Tag: Uday Mehta

  • ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾ ರಿಲೀಸ್ ಡೇಟ್ ಮುಂದಕ್ಕೆ

    ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾ ರಿಲೀಸ್ ಡೇಟ್ ಮುಂದಕ್ಕೆ

    ದಯ್ ಕೆ.ಮೆಹ್ತಾ ನಿರ್ಮಿಸುತ್ತಿರುವ, ಎ.ಪಿ.ಅರ್ಜುನ್ ಹಾಗೂ ಧ್ರುವಸರ್ಜಾ ಕಾಂಬಿನೇಶನ್‌ನಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ದ್ವಿತೀಯ ಚಿತ್ರ ಮಾರ್ಟಿನ್ ಬಿಡುಗಡೆಯ ದಿನಾಂಕ ಈಗ ಮುಂದಕ್ಕೆ ಹೋಗಿದೆ. ಈ ಹಿಂದೆ ಚಿತ್ರವನ್ನು ಸೆ.30ಕ್ಕೆ ರಿಲೀಸ್ ಮಾಡುವುದೆಂದು ನಿರ್ಧಾರವಾಗಿತ್ತು. ಅದಕ್ಕೆ ಎಲ್ಲಾ ರೀತಿಯ ಸಿದ್ದತೆಯೂ ನಡೆದಿತ್ತು, ಆದರೆ ಚಿತ್ರ ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ.

    ಅರ್ಜುನ್ ಸರ್ಜಾ ಅವರ ತಾಯಿ ಹಾಗೂ ಧ್ರುವಸರ್ಜಾ ಅವರ ಅಜ್ಜಿಯೂ ಆದ ಲಕ್ಷ್ಮಿದೇವಮ್ಮ ಅವರು ನಿಧನಕ್ಕೂ ಮುನ್ನ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ ಸಮಯದಲ್ಲಿ ಆತಂಕದಲ್ಲಿದ್ದ ಧ್ರುವಸರ್ಜಾ ಬಾಕಿಯಿದ್ದ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ, 10-12 ದಿನಗಳ ಕಾಲ ಶೂಟ್ ಮಾಡಬೇಕಿದ್ದ ಆ ಭಾಗವನ್ನು ಸದ್ಯದಲ್ಲೇ ಚಿತ್ರೀಕರಿಸಲು ತಂಡ ಸಿದ್ದತೆ ಮಾಡಿಕೊಂಡಿದೆ. ಅಲ್ಲದೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಸ್ವಲ್ಪ ಬಾಕಿ ಇರುವುದರಿಂದ ಅಂದುಕೊಂಡ ದಿನಾಂಕದಲ್ಲಿ ಚಿತ್ರ ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ, ಸದ್ಯದಲ್ಲೇ ಮುಂದಿನ ದಿನಾಂಕವನ್ನು ತಿಳಿಸುವುದಾಗಿ ನಿರ್ದೇಶಕ ಎಪಿ ಅರ್ಜುನ್ ಅವರು ತಿಳಿಸಿದ್ದಾರೆ. ಇದನ್ನೂ ಓದಿ:ಬೈಕಾಟ್ ಲಾಲ್ ಸಿಂಗ್ ಚಡ್ಡಾ: ಕ್ಯಾರೆ ಅನಬಾರದು ಎಂದು ಟಾಂಗ್ ಕೊಟ್ಟ ನಟಿ ಕರಿಷ್ಮಾ

    ಅದ್ಧೂರಿ ಚಿತ್ರದ ನಂತರ ಧ್ರುವ ಸರ್ಜಾ ಮತ್ತೊಮ್ಮೆ ಅದೇ ನಿರ್ದೇಶಕರ ಜೊತೆ ಕೆಲಸ ಮಾಡಿರುವ ಚಿತ್ರ ಇದಾಗಿದ್ದು, ಪೊಗರು ಯಶಸ್ಸಿನ ಬಳಿಕ  ತೆರೆಗೆ ಬರುತ್ತಿರುವ ಈ ಚಿತ್ರದ ಬಗ್ಗೆ ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡಮಟ್ಟದ ನಿರೀಕ್ಷೆಯಿದೆ. ಸ್ಯಾಂಡಲ್ವುಡ್‌ನ ಮತ್ತೊಂದು ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಎನಿಸಿಕೊಂಡಿರುವ ಮಾರ್ಟಿನ್ ಚಿತ್ರದಲ್ಲಿ ಧ್ರುವಸರ್ಜಾ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡ, ತೆಲುಗು, ತಮಿಳು ಸೇರಿದಂತೆ ಐದು ಭಾಷೆಗಳಲ್ಲಿ ತೆರೆಗೆ ಬರಲಿರುವ ಈ ಚಿತ್ರದ ಚಿತ್ರೀಕರಣವನ್ನು ಉತ್ತರ ಭಾರತದ ಕಾಶ್ಮೀರದ ಸುಂದರ ತಾಣಗಳಲ್ಲಿ ನಡೆಸಲಾಗಿದೆ.

    ಉದಯ್ ಕೆ. ಮೆಹ್ತಾ ಅವರ ಬ್ಯಾನರ್ ನಲ್ಲೇ ದೊಡ್ಡ ಬಜೆಟ್  ಚಿತ್ರವಾಗಿ  ಮಾರ್ಟಿನ್ ಹೊರಬರುತ್ತಿದ್ದು, ಈ ಚಿತ್ರದಲ್ಲಿ ಬಹುಭಾಷಾ ನಟಿ ವೈಭವಿ ಶಾಂಡಿಲ್ಯ ಧ್ರುವಸರ್ಜಾಗೆ ಜೋಡಿಯಾಗಿ ಕಾಣಿಸಿ ಕೊಂಡಿದ್ದಾರೆ. ವಿಭಿನ್ನ ಪೋಸ್ಟರ್‌ನಿಂದಲೇ ಗಮನ ಸೆಳೆದಿರುವ ಮಾರ್ಟಿನ್ ಚಿತ್ರದ ಮೇಲೆಅಭಿಮಾನಿಗಳಿಗೆ ಸಿಕ್ಕಾಪಟ್ಟೆ ನಿರೀಕ್ಷೆಯಿದೆ. ಚಿತ್ರ ಯಾವಾಗ ಬರುತ್ತೋ ಅಂತ ಕಾಯ್ತಿದ್ದ ಅವರಿಗೆ ಕೊಂಚ ನಿರಾಸೆಯಾದರೂ ಪರಿಸ್ಥಿತಿಯನ್ನುಅರ್ಥಮಾಡಿಕೊಂಡು ಹೊಸ ರಿಲೀಸ್ ಡೇಟ್‌ಗಾಗಿ ಎದುರು ನೋಡುತ್ತಿದ್ದಾರೆ.

    ಕಾಶ್ಮೀರದ ಐಸ್‌ವಾರ್ ಸಾಹಸ ದೃಶ್ಯಗಳ ಜೊತೆಗೆ ರೋಮಾಂಚನಕಾರಿ ಸ್ಕೇಟಿಂಗ್ ಆ್ಯಕ್ಷನ್ ಸೀನ್‌ಗಳು, ಇದರಜೊತೆಗೆ ಮಾತಿನಭಾಗ ಸೇರಿ ೧೬ ದಿನಗಳವರೆಗೆ ಕಾಶ್ಮೀರದಲ್ಲೇ ಚಿತ್ರದ ಶೂಟಿಂಗ್ ನಡೆಸಲಾಗಿದೆ. ಆ್ಯಕ್ಷನ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಿರ್ದೇಶಕ ಎ.ಪಿ.ಅರ್ಜುನ್ ಅವರು ಹೊಸ ಮಾದರಿಯ ಮೇಕಿಂಗ್ ಟ್ರೈ ಮಾಡಿದ್ದಾರೆ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ  ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ತೆಲುಗಿನ ಹೆಸರಾಂತ ಮ್ಯೂಸಿಕ್ ಡೈರೆಕ್ಟರ್ ಮಣಿಶರ್ಮಾ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಸತ್ಯಹೆಗಡೆ ಅವರ ಛಾಯಾಗ್ರಹಣ, ಮಹೇಶ್‌ರೆಡ್ಡಿ ಅವರ ಸಂಕಲನ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾಗೆ ಈವರೆಗೂ ಖರ್ಚಾಗಿದ್ದು ಬರೋಬ್ಬರಿ 60 ಕೋಟಿ?

    ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾಗೆ ಈವರೆಗೂ ಖರ್ಚಾಗಿದ್ದು ಬರೋಬ್ಬರಿ 60 ಕೋಟಿ?

    ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ನಾನಾ ವಿಚಾರಗಳಿಂದಾಗಿ ಸಖತ್ ಸದ್ದು ಮಾಡುತ್ತಿದೆ. ಅಲ್ಲದೇ ಈ ಸಿನಿಮಾದ ಕುರಿತು ಸಾಕಷ್ಟು ಇಂಟ್ರಸ್ಟಿಂಗ್ ಸಂಗತಿಗಳು ಈ ಚಿತ್ರದಲ್ಲಿದೆ. ಪೊಗರು ನಂತರ ಧ್ರುವ ಮಾಗಿದ್ದ ಕಾರಣದಿಂದಾಗಿ ಅಳೆದು-ತೂಗಿ ಮಾರ್ಟಿನ್‌ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ ಆಕ್ಷನ್ ಪ್ರಿನ್ಸ್. ಅಲ್ಲದೇ, ಅನೇಕ ಸಂಗತಿಗಳ ಕುರಿತು ಬೆಳಕು ಚೆಲ್ಲಿ ಮಾರ್ಟಿನ್‌ಗೆ ಬಣ್ಣಹಚ್ಚಿದ್ದಾರೆ. ಈಗ ಮಾರ್ಟಿನ್ ಸಿನಿಮಾದ ಶೂಟಿಂಗ್ ಫೈನಲ್ ಹಂತಕ್ಕೆ ತಲುಪಿದ್ದು, ಮುಂದಿನ ವಾರದಿಂದ ಹೈದರಾಬಾದ್‌ನಲ್ಲಿ ಫೈನಲ್ ಶೆಡ್ಯೂಲ್ ಪ್ಲಾನ್ ಆಗಿದೆಯಂತೆ.

    ಮಾರ್ಟಿನ್ ಧ್ರುವ ವೃತ್ತಿ ಜೀವನದ ದುಬಾರಿ ಬಜೆಟ್ ಸಿನಿಮಾ. ಮಾರ್ಟಿನ್‌ಗಾಗಿ ಇಲ್ಲಿವರೆಗೆ ಸುಮಾರು ೬೦ ಕೋಟಿ ಖರ್ಚು ಮಾಡಿದ್ದಾರಂತೆ ನಿರ್ಮಾಪಕ ಉದಯ್ ಮೆಹ್ತಾ. ನಿರ್ದೇಶಕ ಎ.ಪಿ ಅರ್ಜುನ್ ಪ್ರತಿ ಫ್ರೇಮ್‌ ಅನ್ನೂ ಸಖತ್ ರಿಚ್ಚಾಗಿ ಶೂಟ್ ಮಾಡಿದ್ದಾರಂತೆ. ಒಂದೂವರೆ ನಿಮಿಷದ ಒಂದು ಕಾರ್ ಛೇಸಿಂಗ್ ದೃಶ್ಯವನ್ನು 9 ದಿನ ಶೂಟ್ ಮಾಡಿದ್ದಾರೆ ಅಂದ್ರೆ ಮಾರ್ಟಿನ್ ವಿಶ್ಯುವಲ್ಸ್‌ಗೆ ಎಷ್ಟು ಮಹತ್ವವಿದೆ ಎನ್ನುವುದು ಈ ಮೂಲಕ ಗೊತ್ತಾಗಲಿದೆ.

    ಸಿನಿಮಾದಲ್ಲಿ ಹತ್ತು ಹಲವು ವಿಶೇಷತೆಗಳಿದ್ದು ತೆಲುಗು, ತಮಿಳಿನ ಸಿನಿರಂಗದ ಖ್ಯಾತನಾಮರು ಮಾರ್ಟಿನ್‌ಗಾಗಿ  ಬಣ್ಣ ಹಚ್ಚಲಿದ್ದಾರೆ ಅನ್ನುವುದು ಸದ್ಯದ ಅಪ್‌ಡೇಟ್. ಎಲ್ಲಾ ಭಾಷೆಯ ಎಲ್ಲಾ ವರ್ಗದ ಜನರು ಮಾರ್ಟಿನ್ ಮೆಚ್ಚಲಿದ್ದಾರೆ ಅನ್ನೊದು ಚಿತ್ರತಂಡ ನಂಬಿಕೆ. ಮಾರ್ಟಿನ್ ಕೂಡ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಕನ್ನಡದ ಮತ್ತೊಂದು ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಮತ್ತೊಂದು ದಾಖಲೆ ಬರೆಯಲಿದೆ ಎನ್ನುವ ನಂಬಿಕೆ ಚಿತ್ರತಂಡದ್ದು. ಇದನ್ನೂ ಓದಿ : ‘ಮದುವೆನೂ ಇಲ್ಲ, ರಿಂಗೂ ಇಲ್ಲ’ ಲಲಿತ್ ಮೋದಿಗೆ ತಿವಿದ ಸುಶ್ಮಿತಾ ಸೇನ್

    ಈವರೆಗೂ ಮಾರ್ಟಿನ್ ಮೋಷನ್ ಪೋಸ್ಟರ್ ಬಿಟ್ಟು ಬೇರೆನೂ ರಿವಿಲ್ ಮಾಡಿಲ್ಲ ಚಿತ್ರತಂಡ. ಫೈನಲ್ ಕಾಪಿ ಕೈಗೆ ಬರೋವರೆಗೆ ಏನೂ ರಿವಿಲ್ ಮಾಡೋದು ಬೇಡ ಅಂತ ಫಿಲಂ ಟೀಮ್ ತಿರ್ಮಾನ ಮಾಡಿದೆಯಂತೆ. ಈ ಸಿನಿಮಾದಲ್ಲಿ ಧ್ರುವ ಡಬಲ್ ರೋಲ್‌ನಲ್ಲಿ ಕಾಣಿಸಿದ್ದಾರೆ ಎನ್ನುವ ಸುದ್ದಿಯೂ ಆದೆ. ಆದ್ರೆ ಈ ಪ್ರಶ್ನೆಗೆ ಚಿತ್ರತಂಡದ ಸದಸ್ಯರು ಇನ್ನೂ ಸ್ವಲ್ಪ ದಿನ ಕಾದು ನೋಡಿ ಅಂತಿದ್ದಾರೆ. ಒಟ್ಟಾರೆ ಇದುವರೆಗೆ ಈ ಸಿನಿಮಾಗೆ ೬೦ ಕೋಟಿ ಖರ್ಚಾಗಿದ್ದು, ೧೦ ಫೈಟ್‌ಗಳಿಂದ ಈ ಚಿತ್ರ ಕೂಡಿದೆ ಎನ್ನುವುದು ಬಲ್ಲ ಮೂಲಗಳ ಮಾಹಿತಿ.

    Live Tv
    [brid partner=56869869 player=32851 video=960834 autoplay=true]

  • ಇವನು ಫ್ಯಾಮಿಲಿ ಎಂಟರ್‌ಟೈನರ್ ಬ್ರಹ್ಮಚಾರಿ!

    ಇವನು ಫ್ಯಾಮಿಲಿ ಎಂಟರ್‌ಟೈನರ್ ಬ್ರಹ್ಮಚಾರಿ!

    ದಯ್ ಮೆಹ್ತಾ ನಿರ್ಮಾಣ ಮಾಡಿರುವ ಬ್ರಹ್ಮಚಾರಿ ಚಿತ್ರ ಈ ವಾರವೇ ರಾಜ್ಯಾದ್ಯಂತ ತೆರೆಗಾಣುತ್ತಿದೆ. ನೀನಾಸಂ ಸತೀಶ್ ನಟಿಸಿರೋ ಈ ಚಿತ್ರ ಈಗಾಗಲೇ ಟ್ರೇಲರ್, ಹಾಡುಗಳ ಮೂಲಕ ಬಹು ನಿರೀಕ್ಷಿತ ಚಿತ್ರವಾಗಿ ಹೊರ ಹೊಮ್ಮಿದೆ. ಫಸ್ಟ್ ನೈಟ್ ಟೀಸರ್ ನಿಂದ ಶುರುವಾಗಿ ಟ್ರೇಲರ್ ತನಕ ಬ್ರಹ್ಮಚಾರಿ ಪ್ರೇಕ್ಷಕರನ್ನು ಮರುಳು ಮಾಡಿಕೊಂಡು ಬಂದು ಇದೀಗ ಬಿಡುಗಡೆಯ ಹಂತ ತಲುಪಿಕೊಂಡಿದ್ದಾನೆ. ವಿಶೇಷವೆಂದರೆ, ಸಂಪೂರ್ಣ ಮನೋರಂಜನೆಯನ್ನೇ ಉದ್ದೇಶವಾಗಿಸಿಕೊಂಡಿರೋ ಈ ಸಿನಿಮಾ ಪಕ್ಕಾ ಫ್ಯಾಮಿಲಿ ಎಂಟರ್ ಟೈನ್ಮೆಂಟ್ ಪ್ಯಾಕೇಜಿನಂತೆ ಮೂಡಿ ಬಂದಿದೆಯಂತೆ. ಈ ಕಾರಣದಿಂದಲೇ ಚಿತ್ರತಂಡ ಕುಟುಂಬ ಸಮೇತರಾಗಿ ಬಂದು ನೋಡುವಂತೆ ಪ್ರೇಕ್ಷಕರಿಗೆ ಆಹ್ವಾನ ನೀಡುತ್ತಾ ಬಂದಿದೆ.

    ಈ ಹಿಂದೆ ಬಾಂಬೆ ಮಿಠಾಯಿ ಮತ್ತು ಡಬಲ್ ಇಂಜಿನ್ ಎಂಬ ಹಾಸ್ಯ ಪ್ರಧಾನ ಚಿತ್ರಗಳನ್ನು ನಿರ್ದೇಶನ ಮಾಡಿ ಗೆದ್ದಿದ್ದವರು ಚಂದ್ರ ಮೋಹನ್. ಈ ಥರದ ಸಿನಿಮಾಗಳನ್ನು ರೂಪಿಸೋದು, ಇಡೀ ಸಿನಿಮಾದಲ್ಲಿ ಪ್ರತೀ ಹಂತದಲ್ಲಿಯೂ ಪ್ರೇಕ್ಷಕರನ್ನು ನಗಿಸೋದೆಲ್ಲ ಅಷ್ಟು ಸಲೀಸಿನ ಸಂಗತಿಯಲ್ಲ. ಆದರೆ ಚಂದ್ರಮೋಹನ್ ಅದನ್ನು ಕರಗತ ಮಾಡಿಕೊಂಡಿದ್ದಾರೆ. ಈ ಕಾರಣದಿಂದಲೇ ಎರಡು ಸರಣಿ ಗೆಲುವುಗಳನ್ನು ತನ್ನದಾಗಿಸಿಕೊಂಡು, ಇದೀಗ ಬ್ರಹ್ಮಚಾರಿ ಮೂಲಕ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಿಂದಿದ್ದಾರೆ. ಈಗಾಗಲೇ ಈ ಸಿನಿಮಾ ಸೃಷ್ಟಿಸಿರುವ ಕ್ರೇಜ್ ಮತ್ತು ಅದರ ವಿಶಿಷ್ಟ ಕಂಟೆಂಟಿನ ವಿಚಾರಗಳೆಲ್ಲವೂ ಬ್ರಹ್ಮಚಾರಿಗೆ ಪ್ರೇಕ್ಷಕರೆಲ್ಲ ಬೇಷರತ್ತಾಗಿ ಫಿದಾ ಆಗುವಂಥಾ ಲಕ್ಷಣಗಳನ್ನೇ ಧ್ವನಿಸುವಂತಿವೆ.

    ಗುಪ್ತ ಸಮಸ್ಯೆಗಳನ್ನು ಒಳಗೇ ಇಟ್ಟುಕೊಂಡು, ಕನಿಷ್ಟ ಅದಕ್ಕೊಂದು ಚಿಕಿತ್ಸೆ ಪಡೆಯಲೂ ಮುಜುಗರ ಪಡುವ, ಹೇಗೋ ಅದು ಬಟಾಬಯಲಾದ ನಂತರ ಮಾನಸಿಕ ಹಿಂಸೆ ಅನುಭವಿಸುವಂಥಾ ಅದೆಷ್ಟೋ ಜನರಿದ್ದಾರೆ. ಅಂಥಾದ್ದೊಂದು ಗುಪ್ತ ಸಮಸ್ಯೆಯಿಂದ ಬಳಲೋ ನಾಯಕನ ಪಡಿಪಾಟಲುಗಳನ್ನು ಎಲ್ಲಿಯೂ ವಲ್ಗರ್ ಅನ್ನಿಸದಂತೆ, ಸಭ್ಯತೆಯ ಗೆರೆ ದಾಟದಂತೆ, ಪ್ರತೀ ಫ್ರೇಮಿನಲ್ಲಿಯೂ ನಗಿಸುವಂತೆ ಕಟ್ಟಿ ಕೊಡುವಲ್ಲಿ ಚಂದ್ರ ಮೋಹನ್ ಗೆದ್ದಿದ್ದಾರಂತೆ. ಚಿತ್ರತಂಡದಲ್ಲಿಯೂ ಆ ಬಗೆಗಿನ ಗಾಢವಾದ ವಿಶ್ವಾಸವಿದೆ. ಈಗಾಗಲೇ ಹೊರ ಬಂದಿರುವ ಟೀಸರ್ ಮತ್ತು ಟ್ರೇಲರ್ ಗಳಲ್ಲಿ ಅದರ ಕುರುಹುಗಳಿವೆ.

    ಉದಯ್ ಮೆಹ್ತಾ ನಿರ್ಮಾಣದ ಚಿತ್ರಗಳೆಂದ ಮೇಲೆ ಅಲ್ಲಿ ಅದ್ಧೂರಿತನದ ಹಾಜರಿ ಇದ್ದೇ ಇರುತ್ತದೆಂಬ ನಂಬಿಕೆ ಪ್ರೇಕ್ಷಕರಲ್ಲಿದೆ. ಬ್ರಹ್ಮಚಾರಿಯನ್ನೂ ಕೂಡಾ ಅವರು ಅಷ್ಟೇ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಹಾಡುಗಳಲ್ಲಿಯೇ ಅದಕ್ಕೆ ಸಾಕ್ಷಿಗಳು ಸಿಗುವಂತಿವೆ. ಟ್ರೇಲರ್ ಮತ್ತು ಟೀಸರ್ ಗಳಲ್ಲಿ ಕಚಗುಳಿ ಇಡುವಂತಾ ಸನ್ನಿವೇಶ, ಡೈಲಾಗುಗಳಿಂದಲೇ ಬ್ರಹ್ಮಚಾರಿ ಲಕಲಕಿಸಿದ್ದಾನೆ. ಹಾಗಂತ ಇದನ್ನೇನು ಡಬಲ್ ಮೀನಿಂಗ್‍ಗಳಿಂದ ತುಂಬಿರೋ ಸಿನಿಮಾ ಅಂದುಕೊಳ್ಳಬೇಕಿಲ್ಲ. ಇದು ಕುಟುಂಬ ಸಮೇತರಾಗಿ ನೋಡಿ ಎಂಜಾಯ್ ಮಾಡುವಂಥಾ ಚಿತ್ರ. ಒಂದೇ ಒಂದು ಮುಜುಗರದ ಸನ್ನಿವೇಶಗಳೂ ಈ ಸಿನಿಮಾದಲ್ಲಿಲ್ಲವಂತೆ. ಅಂತೂ ನೀನಾಸಂ ಸತೀಶ್ ಬ್ರಹ್ಮಚಾರಿಯಾಗಿ ತಮ್ಮ ಗೆಲುವಿನ ಸರಣಿಯನ್ನು ಮುಂದುವರೆಸೋದರಲ್ಲಿ ಯಾವ ಸಂದೇಹವೂ ಇಲ್ಲ.

  • ಸಿಂಗ: ನಿರ್ಮಾಪಕ ಉದಯ್ ಮೆಹ್ತಾರ ಡೈಮಂಡ್‍ನಂಥಾ ಕನಸು!

    ಸಿಂಗ: ನಿರ್ಮಾಪಕ ಉದಯ್ ಮೆಹ್ತಾರ ಡೈಮಂಡ್‍ನಂಥಾ ಕನಸು!

    ಬೆಂಗಳೂರು: ಸಿನಿಮಾ ನಿರ್ಮಾಣವೆಂಬುದು ವ್ಯವಹಾರ. ಆದರೆ ನಿರ್ಮಾಪಕ ಅದನ್ನು ಬರೀ ಬ್ಯುಸಿನೆಸ್ ಅಂತಷ್ಟೇ ಪರಿಗಣಿಸಿದರೆ ಬಹುಶಃ ಅದ್ಭುತ ದೃಶ್ಯ ಕಾವ್ಯಗಳು ಹುಟ್ಟಲು ಸಾಧ್ಯವಿರುತ್ತಿರಲಿಲ್ಲ. ಯಾಕೆಂದರೆ, ಯಶಸ್ವಿ ಸಿನಿಮಾಗಳ ಹಿಂದೆ ಇಂಥಾ ವ್ಯಾವಹಾರಿಕ ಉದ್ದೇಶದಾಚೆಯ ಉತ್ಕಟ ಕಲಾ ಪ್ರೇಮವಿರುತ್ತದೆ. ನಿರ್ದೇಶಕರ ಕನಸಿಗೆ ಪ್ರತೀ ಹೆಜ್ಜೆಯಲ್ಲೂ ಸಾಥ್ ಕೊಡುತ್ತಾ, ಎಂಥಾ ಸವಾಲುಗಳು ಬಂದರೂ ಎದೆಕೊಡುತ್ತಾ ನಿರ್ಮಾಪಕ ಸಾಗಿ ಬಂದರೇನೇ ಸಿನಿಮಾವೊಂದು ಅಚ್ಚುಕಟ್ಟಾಗಿ ರೂಪುಗೊಳ್ಳುತ್ತೆ. ಹೀಗೆ ಸ್ವತಃ ದೊಡ್ಡ ಮಟ್ಟದ ವ್ಯಾಪಾರ ಉದ್ಯಮದ ವಾರಸುದಾರರಾಗಿದ್ದರೂ ಸಿನಿಮಾವನ್ನು ಆರಾಧಿಸುವ ಸ್ವಭಾವದ ಉದಯ್ ಮೆಹ್ತಾರ ಏಳನೇ ಕನಸು ‘ಸಿಂಗ’!

    ಚಿರಂಜೀವಿ ಸರ್ಜಾ ಅಭಿನಯದ ಸಿಂಗ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಈಗಾಗಲೇ ಟ್ರೈಲರ್ ಮೂಲಕ ದೊಡ್ಡ ಮಟ್ಟದಲ್ಲಿಯೇ ಸಂಚಲನ ಸೃಷ್ಟಿಸಿರೋ ಈ ಚಿತ್ರವನ್ನು ಈ ಹಿಂದೆ ರಾಮ್ ಲೀಲಾ ಎಂಬ ಸಿನಿಮಾ ನಿರ್ದೇಶನ ಮಾಡಿದ್ದ ವಿಜಯ್ ಕಿರಣ್ ರೂಪಿಸಿದ್ದಾರೆ. ಯಾವುದೇ ಚಿತ್ರ ಬಿಡುಗಡೆ ಪೂರ್ವದಲ್ಲಿ ಈ ಥರದ ಟಾಕ್ ಕ್ರಿಯೇಟ್ ಮಾಡಿದರೆ ಗೆಲುವು ಗ್ಯಾರಂಟಿ. ಅಂಥಾದ್ದೊಂದು ಸಕಾರಾತ್ಮಕ ವಾತಾವರಣದೊಂದಿಗೆ ಥೇಟರಿನ ಹಾದಿಯಲ್ಲಿರೋ ಸಿಂಗನನ್ನು ಉದಯ್ ಮೆಹ್ತಾ ಅವರು ನಿರ್ಮಾಣ ಮಾಡಲು ಒಪ್ಪಿಕೊಂಡಿರೋದೇ ಕಥೆಯ ಕಾರಣದಿಂದ.

    ಅಷ್ಟಕ್ಕೂ ಎಲ್ಲ ದಿಕ್ಕಿನಿಂದಲೂ ಕಥೆ ಒಪ್ಪಿಗೆಯಾಗದೇ ಇದ್ದರೆ ಉದಯ್ ಮೆಹ್ತಾ ನಿರ್ಮಾಣಕ್ಕಿಳಿಯುವವರೇ ಅಲ್ಲ. ಅವರು ಎಂಥಾ ಟೇಸ್ಟು ಹೊಂದಿದ್ದಾರೆ, ಗುಣಮಟ್ಟವನ್ನು ಹೇಗೆಲ್ಲ ಬಯಸುತ್ತಾರೆಂಬುದಕ್ಕೆ ಅವರೇ ನಿರ್ಮಾಣ ಮಾಡಿರೋ ಆರು ಚಿತ್ರಗಳೇ ಸಾಕ್ಷಿಗಿವೆ. ವಿಜಯ್ ಕಿರಣ್ ಆರಂಭದಲ್ಲಿ ಈ ಕಥೆ ಹೇಳಿದಾಗ ಒಂದೇ ಗುಕ್ಕಿಗದು ಮೆಹ್ತಾರಿಗೆ ಹಿಡಿಸಿತ್ತಂತೆ.

     

    ಪಕ್ಕಾ ಕಮರ್ಶಿಯಲ್ ಶೈಲಿಯ ಈ ಕಥೆ ಎಲ್ಲ ಅಂಶಗಳನ್ನೂ ಒಳಗೊಂಡು, ಎಲ್ಲ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವಂತಿರೋದರಿಂದಲೇ ಮೆಹ್ತಾ ನಿರ್ಮಾಣ ಮಾಡಲು ಒಪ್ಪಿಕೊಂಡಿದ್ದರಂತೆ. ಇದೀಗ ಒಟ್ಟಾರೆಯಾಗಿ ಸಿಂಗ ಮೂಡಿ ಬಂದಿರೋ ರೀತಿಯ ಬಗ್ಗೆಯೂ ಅವರಲ್ಲೊಂದು ತೃಪ್ತಿಯಿದೆ.

    ಉದಯ್ ಮೆಹ್ತಾ ಮೂಲತಃ ಬೆಂಗಳೂರಿನವರೇ. ಆರಂಭ ಕಾಲದಿಂದಲೂ ಅವರಿಗೆ ಸಿನಿಮಾಗಳ ಮೇಲೆ ವಿಪರೀತ ಸೆಳೆತ. ಇಂಥಾ ಸಿನಿಮಾ ಒಲವನ್ನು ಕಾಪಾಡಿಕೊಂಡೇ ಮುಂದುವರೆದರೂ ಬದುಕಿನ ಅನಿವಾರ್ಯತೆ ಅವರನ್ನು ಡೈಮಂಡ್ ಮರ್ಚೆಂಟ್ ಆಗಿ ರೂಪಿಸಿತ್ತು. ಈ ಉದ್ಯಮದಲ್ಲಿ ಬಲು ಆಸ್ಥೆಯಿಂದ ತೊಡಗಿಸಿಕೊಂಡು ಯಶಸ್ವಿಯಾದ ಮೆಹ್ತಾ ಈಗ್ಗೆ ದಶಕಗಳ ಹಿಂದೆಯೇ ನಿರ್ಮಾಪಕರಾಗುವ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದ್ದರು. ಹೀಗೆ ಒಂದೊಳ್ಳೆ ಪ್ರಾಜೆಕ್ಟಿಗೆ ಹುಡುಕುತ್ತಿದ್ದಾಗ 2009ರಲ್ಲಿ ಲೂಸ್ ಮಾದ ಯೋಗಿ ಅಭಿನಯದ ರಾವಣ ಎಂಬ ಚಿತ್ರದ ಮೂಲಕ ಅದಕ್ಕೆ ಅವಕಾಶ ಒದಗಿ ಬಂದಿತ್ತು.

    ಆ ಚಿತ್ರ ಯಶ ಕಾಣುತ್ತಲೇ ನಿರ್ಮಾಪಕರಾಗಿ ಕಾಲೂರಿ ನಿಂತ ಉದಯ್ ಮೆಹ್ತಾ, ಕೃಷ್ಣನ್ ಲವ್ ಸ್ಟೋರಿ, ಕಿಚ್ಚ ಸುದೀಪ್ ಅಭಿನಯದ ಬಚ್ಚನ್, ನೀನಾಸಂ ಸತೀಶ್ ಅಭಿನಯದ ಲವ್ ಇನ್ ಮಂಡ್ಯ, ಶರಣ್ ಅಭಿನಯದ ರಾಜ ರಾಜೇಂದ್ರ ಚಿತ್ರಗಳನ್ನು ನಿರ್ಮಾಣ ಮಾಡಿದ್ದರು. ಸಿಂಗ ಅವರ ಏಳನೇ ಚಿತ್ರ. ಈ ಚಿತ್ರ ಬಿಡುಗಡೆಯ ಹಾದಿಯಲ್ಲಿರುವಾಗಲೇ ನೀನಾಸಂ ಸತೀಶ್ ಅಭಿನಯದ ಬ್ರಹ್ಮಚಾರಿ ಚಿತ್ರವನ್ನೂ ಮೆಹ್ತಾ ಆರಂಭಿಸಿದ್ದಾರೆ. ಅದಾಗಲೇ ಧೃವ ಸರ್ಜಾರ ಚಿತ್ರವೊಂದನ್ನು ನಿರ್ಮಾಣ ಮಾಡಲು ತಯಾರಿಯನ್ನೂ ಆರಂಭಿಸಿದ್ದಾರೆ.

    ಹೀಗೆ ಸಾಗಿ ಬಂದಿರುವ ಉದಯ್ ಮೆಹ್ತಾ ಈಗ ಕನ್ನಡದ ಸ್ಟಾರ್ ನಿರ್ಮಾಪಕರಾಗಿ ಹೊರ ಹೊಮ್ಮಿದ್ದಾರೆ. ಅವರೊಂದು ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆಂದರೆ ಗಾಂಧಿನಗರ ಅದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತದೆ. ಅದಕ್ಕೆ ಕಾರಣ ಕಥೆಯನ್ನು ಆರಿಸಿಕೊಳ್ಳೋದರಲ್ಲಿ ಅವರಿಗಿರುವ ಜಾಣ್ಮೆ. ಸಿಂಗ ಕಥೆಯನ್ನೂ ಕೂಡಾ ಅವರು ಅದೇ ಮಾನದಂಡಗಳನ್ನು ಪ್ರಯೋಗಿಸಿ ಆರಿಸಿಕೊಂಡಿದ್ದಾರೆ. ಈ ಸಿನಿಮಾ ದೊಡ್ಡ ಗೆಲುವು ಕಾಣೋದರೊಂದಿಗೆ ತಮ್ಮ ಸಿನಿಮಾ ಬದುಕಿನ ಮಹತ್ವದ ಚಿತ್ರವಾಗಿ ದಾಖಲಾಗುತ್ತದೆ ಎಂಬ ಭರವಸೆ ಉದಯ್ ಮೆಹ್ತಾ ಅವರಲ್ಲಿದೆ. ಈಗ ಪ್ರೇಕ್ಷಕರ ವಲಯದಲ್ಲಿ ಸಿಂಗ ಪಸರಿಸಿರೋ ಕ್ರೇಜ್ ಮೆಹ್ತಾರ ನಂಬಿಕೆಗೆ ಮತ್ತಷ್ಟು ಇಂಬು ಕೊಡುವಂತಿದೆ.

  • ಟ್ರೈಲರ್ ಮೂಲಕ ದುಷ್ಟರ ವಿರುದ್ಧ ಸಿಡಿದೆದ್ದ ಸಿಂಗ!

    ಟ್ರೈಲರ್ ಮೂಲಕ ದುಷ್ಟರ ವಿರುದ್ಧ ಸಿಡಿದೆದ್ದ ಸಿಂಗ!

    ಬೆಂಗಳೂರು: ಉದಯ್ ಮೆಹ್ತಾ ನಿರ್ಮಾಣ ಮಾಡಿರುವ ಸಿಂಗ ಚಿರಂಜೀವಿ ಸರ್ಜಾ ಮಾಸ್ ಲುಕ್ಕಲ್ಲಿ ಮಿಂಚಿರೋ ಸೂಚನೆ ಈ ಹಿಂದೆಯೇ ಸಿಕ್ಕಿತ್ತು. ಪೋಸ್ಟರ್ ಮೂಲಕವೇ ಅದು ಬಯಲಾಗಿತ್ತು. ಇದೀಗ ಈ ಚಿತ್ರದ ಟ್ರೈಲರ್ ಲಾಂಚ್ ಆಗಿದೆ. ಈ ಮೂಲಕವೇ ಚಿರು ನಿರ್ವಹಿಸಿರೋ ಪಾತ್ರದ ಅಸಲಿ ಖದರ್ ಎಂಥಾದ್ದೆಂಬುದು ಸ್ಪಷ್ಟವಾಗಿಯೇ ಬಹಿರಂಗಗೊಂಡಿದೆ.

    ಈ ಚಿತ್ರದ್ದು ಪಕ್ಕಾ ಮಾಸ್ ಕಥಾನಕವೆಂಬುದರ ಸುಳಿವಿನೊಂದಿಗೇ ತೆರೆದುಕೊಳ್ಳುವ ಈ ಟ್ರೈಲರ್‍ನಲ್ಲಿ ಚಿರಂಜೀವಿ ಸರ್ಜಾ ಸಿಂಗನಾಗಿ ಅಬ್ಬರಿಸಿದ್ದಾರೆ. ಪ್ರೇಮಿಯಾಗಿ ಪುಳಕವೆಬ್ಬಿಸುತ್ತಲೇ ದುಷ್ಟರ ವಿರುದ್ಧ ಸೆಟೆದು ನಿಲ್ಲೋ ಮೂಲಕ ಮೈನವಿರೇಳುವಂತೆ ಮಾಡಿದ್ದಾರೆ. ಇದರೊಂದಿಗೇ ಇತರೆ ಒಂದಷ್ಟು ಪಾತ್ರಗಳೂ ರಿವೀಲ್ ಆಗಿವೆ. ರವಿಶಂಕರ್, ಬಿ ಸುರೇಶ್ ಮುಂತಾದವರ ಪಾತ್ರಗಳೂ ರಗಡ್ ಆಗಿರೋದರ ಸೂಚನೆಯನ್ನೂ ಈ ಟ್ರೈಲರ್ ಬಿಟ್ಟುಕೊಟ್ಟಿದೆ.

    ಈ ಚಿತ್ರವನ್ನು ಈ ಹಿಂದೆ ರಾಮ್ ಲೀಲಾ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದ ವಿಜಯ್ ಕಿರಣ್ ರೂಪಿಸಿದ್ದಾರೆ. ಚಿರಂಜೀವಿ ಸರ್ಜಾ ಈವರೆಗೂ ಹಲವಾರು ಮಾಸ್ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಸಿಂಗನ ಖದರ್ ಬೇರೆಯದ್ದೇ ದಿಕ್ಕಿನಲ್ಲಿದೆ. ಇಲ್ಲಿ ಮಾಫಿಯಾ ಡಾನ್‍ಗಳೊಂದಿಗೆ ಸೆಣಸೋ ಮಾಸ್ ಕಥೆಯ ಜೊತೆಗೆ ನವಿರಾದ ಪ್ರೇಮ ಕಥೆಯೂ ಇದೆ. ಇಲ್ಲಿ ನಾಗಕನ್ನಿಕೆ ಖ್ಯಾತಿಯ ಅದಿತಿ ಪ್ರಭುದೇವ ಚಿರು ಜೋಡಿಯಾಗಿ ನಟಿಸಿದ್ದಾರೆ.

    ಈಗಾಗಲೇ ಈ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದೆ. ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳನ್ನೂ ಮುಗಿಸಿಕೊಂಡಿರೋ ಚಿತ್ರ ತಂಡ ಶೀಘ್ರದಲ್ಲಿಯೇ ತೆರೆಗೆ ಬರಲು ತಯಾರಿ ನಡೆಸಿದೆ.

  • ‘ಸಿಂಗ’ನ ಟ್ರೈಲರ್ ಲಾಂಚ್‍ಗೆ ಫಿಕ್ಸಾಯ್ತು ಮುಹೂರ್ತ!

    ‘ಸಿಂಗ’ನ ಟ್ರೈಲರ್ ಲಾಂಚ್‍ಗೆ ಫಿಕ್ಸಾಯ್ತು ಮುಹೂರ್ತ!

    ಬೆಂಗಳೂರು: ಚಿರಂಜೀವಿ ಸರ್ಜಾ ಅಭಿನಯದ ಸಿಂಗ ಚಿತ್ರ ಪಕ್ಕಾ ಮಾಸ್ ಕಂಟೆಂಟಿನ ಮುನ್ಸೂಚನೆಯೊಂದಿಗೆ ಅಬ್ಬರಿಸಲಾರಂಭಿಸಿದೆ. ಯುಕೆಎಂ ಸ್ಟುಡಿಯೋಸ್ ಲಾಂಛನದಲ್ಲಿ ಉದಯ್ ಮೆಹ್ತಾ ನಿರ್ಮಾಣ ಮಾಡಿರೋ ಈ ಚಿತ್ರವೀಗ ಚಿತ್ರೀಕರಣ, ಕೆಲಸ ಕಾರ್ಯಗಳನ್ನೆಲ್ಲ ಮುಗಿಸಿಕೊಂಡು ತೆರೆಗೆ ಬರಲು ಸಿದ್ಧವಾಗಿದೆ. ಈ ಕಡೆಯ ಕ್ಷಣಗಳಲ್ಲಿ ಬಿಸಿಯೇರಿಸುವ ಸಲುವಾಗಿಯೇ ಟ್ರೈಲರ್ ಒಂದನ್ನು ಲಾಂಚ್ ಮಾಡಲು ಚಿತ್ರತಂಡ ಅಣಿಗೊಂಡಿದೆ.

    ಇದೇ ಜೂನ್ 14ರಂದು ಸಿಂಗ ಟ್ರೈಲರ್ ಲಾಂಚ್ ಆಗಲಿದೆ. ಈ ಹಿಂದೆ ರಾಮ್ ಲೀಲಾ ಎಂಬ ಚಿತ್ರ ನಿರ್ದೇಶನ ಮಾಡಿದ್ದ ವಿಜಯ್ ಕಿರಣ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಈ ಚಿತ್ರದ ಕೆಲ ಪೋಸ್ಟರ್ ಗಳ ಮೂಲಕವೇ ಇದೊಂದು ಪಕ್ಕಾ ಮಾಸ್ ಸಬ್ಜೆಕ್ಟಿನ ಚಿತ್ರ ಅನ್ನೋದೂ ನಿಖರವಾಗಿಯೇ ಮನದಟ್ಟಾಗಿದೆ. ಚಿರಂಜೀವಿ ಸರ್ಜಾ ಇದುವರೆಗೂ ಸಾಕಷ್ಟು ಚಿತ್ರಗಳಲ್ಲಿ ಮಾಸ್ ಲುಕ್ಕಿನಲ್ಲಿ ನಟಿಸಿದ್ದಾರೆ. ಆದರೆ ಸಿಂಗದಲ್ಲಿ ಅವರ ಪಾತ್ರಕ್ಕಿರೋ ರೌದ್ರ ಸ್ಪರ್ಶ ಪ್ರೇಕ್ಷಕರನ್ನು ಬೆರಗಾಗಿಸಲಿದೆ ಅನ್ನೋದು ಚಿತ್ರತಂಡದ ಭರವಸೆ.

    ಸಿಂಗ ಎಂಬ ಮಾಸ್ ಟೈಟಲ್ಲೇ ಹೇಳುವಂತೆ ಇದೊಂದು ಸಾಹಸ ಪ್ರಧಾನವಾದ ಚಿತ್ರ. ಇದರಲ್ಲಿ ಮೈ ನವಿರೇಳಿಸುವಂಥಾ ಸಾಹಸ ಸನ್ನಿವೇಶಗಳಿವೆ. ಅದೆಲ್ಲವನ್ನು ಡಾ.ಕೆ ರವಿವರ್ಮಾ ಮತ್ತು ಪಳನಿರಾಜ್ ನಿರ್ದೇಶನ ಮಾಡಿದ್ದಾರೆ. ಡಾ. ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಮತ್ತು ಚೇತನ್ ಹಾಡುಗಳನ್ನು ಬರೆದಿದ್ದಾರೆ. ಈಗಾಗಲೇ ಈ ಚಿತ್ರದ ಶ್ಯಾನೇ ಟಾಪಗೌವ್ಳೆ ಅನ್ನೋ ಹಾಡಂತೂ ಟ್ರೆಂಡ್ ಸೆಟ್ ಮಾಡಿದೆ. ಸಿಂಗ ಮೂಲಕ ಚಿರಂಜೀವಿ ಸರ್ಜಾಗೆ ನಾಗಕನ್ನಿಕೆ ಖ್ಯಾತಿಯ ಅದಿತಿ ಪ್ರಭುದೇವ ಜೋಡಿಯಾಗಿದ್ದಾರೆ.