸ್ತೆಗಳು ಕಿತ್ತುಹೋಗಿದ್ದು, ರಾಜಕಾಲುವೆಯ ಹೂಳೆತ್ತದೇ ಬಿಬಿಎಂಪಿ ನಿರ್ಲಕ್ಷ್ಯವಹಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಬೆಳಗಾವಿ ಗಣೇಶೋತ್ಸವದಲ್ಲಿ ವೀರ್ ಸಾವರ್ಕರ್ ಹವಾ

    ಬೆಂಗಳೂರಿನ ಬಗ್ಗೆ ದಯವಿಟ್ಟು ಗಮನಹರಿಸಿ ಪ್ರಧಾನಿಗಳೇ ಎಂದು ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಮೋದಿಗೆ ಟ್ವೀಟ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಟ ಕಮಾಲ್ ಖಾನ್ ಗೆ 14 ದಿನಗಳ ನ್ಯಾಯಾಂಗ ಬಂಧನ: ಕಣ್ಣೀರಿಟ್ಟ ಖಾನ್

    ನಟ ಕಮಾಲ್ ಖಾನ್ ಗೆ 14 ದಿನಗಳ ನ್ಯಾಯಾಂಗ ಬಂಧನ: ಕಣ್ಣೀರಿಟ್ಟ ಖಾನ್

    ವಿವಾದಗಳ ಮೂಲಕವೇ ಫೇಮಸ್ ಆಗಿರುವ ಬಾಲಿವುಡ್ ನಟ, ಸ್ವಯಂ ವಿಮರ್ಶಕ ಕಮಾಲ್ ಆರ್ ಖಾನ್ ಅವರನ್ನು ಇಂದು ಮುಂಬೈ ಪೊಲೀಸರು ಬಂಧಿಸಿ, ನ್ಯಾಯಾಲಕ್ಕೆ ಹಾಜರು ಪಡಿಸಿದ್ದರು. ಬೊರಿವಲಿ ನ್ಯಾಯಾಲಯವು ಕಮಾಲ್ ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. 2020ರಲ್ಲಿ ರಾಹುಲ್ ಕನ್ವಾಲ್ ಎನ್ನುವವರ ವಿರುದ್ಧ ದ್ವೆಷಪೂರ್ಣ ಟ್ವಿಟ್ ಮಾಡಿದ್ದರು ಎನ್ನುವ ಕಾರಣಕ್ಕಾಗಿ ಕಮಾಲ್ ಅವರನ್ನು ಮುಂಬೈ ಪೊಲೀಸರು ಇಂದು ಬಂಧಿಸಿದ್ದರು.

    ಶಿವಸೇನಾ ಪಕ್ಷದ ಸದಸ್ಯರಾಗಿರುವ ರಾಹುಲ್ ಕನ್ವಾಲ್ ವಿರುದ್ಧ 2020ರಲ್ಲಿ ಕಮಾಲ್, ಮಾನಹಾನಿ ಆಗುವಂತಹ ಬರಹವನ್ನು ಟ್ವಿಟ್ ಮಾಡಿದ್ದರಂತೆ. ಆಗ ರಾಹುಲ್, ಮುಂಬೈನ ಮಲಾಡ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಆಗ ಕಮಾಲ್ ದೇಶದಲ್ಲಿ ಇರದೇ ಇರುವ ಕಾರಣಕ್ಕಾಗಿ ಬಂಧನ ಸಾಧ್ಯವಾಗಿರಲಿಲ್ಲ. ಇದೀಗ ಕಮಾಲ್, ಮುಂಬೈ ಏರ್ ಪೋರ್ಟಿಗೆ ಬರುತ್ತಿದ್ದಂತೆಯೇ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ:ದುಬಾರಿ ಸಂಭಾವನೆ ಕೇಳಿ, ಅವಕಾಶ ಕಳೆದುಕೊಂಡ `ವಜ್ರಕಾಯ’ ನಟಿ ನಭಾ ನಟೇಶ್

    ಕನ್ನಡದ ಕೆಜಿಎಫ್ 2, ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾವನ್ನು ಜಗತ್ತೇ ಹೊಗಳುತ್ತಿದ್ದಾಗ ಇವು ಕಳಪೆ ಸಿನಿಮಾಗಳು, ಇಂತಹ ಸಿನಿಮಾಗಳನ್ನು ಹೊಗಳುತ್ತಿರುವವರಿಗೆ ತಲೆ ಸರಿ ಇಲ್ಲ ಎನ್ನುವಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು ಕಮಾಲ್. ಅಲ್ಲದೇ, ತಮ್ಮ ಜೀವನದ ಅನೇಕ ಖಾಸಗಿ ಸಂಗತಿಗಳನ್ನು ಕಮಾಲ್ ಬರೆದುಕೊಂಡು ಸುದ್ದಿ ಆಗುತ್ತಿದ್ದರು. ಇದೀಗ ಬಂಧನವಾಗಿ ಸುದ್ದಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ನೀವಲ್ಲವೇ? –  ಸಿದ್ದು ವಿರುದ್ಧ ಶ್ರೀರಾಮುಲು ಕಿಡಿ

    ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ನೀವಲ್ಲವೇ? – ಸಿದ್ದು ವಿರುದ್ಧ ಶ್ರೀರಾಮುಲು ಕಿಡಿ

    ಬೆಂಗಳೂರು: ಜೀವನದಲ್ಲಿ ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ತಾವಲ್ಲವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

    ಸಿದ್ದರಾಮಯ್ಯ ಅವರ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಶ್ರೀರಾಮುಲು ಅವರು, ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು. ದಾಸಶ್ರೇಷ್ಠ ಶ್ರೀ ಪುರಂದರದಾಸರು ಮಾಜಿ ಸಿ.ಎಂ. ಸಿದ್ದರಾಮಯ್ಯನಂತವರನ್ನು ನೋಡಿಯೇ ಈ ಪದವನ್ನು ಬರೆದಿದ್ದರೆ ಅಚ್ಚರಿಯಿಲ್ಲ. ಏಕೆಂದರೆ ನೀವು ಜೀವನದಲ್ಲಿ ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ತಾವಲ್ಲವೇ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಬಾಡಿಗೆ ಮನೆಯಲ್ಲಿ ಸುರಂಗ ನೋಡಿ ದಂಗಾದ ಮಾಲೀಕ – ಮಾದಕ ವಸ್ತು, ಮಾರಕಾಸ್ತ್ರ ಪತ್ತೆ

    ಸುಳ್ಳೇ ನಮ್ಮ ಮನೆದೇವರು ಎಂಬುದನ್ನು ನಿಮ್ಮನ್ನು ನೋಡಿ ಕಲಿಯಬೇಕು. ಏಕೆಂದರೆ ನೀವು ಹೇಳುವುದು ಒಂದು, ಮಾಡುವುದು ಇನ್ನೊಂದು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ.! ಇಂತಹ ಕಲೆ ನಿಮಗಲ್ಲದೆ ಬೇರೆಯವರಿಗೆ ಬರಲು ಹೇಗೆ ಸಾಧ್ಯ? ಸುಳ್ಳಿನ ರಾಮಯ್ಯನವರೇ? ಮಾತೆತ್ತಿದರೆ ಅಹಿಂದ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ನೀವು 2018 ರ ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್ ಅವರಿಗೆ ಕೊರಟಗೆರೆಯಲ್ಲಿ ಬೆನ್ನಿಗೆ ಚೂರಿ ಹಾಕಿದ್ದು ಯಾರು? ಯಾವ ಯಾವ ಸಂಧರ್ಭದಲ್ಲಿ ಯಾರ ಕುತ್ತಿಗೆ ಕೊಯ್ದಿರಿ ಎಂಬುದನ್ನು ಬಹಿರಂಗ ಪಡಿಸಲೇ ಚೂರಿ ರಾಮಯ್ಯನವರೇ ಎಂದಿದ್ದಾರೆ.

    ಯಾರೋ ಕಟ್ಟಿದ ಹುತ್ತಕ್ಕೆ ಕರಿ ನಾಗನಂತೆ ಸೇರಿಕೊಂಡ ನೀವು ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಅಲ್ಪಸಂಖ್ಯಾತ ಸಮುದಾಯದ ಜಾಫರ್ ಷರೀಪ್, ಸೇರಿದಂತೆ ಹಲವರನ್ನು ಮುಗಿಸಿಯೇ ಮೇಲಕ್ಕೆ ಬಂದ ನಿಮ್ಮದು ಯಾವ ಸೀಮೆಯ ಅಹಿಂದ? ಬಿಡಿಸಿ ಹೇಳುತ್ತೀರಾ? ಅಹಿಂದ ನಾಯಕರನ್ನು ಮುಗಿಸಿರುವ ನಿಮ್ಮ ಮುಂದಿನ ಗುರಿ ಒಕ್ಕಲಿಗರಾ? ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಇರಬಹುದೇ? ಎಲ್ಲಿ ನನಗೆ ಸ್ಪರ್ಧೆಯೊಡ್ಡಬಹುದು ಎಂಬ ಆತಂಕದಿಂದ ಅವರನ್ನೂ ಮೂಲೆಗುಂಪು ಮಾಡುವ ನಿಮ್ಮ ಯತ್ನ ಮುಗಿದಿಯೇ ಇಲ್ಲವೇ ಮುಂದುವರೆಯುವುದೋ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಅನ್ನಭಾಗ್ಯ ಯೋಜನೆ ನಿಲ್ಲಿಸಲ್ಲ: ಉಮೆಶ್ ಕತ್ತಿ

    ಒಬ್ಬ ನಾಯಕನನ್ನು ಸೃಷ್ಟಿಸುವ ಯೋಗ್ಯತೆ ಇಲ್ಲ. ಇರುವ ಪಕ್ಷದ ಮೇಲೆ ವಿಶ್ವಾಸವಿಲ್ಲ. ‘ಬ್ರೂಟಸ್ ಮನಃಸ್ಥಿತಿ’, ಸಂದರ್ಭಕ್ಕೆ ತಕ್ಕಂತೆ ಬಣ್ಣ ಬದಲಿಸುವ ಊಸರವಳ್ಳಿ ದುಸ್ಥಿತಿ. ಅಧಿಕಾರ ಕೊಟ್ಟ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವ ಸ್ವಯಂಘೋಷಿತ ಮಹಾನಾಯರು ನೀವಲ್ಲವೇ? ಹೆಸರಿನಲ್ಲಿ ‘ರಾಮ’! ಉಂಡ ಮನೆಗೆ ಪಂಗನಾಮ! ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ ಎಷ್ಟೇ ಆದರೂ, ಸತ್ಯ ನಿಮಗೆ ಅಪಥ್ಯ ಅಲ್ಲವೇ? ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗುವುದಿಲ್ಲ ಎಂಬ ಹುಂಬುತನವೇ? ಸುಳ್ಳೇ ನಿಮ್ಮ ರಾಜಕೀಯ ಅಸ್ತಿತ್ವದ ಪ್ರತೀಕ. ಸುಳ್ಳು ಸುಳ್ಳೇ ನಿಮ್ಮ ನರಿಬುದ್ಧಿ ಅವಕಾಶವಾದಿ ರಾಜಕಾರಣ ನಿಜಸ್ವರೂಪ ಎಂದು ಕಿಡಿಕಾರಿದ್ದಾರೆ.

    ದೇವರಾಜ್ ಅರಸ್ ನಂತರ ನಾನೇ ಅತ್ಯಂತ ಯಶಸ್ವಿ ಮುಖ್ಯಮಂತ್ರಿ ಎಂದು ಹಿಂಬಾಲಕರಿಂದ ಜೈಕಾರ ಹಾಕಿಸಿಕೊಳ್ಳುವ ಬುರಡೆರಾಮಯ್ಯವರೇ, 5 ವರ್ಷದ ಅವಧಿಯಲ್ಲಿ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತ ಸಮುದಾಯಕ್ಕೆ ನಿಮ್ಮಷ್ಟು ಚೂರಿ ಹಾಕಿದ ಸಿ.ಎಂ. ಮತ್ತೊಬ್ಬರಿಲ್ಲ ಎಂಬುದನ್ನು ಬಿಡಿಸಿ ಹೇಳಬೇಕೇ? ನೀವು ಆಡಳಿತದಲ್ಲಿ ಇದ್ದಾಗ ಈ ಸಮಸ್ಯೆಯನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದರೆ ಇಂದು ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಪ್ರಮೇಯವೇ ಬರುತ್ತಿರಲಿಲ್ಲ. ಜನರ ಕಣ್ಣಿಗೆ ಮಂಕುಬೂದಿ ಎರಚುವ ಕಲೆ ನಿಮಗಲ್ಲದೆ ಬೇರೆಯವರಗೆ ಹೇಗೆ ಬರಲು ಸಾಧ್ಯ ಎಂದು ಹರಿಹಾಯ್ದಿದ್ದಾರೆ.

    ನಿಮ್ಮ ಅಧಿಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ 160 ಕೋಟಿ ಖರ್ಚು ಮಾಡಿ ನಡೆಸಿದ್ದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ವರದಿ ಪೂರ್ಣಗೊಂಡಿದ್ದರೂ ಅದನ್ನು ಬಹಿರಂಗಗೊಳಿಸದೇ ಕಸದ ಬುಟ್ಟಿಗೆ ಹಾಕಿದ್ದು ಯಾವ ವಚನಭ್ರಷ್ಟತೆ? ಉತ್ತರ ಕೊಡುತ್ತೀರಾ ಸಿದ್ದರಾಮಯ್ಯನವರೇ. ವರದಿ ಬಿಡುಗಡೆ ಮಾಡದಂತೆ ನಿಮ್ಮ ಸಂಪುಟದ ಸಹೋದ್ಯೋಗಿಗಳೇ ಒತ್ತಡ ಹಾಕಿ ಕಾಂತರಾಜು ಅವರ ವರದಿಯನ್ನು ಶೈತ್ಯಗಾರಕ್ಕೆ ಹಾಕಿದ್ದು ವಚನಭ್ರಷ್ಟತೆ ಅಲ್ಲದೆ ಮತ್ತೇನು? ಇದನ್ನು ಮಾಧ್ಯಮಗಳಲ್ಲಿ ವ್ಯವಸ್ಥಿತ ಸೋರಿಕೆ ಮಾಡಿ, ಕೊನೆಗೆ ನಮಗೆಯೇ ತಿರುಗಬಾಣವಾದೀತು ಎಂದು ಮುಚ್ಚಿಹಾಕಿದ ಪ್ರಖರ ಪಂಡಿತರು ನೀವಲ್ಲವೇ ಎಂದಿದ್ದಾರೆ.

    ಈಗಲೂ ನನ್ನ ಮಾತಿಗೆ ನಾನು ಬದ್ದವಾಗಿದ್ದೇನೆ. ನನ್ನ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು ಶೇ. 3 ರಿಂದ 7.5ಕ್ಕೆ ಹೆಚ್ಚಿಸಲು ಸರ್ಕಾರದ ಮೇಲೆ ಎಲ್ಲಾ ರೀತಿಯ ಪ್ರಯತ್ನ ನಡೆಸಿದ್ದೇನೆ. ಅಧಿಕಾರಕ್ಕೀಂತ ಸಮುದಾಯದ ಹಿತ ಮುಖ್ಯ ಎಂಬುದು ನನಗೂ ಗೊತ್ತಿದೆ. ಪರಿಶಿಷ್ಟ ಪಂಗಡದ ಜನಾಂಗದವರಿಗೆ ಮೀಸಲಾತಿ ಪ್ರಮಾಣವನ್ನು 3% ರಿಂದ 7.5% ಹೆಚ್ಚಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಜಾರಿಗೊಳಿಸುಂತೆ ನಮ್ಮ ಜನಪ್ರಿಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಅವರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.

    ಮೀಸಲಾತಿ ಸಂಬಂಧ ನಾಗಮೋಹನ್ ದಾಸ್ ವರದಿ ನೀಡಿದ್ದಾರೆ. ಸುಭಾಷ್ ಆಡಿಯ ನೇತೃತ್ವದ ತ್ರಿಸದಸ್ಯ ಸಮಿತಿ ನೀಡಿರುವ ವರದಿ ಪರಿಶೀಲನಾ ಹಂತದಲ್ಲಿದೆ. ಅದಷ್ಟು ಶೀಘ್ರ ನಮ್ಮ ಸಮುದಾಯಕ್ಕೆ ಸಿಹಿ ಸುದ್ದಿಯನ್ನು ನಮ್ಮ ಸರ್ಕಾರವೇ ಕೊಡಲಿದೆ ಎಂದು ತಿಳಿಸಿದ್ದಾರೆ.

    ಈ ಬಗ್ಗೆ ಯಾರಿಗೂ ಸಂಶಯವೇ ಬೇಡ. ಮೀಸಲಾತಿ ಸಂಬಂಧ ನಾನು ಹೇಳಿರುವ ಮಾತಿನಿಂದ ಒಂದು ಇಂಚು ಹಿಂದೆ ಸರಿಯಲ್ಲ. ನಾನು ಅದಕ್ಕೆ ಬದ್ಧನಾಗಿದ್ದೇನೆ. ಇದು ಕಾನೂನಿನ ವಿಷಯವಾಗಿದ್ದು, ಸ್ವತಃ ವಕೀಲರಾಗಿರುವ ನಿಮಗೆ ಅರ್ಥವಾಗದಿರುವುದಕ್ಕೆ ನನಗೆ ವಿಷಾದವಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಚುನಾವಣೆ ಸಮೀಪಿಸುತ್ತಿರುವಾಗ ಇದನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳುತ್ತಿರುವುದು ನಿಮ್ಮ ರಾಜಕೀಯ ದಿವಾಳಿತನಕ್ಕೆ ಹಿಡಿದ ಕೈಗನ್ನಡಿ. ಕಡೆ ಪಕ್ಷ 5 ವರ್ಷ ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಬಗ್ಗೆ ಒಂದು ಸಣ್ಣ ಆಲೋಚನೆ ನಿಮ್ಮ ತಲೆಯಲ್ಲಿ ಹೊಳೆದಿತ್ತೇ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಕೆಜಿಎಫ್ 2’ ಕಳಪೆ ಸಿನಿಮಾ ಎಂದಿದ್ದ ನಟ, ವಿಮರ್ಶಕ ಕಮಲ್ ಖಾನ್ ಅರೆಸ್ಟ್

    ‘ಕೆಜಿಎಫ್ 2’ ಕಳಪೆ ಸಿನಿಮಾ ಎಂದಿದ್ದ ನಟ, ವಿಮರ್ಶಕ ಕಮಲ್ ಖಾನ್ ಅರೆಸ್ಟ್

    ದಾ ವಿವಾದಗಳ ಮೂಲಕವೇ ಫೇಮಸ್ ಆಗುತ್ತಿರುವ ಬಾಲಿವುಡ್ ನಟ, ಸ್ವಯಂ ವಿಮರ್ಶಕ ಕಮಾಲ್ ಆರ್ ಖಾನ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 2020ರಲ್ಲಿ ರಾಹುಲ್ ಕನ್ವಾಲ್ ಎನ್ನುವವರ ವಿರುದ್ಧ ದ್ವೆಷಪೂರ್ಣ ಟ್ವಿಟ್ ಮಾಡಿದ್ದರು ಎನ್ನುವ ಕಾರಣಕ್ಕಾಗಿ ಕಮಾಲ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

    ಶಿವಸೇನಾ ಪಕ್ಷದ ಸದಸ್ಯರಾಗಿರುವ ರಾಹುಲ್ ಕನ್ವಾಲ್ ವಿರುದ್ಧ 2020ರಲ್ಲಿ ಕಮಾಲ್, ಮಾನಹಾನಿ ಆಗುವಂತಹ ಬರಹವನ್ನು ಟ್ವಿಟ್ ಮಾಡಿದ್ದರಂತೆ. ಆಗ ರಾಹುಲ್, ಮುಂಬೈನ ಮಲಾಡ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಆಗ ಕಮಾಲ್ ದೇಶದಲ್ಲಿ ಇರದೇ ಇರುವ ಕಾರಣಕ್ಕಾಗಿ ಬಂಧನ ಸಾಧ್ಯವಾಗಿರಲಿಲ್ಲ. ಇದೀಗ ಕಮಾಲ್, ಮುಂಬೈ ಏರ್ ಪೋರ್ಟಿಗೆ ಬರುತ್ತಿದ್ದಂತೆಯೇ ಪೊಲೀಸರು ಬಂಧಿಸಿದ್ದಾರೆ.  ಇದನ್ನೂ ಓದಿ: ಆರ್ಯವರ್ಧನ್ ಗುರೂಜಿಯವರಲ್ಲಿ ಅಪ್ಪನ ಪ್ರೀತಿ ಕಂಡೆ: ರೂಪೇಶ್ ಭಾವುಕ

    ಕನ್ನಡದ ಕೆಜಿಎಫ್ 2, ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾವನ್ನು ಜಗತ್ತೇ ಹೊಗಳುತ್ತಿದ್ದಾಗ ಇವು ಕಳಪೆ ಸಿನಿಮಾಗಳು, ಇಂತಹ ಸಿನಿಮಾಗಳನ್ನು ಹೊಗಳುತ್ತಿರುವವರಿಗೆ ತಲೆ ಸರಿ ಇಲ್ಲ ಎನ್ನುವಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು ಕಮಾಲ್. ಅಲ್ಲದೇ, ತಮ್ಮ ಜೀವನದ ಅನೇಕ ಖಾಸಗಿ ಸಂಗತಿಗಳನ್ನು ಕಮಾಲ್ ಬರೆದುಕೊಂಡು ಸುದ್ದಿ ಆಗುತ್ತಿದ್ದರು. ಇದೀಗ ಬಂಧನವಾಗಿ ಸುದ್ದಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಎಂತಹ ರೋಚಕ ಪಂದ್ಯ – ಪಾಕ್ ಮಣಿಸಿದ ಭಾರತಕ್ಕೆ ರಾಹುಲ್ ವಿಶ್

    ಎಂತಹ ರೋಚಕ ಪಂದ್ಯ – ಪಾಕ್ ಮಣಿಸಿದ ಭಾರತಕ್ಕೆ ರಾಹುಲ್ ವಿಶ್

    ನವದೆಹಲಿ: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಭಾರತ ತನ್ನ ಎದುರಾಳಿ ಪಾಕಿಸ್ತಾನ ವಿರುದ್ಧ ಅದ್ಭುತ ಪ್ರದರ್ಶನ ನೀಡಿದೆ. ಈ ಹಿನ್ನೆಲೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾರತೀಯ ಆಟಗಾರರಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

    ಆಲ್‍ರೌಂಡರ್ ರವೀಂದ್ರ ಜಡೇಜಾ ಜವಾಬ್ದಾರಿಯುತ ಬ್ಯಾಟಿಂಗ್ ಹಾಗೂ ಪಾಂಡ್ಯ ಆಲ್ ರೌಂಡರ್ ಆಟದಿಂದ ಟೀಂ ಇಂಡಿಯಾ ಪಾಕಿಸ್ತಾನದ ವಿರುದ್ಧ ಐದು ವಿಕೆಟ್‍ಗಳ ರೋಚಕ ಗೆಲುವು ಸಾಧಿಸಿದೆ. ಇದನ್ನೂ ಓದಿ: ಮುರುಘಾ ಶ್ರೀಗಳ ವಿರುದ್ಧ ಆರೋಪ- ಇಂದು ಜಡ್ಜ್ ಮುಂದೆ ಸಂತ್ರಸ್ತೆಯರ ಹೇಳಿಕೆ ದಾಖಲು

    ಈ ಕುರಿತಂತೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ಎಂತಹ ರೋಚಕ ಪಂದ್ಯ! ಟೀಂ ಇಂಡಿಯಾ ಅದ್ಭುತವಾಗಿ ಆಡಿದೆ. ದೇಶವನ್ನು ಹೇಗೆ ಪ್ರೇರೇಪಿಸುತ್ತದೆ ಮತ್ತು ಒಗ್ಗೂಡಿಸುತ್ತದೆ ಎಂಬುವುದೇ ಕ್ರೀಡೆಯ ಸೌಂದರ್ಯ. ನನಗೆ ಹೆಮ್ಮೆಯ ಜೊತೆಗೆ ಬಹಳ ಸಂತೋಷವಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: AsiaCup: ಜಡೇಜಾ ಜಾದು, ಪಾಂಡ್ಯ ಪರಾಕ್ರಮ – ಪಾಕಿಸ್ತಾನದ ವಿರುದ್ಧ ಭಾರತಕ್ಕೆ 5 ವಿಕೆಟ್‌ಗಳ ರೋಚಕ ಜಯ

    ಮತ್ತೊಂದೆಡೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಅವರು, “ಹುರ್ರೇ! ನಾವು ಗೆದ್ದಿದ್ದೇವೆ. ಅದ್ಭುತವಾದಂತಹ ಪ್ರದರ್ಶನ ನೀಡಿ ಜಯಗಳಿಸಿದ ಟೀಂ ಇಂಡಿಯಾಗೆ ಅಭಿನಂದನೆಗಳು. ಚೆನ್ನಾಗಿ ಆಡಿದ್ದೀರಾ ಬ್ಲೂ ಬಾಯ್ಸ್. ಜೈ ಹಿಂದ್ ಎಂದು ಟ್ವೀಟ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಜಯ್ ದೇವರಕೊಂಡ ‘ಲೈಗರ್’ ಸಿನಿಮಾಗೆ ಮಿಶ್ರಪ್ರತಿಕ್ರಿಯೆ: 200 ಕೋಟಿ ಆಫರ್ ಟ್ವಿಟ್ ವೈರಲ್

    ವಿಜಯ್ ದೇವರಕೊಂಡ ‘ಲೈಗರ್’ ಸಿನಿಮಾಗೆ ಮಿಶ್ರಪ್ರತಿಕ್ರಿಯೆ: 200 ಕೋಟಿ ಆಫರ್ ಟ್ವಿಟ್ ವೈರಲ್

    ವಿಜಯ್ ದೇವರಕೊಂಡ ಮತ್ತು ಅನನ್ಯ ಪಾಂಡೆ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ಲೈಗರ್ ಸಿನಿಮಾ ಬಿಡುಗಡೆಗೂ ಮುನ್ನ ಭಾರೀ ನಿರೀಕ್ಷೆ ಮೂಡಿಸಿತ್ತು. ಬಾಕ್ಸ್ ಆಫೀಸಿನಲ್ಲಿ ಈ ಚಿತ್ರ ಭಾರೀ ಸೌಂಡ್ ಮಾಡಲಿದೆ ಎಂದು ಅಂದಾಜಿಸಲಾಗಿದೆ. ಹಾಗಾಗಿಯೇ ಈ ಸಿನಿಮಾ ಕೊಳ್ಳಲು ಮುಗಿಬಿದ್ದಿದ್ದರು. ಆದರೆ, ನಿರೀಕ್ಷಿತ ಫಲಿತಾಂಶ ಬಂದಿಲ್ಲ ಎನ್ನುತ್ತಿವೆ ಮೂಲಗಳು. ನೋಡುಗರು ಕೂಡ ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾಗಿ ರಿಲೀಸ್ ಆದ ಮೊದಲ ದಿನವೇ ಸಿನಿಮಾ ಮುಗ್ಗರಿಸಿದೆ.

    ಈ ನಡುವೆ ವಿಜಯ್ ದೇವರಕೊಂಡ ಮಾಡಿದ್ದ ಟ್ವಿಟ್ ವೊಂದು ಸಖತ್ ವೈರಲ್ ಆಗುತ್ತಿದೆ. ಹಲವು ತಿಂಗಳ ಹಿಂದೆ ಲೈಗರ್ ಸಿನಿಮಾದ ವ್ಯಾಪಾರಕ್ಕೆ ಸಂಬಂಧಿಸಿದಂತೆ ವಿಜಯ್ ದೇವರಕೊಂಡ ಟ್ವಿಟ್ ಮಾಡಿದ್ದರು. ಅದರಲ್ಲಿ ‘ಓಟಿಟಿ ಸಂಸ್ಥೆಯೊಂದು 200 ಕೋಟಿ ರೂಪಾಯಿಗೆ ಲೈಗರ್ ಸಿನಿಮಾ ಕೇಳಿದೆ. ಇದು ಸಣ್ಣ ಮೊತ್ತದ ಹಣ. ಥಿಯೇಟರ್ ನಲ್ಲಿ ನಾವು ನೋಡಿಕೊಳ್ಳುತ್ತೇವೆ’ ಎಂದು ಟ್ವಿಟ್ ಮಾಡಿದ್ದರು. ಆದರೆ, ಈಗಿನ ಬಾಕ್ಸ್ ಆಫೀಸ್ ರಿಪೋರ್ಟ್ ನೋಡಿದರೂ, ಆ ಮೊತ್ತದ ಕಾಲು ಭಾಗವಾದರೂ ದುಡ್ಡು ಬರತ್ತಾ ಎನ್ನುವಂತಾಗಿದೆ. ಇದನ್ನೂ ಓದಿ:ಜಯಶ್ರೀಗೆ ಎರಡು ಮದುವೆ ಆಗ್ತವೆ ಎಂದು ಬಿಗ್ ಬಾಸ್ ಮನೆಯಲ್ಲಿ ಭವಿಷ್ಯ ನುಡಿದ ಆರ್ಯವರ್ಧನ್ ಗುರೂಜಿ

    ವಿಜಯ್ ದೇವರಕೊಂಡ ಆ ವೇಳೆಯಲ್ಲಿ ಹೆಮ್ಮೆಯಿಂದ ಬರೆದುಕೊಂಡರೋ, ಅಥವಾ ಅಹಂನಿಂದ ಬರೆದುಕೊಂಡರೋ ಬೇರೆ ಮಾತು. ಆದರೆ, ನೆಟ್ಟಿಗರು ಅದೇ ಟ್ವಿಟ್ ತಗೆದುಕೊಂಡು ಈಗ ಗೇಲಿ ಮಾಡುತ್ತಿದ್ದಾರೆ. ವಿಜಯ್ ದೇವರಕೊಂಡಗೆ ಇಷ್ಟೊಂದು ಕಾನ್ಫಿಡೆನ್ಸ್ ಇರಬಾರದು ಎಂದು ಪಾಠ ಮಾಡಿದ್ದಾರೆ. ಈ ಸಿನಿಮಾದ ಬಗ್ಗೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ವಿಜಯ್ ದೇವರಕೊಂಡಗೆ ವಿಜಯ ದೊರೆಯಲಿ ಎಂದೂ ಹಲವರು ಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪಕ್ಷ ಸೇರಿದರೆ ಪ್ರಕರಣ ಖುಲಾಸೆ – ಬಿಜೆಪಿಯಿಂದ ಆಫರ್‌ ಬಂದಿತ್ತು ಎಂದ ಸಿಸೋಡಿಯಾ

    ಪಕ್ಷ ಸೇರಿದರೆ ಪ್ರಕರಣ ಖುಲಾಸೆ – ಬಿಜೆಪಿಯಿಂದ ಆಫರ್‌ ಬಂದಿತ್ತು ಎಂದ ಸಿಸೋಡಿಯಾ

    ನವದೆಹಲಿ: ಬಿಜೆಪಿ ಪಕ್ಷವನ್ನು ಸೇರಿದರೇ ತಮ್ಮ ಮೇಲಿನ ಇಡಿ, ಸಿಬಿಐ ಪ್ರಕರಣಗಳಿಂದ ಮುಕ್ತಗೊಳಿಸುವ ಆಫರ್ ನೀಡಲಾಗಿದೆ ಎಂದು ದೆಹಲಿಯ ಡಿಸಿಎಂ, ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಆರೋಪ ಮಾಡಿದ್ದಾರೆ.

    ಹೊಸ ಮದ್ಯನೀತಿಗೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ನಿವಾಸ ಮತ್ತು ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದರು. ದಾಳಿ ಬೆನ್ನಲೆ ಆಮ್ ಅದ್ಮಿ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ವ್ಯಕ್ತಿಯ ಗುದದ್ವಾರಕ್ಕೆ ಸ್ಟೀಲ್ ಗ್ಲಾಸ್ ತುರುಕಿದ ಸ್ನೇಹಿತರು – ಮಲ ವಿಸರ್ಜನೆ ಮಾಡಲಾಗದೇ ಪರದಾಡಿದ

    ಇಂದು ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿಯ ಸಂದೇಶ ನನಗೆ ಬಂದಿದೆ. “ಎಎಪಿ” ಬಿಟ್ಟು ಬಿಜೆಪಿಗೆ ಸೇರಿಕೊಳ್ಳಿ, ಎಲ್ಲಾ ಸಿಬಿಐ ಇಡಿ ಪ್ರಕರಣಗಳನ್ನು ಮುಕ್ತಾಯಗೊಳಿಸುತ್ತೇವೆ. ಬಿಜೆಪಿಗೆ ನನ್ನ ಉತ್ತರ – ನಾನು ರಜಪೂತ, ಮಹಾರಾಣಾ ಪ್ರತಾಪ್ ವಂಶಸ್ಥ. ನನ್ನ ತಲೆಯನ್ನು ಕತ್ತರಿಸುತ್ತೇನೆ. ಆದರೆ ಭ್ರಷ್ಟ-ಪಿತೂರಿಗಾರರ ಮುಂದೆ ತಲೆಬಾಗುವುದಿಲ್ಲ. ನನ್ನ ಮೇಲಿರುವ ಕೇಸುಗಳೆಲ್ಲಾ ಸುಳ್ಳು, ಏನು ಬೇಕಾದರೂ ಮಾಡಿ ಎಂದು ಪ್ರತಿಕ್ರಿಯೆ ನೀಡಿರುವುದಾಗಿ ತಿಳಿದ್ದಾರೆ. ಇದನ್ನೂ ಓದಿ: ಸಂಜಯ್ ರಾವತ್‍ಗೆ ಸೆ.5ರ ವರೆಗೆ ಜೈಲೇ ಗತಿ

    ಇದಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿವಾದಾತ್ಮಕ ಅಬಕಾರಿ ನೀತಿಯು ದೇಶದಲ್ಲಿಯೇ ಅತ್ಯುತ್ತಮವಾಗಿದೆ. ನಾನು ಅದಕ್ಕೂ ಬದ್ಧನಾಗಿದ್ದೇನೆ. ಕೇಜ್ರಿವಾಲ್ ಮಾದರಿಯ ಆಡಳಿತ ಮತ್ತು ಎಷ್ಟು ಸಚಿವರನ್ನು ತನಿಖೆ ಮಾಡಿ ಜೈಲಿಗೆ ಹಾಕಿದರೂ ಕೆಲಸ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಒಂದೆಡೆ ಧರ್ಮ ಒಡೆಯೋ, ಮತ್ತೊಂದೆಡೆ ಸಾವರ್ಕರ್‌ಗೆ ಅವಹೇಳನ ಮಾಡ್ತಿರೋದನ್ನ ಜನ ಗಮನಿಸ್ತಿದ್ದಾರೆ: ಸಿದ್ದುಗೆ ವಿಜಯೇಂದ್ರ ಗುದ್ದು

    ಒಂದೆಡೆ ಧರ್ಮ ಒಡೆಯೋ, ಮತ್ತೊಂದೆಡೆ ಸಾವರ್ಕರ್‌ಗೆ ಅವಹೇಳನ ಮಾಡ್ತಿರೋದನ್ನ ಜನ ಗಮನಿಸ್ತಿದ್ದಾರೆ: ಸಿದ್ದುಗೆ ವಿಜಯೇಂದ್ರ ಗುದ್ದು

    ಬೆಂಗಳೂರು: ಸಿದ್ದರಾಮಯ್ಯನವರು ಒಂದು ಕಡೆ ಧರ್ಮ ಒಡೆಯುವ, ಮತ್ತೊಂದು ಕಡೆ ವೀರ್ ಸಾವರ್ಕರ್‌ರಂತಹ ಸ್ವಾತಂತ್ರ್ಯ ಸೇನಾನಿಗಳನ್ನು ಅವಹೇಳನ ಮಾಡುತ್ತಿರುವುದನ್ನು ಜನ ಗಮನಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

    ಧರ್ಮ ವಿಭಜನೆಗೆ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಟ್ವೀಟ್ ಮಾಡಿರುವ ಬಿ.ವೈ. ವಿಜಯೇಂದ್ರ ಅವರು, ತಮ್ಮ ಅವಧಿಯ ಜನ ವಿರೋಧಿ ಆಡಳಿತ ಹಾಗೂ ರಾಜಕಾರಣದ ವೈಫಲ್ಯ ಮುಚ್ಚಿಕೊಳ್ಳಲು ಧರ್ಮ ರಾಜಕಾರಣಕ್ಕೆ ಕೈ ಹಾಕಿ ಮುಖಭಂಗ ಅನುಭವಿಸಿ ತಕ್ಕ ಬೆಲೆ ತೆತ್ತ ಮಾನ್ಯ ಸಿದ್ದರಾಮಯ್ಯನವರೇ, ಪಶ್ಚಾತ್ತಾಪದ ಮಾತು ನಿಮ್ಮಿಂದ ಯಾರೂ ನಿರೀಕ್ಷಿಸುವುದಿಲ್ಲ. ಆದರೆ ಧರ್ಮಗುರುಗಳ ದರ್ಶನಕ್ಕೆ ತೆರಳಿ ಅಲ್ಲಿಯೂ ವಿತಂಡ ವಿವಾದ ಸೃಷ್ಟಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪರೀಕ್ಷೆಯಲ್ಲಿ ನಡೆಯುವ ಅಕ್ರಮ ತಡೆಗೆ ಇಂಟರ್‌ನೆಟ್ ಸ್ಥಗಿತಗೊಳಿಸಿದ ಸರ್ಕಾರ

    ಸಿದ್ದರಾಮಯ್ಯನವರೇ ಒಂದು ಕಡೆ ಧರ್ಮ ಒಡೆಯುವ, ಮತ್ತೊಂದು ಕಡೆ ವೀರ್ ಸಾವರ್ಕರ್‌ರಂತಹ ಸ್ವಾತಂತ್ರ್ಯ ಸೇನಾನಿಗಳನ್ನು ಅವಹೇಳನ ಮಾಡುವ ಮೂಲಕ ಮತಾಂಧರನ್ನು ಎತ್ತಿ ಕಟ್ಟುವ ನಿಮ್ಮ ರಾಜಕೀಯ ನಡೆ ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಧರ್ಮರಾಜಕಾರಣದ ಬಿಸಿ ಅನುಭವಿಸಿಯೂ ಮತ್ತದೇ ಹಾದಿಯಲ್ಲಿ ಸಾಗಿರುವ ನಿಮಗಾಗಿ ಬಹುದೊಡ್ಡ ಕಂದಕ ಕಾಯುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಸಿನಿಮಾ ನೋಡಿಕೊಂಡು ಬರುತ್ತಿದ್ದಾಗ ಭೀಕರ ಅಪಘಾತ – ನವ ವಿವಾಹಿತೆ ಸ್ಥಳದಲ್ಲೇ ಸಾವು, ಪತಿ ಗಂಭೀರ

    ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿರುವ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರನ್ನು ರಂಭಾಪುರಿ ಪೀಠದ ಶ್ರೀ ಪ್ರಸನ್ನ ವೀರ ಸೋಮೇಶ್ವರ ಸ್ವಾಮೀಜಿಗಳ ಆಶೀರ್ವಾದ ಪಡೆದು, ವೀರಭದ್ರನಾಥ ಸ್ವಾಮಿ, ರೇಣುಕಾಚಾರ್ಯರ ಗದ್ದುಗೆಯ ದರ್ಶನ ಸಹ ಪಡೆದಿದ್ದರು. ಇದೇ ವೇಳೆ ಶ್ರೀಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಧರ್ಮ ಒಡೆಯುವುದು ನನ್ನ ಉದ್ದೇಶ ಆಗಿರಲಿಲ್ಲ. ಕೆಲವರು ನನ್ನನ್ನ ದಾರಿ ತಪ್ಪಿಸಿದರು. ಇನ್ಯಾವತ್ತೂ ಧರ್ಮದ ವಿಷಯಕ್ಕೆ ಹೋಗುವುದಿಲ್ಲ. ರಾಜ್ಯ ಜನರ ಅಭಿವೃದ್ದಿಗೆ ಆದ್ಯತೆ ನೀಡುತ್ತೇನೆ ಎಂದಿದ್ದರು.

    ಇದಾದ ನಂತರ ರಂಭಾಪುರಿ ಶ್ರೀಗಳ ಬಳಿ ಸಿದ್ದರಾಮಯ್ಯನವರು ಪಶ್ಚಾತ್ತಾಪದ ಮಾತುಗಳನ್ನು ಆಡಿದ್ದಾರೆ ಎನ್ನಲಾಗಿತ್ತು. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ನಾನು ಯಾವುದೇ ಪಶ್ಚಾತಾಪದ ಮಾತುಗಳನ್ನು ಆಡಿಲ್ಲ. ನಾವು ಲಿಂಗಾಯಿತ ಧರ್ಮ ಮಾಡುವಾಗ ಏನೇನು ಮಾಡಿದ್ದೇನೆ ಅಂತ ಹೇಳಿದ್ದೀನಿ ಅಷ್ಟೇ. ಇದು ಅಪಪ್ರಚಾರ ಆಗಿದೆ. ಧರ್ಮದ ಬಗ್ಗೆ ನಾನೇನು ತಲೆ ಕೆಡಿಸಿಕೊಳ್ಳಲು ಹೋಗಿರಲಿಲ್ಲ. ಶ್ಯಾಮನೂರು ಶಿವಶಂಕರಪ್ಪ ಅವರು ವೀರಶೈವ ಧರ್ಮ ಮಾಡಿ ಅಂತ ಅರ್ಜಿ ಕೊಟ್ಟರು ಆಗಿನಿಂದ ಇದು ಶುರುವಾಯ್ತು ಅಷ್ಟೇ ಎಂದು ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]