Tag: Ukraine

  • ಕೀವ್‍ಗೆ ಮುನ್ನುಗ್ಗುತ್ತಿದೆ 64 ಕಿ.ಮೀ ಉದ್ದದ ರಷ್ಯಾ ಸೇನೆ

    ಕೀವ್‍ಗೆ ಮುನ್ನುಗ್ಗುತ್ತಿದೆ 64 ಕಿ.ಮೀ ಉದ್ದದ ರಷ್ಯಾ ಸೇನೆ

    ಕೀವ್: ರಷ್ಯಾದ ಬೃಹತ್ ಸೇನೆ ಉಕ್ರೇನ್ ರಾಜಧಾನಿ ಕೀವ್ ಕಡೆ ಸಾಗುತ್ತಿರುವ ವಿಷಯ ಉಪಗ್ರಹ ಫೋಟೋಗಳಲ್ಲಿ ಬಹಿರಂಗವಾಗಿದೆ.

    ಉಕ್ರೇನ್‍ಗೆ ಬೆದರಿಕೆ ಹಾಕುತ್ತಿರುವ ರಷ್ಯಾದ ಮಿಲಿಟರಿ ಬೆಂಗಾವಲು ಯುದ್ಧ ಪ್ರಾರಂಭಕ್ಕೂ ಮುನ್ನ ಯೋಜಿಸಿದ್ದಕಿಂತ ಭಯಾನಕವಾಗಿರುವುದು ತಿಳಿದುಬರುತ್ತಿದೆ. ರಷ್ಯಾ ಸೇನೆ ಶಸ್ತ್ರಾಸ್ತ್ರ ಹಾಗೂ ಫಿರಂಗಿಗಳನ್ನು ತುಂಬಿರುವ ವಾಹನಗಳಲ್ಲಿ ಉಕ್ರೇನ್ ರಾಜಧಾನಿ ಕೀವ್ ಕಡೆಗೆ ಹೋಗುತ್ತಿರುವುದು ಮುಂದೆ ಭಾರೀ ದೊಡ್ಡ ಅಪಾಯವಾಗುವ ಸಾಧ್ಯತೆ ಇದೆ.

    ಈ ಹಿಂದೆ ರಷ್ಯಾ ಬೆಂಗಾವಲು ಪಡೆ 17 ಮೈಲು(27 ಕಿ.ಮೀ) ವ್ಯಾಪಿಸಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಅಮೆರಿಕನ್ ಕಂಪನಿ ಮ್ಯಾಕ್ಸರ್ ಉಪಗ್ರಹ ಕ್ಲಿಕ್ಕಿಸಿರುವ ಫೋಟೋಗಳು 40 ಮೈಲಿ(64 ಕಿ.ಮೀ) ಉದ್ದದ ಬೆಂಗಾವಲು ಪಡೆ ಉಕ್ರೇನ್ ರಾಜಧಾನಿಯತ್ತ ಹೋಗುತ್ತಿರುವುದನ್ನು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ತಕ್ಷಣವೇ ಉಕ್ರೇನ್‌ ರಾಜಧಾನಿ ತೊರೆಯಿರಿ: ಭಾರತೀಯರಿಗೆ ರಾಯಭಾರಿ ಕಚೇರಿ ಸೂಚನೆ

    ಈ ಉಪಗ್ರಹದ ಚಿತ್ರವನ್ನು ಪ್ರಿಬಸ್ರ್ಕ್‍ನ ಉತ್ತರದ ಆಂಟೋನೋವ್ ವಾಯುನೆಲೆಯಿಂದ ತೆಗೆಯಲಾಗಿದೆ ಎಂದು ಕಂಪನಿ ತಿಳಿಸಿದೆ. ಈ ಭಾರೀ ಪ್ರಮಾಣದ ಸೈನ್ಯ ಕೀವ್ ಹಾಗೂ ಇತರ ನಗರಗಳ ಮೇಲೆ ದಾಳಿ ನಡೆಸಿದರೆ ಕಲ್ಪಿಸಲೂ ಸಾಧ್ಯವಾಗದ ಮಟ್ಟಿನಲ್ಲಿ ಮಾರಣ ಹೋಮವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು

    ರಷ್ಯಾಗೆ ಹೋಲಿಸಿದರೆ ಉಕ್ರೇನ್‍ನಲ್ಲಿ ಸದ್ಯ ಶಸ್ತ್ರಾಸ್ತ್ರ ಹಾಗೂ ಸೇನಾ ಬಲ ಕಡಿಮೆಯಿರಬಹುದು. ಆದರೂ ಉಕ್ರೇನ್ ದೇಶದ ಮೂರೂ ಕಡೆಯಿಂದ ದಾಳಿಯನ್ನು ಎದುರಿಸುತ್ತಿದ್ದರೂ ಶರಣಾಗತಿಗೆ ಒಪ್ಪುತ್ತಿಲ್ಲ.

  • ತಕ್ಷಣವೇ ಉಕ್ರೇನ್‌ ರಾಜಧಾನಿ ತೊರೆಯಿರಿ: ಭಾರತೀಯರಿಗೆ ರಾಯಭಾರಿ ಕಚೇರಿ ಸೂಚನೆ

    ತಕ್ಷಣವೇ ಉಕ್ರೇನ್‌ ರಾಜಧಾನಿ ತೊರೆಯಿರಿ: ಭಾರತೀಯರಿಗೆ ರಾಯಭಾರಿ ಕಚೇರಿ ಸೂಚನೆ

    ನವದೆಹಲಿ: ರಷ್ಯಾದ ಆಕ್ರಮಣಕ್ಕೆ ತುತ್ತಾಗಿರುವ ಉಕ್ರೇನ್‌ ರಾಜಧಾನಿ ಕೀವ್‌ ಅನ್ನು ಈಗಿಂದೀಗಲೇ ತೊರೆಯಿರಿ ಎಂದು ಭಾರತ ಮೂಲದ ನಾಗರಿಕರಿಗೆ ರಾಯಭಾರಿ ಕಚೇರಿ ತಿಳಿಸಿದೆ.

    ಉಕ್ರೇನ್‌ ರಾಜಧಾನಿಯಲ್ಲಿರುವ ಭಾರತೀಯ ಮೂಲದವರು ಈ ಕೂಡಲೇ ಕೀವ್‌ ಅನ್ನು ತೊರೆಯಿರಿ. ರೈಲು ಅಥವಾ ಇನ್ನಿತರ ಲಭ್ಯ ಸಾರಿಗೆ ವ್ಯವಸ್ಥೆ ಮೂಲಕ ರಾಜಧಾನಿಯಿಂದ ಹೊರಡಿ ಎಂದು ಉಕ್ರೇನ್‌ನಲ್ಲಿರುವ ಭಾರತ ರಾಯಭಾರಿ ಕಚೇರಿ ಟ್ವೀಟ್‌ ಮಾಡಿ ತಿಳಿಸಿದೆ. ಇದನ್ನೂ ಓದಿ: ಟ್ರ್ಯಾಕ್ಟರ್ ಬಳಸಿ ರಷ್ಯಾದ ಮಿಲಿಟರಿ ಟ್ಯಾಂಕ್ ಹೊತ್ತೊಯ್ದ ರೈತ

    ಕೀವ್‌ನ ವಾಯುವ್ಯ ರಸ್ತೆಗಳಲ್ಲಿ ರಷ್ಯಾ ಸೇನಾ ವಾಹನಗಳಿರುವ ಉಪಗ್ರಹ ಚಿತ್ರಗಳು ಬಿಡುಗಡೆಯಾದ ಕೆಲವೇ ಗಂಟೆಗಳ ನಂತರ ಈ ಸಲಹೆಯನ್ನು ಪೋಸ್ಟ್ ಮಾಡಲಾಗಿದೆ. ಯುಎಸ್ ಮೂಲದ ಬಾಹ್ಯಾಕಾಶ ತಂತ್ರಜ್ಞಾನ ಕಂಪನಿ ಬಿಡುಗಡೆ ಮಾಡಿದ ಚಿತ್ರಗಳಲ್ಲಿ ನೂರಾರು ಟ್ಯಾಂಕ್‌ಗಳು, ಫಿರಂಗಿಗಳು, ಶಸ್ತ್ರಸಜ್ಜಿತ ಮತ್ತು ಲಾಜಿಸ್ಟಿಕ್ ವಾಹನಗಳಿವೆ. ಕೀವ್‌ನಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು, ಹೆಚ್ಚಿನ ದಾಳಿಯಾಗಿ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ.

    ಯುದ್ಧಪೀಡಿತ ರಾಷ್ಟ್ರ ಉಕ್ರೇನ್‌ನಲ್ಲಿ 16,000 ವಿದ್ಯಾರ್ಥಿಗಳು ಸಿಲುಕಿದ್ದಾರೆ. ಉಕ್ರೇನ್‌ ಬಂಕರ್‌ಗಳು, ಮೆಟ್ರೋ ನಿಲ್ದಾಣಗಳು, ಬಾಂಬ್‌ ಸೆಲ್ಟರ್‌ಗಳಲ್ಲಿ ಅಡಗಿರುವ ವಿದ್ಯಾರ್ಥಿಗಳು ಸಹಾಯಕ್ಕಾಗಿ ಬೇಡಿಕೆ ಇಡುತ್ತಿರುವ ಫೋಟೋ, ವೀಡಿಯೋಗಳನ್ನು ಶೇರ್‌ ಮಾಡುತ್ತಿದ್ದಾರೆ. ಇದನ್ನೂ ಓದಿ: ಪುಟಿನ್ ಆದೇಶ ನಿರಾಕರಿಸಿ ಉಕ್ರೇನ್‍ನಿಂದ ಹಿಂದಿರುಗಿದ್ರೆ ಪ್ರತೀ ಸೈನಿಕರೊಂದಿಗೆ ಸೆಕ್ಸ್‌ಗೆ ಸಿದ್ಧಳಿದ್ದೇನೆ: ಮಾಡೆಲ್

    ಇದುವರೆಗೆ 8,000 ಭಾರತೀಯರನ್ನು ಉಕ್ರೇನ್‌ನಿಂದ ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಉಕ್ರೇನ್‌ನ ಪೂರ್ವ ಭಾಗಗಳಲ್ಲಿ ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ.

  • ಉಕ್ರೇನ್‍ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು

    ಉಕ್ರೇನ್‍ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು

    ಹಾವೇರಿ: ಉಕ್ರೇನ್ ಹಾಗೂ ರಷ್ಯಾ ನಡುವಿನ ಸಂಘರ್ಷದಲ್ಲಿ ಕರ್ನಾಟಕ ಮೂಲಕ ವಿದ್ಯಾರ್ಥಿ ಸಾವನ್ನಪ್ಪಿರುವ ವಿಚಾರ ತಿಳಿದು ಬಂದಿದೆ.

    ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಮೃತಪಟ್ಟಿದ್ದಾರೆ ಎಂದು ಉಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳು ತಿಳಿಸಿದ್ದಾರೆ.  ಇದನ್ನೂ ಓದಿ: CBI ಎಂದು ಸುಳ್ಳು ಹೇಳಿ ಲಕ್ಷಾಂತರ ರೂ. ಹಣ, ಕೆಜಿಗಟ್ಟಲೆ ಚಿನ್ನದೋಚಿದರು!

    ಕಾರ್ಕಿವ್‍ನಲ್ಲಿ ನಾಲ್ಕನೇ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ನವೀನ್ ಗ್ಯಾನಗೌಡ್ರು ಅಗತ್ಯ ವಸ್ತುಗಳನ್ನು ತರಲು ಹೊರಗೆ ಹೋಗಿದ್ದರು. ತರಕಾರಿಗಾಗಿ ಲೈನಿನಲ್ಲಿ ನಿಂತಿದ್ದ ವೇಳೆ ಉಕ್ರೇನ್-ರಷ್ಯಾ ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇದೇ ಸಮಯದಲ್ಲಿ ಗುಂಡು ತಗುಲಿ ನವೀನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪುರುಷನ ವೇಷಧರಿಸಿ ಕಳ್ಳತನ ಮಾಡಲು ಬಂದ ಯುವತಿ ಅರೆಸ್ಟ್!

  • ಪುಟಿನ್ ಆದೇಶ ನಿರಾಕರಿಸಿ ಉಕ್ರೇನ್‍ನಿಂದ ಹಿಂದಿರುಗಿದ್ರೆ ಪ್ರತೀ ಸೈನಿಕರೊಂದಿಗೆ ಸೆಕ್ಸ್‌ಗೆ ಸಿದ್ಧಳಿದ್ದೇನೆ: ಮಾಡೆಲ್

    ಪುಟಿನ್ ಆದೇಶ ನಿರಾಕರಿಸಿ ಉಕ್ರೇನ್‍ನಿಂದ ಹಿಂದಿರುಗಿದ್ರೆ ಪ್ರತೀ ಸೈನಿಕರೊಂದಿಗೆ ಸೆಕ್ಸ್‌ಗೆ ಸಿದ್ಧಳಿದ್ದೇನೆ: ಮಾಡೆಲ್

    ಕೀವ್: ಉಕ್ರೇನ್‍ನಲ್ಲಿ ನಡೆಯುತ್ತಿರುವ ಯುದ್ಧವನ್ನು ತಡೆಯಲು ವಿದೇಶಿ ಮಾಡೆಲ್ ಒಬ್ಬರು ರಷ್ಯಾದ ಅಧ್ಯಕ್ಷ ಪುಟಿನ್ ಅವರ ಆದೇಶಗಳನ್ನು ನಿರಾಕರಿಸಿ ಉಕ್ರೇನ್‍ನಿಂದ ಹಿಂದಿರುಗಿದರೆ ಅವರ ಪ್ರತಿಯೊಬ್ಬ ಸೈನಿಕರೊಂದಿಗೆ ಸಂಭೋಗಿಸಲು ಸಿದ್ಧಳಾಗಿದ್ದೇನೆ ಎಂದು ಹೇಳಿಕೆ ನೀಡಿದ್ದಾಳೆ.

    ಮಾಡೆಲ್, ಟ್ವಿಟ್ಟರ್‌ನಲ್ಲಿ ಅಭಿಮಾನಿಗಳಿಗೋಸ್ಕರ ಫೋನ್ಸ್ ವೆಬ್‍ಸೈಟ್‍ವೊಂದನ್ನು ಹೊಂದಿದ್ದು, ಇನ್‍ಸ್ಟಾಗ್ರಾಮ್‍ನಲ್ಲಿ ಲಿಲ್ಲಿ ಸಮ್ಮರ್ಸ್ ಎಂಬ ಖಾತೆಯೊಂದನ್ನು ಹೊಂದಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಬರೆಯುತ್ತಿದ್ದಾರೆ. ಈಗ ಅವರು ಉಕ್ರೇನ್‍ನಲ್ಲಿ ನಡೆಯುತ್ತಿರುವ ರಕ್ತಪಾತವನ್ನು ತಡೆಯಲು ರಷ್ಯಾದ ಸೈನಿಕರಿಗೆ ಲೈಂಗಿಕತೆಯ ಆಯ್ಕೆಯೊಂದನ್ನು ನೀಡಿದ್ದಾರೆ. ‘ಉಕ್ರೇನ್‍ಗಾಗಿ ತನ್ನ ಶಸ್ತ್ರಾಸ್ತ್ರಗಳನ್ನು ಮತ್ತು ದ್ವೇಷವನ್ನು ತ್ಯಜಿಸಲು ಸಿದ್ಧವಾಗಿರುವ ಪ್ರತಿಯೊಬ್ಬ ರಷ್ಯಾದ ಸೈನಿಕನೊಂದಿಗೆ ನಾನು ಲೈಂಗಿಕತೆ ಹೊಂದಲು ಸಿದ್ಧಳಿದ್ದೇನೆ’ ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.  ಇದನ್ನೂ ಓದಿ: ಡಬ್ಲ್ಯುಹೆಚ್‍ಒನಿಂದ ಎಚ್ಚರಿಕೆ- ಯುದ್ಧ ಬಿಕ್ಕಟ್ಟಿನ ಮಧ್ಯೆ ಉಕ್ರೇನ್‍ಗೆ ಮತ್ತೊಂದು ಆತಂಕ

    ಕೇವಲ ರಷ್ಯಾ ಅಲ್ಲದೇ ಪ್ರತಿಯೊಬ್ಬ ಸೈನಿಕನಿಗೂ ಒಂದು ಕೊಡುಗೆ ಇದೆ. ಲಿಲ್ಲಿ ಸಮ್ಮರ್ಸ್ ಮೊದಲಿನಿಂದಲೂ ಉಕ್ರೇನ್ ಅನ್ನು ಬೆಂಬಲಿಸುತ್ತಿದ್ದಾರೆ. ಉಕ್ರೇನಿಯನ್ ಧ್ವಜದೊಂದಿಗೆ ಅನೇಕ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಶಾಂತಿಗಾಗಿ ಮನವಿ ಮಾಡಿದ್ದಾರೆ. ರಷ್ಯಾದ ಪಡೆಗಳು ತಮ್ಮ ಅಧ್ಯಕ್ಷರ ಆದೇಶಗಳನ್ನು ಪಾಲಿಸಲು ನಿರಾಕರಿಸಬೇಕು ಮತ್ತು ಉಕ್ರೇನ್ ಬಿಟ್ಟು ಹಿಂದಿರುಗಬೇಕು ಎಂದಿದ್ದರು. ಹಾಗೇನಾದರೂ ಮಾಡಿದರೆ, ನಾನು ಅವರೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಲು ಸಿದ್ಧಳಿದ್ದೇನೆ. ನನ್ನ ಕೊಡುಗೆ ಪ್ರತಿ ರಷ್ಯಾದ ಸೈನಿಕನಿಗೆ ಎಂದು ಟ್ವೀಟ್‍ನಲ್ಲಿ ಹೇಳಿದ್ದಾರೆ. ಇದನ್ನೂ ಓದಿ:  ಬಿಬಿಎಂಪಿಯಲ್ಲಿ ಭ್ರಷ್ಟಾಚಾರ ಬಯಲು- 1000 ಕೋಟಿಗೂ ಅಧಿಕ ಅಕ್ರಮ ಪತ್ತೆ

    ಟ್ವೀಟ್‍ನಲ್ಲಿ ಏನಿದೆ?
    ‘ಯಾರಾದರೂ ಒಬ್ಬ ರಷ್ಯನ್ ಸತ್ತರೆ, ನಾನು ನಗ್ನ ಫೋಟೋವನ್ನು ಹಂಚಿಕೊಳ್ಳುತ್ತೇನೆ. ಅದೇ ರೀತಿ, ರಷ್ಯಾದ ಟ್ಯಾಂಕ್ ನಾಶವಾದಾಗ, ಅನುಯಾಯಿಗಳು ನನ್ನ ಮಾದಕ ವೀಡಿಯೋವನ್ನು ಪಡೆಯುತ್ತಾರೆ. ಯಾರಾದರೂ ರಷ್ಯಾದ ವಿಮಾನವನ್ನು ಹೊಡೆದುರುಳಿಸಿದರೆ, ನಾನು ಅವನಿಗೆ ನನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಅವಕಾಶವನ್ನು ನೀಡುತ್ತೇನೆ  ಎಂದಿದ್ದಾರೆ.

    ವ್ಲಾಡಿಮಿರ್ ಪುಟಿನ್ ಅವರ ಉಕ್ರೇನ್ ವಿರುದ್ಧದ ಯುದ್ಧದ ನಿರ್ಧಾರಕ್ಕೆ ಸಾಕಷ್ಟು ವಿರೋಧವಿದೆ. ರಷ್ಯಾದ ಅನೇಕ ಸೆಲೆಬ್ರಿಟಿಗಳು ಕೂಡ ತಮ್ಮ ಕೋಪವನ್ನು ವ್ಯಕ್ತಪಡಿಸಿದ್ದಾರೆ.

  • ಖಾರ್ಕಿವ್‍ನ ಆಡಳಿತ ಕಚೇರಿ ಮೇಲೆ ಬಾಂಬ್ ದಾಳಿ- ಕಟ್ಟಡ ಸಂಪೂರ್ಣ ಧ್ವಂಸ

    ಖಾರ್ಕಿವ್‍ನ ಆಡಳಿತ ಕಚೇರಿ ಮೇಲೆ ಬಾಂಬ್ ದಾಳಿ- ಕಟ್ಟಡ ಸಂಪೂರ್ಣ ಧ್ವಂಸ

    ಕೀವ್: ರಷ್ಯಾ ದಾಳಿಗೆ ಉಕ್ರೇನ್ ತತ್ತರಿಸಿದ್ದು, ಇಂದು ಖಾರ್ಕಿವ್‍ನ ಸೆಂಟ್ರಲ್ ಸ್ಕ್ವೇರ್ ಮೇಲೆ ರಷ್ಯಾ ದಾಳಿ ನಡೆಸಿದ್ದು, ಕಟ್ಟಡ ಸಂಪೂರ್ಣ ನಾಶವಾಗಿದೆ.

    ನಿನ್ನೆ ರಾತ್ರಿಯಿಡೀ ಕೀವ್ ಮೇಲೆ ರಷ್ಯಾ ದಾಳಿ ನಡೆಸಿದೆ. ರಷ್ಯಾ ದಾಳಿಗೆ ಉಕ್ರೇನ್‍ನ ಬೃಹತ್ ಕಟ್ಟಗಳು ಧ್ವಂಸವಾಗಿದೆ. ರಷ್ಯಾ ಜನವಸತಿ ಕೇಂದ್ರಗಳ ಮೇಲೂ ದಾಳಿ ಮಾಡುತ್ತಿದ್ದು, ಈಗ ಖಾರ್ಕಿವ್‍ನ ಕೇಂದ್ರದ ಮೇಲೆ ಬಾಂಬ್ ದಾಳಿ ಮಾಡಿದೆ. ಇದು ಸ್ಥಳೀಯ ಆಡಳಿತ ಕಚೇರಿ ಮೇಲೆ ರಷ್ಯಾ ದಾಳಿ ನಡೆಸಿದೆ. ಕೀವ್ ಮತ್ತು ಖಾರ್ಕಿವ್‍ನಲ್ಲಿ ಪರಿಸ್ಥಿತಿ ಶೋಚನೀಯವಾಗಿದೆ.

    ರಷ್ಯಾದಿಂದ ಉಕ್ರೇನ್‍ನ ಮೇಲೆ ವ್ಯಾಕ್ಯೂಮ್ ಬಾಂಬ್ ಪ್ರಯೋಗವಾಗುತ್ತಿದೆ. ನಿನ್ನೆ ರಾತ್ರಿಯಿಡೀ ದಾಳಿ ನಡೆಸಿದೆ. ಉಕ್ರೇನ್‍ನಲ್ಲಿ ಕ್ಷಿಪಣಿ ದಾಳಿ ನಿರಂತರವಾಗಿ ನಡೆಸುತ್ತಿದ್ದು, ಜನರು ಕ್ಷಣ ಕ್ಷಣಕ್ಕೂ ಭಯದಲ್ಲೇ ಜೀವನ ಸಾಗಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ರಷ್ಯಾ ಪಡೆಗಳು ನಗರಗಳ ಮೇಲೆ ಫಿರಂಗಿಗಳನ್ನು ಬಳಸುತ್ತಿವೆ. ಇದನ್ನೂ ಓದಿ: ಜಾರ್ಖಂಡ್ ದೋಣಿ ದುರಂತದಲ್ಲಿ 14 ಮಂದಿ ಸಾವು – ಸಿಎಂನಿಂದ 4 ಲಕ್ಷ ಪರಿಹಾರ ಘೋಷಣೆ

    ವ್ಯಾಕ್ಯೂಮ್ ಬಾಂಬ್ ಅಪ್ಪಳಿಸಿದರೆ ವಾತಾವರಣದ ಆಮ್ಲಜನಕ ಗ್ರಹಿಸಿ ಹೆಚ್ಚಿನ ಅನಾಹುತವಾಗುತ್ತದೆ. 300ಮೀ ದೂರಕ್ಕೆ ಭಾರೀ ಹಾನಿ ಉಂಟು ಮಾಡಬಲ್ಲದು. ಇದನ್ನು ಕೀವ್ ಮೇಲೆ ಪ್ರಯೋಗಿಸಲಾಗಿದೆ ಜೊತೆಗೆ ರಷ್ಯಾದಿಂದ ಪರಮಾಣು ರಹಿತ ಅತ್ಯಾಧುನಿಕ ಬಾಂಬ್‍ಗಳನ್ನು ಪ್ರಯೋಗ ಮಾಡಲಾಗುತ್ತಿದೆ ಎಂದು ಉಕ್ರೇನ್ ಆರೋಪಿಸಿದೆ.

    ಉಕ್ರೇನ್ ಮೇಲೆ 6ನೇ ದಿನ ಇನ್ನಷ್ಟು ಭೀಕರ ದಾಳಿಗೆ ರಷ್ಯಾ ಸನ್ನದ್ಧವಾಗಿದೆ. ರಾಜಧಾನಿ ಕೀವ್ ಹೊರಭಾಗದಲ್ಲಿ 40 ಮೈಲಿಯಷ್ಟು ಮಿಲಿಟರಿ ವಾಹನಗಳ ಸಾಲು ನಿಂತಿವೆ. 40 ಮೈಲಿ ದೂರದಷ್ಟು ಮಿಲಿಟರಿ ವಾಹನಗಳನ್ನು ರಷ್ಯಾ ಸನ್ನದ್ಧಗೊಳಿಸಿದೆ. ಯಾವುದೇ ಕ್ಷಣದಲ್ಲಾದರೂ ಉಕ್ರೇನ್ ಮೇಲೆ ಇನ್ನಷ್ಟು ಭೀಕರ ದಾಳಿ ನಿರೀಕ್ಷೆಯಿದೆ. ಇದನ್ನೂ ಓದಿ: ರಷ್ಯಾ ಅಧ್ಯಕ್ಷನಿಂದ ಬ್ಲ್ಯಾಕ್ ಬೆಲ್ಟ್ ವಾಪಸ್ ಪಡೆದ ವಿಶ್ವ ಟೇಕ್ವಾಂಡೋ

  • ಉಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳೊಂದಿಗೆ ಮಾತಾಡಿ ಧೈರ್ಯ ತುಂಬಿದ ಗೋಪಾಲಯ್ಯ

    ಉಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳೊಂದಿಗೆ ಮಾತಾಡಿ ಧೈರ್ಯ ತುಂಬಿದ ಗೋಪಾಲಯ್ಯ

    ಬೆಂಗಳೂರು: ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ಹಾಸನ ಜಿಲ್ಲೆಯ ವಿದ್ಯಾರ್ಥಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಇಂದು ಮುಂಜಾನೆ ವೀಡಿಯೋ ಕರೆ ಮೂಲಕ ಮಾತನಾಡಿ ಧೈರ್ಯ ತುಂಬಿದರು.

    ಹಾಸನ ಜಿಲ್ಲೆಯ ಬೆಂಗಳೂರಿನ ನಿವಾಸಿ ಪೂರ್ಣ ಅವರೊಂದಿಗೆ ಹದಿನೈದು ನಿಮಿಷಕ್ಕೂ ಹೆಚ್ಚು ಕಾಲ ಮಾತನಾಡಿದ ಗೋಪಾಲಯ್ಯ ಅವರು, ಯಾವುದೇ ರೀತಿಯ ಸಂದರ್ಭ ಬಂದರೂ ಧೈರ್ಯಗೆಡದೆ ಆತ್ಮಸ್ಥೈರ್ಯದಿಂದ ಎಲ್ಲ ಕಷ್ಟಗಳನ್ನು ಎದುರಿಸಲು ಸಲಹೆ ನೀಡಿದರು. ಇದನ್ನೂ ಓದಿ: ಮೆಟ್ರೋ ನಿಲ್ದಾಣದ ಗ್ರಿಲ್‍ನಲ್ಲಿ ಸಿಲುಕಿದ್ದ ಬಾಲಕಿ ರಕ್ಷಿಸಿದ CISF ಸಿಬ್ಬಂದಿ!

    ಯುದ್ಧ ಪೀಡಿತ ನಗರದಲ್ಲಿ ನೀರು, ಆಹಾರ, ರಕ್ಷಣೆ ಇತರೆ ಮೂಲಭೂತ ಸೌಕರ್ಯಗಳ ಲಭ್ಯತೆ ಕುರಿತು ಮಾಹಿತಿ ಪಡೆದ ಸಚಿವರು, ಅವಕಾಶ ಸಿಕ್ಕಾಗ ಸಾಧ್ಯವಾದಷ್ಟು ಹೆಚ್ಚು ನೀರು ಮತ್ತು ಆಹಾರ ಪದಾರ್ಥಗಳನ್ನು ಸಂಗ್ರಹಿಸಿ ಇಟ್ಟುಕೊಳ್ಳುವಂತೆ ತಿಳಿಸಿದರು. ಇದರ ಜೊತೆಗೆ ಯಾವುದೇ ಸಮಯದಲ್ಲಾದರೂ ಕೂಡ ತಮ್ಮ ದೂರವಾಣಿ ಸಂಖ್ಯೆಗೆ ಕರೆ ಮಾಡಲು ತಿಳಿಸಿದರು.

    ಕೇಂದ್ರ ಮತ್ತು ಕರ್ನಾಟಕ ರಾಜ್ಯ ಸರ್ಕಾರಗಳು ಯುಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳು ಮತ್ತು ಭಾರತೀಯ ನಾಗರೀಕರನ್ನು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಸುರಕ್ಷಿತವಾಗಿ ಕರೆ ತಂದಿದೆ. ಉಳಿದವರನ್ನು ಕರೆತರುವ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿದೆ. ನಿಮ್ಮನ್ನು ಕೂಡ ಶೀಘ್ರವೇ ಕರೆ ತರಲು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಪುರುಷನ ವೇಷಧರಿಸಿ ಕಳ್ಳತನ ಮಾಡಲು ಬಂದ ಯುವತಿ ಅರೆಸ್ಟ್!

    ಇದೇ ವೇಳೆ ಬೆಳಗಾವಿ ಜಿಲ್ಲೆಯ ಅಥಣಿ ರಕ್ಷಿತ್ ವಿದ್ಯಾರ್ಥಿಯೊಂದಿಗೂ ಕೂಡ ಮಾತನಾಡಿದ ಸಚಿವರು, ನಿಮ್ಮ ಜೊತೆಯಲ್ಲಿರುವ ಎಲ್ಲರಿಗೂ ಧೈರ್ಯದಿಂದ ಇರಲು ತಿಳಿಸಿದರು. ಬೆಂಗಳೂರಿನ ಮಾಗಡಿ ರಸ್ತೆಯ ಕಾರ್ತಿಕ್ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳ ವಿದ್ಯಾರ್ಥಿಗಳ ಜೊತೆ ಮಾತನಾಡಿದರು.

  • ಉಕ್ರೇನ್‍ನ ಶಾಲಾ- ಕಾಲೇಜುಗಳ ಮೇಲೆ ರಷ್ಯಾದಿಂದ ಫಿರಂಗಿ ದಾಳಿ

    ಉಕ್ರೇನ್‍ನ ಶಾಲಾ- ಕಾಲೇಜುಗಳ ಮೇಲೆ ರಷ್ಯಾದಿಂದ ಫಿರಂಗಿ ದಾಳಿ

    ಕೀವ್: ಉಕ್ರೇನ್ ಮೇಲೆ ರಷ್ಯಾ ದಾಳಿ 6ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಯುದ್ಧದ ತೀವ್ರವಾಗಿದೆ. ಉಕ್ರೇನ್‍ನ ಶಾಲಾ- ಕಾಲೇಜುಗಳ ಮೇಲೆ ರಷ್ಯಾ ಫಿರಂಗಿ ದಾಳಿ ನಡೆಸಿದೆ.

    ರಷ್ಯಾ ಉಕ್ರೇನ್‍ನ ನಾಗರಿಕ ಪ್ರದೇಶಗಳನ್ನು ಹೆಚ್ಚು ಗುರಿಯಾಗಿಸಿಕೊಂಡಿದೆ. ಈಗಾಗಲೇ ಉಕ್ರೇನ್‍ನ ಮಿಲಿಟರಿ ನೆಲೆಗಳ ರಷ್ಯಾ ಫಿರಂಗಿ ದಾಳಿ ನಡೆಸಿದೆ. ಈ ವೇಳೆ ಉಕ್ರೇನ್‍ನ 70 ಸೈನಿಕರ ಹತ್ಯೆ ಮಾಡಲಾಗಿದೆ. ಅಷ್ಟೇ ಅಲ್ಲದೇ ಶಾಲಾ- ಕಾಲೇಜುಗಳ ಮೇಲೂ ದಾಳಿ ನಡೆಸಿದೆ. ಇದರಲ್ಲಿ 10 ಮಕ್ಕಳ ಸಾವನ್ನಪ್ಪಿದ್ದು, ಉಕ್ರೇನ್‍ನ 6 ಶಾಲೆಗಳು ಧ್ವಂಸವಾಗಿದೆ.

    ರಾಜಧಾನಿ ಕೀವ್‍ನಲ್ಲಿ ರಷ್ಯಾದಿಂದ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಮಾಡಲಾಗಿದೆ ಎಂಬ ಮಾತು ಕೇಳಿ ಬರುತ್ತಿದೆ. ವ್ಯಾಕ್ಯೂಮ್ ಬಾಂಬ್ ಅಪ್ಪಳಿಸಿದರೆ ವಾತಾವರಣದ ಆಮ್ಲಜನಕ ಗ್ರಹಿಸಿ ಹೆಚ್ಚಿನ ಅನಾಹುತವಾಗುತ್ತದೆ. 300ಮೀ ದೂರಕ್ಕೆ ಭಾರೀ ಹಾನಿ ಉಂಟು ಮಾಡಬಲ್ಲದು. ಇದನ್ನು ಕೀವ್ ಮೇಲೆ ಪ್ರಯೋಗಿಸಲಾಗಿದೆ ಜೊತೆಗೆ ರಷ್ಯಾದಿಂದ ಪರಮಾಣು ರಹಿತ ಅತ್ಯಾಧುನಿಕ ಬಾಂಬ್‍ಗಳನ್ನು ಪ್ರಯೋಗ ಮಾಡಲಾಗುತ್ತಿದೆ ಎಂದು ಉಕ್ರೇನ್ ಆರೋಪಿಸಿದೆ.

    ಉಕ್ರೇನ್ ಮೇಲೆ ಇನ್ನಷ್ಟು ಭೀಕರ ದಾಳಿಗೆ ರಷ್ಯಾ ಸನ್ನದ್ಧವಾಗಿದೆ. ರಾಜಧಾನಿ ಕೀವ್ ಹೊರಭಾಗದಲ್ಲಿ 40 ಮೈಲಿಯಷ್ಟು ಮಿಲಿಟರಿ ವಾಹನಗಳ ಸಾಲು ನಿಂತಿವೆ. 40 ಮೈಲಿ ದೂರದಷ್ಟು ಮಿಲಿಟರಿ ವಾಹನಗಳನ್ನು ರಷ್ಯಾ ಸನ್ನದ್ಧಗೊಳಿಸಿದೆ. ಯಾವುದೇ ಕ್ಷಣದಲ್ಲಾದರೂ ಉಕ್ರೇನ್ ಮೇಲೆ ಇನ್ನಷ್ಟು ಭೀಕರ ದಾಳಿ ನಿರೀಕ್ಷೆಯಿದೆ. ಇದನ್ನೂ ಓದಿ: ಅನ್ನ, ನೀರು, ಮೊಬೈಲ್ ಚಾರ್ಜಿಂಗ್ ಮಾಡಲಾಗದೆ ವಿದ್ಯಾರ್ಥಿಗಳ ಪರದಾಟ

    ಈ ಬಗ್ಗೆ ಅಮೆರಿಕ ಗುಪ್ತಚರ ಮತ್ತು ರಕ್ಷಣಾ ಸಚಿವಾಲಯದಿಂದ ಮಾಹಿತಿ ಹೊರಡಿಸಿದ್ದು, ಉಕ್ರೇನ್‍ನಲ್ಲಿ ಇನ್ನಷ್ಟು ಭೀಕರ ರಕ್ತಸಿಕ್ತ ಯುದ್ಧ ಆಗಬಹುದು. ಕೀವ್‍ನಲ್ಲಿ ಇನ್ನಷ್ಟು ರಕ್ತಸಿಕ್ತ, ದೀಘಕಾಲದ ದಾಳಿ ಆಗಲಿದೆ ಎಂದು ಅಮೆರಿಕ ಸಂಸದರಿಗೆ ವಿವರಣೆ ನೀಡಿದೆ. ಇದನ್ನೂ ಓದಿ: ಬಿಬಿಎಂಪಿಯಲ್ಲಿ ಭ್ರಷ್ಟಾಚಾರ ಬಯಲು- 1000 ಕೋಟಿಗೂ ಅಧಿಕ ಅಕ್ರಮ ಪತ್ತೆ

  • ಉಕ್ರೇನ್ ಬಂಕರ್‌ನ ಕರಾಳ ಪರಿಸ್ಥಿತಿ ಬಿಚ್ಚಿಟ್ಟ ರಾಯಚೂರು ವಿದ್ಯಾರ್ಥಿ

    ಉಕ್ರೇನ್ ಬಂಕರ್‌ನ ಕರಾಳ ಪರಿಸ್ಥಿತಿ ಬಿಚ್ಚಿಟ್ಟ ರಾಯಚೂರು ವಿದ್ಯಾರ್ಥಿ

    ರಾಯಚೂರು: ಉಕ್ರೇನ್ ರಷ್ಯಾ ಯುದ್ಧ ಹಿನ್ನೆಲೆ ಉಕ್ರೇನ್‍ನಲ್ಲಿ ಸಿಲುಕಿರುವ ಜಿಲ್ಲೆಯ ಒಟ್ಟು 14 ವಿದ್ಯಾರ್ಥಿಗಳು ಕಷ್ಟದ ಸಮಯ ಎದುರಿಸುತ್ತಿದ್ದಾರೆ.

    ರಾಯಚೂರು ಜಿಲ್ಲೆಯ ಲಿಂಗಸುಗೂರಿನ ವಿದ್ಯಾರ್ಥಿ ಪ್ರಜ್ವಲ್ ಕುಮಾರ್ ಉಕ್ರೇನ್ ಬಂಕರ್‍ನಲ್ಲಿನ ಕರಾಳ ಪರಿಸ್ಥಿತಿ ಬಿಚ್ಚಿಟ್ಟಿದ್ದಾರೆ. ಆದಷ್ಟು ಬೇಗ ಭಾರತಕ್ಕೆ ಕರೆಸಿಕೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

    ಉಕ್ರೇನ್‍ನ ಕಾರ್ಕೀವ್‍ನಲ್ಲಿಯೇ ರಷ್ಯನ್ ಸೇನೆ ಬಂದಿಳಿದಿದೆ. ಕಫ್ರ್ಯೂ ಜಾರಿಯಾಗಿದ್ದು ನಾವು ಬಂಕರ್ ಒಳಗಡೆಯೇ ಕಾಲ ಕಳೆಯುತ್ತಿದ್ದೇವೆ. ಊಟ ನೀರಿಗೆ ಸಮಸ್ಯೆಯಾಗಿದೆ. ಹೊರಗಡೆ ಹೋದರೆ ಅಪಾಯವಿದೆ. ಒಳಗಡೆಯೇ ಇದ್ದರೆ ಆರೋಗ್ಯದ ಸಮಸ್ಯೆ ಕಾಡುತ್ತಿದೆ. ಏನು ಮಾಡಬೇಕು ಅನ್ನೋದು ತಿಳಿಯುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ- ಕಲಬೆರಕೆ ಸೇಂದಿ ಜಪ್ತಿ

    ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ವಿದ್ಯಾರ್ಥಿಗಳ ಸಂಪರ್ಕದಲ್ಲಿದ್ದು, ನಿರಂತರವಾಗಿ ವಿವರ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳಿಂದ ಅರ್ಜಿಗಳನ್ನ ತುಂಬಿಸಿಕೊಳ್ಳುತ್ತಿದ್ದಾರೆ. ಆದರೆ ನಮ್ಮನ್ನು ಇಲ್ಲಿಂದ ಕರೆದುಕೊಂಡು ಹೋಗುತ್ತಿಲ್ಲ. ಗಡಿ ಪ್ರದೇಶದಿಂದ ಸುಮಾರು 1,400 ಕಿ.ಮೀ ದೂರದಲ್ಲಿ ನಾವಿದ್ದೇವೆ. ಇಲ್ಲಿ ತುಂಬಾ ಭಯವಾಗುತ್ತಿದೆ ಎಂದು ಪ್ರಜ್ವಲ್ ಕುಮಾರ್ ವಿಡಿಯೋ ಕಾಲ್ ಮೂಲಕ ಪೋಷಕರಿಗೆ ತಮ್ಮ ಕರಾಳ ಪರಿಸ್ಥಿತಿ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಮೆಟ್ರೋ ನಿಲ್ದಾಣದ ಗ್ರಿಲ್‍ನಲ್ಲಿ ಸಿಲುಕಿದ್ದ ಬಾಲಕಿ ರಕ್ಷಿಸಿದ CISF ಸಿಬ್ಬಂದಿ!

  • ಅನ್ನ, ನೀರು, ಮೊಬೈಲ್ ಚಾರ್ಜಿಂಗ್ ಮಾಡಲಾಗದೆ ವಿದ್ಯಾರ್ಥಿಗಳ ಪರದಾಟ

    ಅನ್ನ, ನೀರು, ಮೊಬೈಲ್ ಚಾರ್ಜಿಂಗ್ ಮಾಡಲಾಗದೆ ವಿದ್ಯಾರ್ಥಿಗಳ ಪರದಾಟ

    ಬೀದರ್: ಉಕ್ರೇನ್‍ನಲ್ಲಿ ಸಿಲುಕಿರುವ ಗಡಿ ಜಿಲ್ಲೆ ಬೀದರ್‌ನ 6 ವೈದ್ಯಕೀಯ ವಿದ್ಯಾರ್ಥಿಗಳಿಗೆ ಅನ್ನ, ನೀರು ಹಾಗೂ ಮೊಬೈಲ್ ಚಾರ್ಜಿಂಗ್ ಮಾಡಲಾಗದೆ ಪರದಾಡುತ್ತಿದ್ದಾರೆ.

    ಸತತವಾಗಿ ಖಾರ್ಕಿವ್ ನಗರದಲ್ಲಿ ತೀವ್ರವಾದ ಯುದ್ಧ ನಡೆಯುತ್ತಿರುವುದರಿಂದ ಮೊಬೈಲ್ ಕೂಡಾ ಚಾರ್ಜಿಂಗ್ ಮಾಡಲಾಗದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಮೊಬೈಲ್ ಚಾರ್ಜಿಂಗ್ ಇಲ್ಲದ ಕಾರಣ ಕುಟುಂಬಸ್ಥರ ಜೊತೆ ಮಾತನಾಡಲಾಗದೆ ಕ್ಷಣ ಕ್ಷಣಕ್ಕೂ ಪೋಷಕರು ಹಾಗೂ ವಿದ್ಯಾರ್ಥಿಗಳು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಇದನ್ನೂ ಓದಿ:  ಬಿಬಿಎಂಪಿಯಲ್ಲಿ ಭ್ರಷ್ಟಾಚಾರ ಬಯಲು- 1000 ಕೋಟಿಗೂ ಅಧಿಕ ಅಕ್ರಮ ಪತ್ತೆ

    ಉಕ್ರೇನ್ ಖಾರ್ಕಿವ್‍ನಲ್ಲಿ ಸುತ್ತಲೂ ಬಾಂಬ್‍ಗಳು ಸ್ಫೋಟವಾಗುತ್ತಿದ್ದು, ಫೈರಿಂಗ್ ಹಾಗೂ ಯುದ್ಧದ ಟ್ಯಾಂಕ್‍ಗಳು ಓಡಾಡುತ್ತಿರುವ ಖಾರ್ಕಿವ್‍ನ ಸದ್ಯದ ಪರಿಸ್ಥಿತಿ ಬಗ್ಗೆಗಿನ ವೀಡಿಯೋಗಳನ್ನು ಅಮಿತ್ ಪಬ್ಲಿಕ್ ಟಿವಿಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ಮಹಾಶಿವರಾತ್ರಿ ವಿಶೇಷ ಪೂಜೆ – ಭಕ್ತರಲ್ಲಿ ಸಂಭ್ರಮ

    ಸದ್ಯ ಯುದ್ಧ ನಡೆಯುತ್ತಿರುವ ಖಾರ್ಕಿವ್‍ನಲ್ಲೇ ಬೀದರ್ ಮೂಲದ ಅಮಿತ್, ವೈಷ್ಣವಿ, ಶಶಾಂಕ್, ವಿವೇಕ್, ಮನೋಜ್, ಪ್ರಜ್ವಲ್ ಉಕ್ರೇನ್‍ನಲ್ಲಿಯೇ ಸಿಲುಕಿದ್ದು, ಅವರನ್ನು ಏರಲಿಫ್ಟ್ ಮಾಡಲು ಕಷ್ಟವಾಗುತ್ತಿದೆ.

  • ಪ್ರಜೆಗಳನ್ನು ರಕ್ಷಿಸಿ ಭಾರತ ಮಾದರಿಯಾದ್ರೆ, ನಿಮ್ಮ ರಕ್ಷಣೆ ನಿಮ್ಮ ಹೊಣೆ ಎಂದ ಅಮೆರಿಕ..!

    ಪ್ರಜೆಗಳನ್ನು ರಕ್ಷಿಸಿ ಭಾರತ ಮಾದರಿಯಾದ್ರೆ, ನಿಮ್ಮ ರಕ್ಷಣೆ ನಿಮ್ಮ ಹೊಣೆ ಎಂದ ಅಮೆರಿಕ..!

    ವಾಷಿಂಗ್ಟನ್: ಉಕ್ರೇನ್ ಮೇಲೆ ರಷ್ಯಾ ತನ್ನ ಆಕ್ರಮಣವನ್ನು ಮುಂದುವರಿಸಿದೆ. 6ನೇ ದಿನ ವಾದ ಇಂದು ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಪರಿಸ್ಥಿತಿ ತೀವ್ರ್ರ ಹದಗಣೆಟ್ಟಿದೆ. ಊಟ, ವಸತಿ ಇಲ್ಲದೆ ಪರದಾಡುವಂತಾದರೆ. ಇತ್ತ ವಿದ್ಯಾಭ್ಯಾಸ ಹಾಗೂ ಇನ್ನಿತರ ಕೆಲಸ ನಿಮಿತ್ತ ಉಕ್ರೇನ್‍ನಲ್ಲಿ ನೆಲೆಸಿರುವವರನ್ನು ಮತ್ತೇ ಅವರ ದೇಶಗಳಿಗೆ ವಾಪಸ್ ಕರೆತರುವುದು ಒಂದು ಚಾಲೆಂಜಿಂಗ್ ಆಗಿದೆ.

    ಭಾರತ ಸರ್ಕಾರ ತನ್ನ ನಾಗರಿಕರ ತೆರವು ಕಾರ್ಯಾಚರಣೆಗೆ ಸಾಕಷ್ಟು ಕ್ರಮಕೈಗೊಂಡ ಹೊರತಾಗಿಯೂ ವಿಪಕ್ಷಗಳಿಂದ ಟೀಕೆಗೆ ತುತ್ತಾಗಿದ್ದರೆ, ಇತ್ತ ಅಮೆರಿಕ ಸರ್ಕಾರ ಉಕ್ರೇನ್‍ನಲ್ಲಿ ಸಿಕ್ಕಿ ಬಿದ್ದಿರುವ ತನ್ನ ನಾಗರಿಕರ ತೆರವು ಕಾರ್ಯಾಚರಣೆ ತನ್ನ ಹೊಣೆಯಲ್ಲ ಎಂದು ಹೇಳಿದೆ. ಭಾರತಕ್ಕೆ ಆಪರೇಷನ್ ಗಂಗಾ ಮಿಷನ್ ಅಡಿಯಲ್ಲಿ ಆರನೇ ವಿಮಾನ ಆಗಮಿಸಿದ್ದು, ಕರ್ನಾಟಕದ ಹಲವು ವಿದ್ಯಾರ್ಥಿಗಳು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ಗಂಗಾ ಮಿಷನ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳನ್ನು ಎರ್‌ಲಿಫ್ಟ್‌ ಮಾಡಿ ಸುರಕ್ಷೀತವಾಗಿ ಅವರನ್ನು ತಲುಪಿಸುವ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಟೂತ್‌ ಪೇಸ್ಟ್ ಎಂದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿ ಪ್ರಾಣ ಬಿಟ್ಟಳು

    ಅಮೆರಿಕ ಹೇಳಿದ್ದೇನು?: ಪರಿಸ್ಥಿತಿ ಸುರಕ್ಷಿತ ಎನಿಸಿದರೆ ಖಾಸಗಿ ಅವಕಾಶಗಳನ್ನು ಬಳಸಿಕೊಂಡು ಉಕ್ರೇನ್ ದೇಶದಿಂದ ಹೊರಬನ್ನಿ. ಸುರಕ್ಷಿತ ಮಾರ್ಗ ಅಪಾಯದ ಸಾಧ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಬನ್ನಿ. ಪೋಲೆಂಡ್ ಮತ್ತು ಮಾಲ್ಡೋವಾದ ಬಹುತೇಕ ಗಡಿಗಳಲ್ಲಿ ನಾಗರಿಕ ಬಹುದೊಡ್ಡ ಸರದಿ ಇದೆ. ನೀವು ಅಲ್ಲಿ ಸಾಕಷ್ಟು ಸಮಯ ಕಾಯಬೇಕಾಗು ಬರಬಹುದು. ಹೀಗಾಗಿ ಹಂಗೇರಿ, ಸ್ಲೋವಾಕಿಯಾ, ರೊಮೇನಿಯಾ ಗಡಿಗಳ ಮೂಕವಾಗಿ ತೆರಳುವ ಯತ್ನವನ್ನು ಮಾಡಿ. ಆದರೆ ಅಲ್ಲಿ ಹಲವು ಗಂಟೆ ನೀವು ಕಾಯಬೇಕಾಗಬಹುದು ಎಂದು ಅಮೆರಿಕಾದ ಪ್ರಜೆಗಳಿಗೆ ಸಂದೇಶ ರವಾನಿಸಿದೆ. ಇದನ್ನೂ ಓದಿ: ಉಕ್ರೇನ್‍ನಿಂದ ಜೀವ ಉಳಿಸಿಕೊಂಡು ಬಂದಿರೋ ವಿದ್ಯಾರ್ಥಿಗಳಿಗೆ ಹೊಸ ಟೆನ್ಶನ್!

    ಉಕ್ರೇನ್‍ನಲ್ಲಿ ಸಿಕ್ಕಿಬಿದ್ದ ನಿಮ್ಮ ರಕ್ಷಣೆ ನಿಮ್ಮ ಹೊಣೆ. ಪರಿಸ್ಥಿತಿ ನೋಡಿಕೊಂಡು ಅಲ್ಲಿಂದ ಜಾಗ ಖಾಲಿ ಮಾಡಿ ಎಂದು ಪರೋಕ್ಷವಾಗಿ ಸಂದೇಶ ರವಾನಿಸಲಾಗಿದೆ.