Tag: Ukraine

  • ಯುದ್ಧ ನಿಲ್ಲಿಸಲು ಉಕ್ರೇನ್‌ನೊಂದಿಗೆ ಮಾತುಕತೆಗೆ ನಾವು ಸಿದ್ಧ: ಪುಟಿನ್

    ಯುದ್ಧ ನಿಲ್ಲಿಸಲು ಉಕ್ರೇನ್‌ನೊಂದಿಗೆ ಮಾತುಕತೆಗೆ ನಾವು ಸಿದ್ಧ: ಪುಟಿನ್

    ಮಾಸ್ಕೋ: ನಾವು ಉಕ್ರೇನ್ (Ukraine) ಮೇಲೆ ಹೆಚ್ಚಿನ ದಾಳಿ ನಡೆಸುತ್ತಿದ್ದರೂ ನಾವಿದನ್ನು ನಿಲ್ಲಿಸಲು ಉಕ್ರೇನ್‌ನೊಂದಿಗೆ ಮಾತುಕತೆಗೆ ಸಿದ್ಧರಾಗಿದ್ದೇವೆ ಎಂದು ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಹೇಳಿಕೆ ನೀಡಿದ್ದಾರೆ.

    ಭಾನುವಾರ ದೂರದರ್ಶನ ಸಂದರ್ಶನವೊಂದರಲ್ಲಿ ಮಾತನಾಡಿದ ಪುಟಿನ್, ನಾವು ಉಕ್ರೇನ್‌ನೊಂದಿಗೆ ನಡೆಸುತ್ತಿರುವ ಯುದ್ಧವನ್ನು ನಿಲ್ಲಿಸಲು ಮಾತುಕತೆಗೆ ಸಿದ್ಧರಾಗಿದ್ದೇವೆ. ಮಾತುಕತೆಗೆ ಮುಂದಾಗುವ ಎಲ್ಲರೊಂದಿಗೂ ನಾವು ಸ್ವೀಕಾರಾರ್ಹ ಫಲಿತಾಂಶದ ಬಗ್ಗೆಯೇ ಚರ್ಚಿಸುತ್ತೇವೆ ಎಂದು ತಿಳಿಸಿದ್ದಾರೆ.

    ಮಾತುಕತೆಯನ್ನು ನಿರಾಕರಿಸುತ್ತಿರುವುದು ನಾವಲ್ಲ, ಬದಲಿಗೆ ಅವರೇ. ನಾವು ಸರಿಯಾದ ಮಾರ್ಗದಲ್ಲೇ ಸಾಗುತ್ತಿದ್ದೇವೆ ಎಂಬುದನ್ನು ನಾವು ನಂಬುತ್ತೇವೆ. ನಾವು ನಮ್ಮ ರಾಷ್ಟ್ರೀಯ ಹಿತಾಸಕ್ತಿಗಳನ್ನು, ನಮ್ಮ ನಾಗರಿಕರು, ನಮ್ಮ ಜನರ ಹಿತಾಸಕ್ತಿಗಳನ್ನು ರಕ್ಷಿಸುತ್ತಿದ್ದೇವೆ ಎಂದು ಪುಟಿನ್ ಹೇಳಿದರು.

    10 ತಿಂಗಳುಗಳಿಂದ ಉಕ್ರೇನ್‌ನಲ್ಲಿ ನಡೆಸುತ್ತಿರುವ ಆಕ್ರಮಣವನ್ನು ಶೀಘ್ರವೇ ನಿಲ್ಲಿಸುವುದಾಗಿ ಕೆಲ ದಿನಗಳ ಹಿಂದೆ ಪುಟಿನ್ ಹೇಳಿದ್ದರು. ಉಕ್ರೇನ್‌ನೊಂದಿಗಿನ ನಮ್ಮ ಸಂಘರ್ಷವನ್ನು ಕೊನೆಗೊಳಿಸುವುದು ನಮ್ಮ ಗುರಿಯಾಗಿದೆ. ಇದಕ್ಕಾಗಿ ನಾವು ಶ್ರಮಿಸುತ್ತೇವೆ. ಆದಷ್ಟು ಬೇಗ ಎಲ್ಲವನ್ನೂ ಕೊನೆಗೊಳಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದರು. ಇದನ್ನೂ ಓದಿ: ವಿದ್ಯಾರ್ಥಿನಿಯರು ಹಾಜರಾಗದಿದ್ರೆ ನಮಗೂ ಉನ್ನತ ಶಿಕ್ಷಣ ಬೇಡ – ತಾಲಿಬಾನ್‌ಗೆ ವಿದ್ಯಾರ್ಥಿಗಳಿಂದ ಎಚ್ಚರಿಕೆ

    ಈ ವರ್ಷ ಫೆಬ್ರವರಿ 24ರಂದು ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿತ್ತು. 10 ತಿಂಗಳುಗಳಿಂದ ರಷ್ಯಾ ನಿರಂತರವಾಗಿ ಉಕ್ರೇನ್ ಮೇಲೆ ದಾಳಿ ನಡೆಸುತ್ತಿದೆ. ಆದರೆ ಇತ್ತೀಚಿನ ತಿಂಗಳುಗಳಲ್ಲಿ ರಷ್ಯಾ ತನ್ನ ಆಕ್ರಮಣದ ವೇಗವನ್ನು ಕಡಿಮೆಗೊಳಿಸುತ್ತಿರುವುದಾಗಿ ಹೇಳಿದೆ. ಇದನ್ನೂ ಓದಿ: ಬೆಂಗಳೂರು-ತುಮಕೂರು ದಶಪಥ ಹೆದ್ದಾರಿ 2025ರ ಆಗಸ್ಟ್ ವೇಳೆಗೆ ಸಿದ್ಧ: ಗಡ್ಕರಿ

    Live Tv
    [brid partner=56869869 player=32851 video=960834 autoplay=true]

  • ಉಕ್ರೇನ್ ಜೊತೆಗಿನ ಯುದ್ಧವನ್ನು ಶೀಘ್ರವೇ ನಿಲ್ಲಿಸುತ್ತೇವೆ: ಪುಟಿನ್

    ಉಕ್ರೇನ್ ಜೊತೆಗಿನ ಯುದ್ಧವನ್ನು ಶೀಘ್ರವೇ ನಿಲ್ಲಿಸುತ್ತೇವೆ: ಪುಟಿನ್

    ಮಾಸ್ಕೋ: ಕಳೆದ 10 ತಿಂಗಳುಗಳಿಂದ ನಡೆಯುತ್ತಿರುವ ರಷ್ಯಾ (Russia) ಹಾಗೂ ಉಕ್ರೇನ್ (Ukraine) ನಡುವಿನ ಭೀಕರ ಯುದ್ಧವನ್ನು (War) ಶೀಘ್ರವೇ ನಿಲ್ಲಿಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ತಿಳಿಸಿದ್ದಾರೆ.

    ಉಕ್ರೇನ್‌ನೊಂದಿಗಿನ ಸಂಘರ್ಷವನ್ನು ಕೊನೆಗೊಳಿಸುವುದು ನಮ್ಮ ಗುರಿಯಾಗಿದೆ, ಇದಕ್ಕಾಗಿ ನಾವು ಶ್ರಮಿಸುತ್ತಿದ್ದೇವೆ. ಆದಷ್ಟು ಬೇಗ ಎಲ್ಲವನ್ನೂ ಕೊನೆಗೊಳಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

    ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ(Volodymyr Zelenskiy) ಯುದ್ಧ ಪ್ರಾರಂಭವಾದಾಗಿನಿಂದ ಮೊದಲ ಬಾರಿ ಅಮೆರಿಕಗೆ ಭೇಟಿ ನೀಡಿದ್ದಾರೆ. ಗುರುವಾರ ವಾಷಿಂಗ್ಟನ್‌ನಲ್ಲಿ ನಡೆದ ಗಣ್ಯರೊಂದಿಗಿನ ಭೇಟಿಯ ಬಳಿಕ ಅಮೆರಿಕ ಪೇಟ್ರಿಯಾಟ್ ಕ್ಷಿಪಣಿಯನ್ನು ಉಕ್ರೇನ್‌ಗೆ ನೀಡಿದೆ.

    ಅಮೆರಿಕ ಉಕ್ರೇನ್‌ಗೆ ನೀಡಿರುವ ಮಿಲಿಟರಿ ಸಹಾಯದಿಂದ ಯುದ್ಧವನ್ನು ನಿಲ್ಲಿಸಲು ಅಥವಾ ಮಾಸ್ಕೋ ತನ್ನ ಗುರಿಯನ್ನು ಸಾಧಿಸುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ರಷ್ಯಾ ಹೇಳಿದೆ. ಪೇಟ್ರಿಯಾಟ್ ವಾಯು ರಕ್ಷಣಾ ವ್ಯವಸ್ಥೆ ಶಕ್ತಿಶಾಲಿ ಹಾಗೂ ಸುಧಾರಿತ ಎಂದು ಪರಿಗಣಿಸಲಾಗುತ್ತದೆಯಾದರೂ ಅದು ತುಂಬಾ ಹಳೆಯದು ಎಂದು ಪುಟಿನ್ ತಳ್ಳಿಹಾಕಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಕೊರೊನಾ ‘ಸಂಜೀವಿನಿ’ ಕೊರತೆ – ಬೂಸ್ಟರ್‌ ಡೋಸ್‌ ಬಳಕೆಗೆ ಜಾಗೃತಿ

    ಇದರ ಬೆನ್ನಲ್ಲೇ ಮಾಧ್ಯಮದೊಂದಿಗೆ ಮಾತನಾಡಿರುವ ಪುಟಿನ್, ರಷ್ಯಾ ಉಕ್ರೇನ್‌ನೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಬಯಸುತ್ತದೆ. ಇದು ಅನಿವಾರ್ಯ ರಾಜತಾಂತ್ರಿಕ ಪರಿಹಾರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

    ಈ ವರ್ಷ ಫೆಬ್ರವರಿ 24ರಂದು ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿತ್ತು. 10 ತಿಂಗಳುಗಳಿAದ ನಡೆಯುತ್ತಿರುವ ಯುದ್ಧದಲ್ಲಿ ಸಾಕಷ್ಟು ಸಾವು ನೋವುಗಳು ಉಂಟಾಗಿವೆ. ಇದನ್ನೂ ಓದಿ: ಚೀನಾದಲ್ಲಿ ಪ್ರತಿ ದಿನ 10 ಲಕ್ಷ ಕೇಸ್, 5000 ಸೋಂಕಿತರ ಸಾವು

    Live Tv
    [brid partner=56869869 player=32851 video=960834 autoplay=true]

  • ನಾವು ಪ್ರಧಾನಿ ಮೋದಿ ಮಾತನ್ನು ಒಪ್ಪುತ್ತೇವೆ – ಉಕ್ರೇನ್ ಯುದ್ಧದ ಬಗ್ಗೆ ಭಾರತದ ನಿಲುವಿಗೆ ಯುಎಸ್ ಸಾಥ್

    ನಾವು ಪ್ರಧಾನಿ ಮೋದಿ ಮಾತನ್ನು ಒಪ್ಪುತ್ತೇವೆ – ಉಕ್ರೇನ್ ಯುದ್ಧದ ಬಗ್ಗೆ ಭಾರತದ ನಿಲುವಿಗೆ ಯುಎಸ್ ಸಾಥ್

    ವಾಷಿಂಗ್ಟನ್: ರಷ್ಯಾ- ಉಕ್ರೇನ್ (Ukraine) ಯುದ್ಧದ ಬಗ್ಗೆ ಎಲ್ಲಾ ರೀತಿಯ ಹಿಂಸಾಚಾರಗಳನ್ನು ನಿಲ್ಲಿಸಲು ಮತ್ತು ರಾಜತಾಂತ್ರಿಕ ಮಾರ್ಗವನ್ನು ಅನುಸರಿಸಲು ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನಿಲುವನ್ನು ಅಮೆರಿಕ (America) ಮತ್ತೊಮ್ಮೆ ಸ್ವಾಗತಿಸಿದೆ.

    ಪ್ರಧಾನಿ ಮೋದಿ ಅವರು ರಷ್ಯಾವು (Russia) ಉಕ್ರೇನ್ ಮೇಲೆ ನಡೆಸುತ್ತಿರುವ ಯುದ್ಧವನ್ನು ಕೊನೆಗೊಳಿಸುವಂತೆ ಕರೆ ನೀಡಿದ್ದರು. ಈ ಬಗ್ಗೆ ಮಾತನಾಡಿರುವ ಅಮೆರಿಕದ ವಿದೇಶಾಂಗ ಇಲಾಖೆಯ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್, ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಸ್ವಾಗತಿಸುತ್ತೇವೆ. ಇತರ ದೇಶಗಳು ರಷ್ಯಾದ ಬಗ್ಗೆ ತಮ್ಮದೇ ಆದ ನಿರ್ಧಾರವನ್ನು ತೆಗೆದುಕೊಳ್ಳುತ್ತಿವೆ. ಯುದ್ಧದ ಪರಿಣಾಮಗಳನ್ನು ತಗ್ಗಿಸಲು ಮಿತ್ರರಾಷ್ಟ್ರಗಳೊಂದಿಗೆ ಸಮನ್ವಯವನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.

    ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸುವಲ್ಲಿ ಭಾರತದ ಪಾತ್ರದ ಬಗ್ಗೆ ಪ್ರತಿಕ್ರಿಯಿಸಿ, ಶಾಂತಿಯಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಹೊಂದಿರುವ ಮತ್ತು ಈ ಯುದ್ಧವನ್ನು ಕೊನೆಗೊಳಿಸಲು ಆಸಕ್ತಿ ಹೊಂದಿರುವ ಯಾವುದೇ ದೇಶವಾದರೂ ಉಕ್ರೇನ್‍ನೊಂದಿಗೆ ನಿಕಟ ಸಂಪರ್ಕದಲ್ಲಿರಬೇಕು ಎಂದರು.

    ಇಂದಿನ ಯುಗ ಯುದ್ಧವಲ್ಲ. ಬದಲಿಗೆ ಆಹಾರ, ಇಂಧನ, ಭದ್ರತೆ ಹಾಗೂ ರಸಗೊಬ್ಬರಗಳ ಸಮಸ್ಯೆಗಳನ್ನು ಪರಿಹರಿಸಲು ಮಾರ್ಗಗಳನ್ನು ಕಂಡುಕೊಳ್ಳುವ ಅಗತ್ಯವಿದೆ ಎಂದು ಸೆಪ್ಟೆಂಬರ್‌ನಲ್ಲಿ ಸಮರ್‌ಕಂಡ್‍ನಲ್ಲಿ ನಡೆದ ಎಸ್‍ಸಿಒ ಶೃಂಗಸಭೆಯ ಸಂದರ್ಭದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‍ಗೆ ಮೋದಿ ತಿಳಿಸಿದ್ದರು. ಈ ವೇಳೆ ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು, ಮಾತುಕತೆ ಮತ್ತು ರಾಜತಾಂತ್ರಿಕತೆಯ ಏಕೈಕ ಮಾರ್ಗವಾಗಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಇದು ನೆಹರೂ ಭಾರತವಲ್ಲ.. ಮೋದಿ ಭಾರತ – ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು

    ಪ್ರಧಾನಿ ಮೋದಿ ಶುಕ್ರವಾರ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಗಂಟೆಗಳ ನಂತರ ವಿದೇಶಾಂಗ ಇಲಾಖೆಯು ಈ ಹೇಳಿಕೆ ನೀಡಿದೆ. ಈ ವೇಳೆ ಭಾರತವು ಮುಂದಿನ ಜಿ20 ಅಧ್ಯಕ್ಷತೆಯನ್ನು ವಹಿಸಿರುವ ಬಗ್ಗೆ ಪುಟಿನ್‍ಗೆ ಮೋದಿ ವಿವರಿಸಿದ್ದಾರೆ. ಶಾರಿಕ್‌ನನ್ನು ವಶಕ್ಕೆ ಪಡೆದ NIA ಅಧಿಕಾರಿಗಳು

    Live Tv
    [brid partner=56869869 player=32851 video=960834 autoplay=true]

  • ರಷ್ಯಾ, ಶ್ರೀಲಂಕಾ, ಮಾರಿಷಸ್‌ ಜೊತೆ ಕ್ಲಿಕ್‌ – ಮತ್ತಷ್ಟು ದೇಶಗಳೊಂದಿಗೆ ರುಪಿ ವ್ಯವಹಾರಕ್ಕೆ ಮುಂದಾದ ಭಾರತ

    ರಷ್ಯಾ, ಶ್ರೀಲಂಕಾ, ಮಾರಿಷಸ್‌ ಜೊತೆ ಕ್ಲಿಕ್‌ – ಮತ್ತಷ್ಟು ದೇಶಗಳೊಂದಿಗೆ ರುಪಿ ವ್ಯವಹಾರಕ್ಕೆ ಮುಂದಾದ ಭಾರತ

    ನವದೆಹಲಿ: ರಷ್ಯಾ, ಶ್ರೀಲಂಕಾ, ಮಾರಿಷಸ್‌ ಜೊತೆ ರುಪಿ ವ್ಯವಹಾರ(Trade in Rupee) ಯಶಸ್ವಿಯಾಗುತ್ತಿದ್ದಂತೆ ಕೇಂದ್ರ ಸರ್ಕಾರ(Union Government) ಹೆಚ್ಚಿನ ರಾಷ್ಟ್ರಗಳೊಂದಿಗೆ ಅಂತಹ ಅವಕಾಶಗಳನ್ನು ಅನ್ವೇಷಿಸುವಂತೆ ವ್ಯಾಪಾರ ಸಂಸ್ಥೆಗಳು ಮತ್ತು ಬ್ಯಾಂಕುಗಳನ್ನು ಕೇಳಿದೆ.

    ರುಪಿ ವ್ಯವಹಾರ ನಡೆಸಲು ಈಗಾಗಲೇ ಭಾರತ ಈ ಮೂರು ರಾಷ್ಟ್ರಗಳ ಜೊತೆ ಸ್ಪೆಷಲ್‌ ರೂಪಾಯಿ ವೋಸ್ಟ್ರೋ ಅಕೌಂಟ್ಸ್‌(SRVA) ತೆರೆದಿದೆ. ಇತ್ತೀಚೆಗೆ ಪೀಪಲ್ಸ್ ಬ್ಯಾಂಕ್ ಆಫ್ ಶ್ರೀಲಂಕಾ ಮತ್ತು ಮಾರಿಷಸ್ ಲಿಮಿಟೆಡ್ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಖಾತೆ ತೆರೆದಿದೆ.

    ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ರಷ್ಯಾದ(Russia) ರೋಸ್‌ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಚೆನ್ನೈ ಮೂಲದ ಇಂಡಿಯನ್‌ ಬ್ಯಾಂಕ್‌ ಶ್ರೀಲಂಕಾದ ಮೂರು ಬ್ಯಾಂಕ್‌ನಲ್ಲಿ ಖಾತೆ ತೆರೆದಿದೆ.

    ಆರ್‌ಬಿಐ(RBI) ಅನುಮತಿಯ ಬಳಿಕ 18 ರುಪಿ ಖಾತೆಗಳು 11 ಬ್ಯಾಂಕ್‌ನಲ್ಲಿ ತೆರೆಯಲ್ಪಟ್ಟಿದೆ. ಇದರಲ್ಲಿ ಎರಡು ರಷ್ಯಾ, ಎರಡು ಶ್ರೀಲಂಕಾ ಬ್ಯಾಂಕ್‌ಗಳು ಸೇರಿವೆ. ಇದನ್ನೂ ಓದಿ: ಕಚ್ಚಾ ತೈಲಕ್ಕೆ ಜಿ7 ದೇಶಗಳಿಂದ ದರ ಮಿತಿ – ಭಾರತದ ನಿರ್ಧಾರವನ್ನು ಸ್ವಾಗತಿಸಿದ ರಷ್ಯಾ

    ಉಕ್ರೇನ್‌(Ukraine) ಮೇಲಿನ ಯುದ್ಧದ ಬಳಿಕ ಪಾಶ್ಚಿಮಾತ್ಯ ರಾಷ್ಟ್ರಗಳು ರಷ್ಯಾದ ಮೇಲೆ ಹಣಕಾಸು ವ್ಯವಹಾರಕ್ಕೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಆರ್‌ಬಿಐ ಜುಲೈನಲ್ಲಿ ಎರಡು ದೇಶಗಳ ಮಧ್ಯೆ ದೇಶಿಯ ಕರೆನ್ಸಿಯಲ್ಲಿ ವ್ಯವಹಾರ ನಡೆಸುವ ಸಂಬಂಧ ವಿವರವಾದ ಮಾರ್ಗಸೂಚಿಯನ್ನು ಪ್ರಕಟಿಸಿತ್ತು.

    ಇತ್ತೀಚಿನ ಪರಿಶೀಲನಾ ಸಭೆಯಲ್ಲಿ ಹಣಕಾಸು ಸಚಿವಾಲಯವು ಮತ್ತಷ್ಟು ದೇಶಗಳ ಜೊತೆ SRVA ಮೂಲಕ ದ್ವಿಪಕ್ಷೀಯ ವಹಿವಾಟುಗಳನ್ನು ವಿಸ್ತರಿಸಲು ಬ್ಯಾಂಕ್‌ ಮತ್ತು ವ್ಯಾಪಾರ ಸಂಸ್ಥೆಗಳ ಜೊತೆ ಕೇಳಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: Russia-Ukraine Crisis: ರಷ್ಯಾಗೆ ಮತ್ತೊಂದು ಶಾಕ್ – SWIFTನಿಂದ ಔಟ್‌

    ಆರ್‌ಬಿಐ ಮಾರ್ಗಸೂಚಿಗಳನ್ನು ಪ್ರಕಟಿಸಿದ ಬಳಿಕ ರಷ್ಯಾದ ಸ್ಬೆರ್ಬ್ಯಾಂಕ್ ಮತ್ತು ವಿಟಿಬಿ ಬ್ಯಾಂಕ್ ಮೊದಲು ಅನುಮೋದನೆಯನ್ನು ಪಡೆದುಕೊಂಡಿತ್ತು. ಇನ್‌ವಾಯ್ಸ್, ಪಾವತಿ ಮತ್ತು ರಫ್ತು/ಆಮದುಗಳ ಇತ್ಯರ್ಥಕ್ಕೆ ರೂಪಾಯಿಯಲ್ಲಿ ಹೆಚ್ಚುವರಿ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಿದೆ.

    ಈ SRVA ಅಡಿಯಲ್ಲಿ ಆಮದು ವಹಿವಾಟು ಕೈಗೊಳ್ಳುವ ದೇಶಿಯ ಆಮದುದಾರರು ಪಾವತಿಗಳನ್ನು ರೂಪಾಯಿಯಲ್ಲಿ ಮಾಡತಕ್ಕದ್ದು. ಹಣವನ್ನು ಅವರು ಪಾಲುದಾರ ದೇಶದ ಬ್ಯಾಂಕ್‌ ಭಾರತದಲ್ಲಿ ತೆರೆದಿರುವ ವಿಶೇಷ ಖಾತೆಯಲ್ಲಿ ಜಮಾ ಮಾಡಬೇಕಾಗುತ್ತದೆ.

    ಭಾರತದಲ್ಲಿ ತನ್ನ ಶಾಖೆಯನ್ನು ಹೊಂದಿಲ್ಲದ ರಷ್ಯಾದ ಮತ್ತೊಂದು ಬ್ಯಾಂಕ್ Gazprombank ಸಹ ಕೋಲ್ಕತ್ತಾ ಮೂಲದ UCO ಬ್ಯಾಂಕ್‌ನಲ್ಲಿ SRVA ಖಾತೆಯನ್ನು ತೆರೆದಿದೆ.

    Live Tv
    [brid partner=56869869 player=32851 video=960834 autoplay=true]

  • ಪೋಲೆಂಡ್‌ಗೆ ಕ್ಷಿಪಣಿ ಹಾರಿಸಿ ಉಕ್ರೇನ್ ಎಡವಟ್ಟು

    ಪೋಲೆಂಡ್‌ಗೆ ಕ್ಷಿಪಣಿ ಹಾರಿಸಿ ಉಕ್ರೇನ್ ಎಡವಟ್ಟು

    ಕೀವ್/ಮಾಸ್ಕೋ: ಉಕ್ರೇನ್ (Ukraine) ಗಡಿಗೆ ಕೇವಲ 5 ಕಿಮೀ ದೂರದಲ್ಲಿರುವ ಪೋಲೆಂಡ್‌ನ (Poland) ಪ್ರಜೊವೊಡೋವ್ ಎಂಬ ಹಳ್ಳಿಯಲ್ಲಿ ಕ್ಷಿಪಣಿಯೊಂದು ಅಪ್ಪಳಿಸಿದೆ.

    ಆರಂಭದಲ್ಲಿ ಇದು ರಷ್ಯಾ (Russia) ಪ್ರಯೋಗಿಸಿದ ಕ್ಷಿಪಣಿ ಎಂದು ಸುದ್ದಿಯಾಗಿತ್ತು. ಇಬ್ಬರು ನಾಗರಿಕರು ಮೃತಪಟ್ಟ ಹಿನ್ನೆಲೆಯಲ್ಲಿ ಪೋಲೆಂಡ್‌ನಲ್ಲಿ ಹೈ ಅಲರ್ಟ್ ಸೃಷ್ಟಿಯಾಗಿದ್ದು ಅಲ್ಲಿನ ಸೇನೆಯನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ (Investigation) ಇದು ಉಕ್ರೇನ್ ಪ್ರಯೋಗಿಸಿದ ಕ್ಷಿಪಣಿ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೋಲೆಂಡ್ ಸೇನಾ (Poland Army) ಅಧಿಕಾರಿಗಳು ತೆರಳಿದ್ದು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಧಗ ಧಗನೆ ಹೊತ್ತಿ ಉರಿದ ಜಮ್ಮು-ಕಾಶ್ಮೀರದ ಜಾಮಿಯಾ ಮಸೀದಿ

    ನಮ್ಮ ಕ್ಷಿಪಣಿ ದಾಳಿಯನ್ನು (Missile Attack) ತಡೆಯಲು ಉಕ್ರೇನ್ (Ukraine) ಹಾರಿಸಿದ ಏರ್ ಡಿಫೆನ್ಸ್ ಕ್ಷಿಪಣಿ ಎಂದು ರಷ್ಯಾ (Russia) ಹೇಳಿದೆ. ಉಕ್ರೇನ್ ಕ್ಷಿಪಣಿಯ ಫೋಟೋ ಲಭ್ಯವಾಗುತ್ತಿದ್ದಂತೆ ರಷ್ಯಾ ಪಾಶ್ಚಿಮಾತ್ಯ ಜಗತ್ತಿನ ಮೇಲೆ ಮುಗಿಬಿದ್ದಿದೆ. ಇದೆಲ್ಲಾ ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಗ್ನಗೊಳಿಸುವ ತಂತ್ರ ಎಂದು ಕಿಡಿಕಾರಿದೆ. ಆದರೆ ಉಕ್ರೇನ್ ಮಾತ್ರ ಇದು ತಮ್ಮ ಕೆಲಸವಲ್ಲ. ಇದು ರಷ್ಯಾದ ಕೆಲಸ. ಸಾಮೂಹಿಕ ಭದ್ರತೆ ಮೇಲಿನ ದಾಳಿ ಎಂದೇ ವಾದಿಸಿದೆ. ಇದನ್ನೂ ಓದಿ: ಸಂಸದರ ಟ್ವೀಟ್‍ಗೆ ಸಿಮೀತವಾದ ಸುರತ್ಕಲ್ ಟೋಲ್ ರದ್ದತಿ – ಮುಂದುವರಿದ ಹಣ ಸಂಗ್ರಹ

    ರಷ್ಯಾ ಮತ್ತು ಉಕ್ರೇನ್ ನಡುವಿನ ಕದನ ತೀವ್ರಗೊಂಡಿದೆ. ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಜಿ-20 ಶೃಂಗಸಭೆ ಉದ್ದೇಶಿಸಿ ಮಾತನಾಡುವ ವೇಳೆಯೇ, ಆ ದೇಶದ ಮೇಲೆ ರಷ್ಯಾ ಕ್ಷಿಪಣಿಗಳ ಸುರಿಮಳೆಗೈದಿದೆ.

    Live Tv
    [brid partner=56869869 player=32851 video=960834 autoplay=true]

  • ಉಕ್ರೇನ್ ವಿರುದ್ಧ ಮತ್ತೆ ಸಮರ ಸಾರಿದ ರಷ್ಯಾ – ಒಂದೇ ಬಾರಿಗೆ 100 ಕ್ಷಿಪಣಿ ಉಡಾವಣೆ

    ಉಕ್ರೇನ್ ವಿರುದ್ಧ ಮತ್ತೆ ಸಮರ ಸಾರಿದ ರಷ್ಯಾ – ಒಂದೇ ಬಾರಿಗೆ 100 ಕ್ಷಿಪಣಿ ಉಡಾವಣೆ

    ಕೀವ್/ಮಾಸ್ಕೋ: ರಷ್ಯಾಪಡೆಗಳು ಉಕ್ರೇನಿನ ಇಂಧನ ಮೂಲ ಸೌಕರ್ಯಗಳನ್ನು (Energy Infrastructure) ಗುರಿಯಾಗಿಸಿ ದಾಳಿ ನಡೆಸಿದ್ದು, ಏಕಾ-ಏಕಿ 100 ಕ್ಷಿಪಣಿಗಳನ್ನು ಉಡಾಯಿಸಿವೆ.

    ಇದರಿಂದ ಉಕ್ರೇನಿನ (Ukraine) ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದು ಅಕ್ಟೋಬರ್ 10 ಅಂದು ನಡೆಸಿದ ದಾಳಿಗಿಂತಲೂ ಮಾರಕವಾಗಿದೆ ಎಂದು ವಾಯುಪಡೆಯ ವಕ್ತಾರ ಯೂರಿ ಇಗ್ನಾಟ್ ಉಕ್ರೇನಿಯನ್ ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾದಿಂದ ಮತ್ತೆ ಡೆಡ್ಲಿ ಡ್ರೋನ್ ದಾಳಿ – ಉಕ್ರೇನ್‌ನಲ್ಲಿ ಅಲ್ಲೋಲ ಕಲ್ಲೋಲ

    ರಷ್ಯಾ ಪಡೆಗಳು ಉಕ್ರೇನಿನ ನಿರ್ಣಾಯಕ ಮೂಲ ಸೌರ್ಯಕಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿವೆ. ಅಲ್ಲದೇ ಉಕ್ರೇನಿನ ಕೆಲವು ಕ್ಷಿಪಣಿಗಳನ್ನು ಹೊಡೆದುರುಳಿದೆ. ನಿಖರ ಮಾಹಿತಿಯನ್ನು ಉಕ್ರೇನ್ ಸೇನೆ ಅಥವಾ ರಕ್ಷಣಾಲಯ ಸ್ಪಷ್ಟಪಡಿಸಬೇಕಿದೆ. ಇದನ್ನೂ ಓದಿ: ಅನ್ನಭಾಗ್ಯ ಕೊಡ್ತೀವಿ ಅಂತ ಸಿದ್ದರಾಮಯ್ಯ ಕನ್ನ ಹಾಕಿದ್ದಾರೆ – ಸಿಎಂ ವಾಗ್ದಾಳಿ

    ಇತ್ತೀಚೆಗಷ್ಟೇ ಉಕ್ರೇನ್ ರಷ್ಯಾದ ಕ್ರಿಮಿಯಾ ಸೇತುವೆಯನ್ನು (Crimean Bridge) ಧ್ವಂಸಗೊಳಿಸಿದ ನಂತರ ಪ್ರತೀಕಾರವಾಗಿ ರಷ್ಯಾ ದಾಳಿ ನಡೆಸಿತು. ಸತತವಾಗಿ 75 ಕ್ಷಿಪಣಿಗಳು, 5 ಡೆಡ್ಲಿ ರಾಕೆಟ್‌ಗಳನ್ನು ಉಕ್ರೇನ್ ಮೇಲೆ ಹಾರಿಬಿಟ್ಟಿತ್ತು. ಇದಾದ ಒಂದು ವಾರದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಉಕ್ರೇನ್ ವಿರುದ್ಧ ಕ್ಷಿಪಣಿ ದಾಳಿ ಅಂತ್ಯಗೊಳಿಸುವುದಾಗಿ ಹೇಳಿದ್ದರು. ಮತ್ತೆ 84 ಡೆಡ್ಲಿ ಡ್ರೋನ್‌ಗಳಿಂದ ದಾಳಿ ನಡೆಸಿತ್ತು. ಅದಕ್ಕಾಗಿ ಇರಾನಿ ಡ್ರೋನ್‌ಗಳನ್ನು ಬಳಸಲಾಗಿತ್ತು. ಇಂದು ಏಕಾಏಕಿ ನೂರು ಕ್ಷಿಪಣಿಗಳಿಂದ ದಾಳಿ ನಡೆಸಿದ್ದು, ಉಕ್ರೇನ್ ಜನರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ಉಕ್ರೇನ್‌ನಲ್ಲಿ ಕದನ ವಿರಾಮ, ರಾಜತಾಂತ್ರಿಕತೆ ಮಾರ್ಗ ಕಂಡುಕೊಳ್ಳಬೇಕಿದೆ – ಜಿ20 ಶೃಂಗಸಭೆಯಲ್ಲಿ ಮೋದಿ ಮಾತು

    ಉಕ್ರೇನ್‌ನಲ್ಲಿ ಕದನ ವಿರಾಮ, ರಾಜತಾಂತ್ರಿಕತೆ ಮಾರ್ಗ ಕಂಡುಕೊಳ್ಳಬೇಕಿದೆ – ಜಿ20 ಶೃಂಗಸಭೆಯಲ್ಲಿ ಮೋದಿ ಮಾತು

    ಜಕಾರ್ತ: ಉಕ್ರೇನ್‌ನಲ್ಲಿ (Ukraine) ಕದನ ವಿರಾಮ ಹಾದಿಗೆ ಮರಳಲು ನಾವು ಮಾರ್ಗವೊಂದನ್ನು ಕಂಡುಕೊಳ್ಳಬೇಕಿದೆ ಎಂದು ಜಿ20 ಶೃಂಗಸಭೆಯಲ್ಲಿ (G20 Summit) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪುನರುಚ್ಛರಿಸಿದ್ದಾರೆ.

    ಆಹಾರ ಮತ್ತು ಇಂಧನ ಭದ್ರತೆ ಕುರಿತು ಜಿ20 ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಉಕ್ರೇನ್‌ನಲ್ಲಿ ಕದನ ವಿರಾಮ ಮತ್ತು ರಾಜತಾಂತ್ರಿಕತೆಯ ಹಾದಿಗೆ ಮರಳಲು ನಾವು ಒಂದು ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ನಾನು ಪದೇ ಪದೇ ಹೇಳುತ್ತಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಭಾರತ ಮೂಲದ ಬಾಲಕಿಯ ಅಪಹರಣ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ ಪ್ರತಿಭಟನೆ

    ಕಳೆದ ಶತಮಾನದಲ್ಲಿ 2ನೇ ಮಹಾಯುದ್ಧವು ಜಗತ್ತಿನಲ್ಲಿ ವಿನಾಶವನ್ನುಂಟು ಮಾಡಿತು. ಅದರ ನಂತರ ಅಂದಿನ ನಾಯಕರು ಶಾಂತಿಯ ಹಾದಿಯನ್ನು ಹಿಡಿಯಲು ಗಂಭೀರ ಪ್ರಯತ್ನ ಮಾಡಿದರು. ಈಗ ಕೋವಿಡ್ ನಂತರದ ಅವಧಿಗೆ ವಿಶ್ವಕ್ಕೆ ಹೊಸ ಕ್ರಮವನ್ನು ರಚಿಸುವ ಜವಾಬ್ದಾರಿ ನಮ್ಮ ಹೆಗಲ ಮೇಲಿದೆ. ಜಗತ್ತಿನಲ್ಲಿ ಶಾಂತಿ, ಸಾಮರಸ್ಯ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸಾಮೂಹಿಕವಾಗಿ ಸಂಕಲ್ಪ ಹೊಂದುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

    ಹವಾಮಾನ ಬದಲಾವಣೆ, ಕೋವಿಡ್ ಸಾಂಕ್ರಾಮಿಕ, ಉಕ್ರೇನ್‌ನಲ್ಲಿನ ಬೆಳವಣಿಗೆಗಳು ಮತ್ತು ಅದಕ್ಕೆ ಸಂಬಂಧಿಸಿದ ಜಾಗತಿಕ ಸಮಸ್ಯೆಗಳು ಜಗತ್ತಿನಲ್ಲಿ ವಿನಾಶವನ್ನು ಸೃಷ್ಟಿಸಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನನ್ನನ್ನು ರಕ್ಷಿಸು, ಇಲ್ಲದಿದ್ರೆ ಆತ ಕೊಂದು ಬಿಡ್ತಾನೆ- ಸ್ನೇಹಿತನಿಗೆ ಮೊದಲೇ ತಿಳಿಸಿದ್ದ ಶ್ರದ್ಧಾ!

    ಭಾರತದಲ್ಲಿ ಸುಸ್ಥಿರ ಆಹಾರ ಭದ್ರತೆಗಾಗಿ ನಾವು ನೈಸರ್ಗಿಕ ಕೃಷಿಯನ್ನು ಉತ್ತೇಜಿಸುತ್ತಿದ್ದೇವೆ. ರಾಗಿಯಂತಹ ಪೌಷ್ಟಿಕ ಮತ್ತು ಸಾಂಪ್ರದಾಯಿಕ ಆಹಾರ ಧಾನ್ಯಗಳನ್ನು ಮತ್ತೆ ಜನಪ್ರಿಯಗೊಳಿಸುತ್ತಿದ್ದೇವೆ. ರಾಗಿ ಜಾಗತಿಕ ಅಪೌಷ್ಟಿಕತೆ ಮತ್ತು ಹಸಿವನ್ನು ಸಹ ಪರಿಹರಿಸಬಲ್ಲದು. ನಾವೆಲ್ಲರೂ ಮುಂದಿನ ಬಾರಿ ಅಂತರರಾಷ್ಟ್ರೀಯ ರಾಗಿ ವರ್ಷವನ್ನು ಅತ್ಯಂತ ಉತ್ಸಾಹದಿಂದ ಆಚರಿಸಬೇಕು ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಗನ ಅನಾರೋಗ್ಯ ನಿವಾರಿಸಿದ ಕೊರಗಜ್ಜನಿಗೆ ಉಕ್ರೇನ್ ಕುಟುಂಬದಿಂದ ಅಗೆಲು ಸೇವೆ

    ಮಗನ ಅನಾರೋಗ್ಯ ನಿವಾರಿಸಿದ ಕೊರಗಜ್ಜನಿಗೆ ಉಕ್ರೇನ್ ಕುಟುಂಬದಿಂದ ಅಗೆಲು ಸೇವೆ

    ಮಂಗಳೂರು: ತುಳುನಾಡಿನ ಆರಾದ್ಯ ದೈವ ಕೊರಗಜ್ಜ (Koragajja) ನ ಪವಾಡ ಮತ್ತೊಮ್ಮೆ ಸುದ್ದಿಯಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕನ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇದೀಗ ಆ ಕುಟುಂಬ ಅಜ್ಜನಿಗೆ ಹರಕೆಯನ್ನು ತೀರಿಸಿದೆ.

    ಹೌದು. ಕೆಲ ದಿನಗಳ ಹಿಂದೆ ಉಕ್ರೇನ್ (Ukraine) ನ ಆ್ಯಂಡ್ರೋ, ಪತ್ನಿ ಎಲೆನಾ ಹಾಗೂ ಮಗ ಮ್ಯಾಕ್ಸಿಂ ಭಾರತ ಪ್ರವಾಸ ಕೈಗೊಂಡಿದ್ದು, ಅಂತೆಯೇ ಉಡುಪಿಯ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಗೋಶಾಲೆಯೊಂದಕ್ಕೆ ಭೇಟಿ ಕೊಟ್ಟಾಗ ಅಲ್ಲಿ ನಾಡಿ ನೋಡಿ ಔಷಧಿ ಕೊಡುವ ಭಕ್ತಿಭೂಷಣ್ ದಾಸ್ ಪ್ರಭುಜಿ ಅವರನ್ನು ಕುಟುಂಬ ಭೇಟಿಯಾಗಿದೆ. ಇದೇ ವೇಳೆ ಆ್ಯಂಡ್ರೂ ತಮ್ಮ ಮನಗ ಅನರೋಗ್ಯ (Health) ದ ಬಗ್ಗೆ ಅವರಿಗೆ ತಿಳಿಸಿದ್ದರು. ಇದನ್ನೂ ಓದಿ: ಕೊರಗಜ್ಜನಿಗೆ ಅವಮಾನ ಮಾಡಿದ್ದ ಉಮರುಲ್ಲಾ ಬಾಷಿತ್ ಅರೆಸ್ಟ್

    ಆ್ಯಂಡ್ರೂ ಕಷ್ಟ ಅರಿತ ಪ್ರಭುಜಿ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದರು. ಅಂತೆಯೇ ಕುಟುಂಬ ಬಂಟ್ವಾಳದ ಕೊಡ್ಮಾಣ್ ಸಮೀಪದ ಗೋವಿನ ತೋಟದ ಶ್ರೀರಾಧಾ ಸುರಭೀ ಗೋ ಮಂದಿರಲ್ಲಿ ವಾಸ್ತವ್ಯ ಹೂಡಿತ್ತು. ಜೊತೆಗೆ ಮಗನಿಗೆ ದೇಸಿ ದನದ ವಿಹಾರದ ಜೊತೆಗೆ ನಾಟಿ ಚಿಕಿತ್ಸೆ ಆರಂಭಿಸಲಾಯಿತು.

    ಇಷ್ಟು ಮಾತ್ರವಲ್ಲದೆ ಇತ್ತ ಕೊರಗಜ್ಜನ ಮುಂದೆ ಚಿಕಿತ್ಸೆಯಿಂದ ಮಗನನ್ನು ಸಂಪೂರ್ಣ ಗುಣಮುಖನಾಗುವಂತೆ ಮಾಡಲು ಕೋರಲಾಯಿತು. ಇದೀಗ ಮಗನ ಆರೋಗ್ಯದಲ್ಲಿ ಚೇತರಿಕೆ ಕಂಡ ಬೆನ್ನಲ್ಲೇ ಕುಟುಂಬ ಕೊರಗಜ್ಜನಿಗೆ ಅಗೆಲು ಸೇವೆ ನೀಡಿತು. ಇದನ್ನೂ ಓದಿ: ಕೊರಗಜ್ಜನಿಗೆ ನೈವೇದ್ಯ ರೂಪದಲ್ಲಿಟ್ಟ ಮದ್ಯ ಎಗರಿಸಿದ ಭೂಪ

    ಕೊರಗಜ್ಜನಿಗೆ ಅಗೆಲು ಕೊಡುವ ಸಂದರ್ಭದಲ್ಲಿ ಭಕ್ತಿಭೂಷಣ್ ದಾಸ್ ಪ್ರಭುಜಿ, ಪದ್ಮನಾಭ ಗೋವಿನ ತೋಟ, ನವೀನ್ ಮಾರ್ಲ, ಯಾದವ ಕೊಡಂಗೆ ಮೊದಲಾದವರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ರಷ್ಯಾ ಆಕ್ರಮಣದಿಂದ ನಾಶವಾದ ವಿಶ್ವದ ದೈತ್ಯ ವಿಮಾನ ಮರು ನಿರ್ಮಾಣಕ್ಕೆ ಉಕ್ರೇನ್ ಚಿಂತನೆ

    ರಷ್ಯಾ ಆಕ್ರಮಣದಿಂದ ನಾಶವಾದ ವಿಶ್ವದ ದೈತ್ಯ ವಿಮಾನ ಮರು ನಿರ್ಮಾಣಕ್ಕೆ ಉಕ್ರೇನ್ ಚಿಂತನೆ

    ಕೀವ್: ರಷ್ಯಾ-ಉಕ್ರೇನ್ (Russia Ukraine War) ಯುದ್ಧದಲ್ಲಿ ರಷ್ಯಾಪಡೆಗಳಿಂದ ನಾಶವಾದ ವಿಶ್ವದ ಅತಿದೊಡ್ಡ ವಿಮಾನವನ್ನು (Biggest Plane) ಮರುನಿರ್ಮಾಣ ಮಾಡಲು ಉಕ್ರೇನ್ ಚಿಂತನೆ ನಡೆಸಿದೆ.

    ಉಕ್ರೇನ್ ಭಾಷೆಯಲ್ಲಿ `ಮ್ರಿಯಾ ಡ್ರೀಮ್’ (Mriya dream) ಎಂದು ಕರೆಯಲ್ಪಡುವ 2ನೇ ಆಂಟೊನೊವ್ ಆನ್ -225 ಕಾರ್ಗೊ ವಿಮಾನದ ವಿನ್ಯಾಸ ಕಾರ್ಯವೂ ಆರಂಭವಾಗಿದೆ. ಈ ಕುರಿತು ಆಂಟೊನೊವ್ ಕಂ (Antonov Co) ತನ್ನ ಫೇಸ್‌ಬುಕ್ ಪುಟದಲ್ಲಿ ತಿಳಿಸಿದೆ. ರಷ್ಯಾದೊಂದಿಗಿನ ಯುದ್ಧವು ಕೊನೆಗೊಂಡ ನಂತರ ಇದರ ಬಗ್ಗೆ ನಿರ್ದಿಷ್ಟ ಮಾಹಿತಿ ನೀಡಲಾಗುತ್ತದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಇದು ಯುದ್ಧದ ಸಮಯ ಅಲ್ಲ: ರಷ್ಯಾ ಭೇಟಿ ವೇಳೆ ಪುನರುಚ್ಚರಿಸಿದ ಜೈಶಂಕರ್

    ಈ ದೈತ್ಯ ವಿಮಾನದ ದುರಸ್ತಿ ಕಾರ್ಯ ನಡೆಯುತ್ತಿದ್ದಾಗಲೇ ರಷ್ಯಾದ ಆಕ್ರಮಣದಿಂದ ಮತ್ತೆ ಅಡಚಣೆಯಾಯಿತು. 88 ಮೀಟರ್ (290 ಅಡಿ) ದೈತ್ಯ ರೆಕ್ಕೆಗಳನ್ನು ಹೊಂದಿರುವ ಈ ವಿಮಾನದ ಮರುನಿರ್ಮಾಣಕ್ಕೆ ಕನಿಷ್ಠ 500 ಮಿಲಿಯನ್ ಡಾಲರ್ (USD) (40 ಸಾವಿರ ಕೋಟಿ) ವೆಚ್ಚವಾಗಲಿದೆ ಎಂದು ಆಂಟೊನೊವ್ ಅಂದಾಜಿಸಿದ್ದು, ಕನಿಷ್ಠ 5 ವರ್ಷ ಸಮಯ ಬೇಕಾಗಲಿದೆ ಎಂದು ಹೇಳಿದೆ. ಇದನ್ನೂ ಓದಿ: ಮಾವಿನ ಬೀಜ ಗಂಟಲಿಗೆ ಚುಚ್ಚಿ ಮಹಿಳೆ ಆಸ್ಪತ್ರೆಗೆ ದಾಖಲು

    ರಷ್ಯಾ ಆಕ್ರಮಣದಿಂದಾಗಿ ಸತತ ಆರ್ಥಿಕ ಒತ್ತಡಕ್ಕೆ ಸಿಲುಕಿರುವ ಉಕ್ರೇನ್ ಈಗಾಗಲೇ ಇಂಧನ ಮೂಲ ಸೌಕರ್ಯ ಹಾಗೂ ವಿದ್ಯುತ್ ಸಮಸ್ಯೆ ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಉಕ್ರೇನ್ ದ್ಯತ್ಯ ವಿಮಾನ ನಿರ್ಮಾಣ ಮಾಡಲು ಉಕ್ರೇನ್ ಮುಂದಾಗುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ತಿಳಿದುಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಇಂಜೆಕ್ಷನ್ ತೆಗೆದುಕೊಳ್ಳಲು ದೇಹದ ಭಾಗಗಳು ಸ್ಪಂದಿಸುತ್ತಿಲ್ಲ – ಪುಟಿನ್ ಆರೋಗ್ಯ ಮತ್ತಷ್ಟು ಕ್ಷೀಣ

    ಮಾಸ್ಕೋ: ಉಕ್ರೇನ್ (Ukraine) ವಿರುದ್ಧ ಸಮರ ಸಾರಿರುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರ ಆರೋಗ್ಯ (Health) ಮತ್ತಷ್ಟು ಕ್ಷೀಣಿಸುತ್ತಿದೆ. ದೇಹದ ಇತರ ಭಾಗಗಳು ಚುಚ್ಚುಮದ್ದು ತೆಗೆದುಕೊಳ್ಳಲು ಸ್ಪಂದಿಸದಂತಾಗಿದೆ ಎಂಬುದಾಗಿ ವೈದ್ಯರು (Doctors) ತಿಳಿಸಿದ್ದಾರೆ.

    ಪುಟಿನ್ ದೇಹದ ಮೇಲೆ ವಿಚಿತ್ರ ಗುರುತುಗಳು ಪತ್ತೆಯಾಗಿದ್ದು, ಈ ಕುರಿತ ಫೋಟೋಗಳು ಜಾಲತಾಣದಲ್ಲಿ (Social Media) ಹರಿದಾಡುತ್ತಿವೆ. ಇದು ಆರೋಗ್ಯ ಕ್ಷೀಣಿಸಿರುವ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಇದನ್ನೂ ಓದಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹತ್ಯೆಗೆ ಯತ್ನ

    ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ನಿವೃತ್ತ ಬ್ರಿಟಿಷ್ ಸೇನಾಧಿಕಾರಿ ಮತ್ತು ಹೌಸ್ ಆಫ್ ಲಾರ್ಡ್ಸ್ ಸದಸ್ಯ ರಿಚರ್ಡ್ ಡಾನಾಟ್, ಪುಟಿನ್ ಅವರ ಚಿತ್ರಗಳು ಅವರು ಎಷ್ಟು ಆರೋಗ್ಯವಾಗಿದ್ದಾರೆ ಎಂಬುದನ್ನೂ ಸೂಚಿಸುತ್ತದೆ. ಅವರ ಕೈಗಳ ಮೇಲ್ಬಾಗದಲ್ಲಿ ಕಪ್ಪು ಬಣ್ಣದ ಗುರುತುಗಳು ಕಾಣುತ್ತಿವೆ. ಅಲ್ಲದೇ ಪುಟಿನ್ ದೇಹದ ಇತರ ಭಾಗಗಳು ಇಂಜೆಕ್ಷನ್ (Injection) ತೆಗೆದುಕೊಳ್ಳಲು ಸ್ಪಂದಿಸುತ್ತಿಲ್ಲ. ಪುಟಿನ್ ಆರೋಗ್ಯವಾಗಿದ್ದಾರೆ, ಆದರೂ ಅವರ ಬಗ್ಗೆ ಎಚ್ಚರ ವಹಿಸಬೇಕಾದ ಅಗತ್ಯವಿದೆ ಎಂದು ರಿಚರ್ಡ್ ಡಾನಾಟ್ ಅವರು ಹೇಳಿದ್ದಾರೆ.

    ಕ್ಯಾನ್ಸರ್ (Cancer) ಕಾಯಿಲೆಯಿಂದ ಬಳಲುತ್ತಿರುವ ರಷ್ಯಾ ಅಧ್ಯಕ್ಷ (Russia President) ಪುಟಿನ್ ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದು, ಹೆಚ್ಚೆಂದರೆ ಅವರಿನ್ನು 3 ವರ್ಷ ಬದುಕಬಹುದೆಂದು ವೈದ್ಯರು ಹೇಳಿರುವುದಾಗಿ ರಷ್ಯಾದ ಬೇಹುಗಾರಿಕಾ ಸಂಸ್ಥೆ ಎಫ್‌ಎಸ್‌ಬಿಯ ವರದಿ ಕೆಲ ದಿನಗಳ ಹಿಂದೆ ಹೇಳಿತ್ತು. ಇದನ್ನೂ ಓದಿ: ಭಾರತಕ್ಕೆ 5 ರನ್‍ಗಳ ರೋಚಕ ಗೆಲುವು – ಹರ್ಷ ತಂದ ಅರ್ಷದೀಪ್

    ಪುಟಿನ್ ಅವರ ಕಣ್ಣಿನ ದೃಷ್ಟಿ ಗಂಭೀರವಾಗಿ ಹದಗೆಟ್ಟಿದೆ. ಅವರ ಬೆರಳುಗಳೂ ನಿಯಂತ್ರಿಸಲಾಗದಷ್ಟು ಅಲುಗಾಡತೊಡಗಿವೆ ಎಂದು ಗುಪ್ತಚರ ಇಲಾಖೆಯ ಮೂಲಗಳು ತಿಳಿಸಿದ್ದವು. ಬ್ರಿಟನ್ನಲ್ಲಿ ಪುಟಿನ್ ಹತ್ಯೆ ಮಾಡಲು ಸಂಚು ರೂಪಿಸಿರುವವರಿಗೆ ತಿಳಿಯದಂತೆ ಬಚ್ಚಿಡಲಾಗಿದೆ. ದುರ್ಬಲತೆಗೆ ಕಾರಣವಾಗುತ್ತದೆ ಎಂಬ ಭಯದಿಂದ ಗ್ಲಾಸ್ ಧರಿಸಲು ಪುಟಿನ್ ತಿರಸ್ಕರಿಸುತ್ತಿದ್ದಾರೆ ಎಂಬುದಾಗಿ ಗುಪ್ತಚರ ಇಲಾಖೆ ಮೂಲಗಳು ಮಾಧ್ಯಮಗಳಿಗೆ ತಿಳಿಸಿದ್ದವು.

    Live Tv
    [brid partner=56869869 player=32851 video=960834 autoplay=true]