Tag: Udit Raj

  • ಪ್ರಧಾನಿ ಮೋದಿ ಆಧುನಿಕ ರಾವಣ, ಶೀಘ್ರವೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ: ಕಾಂಗ್ರೆಸ್‌ ನಾಯಕ

    ಪ್ರಧಾನಿ ಮೋದಿ ಆಧುನಿಕ ರಾವಣ, ಶೀಘ್ರವೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ: ಕಾಂಗ್ರೆಸ್‌ ನಾಯಕ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಆಧುನಿಕ ರಾವಣನ ಸಂಕೇತ ಎಂದು ಕಾಂಗ್ರೆಸ್‌ ನಾಯಕ ಉದಿತ್‌ ರಾಜ್‌ (Udit Raj ಹೇಳಿಕೆ ನೀಡಿದ್ದಾರೆ.

    ದೆಹಲಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಆಧುನಿಕ ರಾವಣನ ಸಂಕೇತ. ಅವರು ತಮ್ಮ ಚಿನ್ನದ ಅರಮನೆಯನ್ನು ನಿರ್ಮಿಸುತ್ತಿದ್ದಾರೆ. ಒಮ್ಮೆ ಅದನ್ನು ಪ್ರವೇಶಿಸಿದ ನಂತರ ಅದೇ ಚಿನ್ನದ ಅರಮನೆ ಉರಿದು ಹೋಗುವುದನ್ನು ನೋಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅ.9 ರಂದು ಭಾರತಕ್ಕೆ ತಾಲಿಬಾನ್‌ ಸರ್ಕಾರದ ಅಫ್ಘಾನ್‌ ವಿದೇಶಾಂಗ ಸಚಿವ ಭೇಟಿ

    ದೆಹಲಿಯ ರಾವಣನನ್ನು ಸುಡಬೇಕು. ದೆಹಲಿಯ ರಾವಣನನ್ನು ಸುಡುವ ದಿನ ಹತ್ತಿರದಲ್ಲಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ. ಪ್ರಧಾನಿ ಮೋದಿ ಹೆಚ್ಚು ಕಾಲ ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಶೀಘ್ರದಲ್ಲೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

    ಕರ್ನಾಟಕದ ಉಪಮುಖ್ಯಮಂತ್ರಿ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದ ಕಾಂಗ್ರೆಸ್ ಶಾಸಕ ಹೆಚ್.ಡಿ.ರಂಗನಾಥ್‌ಗೆ ನೋಟಿಸ್‌ ಕುರಿತು ಮಾತನಾಡಿ, ಯಾವುದೇ ಸಂಘರ್ಷ ನಡೆಯುತ್ತಿಲ್ಲ. ಇದು ಎಲ್ಲಾ ಪಕ್ಷಗಳಲ್ಲೂ ನಡೆಯುತ್ತದೆ. ಕೆಲವರು ತಮ್ಮ ಆಪ್ತರನ್ನು ಹೊಗಳುತ್ತಾರೆ. ಇತರರು ಹಾಗೆಯೇ ಮಾಡುತ್ತಾರೆ. ಹಾಗಾದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಗ್ಗೆ ಕೆಲವು ಒಳ್ಳೆಯ ಮಾತುಗಳನ್ನು ಹೇಳಿದ್ದರೆ, ಅದು ನಿಜವಾಗಿಯೂ ಸಂಘರ್ಷ ಇದೆ ಎಂದರ್ಥವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪಾಕ್‌ನ ಪೇಶಾವರದಲ್ಲಿ ಬಾಂಬ್ ಸ್ಫೋಟ – 9 ಮಂದಿ ಸಾವು, ನಾಲ್ವರಿಗೆ ಗಾಯ

  • ರಾಹುಲ್ ಗಾಂಧಿ ಒಬಿಸಿಗಳ ಪಾಲಿನ 2ನೇ ಅಂಬೇಡ್ಕರ್ – `ಕೈʼ ಮುಖಂಡ ಉದಿತ್ ರಾಜ್ ಬಣ್ಣನೆ

    ರಾಹುಲ್ ಗಾಂಧಿ ಒಬಿಸಿಗಳ ಪಾಲಿನ 2ನೇ ಅಂಬೇಡ್ಕರ್ – `ಕೈʼ ಮುಖಂಡ ಉದಿತ್ ರಾಜ್ ಬಣ್ಣನೆ

    ನವದೆಹಲಿ: ಕಾಂಗ್ರೆಸ್‌ನ ಹಿರಿಯ ಮುಖಂಡ ಉದಿತ್ ರಾಜ್ (Udit Raj) ಅವರು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರನ್ನ ಅಂಬೇಡ್ಕರ್‌ಗೆ ಹೋಲಿಕೆ ಮಾಡಿದ್ದಾರೆ. ಎಕ್ಸ್‌ನಲ್ಲಿ ಸಂದೇಶವೊಂದನ್ನ ಹಂಚಿಕೊಂಡಿದ್ದು, ರಾಹುಲ್ ಗಾಂಧಿ (Rahul Gandhi) ಒಬಿಸಿಗಳ ಪಾಲಿನ 2ನೇ ಅಂಬೇಡ್ಕರ್ ಅಂತ ಬಣ್ಣಿಸಿದ್ದಾರೆ.

    ಉದಿತ್‌ ಎಕ್ಸ್‌ ನಲ್ಲಿ ಏನಿದೆ?
    ಇತಿಹಾಸವು ಪದೇ ಪದೇ ಪ್ರಗತಿಗೆ ಅವಕಾಶ ನೀಡುವುದಿಲ್ಲ ಎಂಬುದನ್ನ ಒಬಿಸಿಗಳು ಯೋಚಿಸಬೇಕು. ಟಾಲ್ಕಟೋರಾ ಕ್ರೀಡಾಂಗಣದಲ್ಲಿ ನಡೆದ ಸಮ್ಮೇಳನದಲ್ಲಿ ರಾಹುಲ್ ಗಾಂಧಿ ಹೇಳಿದ್ದನ್ನ ನಾವೆಲ್ಲ ಅನುಸರಿಸೋಣ ಹಾಗೂ ಬೆಂಬಲಿಸೋಣ. ಒಬಿಸಿ ಸಮುದಾಯದ (OBCs Community) ಸದಸ್ಯರು ರಾಹುಲ್ ಗಾಂಧಿ ಅವರನ್ನ ಬೆಂಬಲಿಸಿ ಅನುಸರಿಸಿದ್ರೆ ಅವರು ʻ2ನೇ ಅಂಬೇಡ್ಕರ್ʼ (Ambedkar) ಆಗಬಹುದು. ಅವರು ಹೇಳಿದ ಹಾಗೆ ಮಾಡಿದ್ರೆ 2ನೇ ಅಂಬೇಡ್ಕರ್‌ ಅಂತ ಸಾಬೀತುಮಾಡ್ತಾರೆ ಅಂತ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ: ಯತೀಂದ್ರ ಹೇಳಿಕೆಗೆ ವಿಪಕ್ಷ ನಾಯಕರು ಕೆಂಡ

    ಕೆರಳಿ ಕೆಂಡವಾದ ಬಿಜೆಪಿ
    ಕಾಂಗ್ರೆಸ್‌ ಮುಖಂಡ ಉದಿತ್ ರಾಜ್ ಹೇಳಿಕೆಗೆ ಬಿಜೆಪಿ ಕೆರಳಿ ಕೆಂಡವಾಗಿದೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ To ಮುಂಬೈ – ಮೆದುಳು ಜ್ವರದಿಂದ ಬಳಲುತ್ತಿದ್ದ ಯುವತಿಯ ಏರ್‌ಲಿಫ್ಟ್

    ಅಂಬೇಡ್ಕರ್ ಅವರ ಪರಂಪರೆಯನ್ನು ಕುಂದಿಸಲು ಕಾಂಗ್ರೆಸ್ ಪಿತೂರಿ ನಡೆಸುತ್ತಿದೆ. ಕಾಂಗ್ರೆಸ್ ಈಗ ಮತ್ತೊಬ್ಬ ಅಂಬೇಡ್ಕರ್ ಅವರನ್ನ ಹುಡುಕುವ ಬಗ್ಗೆ ಚಿಂತಿತವಾಗಿದೆ. ಆದ್ರೆ ಈ ಹಿಂದೆ ಅಂಬೇಡ್ಕರ್‌ಗೆ ಕಾಂಗ್ರೆಸ್‌ ಹೇಗೆ ದ್ರೋಹ ಬಗೆದಿದೆ, ಪದೇ ಪದೇ ಅವಮಾನಿಸಿದೆ ಎಂಬುದನ್ನು ಇಡೀ ದೇಶ ಕಂಡಿದೆ. ಇದು ಇತಿಹಾಸದಲ್ಲಿಯೂ ಉಳಿದಿದೆ. ಇತಿಹಾಸ ವೈಫಲ್ಯಗಳನ್ನು ಎಂದಿಗೂ ಮುಚ್ಚಿಸಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.

    ಮುಂದುವರಿದು… ಕಾಂಗ್ರೆಸ್‌ ಕಾಂಗ್ರೆಸ್ ಇನ್ನೊಬ್ಬ ನೆಹರೂ ರನ್ನ ಏಕೆ ಹುಡುಕುತ್ತಿಲ್ಲ? ಏಕೆಂದ್ರೆ ಅಂಬೇಡ್ಕರ್‌ ಅವರ ಪರಂಪರೆ ಮತ್ತು ಶ್ರೇಷ್ಠತೆಯನ್ನ ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ 10 ವರ್ಷ ಸಿಎಂ ಆಗ್ಬಿಟ್ರೆ ತಾಯಿ ಚಾಮುಂಡಿಗಿಂತ ದೊಡ್ಡವರಾಗಿಬಿಡ್ತಾರೆ: ಪ್ರತಾಪ್‌ ಸಿಂಹ ಕಿಡಿ

  • ಈ ಬಾರಿ ದಲಿತ ವ್ಯಕ್ತಿಯನ್ನು ಬಾಹ್ಯಾಕಾಶಕ್ಕೆ ಕಳಿಸಬೇಕಿತ್ತು : ಕಾಂಗ್ರೆಸ್ ನಾಯಕ ಉದಿತ್ ರಾಜ್

    ಈ ಬಾರಿ ದಲಿತ ವ್ಯಕ್ತಿಯನ್ನು ಬಾಹ್ಯಾಕಾಶಕ್ಕೆ ಕಳಿಸಬೇಕಿತ್ತು : ಕಾಂಗ್ರೆಸ್ ನಾಯಕ ಉದಿತ್ ರಾಜ್

    ನವದೆಹಲಿ: ಆಕ್ಸಿಯಮ್-4 (Axiom-4) ಬಾಹ್ಯಾಕಾಶ ಯಾತ್ರೆಗೆ ದಲಿತ ವ್ಯಕ್ತಿಯನ್ನು ಏಕೆ ಆಯ್ಕೆ ಮಾಡಿಲ್ಲ? ಈ ಬಾರಿ ದಲಿತ ವ್ಯಕ್ತಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸಬಹುದಿತ್ತು ಎಂದು ಕಾಂಗ್ರೆಸ್ (Congress) ನಾಯಕ ಉದಿತ್ ರಾಜ್ (Udit Raj) ಹೇಳಿದ್ದಾರೆ.

    ಈ ಹೇಳಿಕೆಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಅವರು ವೈಜ್ಞಾನಿಕ ಸಾಧನೆಯನ್ನೂ ಸಹ ರಾಜಕೀಯಗೊಳಿಸುತ್ತಿದ್ದಾರೆ ಎಂದು ನೆಟ್ಟಿಗರು ಟೀಕಿಸಿದ್ದಾರೆ. ಇದನ್ನೂ ಓದಿ: ಬಾಹ್ಯಾಕಾಶದಿಂದ ಮರಳಿದ ಶುಭಾಂಶು ಶುಕ್ಲಾ – ಮಗನನ್ನು ಕಂಡು ಪೋಷಕರು ಭಾವುಕ

    ಆಕ್ಸಿಯಮ್-4 ಬಾಹ್ಯಾಕಾಶ ಯಾತ್ರೆಗೆ ಹೋಗಿ ಶುಭಾಂಶು ಶುಕ್ಲಾ (Shubhanshu Shukla) ವಾಪಸ್‌ ಆಗಿದ್ದಾರೆ. ಈ ಹೊತ್ತಲ್ಲಿ ಕ್ಯಾಪ್ಟನ್ ಶುಕ್ಲಾ ಬದಲಿಗೆ ದಲಿತ ಅಭ್ಯರ್ಥಿಯನ್ನು ಏಕೆ ಆಯ್ಕೆ ಮಾಡಲಾಗಿಲ್ಲ ಎಂದು ಅವರು ಪ್ರಶ್ನೆ ಎತ್ತಿದ್ದಾರೆ. ಇದರಿಂದ ‘ಅರ್ಹತೆ ಮತ್ತು ಮೀಸಲಾತಿ’ ಬಗೆಗಿನ ಚರ್ಚೆ ಆರಂಭಗೊಂಡಿದೆ.

    ರಾಕೇಶ್ ಶರ್ಮಾ ಅವರನ್ನು ಮೊದಲ ಬಾರಿಗೆ ಬಾಹ್ಯಾಕಾಶಕ್ಕೆ ಕಳುಹಿಸಿದಾಗ, ಎಸ್‌ಸಿ/ಎಸ್‌ಟಿ/ಒಬಿಸಿ ಸಮುದಾಯಗಳಲ್ಲಿ ಹೆಚ್ಚು ವಿದ್ಯಾವಂತ ಜನರು ಇರಲಿಲ್ಲ ಎನ್ನೋಣ ಬಿಡಿ. ಆದರೆ ಈ ಬಾರಿ, ಈ ಸಮುದಾಯಗಳಿಂದ ಯಾರನ್ನಾದರೂ ಕಳುಹಿಸಬಹುದಿತ್ತು. ಈ ಬಾರಿ, ದಲಿತರನ್ನು ಕಳುಹಿಸುವ ಸರದಿ ಬಂದಿತ್ತು, ನಾಸಾ ಪರೀಕ್ಷೆ ನಡೆಸಿ, ಆಯ್ಕೆ ಮಾಡಿಲ್ಲ. ಶುಕ್ಲಾ ಅವರ ಬದಲಿಗೆ ಯಾವುದೇ ದಲಿತ ಅಥವಾ ಒಬಿಸಿ ವ್ಯಕ್ತಿಯನ್ನು ಕಳುಹಿಸಬಹುದಿತ್ತು ಎಂದಿದ್ದಾರೆ. ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗುತ್ತಿದೆ.

    ಆಕ್ಸಿಯಮ್-4 ಕಾರ್ಯಾಚರಣೆಯ ಭಾಗವಾಗಿ ಐಎಸ್‌ಎಸ್‌ನಲ್ಲಿ 18 ದಿನಗಳ ವಾಸ್ತವ್ಯದ ಬಳಿಕ ಶುಭಾಂಶು ಶುಕ್ಲಾ ವಾಪಸ್‌ ಆಗಿದ್ದಾರೆ. ತಮ್ಮ 17 ದಿನಗಳ ವಾಸ್ತವ್ಯದ ಅವಧಿಯಲ್ಲಿ ಗಗನಯಾತ್ರಿಗಳು 60 ಕ್ಕೂ ಹೆಚ್ಚು ವೈಜ್ಞಾನಿಕ ಪ್ರಯೋಗಗಳನ್ನು ನಡೆಸಿದ್ದಾರೆ. ಇದು ಅಂತರರಾಷ್ಟ್ರೀಯ ಸಂಶೋಧನಾ ಪ್ರಯತ್ನಗಳಿಗೆ ಅಮೂಲ್ಯವಾದ ಡೇಟಾವನ್ನು ಕೊಡುಗೆ ನೀಡಿದೆ. ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸ್-4ನ ಸದಸ್ಯರಾದ ಕಮಾಂಡರ್ ಪೆಗ್ಗಿ ವಿಟ್ಸನ್ (ಯುಎಸ್ಎ), ಮಿಷನ್ ಸ್ಪೆಷಲಿಸ್ಟ್ ಸಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ (ಪೋಲೆಂಡ್) ಮತ್ತು ಟಿಬೋರ್ ಕಾಪು (ಹಂಗೇರಿ) ಭೂಮಿಗೆ ವಾಪಸ್‌ ಆಗಿದ್ದಾರೆ.

    2019 ರಲ್ಲಿ ಟಿಕೆಟ್ ನಿರಾಕರಿಸಲ್ಪಟ್ಟ ನಂತರ ಬಿಜೆಪಿಯನ್ನು ತೊರೆದು ಉದಿತ್‌ ರಾಜ್ ಕಾಂಗ್ರೆಸ್ ಸೇರಿದ್ದರು. ಇದನ್ನೂ ಓದಿ: ಭೂಮಿಗೆ ವಾಪಸ್‌ ಆದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿ ಸ್ವಾಗತ

  • ರಾಷ್ಟ್ರಪತಿ ಮುರ್ಮುಗೆ ಚಮಚಾಗಿರಿ ಎಂದ ಕಾಂಗ್ರೆಸ್ ನಾಯಕ

    ರಾಷ್ಟ್ರಪತಿ ಮುರ್ಮುಗೆ ಚಮಚಾಗಿರಿ ಎಂದ ಕಾಂಗ್ರೆಸ್ ನಾಯಕ

    ನವದೆಹಲಿ: ದ್ರೌಪದಿ ಮುರ್ಮು ಅವರಂಥಹ ರಾಷ್ಟ್ರಪತಿಯನ್ನು ಯಾವ ದೇಶವೂ ಹೊಂದಬಾರದು. ಚಮಚಾಗಿರಿಗೂ ಒಂದು ಮಿತಿ ಇದೆ ಎಂದು ಕಾಂಗ್ರೆಸ್ ನಾಯಕ, ಲೋಕಸಭಾ ಮಾಜಿ ಸಂಸದ ಡಾ. ಉದಿತ್ ರಾಜ್ ಟೀಕಿಸಿದ್ದಾರೆ.

    ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಬಗ್ಗೆ ಕಾಂಗ್ರೆಸ್ (Congress) ನಾಯಕರ ಅವಹೇಳನ ಮುಂದುವರಿದಿದೆ. ಕಾಂಗ್ರೆಸ್ ನಾಯಕ, ಲೋಕಸಭಾ ಮಾಜಿ ಸಂಸದ ಡಾ. ಉದಿತ್ ರಾಜ್ (Udit Raj) ಟ್ವೀಟ್ ಮಾಡಿ ರಾಷ್ಟ್ರಪತಿ ಮುರ್ಮುಗೆ ಚಮಚಾಗಿರಿ ಎಂದು ಹೇಳಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ದ್ರೌಪದಿ ಮುರ್ಮು ಅವರಂಥಹ ರಾಷ್ಟ್ರಪತಿಯನ್ನು ಯಾವ ದೇಶವೂ ಹೊಂದಬಾರದು. ಚಮಚಾಗಿರಿಗೂ ಒಂದು ಮಿತಿ ಇದೆ. ಶೇ.70ರಷ್ಟು ಜನ ಗುಜರಾತ್‍ನಿಂದ ತಯಾರಾಗುವ ಉಪ್ಪನ್ನು ತಿಂತಾರೆ ಅನ್ನೋ ಮಾತಿದೆ. ಹಾಗಂತ, ಉಪ್ಪನ್ನೇ ತಿಂದು ಬದುಕೋಕೆ ಆಗುತ್ತಾ..? ಅಂತ ಟೀಕಿಸಿ ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ಬಿಜೆಪಿ ಸರ್ಕಾರ ದಲಿತರ ವಿರೋಧಿ, ದ್ವೇಷ ಹಬ್ಬಿಸುವ ಸರ್ಕಾರ: ರಾಹುಲ್ ಗಾಂಧಿ

    Congress

    ಇದಕ್ಕೆ ಬಿಜೆಪಿಗರು (BJP) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರ ಹೇಳಿಕೆ ಆಘಾತಕಾರಿ, ದುರಾದೃಷ್ಟ ಅಂತ ಬಿಜೆಪಿ ವಕ್ತಾರ ಸಂಬೀತ್ ಪಾತ್ರ ಕಿಡಿಕಾರಿದರು. ಅಧೀರ್ ರಂಜನ್ ಚೌಧರಿ ಕೂಡ ರಾಷ್ಟ್ರಪತ್ನಿ ಅಂತ ಟೀಕಿಸಿದ್ದರು. ಇದು ಕಾಂಗ್ರೆಸಿಗರ ಬುಡಕಟ್ಟು ಜನರ ವಿರೋಧಿಗಳ ಮನಸ್ಥಿತಿ ತೋರುತ್ತದೆ ಅಂತ ಸಂಬೀತ್ ವಾಗ್ದಾಳಿ ನಡೆಸಿದ್ದರು.

    bjP

    ತಕ್ಷಣವೇ ಕ್ಷಮೆಯಾಚಿಸಬೇಕು ಅಂತ ರಾಷ್ಟ್ರೀಯ ಮಹಿಳಾ ಆಯೋಗ ಕೂಡ ಉದಿತ್ ರಾಜ್‍ಗೆ ನೊಟೀಸ್ ಕಳಿಸಿದೆ. ಟೀಕೆಗಳು ಹೆಚ್ಚಾದ ಬೆನ್ನಲ್ಲೇ ಇವತ್ತು ಮತ್ತೆ ಟ್ವೀಟ್ ಮೂಲಕ ಸ್ಪಷ್ಟನೆ ಕೊಟ್ಟಿರುವ ಉದಿತ್ ರಾಜ್, ಇದು ನನ್ನ ವೈಯಕ್ತಿಕ ಅಭಿಪ್ರಾಯ. ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ್ದಲ್ಲ. ಮುರ್ಮು ಅವರು ಆದಿವಾಸಿ ಹೆಸರಿನಲ್ಲಿ ಬಂದಿದ್ದಾರೆ. ಆದರೆ, ಅವರು ದೀರ್ಘಕಾಲ ಆದಿವಾಸಿಯಾಗಿ ಉಳಿಯಲ್ಲ. ಎಸ್‍ಸಿ/ ಎಸ್‍ಟಿಗಳು ಉನ್ನತ ಸ್ಥಾನಮಾನ ಅಲಂಕರಿಸಿದ ಬಳಿಕ ತಮ್ಮ ಸಮುದಾಯದ ಬಗ್ಗೆ ಕಿವುಡರು, ಮೂಗರಾಗಿರುತ್ತಾರೆ. ಈ ಬಗ್ಗೆ ನನ್ನ ಹೃದಯ ಹಿಂಡುತ್ತದೆ ಅಂತ ಉದಿತ್ ರಾಜ್ ಸಮಜಾಯಿಷಿ ಕೊಟ್ಟಿದ್ದಾರೆ. ಇದನ್ನೂ ಓದಿ: ಬಿಜೆಪಿ ಸರ್ಕಾರ ದಲಿತರ ವಿರೋಧಿ, ದ್ವೇಷ ಹಬ್ಬಿಸುವ ಸರ್ಕಾರ: ರಾಹುಲ್ ಗಾಂಧಿ

    Live Tv
    [brid partner=56869869 player=32851 video=960834 autoplay=true]

  • ಅಮೆರಿಕದಲ್ಲಿ ಇವಿಎಂನಿಂದ ಚುನಾವಣೆ ನಡೆದಿದ್ರೆ ಟ್ರಂಪ್ ಸೋಲ್ತಿದ್ರಾ- ಕಾಂಗ್ರೆಸ್ ನಾಯಕ ಪ್ರಶ್ನೆ

    ಅಮೆರಿಕದಲ್ಲಿ ಇವಿಎಂನಿಂದ ಚುನಾವಣೆ ನಡೆದಿದ್ರೆ ಟ್ರಂಪ್ ಸೋಲ್ತಿದ್ರಾ- ಕಾಂಗ್ರೆಸ್ ನಾಯಕ ಪ್ರಶ್ನೆ

    ನವದೆಹಲಿ: ಸದಾ ವಿವಾದಾತ್ಮಕ ಟ್ವೀಟ್‍ಗಳಿಂದ ಹೆಚ್ಚು ಚರ್ಚೆ ಗ್ರಾಸವಾಗುವ ಕಾಂಗ್ರೆಸ್ ನಾಯಕ ಉದಿತ್ ರಾಜ್ ಈ ಬಾರಿಯೂ ಇವಿಎಂ ಬಗ್ಗೆ ಸಂಶಯ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

    ಇವಿಎಂ ಕುರಿತು ಟ್ವೀಟ್ ಮಾಡಿ ಸಂಶಯ ವ್ಯಕ್ತಪಡಿಸಿರುವ ಅವರು, ಅಮೆರಿಕದಲ್ಲಿ ಇವಿಎಂ ಮೂಲಕ ಚುನಾವಣೆ ನಡೆದಿದ್ದರೆ ಡೊನಾಲ್ಡ್ ಟ್ರಂಪ್ ಸೋಲುತ್ತಿದ್ದರೇ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. ಜಾಲತಾಣಗಳಲ್ಲಿ ಈ ಕುರಿತು ಇದೀಗ ಭಾರೀ ಚರ್ಚೆ ನಡೆಯುತ್ತಿದ್ದು, ಉದಿತ್ ರಾಜ್ ಅವರನ್ನು ಜನ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಕಮೆಂಟ್ ಮಾಡುತ್ತಿದ್ದಾರೆ.

    ಈ ಕುರಿತು ದಿಗ್ವಿಜಯ್ ಸಿಂಗ್ ಸಹ ಪ್ರತಿಕ್ರಿಯಿಸಿದ್ದು, ಇವಿಎಂಗಳನ್ನು ಟ್ಯಾಂಪರ್ ಪ್ರೋಫ್ ಮಾಡಲಾಗಿಲ್ಲ, ಆಯ್ದ ಕೆಲವನ್ನು ಮಾತ್ರ ಮಾಡಲಾಗಿದೆ. ಎಂತಹ ಪರಿಸ್ಥಿತಿಯಲ್ಲಿಯೂ ನಾವು ಕಳೆದುಕೊಳ್ಳಲಾರದ ಸ್ಥಾನಗಳನ್ನು ಸಾವಿರಾರು ಮತಗಳ ಅಂತರದಿಂದ ಸೋತಿದ್ದೇವೆ. ಈ ಕುರಿತು ಚರ್ಚಿಸಲು ನಾಳೆ ಸಭೆ ಕರೆಯಲಾಗಿದೆ. ಫಲಿತಾಂಶದ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

    ಕಾಂಗ್ರೆಸ್ ನಾಯಕ ಉದಿತ್ ರಾಜ್ ಅವರು ಇವಿಎಂ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದಿನ ಚುನಾವಣೆಯಲ್ಲಿ ಇವಿಎಂ ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶವನ್ನು ಅನುಮಾನಿಸಿ ಹೇಳಿಕೆ ನೀಡಿದ್ದರು. ಚುನಾವಣಾ ಅಕ್ರಮದಲ್ಲಿ ಸುಪ್ರೀಂ ಕೋರ್ಟ್ ಕೂಡ ಭಾಗಿಯಾಗಿದೆಯೇ ಎಂದು ಪ್ರಶ್ನಿಸಿ ಉದಿತ್ ರಾಜ್ ವಿವಾದಕ್ಕೆ ಗುರಿಯಾಗಿದ್ದರು.

    ಆಗ ಸಹ ಟ್ವೀಟ್ ಮಾಡುವ ಮೂಲಕ ದೂರಿದ್ದರು. ಸುಪ್ರೀಂಕೋರ್ಟ್ ಕೂಡ ಚುನಾವಣೆ ಅಕ್ರಮದಲ್ಲಿ ಭಾಗಿಯಾಗಿದೆ. ಎಲ್ಲ ಇವಿಎಂಗಳ ವಿವಿಪ್ಯಾಟ್‍ಗಳ ಸ್ಲಿಪ್‍ಗಳನ್ನು ಎಣಿಕೆ ಮಾಡಬೇಕೆಂಬ ವಿರೋಧ ಪಕ್ಷಗಳ ಮನವಿಯನ್ನು ತಿರಸ್ಕರಿಸಿದ್ದು ಯಾಕೆ? ಚುನಾವಣಾ ಅಕ್ರಮದಲ್ಲಿ ಸುಪ್ರೀಂ ಕೋರ್ಟ್ ಸಹ ಭಾಗಿಯಾಗಿದ್ಯಾ ಎಂದು ಪ್ರಶ್ನಿಸಿದ್ದರು.

    ಉದಿತ್ ರಾಜ್ ಅವರು ತಮ್ಮ ಇಂಡಿಯನ್ ಜಸ್ಟಿಸ್ ಪಾರ್ಟಿ (ಐಜೆಪಿ)ಯನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದ್ದರು. ಈ ಮೂಲಕ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು. ಆದರೆ ಕಳೆದ ಬಾರಿಯ ಚುನಾವಣೆಯಲ್ಲಿ ಪಕ್ಷ ಅವರಿಗೆ ಟಿಕೆಟ್ ನೀಡಲಿಲ್ಲ. ಬದಲಾಗಿ ಪಂಜಾಬ್‍ನ ಜನಪದ ಹಾಗೂ ಸೂಫಿ ಗಾಯಕ ಹನ್ಸ್ ರಾಜ್ ಹಸ್ಸ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದಾಗಿ ಅಸಮಾಧಾನ ಹೊರ ಹಾಕಿದ ಉದಿತ್ ರಾಜ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

  • ಕುಂಭ ಮೇಳಕ್ಕೆ ಹಣ ನೀಡುವುದನ್ನು ನಿಲ್ಲಿಸಬೇಕು – ಕಾಂಗ್ರೆಸ್‌ ನಾಯಕ ಉದಿತ್‌ ರಾಜ್‌

    ಕುಂಭ ಮೇಳಕ್ಕೆ ಹಣ ನೀಡುವುದನ್ನು ನಿಲ್ಲಿಸಬೇಕು – ಕಾಂಗ್ರೆಸ್‌ ನಾಯಕ ಉದಿತ್‌ ರಾಜ್‌

    ನವದೆಹಲಿ: ಉತ್ತರ ಪ್ರದೇಶದಲ್ಲಿ ನಡೆಯಲಿರುವ ಕುಂಭ ಮೇಳ ವಿಷಯದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಉದಿತ್ ರಾಜ್ ವಿವಾದದ ಕಿಡಿ ಹೊತ್ತಿಸಿದ್ದಾರೆ.

    ಉತ್ತರ ಪ್ರದೇಶ ಸರ್ಕಾರ 4200 ಕೋಟಿ ವೆಚ್ಚದಲ್ಲಿ ಕುಂಭಮೇಳ ಮಾಡಲು ತಯಾರಿ ನಡೆಸಿದೆ. ಧರ್ಮಾಧಾರಿತವಾಗಿ ನಡೆಯುವ ಯಾವುದೇ ಕಾರ್ಯಕ್ರಮಗಳಿಗೆ ಸರ್ಕಾರ ಹಣ ನೀಡಬಾರದು. ಇದನ್ನು ನಿಲ್ಲಿಸಬೇಕು ಎಂದು ಟ್ವೀಟ್ ಮಾಡಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.

    ತಕ್ಷಣವೇ ಈ ಟ್ವೀಟ್ ಡಿಲಿಟ್ ಮಾಡಿದ್ದ ಉದಿತ್ ರಾಜ್, ನಂತರ ಸ್ಪಷ್ಟನೆ ಕೊಟ್ಟು ಪ್ರತಿಬಾರಿ ನಾನು ಟ್ವೀಟ್ ಮಾಡುವಾಗ ಐಎನ್‍ಸಿಗೆ ಟ್ಯಾಗ್ ಮಾಡ್ತೇನೆ. ಇದು ನನ್ನ ವೈಯಕ್ತಿಯ ಅಭಿಪ್ರಾಯವೇ ಹೊರತು ಕಾಂಗ್ರೆಸ್ ಪಕ್ಷದ್ದಲ್ಲ ಎಂದು ತಿಳಿಸಿದರು.

    ಖಜಾನೆಗೆ ಹೊರೆಯಾಗಲಿದೆ ಅಂತ ಅಸ್ಸಾಂನಲ್ಲಿ ಕುರಾನ್ ಮತ್ತು ಸಂಸ್ಕೃತ ಶಾಲೆಗೆ ಅನುದಾನ ನೀಡುವುದನ್ನು ನಿಲ್ಲಿಸುತ್ತೇವೆ ಎಂದು ಶಿಕ್ಷಣ ಸಚಿವ ಹಿಮಾಂಶ ಬಿಸ್ವಾಸ್ ಶರ್ಮಾ ಹೇಳಿಕೆ ನೀಡಿದ ಬೆನ್ನಲ್ಲೇ ಉದಿತ್ ರಾಜ್ ಈ ಟ್ವೀಟ್ ಮಾಡಿದ್ದರು.

    ಕಾಂಗ್ರೆಸ್ ನಾಯಕನ ವಿರುದ್ಧ ಕೇಂದ್ರ ಸಚಿವರು ಕಿಡಿಕಾರಿದ್ದಾರೆ. ಕುಂಭ ಮೇಳ ಜಾಗತಿಕ ಕಾರ್ಯಕ್ರಮ. ಪ್ರಪಂಚದ ಮೂಲೆ ಮೂಲೆಗಳಿಂದಲೂ ಲಕ್ಷಾಂತರ ಭಕ್ತರು ಬರ್ತಾರೆ ಅಂತ ಉತ್ತರ ಪ್ರದೇಶದ ಸಚಿವ ಬ್ರಿಜೇಶ್ ಪಾಠಕ್ ತಿರುಗೇಟು ಕೊಟ್ಟಿದ್ದಾರೆ.

    ಕೆಲವು ನಾಯಕರಿಗೆ ಐಡಿಯಾನೇ ಇಲ್ಲ, ಅಭಿವೃದ್ಧಿಯೇ ಬೇಕಿಲ್ಲ ಅಂತ ಅನುರಾಗ್ ಠಾಕೂರ್ ಹೇಳಿದ್ದಾರೆ. ಅಲ್ಲದೆ, ಕಳೆದ ಬಾರಿ ಬಸ್‍ಗಳನ್ನು ಕಳಿಸಿಕೊಟ್ಟಿದ್ದ ಪ್ರಿಯಾಂಕಾ ಗಾಂಧಿ, ಈಗ ಸ್ಪಷ್ಟನೆ ಕೊಡ್ಬೇಕು ಅಂತ ಆಗ್ರಹಿಸಿದ್ದಾರೆ. ಮಹಾಕುಂಭ ಮೇಳಕ್ಕೆ 2013ರಲ್ಲಿ 1300 ಕೋಟಿ ರೂ. ಅನುದಾನ ನೀಡಲಾಗಿತ್ತು.

  • ಚುನಾವಣಾ ಅಕ್ರಮದಲ್ಲಿ ಸುಪ್ರೀಂ ಕೂಡ ಭಾಗಿಯೇ: ಕೈ ನಾಯಕ ಉದಿತ್ ರಾಜ್ ಪ್ರಶ್ನೆ

    ಚುನಾವಣಾ ಅಕ್ರಮದಲ್ಲಿ ಸುಪ್ರೀಂ ಕೂಡ ಭಾಗಿಯೇ: ಕೈ ನಾಯಕ ಉದಿತ್ ರಾಜ್ ಪ್ರಶ್ನೆ

    ನವದೆಹಲಿ: ಚುನಾವಣಾ ಅಕ್ರಮದಲ್ಲಿ ಸುಪ್ರೀಂ ಕೋರ್ಟ್ ಕೂಡ ಭಾಗಿಯಾಗಿದೆಯೇ ಎಂದು ಕಾಂಗ್ರೆಸ್ ಮುಖಂಡ ಉದಿತ್ ರಾಜ್ ಪ್ರಶ್ನಿಸಿ ವಿವಾದಕ್ಕೆ ಗುರಿಯಾಗಿದ್ದಾರೆ.

    ಟ್ವೀಟ್ ಮೂಲಕ ದೂರಿರುವ ಉದಿತ್ ರಾಜ್ ಅವರು, ಸುಪ್ರೀಂಕೋರ್ಟ್ ಕೂಡ ಚುನಾವಣೆ ಅಕ್ರಮದಲ್ಲಿ ಭಾಗಿಯಾಗಿದೆ. ಎಲ್ಲ ಇವಿಎಂಗಳ ವಿವಿಪ್ಯಾಟ್‍ಗಳ ಸ್ಲಿಪ್‍ಗಳನ್ನು ಎಣಿಕೆ ಮಾಡಬೇಕೆಂಬ ವಿರೋಧ ಪಕ್ಷಗಳ ಮನವಿಯನ್ನು ತಿರಸ್ಕರಿಸಿದ್ದು ಯಾಕೆ? ಚುನಾವಣಾ ಅಕ್ರಮದಲ್ಲಿ ಸುಪ್ರೀಂ ಕೋರ್ಟ್ ಸಹ ಭಾಗಿಯಾಗಿದ್ಯಾ ಎಂದು ಪ್ರಶ್ನಿಸಿದ್ದಾರೆ.

    ಉದಿತ್ ರಾಜ್ ಅವರು ತಮ್ಮ ಇಂಡಿಯನ್ ಜಸ್ಟಿಸ್ ಪಾರ್ಟಿ (ಐಜೆಪಿ)ಯನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದ್ದರು. ಈ ಮೂಲಕ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು. ಆದರೆ ಈ ಬಾರಿ ಅವರಿಗೆ ಪಕ್ಷ ಟಿಕೆಟ್ ನೀಡಿಲ್ಲ. ಬದಲಾಗಿ ಪಂಜಾಬ್‍ನ ಜನಪದ ಹಾಗೂ ಸೂಫಿ ಗಾಯಕ ಹನ್ಸ್ ರಾಜ್ ಹಸ್ಸ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದಾಗಿ ಅಸಮಾಧಾನ ಹೊರ ಹಾಕಿದ ಉದಿತ್ ರಾಜ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದರು.

    ಎನ್‍ಡಿಎ ನೇತೃತ್ವದ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಎಕ್ಸಿಟ್ ಪೋಲ್ ಸಮೀಕ್ಷೆಗಳು ತಿಳಿಸಿದ ಬೆನ್ನಲ್ಲೇ ವಿಪಕ್ಷಗಳು ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿವೆ. ಸಂಸದ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿ, ಎಕ್ಸಿಟ್ ಪೋಲ್‍ನಂತೆ ರಾಜ್ಯದಲ್ಲಿ ಎರಡು ಮೂರು ಸೀಟು ಬಂದರೆ ಇವಿಎಂ ಗಡಿಬಿಡಿಯಾಗಿದೆ ಎಂದೇ ಅರ್ಥ. ಮೋದಿ ಮೊದಲಿನಿಂದಲೂ ಕಾಂಗ್ರೆಸ್ 40 ಸೀಟು ದಾಟಲ್ಲ ಎಂದು ಹೇಳುತ್ತಿದ್ದಾರೆ. ಹೇಗೆ ಹೇಳಿದ್ದಾರೆ ಎಂದು ಗೊತ್ತಿಲ್ಲ. ಮೋದಿ ಯಾವುದನ್ನ ದುರುಪಯೋಗ ಮಾಡಿಕೊಂಡು ಹೇಳಿದ್ದಾರೋ ಗೊತ್ತಿಲ್ಲ. ಇದರಲ್ಲಿ ಏನಾದರೂ ಗೋಲ್ ಮಾಲ್ ಇದೆ ಎಂದು ಅನಿಸುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

  • ಕಾಂಗ್ರೆಸ್ ಸೇರಿದ ಬಿಜೆಪಿ ಹಾಲಿ ಸಂಸದ

    ಕಾಂಗ್ರೆಸ್ ಸೇರಿದ ಬಿಜೆಪಿ ಹಾಲಿ ಸಂಸದ

    ನವದೆಹಲಿ: ಸಂಸದ ಉದಿತ್ ರಾಜ್ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಅಧಿಕೃತವಾಗಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

    ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಉದಿತ್ ರಾಜ್ ಕಾಂಗ್ರೆಸ್ ಸೇರಿದ್ದಾರೆ. ಉದಿತ್ ರಾಜ್ ಅವರು ದೆಹಲಿಯ ವಾಯುವ್ಯ ಲೋಕಸಭಾ ಕ್ಷೇತ್ರದ ಬಿಜೆಪಿಯ ಸಂಸದರಾಗಿದ್ದು ಈ ಬಾರಿ ಅವರಿಗೆ ಪಕ್ಷ ಟಿಕೆಟ್ ನೀಡಿಲ್ಲ. ಹೀಗಾಗಿ ಕಾಂಗ್ರೆಸ್ ಮನೆ ಸೇರಿದ್ದಾರೆ.

    ದೆಹಲಿಯ ವಾಯುವ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪಂಜಾಬ್‍ನ ಜನಪದ ಹಾಗೂ ಸೂಫಿ ಗಾಯಕ ಹನ್ಸ್ ರಾಜ್ ಹಸ್ಸ್ ಕಣಕ್ಕೆ ಇಳಿದಿದ್ದಾರೆ. ದೆಹಲಿ ಲೋಕಸಭಾ ಕ್ಷೇತ್ರಗಳ ಮತದಾನವು ಮೇ 12ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಸಲು ನಿನ್ನೆ ಕೊನೆಯ ದಿನವಾಗಿತ್ತು.

    ಟಿಕೆಟ್ ತಪ್ಪಿದ್ದರಿಂದ ಅಸಮಾಧಾನ ಹೊರ ಹಾಕಿದ್ದ ಉದಿತ್ ರಾಜ್ ಅವರು, ದೆಹಲಿಯ ಸಂಸದರ ಪೈಕಿ ನಾನು ಉತ್ತಮ ಕೆಲಸ ಮಾಡಿದ್ದೇನೆ. ನಾನು ದೇಶಾದ್ಯಂತ ಬಿಜೆಪಿಯಲ್ಲಿರುವ ಏಕೈಕ ದಲಿತ ನಾಯಕ. ಯಾಕೆ ಹೀಗೆ ನನ್ನನ್ನು ಕಡೆಗಣಿಸುತ್ತಿದ್ದಾರೆಂದು ಅರ್ಥವಾಗುತ್ತಿಲ್ಲ ಎಂದು ದೂರಿದ್ದರು.

    ಉದಿತ್ ರಾಜ್ ಅವರು ತಮ್ಮ ಇಂಡಿಯನ್ ಜಸ್ಟಿಸ್ ಪಾರ್ಟಿಯನ್ನು (ಐಜೆಪಿ) ವಿಲೀನಗೊಳಿಸಿದ್ದರು. ಈ ಮೂಲಕ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು.