Tag: Ukraine

  • ಯುದ್ಧ ಪೀಡಿತ ಗಾಜಾ, ಸುಡಾನ್, ಉಕ್ರೇನ್‌ನಲ್ಲಿ ಆಯುಧವಾಗ್ತಿದೆ ಆಹಾರ!

    ಯುದ್ಧ ಪೀಡಿತ ಗಾಜಾ, ಸುಡಾನ್, ಉಕ್ರೇನ್‌ನಲ್ಲಿ ಆಯುಧವಾಗ್ತಿದೆ ಆಹಾರ!

    ಮುಖ್ಯಾಂಶಗಳು
    – ಆಹಾರ ಶಸ್ತ್ರಾಸ್ತ್ರೀಕರಣ
    – ಯುದ್ಧ ಪೀಡಿತ ಗಾಜಾ, ಸುಡಾನ್, ಉಕ್ರೇನ್‌ನಲ್ಲಿ ಅಸ್ತ್ರವಾದ ಆಹಾರ
    – ಉದ್ದೇಶಪೂರ್ವಕ ಆಹಾರ ಕೊರತೆ ಸೃಷ್ಟಿ
    – ಆಹಾರ ಪ್ರವೇಶ ನಿರ್ಬಂಧ
    – ಮಿಲಿಟರಿ ಸಂಘರ್ಷಕ್ಕಿಂತ ಹೆಚ್ಚಿನ ಜನ ಇದರಿಂದ ಸಾಯಬಹುದು ಎಂದ ತಜ್ಞರು 

    ಇಂದಿನ ದಿನಗಳಲ್ಲಿ ಬರಿ ಗನ್‌, ಯುದ್ಧ ಟ್ಯಾಂಕರ್‌, ಬಾಂಬ್‌, ಅಣ್ವಸ್ತ್ರಗಳನ್ನು ಬಳಸಿ ಮಾತ್ರ ಯುದ್ಧ ಮಾಡಲಾಗುತ್ತಿಲ್ಲ. ಅದು ಬದಲಾಗಿ ಹೊಸ ಹೊಸ ತಂತ್ರ, ಕುತಂತ್ರಗಳಿಗೂ ತಿರುಗಿದೆ. ಅದರಲ್ಲಿ ಆಹಾರ (Food) ಆಯುಧೀಕರಣವೂ ಒಂದು. ಹೌದು ಆಹಾರವನ್ನು ಆಯುಧೀಕರಿಸಲಾಗುತ್ತಿದೆ. ಇದಕ್ಕೆ ತಂತ್ರಜ್ಞಾನ, ಜಾಗತೀಕರಣ ಮತ್ತು ರಾಜಕೀಯ ಸಾಥ್‌ ಕೊಡುತ್ತಿದೆ. ಆಹಾರ ಹೇಗೆ ಯುದ್ಧದಲ್ಲಿ ಆಯುಧವಾಗಿ ಬಳಕೆಯಾಗುತ್ತಿದೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ. 

    ಏನಿದು ಆಹಾರ ಆಯುಧೀಕರಣ?
    ಆಹಾರ ಅಗ್ಗದ ಆಯುಧಗಳಲ್ಲಿ ಒಂದಾಗಿದೆ! ಆಹಾರದ ಆಯುಧೀಕರಣ (Weapon) ಎಂದರೆ ಉದ್ದೇಶಪೂರ್ವಕ ಆಹಾರದ ಕೊರತೆಯನ್ನು ಸೃಷ್ಟಿಸುವುದು. ಶತ್ರು  ದೇಶಕ್ಕೆ ಸರಬರಾಜಾಗುವ ಆಹಾರದ ಸಾಮಾಗ್ರಿಗಳನ್ನು ಪೂರೈಕೆ ಆಗದಂತೆ ನಿರ್ಬಂಧಿಸುವುದು. ಅಂದರೆ ಆಹಾರ ಸಾಮಾಗ್ರಿಗಳನ್ನು ತಲುಪದಂತೆ ನೆಲ, ಜಲ, ವಾಯು ಗಡಿಯನ್ನು, ಮಾರ್ಗಗಳನ್ನು ಮುಚ್ಚುವುದಾಗಿದೆ. ಇದು ಯುದ್ಧ ಭೂಮಿ ಮಾತ್ರವಲ್ಲದೇ ದೇಶದ ಒಳಗೆ ಇರುವ ಸಾವಿರಾರು, ಲಕ್ಷಾಂತರ ಜನರ ಸಾವಿಗೆ ಕಾರಣ ಆಗಬಹುದು. ಪ್ರಸ್ತುತ ಯುದ್ದ ಪೀಡಿತ ದೇಶಗಳಲ್ಲಿ ಹಸಿವಿನಿಂದಾಗಿ 12 ಕೋಟಿಗಿಂತಲೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. ಸಾವಿರಾರು ಜನ ಸಾವಿಗೀಡಾಗಿದ್ದಾರೆ.

    ಸುಡಾನ್‌ನ್ನು ಸುಡುತ್ತಿರುವ ಹಸಿವು
    ಸುಡಾನ್‌ನಲ್ಲಿ ಸಶಸ್ತ್ರ ಪಡೆ ಮತ್ತು ಅರೆಸೇನಾ ಪಡೆಗಳ ನಡುವೆ ನಡೆಯುತ್ತಿರುವ ಆಂತರಿಕ ಗಲಭೆಯಿಂದ ಸಾವಿರಾರು ಜನ ಸಾವಿಗೀಡಾಗಿದ್ದಾರೆ. ಈ ಎರಡು ಪಡೆಗಳು ಜನರಿಗೆ ಒದಗಿಸುವ ಸಹಾಯವನ್ನು ನಿರ್ಬಂಧಿಸುತ್ತಿವೆ. ಅಲ್ಲದೇ ಆಹಾರ ಸರಬರಾಜು ಮಾಡುವ ವಾಹನಗಳನ್ನು ನಾಶಮಾಡುತ್ತಿವೆ. ಜನರ ಮೇಲೆ ದಾಳಿ ಮಾಡುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಚಾಡ್‌ನಂತಹ ನೆರೆಯ ದೇಶಗಳಿಗೆ ಅಲ್ಲಿನ ಜನ ಸಾಮೂಹಿಕ ವಲಸೆ ಬಂದಿದ್ದು, ಆಹಾರಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. 

    ಉಕ್ರೇನ್‌ ಕೃಷಿ ಭೂಮಿ ನಾಶ
    ಉಕ್ರೇನ್‌ನಲ್ಲಿ (Ukraine) ನಡೆಯುತ್ತಿರುವ ಯುದ್ಧ (War) ಆಹಾರ ಶಸ್ತ್ರಾಸ್ತ್ರೀಕರಣದ ವಾಸ್ತವವನ್ನು ಬಿಚ್ಚಿಟ್ಟಿದೆ. ಇದರ ಪರಿಣಾಮ ಒಮ್ಮೆ ಯುರೋಪಿನ ಬ್ರೆಡ್‌ಬಾಸ್ಕೆಟ್ ಆಗಿದ್ದ ಉಕ್ರೇನ್‌ನ ಕೃಷಿ ಭೂಮಿಯನ್ನು ಈಗ ಗಣಿಯನ್ನಾಗಿ ಪರಿವರ್ತಿಸಿ ದಿಗ್ಬಂಧನ ಮಾಡಲಾಗಿದೆ. ಜಾಗತಿಕ ಧಾನ್ಯ ಪೂರೈಕೆಯನ್ನು ಕಡಿತಗೊಳಿಸಲಾಗಿದೆ. ಇದೇ ರೀತಿಯ ತಂತ್ರಗಳು (Gaza) ಗಾಜಾದಲ್ಲಿ, ಹಮಾಸ್ ವಿರುದ್ಧ ಇಸ್ರೇಲ್ ಮಾಡಿದೆ. ಇಲ್ಲಿಗೆ ಆಹಾರ ಸಾಮಾಗ್ರಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

    ಇತಿಹಾಸದುದ್ದಕ್ಕೂ ನಡೆದು ಬಂದ ತಂತ್ರ
    ಆಹಾರವನ್ನು ಶಸ್ತ್ರಾಸ್ತ್ರವಾಗಿ ಬಳಸುವುದು ಹೊಸದೇನಲ್ಲ, ಲೆನಿನ್‌ಗ್ರಾಡ್ ಮುತ್ತಿಗೆ (1941–1944)  10 ಲಕ್ಷಕ್ಕಿಂತಲೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದರು. ಬ್ರಿಟಿಷ್ ನೀತಿಗಳಿಂದ 1943ರಲ್ಲಿ ಉಂಟಾದ ಬಂಗಾಳ ಕ್ಷಾಮವು ಲಕ್ಷಾಂತರ ಜನರನ್ನು ಬಲಿ ತೆಗೆದುಕೊಂಡಿತ್ತು.

    ನೈಜೀರಿಯಾದ ಬಿಯಾಫ್ರಾನ್ ಯುದ್ಧದ ಸಮಯದಲ್ಲಿ (1967–1970), ಪ್ರತ್ಯೇಕತಾವಾದಿಗಳನ್ನು ದುರ್ಬಲಗೊಳಿಸಲು ಇದೇ ತಂತ್ರ ಬಳಸಲಾಗಿತ್ತು. 1990ರ ಬಾಲ್ಕನ್ ಯುದ್ಧದಲ್ಲಿ ಆಹಾರ ಸರಬರಾಜಿನಿಂದ ಕಡಿತಗೊಳಿಸಲಾಗಿತ್ತು.  

    ಅಂತರರಾಷ್ಟ್ರೀಯ ಕಾನೂನು ಹೇಳೋದೇನು?
    ವಿಶ್ವಸಂಸ್ಥೆ ಸ್ಥಾಪನೆಯಾದ ಬಳಿಕವೂ ಮಾನವ ನಿರ್ಮಿತ ಕ್ಷಾಮ ಮತ್ತು ಹಸಿವಿನಂತ ಬಿಕ್ಕಟ್ಟುಗಳನ್ನು ಪದೇ ಪದೇ ಎದುರಿಸಿದೆ. ಇದರ ನಡುವೆ ಆಹಾರವನ್ನು ತಡೆಹಿಡಿಯುವುದನ್ನು ಅಪರಾಧವೆಂದು ಪರಿಗಣಿಸಲಾಗಿದೆ. ಮಾನವೀಯ ಸಹಾಯಕ್ಕೆ ಅಡ್ಡಿಪಡಿಸುವವರಿಗೆ ಶಿಕ್ಷೆ ವಿಧಿಸುವ ಅಂತರರಾಷ್ಟ್ರೀಯ ಕಾನೂನನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಆದರೂ ಇದರ ಜವಾಬ್ಧಾರಿ ಅಸ್ಪಷ್ಟವಾಗಿದೆ.

    1998 ರಲ್ಲಿ ಸ್ಥಾಪಿಸಲಾದ ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ (ಐಸಿಸಿ) ನಾಗರಿಕರನ್ನು ಉದ್ದೇಶಪೂರ್ವಕವಾಗಿ ಹಸಿವಿನಿಂದ ಬಳಲುವಂತೆ ಮಾಡುವುದನ್ನು ಅಪರಾಧವೆಂದು ಪರಿಗಣಿಸಿದೆ. 

    ಆಹಾರವನ್ನು ಆಯುಧವಾಗಿ ಬಳಸುವುದು ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಕಾನೂನುಬಾಹಿರ ಎಂದು CFR (ವಿದೇಶಾಂಗ ಮಂಡಳಿ) ಕಾನೂನು ತಜ್ಞ ವೆರ್ಜ್ ಮತ್ತು ಡೇವಿಡ್ ಶೆಫರ್ ವಾದಿಸಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸಲು, ಆಹಾರ ಭದ್ರತೆಯನ್ನು ಕೇವಲ ಮಾನವೀಯ ಸಮಸ್ಯೆಯಾಗಿ ಮಾತ್ರವಲ್ಲದೇ ಭೌಗೋಳಿಕ ರಾಜಕೀಯವಾಗಿಯೂ ಪರಿಗಣಿಸಬೇಕಾಗಿದೆ. ಅಂತರರಾಷ್ಟ್ರೀಯ ವ್ಯವಹಾರಗಳ ಮೇಲೆ ಹೆಚ್ಚು ಪ್ರಭಾವ ಬೀರುವ ಬಿಕ್ಕಟ್ಟಿನ ಬಗ್ಗೆ ಮಿಲಿಟರಿ ಮತ್ತು ರಾಜತಾಂತ್ರಿಕ ನಾಯಕರು ಯೋಚಿಸುವ ಅಗತ್ಯವಿದೆ.

    CFR ಆಫ್ರಿಕಾ ತಜ್ಞೆ ಮಿಚೆಲ್ ಗೇವಿನ್, ರಾಜಕೀಯ ಕಾರಣಗಳಿಗಾಗಿ ಮುಗ್ಧ ನಾಗರಿಕರನ್ನು ಹಸಿವಿನಿಂದ ಸಾಯಿಸುವುದು ನಾಗರಿಕ ಸಮಾಜ ಒಪ್ಪುವಂತಹದ್ದಲ್ಲ. ಇದು ಮಾನವೀಯ ಕಾನೂನಿನ ಉಲ್ಲಂಘನೆಯಾಗಿದೆ ಎಂದು ವಾದಿಸಿದ್ದಾರೆ.

    ಆಹಾರದ ಶಸ್ತ್ರಾಸ್ತ್ರೀಕರಣ ಕೊನೆ ಇಂದಿನ ತುರ್ತು 
    2030ರ ವೇಳೆಗೆ ಶೂನ್ಯ ಹಸಿವಿನ ಗುರಿ ತಲುಪಲು ವಿಶ್ವಸಂಸ್ಥೆ 2015 ರಲ್ಲಿ ಪ್ರತಿಜ್ಞೆ ಮಾಡಿದೆ. ಈ ದಾರಿಯ ಪ್ರಗತಿ ಕುಂಠಿತವಾಗುತ್ತಿದೆ. ಮಾನವ ನಿರ್ಮಿತ ಹಸಿವು ತಡೆಗಟ್ಟಬೇಕಾಗಿರುವುದು ಇಂದಿನ ತುರ್ತಾಗಿ ನಡೆಯಬೇಕಾದ ಕೆಲಸವಾಗಿದೆ. ಯುದ್ಧ ಅಮಾನವೀಯ ಕೃತ್ಯವೆಂದು ಜಗತ್ತು ಗುರುತಿಸಬೇಕು, ಅಪರಾಧಿಗಳನ್ನು ವಿಚಾರಣೆಗೆ ಒಳಪಡಿಸುವ ಕಾರ್ಯವಿಧಾನಗಳನ್ನು ಬಲಪಡಿಸಬೇಕಿದೆ. 

  • ಉಕ್ರೇನ್‌ನ ರೈಲು ನಿಲ್ದಾಣದ ಮೇಲೆ ರಷ್ಯಾ ಡ್ರೋನ್ ದಾಳಿ, 30 ಮಂದಿ ಸಾವು – ಭಯೋತ್ಪಾದನಾ ಕೃತ್ಯ ಎಂದ ಝೆಲೆನ್ಸ್ಕಿ

    ಉಕ್ರೇನ್‌ನ ರೈಲು ನಿಲ್ದಾಣದ ಮೇಲೆ ರಷ್ಯಾ ಡ್ರೋನ್ ದಾಳಿ, 30 ಮಂದಿ ಸಾವು – ಭಯೋತ್ಪಾದನಾ ಕೃತ್ಯ ಎಂದ ಝೆಲೆನ್ಸ್ಕಿ

    ಕೈವ್‌: ಉಕ್ರೇನ್‌ನ (Ukraine) ಸುಮಿಯಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ಕೈವ್‌ಗೆ ಹೋಗುವ ರೈಲನ್ನು ಗುರಿಯಾಗಿಸಿಕೊಂಡು ರಷ್ಯಾ (Russia) ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಿಂದ 30 ಜನ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ತಿಳಿಸಿದ್ದಾರೆ.

    ರಷ್ಯಾ ದಾಳಿಯ ವೀಡಿಯೋವನ್ನು ಝೆಲೆನ್ಸ್ಕಿ X ನಲ್ಲಿ ಪೋಸ್ಟ್ ಮಾಡಿದ್ದಾರೆ. ವೀಡಿಯೋದಲ್ಲಿ ಹಾನಿಗೊಳಗಾದ ರೈಲಿನಲ್ಲಿ ಬೆಂಕಿಯ ಜ್ಯಾಲೆಗಳು ಬರುತ್ತಿರುವುದು ಸೆರೆಯಾಗಿದೆ. ಘಟನಾ ಸ್ಥಳದಲ್ಲಿ ಜನರ ರಕ್ಷಣಾ ಕಾರ್ಯ ನಡೆಯುತ್ತಿದೆ. ಗಾಯಾಳುಗಳ ಬಗ್ಗೆ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಇಲ್ಲಿಯವರೆಗೆ, ಕನಿಷ್ಠ 30 ಮಂದಿ ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ʻತುಂಬಾ ಅಪಾಯಕಾರಿʼ ದೂರವಿರಿ – ರಷ್ಯಾ ಸೇನೆ ಸೇರುತ್ತಿರುವ ಭಾರತೀಯರಿಗೆ MEA ವಾರ್ನಿಂಗ್‌

    ರಷ್ಯಾದೊಂದಿಗಿನ ಶಾಂತಿ ಮಾತುಕತೆ ವಿಫಲದಿಂದ ಹತಾಶೆಗೊಳಗಾಗಿರುವ ಝೆಲೆನ್ಸ್ಕಿ, ರಷ್ಯಾ ವಿರುದ್ಧ ಬಲವಾದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೇ ರಷ್ಯನ್ನರಿಗೆ ತಾವು ನಾಗರಿಕರನ್ನು ಕೊಲ್ಲುತ್ತಿದ್ದೇವೆ ಎಂದು ತಿಳಿದಿರಲು ಸಾಧ್ಯವಿಲ್ಲ. ಪ್ರತಿದಿನ ರಷ್ಯಾ ಮುಗ್ದ ಜನರ ಜೀವಗಳನ್ನು ತೆಗೆದುಕೊಳ್ಳುತ್ತಿದೆ. ಇದನ್ನು ಜಗತ್ತು ನಿರ್ಲಕ್ಷಿಸಬಾರದು, ಇದೊಂದು ಭಯೋತ್ಪಾದನಾ ಕೃತ್ಯ ಎಂದು ಕರೆದಿದ್ದಾರೆ.

    ಗವರ್ನರ್ ಹ್ರೈಹೊರೊವ್ ಎಕ್ಸ್‌ನಲ್ಲಿ ಉರಿಯುತ್ತಿರುವ ರೈಲು ಬೋಗಿಯ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ ವೈದ್ಯರು ಮತ್ತು ರಕ್ಷಣಾ ಅಧಿಕಾರಿಗಳು ಇದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

    ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ರಷ್ಯಾ ದಾಳಿಯನ್ನು ಖಂಡಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಉಕ್ರೇನ್‌ನೊಂದಿಗೆ ಯುರೋಪಿಯನ್ ಕಮಿಷನ್ ನಿಂತಿದೆ. ರಷ್ಯಾ ಅಂತಿಮವಾಗಿ ಶಾಶ್ವತ ಶಾಂತಿಯನ್ನು ಒಪ್ಪುವವರೆಗೂ ಅದರ ಮೇಲೆ ಒತ್ತಡವನ್ನು ಹೆಚ್ಚಿಸುವುದನ್ನು ಮುಂದುವರಿಸಬೇಕು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಉಕ್ರೇನ್‌ ಕೌಂಟರ್‌ ಅಟ್ಯಾಕ್‌ – ರಷ್ಯಾದ ಆಯಿಲ್‌ ಪೈಪ್‌ಲೈನ್‌ ಮೇಲೆ ದಾಳಿ

  • ರಷ್ಯಾದ ತೈಲ ಖರೀದಿ ರಾಷ್ಟ್ರಗಳ ಮೇಲೆ ಸುಂಕ ವಿಧಿಸಲು G7 ದೇಶಗಳಿಗೆ ಅಮೆರಿಕ ಕರೆ

    ರಷ್ಯಾದ ತೈಲ ಖರೀದಿ ರಾಷ್ಟ್ರಗಳ ಮೇಲೆ ಸುಂಕ ವಿಧಿಸಲು G7 ದೇಶಗಳಿಗೆ ಅಮೆರಿಕ ಕರೆ

    ವಾಷಿಂಗ್ಟನ್‌: ಚೀನಾ ಸೇರಿದಂತೆ ರಷ್ಯಾದಿಂದ ತೈಲ (Russian Oil) ಖರೀದಿ ರಾಷ್ಟ್ರಗಳ ಮೇಲೆ ಸುಂಕ (Tariffs) ವಿಧಿಸುವಂತೆ ಅಮೆರಿಕ ತನ್ನ G7 ದೇಶಗಳಿಗೆ (7 ರಾಷ್ಟ್ರಗಳ ಒಕ್ಕೂಟ) ಕರೆ ನೀಡಿದೆ.

    ಉಕ್ರೇನ್‌ ವಿರುದ್ಧದ ಯುದ್ಧವನ್ನು (Russia Ukraine War) ಸಕ್ರಿಯಗೊಳಿಸಲು ಬಯಸುವ ದೇಶಗಳ ಮೇಲೆ ಸಂಭಾವ್ಯ ಸುಂಕ ವಿಧಿಸುವ ಕುರಿತು 7 ರಾಷ್ಟ್ರಗಳ ಹಣಕಾಸು ಸಚಿವರು ಶುಕ್ರವಾರ ನಡೆದ ಜಿ7 ಸಭೆಯಲ್ಲಿ ಚರ್ಚಿಸಿದರು. ಕೆನಡಾ ಹಣಕಾಸು ಸಚಿವ ಫ್ರಾಂಕೋಯಿಸ್-ಫಿಲಿಪ್ ಷಾಂಪೇನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಇದನ್ನೂ ಓದಿ: 50% ತೆರಿಗೆ ಹಾಕುವುದು ಸುಲಭವಾಗಿರಲಿಲ್ಲ, ಇದರಿಂದಾಗಿಯೇ ಭಾರತದ ಜೊತೆ ಭಿನ್ನಾಭಿಪ್ರಾಯ ಶುರುವಾಯ್ತು: ಟ್ರಂಪ್‌

    ಸಭೆಯಲ್ಲಿ ಉಕ್ರೇನ್‌ ವಿರುದ್ಧ ಯುದ್ಧವನ್ನು ಕೊನೆಗಾಣಿಸಲು ರಷ್ಯಾದ ಮೇಲೆ ಸಾಧ್ಯವಾದಷ್ಟು ಒತ್ತಡ ಹೆಚ್ಚಿಸುವ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಜೊತೆಗೆ ರಷ್ಯಾದ ಯುದ್ಧದ ಪ್ರಯತ್ನಕ್ಕೆ ಸಹಕಾರ ನೀಡುತ್ತಿರುವ ದೇಶಗಳ ಮೇಲೆ ಮತ್ತಷ್ಟು ನಿರ್ಬಂಧ ಹಾಗೂ ಸುಂಕದಂತಹ ಆರ್ಥಿಕ ಕ್ರಮಗಳನ್ನು ಕೈಗೊಳ್ಳಲು ಚರ್ಚೆ ನಡೆಸಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಸಮುದ್ರದ ತಳದಲ್ಲಿ ಇದೆಯಂತೆ ಸಿಹಿನೀರು – ಭೂಮಿ ಮೇಲಿನ ಜನರಿಗೆ ಕುಡಿಯೋಕೆ ಸಿಗುತ್ತಾ?

    ಸಭೆಯ ಬಳಿಕ ಅಮೆರಿಕದ ವ್ಯಾಪಾರ ಪ್ರತಿನಿಧಿ ಜೇಮಿಸನ್ ಗ್ರೀರ್, ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ (Scott Bessent) ಜಂಟಿ ಹೇಳಿಕೆ ಬಿಡುಗಡೆ ಮಾಡಿದರು. ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಸುಂಕ ವಿಧಿಸಲು ಅಮೆರಿಕದೊಂದಿಗೆ ಸೇರಬೇಕು ಕರೆ ನೀಡಲಾಗಿದೆ. ಪುಟಿನ್‌ ಅವರ ಯುದ್ಧ ತಂತ್ರವನ್ನು ಕೊನೆಗೊಳಿಸಬೇಕಾದ್ರೆ ಹಣಕಾಸು ಒದಗಿಸುವುದನ್ನು ಕಡಿತಗೊಳಿಸಬೇಕು. ಅರ್ಥಹೀನ ಹತ್ಯೆಯನ್ನು ತಡೆಯಲು ಇದೊಂದೇ ಮಾರ್ಗ, ಆರ್ಥಿಕ ಒತ್ತಡ ಸೃಷ್ಟಿಸಿದ್ರೆ ಯುದ್ಧ ತಾನಾಗೇ ನಿಲ್ಲುತ್ತದೆ ಎಂದು ಹೇಳಿದ್ದಾರೆ.

    ಇದಕ್ಕೂ ಮುನ್ನ ಅಮೆರಿಕದ ಖಜಾನೆ ವಕ್ತಾರರು, ಜಿ7 ಮತ್ತು ಯುರೋಪಿಯನ್ ಒಕ್ಕೂಟ ರಾಷ್ಟ್ರಗಳಿಗೆ ರಷ್ಯಾದ ತೈಲ ಖರೀದಿಯನ್ನ ನಿಲ್ಲಿಸುವಂತೆ ಒತ್ತಡ ಹೇರುವಂತೆ ಕರೆ ನೀಡಿದ್ದರು. ಇದನ್ನೂ ಓದಿ: ನೇಪಾಳದಲ್ಲಿ ಸಿಲುಕಿರುವ ಹುಬ್ಬಳ್ಳಿಯ ಐವರು – ಭಾರತಕ್ಕೆ ಮರಳಲಾಗದೇ ಪರದಾಟ

    ಸುಂಕ ವಿಧಿಸಿದ್ದೇಕೆ?
    ರಷ್ಯಾದಿಂದ ಭಾರತ ತೈಲ ಖರೀದಿಸುತ್ತಿದೆ. ಈ ಮೂಲಕ ಉಕ್ರೇನ್‌ ವಿರುದ್ಧದ ಯುದ್ಧಕ್ಕೆ ಫಂಡಿಂಗ್‌ ಮಾಡುತ್ತಿದೆ ಅನ್ನೋದು ಟ್ರಂಪ್‌ ಅವರ ಬಲವಾದ ವಾದ. ಅದಕ್ಕಾಗಿ ಈ ಹಿಂದೆ ವಿಧಿಸಿದ್ದ 25% ಆಮದು ಸುಂಕವನ್ನ ಕಳೆದ ಆಗಸ್ಟ್‌ 27ರಿಂದ 50%ಗೆ ಏರಿಸಿದೆ. ಆದ್ರೆ ಪಾಕಿಸ್ತಾನದ ಆಮದಿನ ಮೇಲೆ ಟ್ರಂಪ್‌ 19% ಸುಂಕ ಮಾತ್ರ ವಿಧಿಸಿದ್ದಾರೆ. ಇದನ್ನೂ ಓದಿ: ಚಾರ್ಲಿ ಕಿರ್ಕ್‌ ಹತ್ಯೆಯ ಶಂಕಿತ ಆರೋಪಿ ಬಂಧನ: ಡೊನಾಲ್ಡ್‌ ಟ್ರಂಪ್‌

  • ರಷ್ಯಾ ಡ್ರೋನ್‌ ದಾಳಿ – ಮುಳುಗಿತು ಉಕ್ರೇನ್‌ ಅತಿ ದೊಡ್ಡ ನೌಕಾ ಹಡಗು

    ರಷ್ಯಾ ಡ್ರೋನ್‌ ದಾಳಿ – ಮುಳುಗಿತು ಉಕ್ರೇನ್‌ ಅತಿ ದೊಡ್ಡ ನೌಕಾ ಹಡಗು

    ಮಾಸ್ಕೋ: ಉಕ್ರೇನ್‌ (Ukraine) ನೌಕಾಪಡೆಯ ಗಸ್ತು ಹಡಗನ್ನು ರಷ್ಯಾ (Russia) ಡ್ರೋನ್‌ ದಾಳಿ (Drone Attack) ನಡೆಸಿ ಮುಳುಗಿಸಿದೆ.

    ಉಕ್ರೇನ್‌ ದೊಡ್ಡ ಗಸ್ತು ಹಡಗು ಸಿಮ್ಫೆರೊಪೋಲ್ (Simferopol) ಡ್ಯಾನ್ಯೂಬ್ ನದಿಯಲ್ಲಿ ಸಂಚರಿಸುತ್ತಿದ್ದಾಗ ದಾಳಿ ನಡೆಸಲಾಗಿದೆ ಎಂದು ರಷ್ಯಾ ಹೇಳಿದೆ. ರೇಡಿಯೋ, ಎಲೆಕ್ಟ್ರಾನಿಕ್, ರಾಡಾರ್‌ಗಳನ್ನು ಈ ಹಡಗು ಹೊಂದಿತ್ತು.

    ದಾಳಿಯಲ್ಲಿ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ. ಹೆಚ್ಚಿನ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಉಕ್ರೇನ್‌ ಮಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಉಕ್ರೇನ್ ರಷ್ಯಾ ಯುದ್ಧವನ್ನು ಮೋದಿ ಯುದ್ಧ ಎಂದು ಕರೆದ ಅಮೆರಿಕ

    ಸಿಮ್ಫೆರೊಪೋಲ್ ಅನ್ನು 2019 ರಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು ಎರಡು ವರ್ಷಗಳ ನಂತರ ಉಕ್ರೇನಿಯನ್ ನೌಕಾಪಡೆಗೆ ಸೇರ್ಪಡೆಯಾಗಿತ್ತು. 2014 ರ ಬಳಿಕ ಉಕ್ರೇನ್‌ ತಯಾರಿಸಿದ ದೊಡ್ಡ ಹಡಗು ಇದಾಗಿದೆ.

    ಕೆಲ ತಿಂಗಳಿನಿಂದ ರಷ್ಯಾ ಡ್ರೋನ್‌ ಉತ್ಪಾದನೆಗೆ ಹೆಚ್ಚಿಸುತ್ತಿದೆ. ಕಳೆದ ರಾತ್ರಿ ಕ್ಷಿಪಣಿ ದಾಳಿ ನಡೆಸಿ ಉಕ್ರೇನ್‌ನಲ್ಲಿದ್ದ ಡ್ರೋನ್‌ ಸೌಲಭ್ಯ ಘಟಕವನ್ನು ರಷ್ಯಾ ನಾಶ ಮಾಡಿದೆ.

  • ವರ್ಷಾಂತ್ಯದಲ್ಲಿ ಭಾರತಕ್ಕೆ ಪುಟಿನ್‌, ಝೆಲೆನ್ಸ್ಕಿ ಭೇಟಿ – ಅಮೆರಿಕ ತೈಲ ವಾರ್‌ ನಡ್ವೆ ಹೆಚ್ಚಾಯ್ತು ಭಾರತದ ಪ್ರಾಬಲ್ಯ

    ವರ್ಷಾಂತ್ಯದಲ್ಲಿ ಭಾರತಕ್ಕೆ ಪುಟಿನ್‌, ಝೆಲೆನ್ಸ್ಕಿ ಭೇಟಿ – ಅಮೆರಿಕ ತೈಲ ವಾರ್‌ ನಡ್ವೆ ಹೆಚ್ಚಾಯ್ತು ಭಾರತದ ಪ್ರಾಬಲ್ಯ

    ನವದೆಹಲಿ/ಕೈವ್‌: ಭಾರತ ಮತ್ತು ರಷ್ಯಾ (India Russia) ನಡುವಿನ ಸ್ನೇಹ ಇಡೀ ವಿಶ್ವಕ್ಕೆ ಗೊತ್ತಿದೆ. ಅಮೆರಿಕ ಭಾರತದ ಮೇಲೆ ಶಕ್ತಿ ಪ್ರದರ್ಶನಕ್ಕೆ ಮುಂದಾದಾಗಲೆಲ್ಲ ರಷ್ಯಾ, ನಮ್ಮ ದೇಶದ ಜೊತೆಗೆ ನಿಂತಿರೋದಕ್ಕೆ ಹಲವು ಉದಾಹರಣೆಗಳಿವೆ. ಅದೇ ಸಮಯದಲ್ಲಿ ಭಾರತ-ಉಕ್ರೇನ್‌ ಜೊತೆಗೂ ಸ್ನೇಹದಲ್ಲಿ ಸಮತೋಲನ ಕಾಯ್ದುಕೊಂಡಿದೆ. ಈ ವರ್ಷಾಂತ್ಯಕ್ಕೆ ಇಬ್ಬರೂ ವಿಶ್ವನಾಯಕರು ಭಾರತಕ್ಕೆ ಭೇಟಿ ನೀಡುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ.

    ಹೌದು. ಪ್ರಧಾನಿ ನರೇಂದ್ರ ಮೋದಿ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ಅವರನ್ನ ಭಾರತಕ್ಕೆ ಭೇಟಿ ನೀಡಲು ಆಹ್ವಾನಿಸಿದ್ದಾರೆ. ಈ ವರ್ಷಾಂತ್ಯದ ವೇಳೆಗೆ ರಷ್ಯಾ ಅಧ್ಯಕ್ಷ ಪುಟಿನ್‌ ಸಹ ಭಾರತಕ್ಕೆ ಭೇಟಿ ನೀಡುವುದು ಖಚಿತವಾಗಿದೆ. ಇದು ಜಾಗತಿಕ ಮಟ್ಟದಲ್ಲಿ ಭಾರತದ ಪ್ರಾಬಲ್ಯ ಹೆಚ್ಚಾಗುತ್ತಿರುವುದಕ್ಕೆ ಹಿಡಿದ ಕನ್ನಡಿಯಾಗಿದೆ.

    ಈ ಕುರಿತು ಉಕ್ರೇನಿಯನ್ ರಾಯಭಾರಿ ಓಲೆಕ್ಸಾಂಡರ್ ಪೋಲಿಷ್‌ಚುಕ್ ಮಾತನಾಡಿ, ಭಾರತ ಮತ್ತು ಉಕ್ರೇನ್‌ ನಡುವಿನ ಭವಿಷ್ಯದ ಕಾರ್ಯತಂತ್ರಗಳು ವೇಗವಾಗಿ ಸಾಗುತ್ತಿವೆ. ಪ್ರಧಾನಿ ಮೋದಿ ಅವರು ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದಾರೆ. ಇದಕ್ಕೆ ಝಲೆನ್ಸ್ಕಿ ಸಹ ಒಪ್ಪಿದ್ದು, ದಿನಾಂಕವನ್ನು ನಿಗದಿಪಡಿಸುವ ಕೆಲಸದಲ್ಲಿ ತೊಡಗಿದ್ದಾರೆ. ಝೆಲೆನ್ಸ್ಕಿ ಅವರ ಭಾರತ ಭೇಟಿಯು ಉಭಯ ದೇಶಗಳ ನಡುವಿನ ಸಂಬಂಧಕ್ಕೆ ಪ್ರಮುಖ ಹೆಜ್ಜೆಯಾಗಲಿದೆ ಎಂದು ತಿಳಿಸಿದ್ದಾರೆ.

    ವರ್ಷಾಂತ್ಯದಲ್ಲಿ ಪುಟಿನ್ ಕೂಡ
    ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ದೃಢಪಡಿಸಿದರು. ರಷ್ಯಾದ ಇಂಟರ್‌ಫ್ಯಾಕ್ಸ್ ಸುದ್ದಿ ಸಂಸ್ಥೆ ಕೂಡ ಇದನ್ನು ಖಚಿತಪಡಿಸಿದೆ.

    ಸುಂಕದಿಂದ ಸಿಗುತ್ತಾ ರಿಲೀಫ್‌?
    ಟ್ರಂಪ್‌ ಎಚ್ಚರಿಕೆ ಬಳಿಕವೂ ಭಾರತ ರಷ್ಯಾದಿಂದ ತೈಲ ಖರೀದಿ ಮಾಡುವುದನ್ನು ಮುಂದುವರಿಸಿದೆ. ಹೀಗಾಗಿ ಭಾರತದ ಮೇಲೆ ಶೇ.25 ವಿಧಿಸಿದ್ದ ಸುಂಕದ ಪ್ರಮಾಣವನ್ನು 50%ಗೆ ಟ್ರಂಪ್‌ ಹೆಚ್ಚಿದ್ದಾರೆ. ಇದು ಆ.27ರಿಂದ ಅನ್ವಯವಾಗಲಿದೆ. ಅಷ್ಟರಲ್ಲಿ ಭಾರತಕ್ಕೆ ರಿಲೀಫ್‌ ಸಿಗುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

  • ರಷ್ಯಾ ತೈಲ ಖರೀದಿಸಲು ಸಾಧ್ಯವಾಗದಿದ್ರೆ ಭಾರತಕ್ಕಿರೋ ಆಯ್ಕೆಗಳೇನು? – ಅಮೆರಿಕಗೆ ಭಾರತವೇ ಯಾಕೆ ಟಾರ್ಗೆಟ್?‌

    ರಷ್ಯಾ ತೈಲ ಖರೀದಿಸಲು ಸಾಧ್ಯವಾಗದಿದ್ರೆ ಭಾರತಕ್ಕಿರೋ ಆಯ್ಕೆಗಳೇನು? – ಅಮೆರಿಕಗೆ ಭಾರತವೇ ಯಾಕೆ ಟಾರ್ಗೆಟ್?‌

    – ರಷ್ಯಾ ತೈಲ ಖರೀದಿಯಲ್ಲಿ ಅತಿದೊಡ್ಡ ಪಾಲುದಾರ ಚೀನಾ ಟಾರ್ಗೆಟ್‌ ಯಾಕಿಲ್ಲ?

    ಲಸ್ಕಾ ಶೃಂಗಸಭೆಯಿಂದ ಸಕಾರಾತ್ಮಕ ಫಲಿತಾಂಶ ದೊರೆಯುವ ನಿರೀಕ್ಷೆಯಲ್ಲಿದ್ದ ಭಾರತಕ್ಕೆ ನಿರಾಸೆಯಾಗಿದೆ. ಡೊನಾಲ್ಡ್ ಟ್ರಂಪ್ ಮತ್ತು ವ್ಲಾಡಿಮಿರ್ ಪುಟಿನ್ ಅವರು ಭಾರತದ ರಫ್ತುಗಳ ಮೇಲೆ ಹೆಚ್ಚುವರಿ 25% ಸುಂಕವನ್ನು ವಿಧಿಸುವುದನ್ನು ತಪ್ಪಿಸಲು ಅಸಮರ್ಥರಾಗಿರುವುದು ನಿರಾಶೆಯನ್ನುಂಟು ಮಾಡಿದೆ. ಅಲಸ್ಕಾದಲ್ಲಿ ಅಮೆರಿಕ-ರಷ್ಯಾ ಮಾತುಕತೆಗಳು ಅಪೂರ್ಣಗೊಂಡಿವೆ. ಇದರಿಂದ ಭಾರತದ ವ್ಯಾಪಾರ ಮಾತುಕತೆಗಳ ಬಗ್ಗೆ ಅನಿಶ್ಚಿತತೆಯ ಮೋಡ ಆವರಿಸಿದೆ. ಇದುವರೆಗೂ ಎಚ್ಚರಿಕೆಯ ಹೆಜ್ಜೆ ಇಟ್ಟಿರುವ ಭಾರತದ ಮುಂದಿನ ನಡೆಯೂ ಕುತೂಹಲ ಮೂಡಿಸಿದೆ.

    ರಷ್ಯಾದಿಂದ ತೈಲ ಆಮದಿನ ಮೂರನೇ ಒಂದು ಭಾಗಕ್ಕಿಂತ ಹೆಚ್ಚಿನದನ್ನು ಭಾರತವೇ ಪಡೆಯುತ್ತಿದೆ. ಉಕ್ರೇನ್ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾ ವಿರುದ್ಧ ಅಮೆರಿಕಗೆ ಅಸಮಾಧಾನ ಇದೆ. ಹೀಗಾಗಿ, ರಷ್ಯಾದಿಂದ ತೈಲ ಖರೀದಿಸದಂತೆ ಭಾರತಕ್ಕೆ ಅಮೆರಿಕ ಎಚ್ಚರಿಸುತ್ತಲೇ ಬಂದಿದೆ. ಆದರೆ, ಭಾರತ ಅದಕ್ಕೆ ಕ್ಯಾರೆ ಎಂದಿಲ್ಲ. ಇದರಿಂದ ಕೆರಳಿರುವ ಟ್ರಂಪ್ ಭಾರತದ ಮೇಲೆ 50% ಸುಂಕ ವಿಧಿಸಿದ್ದಾರೆ. ಅಮೆರಿಕದ ಸಂಭಾವ್ಯ ದಂಡಗಳಿಂದಾಗಿ ರಷ್ಯಾದ ಆಮದುಗಳನ್ನು ಕಡಿತಗೊಳಿಸಬೇಕಾದ ಪರಿಸ್ಥಿತಿ ಬಂದರೆ ಭಾರತದ ಮುಂದಿನ ಕಥೆ ಏನು ಎಂಬ ಪ್ರಶ್ನೆ ಮೂಡಿದೆ. ಸುಂಕಕ್ಕೆ ಬಗ್ಗದೇ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುತ್ತಾ? ಯುಎಸ್‌ನ ಸುಂಕದಿಂದ ಪಾರಾಗಲು ನಿರ್ಧಾರ ಕೈಗೊಳ್ಳುತ್ತಾ? ಒಂದು ವೇಳೆ ರಷ್ಯಾದ ತೈಲ ಖರೀದಿಯನ್ನು ಕೈಬಿಟ್ಟರೆ ಭಾರತಕ್ಕೆ ಇರುವ ಆಯ್ಕೆಗಳೇನು ಎಂಬ ಪ್ರಶ್ನೆಗಳಿಗೆ ವಿವರ ಇಲ್ಲಿದೆ.

    ಭಾರತ, ರಷ್ಯಾದ ತೈಲವನ್ನೇ ಆಮದು ಮಾಡಿಕೊಳ್ಳೋದ್ಯಾಕೆ?
    2022 ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ ಪಾಶ್ಚಿಮಾತ್ಯ ದೇಶಗಳು ರಷ್ಯಾ ಮೇಲೆ ನಿರ್ಬಂಧಗಳನ್ನು ವಿಧಿಸಿ ತನ್ನ ಪೂರೈಕೆಯನ್ನು ನಿಲ್ಲಿಸಿದವು. ನಂತರ ಭಾರತವು ರಿಯಾಯಿತಿ ದರದಲ್ಲಿ ಮಾರಾಟವಾಗುವ ರಷ್ಯಾದ ತೈಲವನ್ನು ಖರೀದಿಸಲು ಮುಂದಾಯಿತು. ಉಕ್ರೇನ್ ಯುದ್ಧದ ಮೊದಲು ರಷ್ಯಾ 2% ಕ್ಕಿಂತ ಕಡಿಮೆಯಿದ್ದದ್ದು, ಭಾರತದ ಒಟ್ಟಾರೆ ಪೂರೈಕೆಯಲ್ಲಿ ಸುಮಾರು 35% ರಷ್ಟನ್ನು ಹೊಂದಿದೆ. ಭಾರತಕ್ಕೆ ಅತಿ ಹೆಚ್ಚು ತೈಲ ಪೂರೈಕೆದಾರ ರಾಷ್ಟ್ರವಾಗಿದೆ. ಪಾಶ್ಚಿಮಾತ್ಯ ದೇಶಗಳ ನಿರ್ಬಂಧದ ನಂತರ ಪೂರೈಕೆ ಕೊರತೆಯ ಭೀತಿಯಿಂದಾಗಿ ಜಾಗತಿಕ ಕಚ್ಚಾ ತೈಲ ಬೆಲೆಗಳು ಬ್ಯಾರೆಲ್‌ಗೆ 11,963 ರೂ.ಗೆ ಏರಿತು. ರಿಯಾಯಿತಿ ದರದಲ್ಲಿ ರಷ್ಯಾದ ಕಚ್ಚಾ ತೈಲವು ಭಾರತೀಯ ಸಂಸ್ಕರಣಾಗಾರಗಳ ವೆಚ್ಚವನ್ನು ಕಡಿಮೆ ಮಾಡಿದೆ. ಭಾರತವು ತನ್ನ ತೈಲ ಅಗತ್ಯಗಳಲ್ಲಿ 85% ಕ್ಕಿಂತ ಹೆಚ್ಚು ಆಮದು ಮಾಡಿಕೊಳ್ಳುತ್ತದೆ.

    ಭಾರತ ಎಷ್ಟು ರಷ್ಯಾದ ತೈಲವನ್ನು ಖರೀದಿಸುತ್ತೆ?
    ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದುದಾರ ಮತ್ತು ಗ್ರಾಹಕ ರಾಷ್ಟ್ರವಾದ ಭಾರತವು ಈ ವರ್ಷದ ಮೊದಲಾರ್ಧದಲ್ಲಿ ದಿನಕ್ಕೆ ಸುಮಾರು 1.75 ಮಿಲಿಯನ್ ಬ್ಯಾರೆಲ್‌ಗಳಷ್ಟು ರಷ್ಯಾದ ತೈಲವನ್ನು ಖರೀದಿಸಿದೆ. ಇದು ಒಂದು ವರ್ಷದ ಹಿಂದಿನದಕ್ಕಿಂತ 1% ಹೆಚ್ಚಾಗಿದೆ ಎಂದು ವ್ಯಾಪಾರ ದತ್ತಾಂಶಗಳು ತೋರಿಸಿವೆ. ಭಾರತದ ರಾಜ್ಯ ಸಂಸ್ಕರಣಾಗಾರರು ರಷ್ಯಾದ ತೈಲವನ್ನು ವ್ಯಾಪಾರಿಗಳಿಂದ ಖರೀದಿಸುತ್ತಿದ್ದರೆ, ಖಾಸಗಿ ಸಂಸ್ಕರಣಾಗಾರರಾದ ನಯಾರಾ ಎನರ್ಜಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RELI.NS) ಹೊಸ ಟ್ಯಾಬ್ ಅನ್ನು ತೆರೆಯುತ್ತದೆ. ವಿಶ್ವದ ಅತಿದೊಡ್ಡ ಸಂಸ್ಕರಣಾ ಸಂಕೀರ್ಣದ ನಿರ್ವಾಹಕರು, ರೋಸ್ನೆಫ್ಟ್ (ROSN.MM) ನೊಂದಿಗೆ ದೀರ್ಘಾವಧಿಯ ಪೂರೈಕೆ ಒಪ್ಪಂದಗಳನ್ನು ಹೊಂದಿದ್ದಾರೆ.

    ರಷ್ಯಾ ತೈಲವನ್ನು ಭಾರತ ಖರೀದಿಸಬಾರದು ಅಂತ ಟ್ರಂಪ್ ಹೇಳೋದ್ಯಾಕೆ?
    ರಷ್ಯಾದ ತೈಲ ಖರೀದಿಯನ್ನು ಮುಂದುವರೆಸುತ್ತಿರುವುದರಿಂದ, ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲಿನ ಸುಂಕವನ್ನು 50%ಗೆ ಗಣನೀಯವಾಗಿ ಹೆಚ್ಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಉಕ್ರೇನ್‌ನೊಂದಿಗೆ ಶಾಂತಿ ಒಪ್ಪಂದ ಮಾಡಿಕೊಳ್ಳಲು ವಿಫಲವಾದರೆ ರಷ್ಯಾದ ರಫ್ತುಗಳನ್ನು ಖರೀದಿಸುವ ದೇಶಗಳು ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ಭಾರತವು ರಷ್ಯಾದೊಂದಿಗಿನ ತನ್ನ ದೀರ್ಘಕಾಲದ ಸಂಬಂಧಗಳು ಮತ್ತು ಅದರ ಆರ್ಥಿಕ ಅಗತ್ಯಗಳನ್ನು ಉಲ್ಲೇಖಿಸಿ ಟ್ರಂಪ್ ನಿಲುವನ್ನು ವಿರೋಧಿಸಿದೆ. ಆದಾಗ್ಯೂ, ದೇಶದ ರಾಜ್ಯ ಸಂಸ್ಕರಣಾಗಾರರು ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸಿದ್ದಾರೆ.

    ರಷ್ಯಾದ ತೈಲ ಖರೀದಿಸಲು ಆಗದಿದ್ರೆ ಭಾರತಕ್ಕಿರುವ ಆಯ್ಕೆಗಳೇನು?
    ರಷ್ಯಾದ ಹೊರತಾಗಿ, ಭಾರತವು ಉಕ್ರೇನ್ ಯುದ್ಧದ ಮೊದಲು ತನ್ನ ಪ್ರಮುಖ ಪೂರೈಕೆದಾರ ಇರಾಕ್‌ನಿಂದ ತೈಲವನ್ನು ಖರೀದಿಸುತ್ತಿತ್ತು. ನಂತರ ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ ಖರೀದಿಸಿದೆ. ಭಾರತೀಯ ಸಂಸ್ಕರಣಾಗಾರರು ವಾರ್ಷಿಕ ಒಪ್ಪಂದಗಳಡಿ ಹೆಚ್ಚಾಗಿ ಮಧ್ಯಪ್ರಾಚ್ಯ ಉತ್ಪಾದಕರಿಂದ ತೈಲವನ್ನು ಖರೀದಿಸುತ್ತಾರೆ. ಟ್ರಂಪ್ ಅವರ ನಿರ್ಬಂಧಗಳ ಎಚ್ಚರಿಕೆಯ ನಂತರ, ಸಂಸ್ಕರಣಾಗಾರರು ಯುನೈಟೆಡ್ ಸ್ಟೇಟ್ಸ್, ಮಧ್ಯಪ್ರಾಚ್ಯ, ಪಶ್ಚಿಮ ಆಫ್ರಿಕಾ ಮತ್ತು ಅಜೆರ್ಬೈಜಾನ್‌ನಿಂದ ಕಚ್ಚಾ ತೈಲವನ್ನು ಖರೀದಿಸಿದ್ದಾರೆ.

    ಅಮೆರಿಕಗೆ ಭಾರತವೇ ಯಾಕೆ ಟಾರ್ಗೆಟ್?
    ರಷ್ಯಾದ ಅತಿದೊಡ್ಡ ಇಂಧನ ಖರೀದಿದಾರರಲ್ಲಿ ಭಾರತದಂತೆಯೇ ಚೀನಾ ಕೂಡ ಇದೆ. ಆದರೆ, ಭಾರತವನ್ನು ಮಾತ್ರ ಅಮೆರಿಕ ಟಾರ್ಗೆಟ್ ಮಾಡುತ್ತಿದೆ. ಹಾಗಾದರೆ, ಟ್ರಂಪ್ ಆಡಳಿತವು ಚೀನಾ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ, ರಷ್ಯಾದ ತೈಲ ಖರೀದಿ ನಿಲ್ಲಿಸುವಂತೆ ಭಾರತದ ಮೇಲೆ ಒತ್ತಡ ಹೇರಿದ್ದು ಏಕೆ ಎಂಬುದು ಪ್ರಶ್ನೆಯಾಗಿದೆ. ರಷ್ಯಾದ ತೈಲದ ಅತಿದೊಡ್ಡ ಖರೀದಿದಾರನಾಗಿ ಚೀನಾ ಕಳೆದ ವರ್ಷ ದಾಖಲೆಯ 109 ಮಿಲಿಯನ್ ಟನ್‌ಗಳಷ್ಟು ಆಮದು ಮಾಡಿಕೊಂಡಿದೆ. ಇದು ಅದರ ಒಟ್ಟು ಇಂಧನ ಆಮದಿನ ಸುಮಾರು 20% ಪ್ರತಿನಿಧಿಸುತ್ತದೆ ಎಂದು ಚೀನಾದ ಕಸ್ಟಮ್ಸ್ ಡೇಟಾ ತಿಳಿಸಿದೆ. ಇದಕ್ಕೆ ವ್ಯತಿರಿಕ್ತವಾಗಿ ಭಾರತವು 2024 ರಲ್ಲಿ 88 ಮಿಲಿಯನ್ ಟನ್ ರಷ್ಯಾದ ತೈಲವನ್ನು ಆಮದು ಮಾಡಿಕೊಂಡಿತು. ಹೀಗಾಗಿ, ಚೀನಾ ರಷ್ಯಾದ ಪ್ರಮುಖ ಆರ್ಥಿಕ ಜೀವನಾಡಿಯಾಗಿದ್ದು, ಈಗ ನಾಲ್ಕನೇ ವರ್ಷದಲ್ಲಿರುವ ಉಕ್ರೇನ್ ಮೇಲಿನ ಯುದ್ಧದಲ್ಲಿ ರಷ್ಯಾಗೆ ಪರೋಕ್ಷವಾಗಿ ಸಹಾಯ ಮಾಡುತ್ತಿದೆ ಎಂಬ ಆರೋಪಕ್ಕೆ ಕಾರಣವಾಗಿದೆ. ವಸ್ತುಸ್ಥಿತಿ ಹೀಗಿದ್ದರೂ, ಚೀನಾವನ್ನು ಬಿಟ್ಟು ಭಾರತವನ್ನು ಅಮೆರಿಕ ಟಾರ್ಗೆಟ್ ಮಾಡಿ ಹೆಚ್ಚಿನ ಸುಂಕ ವಿಧಿಸಿದೆ.

    ಚೀನ ಮೇಲೆ ಟ್ರಂಪ್ ಹೊಸ ಸುಂಕ ವಿಧಿಸಿಲ್ಲ ಯಾಕೆ?
    ಕಳೆದ ವಾರ ಅಲಾಸ್ಕಾದಲ್ಲಿ ರಷ್ಯಾ-ಉಕ್ರೇನ್ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಟ್ರಂಪ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಒಪ್ಪಂದಕ್ಕೆ ಬರಲು ವಿಫಲವಾದರು. ಇದಾದ ಬಳಿಕ, ಚೀನಾ ಮೇಲೆ ದ್ವಿತೀಯ ನಿರ್ಬಂಧಗಳನ್ನು ವಿಧಿಸುತ್ತೀರಾ ಎಂದು ಕೇಳಿದಾಗ, ಟ್ರಂಪ್, ನಾನು ಅದರ ಬಗ್ಗೆ ಯೋಚಿಸಬೇಕಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಹಲವಾರು ಯುಎಸ್ ಕೈಗಾರಿಕೆಗಳು ಚೀನಾದ ಖನಿಜಗಳ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ, ನಡೆಯುತ್ತಿರುವ ವ್ಯಾಪಾರ ಮಾತುಕತೆಗಳಲ್ಲಿ ಅವು ಕೇಂದ್ರ ಸಮಸ್ಯೆಯಾಗಿ ಉಳಿದಿವೆ. ಯುಎಸ್ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್, ಚೀನಾ ವಿರುದ್ಧ ದ್ವಿತೀಯ ನಿರ್ಬಂಧಗಳನ್ನು ವಿಧಿಸದಿರುವ ಅಮೆರಿಕದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಉಕ್ರೇನ್ ಯುದ್ಧದ ಮೊದಲು ರಷ್ಯಾದ ತೈಲದ 13% ಅನ್ನು ಚೀನಾ ಖರೀದಿಸಿತು. ಅದು ಈಗ 16% ಹೆಚ್ಚಾಗಿದೆ. ಹೀಗಾಗಿ, ಚೀನಾ ತನ್ನ ತೈಲದ ವೈವಿಧ್ಯಮಯ ಇನ್ಪುಟ್ ಅನ್ನು ಹೊಂದಿದೆ. ಆದರೆ, ಉಕ್ರೇನ್ ಯುದ್ಧದ ಮೊದಲು, ಭಾರತದ ರಷ್ಯಾದ ತೈಲ ಆಮದು ಶೇ.1 ಕ್ಕಿಂತ ಕಡಿಮೆಯಿತ್ತು. ಈಗ ಅದು 42% ರ ವರೆಗೆ ಇದೆ ಎಂದು ತಿಳಿಸಿದ್ದಾರೆ.

    ತೈಲ ಖರೀದಿಗೆ ಭಾರತಕ್ಕೆ 5% ರಿಯಾಯಿತಿ ಕೊಟ್ಟ ರಷ್ಯಾ
    ಭಾರತ ಖರೀದಿಸುವ ತೈಲಗೆ 5% ರಿಯಾಯಿತಿ ನೀಡಲಾಗುವುದು ಎಂದು ರಷ್ಯಾ ತಿಳಿಸಿದೆ. ಭಾರತಕ್ಕೆ ರಷ್ಯಾದ ಉಪ ವ್ಯಾಪಾರ ಪ್ರತಿನಿಧಿ ಎವ್ಗೆನಿ ಗ್ರಿವಾ, ರಾಜಕೀಯ ಪರಿಸ್ಥಿತಿಯ ಹೊರತಾಗಿಯೂ, ಭಾರತವು ಸರಿಸುಮಾರು ಅದೇ ಮಟ್ಟದ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ರಿಯಾಯಿತಿಗಳಿಗೆ ಸಂಬಂಧಿಸಿದಂತೆ, ಇದು ವಾಣಿಜ್ಯ ರಹಸ್ಯವಾಗಿದೆ ಎಂದು ತಿಳಿಸಿದ್ದಾರೆ. ಭಾರತಕ್ಕೆ ಇದು ಸವಾಲಿನ ಪರಿಸ್ಥಿತಿಯಾಗಿದ್ದರೂ, ನಮಗೆ ನಮ್ಮ ಸಂಬಂಧಗಳಲ್ಲಿ ನಂಬಿಕೆ ಇದೆ. ಬಾಹ್ಯ ಒತ್ತಡದ ಹೊರತಾಗಿಯೂ ಭಾರತ-ರಷ್ಯಾ ಇಂಧನ ಸಹಕಾರ ಮುಂದುವರಿಯುತ್ತದೆ’ ಎಂದು ರಷ್ಯಾದ ಉಪ ಮುಖ್ಯಸ್ಥ ಮಿಷನ್ ರೋಮನ್ ಬಾಬುಷ್ಕಿನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ನೆಲೆ ಕಳೆದುಕೊಳ್ತಿದ್ದಾರಾ ಸಣ್ಣ ಪೂರೈಕೆದಾರರು?
    ಭಾರತಕ್ಕೆ ತೈಲ ಪೂರೈಕೆಯಲ್ಲಿ ರಷ್ಯಾದ ಪ್ರಾಬಲ್ಯ ಹೆಚ್ಚಾಗಿದೆ. ಇದು ವ್ಯಾಪಾರದ ಚಲನಶೀಲತೆಯನ್ನು ಬದಲಾಯಿಸಿದೆ. ಆದರೆ, ಮಧ್ಯಪ್ರಾಚ್ಯದ ಪ್ರಮುಖ ಪೂರೈಕೆದಾರರ ಸ್ಥಾನವನ್ನು ಹೆಚ್ಚಾಗಿ ರಷ್ಯಾವೇ ಉಳಿಸಿಕೊಂಡಿದೆ. ಇರಾಕ್, ಸೌದಿ ಅರೇಬಿಯಾ ಮತ್ತು ಯುಎಇ ಪ್ರಾಥಮಿಕ ಪೂರೈಕೆದಾರರಾಗಿ ಉಳಿದಿವೆ. ಆದರೆ, ಸಣ್ಣ ರಫ್ತುದಾರರ ಮಾರುಕಟ್ಟೆ ಉಪಸ್ಥಿತಿ ಕುಗ್ಗಿದೆ. ಉಕ್ರೇನ್ ಸಂಘರ್ಷದ ಮೊದಲು, 2021 ರಿಂದ ಇರಾಕ್ ಮತ್ತು ಸೌದಿ ಅರೇಬಿಯಾದಿಂದ ವಿತರಣೆಗಳು ಸರಿಸುಮಾರು 5% ರಷ್ಟು ಕಡಿಮೆಯಾಗಿದೆ. ಆದರೆ ಯುಎಇ ಸಾಗಣೆಗಳು 3% ರಷ್ಟು ಹೆಚ್ಚಾಗಿದೆ ಎಂದು ಇಂಧನ ಸರಕು ಟ್ರ‍್ಯಾಕರ್ ವೋರ್ಟೆಕ್ಸಾ ವರದಿ ಮಾಡಿದೆ. ಆದಾಗ್ಯೂ, ಭಾರತದ ಸ್ಥಾಪಿತ ಮಧ್ಯಪ್ರಾಚ್ಯ ಪೂರೈಕೆದಾರರು ಸಹ ತಮ್ಮ ಉಪಸ್ಥಿತಿಯನ್ನು ಉಳಿಸಿಕೊಂಡಿದ್ದಾರೆ.

    2025 ರಲ್ಲಿ, ಇರಾಕ್ ಸರಬರಾಜುಗಳು ದಿನಕ್ಕೆ ಸರಾಸರಿ 898,000 ಬ್ಯಾರೆಲ್, ಸೌದಿ ಅರೇಬಿಯನ್ ವಿತರಣೆಗಳು 640,000 ಬ್ಯಾರೆಲ್, ಯುಎಇ ಕೊಡುಗೆಗಳು 448,000 ಬ್ಯಾರೆಲ್. 2021 ಕ್ಕೆ ಹೋಲಿಸಿದರೆ, ಇರಾಕಿ ಮತ್ತು ಸೌದಿ ಪ್ರಮಾಣಗಳು ಸರಿಸುಮಾರು 5% ರಷ್ಟು ಕಡಿಮೆಯಾಗಿದೆ. ಆದರೆ ಯುಎಇ 3% ರಷ್ಟು ಹೆಚ್ಚಾಗಿದೆ. ಸಣ್ಣ ಅಥವಾ ದೂರದ ಪೂರೈಕೆದಾರರಿಗೆ ಇದರ ಪರಿಣಾಮ ಹೆಚ್ಚು ಮಹತ್ವದ್ದಾಗಿದೆ. ಅಮೆರಿಕನ್ ರಫ್ತುಗಳು 33% ರಷ್ಟು ಕಡಿಮೆಯಾಗಿದೆ. ನೈಜೀರಿಯನ್ ಮತ್ತು ಕುವೈತ್ ಸಾಗಣೆಗಳು ಅರ್ಧದಷ್ಟು ಕಡಿಮೆಯಾಗಿದೆ. ಆದರೆ ಒಮಾನಿ ಮತ್ತು ಮೆಕ್ಸಿಕನ್ ಸರಬರಾಜುಗಳು 80% ಕ್ಕಿಂತ ಹೆಚ್ಚು ಕಡಿಮೆಯಾಗಿದೆ. 2025 ರಲ್ಲಿ, ಯುಎಸ್ ವಿತರಣೆಗಳು ದಿನಕ್ಕೆ ಸರಾಸರಿ 271,000 ಬ್ಯಾರೆಲ್, ನೈಜೀರಿಯನ್ 151,000 ಬ್ಯಾರೆಲ್, ಕುವೈತ್ 131,000 ಬ್ಯಾರೆಲ್, ಒಮಾನಿ 20,000 ಬ್ಯಾರೆಲ್ ಮತ್ತು ಮೆಕ್ಸಿಕನ್ 24,000 ಬ್ಯಾರೆಲ್ ಇದೆ.

  • 2-3 ವಾರದ ನಂತ್ರ ಹೊಸ ಸುಂಕದ ಬಗ್ಗೆ ಯೋಚಿಸ್ತೀನಿ – ಭಾರತಕ್ಕೆ ಸಿಗುತ್ತಾ ಸುಂಕ ವಿನಾಯ್ತಿ?

    2-3 ವಾರದ ನಂತ್ರ ಹೊಸ ಸುಂಕದ ಬಗ್ಗೆ ಯೋಚಿಸ್ತೀನಿ – ಭಾರತಕ್ಕೆ ಸಿಗುತ್ತಾ ಸುಂಕ ವಿನಾಯ್ತಿ?

    ವಾಷಿಂಗ್ಟನ್‌: ರಷ್ಯಾದ ತೈಲ (Russian Oil) ಖರೀದಿಸುವ ದೇಶಗಳ ಮೇಲೆ ಹೊಸ ಸುಂಕ ವಿಧಿಸುವುದನ್ನು ಪರಿಗಣಿಸುವ ಅಗತ್ಯ ಸದ್ಯಕ್ಕಿಲ್ಲ. 2 ಅಥವಾ 3 ವಾರಗಳ ಬಳಿಕ ದ್ವಿತೀಯ ಸುಂಕದ ಬಗ್ಗೆ ಯೋಚಿಸುವುದಾಗಿ ಯುಎಸ್‌ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಹೇಳಿದ್ದಾರೆ.

    ಅಲಾಸ್ಕಾದಲ್ಲಿ ಪುಟಿನ್‌ (Vladimir Putin) ಮತ್ತು ಟ್ರಂಪ್‌ ನಡುವಿನ ಮಹತ್ವದ ಸಭೆಯ ಯಾವುದೇ ಒಪ್ಪಂದಗಳಿಲ್ಲದೇ ಅಂತ್ಯಗೊಂಡಿತು. ಆದ್ರೆ ಸಭೆಯ ಬಳಿಕ ಮಾಧ್ಯಮವೊಂದರಲ್ಲಿ ಮಾತನಾಡಿದ ಟ್ರಂಪ್‌, ಹೊಸ ಸುಂಕಗಳ ಬಗ್ಗೆ ಹೆಚ್ಚು ಯೋಚಿಸುವ ಅಗತ್ಯವಿಲ್ಲ ಅಂತ ಭಾವಿಸುತ್ತೇನೆ. 2-3 ವಾರಗಳ ನಂತ್ರ ಯೋಚಿಸಬೇಕಾಗುತ್ತೆ, ನಂತರ ಮರುಪರಿಶೀಲಿಸಬೇಕಾಗಬಹುದು ಎಂದಿದ್ದಾರೆ. ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಕುರಿತು ಈ ಮಾತುಗಳನ್ನಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಭಾರತಕ್ಕೆ ಸಿಗುತ್ತಾ ರಿಲೀಫ್‌?
    ಟ್ರಂಪ್‌ ಎಚ್ಚರಿಕೆ ಬಳಿಕವೂ ರಷ್ಯಾದಿಂದ ತೈಲ ಖರೀದಿ ಮುಂದುವರಿಸಿದ್ದರಿಂದ ಕಳೆದ ತಿಂಗಳು ಭಾರತೀಯ ಸರಕುಗಳ ಮೇಲೆ ಶೇ.50 ರಷ್ಟು ಸುಂಕ ವಿಧಿಸಿದ್ದಾರೆ. ಇದು ಆಗಸ್ಟ್‌ 27ರಿಂದ ಅನ್ವಯವಾಗಲಿದೆ. ಆದ್ರೆ ಟ್ರಂಪ್‌ ಅವರ ಹೇಳಿಕೆಯು ಭಾರತದ ಮೇಲಿನ ಸುಂಕದ ಪ್ರಮಾಣ 50 ರಿಂದ 25%ಗೆ ಇಳಿಕೆಯಾಲಿದೆಯೇ ಎಂಬುದನ್ನು ಕಾಡುನೋಡಬೇಕಿದೆ. ಇದನ್ನೂ ಓದಿ: ಉಕ್ರೇನ್‌ ಜೊತೆಗಿನ ಯುದ್ಧ ಕೊನೆಗೊಳಿಸದ ಹೊರತು ನಮ್ಮ ನಡ್ವೆ ಒಪ್ಪಂದವಿಲ್ಲ – ಪುಟಿನ್‌ಗೆ ಟ್ರಂಪ್‌ ಸ್ಟ್ರೈಟ್‌ ಹಿಟ್‌

    50% ಸುಂಕ, ರಷ್ಯಾಗೆ ದೊಡ್ಡ ಹೊಡೆತ ಅಂದಿದ್ದ ಟ್ರಂಪ್‌
    ಅಲಾಸ್ಕ ಸಭೆಯಗೂ ಮುನ್ನ ಮಾತನಾಡಿದ್ದ ಟ್ರಂಪ್‌, ಭಾರತದ (India) ಮೇಲೆ 50% ಸುಂಕ ವಿಧಿಸಿರುವುದು ರಷ್ಯಾದ (Russia) ಆರ್ಥಿಕತೆಗೆ ದೊಡ್ಡ ಹೊಡೆತ ಕೊಟ್ಟಿದೆ. ಉಕ್ರೇನ್‌ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾದಿಂದ ಭಾರತ ತೈಲ ಖರೀದಿಸುತ್ತಿದೆ. ಹೀಗಾಗಿ, ಭಾರತದ ಮೇಲೆ ಅಮೆರಿಕ ಭಾರಿ ಸುಂಕ ವಿಧಿಸಿದೆ. ಭಾರತ ಸೇರಿದಂತೆ ಹಲವಾರು ದೇಶಗಳ ಮೇಲೆ ಅಮೆರಿಕದ ಸುಂಕ ಹೇರಿಕೆಯಿಂದಾಗಿ ರಷ್ಯಾದ ಆರ್ಥಿಕತೆಯು ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ. ಇದರಿಂದ ರಷ್ಯಾ ಮಾತುಕತೆಗೆ ಮುಂದಾಗಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಸಿಂಧೂ ಜಲ ಒಪ್ಪಂದ ಸ್ಥಗಿತ ಮುಂದುವರಿಸಿದ್ರೆ ಯುದ್ಧದಿಂದ ಹಿಂದೆ ಸರಿಯಲ್ಲ, ಇದು ಮೋದಿ ಸರ್ಕಾರಕ್ಕೆ ಸಂದೇಶ: ಬಿಲಾವಲ್‌ ಭುಟ್ಟೋ

  • ಉಕ್ರೇನ್‌ ಜೊತೆಗಿನ ಯುದ್ಧ ಕೊನೆಗೊಳಿಸದ ಹೊರತು ನಮ್ಮ ನಡ್ವೆ ಒಪ್ಪಂದವಿಲ್ಲ – ಪುಟಿನ್‌ಗೆ ಟ್ರಂಪ್‌ ಸ್ಟ್ರೈಟ್‌ ಹಿಟ್‌

    ಉಕ್ರೇನ್‌ ಜೊತೆಗಿನ ಯುದ್ಧ ಕೊನೆಗೊಳಿಸದ ಹೊರತು ನಮ್ಮ ನಡ್ವೆ ಒಪ್ಪಂದವಿಲ್ಲ – ಪುಟಿನ್‌ಗೆ ಟ್ರಂಪ್‌ ಸ್ಟ್ರೈಟ್‌ ಹಿಟ್‌

    – 3 ಗಂಟೆ ಸಭೆ, 12 ನಿಮಿಷದಲ್ಲಿ ಸುದ್ದಿಗೋಷ್ಠಿ ಮುಕ್ತಾಯ
    – ಯಾವುದೇ ಒಪ್ಪಂದವಿಲ್ಲದೇ ಅಂತ್ಯಗೊಂಡ ಅಲಾಸ್ಕ ಸಭೆ

    ವಾಷಿಂಗ್ಟನ್‌: ಉಕ್ರೇನ್-ರಷ್ಯಾ ಸಂಘರ್ಷವನ್ನು (Russia Ukraine War) ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಅಲಾಸ್ಕದಲ್ಲಿ ನಡೆಸಿದ ಸಭೆಯು (Alaska Summit) ಯಾವುದೇ ಅಂತಿಮ ಒಪ್ಪಂದಗಳಿಲ್ಲದೇ ಅಂತ್ಯಗೊಂಡಿದೆ.

    ಉಭಯ ನಾಯಕರ ನಡುವೆ ಅಂಕೊರೇಜ್‌ನಲ್ಲಿ ಅಮೆರಿಕದ ಸೇನಾ ಮೂಲಸೌಕರ್ಯವಿರುವ ಜಾಯಿಂಟ್ ಬೇಸ್ ಎಲೆಂಡಾರ್ಫ್–ರಿಚರ್ಡ್‌ಸನ್‌ನಲ್ಲಿ (JBER) ಸುಮಾರು ಮೂರು ಗಂಟೆ ಸಭೆ ನಡೆಯಿತು. ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿ ಕೇವಲ 12 ನಿಮಿಷಗಳಲ್ಲಿ ಮುಕ್ತಾಯಗೊಂಡಿತು. ಇದನ್ನೂ ಓದಿ: ವಿದೇಶಗಳಲ್ಲೂ ಪೊಲೀಸ್ ಸ್ಟೇಷನ್‌ – 53 ದೇಶಗಳಲ್ಲಿ ಚೀನಾದ ಕುತಂತ್ರ!

    ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಟ್ರಂಪ್‌ (Donald Trump), ಅನೇಕ ಮಾತುಕತೆಗಳಿಗೆ ಒಪ್ಪಿಗೆ ಸೂಚಿಸಿದ್ದು, ಕೆಲವೇ ಕೆಲವು ಬಾಕಿ ಉಳಿದಿವೆ. ರಷ್ಯಾ ಜೊತೆಗೆ ಕೆಲವು ಬಗೆಹರಿಸಲಾಗದ ಸಮಸ್ಯೆಗಳಿವೆ. ಅಲ್ಲಿಗೆ ತಲುಪಲು ನಮಗೆ ಉತ್ತಮ ಅವಕಾಶವೂ ಇದೆ. ಅವೆಲ್ಲದರ ಒಪ್ಪಂದವಾಗುವವರೆಗೆ ಅಮೆರಿಕ ರಷ್ಯಾ ನಡುವೆ ಯಾವುದೇ ಒಪ್ಪಂದವಿಲ್ಲ ಎಂದು ಟ್ರಂಪ್‌ ಹೇಳಿದ್ದಾರೆ. ಇದನ್ನೂ ಓದಿ: ಸಿಂಧೂ ಜಲ ಒಪ್ಪಂದ ಸ್ಥಗಿತ ಮುಂದುವರಿಸಿದ್ರೆ ಯುದ್ಧದಿಂದ ಹಿಂದೆ ಸರಿಯಲ್ಲ, ಇದು ಮೋದಿ ಸರ್ಕಾರಕ್ಕೆ ಸಂದೇಶ: ಬಿಲಾವಲ್‌ ಭುಟ್ಟೋ

    ಮುಂದುವರಿದು.. ಪುಟಿನ್‌ ಜೊತೆ ಉಕ್ರೇನ್‌ ಕುರಿತ ಮಾತುಕತೆಯಲ್ಲಿ ಒಂದಿಷ್ಟು ಪ್ರಗತಿ ಕಂಡುಬಂದಿದೆ. ಆದ್ರೆ ಗುರಿ ಸಾಧನೆ ಆಗುವವರೆಗೆ ಸಂಪೂರ್ಣ ಒಪ್ಪಂದವಾಗವುದಿಲ್ಲ ಎಂದು ನೇರವಾಗಿ ಹೇಳಿದ್ದಾರೆ. ಇದನ್ನೂ ಓದಿ: ಬಾಂಗ್ಲಾ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತ

    ಇದೇ ಸಂದರ್ಭದಲ್ಲಿ ಪುಟಿನ್‌, ದೇಶದ ಭದ್ರತೆಗೆ ಆತಂಕವಿರುವುದರಿಂದ ಉಕ್ರೇನ್‌ಗೆ ಸಂಬಂಧಿಸಿದಂತೆ ನಮ್ಮ ನಿಲುವು ಬದಲಾಗುವುದಿಲ್ಲ ಎಂದು ಖಚಿತಪಡಿಸಿದರು. ಅಲ್ಲದೇ ಮಾತುಕತೆಯು ದೀರ್ಘಕಾಲೀನವಾಗಿಸಬೇಕಾದ್ರೆ, ಸಂಘರ್ಷಕ್ಕೆ ಕಾರಣವಾದ ಎಲ್ಲ ಅಂಶಗಳನ್ನೂ ಸರಿಪಡಿಸಬೇಕು ಎಂಬುದು ನಮಗೆ ಮನವರಿಕೆಯಾಗಿದೆ. ಆ ಮೂಲಕ, ಉಕ್ರೇನ್ ಮತ್ತು ಅದರ ಪ್ರದೇಶ ಪಶ್ಚಿಮದ ಭಾಗವಾಗುವುದನ್ನು ಒಪ್ಪಲಾಗದು ಎಂಬ ರಷ್ಯಾ ನಿಲುವನ್ನು ಪುನರುಚ್ಚರಿಸಿದ್ದಾರೆ.

    ಆದಾಗ್ಯೂ ಟ್ರಂಪ್‌, ಎರಡೂ ದೇಶಗಳ ನಡುವಿನ ಯುದ್ಧ ಕೊನೆಗೊಳಿಸಲು ಒಂದು ಒಪ್ಪಂದ ಆಗುವವರೆಗೆ ಯಾವುದೇ ಒಪ್ಪಂದವಿಲ್ಲ ಎಂದು ಅವರು ಪುನರುಚ್ಚರಿಸಿದರು.

  • ಸುಂಕ ಸಮರದ ಬೆನ್ನಲ್ಲೇ ಮೋದಿಗೆ ಕರೆ ಮಾಡಿದ ಝೆಲೆನ್ಸ್ಕಿ

    ಸುಂಕ ಸಮರದ ಬೆನ್ನಲ್ಲೇ ಮೋದಿಗೆ ಕರೆ ಮಾಡಿದ ಝೆಲೆನ್ಸ್ಕಿ

    ನವದೆಹಲಿ: ಅಮೆರಿಕ (USA) ವಿಧಿಸಿದ ಸುಂಕ ಸಮರದ ಬೆನ್ನಲ್ಲೇ ಉಕ್ರೇನ್ (Ukraine) ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Zelenskyy) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಜೊತೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ.

    ಮಾತುಕತೆ ವೇಳೆ ಮೋದಿ, ಸಂಘರ್ಷವನ್ನು ಶಾಂತಿಯುತ ಇತ್ಯರ್ಥ ಮಾಡುವ ಬಗ್ಗೆ ಮತ್ತು ಶಾಂತಿಯನ್ನು ಶೀಘ್ರವಾಗಿ ಪುನಃಸ್ಥಾಪಿಸುವ ಗುರಿಯನ್ನು ಹೊಂದಿರುವ ಪ್ರಯತ್ನಗಳಿಗೆ ಬೆಂಬಲ ವ್ಯಕ್ತಪಡಿಸಿದರು. ಈ ಸಂಬಂಧ ಭಾರತವು ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವ ಬದ್ಧತೆಯನ್ನು ಪ್ರಧಾನಿ ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಿಂದ ಭಾರತಕ್ಕೆ ಬೆದರಿಕೆ ಹಾಕಿದ ಪಾಕ್‌ ಸೇನಾ ಮುಖ್ಯಸ್ಥ

    ಭಾರತ-ಉಕ್ರೇನ್ ದ್ವಿಪಕ್ಷೀಯ ಪಾಲುದಾರಿಕೆಯಲ್ಲಿನ ಪ್ರಗತಿಯನ್ನು ನಾಯಕರು ಪರಿಶೀಲಿಸಿದರು, ಪರಸ್ಪರ ಆಸಕ್ತಿಯ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದ್ದಾರೆ.

    ಎಕ್ಸ್‌ನಲ್ಲಿ ಝೆಲೆನ್ಸ್ಕಿ ಪೋಸ್ಟ್‌ ಮಾಡಿ, ನಾನು ಮೋದಿ ಅವರೊಂದಿಗೆ ನಾನು ದೀರ್ಘ ಸಂಭಾಷಣೆ ನಡೆಸಿದೆ. ನಮ್ಮ ದ್ವಿಪಕ್ಷೀಯ ಸಹಕಾರ ಸೇರಿದಂತೆ ಹಲವು ವಿಷಯಗಳನ್ನು ನಾವು ವಿವರವಾಗಿ ಚರ್ಚಿಸಿದ್ದೇವೆ. ನಮ್ಮ ಜನರಿಗೆ ಬೆಂಬಲ ನೀಡಿದ ಪ್ರಧಾನಿಯವರಿಗೆ ನಾನು ಕೃತಜ್ಞನಾಗಿದ್ದೇನೆ ಎಂದಿದ್ದಾರೆ.

    ರಷ್ಯಾದ ವಿರುದ್ಧದ ನಿರ್ಬಂಧಗಳನ್ನು ಸಹ ನಾವು ವಿವರವಾಗಿ ಚರ್ಚಿಸಿದ್ದೇವೆ. ರಷ್ಯಾದಿಂದ ಇಂಧನ ಆಮದು ಮಾಡುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಸೆಪ್ಟೆಂಬರ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸಮಯದಲ್ಲಿ ಇಬ್ಬರು ಪರಸ್ಪರ ಭೇಟಿಯಾಗಲು ನಾವು ಒಪ್ಪಿಕೊಂಡಿದ್ದೇವೆ ಎಂದು ಬರೆದುಕೊಂಡಿದ್ದಾರೆ.

  • ಪುಟಿನ್‌ ಭೇಟಿಗೆ ಟ್ರಂಪ್‌ ಮುಹೂರ್ತ ಫಿಕ್ಸ್‌ – ಉಕ್ರೇನ್‌ನಲ್ಲಿ ಶಾಂತಿ ಸ್ಥಾಪನೆಗೆ ಮಾತುಕತೆ

    ಪುಟಿನ್‌ ಭೇಟಿಗೆ ಟ್ರಂಪ್‌ ಮುಹೂರ್ತ ಫಿಕ್ಸ್‌ – ಉಕ್ರೇನ್‌ನಲ್ಲಿ ಶಾಂತಿ ಸ್ಥಾಪನೆಗೆ ಮಾತುಕತೆ

    ವಾಷಿಂಗ್ಟನ್: ಉಕ್ರೇನ್‌ನಲ್ಲಿ (Ukraine) ಶಾಂತಿ ಸ್ಥಾಪಿಸುವ ಸಂಬಂಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಅವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

    ಮುಂದಿನ ಒಂದು ವಾರದೊಳಗೆ ಅಲಾಸ್ಕಾದಲ್ಲಿ ಪುಟಿನ್‌ ಭೇಟಿಯಾಗುವುದಾಗಿ ಟ್ರಂಪ್‌ ತಿಳಿಸಿದ್ದಾರೆ. ವಶಪಡಿಸಿಕೊಂಡಿರುವ ತಮ್ಮ ತಮ್ಮ ಪ್ರದೇಶಗಳನ್ನು ಮರಳಿ ಪಡೆಯುವ ಸಂಬಂಧ ರಷ್ಯಾ ಮತ್ತು ಉಕ್ರೇನ್‌ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಗೆ ಮೋದಿ ಸ್ವಾಗತಿಸಿದ ಚೀನಾ; ಗಲ್ವಾನ್‌ ಘರ್ಷಣೆ ಬಳಿಕ ಮೊದಲ ಭೇಟಿ

    ಅಮೆರಿಕಾ ಸಂಯುಕ್ತ ಸಂಸ್ಥಾನದ ಅಧ್ಯಕ್ಷನಾಗಿ ನಾನು ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ ಬಹುನಿರೀಕ್ಷಿತ ಸಭೆಯು ಆ.15 ರಂದು ಅಲಾಸ್ಕಾ ರಾಜ್ಯದ ಗ್ರೇಟ್ ಸ್ಟೇಟ್‌ನಲ್ಲಿ ನಡೆಯಲಿದೆ ಎಂದು ಟ್ರಂಪ್ ತಮ್ಮ ಟ್ರೂತ್ ಸೋಶಿಯಲ್ ಸೈಟ್‌ನಲ್ಲಿ ಹೇಳಿದ್ದಾರೆ.

    ಉಕ್ರೇನಿಯನ್ ಬಿಕ್ಕಟ್ಟಿನ ದೀರ್ಘಾವಧಿಯ ಶಾಂತಿಯುತ ಇತ್ಯರ್ಥವನ್ನು ಸಾಧಿಸುವ ಸಂಬಂಧ ಚರ್ಚಿಸಲು ರಷ್ಯಾ ಅಧ್ಯಕ್ಷರು ಗಮನಹರಿಸಲಿದ್ದಾರೆಂದು ಕ್ರೆಮ್ಲಿನ್ ಸಹಾಯಕ ಯೂರಿ ಉಷಕೋವ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಟ್ರಂಪ್‌ ಸುಂಕ ಶಾಕ್‌ ಬೆನ್ನಲ್ಲೇ ಈ ವರ್ಷ ಭಾರತಕ್ಕೆ ಪುಟಿನ್‌ ಭೇಟಿ

    ಫೆಬ್ರವರಿ 2022 ರಲ್ಲಿ ಉಕ್ರೇನ್‌ ಮೇಲೆ ರಷ್ಯಾ ಯುದ್ಧವನ್ನು ಪ್ರಾರಂಭಿಸಿತು. ಯುದ್ಧದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದಾರೆ. ಲಕ್ಷಾಂತರ ಜನರು ತಮ್ಮ ಮನೆಗಳನ್ನು ಬಿಟ್ಟು ಬೇರೆ ಕಡೆ ವಲಸೆ ಹೋಗಿದ್ದಾರೆ.

    ಟ್ರಂಪ್‌ ಅಧಿಕಾರಕ್ಕೆ ಬಂದಾಗಿನಿಂದ, ಉಕ್ರೇನ್‌ನಲ್ಲಿ ಶಾಂತಿ ಸ್ಥಾಪನೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ಅವರೊಂದಿಗೆ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಕ್ಕೆ ಮುಂಚಿತವಾಗಿ ಪುಟಿನ್‌, ಚೀನಾ ಮತ್ತು ಭಾರತದ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.