Tag: Ukraine

  • ರಷ್ಯಾದ ವಿರೋಧ ನಾವು ಹೋಗಲು ಕಷ್ಟವಿದೆ: ಪ್ರತಾಪ್ ಸಿಂಹ

    ರಷ್ಯಾದ ವಿರೋಧ ನಾವು ಹೋಗಲು ಕಷ್ಟವಿದೆ: ಪ್ರತಾಪ್ ಸಿಂಹ

    ಮೈಸೂರು: ತನ್ನ ಭದ್ರತೆ ಹಾಗೂ ಸುರಕ್ಷತೆ ದೃಷ್ಟಿಕೋನದಲ್ಲಿ ರಷ್ಯಾ, ಉಕ್ರೇನ್ ಮೇಲೆ ಯುದ್ಧ ಮಾಡುತ್ತಿದೆ. ಹೀಗಾಗಿ ರಷ್ಯಾದ ವಿರೋಧ ನಾವು ಹೋಗಲು ಕಷ್ಟವಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

    ಸುದ್ದಿಗಾರರೊಂದಿಎಗ ಮಾತನಾಡಿದ ಅವರು, ನೆಹರು ಕಾಂಗ್ರೆಸ್ ನವರು ನಮಗೆ ವಿದೇಶಾಂಗ ನೀತಿ ಬಗ್ಗೆ ಪಾಠ ಹೇಳುತ್ತಿದ್ದಾರೆ. ಅವರ ಆಡಳಿತದ ವಿದೇಶಾಂಗ ನೀತಿ ಹೇಗೆ ಇತ್ತು. ಅದರಿಂದ ದೇಶಕ್ಕೆ ಆದ ನಷ್ಟ ಎಷ್ಟು ಎಂಬುದು ಇತಿಹಾಸದಲ್ಲಿ ದಾಖಲಾಗಿದೆ. ಕಾಂಗ್ರೆಸ್ ನವರಿಗೆ ವಿದೇಶಾಂಗ ನೀತಿಯೇ ಗೊತ್ತಿಲ್ಲ. ಚೀನಾ ಟಿಬೆಟ್ ಕಬಳಿಸಿದ್ದಾಗ ಸುಮ್ಮನೆ ಇದ್ದ ಕಾಂಗ್ರೆಸ್ ಈಗ ವಿದೇಶಾಂಗ ನೀತಿಯ ಪಾಠ ನಮಗೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜೀವಂತ ಇದ್ದವ್ರನ್ನೇ ತರೋದು ಕಷ್ಟವಿದ್ದು, ನವೀನ್ ಶವ ತರುವುದು ಇನ್ನೂ ಡಿಫಿಕಲ್ಟ್: ಬೆಲ್ಲದ್

    ರಷ್ಯಾದ ವಿರೋಧ ನಾವು ಹೋಗಲು ಕಷ್ಟವಿದೆ. ತನ್ನ ಭದ್ರತೆ, ಸುರಕ್ಷತೆ ದೃಷ್ಟಿಕೋನದಲ್ಲಿ ರಷ್ಯಾ, ಉಕ್ರೇನ್ ಮೇಲೆ ಯುದ್ಧ ಮಾಡುತ್ತಿದೆ. ರಷ್ಯಾದ ಮೇಲೆ ಭಾರತ ಅತಿ ಹೆಚ್ಚು ಅವಲಂಬಿತವಾಗಿದೆ. ಈ ಅವಲಂಬನೆಗೆ ಸೃಷ್ಟಿಸಿದ್ದು ಕಾಂಗ್ರೆಸ್. ರಷ್ಯಾವನ್ನು ಎದುರು ಹಾಕಿಕೊಂಡರೆ ಮುಂದೆ ನಮಗೆ ಯುದ್ಧದಂತಹ ಸಂದರ್ಭ ಸೃಷ್ಟಿಯಾದರೆ ರಷ್ಯಾ ನಮ್ಮ ನೆರವಿಗೆ ಬರುತ್ತಾ?. ಹೀಗಾಗಿ ಪ್ರಧಾನಿಗಳು ಈಗ ತಟಸ್ಥ ನಿಲುವಿಗೆ ಬಂದಿದ್ದಾರೆ.ಅಲ್ಲಿನ ಎಲ್ಲಾ ಭಾರತೀಯ ವಿದ್ಯಾರ್ಥಿಗಳ ರಕ್ಷಣಾ ಕಾರ್ಯ ವ್ಯವಸ್ಥಿತವಾಗಿ ಸಾಗಿದೆ ಎಂದು ಅಭಿಪ್ರಾಯ ಹಂಚಿಕೊಂಡರು.

    ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ನೀಟ್ ಬ್ಯಾನ್ ಕ್ಯಾಂಪೈನ್ ವಿಚಾರಕ್ಕೆ ಪ್ರತಿಕ್ರಿಯಿಸಿ, ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ನೀಟ್ ತರಲಾಗಿದೆ. 138 ಕೋಟಿ ಜನಸಂಖ್ಯೆ ದೇಶಕ್ಕೆ, ಒಂದೂವರೆ ಲಕ್ಷ ಮೆಡಿಕಲ್ ಸೀಟ್ ಇದೆ. ಇದರಿಂದ ಪೈಪೋಟಿ ಹೆಚ್ಚಾಗಿದೆ. ಪ್ರತಿ ಜಿಲ್ಲೆಯಲ್ಲೂ ಮೆಡಿಕಲ್ ಕಾಲೇಜ್ ಬರಬೇಕು. ಆಗ ಸೀಟ್ ಹೆಚ್ಚಾಗುತ್ತೆ. ಎಲ್ಲರಿಗೂ ಅವಕಾಶ ಸಿಗುತ್ತೆ. ಉಕ್ರೇನ್‍ನಲ್ಲಿ ಓದುವುದಕ್ಕೆ ಹೋಗಿರುವವರು ಕೂಡ ಬುದ್ಧಿವಂತರು ಎಂದರು. ಇದನ್ನೂ ಓದಿ: ಯುದ್ಧ ನಿಲ್ಲಿಸಿ ಅಂತ ಪುಟಿನ್‌ಗೆ ನಾವು ಹೇಳಬಹುದೇ: ಸಿಜೆಐ ಪ್ರಶ್ನೆ

    ನವೀನ್ ಸಾವಿನ ಹಿನ್ನೆಲೆಯಲ್ಲಿ ಕೆಲವರು ಮೀಸಲಾತಿ ವಿರುದ್ಧ ಕೆಲವರು ಮಾತಾಡುತ್ತಿದ್ದಾರೆ. ಪ.ಜಾತಿ, ಪ. ಪಂಗಡ ಎಷ್ಟೋ ವರ್ಷ ಶೋಷಣೆಗೆ ಒಳಗಾಗಿದೆ. ಅವರಿಗೆ ಮೀಸಲಾತಿ ಕೊಟ್ಟಿರುವುದರಲ್ಲಿ ಯಾವ ತಪ್ಪು ಇಲ್ಲ. ಜಾತಿ ತಾರತಮ್ಯ ನಿವಾರಣೆಯಾಗಿ ಸಮಾಜ ಜಾತಿ ಬಂಧನದಿಂದ ಹೊರ ಬರುವವರೆಗೂ ಮೀಸಲಾತಿ ಇರುತ್ತೆ. ಮೀಸಲಾತಿ ಇವತ್ತು ಇರುತ್ತೆ ಮುಂದೆಯೂ ಇರುತ್ತೆ. ಯಾರದ್ದೋ ಮನೆಯ ಗಂಟು ತಂದು ಅವರಿಗೆ ಕೊಡುತ್ತಿದ್ದೇವೆ ಎನ್ನುವ ರೀತಿ ಮಾತಾಡಬೇಡಿ. ಶೋಷಣೆ ಒಳಗಾದ ಸಹೋದರರಿಗೆ ಮೀಸಲಾತಿ ಕೊಡುತ್ತಿದ್ದೇವೆ. ಇದರಲ್ಲಿ ತಪ್ಪು ಏನಿದೆ ಎಂದು ಸಂಸದರು ಪ್ರಶ್ನಿಸಿದರು.

  • ಜೀವಂತ ಇದ್ದವ್ರನ್ನೇ ತರೋದು ಕಷ್ಟವಿದ್ದು, ನವೀನ್ ಶವ ತರುವುದು ಇನ್ನೂ ಡಿಫಿಕಲ್ಟ್: ಬೆಲ್ಲದ್

    ಜೀವಂತ ಇದ್ದವ್ರನ್ನೇ ತರೋದು ಕಷ್ಟವಿದ್ದು, ನವೀನ್ ಶವ ತರುವುದು ಇನ್ನೂ ಡಿಫಿಕಲ್ಟ್: ಬೆಲ್ಲದ್

    ಧಾರವಾಡ: ಜೀವಂತವಾಗಿರುವವರನ್ನೇ ಭಾರತಕ್ಕೆ ವಾಪಸ್ ಕರೆತರುವುದು ಕಷ್ಟವಿದೆ. ಹೀಗಿರುವಾಗ ನವೀನ್ ಮೃತದೇಹ ತರುವುದು ಇನ್ನೂ ಕಷ್ಟವಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನದಲ್ಲಿ ಶವ ತರಲು ಹೆಚ್ಚು ಜಾಗಬೇಕು. ಶವ ಇರುವ ಜಾಗದಲ್ಲೇ 8 ಜನ ತರಬಹುದು. ಭಾರತ ಸರ್ಕಾರದ ವಿದೇಶಾಂಗ ಇಲಾಖೆ ಎಂಬಿಬಿಎಸ್ ವಿದ್ಯಾರ್ಥಿ ಶವ ತರಲು ಪ್ರಯತ್ನ ಮಾಡುತ್ತಿದೆ. ಸ್ವತಃ ಪ್ರಧಾನಿ ಮೋದಿ ಅವರೇ ಮುತುವರ್ಜಿ ವಹಿಸಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನು ಕರೆ ತರುವ ಪ್ರಯತ್ನ ನಡೆದಿದೆ. ಅಲ್ಲಿ ಯುದ್ದ ಭೂಮಿ ಇದೆ. ಮಾಧ್ಯಮದವರೇ ಅದನ್ನ ತೊರಿಸುತ್ತಿದ್ದಾರೆ. ಸಾಧ್ಯವಾದರೆ ಮೃತದೇಹ ತರುವ ಕೆಲಸ ಆಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಯುದ್ಧ ನಿಲ್ಲಿಸಿ ಅಂತ ಪುಟಿನ್‌ಗೆ ನಾವು ಹೇಳಬಹುದೇ: ಸಿಜೆಐ ಪ್ರಶ್ನೆ

    ಅಲ್ಲಿ ಇದ್ದವರು ಒತ್ತಡದಲ್ಲಿ ಇದ್ದಾರೆ. ರೊಮೇನಿಯಾಗೆ ಬಂದಿದ್ದಾರೆ ಅಂದರೆ ಸೇಫ್ ಆಗಿದ್ದಾರೆ ಎಂದರ್ಥ. ಅಲ್ಲಿ ನಮ್ಮ ವಿದೇಶಾಂಗ ಇಲಾಖೆ ಅವರಿಗೆ ಊಟ ಹಾಗೂ ವಸತಿ ವ್ಯವಸ್ಥೆ ಮಾಡಿದೆ. ಅವರನ್ನು ತರುವ ಕೆಲಸ ಬೇಗ ಆಗಲಿದೆ. ನಮ್ಮ ವಿದ್ಯಾರ್ಥಿಗಳು ಇಷ್ಟು ದೊಡ್ಡ ಪ್ರಮಾಣದಲ್ಲಿ ಅಲ್ಲಿ ಯಾಕೆ ಎಂಬಿಬಿಎಸ್ ಗೆ ಹೋಗುತ್ತಿದ್ದಾರೆ. ಅದಕ್ಕೆ ಕಾರಣ ನಮ್ಮಲ್ಲಿ ವೈದ್ಯಕೀಯ ಕಲಿಯುವುದು ದೊಡ್ಡ ಖರ್ಚು ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ನವೀನ್ ಸಾವು – ಬಿಜೆಪಿ ನಾಯಕರ ವಿರುದ್ಧ ಸ್ಟಾಲಿನ್ ಕಿಡಿ

    ನಮ್ಮಲ್ಲ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಇದೆ. ಇದೊಂದು ಖಾಸಗಿ ಸಂಸ್ಥೆ. ಇವರು ಎಂಬಿಬಿಎಸ್ ಸಿಟ್ ಅಭಾವ ಸೃಷ್ಟಿ ಮಾಡಿದ್ದಾರೆ. ಹೆಚ್ಚು ಮೆಡಿಕಲ್ ಸಿಟ್ ಕೊಡುವಂತೆ ಇಲ್ಲ. ಅದರಲ್ಲೂ ಭ್ರಷ್ಟಾಚಾರ ಇರುತ್ತೆ. ಈ ಎಂಸಿಐ ಮೇಲೆ ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕಿದೆ. ಇದನ್ನ ಬೈಪಾಸ್ ಮಾಡಬೇಕು. ಅದಕ್ಕೆ ಇರುವ ಅಧಿಕಾರ ಕಟ್ ಮಾಡಬೇಕು. ಬೇರೆ ರಾಷ್ಟ್ರ ದಂತೆಯೇ ನಮ್ಮಲ್ಲಿ ಕಡಿಮೆ ಖರ್ಚಿನಲ್ಲಿ ಮೆಡಿಕಲ್ ಯಾಕೆ ಮಾಡಬಾರದು ಎಂದು ಶಾಸಕರು ಪ್ರಶ್ನಿಸಿದರು. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ಮಾಡಿದ್ದ ಆರೋಪ ನಿರಾಕರಿಸಿದ ಭಾರತ!

  • ಯುದ್ಧದ ನಡುವೆ ಬಾಂಬ್ ಶೆಲ್ಟರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

    ಯುದ್ಧದ ನಡುವೆ ಬಾಂಬ್ ಶೆಲ್ಟರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

    ಕೀವ್: ಉಕ್ರೇನ್‍ನ ಒಡೆಸಾ ನಗರದ ಬಾಂಬ್ ಶೆಲ್ಟರ್‌ನಲ್ಲಿ ಜೋಡಿಯೊಂದು ವಿವಾಹವಾಗಿದ್ದು, ಮದುವೆಯ ವೇಳೆ ಘಂಟೆ ಬದಲಿಗೆ ವೈಮಾನಿಕ ದಾಳಿಯ ಸೈರನ್ ರಿಂಗಣಿಸಲಾಯಿತು.

    ಉಕ್ರೇನ್‍ನ ಕೆಲವು ಭಾಗಗಳಲ್ಲಿ ರಷ್ಯಾ ಪಡೆ ಕ್ಷಿಪಣಿ ದಾಳಿ ಮತ್ತು ಶೆಲ್ ದಾಳಿಯನ್ನು ನಡೆಸುತ್ತಿರುವ ನಡುವೆಯೂ ದಂಪತಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇನ್ನೂ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಫೋಟೋದಲ್ಲಿ ವಧು ನಗುತ್ತಾ ಕೈಯಲ್ಲಿ ಹೂವು ಹಿಡಿದುಕೊಂಡಿದ್ದರೆ, ವರ ಡಾಕ್ಯುಮೆಂಟ್‍ಗೆ ಸಹಿ ಹಾಕುತ್ತಿರುವುದನ್ನು ಕಾಣಬಹುದಾಗಿದೆ.

    ಬುಧವಾರ ಉಕ್ರೇನಿಯನ್ ಅಧಿಕಾರಿಗಳು ರಷ್ಯಾದ ಸೈನಿಕರು 8ನೇ ದಿನದಂದು ದಕ್ಷಿಣ ನಗರವಾದ ಖೆರ್ಸನ್ ಅನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಖೆರ್ಸನ್ ನಗರ ಇದೀಗ ರಷ್ಯಾದ ನಿಯಂತ್ರಣಕ್ಕೆ ಒಳಗಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ನವೀನ್ ಸಾವು – ಬಿಜೆಪಿ ನಾಯಕರ ವಿರುದ್ಧ ಸ್ಟಾಲಿನ್ ಕಿಡಿ

    ಉಕ್ರೇನ್‍ನ ಕೆಲವು ಭಾಗಗಳಲ್ಲಿ ಭಾರೀ ಶೆಲ್ ದಾಳಿ, ಬಾಂಬ್ ದಾಳಿ ಮತ್ತು ಸಂಘರ್ಷದ ನಡುವೆ 2,000ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್‍ನ ರಾಜ್ಯ ತುರ್ತು ಸೇವೆ ತಿಳಿಸಿದೆ. ಇದನ್ನೂ ಓದಿ: ರಷ್ಯಾದ ಯುದ್ಧನೌಕೆಗಳು ಕ್ರೈಮಿಯಾವನ್ನು ಬಿಟ್ಟು ಒಡೆಸ್ಸಾದತ್ತ ಹೋಗುತ್ತಿವೆ: ಅಮೇರಿಕ

  • ಉಕ್ರೇನ್‍ನಲ್ಲಿ ನವೀನ್ ಸಾವು – ಬಿಜೆಪಿ ನಾಯಕರ ವಿರುದ್ಧ ಸ್ಟಾಲಿನ್ ಕಿಡಿ

    ಉಕ್ರೇನ್‍ನಲ್ಲಿ ನವೀನ್ ಸಾವು – ಬಿಜೆಪಿ ನಾಯಕರ ವಿರುದ್ಧ ಸ್ಟಾಲಿನ್ ಕಿಡಿ

    ಚೆನ್ನೈ: ಉಕ್ರೇನ್‍ನ ಖಾರ್ಕಿವ್‍ನಲ್ಲಿ ಭಾರತೀಯ ವೈದ್ಯಕೀಯ ವಿದ್ಯಾರ್ಥಿಯೊಬ್ಬನ ಸಾವಿನ ಬಗ್ಗೆ ಕೆಲವು ಬಿಜೆಪಿ ನಾಯಕರು ಅರ್ಥವಿಲ್ಲದ ಕಾಮೆಂಟ್‍ಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಾಗ್ದಾಳಿ ನಡೆಸಿದರು.

    ಉಕ್ರೇನ್‍ನಂತಹ ಸಣ್ಣ ದೇಶಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳು ಏಕೆ ಹೋಗುತ್ತಾರೆ ಎಂದು ಕೇಳಲು ಬಿಜೆಪಿಗೆ ಇದು ಸರಿಯಾದ ಸಮಯವಲ್ಲ. ಖಾರ್ಕಿವ್ ಶೆಲ್ ದಾಳಿಗೆ ಬಲಿಯಾದ ಕರ್ನಾಟಕದ ವಿದ್ಯಾರ್ಥಿ ನವೀನ್ ವಿಚಾರವಾಗಿ ಮಾತನಾಡಿದ ಅವರು, ನವೀನ್ ಶೇಕಡಾ 97 ರಷ್ಟು ಅಂಕಗಳನ್ನು ಗಳಿಸಿದ್ದು, ನಂತರ ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಸಾಧ್ಯವಾಗದೇ ಒತ್ತಾಯದಿಂದ ಉಕ್ರೇನ್‍ನಲ್ಲಿ ಓದಲು ಹೋದ ವಿಚಾರ ನನಗೆ ಬೇಸರ ತಂದಿದೆ ಎಂದಿದ್ದಾರೆ. ಇದನ್ನೂ ಓದಿ: ರಷ್ಯಾದ ಯುದ್ಧನೌಕೆಗಳು ಕ್ರೈಮಿಯಾವನ್ನು ಬಿಟ್ಟು ಒಡೆಸ್ಸಾದತ್ತ ಹೋಗುತ್ತಿವೆ: ಅಮೇರಿಕ

    ಜೀವ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ವಿದ್ಯಾರ್ಥಿಗಳ ಬಗ್ಗೆ ಸರ್ಕಾರದ ಹೇಳಿಕೆಗಳು, ಕೆಲವು ಕೇಂದ್ರ ಸಚಿವರ ಸಂದರ್ಶನಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರವನ್ನು ಬೆಂಬಲಿಸುವ ಪೋಸ್ಟ್‌ಗಳು ಗಾಯದ ಮೇಲೆ ಬರೆ ಎಳೆದಿದಂತಿದೆ. ಪ್ರಧಾನಿ ಮೋದಿ ಅವರು ಈ ವಿಚಾರವಾಗಿ ಕಟ್ಟುನಿಟ್ಟಿನ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದರು. ಹಾಗೆಯೇ ಎಲ್ಲರಿಗೂ ಎಚ್ಚರಿಕೆ ನೀಡಬೇಕು ಎಂದು ಹೇಳಿದ್ದಾರೆ.

    ನೀಟ್ ವಿದ್ಯಾರ್ಥಿಗಳಿಗೆ ಅಡ್ಡಿಯಾಗಿರುವುದು ಮತ್ತು ಬಡತನದ ಹಿನ್ನೆಲೆ ವೈದ್ಯಕೀಯ ಆಕಾಂಕ್ಷೆಗಳನ್ನು ಕಸಿದುಕೊಳ್ಳುತ್ತಿರುವುದೇ ವಿದ್ಯಾರ್ಥಿಗಳು ವಿದೇಶಕ್ಕೆ ಹೋಗಲು ಕಾರಣ. ಇದಕ್ಕೆ ಡಿಎಂಕೆ ವಿರೋಧ ವ್ಯಕ್ತಪಡಿಸುತ್ತಿದ್ದು, ನೀಟ್ ರದ್ದುಪಡಿಸಲು ಆದ್ಯತೆ ನೀಡಬೇಕು ಎಂದಿದ್ದಾರೆ. ಇದನ್ನೂ ಓದಿ: 25 ವರ್ಷಗಳಿಂದ ನಾವೇ ಆಹಾರ ನೀಡಿದ ಹಾವು, ಈಗ ನಮ್ಮನ್ನೇ ಕುಕ್ಕುತ್ತಿದೆ: ಉದ್ಧವ್ ಠಾಕ್ರೆ

  • ಕಳೆದ 4 ದಿನಗಳಿಂದ ಮಗ ಸಂಪರ್ಕಕ್ಕೆ ಸಿಗುತ್ತಿಲ್ಲ: ಪೋಷಕರು ಆತಂಕ

    ಕಳೆದ 4 ದಿನಗಳಿಂದ ಮಗ ಸಂಪರ್ಕಕ್ಕೆ ಸಿಗುತ್ತಿಲ್ಲ: ಪೋಷಕರು ಆತಂಕ

    ಮಡಿಕೇರಿ: ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾಗಿ ಇಂದಿಗೆ ಎಂಟು ದಿನಗಳಾಗಿದ್ದು, ಹಾವೇರಿಯ ನವೀನ್ ಸಾವಿನಪ್ಪಿದ ನಂತರ ಇದೀಗ ಪೋಷಕರಲ್ಲಿ ಅತಂಕ ಮನೆ ಮಾಡಿದೆ. ಅದರಲ್ಲೂ ಕೊಡಗಿನ ಓರ್ವ ವಿದ್ಯಾರ್ಥಿಯೊಬ್ಬರು ಸಂಪರ್ಕಕ್ಕೆ ಸಿಗದೇ ಅವರ ಕುಟುಂಬ ವರ್ಗದಲ್ಲಿ ಆತಂಕ ಸೃಷ್ಟಿಯಾಗಿದೆ.

    ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ಮೊಹಮ್ಮದ್ ಯೂಸುಫ್ ಅವರ ಪುತ್ರ ಶಾರುಖ್ ಅವರು, ಕಳೆದ ನಾಲ್ಕು ದಿನಗಳಿಂದ ಸಂಪರ್ಕಕ್ಕೆ ಸಿಗದೇ ಇರುವುದರಿಂದ ಮನೆಯಲ್ಲಿ ಇರುವ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಇದನ್ನೂ ಓದಿ: ನಮಗೆ ಇನ್ನೂ ಐದು ವರ್ಷ ಕೊಡಿ : ಅಮಿತ್ ಶಾ

    ನಮ್ಮ ಮಗ ನಾಲ್ಕು ದಿನಗಳ ಕಾಲ ಬಂಕರ್‌ನಲ್ಲಿ ಆಸರೆ ಪಡೆದಿದ್ದ ಶಾರುಖ್ ಸೇರಿ 20 ಯುವಕರು ಬಂಕರ್‌ನಲ್ಲಿ ಆಶ್ರಯ ಪಡೆದಿದ್ದರು. ಬಂಕರ್‌ನಲ್ಲಿ ಉಸಿರಾಟಕ್ಕೆ ತೊಂದರೆ ಆಗುತ್ತಿದ್ದ ಹಿನ್ನೆಲೆಯಲ್ಲಿ ಯುವಕರು ಬಂಕರ್‌ನಿಂದ ಹೊರಬಂದು ರೈಲ್ವೇ ನಿಲ್ದಾಣದ ಕಡೆಗೆ ನಡೆದು ಹೊರಟಿದ್ದಾರೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ಪ್ರಯತ್ನ ನಿಲ್ಲಲ್ಲ: ಮೋದಿ

    ಸೋಮವಾರ ಸಂಜೆಯಿಂದ ಇದುವರೆಗೆ ಸಂಪರ್ಕಕ್ಕೆ ತಮ್ಮ ಮಗ ಬಂದಿಲ್ಲ. ಏನಾದರೂ ಮಾಡಿ ಪ್ರಾಣ ಉಳಿಸಿಕೊಂಡು ಬಂದರೆ ಸಾಕು ಎಂದು ಬೇಡುತ್ತಿರುವ ವಿದ್ಯಾರ್ಥಿಯ ತಂದೆ, ತಾಯಿ ದೇವರ ಮೇಲೆ ಭಾರ ಹಾಕಿ ಕಾಯುತ್ತಿದ್ದಾರೆ.

  • ಉಕ್ರೇನ್ ಮೇಲೆ ರಷ್ಯಾ ಮಾಡಿದ್ದ ಆರೋಪ ನಿರಾಕರಿಸಿದ ಭಾರತ!

    ಉಕ್ರೇನ್ ಮೇಲೆ ರಷ್ಯಾ ಮಾಡಿದ್ದ ಆರೋಪ ನಿರಾಕರಿಸಿದ ಭಾರತ!

    ನವದೆಹಲಿ: ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂಬ ರಷ್ಯಾದ ಗಂಭೀರ ಆರೋಪವನ್ನು ಭಾರತ ನಿರಾಕರಿಸಿದೆ.

    ರಷ್ಯಾ ಆರೋಪ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, ವಿದ್ಯಾರ್ಥಿಗಳ ಒತ್ತೆಯಾಳಾಗಿರುವ ಕುರಿತು ಇದುವರೆಗೆ ಯಾವುದೇ ವರದಿಗಳೂ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದೆ. ಖಾರ್ಕೀವ್‍ನಿಂದ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ದೇಶದ ಪಶ್ಚಿಮ ಭಾಗದ ಕಡೆಯಿಂದ ವಿದ್ಯಾರ್ಥಿಗಳನ್ನು ಹೊರಗೆ ಸಾಗಿಸಲು ವಿಶೇಷ ರೈಲುಗಳ ವ್ಯವಸ್ಥೆ ಕಲ್ಪಿಸುವಂತೆ ನಾವು ಉಕ್ರೇನ್ ಅಧಿಕಾರಿಗಳ ನೆರವು ಕೋರಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾದ ಯುದ್ಧನೌಕೆಗಳು ಕ್ರೈಮಿಯಾವನ್ನು ಬಿಟ್ಟು ಒಡೆಸ್ಸಾದತ್ತ ಹೋಗುತ್ತಿವೆ: ಅಮೇರಿಕ

    ಉಕ್ರೇನ್‍ನಲ್ಲಿನ ನಮ್ಮ ರಾಯಭಾರ ಕಚೇರಿಯು ಅಲ್ಲಿರುವ ಭಾರತೀಯ ಪ್ರಜೆಗಳ ಜೊತೆ ನಿರಂತರ ಸಂಪರ್ಕದಲ್ಲಿದೆ. ಉಕ್ರೇನ್ ಅಧಿಕಾರಿಗಳ ಸಹಕಾರದೊಂದಿಗೆ ಅನೇಕ ವಿದ್ಯಾರ್ಥಿಗಳು ನಿನ್ನೆ ಖಾರ್ಕೀವ್ ತೊರೆದಿದ್ದಾರೆ. ರಷ್ಯಾ, ರೊಮೇನಿಯಾ, ಪೋಲ್ಯಾಂಡ್, ಹಂಗೆರಿ, ಸ್ಲೊವೇಕಿಯಾ ಮತ್ತು ಮಾಲ್ಡೋವಾ ಸೇರಿದಂತೆ ಈ ಪ್ರದೇಶದ ದೇಶಗಳ ಜೊತೆಗೆ ಪರಿಣಾಮಕಾರಿಯಾಗಿ ಸಮನ್ವಯ ಸಾಧಿಸುತ್ತಿದ್ದೇವೆ. ಇದನ್ನೂ ಓದಿ: ನಾನು ಮತ್ತೆ ಅಧ್ಯಕ್ಷನಾಗಿದ್ದರೆ ರಷ್ಯಾ-ಉಕ್ರೇನ್‌ ಯುದ್ಧ ನಡೆಯುತ್ತಿರಲಿಲ್ಲ: ಟ್ರಂಪ್‌

    ಈ ಹಿಂದೆ ರಷ್ಯಾ ರಕ್ಷಣಾ ಸಚಿವಾಲಯವು ಉಕ್ರೇನ್ ವಿರುದ್ಧ ಗಂಭೀರ ಆರೋಪ ಮಾಡಿತ್ತು. ಖಾರ್ಕೀವ್‍ನಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆಯಾಳುಗಳನ್ನಾಗಿ ಇಡಲಾಗಿದೆ. ಖಾರ್ಕಿವ್ ನಲ್ಲಿ ದಾಳಿಯಾಗುತ್ತಿದ್ದ ಸಂದರ್ಭದಲ್ಲಿ ಭಾರತೀಯರನ್ನು ಅಲ್ಲಿಂದ ಸ್ಥಳಾಂತರ ಮಾಡಲು ಮುಂದಾದ ರಷ್ಯಾವನ್ನು ಉಕ್ರೇನ್ ತಡೆಹಿಡಿದಿತ್ತು. ಅಲ್ಲದೆ ಭಾರತೀಯರನ್ನು ವಾಪಸ್ ಕರೆದುಕೊಂಡು ಹೋಗಿ ಒತ್ತೆಯಾಳಾಗಿರಿಸಿಕೊಂಡಿತು ಎಂದು ಆರೋಪಿಸಿತ್ತು. ಈ ಆರೋಪಕ್ಕೆ ಉಕ್ರೇನ್ ಪ್ರತ್ಯಾರೋಪ ಮಾಡಿದ್ದು, ರಷ್ಯಾ ಸೇನೆ ಭಾರತ, ಪಾಕಿಸ್ತಾನ, ಚೀನಾ ಮತ್ತು ಇನ್ನಿತರ ದೇಶಗಳ ವಿದ್ಯಾರ್ಥಿಗಳನ್ನು ಸೆರೆಯಾಳುಗಳನ್ನಾಗಿ ಇಟ್ಟುಕೊಂಡಿದೆ ಎಂದಿತ್ತು.

  • ಶಿವಮೊಗ್ಗದ ಹರ್ಷ ಕುಟುಂಬಕ್ಕೆ ಎಲೆಕ್ಷನ್ ಟಿಕೆಟ್ ವಿಚಾರ- ಗೃಹ ಸಚಿವರು ಹೇಳಿದ್ದೇನು..?

    ಶಿವಮೊಗ್ಗದ ಹರ್ಷ ಕುಟುಂಬಕ್ಕೆ ಎಲೆಕ್ಷನ್ ಟಿಕೆಟ್ ವಿಚಾರ- ಗೃಹ ಸಚಿವರು ಹೇಳಿದ್ದೇನು..?

    ತುಮಕೂರು: ಕಾಂಗ್ರೆಸ್‍ನವರ ಕಾಲದಲ್ಲಿ ಮೃತಪಟ್ಟವರಿಗೆಲ್ಲಾ ಟಿಕೆಟ್ ಕೊಟ್ಟಿದ್ದಾರಾ?. ಕಾಂಗ್ರೆಸ್ ಆಧಾರ ರಹಿತ ಟೀಕೆ ಮಾಡುತ್ತದೆ. ಹರ್ಷ ಕುಟುಂಬಕ್ಕೆ ಎಲ್ಲಾ ರೀತಿಯ ಸಹಕಾರ ಕೊಡುತಿದ್ದೇವೆ ಎಂದು ಶಿವಮೊಗ್ಗ ಹರ್ಷ ಕುಟುಂಬಕ್ಕೆ ಟಿಕೆಟ್ ಕೊಡುವ ವಿಚಾರ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಕಿಂತ ಮುಖ್ಯವಾಗಿ ಹರ್ಷನ ತಾಯಿ ನನಗೆ ಒಂದು ಮಾತು ಹೇಳಿದ್ದಾರೆ. ಮಗನ ಪ್ರಾಣ ತಂದುಕೊಡುವಂತೆ ಕೇಳಲ್ಲ. ಅವನ ಸಾವು ಅರ್ಥ ಹೀನ ಆಗಬಾರದು, ವ್ಯರ್ಥ ಆಗಬಾರದು. ಅವನು ಒಂದು ಉದ್ದೇಶಕೋಸ್ಕರ ಸತ್ತಿದ್ದಾನೆ. ಅದಕ್ಕೆ ನ್ಯಾಯ ದೊರಕಿಸಿ ಕೊಡಿ ಎಂದು ಕೇಳಿದ್ದಾರೆ. ಅದನ್ನ ನಾವು ಮಾಡುತ್ತಾ ಇದ್ದೇವೆ ಎಂದರು.

    ಇದೇ ವೇಳೆ ಉಕ್ರೇನ್ ನಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಗಳಿಗೆ ಪರಿಹಾರ ಕೊಡುವ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಮಾಡುತ್ತದೆ. ರಾಜ್ಯ ಸರ್ಕಾರದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಒಂದು ವಾರದೊಳಗೆ 1 ಮಿಲಿಯನ್ ಜನ ಉಕ್ರೇನ್‍ನಿಂದ ಪಲಾಯನ: ವಿಶ್ವಸಂಸ್ಥೆ

    ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಆಗುವ ಅನ್ಯಾಯದ ಬಗ್ಗೆ ಸಂಬಂಧಿಸಿ ಮಾತನಾಡಿದ ಸಚಿವರು, ಔರಾಧಕರ್ ವರದಿ ಅನುಷ್ಠಾನ ಬಜೆಟ್ ನಲ್ಲಿ ಬರಬೇಕಂತಿಲ್ಲ. ಆವತ್ತಿನ ಸರ್ಕಾರ ಸರಿಯಾದ ಕ್ರಮ ತೆಗೆದುಕೊಂಡಿದ್ದರೆ ಈ ಸಮಸ್ಯೆ ಆಗುತ್ತಿರಲಿಲ್ಲ. ಹಿರಿಯ ಪೊಲೀಸರಿಗೆ- ಅಧಿಕಾರಿಗಳಿಗೆ ಇದರಿಂದ ತೊಂದರೆಯಾಗಿದೆ. ಅದನ್ನು ಸರಿದೂಗಿಸುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

  • ಒಂದು ವಾರದೊಳಗೆ 1 ಮಿಲಿಯನ್ ಜನ ಉಕ್ರೇನ್‍ನಿಂದ ಪಲಾಯನ: ವಿಶ್ವಸಂಸ್ಥೆ

    ಒಂದು ವಾರದೊಳಗೆ 1 ಮಿಲಿಯನ್ ಜನ ಉಕ್ರೇನ್‍ನಿಂದ ಪಲಾಯನ: ವಿಶ್ವಸಂಸ್ಥೆ

    ಜಿನೆವಾ: ರಷ್ಯಾದ ಆಕ್ರಮಣದಿಂದ ತತ್ತರಿಸಿ ಹೋಗಿರುವ ಉಕ್ರೇನ್‍ನಿಂದ ಕೇವಲ ಒಂದು ವಾರದಲ್ಲಿ 1 ಮಿಲಿಯನ್ ಜನರು ಪಲಾಯನ ಮಾಡಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಇದು ಈ ಶತಮಾನದ ಅತಿದೊಡ್ಡ ನಿರಾಶ್ರಿತರ ಬಿಕ್ಕಟ್ಟಾಗಿ ಪರಿಣಮಿಸುವ ಪರಿಸ್ಥಿತಿಯನ್ನು ತೋರಿಸುತ್ತದೆ.

    ವಿಶ್ವ ಬ್ಯಾಂಕ್ 2020ರ ಅಂತ್ಯದಲ್ಲಿ ನಡೆಸಿದ ಎಣಿಕೆಯಲ್ಲಿ ಉಕ್ರೇನ್ ಸುಮಾರು 44 ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ ಎಂದು ತಿಳಿಸಿತ್ತು. ಆದರೆ ಒಂದು ವಾರದೊಳಗೆ ಉಕ್ರೇನ್‍ನಿಂದ ಶೇಕಡ 2ಕ್ಕಿಂತ ಹೆಚ್ಚು ಮಂದಿ ಪಲಾಯಾನ ಮಾಡುತ್ತಿದ್ದಾರೆ. ಅಲ್ಲದೇ ಮುಂದೆ 4 ಮಿಲಿಯನ್ ಜನರು ಅಂತಿಮವಾಗಿ ಉಕ್ರೇನ್ ತೊರೆಯಬಹುದು ಎಂದು ವಿಶ್ವಸಂಸ್ಥೆ ಭವಿಷ್ಯ ನುಡಿದಿದೆ. ಇದನ್ನು ಓದಿ: ಪುಟಿನ್‌ ಜೊತೆ 2ನೇ ಬಾರಿ ಮೋದಿ ಮಾತುಕತೆ

    ಇಮೇಲ್ ಮೂಲಕ ವಿಶ್ವಸಂಸ್ಥೆ ವಕ್ತಾರ ಜೌಂಗ್-ಆಹ್ ಘೆಡಿನಿ-ವಿಲಿಯಮ್ಸ್ ಅವರು, ರಾಷ್ಟ್ರೀಯ ಅಧಿಕಾರಿಗಳು ಸಂಗ್ರಹಿಸಿದ ಎಣಿಕೆಗಳ ಆಧಾರದ ಮೇಲೆ ಮಧ್ಯ ಯೂರೋಪ್‍ನಲ್ಲಿ ಸುಮಾರು 1ಮಿಲಿಯನ್ ಮಂದಿ ದೇಶ ತೊರೆದಿದ್ದಾರೆ ಎಂದು ನಮ್ಮ ಡೇಟಾವು ಸೂಚಿಸುತ್ತಿದೆ.

    ಮತ್ತೊಂದೆಡೆ ವಿಶ್ವಸಂಸ್ಥೆ ಹೈ ಕಮಿಷನರ್ ಫಿಲಿಪ್ಪೊ ಗ್ರಾಂಡಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಕೇವಲ ಏಳು ದಿನಗಳಲ್ಲಿ ಉಕ್ರೇನ್‍ನಿಂದ ನೆರೆಯ ದೇಶಗಳಿಗೆ ಒಂದು ಮಿಲಿಯನ್ ನಿರಾಶ್ರಿತರು ವಲಸೆ ಹೋಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನು ಓದಿ: ಅಕ್ರಮ ಶಸ್ತ್ರಾಸ್ತ್ರಗಳ ಬದಲಿಗೆ, ಯುಪಿ ಈಗ ಕ್ಷಿಪಣಿಗಳನ್ನು ತಯಾರಿಸುತ್ತಿದೆ: ಅಮಿತ್ ಶಾ

  • ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿರಿಸಿಕೊಂಡಿದೆ – ರಷ್ಯಾ ಆರೋಪ

    ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿರಿಸಿಕೊಂಡಿದೆ – ರಷ್ಯಾ ಆರೋಪ

    ಕೀವ್: ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ತನ್ನ ನಾಗರಿಕರನ್ನು ಸ್ಥಳಾಂತರಿಸಲು ಭಾರತವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಈ ನಡುವೆ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂದು ರಷ್ಯಾ ಆರೋಪಿಸಿದೆ.

    ಖಾರ್ಕಿವ್‍ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ರಷ್ಯಾ ಪ್ರಯತ್ನಿಸುತ್ತಿರುವಾಗ ಉಕ್ರೇನ್ ಪಡೆಗಳು ಭಾರತೀಯರನ್ನು ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಬ್ರೀಫಿಂಗ್‍ನಲ್ಲಿ ತಿಳಿಸಿದೆ. ಇದನ್ನು ಓದಿ: ಅಕ್ರಮ ಶಸ್ತ್ರಾಸ್ತ್ರಗಳ ಬದಲಿಗೆ, ಯುಪಿ ಈಗ ಕ್ಷಿಪಣಿಗಳನ್ನು ತಯಾರಿಸುತ್ತಿದೆ: ಅಮಿತ್ ಶಾ

    ಈ ಕುರಿತಂತೆ ಮಾತನಾಡಿದ ಮೇಜರ್ ಜನರಲ್ ಇಗೊರ್ ಕೊನಾಶೆಂಕೋವ್, ನಮ್ಮ ತಿಳಿದುಬಂದಿರುವ ಮಾಹಿತಿಯ ಪ್ರಕಾರ ಖಾರ್ಕಿವ್‍ನಲ್ಲಿ, ಉಕ್ರೇನಿಯನ್ ಅಧಿಕಾರಿಗಳು ಉಕ್ರೇನಿಯನ್ ಪ್ರದೇಶವನ್ನು ತೊರೆದು ಬೇರೆಡೆಗೆ ಹೋಗಲು ಪ್ರಯತ್ನಿಸಿದ ಭಾರತೀಯ ವಿದ್ಯಾರ್ಥಿಗಳ ದೊಡ್ಡ ಗುಂಪನ್ನು ಬಲವಂತವಾಗಿ ಬಂಧಿಸುತ್ತಿದ್ದಾರೆ.

    ಭಾರತೀಯ ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಸಶಸ್ತ್ರ ಪಡೆಗಳು ಸಿದ್ಧವಾಗಿವೆ ಮತ್ತು ಭಾರತದ ಕಡೆಯವರು ಪ್ರಸ್ತಾಪಿಸಿದಂತೆ ಅವರನ್ನು ತಮ್ಮ ಮಿಲಿಟರಿ ಸಾರಿಗೆ ವಿಮಾನಗಳು ಅಥವಾ ಭಾರತೀಯ ವಿಮಾನಗಳೊಂದಿಗೆ ರಷ್ಯಾದ ಪ್ರದೇಶದಿಂದ ಮನೆಗೆ ಕಳುಹಿಸಲಾಗುತ್ತದೆ ಎಂದಿದ್ದಾರೆ.

    ಮತ್ತೊಂದೆಡೆ ಉಕ್ರೇನ್ ಎಂಎಫ್‍ಎ ಕೂಡ ಭಾರತ, ಪಾಕಿಸ್ತಾನ, ಚೀನಾ ಮತ್ತು ಇತರ ದೇಶಗಳ ವಿದ್ಯಾರ್ಥಿಗಳನ್ನು ರಷ್ಯಾ ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆ ಎಂದು ಆರೋಪಿಸಿದೆ. ಇದನ್ನು ಓದಿ: ಪುಟಿನ್‌ ಜೊತೆ 2ನೇ ಬಾರಿ ಮೋದಿ ಮಾತುಕತೆ

  • ಪುಟಿನ್‌ ತಪ್ಪು ಹೆಜ್ಜೆಗಳು – ರಷ್ಯಾ ಹಿನ್ನಡೆಗೆ ಕಾರಣ ಏನು?

    ಪುಟಿನ್‌ ತಪ್ಪು ಹೆಜ್ಜೆಗಳು – ರಷ್ಯಾ ಹಿನ್ನಡೆಗೆ ಕಾರಣ ಏನು?

    ಕೀವ್‌: ಉಕ್ರೇನ್-ರಷ್ಯಾ ಯುದ್ಧ 8ನೇ ದಿನ ಪೂರೈಸಿದೆ. ಆದರೆ ಈವರೆಗೂ ಉಕ್ರೇನ್ ಮೇಲೆ ರಷ್ಯಾ ಪೂರ್ಣ ಪ್ರಮಾಣದಲ್ಲಿ ಅಧಿಪತ್ಯ ಸ್ಥಾಪಿಸಿಲ್ಲ. ರಷ್ಯಾ ತನ್ನ ಆಧುನಿಕ ಯುದ್ಧ ವಿಮಾನಗಳನ್ನು ಸಂಪೂರ್ಣವಾಗಿ ಯುದ್ಧರಂಗಕ್ಕೆ ಇಳಿಸಿಲ್ಲ. ಇದರ ಬದಲಿಗೆ ಸೈಬಿರಿಯಾದಲ್ಲಿ ಸೈನಿಕ ಡ್ರಿಲ್ಸ್‌ಗೆ ಪುಟಿನ್ ಆದೇಶ ನೀಡಿದ್ದಾರೆ.

    ಬಾರೆಂಟ್ಸ್ ಸಮುದ್ರದಲ್ಲಿ ಅಣು ಸಬ್ ಮೆರಿನ್ ಕ್ಷಿಪಣಿ ಲಾಂಚರ್‌ಗಳು ಕಾಣಿಸಿಕೊಂಡಿವೆ. ಈ ಮಧ್ಯೆ ರಷ್ಯಾ ಅಂದ್ರೆ ಪುಟಿನ್ ಮಾತ್ರವಲ್ಲ ಎಂದು ಜೈಲಿನಿಂದಲೇ ವಿಪಕ್ಷ ನಾಯಕ ಅಲೆಕ್ಸಿ ನಾವೆಲ್ನಿ ಗುಡುಗಿದ್ದಾರೆ. ರಷ್ಯಾದ ಹೊರಗೆ, ಒಳಗೆ ಪ್ರತಿಘಟನೆ ನಡೆಸಲು ಕರೆ ನೀಡಿದ್ದಾರೆ. ರಷ್ಯಾ ವಿಜ್ಞಾನಿಗಳಿಂದಲೂ ತೀವ್ರ ವಿರೋಧ ವ್ಯಕ್ತವಾಗುತ್ತಿವೆ.

    ಹಿನ್ನಡೆಗೆ ಕಾರಣ ಏನು?
    ಒಂದು ದೇಶದ ಮೇಲೆ ದಂಡೆತ್ತಿ ಹೋಗುವ ಸೈನ್ಯ ಮೊದಲು ಅಲ್ಲಿನ ವೈಮಾನಿಕ, ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳನ್ನು ಗಮನದಲ್ಲಿ ಇರಿಸಿಕೊಂಡು ದಾಳಿ ನಡೆಸುತ್ತದೆ. ಈ ಮೂಲಕ ಆ ದೇಶದ ವಾಯುಪ್ರದೇಶದ ಮೇಲೆ ಹಿಡಿತ ಸಾಧಿಸುತ್ತದೆ. ಈ ಮೂಲಕ ಭೂಸೇನೆ ಸಮರ್ಥವಾಗಿ ಹೋರಾಟ ಸಾಗಿಸಲು ಅನುಕೂಲ ಕಲ್ಪಿಸುತ್ತದೆ. ಆದರೆ ಇದು ರಷ್ಯಾ ಕಡೆಯಿಂದ ಆಗಿಲ್ಲ. ಪರಿಣಾಮ, ಉಕ್ರೇನ್ ಯುದ್ಧ ವಿಮಾನಗಳು ಆರ್ಭಟಿಸುತ್ತಿವೆ. ಕಡಿಮೆ ಎತ್ತರದಲ್ಲಿ ಹಾರುತ್ತಾ ರಷ್ಯಾದ ಹೆಲಿಕಾಪ್ಟರ್‌ಗಳನ್ನು ಟಾರ್ಗೆಟ್ ಮಾಡುತ್ತಿವೆ. ಸ್ಟಿಂಗರ್ ಕ್ಷಿಪಣಿ ಮೂಲಕವೂ ರಷ್ಯಾದ ಹೆಲಿಕಾಪ್ಟರ್ ನಾಶ ಮಾಡಲಾಗುತ್ತಿದೆ.  ಇದನ್ನೂ ಓದಿ: ರಷ್ಯಾ- ಉಕ್ರೇನ್‌ ಯುದ್ಧ: ಕಚ್ಚಾ ತೈಲ ಬೆಲೆ ಭಾರೀ ಏರಿಕೆ

    ಯುದ್ಧಕ್ಕೆ ರಷ್ಯಾ ಸೈನಿಕರ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ. ರಷ್ಯಾದ ಯುವ ಸೈನಿಕರಿಗೆ ಸರಿಯಾದ ಶಿಕ್ಷಣ ಸಿಕ್ಕಿಲ್ಲ. ಆತ್ಮಸ್ಥೈರ್ಯ ಕಡಿಮೆ. ಆಹಾರ, ಇಂಧನ ಕೊರತೆ ಕಾಡುತ್ತಿದೆ. ತಮ್ಮ ವಾಹನಗಳನ್ನು ತಾವೇ ಉದ್ದೇಶಪೂರ್ವಕವಾಗಿ ಪಂಕ್ಚರ್ ಮಾಡುತ್ತಿದ್ದಾರೆ. ಉಕ್ರೇನ್ ನಗರಗಳ ಮೇಲೆ ದಾಳಿಗೆ ರಷ್ಯನ್ ಸೈನಿಕರು ಹಿಂದೇಟು ಹಾಕುತ್ತಿದ್ದಾರೆ. ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದಾರೆ ಎಂದು ಅಮೆರಿಕದ ಪೆಂಟಗಾನ್ ವರದಿ ಮಾಡಿದೆ.

    ಉಕ್ರೇನ್ ಸೇನೆ ಬೇಗ ಶರಣಾಗಿ ಕೀವ್ ತಮ್ಮ ವಶವಾಗುತ್ತದೆ. ಅದೇ ಉತ್ಸಾಹದಲ್ಲಿ ದಕ್ಷಿಣ ಪ್ರಾಂತ್ಯ ವಶಕ್ಕೆ ತೆಗೆದುಕೊಳ್ಳಬಹುದು. ಇದಕ್ಕೆ ಉಕ್ರೇನ್‍ನ ವಾಯು ಪ್ರದೇಶದ ಮೇಲೆ ಅಧಿಪತ್ಯ ಸಾಧಿಸುವ ಅಗತ್ಯವಿಲ್ಲ ಎಂದು ಪುಟಿನ್ ಅಂದಾಜಿಸಿದ್ದರು. ಇದೇ ಲೆಕ್ಕದಲ್ಲಿ ರಷ್ಯಾ ಸೈನಿಕ ಕಾರ್ಯಾಚರರಣೆ ಕೈಗೊಂಡಿರಬಹುದು. ಆದ್ರೇ ಈವರೆಗೂ ರಷ್ಯಾದ ಈ ಯುದ್ಧ ತಂತ್ರ ಫಲ ಕೊಟ್ಟಿಲ್ಲ. ಇದನ್ನೂ ಓದಿ: 3ನೇ ವಿಶ್ವ ಯುದ್ಧದಲ್ಲಿ ಪರಮಾಣ ಶಸ್ತ್ರಾಸ್ತ್ರ ಇರುತ್ತೆ: ರಷ್ಯಾ ಸಚಿವ

    ವಾಯುಪ್ರದೇಶದ ರಕ್ಷಣೆ ನೀಡದೇ ರಷ್ಯಾ ಯುದ್ಧ ಟ್ಯಾಂಕ್ ಕಣಕ್ಕಿಳಿಸಿದೆ. ಉಕ್ರೇನ್‍ಗೆ ಸೇರಿದ ಬೆರಕ್ತಿಯಾರ್ ಟಿಬಿ-62ಯಂತಂಹ ಶಸ್ತ್ರಾಸ್ತ್ರ ಡ್ರೋನ್‍ಗಳು ರಷ್ಯಾದ ಯುದ್ಧ ಟ್ಯಾಂಕ್‍ಗಳಿಗೆ ಅಪಾರ ಹಾನಿ ಉಂಟು ಮಾಡುತ್ತಿವೆ.

    ಶಸ್ತ್ರಾಸ್ತ್ರ ಕಾಪಾಡಿಕೊಳ್ಳುವಲ್ಲಿ ಉಕ್ರೇನ್ ಜಾಣ ನಡೆ ಅನುಸರಿಸುತ್ತಿದೆ. ರಷ್ಯಾ ಎಷ್ಟೇ ದಾಳಿ ಮಾಡಿದರೂ ತಮ್ಮ ಯುದ್ಧ ವಿಮಾನ, ಹೆಲಿಕಾಪ್ಟರ್ ಸೇರಿ ಹಲವು ಈಗಲೂ ವಿನಿಯೋಗಿಸುವ ಸ್ಥಿತಿಯಲ್ಲೇ ಇವೆ.

    ರಷ್ಯಾದ 300 ಅತ್ಯಾಧುನಿಕ ಯುದ್ಧ ವಿಮಾನ ಇನ್ನೂ ಗಡಿಯಲ್ಲೇ ನಿಂತಿದೆ. ಯುದ್ಧ ವಿಮಾನಗಳಿಂದ ಕೆಳಗೆ ಹಾಕುವ ಪಿಜಿಎಂ ಬಾಂಬ್‍ಗಳ ಕೊರತೆ ಎದುರಿಸುತ್ತಿದೆ. ವಿಮಾನ ವಿಧ್ವಂಸದ ಕ್ಷಿಪಣಿ ದಾಳಿಗೆ ರಷ್ಯಾ ಹಿಂದೇಟು ಹಾಕುತ್ತಿದೆ. ಒಂದು ವೇಳೆ ಈ ರೀತಿಯ ದಾಳಿ ನಡೆಸಿದರೆ ನಮ್ಮ ವಿಮಾನಗಳಿಗೆ ಕಂಟಕವಾಗುವ ಭೀತಿ ಎದುರಿಸುತ್ತಿದೆ. ಎರಡು ವಿಭಾಗಗಳಲ್ಲಿ ಗರಿಷ್ಠ ಸಮನ್ವಯ ಅಗತ್ಯ. ಆದರೆ ಇದು ರಷ್ಯಾ ಬಳಿ ಇರುವುದು ಅಷ್ಟಕ್ಕಷ್ಟೇ.

    ಪಶ್ಚಿಮ ದೇಶಗಳಿಗೆ ಹೋಲಿಸಿದರೆ ರಷ್ಯಾ ಪೈಲಟ್‍ಗಳ ಶಿಕ್ಷಣ ಗುಣಮಟ್ಟ ಕಡಿಮೆ. ವಾರ್ಷಿಕ ಸರಾಸರಿ 100 ಗಂಟೆ ಹಾರಾಟದ ಅನುಭವ ಇದ್ದರೆ ಅಮೆರಿಕದಲ್ಲಿ 180 ಗಂಟೆ ಹಾರಾಟದ ಅನುಭವ ಹೊಂದಿದ್ದರು. ಯುದ್ಧ ವಿಮಾನದಲ್ಲಿನ ತಂತ್ರಜ್ಞಾನ, ಏವಿಯಾನಿಕ್ಸ್‌ ಎಷ್ಟು ಮುಖ್ಯವೋ ಅಷ್ಟೇ ಪೈಲಟ್‌ನ ಸಾಮರ್ಥ್ಯ ಮುಖ್ಯವಾಗುತ್ತದೆ. ಉದಾಹರಣೆ ವಿಂಗ್‌ ಕಮಾಂಡರ್‌ ಅಭಿನಂದವ್‌ ವರ್ಧಮಾನ್‌ ಮಿಗ್‌ 21 ಬೈಸನ್‌ ವಿಮಾನದ ಮೂಲಕ ಡಾಗ್‌ ಫೈಟ್‌( ಶತ್ರು ರಾಷ್ಟ್ರಗಳ ಯುದ್ಧ ವಿಮಾನಗಳ ಕಾದಾಟ) ನಡೆಸಿ ತನ್ನ ಕ್ಷಿಪಣಿ ಮೂಲಕ ಪಾಕಿಸ್ತಾನದ ಎಫ್‌ 16 ವಿಮಾನವನ್ನು ಬೀಳಿಸಿದ್ದರು. ಎಫ್‌ 16 ವಿಮಾನದ ಸಾಮರ್ಥ್ಯದ ಮುಂದೆ ಮಿಗ್‌ ವಿಮಾನ ಸಾಮರ್ಥ್ಯ ಏನೂ ಇಲ್ಲ. ಹೀಗಿದ್ದರೂ ಅಭಿನಂದನ್‌ ತನ್ನ ಕೌಶಲದಿಂದ ಎಫ್‌ 16 ವಿಮಾನವನ್ನು ಬೀಳಿಸಿದ್ದ ವಿಚಾರ ಕೇಳಿ ಇಡೀ ವಿಶ್ವವೇ ಬೆರಗಾಗಿತ್ತು.