Tag: Ukraine

  • ಸೇಡಿಗೆ ಸೇಡು – ಇರಾನ್‌ ಡ್ರೋನ್ ಬಳಸಿ ರಷ್ಯಾ, ಉಕ್ರೇನ್ ಮೇಲೆ ದಾಳಿ

    ಸೇಡಿಗೆ ಸೇಡು – ಇರಾನ್‌ ಡ್ರೋನ್ ಬಳಸಿ ರಷ್ಯಾ, ಉಕ್ರೇನ್ ಮೇಲೆ ದಾಳಿ

    ಕೀವ್: ಇರಾನಿನ (Iran) ಡ್ರೋನ್‍ಗಳನ್ನು (Drone) ಬಳಸಿ ನಮ್ಮ ಮೇಲೆ ರಷ್ಯಾ (Russia) ಸೇನೆ ದಾಳಿ ನಡೆಸಿದೆ ಎಂದು ಉಕ್ರೇನ್ (Ukraine) ಅಧ್ಯಕ್ಷ ವೊಲಿಡಿಮಿರ್ ಝೆಲೆನ್ಸ್ಕಿ (Volodymyr Zelensky)  ಆರೋಪಿಸಿದ್ದಾರೆ.

    ಕಳೆದ ಎರಡು ದಿನಗಳ ಹಿಂದೆಯಷ್ಟೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕನಸಿನ ಕ್ರಿಮಿಯಾ ರಷ್ಯಾ ಸಂಪರ್ಕಿಸುವ ಕ್ರಿಮಿಯಾ ಸೇತುವೆಯನ್ನು (Crimean Bridge) ಉಕ್ರೇನ್ ಸೇನೆ ದಾಳಿ ನಡೆಸಿ ನಾಶಮಾಡಿತ್ತು. ಉಕ್ರೇನ್‍ನ ಖೇರ್ಸನ್, ಝರ್ಝಿಯಾದಲ್ಲಿರುವ ಸೇನೆಗೆ ಇಂಧನ ಸರಬರಾಜು ರಷ್ಯಾದ ರೈಲನ್ನು ಉಕ್ರೇನ್ ಉಡಾಯಿಸಿತ್ತು. ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ರಷ್ಯಾ ಸೇಡು ತಿರಿಸಿಕೊಳ್ಳಲು ಮುಂದಾಗಿದೆ. ಈಗಾಗಲೇ ಉಕ್ರೇನ್‍ನಲ್ಲಿ ಮತ್ತೆ ರಷ್ಯಾ ಸೇನೆ ಗುಂಡಿನ ಮಳೆ ಆರಂಭಿಸಿದೆ. ಇದನ್ನೂ ಓದಿ: ಉಕ್ರೇನ್ ವಿರುದ್ಧ ಡೆಡ್ಲಿ ರಾಕೆಟ್ ದಾಳಿ- ಸೇತುವೆ ಉಡೀಸ್ ಮಾಡಿದ್ದಕ್ಕೆ ಸೇಡು ತೀರಿಸಿಕೊಂಡ ರಷ್ಯಾ

    ಉಕ್ರೇನ್‍ನ ರಾಜಧಾನಿ ಕೀವ್ (Kyiv), ಲಿವ್, ತೆರ್ನೋಪಿಲ್ ಸೇರಿದಂತೆ ಹಲವು ನಗರಗಳ ಮೇಲೆ ರಷ್ಯಾ ರಾಕೆಟ್ ದಾಳಿ ನಡೆದಿದೆ. ಕೀವ್ ನಗರದಲ್ಲಿ ಭಾರೀ ಪ್ರಮಾಣದ ಸ್ಫೋಟದ ಸದ್ದು, ಹೊಗೆ, ಧೂಳು ಹಾಗೂ ಬೆಂಕಿ ತುಂಬಿಕೊಂಡಿದೆ. ಇದರಿಂದಾಗಿ ಕಿವ್ ನಗರದಾದ್ಯಂತ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಈಗಾಗಲೇ ರಷ್ಯಾ ಕೀವ್ ನಗರವನ್ನು ಮತ್ತೊಮ್ಮೆ ಟಾರ್ಗೆಟ್ ಮಾಡಿದ್ದು, ಇದೀಗ ಇರಾನ್‍ನ ಡ್ರೋನ್‍ಗಳನ್ನು ಬಳಸಿ ನಮ್ಮ ಮೇಲೆ ದಾಳಿ ನಡೆದಿದೆ ಎಂದು ಝೆಲೆನ್ಸ್ಕಿ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ‘ಗೋವನ್ನು’ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಮನವಿ – ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

    ರಷ್ಯಾ ಸೈನ್ಯ ಉಕ್ರೇನ್‍ನ ಕೀವ್ ನಗರದ ಮೇಲೆ 75ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ಎಂದು ಮೂಲಗಳಿಂದ ವರದಿಯಾಗಿದೆ. ಈಗಾಗಲೇ ಹಲವು ಕಟ್ಟಡಗಳು ಧ್ವಂಸವಾಗಿವೆ, ರಸ್ತೆಯಲ್ಲಿದ್ದಂತಹ ಕಾರ್ ಸೇರಿದಂತೆ ವಾಹನಗಳು ಬೆಂಕಿಗಾಹುತಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಉಕ್ರೇನ್ ವಿರುದ್ಧ ಡೆಡ್ಲಿ ರಾಕೆಟ್ ದಾಳಿ- ಸೇತುವೆ ಉಡೀಸ್ ಮಾಡಿದ್ದಕ್ಕೆ ಸೇಡು ತೀರಿಸಿಕೊಂಡ ರಷ್ಯಾ

    ಉಕ್ರೇನ್ ವಿರುದ್ಧ ಡೆಡ್ಲಿ ರಾಕೆಟ್ ದಾಳಿ- ಸೇತುವೆ ಉಡೀಸ್ ಮಾಡಿದ್ದಕ್ಕೆ ಸೇಡು ತೀರಿಸಿಕೊಂಡ ರಷ್ಯಾ

    ಕೀವ್: ಎರಡು ದಿನಗಳ ಹಿಂದೆಯಷ್ಟೇ ರಷ್ಯಾಕ್ಕೆ (Russia) ತಿರುಗೇಟು ನೀಡಿದ್ದ ಉಕ್ರೇನ್ ವಿರುದ್ಧ ಡೆಡ್ಲಿ ರಾಕೆಟ್ (Rocket) ದಾಳಿ ಮಾಡುವ ಮೂಲಕ ರಷ್ಯಾ ಸೇಡು ತೀರಿಸಿಕೊಂಡಿದೆ.

    https://twitter.com/Ukraine66251776/status/1579347170792452096

    ರಷ್ಯಾ ಸೇನೆ ಸೋಮವಾರ ಬೆಳ್ಳಂಬೆಳಗ್ಗೆ (ಸ್ಥಳೀಯ ಸಮಯ ಬೆಳಗ್ಗೆ 8:15) ಅಬ್ಬರಿಸಿದೆ. ಉಕ್ರೇನ್ ರಾಜಧಾನಿ ಕೀವ್ ಮೇಲೆ ಹಲವು ಡೆಡ್ಲಿ ರಾಕೆಟ್‌ಗಳು ಏಕಕಾಲಕ್ಕೆ ದಾಳಿ ನಡೆದಿದ್ದು, ಹಲವು ಕಟ್ಟಡಗಳನ್ನ ಉಡೀಸ್ ಮಾಡಿದೆ. ಕೀವ್ (Kyiv) ನಗರದ ಹಲವೆಡೆ ಹೊಗೆ, ಧೂಳಿನ ಅಬ್ಬರ ಹೆಚ್ಚಾಗಿದ್ದು, ಹಲವು ಕಟ್ಟಡಗಳು ನೆಲಸಮವಾಗಿವೆ. ಇದನ್ನೂ ಓದಿ: ಪುಟಿನ್ ಕನಸಿನ ಯುರೋಪಿನ ಉದ್ದದ ಸೇತುವೆ ಉಡೀಸ್ -ಕ್ರಿಮಿಯಾ ಸಂಪರ್ಕ ಕಡಿತ

    ಉಕ್ರೇನ್ (Ukraine) ರಾಜಧಾನಿ ಕೀವ್ (Kyiv) ಮಾತ್ರವಲ್ಲ, ಲಿವ್, ತೆರ್ನೋಪಿಲ್ ಸೇರಿದಂತೆ ಹಲವು ನಗರಗಳ ಮೇಲೆ ರಾಕೆಟ್ ದಾಳಿ ನಡೆದಿದೆ. ಕೀವ್ ನಗರದಲ್ಲಿ ಭಾರೀ ಪ್ರಮಾಣದ ಸ್ಪೋಟದ ಸದ್ದು, ಹೊಗೆ, ಧೂಳು ಹಾಗೂ ಬೆಂಕಿ ತುಂಬಿಕೊಂಡಿದೆ. ಇದರಿಂದಾಗಿ ಕಿವ್ ನಗರದಾದ್ಯಂತ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸದ್ಯ ಉಕ್ರೇನ್ ವಿರುದ್ಧ ರಷ್ಯಾ ನಡೆಸಿದ ದಾಳಿಯ ಭಯಾನಕ ವೀಡಿಯೋಗಳು ಜಾಲತಾಣದಲ್ಲಿ (Social Media) ಹರಿದಾಡುತ್ತಿವೆ. ಕಿಲೋ ಮೀಟರ್ ದೂರದಲ್ಲಿ ನಿಂತವರಿಗೂ ಸ್ಫೋಟದ ದೃಶ್ಯ ಕಂಡುಬರುತ್ತಿದೆ. ಆದರೆ ಸ್ಫೋಟದಿಂದ ಜೀವ ಹಾನಿ ಆಗಿರುವ ಬಗ್ಗೆ ಈವರೆಗೆ ವರದಿ ಲಭ್ಯವಾಗಿಲ್ಲವಾದ್ರೂ ರಕ್ಷಣಾ ಕಾರ್ಯಾಚರಣೆ ಬಳಿಕವೇ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.

    ಸೇತುವೆ ಉಡೀಸ್ ಮಾಡಿದ್ದ ಉಕ್ರೇನ್:
    ಕಳೆದ ಎರಡು ದಿನಗಳ ಹಿಂದೆಯಷ್ಟೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಕನಸಿನ ಕ್ರಿಮಿಯಾ – ರಷ್ಯಾ ಸಂಪರ್ಕಿಸುವ ಕ್ರಿಮಿಯಾ ಸೇತುವೆಯನ್ನು (Crimean Bridge) ಉಕ್ರೇನ್ ಉಡೀಸ್ ಮಾಡಿತ್ತು. ರಷ್ಯಾ ಆಕ್ರಮಿತ ಕ್ರಿಮಿಯಾ ಭಾಗದ ಮೂಲಕ ಉಕ್ರೇನ್‌ನ ಖೇರ್ಸನ್, ಝರ‍್ಝಿಯಾದಲ್ಲಿರುವ ಸೇನೆಗೆ ಇಂಧನ ಸರಬರಾಜು ರಷ್ಯಾದ ರೈಲನ್ನು ಉಕ್ರೇನ್ ಉಡಾಯಿಸಿತ್ತು. ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದರು.

    ದಕ್ಷಿಣ ಉಕ್ರೇನ್ ಯುದ್ಧದಲ್ಲಿ ತೊಡಗಿಕೊಂಡಿರುವ ರಷ್ಯಾದ ಯೋಧರಿಗೆ ಸಾಮಗ್ರಿಗಳನ್ನು ತಲುಪಿಸುವ ಪ್ರಮುಖ ಮಾರ್ಗ ಇದಾಗಿತ್ತು. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 70ನೇ ವರ್ಷಕ್ಕೆ ಕಾಲಿಟ್ಟ ಮರುದಿನವೇ ಈ ಸ್ಫೋಟ ನಡೆದಿತ್ತು.

    ಕಪ್ಪುಸಮುದ್ರ ಮತ್ತು ಅಜೋವ್ ಸಮುದ್ರವನ್ನು ಸಂಪರ್ಕಿಸುವ ಕ್ರೆಚ್ ಜಲಸಂಧಿಗೆ ಅಡ್ಡಲಾಗಿ ನಿರ್ಮಿಸಿರುವ 19 ಕಿ.ಮೀ. ಉದ್ದದ ಈ ಸೇತುವೆಯನ್ನು 2018ರಲ್ಲಿ ಬಳಕೆಗೆ ಮುಕ್ತಗೊಳಿಸಲಾಗಿತ್ತು. ಇದು ಯೂರೋಪ್‌ನಲ್ಲಿಯೇ ಅತಿ ಉದ್ದದ ಸೇತುವೆಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪುಟಿನ್ ಕನಸಿನ ಯುರೋಪಿನ ಉದ್ದದ ಸೇತುವೆ ಉಡೀಸ್ -ಕ್ರಿಮಿಯಾ ಸಂಪರ್ಕ ಕಡಿತ

    ಪುಟಿನ್ ಕನಸಿನ ಯುರೋಪಿನ ಉದ್ದದ ಸೇತುವೆ ಉಡೀಸ್ -ಕ್ರಿಮಿಯಾ ಸಂಪರ್ಕ ಕಡಿತ

    ಕೀವ್: ವ್ಲಾದಿಮಿರ್ ಪುಟಿನ್ (Vladimir Putin) ಕನಸಿನ ಯುರೋಪಿನ ಉದ್ದದ ಸೇತುವೆಯನ್ನು ಧ್ವಂಸ ಮಾಡಲಾಗಿದ್ದು, ಕ್ರಿಮಿಯಾ- ರಷ್ಯಾ ಸಂಪರ್ಕ ಕಡಿತಗೊಂಡಿದೆ.

    ತನ್ನ ಮೇಲೆ ದಾಳಿ ಮಾಡುತ್ತಿರುವ ರಷ್ಯಾಗೆ (Ruaaia) ಉಕ್ರೇನ್ (Ukraine) ತಿರುಗೇಟು ನೀಡುತ್ತಲೇ ಇದೆ. ರಷ್ಯಾ ಆಕ್ರಮಿತ ಕ್ರಿಮಿಯಾ ಭಾಗದ (Crimea Kerch Bridge) ಮೂಲಕ ಉಕ್ರೇನ್‌ನ ಖೇರ್ಸನ್, ಝರ‍್ಝಿಯಾದಲ್ಲಿರುವ ಸೇನೆಗೆ ಇಂಧನ ಸರಬರಾಜು ರಷ್ಯಾದ ರೈಲನ್ನು ಉಕ್ರೇನ್ ಉಡಾಯಿಸಿದೆ. ಸ್ಫೋಟದದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ರಷ್ಯಾ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಇದನ್ನೂ ಓದಿ: ದೇವಾಲಯಕ್ಕೆ ನುಗ್ಗಿ ಕಾಳಿ ದೇವಿಯ ವಿಗ್ರಹವನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು

    ದಕ್ಷಿಣ ಉಕ್ರೇನ್ ಯುದ್ಧದಲ್ಲಿ ತೊಡಗಿಕೊಂಡಿರುವ ರಷ್ಯಾದ ಯೋಧರಿಗೆ ಸಾಮಗ್ರಿಗಳನ್ನು ತಲುಪಿಸುವ ಪ್ರಮುಖ ಮಾರ್ಗ ಇದಾಗಿತ್ತು. ಈ ಸ್ಫೋಟದ ಹಿಂದೆ ಉಕ್ರೇನ್ ಕೈವಾಡವಿದೆ ಎಂದು ಕ್ರಿಮಿಯಾದ ರಷ್ಯಾ ಬೆಂಬಲಿತ ಪ್ರಾದೇಶಿಕ ಸಂಸತ್‌ನ ಸ್ಪೀಕರ್ ಆರೋಪಿಸಿದ್ದಾರೆ. ಈ ಸೇತುವೆಯನ್ನು ಸ್ಫೋಟಿಸುವುದಾಗಿ ಉಕ್ರೇನ್‌ನ ಅಧಿಕಾರಿಗಳು ಈ ಹಿಂದೆ ಹಲವು ಬಾರಿ ಬೆದರಿಕೆಯೊಡ್ಡಿದ್ದರು.

    ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 70ನೇ ವರ್ಷಕ್ಕೆ ಕಾಲಿಟ್ಟ ಮರುದಿನವೇ ಈ ಸ್ಫೋಟ ನಡೆದಿದೆ. ಪುಟಿನ್ ಅವರನ್ನು ಅವಮಾನಿಸುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ಮೂಲಗಳು ಹೇಳಿವೆ. ಆದರೆ ಉಕ್ರೇನ್‌ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ಇಸ್ರೇಲ್‌ನಲ್ಲಿ ಬರ್ತ್‌ಡೆ ಪಾರ್ಟಿ – ಭಾರತ ಮೂಲದ ಯುವಕ ಕೊಲೆ

    ಸೇತುವೆಯಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಇಂಧನ ಸಾಗಿಸುತ್ತಿದ್ದ ರೈಲೊಂದರ 7 ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಈ ಸೇತುವೆಯು ರೈಲುಗಳ (Railway) ಹಾಗೂ ವಾಹನಗಳ ಸಂಚಾರಕ್ಕೆ ಮಾರ್ಗಗಳನ್ನು ಹೊಂದಿದೆ. ವಾಹನಗಳು ಸಂಚರಿಸುವ ಒಂದು ಮಾರ್ಗ ಕುಸಿದಿದೆ.

    ಕಪ್ಪುಸಮುದ್ರ ಮತ್ತು ಅಜೋವ್ ಸಮುದ್ರವನ್ನು ಸಂಪರ್ಕಿಸುವ ಕ್ರೆಚ್ ಜಲಸಂಧಿಗೆ (Kerch Bridge) ಅಡ್ಡಲಾಗಿ ನಿರ್ಮಿಸಿರುವ 19 ಕಿ.ಮೀ. ಉದ್ದದ ಈ ಸೇತುವೆಯನ್ನು 2018ರಲ್ಲಿ ಬಳಕೆಗೆ ಮುಕ್ತಗೊಳಿಸಲಾಗಿತ್ತು. ಇದು ಯೂರೋಪ್‌ನಲ್ಲಿಯೇ ಅತಿ ಉದ್ದದ ಸೇತುವೆಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಉಕ್ರೇನ್ ಮೇಲೆ ಪುಟಿನ್ ಅಣ್ವಸ್ತ್ರ ಬಳಸಬಹುದು: ಬೈಡನ್

    ಉಕ್ರೇನ್ ಮೇಲೆ ಪುಟಿನ್ ಅಣ್ವಸ್ತ್ರ ಬಳಸಬಹುದು: ಬೈಡನ್

    ವಾಷಿಂಗ್ಟನ್: ಶೀತಲ ಸಮರದ (Cold War) ಬಳಿಕ ಇದೀಗ ಮೊದಲ ಬಾರಿಗೆ ಪರಮಾಣು ದಾಳಿಯ ಅಪಾಯ ಹುಟ್ಟಿಕೊಂಡಿದೆ. ರಷ್ಯಾದ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಉಕ್ರೇನ್‌ನಲ್ಲಿ (Ukraine) ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯಲ್ಲಿ ಪರಮಾಣು ಶಸ್ತ್ರಾಸ್ತ್ರವನ್ನು (Nuclear Weapons) ಬಳಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಅಮೆರಿಕ (America) ಅಧ್ಯಕ್ಷ ಜೋ ಬೈಡನ್ (Joe Biden) ಪುನರುಚ್ಚರಿಸಿದ್ದಾರೆ.

    ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬೈಡನ್, 1962ರಲ್ಲಿ ಕೆನಡಿ ಹಾಗೂ ಕ್ಯೂಬಾದ ಬಿಕ್ಕಟ್ಟಿನ ಬಳಿಕ ಯಾವುದೇ ಅಣ್ವಸ್ತ್ರದ ಅಪಾಯ ಉಂಟಾಗಿರಲಿಲ್ಲ. ಆದರೆ ಈಗ ಪುಟಿನ್ ಬೆದರಿಕೆ ಹಾಕುತ್ತಿದ್ದು, ಈ ಬಗ್ಗೆ ಅವರು ತಮಾಷೆ ಮಾಡುತ್ತಿಲ್ಲ ಎಂದು ಬೈಡನ್ ಎಚ್ಚರಿಸಿದರು. ಇದನ್ನೂ ಓದಿ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಜಖಂ – ಎಮ್ಮೆಗಳ ಮಾಲೀಕನ ವಿರುದ್ಧ FIR

    ಪರಮಾಣು ಶಸ್ತ್ರಾಸ್ತ್ರಗಳನ್ನು ಸೀಮಿತ ಪ್ರದೇಶದಲ್ಲಿ ಬಳಸಿದರೂ ಅದರ ಪರಿಣಾಮವನ್ನು ಇಡೀ ಪ್ರಪಂಚವೇ ಎದುರಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಓಡಾಡ್ತಿದೆಯಂತೆ ಗುಜರಿ ಅಂಬುಲೆನ್ಸ್- ಸ್ಫೋಟಕ ಸತ್ಯ ಬಯಲು ಮಾಡಿದ ಸಚಿವರು!

    ಪುಟಿನ್ ಅವರನ್ನು ನಾನು ಚೆನ್ನಾಗಿ ಅರ್ಥಮಾಡಿಕೊಂಡಿದ್ದೇನೆ. ಅವರು ಯುದ್ಧದಲ್ಲಿ ಪರಮಾಣು ಶಸ್ತ್ರಾಸ್ತ್ರಗಳು, ಜೈವಿಕ ಅಥವಾ ರಾಸಾಯನಿಕ ಅಸ್ತ್ರಗಳನ್ನು ಬಳಸುವ ಬಗ್ಗೆ ತಮಾಷೆ ಮಾಡಲು ಸಾಧ್ಯವಿಲ್ಲ. ಏಕೆಂದರೆ ಅವರ ಮಿಲಿಟರಿ ಸಾಮರ್ಥ್ಯ ಅಷ್ಟೊಂದು ಪ್ರಭಲವಾಗಿದೆ. ಆದರೆ ನಾವೆಲ್ಲರೂ ಅದನ್ನು ದುರ್ಬಲ ಎಂದು ಭಾವಿಸಿದ್ದೇವೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ – ಪುಟಿನ್‌ ಘೋಷಣೆ

    ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ – ಪುಟಿನ್‌ ಘೋಷಣೆ

    ಮಾಸ್ಕೋ: ಉಕ್ರೇನ್‌ನ (Ukraine) ನಾಲ್ಕು ಪ್ರದೇಶಗಳನ್ನು ರಷ್ಯಾ (Russia) ವಶಕ್ಕೆ ಪಡೆದಿದೆ. ಈ ಪ್ರದೇಶಗಳು ಶಾಶ್ವತವಾಗಿ ರಷ್ಯಾ ಪಾಲಾಗಲಿವೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಘೋಷಿಸಿದ್ದಾರೆ.

    ಕ್ರೆಮ್ಲಿನ್‌ ಸಭಾಂಗಣದಲ್ಲಿ ಈ ಕುರಿತು ಮಾತನಾಡಿದ ಅವರು, ಉಕ್ರೇನ್‌ನ ಸುಮಾರು ಶೇ.15 ರಷ್ಟು ಭೂಭಾಗವಿರುವ ಪ್ರದೇಶಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇದು 2ನೇ ವಿಶ್ವ ಯುದ್ಧದ ನಂತರ ಯೂರೋಪ್‌ನಲ್ಲಿಯೇ ಅತಿ ದೊಡ್ಡ ಸ್ವಾಧೀನವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಬೂಲ್‌ ಶಿಕ್ಷಣ ಕೇಂದ್ರದಲ್ಲಿ ಬಾಂಬ್‌ ಸ್ಫೋಟ – 19 ಮಂದಿ ದುರ್ಮರಣ

    ಉಕ್ರೇನ್‌ನ ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಝಪೊರಿಝಿಯಾ ಪ್ರದೇಶಗಳನ್ನು ರಷ್ಯಾ ವಶಕ್ಕೆ ಪಡೆದಿದೆ. ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ (Volodymyr Zelenskyy), ಪುಟಿನ್ ಜೀವನಕ್ಕಿಂತ ಹೆಚ್ಚು ಯುದ್ಧವನ್ನೇ ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ಯುಎನ್ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್, ಇದು ಅತ್ಯಂತ ಅಪಾಯಕಾರಿ. ವಿಶ್ವಸಂಸ್ಥೆಯ ನಿಯಮ ಉಲ್ಲಂಘನೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹಿಜಬ್‌ ವಿರುದ್ಧ ಪ್ರತಿಭಟನೆ – ವೇದಿಕೆಯಲ್ಲೇ ಕೂದಲು ಕತ್ತರಿಸಿದ ಟರ್ಕಿ ಗಾಯಕಿ

    ಝಪೊರಿಝಿಯಾದಲ್ಲಿ ರಷ್ಯಾದ ರಾಕೆಟ್ ದಾಳಿಗೆ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಇನ್ನೂ 50 ಮಂದಿ ಗಾಯಗೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಷ್ಯಾದಿಂದ ಬಿಡುಗಡೆಯಾದ ಸೈನಿಕನ ಆಘಾತಕಾರಿ ಚಿತ್ರ ಹಂಚಿಕೊಂಡ ಉಕ್ರೇನ್

    ರಷ್ಯಾದಿಂದ ಬಿಡುಗಡೆಯಾದ ಸೈನಿಕನ ಆಘಾತಕಾರಿ ಚಿತ್ರ ಹಂಚಿಕೊಂಡ ಉಕ್ರೇನ್

    ಕೀವ್: ರಷ್ಯಾದಿಂದ (Russia) ಬಂಧಿತನಾಗಿದ್ದ ತನ್ನ ಸೈನಿಕನ (Soldier) ಆಘಾತಕಾರಿ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಉಕ್ರೇನ್ (Ukraine) ರಕ್ಷಣಾ ಸಚಿವಾಲಯ ಹಂಚಿಕೊಂಡಿದೆ.

    ಹಲವು ತಿಂಗಳಿಂದ ರಷ್ಯಾ ಉಕ್ರೇನ್ ಯುದ್ಧ ನಡೆಯುತ್ತಿದೆ. ಈ ಭೀಕರ ಯುದ್ಧದಲ್ಲಿ ಸೈನಿಕರು, ಜನರು ಸೇರಿದಂತೆ 10 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಯುದ್ಧದ ಸಂದರ್ಭದಲ್ಲಿ ಅನೇಕ ರಷ್ಯಾ ಯೋಧರು ಯುಕ್ರೇನ್ ಅವರ ಕೈಯಲ್ಲಿ, ಉಕ್ರೇನ್ ಯೋಧರು ರಷ್ಯಾ ಕೈಯಲ್ಲಿ ಸೆರೆಯಾಗಿದ್ದಾರೆ.

    ಇದೀಗ ಉಕ್ರೇನ್ ರಕ್ಷಣಾ ಸಚಿವಾಲಯವು ಇಂತಹದ್ದೇ ಒಂದು ಫೋಟೋವನ್ನು ಹಂಚಿಕೊಂಡಿದ್ದು, ಉಕ್ರೇನ್ ಸೈನಿಕ ಮೈಖೈಲೋ ಡಯಾನೋವ್ ಎಂಬಾತನನ್ನು ರಷ್ಯಾ ಸೈನಿಕರಿಗೆ ಸೆರೆಯಾಗಿದ್ದ. ಈತ ಈಗ ಬಿಡುಗಡೆ ಹೊಂದಿದ್ದಾನೆ. ಆದರೆ ಆತ ನೋಡಲು ಪರಿಚಯವೇ ಸಿಗದಷ್ಟು ಬದಲಾವಣೆ ಹೊಂದಿದ್ದಾನೆ. ಇದನ್ನೂ ಓದಿ: ಸೇನೆಯನ್ನು ಭಾಗಶಃ ಸಜ್ಜುಗೊಳಿಸಿ – ಅಣ್ವಸ್ತ್ರ ಬಳಕೆಯ ಸುಳಿವು ನೀಡಿದ ಪುಟಿನ್

    ಟ್ವೀಟ್‍ನಲ್ಲಿ ಏನಿದೆ?: ಉಕ್ರೇನ್ ಈಗ ಆತನ ಮೊದಲ ಫೋಟೋ ಹಾಗೂ ಈಗಿನ ಫೋಟೋವನ್ನು ಹಂಚಿಕೊಂಡಿದೆ. ಉಕ್ರೇನ್ ಸೈನಿಕ ಮೈಖೈಲೋ ಡಯಾನೋವ್ ಅದೃಷ್ಟಶಾಲಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ರಷ್ಯಾದಿಂದ ಬಂಧಿತರಾಗಿದ್ದರು. ಆದರೆ ರಷ್ಯಾದಿಂದ ಬದುಕುಳಿದವರಲ್ಲಿ ಒಬ್ಬರಾಗಿದ್ದಾರೆ. ನಾಜಿಸಂನ ನಾಚಿಗೇಡಿನ ಪರಂಪರೆಯನ್ನು ರಷ್ಯಾ ಈ ರೀತಿಯಾಗಿ ಮುಂದುವರಿಸುತ್ತಿದೆ ಎಂದು ಟ್ವೀಟ್‍ನಲ್ಲಿ ಉಕ್ರೇನ್ ತಿಳಿಸಿದೆ.

    ಈಗಿನ ಫೋಟೋದಲ್ಲಿ ಮೈಖೈಲೋ ಡಯಾನೋವ್ ನೋಡಲು ತುಂಬಾ ಸಣ್ಣಾಗಾಗಿದ್ದು, ಆತನ ಮುಖ ಹಾಗೂ ಕೈಗೆ ಗಾಯಗಳಾಗಿವೆ. ಈತನ ಸ್ಥಿತಿ ಗಂಭೀರವಾಗಿದ್ದು, ಕೀವ್ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಇದು ಯುದ್ಧದ ಸಮಯವಲ್ಲ – ಪುಟಿನ್‌ಗೆ ಪ್ರಧಾನಿ ಮೋದಿ ಸಲಹೆ

    ಈ ವರ್ಷದ ಆರಂಭದಲ್ಲಿ ಮೈಖೈಲೋ ಡಯಾನೋವ್ ಮಾರಿಯುಪೋಲ್‍ನಲ್ಲಿ ಅಜೋವ್‍ಸ್ಟಾಲ್ ಸ್ಟೀಲ್ ಕೆಲಸವನ್ನು ರಕ್ಷಿಸಲು ಹೋರಾಡಿದ್ದನು. ಈ ವೇಳೆ ಆತ ರಷ್ಯಾ ಕೈಗೆ ಸರೆಸಿಕ್ಕಿದ್ದನು. ಇದೀಗ ರಷ್ಯಾದಿಂದ ಬಿಡುಗೆಯಾದ 205 ಉಕ್ರೇನಿನವರಲ್ಲಿ ಈತನು ಒಬ್ಬನಾಗಿದ್ದಾನೆ.

    Live Tv
    [brid partner=56869869 player=32851 video=960834 autoplay=true]

  • ರಷ್ಯಾ-ಉಕ್ರೇನ್ ನಡುವೆ ಶಾಂತಿ ಸ್ಥಾಪನೆಗೆ ಮೋದಿಯನ್ನೊಳಗೊಂಡ ಸಮಿತಿ ರಚಿಸಿ: ಮೆಕ್ಸಿಕೋ

    ರಷ್ಯಾ-ಉಕ್ರೇನ್ ನಡುವೆ ಶಾಂತಿ ಸ್ಥಾಪನೆಗೆ ಮೋದಿಯನ್ನೊಳಗೊಂಡ ಸಮಿತಿ ರಚಿಸಿ: ಮೆಕ್ಸಿಕೋ

    ವಿಶ್ವಸಂಸ್ಥೆ: ರಷ್ಯಾ ಮತ್ತು ಉಕ್ರೇನ್ ನಡುವೆ (Russia Ukraine War) ಶಾಂತಿಯನ್ನು ಸ್ಥಾಪಿಸಲು ಮಧ್ಯಸ್ಥಿಕೆ ವಹಿಸಲು ಭಾರತದ (India) ಪ್ರಧಾನಿ ನರೇಂದ್ರ ಮೋದಿ (Narendra Modi), ಪೋಪ್ ಫ್ರಾನ್ಸಿಸ್ ಮತ್ತು ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಬೇಕು ಎಂದು ಮೆಕ್ಸಿಕೋ ವಿಶ್ವಸಂಸ್ಥೆಯಲ್ಲಿ (United Nations) ಪ್ರಸ್ತಾಪಿಸಿದೆ.

    ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸೆಕ್ಯುರಿಟಿ ಕೌನ್ಸಿಲ್ ಚರ್ಚೆಯಲ್ಲಿ ಭಾಗವಹಿಸಿದ ಮೆಕ್ಸಿಕೊದ ವಿದೇಶಾಂಗ ಸಚಿವ ಮಾರ್ಸೆಲೊ ಲೂಯಿಸ್ ಎಬ್ರಾಡ್ ಕ್ಯಾಸೌಬಾನ್ ಅವರು ಈ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ.

     

    ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಉಜ್ಬೇಕಿಸ್ತಾನ್‌ನ ಸಮರ್‌ಕಂಡ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ 22 ನೇ ಶೃಗಸಭೆಯಲ್ಲಿ ಭೇಟಿಯಾಗಿ, ಇದು ಯುದ್ಧದ ಸಮಯವಲ್ಲ ಎಂದು ತಿಳಿಹೇಳಿದ್ದಾರೆ. ಇದರ ಬೆನ್ನಲ್ಲೇ ಮೆಕ್ಸಿಕೋ ಈ ಪ್ರಸ್ತಾಪವನ್ನು ಮುಂದಿಟ್ಟಿದೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧ: ತಕ್ಷಣವೇ ಅಂತ್ಯಗೊಳಿಸಲು ವಿಶ್ವಸಂಸ್ಥೆಯಲ್ಲಿ ಭಾರತ ಕರೆ

    ನರೇಂದ್ರ ಮೋದಿ ಪುಟಿನ್ ಅವರಿಗೆ ಇದು ಯುದ್ಧದ ಸಮಯವಲ್ಲ ಎಂದು ಹೇಳಿರುವುದಕ್ಕೆ ಅಮೆರಿಕ, ಫ್ರಾನ್ಸ್, ಬ್ರಿಟನ್ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳು ಮೆಚ್ಚುಗೆ ವ್ಯಕ್ತಪಡಿಸಿವೆ.

    ಇದೀಗ ಉಕ್ರೇನ್ ಹಾಗೂ ರಷ್ಯಾ ನಡುವೆ ಶಾಂತಿಯನ್ನು ಸ್ಥಾಪಿಸಲು ನಾವು ಅತ್ಯುತ್ತಮವಾದ ಪ್ರಯತ್ನವನ್ನು ಮಾಡುವುದು ಮುಖ್ಯವಾಗಿದೆ. ಇದಕ್ಕಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ, ಪೋಪ್ ಫ್ರಾನ್ಸಿಸ್ ಸೇರಿದಂತೆ ಇತರ ರಾಷ್ಟ್ರಗಳ ಮುಖ್ಯಸ್ಥರನ್ನು ಒಟ್ಟುಗೂಡಿಸಿ ಸಮಿತಿಯನ್ನು ಸ್ಥಾಪಿಸಬೇಕು ಎಂದು ಕ್ಯಾಸೌಬಾನ್ ವಿಶ್ವಸಂಸ್ಥೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಪತ್ರಕರ್ತೆ ಹಿಜಬ್ ಧರಿಸದ್ದಕ್ಕೆ ಸಂದರ್ಶನವನ್ನೇ ರದ್ದುಗೊಳಿಸಿದ ಇರಾನ್ ಅಧ್ಯಕ್ಷ

    ಮಾತುಕತೆ, ರಾಜತಾಂತ್ರಿಕತೆ ಹಾಗೂ ಪರಿಣಾಮಕಾರಿ ರಾಜಕೀಯ ಮಾರ್ಗಗಳನ್ನು ನಿರ್ಮಿಸುವುದರಿಂದ ಮಾತ್ರವೇ ಶಾಂತಿಯನ್ನು ಸ್ಥಾಪಿಸಬಹುದು ಎಂದು ಮೆಕ್ಸಿಕನ್ ವಿದೇಶಾಂಗ ಸಚಿವ ವಿಶ್ವಸಂಸ್ಥೆಯಲ್ಲಿ ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ರಷ್ಯಾ-ಉಕ್ರೇನ್ ಯುದ್ಧ: ತಕ್ಷಣವೇ ಅಂತ್ಯಗೊಳಿಸಲು ವಿಶ್ವಸಂಸ್ಥೆಯಲ್ಲಿ ಭಾರತ ಕರೆ

    ರಷ್ಯಾ-ಉಕ್ರೇನ್ ಯುದ್ಧ: ತಕ್ಷಣವೇ ಅಂತ್ಯಗೊಳಿಸಲು ವಿಶ್ವಸಂಸ್ಥೆಯಲ್ಲಿ ಭಾರತ ಕರೆ

    ವಿಶ್ವಸಂಸ್ಥೆ: ರಷ್ಯಾ (Russia) ಉಕ್ರೇನ್ (Ukraine) ಮೇಲೆ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ತಕ್ಷಣವೇ ಕೊನೆಗೊಳಿಸಿ ಶಾಂತಿಯುತ ಮಾತುಕತೆಗೆ ಮರಳುವುದು ಇದೀಗ ಅಗತ್ಯವಾಗಿದೆ ಎಂದು ಭಾರತ ವಿಶ್ವಸಂಸ್ಥೆಯಲ್ಲಿ (UN)  ತಿಳಿಸಿದೆ.

    ರಷ್ಯಾ ಉಕ್ರೇನ್ ಮೇಲೆ ಪರಮಾಣು ಶಸ್ತ್ರಾಸ್ತ್ರವನ್ನು ಬಳಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತ, ಈಗಾಗಲೇ ನರೇಂದ್ರ ಮೋದಿಯವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಇದು ಯುದ್ಧದ ಸಮಯವಲ್ಲ ಎಂದು ಹೇಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ (S Jaishankar) ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ದೇಶದ ಹೊರಗೆ ಎಷ್ಟು ಆಸ್ತಿ ಮಾಡಿದ್ದಾರೆ?: ಪಾಕ್ ಮಾಜಿ ಪ್ರಧಾನಿ

    ರಷ್ಯಾ ಉಕ್ರೇನ್‌ನ ಸಂಘರ್ಷ ಇಡೀ ವಿಶ್ವಕ್ಕೆ ಆಳವಾದ ಕಾಳಜಿಯ ವಿಷಯವಾಗಿದೆ. ಮುಖ್ಯವಾಗಿ ಪರಮಾಣು ದಾಳಿಯ ಸಾಧ್ಯತೆ ಭವಿಷ್ಯದ ದೃಷ್ಟಿಕೋನಕ್ಕೆ ಇನ್ನಷ್ಟು ಭೀತಿಯ ಸಂಗತಿಯಾಗಿದೆ. ಆದರೆ ಭಾರತ ಇದನ್ನು ಖಂಡಿಸಿಲ್ಲ. ಇದನ್ನು ಈ ಕೂಡಲೇ ರಾಜತಾಂತ್ರಿಕತೆ ಹಾಗೂ ಮಾತುಕತೆಯ ಮೂಲಕ ಪರಿಹರಿಸಬೇಕು ಎಂಬುದೇ ಭಾರತದ ಉದ್ದೇಶ ಎಂದು ತಿಳಿಸಿದರು. ಇದನ್ನೂ ಓದಿ: 18-65 ವಯಸ್ಸಿನ ಪುರುಷರಿಗೆ ಟಿಕೆಟ್ ಮಾರಾಟ ನಿಲ್ಲಿಸಲು ರಷ್ಯಾದ ಏರ್‌ಲೈನ್ಸ್ ಆದೇಶ

    Live Tv
    [brid partner=56869869 player=32851 video=960834 autoplay=true]

  • 18-65 ವಯಸ್ಸಿನ ಪುರುಷರಿಗೆ ಟಿಕೆಟ್ ಮಾರಾಟ ನಿಲ್ಲಿಸಲು ರಷ್ಯಾದ ಏರ್‌ಲೈನ್ಸ್ ಆದೇಶ

    18-65 ವಯಸ್ಸಿನ ಪುರುಷರಿಗೆ ಟಿಕೆಟ್ ಮಾರಾಟ ನಿಲ್ಲಿಸಲು ರಷ್ಯಾದ ಏರ್‌ಲೈನ್ಸ್ ಆದೇಶ

    ಮಾಸ್ಕೋ: ಉಕ್ರೇನ್‌ನಲ್ಲಿ (Ukraine) ಯುದ್ಧವನ್ನು ಇನ್ನಷ್ಟು ತೀವ್ರಗೊಳಿಸಲು ರಷ್ಯಾದ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ತನ್ನ ಸೇನೆಯನ್ನು ಭಾಗಶಃ ಸಜ್ಜುಗೊಳಿಸುವಂತೆ ಆದೇಶ ನೀಡಿದ್ದಾರೆ. ಇದರ ಬೆನ್ನಲ್ಲೇ ರಷ್ಯಾದಲ್ಲಿ 18 ರಿಂದ 65 ವಯಸ್ಸಿನವರೆಗಿನ ಪುರುಷರಿಗೆ (Men) ಟಿಕೆಟ್ (Ticket) ಮಾರಾಟ ಮಾಡುವುದನ್ನು ತಡೆಯಲು ರಷ್ಯಾದ ಏರ್‌ಲೈನ್ಸ್ (Airlines) ಆದೇಶ ನೀಡಿದೆ.

    ಪುಟಿನ್ ಉಕ್ರೇನ್‌ನಲ್ಲಿ ತನ್ನ ಕಾರ್ಯಾಚರಣೆಯನ್ನು ಇನ್ನಷ್ಟು ಹೆಚ್ಚಿಸಲು ಸೇನೆಯನ್ನು ಸಜ್ಜುಗೊಳಿಸುತ್ತಿರುವುದಾಗಿ ತಿಳಿಸಿದ ತಕ್ಷಣ ರಷ್ಯಾದಿಂದ ಹೊರಡುತ್ತಿರುವ ಎಲ್ಲಾ ವಿಮಾನಗಳ ಟಿಕೆಟ್‌ಗಳು ಸಂಪೂರ್ಣವಾಗಿ ಮಾರಾಟವಾಗಿದೆ ಎಂದು ವರದಿಯಾಗಿದೆ. ಅಲ್ಲಿನ ಜನರು ಅರ್ಮೇನಿಯಾ, ಜಾರ್ಜಿಯಾ, ಅಜರ್‌ಬೈಜಾನ್, ಕಝಾಕಿಸ್ತಾನ ಸೇರಿದಂತೆ ಹತ್ತಿರದ ದೇಶಗಳಿಗೆ ಹೋಗಲು ಮುಂದಾಗುತ್ತಿದ್ದಾರೆ.

    ಪುಟಿನ್ ಅವರ ಭಾಷಣದ ಬಳಿಕ ರಷ್ಯಾದ ರಕ್ಷಣಾ ಸಚಿವ ಸರ್ಗೆ ಶೋಯಿಗು ಅವರು ದೇಶದ ಸುಮಾರು 3 ಲಕ್ಷ ಪುರುಷರನ್ನು ಸೇನೆಗೆ ಕರೆಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಇದೀಗ ಸಮರ ಕಾನೂನನ್ನು ವಿಧಿಸುವ ಸಾಧ್ಯತೆಗಳ ನಡುವೆಯೇ ರಷ್ಯಾದ ವಿಮಾನಯಾನ ಸಂಸ್ಥೆ 18 ರಿಂದ 65 ವಯಸ್ಸಿನ ನಡುವಿನ ಪುರುಷರಿಗೆ ರಷ್ಯಾದಿಂದ ಹೊರ ಹೋಗಲು ಟಿಕೆಟ್ ನೀಡುವುದನ್ನು ತಡೆಹಿಡಿದಿದೆ. ಈ ವಯಸ್ಸು ರಷ್ಯಾ ಸೈನಿಕರು ಕಾರ್ಯನಿರ್ವಹಿಸುವ ವಯಸ್ಸಾಗಿರುವುದು ಗಮನಾರ್ಹ. ಇದನ್ನೂ ಓದಿ: ಗೌರವ ಹೋದ್ರೆ ಎಲ್ಲರದ್ದೂ ಹೋಗಲಿದೆ – ಪೇ ಸಿಎಂ ಗದ್ದಲ, ಗಲಾಟೆ: ಕಲಾಪ ಮುಂದೂಡಿಕೆ

    ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಪ್ರಾರಂಭವಾದ ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧದಲ್ಲಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಲಕ್ಷಾಂತರ ಜನರನ್ನು ಸ್ಥಳಾಂತರಿಸಲಾಗಿದೆ. ಆದರೂ ವ್ಲಾಡಿಮಿರ್ ಪುಟಿನ್ ಯುದ್ಧವನ್ನು ನಿಲ್ಲಿಸಲು ನಿರಾಕರಿಸಿದ್ದಾರೆ. ಪಾಶ್ಚಿಮಾತ್ಯ ದೇಶಗಳು ಉಕ್ರೇನ್‌ಗೆ ಸಹಾಯ ಮಾಡುತ್ತಿರುವುದಕ್ಕೆ ಕೋಪಗೊಂಡಿರುವ ಪುಟಿನ್ ಪರಮಾಣು ಶಸ್ತ್ರಾಸ್ತ್ರಗಳನ್ನೂ ಬಳಸುವ ಬಗ್ಗೆ ಸುಳಿವು ನೀಡಿದ್ದಾರೆ.

    ಆ ಕಡೆ ಉಕ್ರೇನ್‌ನಲ್ಲಿ ಯುದ್ಧಕ್ಕೆ ಸೇರಲು ಜೈಲಿನಲ್ಲಿರುವ ಕೈದಿಗಳನ್ನೂ ನೇಮಿಸಲಾಗುತ್ತಿರುವುದಾಗಿ ವರದಿಯಾಗಿದೆ. ಸೇನೆಗೆ ಸೇರುವ ಎಲ್ಲಾ ಕೈದಿಗಳಿಗೂ 6 ತಿಂಗಳ ಬಳಿಕ ಅಧ್ಯಕ್ಷೀಯ ಕ್ಷಮಾದಾನ ಹಾಗೂ ತಿಂಗಳಿಗೆ ಭಾರೀ ಮೊತ್ತದ ಸಂಬಳ ನೀಡುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಪಾಪರೆಡ್ಡಿ ಪಾಳ್ಯದಲ್ಲಿ 5 ಅಂತಸ್ತಿನ ಮನೆ ಉಡೀಸ್

    Live Tv
    [brid partner=56869869 player=32851 video=960834 autoplay=true]

  • ಸೇನೆಯನ್ನು ಭಾಗಶಃ ಸಜ್ಜುಗೊಳಿಸಿ – ಅಣ್ವಸ್ತ್ರ ಬಳಕೆಯ ಸುಳಿವು ನೀಡಿದ ಪುಟಿನ್

    ಸೇನೆಯನ್ನು ಭಾಗಶಃ ಸಜ್ಜುಗೊಳಿಸಿ – ಅಣ್ವಸ್ತ್ರ ಬಳಕೆಯ ಸುಳಿವು ನೀಡಿದ ಪುಟಿನ್

    ಮಾಸ್ಕೋ: ರಷ್ಯಾದ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ತನ್ನ ಸೇನೆಯನ್ನು (Military) ಭಾಗಶಃ ಸಜ್ಜುಗೊಳಿಸುವಂತೆ ಆದೇಶ ನೀಡಿದ್ದಾರೆ. ಈ ಆದೇಶದಿಂದಾಗಿ ರಷ್ಯಾ ಉಕ್ರೇನ್ (Ukraine) ಮೇಲಿನ ಯುದ್ಧದಲ್ಲಿ ಪರಮಾಣು ಶಸ್ತ್ರಾಸ್ತ್ರವನ್ನು (Nuclear Weapons) ಬಳಸುವ ಸುಳಿವು ನೀಡಿದ್ದಾರೆ.

    ನಮ್ಮ ದೇಶದ ಪ್ರಾದೇಶಿಕ ಸಮಗ್ರತೆಗೆ ಬೆದರಿಕೆಯಿದ್ದರೆ, ರಷ್ಯಾ ಹಾಗೂ ನಮ್ಮ ಜನರನ್ನು ರಕ್ಷಿಸಲು ನಾವು ನಮ್ಮಿಂದಾಗುವ ಎಲ್ಲಾ ರೀತಿಯ ವಿಧಾನಗಳನ್ನೂ ಬಳಸುತ್ತೇವೆ ಎಂದು ಪುಟಿನ್ ರಾಷ್ಟ್ರವನ್ನು ಉದ್ದೇಶಿಸಿ ದೂರದರ್ಶನದ ಭಾಷಣದಲ್ಲಿ ಹೇಳಿದ್ದಾರೆ. ಈ ಮೂಲಕ ರಷ್ಯಾ ತನ್ನ ಎಲ್ಲಾ ಅಪಾಯಕಾರಿ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುವ ಬಗ್ಗೆ ಪುಟಿನ್ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಹಿಂದೂ, ಮುಸ್ಲಿಮರು ಸಹೋದರ, ಸಹೋದರಿಯರಂತೆ ಇದ್ದೇವೆ- ಬ್ರಿಟನ್‌ನಲ್ಲಿ ಒಗ್ಗಟ್ಟಿನ ಮಂತ್ರ

    Vladimir Putin

    ಅಮೆರಿಕ, ಯುರೋಪಿಯನ್ ಯೂನಿಯನ್, ಹಾಗೂ ಬ್ರಿಟನ್ ಉಕ್ರೇನ್ ಅನ್ನು ಪ್ರೋತ್ಸಾಹಿಸುತ್ತಿದ್ದು, ರಷ್ಯಾದ ಮೇಲೆ ಮಿಲಿಟರಿ ಕಾರ್ಯಾಚರಣೆ ನಡೆಸುವ ಸಂಚು ರೂಪಿಸಿವೆ. ಪಶ್ಚಿಮವು ಪರಮಾಣು ಬ್ಲ್ಯಾಕ್‌ಮೇಲ್‌ನಲ್ಲಿ ತೊಡಗಿದೆ. ಆದರೆ ಇದಕ್ಕೆ ಪ್ರತ್ಯುತ್ತರ ನೀಡಲು ರಷ್ಯಾದಲ್ಲಿಯೂ ಸಾಕಷ್ಟು ಶಸ್ತ್ರಾಸ್ತ್ರಗಳಿವೆ ಎಂದು ಪುಟಿನ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ರತನ್‌ ಟಾಟಾ ಈಗ PM CARES Fund ಟ್ರಸ್ಟಿ- ಸುಧಾಮೂರ್ತಿಗೆ ಸಲಹಾ ಮಂಡಳಿಯಲ್ಲಿ ಸ್ಥಾನ

    ಪೂರ್ವ ಉಕ್ರೇನ್‌ನ ಡಾನ್‌ಬಾಸ್ ಪ್ರದೇಶವನ್ನು ಸ್ವತಂತ್ರ್ಯಗೊಳಿಸುವ ಗುರಿಯಿದೆ. ರಷ್ಯಾದ ನಿಯಂತ್ರಣದಲ್ಲಿರುವ ಆ ಪ್ರದೇಶದಲ್ಲಿ ಹೆಚ್ಚಿನ ಜನರು ಕೀವ್‌ನಿಂದ ಆಡಳಿತ ನಡೆಯುವುದನ್ನು ನಿರಾಕರಿಸುತ್ತಿದ್ದಾರೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]