Tag: Ugram Cinema

  • ನಟ ಶ್ರೀಮುರಳಿಗೆ ಮಾತು ಕೊಟ್ಟಿದ್ದೇನೆ, ಅವರಿಗೆ ಸಿನಿಮಾ ಮಾಡುತ್ತೇನೆ: ಪ್ರಶಾಂತ್ ನೀಲ್

    ನಟ ಶ್ರೀಮುರಳಿಗೆ ಮಾತು ಕೊಟ್ಟಿದ್ದೇನೆ, ಅವರಿಗೆ ಸಿನಿಮಾ ಮಾಡುತ್ತೇನೆ: ಪ್ರಶಾಂತ್ ನೀಲ್

    ಕೆಜಿಎಫ್ ಮೂಲಕ ವಿಶ್ವದ ಗಮನ ಸೆಳೆದಿರುವ ನಿರ್ದೇಶಕ ಪ್ರಶಾಂತ್ ನೀಲ್, ಈಗ ಬಹುಬೇಡಿಕೆಯ ನಿರ್ದೇಶಕ. ಮೊದಲನೆಯ ಸಿನಿಮಾದಲ್ಲಿ ತಾವು ಎಂತಹ ನಿರ್ದೇಶಕ ಎಂದು ತೋರಿಸಿದರೇ, ಎರಡನೇ ಚಿತ್ರದಲ್ಲಿ ತಮ್ಮ ಸಿನಿಮಾಗಳು ಯಾವ ರೀತಿಯ ಮಾರುಕಟ್ಟೆಯನ್ನು ಸೃಷ್ಟಿಸಬಲ್ಲವು ಎಂಬುದನ್ನು ಸಾಬೀತು ಪಡಿಸಿದರು. ಈಗ ರಿಲೀಸ್ ಆಗುತ್ತಿರುವ ಕೆಜಿಎಫ್ 2 ಸಿನಿಮಾ ಭಾರತೀಯ ಸಿನಿಮಾ ರಂಗದ ದಿಕ್ಕನ್ನೆ ಬದಲಿಸುತ್ತಿದೆ. ಇಂತಹ ಪ್ರಶಾಂತ್ ನೀಲ್ ಕೈಯಲ್ಲಿ ಸ್ಟಾರ್ ನಟರ ಎರಡು ಚಿತ್ರಗಳಿದ್ದು, ಅವೆರಡು ಪರಭಾಷೆಯ ನಟರ ಚಿತ್ರಗಳಾಗಿವೆ.  ಇದನ್ನೂ ಓದಿ: ಬೆಂಕಿ ಬಿರುಗಾಳಿ ಎಬ್ಬಿಸಿದ ಕಂಗನಾ ಶೋ: ಪತಿ ಜತೆ ಮಲಗಿದವರ ಲಿಸ್ಟ್ ಹೇಳಿದ ನಟಿ ಮಂದರಾ

    ಪ್ರಶಾಂತ್ ನೀಲ್ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದು ‘ಉಗ್ರಂ’ ಚಿತ್ರದ ಮೂಲಕ. ಈ ಚಿತ್ರಕ್ಕೆ ಶ್ರೀಮುರಳಿ ನಾಯಕ. ಇದೇ ಸಿನಿಮಾ ಶ್ರೀಮುರಳಿಗೂ ಮತ್ತು ಪ್ರಶಾಂತ್ ನೀಲ್ ಅವರ ವೃತ್ತಿ ಬದುಕಿಗೂ ದೊಡ್ಡದೊಂದು ಬ್ರೇಕ್ ನೀಡಿತು. ಅಲ್ಲಿಂದ ಇಬ್ಬರೂ ತಮ್ಮ ಮಾರುಕಟ್ಟೆಯನ್ನು ವಿಸ್ತರಿಸಿಕೊಂಡರು. ಸದ್ಯ ಪ್ರಶಾಂತ್ ನೀಲ್ ತೆಲುಗುನಟ ಪ್ರಭಾಸ್ ಗಾಗಿ ‘ಸಲಾರ್’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲದೇ, ನಂತರ ಜ್ಯೂನಿಯರ್ ಎನ್.ಟಿ.ಆರ್ ಗಾಗಿ ಚಿತ್ರ ಮಾಡಲಿದ್ದಾರೆ. ಹೀಗಾಗಿಯೇ ಪ್ರಶಾಂತ್ ನೀಲ್, ಕನ್ನಡದ ನಟರಿಗೆ ಸಿಗುವುದು ಅನುಮಾನ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಕುರಿತು ಅವರು ಸಂದರ್ಶನವೊಂದರಲ್ಲಿ ಮಾತನಾಡಿ, ಈ ಪ್ರಶ್ನೆಗೆ ತಮ್ಮದೇ ಆದ ರೀತಿಯಲ್ಲೇ ಉತ್ತರಿಸಿದ್ದಾರೆ ಪ್ರಶಾಂತ್. ಇದನ್ನೂ ಓದಿ:  ಕೊನೆಗೂ ಮದುವೆಯ ವಿಚಾರ ಖಚಿತಪಡಿಸಿದ ಆಲಿಯಾ!

    ‘ನಾನು ಕನ್ನಡ ಸಿನಿಮಾದ ಮೂಲಕವೇ ಚಿತ್ರರಂಗಕ್ಕೆ ಪ್ರವೇಶ ಮಾಡಿದವನು. ನನ್ನಿಂದ ಕನ್ನಡಕ್ಕೆ ಏನೋ ಆಗಿದೆ ಎಂಬ ಭ್ರಮೆಯಲ್ಲಿ ಇಲ್ಲ. ನಾನು ಎಲ್ಲಿಗೆ ಹೋದರೂ, ಮತ್ತೆ ಬಂದು ಕನ್ನಡದಲ್ಲಿಯೇ ಚಿತ್ರ ಮಾಡುತ್ತೇನೆ. ಕನ್ನಡಕ್ಕೆ ನನ್ನ ಮೊದಲ ಆದ್ಯತೆ’ ಎಂದು ಹೇಳಿದ್ದಾರೆ. ಅಲ್ಲದೇ, ಮುಂದಿನ ದಿನಗಳಲ್ಲಿ ಕನ್ನಡದ ಸಿನಿಮಾಗಳನ್ನೇ ಮಾಡುವುದಾಗಿ ಅವರು ಘೋಷಿಸಿದ್ದಾರೆ. ಇದನ್ನು ಓದಿ: ಬಂಕಿಮ್ ಚಂದ್ರ ಚಟರ್ಜಿ ಬಯೋಪಿಕ್: ಸ್ಕ್ರಿಪ್ಟ್ ಬರೆಯಲಿದ್ದಾರೆ ಜಕ್ಕಣ್ಣನ ತಂದೆ ವಿಜಯೇಂದ್ರ ಪ್ರಸಾದ್

    ಈ ಎರಡು ಸಿನಿಮಾಗಳು ಮುಗಿದ ನಂತರ ಅವರು ಶ್ರೀಮುರಳಿಗಾಗಿ ಮತ್ತೊಂದು ಚಿತ್ರ ಮಾಡುವುದಾಗಿಯೂ ತಿಳಿಸಿದ್ದಾರೆ ಪ್ರಶಾಂತ್ ನೀಲ್. ‘ಶ್ರೀಮುರಳಿಗೆ ಮಾತುಕೊಟ್ಟಿದ್ದೇನೆ. ಅವರಿಗಾಗಿ ಮುಂದಿನ ದಿನಗಳಲ್ಲಿ ಒಂದು ಸಿನಿಮಾ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಕನ್ನಡ ಸಿನಿಮಾ ರಂಗವನ್ನು ಬಿಟ್ಟು ಹೋಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದಿದ್ದಾರೆ ಪ್ರಶಾಂತ್.

  • ‘ಸಲಾರ್’ ಸಿನಿಮಾದಲ್ಲಿ ‘ಉಗ್ರಂ’ ಛಾಯೆ ಇದೆ: ಪ್ರಶಾಂತ್ ನೀಲ್

    ‘ಸಲಾರ್’ ಸಿನಿಮಾದಲ್ಲಿ ‘ಉಗ್ರಂ’ ಛಾಯೆ ಇದೆ: ಪ್ರಶಾಂತ್ ನೀಲ್

    ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾದ ಬಗ್ಗೆ ಮೊದಲಿನಿಂದಲೂ ಹಲವು ಊಹಾಪೋಹಗಳು ಕೇಳಿ ಬರುತ್ತಿವೆ. ಅದರಲ್ಲೀ ಸಲಾರ್ ಸಿನಿಮಾ ಕನ್ನಡದ ಉಗ್ರಂ ಚಿತ್ರದ ರಿಮೇಕ್ ಎಂದು ಸುದ್ದಿ ಆಗಿತ್ತು. ಉಗ್ರಂ ಸಿನಿಮಾದ ಅನೇಕ ಅಂಶಗಳನ್ನು ಸಲಾರ್ ಚಿತ್ರಕ್ಕಾಗಿ ನಿರ್ದೇಶಕರು ಬಳಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಕನ್ನಡ ಮತ್ತು ತೆಲುಗಿನಲ್ಲಿ ಈ ಸಿನಿಮಾ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವುದರಿಂದ ಕನ್ನಡದ ಸಿನಿಮಾವನ್ನು ಸಲಾರ್ ರೂಪದಲ್ಲಿ ಮತ್ತೆ ಕನ್ನಡಕ್ಕೆ ಕೊಡುವುದು ಎಷ್ಟು ಸರಿ ಎಂದು ಚರ್ಚೆ ಕೂಡ ಮಾಡಲಾಗಿತ್ತು. ಈಗ ಎಲ್ಲ ಪ್ರಶ್ನೆಗಳಿಗೂ ಉತ್ತರ ಕೊಟ್ಟಿದ್ದಾರೆ ಪ್ರಶಾಂತ್ ನೀಲ್. ಇದನ್ನೂ ಓದಿ: ಹೌದು, ನಾನು ತಪ್ಪು ಮಾಡಿದೆ ಕ್ಷಮಿಸಿ : ವಿಲ್ ಸ್ಮಿತ್

    ಸಲಾರ್ ಕುರಿತಾಗಿ ಎಷ್ಟೇ ಗಾಸಿಪ್ ಗಳು ಕೇಳಿ ಬಂದರೂ, ಅದಕ್ಕೆ ಯಾವುದೇ ರೀತಿಯಲ್ಲಿ ಉತ್ತರ ಕೊಡಲು ಹೋಗಿರಲಿಲ್ಲ ಪ್ರಶಾಂತ್ ನೀಲ್. ಇದೀಗ ಅವರು ಉತ್ತರ ಕೊಟ್ಟಿದ್ದಾರೆ. ಕೆಜಿಎಫ್ 2 ಸಿನಿಮಾದ ಮಾಧ್ಯಮಗೋಷ್ಠಿಯಲ್ಲಿ ಸಲಾರ್ ಬಗ್ಗೆ ಕೇಳಿ ಬಂದ ಪ್ರಶ್ನೆಗೆ ಅವರು ಉತ್ತರಿಸುತ್ತಾ, ‘ನನ್ನ ಉಗ್ರಂ ಸಿನಿಮಾದ ಛಾಯೆ ನನ್ನೆಲ್ಲ ಸಿನಿಮಾಗಳಲ್ಲೂ ಇರುತ್ತದೆ. ಹಾಗೆಯೇ ಸಲಾರ್ ಸಿನಿಮಾದಲ್ಲಿ ಇದೆ. ಹಾಗಂತ ಅದು ಉಗ್ರಂ ಸಿನಿಮಾದ ರಿಮೇಕ್ ಅಲ್ಲ. ಉಗ್ರಂ ಸಿನಿಮಾದ ಯಾವ ದೃಶ್ಯ ಅಥವಾ ಸ್ಟೋರಿಯನ್ನು ಬಳಸಿಕೊಂಡಿಲ್ಲ. ಫ್ರೆಶ್ ಆಗಿರುವ ಕಥೆಯನ್ನೇ ಸಲಾರ್ ನಲ್ಲಿ ಹೇಳಿದ್ದೇನೆ’ ಎಂದಿದ್ದಾರೆ ಪ್ರಶಾಂತ್ ನೀಲ್. ಇದನ್ನೂ ಓದಿ: RK ಹೌಸ್‌ನಲ್ಲಿ ರಣಬೀರ್-ಆಲಿಯಾ ಮದುವೆ : ಆ ಸ್ಥಳದ ಹಿಂದಿದೆ ಇಂಟ್ರಸ್ಟಿಂಗ್ ಕಹಾನಿ

    ಸಲಾರ್ ಬಹುಕೋಟಿ ವೆಚ್ಚದಲ್ಲಿ ತಯಾರಾಗುತ್ತಿರುವ ಚಿತ್ರ. ಅಂದಾಜು 350 ಕೋಟಿಗೂ ಹೆಚ್ಚು ಬಂಡವಾಳವನ್ನು ಈ ಚಿತ್ರಕ್ಕಾಗಿ ವಿನಿಯೋಗಿಸಿದ್ದಾರೆ ವಿಜಯ್ ಕಿರಗಂದೂರು. ನಟ ಪ್ರಭಾಸ್ ವೃತ್ತಿ ಬದುಕಿನ ಮತ್ತೊಂದು ಮಹತ್ವದ ಸಿನಿಮಾ ಇದಾಗಲಿದ್ದು, ಈ ಮೂಲಕ ಪ್ರಭಾಸ್ ಕನ್ನಡ ಎಂಟ್ರಿ ಕೊಟ್ಟಿದ್ದಾರೆ. ಪ್ರಶಾಂತ್ ನೀಲ್ ಅವರ ತೆಲುಗಿನ ಚೊಚ್ಚಲು ಸಿನಿಮಾ ಇದಾಗಿದ್ದರಿಂದ, ಈಗಾಗಲೇ ಸಾಕಷ್ಟು ನಿರೀಕ್ಷೆ ಕೂಡ ಇಟ್ಟುಕೊಳ್ಳಲಾಗಿದೆ.