Tag: UK Corona

  • ಬೆಂಗಳೂರಿನ ಮೂವರು ಸೇರಿ ದೇಶದ 7 ಮಂದಿಗೆ ಬ್ರಿಟನ್‌ ಸೋಂಕು

    ಬೆಂಗಳೂರಿನ ಮೂವರು ಸೇರಿ ದೇಶದ 7 ಮಂದಿಗೆ ಬ್ರಿಟನ್‌ ಸೋಂಕು

    – ದಕ್ಷಿಣ ಭಾರತದ ರಾಜ್ಯಗಳ ವ್ಯಕ್ತಿಗಳಲ್ಲಿ ಕೊರೊನಾ
    – ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ಐಸೋಲೇಟ್‌
    – ಮೃತರ ಪೈಕಿ ಶೇ.70ರಷ್ಟು ಪುರುಷ ಸೋಂಕಿತರು ಬಲಿ

    ನವದೆಹಲಿ: ಹೊಸ ವರ್ಷದ ಕೊನೆಯಲ್ಲಿ ಮತ್ತೊಂದು ಕಹಿಸುದ್ದಿ. ಬ್ರಿಟನ್‍ನಲ್ಲಿ ಉದ್ಭವಿಸಿ ಇಡೀ ಜಗತ್ತನ್ನು ಕಂಗೆಡಿಸಿರುವ ಹೊಸ ಬಗೆಯ ಕೊರೊನಾ ಇದೀಗ ಭಾರತಕ್ಕೂ ಅಧಿಕೃತವಾಗಿ ಎಂಟ್ರಿ ಕೊಟ್ಟಿದೆ.

    ಇತ್ತೀಚಿಗೆ ಬ್ರಿಟನ್‍ನಿಂದ ಭಾರತಕ್ಕೆ ವಾಪಸ್ಸಾದ 7 ಮಂದಿಯಲ್ಲಿ ಹೊಸ ವೈರಸ್ ಕಾಣಿಸಿಕೊಂಡಿದೆ. ಇದರಲ್ಲಿ ಬೆಂಗಳೂರಿನ ಮೂವರು, ಹೈದರಾಬಾದಿನ ಇಬ್ಬರು, ಆಂಧ್ರಪ್ರದೇಶದ  ರಾಜಮಹೇಂದ್ರವರಂನ ಒಬ್ಬರು, ಹಾಗೂ ಚೆನ್ನೈನ ಒಬ್ಬರಲ್ಲಿ ಹೊಸ ವೈರಸ್ ಪತ್ತೆಯಾಗಿದೆ.

    ಎಲ್ಲಾ ಪ್ರಕರಣಗಳು ವರದಿ ಆಗಿರುವುದು ದಕ್ಷಿಣ ಭಾರತದಲ್ಲಿಯೇ ಎನ್ನುವುದು ಗಮನಿಸಬೇಕಾದ ವಿಚಾರ. ಅದರಲ್ಲೂ ಕರ್ನಾಟಕದ್ದೇ ಸಿಂಹಪಾಲು. ಎಲ್ಲರನ್ನು ಆಯಾಯಾ ರಾಜ್ಯಗಳ ಕೊರೊನಾ ಕೇರ್ ಸೆಂಟರ್‌ಗಳಲ್ಲಿ ಐಸೊಲೇಟ್ ಮಾಡಲಾಗಿದೆ. ಅವರ ಸಂಪರ್ಕದಲ್ಲಿದ್ದ ಕುಟುಂಬಸ್ಥರು, ಆಪ್ತರು, ಅಕ್ಕಪಕ್ಕದ ಮನೆಯವರನ್ನು ಟ್ರೇಸ್ ಮಾಡಿ ಪರೀಕ್ಷೆ ನಡೆಸಲಾಗುತ್ತಿದ್ದು ಕ್ವಾರಂಟೈನ್‌ ಮಾಡಲಾಗಿದೆ.

    ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಎಚ್ಚರಿಕೆ ನೀಡಿದೆ. ಹೊಸ ತಳಿಯ ಸೋಂಕು ಶರವೇಗದಲ್ಲಿ ಹರಡುತ್ತಿದ್ದು, ಗುಣಮಟ್ಟದ ಚಿಕಿತ್ಸೆ ಪಡೆದಲ್ಲಿ ಮಾತ್ರ ಅಪಾಯದಿಂದ ಪಾರಾಗಲು ಸಾಧ್ಯ ಎಂದು ತಿಳಿಸಿದೆ.

    ಹೊಸ ತಳಿಯನ್ನು ಈಗಿನ ಲಸಿಕೆಯಿಂದ ನಿಯಂತ್ರಿಸಬಹುದು. ಆದರೆ ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರಷ್ಟೇ ನಿಯಂತ್ರಣ ಸಾಧ್ಯ ಅಂತ ಎಚ್ಚರಿಕೆ ಕೊಟ್ಟಿದೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಹೆಚ್ಚು ಜನ ಸೇರಿದರೆ ಸೋಂಕು ಮತ್ತಷ್ಟು ಹೆಚ್ಚಬಹುದು. ಹೀಗಾಗಿ ರಾಜ್ಯ ಸರ್ಕಾರಗಳು ರಾತ್ರಿ ಕರ್ಫ್ಯೂ ಹಾಕಿಕೊಳ್ಳಬಹುದು ಎಂದು ಕೇಂದ್ರ ಕೋವಿಡ್ ಟಾಸ್ಕ್ ಫೋರ್ಸ್ ಸೂಚನೆ ನೀಡಿದೆ.

    ನೂತನ ತಳಿಯ ವೈರಸ್ ಮೇಲೆ ಹೆಚ್ಚು ಪ್ರತಿರೋಧಕ ಶಕ್ತಿ ಹಾಕಬಾರದು. ಹೆಚ್ಚು ಒತ್ತಡ ಹಾಕಿದಂತೆಲ್ಲಾ ವೈರಸ್ ಇನ್ನಷ್ಟು ರೂಪಾಂತರ ಹೊಂದುವ ಸಾಧ್ಯತೆ ಇದೆ ಎಂದು ಐಸಿಎಂಆರ್ ತಿಳಿಸಿದೆ.

    ಡಿಸೆಂಬರ್ 9 ರಿಂದ 22 ವರೆಗೂ ವಾಪಸ್ ಆದ ಪ್ರಯಾಣಿಕರಿಗೆ ಕೊರೊನಾ ರೋಗದ ಗುಣಲಕ್ಷಣಗಳು ಕಂಡು ಬಂದಿದ್ದು, ಕೊರೊನಾ ಪಾಸಿಟಿವ್ ಬಂದಿದೆ. ಹಾಗಾಗಿ ಕೇಂದ್ರ ಆರೋಗ್ಯ ಇಲಾಖೆಯು ಎಲ್ಲ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ವೈರಸ್‌ ವಂಶವಾಹಿ ರಚನೆ( ಜಿನೋಮ್‌)ಯ ಪರೀಕ್ಷೆ ಮಾಡಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ.

    ದೇಶಾದ್ಯಂತ ಹತ್ತು ಲ್ಯಾಬ್‍ಗಳನ್ನು ಜೀನೋಮ್ ಪರೀಕ್ಷೆಗೆಂದು ನಿಯೋಜನೆ ಮಾಡಲಾಗಿದ್ದು, ಈವರೆಗೂ 5 ಸಾವಿರ ಜನರಿಗೆ ಜೀನೋಮ್ ಪರೀಕ್ಷೆ ಮಾಡಲಾಗಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳು 2.7 ಲಕ್ಷಗಳಿಗಿಂತ ಕಡಿಮೆ ಇದೆ. ಕಳೆದ ವಾರ ದೇಶದಲ್ಲಿ ಧನಾತ್ಮಕ ಪ್ರಮಾಣವು ಕೇವಲ 2.25% ಇತ್ತು. 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಲ್ಲಿ 55% ರಷ್ಟು ಜನ ಮರಣ ಹೊಂದಿದ್ದು, 45 ರಿಂದ 60 ವಯಸ್ಸಿನವರಲ್ಲಿ 33% ಮರಣ ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ಒಟ್ಟಾರೆಯಾಗಿ ಈವರೆಗೂ 70% ಪುರುಷರು ಮತ್ತು 30% ಮಹಿಳೆಯರು ಕೊರೊನಾದಿಂದ ಮರಣ ಹೊಂದಿದ್ದಾರೆ. ಮೊದಲಿಗೆ ಹೋಲಿಸಿದರೆ ಈಗ ಮರಣ ಹೊಂದುತ್ತಿರುವ ಸಂಖ್ಯೆ ಕಡಿಮೆಯಾಗಿದೆ.

    ರೂಪಾಂತರಿ ಕೊರೊನಾ ವೈರಸ್ ಬಗ್ಗೆ ಆರಂಭದಲ್ಲಿಯೇ ಎಚ್ಚೆತ್ತುಕೊಂಡರೆ ಮಾತ್ರ ಅಪಾಯದಿಂದ ಪಾರಾಗಬಹುದು. ಇಲ್ಲದಿದ್ದರೆ ರೂಪಾಂತರಿ ವೈರಸ್ ದೇಶಕ್ಕೆ ಮತ್ತೆ ಹೆಚ್ಚು ಹಾನಿ ಮಾಡಲಿದೆ. ರೂಪಾಂತರಿ ವೈರಸ್ ರೋಗದ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ತಜ್ಞರಿಂದ ಚಿಕಿತ್ಸೆ ಪಡೆಯಿರಿ. ಇಲ್ಲದಿದ್ದರೆ ಬ್ರಿಟನ್ ಗತಿ ಭಾರತಕ್ಕೂ ಬರಬಹುದು. ಈಗಾಗಲೇ ಬ್ರಿಟನ್ ನಲ್ಲಿ ಪ್ರತಿನಿತ್ಯ 40 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದೆ. ಬ್ರಿಟನ್ ಜನ ಸಂಖ್ಯೆ ಹೋಲಿಸಿದ್ರೆ 40 ಸಾವಿರ ಪ್ರಕರಣಗಳು ಅಧಿಕವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

    ಜುಲೈ – ಆಗಸ್ಟ್‌ ವೇಳೆಗೆ ಭಾರತದಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗುವ ಸುಳಿವು ಸಿಕ್ಕಿದ್ದು, ವ್ಯಾಕ್ಸಿನ್ ಬರುವರೆಗೂ ಎಲ್ಲರೂ ಎಚ್ಚರಿಕೆಯಿಂದ ಇರಲೇಬೇಕು. ವೈರಸ್‍ನಿಂದ ಪಾರಾಗಲು ಮಾಸ್ಕ್ ಕಡ್ಡಾಯವಾಗಿ ಬಳಸಬೇಕು ಮತ್ತು ದೈಹಿಕ ಅಂತರ ಕಾಯ್ದುಕೊಳ್ಳಬೇಕು ಅಲ್ಲದೇ ನಿರಂತರವಾಗಿ ಆಗಾಗ ಕೈ ತೊಳೆದುಕೊಳ್ಳಬೇಕು. ಇದರ ಜೊತೆಯಲ್ಲಿ ಕೊರೊನಾ ಹಳೆಯ ನಿಯಮಗಳನ್ನು ಪಾಲಿಸಿ ಎಂದು ಸೂಚಿಸಿದೆ.

    ಈಗಾಗಲೇ ಬ್ರಿಟನ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಸೋಂಕು ವಿಜೃಂಭಿಸಿದ್ದು, ಲಂಡನ್ ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ. ದಕ್ಷಿಣ ಆಫ್ರಿಕಾದಲ್ಲಿಯೂ ಇದೇ ಪರಿಸ್ಥಿತಿ ಇದ್ದು, ಆಮ್ಲಜನಕ ಕೊರತೆ ಎದುರಾಗಿದೆ. ಇದುವರೆಗೂ ಬ್ರಿಟನ್‍ನಿಂದ ಭಾರತಕ್ಕೆ 33 ಸಾವಿರ ಮಂದಿ ಬಂದಿದ್ದಾರೆ. ಈ ಪೈಕಿ 5 ಸಾವಿರ ಮಂದಿಗೆ ಜಿನೋಮ್‌ ಪರೀಕ್ಷೆ ನಡೆಸಲಾಗಿದೆ.

  • ಬ್ರಿಟನ್ ಕೊರೊನಾ ಸೋಂಕಿತರಿಗೆ ಪ್ರತ್ಯೇಕ ವಾರ್ಡ್‍ನಲ್ಲಿ ಚಿಕಿತ್ಸೆ

    ಬ್ರಿಟನ್ ಕೊರೊನಾ ಸೋಂಕಿತರಿಗೆ ಪ್ರತ್ಯೇಕ ವಾರ್ಡ್‍ನಲ್ಲಿ ಚಿಕಿತ್ಸೆ

    ಬೆಂಗಳೂರು: ರೂಪಾಂತರಿ ಕೊರೊನಾ ವೈರಸ್ ಸೋಂಕಿತರಿಗೆ ವಿಕ್ಟೋರಿಯ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‍ಗಳಲ್ಲಿ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ.

    ಬ್ರಿಟನ್‍ನಿಂದ ಬೆಂಗಳೂರಿಗೆ ಹಿಂತಿರುಗಿ ಬಂದ 3 ಜನರಲ್ಲಿ ರೂಪಾಂತರಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಹಳೆಯ ವೈರಸ್ ರೋಗಿಗಳ ಜೊತೆಗೆ ಹೊಸ ವೈರಸ್ ರೋಗಿಗಳನ್ನು ಸೇರಿಸಿ ಒಂದೇ ವಾರ್ಡ್‍ನಲ್ಲಿ ಚಿಕಿತ್ಸೆ ನೀಡುವುದು ಬೇಡ. ಬದಲಾಗಿ ಹೊಸ ತಳಿಯ ವೈರಸ್ ಹೊಂದಿರುವ ರೋಗಿಗಳಿಗೆ ಪ್ರತ್ಯೇಕ ಕೊಠಡಿ ನಿರ್ಮಿಸಿ ಚಿಕಿತ್ಸೆ ನೀಡಿ ಎಂದು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರಿಗೆ ಆರೋಗ್ಯ ಅಧಿಕಾರಿಗಳು ಸೂಚಿಸಿದ್ದಾರೆ.

    ಬ್ರಿಟನ್‍ನಿಂದ ಬಂದವರಿಗೆ ಆರಂಭದಲ್ಲೇ ಪ್ರತ್ಯೇಕವಾಗಿ ಆಸ್ಪತ್ರೆಯಲ್ಲಿ 10 ಬೆಡ್‍ಗಳ ವ್ಯವಸ್ಥೆಯನ್ನು ಮಾಡುವಂತೆ ಸೂಚಿಸಲಾಗಿದೆ.

    ವಸಂತನಗರ ಅಪಾರ್ಟ್‍ಮೆಂಟ್‍ನಲ್ಲಿ ಇಬ್ಬರಿಗೆ ಮತ್ತು ಜೆಪಿ ನಗರದ ನಿವಾಸಿಯೊಬ್ಬರಿಗೆ ಬ್ರಿಟನ್ ಸೋಂಕು ಇರುವುದು ದೃಢಪಟ್ಟಿದೆ.

  • ನಾಳೆ ʼಡಿʼ ಡೇ – ಕರ್ನಾಟಕದಲ್ಲಿ ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಬ್ರಿಟನ್‌ ಸೋಂಕು ಬಂದಿದೆ?

    ನಾಳೆ ʼಡಿʼ ಡೇ – ಕರ್ನಾಟಕದಲ್ಲಿ ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಬ್ರಿಟನ್‌ ಸೋಂಕು ಬಂದಿದೆ?

    ಬೆಂಗಳೂರು: ಇಡೀ ಮಾನವಕುಲಕ್ಕೆ ಸವಾಲಾಗಿರುವ ಕೊರೊನಾ ತನ್ನ ಬಣ್ಣ ಬದಲಾಯಿಸಿರೋದು ಮತ್ತಷ್ಟು ಆತಂಕ ತಂದೊಡ್ಡಿದೆ. ಭಾರತಕ್ಕೆ ಹೊಸ ರೂಪಾಂತರಿ ಕೊರೋನಾ ಕಾಲಿಟಿದ್ಯಾ ಎಂಬ ಪ್ರಶ್ನೆಗೆ ಪ್ರಶ್ನೆ, ಗೊಂದಲ, ಭಯ ಮುಂದುವರಿದಿದ್ದು ಇದಕ್ಕೆ ಇನ್ನೂ ಸಿಕ್ಕಿಲ್ಲ. ಇವತ್ತು ಕೇಂದ್ರ ಸರ್ಕಾರ ತಿಳಿಸಬಹುದು ಎನ್ನಲಾಗಿತ್ತು. ಆದರೆ ಇದು ಮಂಗಳವಾರಕ್ಕೆ ಮುಂದೂಡಿಕೆಯಾಗಿದೆ.

    ಕೇಂದ್ರ ಆರೋಗ್ಯ ಇಲಾಖೆ ನಾಳೆ ಸಂಜೆ 4 ಗಂಟೆ ಸುದ್ದಿಗೋಷ್ಠಿ ನಡೆಸಲಿದ್ದು, ಹೊಸ ಬಗೆಯ ಸೋಂಕು ದೇಶದಲ್ಲಿ ಹಬ್ಬಿದ್ಯಾ ಇಲ್ವಾ ಎನ್ನುವುದನ್ನು ಬಯಲು ಮಾಡಲಿದೆ. ಈ ವಿಚಾರವನ್ನು ಬಿಬಿಎಂಪಿಯ ಮುಖ್ಯ ಆರೋಗ್ಯಾಧಿಕಾರಿ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

    ಬ್ರಿಟನ್‍ನಿಂದ ರಾಜ್ಯಕ್ಕೆ ಆಗಮಿಸಿದ 1,217 ಮಂದಿಯಲ್ಲಿ ಒಟ್ಟು 26 ಮಂದಿಗೆ ಕೊರೊನಾ ಪಾಸಿಟಿವ್ ಆಗಿದೆ. ಆದರೆ ಈ ಸೋಂಕು ಬ್ರಿಟನ್ ಸೋಂಕೇ ಎಂಬ ಬಗ್ಗೆ ಇನ್ನೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಸ್ಪಷ್ಟೀಕರಣ ನೀಡಿಲ್ಲ. ಎಲ್ಲಾ ರಾಜ್ಯಗಳ ಪಾಸಿಟಿವ್‌ ವರದಿಗಳು ಈಗಾಗಲೇ ಐಸಿಎಂಆರ್‌ಗೆ ಸಲ್ಲಿಕೆ ಆಗಿವೆ.

    ಬೆಂಗಳೂರಿನಲ್ಲಿ ಮಾತ್ರ, ಬ್ರಿಟನ್‍ನಿಂದ ಬಂದವರ ಸೋಂಕು ಪ್ರಕರಣಗಳು ಹೆಚ್ಚುತ್ತಲೇ ಇವೆ. ಕಳೆದ ವಾರ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಸೋಂಕು ತಗುಲಿದೆ. ಜೊತೆಗೆ ಮಹಾಲಕ್ಷ್ಮಿ ಲೇಔಟ್ ಸೋಂಕಿತರ ಸಂಪರ್ಕದಲ್ಲಿದ್ದ ಅವರ ತಾಯಿಗೂ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.

    ಬ್ರಿಟನ್‍ನಿಂದ ಬಂದವರ ಪೈಕಿ ಭಾರತದಲ್ಲಿ 120 ಮಂದಿಗೆ ಸೋಂಕು ಬಂದಿದ್ದರೆ ಕರ್ನಾಟಕದಲ್ಲಿ 27 ಮಂದಿಗೆ ಬಂದಿದೆ. ಬೆಂಗಳೂರು 16, ಶಿವಮೊಗ್ಗ 5, ಚಿಕ್ಕಮಗಳೂರು 2, ಮೈಸೂರು 2, ಬಾಗಲಕೋಟೆಯಲ್ಲಿ ಇಬ್ಬರಿಗೆ ಬಂದಿದೆ. ಬಾಗಲಕೋಟೆಯಲ್ಲಿ ಸಂಪರ್ಕದಿಂದ ಇಬ್ಬರಿಗೆ ಬಂದಿದ್ದರೆ ಬೆಂಗಳೂರಿನಲ್ಲಿ ಒಬ್ಬರಿಗೆ ಬಂದಿದೆ.