Tag: Twist

  • ಪತ್ನಿ, ಮುದ್ದಿನ ಶ್ವಾನವನ್ನು ಕೊಂದು 6ನೇ ಮಹಡಿಯಿಂದ ಉದ್ಯಮಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

    ಪತ್ನಿ, ಮುದ್ದಿನ ಶ್ವಾನವನ್ನು ಕೊಂದು 6ನೇ ಮಹಡಿಯಿಂದ ಉದ್ಯಮಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

    – ಕ್ಯಾನ್ಸರ್ ಪೀಡಿತ ಹೆಂಡ್ತಿಯನ್ನು ಬಿಟ್ಟು ಬದುಕಲ್ಲ, ಇಬ್ಬರು ಒಂದೇ ಸಾರಿ ಸಾಯೋಣ ಎಂದು ಕೊಲೆ

    ಬೆಂಗಳೂರು: ನಗರದ ಸದಾಶಿವನಗರದಲ್ಲಿ ಪತಿಯೇ ತನ್ನ ಪತ್ನಿ ಹಾಗೂ ಸಾಕು ನಾಯಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೀಗ ಸ್ಟೋಟಕ ತಿರುವು ಸಿಕ್ಕಿದೆ. ಕ್ಯಾನ್ಸರ್ ಪೀಡಿತ ಪತ್ನಿಯನ್ನು ಬಿಟ್ಟು ಬದುಕಲಾರದೇ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಪತ್ನಿ ಮಮತಾ ಉಪಾಧ್ಯಾಯಗೆ ಕ್ಯಾನ್ಸರ್ ಕಾಯಿಲೆ ಇರುವ ವಿಚಾರ ಪತಿ ಅತುಲ್ ಉಪಾಧ್ಯಾಯಗೆ ಇತ್ತೀಚೆಗಷ್ಟೇ ಗೊತ್ತಾಗಿತ್ತು. ವೈದ್ಯರ ಬಳಿ ತೋರಿಸಿದ್ರೆ, ಕ್ಯಾನ್ಸರ್ ನಾಲ್ಕನೇ ಹಂತದಲ್ಲಿದೆ ಎಂದು ವೈದ್ಯರು ಏನು ಮಾಡೋದಕ್ಕೆ ಆಗಲ್ಲ ಎಂದು ಹೇಳಿದ್ದರು. ಇನ್ನೇನು ಕೆಲವೇ ದಿನಗಳಲ್ಲಿ ಪತ್ನಿ ಸಾಯ್ತಾಳೆ ಎನ್ನುವ ವಿಚಾರ ತಿಳಿದು ಪತಿ ಮಾನಸಿಕವಾಗಿ ಕುಗ್ಗಿಹೋಗಿದ್ದ. ನಿನ್ನ ಬಿಟ್ಟು ನಾನು ಬದುಕಲ್ಲ, ನಿನ್ನ ಸಾವನ್ನು ನಾನು ನೋಡೋಕೆ ಆಗಲ್ಲ, ಇಬ್ಬರು ಒಟ್ಟಿಗೆ ಸಾಯೋಣ ಎಂದು ಹೇಳಿದ್ದ. ಆದರೆ ಪತ್ನಿ ಮಮತಾಗೆ ಒಟ್ಟಿಗೆ ಸಾಯೋಕೆ ಇಷ್ಟ ಇರಲಿಲ್ಲ. ಇದನ್ನೂ ಓದಿ: ಪತ್ನಿ, ಮುದ್ದಿನ ಶ್ವಾನವನ್ನು ಕೊಂದು 6ನೇ ಮಹಡಿಯಿಂದ ಜಿಗಿದ ಉದ್ಯಮಿ!

    ಇದೇ ವಿಚಾರವಾಗಿ ಪತಿ-ಪತ್ನಿ ನಡುವೆ ಗಲಾಟೆ ನಡೆದಿತ್ತು. ಹಾಗಾಗಿ ಪತಿ ಅತುಲ್ ತನ್ನ ಪತ್ನಿಯನ್ನು ಕೊಲೆ ಮಾಡಿದ್ದ. ಮತ್ತೊಂದು ದುರಂತ ಅಂದ್ರೆ ಮಕ್ಕಳಿಲ್ಲದ ಈ ದಂಪತಿ ನಾಯಿಯನ್ನೇ ಮಗುವಂತೆ ಸಾಕಿದ್ದರು. ನಾವಿಬ್ರು ಹೋದ ಮೇಲೆ ನಾಯಿಗತಿ ಏನು ಎಂದು ಯೋಚನೆ ಮಾಡಿದ ಅತುಲ್ ತನ್ನ ಮುದ್ದು ನಾಯಿಯನ್ನು ಕೆಳಗೆ ಎಸೆದು ಕೊಂದು ಹಾಕಿದ್ದ. ಇದೆಲ್ಲಾವನ್ನು ನೋಡಿದ ನಂತರ ತಾನು ಕೂಡ ಅದೇ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡ್ಕೊಂಡಿದ್ದ.

    ಏನಿದು ಘಟನೆ?
    ಬೆಂಗಳೂರಿನ ಸದಾಶಿವನಗರದಲ್ಲಿರುವ ಅಲೆಕ್ಸ್ ಸೈಕಾನ್ ಪೋಲರಿಸ್ ಅಪಾರ್ಟ್‍ಮೆಂಟ್‍ನಲ್ಲಿ ವಾಸವಿದ್ದ ಮುಂಬೈ ಮೂಲದ ಉದ್ಯಮಿ ಅತುಲ್ ಉಪಾಧ್ಯಾಯ ಪತ್ನಿ ಮಮತಾ ಉಪಾಧ್ಯಾಯ ಮನೆಯಲ್ಲಿ ಅದೊಂದು ಘೋರ ಘಟನೆ ನಡೆದು ಹೋಗಿತ್ತು. ಕಳೆದ ಮಂಗಳವಾರ ಮನೆಗೆ ಬಂದ ಗಂಡ ಅತುಲ್ ಉಪಾಧ್ಯಾಯ, ಏಕಾಏಕಿ ಪತ್ನಿ ಮಮತಾ ಉಪಾಧ್ಯಾಯಳನ್ನು ಕೊಲೆ ಮಾಡಿ, ಮಗನಂತೆ ಸಾಕಿದ್ದ ನಾಯಿಯನ್ನು ನಾಲ್ಕನೇ ಹಂತದಿಂದ ಎಸೆದು ನಂತರ ತಾನು ಕೂಡ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡ್ಕೊಂಡಿದ್ದ.

    ಪತಿ ಅತುಲ್ ಉಪಾಧ್ಯಾಯ ಸಾಯುವ ಮೊದಲು, ಆರು ಪುಟಗಳ ಡೆತ್ ನೋಟ್ ಕೂಡ ಬರೆದಿದ್ದು, ಎಫ್‍ಎಸ್‍ಎಲ್ ವರದಿ ನಂತರ ಮತ್ತಷ್ಟು ವಿಚಾರಗಳು ತಿಳಿಯಬೇಕಿದೆ.

  • ಪ್ರಿಯಕರ ಸರಿಯಾಗಿ ಮಾತನಾಡದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ!

    ಪ್ರಿಯಕರ ಸರಿಯಾಗಿ ಮಾತನಾಡದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ!

    ಹಾಸನ: ಸ್ನೇಹಿತನೊಂದಿಗೆ ಲಾಡ್ಜ್ ಗೆ ಬಂದಿದ್ದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ. ಪ್ರಿಯಕರ ತನ್ನೊಂದಿಗೆ ಸರಿಯಾದ ಮಾತನಾಡುತ್ತಿಲ್ಲ ಎಂದು ಮನನೊಂದು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ ಎನ್ನುವ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

    ಹಾಸನ ನಗರದ ಹೃದಯ ಭಾಗದಲ್ಲಿರುವ ಮೂನ್ ಲೈಟ್ ಹೋಟೆಲ್ ನಲ್ಲಿ ಕಳೆದ ರಾತ್ರಿ ತನ್ನ ಚಿರಂತಿ ಪ್ರಿಯಕರ ರಾಕೇಶ್ ಜೊತೆ ತಂಗಲು ಬಂದಿದ್ದು, ಸಿಸಿಟಿವಿಯಲ್ಲಿ ದೃಶ್ಯಾವಳಿಗಳು ಸೆರೆಯಾಗಿದೆ. ಕಳೆದ ರಾತ್ರಿ 10:30ಕ್ಕೆ ಇಬ್ಬರು ಪ್ರೇಮಿಗಳು ಬಂದಿದ್ದಾರೆ. ಇಬ್ಬರ ನಡುವೆ ಮೊಬೈಲ್ ಕಾಲ್ ವಿಚಾರವಾಗಿ ಮಧ್ಯರಾತ್ರಿಯವರೆಗೂ ವಾದ ವಿವಾದ ನಡೆದಿದೆ.

    ಮುಂಜಾನೆ ಬಾತ್ ರೂಂ ನೊಳಗೆ ಹೋದ ಚಿರಂತಿ ಒಂದು ಗಂಟೆಯಾದರೂ ಹೊರಗಡೆ ಬಂದಿರಲಿಲ್ಲ. ಈ ಹಿನ್ನಲೆಯಲ್ಲಿ ರಾಕೇಶ್ ಲಾಡ್ಜ್ ಸಿಬ್ಬಂದಿ ಸಹಾಯ ಪಡೆದು ಬಾಗಿಲು ಒಡೆದು ನೋಡಿದಾಗ ಚಿರಂತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿಚಾರ ಬೆಳಕಿಗೆ ಬಂದಿದೆ.

    ಚಿರಂತಿ ಸಕಲೇಶಪುರ ತಾಲೂಕಿನ ಬ್ಯಾಕರವಳ್ಳಿ ಗ್ರಾಮದವಳಾಗಿದ್ದು, ಕಳೆದ ಎರಡು ವರ್ಷ ಹಿಂದೆಯೇ ಯುವಕನೊಬ್ಬನಿಗೆ ಮದುವೆಯಾಗಿತ್ತು. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತಿದ್ದ ಚಿರಂತಿ ಪತಿಯೊಂದಿಗೆ ವಾಸವಿಲ್ಲದೇ ನಗರದಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು.

    ಚಿರಂತಿ ತಾನು ವಾಸವಿದ್ದ ಮನೆಯ ಮಾಲೀಕನ ಮಗನಾದ ಸುನೀಲ್ ಅಲಿಯಾಸ್ ರಾಕೇಶ್ ಎಂಬಾತನೊಂದಿಗೆ ಒಡನಾಟವಿತ್ತು. ಕಳೆದ ರಾತ್ರಿಯೂ ಕೂಡ ಇದೇ ರಾಕೇಶ್‍ನೊಂದಿಗೆ ಲಾಡ್ಜ್ ನಲ್ಲಿ ತಂಗಿದ್ದ ಚಿರಂತಿ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾಳೆ. ನಗರ ಪೊಲೀಸರು ಪ್ರಿಯಕರ ರಾಕೇಶ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದ್ದು ಚಿರಂತಿ ಆತ್ಮಹತ್ಯೆ ಕುರಿತು ತನಿಖೆ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಹಿಳೆಯರ ಡಬಲ್ ಮರ್ಡರ್ ಪ್ರಕರಣಕ್ಕೆ ಸಿಕ್ತು ಹೊಸ ಟ್ವಿಸ್ಟ್

    ಮಹಿಳೆಯರ ಡಬಲ್ ಮರ್ಡರ್ ಪ್ರಕರಣಕ್ಕೆ ಸಿಕ್ತು ಹೊಸ ಟ್ವಿಸ್ಟ್

    ಬೀದರ್: ಇಂದು ಜಿಲ್ಲೆಯ ಶಾಹಗಂಜ್ ಪ್ರದೇಶದ ಹನುಮಾನ್ ಮಂದಿರದ ಬಳಿ ನಡೆದ ಮಹಿಳೆಯರ ಡಬಲ್ ಮರ್ಡರ್ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ.

    ಕೊಲೆ ಮಾಡಿದ ಆರೋಪಿಯನ್ನು ದೇವಪ್ಪ ಎಂದು ಗುರುತಿಸಲಾಗಿದೆ. ಲಲಿತಮ್ಮ (45), ದುರ್ಗಮ್ಮ(60) ಎಂಬ ಇಬ್ಬರನ್ನು ಆರೋಪಿ ದೊಣ್ಣೆಯಿಂದ ಹೊಡದು ಕೊಲೆ ಮಾಡಿದ್ದಾನೆ. ದೇವಪ್ಪ ಹನುಮಾನ್ ದೇವಸ್ಥಾನದ ಕಳ್ಳತನಕ್ಕೆ ಸಂಚು ರೂಪಿಸಿದ್ದನಂತೆ. ಈ ವೇಳೆ ಬೆಳಗ್ಗೆ ವಾಕ್ ಬಂದ ಲಲಿತಮ್ಮ ಮತ್ತು ದುರ್ಗಮ್ಮ, ಯಾರು ನೀನು? ಇಲ್ಲಿ ಏನ್ ಮಾಡ್ತಿದ್ದೀಯಾ ಎಂದು ಪ್ರಶ್ನೆ ಮಾಡಿದ್ದಾರೆ. ಇದರಿಂದ ಭಯಗೊಂಡ ಆರೋಪಿ ಕಲ್ಲು ಮತ್ತು ದೊಣ್ಣೆಯಿಂದ ಇಬ್ಬರನ್ನು ಹೊಡೆದು ಕೊಲೆ ಮಾಡಿದ್ದಾನೆ.

    ದೇವಸ್ಥಾನದ ಕಳ್ಳತನಕ್ಕೆ ಬಂದ ಆರೋಪಿ ಎಲ್ಲಿ ಸಿಕ್ಕಿ ಹಾಕಿಕೊಳ್ಳುತ್ತೇನೆ ಎಂಬ ಭಯದಿಂದ ಮಹಿಳೆಯರನ್ನು ಕೊಲೆ ಮಾಡಿದ್ದಾನೆ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆಯ ಬಳಿಕ ಪ್ರಕರಣದ ಸತ್ಯ ತಿಳಿಯಲಿದೆ ಎಂದು ಎಸ್‍ಪಿ ರವೀಂದ್ರ ಹೇಳಿದ್ದಾರೆ.

    ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದಯಾನಂದ ಸ್ವಾಮಿ ರಾಸಲೀಲೆ ಪ್ರಕರಣಕ್ಕೆ ಟ್ವಿಸ್ಟ್- 1 ವರ್ಷದ ನಂತರ ನಟಿಯಿಂದ ದೂರು

    ದಯಾನಂದ ಸ್ವಾಮಿ ರಾಸಲೀಲೆ ಪ್ರಕರಣಕ್ಕೆ ಟ್ವಿಸ್ಟ್- 1 ವರ್ಷದ ನಂತರ ನಟಿಯಿಂದ ದೂರು

    ಮಂಗಳೂರು: ಕಿರುತೆರೆ ನಟಿಯ ಅತ್ಯಾಚಾರ ಹಾಗೂ ಬ್ಲಾಕ್ ಮೇಲ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

    ಬೆಂಗಳೂರಿನ ದಯಾನಂದಸ್ವಾಮಿ ವಿರುದ್ಧ ಮಂಗಳೂರಿನಲ್ಲಿ ಎಫ್‍ಐಆರ್ ದಾಖಲಾಗಿದೆ. ಹುಣಸಮಾರನಹಳ್ಳಿ ಮಠದ ದಯಾನಂದಸ್ವಾಮಿ ವಿರುದ್ಧ ಕದ್ರಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮಂಗಳೂರಿನ ಜೆಎಂಎಫ್‍ಸಿ ಕೋರ್ಟ್ ಸೂಚನೆಯಡಿ ಎಫ್‍ಐಆರ್ ದಾಖಲಾಗಿದೆ.

    ದಯಾನಂದ ಸ್ವಾಮೀಜಿ ಸೇರಿದಂತೆ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ದಯಾನಂದ ಸ್ವಾಮಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ. ಅಲ್ಲದೇ ವಿಡಿಯೋ ಮಾಡಿ ನಟಿಯನ್ನು ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಚಿಕ್ಕಮಗಳೂರಿನ ತೀರ್ಥಹಳ್ಳಿ ಮೂಲದ ಕಿರುತೆರೆ ನಟಿಯಿಂದ ದೂರು ದಾಖಲಾಗಿದ್ದು, ಮಂಗಳೂರು ಮೂಲಕ ಬೆಂಗಳೂರಿಗೆ ಕರೆದೊಯ್ದಿದ್ದ ಬಗ್ಗೆ ದೂರಿನಲ್ಲಿ ಉಲ್ಲೇಖವಾಗಿದೆ.

    ಏನಿದು ಪ್ರಕರಣ?
    ರಾಜ್ಯದ ಪ್ರತಿಷ್ಠಿತ ಮಠಗಳಲ್ಲೊಂದಾದ ಹುಣಸಮಾರನಹಳ್ಳಿಯ ಜಂಗಮ ಮಠದ ದಯಾನಂದ ಸ್ವಾಮಿ ರಾಸಲೀಲೆಯಲ್ಲಿ ನಟಿ ಕಾವ್ಯ ಆಚಾರ್ಯ ಭಾಗಿಯಾಗಿದ್ದರು. ದಯಾನಂದ್ ಮಹಿಳೆಯ ಜೊತೆ ರಾಸಲೀಲೆಯಲ್ಲಿ ತೊಡಗಿರೋ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ರಾಸಲೀಲೆ ರಹಸ್ಯ ವಿಡಿಯೋವನ್ನು 2014 ಜನವರಿ 4 ರಂದು ಮಾಡಲಾಗಿತ್ತು. ನಂತರ ಈ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅರ್ಜುನ್ ಸರ್ಜಾರನ್ನು ಚಕ್ರವ್ಯೂಹದಿಂದ ಬಿಡಿಸಲು ಅಖಾಡಕ್ಕಿಳಿದ ತಾಯಿ..!

    ಅರ್ಜುನ್ ಸರ್ಜಾರನ್ನು ಚಕ್ರವ್ಯೂಹದಿಂದ ಬಿಡಿಸಲು ಅಖಾಡಕ್ಕಿಳಿದ ತಾಯಿ..!

    ಬೆಂಗಳೂರು: ನಟಿ ಶೃತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಮೀಟೂ ವಿವಾದಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ.

    ಅರ್ಜುನ್ ಸರ್ಜಾರನ್ನು ಮೀಟೂ ಚಕ್ರವ್ಯೂಹದಿಂದ ಬಿಡಿಸಲು ಅವರ ತಾಯಿ ಅಖಾಡಕ್ಕಿಳಿದ್ದಾರೆ. ಬುಧವಾರವಷ್ಟೇ ಮಹಿಳಾ ಆಯೋಗದ ಮುಂದೆ ಸರ್ಜಾ ವಿರುದ್ಧ ಹೇಳಿಕೆ ಕೊಟ್ಟಿದ್ದ ಶೃತಿ ಹರಿಹರನ್‍ಗೆ ಕೌಂಟರ್ ಕೊಡೋದಕ್ಕೆ ಸರ್ಜಾ ತಾಯಿ ಸಜ್ಜಾಗಿದ್ದಾರೆ.

    ಸೋಮವಾರ ಖುದ್ದು ಮಹಿಳಾ ಆಯೋಗದಲ್ಲಿ ಶೃತಿ ಹರಿಹರನ್ ವಿರುದ್ಧವೇ ಸರ್ಜಾ ತಾಯಿ ದೂರು ದಾಖಲಿಸಲಿದ್ದಾರೆ. ನನ್ನ ಮಗನ ವಿರುದ್ಧ ಶೃತಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಯಾವುದೇ ಆಧಾರವಿಲ್ಲದೇ ವೈಯಕ್ತಿಕ ತೇಜೋವಧೆ ಮಾಡುತ್ತಿದ್ದಾರೆ ಅಂತಾ ಸರ್ಜಾ ತಾಯಿ ದೂರು ನೀಡಲಿದ್ದಾರೆ ಅನ್ನುವ ಮಾಹಿತಿ ಸರ್ಜಾ ಕುಟುಂಬದ ಮೂಲದಿಂದ ಪಬ್ಲಿಕ್ ಟಿವಿಗೆ ಮಾಹಿತಿ ಬಂದಿದೆ.

    ಸದ್ಯ ಆಯೋಗದಲ್ಲಿ ದೂರು ದಾಖಲಾದ ಬಳಿಕ ಮತ್ತೆ ಶೃತಿ ಹರಿಹರನ್ ವಿಚಾರಣೆಯನ್ನು ಆಯೋಗ ನಡೆಸಲಿದೆ.


    ನಾನು ಸಕ್ಕರೆ, ಮಾಧ್ಯಮಗಳು ಇರುವೆಯಿದ್ದಂತೆ:
    ಇಂದು ನಟಿ ಶೃತಿ ಹರಿಹರನ್ ಮಹಿಳಾ ಆಯೋಗದ ಕಚೇರಿಗೆ ಆಗಮಿಸಿ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು. ಕಚೇರಿಗೆ ಆಗಮಿಸಿದ ಶೃತಿ ಹರಿಹರನ್, ನಾನು ಸಕ್ಕರೆ ಇದ್ದಂತೆ. ಮಾಧ್ಯಮಗಳು ಇರುವೆ ಅಂತಾ ಹೇಳಿದ್ದರು. ಮಹಿಳಾ ಆಯೋಗದಿಂದ ಹೊರ ಬಂದಾಗ ಈ ಕುರಿತು ಪ್ರಶ್ನಿಸಿದಾಗ, ನಾನು ಆ ರೀತಿ ಹೇಳಿಯೇ ಇಲ್ಲ ಎಂದು ಮಾತು ಬದಲಿಸಿದ್ದರು.

    ನನ್ನ ಜೀವನದಲ್ಲಿ ಮಾಧ್ಯಮಗಳನ್ನು ತುಂಬಾ ಗೌರವಿಸುತ್ತೇನೆ. ನಾನು ಆ ರೀತಿ ಹೇಳಿಲ್ಲ ಅಂತಾ ಹೇಳಿದಾಗ ಪಬ್ಲಿಕ್ ಟಿವಿ ಪ್ರತಿನಿಧಿ, ನೀವು ಮಾತನಾಡಿರುವ ಆಡಿಯೋ ಮತ್ತು ವಿಡಿಯೋ ಇದೆ. ಬೇಕಾದರೆ ಒಂದು ಸಾರಿ ಕೇಳಿ ಎಂದು ಪ್ರಶ್ನೆ ಮಾಡಿದ್ದರು. ಇದರಿಂದ ಒಂದು ಕ್ಷಣ ಗೊಂದಲಕ್ಕೊಳಗಾದ ಶೃತಿ ನಗುವೊಂದನ್ನು ಬೀರಿ ಕಾರ್ ಹತ್ತಿ ಹೊರಟು ಹೋಗಿದ್ದರು.

    ನಟ ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಮಾಧ್ಯಮಗಳ ಮುಂದೆಯೇ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಈ ಸಂಬಂಧ ಮಹಿಳಾ ಅಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿತ್ತು. ಪ್ರಕರಣ ದಾಖಲಿಸಿಕೊಂಡ ಮಹಿಳಾ ಅಯೋಗ ಶೃತಿಗೆ ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ಸೂಚಿಸಿತ್ತು. ಅದ್ಯಾಕೋ ಶೃತಿ ಮಾತ್ರ ಕಳೆದ ಕೆಲ ದಿನಗಳಿಂದ ಫುಲ್ ಸೈಲೆಂಟ್ ಆಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ವಕೀಲ ಅನಂತ್ ನಾಯ್ಕ್ ಅವರ ಜೊತೆ ಮಹಿಳಾ ಆಯೋಗದ ಮುಂದೆ ಹಾಜರಾದ ಶೃತಿ, ವಿಸ್ಮಯ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡಿದ್ದಾರೆ. ಶೃತಿಯನ್ನು ಪ್ರತ್ಯೇಕ ಕೊಠಡಿಗೆ ಕರೆದುಕೊಂಡ ಹೋದ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಂಡಿದ್ದು, ಈ ವಿಚಾರಣೆ ನಡೆಯಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಡೆತ್‍ನೋಟ್‍ನಲ್ಲಿ ಏನಿತ್ತು?

    ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಡೆತ್‍ನೋಟ್‍ನಲ್ಲಿ ಏನಿತ್ತು?

    ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ.

    ಜನಾರ್ದನ್(52), ಸುಷ್ಮಿತ(48), ಸುದರ್ಶಿನಿ(29) ಹಾಗೂ ಸೋನಿಕ(6) ಮೃತ ವ್ಯಕ್ತಿಗಳು. ಒಂದೇ ಮನೆಯ ದುರಂತ ಸಾವುಗಳನ್ನು ಕಂಡರೆ ಎಲ್ಲರೂ ಆತ್ಮಹತ್ಯೆ ಮಾಡಿಕೊಂಡಿಲ್ಲ ಎನ್ನುವುದು ಪೊಲೀಸರಿಗೆ ಅನುಮಾನ ಮೂಡಿದೆ. ಏಕೆಂದರೆ ಮೃತರ ಪೈಕಿ ಜನಾರ್ದನ್ ಮತ್ತು ಸುಮಿತ್ರ ಮಾತ್ರೆ ಸೇವನೆ ಮಾಡಿ ಮೃತ ಪಟ್ಟಿದರೆ, ಮಗುವನ್ನು ಉಸಿರು ಕಟ್ಟಿಸಿ ಕೊಲೆ ಮಾಡಿ ನಂತರ ಸುಧಾರಾಣಿ ಮುಖಕ್ಕೆ ಪ್ಲಾಸ್ಟಿಕ್ ಕವರ್ ನಲ್ಲಿ ಬಿಗಿದುಕೊಂಡು ಸಾವನಪ್ಪಿದ್ದಾರೆ. ಸಾವಿಗೂ ಮುನ್ನ ಸುಧಾರಾಣಿ ಬರೆದಿರುವ ಡೆತ್ ನೋಟ್ ಹಲವು ವಿಚಾರಗಳನ್ನು ಹೊರ ಹಾಕಿದೆ.

    ಡೆತ್‍ನೋಟ್‍ನಲ್ಲಿ ಏನಿದೆ?
    ನಾನು ಸುಧಾರಾಣಿ. ನಮ್ಮ ಸಾವಿಗೆ ಬೇರೆ ಯಾರು ಕಾರಣ ಅಲ್ಲ ನಾನೇ ಕಾರಣ. ನನಗೆ ಒಂದು ಮನೆ ತೆಗೆದುಕೊಳ್ಳುವ ಕನಸು ಇತ್ತು. ಹೀಗಿರುವಾಗ ಒಬ್ಬನನ್ನು ನಂಬಿದ್ದೆ. ಅದೇ ನಂಬಿಕೆ ಮೇಲೆ ಆತನಿಗೆ 25 ಲಕ್ಷ ಹಣ ಕೊಟ್ಟಿದ್ದೆ. ಆದರೆ ಆ ವ್ಯಕ್ತಿ ಹಣ ತೆಗೆದುಕೊಂಡು ಹೋಗುತ್ತಿರುವಾಗಲೇ ಅಪಘಾತವಾಗಿ ಸಾವನ್ನಪ್ಪಿದ. ನನ್ ಹಣ ಹೋಯ್ತು. ಅಪ್ಪ ಅಮ್ಮನಿಗೆ ವಿಚಾರ ತಿಳಿಸಿದ್ದೆ. ನಂತರ ಹಣ ವಾಪಸ್ ಸಿಗಬಹುದು ಅಂತ ಸಾಕಷ್ಟು ಪ್ರಯತ್ನ ಪಟ್ಟೆ. ತುಂಬಾ ಜನರ ಬಳಿ ಕೇಳಿ ಕೊಂಡಿದ್ದೆ. ಆದರೆ ಪರಿಹಾರ ಸಿಗಲಿಲ್ಲ. ಹಣ ವಾಪಸ್ ಬರುತ್ತೆ ಎನ್ನುವ ನಂಬಿಕೆ ಬರಲಿಲ್ಲ.

    ಕೊನೆಗೆ ಅಪ್ಪ-ಅಮ್ಮನ ಜೊತೆ ಮಾತನಾಡಿ ತೀರ್ಮಾನ ಮಾಡಿದ್ವಿ. ಅಪ್ಪ ಅಮ್ಮನಿಗೆ ಶನಿವಾರ ಮಾತ್ರೆ ಕೊಟ್ಟೆ, ಅವರು ಸಾಯುವ ಮೊದಲು ನಾವೇನಾದರು ಸತ್ತಿಲ್ಲಾ ಅಂದರೆ ನಮ್ಮನ್ನು ಕೊಂದುಬಿಡು ಎಂದು ಹೇಳಿದರು. ನಂತರ ಅಪ್ಪ-ಅಮ್ಮ ಮಾತ್ರೆ ಸೇವಿಸಿದ ನಂತರ ನಾನು ಮಗಳನ್ನು ಕರೆದುಕೊಂಡು ಮನೆ ಬೀಗ ಹಾಕಿಕೊಂಡು ಗಂಡನ ಮನೆಗೆ ಹೋಗಿದ್ದೆ ಅಲ್ಲಿ ಅಡುಗೆ ಮಾಡಿಟ್ಟು, ಸಂಜೆ ವಾಪಸ್ ಬಂದೆ. ಅಷ್ಟರಲ್ಲಿ ಅಪ್ಪ-ಅಮ್ಮ ಸತ್ತು ಹೋಗಿದ್ದರು. ನಂತರ ನಾನು ಮೊದಲೇ ತೀರ್ಮಾನ ಮಾಡಿದ ಹಾಗೆ, ಮನೆ ಒಳಗಿನಿಂದ ಬೀಗ ಹಾಕಿ ಮಗಳು ಮೋನಿಕಾಳನ್ನು ಉಸಿರುಗಟ್ಟಿಸಿ ಕೊಂದೆ. ಇವಾಗ ನಾನು ಸಾಯುತ್ತೇನೆ ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಸದ್ಯ ಮೂರು ಕೊಲೆ ಮತ್ತು ಒಂದು ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡಿರುವ ವಿದ್ಯಾರಣ್ಯಪುರ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ.

    ಈ ಸಾವಿಗೆ ಕೇವಲ ಹಣ ಮಾತ್ರ ಕಾರಣವಾ ಇಲ್ಲಾ ಅದಕ್ಕೂ ಮೀರಿದ್ದು ಏನಾದರೂ ಇದೆಯಾ ಅನ್ನೋದು ಪೊಲೀಸರ ತನಿಖೆಯಿಂದ ಹೊರಬರಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಯುವಕನ ಮರ್ಮಾಂಗ ಕತ್ತರಿಸಿದ ಮಹಿಳೆ ಪ್ರಕರಣಕ್ಕೆ ಟ್ವಿಸ್ಟ್

    ಯುವಕನ ಮರ್ಮಾಂಗ ಕತ್ತರಿಸಿದ ಮಹಿಳೆ ಪ್ರಕರಣಕ್ಕೆ ಟ್ವಿಸ್ಟ್

    ಭುವನೇಶ್ವರ್: ಒಡಿಶಾದ ಕೆಯೊಂಜ್ಹಾರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಯುವಕನ ಮರ್ಮಾಂಗ ಕತ್ತರಿಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೃತ್ಯ ನಡೆದಿದೆ ಎಂದು ತಿಳಿದು ಬಂದಿದೆ.

    ಯುವಕನ ಮರ್ಮಾಂಗ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಡೌಗಾನ್ ಗ್ರಾಮದ 24 ವರ್ಷದ ಕಮಲ ಪತ್ರ ಎಂಬ ಮಹಿಳೆಯನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಆಯುಧವನ್ನು ವಶಪಡಿಸಿಕೊಂಡಿದ್ದೇವು. ಅಲ್ಲದೇ ಮಹಿಳೆಯನ್ನು ವಿಚಾರಣೆಗೆ ಒಳಪಡಿಸಿದಾಗ ಆಕೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಘಟನೆಗೆ ಅಕ್ರಮ ಸಂಬಂಧವೇ ಕಾರಣ ಎಂದು ಹೆಚ್ಚುವರಿ ಜಿಲ್ಲಾ ವರಿಷ್ಠಾಧಿಕಾರಿ ಜೇಮ್ಸ್ ಟೊಪ್ಪೊ ಮಾಹಿತಿ ನೀಡಿದ್ದಾರೆ.

    ಏನಿದು ಘಟನೆ?
    24 ವರ್ಷದ ರಾಜೇಂದ್ರ ನಾಯಕ್ ಜರಾಬೆದ ಗ್ರಾಮದ ನಿವಾಸಿ. ಅಲ್ಲದೇ ಬಡೌಗಾನ್ ಗ್ರಾಮದ ಕಮಲ ಪತ್ರ ಎಂಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ರಾಜೇಂದ್ರ ಚೆನ್ನೈ ಮೂಲದ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಅಲ್ಲದೇ ಅಲ್ಲಿಯೂ ಸಹ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದ. ಊರಿಗೆ ಬಂದಾಗಲೆಲ್ಲಾ ಕಮಲಾಳ ಮನೆಗೆ ಭೇಟಿ ನೀಡುತ್ತಿದ್ದ.

    ಕಳೆದ ಮಂಗಳವಾರ ಮತ್ತು ಬುಧವಾರವೂ ಕಮಲಾಳ ಮನೆಗೆ ತೆರಳಿದ್ದ. ಈ ವೇಳೆ ಚೆನ್ನೈ ಮಹಿಳೆಯೊಂದಿಗೆ ಮಾತನಾಡುತ್ತಿರುವಾಗ ಕಮಲಾ ಕೈಗೆ ಸಿಕ್ಕಿಬಿದ್ದಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಇದರಿಂದ ಸಿಟ್ಟಿಗೆದ್ದ ಕಮಲ ಮನೆಯಲ್ಲಿ ಮಲಗಿದ್ದ ರಾಜೇಂದ್ರನ ಮರ್ಮಾಂಗವನ್ನು ಕತ್ತರಿಸಿ ಸೇಡು ತೀರಿಸಿಕೊಂಡಿದ್ದಳು.

    ಗಂಭೀರವಾಗಿ ಗಾಯಗೊಂಡಿದ್ದ ರಾಜೇಂದ್ರನನ್ನು ಮೊದಲು ಹರಿಚಂದಾಪುರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ನಂತರ ಕೆಯೊಂಜ್ಹಾರ್ ಜಿಲ್ಲಾಸ್ಪತ್ರೆಗೆ ರವಾನಿಸಿದ್ದರು. ಆದರೆ  ಹೆಚ್ಚಿನ ಚಿಕಿತ್ಸೆಗಾಗಿ ಕಟಕ್‍ನ ಆಸ್ಪತ್ರೆಗೆ ದಾಖಲಿಸಿದ್ದರು. ಈ ಬಗ್ಗೆ ಯುವಕನ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • #MeToo ಬ್ಯಾಟಲ್‍ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್- ಪ್ರಶಾಂತ್ ವಿರುದ್ಧ ಶೃತಿ ಮತ್ತೊಂದು ದೂರು

    #MeToo ಬ್ಯಾಟಲ್‍ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್- ಪ್ರಶಾಂತ್ ವಿರುದ್ಧ ಶೃತಿ ಮತ್ತೊಂದು ದೂರು

    -ಸಂಬರ್ಗಿ ವಿರುದ್ಧ ಚೇತನ್ ಕೂಡ ದೂರು

    ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ಹಾಗೂ ನಟಿ ಶೃತಿ ಹರಿಹರನ್ ಅವರ ಮೀಟೂ ಬ್ಯಾಟಲ್ ಈಗ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆಯುತ್ತಿದೆ. ನಟಿ ಶೃತಿ ಹರಿಹರನ್ ಅವರು ಪ್ರಶಾಂತ್ ಸಂಬರ್ಗಿ ವಿರುದ್ಧ ಮತ್ತೊಂದು ಕೇಸ್ ದಾಖಲಿಸಿದ್ದಾರೆ.

    ಪ್ರಶಾಂತ್ ವೈಯಕ್ತಿಕ ಮೆಸೇಜ್‍ಗಳನ್ನು ಸೈಬರ್ ಎಕ್ಸ್ ಪರ್ಟ್‍ಗಳಿಂದ ತೆಗೆಸಿದ್ದಾರೆ. ನನ್ನ ಪರ್ಸನಲ್ ನಂಬರ್ ಕಾಲ್ ಡಿಟೇಲ್ಸ್ ತೆಗೆಯಲು ಇವರ್ಯಾರು?. ಕಾನೂನಿನ ಪ್ರಕಾರವಷ್ಟೇ ಕಾಲ್ ಡಿಟೇಲ್ಸ್ ತೆಗೆಯಲು ಅವಕಾಶವಿದೆ. ಎಥಿಕಲ್ ಹ್ಯಾಕರ್ಸ್ ಮೂಲಕ ನನ್ನ ಮಾಹಿತಿ ಕಲೆ ಹಾಕಿದ್ದಾರೆ. ನನ್ನ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಇಲ್ಲಸಲ್ಲದ ಪೋಸ್ಟ್ ಮಾಡಿದ್ದಾರೆ. ನನ್ನ ವಿರುದ್ಧ ಅವಹೇಳನಕಾರಿ ಪೋಸ್ಟ್‍ಗಳನ್ನು ಮಾಡಿ ಟ್ರೋಲ್ ಮಾಡಲಾಗ್ತಿದೆ. ಯೂಟ್ಯೂಬ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಿಲಾಗ್ತಿದೆ. ಕೂಡಲೇ ಪ್ರಶಾಂತ್ ಸಂಬರಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಂದು ನಟಿ ಶೃತಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

    ನಟ ಹಾಗೂ ಫೈರ್ ಸಂಸ್ಥೆ ಮುಖ್ಯಸ್ಥ ಚೇತನ್ ಅವರು ಕೂಡ ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲಿಸಿದ್ದಾರೆ. ಚೇತನ್ ಅವರು ಪ್ರಶಾಂತ್ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಅಲ್ಲದೇ ನಾನು ಹುಟ್ಟು ಹಾಕಿದ ಫೈರ್ ಸಂಸ್ಥೆ ವಿರುದ್ಧ ಸಲ್ಲದ ಆರೋಪ ಮಾಡಿದ್ದಾರೆ. ಫೇಸ್‍ಬುಕ್ ಮೂಲಕ ಅನಾಮಧೇಯ ಕರೆ ಮಾಡಿದ್ದಾರೆ. ಅನಾಮಧೇಯ ಕರೆಯನ್ನು ಪ್ರಶಾಂತ್ ಸಂಬರ್ಗಿ ಸಾಬೀತು ಪಡಿಸಲಿ, ಇಲ್ಲದೇ ಇದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ನಟ ಚೇತನ್ ದೂರು ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಾಡೆಲ್ ಮರ್ಡರ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಸೆಕ್ಸ್ ನಿರಾಕರಿಸಿದ್ದಕ್ಕೆ ಕೊಲೆ!

    ಮಾಡೆಲ್ ಮರ್ಡರ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಸೆಕ್ಸ್ ನಿರಾಕರಿಸಿದ್ದಕ್ಕೆ ಕೊಲೆ!

    ಮುಂಬೈ: ಮಾಡೆಲ್‍ನನ್ನು ವಿದ್ಯಾರ್ಥಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿ ಶವವನ್ನು ಸೂಟ್‍ಕೇಸ್‍ನಲ್ಲಿ ತೆಗೆದುಕೊಂಡು ಹೋದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸೆಕ್ಸ್ ನಿರಾಕರಿಸಿದ್ದಕ್ಕೆ ಯುವತಿಯನ್ನು ಕೊಲೆ ಮಾಡಿದ್ದಾನೆ ಎಂಬ ಸತ್ಯ ಹೊರ ಬಂದಿದೆ.

    ಮಾನ್ಸಿ ದೀಕ್ಷಿತ್(20) ಸೆಕ್ಸ್ ನಿರಾಕರಿಸಿದ್ದಕ್ಕೆ 19 ವರ್ಷದ ವಿದ್ಯಾರ್ಥಿ ಮುಜಾಮಿಲ್ ಸೈಯಿದ್ ಕೊಲೆ ಮಾಡಿ ಅಂಧೇರಿಯಿಂದ ಮಲಾಡ್‍ಗೆ ಶವವನ್ನು ಸೂಟ್‍ಕೇಸ್‍ನಲ್ಲಿ ತೆಗೆದುಕೊಂಡು ಹೋಗಿ ಬಿಸಾಕಿದ್ದಾನೆ.

    ಘಟನೆ ವಿವರ:
    ಮಾನ್ಸಿ ದೀಕ್ಷಿತ್ ಮಾಡೆಲ್ ಆಗಲು ರಾಜಸ್ಥಾನದಿಂದ ಮುಂಬೈಗೆ ಬಂದಿದ್ದಳು. ಮಾನ್ಸಿ ಹಾಗೂ ಸೈಯಿದ್ ಇಂಟರ್ ನೆಟ್‍ನಲ್ಲಿ ಪರಸ್ಪರ ಪರಿಚಯ ಮಾಡಿಕೊಂಡಿದ್ದಾರೆ. ಮಾನ್ಸಿ ಅಂಧೇರಿಯಲ್ಲಿರುವ ಸೈಯಿದ್ ಅಪಾರ್ಟ್ ಮೆಂಟ್‍ನಲ್ಲಿ ಭೇಟಿಯಾಗಿದ್ದಳು. ಈ ವೇಳೆ ಸೈಯಿದ್ ದೈಹಿಕ ಸಂಪರ್ಕ ಬೆಳೆಸಲು ಮಾನ್ಸಿ ಹತ್ತಿರ ಕೇಳಿಕೊಂಡಿದ್ದಾನೆ. ಆದರೆ ಮಾನ್ಸಿ ಇದನ್ನು ನಿರಾಕರಿಸಿದ್ದಾಳೆ. ಇದರಿಂದ ರೊಚ್ಚಿಗೆದ್ದ ಸೈಯಿದ್ ಸ್ಟೂಲ್‍ನಿಂದ ಮಾನ್ಸಿ ಮೇಲೆ ಹಲ್ಲೆ ಮಾಡಿದ್ದಾನೆ.

    ರಹಸ್ಯ ಬಿಚ್ಚಿಟ್ಟ ಆರೋಪಿ:
    ಘಟನೆಯ ಬಳಿಕ ಆರೋಪಿ ಸೈಯಿದ್ ಪೊಲೀಸರ ಬಳಿ ಬೇರೆ ಬೇರೆ ಹೇಳಿಕೆಗಳನ್ನು ನೀಡುತ್ತಿದ್ದನು. ಪೊಲೀಸರು ಸತತವಾಗಿ ಆತನನ್ನು ವಿಚಾರಣೆ ಮಾಡುತ್ತಿದ್ದರು. ಈ ವೇಳೆ ಮಾನ್ಸಿ ಸೆಕ್ಸ್‍ಗೆ ನಿರಾಕರಿಸಿದ್ದಕ್ಕೆ ಆಕೆಯ ಮೇಲೆ ಹಲ್ಲೆ ಮಾಡಿದೆ. ಇದರಿಂದ ಆಕೆ ಪ್ರಜ್ಞೆ ತಪ್ಪಿದ್ದಳು. ನಾನು ಆಕೆಯನ್ನು ಎಚ್ಚರಗೊಳಿಸಲು ಪ್ರಯತ್ನಿಸಿದ್ದೆ. ಮಾನ್ಸಿಗೆ ಎಚ್ಚರವಾಗುತ್ತಿತ್ತು. ಆದರೆ ಆ ಸಮಯದಲ್ಲಿ ನನ್ನ ತಾಯಿ ಅಲ್ಲಿಗೆ ಬರುತ್ತಾರೆಂಬ ಭಯದಿಂದ ನಾನು ಅಲ್ಲಿದ್ದ ಹಗ್ಗದಿಂದ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದೆ ಎಂದು ಸೈಯಿದ್ ಹೇಳಿದ್ದಾನೆ.

    ಪೊಲೀಸರಿಗೆ ಮಾಹಿತಿ ನೀಡಿದ ಕ್ಯಾಬ್ ಡ್ರೈವರ್:
    ಮಾನ್ಸಿ ದೀಕ್ಷಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದ ನಂತರ ಸೈಯಿದ್ ಕ್ಯಾಬ್‍ಗೆ ಫೋನ್ ಮಾಡಿದ್ದನು. ನಂತರ ಮಾನ್ಸಿಯ ಶವವನ್ನು ಸೂಟ್‍ಕೇಸ್‍ನಲ್ಲಿ ಹೊತ್ತು ಖಾಸಗಿ ಕ್ಯಾಬ್‍ನಲ್ಲಿ ಅಂಧೇರಿಯಿಂದ ಮಲಾಡ್‍ಗೆ ಸಾಗಿಸಿದ್ದನು. ಬಳಿಕ ಮಲಾಡ್‍ನ ನಿರ್ಜನ ಪ್ರದೇಶದಲ್ಲಿ ಶವ ಬಿಸಾಡಿ ಆಟೋ ರಿಕ್ಷಾದಲ್ಲಿ ಹೊರಟ ಸೈಯೀದ್‍ನನ್ನು ಗಮನಿಸಿದ ಕ್ಯಾಬ್ ಡ್ರೈವರ್ ಪೊಲೀಸರಿಗೆ ಮಾಹಿತಿ ನೀಡಿದ್ದನು. ಕ್ಷಣ ಮಾತ್ರದಲ್ಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದಾಗ ಮಾಡೆಲ್ ಶವ ಪತ್ತೆಯಾಗಿತ್ತು.

    ಆರೋಪಿ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಾನ್ಸಿ ದೀಕ್ಷಿತ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಆರೋಪಿಯನ್ನು ಕೋರ್ಟ್‍ಗೆ ಹಾಜರು ಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಫ್‍ಐಆರ್ ನಲ್ಲಿ 4, ಎಸ್‍ಪಿ ಹೇಳ್ತಾರೆ 5, ಎಂಎಲ್‍ಸಿ ವರದಿಯಲ್ಲಿ 6: ದರ್ಶನ್ ಕಾರಲ್ಲಿ ಇದ್ದವರು ಎಷ್ಟು?

    ಎಫ್‍ಐಆರ್ ನಲ್ಲಿ 4, ಎಸ್‍ಪಿ ಹೇಳ್ತಾರೆ 5, ಎಂಎಲ್‍ಸಿ ವರದಿಯಲ್ಲಿ 6: ದರ್ಶನ್ ಕಾರಲ್ಲಿ ಇದ್ದವರು ಎಷ್ಟು?

    ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಟ್ವಿಸ್ಟ್ ಸಿಕ್ಕಿದ್ದು, ಕಾರಿನಲ್ಲಿ 4ಕ್ಕಿಂತಲೂ ಹೆಚ್ಚಿನ ಮಂದಿ ಪ್ರಯಾಣಿಸುತ್ತಿದ್ದರು ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ.

    ಅಪಘಾತಕ್ಕೀಡಾದ ಕಾರಿನಲ್ಲಿ ನಾಲ್ಕಲ್ಲ ಒಟ್ಟು ಐದು ಮಂದಿ ಪ್ರಯಾಣಿಸುತ್ತಿದ್ದರು ಎಂದು ಸ್ಫೋಟಕ ಮಾಹಿತಿಯನ್ನು ಮೈಸೂರಿನ ನಗರ ಪೊಲೀಸ್ ಆಯುಕ್ತ ಡಾ.ಸುಬ್ರಮಣ್ಯೇಶ್ವರ ರಾವ್ ನೀಡಿದ್ದಾರೆ.

    ದರ್ಶನ್ ಅವರ ಅಪಘಾತಕ್ಕೀಡಾದ ಕಾರಿನಲ್ಲಿ ನಾಲ್ಕು ಮಂದಿ ಅಲ್ಲ ಒಟ್ಟು ಐದು ಮಂದಿ ಪ್ರಯಾಣಿಸುತ್ತಿದ್ದರು. ಕಳೆದ ಎರಡು ದಿನಗಳಿಂದ ಕಾರಿನಲ್ಲಿದ್ದಿದ್ದು ನಾಲ್ವರೇ ಎಂದು ದರ್ಶನ್ ಆಪ್ತರು ಹೇಳುತ್ತಿದ್ದರು. ಆದರೆ ಈಗ ಪೊಲೀಸ್ ಆಯುಕ್ತರ ಅಧಿಕೃತ ಹೇಳಿಕೆ ಮೂಲಕ ಕಾರಿನಲ್ಲಿ ಹೆಚ್ಚು ಮಂದಿ ಇರುವುದು ಸ್ಪಷ್ಟವಾಗಿದೆ.

    ಪೊಲೀಸ್ ಎಫ್‍ಐಆರ್ ನಲ್ಲಿ ನಾಲ್ಕು ಮಂದಿ ಇದ್ದರೆ, ಆಯುಕ್ತರು ಐದು ಮಂದಿ ಕಾರಿನಲ್ಲಿ ಇದ್ದರು ಎಂದು ಹೇಳಿದ್ದಾರೆ. ಆದರೆ ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ಮೆಡಿಕೋ ಲೀಗಲ್ ಕೇಸ್(ಎಂಎಲ್‍ಸಿ) ವರದಿ ಪ್ರಕಾರ ಕಾರಿನಲ್ಲಿ ಆರು ಮಂದಿ ಪ್ರಯಾಣಿಸಿದ್ದಾರೆ. ಸದ್ಯ ಅವರಲ್ಲಿ ನಾಲ್ವರು ಚಿಕಿತ್ಸೆ ಪಡೆದಿದ್ದಾರೆ. ಇನ್ನಿಬ್ಬರು ಯಾವುದೇ ಗಾಯಗಳಿಲ್ಲದೆ ಆಸ್ಪತ್ರೆಯಲ್ಲಿ ಸಹಜ ತಪಾಸಣೆ ನಿರ್ಗಮಿಸಿದ್ದಾರೆ ಎಂದು ವರದಿ ನೀಡಿದೆ.

    ಎಲ್ಲ ಆಸ್ಪತ್ರೆಗಳು ಅಪಘಾತ ಅಥವಾ ಕಾನೂನಿನ ಅಡಿ ಬರುವ ವೈದ್ಯಕೀಯ ಪ್ರಕರಣಗಳನ್ನು ಎಂಎಲ್‍ಸಿ ಎಂದು ಪರಿಗಣಿಸಬೇಕಾಗುತ್ತದೆ. ಈಗ ಎಂಎಲ್‍ಸಿ, ಎಫ್‍ಐಆರ್, ಪೊಲೀಸ್ ಆಯುಕ್ತರ ಹೇಳಿಕೆಗಳಿಗೆ ಯಾವುದೇ ತಾಳೆ ಆಗದ ಕಾರಣ ಕಾರಿನಲ್ಲಿ ಇದ್ದವರು ಎಷ್ಟು? ಯಾಕೆ ಈ ವಿಚಾರವನ್ನು ಗೌಪ್ಯವಾಗಿ ಇಡಲಾಗಿದೆ ಎನ್ನುವ ಪ್ರಶ್ನೆ ಎದ್ದಿದೆ.

    ನಟ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪೊಲೀಸ್ ಆಯುಕ್ತ ಸುಬ್ರಹ್ಮಣ್ಯೇಶ್ವರ ರಾವ್, ಈಗ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದೆ. ಸದ್ಯ ಅಪಘಾತದ ಬಗ್ಗೆ ದರ್ಶನ್ ಅವರ ಡ್ರೈವರ್ ಲಕ್ಷಣ್ ನಮಗೆ ದೂರು ನೀಡಿದ್ದಾರೆ. ದೂರಿನ ಅನ್ವಯ 279, 338, 338 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಅಪಘಾತ ಸ್ಥಳದಲ್ಲಿ ಮಹಜರು ನಡೆಸಿದ್ದು ಗಾಯಾಳುಗಳ ಹೇಳಿಕೆ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

    ಅಪಘಾತದ ವಾಹನ ವಶಕ್ಕೆ ಪಡೆದು ಆರ್ ಟಿಓ ಅಧಿಕಾರಿಗಳಿಂದ ಪರಿಶೀಲನೆ ಮಾಡಿಸಲಾಗಿದೆ. ಅವರ ವರದಿ ಆಧಾರದ ಮೇಲೆ ಕಾನೂನು ಪ್ರಕ್ರಿಯೆ ಮುಂದುವರಿಸುತ್ತೇವೆ. ಸದ್ಯದ ಮಾಹಿತಿ ಪ್ರಕಾರ ಕಾರಿನಲ್ಲಿ 5 ಮಂದಿ ಇದ್ದರು, ನಾಲ್ಬರಿಗೆ ಗಾಯವಾಗಿದೆ. ಕಾರು ಅಪಘಾತಕ್ಕಿಡಾಗಿದ್ದಕ್ಕೆ ಕಾರಣ ತನಿಖೆಯಿಂದಲೇ ಗೊತ್ತಾಗುತ್ತೆ. ಸದ್ಯ ತನಿಖೆ ಪ್ರಗತಿಯಲ್ಲಿರೋದರಿಂದ ಯಾವುದೇ ಮಾಹಿತಿ ಬಹಿರಂಗಗೊಳಿಸಲು ಸಾಧ್ಯವಿಲ್ಲ. ಅಪಘಾತದ ಸ್ಥಳದಲ್ಲಿ ನಮ್ಮ ಪೊಲೀಸರು ಇದ್ದ ಬಗ್ಗೆ ಮಾಹಿತಿ ಇಲ್ಲ. ಹಾಗೇನಾದರೂ ಪೊಲೀಸರ ಸಮ್ಮುಖದಲ್ಲಿ ಕಾರು ಸ್ಥಳಾಂತರವಾಗಿದ್ದರೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ದರ್ಶನ್ ಕಾರು ಅಪಘಾತ ಪ್ರಕರಣದ ಕುರಿತು ತನಿಖೆ ನಡೆಸಲು ಪೊಲೀಸರಿಗೆ ಸಮಯ ಕೊಡಿ ಎಂದರು.

    ದರ್ಶನ್ ಕಾರು ಚಾಲಕ ಲಕ್ಷ್ಮಣ್ ದೂರಿನ ಮೇರೆಗೆ ಕೇಸ್ ದಾಖಲಿಸಲಾಗಿದೆ. ಅಪಘಾತವಾದಾಗ ಕಾರಿನಲ್ಲಿ ಐವರು ಇದ್ದರು ಅಂತ ಗೊತ್ತಾಗಿದೆ, ಆರು ಜನರೂ ಇರಬಹುದು. ಎಷ್ಟು ಜನ ಇದ್ದಾರೆ ಎಂಬುದನ್ನು ತನಿಖೆ ಮೂಲಕ ತಿಳಿದುಕೊಳ್ಳಲಾಗುವುದು. ದೂರಿನ ಪ್ರಕಾರ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಅಪಘಾತವಾಗಿದೆ. ಕಾರಿನಲ್ಲಿ ತಾಂತ್ರಿಕ ದೋಷ ಇತ್ತೋ ಇಲ್ಲವೋ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಅದೆಲ್ಲವೂ ತನಿಖೆಯಿಂದ ಗೊತ್ತಾಗಲಿದೆ. ಕೇವಲ 24 ಗಂಟೆಗಳಲ್ಲಿ ತನಿಖೆ ಮುಗಿಸಲು ಸಾಧ್ಯವಿಲ್ಲ ಎಂದು ಸುಬ್ರಮಣ್ಯೇಶ್ವರ ರಾವ್ ಪ್ರತಿಕ್ರಿಯಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv