Tag: tweet

  • ಪರಿಷ್ಕೃತ ಪಠ್ಯದಿಂದ ಹಿಂದೂಗಳಿಗೆ ಮಾತ್ರವಲ್ಲ, ಆರೂವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ: ಸಿದ್ದರಾಮಯ್ಯ

    ಪರಿಷ್ಕೃತ ಪಠ್ಯದಿಂದ ಹಿಂದೂಗಳಿಗೆ ಮಾತ್ರವಲ್ಲ, ಆರೂವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ: ಸಿದ್ದರಾಮಯ್ಯ

    ಬೆಂಗಳೂರು: ಪರಿಷ್ಕೃತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ, ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

    bc nagesh

    ಪರಿಷ್ಕೃತ ಪಠ್ಯ ರದ್ದತಿಗೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೂಗಳು ಯಾರು? ಎನ್ನುವುದನ್ನು ಸನ್ಮಾನ್ಯ ಸಚಿವರು ಬಹಿರಂಗ ಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

    ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ. ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮೀಯರಲ್ಲ, ಹಿಂದೂಗಳೇ ಅಲ್ವಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪರಿಷ್ಕೃತ ಪಠ್ಯ ರದ್ದು ಮಾಡಿ, ರೋಹಿತ್ ಚಕ್ರತೀರ್ಥರನ್ನು ವಜಾಗೊಳಿಸಬೇಕು – ಸಿದ್ದರಾಮಯ್ಯ ಆಗ್ರಹ

    ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ ದಲಿತ ಮತ್ತು ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ವಲ್ಲ? ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ? ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ ಎಂದಿದ್ದಾರೆ.

    ಬಸವಣ್ಣ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತೇ? ಅವಮಾನ ಮಾಡಲಾಯಿತೇ? ನಾರಾಯಣ ಗುರು, ಪೆರಿಯಾರ್, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿತೋರಿಸಿದ್ದಕ್ಕಾಗಿ ನಿರ್ಲಕ್ಷ್ಯ ಮಾಡಲಾಯಿತೇ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಷ್ಟ್ರಭಕ್ತಿ ತುಂಬಿರುವ RSS ಜನರ ಸಂಕಷ್ಟಕ್ಕೆ ಸ್ಪಂದಿಸುವ ಸಂಘಟನೆ: ಬೊಮ್ಮಾಯಿ

    ಈ ದೇಶದ ಬಡವರಲ್ಲಿ ಬಹುಸಂಖ್ಯೆಯಲ್ಲಿರುವುದು ಹಿಂದೂ ಧರ್ಮದ ದಲಿತರು ಮತ್ತು ಹಿಂದುಳಿದ ಜಾತಿಗಳು. ಸರ್ಕಾರಿ ಶಾಲೆಗಳಲ್ಲಿ ಈ ಮಕ್ಕಳ ಸಂಖ್ಯೆಯೇ ಹೆಚ್ಚು. ಬುದ್ಧ, ಬಸವ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣ ಗುರು, ಕುವೆಂಪು ಅವರಿಗೆ ಆಗಿರುವ ಅವಮಾನದಿಂದ ಈ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ಲವಾ ಎಂದು ಆಕ್ರೋಶ ಹೊರಹಾಕಿದ್ದಾರೆ.

    ವಿಕೃತ ಮನಸ್ಸಿನ ಕಿಡಿಗೇಡಿ ಅಧ್ಯಕ್ಷ ತಯಾರಿಸಿರುವ ಪರಿಷ್ಕೃತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ, ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ. ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ, ಮೊದಲು ಈ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ ಎಂದು ಕೆಂಡಕಾರಿದ್ದಾರೆ.

  • ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – 9 ಸಾವು, 20 ಮಂದಿಗೆ ಗಾಯ

    ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – 9 ಸಾವು, 20 ಮಂದಿಗೆ ಗಾಯ

    ಲಕ್ನೋ: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು 9 ಮಂದಿ ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿರುವ ಘಟನೆ ಇಂದು ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ನಡೆದಿದೆ.

    ದೆಹಲಿಯಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.  ಇದನ್ನೂ ಓದಿ: ಹೈದರಾಬಾದ್ ಗ್ಯಾಂಗ್ ರೇಪ್ ತನಿಖೆ CBIಗೆ ವಹಿಸುವಂತೆ ಬಿಜೆಪಿ ಒತ್ತಾಯ

    ಹಾಪುರ್‍ನಲ್ಲಿರುವ ಎಲೆಕ್ಟ್ರಾನಿಕ್ ಉಪಕರಣಗಳ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 20 ಮಂದಿ ಗಾಯಗೊಂಡಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಘಟನೆಯ ಕುರಿತು ತನಿಖೆ ಮಾಡುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹಾಪುರ್ ಇನ್‌ಸ್ಪೆಕ್ಟರ್ ಜನರಲ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಹೈದರಾಬಾದ್ ಗ್ಯಾಂಗ್ ರೇಪ್ ತನಿಖೆ CBIಗೆ ವಹಿಸುವಂತೆ ಬಿಜೆಪಿ ಒತ್ತಾಯ

    ಪ್ರಧಾನಿ ನರೇಂದ್ರ ಮೋದಿ ದುರಂತದ ಕುರಿತು ಸಂತಾಪ ಸೂಚಿಸಿದ್ದು, ರಾಜ್ಯ ಸರ್ಕಾರವು ಗಾಯಾಳುಗಳ ಚಿಕಿತ್ಸೆಗೆ ತ್ವರಿತವಾಗಿ ತೊಡಗಿಸಿಕೊಂಡಿದೆ. ಉತ್ತರ ಪ್ರದೇಶದ ಹಾಪುರದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ನಡೆದ ಘಟನೆ ಹೃದಯವಿದ್ರಾವಕವಾಗಿದೆ. ಇದರಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪವನ್ನು ತಿಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಘಟನೆಯ ಕುರಿತು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಹ ಸಂತಾಪ ಸೂಚಿಸಿದ್ದು, ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ರಕ್ಷಣಾ ಮತ್ತು ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡಲು ಹೇಳಿದ್ದಾರೆ. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಸಾಧ್ಯವಾದಷ್ಟೂ ಎಲ್ಲ ಸಹಾಯವನ್ನು ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಷ್ಟೇ ಅಲ್ಲದೆ ಅಪಘಾತದ ಬಗ್ಗೆ ತಜ್ಞರಿಂದ ತನಿಖೆ ನಡೆಸುವಂತೆ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

  • ಪರಿಷ್ಕೃತ ಪಠ್ಯ ರದ್ದು ಮಾಡಿ, ರೋಹಿತ್ ಚಕ್ರತೀರ್ಥರನ್ನು ವಜಾಗೊಳಿಸಬೇಕು – ಸಿದ್ದರಾಮಯ್ಯ ಆಗ್ರಹ

    ಪರಿಷ್ಕೃತ ಪಠ್ಯ ರದ್ದು ಮಾಡಿ, ರೋಹಿತ್ ಚಕ್ರತೀರ್ಥರನ್ನು ವಜಾಗೊಳಿಸಬೇಕು – ಸಿದ್ದರಾಮಯ್ಯ ಆಗ್ರಹ

    ಬೆಂಗಳೂರು: ಕನ್ನಡ ನುಡಿ, ಸಾಹಿತ್ಯ ಮತ್ತು ಸಾಹಿತಿಗಳನ್ನು ಗೇಲಿ ಮಾಡುತ್ತಾ ಬಂದಿರುವ ರೋಹಿತ್ ಚಕ್ರತೀರ್ಥ ಅವರು, ಸಾಮಾಜಿಕ ಜಾಲತಾಣಗಳಲ್ಲಿ ವಿಕೃತಿಯ ಅಭಿಪ್ರಾಯಗಳನ್ನು ಹಂಚಿಕೊಂಡು ಸಾಮಾಜಿಕ ಆರೋಗ್ಯವನ್ನು ಹಾಳು ಮಾಡುತ್ತಿದ್ದಾರೆ. ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದಲೂ ರೋಹಿತ್ ಚಕ್ರತೀರ್ಥರನ್ನ ಕಿತ್ತುಹಾಕಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

    ಪರಿಷ್ಕೃತ ಪಠ್ಯ ರದ್ದತಿಗೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ನಾಡದ್ರೋಹಿ ಅಧ್ಯಕ್ಷನ ಸಮಿತಿ ಪರಿಷ್ಕರಿಸಿರುವ ಪಠ್ಯವನ್ನು ರದ್ದುಮಾಡಿ, ನೂತನ ಪರಿಷ್ಕೃತ ಪಠ್ಯ ರಚನೆಯಾಗುವ ವರೆಗೆ ಹಳೆಯ ಪಠ್ಯವನ್ನೇ ಮುಂದುವರಿಸುವುದು. ಸರ್ಕಾರ ಜಿದ್ದಿಗೆ ಬೀಳದೆ ಈ ನಿರ್ಧಾರ ಕೈಗೊಳ್ಳಬೇಕು. ಪಠ್ಯ ಪರಿಷ್ಕರಣಾ ಸಮಿತಿಗೆ ಅನರ್ಹರ ನೇಮಕ ಮತ್ತು ಅದರಿಂದ ಸೃಷ್ಟಿಯಾಗಿರುವ ವಿವಾದಕ್ಕೆ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಯಾವ ಪಠ್ಯವನ್ನು ಓದಬೇಕೆಂಬ ಬಗ್ಗೆ ವಿದ್ಯಾರ್ಥಿಗಳು, ಯಾವುದನ್ನು ಬೋಧಿಸಬೇಕೆಂದು ಶಿಕ್ಷಕರು ಗೊಂದಲಕ್ಕೀಡಾಗಿದ್ದಾರೆ. ಇದಕ್ಕೆ ಏನು ಪರಿಹಾರ ಎಂದು ಪ್ರಶ್ನಿಸುವ ಮೂಲಕ ಕಿಡಿಕಾರಿದ್ದಾರೆ.

    ಕಳೆದ ಹತ್ತು ವರ್ಷಗಳಿಂದ ಕನ್ನಡ ನುಡಿ, ಸಾಹಿತ್ಯ ಮತ್ತು ಸಾಹಿತಿಗಳನ್ನು ಗೇಲಿ ಮಾಡುತ್ತಾ ಬಂದಿರುವ, ಸಾಮಾಜಿಕ ಜಾಲತಾಣಗಳಲ್ಲಿ ವಿಕೃತಿಯ ಅಭಿಪ್ರಾಯಗಳನ್ನು ಹಂಚಿಕೊಂಡು ಸಾಮಾಜಿಕ ಆರೋಗ್ಯವನ್ನು ಹಾಳುಗೆಡಹುತ್ತಾ ಬಂದಿರುವ ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

    ನಾಡಗೀತೆ ಮತ್ತು ರಾಷ್ಟ್ರಕವಿ ಕುವೆಂಪು ಅವರನ್ನು ಗೇಲಿಮಾಡಿರುವ, ಸಮಾಜ ಸುಧಾರಕರಾದ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಮಾತ್ರವಲ್ಲ ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದಲೂ ಕಿತ್ತುಹಾಕಬೇಕು ಎಂದಿದ್ದಾರೆ.  ಇದನ್ನೂ ಓದಿ: ಬೀದರ್ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್, ಆಂದೋಲನ ಶ್ರೀಗಳಿಗೆ ಬ್ಯಾನ್

    ನಾಡಿನ ಹಲವಾರು ಹಿರಿಯ ಸಾಹಿತಿಗಳು ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಸೇರಿಸಲಾಗಿರುವ ತಮ್ಮ ಕೃತಿಗಳನ್ನು ವಾಪಸ್ಸು ಪಡೆದಿದ್ದಾರೆ. ಸರ್ಕಾರ ತಮ್ಮ ಅಭಿಪ್ರಾಯವನ್ನು ಧಿಕ್ಕರಿಸಿದರೆ ಕಾನೂನು ಹೋರಾಟ ಮಾಡುವುದಾಗಿ ಈ ಸಾಹಿತಿಗಳು ಎಚ್ಚರಿಕೆ ನೀಡಿದ್ದಾರೆ. ಇಂತಹ ವಿವಾದಾತ್ಮಕ ಪಠ್ಯವನ್ನು ಬೋಧಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

    ಬಸವಣ್ಣನವರ ವಿಚಾರವೂ ಸೇರಿದಂತೆ ಆಕ್ಷೇಪ ವ್ಯಕ್ತವಾಗಿರುವ ಅಂಶಗಳನ್ನು ಪರಿಷ್ಕರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಅವರು ಹೇಳಿದ್ದಾರೆ. ಹಾಗಿದ್ದರೆ ಈಗಿನ ಪರಿಷ್ಕೃತ ಪಠ್ಯವನ್ನು ಕೈಬಿಡಲಾಗುವುದೇ? ಇದನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರು ಸ್ಪಷ್ಟಪಡಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂಗಳ ರಕ್ಷಣೆ ಹೆಸರಲ್ಲಿ ಅಧಿಕಾರಕ್ಕೇರಿ, ಹಿಂದೂ ವಿರೋಧಿ ವರ್ತನೆ ಸರಿಯಲ್ಲ: ಮುತಾಲಿಕ್

    ಜನತೆಯಲ್ಲಿ ಮೂಡಿರುವ ಗೊಂದಲವನ್ನು ಪರಿಹರಿಸುವಂತಹ ಸ್ಪಷ್ಟತೆ ರಾಜ್ಯದ ಬೊಮ್ಮಾಯಿ ಅವರ ಮಾತಿನಲ್ಲಿ ಇರಬೇಕು. ಇವರ ಮಾತು ಇನ್ನಷ್ಟು ಗೊಂದಲಗಳನ್ನು ಸೃಷ್ಟಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರು ಬೋಧಿಸಲಿರುವುದು ಹಳೆಯ ಪಠ್ಯವೇ? ಪರಿಷ್ಕೃತ ಪಠ್ಯವೇ ಎಂದು ಎಂದಿದ್ದಾರೆ.

    ವಿಸರ್ಜನೆ ಮಾಡಬೇಕಾಗಿರುವು ಪರಿಷ್ಕೃತ ಪಠ್ಯವನ್ನು, ಈಗಾಗಲೇ ಅವಧಿ ಮುಗಿದಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ. ಪೂರ್ವಗ್ರಹ ಪೀಡಿತ ಅಧ್ಯಕ್ಷನನ್ನು ಕಿತ್ತುಹಾಕಿದ ಮೇಲೆ ಆ ಸಮಿತಿ ಶಿಫಾರಸು ಮಾಡಿರುವ ಪಠ್ಯವನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ ಎಂದು ಹೇಳಿದ್ದಾರೆ.

  • ಕನ್ನಡದ ನಾಡು, ನುಡಿ ಮತ್ತು ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್ ಸದಾ ಬದ್ಧ: ರಾಹುಲ್ ಗಾಂಧಿ

    ಕನ್ನಡದ ನಾಡು, ನುಡಿ ಮತ್ತು ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್ ಸದಾ ಬದ್ಧ: ರಾಹುಲ್ ಗಾಂಧಿ

    ನವದೆಹಲಿ: ಕರ್ನಾಟಕದ ಜನ ಸದಾ ಸಾಮಾಜಿಕ ನ್ಯಾಯ, ಮಹನೀಯರ ಏಕತೆ ಹಾಗೂ ಮಾನವತಾವಾದದ ತತ್ವಗಳನ್ನ ಪಾಲಿಸಿಕೊಂಡು ಬಂದಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ನಡದಲ್ಲಿಯೇ ಟ್ವೀಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಬಿ. ಆರ್ ಅಂಬೇಡ್ಕರ್, ಬುದ್ಧ, ಬಸವಣ್ಣ, ನಾರಾಯಣ ಗುರು, ಕುವೆಂಪು ಮುಂತಾದ ಅನೇಕ ಮಹನೀಯರ ಜೀವನಕ್ಕೆ ಹಾಗೂ ಕರ್ನಾಟಕದ ಅಸ್ಮಿತೆಗೆ ವಿರುದ್ಧವಾದ ಸಂದೇಶಗಳನ್ನು ಪಠ್ಯಪುಸ್ತಕದ ಮೂಲಕ ಮಕ್ಕಳಿಗೆ ಕಲಿಸಲು ಬಿಜೆಪಿ ಹೊರಟಿದೆ ಎಂದಿದ್ದಾರೆ. ಇದನ್ನೂ ಓದಿ: ಮದರಸಾ ತೆರವು ಮಾಡದೆ ಇದ್ದರೆ ನಾವೇ ಅವರ ಕೊರಳಪಟ್ಟಿ ಹಿಡಿದು ಹೊರ ಹಾಕ್ತಿವಿ: ಹಿಂದೂ ಸಂಘಟನೆಗಳು

    ಕರ್ನಾಟಕದ ಒಂದು ಕೋಟಿ ಮಕ್ಕಳ ಭವಿಷ್ಯದ ನಿರ್ಧಾರವನ್ನು ಅರ್ಹತೆಯಿಲ್ಲದ ಕೈಗಳಿಗೆ ವಹಿಸಲಾಗಿದೆ. ಸಾಮಾಜಿಕ ನ್ಯಾಯ, ಪ್ರಾದೇಶಿಕತೆ ಮತ್ತು ಲಿಂಗ ಸಮಾನತೆ ಸಾರುವ ಪಾಠಗಳನ್ನು, ಲೇಖಕರನ್ನು ಹೊರಗಿಟ್ಟು ಮಕ್ಕಳಿಗೆ ಕೇಸರೀಕರಣದ ಪಾಠ ಹೇಳಲು ಹೊರಟಿರುವುದು ವೈವಿಧ್ಯತೆಯ ತೊಟ್ಟಿಲಾದ ಭಾರತಕ್ಕೆ ಮಾಡುವ ಅಪಮಾನ ಎಂದು ಹೇಳಿದರು. ಇದನ್ನೂ ಓದಿ: ಖಾಕಿ ಚಡ್ಡಿ ಏನು ಈ ದೇಶದ ರಾಷ್ಟ್ರಧ್ವಜವೇ: ಎನ್‍ಎಸ್‍ಯುಐ ಉಪಾಧ್ಯಕ್ಷೆ

    ರಾಜ್ಯದ ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಎಲ್ಲರೂ ಒಂದಾಗಿ ಅದನ್ನ ಮೆಟ್ಟಿನಿಲ್ಲುತ್ತಾರೆ ಎನ್ನುವುದನ್ನ ಕನ್ನಡಿಗರು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ. ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನ ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲ. ಕನ್ನಡದ ನಾಡು, ನುಡಿ ಮತ್ತು ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್ ಸದಾ ಬದ್ಧವಾಗಿದೆ ಎಂದರು.

  • 2 ವರ್ಷದಿಂದ ಬಗೆಹರಿಯದ ಮಂಡ್ಯ ವ್ಯಕ್ತಿಯ ಸಮಸ್ಯೆಗೆ ಎರಡೇ ದಿನದಲ್ಲಿ ಪರಿಹಾರ ಕೊಟ್ಟ ಮೋದಿ

    2 ವರ್ಷದಿಂದ ಬಗೆಹರಿಯದ ಮಂಡ್ಯ ವ್ಯಕ್ತಿಯ ಸಮಸ್ಯೆಗೆ ಎರಡೇ ದಿನದಲ್ಲಿ ಪರಿಹಾರ ಕೊಟ್ಟ ಮೋದಿ

    ಮಂಡ್ಯ: 2 ವರ್ಷದಿಂದ ಬಗೆಹರಿಯದ ಸಮಸ್ಯೆಯನ್ನು ಬಗೆಹರಿಸುವಂತೆ ಮಂಡ್ಯ ರೈತ ಮುಖಂಡ ಮಾಡಿದ್ದಾರೆ. ಅವರು ಮಾಡಿದ ಒಂದೇ ಒಂದು ಟ್ವೀಟ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪಂದಿಸಿ, ಎರಡೇ ದಿನದಲ್ಲಿ ಆ ಸಮಸ್ಯೆಯನ್ನು ಬಗೆಹರಿಸಿದ್ದಾರೆ.

    ಮಂಡ್ಯದ ತಂಡಸನಹಳ್ಳಿ ಗ್ರಾಮದ ನೂತನ್ ಹುಟ್ಟುತ್ತಲೇ ಅಂಗವಿಕಲತೆ ಹಾಗೂ ವಿಚಿತ್ರ ಚರ್ಮ ರೋಗಕ್ಕೆ ತುತ್ತಾಗಿದ್ದಾರು. ಆಧಾರ್ ಪದ್ಧತಿಯ ಆರಂಭದಲ್ಲಿ ನೂತನ್ ಅವರ ಭಾವಚಿತ್ರದ ಆಧಾರದ ಮೇಲೆ ಅವರಿಗೆ ಅಧಿಕಾರಿಗಳು ಆಧಾರ್ ಕಾರ್ಡ್ ಮಾಡಿಕೊಟ್ಟಿದ್ದರು. ಕಳೆದ ಎರಡೂವರೆ ವರ್ಷದ ಹಿಂದೆ ಇವರಿಗೆ ಬರುತ್ತಿದ್ದ ಪಿಂಚಣಿ ಹಾಗೂ ಸರ್ಕಾರಿ ಸವಲತ್ತುಗಳು ನಿಂತು ಹೋಗಿದ್ದವು. ಈ ಬಗ್ಗೆ ವಿಚಾರಿಸಿದಾಗ ನಿಮ್ಮ ಆಧಾರ್ ಕಾರ್ಡ್ ಬ್ಲಾಕ್ ಆಗಿದೆ, ನಿಮ್ಮ ಆಧಾರ್ ಕಾರ್ಡ್ನ್ನು ಅಪ್‌ಡೇಟ್ ಮಾಡಿಸುವಂತೆ ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ನೂತನ್ ಹಾಗೂ ಕುಟುಂಬಸ್ಥರು ಆಧಾರ್ ಕಾರ್ಡ್ ಕಚೇರಿಗೆ ಹೋದಾಗ ನಿಮ್ಮ ಥಂಬ್ ತೆಗೆದುಕೊಳ್ಳುತ್ತಿಲ್ಲ, ಇದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮತ್ತೆ ಶುರುವಾಯ್ತು ಕೊರೊನಾ ಭೀತಿ – ಮಹಾರಾಷ್ಟ್ರದಲ್ಲಿ ದಿಢೀರ್ ಸ್ಫೋಟ

    ನೂತನ್‌ಗೆ ವಿಚಿತ್ರ ಚರ್ಮ ರೋಗ ಇರುವ ಕಾರಣ ಅವರ ಬೆರಳಚ್ಚು ಹಾಗೂ ಅವರ ಕಣ್ಣಿನ ಗುರುತು ತೆಗೆದುಕೊಳ್ಳುತ್ತಿರಲಿಲ್ಲ. ಈ ಸಮಸ್ಯೆಯನ್ನು ಬಗೆಹರಿಸಿಕೊಡಿ ಎಂದು ಇವರು ಎಲ್ಲಾ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿಯನ್ನು ಸಲ್ಲಿಸಿದ್ದರು. 2 ವರ್ಷವಾದರೂ ಯಾರೂ ಸಹ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗಿರಲಿಲ್ಲ.

    ಕಳೆದ 3 ದಿನಗಳ ಹಿಂದೆ ಮಂಡ್ಯ ರೈತ ಮುಖಂಡ ಮಧುಚಂದನ್ ನೂತನ್ ಫೋಟೊವನ್ನು ಹಾಕಿ, ಇವರಿಗೆ ಚರ್ಮ ರೋಗ ಇದೆ, ಆಧಾರ್ ಕಾರ್ಡ್ಗೆ ಬೆರಳಚ್ಚು ಆಗುತ್ತಿಲ್ಲ. ಇದರಿಂದ ಇವರು ಸರ್ಕಾರಿ ಸೌಲಭ್ಯದಿಂದ ವಂಚಿತನಾಗಿದ್ದಾರೆ. ಆಧಾರ್ ಕಾರ್ಡ್ನ್ನು ಹೇಗೆ ಸರಿಪಡಿಸುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ಇನ್ಮುಂದೆ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗೆ ಸಬ್ಸಿಡಿ ಸಿಗಲ್ಲ

    ಈ ಟ್ವೀಟ್ ನೋಡಿದ ಪ್ರಧಾನಿ ಸಚಿವಾಲಯದ ಅಧಿಕಾರಿಗಳು ಅವರು ಈ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಅಧಿಕಾರಿಗಳು ನೂತನ್‌ಗೆ ಕರೆ ಮಾಡಿ, ಸಮಸ್ಯೆಗಳನ್ನು ಆಲಿಸಿ ಅವರಿಗೆ ಆಧಾರ್ ಕಾರ್ಡ್ ಅನ್ನುಂ ಅಪ್‌ಡೇಟ್ ಮಾಡಿ ಅವರ ಮನೆಗೆ 2 ದಿನದಲ್ಲಿ ಕಳುಹಿಸಿದ್ದಾರೆ.

    ನೂತನ್ ಅವರು ರೈತ ಮುಖಂಡ ಮಧುಚಂದನ್ ಅವರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೂತನ್ ಮತ್ತು ಅವರ ಕುಟುಂಬಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

  • ಪಾಕಿಸ್ತಾನದವನಾಗಿ ನಾನು ಹೇಳುತ್ತೇನೆ ವಿರಾಟ್ ಕೊಹ್ಲಿ ಒಬ್ಬ ಸಾರ್ವಕಾಲಿಕ ಶ್ರೇಷ್ಠ ಆಟಗಾರ: ಶೋಯೆಬ್ ಅಕ್ತರ್

    ಪಾಕಿಸ್ತಾನದವನಾಗಿ ನಾನು ಹೇಳುತ್ತೇನೆ ವಿರಾಟ್ ಕೊಹ್ಲಿ ಒಬ್ಬ ಸಾರ್ವಕಾಲಿಕ ಶ್ರೇಷ್ಠ ಆಟಗಾರ: ಶೋಯೆಬ್ ಅಕ್ತರ್

    ಮುಂಬೈ: ಪಾಕಿಸ್ತಾನದವನಾಗಿ ನಾನು ಹೇಳುತ್ತೇನೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಒಬ್ಬ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ದೈತ್ಯ ಬೌಲರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ವಿರಾಟ್ ಕೊಹ್ಲಿ ಭಾರತ ತಂಡದ ಶ್ರೇಷ್ಠ ಬ್ಯಾಟ್ಸ್‌ಮ್ಯಾನ್ ಆಗಿ ಗುರುತಿಸಿಕೊಂಡವರು. ಆದರೆ ಅವರ ಬ್ಯಾಟ್‍ನಿಂದ ಇತ್ತೀಚಿಗೆ ರನ್ ಗಳಿಸಲು ಹೆಣಗಾಡುತ್ತಿದ್ದಾರೆ. ನವೆಂಬರ್ 2019 ರಿಂದ ಅವರು ಯಾವುದೇ ಅಂತರಾಷ್ಟ್ರೀಯ ಮ್ಯಾಚ್‍ಗಳಲ್ಲಿಯೂ ಶತಕವನ್ನು ಗಳಿಸಿಲ್ಲ. ಐಪಿಎಲ್ 2022 ಆವೃತ್ತಿಯಲ್ಲಿಯೂ ಸಹ ಅವರು ಅಷ್ಟೇನು ಹೇಳಿಕೊಳ್ಳುವಷ್ಟು ಆಟವಾಡಿಲ್ಲ. ಆರ್‌ಸಿಬಿ ತಂಡದ ಪರ ಆಡುತ್ತಿರುವ ಅವರು 16 ಪಂದ್ಯಗಳನ್ನು ಆಡಿ 22.73ರ ಸರಾಸರಿಯಲ್ಲಿ 341ರನ್ ಗಳಿಸಿದ್ದಾರೆ. ನಿರೀಕ್ಷೆಗೆ ತಕ್ಕಂತೆ ಪದರ್ಶನ ನೀಡದೆ ಕೇವಲ 2 ಅರ್ಧಶತಕಗಳನ್ನು ಗಳಿಸುವಷ್ಟರಲ್ಲಿ ಶಕ್ತರಾಗಿದ್ದಾರೆ. ಇದಲ್ಲದೇ ಬೆಂಗಳೂರು ತಂಡವನ್ನು ಫೈನಲ್ ಹಂತಕ್ಕೆ ತಲುಪಿಸುವಲ್ಲಿ ವಿಫಲರಾಗಿದ್ದಾರೆ. ಹಾಗಾಗಿ ಅವರ ಇತ್ತೀಚಿನ ಕಳಪೆ ಆಟವನ್ನು ಗಮನಿಸಿರುವ ಎಷ್ಟೋ ಮಾಜಿ ಆಟಗಾರರು ಹಾಗೂ ಅಭಿಮಾನಿಗಳು ಅವರ ಮೇಲೆ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚಾಂಪಿಯನ್ ತಂಡವನ್ನು ಗೌರವಿಸಿದ ಗುಜರಾತ್ ಸರ್ಕಾರ – ಹಾರ್ದಿಕ್ ಪಾಂಡ್ಯಗೆ ವಿಶೇಷ ಉಡುಗೊರೆ

    IPL 2022 VIRAT KOHLI

    ಆದರೆ, ಶೋಯೆಬ್ ಅಕ್ತರ್, ಕೊಹ್ಲಿ ಬೆಂಬಲಕ್ಕೆ ನಿಂತಿದ್ದಾರೆ. ನೀವು ವಿರಾಟ್ ಕೊಹ್ಲಿ ಬಗ್ಗೆ ಒಳ್ಳೆಯ ಮಾತುಗಳನ್ನು ಹೇಳುತ್ತೀಲ್ಲ. ಅವರಿಗೆ ಗೌರವ ಕೊಡಿ. ನೀವು ವಿರಾಟ್ ಕೊಹ್ಲಿಗೆ ಏಕೆ ಗೌರವ ನೀಡುವುದಿಲ್ಲ? ಪಾಕಿಸ್ತಾನಿಯಾಗಿ ನಾನು ಹೇಳುತ್ತೇನೆ ಅವರು ಸಾರ್ವಕಾಲಿಕ ಶ್ರೇಷ್ಠ ಆಟಗಾರ. ಅವರು ಏಕದಿನ ಪಂದ್ಯಗಳಲ್ಲಿ 110 ಶತಕಗಳನ್ನು ಹೊಡೆಯುತ್ತಾರೆ ಎಂಬ ವಿಶ್ವಾಸವಿದೆ ಎಂದು ವಾಹಿನಿಯ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಗುಜರಾತ್‌ಗೆ ಐಪಿಎಲ್‌ ಟ್ರೋಫಿ – ಯಾವ ಆಟಗಾರರಿಗೆ ಏನು ಪ್ರಶಸ್ತಿ?

    ನಂತರ ಕೊಹ್ಲಿಗೆ ಕೆಲ ಸೂಚನೆಗಳನ್ನು ನೀಡಿದ ಅವರು, ಭಯಪಡಬೇಡಿ ನೀವು 45 ವರ್ಷ ವಯಸ್ಸಿನವರೆಗೆ ಆಡಬೇಕು. ಪ್ರಸ್ತುತ ಪರಿಸ್ಥಿತಿಯು ನಿಮ್ಮನ್ನು 110 ಶತಕಗಳನ್ನು ಬಾರಿಸಲು ಸಿದ್ಧಗೊಳಿಸುತ್ತಿದೆ. ಜನರು ನಿಮ್ಮನ್ನು ಅಲ್ಲಗಳಿಯುತ್ತಿದ್ದಾರೆ. ಅವರು ನಿಮ್ಮ ವಿರುದ್ಧ ಟ್ವೀಟ್ ಮಾಡುತ್ತಿದ್ದಾರೆ. ದೀಪಾವಳಿಯಂದು ನೀವು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದೀರಿ, ಅದರಲ್ಲಿ ನಿಮ್ಮನ್ನು ಟೀಕಿಸಲಾಗಿದೆ. ಅವರು ನಿಮ್ಮ ಹೆಂಡತಿ, ನಿಮ್ಮ ಮಗುವಿನ ಬಗ್ಗೆ ಟ್ವೀಟ್ ಮಾಡಿದ್ದಾರೆ. ಹಾಗಾಗಿ ಯಾರ ಮಾತಿಗೂ ನೀವು ಕಿವಿಗೊಡದೇ ನನ್ನ ಮಾತುಗಳನ್ನು ನೆನಪಿನಲ್ಲಿಡಿ. ಅದನ್ನು ಇಂದಿನಿಂದಲೇ ಪಾಲಿಸಿ ಎಂದಿದ್ದಾರೆ.

  • ನಾವೆಲ್ಲಾ ಪೋಸ್ಟ್ ಮ್ಯಾನ್ ಕೆಲಸ ಮಾಡ್ತೇವೆ- ಬಿಜೆಪಿ ಕುರಿತು ನಟ ಜಗ್ಗೇಶ್ ಹೇಳಿದ್ದಿಷ್ಟು

    ನಾವೆಲ್ಲಾ ಪೋಸ್ಟ್ ಮ್ಯಾನ್ ಕೆಲಸ ಮಾಡ್ತೇವೆ- ಬಿಜೆಪಿ ಕುರಿತು ನಟ ಜಗ್ಗೇಶ್ ಹೇಳಿದ್ದಿಷ್ಟು

    ಬೆಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿ ಪ್ಲಾನ್ ಮಾಡುವುದು ಏನೂ ಇಲ್ಲ. ಬಿಜೆಪಿ ಕಾರ್ಯಕರ್ತರು ತಳಮಟ್ಟದಿಂದ ರಾಷ್ಟ್ರಮಟ್ಟದವರೆಗೂ ಬಲಿಷ್ಠರಾಗಿದ್ದಾರೆ. ನಾವೆಲ್ಲ ಪೋಸ್ಟ್ ಮ್ಯಾನ್ ಕೆಲಸ ಮಾಡ್ತೇವೆ ಅಷ್ಟೇ ಎಂದು ನಟ ಹಾಗೂ ಬಿಜೆಪಿ ರಾಜ್ಯಸಭಾ ಅಭ್ಯರ್ಥಿ ಜಗ್ಗೇಶ್ ಹೇಳಿದ್ದಾರೆ.

    ಬಿಜೆಪಿಯಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಆಯ್ಕೆಯಾದ ಬೆನ್ನಲ್ಲೇ ಪಬ್ಲಿಕ್ ಟಿವಿಯೊಂದಿಗೆ ಅವರು ಮಾತನಾಡಿದ ಅವರು, ನಾಳೆ ನಾಮಪತ್ರ ಸಲ್ಲಿಸ್ತೇನೆ ಎಂದು ಹೇಳಿದರು. ಇದನ್ನೂ ಓದಿ: ರಾಜಭವನದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿ ಅನಾವರಣ – ನಾಡಿಗೆ ಸಾಮಾಜಿಕ ನ್ಯಾಯದ ಸಂದೇಶ ರವಾನಿಸಿದ ರಾಜಭವನ

    ಈ ವೇಳೆ ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಕ ಸಮುದಾಯವನ್ನು ಸೆಳೆಯುವ ಸಲುವಾಗಿ ನಿಮಗೆ ಟಿಕೆಟ್ ನೀಡಲಾಗಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿ, ಬಿಜೆಪಿ ಪ್ಲಾನ್ ಮಾಡುವುದೇನೂ ಇಲ್ಲ. ಕಾರ್ಯಕರ್ತರು ತಳಮಟ್ಟದಿಂದ ರಾಷ್ಟ್ರಮಟ್ಟದ ವರೆಗೂ ಬಲಿಷ್ಠವಾಗಿದ್ದಾರೆ. ಇದೊಂದು ಬ್ಯೂಟಿಫುಲ್ ಪೋಸ್ಟ್‌ಮ್ಯಾನ್‌ ಹುದ್ದೆ ನಾವೆಲ್ಲ ಪೋಸ್ಟ್ ಮ್ಯಾನ್ ಕೆಲಸ ಮಾಡ್ತೇವೆ. ಏನೋ ಮಾಡ್ತೀವಿ ಅನ್ನೋ ಕಲ್ಪನೆಯಲ್ಲಿ ನಾನಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ : ಪ್ರಭುದೇವ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ

    ರಾಜ್ಯಸಭೆಗೆ ಟಿಕೆಟ್ ಸಿಗುತ್ತೆ ಅನ್ನೋ ನಿರೀಕ್ಷೆ ಇರ್ಲಿಲ್ಲ. ಆದರೂ ಗುರುತಿಸಿರುವುದು ತುಂಬಾ ಸಂತೋಷವಾಗಿದೆ. ತಾಳ್ಮೆ, ನಂಬಿಕೆ, ಸೇವಾ ಮನೋಭಾವ ಇದ್ರೆ ಎಲ್ಲವೂ ಸಾಧ್ಯ. ಈ ಗುಣಗಳಿದ್ರೆ ಬಿಜೆಪಿಯಲ್ಲಿ ಕಾರ್ಯಕರ್ತರು ಬಹಳ ಎತ್ತರಕ್ಕೆ ಹೋಗಬಹುದು. ಅದನ್ನು ಬಿಟ್ಟು ನನಗೆ ಅದು ಸಿಕ್ಕಿಲ್ಲ ಇದು ಸಿಕ್ಕಿಲ್ಲ, ಸಿಗದಿದ್ರೆ ಮುನಿಸ್ಕೊಳ್ತೀನಿ, ಬಿಟ್ಟು ಹೋಗ್ತೀನಿ ಅನ್ನೋದಕ್ಕೆ ಹೋಗಬಾರದು ಎಂದು ಸಲಹೆ ನೀಡಿದರು.

    JAGGESH

    ಹಳೇ ಮೈಸೂರು ಭಾಗ ಅನ್ನೋದಕ್ಕಿಂತ ಇಡೀ ಕರ್ನಾಟಕದಲ್ಲಿ ನನ್ನನ್ನು ಮನೆಮಗನಂತೆ ಪ್ರೀತಿಸ್ತಾರೆ. ರಾಜ್ಯಸಭೆಗೆ ಹೋದ ಮೇಲೆ ಅನೇಕ ಗುರಿಗಳಿವೆ. ನಾನು ಶಾಸಕ, ಎಮ್ಮೆಲ್ಸಿ ಆದಾಗಲೂ ಬಹಳ ಪ್ರಶ್ನೆಗಳನ್ನು ಕೇಳಿದ್ದೆ. ರಾಜ್ಯಸಭೆಯಲ್ಲೂ ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡ್ತೇನೆ ಎಂದು ಹೇಳಿದರು.

    ಇನ್ನೂ ಭಾಷೆಯ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ನವರಸ ನಾಯಕ ಜಗ್ಗೇಶ್, ನನಗೆ ಭಾಷೆ ಸಮಸ್ಯೆ ಅಲ್ಲ. ನಾನು ಹಿಂದಿ, ಇಂಗ್ಲಿಷ್, ಕನ್ನಡ ತಮಿಳ್ ಈ ಎಲ್ಲಾ ಭಾಷೆ ಮಾತನಾಡುತ್ತೇನೆ. ಸ್ವಲ್ಪ ಓದಿ ತಿಳಿದುಕೊಂಡಿದ್ದೇನೆ. ಹೆಚ್ಚಿನ ವಿಚಾರ ತಿಳಿದುಕೊಳ್ಳಲು ಹಿರಿಯರ ಸಲಹೆ ಪಡೆಯುತ್ತೇನೆ. ಕಾಯಾ ವಾಚಾ ಮನಸಾ ಕನ್ನಡದ ಡಿಂಡಿಮವನ್ನು ಖಂಡಿತವಾಗಿ ರಾಷ್ಟ್ರ ಮಟ್ಟದಲ್ಲಿ ಮುಟ್ಟಿಸುವ ಕೆಲಸ ಮಾಡುತ್ತೇನೆ. ಒಳ್ಳೆಯ ಕೆಲಸಕ್ಕೆ ಹೋಗುತ್ತಿದ್ದೇನೆ, ಎಲ್ರೂ ಹಾರೈಸಿ ಎಂದು ಮನವಿ ಮಾಡಿದರು.

    ಟಿಕೆಟ್‌ಗಾಗಿ ನಾನು ಯಾವುದೇ ಪ್ರಯತ್ನ ಮಾಡಿಲ್ಲ. ಯಾವ ಹುದ್ದೆಯನ್ನೂ ಕೇಳಿಲ್ಲ. ಕಳೆದ ಬಾರಿ ಕಡೆಗಳಿಗೆಯಲ್ಲಿ ಯಶವಂತಪುರದಲ್ಲಿ ನಿಲ್ಲಲು ಹೇಳಿದ್ರು. ಆಗ ನಾನು ಬೇಡ ಅಂದಿದ್ದೆ. ಏಕೆಂದರೆ ನಾವು ವಿಧಾನಸಭೆಗೆ ಸ್ಪರ್ಧೆ ಮಾಡಬೇಕಾದರೆ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿರಬೇಕು. ಆವತ್ತು ನನ್ನ ಮೇಲೆ ವಿಶ್ವಾಸ ಇತ್ತು. 12 ಸಾವಿರ ಇದ್ದ ಮತಗಳನ್ನು 61ಸಾವಿರ ಮತಕ್ಕೆ ತಂದಿದ್ದೆ. ನನಗೂ ಆಶ್ಚರ್ಯವಾಗಿತ್ತು. ಇದರಿಂದ ನನಗೆ ಮುಂದಿನ ದಿನಗಳಲ್ಲಿ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಇತ್ತು. ಹೀಗಾಗಿ ನನ್ನ ವೃತ್ತಿಯಲ್ಲಿ ಮುಂದುವರೆಯುತ್ತಿದ್ದೆ ಎಂದು ಹೇಳಿದ್ದಾರೆ.

  • ಜಗ್ಗೇಶ್‍ಗೆ ರಾಜ್ಯಸಭಾ ಟಿಕೆಟ್- ರಾಯರ ಕೃಪೆ, ಪವಾಡಕ್ಕೆ ಧನ್ಯ ಅಂದ್ರು ನವರಸ ನಾಯಕ

    ಜಗ್ಗೇಶ್‍ಗೆ ರಾಜ್ಯಸಭಾ ಟಿಕೆಟ್- ರಾಯರ ಕೃಪೆ, ಪವಾಡಕ್ಕೆ ಧನ್ಯ ಅಂದ್ರು ನವರಸ ನಾಯಕ

    ಬೆಂಗಳೂರು: ರಾಜ್ಯಸಬಾ ಚುನಾವಣೆಗೆ ಸ್ಪರ್ಧಿಸಲು ಸ್ಯಾಂಡಲ್‍ವುಡ್ ನಟ ಜಗ್ಗೇಶ್ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ರಾಯರ ಕೃಪೆ ಅವರ ಪವಾಡಕ್ಕೆ ಧನ್ಯ ಎಂದು ಹೇಳಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ನವರಸ ನಾಯಕ, ಆತ್ಮೀಯ ಕನ್ನಡದ ಬಂಧುಗಳೆ 42 ವರ್ಷ ತಪಸ್ಸಿನಂತೆ ಕಲಾರಂಗದಲ್ಲಿ ಸೇವೆ ಮಾಡಿ ಕಾಯವಾಚಮನ ಸತ್ಯಮಾರ್ಗದಲ್ಲಿ ಬದುಕಿದ್ದೇನೆ. ನನ್ನ ನೆಚ್ಚಿನ ಭಾಜಪ ರಾಜ್ಯದ ಮುಖ್ಯ ಮಂತ್ರಿಗಳು, ಮಂತ್ರಿಗಳು, ಶಾಸಕಮಿತ್ರರು ಹಾಗೂ ರಾಜ್ಯ ರಾಷ್ಟ್ರದ ಸಂಘದ ಹಿರಿಯರ ಆಶೀರ್ವಾದದಿಂದ ರಾಜ್ಯಸಭೆಗೆ ಆಯ್ಕೆ ಆಗಿರುವೆ ತಮಗೆ ಶಿರಬಾಗಿ ವಂದಿಸುವೆ. ರಾಯರ ಕೃಪೆ ಅವರ ಪವಾಡಕ್ಕೆ ಧನ್ಯ ಎಂದು ಬರೆದುಕೊಂಡಿದ್ದಾರೆ.

    ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಣೆ ಮಾಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಕರ್ನಾಟಕದಿಂದಲೇ ಮುಂದುವರಿಸಲು ನಿರ್ಧರಿಸಿದ್ದು, ಕೆ.ಸಿ ರಾಮಮೂರ್ತಿ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ನಟ ಜಗ್ಗೇಶ್‍ಗೆ ಅವಕಾಶ ನೀಡಿದೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಜಗ್ಗೇಶ್, ನಿರ್ಮಲಾ ಸೀತಾರಾಮನ್‍ಗೆ ಸಿಕ್ತು ಬಿಜೆಪಿ ಟಿಕೆಟ್

    ನಟ ಜಗ್ಗೇಶ್ ಟಿಕೆಟ್ ನೀಡುವ ಮೂಲಕ ಯಶವಂತಪುರ ಕ್ಷೇತ್ರದಲ್ಲಿ ಒತ್ತಡ ಕಡಿಮೆ ಮಾಡಿದ್ದು, ಎಸ್.ಟಿ ಸೋಮಶೇಖರ್ ರಿಲೀಫ್ ನೀಡುವ ಕೆಲಸ ಹೈಕಮಾಂಡ್ ಮಾಡಿದೆ. ಜೆಡಿಎಸ್ ಜೊತೆಗೆ ಮಾತುಕತೆ ಅಂತ್ಯವಾಗದ ಹಿನ್ನೆಲೆ ಮೂರನೇ ಅಭ್ಯರ್ಥಿ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಜೆಡಿಎಸ್‍ನಿಂದ ಕುಪೇಂದ್ರ ರೆಡ್ಡಿ ಹೆಸರು ಮುನ್ನೆಲೆಯಲ್ಲಿದ್ದು ಅವರು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಹಿನ್ನಲೆ ಬಿಜೆಪಿ ಕಾದು ನೋಡುವ ತಂತ್ರಕ್ಕೆ ಮಣೆ ಹಾಕಿದೆ.

  • ವಿಷಕಾರಿದ್ದ ಅಫ್ರಿದಿ ವಿರುದ್ಧ ಅಮಿತ್ ಮಿಶ್ರಾ ಕಿಡಿ

    ವಿಷಕಾರಿದ್ದ ಅಫ್ರಿದಿ ವಿರುದ್ಧ ಅಮಿತ್ ಮಿಶ್ರಾ ಕಿಡಿ

    ನವದೆಹಲಿ: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‍ನನ್ನು ಬೆಂಬಲಿಸಿ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಟ್ವೀಟ್ ಮಾಡಿದ್ದಕ್ಕೆ ಭಾರತೀಯ ಕ್ರಿಕೆಟಿಗ ಅಮಿತ್ ಮಿಶ್ರಾ ಕಿಡಿಕಾರಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರವನ್ನು ಬೆಂಬಲಿಸಿದ್ದಕ್ಕಾಗಿ ಮಲಿಕ್‍ಗೆ ಮರಣದಂಡನೆ ವಿಧಿಸಬೇಕೆಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಬುಧವಾರ ನ್ಯಾಯಾಲಯವನ್ನು ಒತ್ತಾಯಿಸಿತ್ತು. ಇದನ್ನೂ ಓದಿ: ಪುಟಿನ್‌ನೊಂದಿಗೆ ನೇರ ಮಾತುಕತೆಗೆ ನಾನು ಸಿದ್ಧ: ಝೆಲೆನ್ಸ್ಕಿ

    ಈ ಬಗ್ಗೆ ಟ್ವೀಟ್ ಮಾಡಿದ್ದ ಅಫ್ರಿದಿ, ಮಾನವ ಹಕ್ಕುಗಳ ದುರುಪಯೋಗದ ವಿರುದ್ಧ ವಿಮರ್ಶಾತ್ಮಕ ಧ್ವನಿಗಳನ್ನು ಮೌನಗೊಳಿಸಲು ಭಾರತದ ನಿರಂತರ ಪ್ರಯತ್ನಗಳು ನಿಷ್ಪ್ರಯೋಜಕವಾಗಿದೆ. ಯಾಸಿನ್ ಮಲಿಕ್ ವಿರುದ್ಧದ ಆರೋಪಗಳು ಕಾಶ್ಮೀರದ ಸ್ವಾತಂತ್ರ್ಯ ಹೋರಾಟಕ್ಕೆ ಅಡ್ಡಿಯಾಗದಿರಲಿ. ಕಾಶ್ಮೀರಿ ನಾಯಕರ ವಿರುದ್ಧ ಅನ್ಯಾಯ ಮತ್ತು ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ನಿಗಾ ಇಡುವಂತೆ ವಿಶ್ವಸಂಸ್ಥೆಗೆ ಒತ್ತಾಯಿಸುತ್ತೇವೆ ಎಂದು ಬರೆದುಕೊಂಡಿದ್ದರು. ಇದನ್ನೂ ಓದಿ: ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ

    ಇದಕ್ಕೆ ಪ್ರತ್ಯುತ್ತರವಾಗಿ, ಅಮಿತ್ ಮಿಶ್ರಾ ಅವರು ಟ್ವೀಟ್ ಮಾಡಿ, ಆತ್ಮೀಯ ಶಾಹಿದ್ ಅಫ್ರಿದಿ ಅವರೇ ಯಾಸಿನ್ ಮಲಿಕ್ ಸ್ವತಃ ನ್ಯಾಯಾಲಯದ ದಾಖಲೆಯಲ್ಲಿ ತಪ್ಪೋಪ್ಪಿಕೊಂಡಿದ್ದಾನೆ. ನಿಮ್ಮ ಜನ್ಮದಿನಾಂಕದಂತೆ ಎಲ್ಲವೂ ದಾರಿತಪ್ಪಿಸುವುದಿಲ್ಲ ಎಂದು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

    ವಿವಿಧ ಪ್ರಕರಣಗಳ ಮೇಲೆ 2017ರಲ್ಲಿ ಮಲಿಕ್ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗಿತ್ತು. ದೆಹಲಿಯ ತಿಹಾರ್ ಜೈಲಿನಲ್ಲಿ ಭಾರಿ ಭದ್ರತೆಯಲ್ಲಿದ್ದ ಯಾಸಿನ್ ಮಲಿಕ್ ವಿರುದ್ಧ ಯುಎಪಿಎ ಕಾಯ್ದೆಯ ಸೆಕ್ಷನ್ 16 (ಭಯೋತ್ಪಾದನಾ ಕೃತ್ಯ), 17 (ಭಯೋತ್ಪಾದನಾ ಚಟುವಟಿಕೆಗೆ ಹಣಕಾಸು ಸಂಗ್ರಹ), 18 (ಭಯೋತ್ಪಾದನಾ ಕೃತ್ಯ ಎಸಗಲು ಸಂಚು) ಮತ್ತು 20 (ಭಯೋತ್ಪಾದನಾ ಸಂಘಟನೆಯ ಸದಸ್ಯನಾಗಿರುವುದು), ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 (ಅಪರಾಧ ಸಂಚು) ಮತ್ತು 124 (ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಲಾಗಿತ್ತು. ಕೋರ್ಟ್ ವಿಚಾರಣೆಯಲ್ಲಿ ಕೃತ್ಯದ ಬಗ್ಗೆ ಯಸಿನ್ ಮಲಿಕ್ ತಪ್ಪೊಪ್ಪಿಕೊಂಡಿದ್ದ. ಎನ್‍ಐಎ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

  • ಜವಾಹರಲಾಲ್ ನೆಹರೂ ಪುಣ್ಯ ತಿಥಿ – ಸೋನಿಯಾ ಗಾಂಧಿಯಿಂದ ಪುಷ್ಪ ನಮನ

    ಜವಾಹರಲಾಲ್ ನೆಹರೂ ಪುಣ್ಯ ತಿಥಿ – ಸೋನಿಯಾ ಗಾಂಧಿಯಿಂದ ಪುಷ್ಪ ನಮನ

    ನವದೆಹಲಿ: ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ 58ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ಮೋದಿ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಹಾಗೂ ಇತರ ಪಕ್ಷದ ನಾಯಕರು ಸೇರಿದಂತೆ ಅನೇಕರು ಇಂದು ನಮನ ಸಲ್ಲಿಸಿದರು.

    ನಗರದ ಅವರ ಶಾಂತಿ ವನ ಸ್ಮಾರಕಕ್ಕೆ ಭೇಟಿ ನೀಡಿದ ಸೋನಿಯಾ ಗಾಂಧಿ ಅವರು ಸೇರಿದಂತೆ ಅನೇಕ ಗಣ್ಯರು ಪುಷ್ಪ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ತೃತೀಯ ರಂಗ ರಚನೆಗೆ ದೇವೇಗೌಡರ ಜೊತೆ ಚಂದ್ರಶೇಖರ್ ರಾವ್ ಚರ್ಚೆ

    ಜವಾಹರಲಾಲ್ ನೆಹರು ಅವರು 1964ರ ಮೇ 27 ರಂದು ಕೊನೆಯುಸಿರೆಳೆದರು. ದೇಶಾದ್ಯಂತ ಸುಮಾರು 1.5 ಮಿಲಿಯನ್ ಜನರು ಅವರ ಅಂತ್ಯಕ್ರಿಯೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ನೆಹರೂ ಅವರನ್ನು ಸ್ಮರಿಸಿ, ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿಯಂದು ಅವರಿಗೆ ನಮನಗಳು ಎಂದು ಟ್ವೀಟ್ ಮಾಡಿದ್ದಾರೆ.  ಇದನ್ನೂ ಓದಿ: ಮಂಕಿಪಾಕ್ಸ್ ಆತಂಕ – ಬೆಂಗಳೂರಿನಲ್ಲಿ ಹೈ ಅಲರ್ಟ್

    ‘ಚಾಚಾ ನೆಹರು’ ಎಂದು ಪ್ರೀತಿಯಿಂದ ಕರೆಯಲ್ಪಡುವ ಜವಾಹರಲಾಲ್ ನೆಹರು ಅವರು ಭಾರತದ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ನವೆಂಬರ್ 14, 1889 ರಂದು ಜನಿಸಿದ್ದರು. ನೆಹರು ಅವರು ಆಗಸ್ಟ್ 15, 1947 ರಂದು ಭಾರತದ ಪ್ರಧಾನ ಮಂತ್ರಿಯಾಗಿ 18 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದಾರೆ.

    ಜವಾಹರಲಾಲ್ ನೆಹರೂ ಅವರು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಬರಹಗಾರರಾಗಿದ್ದ ಅವರು,  ‘ದಿ ಡಿಸ್ಕವರಿ ಆಫ್ ಇಂಡಿಯಾ’, ‘ಗ್ಲಿಂಪ್ಸಸ್ ಆಫ್ ವಲ್ರ್ಡ್ ಹಿಸ್ಟರಿ’ ಮತ್ತು ಅವರ ಆತ್ಮಚರಿತ್ರೆ ‘ಟುವರ್ಡ್ ಫ್ರೀಡಮ್’ ಸೇರಿದಂತೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ.

    1950 ರಿಂದ 1955 ರವರೆಗೆ ಭಾರತದಲ್ಲಿ ಶಾಂತಿಯನ್ನು ಎತ್ತಿ ಹಿಡಿದಿದ್ದಕ್ಕಾಗಿ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಗೆ 11 ನಾಮನಿರ್ದೇಶನಗಳನ್ನು ಗೆದ್ದಿದ್ದಾರೆ. ಅಷ್ಟೇ ಅಲ್ಲದೇ ಅವರಿಗೆ 1955 ರಲ್ಲಿ ಭಾರತ ರತ್ನವನ್ನು ಸಹ ನೀಡಲಾಗಿದೆ.