Tag: twins

  • ಅವಳಿ ಮಕ್ಕಳ ತಾಯಿ ಆಗುತ್ತಿದ್ದಾರೆ ನಟಿ ಅಮಲಾ ಪೌಲ್

    ಅವಳಿ ಮಕ್ಕಳ ತಾಯಿ ಆಗುತ್ತಿದ್ದಾರೆ ನಟಿ ಅಮಲಾ ಪೌಲ್

    ನ್ನಡವೂ ಸೇರಿದಂತೆ ಹಲವಾರು ಭಾಷೆಗಳ ಸಿನಿಮಾದಲ್ಲಿ ನಟಿಸಿರುವ ಅಮಲಾ ಪೌಲ್ (Amala Paul), ತಮ್ಮ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ. ತಾವು ಅವಳಿ ಮಕ್ಕಳ (Twins) ತಾಯಿ ಆಗುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ. ಈ ಸುದ್ದಿಯನ್ನು ಕೇಳಿದ ಅವರ ಅಭಿಮಾನಿಗಳಿಗೆ ಶುಭ ಹಾರೈಸಿದ್ದಾರೆ.

    ಒಂದು ಕಡೆ ಅವಳಿ ಮಕ್ಕಳ ತಾಯಿ ಆಗುತ್ತಿರುವುದು ಖುಷಿ ಇದ್ದರೆ, ಮತ್ತೊಂದು ಕಡೆ ಅಮಲಾ ನಟನೆಯ ‘ಆಡುಜೀವಿತಂ’ (Aadujeevitham) ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದಲ್ಲಿ ಪೃಥ್ವಿರಾಜ್ ಸುಕುಮಾರ್‌ಗೆ ಅಮಲಾ ನಾಯಕಿಯಾಗಿದ್ದಾರೆ. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಬೋಲ್ಡ್ ಬಟ್ಟೆಯಲ್ಲಿ ಕಾಣಿಸಿಕೊಂಡ ಅಮಲಾಗೆ ನೆಟ್ಟಿಗರು ಕಾಲೆಳೆದಿದ್ದಾರೆ. ಬಟ್ಟೆ ಮ್ಯಾಟರ್‌ಗೆ ನಟಿಯ ಹಿಗ್ಗಾಮುಗ್ಗಾ ಟ್ರೋಲ್‌ ಮಾಡಿದ್ದಾರೆ.

    ಇತ್ತೀಚೆಗೆ ನಟಿ ಅಮಲಾ ಅವರು ಉದ್ಯಮಿ ಜಗತ್ ದೇಸಾಯಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆಯಾಗಿ ಒಂದು ತಿಂಗಳ ನಂತರ ತಾಯಿಯಾಗಿರುವ ಗುಡ್ ನ್ಯೂಸ್ ತಿಳಿಸಿದ್ದರು. ಚೊಚ್ಚಲ ಮಗುವಿನ ಆಗಮನಕ್ಕೆ ಎದುರು ನೋಡ್ತಿರುವಾಗ ತಾವು ನಟಿಸಿರುವ ಸಿನಿಮಾಗೂ ಪ್ರಚಾರಕ್ಕೆ ನಟಿ ಸಾಥ್ ನೀಡುತ್ತಿದ್ದಾರೆ.

    ಇದೀಗ ಸಂದರ್ಶನಕ್ಕೆ ಬರುವಾಗ ಕಡುನೀಲಿ ಬಣ್ಣದ ಸ್ಲೀವ್‌ಲೆಸ್ ಡ್ರೆಸ್ ಧರಿಸಿ ಬಂದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನೆಗೆಟಿವ್ ಕಾಮೆಂಟ್ ಹಾಕಿದ್ದಾರೆ. ಇದೆಂಥಾ ಡ್ರೆಸ್ ಬೆಡ್‌ನಿಂದ ಎದ್ದ ಕೂಡಲೇ ಬಾತ್‌ರೂಮ್‌ಗೆ ಹಾಕಿಕೊಂಡು ಹೋಗುವ ಡ್ರೆಸ್ ಎಂದು ನೆಟ್ಟಿಗರೊಬ್ಬರು ಕುಟುಕಿದ್ದಾರೆ. ನಾನು ಅಮಲಾ ಪೌಲ್ ದೊಡ್ಡ ಅಭಿಮಾನಿಯಾಗಿದ್ದೆ. ಈಗ ಅಭಿಮಾನಿಯಲ್ಲ ಎಂದು ಮತ್ತೊಬ್ಬರು ಹೇಳಿದ್ದಾರೆ. ನಟಿಯ ವಿಡಿಯೋ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ. ಆದರೆ ನೆಗೆಟಿವ್ ಕಾಮೆಂಟ್‌ಗೆ ನಟಿ ಕ್ಯಾರೆ ಎನ್ನದೇ ತಮ್ಮ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಈ ‘ಆಡುಜೀವಿತಂ’ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ.

     

    ನಿರ್ದೇಶಕ ಬ್ಲೆಸ್ಸಿ ಅವರ 15 ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ ಪಾತ್ರದಲ್ಲಿ ವಲಸಿಗ ವ್ಯಕ್ತಿಯಾಗಿ ಹೊಸ ಲುಕ್ ಮೂಲಕ ಕಾಣಿಸಿಕೊಂಡಿರುವ ಪೃಥ್ವಿರಾಜ್ ಸುಕುಮಾರನ್, ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ಚಿತ್ರದ ಔಟ್ಪುಟ್ ಗಾಗಿ ದುಡಿದಿದೆ. ಪೃಥ್ವಿರಾಜ್ ನಿರೀಕ್ಷೆಯ ಚಿತ್ರ ಇದಾಗಿದ್ದು, ಬ್ಲೆಸ್ಸಿ ನಿರ್ದೇಶನದ ;ಆಡುಜೀವಿತಂ’ 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಸಿನಿಮಾ ಇದು.

  • 19 ವರ್ಷದ ನಂತರ ಒಂದಾದ ಟ್ವಿನ್ಸ್- ಜಾರ್ಜಿಯಾದಲ್ಲಿ ಇಂದಿಗೂ ಬಗೆಹರಿಯದ ಕದ್ದು ಮಾರಾಟವಾದ ಮಕ್ಕಳ ಸಂಖ್ಯೆ

    19 ವರ್ಷದ ನಂತರ ಒಂದಾದ ಟ್ವಿನ್ಸ್- ಜಾರ್ಜಿಯಾದಲ್ಲಿ ಇಂದಿಗೂ ಬಗೆಹರಿಯದ ಕದ್ದು ಮಾರಾಟವಾದ ಮಕ್ಕಳ ಸಂಖ್ಯೆ

    -ಹುಟ್ಟಿನಿಂದ ಬೇರ್ಪಟ್ಟು, ಒಂದೇ ನಗರದಲ್ಲಿ ವಾಸವಿದ್ದ ಅವಳಿಗಳು

    ಅಟ್ಲಾಂಟ: ಹುಟ್ಟಿನಿಂದ ಬೇರ್ಪಟ್ಟು ಒಂದೇ ನಗರದಲ್ಲಿ ವಾಸವಿದ್ದ ಅವಳಿಗಳು (Twins) 19 ವರ್ಷದ ನಂತರ ಒಂದಾಗಿರುವ ಘಟನೆ ಪೂರ್ವ ಯುರೋಪಿಯನ್ ದೇಶ ಜಾರ್ಜಿಯಾದಲ್ಲಿ (Georgia) ನಡೆದಿದೆ.

    ಬೇರ್ಪಟ್ಟಿದ್ದು ಹೇಗೆ?
    ಆಮಿ ಖ್ವಿಟಿಯಾ ಮತ್ತು ಅನೋ ಸರ್ತಾನಿಯಾ ಬೇರ್ಪಟ್ಟಿದ್ದ ಅವಳಿ ಸಹೋದರಿಯರು. ಅವಳಿ ಮಕ್ಕಳ ತಾಯಿಯಾದ ಅಜಾ ಶೋನಿ ಅವರು 2002 ರಲ್ಲಿ ಆಮಿ ಮತ್ತು ಅನೋ ಎಂಬ ಅವಳಿ ಹೆಣ್ಣುಮಕ್ಕಳಿಗೆ ಜಾರ್ಜಿಯಾ ಆಸ್ಪತ್ರೆಯಲ್ಲಿ ಜನ್ಮ ನೀಡಿದ್ದರು. ಅದರೆ ಅವರು ಮಕ್ಕಳ ಜನ್ಮ ತೂಡಕುಗಳಿಂದ ಕೋಮಾಗೆ ಜಾರಿದ್ದಾರೆ. ಆಕೆಯ ಗಂಡನಾದ ಗೋಚಾ ಗಖಾರಿಯಾ ಅವಳಿ ಹೆಣ್ಣುಮಕ್ಕಳನ್ನು ಆ ಪ್ರತ್ಯೇಕ ಕುಟುಂಬಗಳಿಗೆ ಮಾರಾಟ ಮಾಡಿ ಬೇರ್ಪಡಿಸಿದ್ದ. ಆದರೆ ಅವರು ಒಂದೇ ನಗರದಲ್ಲಿ ಸುಮಾರು 19 ವರ್ಷಗಳ ಕಾಲ ವಾಸವಿದ್ದರು. ಇದನ್ನೂ ಓದಿ:  ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ; ಮೊದಲ ಪಟ್ಟಿ ರಿಲೀಸ್

    ಒಂದಾಗಿದ್ದು ಹೇಗೆ?
    ಅನೋಳನ್ನು ಟಿಬಿಲಿಸಿ ಎಂಬವರು ಪೋಷಣೆ ಮಾಡುತ್ತಿದ್ದರು. ಆದರೆ ಅನೋಳಿಗೆ ಅವಳಿ ಸಹೋದರಿ ಇದ್ದಾಳೆ ಎಂಬುದರ ಬಗ್ಗೆ ಅವರಿಗೆ ಯಾವುದೇ ಮಾಹಿತಿ ಅಥವಾ ಸುಳಿವು ಇರಲಿಲ್ಲ. ಒಂದು ದಿನ ಆಮಿಯ ಅಚ್ಚುಮೆಚ್ಚಿನ ಟಿವಿ ಶೋ ಆದ “ಜಾರ್ಜಿಯಾಸ್ ಗಾಟ್ ಟ್ಯಾಲೆಂಟ್” ಅನ್ನು ವೀಕ್ಷಿಸುವಾಗ ಮಗಳ ಹೋಲಿಕೆ ಹೊಂದಿರುವ ಹುಡುಗಿಯೊಬ್ಬಳು ನೃತ್ಯ ಮಾಡುವುದನ್ನು ನೋಡಿ ಆಶ್ಚರ್ಯವಾಗಿದ್ದಾರೆ. ಅಂದು ಅವರಿಗೆ ಆಕೆ ಅನೋಳ ಸಹೋದರಿ ಎಂಬುದು ತಿಳಿದಿರಲಿಲ್ಲ. ನಂತರ ಅವರು ವೈರಲ್ ಟಿಕ್‌ಟಾಕ್ ಮತ್ತು ಟ್ಯಾಲೆಂಟ್ ಶೋ ಮೂಲಕ ಪರಿಚಯವಾಗಿ, ಇಬ್ಬರೂ ಅವಳಿ ಸಹೋದರಿಯರು 19 ವರ್ಷದ ಬಳಿಕ ಒಂದಾಗಿದ್ದಾರೆ. ಇದನ್ನೂ ಓದಿ: 2024ರಲ್ಲಿ ಅಣು ಬಾಂಬ್ ಸ್ಫೋಟಗೊಳ್ಳುವ ಸಾಧ್ಯತೆ ಇದೆ: ಕೋಡಿಮಠ ಸ್ವಾಮೀಜಿ ಭವಿಷ್ಯ 

    ಈ ಪ್ರಕರಣದೊಂದಿಗೆ ಅಚ್ಚರಿದಾಯಕ ಅಂಶವೊಂದು ಬಹಿರಂಗಗೊಂಡಿದೆ. ಜಾರ್ಜಿಯನ್ ಆಸ್ಪತ್ರೆಯಲ್ಲಿ ಸುಮಾರು ವರ್ಷಗಳಿಂದ ಮಕ್ಕಳನ್ನು ಕದ್ದು ಮಾರಾಟ ಮಾಡಲಾಗುತ್ತಿದೆ. ಈವರೆಗೂ ಮಾರಾಟವಾದ ಸಾವಿರಾರು ಶಿಶುಗಳಲ್ಲಿ ಇವರೂ ಸೇರಿದ್ದಾರೆ. ಇತ್ತೀಚೆಗೆ ಕೂಡ ಜಾರ್ಜಿಯಾದಲ್ಲಿ ಇದೇ ರೀತಿ ಪ್ರಕರಣಗಳು ದಾಖಲಾಗಿವೆ. ಜಾರ್ಜಿಯಾದಿಂದ ಕದ್ದು ಮಾರಾಟವಾದ ಮಕ್ಕಳ ಸಂಖ್ಯೆಯ ಸಮಸ್ಯೆ ಬಗೆಹರಿಯದೆ ಹಲವು ದಶಕಗಳಿಂದ ಹಾಗೆ ಉಳಿದಿದೆ. ಇಂದಿಗೂ ಕೂಡ ಜಾರ್ಜಿಯಾವನ್ನು ಈ ಸಮಸ್ಯೆ ಬಾಧಿಸುತ್ತಿದೆ. ಈ ಸಮಸ್ಯೆ ಮೇಲೆ ಅವಳಿ ಸಹೋದರಿಯರ ಘಟನೆ ಬೆಳಕು ಚೆಲ್ಲುತ್ತದೆ. ಜಾರ್ಜಿಯಾದ ಆಸ್ಪತ್ರೆಗಳಲ್ಲಿ ಎಷ್ಟು ಮಕ್ಕಳನ್ನು ಕದ್ದು ಮಾರಾಟ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ. ಇದನ್ನೂ ಓದಿ: ಸಂಘಟನೆ ಕೆಲಸದಲ್ಲಿ ತೊಡಗಿಸಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡ್ತೇನೆ: ಜಗದೀಶ್ ಶೆಟ್ಟರ್

  • ವೈದ್ಯ ಲೋಕಕ್ಕೇ ಶಾಕ್ – 36 ವರ್ಷಗಳ ಕಾಲ ಪ್ರೆಗ್ನೆಂಟ್ ಆಗಿದ್ದ ಈ ವ್ಯಕ್ತಿ!

    ವೈದ್ಯ ಲೋಕಕ್ಕೇ ಶಾಕ್ – 36 ವರ್ಷಗಳ ಕಾಲ ಪ್ರೆಗ್ನೆಂಟ್ ಆಗಿದ್ದ ಈ ವ್ಯಕ್ತಿ!

    ಮುಂಬೈ: ವೈದ್ಯಕೀಯ ಲೋಕದಲ್ಲಿ ಅದೆಷ್ಟೋ ವಿಚಿತ್ರ ವಿದ್ಯಮಾನಗಳು ಘಟಿಸಿವೆ. ಹುಟ್ಟುವ ಮಕ್ಕಳು ಕೆಲವೊಮ್ಮ ಅಂಗವಿಕಲವಾಗಿ ಹುಟ್ಟುವುದು, ಇನ್ನೂ ಕೆಲವೊಮ್ಮೆ ಹೆಚ್ಚಿನ ಅಂಗಗಳನ್ನು ಹೊಂದಿ ವಿಸ್ಮಯ ಮೂಡಿಸಿರುವುದೂ ಇದೆ. ಇದೇ ರೀತಿ ಅವಳಿ ಮಕ್ಕಳ ಅಂಗಗಳು ಸೇರಿಕೊಂಡು ಹುಟ್ಟಿ ವೈದ್ಯಕೀಯ ಲೋಕಕ್ಕೆ ಸವಾಲು ಹಾಕಿರುವುದೂ ಇದೆ. ಇಲ್ಲೊಬ್ಬ ವ್ಯಕ್ತಿ ತನ್ನದೇ ಟ್ವಿನ್ಸ್‌ಗೆ (Twins) 36 ವರ್ಷಗಳ ಕಾಲ ಗರ್ಭ ಧರಿಸಿದ್ದ (Pregnant) ಬಲು ಅಪರೂಪದ ಪ್ರಕರಣವನ್ನು ತಡವಾಗಿ ಪತ್ತೆಹಚ್ಚಿದ್ದಾರೆ.

    ನಾಗ್ಪುರದ (Nagpur) 60 ವರ್ಷದ ವ್ಯಕ್ತಿಯೊಬ್ಬರು 3 ದಶಕಗಳಿಗೂ ಹೆಚ್ಚು ವರ್ಷಗಳ ಕಾಲ ತನ್ನ ದೊಡ್ಡ ಹೊಟ್ಟೆಯೊಂದಿಗೆ ಬದುಕಿದ್ದು, ಆತನನ್ನು ಗರ್ಭಿಣಿ ಎಂದೇ ಜನರು ಗೇಲಿ ಮಾಡುತ್ತಿದ್ದರು. ದಿ ಡೈಲಿ ಸ್ಟಾರ್ ಪ್ರಕಾರ, ಜೀವನೋಪಾಯಕ್ಕೆ ಕಷ್ಟಪಟ್ಟು ದುಡಿಯುತ್ತಿದ್ದ ಭಗತ್ ತನ್ನ ದೊಡ್ಡ ಹೊಟ್ಟೆಯನ್ನು ನಿರ್ಲಕ್ಷಿಸಿದ್ದ. ಆತನ ಗೆಳೆಯರು, ಕುಟುಂಬಸ್ಥರು ಕೂಡಾ ಆತನ ದೊಡ್ಡ ಹೊಟ್ಟೆಯ ಬಗ್ಗೆ ಹೀಯಾಳಿಸುತ್ತಿದ್ದರು. ಆದರೂ ಎಲ್ಲವನ್ನೂ ಸಹಿಸಿಕೊಂಡು ಆತ ತನ್ನ ದಿನ ದೂಡಿಕೊಂಡಿದ್ದ.

    ಆದರೆ ಭಗತ್‌ಗೆ 1999ರಲ್ಲಿ ಹೊಟ್ಟೆಯ ಭಾರೀ ಉಬ್ಬಿನಿಂದಾಗಿ ಉಸಿರಾಡುವುದೇ ಕಷ್ಟವಾಗತೊಡಗಿತು. ಕೊನೆಗೂ ಆತ ಮುಂಬೈನ ಆಸ್ಪತ್ರೆಗೆ ದಾಖಲಾದ. ಆದರೆ ಆತನಿಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ದೊಡ್ಡ ಅಚ್ಚರಿಯೇ ಕಾದಿತ್ತು. ಭಗತ್‌ನ ವೈದ್ಯಕೀಯ ಸ್ಥಿತಿ ಅಪರೂಪದಲ್ಲೇ ಅಪರೂಪವಾಗಿತ್ತು.

    ಭಗತ್‌ನನ್ನು ಪರೀಕ್ಷೆಗೆ ಒಳಪಡಿಸಿದ ಡಾ. ಅಜಯ್ ಮೆಹ್ತಾ, ಆರಂಭದಲ್ಲಿ ಆತನ ಹೊಟ್ಟೆಯಲ್ಲಿ ದೊಡ್ಡ ಗಡ್ಡೆ ಇರುವುದಾಗಿ ಊಹಿಸಿಕೊಂಡರು. ಆತನ ಹೊಟ್ಟೆಯನ್ನು ಸೀಳಿ ತೆರೆದಾಗಿ ಇದೊಂದು ಕ್ಯಾನ್ಸರ್‌ನ ಗಡ್ಡೆ ಎಂದು ಭಾವಿಸಿದರು. ಅದನ್ನು ಹೊರತೆಗೆಯಲು ಪ್ರಯತ್ನಿಸಿದಾಗ ಅಲ್ಲಿ ಇನ್ನೊಂದು ಅಪೂರ್ಣ ಮಾನವನೇ ಇರೋದನ್ನು ಕಂಡು ಬೆರಗಾದರು. ಇದನ್ನೂ ಓದಿ: ಟೈಟಾನಿಕ್ ಹಡಗಿನ ಅವಶೇಷ ನೋಡಲು ತೆರಳಿದ್ದ ವಿಶ್ವದ ಐವರು ಶ್ರೀಮಂತರ ದಾರುಣ ಸಾವು

    ಭಗತ್‌ನ ಹೊಟ್ಟೆಯಲ್ಲಿದ್ದ ವಸ್ತುವಿನಲ್ಲಿ ಹಲವು ಅಂಗಗಳಿದ್ದವು. ಒಂದೊಂದೇ ಅಂಗಗಳು ಹೊರ ಬಂದಿದ್ದವು. ಜನನಾಂಗದ ಕೆಲವು ಭಾಗಗಳು, ಕೂದಲಿನ ಕೆಲವು ಭಾಗಗಳು, ಕೆಲ ಅಂಗಗಳು, ದವಡೆ, ಕೈ-ಕಾಲುಗಳು ಹಾಗೂ ಅದರಲ್ಲಿ ಕೂದಲು ಸಹ ಇತ್ತು. ಇದನ್ನು ನೋಡಿ ಗಾಬರಿಗೊಂಡೆವು. ಗೊಂದಲ, ಆಶ್ಚರ್ಯ, ಭಯಾನಕತೆ ಎಲ್ಲವೂ ಆ ಸಂದರ್ಭದಲ್ಲಿತ್ತು ಎಂದು ವೈದ್ಯರು ತಿಳಿಸಿದ್ದರು.

    ತನ್ನದೇ ಟ್ವಿನ್ಸ್‌ಗೆ ಗರ್ಭ ಧರಿಸಿದ್ದು ಹೇಗೆ?
    ಭಗತ್‌ನ ಪ್ರಕರಣದಲ್ಲಿ ಆತನ ಅವಳಿ ತನ್ನದೇ ಹೊಟ್ಟೆಯೊಳಗೆ ಬೆಳೆದಿತ್ತು. ಅದು ಆತನ ಗಮನಕ್ಕೆ ಬಂದಿರಲಿಲ್ಲ. ಆದರೆ ಆ ಅವಳಿ ಅಪೂರ್ಣವಾಗಿ ನಿರ್ಜೀವಾವಸ್ಥೆಯಲ್ಲಿತ್ತು. ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ಪ್ರಕಾರ, ಇದನ್ನು ಫೆಟಸ್-ಇನ್-ಫೀಟು (FIF) ಎಂದು ಕರೆಯಲಾಗುತ್ತದೆ. ಇಂತಹ ಪ್ರಕರಣಗಳು ಅತಿ ಅಪರೂಪದ್ದಾಗಿದೆ. ಒಂದು ದೋಷಪೂರಿತ ಕಶೇರುಕ ಭ್ರೂಣ ಅದರ ಅವಳಿ ದೇಹದೊಳಗೆ ಸುತ್ತುವರಿಯಲ್ಪಟ್ಟಾಗ ಇಂತಹ ಪ್ರಕರಣಗಳಾಗುತ್ತವೆ. ಇಲ್ಲಿಯವರೆಗೆ ಇಂತಕ 100ಕ್ಕೂ ಕಡಿಮೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಂದ ಹೆಚ್ಚಿದ ಒತ್ತಡ; ಸಾರ್ವಜನಿಕರ ಎದುರೇ ಆಧಾರ್ ಕೇಂದ್ರದ ಸಿಬ್ಬಂದಿ ಕಣ್ಣೀರು

  • ಮದುವೆಯಾಗಿ 4 ತಿಂಗ್ಳು: ಅವಳಿ ಮಕ್ಕಳ ತಾಯಿಯಾದ ನಯನತಾರಾ ಟ್ರೋಲ್

    ಮದುವೆಯಾಗಿ 4 ತಿಂಗ್ಳು: ಅವಳಿ ಮಕ್ಕಳ ತಾಯಿಯಾದ ನಯನತಾರಾ ಟ್ರೋಲ್

    ಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ಖ್ಯಾತ ನಟಿ ನಯನತಾರಾ (Nayantara) ಮೂರ್ನಾಲ್ಕು ತಿಂಗಳ ಹಿದೆಯಷ್ಟೇ ಮದುವೆ ಆಗಿದ್ದಾರೆ. ಮದುವೆ ಆಗಿ ನಾಲ್ಕೇ ತಿಂಗಳಿಗೆ ತಾವು ಜವಳಿ ಮಕ್ಕಳ ಪಾಲಕರಾಗುತ್ತಿದ್ದೇವೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಎರಡೂ ಮಕ್ಕಳ ಕಾಲುಗಳ ಫೋಟೋವನ್ನು ಅಪ್ ಲೋಡ್ ಮಾಡಿ, ಟ್ರೋಲ್ ಗೆ ಗುರಿಯಾಗಿದ್ದಾರೆ.

    ಬಾಡಿಗೆ ತಾಯಿ (Surrogate mother) ಮೂಲಕ ಜವಳಿ (twins) ಮಕ್ಕಳಿಗೆ ತಾವು ತಾಯಿ ಆಗಿದ್ದೇನೆ ಎಂದು ನಯನತಾರಾ ಘೋಷಿಸುತ್ತಿದ್ದಂತೆಯೇ ಶುಭ ಹಾರೈಸಿದ್ದವರಿಗಿಂತ ನೆಗೆಟಿವ್ ಕಾಮೆಂಟ್ ಮಾಡಿದವರೇ ಹೆಚ್ಚಾಗಿದ್ದಾರೆ. ಕೆಲವರು ತಾಯ್ತನದ ಅನುಭವಗಳನ್ನೂ ಹಂಚಿಕೊಂಡಿದ್ದಾರೆ. ಅನೇಕರು ಮನೆಗೆ ಬರುತ್ತಿರುವ ಹೊಸ ಅತಿಥಿಗೆ ಶುಭ ಹಾರೈಸಿದ್ದಾರೆ. ಎರಡೂ ಮಕ್ಕಳು ನಿಮ್ಮಂತೆಯೇ ಸಿನಿಮಾ ರಂಗದಲ್ಲೇ ಮುಂದುವರೆಯಲಿ ಎಂದು ಕಾಮೆಂಟ್ ಮಾಡಿದ್ದಾರೆ.

    ಮದುವೆಯಾದ 4 ತಿಂಗಳಿಗೆ ನಿರ್ದೇಶಕ ವಿಘ್ನೇಶ್ ಶಿವನ್ (Vignesh Sivan), ನಟಿ ನಯನತಾರಾ ದಂಪತಿ ಅಭಿಮಾನಿಗಳಿಗಾಗಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಯನತಾರ ಅವಳಿ ಮಕ್ಕಳ ತಾಯಿ ಎಂದು ಇನ್ಸ್ಟಾದಲ್ಲಿ ದಂಪತಿ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅರೇ, ಮದುವೆಯಾದ 4 ತಿಂಗಳಿಗೆ ಇದು ಹೇಗೆ ಸಾಧ್ಯ ಎನ್ನುವವರಿಗೆ ಉತ್ತರವನ್ನೂ ಕೊಟ್ಟಿರುವ ದಂಪತಿ, ಬಾಡಿಗೆ ತಾಯಿ ಮೂಲಕ ಅವಳಿ ಮಕ್ಕಳ ಪಾಲಕರಾಗಿದ್ದಾರೆ ಈ ಜೋಡಿ.

    ಮದುವೆಗೂ ಮುನ್ನ ವಿಘ್ನೇಶ್ ಶಿವನ್ ಒಂದು ಪೋಸ್ಟ್ ಹಾಕಿದ್ದರು. ಅದರಲ್ಲಿ ನಯನತಾರ ನನ್ನ ಮಕ್ಕಳ ತಾಯಿ ಆಗಲಿದ್ದಾರೆ ಎಂದು ಸುಳಿವು ನೀಡಿದ್ದರು. ಅಲ್ಲಿಗೆ ನಯನತಾರ ಮತ್ತು ವಿಘ್ನೇಶ್ ಶಿವನ್ ಮದುವೆ ಆಗಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ಅದರಂತೆ ಕಳೆದ ಜೂನ್ ನಲ್ಲಿ ಆಪ್ತರ ಸಮ್ಮುಖದಲ್ಲಿ ಇವರು ಹಸೆಮಣೆ ಏರಿದ್ದರು. ತಾವಿಷ್ಟಪಟ್ಟ ಗಣ್ಯರು ಈ ಮದುವೆಗೆ ಸಾಕ್ಷಿ ಆಗಿದ್ಧರು. ಇದನ್ನೂ ಓದಿ:ಪನೋರಮಾ ಸ್ಟುಡಿಯೋ ತೆಕ್ಕೆಗೆ ಝೈದ್ ಖಾನ್ ನಟನೆಯ ‘ಬನಾರಸ್’ ಸಿನಿಮಾ

    ಮಾರ್ಚ್ ನಲ್ಲಿ ಈ ಜೋಡಿ ಇನ್ನೂ ಮದುವೆ ಆಗದೇ ಇದ್ದರೂ, ಬಾಡಿಗೆ ತಾಯಿ ಮೂಲಕ ಮಗುವನ್ನು ಪಡೆದುಕೊಳ್ಳುವ ಪ್ಲ್ಯಾನ್ ಮಾಡಲಿದ್ದಾರೆ ಎಂಬ ಸುದ್ದಿಯೂ ತಮಿಳು ಸಿನಿಮಾ ರಂಗದಲ್ಲಿ ಜೋರಾಗಿಯೇ ಸುದ್ದಿ ಆಯಿತು. ಅದು ಕೂಡ ಇದೀಗ ನಿಜವಾಗಿದೆ. ಮದುವೆಗೂ ಮುನ್ನ ಬಾಡಿಗೆ ತಾಯಿಯನ್ನು ಫಿಕ್ಸ್ ಮಾಡಿಯೇ ಇವರು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಅವಳಿ ಮಕ್ಕಳ ದಂಪತಿ ಆಗುವ ಮೂಲಕ ಅದನ್ನೂ ನಿಜ ಮಾಡಿದ್ದಾರೆ.

    ಇತ್ತೀಚೆಗಷ್ಟೇ ಈ ದಂಪತಿ ಹನಿಮೂನ್ ಗೆ ಹೋದಾಗಲೂ ಮಗುವಿನ ಪಾದಗಳಿರುವ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಆಗಲೂ ಕೂಡ ಅಷ್ಟೇ ಕುತೂಹಲಕ್ಕೆ ಕಾರಣವಾಗಿತ್ತು ಆ ಪೋಸ್ಟ್. ಇದೀಗ ಅದು ಕೂಡ ನಿಜವಾಗಿದೆ. ಅಭಿಮಾನಿಗಳು ಮತ್ತು ಆಪ್ತರು ಈ ಜೋಡಿಗೆ ಶುಭಾಶಯ ಹೇಳುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅತ್ತೆಯೊಂದಿಗೆ ಜಗಳವಾಡಿ 16 ದಿನದ ಅವಳಿ ಶಿಶುಗಳನ್ನು ಕತ್ತು ಹಿಸುಕಿ ಕೊಂದ ತಾಯಿ

    ಅತ್ತೆಯೊಂದಿಗೆ ಜಗಳವಾಡಿ 16 ದಿನದ ಅವಳಿ ಶಿಶುಗಳನ್ನು ಕತ್ತು ಹಿಸುಕಿ ಕೊಂದ ತಾಯಿ

    ಭೋಪಾಲ್: ಅತ್ತೆಯೊಂದಿಗೆ ಜಗಳ ಮಾಡಿಕೊಂಡು ಮಹಿಳೆಯೊಬ್ಬರು ತನ್ನ 16 ದಿನಗಳ ಅವಳಿ ಮಕ್ಕಳನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ.

    ಸಪ್ನಾ ಧಾಕಡ್ ತನ್ನ ಮಕ್ಕಳನ್ನು ಕೊಂದ ಆರೋಪಿ. ಮಕ್ಕಳನ್ನು ಹತ್ಯೆ ಮಾಡಿ ನಿರ್ಜನ ಪ್ರದೇಶದಲ್ಲಿ ಎಸೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈಕೆಯ ಪತಿ ಮದ್ಯವ್ಯಸನಿ ಹಾಗೂ ಕೆಲಸವಿಲ್ಲದವನೆಂದು ಅತ್ತೆ ನಿಂದಿಸುತ್ತಿದ್ದರು ಎನ್ನಲಾಗಿದೆ. ಇದನ್ನೂ ಓದಿ: PFI ನಿಂದ 5.06 ಕೋಟಿ ಪರಿಹಾರ ಕೇಳಿದ KSRTC

    ಮನೆಯಲ್ಲಿ ಮಕ್ಕಳು ಇಲ್ಲದಿರುವ ಬಗ್ಗೆ ಸಪ್ನಾಳ ಪತಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ನಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.

    ವಿಚಾರಣೆಯ ವೇಳೆ ಮಹಿಳೆಯು ಸೆಪ್ಟೆಂಬರ್ 23 ರಂದು ಶಿಶುಗಳನ್ನು ಕತ್ತು ಹಿಸುಕಿ ಕೊಂದು ಹಬೀಬ್‌ಗಂಜ್ ಪ್ರದೇಶದ ನಿರ್ಜನ ಸ್ಥಳದಲ್ಲಿ ಶವಗಳನ್ನು ಎಸೆದಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಅವಳಿ ಮಕ್ಕಳ ಶವಗಳನ್ನು ಪೊಲೀಸರು ಹೊರತೆಗೆದಿದ್ದಾರೆ. ಇದನ್ನೂ ಓದಿ: ಗೃಹ ಬಂಧನದ ವದಂತಿಯ ಬೆನ್ನಲ್ಲೇ ಮಾಧ್ಯಮಗಳಲ್ಲಿ ಕಾಣಿಸಿಕೊಂಡ ಚೀನಾ ಅಧ್ಯಕ್ಷ

    Live Tv
    [brid partner=56869869 player=32851 video=960834 autoplay=true]

  • ಅಮೂಲ್ಯಗೆ ‘ಅವಳಿ ಮಕ್ಕಳು’ ಎಂದು ವೈದ್ಯರು ಹೇಳಿದಾಗ ಖುಷಿಗಿಂತ ಕುಟುಂಬಕ್ಕೆ ಚಿಂತೆಯಾಗಿತ್ತಂತೆ

    ಅಮೂಲ್ಯಗೆ ‘ಅವಳಿ ಮಕ್ಕಳು’ ಎಂದು ವೈದ್ಯರು ಹೇಳಿದಾಗ ಖುಷಿಗಿಂತ ಕುಟುಂಬಕ್ಕೆ ಚಿಂತೆಯಾಗಿತ್ತಂತೆ

    ಚೆಲುವಿನ ಚಿತ್ತಾರ ಖ್ಯಾತಿಯ ನಟಿ ಅಮೂಲ್ಯ (Amulya) ಸಿನಿಮಾ ರಂಗದಿಂದ ದೂರವಾದರೂ, ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಸದಾ ಸಂಪರ್ಕದಲ್ಲಿರುತ್ತಾರೆ. ಸಿನಿಮಾ ಸಂಬಂಧಿ ವಿಷಯಗಳಿಗಿಂತಲೂ ತಮ್ಮ ಕುಟುಂಬದ ಬಗೆಗಿನ ಸಂಭ್ರಮಗಳನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಳ್ಳುತ್ತಲೇ ಇರುತ್ತಾರೆ. ಅಲ್ಲದೇ, ಈಗಂತೂ ತಮ್ಮ ಮುದ್ದಾದ ಮಕ್ಕಳ ಫೋಟೋಗಳನ್ನು ಆಗಾಗ್ಗೆ ಅಪ್ ಲೋಡ್ ಮಾಡುತ್ತಾರೆ.

    ಇಂತಹ ಅಮೂಲ್ಯ ಅಭಿಮಾನಿಗಳಿಗೆ ಒಂದು ಸುವರ್ಣಾವಕಾಶ ನೀಡಿದ್ದರು. ನನ್ನ ಬಗ್ಗೆ ಏನು ಬೇಕಾದರೂ ಪ್ರಶ್ನೆ ಕೇಳಿ, ಉತ್ತರಿಸುತ್ತೇನೆ ಎಂದು ಅಭಿಮಾನಿಗಳಿಗೆ ಹೇಳಿದ್ದರು. ಇಂತಹ ಅವಕಾಶವನ್ನು ಅಭಿಮಾನಿಗಳು ಕೂಡ ಸಖತ್ತಾಗಿಯೇ ಬಳಸಿಕೊಂಡಿದ್ದಾರೆ. ಅದರಲ್ಲೂ ಅಭಿಮಾನಿಯೊಬ್ಬ, ಮೊದಲ ಬಾರಿಗೆ ನಿಮಗೆ ಅವಳಿ ಮಕ್ಕಳು ಎಂದು ಗೊತ್ತಾದಾಗ ನಿಮ್ಮ ರಿಯಾಕ್ಷನ್ ಹೇಗಿತ್ತು ಎಂದು ಪ್ರಶ್ನೆ ಮಾಡಿದ್ದಾರೆ. ಅದಕ್ಕೂ ಅಮೂಲ್ಯ ಉತ್ತರ ಕೊಟ್ಟಿದ್ದಾರೆ. ಆ ಉತ್ತರವೇ ಮಜವಾಗಿದೆ. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕರಾಳ ಅನುಭವ ಬಿಚ್ಚಿಟ್ಟ ನಟಿ ಶಮಾ ಸಿಕಂದರ್

    ಈಗಲೂ ಅಮೌಲ್ಯ ಒಂದು ಪುಟ್ಟ ಮಗುವಿನ ರೀತಿಯಲ್ಲೇ ಇದ್ದಾರೆ. ಇಷ್ಟು ಬೇಗ ಅವರು ಮದುವೆ ಆಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಸಡನ್ನಾಗಿ ಹೊಸ ಜೀವನಕ್ಕೆ ಕಾಲಿಡುವ ಮೂಲಕ ಅಸಂಖ್ಯಾತ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದರು. ಮದುವೆಯ ನಂತರ ಮತ್ತೆ ಸಿನಿಮಾ ರಂಗಕ್ಕೆ ಬರುತ್ತಾರೆ ಎಂದು ಹೇಳಲಾಗಿತ್ತು. ಅದು ಆಗಲಿಲ್ಲ. ತಾವು ತಾಯಿ ಆಗುತ್ತಿರುವ ಕುರಿತು ಘೋಷಿಸಿದರು. ಈಗಲೂ ಅಭಿಮಾನಿಗಳು ಅವರು ಸಿನಿಮಾ ರಂಗಕ್ಕೆ ಬರುವುದಕ್ಕಾಗಿ ಕಾಯುತ್ತಿದ್ದಾರೆ.

    ಇದೀಗ ಅಮೂಲ್ಯ ಅವಳಿ (Twins) ಮಕ್ಕಳ ತಾಯಿ. ಮೊದಲ ಬಾರಿಗೆ ವೈದ್ಯರು ಈ ವಿಷಯವನ್ನು ತಿಳಿಸಿದಾಗ ಅಮೂಲ್ಯ ನಕ್ಕರಂತೆ. ಅವರ ಪತಿ ಜಗದೀಶ್ (Jagdish) ಟೆನ್ಷನ್ ಮಾಡಿಕೊಂಡರಂತೆ. ಇಡೀ ಫ್ಯಾಮಿಲಿಗೆ ಒಂದು ರೀತಿಯಲ್ಲಿ ಆತಂಕವಾಗಿತ್ತಂತೆ. ಅಮೂಲ್ಯ ಪುಟಾಣಿ ಹುಡುಗಿ. ಎರಡು ಮಕ್ಕಳನ್ನು ಹೇಗೆ ಮ್ಯಾನೇಜ್ ಮಾಡ್ತಾರೆ ಅನ್ನುವುದು ಕುಟುಂಬಕ್ಕೆ (Anxiety) ಚಿಂತೆಯಾಗಿತ್ತಂತೆ. ಇದೀಗ ಹಾಗೇನೂ ಇಲ್ಲ. ಎರಡೂ ಮಕ್ಕಳ ಜೊತೆ ಖುಷಿಯಾಗಿರುವೆ ಎಂದಿದ್ದಾರೆ ಅಮೂಲ್ಯ.

    Live Tv
    [brid partner=56869869 player=32851 video=960834 autoplay=true]

  • ‘ಅವಳಿ’ ಅಪ್ಪ, ಜವಳಿ ಮಕ್ಕಳು – 8 ತಿಂಗಳ ನಂತ್ರ 19ರ ಯುವತಿಯ ರಹಸ್ಯ ಬಯಲು

    ‘ಅವಳಿ’ ಅಪ್ಪ, ಜವಳಿ ಮಕ್ಕಳು – 8 ತಿಂಗಳ ನಂತ್ರ 19ರ ಯುವತಿಯ ರಹಸ್ಯ ಬಯಲು

    ಬ್ರೆಸಿಲಿಯಾ: ಒಂದೇ ದಿನ ಇಬ್ಬರು ಪುರುಷರೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ 19 ವರ್ಷದ ಯುವತಿಯೊಬ್ಬಳು ಇಬ್ಬರಿಂದಲೂ ಅವಳಿ ಮಕ್ಕಳಿಗೆ ಜನ್ಮ ನೀಡಿರುವುದಾಗಿ ತಿಳಿಸಿದ್ದಾಳೆ.

    ಎರಡು ಮಗುವಿನ ತಂದೆ ಯಾರೆಂದು ಪತ್ತೆಹಚ್ಚಲು ಮುಂದಾದ ಯುವತಿ ಡಿಎನ್‍ಎ ಟೆಸ್ಟ್ ರಿಪೋರ್ಟ್ ಶಾಕ್ ಆಗಿದ್ದಾಳೆ. ತನ್ನ ಇಬ್ಬರು ಮಕ್ಕಳು ವಿಭಿನ್ನ ವ್ಯಕ್ತಿಗಳಿಂದ ಜನಿಸಿರುವ ವಿಚಾರ ತಿಳಿದುಬಂದಿದ್ದು, ಈ ರೀತಿ ಆಗುತ್ತದೆ ಅಂತ ನಾನು ಎಂದಿಗೂ ಊಹಿಸಿರಲಿಲ್ಲ ಎಂದು ಯುವತಿ ಹೇಳಿದ್ದಾಳೆ.

    ಈ ಕುರಿತಂತೆ ಯುವತಿಗೆ ಚಿಕಿತ್ಸೆ ನೀಡಿದ ವೈದ್ಯ ತುಲಿಯೊ ಜಾರ್ಜ್ ಫ್ರಾಂಕೊ ಅವರು ಪ್ರತಿಕ್ರಿಯಿಸಿ, ಈ ರೀತಿಯ ಪ್ರಕರಣಗಳು ಬಹಳ ಅಪರೂಪ. 10 ಲಕ್ಷದಲ್ಲಿ ಒಂದು ಪ್ರಕರಣ ಇಂತಹ ರೀತಿ ಇರುತ್ತದೆ. ವೈಜ್ಞಾನಿಕವಾಗಿ ಹೇಳುವುದಾದರೇ ಹೆಟೆರೊಪರೆಂಟಲ್ ಸೂಪರ್‍ಫೆಕಂಡೇಶನ್ ಪ್ರಪಂಚದಾದ್ಯಂತ ಕೇವಲ 20 ಪ್ರಕರಣಗಳಿವೆ. ವಿವಿಧ ವ್ಯಕ್ತಿಗಳ ಅವಳಿ ಮಕ್ಕಳಿಗೆ ಮಹಿಳೆ ಜನ್ಮ ನೀಡುವ ಅತ್ಯಂತ ಅಪರೂಪದ ವಿದ್ಯಮಾನವಾಗಿದೆ ಎಂದು ಹೇಳಿದ್ದಾರೆ.

    ಋತುಚಕ್ರದ ಸಮಯದಲ್ಲಿ ಬಿಡುಗಡೆಯಾದ ಎರಡನೇ ಅಂಡಾಣುವು ಪ್ರತ್ಯೇಕ ಲೈಂಗಿಕ ಸಂಭೋಗದಲ್ಲಿ ಬೇರೆ ಪುರುಷರ ವೀರ್ಯ ಕೋಶಗಳಿಂದ ಹೆಚ್ಚುವರಿಯಾಗಿ ಫಲವತ್ತಾದಾಗ ಇದು ಸಂಭವಿಸುತ್ತದೆ ಎಂದು ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ವಿವರಿಸುತ್ತದೆ. ಇದನ್ನೂ ಓದಿ: ವೆಬ್ ಸರಣಿ ರೂಪದಲ್ಲಿ ಬರಲಿದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣ

    ಒಂದೇ ತಾಯಿಯಿಂದ ಎರಡು ಮೊಟ್ಟೆಗಳನ್ನು ವಿಭಿನ್ನ ಪುರುಷರು ಫಲವತ್ತಾಗಿಸಿದಾಗ ಇದು ಸಂಭವಿಸಬಹುದು. ಶಿಶುಗಳು ತಾಯಿಯ ಆನುವಂಶಿಕ ವಸ್ತುಗಳನ್ನು ಹಂಚಿಕೊಳ್ಳುತ್ತವೆ, ಆದರೆ ಅವು ವಿಭಿನ್ನ ಜರಾಯುಗಳಲ್ಲಿ ಬೆಳೆಯುತ್ತವೆ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ‘ತಾಂಟ್ರೆ ನೀ ಬಾ ತಾಂಟ್’ ಖ್ಯಾತಿಯ ರಿಯಾಝ್ ಫರಂಗಿಪೇಟೆ ಮನೆಗೆ NIA ದಾಳಿ

    ಈ ವಿಚಾರವಾಗಿ ಪರತಿಕ್ರಿಯಿಸಿದ ಯುವತಿ ತನ್ನ ಇಬ್ಬರೂ ಮಕ್ಕಳಿಗೆ ಹೋಲಿಕೆ ಇರಲಿಲ್ಲ. 8 ತಿಂಗಳ ಬಳಿಕ ತಂದೆ ಯಾರಿರಬಹುದು ಎಂಬುವುದರ ಬಗ್ಗೆ ಅನುಮಾನ ಮೂಡಲು ಆರಂಭವಾಯಿತು. ಹೀಗಾಗಿ ಎಂಟು ತಿಂಗಳ ಶಿಶುಗಳನ್ನು ಡಿಎನ್‍ಎ ಪರೀಕ್ಷೆಗೆ ಒಳಪಡಿಸಿದಾಗ ಫಲಿತಾಂಶದಲ್ಲಿ ಒಂದು ಮಗು ಮಾತ್ರ ತಂದೆಯ ಹೋಲಿಕೆಯನ್ನು ಹೊಂದಿದೆ. ಅನುಮಾನದಿಂದ ಮತ್ತೆ ಪರೀಕ್ಷಿಸಿದಾಗಲೂ ಇದೇ ಫಲಿತಾಂಶ ಬಂದಿದೆ. ಈ ವೇಳೆ ಯುವತಿ ಒಂದೇ ದಿನ ಇಬ್ಬರ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ ವಿಚಾರ ಬೆಳಕಿಗೆ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಅವಳಿ ಮಕ್ಕಳಿಗೆ ಜನ್ಮ ನೀಡಿದ ಕನ್ನಡದ  ಮತ್ತೋರ್ವ ನಟಿ ನಮಿತಾ

    ಅವಳಿ ಮಕ್ಕಳಿಗೆ ಜನ್ಮ ನೀಡಿದ ಕನ್ನಡದ ಮತ್ತೋರ್ವ ನಟಿ ನಮಿತಾ

    ವಿಚಂದ್ರನ್ ನಟನೆಯ ‘ಹೂ’ ಸೇರಿದಂತೆ ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ನಟಿ ನಮಿತಾ ಕೃಷ್ಣ ಜನ್ಮಾಷ್ಟಮಿ ದಿನದಂದೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ವಿಷಯವನ್ನು ಸ್ವತಃ ನಮಿತಾ ಅವರೇ ಸೋಷಿಯಲ್ ಮೀಡಿಯಾದ ಮೂಲಕ ಬಹಿರಂಗ ಪಡಿಸಿದ್ದಾರೆ. ಪತಿಯ ಜೊತೆ ಅವಳಿ ಮಕ್ಕಳ ಪೋಟೋವನ್ನೂ ಅವರು ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ.

    ನಾಲ್ಕು ವರ್ಷಗಳ ಹಿಂದೆ ನಮಿತಾ ಅವರಿಗೆ ಮದುವೆ ಆಗಿತ್ತು. 2017ರಲ್ಲಿ ಚೆನ್ನೈ ಮೂಲದ ವೀರೇಂದ್ರ ಚೌಧರಿ ಅವರ ಜೊತೆ ನಟಿ ಹಸೆಮಣೆ ಏರಿದ್ದರು. ಇತ್ತೀಚೆಗಷ್ಟೇ ಅವರು ಬೇಬಿ ಪಂಪ್ ಫೋಟೋಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಂಡಿದ್ದರು. ಸಾಕಷ್ಟು ಅಭಿಮಾನಿಗಳು ನೆಚ್ಚಿನ ನಟಿಗೆ ಶುಭ ಹಾರೈಸಿದ್ದರು. ಮದುವೆಯ ನಂತರ ಸಿನಿಮಾ ರಂಗದಿಂದ ನಮಿತಾ ದೂರವಿದ್ದರೂ, ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅವರು ಹೊಂದಿದ್ದರು. ಇದನ್ನೂ ಓದಿ:ಉದಯ್‌ ಹಿಂಬದಿಯಿಂದ ತಬ್ಬಿ ಕಿಸ್‌ ಮಾಡ್ತಾರೆ: ಬಿಗ್‌ ಬಾಸ್‌ ಮನೆಯಲ್ಲಿ ಮಹಿಳಾ ಸ್ಪರ್ಧಿಗಳು ಗರಂ

    ನಮಿತಾ ಮೂಲತಃ ಗುಜರಾತ್ ಮೂಲದವರು ಆಗಿದ್ದರು, ಹೆಚಚ್ಉ ಫೇಮಸ್ ಆಗಿದ್ದ ತೆಲುಗು ಸಿನಿಮಾ ರಂಗದ ಮೂಲಕ ಆನಂತರ ಕನ್ನಡ ಸಿನಿಮಾ ರಂಗಕ್ಕೂ ಕಾಲಿಟ್ಟ ಅವರು, ರವಿಚಂದ್ರನ್ ಸೇರಿದಂತೆ ಅನೇಕ ಕಲಾವಿದರ ಚಿತ್ರದಲ್ಲಿ ನಟಿಸಿದ್ದಾರೆ. ಸೊಂತಮ್ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟವರು ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪತಿಯೊಂದಿಗೆ ವಾಸಿಸಲು 30 ಬಾರಿ ಅವಳಿ ಸಹೋದರಿಯ ಪಾಸ್‍ಪೋರ್ಟ್ ಬಳಕೆ

    ಪತಿಯೊಂದಿಗೆ ವಾಸಿಸಲು 30 ಬಾರಿ ಅವಳಿ ಸಹೋದರಿಯ ಪಾಸ್‍ಪೋರ್ಟ್ ಬಳಕೆ

    ಬೀಜಿಂಗ್: ವಿದೇಶಿ ಪ್ರಯಾಣಕ್ಕೆಂದು ಸುಮಾರು 30 ಬಾರಿ ಪಾಸ್‍ಪೋರ್ಟ್ ಬದಲಾಯಿಸಿದ ಆರೋಪದ ಮೇಲೆ ಚೀನಾ ಪೊಲೀಸರು ಅವಳಿ ಸಹೋದರಿಯನ್ನು ಬಂಧಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಹರ್ಬಿಮ್ ನಗರದ ನಿವಾಸಿಯಾಗಿರುವ ಝೌ ಸಹೋದರಿಯರ ತನಿಖೆ ನಡೆಸಲಾಗುತ್ತಿದೆ. ಹಾಂಗ್ ಎನ್ನುವವಳು ಜಪಾನ್‍ನಲ್ಲಿರುವ ತನ್ನ ಪತಿಯೊಂದಿಗೆ ಇರಲು ಬಯಸಿದ್ದಳು. ಆದರೆ ಆಕೆಯ ವೀಸಾ ಅರ್ಜಿಗಳನ್ನು ಅಧಿಕಾರಿಗಳು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಆಕೆ ಜಪಾನ್, ಚೀನಾ, ರಷ್ಯಾ ದೇಶಗಳಿಗೆ ತೆರಳಲು ತನ್ನ ಅವಳಿ ಸಹೋದರಿಯ ಪಾಸ್‍ಪೋರ್ಟ್‍ನ್ನು ಬಳಸುತ್ತಿದ್ದಳು.

    Passport

    ಇದೇ ರೀತಿ ಸುಮಾರು 30 ಬಾರಿ ತನ್ನ ಅವಳಿ ಸಹೋದರಿಯ ಪಾಸ್‍ಪೋರ್ಟ್‍ನ್ನು ಬಳಸಿದ್ದಾಳೆ. ಆದರೆ ಈ ಬಾರಿ ಚೀನಾಕ್ಕೆ ಆಗಮಿಸುವಾಗ ಆಕೆ ಅವಳಿ ಸಹೋದರಿಯ ವೀಸಾವನ್ನು ಬಳಸಿರುವ ವಿಷಯ ಬಯಲಾಗಿದೆ. ಜೊತೆಗೆ ಆಕೆ ಈ ಮೊದಲು ಪ್ರಯಾಣ ಬೆಳೆಸಿದ್ದ ಇತಿಹಾಸವನ್ನು ಪರಿಶೀಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಇಬ್ಬರು ಅವಳಿ ಸಹೋದರಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: 130 ಸ್ಥಾನ ಗೆದ್ದು ಕಾಂಗ್ರೆಸ್ ಸರ್ಕಾರ ರಚಿಸೋದು ಗ್ಯಾರಂಟಿ: ಸಿದ್ದರಾಮಯ್ಯ ವಿಶ್ವಾಸ

    ಈ ಬಗ್ಗೆ ಮಾತನಾಡಿದ ಅಲ್ಲಿನ ಪೊಲೀಸ್ ಅಧಿಕಾರಿಗಳು, ಅವಳಿ ಸಹೋದರಿಯರ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಈ ರೀತಿ ಅವಳಿ ಸಹೋದರಿಯರು ಡಿಎನ್‍ಎ ಲಾಭವನ್ನು ಪಡೆದುಕೊಳ್ಳುವುದು ಅಪರಾಧವಾಗಿದೆ. ಜೊತೆಗೆ ಈ ರೀತಿಯಿಂದ ಮಾಡುವುದರಿಂದ ದೇಶದ ಭದ್ರತೆಗೂ ಅಪಾಯ ಉಂಟಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ – ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ NIA ಅಧಿಕಾರಿಗಳ ದಾಳಿ

    Live Tv

  • ಹುಟ್ಟುತ್ತಾ ಆರೋಗ್ಯವಾಗಿ ಹುಟ್ಟುತ್ತಾರೆ, ಬೆಳೆಯುತ್ತಾ ಸಮಸ್ಯೆಗೊಳಗಾಗುತ್ತಾರೆ!

    ಹುಟ್ಟುತ್ತಾ ಆರೋಗ್ಯವಾಗಿ ಹುಟ್ಟುತ್ತಾರೆ, ಬೆಳೆಯುತ್ತಾ ಸಮಸ್ಯೆಗೊಳಗಾಗುತ್ತಾರೆ!

    ರಾಯಚೂರು: ತಾಲೂಕಿನ ಕಟಕನೂರು ಗ್ರಾಮ ಅದ್ಯಾವುದೋ ಶಾಪಕ್ಕೆ ಒಳಗಾದಂತೆ ಮಕ್ಕಳ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದೆ. ಹುಟ್ಟುವ ಮಕ್ಕಳು ಆರೋಗ್ಯವಾಗೇ ಹುಟ್ಟುತ್ತಾರೆ. ಆದರೆ ಬೆಳೆಯುತ್ತಾ ನಾನಾ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಇದರಿಂದ ಪೋಷಕರು ಆಸ್ಪತ್ರೆಗಳಿಗೆ ಅಲೆದಾಡಿ ಸುಸ್ತಾಗಿದ್ದಾರೆ. ಆದ್ರೆ ಮಕ್ಕಳ ಸಮಸ್ಯೆಗಳಿಗೆ ಪರಿಹಾರ ಮಾತ್ರ ಸಿಕ್ಕಿಲ್ಲ.

    2009ರ ಪ್ರವಾಹದ ಬಳಿಕ ಗ್ರಾಮ 2011ರಲ್ಲಿ ಸಂಪೂರ್ಣ ಸ್ಥಳಾಂತರವಾದ ಮೇಲೆ 10 ತಾಯಂದಿರು ಅವಳಿ ಜವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಹುಟ್ಟುವ ಎರಡು ಮಕ್ಕಳಲ್ಲಿ ಒಂದು ಮಗು ಆರೋಗ್ಯ ಸಮಸ್ಯೆಯನ್ನ ಎದುರಿಸುತ್ತದೆ. ಬುದ್ದಿಮಾಂದ್ಯತೆ, ಅಂಗವಿಕಲತೆ, ಮಾತು ಬಾರದೇ ಇರುವುದು, ಕಿವಿ ಕೇಳಿಸದೆ ಇರುವ ಸಮಸ್ಯೆಯನ್ನ ಇಲ್ಲಿನ ಮಕ್ಕಳು ಎದುರಿಸುತ್ತಿದ್ದಾರೆ. ಸದ್ಯ ಗ್ರಾಮದಲ್ಲಿ 15ಕ್ಕೂ ಹೆಚ್ಚು ಮಕ್ಕಳು ಈ ಸಮಸ್ಯೆ ಎದುರಿಸುತ್ತಿದ್ದಾರೆ. ಇದನ್ನೂ ಓದಿ:  ನಮ್ಮಲ್ಲಿ ಪ್ರಾಣಿಗಳ ಕಾನೂನು ಕಠಿಣ ಇಲ್ಲ – ನಾಯಿ ‘ಲಾರಾ’ ಅಂತ್ಯಕ್ರಿಯೆಗೆ ಬಂದ ರಮ್ಯಾ

    ಕೀಲು ನೋವು, ಓಡಾಡಲು ಸಾಧ್ಯವಾಗದೇ ಇರುವುದು ಸೇರಿದಂತೆ ಇಲ್ಲಿನ ಮಕ್ಕಳು ಬೇರೆ ಬೇರೆ ಸಮಸ್ಯೆ ಎದುರಿಸುತ್ತಿರುವುದರಿಂದ ನೀರಿನ ಕುಡಿಯುವ ನೀರಿನಲ್ಲೇ ದೋಷ ಇರಬಹುದಾ ಎಂದು ಜನ ಅನುಮಾನಿಸಿದ್ದಾರೆ. ಬೋರ್‍ವೆಲ್ ನೀರನ್ನೇ ಜನ ಕುಡಿಯಲು ಬಳಸುತ್ತಿರುವುದರಿಂದ ಸಮಸ್ಯೆಗಳು ಎದುರಾಗತ್ತಿರಬಹುದು ಅಂತ ಭಾವಿಸಿದ್ದಾರೆ. ಆದರೆ ಇಂಥಹದ್ದೇ ಸಮಸ್ಯೆ ಅಂತ ಇದುವರೆಗೂ ತಿಳಿದು ಬಂದಿಲ್ಲ. ಇದನ್ನೂ ಓದಿ: Budget 2022: ತಾಲಿಬಾನ್‌ ಆಡಳಿತದ ಅಫ್ಘಾನಿಸ್ತಾನಕ್ಕೆ 200 ಕೋಟಿ ನೆರವು

    ಮಕ್ಕಳು ದೈಹಿಕ ಊನತೆ ಅನುಭವಿಸುತ್ತಿರುವುದು ಆಯಾ ಕುಟುಂಬದವರಷ್ಟೆ ಅಲ್ಲದೆ ಇಡೀ ಗ್ರಾಮಸ್ಥರನ್ನ ಚಿಂತೆಗೀಡು ಮಾಡಿದೆ. ಕುಡಿಯುವ ನೀರಿನ ಸಮಸ್ಯೆ ಇರಬಹುದೆ ಎಂಬ ಶಂಕೆ ಕಾಡುತ್ತಿದೆ. ಆದ್ರೆ ಹಳೆಯ ಗ್ರಾಮದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗೆ ಕಾರಣ ತಿಳಿಯಬೇಕಿದೆ. ಸಮಸ್ಯೆ ಎದುರಿಸುತ್ತಿರುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಸಿಗಬೇಕಿದೆ.