Tag: Udupi Rains

  • ಫೆಂಗಲ್ ಚಂಡಮಾರುತಕ್ಕೆ ಉಡುಪಿಯಲ್ಲಿ ಭಾರಿ ಮಳೆ – ಹಲವೆಡೆ ವಿದ್ಯುತ್ ವ್ಯತ್ಯಯ

    ಫೆಂಗಲ್ ಚಂಡಮಾರುತಕ್ಕೆ ಉಡುಪಿಯಲ್ಲಿ ಭಾರಿ ಮಳೆ – ಹಲವೆಡೆ ವಿದ್ಯುತ್ ವ್ಯತ್ಯಯ

    – ಸಿಡಿಲು ಬಡಿದು ಮನೆಗೆ ಹಾನಿ

    ಉಡುಪಿ: ಫೆಂಗಲ್ ಚಂಡಮಾರುತದಿಂದ ಉಡುಪಿ ಜಿಲ್ಲೆಯಲ್ಲಿ ಅಕಾಲಿಕ ಮಳೆ ಸುರಿಯುತ್ತಿದೆ. ಜಿಲ್ಲೆಯಾದ್ಯಂತ ಕತ್ತಲು ಆವರಿಸಿದೆ. ಸೋಮವಾರ ಸಂಜೆಯಿಂದ ನಿರಂತರವಾಗಿ ಮಳೆ ಆಗುತ್ತಿದ್ದು, ಶಾಲಾ ಕಾಲೇಜಿಗೆ ರಜೆ ನೀಡಲಾಗಿದೆ.

    ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ವಿಸ್ತರಿಸಲಾಗಿದೆ. ಭಾರೀ ಮೋಡ ಮುಸುಕಿದ ವಾತಾವರಣ ಇರೋದರಿಂದ ಮಂಗಳವಾರವೂ ದಿನಪೂರ್ತಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ.

    ಉಡುಪಿಯಲ್ಲಿ ಕಳೆದ ರಾತ್ರಿಯ ಗಾಳಿ ಮಳೆಗೆ ಹಲವೆಡೆ ವಿದ್ಯುತ್ ವ್ಯತ್ಯಯ ಆಗಿದೆ. ಸುಮಾರು ಮೂರು ಗಂಟೆಗಳ ಕಾಲ ಸುರಿದಿದ್ದ ಧಾರಾಕಾರ ಮಳೆಗೆ ಇಂದು ಜಿಲ್ಲೆಯಾದ್ಯಂತ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮೋಡ ಮುಸುಕಿದ ವಾತಾವರಣ, ಮಳೆ ಮುಂದುವರೆಯುವ ಸಾಧ್ಯತೆ ಇದೆ. ಕಡಲಿಗಿಳಿಯದಂತೆ ಮೀನುಗಾರರಿಗೆ ಕಟ್ಟೆಚ್ಚರ ರವಾನಿಸಲಾಗಿದೆ.

    ಉಡುಪಿಯಲ್ಲಿ ಸೋಮವಾರ ರಾತ್ರಿ ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಬ್ರಹ್ಮಾವರದಲ್ಲಿ ಸಿಡಿಲು ಬಡಿದು ಮನೆಗೆ ಹಾನಿಯಾಗಿದೆ. ನೀಲಾವರದ ರಾಧಾ ಶೆಡ್ತಿಯವರ ಮನೆಗೆ ಸಿಡಿಲು ಬಡಿದಿದೆ. ವಿದ್ಯುತ್ ಉಪಕರಣ, ಪರಿಕರಗಳಿಗೆ ಹಾನಿಯಾಗಿದೆ.

  • ಉಡುಪಿ: ಹೂಕೋಸಿನೊಳಗೆ ಹಾವು ಕಂಡು ಹೌಹಾರಿದ ಮನೆಮಂದಿ!

    ಉಡುಪಿ: ಹೂಕೋಸಿನೊಳಗೆ ಹಾವು ಕಂಡು ಹೌಹಾರಿದ ಮನೆಮಂದಿ!

    ಉಡುಪಿ: ಮಳೆಗಾಲದಿಂದಾಗಿ ಹಾವು (Snake), ವಿಷ ಜಂತುಗಳು ಪ್ರತ್ಯಕ್ಷವಾಗತೊಡಗಿದೆ. ಬೆಚ್ಚನೆಯ ಸ್ಥಳ ಅರಸಿ ಬರುವ ಹಾವುಗಳು ಕಾರು ಮತ್ತು ಬೈಕ್‌ಗಳ ಆಸನದ ಕೆಳ ಭಾಗ, ಹೆಲ್ಮೆಟ್‌, ಶೂ ಒಳ ಭಾಗದಲ್ಲಿ ಅವಿತುಕೊಳ್ಳುವ ಸಾಧ್ಯತೆಗಳೂ ಇವೆ. ಹಾಗಾಗಿ ಮಳೆಗಾಲದಲ್ಲಿ (Rainy Season) ಹಾವು, ವಿಷಜಂತುಗಳ ಬಗ್ಗೆ ಬಹಳಷ್ಟು ಎಚ್ಚರಿಕೆ ವಹಿಸುವ ಅಗತ್ಯವೂ ಅಷ್ಟೇ ಇದೆ.

    ಫ್ರಿಡ್ಜ್‌ನೊಳಗೆ ಇಟ್ಟಿದ್ದ ಹೂಕೋಸಿನೊಳಗೆ (Cauliflower) ಹಾವಿನ ಮರಿ ಕಂಡು ಮನೆಮಂದಿ ಹೌಹಾರಿದ ಘಟನೆ ಉಡುಪಿಯಲ್ಲಿ ನಡೆದಿದೆ. ಕಾಪು ತಾಲೂಕು ಪಡುಬಿದ್ರೆಯಲ್ಲಿ ಬೇಂಗ್ರೆಯ ಮಹಿಳೆಯೋರ್ವರು ಫ್ರಿಡ್ಜ್ ನಲ್ಲಿ ತರಕಾರಿ ಇಟ್ಟಿದ್ದರು. ಅಡುಗೆ ಮಾಡುವುದಕ್ಕಾಗಿ ಫ್ರಿಡ್ಜ್‌ನಲ್ಲಿಟ್ಟಿದ್ದ ತರಕಾರಿ ತೆಗೆದು ಕತ್ತರಿಸಲು ಮುಂದಾಗಿದ್ದಾರೆ. ಈ ವೇಳೆ ಹೂಕೋಸಿನ ಒಳಭಾಗದಿಂದ ಹಾವಿನ ಮರಿ ಹೊರಗೆ ಬರುವುದನ್ನು ಕಂಡು ಹೌಹಾರಿದ್ದಾರೆ. ಕೈಯಲ್ಲಿದ್ದ ತರಕಾರಿಯನ್ನು ಚೆಲ್ಲಾಪಿಲ್ಲಿಯಾಗಿ ಬಿಟ್ಟು ಹೊರಕ್ಕೆ ಓಡಿದ್ದಾರೆ. ಬಳಿಕ ಉರಗ ತಜ್ಞರು ಹಾವನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಇದು ಮರಿ ಹೆಬ್ಬಾವು ಎಂದು ಉರಗ ತಜ್ಞರು ಗುರುತಿಸಿದ್ದಾರೆ.

    ಕಾಪುವಿನ ಸ್ಥಳೀಯ ಸುರೇಶ್ ಮಾಹಿತಿ ನೀಡಿ, ಮಳೆಗಾಲದಲ್ಲಿ ಹಾವು, ಹುಳಹುಪ್ಪಟೆಗಳು ಮರಿ ಇಡುವ ಸಂದರ್ಭ ಸುರಕ್ಷಿತ ಪ್ರದೇಶವನ್ನು ಅರಸುತ್ತದೆ. ಹೀಗಾಗಿ ಹಾವಿನ ಮರಿ ಹೂಕೋಸಿನ ಒಳಗೆ ಅವಿತುಕೊಂಡಿರಬಹುದು. ತರಕಾರಿ ಖರೀದಿಸುವಾಗ ಮತ್ತು ಬಳಸುವಾಗ ಬಹಳ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಒಳಿತು ಎಂದು ಸಲಹೆ ನೀಡಿದ್ದಾರೆ.

  • ಉಡುಪಿಯಲ್ಲಿ ಆಶ್ಲೇಷ ವರ್ಷಧಾರೆ- ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ವಿಸ್ತರಣೆ

    ಉಡುಪಿಯಲ್ಲಿ ಆಶ್ಲೇಷ ವರ್ಷಧಾರೆ- ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ವಿಸ್ತರಣೆ

    ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಆರಂಭವಾಗಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಬಿಟ್ಟುಬಿಟ್ಟು ಮಳೆ ಸುರಿಯುತ್ತಿದೆ. ಕಾರ್ಮೋಡ ಮುಸುಕಿದ ವಾತಾವರಣ ಇದ್ದು, ಇನ್ನೊಂದು ವಾರ ಮಳೆ ಮುಂದುವರಿಯಬಹುದು. ಆಗಸ್ಟ್ 2 ರಿಂದ ಆಶ್ಲೇಷಾ ನಕ್ಷತ್ರ ಆರಂಭವಾಗಿದೆ. ಆಗಸ್ಟ್ ತಿಂಗಳ ಆರಂಭದಿಂದಲೇ ಅಲ್ಲಲ್ಲಿ ಗಾಳಿ ಜೊತೆ ಮುಂಗಾರು ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಜಿಲ್ಲೆಯಾದ್ಯಂತ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕಾರ್ಕಳ ಮತ್ತು ಹೆಬ್ರಿ ತಾಲೂಕಿನಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಕಳೆದ 24 ಗಂಟೆಯಲ್ಲಿ 30 ಮಿಲಿಮೀಟರ್ ಸರಾಸರಿ ಮಳೆಯಾಗಿದೆ. ಮೇ ಅಂತ್ಯದಲ್ಲಿ, ಜೂನ್ ತಿಂಗಳಲ್ಲಿ ಬಿತ್ತನೆ ಮತ್ತು ನಾಟಿ ಮಾಡಿದ್ದ ರೈತರಿಗೆ ಜುಲೈ ಅಂತ್ಯದ ಸಂದರ್ಭ ಆತಂಕ ಎದುರಾಗಿತ್ತು. ಮುಂಗಾರು ಮಳೆ ಮಾರುತಗಳು ಕ್ಷೀಣಿಸಿದ್ದು ಗದ್ದೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿತ್ತು. ಇದೀಗ ಸಮಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಬೇಸಾಯಗಾರರ ಮೊಗದಲ್ಲಿ ಸಂತಸ ಮೂಡಿದೆ.

    ಪಶ್ಚಿಮಘಟ್ಟದಲ್ಲಿ ವಿಪರೀತ ಮಳೆ ಸುರಿಯುತ್ತಿದ್ದು ಜಿಲ್ಲೆಯ ಎಲ್ಲಾ ನದಿಗಳ ಮಟ್ಟ ಹೆಚ್ಚಿದೆ. ನದಿ ಪಾತ್ರದ ಜನ ಎಚ್ಚರಿಕೆವಹಿಸಿ. ನಾಡದೋಣಿ ಮೀನುಗಾರಿಕೆ ಮಾಡುವವರು ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.