Tag: Udupi Shri Krishna Matha

  • ಉಡುಪಿ ಶ್ರೀಕೃಷ್ಣ ಮಠಕ್ಕೆ ಡಿಕೆಶಿ ಭೇಟಿ – ನಾಡಿನ ಒಳಿತಿಗಾಗಿ ಡಿಸಿಎಂ ಪ್ರಾರ್ಥನೆ

    ಉಡುಪಿ ಶ್ರೀಕೃಷ್ಣ ಮಠಕ್ಕೆ ಡಿಕೆಶಿ ಭೇಟಿ – ನಾಡಿನ ಒಳಿತಿಗಾಗಿ ಡಿಸಿಎಂ ಪ್ರಾರ್ಥನೆ

    ಉಡುಪಿ: ಜಿಲ್ಲಾ ಪ್ರವಾಸದಲ್ಲಿದ್ದ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಂದು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ (Udupi Shri Krishna Matha) ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದು ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠದ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಗಳು ಪ್ರಸಾದ ನೀಡಿ ಆಶೀರ್ವದಿಸಿದರು.

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ (DK Shivakumar), ಕೃಷ್ಣ, ಗಣಪತಿ ಆಶೀರ್ವಾದದ ಜೊತೆಗೆ ನಿಮ್ಮ ಮಾಧ್ಯಮದವರ ಆಶೀರ್ವಾದವೂ ಬೇಕು ಅಂತ ಹಾಸ್ಯ ಚಟಾಕಿ ಹಾರಿಸಿದರು. ಮುಂದುವರಿದು… ಕೃಷ್ಣಮಠದಿಂದ ಈ ಹಿಂದೆಯೇ ಆಹ್ವಾನ ಇತ್ತು. ಬಹಳ ವರ್ಷದಿಂದ ಈ ಸರ್ಕಾರ ಬಂದ್ಮೇಲೆ ಆಹ್ವಾನ ಮಾಡುತ್ತಿದ್ದರು. ಕೃಷ್ಣಮಠಕ್ಕೆ ಬರಲು ಸಾಧ್ಯವಾಗಿರಲಿಲ್ಲ ಇಂದು ಬಂದಿದ್ದೇನೆ ಎಂದರು. ಇದನ್ನೂ ಓದಿ: ಬುರುಡೆ ಕೇಸ್‌ಗೆ ಬೆಂಗಳೂರು ಲಿಂಕ್ – ಚಿನ್ನಯ್ಯ ನನ್ನ ಮನೆಯಲ್ಲಿದ್ದ, ತಲೆಬುರುಡೆ ತಂದಿದ್ದ; ʻಪಬ್ಲಿಕ್ ಟಿವಿʼಗೆ ಜಯಂತ್ ಸ್ಫೋಟಕ ಹೇಳಿಕೆ

    ಇನ್ನೂ ಧರ್ಮಸ್ಥಳದಲ್ಲಿ ಜೆಡಿಎಸ್, ಬಿಜೆಪಿ (BJP – JDS) ಸಮಾವೇಶ ವಿಚಾರ ಕುರಿತು ಮಾತನಾಡಿ, ಜೆಡಿಎಸ್ ಬಿಜೆಪಿಗೆ ಬೇರೆ ವೃತ್ತಿ ಇಲ್ಲ. ಎರಡೂ ಪಕ್ಷಗಳು ಬದುಕಿನ ಬಗ್ಗೆ ನೋಡಲ್ಲ. ಭಾವನೆ ಮೇಲೆ ಧರ್ಮದ ಮೇಲೆ ರಾಜಕಾರಣ ಮಾಡುತ್ತಾರೆ ಎಂದು ನುಡಿದರು. ಇದನ್ನೂ ಓದಿ: ದೇವರ ವಿರುದ್ಧವೇ ಸೇಡು – 10 ವರ್ಷಗಳಿಂದ ದೇವಸ್ಥಾನದ ಹುಂಡಿ ಹಣ ಕದಿಯುತ್ತಿದ್ದ HIV ಸೋಂಕಿತ ಅರೆಸ್ಟ್

    ಬಿಹಾರ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪ್ರಚಾರ ಕುರಿತು ಮಾತನಾಡಿ, ಅದು ಸುಮ್ಮನೆ ಚರ್ಚೆ ನಡೆಯುತ್ತಿದೆ. ನಾನು ಬಿಹಾರ ಹೋಗಿದ್ದೀನಿ ನಾನು ಬಂದಿದ್ದೇನೆ. ಅವರು ಸಚಿವರ ಜೊತೆ ಹೋಗಿದ್ದಾರೆ, ನಾನು ಶಾಸಕರ ಜೊತೆ ಹೋಗಿದ್ದೇನೆ. ಕಾರ್ಯಕರ್ತರು, ಎಂಎಲ್‌ಎ, ಸಚಿವರು ಎಲ್ಲ ಒಂದೇ. ಎಲ್ಲರೂ ಪಕ್ಷದ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌ಗೆ ಬೆಂಗಳೂರಿನ ನಂಟು – ತಿಮರೋಡಿ ಆಪ್ತ ಜಯಂತ್ ಮನೆ ಜಾಲಾಡಿದ SIT

  • 80 ದಿನದ ನಂತರ ಭಕ್ತರಿಗೆ ದರ್ಶನ ಕೊಟ್ಟ ಉಡುಪಿ ಶ್ರೀಕೃಷ್ಣ

    80 ದಿನದ ನಂತರ ಭಕ್ತರಿಗೆ ದರ್ಶನ ಕೊಟ್ಟ ಉಡುಪಿ ಶ್ರೀಕೃಷ್ಣ

    ಉಡುಪಿ: ಕೊರೊನಾ ಲಾಕ್‍ಡೌನ್ ನಂತರ ಬರೋಬ್ಬರಿ 80 ದಿನಗಳ ನಂತರ ಉಡುಪಿ ಶ್ರೀಕೃಷ್ಣ ಭಕ್ತರಿಗೆ ದರ್ಶನ ನೀಡಿದ್ದಾನೆ.

    ಕೊರೊನಾ ಲಾಕ್‍ಡೌನ್ ಸಡಿಲಿಕೆ ನಂತರ ರಾಜ್ಯ ಸರ್ಕಾರ ವಾರದ ಹಿಂದೆ ದೇವಸ್ಥಾನ ಮಠ ಮಂದಿರಗಳನ್ನು ತೆರೆಯಬಹುದು ಎಂದಿತ್ತು. ಈ ಸಂದರ್ಭದಲ್ಲಿ ಉಡುಪಿ ಕೃಷ್ಣಮಠ ಭಕ್ತರಿಗೆ ತೆರೆದಿರಲಿಲ್ಲ. ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಒಂದು ವಾರದ ನಂತರ ಉಡುಪಿ ಕೃಷ್ಣಮಠದಲ್ಲಿ ಭಕ್ತರಿಗೆ ಅವಕಾಶ ನೀಡಲು ಪರ್ಯಾಯವನ್ನು ಅದಮಾರು ಮಠ ತೀರ್ಮಾನಿಸಿದೆ. ಭಾನುವಾರ 2 ಗಂಟೆಯಿಂದ ಸಂಜೆ 6ಗಂಟೆ ತನಕ ಮಠದ ಒಳಗೆ ಭಕ್ತರಿಗೆ ಪ್ರವೇಶ ಮಾಡುವ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಜಿಮ್‍ನಲ್ಲಿ ಜಿದ್ದಿಗೆ ಬಿದ್ದ ಪಾಂಡ್ಯ ಸಹೋದರರು

    ಮಹಾಮಾರಿ ಕೊರೊನಾದ ಎರಡನೇ ಅಲೆಯ ಅಬ್ಬರ ಕಡಿಮೆಯಾಗುತ್ತಿದ್ದಂತೆ, ರಾಜ್ಯ ಸರ್ಕಾರ ಅನ್ಲಾಕ್‍ಗಳನ್ನು ಮಾಡುತ್ತಿದೆ. ಹೊರಜಿಲ್ಲೆಯ ಹೊರರಾಜ್ಯದ ಧಾರ್ಮಿಕ ಪ್ರವಾಸಿಗರು ಇಂದು ರಥಬೀದಿಯಲ್ಲಿ ನೂರಾರು ಸಂಖ್ಯೆಯಲ್ಲಿ ಕಾಣಿಸಿಕೊಂಡರು. ಸರತಿ ಸಾಲಿನಲ್ಲಿ ನಿಂತು ಕಡೆಗೋಲು ಶ್ರೀಕೃಷ್ಣನ ದರ್ಶನ ಮಾಡಿದರು. ಇದನ್ನೂ ಓದಿ: ನನಗೆ ಸ್ವಲ್ಪ ಸಮಯ ಕೊಡಿ, ಸತ್ಯ ಹೊರಗೆ ಬರಲಿದೆ: ದರ್ಶನ್

    ಉಡುಪಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರವಾಗಿ ಬಿಟ್ಟೂಬಿಡದೇ ಮಳೆ ಸುರಿಯುತ್ತಿದೆ. ಮಳೆಯ ನಡುವೆಯೇ ಹೊರ ರಾಜ್ಯದ ಹೊರ ಊರಿನ ಭಕ್ತರು ಬಂದು ಕೃಷ್ಣ ದೇವರ ದರ್ಶನವನ್ನು ಮಾಡಿದರು. ವಿಪರೀತ ಮಳೆ ಸುರಿಯುತ್ತಿರುವುದರಿಂದ ಭಕ್ತರು ರಥಬೀದಿಯಲ್ಲಿ ಓಡಾಟ ಮಾಡಲು ಪರದಾಡಿದರು.

    ಲಾಕೌಡೌನ್ ಆದ ನಂತರ ಉಡುಪಿ ಕೃಷ್ಣ ಮಠ ಓಪನ್ ಆಗಿರಲಿಲ್ಲ. ಇದೀಗ ಮನಸ್ಸಿಗೆ ಬಹಳ ಖುಷಿ, ನೆಮ್ಮದಿ ಆಗುತ್ತಿದೆ. ಬೆಂಗಳೂರಿನಿಂದ ಹೊರಟು ಉಡುಪಿಗೆ ಬರುವತನಕ ನಿರಂತರ ಮಳೆ ಬರುತ್ತಿದೆ. ಮಳೆಯಿಂದ ಓಡಾಡಲಿಕ್ಕೆ ಬಹಳ ಕಷ್ಟ ಆಗುತ್ತಿದೆ ಎಂದು ಯಾತ್ರಿಕರೊಬ್ಬರು ಹೇಳಿದರು.

    ಪ್ರವಾಸಿತಾಣಗಳನ್ನು ದೇವಸ್ಥಾನಗಳನ್ನು ಓಪನ್ ಮಾಡಿರುವುದು ಬಹಳ ಖುಷಿಯಾಗಿದೆ. ಗೃಹ ಬಂಧನದಿಂದ ಹೊರಗೆ ಬಂದಂತಹ ಅನುಭವ ಸಿಕ್ತಾ ಇದೆ. ನಮಗೆ ಮೂರನೇ ಅಲೆಯ ಬಗ್ಗೆ ಬಹಳ ಆತಂಕ ಇದೆ. ತಜ್ಞರು ಸರ್ಕಾರ ಕೂಡ ಇದನ್ನೇ ಹೇಳುತ್ತಿದ್ದಾರೆ. ಹಾಗಾಗಿ ಜನ ಸರ್ಕಾರ ಹೇಳಿರುವ ಎಲ್ಲ ಮುಂಜಾಗೃತ ಕ್ರಮ ತೆಗೆದುಕೊಳ್ಳಲೇಬೇಕು. ವಾರದ ನಂತರ ಪರಿಸ್ಥಿತಿಯನ್ನು ನೋಡಿಕೊಂಡು ಅದನ್ನು ವಿಸ್ತರಿಸುವ ಸಾಧ್ಯತೆ ಇದೆ. ಬೆಳಗಿನ ಹೊತ್ತಿನಲ್ಲಿ ಒಂದೆರಡು ಗಂಟೆ ಮಠ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಕೃಷ್ಣಭಕ್ತ ಅಭಿಲಾಷ್ ಚೌಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.