ಲಂಡನ್: ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದಕ್ಕೆ (Free Trade Agreement) ಭಾರತ ಮತ್ತು ಯುನೈಟೆಟ್ ಕಿಂಗ್ಡಮ್ (UK) ಸಹಿ ಹಾಕಿದೆ. ಈ ಒಪ್ಪಂದದಿಂದ ಎರಡು ದೇಶಗಳ ಮಧ್ಯೆ ವಾರ್ಷಿಕವಾಗಿ ಸುಮಾರು 34 ಶತಕೋಟಿ ಡಾಲರ್ ದ್ವಿಪಕ್ಷೀಯ ವ್ಯಾಪಾರ ಹೆಚ್ಚಾಗಲಿದೆ.
ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer) ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದ (India) ಮಾರುಕಟ್ಟೆ ಪ್ರವೇಶಿಸಲು ಅಮೆರಿಕ (USA) ಸುಂಕದ ಬೆದರಿಕೆ ಹಾಕುತ್ತಿರುವ ಸಮಯದಲ್ಲೇ ಯುಕೆ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿರುವುದು ಮಹತ್ವ ಪಡೆದಿದೆ.
ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ಜವಳಿ, ಜೆನೆರಿಕ್ ಔಷಧಗಳು ಮತ್ತು ವೈದ್ಯಕೀಯ ಸಾಧನಗಳು, ಚರ್ಮದ ಸರಕುಗಳು ಮತ್ತು ಕೃಷಿ ಮತ್ತು ರಾಸಾಯನಿಕ ಉತ್ಪನ್ನಗಳು ಸೇರಿದಂತೆ ಯುಕೆಗೆ ಹೋಗುವ ಭಾರತದ 99% ವಸ್ತುಗಳ ಮೇಲಿನ ಸುಂಕವನ್ನು ಶೂನ್ಯಕ್ಕೆ ಇಳಿಸಲಾಗುತ್ತದೆ ಎಂದು ವರದಿಯಾಗಿದೆ. ಇದನ್ನೂಓದಿ: ತಾಂತ್ರಿಕದೋಷದಿಂದರಷ್ಯಾವಿಮಾನಪತನ– 48 ಮಂದಿಸಾವು
A landmark deal with India means jobs, investment and growth here in the UK.
It creates thousands of British jobs, unlocks new opportunities for businesses and puts money in the pockets of working people.
ಒಪ್ಪಂದದ ಭಾಗವಾಗಿ, ಭಾರತವು ತನ್ನ ಸುಂಕದ 90% ರಷ್ಟು ಕಡಿತಗೊಳಿಸಲಿದೆ ಮತ್ತು ಯುಕೆ ಉತ್ಪನ್ನಗಳ ಮೇಲಿನ ಸರಾಸರಿ ಸುಂಕವು 15% ರಿಂದ 3% ಕ್ಕೆ ಇಳಿಯಲಿದೆ. ಬ್ರಿಟನ್ ಸ್ಕಾಚ್ ವಿಸ್ಕಿ, ಕಾರು ಮತ್ತು ಕೆಲ ಆಹಾರ ಪದಾರ್ಥಗಳ ಮೇಲಿನ ಆಮದು ಸುಂಕವನ್ನು ಭಾರತ ಕಡಿತಗೊಳಿಸಲಿದೆ. ವಿಸ್ಕಿಯ ಮೇಲಿನ ಸುಂಕವನ್ನುಅರ್ಧದಷ್ಟು ಅಂದರೆ 75% ಕ್ಕೆ ಇಳಿಕೆಯಾಗಲಿದೆ. ಎಲೆಕ್ಟ್ರಿಕ್ ವಾಹನಗಳ ಮೇಲೂ ಪರಿಣಾಮ ಬೀರಲಿದ್ದು 110% ರಿಂದ 10% ಕ್ಕೆ ಸುಂಕ ಇಳಿಯಲಿದೆ.
ಮುಂದಿನ ಎರಡು ವರ್ಷಗಳಲ್ಲಿ ಭಾರತದ ಚರ್ಮ ವಲಯವು ಯುಕೆಯಲ್ಲಿ 5% ಹೆಚ್ಚುವರಿ ಮಾರುಕಟ್ಟೆ ಪಾಲನ್ನು ಪಡೆಯುವ ನಿರೀಕ್ಷೆಯಿದೆ. ಅದೇ ರೀತಿ 2030 ರ ವೇಳೆಗೆ ಎಲೆಕ್ಟ್ರಾನಿಕ್ಸ್ ಮತ್ತು ಎಂಜಿನಿಯರಿಂಗ್ ರಫ್ತುಗಳು ದ್ವಿಗುಣಗೊಳ್ಳುವ ಸಾಧ್ಯತೆಯಿದೆ.
ಮುಂದಿನ ಹಣಕಾಸು ವರ್ಷದಲ್ಲಿ ರಾಸಾಯನಿಕಗಳ ರಫ್ತು 30%-40% ರಷ್ಟು ಹೆಚ್ಚಾಗಬಹುದು. ರತ್ನಗಳು ಮತ್ತು ಆಭರಣ ರಫ್ತಿನ ಮೌಲ್ಯ ಪ್ರಸ್ತುತ 941 ಮಿಲಿಯನ್ ಡಾಲರ್ ಇದ್ದು ಮುಂದಿನ ಮೂರು ವರ್ಷಗಳಲ್ಲಿ ಇದು ದ್ವಿಗುಣಗೊಳ್ಳುವ ನಿರೀಕ್ಷೆಯಿದೆ.
ವ್ಯಾಪಾರ ಒಪ್ಪಂದ ಜಾರಿಗೆ ಬಂದ ನಂತರ ಸಾಫ್ಟ್ವೇರ್ ಸೇವೆಗಳ ರಫ್ತು ವಾರ್ಷಿಕವಾಗಿ ಸುಮಾರು 20% ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಈ ಒಪ್ಪಂದವು ಗ್ರಾಹಕರಿಗೆ ಬೆಲೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಬ್ರಿಟಿಷ್ ಅಧಿಕಾರಿಗಳು ಹೇಳಿದ್ದಾರೆ.
– ವಾಣಿಜ್ಯ ಒಪ್ಪಂದ, ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆಗೆ ಒತ್ತು
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇಂದಿನಿಂದ ಜುಲೈ 26 ರವರೆಗೆ ವಿದೇಶ ಪ್ರವಾಸದಲ್ಲಿರಲಿದ್ದಾರೆ. ಈ ಬಾರಿ ಬ್ರಿಟನ್ (Britain) ಮತ್ತು ಮಾಲ್ಡೀವ್ಸ್ಗೆ (Maldives) ಭೇಟಿ ನೀಡಲಿದ್ದು, ಭೇಟಿಯಲ್ಲಿ ಭಾರತ-ಯುಕೆ ದ್ವಿಪಕ್ಷೀಯ ವಾಣಿಜ್ಯ ಒಪ್ಪಂದಕ್ಕೆ ಅಂತಿಮ ಸ್ವರೂಪ ನೀಡುವುದು ಮತ್ತು ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವುದು ಪ್ರಮುಖ ಗುರಿಯಾಗಿದೆ.
ಇಂದು ಮತ್ತು ನಾಳೆ ಪ್ರಧಾನಿ ಮೋದಿ ಬ್ರಿಟನ್ಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯಲ್ಲಿ ಭಾರತ-ಯುಕೆ ದ್ವಿಪಕ್ಷೀಯ ವಾಣಿಜ್ಯ ಒಪ್ಪಂದಕ್ಕೆ (ಎಫ್ಟಿಎ) ಅಂತಿಮ ಸಹಿ ಹಾಕುವ ಸಾಧ್ಯತೆ ಇದೆ. ಮೂರು ವರ್ಷಗಳ ಚರ್ಚೆಯ ಬಳಿಕ ಮೇ ತಿಂಗಳಲ್ಲಿ ಒಪ್ಪಂದಕ್ಕೆ ಅಂತಿಮ ರೂಪ ನೀಡಲಾಗಿದ್ದು, ಇದು ಭಾರತದ ಶೇ.99 ರಷ್ಟು ರಫ್ತುಗಳ ಮೇಲಿನ ಸುಂಕವನ್ನು ತೆಗೆದುಹಾಕಲಿದೆ. ಇದರಿಂದ ಬ್ರಿಟಿಷ್ ಉತ್ಪನ್ನಗಳಾದ ವಿಸ್ಕಿ ಮತ್ತು ಆಟೋಮೊಬೈಲ್ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಸುಲಭ ಪ್ರವೇಶ ಸಿಗಲಿದೆ. ಇದನ್ನೂ ಓದಿ: ದೆಹಲಿಯಲ್ಲಿ ಮಳೆ ಆರ್ಭಟ; ಪ್ರಮುಖ ರಸ್ತೆಗಳು ಜಲಾವೃತ – ಸಂಚಾರ ಅಸ್ತವ್ಯಸ್ತ
ಎಸ್ & ಪಿ ಗ್ಲೋಬಲ್ ಮಾರ್ಕೆಟ್ ಇಂಟೆಲಿಜೆನ್ಸ್ ಪ್ರಕಾರ, ಈ ಒಪ್ಪಂದವು ಭಾರತಕ್ಕೆ ಗಣನೀಯ ಆರ್ಥಿಕ ಉತ್ತೇಜನ ನೀಡಲಿದೆ. 2024ರಲ್ಲಿ ಯುಕೆಯಿಂದ ಭಾರತಕ್ಕೆ 130 ಬಿಲಿಯನ್ ಡಾಲರ್ನಷ್ಟು (ಭಾರತದ ಜಿಡಿಪಿಯ 3.3%) ವಿದೇಶಿ ವಿನಿಮಯ ಹರಿವು ದಾಖಲಾಗಿದ್ದು, ಈ ಒಪ್ಪಂದದಿಂದ ಈ ಹರಿವು ಮತ್ತಷ್ಟು ಹೆಚ್ಚಲಿದೆ. ವಿಶೇಷವಾಗಿ, ಯುಕೆಯಲ್ಲಿ ಕೆಲಸ ಮಾಡುವ ಭಾರತೀಯ ಐಟಿ ವೃತ್ತಿಪರರಿಗೆ ಮೂರು ವರ್ಷಗಳವರೆಗೆ ರಾಷ್ಟ್ರೀಯ ವಿಮೆಯಿಂದ ವಿನಾಯಿತಿ ನೀಡುವ ನಿಬಂಧನೆಯು ಅವರ ಉಳಿತಾಯ ಮತ್ತು ವಿದೇಶಿ ವಿನಿಮಯ ಹರಿವನ್ನು ಹೆಚ್ಚಿಸಲಿದೆ. 2024ರಲ್ಲಿ 56.7 ಬಿಲಿಯನ್ ಡಾಲರ್ ಆಗಿರುವ ದ್ವಿಪಕ್ಷೀಯ ವಾಣಿಜ್ಯವನ್ನು 2030ರ ವೇಳೆಗೆ ದ್ವಿಗುಣಗೊಳಿಸುವ ಗುರಿಯನ್ನು ಈ ಒಪ್ಪಂದ ಹೊಂದಿದೆ.
ಬ್ರಿಟನ್ ಭೇಟಿಯ ಬಳಿಕ, ಪ್ರಧಾನಿ ಮೋದಿ ಜುಲೈ 25-26ರಂದು ಮಾಲ್ಡೀವ್ಸ್ಗೆ ತೆರಳಲಿದ್ದಾರೆ. ಅಲ್ಲಿ ಅವರು ಮಾಲ್ಡೀವ್ಸ್ನ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. 1965ರಲ್ಲಿ ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆದ 60ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಮಾಲ್ಡೀವ್ಸ್, ಈ ಸಂದರ್ಭದಲ್ಲಿ ಮೋದಿಯವರಿಗೆ ಗೌರವಾನ್ವಿತ ಸ್ವಾಗತವನ್ನು ನೀಡಲಿದೆ. ಮಾಲ್ಡೀವ್ಸ್ನ ರಾಷ್ಟ್ರಪತಿ ಮೊಹಮ್ಮದ್ ಮುಯಿಝು ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿರುವ ಮೋದಿ, ಎರಡೂ ದೇಶಗಳ ನಡುವಿನ ಸಹಕಾರವನ್ನು ಗಾಢವಾಗಿಸುವ ಬಗ್ಗೆ ಚರ್ಚಿಸಲಿದ್ದಾರೆ. ಇದನ್ನೂ ಓದಿ: ಬಾಹ್ಯಾಕಾಶದಲ್ಲಿ 18 ದಿನ – ಭೂಮಿಯಲ್ಲಿ ಮತ್ತೆ ನಡೆಯುವುದನ್ನ ಕಲಿಯುತ್ತಿದ್ದಾರೆ ಶುಭಾಂಶು ಶುಕ್ಲಾ
ಕಳೆದ ಕೆಲವು ವರ್ಷಗಳಲ್ಲಿ ಭಾರತ-ಮಾಲ್ಡೀವ್ಸ್ ಸಂಬಂಧಗಳು ಕೆಲವು ಏರಿಳಿತಗಳನ್ನು ಕಂಡಿವೆ. 2023ರಲ್ಲಿ ಮುಯಿಝು ಅವರು ‘ಇಂಡಿಯಾ ಔಟ್’ ಚುನಾವಣಾ ಪ್ರಚಾರದೊಂದಿಗೆ ಅಧಿಕಾರಕ್ಕೆ ಬಂದಿದ್ದರು. ಆದರೆ, ಇತ್ತೀಚಿನ ತಿಂಗಳುಗಳಲ್ಲಿ ಎರಡೂ ದೇಶಗಳು ತಮ್ಮ ಸಂಬಂಧವನ್ನು ಸುಧಾರಿಸಿಕೊಳ್ಳಲು ಕಾರ್ಯನಿರ್ವಹಿಸಿವೆ. ಭಾರತವು ಮಾಲ್ಡೀವ್ಸ್ಗೆ 2024-25ರಲ್ಲಿ 470 ಕೋಟಿ ರೂ.ನಿಂದ 600 ಕೋಟಿ ರೂ.ಗೆ ಹೆಚ್ಚಳವಾದ ಲೈನ್ ಆಫ್ ಕ್ರೆಡಿಟ್ ಮತ್ತು ಕರೆನ್ಸಿ ಸ್ವಾಪ್ ಸೌಲಭ್ಯವನ್ನು ವಿಸ್ತರಿಸಿದೆ. ಇದರಿಂದ ಮಾಲ್ಡೀವ್ಸ್ನ ಆರ್ಥಿಕ ಸಂಕಷ್ಟವನ್ನು ನಿವಾರಿಸಲು ನೆರವಾಗಿದೆ.
ತಾಂತ್ರಿಕ ದೋಷದಿಂದಾಗಿ ಜೂ.14ರಂದು ತಿರುವನಂತಪುರ ಇಂಟರ್ ನ್ಯಾಷನಲ್ ಏರ್ಪೋರ್ಟ್ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲು ಬ್ರಿಟನ್, ಭಾರತದ ಅನುಮತಿ ಕೇಳಿತ್ತು. ಭಾರತವು ತಕ್ಷಣವೇ ಅನುಮತಿ ನೀಡಿದ್ದರಿಂದ ತಿರುವನಂತಪುರ ಏರ್ಪೋರ್ಟ್ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಿತ್ತು. ಆದರೆ, ತಕ್ಷಣಕ್ಕೆ ವಿಮಾನವನ್ನು ರಿಪೇರಿ ಮಾಡಲು ಬ್ರಿಟನ್ ಇಂಜಿನಿಯರ್ಗಳಿಗೆ, ತಜ್ಞರಿಗೆ ಸಾಧ್ಯವಾಗಿರಲಿಲ್ಲ. ಒಂದು ತಿಂಗಳಿಗೂ ಹೆಚ್ಚು ಕಾಲ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಇದ್ದ ಯುದ್ಧ ವಿಮಾನದ ದುರಸ್ತಿ ಕಾರ್ಯ ಕೊನೆಗೂ ಯಶಸ್ವಿಯಾಗಿದೆ.
ಮೂಲಗಳ ಪ್ರಕಾರ, ತಾಂತ್ರಿಕ ದೋಷವನ್ನು ಸದ್ಯ ಸರಿಪಡಿಸಲಾಗಿದ್ದು, ಪ್ರಾಯೋಗಿಕ ಹಾರಾಟಕ್ಕಾಗಿ ಫೈಟರ್ ಜೆಟ್ನ್ನು ಹ್ಯಾಂಗರ್ನಿಂದ ಹೊರಗೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಈ ಪ್ರಯೋಗದ ಫಲಿತಾಂಶದ ಆಧಾರದ ಮೇಲೆ ನಾಳೆ ಇಂಗ್ಲೆಂಡ್ನತ್ತ ಪ್ರಯಾಣ ಬೆಳೆಸಲಿದೆ. ಜುಲೈ ತಿಂಗಳ ಆರಂಭದಲ್ಲಿ ವಿಮಾನದ ದುರಸ್ತಿಗಾಗಿ ಆರ್ಎಎಫ್ಎ 400ಎಂ ಅಟ್ಲಾಸ್ನಲ್ಲಿ ಬಂದ ತಂತ್ರಜ್ಞರ ತಂಡವು ವಿಮಾನವು ಹಾರಾಟಕ್ಕೆ ಅರ್ಹವಾಗಿದೆ ಎಂದು ತಿಳಿಸಿದ್ದರು.
ಎಫ್-35 ವಿಶ್ವದ ಅತ್ಯಂತ ದುಬಾರಿ ಫೈಟರ್ ಜೆಟ್ಗಳಲ್ಲಿ ಒಂದಾಗಿದ್ದು, ಇದರ ಬೆಲೆ 115 ದಶಲಕ್ಷ ಡಾಲರ್ಗಿಂತ ಅಧಿಕವಾಗಿದೆ. ಇದನ್ನು ಕಡಿಮೆ ದೂರದ ಟೇಕ್-ಆಫ್ ಹಾಗೂ ಹೆಚ್ಚು ದೂರದ ಲ್ಯಾಂಡಿಂಗ್ಗಾಗಿ ವಿನ್ಯಾಸಗೊಳಿಸಲಾಗಿದೆ ಮತ್ತು ಇದು ನ್ಯಾಟೋ ವಾಯುಪಡೆಯ ಮೂಲಾಧಾರವಾಗಿದೆ.ಇದನ್ನೂ ಓದಿ: ಪತ್ನಿ ವಿರುದ್ಧ ಅಪಪ್ರಚಾರ ಮಾಡಿದ ವಿಪಕ್ಷಗಳು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು: ಸಿಎಂ
ಗಾಂಧೀನಗರ: ಲಂಡನ್ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ರಂಜಿತಾ ಅವರು ಅಹಮದಾಬಾದ್ ವಿಮಾನ ಅಪಘಾತದಲ್ಲಿ ದುರಂತ ಸಾವು ಕಂಡಿದ್ದಾರೆ.
ರಂಜಿತಾ ಗೋಪಕುಮಾರನ್ ಅವರು ಕೇರಳದ ಪತ್ತನಂತಿಟ್ಟ ಜಿಲ್ಲೆಯವರು. ಯುನೈಟೆಡ್ ಕಿಂಗ್ಡಂನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಮನೆ ನಿರ್ಮಾಣದ ಮೇಲ್ವಿಚಾರಣೆಗಾಗಿ ರಜೆ ಮೇಲೆ ಕೇರಳಕ್ಕೆ ಬಂದಿದ್ದರು. ರಜೆ ಮುಗಿಸಿ ವಾಪಸ್ ಆಗುವಾಗ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕನಸಿನ ಮನೆಗೆ ಕಾಲಿಡುವ ಮೊದಲೇ ನರ್ಸ್ ರಂಜಿತಾ ಸಾವಿನ ಮನೆ ಸೇರಿದ್ದಾರೆ. ಪತ್ತನಂತಿಟ್ಟ ಜಿಲ್ಲಾಧಿಕಾರಿ ಪ್ರೇಮ್ ಕೃಷ್ಣನ್ ಎಸ್. ಹಾಗೂ ರಂಜಿತಾ ಈ ವಿಮಾನದಲ್ಲಿದ್ದರು. ಎಲ್ಲಾ ವಿವರಗಳನ್ನು ಪರಿಶೀಲಿಸಿದ ನಂತರ ಅವರ ಸಾವು ದೃಢಪಟ್ಟಿದೆ. ಇದನ್ನೂ ಓದಿ: ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ – ಅಹಮದಾಬಾದ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮೋದಿ
42 ವರ್ಷದ ರಂಜಿತಾ ಪತಿ ವಿನೀಶ್, ಇಬ್ಬರು ಶಾಲಾ ಮಕ್ಕಳಾದ ರಿತಿಕಾ ಮತ್ತು ಇಂದುಚೂಡನ್ ಹಾಗೂ ತಾಯಿ ತುಳಸಿ ಅವರನ್ನು ಅಗಲಿದ್ದಾರೆ. ಪಂಚಾಯತ್ ಸದಸ್ಯ ಜಾನ್ಸನ್ ಥಾಮಸ್, ರಂಜಿತಾ ಮೂರು ದಿನಗಳ ಹಿಂದೆ ಯುಕೆಯಿಂದ ಮನೆಗೆ ಬಂದಿದ್ದರು. ಅವರಿಗೆ ರಾಜ್ಯ ಆರೋಗ್ಯ ಸೇವೆಯಲ್ಲಿ ನರ್ಸ್ ಕೆಲಸ ಸಿಕ್ಕಿತ್ತು. ಆದರೆ ಅವರ ಹೊಸ ಮನೆಯ ನಿರ್ಮಾಣದ ಮೇಲ್ವಿಚಾರಣೆಗಾಗಿ ರಜೆಯ ಮೇಲೆ ಮನೆಗೆ ಬಂದಿದ್ದರು. ಅವರು ಸುಮಾರು ಒಂದು ವರ್ಷದ ಹಿಂದೆ ಯುಕೆಗೆ ತೆರಳಿದಾಗಿನಿಂದ, ಅಲ್ಲಿ ತಮ್ಮ ಕೆಲಸದ ಒಪ್ಪಂದವನ್ನು ಪೂರ್ಣಗೊಳಿಸಲು ಬಯಸುತ್ತಿದ್ದರು. ಕೇರಳಕ್ಕೆ ಮರಳಲು ಮತ್ತು ರಾಜ್ಯ ಆರೋಗ್ಯ ಸೇವೆಯೊಂದಿಗೆ ಕೆಲಸ ಮಾಡಲು ಯೋಜಿಸಿದ್ದರು ಎಂದು ತಿಳಿಸಿದ್ದಾರೆ.
ನಿನ್ನೆ ಇಬ್ಬರು ಮಕ್ಕಳನ್ನ ಸ್ಕೂಲ್ಗೆ ಕಳುಹಿಸಿ ಲಂಡನ್ಗೆ ಹೊರಟ್ಟಿದ್ದರು. ಜುಲೈನಲ್ಲಿ ಹೊಸ ಮನೆಯಲ್ಲಿ ಬದುಕು ಕಟ್ಟಲು ಕನಸು ಕಂಡಿದ್ದರು. ಈಗಾಗಲೇ ಮನೆಯ ಬಹುತೇಕ ಕೆಲಸ ಪೂರ್ಣಗೊಂಡಿತ್ತು. ಜುಲೈನಲ್ಲಿ ಗೃಹಪ್ರವೇಶದ ಪ್ಲ್ಯಾನ್ ಮಾಡಿಕೊಂಡಿದ್ದರು. ಮನೆಗೆ ಆಸರೆಯಾಗಿದ್ದ ರಂಜಿತಾ ಕಳೆದುಕೊಂಡು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.
ಲಂಡನ್: ಭಾರತೀಯ ಮೂಲದ ವೈದ್ಯೆಯೊಬ್ಬರು (Indian Origin Doctor) ಯುಕೆನಲ್ಲಿರುವ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್ನ (Royal College Of Physicians) 123ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಹೌದು. ಭಾರತೀಯ ಮೂಲದ ಡಾ.ಮುಮ್ತಾಜ್ ಪಟೇಲ್ (Mumtaz Patel) ಈಗ ವಿಶ್ವದಾದ್ಯಂತ 40,000 ಸದಸ್ಯರನ್ನು ಪ್ರತಿನಿಧಿಸುವ ಯುಕೆ ವೈದ್ಯಕೀಯ ವೃತ್ತಿಪರ ಸದಸ್ಯತ್ವ ಸಂಸ್ಥೆಯ ಮುಖ್ಯಸ್ಥರಾಗಿದ್ದಾರೆ. ಮುಮ್ತಾಜ್ ಪಟೇಲ್ ಅವರು ವಾಯುವ್ಯ ಇಂಗ್ಲೆಂಡ್ನ ಲಂಕಾಶೈರ್ನಲ್ಲಿ ಭಾರತೀಯ ವಲಸೆ ಪೋಷಕರಿಗೆ ಜನಿಸಿದರು, ಸದ್ಯ ಅವರು ಮ್ಯಾಂಚೆಸ್ಟರ್ನಲ್ಲಿ ಮೂತ್ರಪಿಂಡ ತಜ್ಞರಾಗಿದ್ದಾರೆ. ಇದನ್ನೂ ಓದಿ: ಯುಎಸ್-ಚೀನಾ ಟಾರಿಫ್ ವಾರ್ ಮತ್ತಷ್ಟು ಜೋರು – ಚೀನಾ ಉತ್ಪನ್ನಗಳಿಗೆ 245% ಸುಂಕ ವಿಧಿಸಿದ ಅಮೆರಿಕ
ಇನ್ನೂ ಈ ಸಂತಸವನ್ನು ಹಂಚಿಕೊಂಡಿರುವ ಮುಮ್ತಾಜ್, ಅಧ್ಯಕ್ಷೆಯಾಗಿ ಆರ್ಸಿಪಿ ಸಂಸ್ಥೆಯನ್ನು ಉಮ್ಮವಾಗಿ ಮುನ್ನಡೆಸುತ್ತೇನೆ. ಆಸ್ಪತ್ರೆಗಳಿಗೆ ಬರುವವರಿಗೆ ಸಾಧ್ಯವಾದಷ್ಟು ಉತ್ತಮ ಆರೋಗ್ಯ ಸೇವೆ ನೀಡಲು ವೃತ್ತಿಜೀವನದ ಪ್ರತೀ ಹಂತದಲ್ಲೂ ನಮ್ಮ ಸದಸ್ಯರನ್ನು ಬೆಂಬಲಿಸುತ್ತೇನೆ. ನನ್ನ 20 ವರ್ಷಗಳ ಅನುಭವವನ್ನು ಈ ಸಂಸ್ಥೆಯ ಸೇವೆಗೆ ಮುಡಿಪಾಗಿಡುತ್ತೇನೆ ಎಂದು ನುಡಿದ್ದಾರೆ.
ಲಂಡನ್: ಇಸ್ರೇಲ್ ಇಬ್ಬರು ಬ್ರಿಟನ್ ಸಂಸದರಿಗೆ (British MP’s Arrested) ತನ್ನ ದೇಶಕ್ಕೆ ಪ್ರವೇಶಿಸಲು ನಿರಾಕರಿಸಿದ್ದಲ್ಲದೇ ವಿಮಾನ ನಿಲ್ದಾಣದಲ್ಲಿಯೇ ಅವರನ್ನು ಬಂಧಿಸಿದ ಘಟನೆ ನಡೆದಿದೆ.
ಬ್ರಿಟನ್ನ ಇಬ್ಬರು ಸಂಸದನ್ನು ಇಸ್ರೇಲ್ ಬಂಧಿಸಿ, ಅವರಿಗೆ ಪ್ರವೇಶ ನಿರಾಕರಿಸಿರುವುದು ಸ್ವೀಕಾರಾರ್ಹವಲ್ಲ ಎಂದು ಬ್ರಿಟನ್ನ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ ಶನಿವಾರ ಹೇಳಿದ್ದಾರೆ. ಆಡಳಿತಾರೂಢ ಲೇಬರ್ ಪಾರ್ಟಿಯ ಯುವಾನ್ ಯಾಂಗ್ ಮತ್ತು ಅಬ್ತಿಸಮ್ ಮೊಹಮದ್ ಲಂಡನ್ನಿಂದ ಇಸ್ರೇಲ್ಗೆ ತೆರಳಿದಾಗ ಅವರಿಗೆ ದೇಶ ಪ್ರವೇಶಿಸದಂತೆ ನಿರ್ಬಂಧಿಸಲಾಗಿದೆ ಮತ್ತು ಗಡೀಪಾರು ಮಾಡಲಾಗಿದೆ ಎಂದು ವರದಿಯಾಗಿದೆ.
ಇಸ್ರೇಲ್ಗೆ ತೆರಳಿದ ಸಂಸದೀಯ ನಿಯೋಗದಲ್ಲಿದ್ದ ಇಬ್ಬರು ಬ್ರಿಟಿಷ್ ಸಂಸದರನ್ನು ಇಸ್ರೇಲಿ ಅಧಿಕಾರಿಗಳು ಬಂಧಿಸಿದ್ದು, ಪ್ರವೇಶ ನಿರಾಕರಿಸಿದ್ದಾರೆ ಎಂಬುದನ್ನು ಒಪ್ಪಲಾಗದು, ಇದು ಪ್ರತಿಕೂಲವಾಗಿದ್ದು, ತೀವ್ರ ಕಳವಳಕಾರಿಯಾಗಿದೆ ಎಂದು ಲ್ಯಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದು ಬ್ರಿಟಿಷ್ ಸಂಸದರನ್ನು ಸರಿಯಾಗಿ ನಡೆಸಿಕೊಳ್ಳುವ ಕ್ರಮವಲ್ಲ ಎಂದು ಇಸ್ರೇಲ್ ಸರ್ಕಾರದ ನನ್ನ ಸಹವರ್ತಿಗಳಿಗೆ ಸ್ಪಷ್ಪಪಡಿಸುತ್ತೇನೆ. ನಮ್ಮ ಬೆಂಬಲ ನೀಡಲು ನಾವು ಇಂದು ರಾತ್ರಿ ಇಬ್ಬರೂ ಸಂಸದರನ್ನು ಸಂಪರ್ಕಿಸಿದ್ದೇವೆ ಎಂದು ಅವರು ಹೇಳಿದ್ದಾರೆ.
ಇಸ್ರೇಲ್ ತೆಗೆದುಕೊಂಡು ಕ್ರಮ ಆಶ್ಚರ್ಯ ಮೂಡಿಸಿದೆ ಎಂದು ಇಬ್ಬರು ಸಂಸದರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆದರೆ ಅಧಿಕೃತ ಸಂಸದೀಯ ನಿಯೋಗದಲ್ಲಿದ್ದರು ಎಂಬ ಅವರ ಹೇಳಿಕೆ ಸುಳ್ಳು ಎಂದು ಕಂಡುಬಂದಿದೆ. ಅಂತಹ ಯಾವುದೇ ಅಧಿಕೃತ ನಿಯೋಗದ ಭೇಟಿ ಕುರಿತು ಅಧಿಕೃತ ಮಾಹಿತಿ ಬಂದಿರಲಿಲ್ಲ ಎಂದು ಇಸ್ರೇಲ್ ಹೇಳಿದೆ.
ಲಂಡನ್: ಪತಿಯೊಂದಿಗೆ ಯುಕೆಯಲ್ಲಿ ನೆಲೆಸಿದ್ದ ದೆಹಲಿಯ ಭಾರತೀಯ ಮಹಿಳೆ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಾವಿನ ಬಗ್ಗೆ ಮಹಿಳೆ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದು, ಪತಿ ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದಾರೆ.
ಹರ್ಷಿತಾ ಬ್ರೆಲ್ಲಾ ಕೊಲೆಯಾದ ಮಹಿಳೆ. ಈ ವರ್ಷ ಮಾರ್ಚ್ 22 ರಂದು ಪಂಕಜ್ ಲಾಂಬಾ ಎಂಬಾತನನ್ನು ವಿವಾಹವಾಗಿದ್ದರು. ‘ಮದುವೆ ಸಂದರ್ಭದಲ್ಲಿ ಲಾಂಬಾ ಕುಟುಂಬಕ್ಕೆ ಚಿನ್ನ ಮತ್ತು ಹಣ ನೀಡಿದ್ದರೂ ವರದಕ್ಷಿಣೆಗಾಗಿ ಹರ್ಷಿತಾಗೆ ಕಿರುಕುಳ ನೀಡುತ್ತಿದ್ದರು. ವರದಕ್ಷಿಣೆಗಾಗಿ ಕೊಲೆ ಮಾಡಿದ್ದಾರೆಂದು’ ಎಂದು ಆಕೆಯ ಅಕ್ಕ ಸೋನಿಯಾ ಬ್ರೆಲ್ಲಾ ಆರೋಪಿಸಿದ್ದಾರೆ.
ನ.10 ರಂದು ಹರ್ಷಿತಾ ಕೊಲೆಯಾಗಿದೆ. ಅದೇ ದಿನ, ಆಕೆ ಕಾರ್ಬಿಯ ಬೋಟಿಂಗ್ ಸರೋವರದ ಬಳಿ ನಡೆದುಕೊಂಡು ಹೋಗುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡುಬಂದಿದೆ ಎಂದು ನಾರ್ಥಾಂಪ್ಟನ್ಶೈರ್ ಪೋಲೀಸರು ತಿಳಿಸಿದ್ದಾರೆ.
ಈ ಹಿಂದೆ ಆಕೆಯ ತಂದೆ ಸಬೀರ್ ಬ್ರೆಲ್ಲಾ ಕೂಡ, ಲಂಬಾ ಮತ್ತು ಆತನ ಕುಟುಂಬ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದರು. ಆಕೆಗೆ ಥಳಿಸಿ ಹಣ ತರುವಂತೆ ಪೀಡಿಸುತ್ತಿದ್ದ. ನಿತ್ಯ ಪತಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಆಕೆ ಪ್ರತ್ಯೇಕವಾಗಿ ವಾಸವಾಗಿದ್ದಳು. ಹೀಗಿದ್ದರೂ, ನನ್ನ ಪುತ್ರಿಯ ಬ್ಯಾಂಕ್ ಖಾತೆಗಳನ್ನು ಆತನೇ ನಿರ್ವಹಿಸುತ್ತಿದ್ದ ಎಂದು ಅಳಿಯನ ವಿರುದ್ಧ ಸಬೀರ್ ಆರೋಪ ಮಾಡಿದ್ದಾರೆ.
ಹರ್ಷಿತಾ ಅವರೊಂದಿಗಿನ ತನ್ನ ಕೊನೆಯ ವೀಡಿಯೊ ಕರೆಯನ್ನು ನೆನಪಿಸಿಕೊಂಡ ಆಕೆ ಸಹೋದರಿ, ‘ನ.10 ರಂದು ನಾವು ಹರ್ಷಿತಾಳೊಂದಿಗೆ ಕೊನೆಯ ವೀಡಿಯೊ ಕರೆ ಮಾಡಿದ್ದು. ಪತಿಗಾಗಿ ಅಡುಗೆ ಮಾಡ್ತಿದ್ದೇನೆ ಅಂತ ಹೇಳಿದ್ದಳೆಂದು’ ನೆನಪಿಸಿಕೊಂಡಿದ್ದಾರೆ.
ಲಂಡನ್ನಲ್ಲಾದ (London) ಸೋಂಕಿತರ ರಕ್ತದ ಹಗರಣಕ್ಕೆ ಇಡೀ ಜಗತ್ತೇ ಬೆಚ್ಚಿಬಿದ್ದಿದೆ. ಈ ಹಗರಣಕ್ಕೆ ಬಲಿಯಾದವರು ಒಬ್ಬರು ಇಬ್ಬರಲ್ಲ. ಬರೋಬ್ಬರಿ 3,000 ಮಂದಿ. ವೈದ್ಯಕೀಯ ಲೋಕದ ನಿರ್ಲಕ್ಷ್ಯಕ್ಕೆ ಸಾವಿರಾರು ಜನರ ಬದುಕು ಬರಡಾಯಿತು. ಇನ್ನೂ ಬಾಳಬೇಕಿದ್ದ ನೂರಾರು ಮಕ್ಕಳ ಬದುಕು ಕಮರಿತು. ಹೌದು, 70-80 ರ ದಶಕದಲ್ಲಿ ಲಂಡನ್ನಲ್ಲಾದ ಈ ಹಗರಣವು ಈಗ ಬೆಳಕಿಗೆ ಬಂದಿದೆ. ಈ ಹಗರಣದಿಂದ ವೈದ್ಯಲೋಕದ ವೈಫಲ್ಯ ಜಗಜ್ಜಾಹೀರಾಗಿದೆ.
ತನಿಖಾ ವರದಿಯಲ್ಲೇನಿದೆ?
ಮೇ 20 ರಂದು ಯುನೈಟೆಡ್ ಕಿಂಗ್ಡಮ್ನ (United Kingdom) ಸೋಂಕಿತ ರಕ್ತದ ಹಗರಣದ ತನಿಖಾ ವರದಿ ಬಿಡುಗಡೆಯಾಯಿತು. ಸಾವಿರಾರು ಜನರು ಹೆಚ್ಐವಿ (HIV) ಅಥವಾ ಹೆಪಟೈಟಿಸ್ಗೆ (Hepatitis C) ತುತ್ತಾಗಲು ಕಾರಣವಾದ ಹಗರಣ ಇದು ಎಂಬುದು ಬಯಲಾಯಿತು. ಈ ಹಗರಣವು ರಾಜ್ಯ-ನಿಧಿಯ ರಾಷ್ಟ್ರೀಯ ಆರೋಗ್ಯ ಸೇವೆಯ (NHS) ಇತಿಹಾಸದಲ್ಲಿ ಮಾರಣಾಂತಿಕ ಚಿಕಿತ್ಸಾ ವಿಪತ್ತುಗಳಲ್ಲಿ ಒಂದು ಎಂಬ ಕೆಟ್ಟ ದಾಖಲೆ ಬರೆಯಿತು. ಬ್ರಿಯಾನ್ ಲ್ಯಾಂಗ್ಸ್ಟಾಫ್ ನೇತೃತ್ವದಲ್ಲಿ ತನಿಖೆ ನಡೆಯಿತು. ಹಗರಣವು 30,000 ಮಂದಿ ಆರೋಗ್ಯ ಸಮಸ್ಯೆ ಹಾಗೂ 3,000 ಮಂದಿ ಸಾವಿಗೆ ಕಾರಣವಾಯಿತು ಎಂಬುದನ್ನು ವರದಿ ಬಹಿರಂಗಪಡಿಸಿದೆ. ಇಂತಹ ದೊಡ್ಡ ದುರಂತವನ್ನು ಮುಚ್ಚಿಡಲು ಸರ್ಕಾರ ಪ್ರಯತ್ನಿಸಿತು ಎಂದು ಸಹ ದೂರಲಾಗಿದೆ. ‘ಸತ್ಯವನ್ನು ಮರೆಮಾಚುವುದು ಸಂಯೋಜಿತ ಪಿತೂರಿಗಿಂತ ಹೆಚ್ಚು ಅಪಾಯಕಾರಿ’ ಎಂದು ಬ್ರಿಯಾನ್ ತಿಳಿಸಿದ್ದಾರೆ. ಇದನ್ನೂ ಓದಿ: ಚಂದ್ರನ ಮೇಲೆ ನಾಸಾ ರೈಲು – ಏನಿದು ಹೊಸ ಪ್ರಯೋಗ?
ಏನಿದು ಸೋಂಕಿತ ರಕ್ತ ಹಗರಣ?
1970 ಮತ್ತು 1980 ರ ದಶಕಗಳಲ್ಲಿ ಬ್ರಿಟನ್ನಲ್ಲಿ ಸೋಂಕಿತ ರಕ್ತ ವರ್ಗಾವಣೆ ಹಗರಣ (Infected Blood Scandal) ನಡೆಯಿತು. ಆಗಿನ ಸಂದರ್ಭದಲ್ಲಿ ರಕ್ತ ಹೆಪ್ಪುಗಟ್ಟುವ ಹಿಮೋಫಿಲಿಯಾ ಸಮಸ್ಯೆ ಬ್ರಿಟನ್ನಾದ್ಯಂತ ಜನರನ್ನು ಭಾದಿಸಿತು. ಈ ಸಮಸ್ಯೆ ವೈದ್ಯಲೋಕವನ್ನು ಕಂಗೆಡಿಸಿತು. ಆಗ ಬ್ರಿಟನ್ನ ಆರೋಗ್ಯ ಸಂಸ್ಥೆ (ಎನ್ಹೆಚ್ಎಸ್) ‘ಫ್ಯಾಕ್ಟರ್ 8’ ಎಂಬ ಎಂಬ ವಿಧಾನದ ಮೂಲಕ ಚಿಕಿತ್ಸೆ ನೀಡಲು ಮುಂದಾಯಿತು. ಚಿಕಿತ್ಸೆ ಪ್ರಕಾರ, ಹತ್ತಾರು ದಾನಿಗಳಿಂದ ಪ್ಲಾಸ್ಮಾಗಳನ್ನು ಒಟ್ಟುಗೂಡಿಸಿ ರೋಗಿಗೆ ನಿಡಲಾಗುತ್ತಿತ್ತು. ಹಿಂದಿನ ಚಿಕಿತ್ಸೆಗಳಿಗಿಂತ ಇದು ಹೆಚ್ಚು ಪರಿಣಾಮಕಾರಿಯಾಗಿದೆ. ಹಾಗಾಗಿ, ಇದನ್ನ ‘ವಂಡರ್ ಡ್ರಗ್’ ಚಿಕಿತ್ಸೆ ಎಂದು ಬ್ರಿಟನ್ ವೈದ್ಯರು ಕರೆದರು.
ಏನಿದು ಹಿಮೋಫೀಲಿಯಾ?
ಇದೊಂದು ಅಪರೂಪದ ಆನುವಂಶಿಕ ಸಮಸ್ಯೆ. ಹಿಮೋಫೀಲಿಯಾಗೆ ಒಳಗಾದವರಲ್ಲಿ ರಕ್ತ ಹೆಪ್ಪುಗಟ್ಟಲು ಕಷ್ಟವಾಗುತ್ತದೆ. ರಕ್ತ ತೆಳುವಾಗುವ ಸಮಸ್ಯೆ ಇರುತ್ತದೆ. ಹಿಮೋಫೀಲಿಯಾದಲ್ಲಿ ಎರಡು ರೀತಿ ಇದೆ. ಹಿಮೋಫೀಲಿಯಾ-ಎ ಹೊಂದಿರುವವರ ರಕ್ತದಲ್ಲಿ ಹೆಪ್ಪುಗಟ್ಟುವ ಅಂಶವಾದ ಫ್ಯಾಕ್ಟರ್-8 ರ ಕೊರತೆ ಇರುತ್ತದೆ. ಹಿಮೋಫೀಲಿಯಾ-ಬಿ ಸಮಸ್ಯೆ ಇರುವವರಿಗೆ ಫ್ಯಾಕ್ಟರ್-9 ರ ಕೊರತೆ ಇರುತ್ತದೆ. ಇದನ್ನೂ ಓದಿ: ನಿಮ್ಮ ಡಿಜಿಟಲ್ ಆರೋಗ್ಯ ಹೇಗಿದೆ? – ಮಿತಿಮೀರಿದ ಎಐ ಬಳಕೆ ತಂದೊಡ್ಡುವ ಅಪಾಯಗಳೇನು? – ತಂತ್ರಜ್ಞರ ಕಳವಳ ಏನು?
ರೋಗಿಗಳಿಗೆ ಫ್ಯಾಕ್ಟರ್-8 ಚಿಕಿತ್ಸೆ ನೀಡಲು ಸಾಕಷ್ಟು ಪ್ರಮಾಣದ ರಕ್ತದ ಅಗತ್ಯವಿತ್ತು. ಆಗ ಅಮೆರಿಕದಿಂದ ಬ್ರಿಟನ್ ರಕ್ತ ತರಿಸಿಕೊಳ್ಳಲು ಮುಂದಾಯಿತು. ದಾನ ಮಾಡಿದ್ದರಲ್ಲಿ ಮಾದಕ ವ್ಯಸನಿಗಳು, ಕೈದಿಗಳು, ಅಪಾಯಕಾರಿ ಸೋಂಕು ಹೊಂದಿದ ವ್ಯಕ್ತಿಗಳ ರಕ್ತವೇ ಹೆಚ್ಚಿನ ಪ್ರಮಾಣದಲ್ಲಿತ್ತು. ಪರೀಕ್ಷೆ ಮಾಡದೇ ಇದೇ ರಕ್ತವನ್ನು ಬಳಸಿ ಜನರಿಗೆ ಚಿಕಿತ್ಸೆ ನೀಡಲಾಯಿತು. ಒಬ್ಬ ದಾನಿ ನೀಡಿದ ರಕ್ತದಲ್ಲಿ ಸೋಂಕು ಇದ್ದರೆ, ಅದು ಇಡೀ ಬ್ಯಾಚ್ ಅನ್ನು ಕಲುಷಿತಗೊಳಿಸುವ ಅಪಾಯವಿತ್ತು. ಇಂತಹ ರಕ್ತ ಪಡೆದ ಸಾವಿರಾರು ಮಂದಿ ಸೋಂಕಿಗೆ ತುತ್ತಾದರು.
ಸೋಂಕಿತ ರಕ್ತ ಪಡೆದವರಿಗೆ ಹೆಚ್ಐವಿ, ಹೆಪಟೈಟಿಸ್
ತನಿಖಾ ವರದಿಯ ಪ್ರಕಾರ 30,000 ಜನರು ಹೆಚ್ಐವಿ, ಹೆಪಟೈಟಿಸ್ ಸಿ ಗೆ ತುತ್ತಾದರು. ರಕ್ತ ದಾನ ಮಾಡಿದವರಲ್ಲಿ ಹೆಚ್ಚಾಗಿ ಹೆಪಟೈಟಿಸ್ ಸಿ ಸೋಂಕು ಇತ್ತು. 380 ಮಕ್ಕಳು ಹೆಚ್ಐವಿ ಸೋಂಕಿಗೆ ತುತ್ತಾಗಿದ್ದಾರೆ. ಹೆರಿಗೆ ಅಥವಾ ಶಸ್ತ್ರಚಿಕಿತ್ಸೆಗಾಗಿ ರಕ್ತದ ಅಗತ್ಯವಿರುವ ಜನರಿಗೂ ಸೋಂಕಿತ ರಕ್ತವನ್ನೇ ನೀಡಲಾಗಿತ್ತು.
ಹೆಚ್ಐವಿ ಸೋಂಕಿಗೆ ಒಳಗಾದವರಲ್ಲಿ ಸುಮಾರು ಮೂರನೇ ಎರಡರಷ್ಟು ಜನರು ಏಡ್ಸ್ ಸಂಬಂಧಿತ ಕಾಯಿಲೆಗಳಿಂದ ಮರಣ ಹೊಂದಿದರು. ಬದುಕಿದ್ದಾಗ ಇವರ ಸಂಪರ್ಕ ಹೊಂದಿದವರಿಗೂ ಸೋಂಕು ವರ್ಗಾವಣೆಯಾಗಿದೆ. ಆ ಸಂಖ್ಯೆ ಎಷ್ಟು ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಇದನ್ನೂ ಓದಿ: ಫಸ್ಟ್ ಟೈಂ ಸೌದಿಯಲ್ಲಿ ನಡೆಯಿತು ಸ್ವಿಮ್ ಸೂಟ್ ಫ್ಯಾಶನ್ ಶೋ!
ಬ್ರಿಟನ್ ದೇಶವನ್ನೇ ಹೆಚ್ಚು ಕಾಡಿದ್ದೇಕೆ?
70 ರ ದಶಕದಲ್ಲಿ ಹಿಮೋಫೀಲಿಯಾ ಬ್ರಿಟನ್ ದೇಶವನ್ನು ಹೆಚ್ಚು ಕಾಡಿತ್ತು. ಜಪಾನ್, ಸ್ಪೇನ್ ದೇಶಗಳಲ್ಲೂ ಈ ಸಮಸ್ಯೆ ಕಾಣಿಸಿಕೊಂಡರೂ, ಸೋಂಕು ತಗುಲುವ ಪ್ರಮಾಣ ಕಡಿಮೆಯಿತ್ತು. ಅಲ್ಲದೇ ಬ್ರಿಟನ್ ಫ್ಯಾಕ್ಟರ್-8 ಎಂಬ ಹೊಸ ಚಿಕಿತ್ಸಾ ವಿಧಾನವನ್ನು ಪರಿಚಯಿಸಿದ್ದು, ದೊಡ್ಡ ದುರಂತಕ್ಕೆ ಕಾರಣವಾಯಿತು. ಆದರೆ ಜಪಾನ್, ಸ್ಪೇನ್ ದೇಶಗಳು ಹಳೆ ಚಿಕಿತ್ಸಾ ವಿಧಾನವನ್ನೇ ಮುಂದುವರಿಸಿದ್ದರಿಂದ ಹೆಚ್ಚಿನ ಸಮಸ್ಯೆ ಆಗಲಿಲ್ಲ. 90 ರ ದಶಕಕದವರೆಗೂ ಬ್ರಿಟನ್ನಲ್ಲಿ ಹೆಪಟೈಟಿಸ್-ಸಿ ಪತ್ತೆಗಾಗಿ ಸೋಂಕಿಗೆ ಸ್ಕ್ರೀನಿಂಗ್ ಪರೀಕ್ಷೆ ಕೂಡ ಲಭ್ಯವಿರಲಿಲ್ಲ. ಇದು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಹರಡಲು ಕಾರಣವಾಗಿತ್ತು.
ಸರ್ಕಾರದ ಪ್ರತಿಕ್ರಿಯೆ ಏನು?
ಯುಕೆನಲ್ಲಿ ದೊಡ್ಡ ದುರಂತಕ್ಕೆ ಕಾರಣವಾದ ಹಗರಣದ ವಿಚಾರವಾಗಿ ಬ್ರಿಟನ್ನ ಪ್ರಧಾನಿ ರಿಷಿ ಸುನಾಕ್ ದೇಶದ ಜನತೆಯಲ್ಲಿ ಕ್ಷಮೆಯಾಚಿಸಿದ್ದಾರೆ. ವೈದ್ಯಕೀಯ ಲೋಕದ ಅತಿ ದೊಡ್ಡ ಹಗರಣ ಇದಾಗಿದ್ದು, ಬ್ರಿಟನ್ ಸರ್ಕಾರ ಇದರಿಂದ ತಲೆ ತಗ್ಗಿಸುವಂತಾಗಿದೆ. ಈ ಘಟನೆಗೆ ನಾನು ಪೂರ್ಣ ಹೃದಯದಿಂದ ನಿಸ್ಸಂದಿಗ್ಧವಾಗಿ ಕ್ಷಮೆಯಾಚಿಸಲು ಬಯಸುತ್ತೇನೆ ಎಂದಿದ್ದಾರೆ.
ಅಂದಿನಿಂದ ಇಲ್ಲಿವರೆಗೆ ಏನಾಗಿದೆ?
1980 ರ ದಶಕದ ಉತ್ತರಾರ್ಧದಲ್ಲಿ ಸಂತ್ರಸ್ತರು ಮತ್ತು ಅವರ ಕುಟುಂಬಗಳು ವೈದ್ಯಕೀಯ ನಿರ್ಲಕ್ಷ್ಯದ ಆಧಾರದ ಮೇಲೆ ಪರಿಹಾರ ನೀಡಬೇಕು ಎಂದು ಬ್ರಿಟನ್ನಾದ್ಯಂತ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. 1990 ರ ದಶಕದ ಆರಂಭದಲ್ಲಿ ಹೆಚ್ಐವಿ ಸೋಂಕಿತರಿಗೆ ಏಕಕಾಲದಲ್ಲಿ ಪರಿಹಾರ ನೀಡಲು ಸರ್ಕಾರವು ಚಾರಿಟಿಯನ್ನು ಸ್ಥಾಪಿಸಿತು. ಆದರೆ ಸಮಸ್ಯೆ ಅಲ್ಲಿಗೆ ಬಗೆಹರಿಯಲಿಲ್ಲ. ಸರ್ಕಾರದ ವಿರುದ್ಧ ಅಭಿಯಾನಗಳು ಪ್ರಾರಂಭವಾದವು.
ಪ್ರಕರಣ ಸಂಸತ್ ಮೆಟ್ಟಿಲೇರಿ ತನಿಖೆಯ ಒತ್ತಾಯ ಕೇಳಿಬಂತು. ಕೊನೆಗೆ 2018 ರ ಫೆಬ್ರವರಿಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಸರ್ ಬ್ರಿಯಾನ್ ಲ್ಯಾಂಗ್ಸ್ಟಾಫ್ ಅವರ ಅಧ್ಯಕ್ಷತೆಯಲ್ಲಿ ತನಿಖಾ ತಂಡ ರಚಿಸಲಾಯಿತು. 2018 ರ ಜುಲೈ ತಿಂಗಳಿಂದ ತನಿಖೆ ಪ್ರಾರಂಭವಾಯಿತು. 2019 ರ ಏಪ್ರಿಲ್ನಿಂದ 2022 ರ ಡಿಸೆಂಬರ್ ವರೆಗೆ ಸೋಂಕಿತ ಮತ್ತು ಬಾಧಿತರಿಂದ ಸಾರ್ವಜನಿಕ ಸಾಕ್ಷ್ಯವನ್ನು ತನಿಖಾ ತಂಡ ಸಂಗ್ರಹಿಸಿತು. 2023 ರ ಫೆಬ್ರವರಿ 3 ರಲ್ಲಿ ಮೌಖಿಕವಾಗಿ ವರದಿ ಒಪ್ಪಿಸಲಾಯಿತು.
ಲಂಡನ್: 20 ವರ್ಷದಿಂದ ಸರಿಯಾದ ಸಂಗಾತಿ (Partner) ಸಿಗದ ಹಿನ್ನೆಲೆ ಮಹಿಳೆಯೊಬ್ಬರು (Woman) ಸುಮಾರು 10 ಲಕ್ಷ ರೂ. ಖರ್ಚು ಮಾಡಿ ತನ್ನನ್ನು ತಾನೇ ಮದುವೆಯಾದ (Marriage) ಘಟನೆ ಯುನೈಟೆಡ್ ಕಿಂಗ್ಡಮ್ನಲ್ಲಿ (UK) ನಡೆದಿದೆ.
ಸಾರಾ ವಿಲ್ಕಿನ್ಸನ್ (42) ತನ್ನನ್ನು ತಾನು ಮದುವೆಯಾಗಿ (Self Marriage) ಸಂಗಾತಿಗಾಗಿ ಕಾಯುವ ಜೀವನವನ್ನು ಕೊನೆಗಾಣಿಸಿದ್ದಾರೆ. ತನ್ನ ವಿವಾಹದಿಂದ ತುಂಬಾ ಸಂತೋಷವಾಗಿದ್ದು, ಅದ್ಧೂರಿ ಮದುವೆಯ ಬಯಕೆ ಈಡೇರಿದೆ ಎಂದು ಸಾರಾ ತಿಳಿಸಿದ್ದಾರೆ. ತಮ್ಮ ಕುಟುಂಬದ ಸದಸ್ಯರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಸಾರಾ ತನ್ನನ್ನು ಮದುವೆಯಾಗಿದ್ದಾರೆ. ಇದನ್ನೂ ಓದಿ: ಪಾಕ್ನಲ್ಲಿ ಇಬ್ಬರು ಪ್ಯಾಲೆಸ್ತೀನ್ ವಿದ್ಯಾರ್ಥಿಗಳ ಮೇಲೆ ಹಲ್ಲೆ
ಸುಮಾರು 40 ಬಂಧುಮಿತ್ರರ ಸಮ್ಮುಖದಲ್ಲಿ 14 ವ್ರತಗಳನ್ನು ಮಾಡಿ ಸಾರಾ ವಿಧಿವಿಧಾನಗಳನ್ನು ನೆರವೇರಿಸಿದ್ದಾರೆ. ಅಲ್ಲದೇ ತನಗಾಗಿ ನಿಶ್ಚಿತಾರ್ಥದ ಉಂಗುರವನ್ನು (Engagement Ring) ಸಹಾ ಖರೀದಿಸಿದ್ದಾರೆ. ಈಕೆ ಸುಮಾರು 2 ದಶಕಗಳಿಂದ ಈ ದಿನಕ್ಕಾಗಿ ತಯಾರಿ ನಡೆಸುತ್ತಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: 199 ಇಸ್ರೇಲಿ ಪ್ರಜೆಗಳನ್ನು ಒತ್ತೆಯಾಳಾಗಿಟ್ಟುಕೊಂಡ ಹಮಾಸ್
ಕೋವಿಡ್ ಸಮಯದಲ್ಲಿ ಸಾರಾ 40ನೇ ವರ್ಷಕ್ಕೆ ಕಾಲಿಟ್ಟಿದ್ದು, ತನ್ನ ನಿಶ್ಚಿತಾರ್ಥಕ್ಕಾಗಿ ಡೈಮಂಡ್ ರಿಂಗ್ ಅನ್ನು ಖರೀದಿಸಿದ್ದರು. ಈ ವೇಳೆ ಸರಿಯಾದ ಸಂಗಾತಿಗಾಗಿ ಕಾಯುವ ಬದಲು ತನ್ನನ್ನು ತಾನು ಮದುವೆಯಾಗುವ ಆಲೋಚನೆಯನ್ನು ಸಾರಾ ಮಾಡಿದ್ದರು. ಇದನ್ನೂ ಓದಿ: 26ನೇ ವರ್ಷಕ್ಕೆ ಬದುಕು ಮುಗಿಸಿದ ಮಾಜಿ ವಿಶ್ವಸುಂದರಿ ಸ್ಪರ್ಧಿ!
ಈ ಸಮಾರಂಭವು ಅಧಿಕೃತ ವಿವಾಹವಾಗಿರಲಿಲ್ಲ. ಆದರೆ ನಾನು ನನ್ನ ಮದುವೆಯ ದಿನವನ್ನು ಹೊಂದಿದ್ದೇನೆ. ನನ್ನ ಪಕ್ಕದಲ್ಲಿ ನನ್ನ ಸಂಗಾತಿ ಇಲ್ಲದಿರಬಹುದು. ಆದರೆ ವಿವಾಹವನ್ನು ಯಾಕೆ ತಪ್ಪಿಸಿಕೊಳ್ಳಲಿ? ಈ ಹಣ ನನ್ನ ಮದುವೆಗೆಂದು ಕೂಡಿಟ್ಟಿದ್ದೆ. ಇಂದು ನನ್ನ ಬಯಕೆ ಈಡೇರಿದೆ ಎಂದು ಸಾರಾ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: 10ನೇ ದಿನಕ್ಕೆ ಕಾಲಿಟ್ಟ ವಾರ್- ಇಸ್ರೇಲ್ ಸರ್ಕಾರದ ಆದೇಶಕ್ಕೆ ಕಾದು ಕುಳಿತ ಸೇನಾ ಮುಖ್ಯಸ್ಥರು
ಲಂಡನ್: ಪ್ರಯಾಣಿಸುತ್ತಿದ್ದ ವಿಮಾನದ ಟಾಯ್ಲೆಟ್ನಲ್ಲಿ ಸೆಕ್ಸ್ ಮಾಡುತ್ತಿದ್ದ ವೇಳೆ ಜೋಡಿಯೊಂದು ಕ್ಯಾಬಿನ್ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಈಸಿಜೆಟ್ ವಿಮಾನದಲ್ಲಿ (EasyJet Flight) ಘಟನೆ ನಡೆದಿದ್ದು, ದೃಶ್ಯದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ವೀಡಿಯೋದಲ್ಲಿ ಏನಿದೆ?
ವಿಮಾನದ ಸಿಬ್ಬಂದಿಯೊಬ್ಬರು ಶೌಚಾಲಯದ ಬಾಗಿಲು ತೆರೆಯಲು ಮುಂದಾಗಿದ್ದಾರೆ. ಒಳಗಡೆಯಿಂದ ಬಾಗಿಲು ಲಾಕ್ ಆಗದ ಕಾರಣ ಅದು ಓಪನ್ ಆಗಿದೆ. ಆಗ ಒಳಗೆ ಒಬ್ಬ ಪುರುಷ ಮತ್ತು ಮಹಿಳೆ ವಿವಸ್ತ್ರಗೊಂಡ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಈ ದೃಶ್ಯವನ್ನು ನೋಡಿ ಮುಜುಗರದಿಂದ ಸಿಬ್ಬಂದಿ ಪಕ್ಕಕ್ಕೆ ಸರಿಯುತ್ತಾರೆ. ಇತರೆ ಸಹ ಪ್ರಯಾಣಿಕರು ಸಹ ದೃಶ್ಯವನ್ನು ಕಂಡು ನಗುತ್ತಾರೆ. ಇದನ್ನೂ ಓದಿ: ಲಿಬಿಯಾದಲ್ಲಿ ಭೀಕರ ಪ್ರವಾಹಕ್ಕೆ 2,000ಕ್ಕೂ ಹೆಚ್ಚು ಮಂದಿ ಬಲಿ – 5 ಸಾವಿರಕ್ಕೂ ಹೆಚ್ಚು ಜನ ನಾಪತ್ತೆ
ಸೆ.8 ರಂದು ಲುಟನ್ನಿಂದ ಇಬಿಜಾಗೆ ಹೊರಟಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. ವಿಮಾನದಲ್ಲಿ ಹೀಗೆ ವರ್ತಿಸಿದ ಈ ಪ್ರಯಾಣಿಕರ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳಲಾಗಿದೆ ಎಂಬ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ.
ವಿಮಾನ ಪ್ರಯಾಣದ ವೇಳೆ ಲೈಂಗಿಕ ಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮದ ಬಗ್ಗೆ ಯುಕೆ ಕಾನೂನಿನಲ್ಲಿ ಉಲ್ಲೇಖವಿಲ್ಲ. ಆದರೆ ಲೈಂಗಿಕ ಅಪರಾಧಗಳ ಕಾಯಿದೆ 2004 ರ ಸೆಕ್ಷನ್ 71 ರ ಅಡಿಯಲ್ಲಿ ಸಾರ್ವಜನಿಕ ಶೌಚಾಲಯದಲ್ಲಿ ಉದ್ದೇಶಪೂರ್ವಕವಾಗಿ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅಪರಾಧವಾಗಿದೆ. ಇದನ್ನೂ ಓದಿ: ರಸ್ತೆಯಲ್ಲಿ ನದಿಯಂತೆ ಉಕ್ಕಿ ಹರಿದ 22 ಲಕ್ಷ ಲೀಟರ್ ರೆಡ್ ವೈನ್