Tag: twins

  • ಅವಳಿ ಮಕ್ಕಳಿಗೆ ತಂದೆಯಾದ ದಿನೇಶ್ ಕಾರ್ತಿಕ್

    ಅವಳಿ ಮಕ್ಕಳಿಗೆ ತಂದೆಯಾದ ದಿನೇಶ್ ಕಾರ್ತಿಕ್

    ಮುಂಬೈ: ಭಾರತೀಯ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಮತ್ತು ಪತ್ನಿ ದೀಪಿಕಾ ಪಲ್ಲಿಕಲ್ ತಂದೆ-ತಾಯಿ ಆಗಿದ್ದಾರೆ. ಹೌದು ದಿನೇಶ್ ಮತ್ತು ದೀಪಿಕಾ ದಂಪತಿಗೆ  ಅವಳಿ ಗಂಡು ಮಕ್ಕಳು ಜನಿಸಿದೆ.

    ಈ ಸಿಹಿಯಾದ ವಿಚಾರವನ್ನು ದಿನೇಶ್ ಸೋಶಿಯಲ್ ಮೀಡಿಯಾದಲ್ಲಿ ಸ್ನೇಹಿತರು ಮತ್ತು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ದಿನೇಶ್ ಕಾರ್ತಿಕ್, ಪತ್ನಿ ಮತ್ತು ಮಕ್ಕಳೊಂದಿಗೆ ಕುಳಿತುಕೊಂಡಿರುವುದನ್ನು ಕಾಣಬಹುದಾಗಿದೆ. ಜೊತೆಗೆ, ನೋಡ ನೋಡುತ್ತಿದ್ದಂತೆ ಮೂರು ಈಗ ಐದಾಗಿದೆ. ದೀಪಿಕಾ ಮತ್ತು ನನಗೆ ಇಬ್ಬರು ಮುದ್ದಾದ ಗಂಡು ಮಕ್ಕಳು ಜನಿಸಿದ್ದಾರೆ. ಕಬೀರ್ ಪಳ್ಳಿಕಲ್ ಕಾರ್ತಿಕ್, ಝಿಯಾನ್ ಪಳ್ಳಿಕಲ್ ಕಾರ್ತಿಕ್ ಇದಕ್ಕಿಂತಲೂ ಸಂಭ್ರಮ ಸಿಗಲಾರದು ಎಂದು ತಮ್ಮ ಟ್ವಿಟ್ಟರ್‍ ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

    Dinesh Karthik

    ಸದ್ಯ ಈ ಸುದ್ದಿ ಕೇಳಿ ಅಭಿಮಾನಿಗಳು ಸಖತ್ ಖುಷ್ ಆಗಿದ್ದಾರೆ. ಕಾರ್ತಿಕ್ ಅವರ ಪತ್ನಿ ದೀಪಿಕಾ ಸ್ಕ್ವಾಷ್ ಆಟಗಾರ್ತಿಯಾಗಿದ್ದಾರೆ. 2012ರಲ್ಲಿ ನಿಕಿತಾ ವಂಜಾರಾ ಅವರೊಂದಿಗೆ ವಿಚ್ಛೇದನ ಪಡೆದ ನಂತರ 2013ರಲ್ಲಿ ದಿನೇಶ್, ದೀಪಿಕಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡು, 2015ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.  ಇದನ್ನೂ ಓದಿ: ಶಿವಣ್ಣ ಅಭಿಮಾನಿಗಳಿಗೆ ರಸದೌತಣ – ವಿಶ್ವದಾದ್ಯಂತ ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಮೇಲೆ ಭಜರಂಗಿ -2

    ಇತ್ತೀಚೆಗಷ್ಟೇ, ದಿನೇಶ್ ಕಾರ್ತಿಕ್ ದುಬೈನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಪರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಆಟ ಆಡಿದ್ದರು. ಅವರ ತಂಡವು ಐಪಿಎಲ್ ಪಂದ್ಯದಲ್ಲಿ ಫೈನಲ್‍ಗೆ ತಲುಪಿ ನಂತರ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‍ಕೆ) ವಿರುದ್ಧ 27 ರನ್‍ಗಳಿಂದ ಸೋಲನ್ನು ಎದುರಿಸಿತು.

  • ಅವಳಿ-ಜವಳಿ ಕಥೆ ಹೇಳಿ 2ನೇ ಮದುವೆಗೆ ಸಿದ್ಧನಾಗಿ ಪೊಲೀಸರ ಬಲೆಗೆ ಬಿದ್ದ

    ಅವಳಿ-ಜವಳಿ ಕಥೆ ಹೇಳಿ 2ನೇ ಮದುವೆಗೆ ಸಿದ್ಧನಾಗಿ ಪೊಲೀಸರ ಬಲೆಗೆ ಬಿದ್ದ

    ಚೆನ್ನೈ: ಅವಳಿ-ಜವಳಿ ಕಥೆ ಹೇಳಿ ಎರಡನೇ ಮದುವೆಯಾಗಲು ಹೋಗಿ ವರ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

    ಅರುಂಬಕ್ಕಂನ ವಾಲಾಂಡರ್ ಬೆನೆಟ್ ರಾಯನ್ ಎರಡನೇ ಮದುವೆಯಾಗಲು ಭರ್ಜರಿ ಪ್ಲ್ಯಾನ್ ರೂಪಿಸಿದ್ದ. ಅದು ಕೂಡ ಸಿನಿಮೀಯ ಶೈಲಿಯ ಡಬಲ್ ಆ್ಯಕ್ಟಿಂಗ್ ಮೂಲಕ ಎಂಬುದು ವಿಶೇಷ. ಆದರೆ ಈತ ಇದೀ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇದನ್ನೂ ಓದಿ:  ದೇವರ ಪೂಜೆ ಬಿಟ್ಟು ಹೋಗಲ್ಲ, ತಾಲಿಬಾನ್ ಉಗ್ರರು ಕೊಂದ್ರೂ ಪರ್ವಾಗಿಲ್ಲ: ಅರ್ಚಕ

    ಆರೋಪಿ ರಾಯನ್‍ಗೆ ಈ ಹಿಂದೆಯೇ ಮದುವೆಯಾಗಿತ್ತು. ಈ ದಂಪತಿಗೆ ಒಂದು ಮಗು ಇದೆ. ಇದಾಗ್ಯೂ 30 ವರ್ಷದ ರಾಯನ್ ತನ್ನ ಸಹೋದ್ಯೋಗಿ 21 ವರ್ಷದ ಯುವತಿಯೊಬ್ಬಳ ಜೊತೆ ಸ್ನೇಹ ಬೆಳೆಸಿದ್ದ. ಈ ಸ್ನೇಹ ಪ್ರೇಮಕ್ಕೆ ತಿರುಗಿದೆ. ಆದರೆ ಮೊದಲ ಪತ್ನಿ ಹಾಗೂ ಮಗುವಿರುವ ವಿಷಯವನ್ನು ರಾಯನ್ ಆಕೆಯೊಂದಿಗೆ ಮರೆಮಾಚಿದ್ದ. ಅಲ್ಲದೆ ತನ್ನ ಪ್ರೇಯಸಿಯನ್ನು ವಿವಾಹವಾಗಲು ನಿರ್ಧರಿಸಿದ್ದನು. ನಿಶ್ಚಿತಾರ್ಥವನ್ನೂ ಯುವತಿಯ ಕುಟುಂಬದವರು ನಡೆಸಿಕೊಟ್ಟಿದ್ದರು. ಇದೇ ವೇಳೆ ರಾಯನ್ ವರದಕ್ಷಿಣೆಯಾಗಿ 3.5 ಲಕ್ಷ ರೂಪಾಯಿ ಪಡೆದುಕೊಂಡಿದ್ದ. ತನ್ನ ಮೊದಲ ಮದುವೆ ವಿಚಾರ ಬಹಿರಂಗವಾದರೂ ಸಂಶಯ ಮೂಡದಂತೆ ಮಾಡಲು ತನಗೆ ಸಹೋದರನೊಬ್ಬನಿದ್ದಾನೆ ಎಂದು ಮೊದಲೇ ಕಥೆ ಕಟ್ಟಿದ್ದ.

    ನಾವಿಬ್ಬರೂ ಅವಳಿ-ಜವಳಿ ಎಂದು ಸುಳ್ಳು ಹೇಳಿ ಯುವತಿಯನ್ನು ನಂಬಿಸಿದ್ದನು. ಈಗ ಅವನು ದುಬೈನಲ್ಲಿದ್ದಾನೆ ಎಂದು ತಿಳಿಸಿದ್ದ. ಅಷ್ಟೇ ಅಲ್ಲದೆ ಆಕೆಯನ್ನು ಮತ್ತಷ್ಟು ನಂಬಿಸಲು ಬೇರೊಂದು ಹೆಸರಿನಲ್ಲಿ ತನ್ನದೇ ನಕಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಜನನ ಪ್ರಮಾಣಪತ್ರವನ್ನು ಸಿದ್ಧಪಡಿಸಿದ್ದನು. ಆದರೆ ಮದುವೆಗೆ ಇನ್ನೇನು ದಿನಗಳಿರುವಾಗ ಸಂಬಂಧಿಕರೊಬ್ಬರು ರಾಯನ್‍ಗೆ ಮದುವೆಯಾಗಿರುವ ವಿಚಾರವನ್ನು ಯುವತಿಗೆ ತಿಳಿಸಿದ್ದಾರೆ.

    ಇದರಿಂದ ಸಂಶಯಗೊಂಡ ಯುವತಿ ಪ್ರಶ್ನಿಸಿದಾಗ, ನಕಲಿ ದಾಖಲೆಗಳನ್ನು ಮುಂದಿಟ್ಟಿದ್ದಾನೆ. ಆದರೆ ಆತನ ನಡವಳಿಕೆ ಬಗ್ಗೆ ಮತ್ತಷ್ಟು ಅನುಮಾನಗೊಂಡ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರುವುದಾಗಿ ತಿಳಿಸಿದ್ದಾಳೆ. ಇದರಿಂದ ಕುಪಿತಗೊಂಡ ಆರೋಪಿ ಆ್ಯಸಿಡ್ ದಾಳಿ ನಡೆಸುವುದಾಗಿ ಬೆದರಿಕೆಯೊಡ್ಡಿದ್ದಾನೆ. ಯುವತಿಗೆ ತನ್ನ ಪ್ರಿಯಕರನ ಅಸಲಿಯತ್ತು ಗೊತ್ತಾಗಿದೆ. ಇದೀಗ ಮೋಸ ಹೋದ ಯುವತಿಯ ಕುಟುಂಬ ನೀಡಿದ ದೂರಿನಂತೆ ಅಡಿ ಪೊಲೀಸರು ರಯಾನ್ ಹಾಗೂ ಆತನ ತಾಯಿ ಸೆಲಿನಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

  • ರಾಜ್ಯದಲ್ಲೇ ಮೊದಲ ಬಾರಿಗೆ ಕೋವಿಡ್ ಸೋಂಕಿತ ಗರ್ಭಿಣಿಗೆ ಅವಳಿ ಮಕ್ಕಳು ಜನನ

    ರಾಜ್ಯದಲ್ಲೇ ಮೊದಲ ಬಾರಿಗೆ ಕೋವಿಡ್ ಸೋಂಕಿತ ಗರ್ಭಿಣಿಗೆ ಅವಳಿ ಮಕ್ಕಳು ಜನನ

    ಬಳ್ಳಾರಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಗರ್ಭಿಣಿ ಅವಳಿ-ಜವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

    ಬಳ್ಳಾರಿಯ ಡಾ.ರಾಜ್ ರಸ್ತೆಯಲ್ಲಿರುವ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ (ಕೋವಿಡ್ ಕೇರ್) ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿಯವರ ನೇತೃತ್ವದಲ್ಲಿ ಕೋವಿಡ್ ಸೋಂಕಿತ ಗರ್ಭಿಣಿಗೆ ಹೆರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇಂದು ಬೆಳಗ್ಗೆ ಸುಮಾರು 8.35ಕ್ಕೆ ಒಂದು ಗಂಡು ಮತ್ತು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

    ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಕೋವಿಡ್ ಸೋಂಕಿತ ಗರ್ಭಿಣಿಯು ಕಾರ್ಮಿಕ ವಲಯದಲ್ಲಿ ಕೆಲಸ ಮಾಡುತ್ತಿದ್ದು, ಎಲ್.ಎಸ್.ಸಿ.ಎಸ್ (Lower segment Caesarean section) ತಂತ್ರಜ್ಞಾನದ ಮೂಲಕ ತುರ್ತು ಹೆರಿಗೆ ಶಸ್ತ್ರಚಿಕಿತ್ಸೆಯನ್ನ ಮಾಡಲಾಗಿದೆ.

    ನವಜಾತ ಹೆಣ್ಣು ಶಿಶು 1.8 ಕೆ.ಜಿಯಷ್ಟು ಹಾಗೂ ನವಜಾತ ಗಂಡು ಶಿಶು 2.5 ಕೆ.ಜಿ ಯಷ್ಟು ತೂಕವಿರುತ್ತದೆ. ಮಹಿಳೆಗೆ ಇದು ಮೊದಲನೇಯ ಹೆರಿಗೆಯಾಗಿದೆಂದು ಡಿಸಿ ನಕುಲ್ ತಿಳಿಸಿದ್ದಾರೆ. ಇಡೀ ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಕೋವಿಡ್ ಸೋಂಕಿತ ಗರ್ಭಿಣಿ ಅವಳಿ-ಜವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ ಎಂದು ತಿಳಿದು ಬಂದಿದೆ.

  • ಕೋವಿಡ್ ಆಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಕೊರೊನಾ ಸೋಂಕಿತೆ!

    ಕೋವಿಡ್ ಆಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಕೊರೊನಾ ಸೋಂಕಿತೆ!

    ವಿಜಯಪುರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇಂದು ಆಸ್ಪತ್ರೆಯ ವೈದ್ಯರು ಮಹಿಳೆಗೆ ಸಹಜ ಹೆರಿಗೆ ಮಾಡಿಸಿದ್ದಾರೆ.

    ನಿನ್ನೆಯಷ್ಟೇ ಗರ್ಭಿಣಿ ಮಹಿಳೆಗೆ ಕೊರೊನಾ ಪಾಸಿಟಿವ್ ವರದಿ ದೃಢವಾಗಿತ್ತು. ರೋಗಿ ಸಂಖ್ಯೆ-8789 ಎಂಬ 20 ವರ್ಷದ ಗರ್ಭಿಣಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇಂದು ಬೆಳಗ್ಗೆ ಮಹಿಳೆಗೆ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಕೊರೊನಾ ಸುರಕ್ಷತಾ ಕ್ರಮ ಕೈಗೊಂಡ ವೈದ್ಯರು ಗರ್ಭಿಣಿಗೆ ಚಿಕಿತ್ಸೆ ನೀಡಿ, ಹೆರಿಗೆ ಮಾಡಿಸಿದ್ದಾರೆ.

    ನವಜಾತ ಶಿಶುಗಳು 2 ಕೆಜಿ ಹಾಗೂ 2.1 ಕೆಜಿ ತೂಕ ಹೊಂದಿದ್ದು, ತಾಯಿ ಮತ್ತು ಮಕ್ಕಳ ಆರೋಗ್ಯ ಸ್ಥಿರ ಎಂದು ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಶರಣಪ್ಪ ಕಟ್ಟಿ ಮಾಹಿತಿ ನೀಡಿದ್ದಾರೆ. ಅನೇಮಿಯಾ (ರಕ್ತಹೀನತೆ) ಸಮಸ್ಯೆಯಿಂದ ಬಳಲುತ್ತಿದ್ದ ಗರ್ಭಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಿದ ವೇಳೆ ಕೊರೊನಾ ಪಾಸಿಟಿವ್ ವರದಿ ದೃಢವಾಗಿತ್ತು.

  • ನೆನಪಿಗಾಗಿ ಅವಳಿ ಮಕ್ಕಳಿಗೆ ‘ಕೊರೊನಾ, ಕೋವಿಡ್’ ಎಂದು ನಾಮಕರಣ

    ನೆನಪಿಗಾಗಿ ಅವಳಿ ಮಕ್ಕಳಿಗೆ ‘ಕೊರೊನಾ, ಕೋವಿಡ್’ ಎಂದು ನಾಮಕರಣ

    – ಕೊರೊನಾ ಉತ್ತಮ ಅಭ್ಯಾಸಗಳನ್ನ ಬೆಳೆಸಿಕೊಳ್ಳುವಂತೆ ಮಾಡಿದೆ

    ರಾಯ್ಪುರ್: ಕೊರೊನಾ ವೈರಸ್ ವಿಶ್ವದಾದ್ಯಂತ ವ್ಯಾಪಿಸಿದ್ದು, ಜನರಲ್ಲಿ ಆತಂಕ ಸೃಷ್ಟಿಸುತ್ತಿದೆ. ಕೊರೊನಾ ಮತ್ತು ಕೋವಿಡ್ ಈ ಎರಡು ಪದಗಳು ಜನರಲ್ಲಿ ಈಗಾಗಲೇ ಆತಂಕ ಸೃಷ್ಟಿಸಿವೆ. ಅಲ್ಲದೇ ಇದರಿಂದ ಆರ್ಥಿಕ ಕಷ್ಟವನ್ನು ಎದುರಿಸಲಾಗುತ್ತಿದೆ. ಆದರೆ ಈ ಮಧ್ಯೆ ಛತ್ತೀಸ್‍ಗಢ ದಂಪತಿ ತಮಗೆ ಜನಿಸಿದ ಅವಳಿ ಮಕ್ಕಳಿಗೆ ‘ಕೊರೊನಾ’ ಮತ್ತು ‘ಕೋವಿಡ್’ ಎಂದು ನಾಮಕರಣ ಮಾಡಿದ್ದಾರೆ.

    ರಾಯ್ಪುರ ಮೂಲದ ದಂಪತಿಗೆ ಮಾರ್ಚ್ 26-27ರ ಮಧ್ಯರಾತ್ರಿ ರಾಯ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಅವಳಿ ಮಕ್ಕಳ ಜನನವಾಗಿದೆ. ಒಂದು ಗಂಡು ಮತ್ತು ಒಂದು ಹೆಣ್ಣು ಮಗು ಜನಿಸಿದ್ದು, ಲಾಕ್‍ಡೌನ್ ಮಧ್ಯೆಯೂ ಜನಿಸಿದ್ದಕ್ಕಾಗಿ ಮಕ್ಕಳಿಗೆ ‘ಕೊರೊನಾ-ಕೋವಿಡ್’ ಎಂದು ಹೆಸರನ್ನು ಇಡಲಾಗಿದೆ.

    ಮಾರ್ಚ್ 27 ರಂದು ಮುಂಜಾನೆ ನಾನು ಅವಳಿ ಮಕ್ಕಳಿಗೆ ಜನ್ಮ ನೀಡಿದೆ. ನಾವು ಗಂಡು ಮಗುವಿಗೆ ಕೋವಿಡ್ ಮತ್ತು ಹೆಣ್ಣು ಮಗುವಿಗೆ ಕೊರೊನಾ ಎಂದು ಹೆಸರಿಟ್ಟಿದ್ದೇವೆ. ಹೆರಿಗೆಯ ವೇಳೆ ನಾವು ಅನೇಕ ತೊಂದರೆಗಳನ್ನು ಎದುರಿಸಿದ್ದೇವೆ. ಆದ್ದರಿಂದ ನನ್ನ ಪತಿ ನೆನಪಿಗಾಗಿ ಈ ಹೆಸರು ಇಟ್ಟಿದ್ದಾರೆ ಎಂದು ತಾಯಿ ಪ್ರೀತಿ ವರ್ಮಾ ತಿಳಿಸಿದರು.

    ಪ್ರಸ್ತುತ ಕೊರೊನಾ ವೈರಸ್ ಅಪಾಯಕಾರಿಯಾಗಿದೆ. ಆದರೆ ಇದೇ ವೇಳೆ ಜನರಿಗೆ ನೈರ್ಮಲ್ಯ, ಸ್ವಚ್ಛತೆ ಮತ್ತು ಇತರ ಉತ್ತಮ ಅಭ್ಯಾಸಗಳನ್ನು ಬೆಳೆಸಿಕೊಳ್ಳುವಂತೆ ಮಾಡಿದೆ. ಹೀಗಾಗಿ ನಾವು ಈ ಹೆಸರುಗಳ ಬಗ್ಗೆ ಯೋಚಿಸಿದ್ದೆವು. ಆಸ್ಪತ್ರೆಯ ಸಿಬ್ಬಂದಿ ಸಹ ‘ಕೊರೊನಾ ಮತ್ತು ಕೋವಿಡ್’ ಎಂದು ಕರೆಯುತ್ತಿದ್ದರು. ಕೊನೆಗೆ ಸಾಂಕ್ರಾಮಿಕ ರೋಗದ ಹೆಸರನ್ನು ಇಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

    ಮಾರ್ಚ್ 26ರಂದು ತಡರಾತ್ರಿ ನನಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಪತಿ ಅಂಬುಲೆನ್ಸ್‌ಗೆ ಫೋನ್ ಮಾಡಿದ್ದಾರೆ. ಲಾಕ್‍ಡೌನ್ ಆದ ಪರಿಣಾಮ ಯಾವುದೇ ವಾಹನಕ್ಕೂ ಅವಕಾಶ ಇರಲಿಲ್ಲ. ಹೀಗಾಗಿ ಪೊಲೀಸರು ವಿವಿಧ ಸ್ಥಳಗಳಲ್ಲಿ ಅಂಬುಲೆನ್ಸ್ ನಿಲ್ಲಿಸಿ, ಪರಿಶೀಲನೆ ಮಾಡಿದ್ದಾರೆ. ಕೊನೆಗೆ ನನ್ನ ಸ್ಥಿತಿ ನೋಡಿ ಬಿಟ್ಟಿದ್ದಾರೆ. ಆದರೆ ಮಧ್ಯರಾತ್ರಿಯಾಗಿದ್ದರಿಂದ ಆಸ್ಪತ್ರೆಯಲ್ಲಿ ಏನಾಗಬಹುದು ಎಂಬ ಭಯ ಆಗಿತ್ತು. ಅದೃಷ್ಟವಶಾತ್ ವೈದ್ಯರು ಮತ್ತು ಇತರ ಸಿಬ್ಬಂದಿ ಆಸ್ಪತ್ರೆಯಲ್ಲೇ ಇದ್ದು ನನಗೆ ಹೆರಿಗೆ ಮಾಡಿಸಿದರು ಎಂದು ಹೆರಿಗೆ ವೇಳೆ ಎದುರಾದ ತೊಂದರೆಯ ಬಗ್ಗೆ ವರ್ಮಾ ತಿಳಿಸಿದ್ದಾರೆ.

    ತಾಯಿ ಮತ್ತು ಮಕ್ಕಳು ಇಬ್ಬರೂ ಆರೋಗ್ಯವಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ದಂಪತಿ ಕೊರೊನಾ-ಕೋವಿಡ್ ಎಂದು ಮಕ್ಕಳಿಗೆ ಹೆಸರಿಟ್ಟ ನಂತರ ಆಸ್ಪತ್ರೆಯಲ್ಲಿ ಅವಳಿ ಮಕ್ಕಳು ಕೇಂದ್ರ ಬಿಂದುವಾಗಿದ್ದವು ಎಂದು ವೈದ್ಯರೊಬ್ಬರು ತಿಳಿಸಿದ್ದಾರೆ. ಮೂಲತಃ ಉತ್ತರ ಪ್ರದೇಶದವರಾಗಿದ್ದು, ದೆಹಲಿಯ ಪುರಾಣಿ ಬಸ್ತಿ ಪ್ರದೇಶದ ಬಾಡಿಗೆ ಮನೆಯಲ್ಲಿ ದಂಪತಿ ವಾಸಿಸುತ್ತಿದ್ದಾರೆ.

  • 42 ನಿಮಿಷದಲ್ಲಿ 80 ಕಿಮೀ ಚಾಲನೆ – ಅವಳಿ ಮಕ್ಕಳ ಜೀವ ಉಳಿಸಿದ ಅಂಬ್ಯುಲೆನ್ಸ್ ಸಿಬ್ಬಂದಿ

    42 ನಿಮಿಷದಲ್ಲಿ 80 ಕಿಮೀ ಚಾಲನೆ – ಅವಳಿ ಮಕ್ಕಳ ಜೀವ ಉಳಿಸಿದ ಅಂಬ್ಯುಲೆನ್ಸ್ ಸಿಬ್ಬಂದಿ

    ಹಾವೇರಿ: ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ.

    ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ.

    ಹುಬ್ಬಳ್ಳಿಯ ಹೊರವಲಯಕ್ಕೆ ಅಂಬ್ಯುಲೆನ್ಸ್ ಬರುತ್ತಿದ್ದಂತೆ ಹುಬ್ಬಳ್ಳಿ ಸಂಚಾರಿ ಪೊಲೀಸರು ಅಂಬ್ಯುಲೆನ್ಸಗೆ ಯಾವುದೇ ಟ್ರಾಫಿಕ್ ಸಮಸ್ಯೆ ಬರದಂತೆ ಕಿಮ್ಸ್ ವರೆಗೆ ದಾರಿ ಮಾಡಿಕೊಟ್ಟಿದ್ದಾರೆ. ಈ ಮೂಲಕ ಟ್ರಾಫಿಕ್ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಅಂಬ್ಯುಲೆನ್ಸ್ ಸಿಬ್ಬಂದಿ ತೌಫಿಕ್ ಪಠಾಣ್ ಮತ್ತು ಕುಮಾರ್ ಹಾಗೂ ಹುಬ್ಬಳ್ಳಿ ಟ್ರಾಫಿಕ್ ಪೊಲೀಸರ ಈ ಕಾರ್ಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

  • ಒಂದೇ ಕಾಲೇಜಿನಲ್ಲಿ ನಾಲ್ಕು ಅವಳಿ ಜೋಡಿಗಳು

    ಒಂದೇ ಕಾಲೇಜಿನಲ್ಲಿ ನಾಲ್ಕು ಅವಳಿ ಜೋಡಿಗಳು

    ತುಮಕೂರು: ಜಿಲ್ಲೆಯ ಕುಣಿಗಲ್‍ನ ಜ್ಞಾನಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ಒಂದೇ ಕಾಲೇಜಿನಲ್ಲಿ ನಾಲ್ಕು ಅವಳಿ ಜೋಡಿ ಓದುತ್ತಿದ್ದು, ಕಾಲೇಜಿನ ವಿಶೇಷ ಆಕರ್ಷಣೆ ಆಗಿದ್ದಾರೆ.

    ಈ ಅವಳಿ-ಜವಳಿ ಜೋಡಿಗಳನ್ನು ನೋಡಿದರೆ ಹುಬ್ಬೇರದವರೇ ಇಲ್ಲ. ಏಕೆಂದರೆ ಒಂದಲ್ಲ, ಎರಡಲ್ಲ ಬರೋಬ್ಬರಿ ನಾಲ್ವರು ಅವಳಿ ಜವಳಿ ಚಹರೆ ಒಂದೇ ರೀತಿ ಇದೆ. ಅರುಣ್-ವರುಣ್, ಕಾವ್ಯ-ಕವನ, ಸಾನಿಯಾ-ಸಾಧಿಕಾ, ಕವಿತಾ-ಲಾವಣ್ಯ ಜೋಡಿ ನೋಡಿ ಎಲ್ಲರಿಗೂ ಕನ್‍ಫ್ಯೂಶನ್.

    ಈ ನಾಲ್ಕು ಅವಳಿ ಜೋಡಿಗಳ ಕಲರವ ಉಪನ್ಯಾಸಕರು ಹಾಗೂ ಸಹಪಾರಿಗಳಿಗೆ ಅವಳ್ಯಾರು ಇವನ್ಯಾರು ಎಂದು ತಕ್ಷಣಕ್ಕೆ ಗುರುತು ಹಚ್ಚಲು ಆಗದೇ ಪರದಾಡಬೇಕಾಗಿದೆ. ಎಷ್ಟೋ ನಾನು ಅವನಲ್ಲ, ನಾನು ಅವಳಲ್ಲ ಎಂದು ಅವರೇ ಹೇಳಿದ ಬಳಿಕ ಗೊತ್ತಾಗಿರುವ ಪ್ರಸಂಗಗಳು ನಡೆದಿವೆ.

    ಈ ಅವಳಿ ಜೋಡಿಗಳ ಇನ್ನೊಂದು ವಿಶೇಷ ಅಂದರೆ ಒಂದೇ ರೀತಿಯ ಯೂನಿಫಾರ್ಮ್, ಒಂದೇ ರೀತಿ ಹೇರ್ ಸ್ಟೈಲ್, ಒಂದೇ ರೀತಿಯ ಮಾತುಕತೆ. ಅದು ಅಲ್ಲದೇ ಯಾವಾಗಲೂ ಜೊತೆ ಜೊತೆಯಲ್ಲೇ ಇರುತ್ತಾರೆ. ಪರೀಕ್ಷೆ ವೇಳೆಯಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ವಿಶೇಷವಾಗಿ ” ಕುಟುಂಬ” ಪಾಠ ಮಾಡಲಾಗತ್ತದೆ.


    ಶಿಕ್ಷಕರು, ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಗುಣಮಟ್ಟ ಹೆಚ್ಚಿಸಲು ಕಾಳಜಿ ವಹಿಸಿದರೆ, ಇದೇ ಕಾಲೇಜಿನ ನಾಲ್ವರು ಅವಳಿ ಜೋಡಿಗಳು ಆ ಕಾಲೇಜಿನ ವಿಶೇಷ ಆಕರ್ಷಣೆಯಾಗಿದ್ದಾರೆ. ಒಂದೇ ಕಾಲೇಜಿನಲ್ಲಿ ಬರೋಬ್ಬರಿ ನಾಲ್ಕು ಜೋಡಿ ಅವಳಿ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರೋದ್ರಿಂದ ಕಾಲೇಜಿನ ವಿಶೇಷತೆಯೂ ಹೆಚ್ಚಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅವಳಿ ಮಕ್ಕಳನ್ನು ಕೊಂದು ನೇಣಿಗೆ ಶರಣಾದ ತಾಯಿ

    ಅವಳಿ ಮಕ್ಕಳನ್ನು ಕೊಂದು ನೇಣಿಗೆ ಶರಣಾದ ತಾಯಿ

    ಮೈಸೂರು: ಅವಳಿ ಮಕ್ಕಳನ್ನು ಕೊಂದು ತಾಯಿ ನೇಣಿಗೆ ಶರಣಾಗಿರುವ ಮನಕಲಕುವ ಘಟನೆ ಮೈಸೂರಿನ ಬಂಡಿಪಾಳ್ಯದಲ್ಲಿ ನಡೆದಿದೆ.

    ಆಶಾ(30), ಅವಳಿ ಮಕ್ಕಳಾದ ಶೌರ್ಯಗೌಡ(8), ಸುಪ್ರೀತ್ ಗೌಡ(8) ಮೃತ ದುರ್ದೈವಿಗಳು. ಆಶಾ ತನ್ನ ಮಕ್ಕಳಿಗೆ ವಿಷ ಕೊಟ್ಟು ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ತದನಂತರ ಆಕೆ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆಶಾ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್‍ನೋಟ್ ಬರೆದಿದ್ದಳು.

    ಆಶಾ ತನ್ನ ಡೆತ್‍ನೋಟ್‍ನಲ್ಲಿ, “ನನ್ನ ಸಾವಿಗೆ ನಾನೇ ಕಾರಣ. ನನ್ನ ಕುಟುಂಬಕ್ಕೆ ನನ್ನಿಂದ ಅವಮಾನ ಆಗಿದೆ. ನಾನು ಇದರಿಂದ ದಿನ ಕೊರಗಿ ಸಾಯುವ ಬದಲು ಒಂದೇ ಸಾರಿ ಸಾಯಲು ನಿರ್ಧರಿಸಿದ್ದೇನೆ. ನಾನು ಸತ್ತ ಮೇಲೆ ನನ್ನ ಮಕ್ಕಳು ತಬ್ಬಲಿ ಆಗುತ್ತಾರೆ ಎಂದು ನಾನೇ ಅವರನ್ನು ಕೊಂದಿದ್ದೇನೆ. ಮೂವರನ್ನು ಒಟ್ಟಿಗೆ ಚಿತೆಯಲ್ಲಿ ಸುಟ್ಟು ಹಾಕಿ” ಎಂದು ಮನವಿ ಮಾಡಿಕೊಂಡಿದ್ದಾಳೆ.

    ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾರಕ ರೋಗ ಎಚ್1ಎನ್1ಗೆ ಬಾಣಂತಿ ಸೇರಿ ಅವಳಿ ಹೆಣ್ಣು ಶಿಶು ಸಾವು

    ಮಾರಕ ರೋಗ ಎಚ್1ಎನ್1ಗೆ ಬಾಣಂತಿ ಸೇರಿ ಅವಳಿ ಹೆಣ್ಣು ಶಿಶು ಸಾವು

    ತುಮಕೂರು: ಜಿಲ್ಲೆಯಲ್ಲೂ ಮಾರಕ ರೋಗ ಎಚ್1ಎನ್1 ಗೆ ಬಾಣಂತಿ ಸೇರಿ ಆಕೆಯ ಅವಳಿ ನವಜಾತ ಶಿಶು ಸಾವನ್ನಪ್ಪಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆದರೆ ಈ ಸಾವನ್ನು ಆರೋಗ್ಯ ಇಲಾಖೆ ತಡವಾಗಿ ದೃಢಿಕರಿಸಿದೆ.

    ತುಮಕೂರು ತಾಲೂಕಿನ ಕುಪ್ಪೂರು ಗ್ರಾಮದ ರಂಗನಾಥ್ ಅವರ ಪತ್ನಿ ಕಾವ್ಯಾ ಹಾಗೂ ಆಕೆಯ ನವಜಾತ ಅವಳಿ ಹೆಣ್ಣು ಶಿಶುಗಳು ಆಗಸ್ಟ್ 27 ರಂದೇ ಎಚ್1ಎನ್1 ಗೆ ಬಲಿಯಾಗಿದ್ದರು. ಆದರೆ ನ್ಯುಮೋನಿಯಾದಿಂದ ಸಾವನ್ನಪ್ಪಿದ್ದರು ಎಂದು ಹೇಳಲಾಗಿತ್ತು. ಈಗ ಬಂದ ವರದಿ ಪ್ರಕಾರ ಎಚ್1ಎನ್1 ನಿಂದಲೇ ಅಸುನೀಗಿದ್ದಾರೆ ಎಂದು ಆರೋಗ್ಯ ಇಲಾಖೆ ದೃಢೀಕರಿಸಿದೆ. ಇದನ್ನು ಓದಿ: ಏನಿದು ಎಚ್1ಎನ್1? ಹಂದಿ ಜ್ವರ ಬಂದ ಮೇಲೆ ಏನು ಮಾಡಬೇಕು?

    7 ತಿಂಗಳ ಗರ್ಭಿಣಿಯಾದ ಕಾವ್ಯಾರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲು ತುಮಕೂರು ದೊಡ್ಡಮನೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಜ್ವರ ಹತೋಟಿಗೆ ಬಾರದೇ ಇದ್ದಾಗ ಕ್ರಮವಾಗಿ ಬೆಂಗಳೂರಿನ ವಾಣಿ ವಿಲಾಸ್, ಚಿನ್ಮಯ, ಹಾಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಮಣಿಪಾಲ್ ಆಸ್ಪತ್ರೆಯಲ್ಲಿ ಕಾವ್ಯಾ ಅವಳಿ ಹೆಣ್ಣುಮಕ್ಕಳಿಗೆ ಜನ್ಮ ನೀಡಿದರೂ ಅವು ಎಚ್1ಎನ್1 ಗೆ ಬಲಿಯಾಗಿದೆ.

    ಆಗ ತಕ್ಷಣ ಕಾವ್ಯಾರನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಅಲ್ಲಿ ಕಾವ್ಯಾಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಸಾವಿನಿಂದಾಗಿ ಜಿಲ್ಲೆಯ ಜನತೆಯಲ್ಲಿ ಮಾರಕ ರೋಗ ಎಚ್1ಎನ್1 ರ ಭೀತಿ ಶುರುವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವೈದ್ಯರ ನಿರ್ಲಕ್ಷದಿಂದ ಅವಳಿ ಶಿಶುಗಳು ಹೊಟ್ಟೆಯಲ್ಲೇ ಸಾವು!

    ವೈದ್ಯರ ನಿರ್ಲಕ್ಷದಿಂದ ಅವಳಿ ಶಿಶುಗಳು ಹೊಟ್ಟೆಯಲ್ಲೇ ಸಾವು!

    ಬಾಗಲಕೋಟೆ: ವೈದ್ಯರ ನಿರ್ಲಕ್ಷದಿಂದ ಅವಳಿ ಶಿಶುಗಳು ಹೊಟ್ಟೆಯಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.

    ಬೀಳಗಿ ತಾಲೂಕಿನ ರೊಳ್ಳಿ ಗ್ರಾಮದ ಶೃತಿ ಹರಿಜನಳ (25) ಗರ್ಭದಲ್ಲೇ ಅವಳಿ ಶಿಶುಗಳು ಸಾವನ್ನಪ್ಪಿವೆ. ಹೆರಿಗೆ ನೋವು ಬಂದ ಹಿನ್ನೆಲೆಯಲ್ಲಿ ಶೃತಿ ಅವರನ್ನು ಸಂಬಂಧಿಕರು ಬೀಳಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು ಎರಡು ಗಂಟೆ ನಂತರ ಸರಳ ಹೆರಿಗೆಯಾಗುತ್ತೆ ಎಂದು ಭರವಸೆ ನೀಡಿದ್ದರು. ಆದರೆ ಎಂಟು ತಾಸುಗಳ ನಂತರ ಹೆರಿಗೆಯಾಗಿದೆ.

    ಹೆರಿಗೆ ವೇಳೆ ಒಂದು ಗಂಡು ಒಂದು ಹೆಣ್ಣು ಅವಳಿ ಶಿಶುಗಳು ಜನಿಸಿದ್ದು, ಗರ್ಭದಲ್ಲೇ ಸಾವನ್ನಪ್ಪಿವೆ ಎಂದು ತಿಳಿದು ಬಂದಿದೆ. ಬಾಣಂತಿ ಶೃತಿ ಸಂಬಂಧಿಕರು ವೈದ್ಯರ ಭರವಸೆ ಮೇಲೆ ನಾವು ಬೇರೆ ಕಡೆ ಕರೆದೊಯ್ಯಲಿಲ್ಲ. ಶಿಶುಗಳ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪ ಮಾಡಿದ್ದಾರೆ.

    ಈ ಘಟನೆ ಸೋಮವಾರ ಬೆಳಿಗ್ಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಬಾಣಂತಿ ಶೃತಿಯನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಾಣಂತಿ ಸಂಬಂಧಿಕರು ಆಗ್ರಹಿಸಿದ್ದಾರೆ.