Tag: twit

  • ಭಾರತೀಯ ಸೈನ್ಯಕ್ಕೆ ಅಪಮಾನ: ನಟಿ ರಿಚಾ ಚಡ್ಡಾ ಕ್ಷಮೆಯಾಚನೆ

    ಭಾರತೀಯ ಸೈನ್ಯಕ್ಕೆ ಅಪಮಾನ: ನಟಿ ರಿಚಾ ಚಡ್ಡಾ ಕ್ಷಮೆಯಾಚನೆ

    ಗಾಲ್ವಾನ್ ಹಾಯ್ ಎಂದು ಟ್ವಿಟ್ ಮಾಡುವ ಮೂಲಕ ಭಾರತೀಯ ಸೈನ್ಯಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟಿ ರಿಚಾ ಚಡ್ಡಾ ಕೊನೆಗೂ ಕ್ಷಮೆ ಕೇಳಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರ ವಶಕ್ಕೆ ಸೇನೆ ಸಿದ್ಧವಾಗಿ ಎಂದು ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಹೇಳಿಕೆ ನೀಡಿದ್ದರು. ಅದನ್ನು ಅವಮಾನಿಸುವಂತೆ ರಿಚಾ ಟ್ವಿಟ್ ಮಾಡಿದ್ದರು. ಇದು ಭಾರೀ ಸದ್ದು ಮಾಡಿತ್ತು. ಅಕ್ಷಯ್ ಕುಮಾರ್ ಸೇರಿದಂತೆ ಹಲವರು ರಿಚಾ ನಡೆಯನ್ನು ಖಂಡಿಸಿದ್ದರು.

    ಭಾರತೀಯ ಸೇನೆಯ ವಿಚಾರದಲ್ಲಿ ಟ್ವೀಟ್ ಮಾಡಿ ಬಾಲಿವುಡ್ ನಟಿ ರಿಚಾ ಚೆಡ್ಡಾ ವಿವಾದದ‌‌ ಕೇಂದ್ರ ಬಿಂದುವಾಗಿದ್ದು, ನೆಟ್ಟಿಗರಿಂದ ತೀವ್ರ ಟೀಕೆಗೆ ಗುರಿಯಾಗಿದ್ದರು. ದೇಶದ ಸೈನಿಕರಿಗೆ ಅಗೌರವ ತೋರಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಸೋಷಿಯಲ್ ಮೀಡಿಯಾ ಮೂಲಕ ನಟಿಗೆ ಚಳಿ ಬಿಡಿಸುದ್ದರು.

    ಪಾಕ್ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯಲು ಭಾರತೀಯ ಸೇನೆ ಸನ್ನದ್ದವಾಗಿದೆ ಎಂದು ಉತ್ತರ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಟ್ಯಾಗ್ ಮಾಡಿದ್ದ ನಟಿ ಗಾಲ್ವಾನ್ ಹಾಯ್ ಹೇಳುತ್ತಿದೆ ಎಂದು ಬರೆದುಕೊಂಡಿದ್ದರು. ಅವರ ಬರವಣಿಗೆ ಸೇನೆಗೆ ತೋರುವ ಅಗೌರವ ಎಂದು ಬಣ್ಣಿಸಲಾಗುತ್ತಿದೆ. ಹಾಗಾಗಿಯೇ ನಟಿಯ ವಿರುದ್ಧ ದೇಶಭಕ್ತರು ತಿರುಗಿ ಬಿದ್ದಿದ್ದರು. ಇದನ್ನೂ ಓದಿ: EXCLUSIVE:ಆಗಿದ್ದು ಎಂಗೇಜ್‌ಮೆಂಟ್ ಅಲ್ಲ, ನಾನಿನ್ನೂ ಒಪ್ಪಿಲ್ಲ: ವೈಷ್ಣವಿ

    ರಿಚಾ ಚೆಡ್ಡಾ ಹೀಗೆ ಟ್ವೀಟ್ ಮಾಡುತ್ತಿದ್ದಂತೆಯೇ ನೆಟ್ಟಿಗರು ಆಕ್ರೋಶ ಹೊರ ಹಾಕಿದ್ದರು. ಗಾಲ್ವಾನ್ ಘರ್ಷಣೆಯಲ್ಲಿ ಜೀವತೆತ್ತ ಸೈನಿಕರಿಗೆ ನಟಿ ಅವಮಾನ ಮಾಡಿದ್ದಾರೆ ಎಂದು ಕೆಲವು ಆರೋಪಿಸಿದರೆ, ಇನ್ನು ಕೆಲವರು ಇದು ಭಾರತೀಯ ಸೇನೆಯನ್ನು ಅವಮಾನ ಮಾಡುವ ಪ್ರಯತ್ನ ಎಂದು ಜರಿದಿದ್ದರು. ಅಲ್ಲದೇ, ಇಂತವರನ್ನು ಸುಮ್ಮನೆ ಬಿಡಬಾರದು ಎಂದು ಕೆಲವರು ಆಕ್ರೋಶ ವ್ಯಕ್ತ ಪಡಿಸಿದ್ದರು.

    ಟ್ವೀಟ್ ಆಧಾರದ ಮೇಲೆ ನಟಿ ವಿರುದ್ಧ ದೂರು ದಾಖಲಾಗಿದೆ. ಭಾರತೀಯ ಸೇನೆಯನ್ನು ಅಪಹಾಸ್ಯ ಮಾಡಿದ ರಿಚಾ ಅವರ ವಿವಾದಾತ್ಮಕ ಟ್ವೀಟ್ ವಿರುದ್ಧ ವಕೀಲ ವಿನೀತ್ ಜಿಂದಾಲ್ ಅವರು ಸಿಪಿ ದೆಹಲಿಗೆ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇತ್ತ ಹೇಳಿಕೆ ವಿವಾದಾತ್ಮಕ ಸ್ವರೂಪ ಪಡೆಯುತ್ತಿದ್ದಂತೆ ರಿಚಾ ಚೆಡ್ಡಾ ಟ್ವಿಟ್ಟರ್ ನಲ್ಲಿ ರಿಪ್ಲೆಗಳನ್ನು ಮ್ಯೂಟ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಾರತೀಯ ಸೇನೆಯನ್ನು ಅವಮಾನಿಸಿದ ನಟಿ ರಿಚಾ ಚೆಡ್ಡಾ – ದೆಹಲಿಯಲ್ಲಿ ದೂರು ದಾಖಲು

    ಭಾರತೀಯ ಸೇನೆಯನ್ನು ಅವಮಾನಿಸಿದ ನಟಿ ರಿಚಾ ಚೆಡ್ಡಾ – ದೆಹಲಿಯಲ್ಲಿ ದೂರು ದಾಖಲು

    ಭಾರತೀಯ ಸೇನೆಯ ವಿಚಾರದಲ್ಲಿ ಟ್ವೀಟ್ ಮಾಡಿ ಬಾಲಿವುಡ್ ನಟಿ ರಿಚಾ ಚೆಡ್ಡಾ ವಿವಾದದ‌‌ ಕೇಂದ್ರ ಬಿಂದುವಾಗಿದ್ದು, ನೆಟ್ಟಿಗರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ದೇಶದ ಸೈನಿಕರಿಗೆ ಅಗೌರವ ತೋರಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ನಟಿಗೆ ಚಳಿ ಬಿಡಿಸುತ್ತಿದ್ದಾರೆ.

    ಪಾಕ್ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯಲು ಭಾರತೀಯ ಸೇನೆ ಸನ್ನದ್ದವಾಗಿದೆ ಎಂದು ಉತ್ತರ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಟ್ಯಾಗ್ ಮಾಡಿದ್ದ ನಟಿ ಗಾಲ್ವಾನ್ ಹಾಯ್ ಹೇಳುತ್ತಿದೆ ಎಂದು ಬರೆದುಕೊಂಡಿದ್ದರು. ಅವರ ಬರವಣಿಗೆ ಸೇನೆಗೆ ತೋರುವ ಅಗೌರವ ಎಂದು ಬಣ್ಣಿಸಲಾಗುತ್ತಿದೆ. ಹಾಗಾಗಿಯೇ ನಟಿಯ ವಿರುದ್ಧ ದೇಶಭಕ್ತರು ತಿರುಗಿ ಬಿದ್ದಿದ್ದಾರೆ.

    ರಿಚಾ ಚೆಡ್ಡಾ ಹೀಗೆ ಟ್ವೀಟ್ ಮಾಡುತ್ತಿದ್ದಂತೆಯೇ ನೆಟ್ಟಿಗರು ಆಕ್ರೋಶ ಹೊರ ಹಾಕಿದ್ದಾರೆ. ಗಾಲ್ವಾನ್ ಘರ್ಷಣೆಯಲ್ಲಿ ಜೀವತೆತ್ತ ಸೈನಿಕರಿಗೆ ನಟಿ ಅವಮಾನ ಮಾಡಿದ್ದಾರೆ ಎಂದು ಕೆಲವು ಆರೋಪಿಸಿದರೆ, ಇನ್ನು ಕೆಲವರು ಇದು ಭಾರತೀಯ ಸೇನೆಯನ್ನು ಅವಮಾನ ಮಾಡುವ ಪ್ರಯತ್ನ ಎಂದು ಜರಿದಿದ್ದಾರೆ. ಅಲ್ಲದೇ, ಇಂತವರನ್ನು ಸುಮ್ಮನೆ ಬಿಡಬಾರದು ಎಂದು ಕೆಲವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ: ಕಾಂತಾರ `ತುಳು’ ಟ್ರೈಲರ್‌ಗೆ ಭರ್ಜರಿ ರೆಸ್ಪಾನ್ಸ್: ರಿಲೀಸ್ ಡೇಟ್ ಔಟ್

    ಟ್ವೀಟ್ ಆಧಾರದ ಮೇಲೆ ನಟಿ ವಿರುದ್ಧ ದೂರು ದಾಖಲಾಗಿದೆ. ಭಾರತೀಯ ಸೇನೆಯನ್ನು ಅಪಹಾಸ್ಯ ಮಾಡಿದ ರಿಚಾ ಅವರ ವಿವಾದಾತ್ಮಕ ಟ್ವೀಟ್ ವಿರುದ್ಧ ವಕೀಲ ವಿನೀತ್ ಜಿಂದಾಲ್ ಅವರು ಸಿಪಿ ದೆಹಲಿಗೆ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇತ್ತ ಹೇಳಿಕೆ ವಿವಾದಾತ್ಮಕ ಸ್ವರೂಪ ಪಡೆಯುತ್ತಿದ್ದಂತೆ ರಿಚಾ ಚೆಡ್ಡಾ ಟ್ವಿಟ್ಟರ್ ನಲ್ಲಿ ರಿಪ್ಲೆಗಳನ್ನು ಮ್ಯೂಟ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರು ಮಳೆ: ರಿಯಲ್ ಎಸ್ಟೇಟ್ ಮಾಡುವ ಎಂಎಲ್ಎಗಳಿಗೆ ಚಾಟಿ ಬೀಸಿದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ

    ಬೆಂಗಳೂರು ಮಳೆ: ರಿಯಲ್ ಎಸ್ಟೇಟ್ ಮಾಡುವ ಎಂಎಲ್ಎಗಳಿಗೆ ಚಾಟಿ ಬೀಸಿದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ

    ರಾಜಕಾರಣದಿಂದ ದೂರ ಸರಿದು, ಮತ್ತೆ ಸಿನಿಮಾ ರಂಗದಲ್ಲಿ ಸಕ್ರಿಯರಾಗಿರುವ ರಮ್ಯಾ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದರು. ತಮ್ಮ ಸ್ವಂತ ನಿರ್ಮಾಣ ಸಂಸ್ಥೆಯನ್ನು ಶುರು ಮಾಡಿ, ಇನ್ಮುಂದೆ ಸಿನಿಮಾ ರಂಗದಲ್ಲೇ ಉಳಿಯುವ ಭರವಸೆಯನ್ನೂ ನೀಡಿದ್ದರು. ಮಳೆಯಿಂದಾಗಿ ಬೆಂಗಳೂರಿನ ಹಲವು ಪ್ರದೇಶಗಳು ಜಲಾವೃತ ಆಗುತ್ತಿದ್ದಂತೆಯೇ ರಮ್ಯಾ ಒಳಗಿನ ರಾಜಕಾರಣಿ ಮತ್ತೆ ಎದ್ದು ಕೂತಿದ್ದಾನೆ. ಮಳೆಯ ಈ ಆವಾಂತರಕ್ಕೆ ರಿಯಲ್ ಎಸ್ಟೇಟ್ ಮಾಡುತ್ತಿರುವ ರಾಜಕಾರಣಿಗಳೇ ಕಾರಣ ಎಂದು ದೂಷಿಸಿದ್ದಾನೆ.

    ಕಳೆದ ಎರಡು ವಾರಗಳಿಂದ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನ ಅನೇಕ ಪ್ರದೇಶಗಳು ಕೆರೆಗಳಂತಾಗಿವೆ. ಮನೆಗೆ ನೀರು ನುಗ್ಗಿ ಜನ ಜೀವನಕ್ಕೆ ಅಪಾರ ತೊಂದರೆ ಉಂಟಾಗಿದೆ. ವಾಹನ ಸವಾರರಿಗಂತೂ ನಿತ್ಯ ನರಕ. ಇದೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿರುವ ರಮ್ಯಾ, ಬೆಂಗಳೂರು ಹೀಗೆ ಆಗುವುದಕ್ಕೆ ಕಾರಣ ಜನಪ್ರತಿನಿಧಿಗಳು. 28 ಎಂಎಲ್.ಎ ಗಳಿಗೆ 26 ಎಂಎಲ್‍ಎಗಳು ರಿಯಲ್ ಎಸ್ಟೇಟ್ ಮಾಡುತ್ತಿದ್ದಾರೆ. ಈ ಪ್ರಮಾಣದಲ್ಲಿ ಅವರೇ ಇದ್ದರೆ, ಬೆಂಗಳೂರನ್ನು ಕಾಪಾಡಲು ಹೇಗೆ ಸಾಧ್ಯ? ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ‘ಶ್ಯಾನುಭೋಗರ ಮಗಳಾ’ದ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ

    ಹಣ ಇದ್ದವರಿಗೆ ಅದರಲ್ಲೂ ರಿಯಲ್ ಎಸ್ಟೇಟ್ ಮಾಡುತ್ತಿರುವ ಹೆಚ್ಚಿನ ಜನರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವುದು ಏಕೆ? ಎಂದು ಪ್ರಶ್ನೆ ಮಾಡಿರುವ ರಮ್ಯಾ, ಚುನಾವಣಾ ಆಯೋಗವು ಒಬ್ಬ ಎಂ.ಎಲ್‍.ಎ ಗೆ ಚುನಾವಣೆ ಖರ್ಚು ಮಾಡಲು ನಲವತ್ತು ಲಕ್ಷ ರೂಪಾಯಿ ಮಿತಿ ನಿಗಧಿ ಮಾಡಿದೆ. ಆದರೆ, ಕೋಟಿ ಲೆಕ್ಕಗಳಲ್ಲಿ ಖರ್ಚಾಗುತ್ತಿದೆ ಏಕೆ? ಎಂದಿದ್ದಾರೆ.  ಹಾಗಾಗಿ ಬುದ್ಧಿವಂತಿಕೆಯಿಂದ ಮತ ಚಲಾಯಿಸುವಂತೆ ಅವರು ಮನವಿ ಮಾಡಿದ್ದಾರೆ.

    ನಗರದಲ್ಲಿ ನಡೆಯುವ ಮತದಾನದ ಬಗ್ಗೆಯೂ ಅವರು ಟ್ವಿಟ್ ಮಾಡಿದ್ದು, ವಿಶೇಷವಾಗಿ ಹೆಚ್ಚಿನ ಜನರು ನಗರದಲ್ಲಿ ಇರುವವರೇ ಮತ ಹಾಕುವುದಿಲ್ಲ. ಇಂತಹ ಘಟನೆಗಳು ಸಂಭವಿಸಿದಾಗ ಕೋಪ ಕಾಣುತ್ತದೆ. ನಾವಿರುವ ಈ ಸ್ಥಿತಿಗೆ ನಾವೆಲ್ಲರೂ ದೂಷಿಸಬೇಕಾಗಿದೆ ಎಂದು ಮಾರ್ಮಿಕವಾಗಿಯೇ ರಮ್ಯಾ ಟ್ವಿಟ್ ಮಾಡಿದ್ದಾರೆ. ರಮ್ಯಾ ಮಾಡಿರುವ ಈ ಟ್ವಿಟ್ ಗೆ ಪರ ವಿರೋಧದ ಕಾಮೆಂಟ್ ಗಳು ಕೂಡ ಬರುತ್ತಿವೆ. ಒಟ್ಟಿನಲ್ಲಿ ಬೆಂಗಳೂರು ಹೀಗೆ ಆಗುವುದಕ್ಕೆ ರಿಯಲ್ ಎಸ್ಟೇಟ್ ಕಾರಣ ಎಂದು ಅವರು ಮೂರೂ ಟ್ವಿಟ್ ನಲ್ಲೂ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಶ್ವದ ನಂ.1 ಚೆಸ್ ಆಟಗಾರನ ವಿರುದ್ಧ ಗೆಲುವು – ಮೋದಿಯಿಂದ ಪ್ರಜ್ಞಾನಂದನಿಗೆ ಅಭಿನಂದನೆ

    ವಿಶ್ವದ ನಂ.1 ಚೆಸ್ ಆಟಗಾರನ ವಿರುದ್ಧ ಗೆಲುವು – ಮೋದಿಯಿಂದ ಪ್ರಜ್ಞಾನಂದನಿಗೆ ಅಭಿನಂದನೆ

    ನವದೆಹಲಿ: ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‍ಸೆನ್ ವಿರುದ್ಧ ಗೆದ್ದ 16 ವರ್ಷದ ಆರ್ ಪ್ರಜ್ಞಾನಂದನನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

    ಯುವ ಪ್ರತಿಭೆ ಆರ್ ಪ್ರಜ್ಞಾನಂದ ಅವರ ಯಶಸ್ಸಿನ ಬಗ್ಗೆ ನಾವೆಲ್ಲರೂ ಸಂತೋಷಪಡುತ್ತಿದ್ದೇವೆ. ಹೆಸರಾಂತ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‍ಸೆನ್ ವಿರುದ್ಧ ಜಯಗಳಿಸಿದ ಅವರ ಸಾಧನೆಯ ಬಗ್ಗೆ ಹೆಮ್ಮೆಯಿದೆ. ಪ್ರತಿಭಾವಂತ ಪ್ರಜ್ಞಾನಂದ ಅವರ ಭವಿಷ್ಯದ ಪ್ರಯತ್ನಗಳಿಗೆ ನಾನು ಶುಭ ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ವಿಶ್ವದ ನಂ.1 ಚೆಸ್ ಆಟಗಾರನಿಗೆ ಶಾಕ್ ಕೊಟ್ಟ 16ರ ಭಾರತೀಯ ಬಾಲಕ

    16 ವರ್ಷ ವಯಸ್ಸಿನ ಭಾರತೀಯ ಗ್ರ್ಯಾಂಡ್‍ಮಾಸ್ಟರ್ ಆರ್ ಪ್ರಜ್ಞಾನಂದ ಅವರು ಆನ್‍ಲೈನ್ ಮೂಲಕ ನಡೆಯುತ್ತಿರುವ ಚೆಸ್ ರ್ಯಾಪಿಡ್ ಪಂದ್ಯಾವಳಿಯ ಏರ್‍ಥಿಂಗ್ಸ್ ಮಾಸ್ಟರ್ಸ್‍ನಲ್ಲಿ ನಾಕೌಟ್‍ಗೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದಾರೆ. ಅವರು ಅಂಕಪಟ್ಟಿಯಲ್ಲಿ 11 ನೇ ಸ್ಥಾನದಲ್ಲಿದ್ದು, ರೌಂಡ್-ರಾಬಿನ್ ಹಂತದಿಂದ ಕೇವಲ ಎಂಟು ಮಂದಿ ಮಾತ್ರ ನಾಕೌಟ್‍ಗೆ ಅರ್ಹತೆ ಪಡೆದಿದ್ದಾರೆ. ಇದನ್ನೂ ಓದಿ: ಆರ್​ಸಿಬಿಯಲ್ಲಿ K.G.F ಸ್ಟಾರ್ಸ್

    ಕಾರ್ಲಸೆನ್‍ರ ಸತತ ಮೂರು ಗೆಲುವಿನ ಓಟವನ್ನು ನಿಲ್ಲಿಸಲು ಸೋಮವಾರದ ಆರಂಭದಲ್ಲಿ ನಡೆದ ಟಾರ್ರಾಸ್ಚ್ ವಿಭಾಗದ 8ನೇ ಸುತ್ತಿನ ಆಟದಲ್ಲಿ ಪ್ರಜ್ಞಾನಂದ ಅವರು 39 ನಡೆಗಳಲ್ಲಿ ಕಪ್ಪು ಕಾಯಿಗಳೊಂದಿಗೆ ಗೆದ್ದಿದ್ದರು.

    ಪ್ರಜ್ಞಾನಂದ ಅವರು ಪಂದ್ಯಾವಳಿಯ 10 ಮತ್ತು 12ರ ಸುತ್ತುಗಳಲ್ಲಿ ಆಂಡ್ರೆ ಎಸಿಪೆಂಕೊ ಮತ್ತು ಅಲೆಕ್ಸಾಂಡ್ರಾ ಕೊಸ್ಟೆನಿಯುಕ್ ವಿರುದ್ಧ ಇನ್ನೂ ಎರಡು ವಿಜಯಗಳನ್ನು ದಾಖಲಿಸಿದರು. ಆದರೆ ಮಂಗಳವಾರ ಅವರು ನೋಡಿರ್ಬೆಕ್ ಅಬ್ದುಸತ್ತೊರೊವ್ ವಿರುದ್ಧದ ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಮೂಲಕ ಟೂರ್ನಿಯಿಂದ ಹೊರಬಿದ್ದಿದ್ದಾರೆ.