Tag: twwet

  • ಅಧಿಕಾರಿಗಳಿಂದ ಸಚಿವ ಪ್ರಮೋದ್ ಮಧ್ವರಾಜ್ ಚುನಾವಣಾ ಪ್ರಚಾರ ವಾಹನ ಸೀಜ್

    ಅಧಿಕಾರಿಗಳಿಂದ ಸಚಿವ ಪ್ರಮೋದ್ ಮಧ್ವರಾಜ್ ಚುನಾವಣಾ ಪ್ರಚಾರ ವಾಹನ ಸೀಜ್

    ಉಡುಪಿ: ವಿಧಾನಸಭಾ ಚುನಾವಣೆ ಘೋಷಣೆಯಾಗಿ 24 ಗಂಟೆ ಆಗುವುದರೊಳಗೆ ಜಿಲ್ಲಾಡಳಿತದ ಅಧಿಕಾರಿಗಳು ಬೇಟೆ ಶುರು ಮಾಡಿದ್ದಾರೆ. ಸಚಿವ ಪ್ರಮೋದ್ ಮಧ್ವರಾಜ್ ಚುನಾವಣಾ ಪ್ರಚಾರ ವಾಹನದ ಮೇಲೆ ಚುನಾವಣಾಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ.

    ನಗರದ ಪ್ರವಾಸಿ ಬಂಗಲೆಯಿಂದ ಪ್ರಚಾರಕ್ಕೆಂದು ಹೊರಟ ವಾಹನವನ್ನು ಚುನಾವಣಾ ಆಯೋಗದ ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪರವಾನಿಗೆಗೆ ಪತ್ರ ರವಾನಿಸಲಾಗಿತ್ತು. ಆದ್ರೆ ಪ್ರಚಾರದ ಸ್ಥಳ, ಸಮಯವನ್ನು ನಿಗದಿಪಡಿಸಿರಲಿಲ್ಲ. ಪರವಾನಿಗೆ ಪಡೆಯದೆ ಪ್ರಚಾರಕ್ಕೆ ಬಳಸಿದ ಆರೋಪದಡಿಯಲ್ಲಿ ನಗರ ಸಂಚಾರಿ ಪೊಲೀಸರು ವಾಹನವನ್ನು ಸೀಜ್ ಮಾಡಿ ನಗರ ಠಾಣೆಗೆ ಕೊಂಡೊಯ್ದಿದ್ದಾರೆ.

    ಪ್ರಚಾರ ವಾಹನದಲ್ಲಿ ಎರಡು ದಿನದ ಹಿಂದಷ್ಟೇ ಕಾಂಗ್ರೆಸ್ ಪಕ್ಷದ ಕೈ ಚಿಹ್ನೆ ಹಾಕಿಸಿದ್ದರು. ಪ್ರೊಬೆಶನರಿ ಐಎಎಸ್ ಅಧಿಕಾರಿ ಪೂವಿತಾ ನೇತೃತ್ವದಲ್ಲಿ ಇಂದು ದಾಳಿಯಾಗಿದ್ದು, ತಹಶಿಲ್ದಾರ್ ಮತ್ತು ಚುನಾವಣಾ ಅಧಿಕಾರಿಗಳು ಸ್ಥಳದಲ್ಲಿದ್ದರು.

    ಬಿಜೆಪಿ ಸೇರುವ ಬಗ್ಗೆ ಸ್ಪಷ್ಟನೆ: ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ತಾರೆ ಎಂಬ ಊಹಾಪೋಹಗಳಿಗೆ ಸಚಿವರು ಮೊದಲ ಬಾರಿಗೆ ಬಹಿರಂಗವಾಗಿಯೇ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಮೊದಲ ಬಾರಿ ಅವರು ಸಾಮಾಜಿಕ ಜಾಲತಾಣದಲ್ಲಿ ಮೌನ ಮುರಿದಿದ್ದಾರೆ.

    ಸಚಿವ ಮಧ್ವರಾಜ್ ಬಿಜೆಪಿ ಸೇರೋ ಬಗ್ಗೆ ಕಳೆದ ಹಲವು ದಿನಗಳಿಂದ ಭಾರೀ ಚರ್ಚೆ ಆಗುತ್ತಿತ್ತು. ಈ ಬಗ್ಗೆ ಮಧ್ವರಾಜ್ ಕೂಡ ಬಿಜೆಪಿ ಸೇರಲ್ಲ ಎಂದು ಮಾಧ್ಯಮಗಳ ಮುಂದೆ ಬಹಳ ಕೂಲ್ ಆಗಿ ಸ್ಪಷ್ಟನೆ ನೀಡುತ್ತಾ ಬಂದಿದ್ರು. ಕೆಲ ದಿನಗಳ ಹಿಂದೆ ಬಿಜೆಪಿ ಗೇಟು ಮುಚ್ಚಿದೆ. ಗೇಟು ಮುಚ್ಚಿರೋದ್ರಿಂದ ಹೋಗೋ ಪರಿಸ್ಥಿತಿ ಬರಲ್ಲ ಎಂದು ಅಡ್ಡಗೋಡೆ ಮೇಲೆ ದೀಪ ಇಟ್ಟು ಮಾತಾಡಿದ್ರು.

    ಮಂಗಳವಾರ ದೆಹಲಿಯಲ್ಲಿ ರಾಷ್ಟ್ರೀಯ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿರುವ ಸುದ್ದಿಯೂ ಹರಡಿದ್ದು, ಇದಕ್ಕೆ ಪ್ರಮೋದ್ ಮಧ್ವರಾಜ್ ಕೂಡ ನಾನು ಕಾಂಗ್ರೆಸ್ ಬಿಟ್ಟು ಹೋಗಲ್ಲ ಎಂದು ಅದೆಷ್ಟೋ ಬಾರಿ ಹೇಳಿದ್ದೇನೆ ನಾನು ಯಾವ ಪಕ್ಷಕ್ಕೂ ಸೇರಲ್ಲ ಎಂದು ಈಗಲೂ ಹೇಳುತ್ತೇನೆ ಎಂದು ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ.

    https://twitter.com/PMadhwaraj/status/978873976641478656

  • ಮೈಸೂರಿಗ ಆಗಿದ್ರೆ ಬ್ಯಾಂಕ್ ಲೂಟಿಕೋರ ಓಡಿಹೋಗ್ತಿರಲಿಲ್ಲ- ಪ್ರಧಾನಿಗೆ ಸಿಎಂ ತಿರುಗೇಟು

    ಮೈಸೂರಿಗ ಆಗಿದ್ರೆ ಬ್ಯಾಂಕ್ ಲೂಟಿಕೋರ ಓಡಿಹೋಗ್ತಿರಲಿಲ್ಲ- ಪ್ರಧಾನಿಗೆ ಸಿಎಂ ತಿರುಗೇಟು

    ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರವಷ್ಟೇ ನಗರದಲ್ಲಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ್ದರು. ಇದೀಗ ಮುಖ್ಯಮಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿಯವರ ಕಾಲೆಳೆದಿದ್ದಾರೆ.

    ಮೈಸೂರಿಗ ಚೌಕಿದಾರ (ಪ್ರಧಾನಿ) ಆಗಿದ್ರೆ ಬ್ಯಾಂಕ್ ಲೂಟಿಕೋರನನ್ನು ಓಡಿಹೋಗಲು ಬಿಡುತ್ತಿರಲಿಲ್ಲ. 11,500 ಕೋಟಿ ರೂಪಾಯಿ ಬ್ಯಾಂಕ್ ಲೂಟಿ ಮಾಡಿರೋ ವಜ್ರೋದ್ಯಮಿ ನೀರವ್ ಮೋದಿ ಎಸ್ಕೇಪ್ ಆಗ್ತಿರಲಿಲ್ಲ. ಮೈಸೂರಲ್ಲಿ ಹುಲಿಗಳು ಹುಟ್ಟಿದ್ದಾರೆ, ಬ್ರಿಟಿಷರ ವಿರುದ್ಧ ಹೋರಾಡಿದ್ದಾರೆ. ಮೈಸೂರಿಗರು ಭೂ ಸುಧಾರಣೆ ತಂದಿದ್ದಾರೆ. ಮೈಸೂರಿಗರ ಬಗ್ಗೆ ಪ್ರಧಾನಿ ಮೋದಿ ಮಾಡಿರೋ ಟೀಕೆ ಅಪಮಾನ ಅಂತ ಸಿಎಂ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: Commission ಸರ್ಕಾರವನ್ನು ತೊಲಗಿಸಿ Mission ಸರ್ಕಾರವನ್ನು ತನ್ನಿ: ಪ್ರಧಾನಿ ಮೋದಿ

    ಒಟ್ಟಿನಲ್ಲಿ ಚೌಕಿದಾರ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದು, ಮಾತಿನ ಭರದಲ್ಲಿ ಪ್ರಧಾನಿ ಮೋದಿ ಅವರು ಮೈಸೂರಿಗೆ ಅಪಮಾನ ಮಾಡಿದ್ರಾ ಎಂಬ ಪ್ರಶ್ನೆ ಇದೀಗ ಎಲ್ಲಡೆ ಕೇಳಿಬಂದಿದೆ.

    ನಿನ್ನೆಯಷ್ಟೇ ಮೈಸೂರಿನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಿ, ಸಿಎಂ ಅವರ ಹೆಸರನ್ನು ಪ್ರಸ್ತಾಪ ಮಾಡದೆ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದಂತಹ ವ್ಯಕ್ತಿ ದಾರಿ ಮಧ್ಯೆ ತಮ್ಮ ನೈತಿಕತೆಯನ್ನು ಕಳೆದುಕೊಂಡು ಭ್ರಷ್ಟರಾಗಿದ್ದಾರೆ ಎನ್ನುವಂತಹ ಆರೋಪ ಮಾಡಿದ್ದಾರೆ. ಅದು ನೇರವಾಗಿ ಸಿದ್ದರಾಮಯ್ಯನವರಿಗೇ ಮಾಡಿದಂತಹ ಅಪಮಾನವಾಗಿದ್ದು, ಆದ್ರೆ ಎಲ್ಲೂ ಕೂಡ ಮೋದಿಯವರು ಸಿದ್ದರಾಮಯ್ಯ ಅವರ ಹೆಸರನ್ನು ಹೇಳಲಿಲ್ಲ. ಹೀಗಾಗಿ ಮೋದಿಯರ ಇದೇ ಒಂದು ಹೇಳಿಕೆಯನ್ನಿಟ್ಟುಕೊಂಡು ಸಿಎಂ ಅವರು ಟ್ವೀಟ್ ಮಾಡಿದ್ದಾರೆ.

    ಇದು ಮೈಸೂರು ಮತ್ತು ಮೈಸೂರಿನ ಜನರಿಗೆ ಮಾಡಿದಂತಹ ದೊಡ್ಡ ಅಪಮಾನವಾಗಿದೆ. ಯಾಕಂದ್ರೆ ಮೈಸೂರಿನ ವ್ಯಕ್ತಿಯೊಬ್ಬ ಈ ದೇಶದ ಕಾವಲುಗಾರನಾಗಿದ್ರೆ, 11000 ಕೋಟಿ ರೂ. ಲೂಟಿ ಮಾಡಿದಂತಹ ವ್ಯಕ್ತಿಯನ್ನು ದೇಶ ತಪ್ಪಿಸಿಕೊಂಡು ಹೋಗಲು ಬಿಡ್ತಾ ಇರಲಿಲ್ಲ ಅನ್ನೋ ಮೂಲಕ ನೀರವ ಮೋದಿಯ ಪರಾರಿ ವಿಚಾರವನ್ನು ಸಿಎಂ ಅವರು ಈ ರೀತಿ ಪ್ರಸ್ತಾಪ ಮಾಡಿದ್ದಾರೆ.