Tag: tweet

  • ಬಿಜೆಪಿಗೆ ನಾಡಿನ ಮಠಾಧೀಶರಿಗಿಂತ ಸಂಘದ ಆದೇಶವೇ ಮೇಲು: ಕಾಂಗ್ರೆಸ್‌ ಟೀಕೆ

    ಬಿಜೆಪಿಗೆ ನಾಡಿನ ಮಠಾಧೀಶರಿಗಿಂತ ಸಂಘದ ಆದೇಶವೇ ಮೇಲು: ಕಾಂಗ್ರೆಸ್‌ ಟೀಕೆ

    ಬೆಂಗಳೂರು: ಪಠ್ಯಪುಸ್ತಕ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ಬಿಜೆಪಿಗೆ ನಾಡಿನ ಮಠಾಧೀಶರಿಗಿಂತ ಸಂಘದ ಆದೇಶವೇ ಮೇಲು ಎಂದು ಟ್ವೀಟ್‌ ಮಾಡಿ ಕಾಂಗ್ರೆಸ್‌ ಕಾಲೆಳೆದಿದೆ.

    ಟ್ವೀಟ್‌ನಲ್ಲೇನಿದೆ?
    ನಾಡಿನ ಗೌರವಾನ್ವಿತ ಮಠಾಧೀಶರು, ಸಾಹಿತಿಗಳು ಹಲವು ಪತ್ರ ಬರೆದರೂ ಸ್ಪಂದಿಸದ ಶಿಕ್ಷಣ ಸಚಿವರು ಸುನಿಲ್‌ ಕುಮಾರ್‌ ಅವರ ಪತ್ರಕ್ಕೆ ಒಂದೇ ದಿನದಲ್ಲಿ ಸ್ಪಂದಿಸಿದ್ದಾರೆ. ಸರ್ಕಾರಕ್ಕೆ ಮಠಾಧೀಶರ ಮೇಲೆ ಗೌರವವಿಲ್ಲ, ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ಇಲ್ಲ ಎಂಬುದಕ್ಕೆ ಈ ಘಟನೆಯೇ ನಿದರ್ಶನ. ಬಿಜೆಪಿಗೆ ನಾಡಿನ ಮಠಾಧೀಶರಿಗಿಂತ ಸಂಘದ ಅದೇಶವೇ ಮೇಲು ಎಂದು ವ್ಯಂಗ್ಯವಾಡಿದೆ. ಇದನ್ನೂ ಓದಿ: ನನಗೆ ಯಾವ ಉತ್ಸವವು ಬೇಡ: ಡಿಕೆಶಿ

    ಪಠ್ಯ ಪರಿಷ್ಕರಣೆ ವಿರೋಧಿಸಿದ ಆದಿಚುಂಚನಗಿರಿ ಶ್ರೀಗಳು, ಪಂಡಿತಾರಾಧ್ಯ ಶ್ರೀಗಳು, ಜಯಮೃತ್ಯುಂಜಯ ಶ್ರೀಗಳು, ಲಿಂಗಾಯತ ಮಠಾಧೀಶರು, ನಾಡಿನ ಹಲವು ಸಾಹಿತಿಗಳು ಪತ್ರ ಬರೆದರೂ ಉತ್ತರಿಸದ ಶಿಕ್ಷಣ ಸಚಿವರು, ಸಚಿವ ಸುನಿಲ್ ಕುಮಾರ್‌ರ ಪತ್ರಕ್ಕೆ ಒಂದೇ ದಿನದಲ್ಲಿ ಸ್ಪಂದಿಸಿದ್ದಾರೆ. ಬಿಜೆಪಿಯ ಗೌರವ ಯಾರ ಮೇಲೆ? ಆದ್ಯತೆ ಯಾವುದಕ್ಕೆ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

    ಬ್ರಹ್ಮಶ್ರೀ ನಾರಾಯಣ ಗುರು ಅವರ ಪಠ್ಯವನ್ನು ಕನ್ನಡ ಭಾಷಾ ವಿಷಯದ ಬದಲಾಗಿ ಸಮಾಜ ವಿಜ್ಞಾನ ವಿಷಯದಲ್ಲಿ ಅಳವಡಿಸುವಂತೆ ಕೋರಿ ಸಚಿವ ಸುನಿಲ್‌ ಕುಮಾರ್‌ ಅವರು ಪತ್ರ ಬರೆದಿದ್ದರು. ಅದಕ್ಕೆ ತಕ್ಷಣ ಸ್ಪಂದಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಸರ್ಕಾರಿ ಆದೇಶ ಕೂಡ ಹೊರಡಿಸಿದ್ದರು. ಈ ಕ್ರಮವನ್ನು ಕಾಂಗ್ರೆಸ್‌ ಟೀಕಿಸಿದೆ. ಇದನ್ನೂ ಓದಿ: ಕುಮಾರಸ್ವಾಮಿ ಹೊಸ ಹೀರೋಯಿನ್: ಸಿಎಂ ಇಬ್ರಾಹಿಂ

    Live Tv
    [brid partner=56869869 player=32851 video=960834 autoplay=true]

  • ಶಿಂಜೋ ಅಬೆಗೆ ಗುಂಡೇಟು ಆಘಾತ ತಂದಿದೆ – ವಿಶ್ವ ನಾಯಕರ ಪ್ರತಿಕ್ರಿಯೆ

    ಶಿಂಜೋ ಅಬೆಗೆ ಗುಂಡೇಟು ಆಘಾತ ತಂದಿದೆ – ವಿಶ್ವ ನಾಯಕರ ಪ್ರತಿಕ್ರಿಯೆ

    ನವದೆಹಲಿ: ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡು ತಗುಲಿ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾಷಣ ಮಾಡುತ್ತಿದ್ದ ಸಂದರ್ಭದಲ್ಲೇ ದುಷ್ಕರ್ಮಿಯೊಬ್ಬ ಎದೆಗೆ ಗುಂಡು ಹಾರಿಸಿದ್ದು, ಅಬೆಗೆ ತೀವ್ರ ರಕ್ತಸ್ರಾವವಾಗಿದೆ.

    ಈ ಆಘಾತಕಾರಿ ಘಟನೆಗೆ ವಿಶ್ವದ ನಾಯಕರು ಪ್ರತಿಕ್ರಿಯಿಸಿದ್ದಾರೆ. ಜಪಾನ್ ಮಾಜಿ ಪ್ರಧಾನಿಯ ಉಳಿವಿಗಾಗಿ ಪ್ರಾರ್ಥನೆ ನಡೆಸಿದ್ದಾರೆ.

    ಘಟನೆ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ನನ್ನ ಆತ್ಮೀಯ ಸ್ನೇಹಿತ ಅಬೆ ಶಿಂಜೋ ಮೇಲಿನ ದಾಳಿ ತೀವ್ರ ಆಘಾತ ತಂದಿದೆ. ನಮ್ಮ ಆಲೋಚನೆ ಹಾಗೂ ಪ್ರಾರ್ಥನೆಗಳು ಅವರೊಂದಿಗೆ, ಅವರ ಕುಟುಂಬ ಹಾಗೂ ಜಪಾನ್ ಜನರೊಂದಿಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು

    ಅಮೆರಿಕದ ರಾಯಭಾರಿ ರಹಮ್ ಇಮ್ಯಾನುಯೆಲ್, ಅಬೆ-ಸಾನ್ ಜಪಾನ್‌ನ ಅತ್ಯುತ್ತಮ ನಾಯಕ ಹಾಗೂ ಅಮೆರಿಕದ ಅಚಲ ಮಿತ್ರರಾಗಿದ್ದಾರೆ. ಅಮೆರಿಕ ಸರ್ಕಾರ ಹಾಗೂ ಅಮೆರಿಕದ ಜನರು ಅಬೆ-ಸಾನ್ ಅವರ ಕುಟುಂಬ ಹಾಗೂ ಜಪಾನ್‌ನ ಜನರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಟ್ವೀಟ್ ಮಾಡಿ, ಮಾಜಿ ಪ್ರಧಾನಿ ಶಿಂಜೊ ಅಬೆಗೆ ಗುಂಡು ಹಾರಿಸಲಾಗಿದೆ ಎಂದು ಜಪಾನ್‌ನಿಂದ ಬಂದ ಆಘಾತಕಾರಿ ಸುದ್ದಿ – ಈ ಸಮಯದಲ್ಲಿ ನಮ್ಮ ಆಲೋಚನೆಗಳು ಅವರ ಕುಟುಂಬ ಹಾಗೂ ಜಪಾನ್‌ನ ಜನರೊಂದಿಗೆ ಇದೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ಮೋದಿ ಕನಸಿನ ಬುಲೆಟ್ ಟ್ರೈನ್ ಯೋಜನೆ ಮುಖ್ಯಸ್ಥ ಸತೀಶ್ ಅಗ್ನಿಹೋತ್ರಿ ವಜಾ

    ತೈವಾನ್ ಅಧ್ಯಕ್ಷ ತ್ಸೈ ಇಂಗ್-ವೆನ್, ಎಲ್ಲರಿಗೂ ನನ್ನಂತೆಯೇ ಆಘಾತ ಹಾಗೂ ದುಃಖ ತಂದಿದೆ ಎಂದು ನಾನು ಭಾವಿಸುತ್ತೇನೆ. ತೈವಾನ್ ಹಾಗೂ ಜಪಾನ್ ಎರಡೂ ಕಾನೂನು ಆಳ್ವಿಕೆಯನ್ನು ಹೊಂದಿರುವ ಪ್ರಜಾಪ್ರಭುತ್ವ ರಾಷ್ಟ್ರಗಳು. ನನ್ನ ಸರ್ಕಾರದ ಪರವಾಗಿ, ನಾನು ಹಿಂಸಾತ್ಮಕ ಮತ್ತು ಕಾನೂನುಬಾಹಿರ ಕೃತ್ಯಗಳನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿವಾದಾತ್ಮಕ ಟ್ವೀಟ್ – ಹರಿಯಾಣ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ವಜಾ

    ವಿವಾದಾತ್ಮಕ ಟ್ವೀಟ್ – ಹರಿಯಾಣ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ವಜಾ

    ಚಂಡೀಗಢ: ಪ್ರವಾದಿ ಹಾಗೂ ಇಸ್ಲಾಂ ಧರ್ಮದ ಕುರಿತು 2017ರಲ್ಲಿ ಮಾಡಿದ್ದ ಟ್ವೀಟ್‌ಗೆ ಸಂಬಂಧಿಸಿದಂತೆ ಹರಿಯಾಣದ ಐಟಿ ಸೆಲ್ ಮುಖ್ಯಸ್ಥ ಅರುಣ್ ಯಾದವ್‌ನನ್ನು ಬಿಜೆಪಿ ಪಕ್ಷದಿಂದ ವಜಾ ಮಾಡಿದೆ.

    ಇತ್ತೀಚೆಗೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರನ್ನು 4 ವರ್ಷಗಳ ಹಿಂದಿನ ಟ್ವೀಟ್‌ಗೆ ಸಂಬಂಧಿಸಿದಂತೆ ಬಂಧಿಸಿದ ಹಿನ್ನೆಲೆ ಅರುಣ್ ಯಾದವ್ ಬಂಧನಕ್ಕೂ ಸಾಮಾಜಿಕ ಮಾಧ್ಯಮಗಳಲ್ಲಿ ಕರೆಗಳು ಬಂದಿತ್ತು. ಈ ಒತ್ತಡದ ನಡುವೆ ಬಿಜೆಪಿ ಗುರುವಾರ ಸಂಜೆ ಹರಿಯಾಣದ ಐಟಿ ಸೆಲ್ ಮುಖ್ಯಸ್ಥ ಸ್ಥಾನದಿಂದ ಅವರನ್ನು ತೆಗೆದುಹಾಕಿದೆ. ಇದನ್ನೂ ಓದಿ: 51 ರನ್‌ ಚಚ್ಚಿ 4 ವಿಕೆಟ್‌ ಕಿತ್ತ ಪಾಂಡ್ಯ – ನಂಬರ್ ಗೇಮ್‍ನಲ್ಲಿ ಸೋತ ಆಂಗ್ಲರು

    ಟ್ವಿಟ್ಟರ್‌ನಲ್ಲಿ ಅರುಣ್ ಯಾದವ್‌ನನ್ನು ಬಂಧಿಸಿ ಎಂಬ ಕರೆ ಮೂಲಕ #ArrestArunYadav ಟ್ರೆಂಡಿಂಗ್‌ನಲ್ಲಿದೆ. ಈ ಹ್ಯಾಶ್ ಟ್ಯಾಗ್ ಮೇ ತಿಂಗಳಿನಿಂದ ಹಾಗೂ ಜುಬೇರ್ ಬಂಧನದ ಬಳಿಕ ತೀವ್ರವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಹ್ಯಾಶ್‌ಟ್ಯಾಗ್‌ನಲ್ಲಿ 50,000 ಕ್ಕೂ ಹೆಚ್ಚು ಟ್ವೀಟ್ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ – 10 ಮಂದಿಗೆ ಗಾಯ

    ಕಳೆದ ತಿಂಗಳು ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾರನ್ನು ತನ್ನ ಸ್ಥಾನದಿಂದ ಬಿಜೆಪಿ ಕಿತ್ತು ಹಾಕಿತ್ತು. ಬಳಿಕ ವಿವಾದಾತ್ಮಕ ಕಾಮೆಂಟ್ ಹಾಗೂ ಟ್ವೀಟ್ ಮಾಡಿದ್ದ ಮತ್ತೊಬ್ಬ ಕಾರ್ಯಕಾರಿ ನವೀನ್ ಜಿಂದಾಲ್ ಅವರನ್ನು ಬಿಜೆಪಿ ಹೊರ ಹಾಕಿತ್ತು.

    Live Tv
    [brid partner=56869869 player=32851 video=960834 autoplay=true]

  • ಡಿಕೆಶಿ ನಿಮ್ಮ ಪ್ರತಿಸ್ಪರ್ಧಿಯೇ: ಸಿದ್ದುಗೆ ಬಿಜೆಪಿ ಪ್ರಶ್ನೆ

    ಡಿಕೆಶಿ ನಿಮ್ಮ ಪ್ರತಿಸ್ಪರ್ಧಿಯೇ: ಸಿದ್ದುಗೆ ಬಿಜೆಪಿ ಪ್ರಶ್ನೆ

    ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ ನಾಯಕತ್ವದ ವಿಚಾರವಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಬಿಜೆಪಿ ಟ್ವೀಟ್‌ ಮೂಲಕ ಈ ಇಬ್ಬರು ನಾಯಕರ ಕಾಲೆಳೆದಿದೆ.

    ಟ್ವೀಟ್‌ನಲ್ಲೇನಿದೆ?
    ಕೆಪಿಸಿಸಿ ಅಧ್ಯಕ್ಷರನ್ನೇ ಆಪ್ತ ಎನ್ನಲು ಸಿದ್ದರಾಮಯ್ಯ ಹಿಂದೇಟು ಹಾಕಿದ್ದಾರೆಂದರೆ ಇವರ ನಡುವಿನ ಕಂದಕ ಎಷ್ಟು ಆಳವಿರಬಹುದು? ಸಿದ್ದರಾಮಯ್ಯನವರೇ, ಸಿದ್ದರಾಮೋತ್ಸವ ಸ್ವಾಗತ ಸಮಿತಿಯಲ್ಲಿ ಇರುವವರು ಮಾತ್ರ ಆಪ್ತರೇ? ಡಿಕೆಶಿ ನಿಮ್ಮ ಪ್ರತಿಸ್ಪರ್ಧಿಯೇ? ಇದನ್ನೂ ಓದಿ: ಎಸಿಬಿ ದಾಳಿಗೆ ಒಳಗಾಗುವವರು ಶುದ್ಧರಾಗಿದ್ರೆ ಏಕೆ ಹೆದರಬೇಕು: ಬಿ.ಸಿ.ನಾಗೇಶ್ ಟಾಂಗ್

    ಸಿದ್ದರಾಮಯ್ಯರನ್ನು ಮುಂದಿನ ಸಿಎಂ ಎಂದು ಘೋಷಿಸುವ ವೇದಿಕೆಯೇ ಸಿದ್ದರಾಮೋತ್ಸವ ಎಂದು ನಾವು ಆರಂಭದಲ್ಲೇ ಹೇಳಿದ್ದೆವು. ಈಗ ನಾಡಿನ ಜನತೆಯಲ್ಲಿ ಹೀಗೊಂದು ಸಂಶಯ ಹರಿದಾಡುತ್ತಿದೆ. srlopcm75@gmail.com ಅಂದರೆ,
    sr = ಸಿದ್ದರಾಮಯ್ಯ
    lop= ಪ್ರತಿಪಕ್ಷ ನಾಯಕ
    cm = ಮುಖ್ಯಮಂತ್ರಿ
    75= ಅಮೃತ ಮಹೋತ್ಸವ
    ನಿಜವೇ ಇದು? #ಉತ್ತರಿಸಿಸಿದ್ದರಾಮಯ್ಯ ಎಂದು ಬಿಜೆಪಿ ಟ್ವೀಟ್‌ ಮೂಲಕ ಪ್ರಶ್ನಿಸಿದೆ.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 75ನೇ ಜನ್ಮದಿನಾಚರಣೆ ಸಂಭ್ರಮದ ಹೊಸ್ತಿಲಲ್ಲಿದ್ದಾರೆ. ಹುಟ್ಟುಹಬ್ಬದಂದು ಸಿದ್ದರಾಮೋತ್ಸವ ಕಾರ್ಯಕ್ರಮದ ಮೂಲಕ ತಮ್ಮ ಪ್ರಾಬಲ್ಯವನ್ನು ಪ್ರದರ್ಶಿಸಲು ಸಜ್ಜಾಗಿದ್ದಾರೆ. ಆದರೆ ಇದಕ್ಕೆ ಡಿ.ಕೆ.ಶಿವಕುಮಾರ್‌ ಬೇಸರಗೊಂಡಿದ್ದಾರೆ. ವ್ಯಕ್ತಿ ಪೂಜೆ ಅಲ್ಲ, ಪಕ್ಷ ಪೂಜೆ ಮುಖ್ಯ ಎಂದು ಪರೋಕ್ಷವಾಗಿ ಸಿದ್ದರಾಮೋತ್ಸವಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಡೀ ದೇಶದಲ್ಲೇ ಕರ್ನಾಟಕ ಮೋಸ್ಟ್ ಕರಪ್ಟ್ ಸ್ಟೇಟ್, ಸರ್ಕಾರ ಒಟ್ಟಾಗಿ ಉಪ್ಪಿನ ಅಂಗಡಿ ತೆರೆದಿದೆ: ಡಿಕೆಶಿ

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ : ಬಿಜೆಪಿ ವ್ಯಂಗ್ಯ

    ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ : ಬಿಜೆಪಿ ವ್ಯಂಗ್ಯ

    ಬೆಂಗಳೂರು: ಇದು ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ ಅಷ್ಟೇ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಯ್ಯ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.

    ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬಿದ ಹಿನ್ನೆಲೆ ಅವರ ಅಭಿಮಾನಿಗಳು, ಬೆಂಬಲಿಗರು ದಾವಣಗೆರೆಯಲ್ಲಿ ಬೃಹತ್ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ದೆಹಲಿಯಲ್ಲಿ ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕರು ಆಹ್ವಾನಿಸಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ಕೂಡ ಒಪ್ಪಿಗೆ ಸೂಚಿಸಿರುವುದಾಗಿ ನಾಯಕರು ತಿಳಿಸಿದ್ದಾರೆ. ಅಲ್ಲದೇ ಆಗಸ್ಟ್ 3ರಂದು ಸಿದ್ದರಾಮೋತ್ಸವ ಕಾರ್ಯಕ್ರಮವಿದೆ.

    ಈ ನಡುವೆ ಈ ವಿಚಾರವಾಗಿ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ಮುಖ್ಯಮಂತ್ರಿ ಪದವಿಯ ಆಸೆಗಾಗಿ ಸಿದ್ದರಾಮಯ್ಯ ತಮ್ಮ ಹಳೆಯ ಅಹಿಂದ ಕಾರ್ಡ್ ಬಳಸುತ್ತಿದ್ದಾರೆ. ಅಹಿಂದ ಕಾರ್ಡ್ ಎಕ್ಸ್‍ಪೈರ್ ಆಗಿದೆ. ಕಳೆದ ಬಾರಿ ಇದೇ ಕಾರ್ಡ್ ತೋರಿಸಿ ಮೋಸ ಮಾಡಿದ್ದನ್ನು ರಾಜ್ಯದ ಜನತೆ ಇನ್ನೂ ಮರೆತಿಲ್ಲ. ಇದು ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ ಅಷ್ಟೇ ಎಂದು ಟೀಕಿಸಿದೆ. ಇದನ್ನೂ ಓದಿ: 130 ಸ್ಥಾನ ಗೆದ್ದು ಕಾಂಗ್ರೆಸ್ ಸರ್ಕಾರ ರಚಿಸೋದು ಗ್ಯಾರಂಟಿ: ಸಿದ್ದರಾಮಯ್ಯ ವಿಶ್ವಾಸ

    ನಕಲಿ ಗಾಂಧಿ ಕುಟುಂಬಸ್ಥರು ಪ್ರತಿಬಾರಿಯೂ ರಾಜ್ಯ ಕಾಂಗ್ರೆಸ್ ನಾಯಕರಿಗೆ ಒಂದಾಗಿರಬೇಕೆಂದು ಸೂಚನೆ ನೀಡುತ್ತಾರೆ. ದೆಹಲಿಯಲ್ಲಿ ಹೂಂಗುಟ್ಟಿ ಬರುವ ಕಾಂಗ್ರೆಸ್ಸಿಗರು ಬೆಂಗಳೂರಿಗೆ ಬಂದ ಕೂಡಲೇ ಒಬ್ಬರ ವಿರುದ್ಧ ಇನ್ನೊಬ್ಬರು ಕತ್ತಿ ಮಸೆಯುತ್ತಾರೆ. ತಾಳಮೇಳ ಇಲ್ಲದ ಕೈ ನಾಯಕರಿಂದಾಗಿಯೇ ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಕಾಂಗ್ರೆಸ್ ನಾಯಕರ ಕಾಲೆಳೆದಿದೆ.

    ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲೆತ್ತಲು ಸಿದ್ದರಾಮೊತ್ಸವ ಮೂಲಕ ವೇದಿಕೆ ಸಜ್ಜುಗೊಳಿಸುತ್ತಿರುವ ಸಿದ್ದರಾಮಯ್ಯ ಬಣದ ನಾಯಕರು ಒಂದೆಡೆಯಾದರೆ, ಇದೇ ಸಿದ್ದರಾಮಯ್ಯರನ್ನು ಕೆಡವಲು ಖೆಡ್ಡಾ ತೋಡುತ್ತಿರುವ ಡಿ.ಕೆ. ಶಿವಕುಮಾರ್ ಬಣದ ನಾಯಕರು ಮತ್ತೊಂದೆಡೆ. ಈ 2 ಬಣಗಳ ನಡುವೆ ದೆಹಲಿಯ ನಕಲಿ ಗಾಂಧಿಗಳ ಬಣ ಮೂಕ ಪ್ರೇಕ್ಷಕರಷ್ಟೇ ಎಂದು ಟೀಕಿಸಿದೆ.

    ಕಾಂಗ್ರೆಸ್ಸಿಗರು ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸುತ್ತಿದ್ದಾರೆ. ಮತವೇ ಇಲ್ಲದವರು ಬಹುಮತ ಗಳಿಸಲು ಹೇಗೆ ಸಾಧ್ಯ? 2023 ರಲ್ಲಿ ಕಾಂಗ್ರೆಸ್ ಸೋಲು ಖಚಿತ. ಟವಲ್ ಈಗಲೇ ಹಾಕಬೇಡಿ, ನಾಳೆಯ ದಿನ ಮುಖಭಂಗವಾದಾಗ ಒರೆಸಿಕೊಳ್ಳಲು ತುಂಡು ಬಟ್ಟೆಯೂ ಲಭಿಸದು ವ್ಯಂಗ್ಯವಾಡಿದೆ.  ಇದನ್ನೂ ಓದಿ: ಮದರಸಾಗಳಲ್ಲಿ ಮಕ್ಕಳಿಗೆ ರುಂಡ ಕತ್ತರಿಸುವ ಕಾನೂನನ್ನೇ ಬೋಧಿಸಲಾಗುತ್ತಿದೆ – ಆರಿಫ್ ಖಾನ್ ಕಿಡಿ

    2013ರ ಸೋಲನ್ನು ಪರಮೇಶ್ವರ್ ಮರೆತಿಲ್ಲ ಎನ್ನುವುದಕ್ಕೆ ಈ ವೀಡಿಯೋ ಸಾಕ್ಷಿ. ಸಿದ್ದರಾಮಯ್ಯ ಅವರೇ ನೀವು ಯಾರನ್ನೂ ಓವರ್ ಟೇಕ್ ಮಾಡಿದರೂ ಕಾಂಗ್ರೆಸ್ ಒಳಜಗಳ ನಿಮ್ಮನ್ನು ಓವರ್ ಟೇಕ್ ಮಾಡದೇ ಬಿಡದು. 2018 ರಲ್ಲಿ ಅನುಭವಿಸಿದ್ದೀರಿ, 2023 ರಲ್ಲಿ ಡಿಕೆಶಿ, ಖರ್ಗೆ, ಪರಮೇಶ್ವರ್ ಸೇರಿಕೊಂಡು ನಿಮ್ಮನ್ನು ಓವರ್ ಟೇಕ್ ಮಾಡಲಿದ್ದಾರೆ ಎಂದಿದೆ.

    ಕಾಂಗ್ರೆಸ್ ಪಕ್ಷದ ಮುಂಚೂಣಿ ನಾಯಕರು ಒಟ್ಟಾಗಿ ಚುನಾವಣೆ ಎದುರಿಸುವುದು ಎಂದರೆ ಕಪ್ಪೆಯನ್ನು ಹಿಡಿದು ತಕ್ಕಡಿಯಲ್ಲಿ ತೂಕ ಮಾಡಿದಂತೆ, ಇವರು ಒಟ್ಟಾಗುವುದಿಲ್ಲ, ಹೈಕಮಾಂಡ್ ಒಗ್ಗಟ್ಟಿನ ಜಪ ಬಿಡುವುದಿಲ್ಲ. ಕಾಂಗ್ರೆಸ್ ವರಿಷ್ಠರೀಗ ನೀರಲ್ಲಿ ಮುಳುಗಿ ಬಂದ ಬೆಕ್ಕಿನಂತಾಗಿದ್ದಾರೆ ಎಂದು ಹೇಳಿದೆ.

    ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸಮಾವೇಶ ಆಯೋಜಿಸಿದ್ದಾರೆ ಎಂದರೆ ಬಂಡಾಯದ ಬಾವುಟ ಹಾರಿಸಿದ್ದಾರೆಂದೇ ಅರ್ಥ. ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾಗಲೂ ಸಿದ್ದರಾಮಯ್ಯ ದಾವಣಗೆರೆಯಲ್ಲಿ ಸಮಾವೇಶ ನಡೆಸಿ ವರಿಷ್ಠರಿಗೆ ಭರತನಾಟ್ಯ ಮಾಡಿಸಿದ್ದರು. ಸಿದ್ದರಾಮಯ್ಯನವರೇ, ಇದೆಲ್ಲವೂ ಸ್ವಾರ್ಥಕ್ಕಾಗಿ ಅಲ್ವೇ ಎಂದು ಪ್ರಶ್ನಿಸಿದೆ.

    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ, ನಿಮಗಿದು ಎಚ್ಚರಿಕೆ. ಸಿದ್ದರಾಮೋತ್ಸವದ ಬಳಿಕ ನಿಮ್ಮ ಪರಿಸ್ಥಿತಿ ಇದೇ ರೀತಿ ಆಗಲಿದೆ ಎಂದು ತಿಳಿಸಿದೆ.

    Live Tv

  • ಅವರಿಗೂ ಎಕ್ಸ್‌ಕ್ಲ್ಯೂಸಿವ್ ಆಗಿ ಟ್ವೀಟ್ ಮಾಡಬೇಕೆಂಬ ಹುಚ್ಚು ಇರಬಹುದು: ಹರಿಪ್ರಸಾದ್‌ಗೆ ನಾಗೇಶ್ ಟಾಂಗ್

    ಅವರಿಗೂ ಎಕ್ಸ್‌ಕ್ಲ್ಯೂಸಿವ್ ಆಗಿ ಟ್ವೀಟ್ ಮಾಡಬೇಕೆಂಬ ಹುಚ್ಚು ಇರಬಹುದು: ಹರಿಪ್ರಸಾದ್‌ಗೆ ನಾಗೇಶ್ ಟಾಂಗ್

    ಮಡಿಕೇರಿ: ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣಕ್ಕೆ ಶಿಕ್ಷಣ ಇಲಾಖೆಯ ಹಣ ದುರ್ಬಳಕೆ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಟ್ವೀಟ್ ಮೂಲಕ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿರುಗೇಟು ನೀಡಿದ್ದಾರೆ.

    ಮಡಿಕೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಬಿ.ಸಿ ನಾಗೇಶ್, ಬಿ.ಕೆ ಹರಿಪ್ರಸಾದ್ ಅವರ ಅವಾಂತರ ನಿಮಗೂ ಗೊತ್ತಿದೆ. ಅವರು ಯಾವಾಗಲೂ ಪೂರ್ಣ ಮಾಹಿತಿ ಇಲ್ಲದೆ ಮಾತನಾಡುತ್ತಾರೆ. ಅವರಿಗೂ ಎಕ್ಸ್‌ಕ್ಲ್ಯೂಸಿವ್ ಆಗಿ ಟ್ವೀಟ್ ಮಾಡಬೇಕೆಂಬ ಹುಚ್ಚು ಇರಬಹುದು. ಆದ್ದರಿಂದ ಹೀಗೆ ಟ್ವೀಟ್ ಮಾಡಿದ್ದಾರೆ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಅಗ್ನಿಪಥ್ ಪ್ರತಿಭಟನೆಯಲ್ಲಿ ಮೈಕ್ ಭಾಷಣಕ್ಕೆ ಬ್ರೇಕ್ ಹಾಕಿದ ಪೊಲೀಸರು

    ಅವರೊಬ್ಬ ವಿರೋಧ ಪಕ್ಷದ ನಾಯಕನಾಗಿ ತಾಳ್ಮೆ ವಹಿಸಬೇಕು. ಅದು ಇಲಾಖೆಯ ಸಾಮಾಜಿಕ ಜಾಲತಾಣ. ಅದರ ನಿರ್ವಹಣೆಗೆ ಸಂಬಂಧಿಸಿದಂತೆ ಯಾವ ಒಪ್ಪಂದವೂ ಆಗಿಲ್ಲ. ಯಾರಿಗೂ ಹಣವನ್ನೂ ಕೊಟ್ಟಿಲ್ಲ. ಹರಿಪ್ರಸಾದ್ ಅವರು ದೆಹಲಿಯಲ್ಲಿ ಇದ್ದವರು, ಈಗ ರಾಜ್ಯದಲ್ಲಿ ಎಲ್ಲರಿಗಿಂತ ಮೊದಲು ಟ್ವೀಟ್ ಮಾಡಬೇಕು ಎಂದು ಹೀಗೆ ಅವಾಂತರ ಮಾಡಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಬಂಡಾಯ ಶಿವಸೇನೆ ಶಾಸಕರಿಗೆ ಬಿಗ್ ರಿಲೀಫ್ – ಜುಲೈ 12 ವರೆಗೂ ಅನರ್ಹತೆ ಅಸ್ತ್ರದಿಂದ ಅತೃಪ್ತರು ಸೇಫ್

    Live Tv

  • ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು: ದಿನೇಶ್ ಗುಂಡೂರಾವ್

    ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು: ದಿನೇಶ್ ಗುಂಡೂರಾವ್

    ಬೆಂಗಳೂರು: ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು, ಮಹಾರಾಷ್ಟ್ರದಲ್ಲಿ ಬಿಜೆಪಿ ಹೀನ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ.

    ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮಹಾರಾಷ್ಟ್ರದಲ್ಲಿ ಮತ್ತೆ ಕೊಳಕು ರಾಜಕೀಯ ಶುರು ಮಾಡಿರುವ ಬಿಜೆಪಿ ಆಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬರುವ ಯತ್ನ ಮಾಡುತ್ತಿದೆ. ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು. ಮಧ್ಯಪ್ರದೇಶ, ಕರ್ನಾಟಕದಲ್ಲಿ ಈಗಾಗಲೇ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಿರುವ ಬಿಜೆಪಿ ಈಗ ಮಹಾರಾಷ್ಟ್ರದಲ್ಲೂ ಹೀನ ರಾಜಕಾರಣ ಮಾಡುತ್ತಿದೆ. ಬಿಜೆಪಿಯ ವರ್ತನೆ ಸಂವಿಧಾನ ಬಾಹಿರ ಎಂದು ಕಿಡಿಕಾರಿದ್ದಾರೆ.

    ನಾ ಖಾವೂಂಗಾ, ನಾ ಖಾನೇ ದೂಂಗಾ ಎಂದು ಬೊಗಳೆ ಭಾಷಣ ಬಿಗಿಯುವ ಮೋದಿಯವರು, ಆಪರೇಷನ್ ಕಮಲಕ್ಕೆ ಸುರಿಯುವ ಸಾವಿರಾರು ಕೋಟಿ ಹಣ ಯಾರು ತಿಂದು ವಿಸರ್ಜಿಸಿದ್ದು ಎಂದು ಹೇಳುತ್ತಾರೆಯೇ? ಮೋದಿಯವರು ಪ್ರಾಮಾಣಿಕರಾಗಿದ್ದರೆ ಮಹಾರಾಷ್ಟ್ರದಲ್ಲಿ ಈಗ ನಡೆಯುತ್ತಿರುವ ಆಪರೇಷನ್ ಕಮಲದಲ್ಲಿ ಕೈ ಬದಲಾಗುವ ಹಣದ ಮೂಲದ ಬಗ್ಗೆ ಇಡಿ ತನಿಖೆಗೆ ಆದೇಶಿಸಲು ಸಾಧ್ಯವೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಅರ್ಚಕನ ಜೊತೆ ಪರಾರಿಯಾಗಿದ್ದ ವಿವಾಹಿತೆ ಕಾಡಂಚಿನಲ್ಲಿ ಪ್ರತ್ಯಕ್ಷ – ಮದ್ವೆಯಾಗೋದಾಗಿ ನಂಬಿಸಿ ಮೋಸ

    ಅಧಿಕಾರಕ್ಕಾಗಿ ಬಿಜೆಪಿ ಎಷ್ಟು ಕೀಳು ಮಟ್ಟಕ್ಕಾದರೂ ಇಳಿಯುತ್ತದೆ ಎಂಬುದಕ್ಕೆ ಮಹಾರಾಷ್ಟ್ರದ ಇಂದಿನ ರಾಜಕೀಯ ಸನ್ನಿವೇಶ ಮಗದೊಂದು ಉದಾಹರಣೆ. ಸಂವಿಧಾನಕ್ಕೆ ಸದಾ ಅಪಚಾರ ಎಸಗುತ್ತಾ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಕತ್ತು ಹಿಸುಕುತ್ತಾ ಬಂದಿರುವ ಬಿಜೆಪಿ ಈಗ ಮಹಾರಾಷ್ಟ್ರದಲ್ಲೂ ಅನೈತಿಕ ರಾಜಕಾರಣದ ಮೂಲಕ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ ಎಂದು ಹರಿಹಾಯ್ದಿದ್ದಾರೆ.

    ಸಂವಿಧಾನಬದ್ಧವಾಗಿ ಅಸ್ತಿತ್ವದಲ್ಲಿರುವ ಸರ್ಕಾರವನ್ನು ಅಸಂವಿಧಾನಿಕವಾಗಿ ಉರುಳಿಸುವ ಕೆಟ್ಟ ಸಂಪ್ರದಾಯ ಶುರುವಾಗಿದ್ದೇ ಕರ್ನಾಟಕದಲ್ಲಿ. ಆಪರೇಷನ್ ಕಮಲದ ಜನಕ ಯಡಿಯೂರಪ್ಪನವರು. ಬಿಎಸ್‍ವೈ ಸೃಷ್ಟಿಸಿದ ಪಿಡುಗನ್ನು ಇಂದು ದೇಶಾದ್ಯಂತ ಬಿಜೆಪಿಯವರು ಹಬ್ಬಿಸಿ ರಾಜಕೀಯ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ. ಇಂತಹ ಪಿಡುಗಿಗೆ ಜನರೇ ಕಡಿವಾಣ ಹಾಕಬೇಕು ಎಂದು ಕೆಂಡಕಾರಿದ್ದಾರೆ. ಇದನ್ನೂ ಓದಿ: ಯಾರು ಸ್ತ್ರೀಯರಿಗೆ ಅಪಮಾನ ಮಾಡುತ್ತಾರೋ ಅವರ ಪತನ ನಿಶ್ಚಿತ – ಕಂಗನಾ ಹಳೇ ವೀಡಿಯೋ ವೈರಲ್

    Live Tv

  • ಮೋದಿ ನಾಟಕ ನಂಬಲು ಯುವಕರು ಮೂರ್ಖರಲ್ಲ: ದಿನೇಶ್ ಗುಂಡೂರಾವ್

    ಮೋದಿ ನಾಟಕ ನಂಬಲು ಯುವಕರು ಮೂರ್ಖರಲ್ಲ: ದಿನೇಶ್ ಗುಂಡೂರಾವ್

    ಬೆಂಗಳೂರು: ಸರ್ಕಾರ ಪ್ರಾರಂಭಿಸಿರುವ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ವಿರೋಧಿಸಿ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಆಕ್ರೋಶ ಹೊರ ಹಾಕಿದ್ದಾರೆ.

    ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ಸೇನೆಯ ಅಲ್ಪಾವಧಿ ನೇಮಕ ಯೋಜನೆ ‘ಅಗ್ನಿಪಥ್’ ವಿರುದ್ಧ ದೇಶಾದ್ಯಂತ ಯುವಕರ ಆಕ್ರೋಶ ಭುಗಿಲೆದ್ದಿದೆ. ಯುವಕರ ಆಕ್ರೋಶ ಸಹಜವಾದದ್ದೆ. ಕಳೆದ ಎರಡು ವರ್ಷಗಳಿಂದ ಸೇನೆಗೆ ನೇಮಕಾತಿ ನಡೆದಿಲ್ಲ. ಈಗ ಅಗ್ನಿಪಥ್ ಯೋಜನೆಯ ಮೂಲಕ ನೇಮಕಾತಿಯಾದರೂ ಅದು ಅಲ್ಪಾವಧಿಯಷ್ಟೆ. ಕೇವಲ ನಾಲ್ಕು ವರ್ಷಕ್ಕೆ ಕಡ್ಡಾಯ ನಿವೃತ್ತಿಯಾಗಬೇಕು. ಆ ನಂತರ ಯುವಕರ ಭವಿಷ್ಯವೇನು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ ಕಿಚ್ಚು – 22 ರೈಲುಗಳ ಸಂಚಾರ ರದ್ದು

    ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರುವುದೇ ಬಡ ಮಧ್ಯಮ ವರ್ಗದ ಯುವಕರು. ಹೊಟ್ಟೆ ತುಂಬಿದ ಶ್ರೀಮಂತರ ಮಕ್ಕಳಾಗಲಿ, ನಕಲಿ ದೇಶಪ್ರೇಮದ ಭಾಷಣ ಬಿಗಿಯುವ ಸಂಘ ಪರಿವಾರದ ಹೆತ್ತ ಕುಡಿಗಳಾಗಲಿ ಸೈನ್ಯ ಸೇರುವುದಿಲ್ಲ. ಇದು ಕಟು ವಾಸ್ತವ. ಸೈನ್ಯಕ್ಕೆ ಸೇರಿದ ಬಡ ಮಧ್ಯಮ ವರ್ಗದ ಯುವಕರಿಗೆ ಸೇವಾ ಭದ್ರತೆ ಅತಿ ಅಗತ್ಯ. ಇದನ್ನು ಕೇಂದ್ರ ಅರಿಯಬೇಕು ಎಂದಿದ್ದಾರೆ.

    ಸೈನಿಕರ ಪಿಂಚಣಿ ಹೊರೆ ತಪ್ಪಿಸಿಕೊಳ್ಳಲು ಕೇಂದ್ರ ಅಗ್ನಿಪಥ್ ಯೋಜನೆ ಜಾರಿಗೆ ಮುಂದಾಗಿದೆ. ದೇಶದ ರಕ್ಷಣೆಗಾಗಿ ಪ್ರಾಣದ ಹಂಗು ತೊರೆದು ಸೇವೆ ಮಾಡಿದ ಸೈನಿಕರಿಗೆ ಪಿಂಚಣಿ ಕೊಡದಷ್ಟು ನಮ್ಮ ದೇಶ ನಿರ್ಗತಿಕವೇ? ತಮ್ಮ ರಾಜಕೀಯ ಲಾಭಕ್ಕೆ ಯೋಧರ ತ್ಯಾಗವನ್ನು ದುರ್ಬಳಕೆ ಮಾಡಿಕೊಳ್ಳುವ ಮೋದಿಯವರಿಗೆ, ಸೈನಿಕರಿಗೆ ಪಿಂಚಣಿ ಕೊಡುವುದು ಬೇಕಿಲ್ಲವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ‘ಅಗ್ನಿಪಥ್’ ಯೋಜನೆ ವಿರೋಧಿಸಿ ತೀವ್ರ ಪ್ರತಿಭಟನೆ – ರೈಲಿಗೆ ಬೆಂಕಿ

    ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಮೋದಿ ಮಾತು ತಪ್ಪಿದ್ದಾರೆ. ಈಗ ಸಾರ್ವತ್ರಿಕ ಚುನಾವಣೆ ಹತ್ತಿರವಿರುವುದರಿಂದ ಮತ್ತೊಂದು ನಾಟಕಕ್ಕೆ ತಾಲೀಮು ನಡೆಸುತ್ತಿದ್ದಾರೆ. ಅಗ್ನಿಪಥ್ ಯೋಜನೆ ಮೂಲಕ ಸೇನೆಯಲ್ಲಿ ಕಾಲ್ಪನಿಕ ಹುದ್ದೆ ಸೃಷ್ಟಿಸುವುದು ಈ ನಾಟಕದ ಒಂದು ಭಾಗ. ಆದರೆ ಮೋದಿಯವರ ಈ ನಾಟಕ ನಂಬಲು ಯುವಕರು ಮೂರ್ಖರಲ್ಲ ಎಂದು ಕಿಡಿಕಾರಿದ್ದಾರೆ.

    Live Tv

  • ಸೋನಿಯಾ ಗಾಂಧಿಗೆ ಮನೆ ಬೇಕಿದ್ರೆ ಇಂದೇ ಅರ್ಜಿ ಸಲ್ಲಿಸಿ: ಡಿಕೆಶಿಗೆ ಬಿಜೆಪಿ ಟಾಂಗ್

    ಸೋನಿಯಾ ಗಾಂಧಿಗೆ ಮನೆ ಬೇಕಿದ್ರೆ ಇಂದೇ ಅರ್ಜಿ ಸಲ್ಲಿಸಿ: ಡಿಕೆಶಿಗೆ ಬಿಜೆಪಿ ಟಾಂಗ್

    ಬೆಂಗಳೂರು: ರಾಷ್ಟ್ರೀಯ ಪಕ್ಷವೊಂದರ ಜಗತ್ತಿನ ಅತ್ಯಂತ ಶ್ರೀಮಂತ ಮಹಿಳಾ ಅಧ್ಯಕ್ಷೆಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆ ಪಡೆಯಲು ಇಂದೇ ಅರ್ಜಿಸಲ್ಲಿಸಿ ಎಂದು ಬಿಜೆಪಿ ಟ್ವೀಟ್ ಮೂಲಕ ಟಾಂಗ್ ನೀಡಿದೆ.

    ರಾಹುಲ್ ಗಾಂಧಿ ಇಡಿ ವಿಚಾರಣೆ ಹಾಗೂ ಸೋನಿಯಾ ಗಾಂಧಿಗೆ ಸಮನ್ಸ್ ನೀಡಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, `ಸೋನಿಯಾ ಗಾಂಧಿ ಕುಟುಂಬಕ್ಕೆ ಸ್ವಂತ ಮನೆನೂ ಇಲ್ರಿ’ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ #CorruptCONgress ಹ್ಯಾಶ್ ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಿರುವ ಬಿಜೆಪಿ, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಇಂದೇ ಮನೆ ಪಡೆಯಲು ಅರ್ಜಿ ಸಲ್ಲಿಸಿ ಎಂದಿದೆ. ಜೊತೆಗೆ ಭ್ರಷ್ಟಾಧ್ಯಕ್ಷರೇ, ನಿಮಗೂ ಸ್ವಂತ ಮನೆಯ ಇದೆಯೋ ಇಲ್ಲವೋ ಎಂಬುದನ್ನು ಜನತೆಗೆ ತಿಳಿಸುವಿರಾ? ಎಂದು ಕುಟುಕಿದೆ.

    ಟ್ವೀಟ್‌ನಲ್ಲಿ ಏನಿದೆ?
    ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುವ ಮೂಲಕ ಕಾನೂನು-ಸುವ್ಯವಸ್ಥೆಗೆ ಧಕ್ಕೆ ತರುತ್ತಿದೆ. ನಕಲಿ ಗಾಂಧಿ ಕುಟುಂಬವನ್ನು ಸಂವಿಧಾನ ಹಾಗೂ ದಂಡ ಸಂಹಿತೆಗೆ ಅತೀತರನ್ನಾಗಿಸಲು ಕಾಂಗ್ರೆಸ್ ಹೊರಟಿದೆ. ಇದು ಈ ದೇಶದ ಸಂವಿಧಾನ ಹಾಗೂ ಕಾನೂನಿಗೆ ಮಾಡುತ್ತಿರುವ ಅವಮಾನವಲ್ಲವೇ? ಇದನ್ನೂ ಓದಿ: ಸಿದ್ದರಾಮಯ್ಯರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ: ಬಿಜೆಪಿ ಟೀಕೆ 

    ಕಳೆದ ಮೂರು ದಿನಗಳಿಂದ ರಾಜಧಾನಿ ಬೆಂಗಳೂರನ್ನು ಕಾಂಗ್ರೆಸ್ಸಿಗರು ಹೈರಾಣಾಗಿಸಿದ್ದಾರೆ. ನಕಲಿ ಗಾಂಧಿಗಳು ನಡೆಸಿದ ಲೂಟಿಯನ್ನು ಸಮರ್ಥಿಸಿ ಬೀದಿಗಿಳಿದು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ. ಕಾಂಗ್ರೆಸ್ಸಿಗರೇ ಜನ ಸಾಮಾನ್ಯರ ಹಿತಾಸಕ್ತಿಗಿಂತ ನಕಲಿ ಗಾಂಧಿ ಕುಟುಂಬದ ಗುಲಾಮಿತನವೇ ಶ್ರೇಷ್ಠವಾಯಿತೇ? ಭ್ರಷ್ಟರು, ಭ್ರಷ್ಟರಿಂದ, ಭ್ರಷ್ಟರ ರಕ್ಷಣೆಗಾಗಿ… ಇದು ಕೆಪಿಸಿಸಿಯ ಹೊಸ ನೀತಿ ಎಂದು ಬಿಜೆಪಿ ಸರಣಿ ಟ್ವೀಟ್‌ನಲ್ಲಿ ಕಿಡಿಕಾರಿದೆ.

    Live Tv

  • ನಕಲಿ ಗಾಂಧಿಗಳ ಮೇಲಿನ ಅನುಕಂಪ ದಲಿತ ನಾಯಕ ಖರ್ಗೆ ವಿಚಾರಣೆ ವೇಳೆ ಇರಲಿಲ್ಲವೇಕೆ? ಬಿಜೆಪಿ ಟಾಂಗ್‌

    ನಕಲಿ ಗಾಂಧಿಗಳ ಮೇಲಿನ ಅನುಕಂಪ ದಲಿತ ನಾಯಕ ಖರ್ಗೆ ವಿಚಾರಣೆ ವೇಳೆ ಇರಲಿಲ್ಲವೇಕೆ? ಬಿಜೆಪಿ ಟಾಂಗ್‌

    ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಗೆ ಇ.ಡಿ ವಿಚಾರಣೆ ವೇಳೆ ಪ್ರತಿಭಟನೆ ಮಾಡದ ವಿಚಾರವಾಗಿ ಟ್ವೀಟ್‌ ಮಾಡುವ ಮೂಲಕ ಕಾಂಗ್ರೆಸ್‌ ನಾಯಕ ಕಾಲೆಳೆದಿದೆ ಬಿಜೆಪಿ.

    ಮಾನ್ಯ ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರೇ, ನಕಲಿ ಗಾಂಧಿ ಕುಟುಂಬಸ್ಥರನ್ನು ಇ.ಡಿ ವಿಚಾರಣೆ ಮಾಡುತ್ತಿರುವಾಗ ಇದ್ದ ಅನುಕಂಪ, ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿಚಾರಣೆ ಮಾಡುವಾಗ ಏಕಿರಲಿಲ್ಲ? ದಲಿತ ನಾಯಕ ಎಂಬ ಕಾರಣಕ್ಕಾಗಿ ಬೀದಿಗಿಳಿಯಲಿಲ್ಲವೇ ಎಂದು ಬಿಜೆಪಿ ಪ್ರಶ್ನಿಸಿದೆ. ಇದನ್ನೂ ಓದಿ: ದೊಡ್ಡವರಾದವರು ತನಿಖಾ ಸಂಸ್ಥೆಗಳಿಗೆ ಹೋಗಬಾರದು ಅಂತ ಇದೆಯಾ?: ಕಾಂಗ್ರೆಸ್ ವಿರುದ್ಧ ಸುಧಾಕರ್ ವಾಗ್ದಾಳಿ

    ಟ್ವೀಟ್‌ನಲ್ಲೇನಿದೆ?
    ನಕಲಿ ಗಾಂಧಿಗಳ ಮೇಲಿನ ಅಕ್ಕರೆ, ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಪರವಾಗಿಲ್ಲವೇಕೆ? ರಾಜ್ಯ ಕಾಂಗ್ರೆಸ್ ನಾಯಕರು ಖರ್ಗೆ ಪರವಾಗಿ ಧ್ವನಿ ಎತ್ತಲಿಲ್ಲ. ಇದು ದಲಿತ ವಿರೋಧಿ ಧೋರಣೆಯಲ್ಲದೆ ಮತ್ತೇನು?

    ಮಾನ್ಯ ಪ್ರಿಯಾಂಕ್‌ಖರ್ಗೆ, #IndiaWithRahulGandhi ಎಂದೆನ್ನುವ ಮುನ್ನ ನಿಮ್ಮ ತಂದೆಯನ್ನು ಇ.ಡಿ ತನಿಖೆ ಮಾಡುವಾಗ ಕಾಂಗ್ರೆಸ್ ನಿಮ್ಮ ಕುಟುಂಬದ ಪರವಾಗಿ ನಿಲ್ಲಲಿಲ್ಲವೇಕೆ ಎಂದು ಎಂದಾದರೂ ಯೋಚಿಸಿದ್ದೀರಾ? ನೀವ್ಯಾಕೆ ಅಂದು ತಂದೆಯ ಪರವಾಗಿ ಧ್ವನಿ ಎತ್ತಿಲ್ಲ? ಜನ್ಮದಾತನಿಗಿಂತ ನಕಲಿ ಗಾಂಧಿಗಳು ಹೆಚ್ಚಾದರೇ? ಇದನ್ನೂ ಓದಿ: ಇದು ಇಟಲಿ ಅಲ್ಲ, ದೇಶದ ಕಾನೂನಿಗೆ ಬೆಲೆ ಕೊಡಬೇಕು: ಆರ್. ಅಶೋಕ್

    ಖರ್ಗೆಯವರನ್ನು ಇ.ಡಿ ತನಿಖೆ ಮಾಡುವಾಗ ಸಿದ್ದರಾಮಯ್ಯ ಹಾಗೂ ಡಿಕೆಶಿ ಜಾಣ ಮೌನವಹಿಸಿದ್ದರು. ಸಿಎಂ ಪದವಿಯ ಪ್ರಬಲ ಆಕಾಂಕ್ಷಿಯನ್ನು ತೆರೆಮರೆಗೆ ಸರಿಸುವ ಹುನ್ನಾರವಿತ್ತೇ?

    ನಕಲಿ ಗಾಂಧಿ ಕುಟುಂಬ ಎದುರಿಸುತ್ತಿರುವ ನ್ಯಾಷನಲ್ ಹೆರಾಲ್ಡ್‌ ಪ್ರಕರಣದ ವಾಸ್ತವಾಂಶವಿದು. ಇಷ್ಟೆಲ್ಲಾ ಅಕ್ರಮ ಮಾಡಿರುವ ನಕಲಿ ಗಾಂಧಿಗಳನ್ನು ನ್ಯಾಯಾಲಯದ ಆದೇಶದಂತೆ ವಿಚಾರಿಸುವುದರಲ್ಲಿ ತಪ್ಪೇನಿದೆ? ಇದನ್ನೂ ಓದಿ: ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಭೇದಿ ಮಾಡಿಕೊಳ್ಳೋದೇ ಆಯ್ತು: ಪ್ರತಾಪ್‌ಸಿಂಹ ತಿರುಗೇಟು

    https://twitter.com/BJP4Karnataka/status/1536643919194501120

    ನಕಲಿ ಗಾಂಧಿಗಳ ಕಾನೂನಾತ್ಮಕ ವಿಚಾರಣೆಯನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ದೇಶದ ಕಾನೂನು ವ್ಯವಸ್ಥೆಯನ್ನು ಅಣಕಿಸುತ್ತಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಆಶಯಗಳಿಗೂ ಕಾಂಗ್ರೆಸ್‌ ಪಕ್ಷ ಕಳಂಕ ತರುತ್ತಿದೆ.