Tag: Ukraine War

  • ಟ್ರಂಪ್ ಜೊತೆ ಅಲಾಸ್ಕ ಸಭೆ ಬಳಿಕ ಮೋದಿಗೆ ಫೋನ್ ಮಾಡಿದ ಪುಟಿನ್

    ಟ್ರಂಪ್ ಜೊತೆ ಅಲಾಸ್ಕ ಸಭೆ ಬಳಿಕ ಮೋದಿಗೆ ಫೋನ್ ಮಾಡಿದ ಪುಟಿನ್

    – ಯುದ್ಧದ ವಿಚಾರದಲ್ಲಿ ಶಾಂತಿಯುತ ನಿರ್ಣಯಕ್ಕೆ ಭಾರತದ ಸಲಹೆ

    ನವದೆಹಲಿ: ಉಕ್ರೇನ್‌ ಮೇಲಿನ ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸುವ ಬಗ್ಗೆ ಚರ್ಚಿಸಲು ಅಲಾಸ್ಕದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭೇಟಿಯಾದ ಬಳಿಕ, ಪ್ರಧಾನಿ ಮೋದಿಗೆ (PM Modi) ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಫೋನ್‌ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.

    2022 ರ ಫೆಬ್ರವರಿಯಿಂದ ನಡೆಯುತ್ತಿರುವ ಯುದ್ಧದ ಬಗ್ಗೆ ಭಾರತದ ನಿಲುವನ್ನು ಪ್ರಧಾನಿ ಒತ್ತಿ ಹೇಳಿದರು. ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಅವರು ಕರೆ ನೀಡಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ. ಈ ನಿಟ್ಟಿನಲ್ಲಿ ಭಾರತ ತನ್ನ ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದು ಪುಟಿನ್‌ಗೆ ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್‌ ಪರಿಸ್ಥಿತಿಯನ್ನ ಅಮೆರಿಕ ಸೂಕ್ಷ್ಮವಾಗಿ ಗಮನಿಸ್ತಿದೆ – ಕದನ ವಿರಾಮ ಕುಸಿಯಬಹುದು: ಮಾರ್ಕೊ ರೂಬಿಯೊ

    ಮೋದಿ ಮತ್ತು ಪುಟಿನ್ (Vladimir Putin) ಅವರು ದ್ವಿಪಕ್ಷೀಯ ಸಹಕಾರದ ವಿಷಯಗಳ ಬಗ್ಗೆಯೂ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಬ್ಬರೂ ನಾಯಕರು ನಿಕಟ ಸಂಪರ್ಕದಲ್ಲಿರಲು ಒಪ್ಪಿಕೊಂಡಿದ್ದಾರೆ.

    ಮಾತುಕತೆ ಬಳಿಕ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ನನಗೆ ದೂರವಾಣಿ ಕರೆ ಮಾಡಿದ್ದಕ್ಕಾಗಿ ಮತ್ತು ಅಲಾಸ್ಕದಲ್ಲಿ ಅಧ್ಯಕ್ಷ ಟ್ರಂಪ್ ಅವರೊಂದಿಗಿನ ಇತ್ತೀಚಿನ ಭೇಟಿಯ ಕುರಿತು ಒಳನೋಟಗಳನ್ನು ಹಂಚಿಕೊಂಡಿದ್ದಕ್ಕಾಗಿ ನನ್ನ ಸ್ನೇಹಿತ, ರಷ್ಯಾ ಅಧ್ಯಕ್ಷ ಪುಟಿನ್‌ಗೆ ಧನ್ಯವಾದಗಳು. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಭಾರತ ನಿರಂತರವಾಗಿ ಕರೆ ನೀಡಿದೆ. ಈ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಬೆಂಬಲಿಸುತ್ತದೆ ಎಂದು ತಿಳಿಸಿದ್ದಾರೆ.

    ಟ್ರಂಪ್ (Donald Trump) ಅವರನ್ನು ಭೇಟಿಯಾದ ನಂತರ, ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಮೇಲಿನ ಯುದ್ಧವನ್ನು ನ್ಯಾಯಯುತ ಆಧಾರದ ಮೇಲೆ ಕೊನೆಗೊಳಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದ್ದಾರೆ. ಚರ್ಚೆಯು ಸಮಯೋಚಿತ ಮತ್ತು ಉಪಯುಕ್ತವಾಗಿತ್ತು ಎಂದು ಪುಟಿನ್‌ ತಿಳಿಸಿದ್ದಾರೆ.

    ನಾವು ಬಹಳ ಸಮಯದಿಂದ ಈ ರೀತಿಯ ನೇರ ಮಾತುಕತೆಗಳನ್ನು ನಡೆಸಿರಲಿಲ್ಲ. ನಮ್ಮ ನಿಲುವನ್ನು ಶಾಂತವಾಗಿ ಮತ್ತು ವಿವರವಾಗಿ ಪುನರುಚ್ಚರಿಸಲು ನಮಗೆ ಅವಕಾಶ ಸಿಕ್ಕಿತು. ಸಂಭಾಷಣೆ ಸ್ಪಷ್ಟವಾಗಿ, ಅರ್ಥಪೂರ್ಣವಾಗಿತ್ತು ಎಂದು ಪುಟಿನ್‌ ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ ಮಾರಾಟ ಮಾಡಿದ್ದ ಅಲಾಸ್ಕಾ ಈಗ ಅಮೆರಿಕಾದ ಚಿನ್ನದ ಮೊಟ್ಟೆ!

    ಈ ಬಗ್ಗೆ ಪ್ರತಿಕ್ರಿಯಿಸಿದ್ದ ಟ್ರಂಪ್‌, ಚರ್ಚೆಗೆ ಶ್ಲಾಘನೆ ವ್ಯಕ್ತಪಡಿಸಿದ್ದರು. ಆದರೆ, ಈ ಬಗ್ಗೆ ನಿರ್ದಿಷ್ಟ ವಿವರಗಳನ್ನು ನೀಡಲು ನಿರಾಕರಿಸಿದ್ದರು. ನಾವು ಇನ್ನೂ ಆ ಹಂತಕ್ಕೆ ತಲುಪಿಲ್ಲ. ಆದರೆ, ನಾವು ಪ್ರಗತಿ ಸಾಧಿಸಿದ್ದೇವೆ. ಒಪ್ಪಂದವಾಗುವ ವರೆಗೆ ಯಾವುದೇ ಒಪ್ಪಂದವಿಲ್ಲ ಎಂದು ತಿಳಿಸಿದ್ದಾರೆ.

  • ಪ್ರಭಾವ ಬಳಸಿ ಮೋದಿ ರಷ್ಯಾ-ಉಕ್ರೇನ್‌ ಯುದ್ಧವನ್ನು ನಿಲ್ಲಿಸಬಹುದು: ಝೆಲೆನ್ಸ್ಕಿ

    ಪ್ರಭಾವ ಬಳಸಿ ಮೋದಿ ರಷ್ಯಾ-ಉಕ್ರೇನ್‌ ಯುದ್ಧವನ್ನು ನಿಲ್ಲಿಸಬಹುದು: ಝೆಲೆನ್ಸ್ಕಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಪ್ರಭಾವ ಬಳಸಿ ರಷ್ಯಾ-ಉಕ್ರೇನ್‌ (Russia-Ukraine War) ಯುದ್ಧವನ್ನು ನಿಲ್ಲಿಸಬಹುದು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ಹೇಳಿದ್ದಾರೆ.

    ಭಾರತದ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಸ್ಸಂದೇಹವಾಗಿ ಪ್ರಧಾನಿ ಮೋದಿ ಈ ಕೆಲಸ ಮಾಡಬಹುದು. ಅಗ್ಗದ ಶಕ್ತಿಯನ್ನು ನಿರಾಕರಿಸುವುದು ಮತ್ತು ಆದ್ದರಿಂದ ಯುದ್ಧಗಳನ್ನು ನಡೆಸುವ ಮಾಸ್ಕೋದ ಸಾಮರ್ಥ್ಯವನ್ನು ಕಡಿಮೆ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ದಿನಾಂಕ ಹತ್ತಿರ ಬರುತ್ತಿದ್ದಂತೆ ಝೆಲೆನ್ಸ್ಕಿ ಅವರಿಂದ ಈ ಹೇಳಿಕೆ ಬಂದಿರುವುದು ವಿಶೇಷ. ಒಂದು ವೇಳೆ ನಾನು ಗೆದ್ದರೆ ಉಕ್ರೇನ್‌ ನೀಡುತ್ತಿರುವ ಸೇನಾ ನೆರವನ್ನು ಕಡಿತಗೊಳಿಸುತ್ತೇನೆ ಎಂದು ರಿಪಬ್ಲಿಕನ್‌ ಅಭ್ಯರ್ಥಿ ಟ್ರಂಪ್‌ ಈಗಾಗಲೇ ಹೇಳಿಕೆ ನೀಡಿದ್ದಾರೆ. ಟ್ರಂಪ್‌ ಅಧ್ಯಕ್ಷರಾಗಿ ಆಯ್ಕೆಯಾದರೆ ಉಕ್ರೇನ್‌ ಹೋರಾಟಕ್ಕೆ ಭಾರೀ ಹಿನ್ನಡೆಯಾಗಲಿದೆ.

    ನಿರ್ದಿಷ್ಟವಾಗಿ ಹೇಳುವುದಾದರೆ, ಬಲವಂತವಾಗಿ ರಷ್ಯಾಕ್ಕೆ ಗಡೀಪಾರು ಮಾಡಲಾದ ಉಕ್ರೇನಿಯನ್ ಮಕ್ಕಳನ್ನು ಮರಳಿ ಕರೆತರಲು ಸಹಾಯ ಮಾಡುವಂತೆ ಝೆಲೆನ್ಸ್ಕಿ ಮೋದಿ ಅವರನ್ನು ಕೇಳಿದರು. ರಷ್ಯಾ ಅಧ್ಯಕ್ಷ ಪುಟಿನ್ (Vladimir Putin) ಬಳಿ ಮೋದಿ ತಮ್ಮ ಪ್ರಭಾವ ಬಳಸಿ ಉಕ್ರೇನಿಯನ್ ಮಕ್ಕಳನ್ನು ಮರಳಿ ಕರೆತರಲು ಒತ್ತಾಯಿಸಬಹುದು ಎಂದು ಹೇಳಿದರು. ಇದನ್ನೂ ಓದಿ: ಗಡಿಯಲ್ಲಿ ಶಾಂತಿ ಸ್ಥಾಪನೆಗೆ ಭಾರತ-ಚೀನಾ ಹ್ಯಾಂಡ್‌ಶೇಕ್; ಫಲ ನೀಡುತ್ತಾ ಒಪ್ಪಂದ?

     ನಾವು ಈಗಲೇ ನ್ಯಾಟೋ ಸದಸ್ಯತ್ವವನ್ನು ಕೇಳುತ್ತಿಲ್ಲ.  ಏಕೆಂದರೆ ಯುದ್ಧದ ಸಮಯದಲ್ಲಿ ಅದು ಸಾಧ್ಯವಿಲ್ಲ ಎಂದು ಝೆಲೆನ್ಸ್ಕಿ ತಿಳಿಸಿದರು.

     

  • ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಭಾರತೀಯನ ಸಾವು – ಮರುದಿನವೇ ಸಿಬಿಐ ಮಹತ್ವದ ಕಾರ್ಯಾಚರಣೆ

    ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಭಾರತೀಯನ ಸಾವು – ಮರುದಿನವೇ ಸಿಬಿಐ ಮಹತ್ವದ ಕಾರ್ಯಾಚರಣೆ

    – ಮಾನವ ಕಳ್ಳಸಾಗಣೆಯ ಬೃಹತ್‌ ಜಾಲ ಭೇದಿಸಿದ ಸಿಬಿಐ
    – 7 ಮಹಾನಗರಗಳ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಾಏಕಿ ದಾಳಿ

    ನವದೆಹಲಿ: ವಂಚನೆಗೊಳಗಾಗಿ ರಷ್ಯಾ ಸೇನೆಯಲ್ಲಿ (Russia Army) ಸಿಲುಕಿದ್ದ ಹೈದರಾಬಾದ್‌ ಮೂಲದ ಯುವಕ ಸಾವನ್ನಪ್ಪಿದ ಒಂದು ದಿನದ ನಂತರ ಸಿಬಿಐ (CBI) ಮಹತ್ವದ ಕಾರ್ಯಾಚರಣೆ ನಡೆಸಿದೆ. ದೇಶಾದ್ಯಂತ ಸುಮಾರು 7 ಪ್ರಮುಖ ನಗರಗಳಲ್ಲಿ 10ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿ ಭಾರತೀಯರನ್ನು ವಿದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಭೇದಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಹೆಚ್ಚಿನ ವೇತನ ನೀಡುವ ಆಸೆ ತೋರಿಸಿ, ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ನೆಪದಲ್ಲಿ ವಿದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ, ಮಾನವ ಕಳ್ಳಸಾಗಣೆಯಲ್ಲಿ ತೊಡಗಿದ್ದ ಏಜೆಂಟರಿಗೆ (Human Trafficking Agents) ಸಂಬಂಧಿಸಿದ 7 ಮಹಾನಗರಗಳ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ. ದೆಹಲಿ, ಮುಂಬೈ, ಚೆನ್ನೈ, ತಿರುವನಂತಪುರಂ, ಅಂಬಾಲಾ, ಚಂಡೀಗಢ ಮತ್ತು ಮಧುರೈನಲ್ಲಿ ದಾಳಿ ನಡೆಸಿದೆ. ಸಿಬಿಐ ಪ್ರಕರಣದಲ್ಲಿ ದುಬೈ ಮೂಲದ ಯೂಟ್ಯೂಬ್‌ ಬ್ಲಾಗರ್‌ ಫೈಸಲ್ ಖಾನ್ ಅಲಿಯಾಸ್ ಬಾಬಾ (Faisal Khan alias Baba) ಹೆಸರೂ ದಾಖಲಾಗಿದೆ. ಇದನ್ನೂ ಓದಿ: Shivaratri Speical: ಶಿವಭಕ್ತಿಗೆ ಒಲಿದ ಆಸ್ಟ್ರೇಲಿಯಾ – ಮುಕ್ತಿ ಗುಹೇಶ್ವರ ದೇವಾಲಯದಲ್ಲಿ ಹಲವು ವಿಶೇಷ!

    ಕಳ್ಳಸಾಗಣೆ ಮಾಡುತ್ತಿದ್ದದ್ದು ಹೇಗೆ?
    ಭದ್ರತಾ ಸಿಬ್ಬಂದಿ ಹಾಗೂ ಪೌರ ಕಾರ್ಮಿಕ ಕೆಲಸಗಳಿಗೆ ನೇಮಕ ಮಾಡಿಕೊಳ್ಳುತ್ತಿರುವುದಾಗಿ ಅದಕ್ಕಾಗಿ ಹೆಚ್ಚಿನ ವೇತನ ನೀಡುವುದಾಗಿ ಯುವಕರಿಗೆ ಆಮಿಷ ನೀಡುತ್ತಿದ್ದರು. ನಂತರ ಅವರನ್ನು ರಷ್ಯಾ ಸೇನೆಗೆ ತಳ್ಳಿದ್ದು, ಯುದ್ಧದಲ್ಲಿ ಹೋರಾಡುವಂತೆ ಒತ್ತಾಯಿಸಿದ್ದರು. ತಮ್ಮ ಮನೆ ಮಕ್ಕಳು ನಾಪತ್ತೆಯಾದ ಬಗ್ಗೆ ಅನೇಕ ಕುಟುಂಬಗಳು ಮಾಧ್ಯಮಗಳೊಂದಿಗೆ ತಮ್ಮ ಸಂಕಷ್ಟ ಹೇಳಿಕೊಂಡಿವೆ. ಈ ವೇಳೆ ಪದೇ ಪದೇ ಫೈಸಲ್ ಖಾನ್ ಹೆಸರು ಕೇಳಿಬಂದಿದೆ. ಇದನ್ನೂ ಓದಿ: ವಂಚನೆಯಿಂದ ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಹೈದರಾಬಾದ್‌ ಯುವಕ – ಯುದ್ಧದಲ್ಲಿ ದುರಂತ ಸಾವು

    ಈಗಾಗಲೇ ರಷ್ಯಾ ಸೇನೆಯಲ್ಲಿ ಒಂದು ಡಜನ್‌ಗೂ ಹೆಚ್ಚು ಭಾರತೀಯ ಯುವಕರು ಸಿಲುಕಿರುವುದಾಗಿ ಮಾಹಿತಿ ಲಭ್ಯವಾಗಿದ್ದು, ಅವರನ್ನು ಕರೆತರಲು ಭಾರತೀಯ ರಾಯಭಾರ ಕಚೇರಿ ರಷ್ಯಾದ ರಕ್ಷಣಾ ಇಲಾಖೆಯೊಂದಿಗೆ ನಿರಂತರ ಸಂಪರ್ಕ ಸಾಧಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕೃತ್ಯದಲ್ಲಿ ದೆಹಲಿ, ಮುಂಬೈ, ಚಂಡೀಗಢ ಮೂಲದ ಖಾಸಗಿ ಕಂಪನಿಗಳು ಭಾಗಿಯಾಗಿವೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಆದ್ರೆ ಕಂಪನಿಗಳ ಹೆಸರನ್ನು ಬಹಿರಂಗಪಡಿಸಿಲ್ಲ. ಇದನ್ನೂ ಓದಿ: ಕ್ಷಿಪಣಿ ದಾಳಿಗೆ ಕೇರಳ ಮೂಲದ ವ್ಯಕ್ತಿ ಸಾವು – ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಎಚ್ಚರಿಕೆ ಸಂದೇಶ

  • ವಂಚನೆಯಿಂದ ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಹೈದರಾಬಾದ್‌ ಯುವಕ – ಯುದ್ಧದಲ್ಲಿ ದುರಂತ ಸಾವು

    ವಂಚನೆಯಿಂದ ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಹೈದರಾಬಾದ್‌ ಯುವಕ – ಯುದ್ಧದಲ್ಲಿ ದುರಂತ ಸಾವು

    ಮಾಸ್ಕೋ: ವಂಚನೆಯ ಜಾಲಕ್ಕೆ ಸಿಕ್ಕಿ ರಷ್ಯಾದ ವ್ಯಾಗ್ನರ್‌ ಪಡೆಯಲ್ಲಿ (Wagner Army) ಸಿಲುಕಿದ್ದ ಭಾರತದ ಹೈದರಾಬಾದಿನ ಯುವಕ ಉಕ್ರೇನ್‌ನಲ್ಲಿ ದುರಂತ ಸಾವಿಗೀಡಾಗಿದ್ದಾನೆ ಎಂದು ರಷ್ಯಾದಲ್ಲಿನ ಭಾರತೀಯ ರಾಯಭಾರ ಕಚೇರಿ (Indian Embassy) ಅಧಿಕಾರಿಗಳು ದೃಢಪಡಿಸಿದ್ದಾರೆ.

    ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ (Ukraine War) ಹೈದರಾಬಾದ್‌ ಮೂಲದ ಯುವಕ ಸಾವನ್ನಪ್ಪಿದ್ದಾನೆ‌ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವಿಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಇದನ್ನೂ ಓದಿ: ಕ್ಷಿಪಣಿ ದಾಳಿಗೆ ಕೇರಳ ಮೂಲದ ವ್ಯಕ್ತಿ ಸಾವು – ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಎಚ್ಚರಿಕೆ ಸಂದೇಶ

    ಯುವಕನನ್ನು ಮೊಹಮ್ಮದ್‌ ಅಸ್ಫಾನ್‌ (Mohammed Afsan )ಎಂದು ಗುರುತಿಸಲಾಗಿದೆ. ಯುವಕನ ಕುಟುಂಬಸ್ಥರು ಪಾರ್ಥೀವ ಶರೀರವನ್ನು ರಷ್ಯಾದಿಂದ ತರಿಸಿಕೊಡುವಂತೆ ಹೈದರಾಬಾದ್‌ ಸಂಸದ ಅಸಾದುದ್ದೀನ್ ಓವೈಸಿ ಅವರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಪಾರ್ಥೀವ ಶರೀರವನ್ನು ಭಾರತಕ್ಕೆ ಕಳುಹಿಸಿಕೊಡಲು ಅಧಿಕಾರಿಗಳು ತಯಾರಿ ನಡೆಸುತ್ತಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ. ಇದನ್ನೂ ಓದಿ: ಕೆಂಪು ಸಮುದ್ರದ ಅಡಿಯಲ್ಲಿದ್ದ 3 ಡೇಟಾ ಕೇಬಲ್‌ಗಳಿಗೆ ಕತ್ತರಿ – ವಿಶ್ವಾದ್ಯಂತ ಇಂಟರ್‌ನೆಟ್‌ ಸೇವೆಯಲ್ಲಿ ವ್ಯತ್ಯಯ

    ಕುಟುಂಬದೊಂದಿಗೆ ಸಂಪರ್ಕ ಸಾಧಿಸುತ್ತಿರುವ ರಷ್ಯಾದ ಅಧಿಕಾರಿಗಳು, ಭಾರತೀಯ ಪ್ರಜೆ ಮೊಹಮ್ಮದ್ ಅಸ್ಫಾನ್ ಅವರ ದುರಂತ ಸಾವಿನ ಬಗ್ಗೆ ನಾವು ತಿಳಿದುಕೊಂಡಿದ್ದೇವೆ. ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ಕಳುಹಿಸಲು ಸಕಲ ತಯಾರಿ ನಡೆಸುತ್ತಿದ್ದೇವೆ. ಅಸ್ಫಾನ್‌ ಅವರನ್ನು ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ ರಷ್ಯಾ ಸೇನೆಯ (Russia Army) ಸಹಾಯಕರನ್ನಾಗಿ ನೇಮಿಸಿಕೊಳ್ಳಲಾಗಿತ್ತು. ಇನ್ನುಳಿದ ಭಾರತೀಯ ಪ್ರಜೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಅಸ್ಫಾನ್‌ ಡೇಂಜರ್‌ ಸೇನೆಯಲ್ಲಿ ಸಿಲುಕಿದ್ದು ಹೇಗೆ?
    ಉದ್ಯೋಗ ವಂಚನೆಯ ಜಾಲಕ್ಕೆ ಸಿಲುಕಿದ್ದ ಹೈದರಾಬಾದಿನ ಮೂಲದ ಯುವಕ ರಷ್ಯಾದ ವ್ಯಾಗ್ನರ್‌ ಪಡೆಯಲ್ಲಿ ಸಿಲುಕಿದ್ದರು. ತೆಲಂಗಾಣ, ಗುಜರಾತ್, ಕರ್ನಾಟಕ (ಕಲಬುರಗಿ ಜಿಲ್ಲೆಯ ಮೂವರು), ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳ 20ಕ್ಕೂ ಹೆಚ್ಚು ಯುವಕರು ಸೇನೆಯಲ್ಲಿ ಸಿಲುಕಿದ್ದಾರೆ. ಅವರನ್ನು ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ ಹೋರಾಡುವಂತೆ ಒತ್ತಾಯಿಸಲಾಗುತ್ತಿದೆ ಎಂದು ವೀಡಿಯೋವೊಂದರಲ್ಲಿ ಹೇಳಿಕೊಂಡಿದ್ದರು. ಈ ವೀಡಿಯೋ ಬೆಳಕಿಗೆ ಬರ್ತಿದ್ದಂತೆ ಓವೈಸಿ (Asaduddin Owaisi) ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಯುವಕರನ್ನು ರಕ್ಷಿಸುವಂತೆ ಒತ್ತಾಯಿಸಿದ್ದರು. ಇದನ್ನೂ ಓದಿ: ಗಗನಯಾನ ಸಾಹಸಿಗರಿಗೆ ಪೌಷ್ಠಿಕ ಆಹಾರ; ಇದು ಎಲ್ಲಿಂದ – ಹೇಗೆ ತಯಾರಾಗುತ್ತೆ ಗೊತ್ತಾ?