Tag: Ukraine crisis

  • ಉಕ್ರೇನ್ ಬಿಕ್ಕಟ್ಟು- ಶಾಲೆಯ ಮೇಲೆ ರಷ್ಯಾ ಬಾಂಬ್ ದಾಳಿ, 60 ಮಂದಿ ಸಾವು

    ಉಕ್ರೇನ್ ಬಿಕ್ಕಟ್ಟು- ಶಾಲೆಯ ಮೇಲೆ ರಷ್ಯಾ ಬಾಂಬ್ ದಾಳಿ, 60 ಮಂದಿ ಸಾವು

    ಕೀವ್: ಉಕ್ರೇನ್‍ನ ಹಳ್ಳಿಯೊಂದರ ಶಾಲೆಯ ಮೇಲೆ ರಷ್ಯಾ ನಡೆಸಿದ ಬಾಂಬ್ ದಾಳಿಯಲ್ಲಿ 60 ಮಂದಿ ಸಾವನ್ನಪ್ಪಿದ್ದಾರೆ ಎಂದು ಲುಹಾನ್ಸ್ಕ್ ಪ್ರದೇಶದ ಗವರ್ನರ್ ಸೆರ್ಹಿ ಗೈದೈ ಭಾನುವಾರ ಖಚಿತ ಪಡಿಸಿದ್ದಾರೆ.

    ಸುಮಾರು 90 ಮಂದಿ ಆಶ್ರಯ ಪಡೆದಿದ್ದ ಶಾಲೆಯ ಮೇಲೆ ಶನಿವಾರ ಮಧ್ಯಾಹ್ನ ರಷ್ಯಾದ ಪಡೆಗಳು ಬಾಂಬ್ ದಾಳಿ ನಡೆಸಿದ್ದು, ಆ ಪೈಕಿ 60 ಜನ ಸಾವಿಗೀಡಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

    ಬಾಂಬ್ ದಾಳಿಯ ನಂತರ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು ನಾಲ್ಕು ಗಂಟೆಗಳ ಕಾಲ ಬೆಂಕಿಯನ್ನು ನಂದಿಸಲಾಯಿತು. ನಂತರ ಅವಶೇಷಗಳನ್ನು ತೆರವುಗೊಳಿಸಲಾಯಿತು. ದುರದೃಷ್ಟವಶಾತ್, ಇಬ್ಬರ ಶವಗಳು ಪತ್ತೆಯಾಗಿವೆ. ಮೂವತ್ತು ಜನರನ್ನು ಅವಶೇಷಗಳಿಂದ ರಕ್ಷಿಸಿ ಸ್ಥಳಾಂತರಿಸಲಾಗಿದೆ. ಅವರಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ. ಕಟ್ಟಡಗಳ ಅವಶೇಷಗಳಡಿಯಲ್ಲಿ ಅರವತ್ತು ಜನರು ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

    ರಷ್ಯಾದ ಪಡೆಗಳು ನಾಗರಿಕರನ್ನು ಗುರಿಯಾಗಿಸಿಕೊಂಡಿವೆ ಎಂದು ಉಕ್ರೇನ್ ಆರೋಪಿಸಿದೆ. ಈ ಆರೋಪಗಳನ್ನು ಮಾಸ್ಕೋ ತಿರಸ್ಕರಿಸಿದೆ. ಉಕ್ರೇನ್‍ನ ಮೇಲಿನ ರಷ್ಯಾದ 10 ವಾರಗಳ ಯುದ್ಧವು ಸಾವಿರಾರು ಜನರನ್ನು ಕೊಂದಿದೆ. ನಗರಗಳನ್ನು ನಾಶಪಡಿಸಿವೆ. 5 ಮಿಲಿಯನ್ ಉಕ್ರೇನಿಯನ್ನರು ವಿದೇಶಕ್ಕೆ ಪಲಾಯನ ಮಾಡುವಂತೆ ಮಾಡಿದೆ.

    ರಷ್ಯಾ ಮತ್ತು ಉಕ್ರೇನ್ ಬಿಕ್ಕಟ್ಟಿಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕು ಎಂಬ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರ ನಿಲುವನ್ನು ಭದ್ರತಾ ಮಂಡಳಿಯು ಸರ್ವಾನುಮತದಿಂದ ಅಂಗೀಕರಿಸಿದೆ.

    ರಷ್ಯಾ ಫೆ. 24ರಂದು ಉಕ್ರೇನ್ ಮೇಲೆ ಆರಂಭಿಸಿದ ಸೇನಾ ಕಾರ್ಯಾಚರಣೆಯ ನಂತರ ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಉಕ್ರೇನ್ ಬಿಕ್ಕಟ್ಟು ಶಮನಕ್ಕೆ ಸರ್ವಾನುಮತದ ಹೇಳಿಕೆ ಬಂದಿದ್ದು, ಶಾಂತಿ ಮತ್ತು ಭದ್ರತೆಯ ಸ್ಥಾಪನೆ ಬಗ್ಗೆ ತೀವ್ರ ಕಳಕಳಿ ವ್ಯಕ್ತವಾಗಿದೆ.

  • ಉಕ್ರೇನ್ ಉದ್ವಿಗ್ನತೆ ಬಗ್ಗೆ ವಿಶ್ವಸಂಸ್ಥೆಯಲ್ಲಿ ಭಾರತ ಆತಂಕ

    ಉಕ್ರೇನ್ ಉದ್ವಿಗ್ನತೆ ಬಗ್ಗೆ ವಿಶ್ವಸಂಸ್ಥೆಯಲ್ಲಿ ಭಾರತ ಆತಂಕ

    ನ್ಯೂಯಾರ್ಕ್: ರಷ್ಯಾ ಉಕ್ರೇನ್ ಮೇಲೆ ನಡೆಸಬಹುದಾದ ದಾಳಿ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮಂಗಳವಾರ ತುರ್ತು ಸಭೆ ನಡೆಸಿದೆ. ರಷ್ಯಾ-ಉಕ್ರೇನ್ ಗಡಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಬಗ್ಗೆ ಭಾರತ ಸಭೆಯಲ್ಲಿ ಆತಂಕ ವ್ಯಕ್ತಪಡಿಸಿದೆ.

    ನಾವು ಉಕ್ರೇನ್ ಸಂಬಂಧಿಸಿದ ಬೆಳವಣಿಗೆಗಳನ್ನು ನಿಕಟವಾಗಿ ಗಮನಿಸುತ್ತಿದ್ದೇವೆ. ಉಕ್ರೇನ್-ರಷ್ಯಾ ಗಡಿಯ ಸನ್ನಿವೇಶ ಹಾಗೂ ರಷ್ಯನ್ ಒಕ್ಕೂಟ ಸಂಬಂಧಿತ ಘೋಷಣೆಯ ಮೇಲೂ ಗಮನ ಹರಿಸುತ್ತಿದ್ದೇವೆ ಎಂದು ಭಾರತದ ಕಾಯಂ ಪ್ರತಿನಿಧಿ ಟಿಎಸ್ ತಿರುಮೂರ್ತಿ ವಿಶ್ವಸಂಸ್ಥೆ ತಿಳಿಸಿದ್ದಾರೆ.

    ಉಕ್ರೇನ್ ಗಡಿಯಲ್ಲಿ ಹುಟ್ಟಿಸುತ್ತಿರುವ ಉದ್ವಿಗ್ನತೆ ಆತಂಕಕರವಾಗಿದೆ. ಈ ಬೆಳವಣಿಗೆಗಳು ಶಾಂತಿ ಹಾಗೂ ಭದ್ರತೆಗೆ ಅಪಾಯವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನ ಸಮುದ್ರ, ಭೂ-ಆಧಾರಿತ ಪ್ರದೇಶದ ಮೇಲೆ ರಷ್ಯಾ ದಾಳಿ!

    ಉಕ್ರೇನ್ ಮೇಲೆ ರಷ್ಯಾ ನಡೆಸಬಹುದಾದ ದಾಳಿ ಕುರಿತಂತೆ ಅಮೆರಿಕ ಹಾಗೂ ಮಿತ್ರ ರಾಷ್ಟ್ರಗಳು ತುರ್ತು ಸಭೆ ನಡೆಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಮನವಿ ಮಾಡಿತ್ತು. ಉಕ್ರೇನ್ ಮೇಲೆ ರಷ್ಯಾದ ಸಂಭವನೀಯ ಆಕ್ರಮಣ ತಡೆಯಲು ರಾಜತಾಂತ್ರಿಕ ಪ್ರಯತ್ನಗಳು ತಡೆಯುತ್ತಿವೆ. ಇದನ್ನೂ ಓದಿ: ಸ್ವಂತ ಸಾಮಾಜಿಕ ಮಾಧ್ಯಮ ಆ್ಯಪ್ ಬಿಡುಗಡೆ ಮಾಡಿದ ಟ್ರಂಪ್

    ಅಮೆರಿಕ ಮತ್ತು ಯುರೋಪ್ ದೇಶಗಳು ರಷ್ಯಾ ವಿರುದ್ಧವಾಗಿದ್ದರೆ ಭಾರತದ ನಡೆ ಏನು ಎನ್ನುವು ಕುತೂಹಲ ಇತ್ತು. ಆದರೆ ಭಾರತ ಯಾವ ಕಡೆಯೂ ಇಲ್ಲದೇ ಶಾಂತಿ ಮಾತುಕತೆಯಿಂದ ಸಮಸ್ಯೆ ಪರಿಹರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.