Tag: Ukraine

  • ಉಕ್ರೇನ್ ಕುರಿತಂತೆ ಮೋದಿ ಸಭೆ – ಭಾರತೀಯರನ್ನು ಸ್ಥಳಾಂತರಿಸಲು ಉಕ್ರೇನ್ ನೆರೆಯ ರಾಷ್ಟ್ರಕ್ಕೆ ನಾಲ್ವರು ಸಚಿವರ ಪ್ರಯಾಣ

    ಉಕ್ರೇನ್ ಕುರಿತಂತೆ ಮೋದಿ ಸಭೆ – ಭಾರತೀಯರನ್ನು ಸ್ಥಳಾಂತರಿಸಲು ಉಕ್ರೇನ್ ನೆರೆಯ ರಾಷ್ಟ್ರಕ್ಕೆ ನಾಲ್ವರು ಸಚಿವರ ಪ್ರಯಾಣ

    ನವದೆಹಲಿ: ರಷ್ಯಾ ಮತ್ತು ಉಕ್ರೇನ್ ಸಂಘರ್ಷದ ನಡುವೆ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರಿಸಲು ನಾಲ್ವರು ಕೇಂದ್ರ ಸಚಿವರು ಉಕ್ರೇನ್‍ನ ನೆರೆಯ ದೇಶಗಳಿಗೆ ಹಾರಲಿದ್ದಾರೆ.

    ಉಕ್ರೇನ್ ಬಿಕ್ಕಟ್ಟಿನಿಂದ ದೇಶವನ್ನು ತೊರೆಯಲು ಪ್ರಯತ್ನಿಸುತ್ತಿರುವ ಭಾರತೀಯರ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಉನ್ನತ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಚಿವರಾದ ಹರ್ದೀಪ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ವಿ.ಕೆ. ಸಿಂಗ್ ಅವರು ಭಾರತದ ವಿಶೇಷ ರಾಯಭಾರಿಗಳಾಗಿ ಉಕ್ರೇನ್ ಸುತ್ತಮುತ್ತಲಿನ ದೇಶಗಳಿಗೆ ತೆರಳಿ ಭಾರತೀಯರು ಸ್ಥಳಾಂತರಗೊಳ್ಳಲು ಸಹಾಯ ಮಾಡಲಿದ್ದಾರೆ. ಇದನ್ನೂ ಓದಿ: ನಮ್ಮ ಸ್ವಂತ ಜನರನ್ನು ನಾವು ಬಿಟ್ಟುಕೊಡಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ರಾಹುಲ್ ಕಿಡಿ

    ಮೋದಿ ಅವರು ನಡೆಸುತ್ತಿರುವ ಎರಡನೇ ಸಭೆ ಇದಾಗಿದ್ದು, ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಗೊಳಿಸಲು ಮೊದಲ ಆದ್ಯತೆ ನೀಡಲಾಗಿದೆ ಎಂದು ಮೋದಿ ತಿಳಿಸಿದ್ದಾರೆ. ಅಲ್ಲದೇ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು.

    ಉಕ್ರೇನ್ ಗಡಿಯಲ್ಲಿ ಸಿಲುಕಿರುವ ನೂರಾರು ಭಾರತೀಯರ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸುಮಾರು 16,000 ವಿದ್ಯಾರ್ಥಿಗಳು ಉಕ್ರೇನ್‍ನ ಗಡಿಗಳಲ್ಲಿ ಸಿಲುಕಿಕೊಂಡಿದ್ದಾರೆ. ಬಾಂಬ್, ಶೆಲ್ಟರ್‌ಗಳಿಂದ ತಪ್ಪಿಸಿಕೊಳ್ಳಲು ಇನ್ನೂ ಕೆಲವರು ಹಾಸ್ಟೆಲ್‍ನ ನೆಲಮಾಳಿಗೆಗಳಲ್ಲಿ ಅಡಗಿಕೊಂಡಿದ್ದಾರೆ ಎಂದು ಎನ್ನಲಾಗುತ್ತಿದೆ.  ಇದನ್ನೂ ಓದಿ: ಒಂದು ಯುದ್ಧದಿಂದ ತಪ್ಪಿಸಿಕೊಂಡು ಉಕ್ರೇನ್‍ಗೆ ಬಂದ್ರೆ ಇನ್ನೊಂದು ಯುದ್ಧ ಪ್ರಾರಂಭವಾಗಿದೆ: ಅಫ್ಘಾನ್ ನಿವಾಸಿ

    ಮತ್ತೊಂದೆಡೆ ವಿರೋಧ ಪಕ್ಷಗಳು, ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾದಲ್ಲಿ ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಆದರೂ ಭಾರತೀಯರನ್ನು ಸುಲಭವಾಗಿ ಮತ್ತು ಸುರಕ್ಷಿತ ಮಾರ್ಗಗಳಿಂದ ಭಾರತಕ್ಕೆ ಕರೆತರಲು ಸರ್ಕಾರ ಯಾವುದೇ ವ್ಯವಸ್ಥೆಗೊಳಿಸಿಲ್ಲ ಎಂದು ಆರೋಪಿಸಿದೆ. ಇದನ್ನೂ ಓದಿ: ಟೂತ್‌ ಪೇಸ್ಟ್ ಎಂದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿ ಪ್ರಾಣ ಬಿಟ್ಟಳು

  • ನಮ್ಮ ತ್ರಿವರ್ಣ ಧ್ವಜ ಇದ್ದ ಬಸ್‌ಗಳನ್ನು ನೋಡಿದಾಗ ಮತ್ತೆ ಬದುಕಿದಂತಾಯ್ತು: ವಿದ್ಯಾರ್ಥಿನಿ

    ನಮ್ಮ ತ್ರಿವರ್ಣ ಧ್ವಜ ಇದ್ದ ಬಸ್‌ಗಳನ್ನು ನೋಡಿದಾಗ ಮತ್ತೆ ಬದುಕಿದಂತಾಯ್ತು: ವಿದ್ಯಾರ್ಥಿನಿ

    ಬೆಂಗಳೂರು: ಉಕ್ರೇನ್ ಮತ್ತು ರಷ್ಯಾ ನಡುವಿನ ಸಂಘರ್ಷ ಇಂದು 5ನೇ ದಿನಕ್ಕೆ ಕಾಲಿಟ್ಟಿದೆ. ರಷ್ಯಾ ದಾಳಿಯಿಂದ ಪುಟ್ಟ ರಾಷ್ಟ್ರ ಉಕ್ರೇನ್ ಕಂಗೆಟ್ಟಿದ್ದು, ವಿದ್ಯಾಭ್ಯಾಸಕ್ಕಾಗಿ ಭಾರತದಿಂದ ತೆರಳಿದ ವಿದ್ಯಾರ್ಥಿಗಳು ಜೀವ ಭಯದಲ್ಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳನ್ನು ತಮ್ಮ ತಾಯ್ನಾಡಿಗೆ ಕರೆದುಕೊಂಡು ಬರುವಲ್ಲಿ ಸತತ ಪ್ರಯತ್ನ ನqಯುತ್ತಿದ್ದು, ಈಗಾಗಲೇ ಹಲವಾರು ಮಂದಿ ವಾಪಸ್ಸಾಗಿದ್ದು, ತಮ್ಮ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅಂತೆಯೇ ವಿದ್ಯಾರ್ಥಿನಿಯೊಬ್ಬಳು ತಮ್ಮ ದೇಶದ ಧ್ವಜ ಇರುವ ಬಸ್ ಕಂಡಾಗ ಆದ ಸಂತಸವನ್ನು ಶೇರ್ ಮಾಡಿಕೊಂಡಿದ್ದಾಳೆ.

    ಹೌದು. ಉಕ್ರೇನ್ ನಿಂದ ವಾಪಾಸ್ ಆದ ವಿದ್ಯಾರ್ಥಿನಿ ದೀಪಿಕಾ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ನಮ್ಮ ಹತ್ತಿರದ ಸಿಟಿಗಳಲ್ಲಿ ಬಾಂಬ್ ಬ್ಲಾಸ್ಟ್ ಆಗ್ತಿದ್ರಿಂದ ಭಯ ಆಗಿತ್ತು. ನಿರಂತರವಾಗಿ ನಾವು ಸರ್ಕಾರಕ್ಕೆ ಮನವಿ ಮಾಡುತ್ತಿದ್ದೆವು. ಯಾವಾಗ ನಮ್ಮ ತ್ರಿವರ್ಣ ಧ್ವಜ ಇದ್ದ ಬಸ್ಸುಗಳನ್ನ ನೋಡಿದ್ವೋ ಮತ್ತೆ ಬದುಕಿದಂತಾಯ್ತು. ನಮ್ಮ ದೇಶಕ್ಕೆ ಬಂದ ಕೂಡಲೇ ನಮ್ಮ ತಾಯಿಯನ್ನ ನೋಡಿದಂತಾಯ್ತು ಎಂದು ತಿಳಿಸಿದ್ದಾಳೆ. ಇದನ್ನೂ ಓದಿ: ಒಂದು ಯುದ್ಧದಿಂದ ತಪ್ಪಿಸಿಕೊಂಡು ಉಕ್ರೇನ್‍ಗೆ ಬಂದ್ರೆ ಇನ್ನೊಂದು ಯುದ್ಧ ಪ್ರಾರಂಭವಾಗಿದೆ: ಅಫ್ಘಾನ್ ನಿವಾಸಿ

    ಅಲ್ಲಿದ್ದಾಗ ತುಂಬಾ ಭಯ ಆಗ್ತಿತ್ತು. ಏನ್ ಮಾಡೋದು ಗೊತ್ತಾಗ್ತಿರಲಿಲ್ಲ. ಅಲ್ಲಿನ ನಿವಾಸಿಗಳನ್ನ ಕೇಳಿದಾಗ ಏನೂ ಆಗಲ್ಲ ಅಂತ ಧೈರ್ಯ ಹೇಳುತ್ತಿದ್ದರು. ಯಾವಾಗ ಯುದ್ಧ ಆಗುತ್ತೆ ಅನ್ನೋದು ಪಕ್ಕಾ ಆಯ್ತೋ ಟಿಕೆಟ್ ಬುಕ್ ಮಾಡೋಕೆ ಹೊದೆವು. ಎಲ್ಲರೂ ಟಿಕೆಟ್ ಬುಕ್ ಮಾಡೋಕೆ ಶುರು ಮಾಡಿದ್ರಿಂದ ಟಿಕೆಟ್ ದರ ಸಹ ಸಿಕ್ಕಾಪಟ್ಟೆ ಜಾಸ್ತಿ ಆಯ್ತು. ಮತ್ತೆ ನಾವು ಬದುಕಿ ಬರ್ತೀವೋ, ಇಲ್ಲವೋ ಅನ್ನೋ ಭಯ ಶುರುವಾಗಿತ್ತು. 2014 ರಲ್ಲೂ ಇದೇ ದರ ಯುದ್ಧ ಭಯ ಇತ್ತಂತೆ. ಏನೂ ಆಗಲ್ಲ ಅಂತ ಅಲ್ಲಿನ ಜನ ನಮಗೆ ಧೈರ್ಯ ಹೇಳುತ್ತಿದ್ದರು ಎಂದು ತಮಗಾದ ಭೀಕರ ಅನುಭವವನ್ನು ದೀಪಿಕಾ ಬಿಚ್ಚಿಟ್ಟಳು. ಇದನ್ನೂ ಓದಿ: ಉಕ್ರೇನ್‍ಗೆ 65 ಕೋಟಿ ದೇಣಿಗೆ ನೀಡಿದ ಜಪಾನ್ ಉದ್ಯಮಿ

    ಉಕ್ರೇನ್ ಸರ್ಕಾರ ಉಳಿಯುತ್ತೆ ಅನ್ನೋ ವಿಶ್ವಾಸ ಇದೆ. ನಮ್ಮ ವಿದ್ಯಾಭ್ಯಾಸ ಮುಂದುವರಿಸಬೇಕು. ಅದಷ್ಟು ಬೇಗ ಎಲ್ಲ ಸರಿಹೋಗಬೇಕು. ಒಂದಿಬ್ಬರು ಮಾತ್ರ ಉಕ್ರೇನ್ ಗೆ ಹೋಗಿಲ್ಲ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಉಕ್ರೇನ್ ಮೇಲಿದೆ. ಮತ್ತೆ ಎಲ್ಲ ಸರಿಹೋಗಿ ನಾವು ನಮ್ಮ ವಿದ್ಯಾಭ್ಯಾಸ ಮುಂದುವರಿಸುವುದಾಗಿ ಅವರು ತಿಳಿಸಿದಳು. ಇದನ್ನೂ ಓದಿ: ಮೋದಿ ಜೀ, ಯೋಗಿ ಜೀ ಯಾರಿದ್ದೀರಿ..? ಪ್ಲೀಸ್ ನಮ್ಮನ್ನು ಕಾಪಾಡಿ- ಯುಪಿ ವಿದ್ಯಾರ್ಥಿನಿ ಅಳಲು

  • ನಮ್ಮ  ಜನರನ್ನು ನಾವು ಬಿಟ್ಟುಕೊಡಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ರಾಹುಲ್ ಕಿಡಿ

    ನಮ್ಮ ಜನರನ್ನು ನಾವು ಬಿಟ್ಟುಕೊಡಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ರಾಹುಲ್ ಕಿಡಿ

    ನವದೆಹಲಿ: ಉಕ್ರೇನ್‍ನಲ್ಲಿ ಸಿಲುಕಿರುವ ನಮ್ಮ ಜನರನ್ನು ನಾವು ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಹೇಳಿದ್ದಾರೆ.

    ಉಕ್ರೇನ್ ಗಡಿ ದಾಟಲು ಪ್ರಯತ್ನಿಸಿದ ಕೆಲವು ಭಾರತೀಯ ವಿದ್ಯಾರ್ಥಿಗಳಿಗೆ ಮಿಲಿಟರಿ ಕಿರುಕುಳ ನೀಡುತ್ತಿರುವ ವೀಡಿಯೋವನ್ನು ರಾಹುಲ್ ಗಾಂಧಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅವರನ್ನು ಆದಷ್ಟು ಬೇಗ ಭಾರತಕ್ಕೆ ಸ್ಥಳಾಂತರಿಸುವ ಯೋಜನೆಯನ್ನು ಶೀಘ್ರವಾಗಿ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.  ಇದನ್ನೂ ಓದಿ: ಒಂದು ಯುದ್ಧದಿಂದ ತಪ್ಪಿಸಿಕೊಂಡು ಉಕ್ರೇನ್‍ಗೆ ಬಂದ್ರೆ ಇನ್ನೊಂದು ಯುದ್ಧ ಪ್ರಾರಂಭವಾಗಿದೆ: ಅಫ್ಘಾನ್ ನಿವಾಸಿ

    ರಾಹುಲ್ ಗಾಂಧಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ವೀಡಿಯೋ ಶೇರ್ ಮಾಡಿಕೊಳ್ಳುವುದರ ಜೊತೆಗೆ, ಈ ರೀತಿ ಹಿಂಸೆಯನ್ನು ಅನುಭವಿಸುತ್ತಿರುವ ಭಾರತೀಯ ವಿದ್ಯಾರ್ಥಿಗಳ ವೀಡಿಯೋವನ್ನು ಅವರ ಕುಟುಂಬದವರು ನೋಡುತ್ತಿರುವುದು ನನ್ನ ಮನಸ್ಸಿಗೆ ಬಹಳ ಸಂಕಟವಾಗುತ್ತಿದೆ. ಯಾವುದೇ ಪೋಷಕರಿಗೂ ಈ ರೀತಿ ಆಗಬಾರದು. ಭಾರತ ಸರ್ಕಾರ ಆದಷ್ಟು ಬೇಗ ಅವರನ್ನು ಭಾರತಕ್ಕೆ ಸ್ಥಳಾಂತರಿಸುವ ಯೋಜನೆಯನ್ನು ಶೀಘ್ರವಾಗಿ ಮಾಡಬೇಕು. ನಾವು ನಮ್ಮ ಸ್ವಂತ ಜನರನ್ನು ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

    ರಷ್ಯಾ ತನ್ನ ನೆರೆಯ ರಾಷ್ಟ್ರ ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ಬಳಿಕ ಉಕ್ರೇನ್ ತತ್ತರಿಸಿ ಹೋಗಿದ್ದು, ಅಲ್ಲಿನ ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೂ ಉಕ್ರೇನ್‍ನಲ್ಲಿ ವಿದ್ಯಾಭ್ಯಾಸಕ್ಕೆಂದು ತೆರಳಿರುವ ಭಾರತೀಯ ವಿದ್ಯಾರ್ಥಿಗಳನ್ನು ಸರಿಯಾದ ಸಮಯಕ್ಕೆ ಭಾರತಕ್ಕೆ ಕರೆತರಲು ಸಾಧ್ಯವಾಗದ ಹಿನ್ನೆಲೆ ಕೇಂದ್ರ ಸರ್ಕಾರವನ್ನು ರಾಹುಲ್ ಟೀಕಿಸಿದ್ದಾರೆ.  ಇದನ್ನೂ ಓದಿ: ಟೂತ್‌ ಪೇಸ್ಟ್ ಎಂದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿ ಪ್ರಾಣ ಬಿಟ್ಟಳು

    ಉಕ್ರೇನ್‍ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಹಲವಾರು ವೀಡಿಯೋಗಳನ್ನು ಕಾಂಗ್ರೆಸ್ ನಾಯಕರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅವರ ದುಃಸ್ಥಿತಿಯನ್ನು ಎತ್ತಿ ತೋರಿಸಿದ್ದಾರೆ ಮತ್ತು ಶೀಘ್ರದಲ್ಲೇ ಅವರನ್ನು ಭಾರತಕ್ಕೆ ಸ್ಥಳಾಂತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

  • ಒಂದು ಯುದ್ಧದಿಂದ ತಪ್ಪಿಸಿಕೊಂಡು ಉಕ್ರೇನ್‍ಗೆ ಬಂದ್ರೆ ಇನ್ನೊಂದು ಯುದ್ಧ ಪ್ರಾರಂಭವಾಗಿದೆ: ಅಫ್ಘಾನ್ ನಿವಾಸಿ

    ಒಂದು ಯುದ್ಧದಿಂದ ತಪ್ಪಿಸಿಕೊಂಡು ಉಕ್ರೇನ್‍ಗೆ ಬಂದ್ರೆ ಇನ್ನೊಂದು ಯುದ್ಧ ಪ್ರಾರಂಭವಾಗಿದೆ: ಅಫ್ಘಾನ್ ನಿವಾಸಿ

    ಕೀವ್: ಅಫ್ಘಾನಿಸ್ತಾನದ ಯುದ್ಧವನ್ನು ತಪ್ಪಿಸಿಕೊಂಡು ಉಕ್ರೇನ್‍ಗೆ ಬಂದಿದ್ದೆ. ಆದರೆ ಇಲ್ಲಿ ಇನ್ನೊಂದು ಯುದ್ಧ ಪ್ರಾರಂಭವಾಗಿದೆ. ಇದು ನನ್ನ ದುರಾದೃಷ್ಟವಾಗಿದೆ ಎಂದು ಸಂತ್ರಸ್ತ ಅಜ್ಮಲ್ ರಹಮಾನಿ ಹೇಳಿದರು.

    ಪೋಲೆಂಡ್‍ಗೆ ದಾಟಿದ ಸ್ವಲ್ಪ ಸಮಯದ ನಂತರ ಮಾತನಾಡಿದ ಅವರು, ಒಂದು ವರ್ಷದ ಹಿಂದೆ ಅಫ್ಘಾನಿಸ್ತಾನವನ್ನು ತೊರೆದು ಉಕ್ರೇನ್‍ನಲ್ಲಿ ನೆಲೆಸಿದ್ದೆವು. ಇಲ್ಲಿ ಶಾಂತಿಯಿಂದ ನೆಲೆಸಿದ್ದೆವು. ಆದರೆ ಇಲ್ಲೂ ಕಳೆದ 5 ದಿನಗಳಿಂದ ಯುದ್ಧ ಪ್ರಾರಂಭವಾಗಿದ್ದು, ನಾನು ಹಾಗೂ ನನ್ನ ಕುಟುಂಬ ಪಲಾಯನ ಮಾಡಬೇಕಾದ ಪರಿಸ್ಥಿತಿ ಬಂದಿದೆ ಎಂದು ಅಳಲುತೊಡಿಕೊಂಡರು.

    ಅಫ್ಘಾನಿಸ್ತಾನದಲ್ಲಿದ್ದಾಗ ನನಗೆ ಸ್ವಂತ ಮನೆ ಕಾರು ಇತ್ತು. ಕುಟುಂಬದ ಜೊತೆ ಉತ್ತಮವಾಗಿ ಜೀವನ ನಡೆಸುತ್ತಿದ್ದೆ. ಆದರೆ ಅಫ್ಘಾನಿಸ್ತಾನದಲ್ಲಿ ಯುದ್ಧ ಪ್ರಾರಂಭವಾದಾಗ ಎಲ್ಲವೂ ಬದಲಾಗಿದೆ. ನಾನು ಎಲ್ಲವನ್ನೂ ಕಳೆದುಕೊಂಡೆ. ಅಲ್ಲಿಂದ ನಾನು ನನ್ನ ಕುಟುಂಬ ಪಾರಾಗಿ ಉಕ್ರೇನ್‍ಗೆ ಬಂದೆವು. ಆದರೆ ಈಗ ಇಲ್ಲೂ ಅದೇ ಸ್ಥಿತಿ ಬಂದೊದಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಟೂತ್‌ ಪೇಸ್ಟ್ ಎಂದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿ ಪ್ರಾಣ ಬಿಟ್ಟಳು

    ರಷ್ಯಾ ದಾಳಿಗೆ ಉಕ್ರೇನ್ ತತ್ತರಿಸಿದೆ. ಉಕ್ರೇನ್‍ನಿಂದ ಜೀವ ಉಳಿಸಿಕೊಳ್ಳಲು ಜನ ಹರಸಾಹಸ ಪಡುತ್ತಿದ್ದಾರೆ. ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಬಂಕರ್‍ಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಇನ್ನೂ ಕೆಲವು ಜನರು ಬೇರೆ ದೇಶಗಳಿಗೆ ತಲುಪಲು ಪ್ರಯತ್ನಿಸುತ್ತಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ ಜೀವ ಉಳಿಸಿಕೊಂಡು ಬಂದಿರೋ ವಿದ್ಯಾರ್ಥಿಗಳಿಗೆ ಹೊಸ ಟೆನ್ಶನ್!

  • ಉಕ್ರೇನ್‍ಗೆ 65 ಕೋಟಿ ದೇಣಿಗೆ ನೀಡಿದ ಜಪಾನ್ ಉದ್ಯಮಿ

    ಉಕ್ರೇನ್‍ಗೆ 65 ಕೋಟಿ ದೇಣಿಗೆ ನೀಡಿದ ಜಪಾನ್ ಉದ್ಯಮಿ

    ಟೋಕಿಯೋ: 5ನೇ ದಿನವೂ ಸತತವಾಗಿ ರಷ್ಯಾ ಸೈನಿಕರು ಉಕ್ರೇನ್ ಮೇಲೆ ದಾಳಿ ಮುಂದುವರಿಸಿದ್ದಾರೆ. ಸಂಕಷ್ಟದಲ್ಲಿ ಸಿಲುಕಿರವ ಉಕ್ರೇನ್‍ಗೆ (ukraine)  ಜಪಾನ್ ಉದ್ಯಮಿ 65 ಕೋಟಿ ಕೊಡುವುದಾಗಿ ಘೋಷಿಸಿದ್ದಾರೆ.

    ಹಿಂಸಾಚಾರಕ್ಕೆ ಬಲಿಯಾದ ಉಕ್ರೇನ್ ಜನರಿಗೆ ಸಹಾಯ ಮಾಡಲು  1 ಬಿಲಿಯನ್ (8.7 ಮಿಲಿಯನ್ ಅಮೇರಿಕನ್ ಡಾಲರ್) ಹಣವನ್ನು ದೇಣಿಗೆ ನೀಡಿ, ಉಕ್ರೇನ್ ಅಧ್ಯಕ್ಷ ವ್ಲಾಡಿಮಿರ್ ಝೆಲನ್‍ಸ್ಕಿ (Volodymyr Zelenskyy) ಅವರಿಗೆ ಉದ್ಯಮಿ ಹಿರೋಚಿ ಮಿಕಿತಾನಿ  (hiroshi  Mikitani) ಅವರು ಪತ್ರ ಬರೆದಿದ್ದಾರೆ. ಮಿಕಿತಾನಿ ಅವರು 2019ರಲ್ಲಿ ಕೈವ್‍ಗೆ ಭೇಟಿ ನೀಡಿದಾ ಝೆಲೆನ್ಸ್ಕಿಯನ್ನು ಭೇಟಿಯಾಗಿದ್ದರು. ನನ್ನ ಆಲೋಚನೆಗಳು ನಿಮ್ಮೊಂದಿಗೆ ಮತ್ತು ಉಕ್ರೇನ್ ಜನರೊಂದಿಗೆ ಇವೆ ಎಂದು ಮಿಕಿತಾನಿ ತನ್ನ ಪತ್ರದಲ್ಲಿ ತಿಳಿಸಿದ್ದಾರೆ.

    ಪತ್ರದಲ್ಲಿ ಏನಿದೆ?: ನನ್ನೆಲ್ಲಾ ಪ್ರಾರ್ಥನೆಗಳು ಉಕ್ರೇನ್ ದೇಶದ ಜನರ ಕುರಿತಾಗಿ ಇರಲಿದೆ. ಶಾಂತಿಯುತ ದೇಶ ಹಾಗೂ ಪ್ರಜಾಸತ್ತಾತ್ಮಕ ರಾಷ್ಟ್ರವಾಗಿರುವ ಉಕ್ರೇನ್‍ನ್ನು ನ್ಯಾಯಸಮ್ಮತವಲ್ಲದ ಬಲದಿಂದ ತುಳಿಯುವುದು ಪ್ರಜಾಪ್ರಭುತ್ವಕ್ಕೆ ಎದುರಾದ ದೊಡ್ಡ ಸವಾಲೆಂದು ನಾನು ನಂಬುತ್ತೇನೆ. ರಷ್ಯಾ ಮತ್ತು ಉಕ್ರೇನ್ ಈ ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹಸಿಕೊಳ್ಳಬಹುದು. ಉಕ್ರೇನ್ ಜನರು ಆದಷ್ಟು ಬೇಗ ಮತ್ತೆ ಶಾಂತಿಯ ನಿರಾಳತೆಯನ್ನು ಹೊಂದಬಹುದು ಎಂದು ನಾನು ಪ್ರಾಮಾಣಿಕವಾಗಿ ಭಾವಿಸುತ್ತೇನೆ ಎಂದು ಮಿಕಿತಾನಿ ಪತ್ರದಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ ಜೀವ ಉಳಿಸಿಕೊಂಡು ಬಂದಿರೋ ವಿದ್ಯಾರ್ಥಿಗಳಿಗೆ ಹೊಸ ಟೆನ್ಶನ್!

    ಉಕ್ರೇನ್‍ನ ಮೇಲೆ ರಷ್ಯಾ ದೇಶ ಮಾಡಿರುವ ಆಕ್ರಮಣವನ್ನು ವಿಶ್ವದ ಪ್ರಮುಖ ದೇಶಗಳು ಖಂಡಿಸಿವೆ. ಇದರ ಬೆನ್ನಲ್ಲಿಯೇ ರಷ್ಯಾವನ್ನು ವಿಶ್ವದಲ್ಲಿ ಏಕಾಂಗಿಯಾಗಿರುವ ಪ್ರಕ್ರಿಯೆಗಳೂ ನಡೆದಿದ್ದು, ಎಲ್ಲಾ ರೀತಿಯ ಆರ್ಥಿಕ ದಿಗ್ಭಂದನಗಳನ್ನು ರಷ್ಯಾದ ಮೇಲೆ ಹೇರಿದೆ.

  • ಮೋದಿ ಜೀ, ಯೋಗಿ ಜೀ ಯಾರಿದ್ದೀರಿ..? ಪ್ಲೀಸ್ ನಮ್ಮನ್ನು ಕಾಪಾಡಿ- ಯುಪಿ ವಿದ್ಯಾರ್ಥಿನಿ ಅಳಲು

    ಮೋದಿ ಜೀ, ಯೋಗಿ ಜೀ ಯಾರಿದ್ದೀರಿ..? ಪ್ಲೀಸ್ ನಮ್ಮನ್ನು ಕಾಪಾಡಿ- ಯುಪಿ ವಿದ್ಯಾರ್ಥಿನಿ ಅಳಲು

    ಕೀವ್: ರಷ್ಯಾ- ಉಕ್ರೇನ್ ನಡುವಿನ ಸಂಘರ್ಷಕ್ಕೆ ಇಂದು 5ನೇ ದಿನ. ಕಾರ್ಕಿವ್, ಕೀವ್ ನಗರಗಳನ್ನ ವಶಕ್ಕೆ ಪಡೆಯಲು ರಷ್ಯಾ ಸೇನೆ ತೀವ್ರ ಕಸರತ್ತು ನಡೆಸುತ್ತಿದ್ದು, ರಷ್ಯಾ ಸೇನೆಗೆ, ಉಕ್ರೇನ್ ಸೇನೆಯಿಂದ ತೀವ್ರ ಪ್ರತಿರೋಧ ವ್ಯಕ್ತವಾಗುತ್ತಿದೆ. ಆದರೂ ಪಟ್ಟು ಬಿಡದ ಉಕ್ರೇನ್ ಸೇನೆಯು ರಷ್ಯಾ ಸೈನಿಕರನ್ನು ಸದೆಬಡೆಯುತ್ತಿದೆ. ಈ ಮಧ್ಯೆ ವಿದ್ಯಾಭ್ಯಾಸಕ್ಕೆ ತೆರಳಿದ ವಿದ್ಯಾರ್ಥಿಗಳು ತಮ್ಮನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸುವಂತೆ ಭಯ, ಆತಂಕದಿಂದಲೇ ವೀಡಿಯೋ ಮಾಡಿಕೊಂಡು ಅಳಲು ತೋಡಿಕೊಳ್ಳುತ್ತಿದ್ದಾರೆ.

    ಉತ್ತರ ಪ್ರದೇಶ ವಿದ್ಯಾರ್ಥಿನಿ ಗರ್ವಾಮಿಶ್ರ ವೀಡಿಯೋ ಮಾಡಿ ಕಣ್ಣೀರು ಹಾಕಿದ್ದಾಳೆ. ನನಗೆ ಅನ್ನಿಸುತ್ತಿದೆ ನಮಗೆ ಇಲ್ಲಿ ಯಾವುದೇ ಸಹಾಯ ಸಿಗುವುದಿಲ್ಲ. ಭಾರತೀಯ ರಾಯಭಾರಿ ಕಚೇರಿಗೆ ಕರೆ ಮಾಡುತ್ತಿದ್ದೇವೆ. ಆದರೆ ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾಳೆ. ಇದನ್ನೂ ಓದಿ: ಉಕ್ರೇನ್ ಜನರ ಸಹಾಯಕ್ಕೆ ನಿಂತ ಇಸ್ಕಾನ್‍ಗೆ ಭಾರೀ ಮೆಚ್ಚುಗೆ

    ಪ್ರತಿ ದಿನ ರಾತ್ರಿ ಬಂಕರ್ ಒಳಗೆ ನುಗ್ಗಲು ರಷ್ಯಾ ಸೈನಿಕರು ಯತ್ನಿಸುತ್ತಿದ್ದಾರೆ. ಗೇಟ್ ಒಡೆದು ಹಂಗಾಮ ಮಾಡ್ತಿದ್ದಾರೆ. ಇಲ್ಲಿಂದ ರೈಲು, ಕಾರಿನಲ್ಲಿ ಪೊಲೆಂಡ್ ಗಡಿಗೆ ತಲುಪಲು ಯತ್ನಿಸಿದವರ ಮೇಲೆ ಹಲ್ಲೆಗಳಾಗಿದೆ, ನಾಪತ್ತೆಯಾಗಿದ್ದಾರೆ. ರಷ್ಯಾ ಸೈನಿಕರು ಫೈರಿಂಗ್ ಮಾಡಿದ್ದಾರೆ. ಭಾರತೀಯ ವಿದ್ಯಾರ್ಥಿನಿಯರನ್ನು ಅಪಹರಿಸಿದ್ದಾರೆ. ಅವರನ್ನು ಎಲ್ಲಿಗೆ ಕರೆದೊಯ್ದಿದ್ದಾರೆ, ಏನು ಮಾಡಿದ್ದಾರೆ ಎಂಬುದು ತಿಳಿದಿಲ್ಲ. ವಿದ್ಯಾರ್ಥಿಗಳ ಬಗ್ಗೆಯೂ ಮಾಹಿತಿ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾಳೆ. ಇದನ್ನೂ ಓದಿ: ಉಕ್ರೇನ್‍ನಿಂದ ಜೀವ ಉಳಿಸಿಕೊಂಡು ಬಂದಿರೋ ವಿದ್ಯಾರ್ಥಿಗಳಿಗೆ ಹೊಸ ಟೆನ್ಶನ್!

    ರುಮೇನಿಯಾ ಗಡಿಯಲ್ಲೂ ಸೈನಿಕರು ಹಲ್ಲೆ ಮಾಡುತ್ತಿದ್ದಾರೆ. ಮೋದಿ ಜೀ, ಯೋಗಿ ಜೀ ಯಾರಿದ್ದೀರಿ. ನಮ್ಮನ್ನು ಕಾಪಾಡಿ. ನಮನ್ನು ರಕ್ಷಣೆ ಮಾಡುತ್ತಾರೆಂಬ ಭರವಸೆ ಇಲ್ಲ. ನಮಗಿಲ್ಲಿ ಏನಾಗುತ್ತೋ ಗೊತ್ತಿಲ್ಲ. ಯಾರಿದ್ದೀರಿ..? ಎಲ್ಲಿದ್ದೀರಿ..? ದಯಮಾಡಿ ನಮ್ಮನ್ನು ಕಾಪಾಡಿ. ಭಾರತೀಯ ಸೇನೆಯನ್ನು ಕಳುಹಿಸಿ ನಮ್ಮನ್ನು ರಕ್ಷಿಸಿ. ನಾವು ಬದುಕುತ್ತಿವೋ, ಸಾಯುತ್ತಿವೋ ಗೊತ್ತಿಲ್ಲ. ದಯಮಾಡಿ.. ದಯಮಾಡಿ ನಮ್ಮನ್ನು ರಕ್ಷಿಸಿ. ಭಾರತೀಯ ರಾಯಭಾರಿ ನಮ್ಮ ಕರೆಗಳನ್ನು ಸ್ವೀಕರಿಸುತ್ತಿಲ್ಲ. ಜೈಹಿಂದ್, ಜೈ ಭಾರತ್ ಎಂದು ಹೇಳುತ್ತಾ ಕಣ್ಣೀರು ಸುರಿಸಿ ರಕ್ಷಿಸುವಂತೆ ಪರಿಪರಿಯಾಗಿ ಬೇಡಿಕೊಂಡಿದ್ದಾಳೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

  • ಗನ್ ಹಿಡಿದು ದೇಶ ರಕ್ಷಣೆಗೆ ನಿಂತ ಮಿಸ್ ಉಕ್ರೇನ್

    ಗನ್ ಹಿಡಿದು ದೇಶ ರಕ್ಷಣೆಗೆ ನಿಂತ ಮಿಸ್ ಉಕ್ರೇನ್

    ಕೀವ್: ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸಿ ಹೋಗುತ್ತಿದೆ. ರಷ್ಯದ ಅಟ್ಟಹಾಸ 5ನೇ ದಿನವೂ ಮುಂದುವರಿದಿದೆ. ಉಕ್ರೇಮ್ ಅಧ್ಯಕ್ಷ ವ್ಲಾಡಿಮಿರ್ ಝೆಲನ್‍ಸ್ಕಿ ಅವರು ದೇಶ ರಕ್ಷಣೆಯಲ್ಲಿ ಪಾಲ್ಗೊಳ್ಳಿ ಎನ್ನುವ ಕರೆ ನೀಡಿದ ಹಿನ್ನೆಲೆಯಲ್ಲಿ ಮಿಸ್ ಉಕ್ರೇನ್ ದೇಶ ರಕ್ಷಣೆಗೆ ಗನ್ ಹಿಡಿದು ನಿಂತಿದ್ದಾರೆ.

    ಮಿಸ್ ಉಕ್ರೇನ್ ಆಗಿರುವ ಅನಾಸ್ತೀನಾ ಲೀನಾ(Anastasiia Lenna)ಅವರು 2015ರಲ್ಲಿ ಮಿಸ್ ಗ್ರ್ಯಾಂಡ್ ಇನ್‍ಟರ್‌ನ್ಯಾಷನಲ್‌ (Miss Grand International) ಬ್ಯೂಟಿ ಸ್ಪರ್ಧೆಯಲ್ಲಿ ಗೆದ್ದಿದ್ದರು. ಇದೀಗ ದೇಶ ರಕ್ಷಣೆ ಮಾಡಲು ಉಕ್ರೇನ್ ಸೈನ್ಯವನ್ನು ಸೇರಿಕೊಂಡಿದ್ದಾರೆ. ಕೈಯಲ್ಲಿ ಗನ್ ಹಿಡಿದು, ಸಮವಸ್ತ್ರವನ್ನು ಧರಿಸಿ ನಿಂತಿರುವ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಲೀನಾ ಅವರು ಸ್ಲಾವಿಟಿಕ್‌ ಯೂನಿವರ್ಸಿಟಿ ಕೀವ್‌ನಲ್ಲಿ  (Slavistik University in Kyiv) ವಿದ್ಯಾಭ್ಯಾಸವನ್ನು ಮಾಡಿದ್ದಾರೆ.

    ಅನಾಸ್ತೀನಾ ಲೀನಾ ಉಕ್ರೇನ್ ಸೇನೆ ಸೇರುತ್ತಿದ್ದಂತೆ ಉಕ್ರೇನ್ ಮೇಯರ್ ವಿಟಾಲಿ ಕ್ಲಿಟ್ಸ್ಚ್ಕೋ (Vitali Klitschko) ಕೂಡಾ ಸೇನೆಗೆ ಸೇರ್ಪಡೆಗೊಂಡಿದ್ದಾರೆ. ಹೆಚ್ಚಿನವರು ದೇಶ ಸೇವೆ ಮಾಡಲು ಸಿದ್ಧರಿದ್ದಾರೆ. ಆದರೆ ಹೆಚ್ಚಿನ ಶಸ್ತ್ರಾಸ್ತ್ರಗಳನ್ನು ಕೇಳುತ್ತಿದ್ದಾರೆ. ಹೆಚ್ಚಿನವರು ಮಿಲಿಟರಿ ಹಿನ್ನೆಲೆಯುಳ್ಳವರಾಗಿದ್ದಾರೆ. ಎಲ್ಲಾ ಮಹಿಳೆಯರು ಹಾಗೂ ಪುರುಷರು ದೇಶ ರಕ್ಷಣೆಗೆ ಗನ್ ಹಿಡಿದು ಸಿದ್ಧರಾಗಬೇಕು ಎಂದು ವಿಟಾಲಿ ಹೇಳಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ ಜೀವ ಉಳಿಸಿಕೊಂಡು ಬಂದಿರೋ ವಿದ್ಯಾರ್ಥಿಗಳಿಗೆ ಹೊಸ ಟೆನ್ಶನ್!

    ಉಕ್ರೇನ್ ಉಳಿವಿಗಾಗಿ ಮಹಿಳೆಯರು ಅಖಾಡಕ್ಕಿಳಿದಿದ್ದಾರೆ. ಉಕ್ರೇನ್ ಉಪಾಧ್ಯಕ್ಷ ಸ್ಟೀಫನ್ ಕುಬಿವ್ ಪತ್ನಿ ಸೇರಿದಂತೆ 36 ಸಾವಿರಕ್ಕೂ ಹೆಚ್ಚು ಮಹಿಳಾ ಯೋಧರು ಇದ್ದಾರೆ. ಇದನ್ನೂ ಓದಿ: ತಲೆಕೆಳಗಾದ ರಷ್ಯಾದ ಲೆಕ್ಕಾಚಾರ – ರಾಜಧಾನಿ ಕಿವ್‌ ಇನ್ನೂ ಕೈವಶವಾಗಿಲ್ಲ ಯಾಕೆ?

  • ಉಕ್ರೇನ್ ಜನರ ಸಹಾಯಕ್ಕೆ ನಿಂತ ಇಸ್ಕಾನ್‍ಗೆ ಭಾರೀ ಮೆಚ್ಚುಗೆ

    ಉಕ್ರೇನ್ ಜನರ ಸಹಾಯಕ್ಕೆ ನಿಂತ ಇಸ್ಕಾನ್‍ಗೆ ಭಾರೀ ಮೆಚ್ಚುಗೆ

    ಕೀವ್: ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸಿದೆ. ಈ ಮಧ್ಯೆ ಇಸ್ಕಾನ್ ದೇವಸ್ಥಾನವು ಅಗ್ಯವಿರುವ ಜನರಿಗೆ ದೇವಾಲಯದ ದ್ವಾರಗಳನ್ನು ತೆರೆದಿದೆ. ಉಕ್ರೇನ್‍ನಾದ್ಯಂತ ಇರುವ ಇಸ್ಕಾನ್ ದೇವಾಲಯಗಳು ಉಕ್ರೇನ್ ಜನರಿಗೆ ಸೇವೆ ಸಲ್ಲಿಸುತ್ತಿದೆ. ಅವರಿಗೆ ಆಹಾರ ಪೂರೈಕೆ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಸದ್ಯ ಇದರ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗುತ್ತಿದೆ.

    ಈ ಬಗ್ಗೆ ಕೊಲ್ಕತ್ತಾದ ಇಸ್ಕಾನ್ ಉಪಾಧ್ಯಕ್ಷ ರಾಧಾರಾಮನ್ ದಾಸ್ ಮಾತನಾಡಿ, ಇಸ್ಕಾನ್‍ನ ಭಕ್ತರು ಹಾಗೂ ದೇವಾಲಯ ಸಮಿತಿಯೂ ಸಂಕಷ್ಟದಲ್ಲಿರುವವರಿಗೆ ಸೇವೆ ಸಲ್ಲಿಸಲು ಬದ್ಧವಾಗಿದೆ. ಕಷ್ಟದಲ್ಲಿರುವವರ ಸೇವೆಗಾಗಿ ನಮ್ಮ ದೇವಾಲಯದ ಬಾಗಿಲು ತೆರೆದಿದೆ ಎಂದು ತಿಳಿಸಿದರು.

    ಉಕ್ರೇನ್‍ನಲ್ಲಿ ಇಸ್ಕಾನ್ 54 ಕ್ಕೂ ಅಧಿಕ ದೇವಾಲಯಗಳನ್ನು ಹೊಂದಿದೆ. ಕಷ್ಟದಲ್ಲಿರುವವರಿಗೆ ಯಾವುದೇ ರೀತಿಯಲ್ಲಿಯಾದರೂ ಸೇವೆ ಸಲ್ಲಿಸಲು ನಾವು ಪ್ರಯತ್ನಿಸುತ್ತೇವೆ ಎಂದರು. ಇದನ್ನೂ ಓದಿ: ಉಕ್ರೇನ್‍ನಿಂದ ಜೀವ ಉಳಿಸಿಕೊಂಡು ಬಂದಿರೋ ವಿದ್ಯಾರ್ಥಿಗಳಿಗೆ ಹೊಸ ಟೆನ್ಶನ್!

    ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರಿಂದ ಹಲವಾರು ಲೈಕ್ಸ್ ಹಾಗೂ ಕಾಮೆಂಟ್‍ಗಳ ಸುರಿಮಳೆಯೇ ಹರಿದು ಬರುತ್ತಿದೆ. ಒಟ್ಟಾರೆ ಜಾಗತಿಕ ಬಿಕ್ಕಟ್ಟಿನ ಸಮಯದಲ್ಲಿ ಜನರ ಜಾತಿ, ಧರ್ಮ ಮತ್ತು ಸಾಮಾಜಿಕ ಸ್ಥಾನಮಾನವನ್ನು ಲೆಕ್ಕಿಸದೇ ಇಸ್ಕಾನ್ ಆಹಾರವನ್ನು ಹಂಚಿರುವುದು ಮಾನವೀಯತೆಯನ್ನು ಎತ್ತಿ ತೋರಿಸುವಂತಿದೆ ಎಂದರೆ ತಪ್ಪಾಗಲಾರದು. ಇದನ್ನೂ ಓದಿ: ತಲೆಕೆಳಗಾದ ರಷ್ಯಾದ ಲೆಕ್ಕಾಚಾರ – ರಾಜಧಾನಿ ಕಿವ್‌ ಇನ್ನೂ ಕೈವಶವಾಗಿಲ್ಲ ಯಾಕೆ?

  • ಉಕ್ರೇನ್‍ನಿಂದ ಜೀವ ಉಳಿಸಿಕೊಂಡು ಬಂದಿರೋ ವಿದ್ಯಾರ್ಥಿಗಳಿಗೆ ಹೊಸ ಟೆನ್ಶನ್!

    ಉಕ್ರೇನ್‍ನಿಂದ ಜೀವ ಉಳಿಸಿಕೊಂಡು ಬಂದಿರೋ ವಿದ್ಯಾರ್ಥಿಗಳಿಗೆ ಹೊಸ ಟೆನ್ಶನ್!

    ಕೀವ್/ನವದೆಹಲಿ: ಉಕ್ರೇನ್‍ನಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳಿಗೆ ಹೊಸ ಟೆನ್ಶನ್ ಶುರುವಾಗಿದೆ. ಮುಂದಿನ ವಿದ್ಯಾಭ್ಯಾಸದ ಬಗ್ಗೆ ಇದೀಗ ವಿದ್ಯಾರ್ಥಿಗಳು ತಲೆಕೆಡಿಸಿಕೊಂಡಿದ್ದಾರೆ. ಈ ಮಕ್ಕಳಿಗೆ ಸದ್ಯಕ್ಕೆ ಭಾರತದಲ್ಲಿ ಶಿಕ್ಷಣ ಮುಂದುವರಿಸಲು ಅವಕಾಶ ಸಿಗಲ್ಲ. ಹೀಗಾಗಿ ಭಾರತದ ವಿದ್ಯಾರ್ಥಿಗಳ ಭವಿಷ್ಯ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ.

    ಭಾರತದ ಸದ್ಯದ ನಿಯಮದಲ್ಲಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಇಲ್ಲ. ಕೇಂದ್ರ ಸರ್ಕಾರಕ್ಕೆ ಮಾತ್ರ ಈ ಅವಕಾಶ ಕೊಡಲು ಅಧಿಕಾರ ಇದೆಯೇ ಹೊರತು, ಏಕಾಏಕಿ ಅನುಮತಿ ಕೊಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಇದಕ್ಕಾಗಿ ಕೇಂದ್ರ ಸರ್ಕಾರ ವಿಶೇಷ ಕಾನೂನು ಜಾರಿ ಮಾಡಬೇಕು. ಇದನ್ನೂ ಓದಿ: ತಲೆಕೆಳಗಾದ ರಷ್ಯಾದ ಲೆಕ್ಕಾಚಾರ – ರಾಜಧಾನಿ ಕಿವ್‌ ಇನ್ನೂ ಕೈವಶವಾಗಿಲ್ಲ ಯಾಕೆ?

    ಭಾರತದಲ್ಲಿ ವ್ಯಾಸಂಗ ಮುಂದುವರಿಸೋ ವಿದ್ಯಾರ್ಥಿಗಳಿಗೆ ವಿಶೇಷ ಕೋಟಾದಡಿ ಸೀಟು ನೀಡಬೇಕಾಗುತ್ತೆ. ಈ ಪ್ರಕ್ರಿಯೆ ಸಂಪೂರ್ಣ ಕೇಂದ್ರ ಸರ್ಕಾರವೇ ನಡೆಸಿ ರಾಜ್ಯಗಳಿಗೆ ಸೂಚನೆ ಕೊಡಬೇಕು. ವೈದ್ಯಕೀಯ ಬಗ್ಗೆ ಉಕ್ರೇನ್ ಶೈಕ್ಷಣಿಕ ವ್ಯವಸ್ಥೆ ಮತ್ತು ಭಾರತ ವ್ಯವಸ್ಥೆ ವಿಭಿನ್ನವಾಗಿರುತ್ತದೆ. ಇದನ್ನೂ ಓದಿ: ಉಕ್ರೇನ್ ನೆರವಿಗೆನಿಂತ ಎಲೋನ್ ಮಸ್ಕ್ – ಸ್ಟಾರ್ ಲಿಂಕ್ ಸ್ಯಾಟಲೈಟ್ ಮೂಲಕ ಬ್ರಾಡ್‍ಬ್ಯಾಂಡ್ ಸೇವೆ

    ಭಾರತಕ್ಕೆ ಬಂದಿರೋ ವಿದ್ಯಾರ್ಥಿಗಳು ವಿವಿಧ ವರ್ಷದ ಕೋರ್ಸ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಹೀಗಾಗಿ ಇವರಿಗಾಗಿ ಕೇಂದ್ರ ಸರ್ಕಾರ ನಿಯಮ ರೂಪಿಸಿ ಅವಕಾಶ ಮಾಡಿಕೊಡಬಹುದು. ಯುದ್ಧ ಮುಗಿದ ಬಳಿಕ ಉಕ್ರೇನ್‍ನಲ್ಲಿಯೇ ಶಿಕ್ಷಣ ಮುಂದುವರಿಕೆ ಬಗ್ಗೆ ರಾಜತಾಂತ್ರಿಕ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ಇದನ್ನೂ ಓದಿ: ಉಕ್ರೇನ್ ದಾಳಿಗೆ 4,300 ರಷ್ಯಾ ಸೈನಿಕರ ಸಾವು – ಸುಕೋಯ್ ಫೈಟರ್ ಜೆಟ್ ಧ್ವಂಸ

    https://www.youtube.com/watch?v=riX3zrQuZLg

  • ತಲೆಕೆಳಗಾದ ರಷ್ಯಾದ ಲೆಕ್ಕಾಚಾರ – ರಾಜಧಾನಿ ಕಿವ್‌ ಇನ್ನೂ ಕೈವಶವಾಗಿಲ್ಲ ಯಾಕೆ?

    ತಲೆಕೆಳಗಾದ ರಷ್ಯಾದ ಲೆಕ್ಕಾಚಾರ – ರಾಜಧಾನಿ ಕಿವ್‌ ಇನ್ನೂ ಕೈವಶವಾಗಿಲ್ಲ ಯಾಕೆ?

    ಕೀವ್‌: ಯುದ್ಧ ಘೋಷಣೆಯಾದ ಬಳಿಕ ರಷ್ಯಾ ಸುಲಭವಾಗಿ ಉಕ್ರೇನ್‌ ದೇಶವನ್ನು ಗೆಲ್ಲಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಈಗ ಉಕ್ರೇನ್ ಪ್ರಭಲವಾಗಿ ಹೋರಾಟ ಮಾಡುತ್ತಿದ್ದು ರಷ್ಯಾದ ಲೆಕ್ಕಾಚಾರ ತಲೆಕೆಳಗಾಗಿದೆ ಎಂಬ ವಿಶ್ಲೇಷಣೆ ಕೇಳಿಬಂದಿದೆ.

    ಹೌದು. ಆರಂಭದಲ್ಲಿ ಉಕ್ರೇನ್‌ ವಾಯುನೆಲೆಯನ್ನು ಧ್ವಂಸಗೊಳಿಸಿದ್ದ ರಷ್ಯಾ ನಂತರ ಮಿಲಿಟರಿ ಕಾರ್ಯಾಚರಣೆ ಆರಂಭಿಸಿತ್ತು. ಸುಲಭವಾಗಿ ಉಕ್ರೇನ್‌ ಗಡಿಯನ್ನು ನುಗ್ಗಿದ್ದ ಟ್ಯಾಂಕರ್‌ಗಳು ಹಲವು ನಗರಗಳನ್ನು ವಶ ಪಡಿಸಿಕೊಂಡಿತ್ತು. ಆದರೆ ರಾಜಧಾನಿ ಕಿವ್‌ ನಗರವನ್ನು ವಶಪಡಿಸಿಕೊಳ್ಳಲು ಹರಸಾಹಸ ಮಾಡುತ್ತಿದೆ.

    ರಷ್ಯಾ ಸೇನೆ ಉಕ್ರೇನ್ ನಾಗರಿಕದಿಂದ ತೀವ್ರ ಪ್ರತಿರೋಧ ಎದುರಿಸುತ್ತಿದೆ. ಉಕ್ರೇನ್ ಅಧ್ಯಕ್ಷರೇ ಮುಂದೆ ನಿಂತು 30ಸಾವಿರಕ್ಕೂ ಹೆಚ್ಚು ರೈಫಲ್, ಮಷಿನ್ ಗನ್, ಪಿಸ್ತೂಲ್‍ಗಳನ್ನು ಸಾರ್ವಜನಿಕರಿಗೆ ಹಂಚಿಬಿಟ್ಟಿದ್ದಾರೆ. ಜನಾಕ್ರೋಶ ಮತ್ತಷ್ಟು ಹೆಚ್ಚಿದರೇ ರಷ್ಯಾ ಸೇನೆಗೆ ಉಕ್ರೇನ್ ವಶ ಕಷ್ಟಸಾಧ್ಯ. ಎರಡೂ ಕಡೆಯೂ ಭಾರೀ ಪ್ರಾಣ ನಷ್ಟ ಉಂಟಾಗುವ ಆತಂಕ ಎದುರಾಗಿದೆ. ಇದನ್ನೂ ಓದಿ: ಮಾಲೀಕ ಯುದ್ಧಕ್ಕೆ ಹೋಗಿದ್ದಾರೆ, ಅವರ ಮಕ್ಕಳನ್ನು ಬಿಟ್ಟು ನಾನು ಬರಲ್ಲ ಎಂದ ವಿದ್ಯಾರ್ಥಿನಿ!

    ಜನರಿಂದ ಭಾರೀ ಪ್ರಮಾಣದಲ್ಲಿ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ರಷ್ಯಾ ಈಗ ಜನ ವಸತಿಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದೆ. ತನ್ನ ಸೈನಿಕರತ್ತ ಪೆಟ್ರೋಲ್‌ ಬಾಂಬ್‌ ಎಸೆಯುತ್ತಿರುವ ಹಿನ್ನೆಲೆಯಲ್ಲಿ ರಷ್ಯಾ ತೈಲ ಸಂಗ್ರಹಗಳ ಮೇಲೆ ದಾಳಿ ನಡೆಸಿ ಸ್ಟೋಟಗೊಳಿಸುತ್ತಿದೆ. ಇದರಿಂದಾಗಿ ಸಾಮಾಗ್ರಿ ಸಾಗಾಟ, ನೀರಿಗೆ ಸಮಸ್ಯೆಯಾಗಿದೆ.

    ರಷ್ಯಾ ಬೆಂಬಲಿತ ಬಂಡುಕೋರರ ವಶದಿಂದ 2014ರಲ್ಲಿ ಡಾನ್ ಬಾಸ್ ಪ್ರಾಂತ್ಯದ ಇಲೋವೈಸ್ಕ್ ನಗರ ವಶಕ್ಕೆ ತೆಗೆದುಕೊಳ್ಳಲು ಉಕ್ರೇನ್‍ಗೆ 50 ದಿನ ಹಿಡಿದಿತ್ತು. ಅತ್ತ, ಇರಾಕ್‍ನ ಮೊಸುಲ್ ನಗರ ವಶಕ್ಕೆ ತೆಗೆದುಕೊಳ್ಳಲು ಅಮೆರಿಕಾಗೆ ಬರೋಬ್ಬರಿ ನಾಲ್ಕು ತಿಂಗಳು ಬೇಕಾಗಿತ್ತು. ಇದನ್ನೂ ಓದಿ: Russia-Ukraine Crisis: ರಷ್ಯಾಗೆ ಮತ್ತೊಂದು ಶಾಕ್ – SWIFTನಿಂದ ರಷ್ಯಾವನ್ನು ದೂರವಿಡಲು ತೀರ್ಮಾನ

    ಸೋವಿಯತ್ ಪಡೆಗಳನ್ನು ಆಫ್ಘಾನಿಸ್ತಾನದಿಂದ ಓಡಿಸಲು ಅಮೆರಿಕಾ ಅಲ್ಲಿನ ಉಗ್ರರಿಗೆ ದೊಡ್ಡಮಟ್ಟದಲ್ಲಿ ಸಣ್ಣ ಆಯುಧಗಳನ್ನೇ ನೀಡಿತ್ತು. ಉಕ್ರೇನ್‍ನಲ್ಲಿಯೂ ಇದೇ ವ್ಯೂಹ ರಚನೆ ಆಗಿದೆ ಜನರೇ ಪ್ರತಿದಾಳಿ ನಡೆಸಿ ರಷ್ಯಾ ಸೇನೆಯನ್ನು ಹಿಮ್ಮೆಟ್ಟಿಸುತ್ತಿದ್ದಾರೆ.