Tag: Ukraine

  • ಉಕ್ರೇನ್ ದೇಶದಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಸಂಪರ್ಕಕ್ಕೆ ಸಿಗುತ್ತಿಲ್ಲ: ಶಶಿಕಲಾ ಜೊಲ್ಲೆ

    ಉಕ್ರೇನ್ ದೇಶದಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಸಂಪರ್ಕಕ್ಕೆ ಸಿಗುತ್ತಿಲ್ಲ: ಶಶಿಕಲಾ ಜೊಲ್ಲೆ

    ಚಿಕ್ಕೋಡಿ: ರಾಜ್ಯ ಅಷ್ಟೇ ಅಲ್ಲದೇ ಬೆಳಗಾವಿ ಜಿಲ್ಲೆಯಿಂದಲೂ ಉಕ್ರೇನ್‍ನಲ್ಲಿ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

    ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದ ವಿದ್ಯಾರ್ಥಿ ಕೂಡ ಉಕ್ರೇನ್‍ನಲ್ಲಿ ಸಿಲುಕಿಕೊಂಡಿದ್ದಾರೆ. ಪಾಲಕರ ಜೊತೆ ಸಂಪರ್ಕದಲ್ಲಿದ್ದರು. ಆದರೆ ಶನಿವಾರದಿಂದ ಸಂಪರ್ಕಕ್ಕೆ ಬಂದಿಲ್ಲ ಎಂಬ ಪಾಲಕರಿಂದ ಮಾಹಿತಿ ಬಂದಿದೆ. ಸಿಎಂ ಅವರಿಗೂ ಈ ಬಗ್ಗೆ ಮಾಹಿತಿ ಕೊಟ್ಟಿದ್ದೇನೆ. ಮಕ್ಕಳೆಲ್ಲಿದ್ದಾರೆ ಎಂಬ ಮಾಹಿತಿ ಪಡೆಯುವ ಕಾರ್ಯ ನಡೆಯುತ್ತಿದೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಜೊತೆ ಚರ್ಚೆ ನಡೆಸಿದೆ ಎಂದಿದ್ದಾರೆ. ಇದನ್ನೂ ಓದಿ: ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆಗೆ ಡ್ರೆಸ್ ಕೋಡ್ ಕಡ್ಡಾಯ!

    Bidar

    ವಿದೇಶಾಂಗ ಇಲಾಖೆ ಬಸವರಾಜ್ ಬೊಮ್ಮಾಯಿಯವರು ಕರ್ನಾಟಕದ ಎಲ್ಲ ವಿದ್ಯಾರ್ಥಿಗಳನ್ನು ಕರೆ ತರಲು ಪ್ರಯತ್ನ ಪಡುತ್ತಿದ್ದಾರೆ. ಕೆಲವೊಂದು ಟೆಕ್ನಿಕಲ್ ಸಮಸ್ಯೆ ಇದೆ. ನಾನೂ ಡಿಸಿ ಅವರ ಜೊತೆ ಮಾತನಾಡಿದ್ದೇನೆ. ಯಾವುದೇ ಟೆಕ್ನಿಕಲ್ ಸಮಸ್ಯೆ ಇದ್ದರೂ ವಿದೇಶಾಂಗ ಸಚಿವರ ಹತ್ತಿರ ಮಾತನಾಡಿ ಆದಷ್ಟು ಬೇಗ ಮಕ್ಕಳನ್ನು ದೇಶಕ್ಕೆ ತರಲು ಕಾರ್ಯರೂಪದಲ್ಲಿದ್ದೇವೆ. ಈ ಹಿಂದೆ ಕೂಡ ತಾಲಿಬಾನ್‍ನಲ್ಲೂ ಇದೇ ರೀತಿಯಾದಾಗ ದೇಶಕ್ಕೆ ವಾಪಸ್ ತರುವ ಕೆಲಸ ಆಗಿದೆ. ಸಿಎಂ ಅವರು ಪ್ರಧಾನಿಗಳು ಹಾಗೂ ವಿದೇಶಾಂಗ ಇಲಾಖೆ ಯಾರಿಗೂ ತೊಂದರೆಯಾಗದಂತೆ ಸುರಕ್ಷಿತವಾಗಿ ಕರೆ ತರಲಾಯಿತು. ಮಕ್ಕಳೆಲ್ಲಿದ್ದರೂ ಅವರನ್ನು ಕರೆ ತರುವ ವ್ಯವಸ್ಥೆ ಮಾಡುತ್ತೇವೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಶುಭ ಭಾನುವಾರ, ಶುಭ ಗಳಿಗೆಯಲ್ಲಿ ಇಂದು ಪಾದಯಾತ್ರೆಗೆ ಚಾಲನೆ: ಡಿಕೆಶಿ

  • ರಷ್ಯಾ ಸಶಸ್ತ್ರ ಪಡೆಗಳ ನಿಷ್ಕಲ್ಮಶ ಸೇವೆಗೆ ಪುಟಿನ್‌ ಧನ್ಯವಾದ

    ರಷ್ಯಾ ಸಶಸ್ತ್ರ ಪಡೆಗಳ ನಿಷ್ಕಲ್ಮಶ ಸೇವೆಗೆ ಪುಟಿನ್‌ ಧನ್ಯವಾದ

    ಮಾಸ್ಕೋ: ರಷ್ಯಾ ಒಕ್ಕೂಟದ ವಿಶೇಷ ಸಶಸ್ತ್ರ ಪಡೆಗಳ ಕಾರ್ಯಾಚರಣೆಗೆ ಮತ್ತು ಅವರ ನಿಷ್ಕಲ್ಮಶ ಸೇವೆಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಧನ್ಯವಾದ ಅರ್ಪಿಸಿದ್ದಾರೆ.

    ಮಾಸ್ಕೋ ಕ್ರೆಮ್ಲಿನ್‍ನಲ್ಲಿ ಮಾತನಾಡಿದ ಅವರು, ನಾನು ವಿಶೇಷ ಕಾರ್ಯಾಚರಣೆ ಪಡೆಗಳ ಕಮಾಂಡ್, ಸಿಬ್ಬಂದಿಗೆ, ರಷ್ಯಾದ ಜನತೆ ಮತ್ತು ನಮ್ಮ ಮಹಾನ್ ಮಾತೃಭೂಮಿಗೆ ಅವರು ಮಾಡಿದ ನಿಷ್ಕಲ್ಮಶ ಸೇವೆಗಾಗಿ ಧನ್ಯವಾದ ಹೇಳಲು ಬಯಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ರಾಷ್ಟ್ರಗೀತೆ ಹಾಡಿದ ಉಕ್ರೇನ್ ಮಹಿಳೆಯ ವೀಡಿಯೋ ವೈರಲ್

    ಫೆಬ್ರವರಿ 24 ರಂದು ರಷ್ಯಾ ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿತು. ಅಂದಿನಿಂದ ರಷ್ಯಾದ ಪಡೆಗಳು ಉಕ್ರೇನ್‍ನಾದ್ಯಂತ ಮಿಲಿಟರಿ ನೆಲೆಗಳು ಮತ್ತು ಇತರ ಸ್ಥಳಗಳ ಮೇಲೆ ದಾಳಿ ನಡೆಸಲು ಪ್ರಾರಂಭಿಸಿದೆ. ಇದೀಗ ರಷ್ಯಾದ ಪಡೆಗಳು ಉಕ್ರೇನ್ ರಾಜಧಾನಿ ಕೀವ್ ಒಳ ನುಗ್ಗಲು ದಾರಿ ಹುಡುಕುತ್ತಿದೆ. ಇದನ್ನೂ ಓದಿ: ಉಕ್ರೇನ್‍ನ ಅನಾಥಾಶ್ರಮಗಳ ಮೇಲೆ ರಷ್ಯಾ ದಾಳಿ- ಬಾಲಕಿ ಸೇರಿ 6 ಮಂದಿ ಸಾವು

    ಇದೀಗ ರಷ್ಯಾದ ಪಡೆ ಉಕ್ರೇನ್ ದೇಶದ ಎರಡನೇ ಅತಿದೊಡ್ಡ ನಗರವಾದ ಖಾರ್ಕಿವ್‍ನಲ್ಲಿ ಗ್ಯಾಸ್ ಪೈಪ್‍ಲೈನ್ ಸ್ಫೋಟಗೊಳಿಸಿದ್ದಾರೆ. ರಷ್ಯಾದ ಕ್ಷಿಪಣಿಗಳು ಕೈವ್‍ನ ನೈಋತ್ಯದ ಉಕ್ರೇನಿಯನ್ ಪಟ್ಟಣವಾದ ವಾಸಿಲ್ಕಿವ್‍ಗೆ ಅಪ್ಪಳಿಸಿ ತೈಲ ಟರ್ಮಿನಲ್ ಸುಟ್ಟು ಹಾಕಲಾಗಿದೆ.

    ಭಾನುವಾರ ರಷ್ಯಾ ಪಡೆಗಳು ದಕ್ಷಿಣ ಉಕ್ರೇನಿಯನ್ ನಗರಗಳಾದ ಖೆರ್ಸನ್ ಮತ್ತು ಬರ್ಡಿಯಾನ್ಕ್ಸ್‍ವನ್ನು ಸಂಪೂರ್ಣವಾಗಿ ನಿರ್ಬಂಧಿಸಿವೆ. ಹೆನಿಚೆಸ್ಕ್ ಪಟ್ಟಣ ಮತ್ತು ಖೆರ್ಸನ್ ಬಳಿಯ ವಿಮಾನ ನಿಲ್ದಾಣವನ್ನು ವಶಪಡಿಸಿಕೊಂಡಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿದೆ.

  • ಕನ್ನಡಿಗರ ರಕ್ಷಣೆಯ ಸಂಪೂರ್ಣ ವೆಚ್ಚ ಸರ್ಕಾರ ಭರಿಸಲಿದೆ: ಬೊಮ್ಮಾಯಿ

    ಕನ್ನಡಿಗರ ರಕ್ಷಣೆಯ ಸಂಪೂರ್ಣ ವೆಚ್ಚ ಸರ್ಕಾರ ಭರಿಸಲಿದೆ: ಬೊಮ್ಮಾಯಿ

    ಬೆಂಗಳೂರು: ಉಕ್ರೇನ್‍ನಲ್ಲಿರೋ ಕನ್ನಡಿಗರು ವಾಪಸ್ ಕರೆ ತರುವ ಸಂಪೂರ್ಣ ವೆಚ್ಚ ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಬೆಂಗಳೂರಿನಲ್ಲಿ ಕನ್ನಡಿಗರ ರಕ್ಷಣೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಉಕ್ರೇನ್‍ನಿಂದ ಮೊದಲ ತಂಡ ಭಾರತಕ್ಕೆ ಆಗಮಿಸಿದೆ. ವೆಸ್ಟರ್ನ್ ಭಾಗದಲ್ಲಿ ಇದ್ದ ವಿದ್ಯಾರ್ಥಿಗಳು ಈಗ ಆಗಮಿಸಿದ್ದಾರೆ. ದೆಹಲಿ ಹೈ ಕಮಿಷನರ್ ಗೆ ಸೂಚನೆ ಕೊಟ್ಟಿದ್ದೇನೆ. ಮುಂಬೈಯಿಂದಲೂ ಕರೆ ತರಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ:  ಶುಭ ಭಾನುವಾರ, ಶುಭ ಗಳಿಗೆಯಲ್ಲಿ ಇಂದು ಪಾದಯಾತ್ರೆಗೆ ಚಾಲನೆ: ಡಿಕೆಶಿ

    ರಾಷ್ಟ್ರೀಯ ವಿಪತ್ತು ನಿರ್ವಹಣೆ ಅಧಿಕಾರಿಗಳು ದೆಹಲಿಯಲ್ಲಿ ಇದ್ದಾರೆ. ಅವರನ್ನು ಕರ್ನಾಟಕಕ್ಕೆ ತರುವ ಕೆಲಸ ಆಗುತ್ತದೆ. ಇದಕ್ಕೆ ತಗಲುವ ಸಂಪೂರ್ಣ ವೆಚ್ಚ ಸರ್ಕಾರವೇ ಭರಿಸಲಿದೆ ಎಂದು ಭರವಸೆ ಕೊಟ್ಟರು. ಕೇಂದ್ರದ ವಿದೇಶಾಂಗ ಸಚಿವರ ಜೊತೆ ಮಾತುಕತೆ ನಡೆಸಿದ್ದೇನೆ. ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಎರಡು ಹೆಲ್ಪ್ ಲೈನ್ ಈಗಾಗಲೇ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರ ಜೊತೆ ನಾನು ಮಾತಾಡಿದ್ದೇನೆ. ಎಲ್ಲ ಮಾಹಿತಿಗಳನ್ನು ಪಡೆದುಕೊಂಡಿದ್ದೇನೆ ಎಂದು ವಿವರಿಸಿದರು.

    ಕರಕೈ ಎನ್ನುವ ಪ್ರದೇಶದಲ್ಲಿ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ. ಅದು ನಾರ್ತ್ ಇಸ್ಟ್ ಪ್ರದೇಶದಲ್ಲಿ ಇದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಯುದ್ಧ ನಡೆಯುತ್ತಿದೆ. ಹೀಗಾಗಿ ಮೆಟ್ರೋ, ಬಂಕರ್ ಗಳಲ್ಲಿ ವಿದ್ಯಾರ್ಥಿಗಳು ಉಳಿದುಕೊಂಡಿದ್ದಾರೆ. ಸಣ್ಣ ಪ್ರದೇಶದಲ್ಲಿ ದೊಡ್ಡ ಸಂಖ್ಯೆಯ ಜನರು ಒಂದೇ ಕಡೆ ಸೇರಿಕೊಂಡಿದ್ದಾರೆ. ಇದು ಆತಂಕ ಉಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆಗೆ ಡ್ರೆಸ್ ಕೋಡ್ ಕಡ್ಡಾಯ!

    ಮೊದಲು ಅವರಿಗೆ ಊಟ, ನೀರು ನೀಡಲು ವಿದೇಶಾಂಗ ಸಚಿವರ ಜೊತೆ ಮಾತಾಡಿದ್ದೇನೆ. ಯುದ್ಧದ ವಾತಾವರಣ ಕಡಿಮೆ ಆದ ಮೇಲೆ ಅವರನ್ನು ಕರೆಸುವ ಕೆಲಸ ಆಗುತ್ತದೆ ಎಂದು ಭರವಸೆ ಕೊಟ್ಟರು.

  • ಉಕ್ರೇನ್‍ನಲ್ಲಿ ಶಿಕ್ಷಣ ಚೆನ್ನಾಗಿದೆ, ವಾಪಸ್ ಹೋಗುತ್ತೇವೆ; ವಿದ್ಯಾರ್ಥಿನಿ

    ಉಕ್ರೇನ್‍ನಲ್ಲಿ ಶಿಕ್ಷಣ ಚೆನ್ನಾಗಿದೆ, ವಾಪಸ್ ಹೋಗುತ್ತೇವೆ; ವಿದ್ಯಾರ್ಥಿನಿ

    ಬೆಂಗಳೂರು: ರಷ್ಯಾ ಮಾಡಿದ ದಾಳಿಗೆ ಸಿಲುಕಿರುವ ಉಕ್ರೇನ್ ಜನರ ಪರಿಸ್ಥಿತಿ ದಿನದಿಂದದಿನಕ್ಕೆ ಹದಗೆಡುತ್ತಿದೆ. ಯುದ್ಧ ಪೀಡಿತ ಪ್ರದೇಶ ಉಕ್ರೇನ್‍ನಲ್ಲಿ ಸಿಲಿಕಿಕೊಂಡಿರುವ ಕರ್ನಾಟಕದ ವಿದ್ಯಾರ್ಥಿಗಳನ್ನು ಈಗಾಗಲೇ ಮೂರು ಬ್ಯಾಚ್‍ನಲ್ಲಿ ಏರ್‌ಲಿಫ್ಟ್‌  ಮಾಡಲಾಗಿದೆ.

    ಏರ್‍ಲಿಫ್ಟ್ ನಿಂದ ಬೆಂಗಳುರಿಗೆ ಬಂದಿಳಿದ ವಿದ್ಯಾರ್ಥಿನಿ ಹಬೀಬಾ ಮಾಧ್ಯಮದವರೊಂದಿಗೆ ಮಾತನಾಡಿ, ನನಗೆ ತುಂಬಾ ಸಂತೋಷವಾಗುತ್ತಿದೆ. ನಾನು ಮೂಲತಃ ಚಿತ್ರದುರ್ಗದಳಾಗಿದ್ದೇನೆ. ನಾನು ಸೆಕೆಂಡಿಯರ್ ಓದುತ್ತಿದ್ದೇನೆ. ನಮಗೆ ಮೊನ್ನೆವರೆಗೂ ತರಗತಿ ನಡೆದಿದೆ. ನಮ್ಮ ಜೀವನದ ಪ್ರಶ್ನೆ ಇದಾಗಿದೆ, ನಾವು ಮತ್ತೇ ಹೋಗುತ್ತೇವೆ. ಉಕ್ರೇನ್ ಎಜುಕೇಶನ್ ಸಿಸ್ಟಮ್ ತುಂಬಾ ಚೆನ್ನಾಗಿದೆ. ನಾನು ತುಂಬಾ ಕಲಿತಿದ್ದೇನೆ ಎಂದಿದ್ದಾರೆ.

    ಅಪ್ಪ ಅಮ್ಮನ ಮೂಖ ನೋಡಲು ಕಾಯುತ್ತಿದ್ದೇನು. ನಾವು ಇರುವ ಸ್ಥಳಕ್ಕೆ ಹತ್ತಿರ ಇರುವ ಪ್ರದೇಶಗಳನ್ನು ರಷ್ಯಾ ಆಕ್ರಮಣ ಮಾಡಿಕೊಂಡಾಗ ನಾವು ಭಯಭೀತರಾಗಿದ್ದೇವು. ಭಾರತ, ಕರ್ನಾಟಕ ಸರ್ಕಾರ ನಮಗೆ ಸಹಾಯ ಮಾಡಿದ್ದಾರೆ. ಉಕ್ರೇನ್‍ನಲ್ಲಿ ಟೆಂಪ್ರೆಚರ್ ಕೂಡಾ ಕಡಿಮೆ ಇದೆ. ಊಟ, ನೀರು ಇಲ್ಲದೆ ಸಂಕಷ್ಟ ಪಡುಂತಾಗಿದೆ. ಇದನ್ನೂ ಓದಿ: ಕರ್ಕಿವ್‍ನಲ್ಲಿ ಗ್ಯಾಸ್ ಪೈಪ್‍ಲೈನ್ ಸ್ಫೋಟಿಸಿದ ರಷ್ಯಾ ಸೇನೆ..!

    ಯುದ್ಧ ಆಗಿರುವ ದಿನವೇ ನಾವು ಆಹಾರವನ್ನು ತೆಗೆದುಕೊಂಡು ಇಟ್ಟಿದ್ದೇವು. ಉಕ್ರೇನ್ ಸಿಟಿಜನ್ ಮಹಿಳೆಯರು ಮತ್ತು ಮಕ್ಕಳು ಸುರಕ್ಷಿತವಾಗಿರಿ, ಬಾರ್ಡ್ ಕಡೆ ಹೋಗಿ. ಆದರೆ ಪುರುಷರು ಬನ್ನಿ ಯುದ್ಧದಲ್ಲಿ ಕೈ ಜೋಡಿಸಿ ಎಂದು ಸೂಚನೆ ನೀಡಲಾಗಿದೆ. ಕೀವ್, ಖಾರ್ಕೀವ್‍ನಲ್ಲಿರುವ ಜನರು ತುಂಬಾ ಭಯಬೀತರಾಗಿದ್ದಾರೆ. ಅಲ್ಲಿರುವ ನಮ್ಮ ಸ್ನೇಹಿತರನ್ನು ಸಂಪರ್ಕಿಸಲು ನಮಗೆ ಸಾಧ್ಯವಾಗಲಿಲ್ಲ. ಅಲ್ಲಿ ನೆಟ್‍ವರ್ಕ್‍ಗಳನ್ನು ಕಡಿತ ಮಾಡಲಾಗಿದೆ. ಅಲ್ಲಿ ಇನ್ನು ಹಲವು ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ಅವರು ಮರಳಿ ತವರಿಗೆ ಬರವಂತಾಗಲಿ ಎಂದಿದ್ದಾರೆ.

  • ಉಕ್ರೇನ್‍ನ ಅನಾಥಾಶ್ರಮಗಳ ಮೇಲೆ ರಷ್ಯಾ ದಾಳಿ- ಬಾಲಕಿ ಸೇರಿ 6 ಮಂದಿ ಸಾವು

    ಉಕ್ರೇನ್‍ನ ಅನಾಥಾಶ್ರಮಗಳ ಮೇಲೆ ರಷ್ಯಾ ದಾಳಿ- ಬಾಲಕಿ ಸೇರಿ 6 ಮಂದಿ ಸಾವು

    ಕೀವ್: ಉಕ್ರೇನ್‍ನ ಶಿಶುಪಾಲನಾ ಕೇಂದ್ರ ಸೇರಿದಂತೆ ಅನಾಥಾಶ್ರಮಗಳ ಮೇಲೆ ರಷ್ಯಾ ದಾಳಿ ನಡೆಸಿದ್ದು, 7 ವರ್ಷದ ಬಾಲಕಿ ಸೇರಿದಂತೆ 6 ಮಂದಿ ಸಾವನ್ನಪ್ಪಿದ್ದಾರೆ.

    ಉಕ್ರೇನ್‍ನ ಈಶಾನ್ಯ ನಗರದ ಓಖ್ಟಿರ್ಕಾದಲ್ಲಿ ರಷ್ಯಾದ ದಾಳಿ ನಡೆಸಿದ ಪರಿಣಾಮವಾಗಿ ಏಳು ವರ್ಷದ ಬಾಲಕಿ ಸೇರಿದಂತೆ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ ಶಿಶುವಿಹಾರ ಶಾಲೆ ಮತ್ತು ಅನಾಥಾಶ್ರಮದಲ್ಲಿ ಘಟನೆ ನಡೆದಿದೆ ಎಂದು ಗವರ್ನರ್ ಡಿಮಿಟ್ರಿ ಝಿವಿಟ್ಸ್ಕಿ ತಿಳಿಸಿದರು.

    ಉಕ್ರೇನ್, ರಷ್ಯಾ ಯುದ್ಧ 4ನೇ ದಿನಕ್ಕೆ ಕಾಲಿಟ್ಟಿದ್ದು, ದಿನೇ ದಿನೇ ಉಗ್ರಸ್ವರೂಪ ಪಡೆದುಕೊಳ್ಳುತ್ತಿದೆ. ಉಕ್ರೇನ್‍ನಲ್ಲಿ ಅಪಾರ ಸಾವು, ನೋವುಗಳು ಆಗುತ್ತಿವೆ. ಈಗ ಶಿಶು ಪಾಲನಾಕೇಂದ್ರ, ಅನಾಥಾಶ್ರಮಗಳ ಮೇಲೆ ರಷ್ಯಾ ಬಾಂಬ್ ದಾಳಿ ನಡೆಸಿದ್ದಾರೆ. ಇದರಲ್ಲಿ ರಷ್ಯಾ ಬಾಂಬ್ ದಾಳಿಗೆ 7 ವರ್ಷದ ಬಾಲಕಿ ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಅಂತಾರಾಷ್ಟ್ರೀಯ ತನಿಖೆಗೆ ಉಕ್ರೇನ್ ಒತ್ತಾಯಿಸುತ್ತಿದೆ. ಇದನ್ನೂ ಓದಿ: ಯುದ್ಧಪೀಡಿತ ಉಕ್ರೇನ್‍ನಿಂದ ಗ್ರೌಂಡ್ ರಿಪೋರ್ಟ್ ಮಾಡಿದ ವಿದ್ಯಾರ್ಥಿಗಳು

    ನಿನ್ನೆ ಬಂಕರ್‌ಗಳಲ್ಲಿ ರಷ್ಯಾ ಬಾಂಬ್ ದಾಳಿಯನ್ನು ನಡೆಸಿತ್ತು. ಇದೀಗ ಶಿಶುಪಾಲನಾ ಕೇಂದ್ರದಲ್ಲಿ ದಾಳಿ ನಡೆಸಿದೆ. ಈ ಮೊದಲು ಕೈವಾದ ಜೂಲಿಯಾನಿ ವಿಮಾನ ನಿಲ್ದಾಣದ ಪಕ್ಕ ರಷ್ಯಾ ಕ್ಷಿಪಣಿ ದಾಳಿ ನಡೆಸಿತ್ತು. ಉಕ್ರೇನ್‍ನ ಹಲವು ಪ್ರದೇಶಗಳನ್ನು ರಷ್ಯಾ ಮಿಲಿಟರಿ ಪಡೆ ಸುತ್ತುವರಿದಿದ್ದು, ಅಲ್ಲಲ್ಲಿ ಬಾಂಬ್‍ಗಳ ದಾಳಿ ನಡೆಯುತ್ತಿದೆ. ಉಕ್ರೇನ್‍ನಲ್ಲಿ ಈವರೆಗೆ 300ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಕರ್ಕಿವ್‍ನಲ್ಲಿ ಗ್ಯಾಸ್ ಪೈಪ್‍ಲೈನ್ ಸ್ಫೋಟಿಸಿದ ರಷ್ಯಾ ಸೇನೆ..!

  • ಯುದ್ಧಪೀಡಿತ ಉಕ್ರೇನ್‍ನಿಂದ ಗ್ರೌಂಡ್ ರಿಪೋರ್ಟ್ ಮಾಡಿದ ವಿದ್ಯಾರ್ಥಿಗಳು

    ಯುದ್ಧಪೀಡಿತ ಉಕ್ರೇನ್‍ನಿಂದ ಗ್ರೌಂಡ್ ರಿಪೋರ್ಟ್ ಮಾಡಿದ ವಿದ್ಯಾರ್ಥಿಗಳು

    ಕೀವ್: ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ಕರ್ನಾಟಕದ ವಿದ್ಯಾರ್ಥಿಗಳು, ಮೆಟ್ರೋ ಸುರಂಗದಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಯುದ್ಧಪೀಡಿತ ಉಕ್ರೇನ್‍ನಿಂದ ವಿದ್ಯಾರ್ಥಿಗಳೇ ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. ಖಾರ್ಕೀವ್‍ನಲ್ಲಿ ಸಿಲುಕಿಕೊಂಡಿರುವ ಕನ್ನಡಿಗ ವಿದ್ಯಾರ್ಥಿಗಳು ತಮ್ಮ ನೋವು ತೋಡಿಕೊಂಡಿದ್ದಾರೆ.

    ರಕ್ಷಣೆ ಇದ್ದರೂ ಕೂಡಾ ನಾವು ಭಯಬೀತರಾಗಿದ್ದೇವೆ. ನಮಗೆ ಇಲ್ಲಿ ಆಹಾರ, ನೀರು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಏನು ಮಾಡುತ್ತಿದೆ ಅಂತ ನಮಗಾರಿಗೂ ಗೊತ್ತಾಗುತ್ತಿಲ್ಲ. ಮೆಟ್ರೋ ಅಂಡರ್ ಗ್ರೌಂಡ್ ಬಂಕರ್‌ನಲ್ಲಿ ಊಟ, ನೀರು, ಆಹಾರ ಸಮಸ್ಯೆಯ ಜೊತೆಗೆ ಟೆಂಪ್ರೇಚರ್ ಸಮಸ್ಯೆ ಆಗುತ್ತಿದೆ. ಮೈನಸ್2 ಡಿಗ್ರಿ ಇದೆ ಎಂದಿದ್ದಾರೆ.

    ಸ್ಥಳಾಂತರ ಮಾಡುತ್ತಿದ್ದಾರೆ ಅಂತ ಗೊತ್ತಾಯ್ತು. ಆದರೆ ಪಶ್ಚಿಮ ಭಾಗದಿಂದ ಮಾಡುತ್ತಿದ್ದಾರೆ. ಯುದ್ಧ ನಡಿತಿರೋದು ಪೂರ್ವ ಭಾಗದಲ್ಲಿ. ನಮಗೆ ಸಮೀಪ ಎಂದರೆ ರಷ್ಯಾ. ನಮ್ಮನ್ನು ಇಲ್ಲಿಂದ ಹೇಗೆ ಕರೆದುಕೊಂಡು ಹೋಗುತ್ತಾರೆ ಎನ್ನುವ ಯಾವುದೇ ಮಾಹಿತಿ ಇಲ್ಲ. ಕೀವ್, ಖಾರ್ಕೀವ್ ಭಾಗದಲ್ಲಿ ಇರುವ ನೂರಾರು ವಿದ್ಯಾರ್ಥಿಗಳು. ಕೀವ್ ಮತ್ತು ಖಾರ್ಕೀವ್‌ನಿಂದ  ಪಶ್ಚಿಮ ಭಾಗದ ಸ್ಥಳಾಂತರಕ್ಕೆ ಹೋಗಲು. 1500 ಕಿಮೀ ಅಂತರ ಇದೆ. ವಾಹನ ವ್ಯವಸ್ಥೆ ಇಲ್ಲ. ನಡೆದುಕೊಂಡು ಹೋಗಲು ಆಗಲ್ಲ. ಹೀಗಾಗಿ ನಾವು ಅಲ್ಲಿಗೆ ಹೋಗಲು ಆಗಲ್ಲ. ಅವರೇ (ಭಾರತ ಸರ್ಕಾರ) ಬಂದು ಕರೆದುಕೊಂಡು ಹೋಗಬೇಕು ಎಂದಿದ್ದಾರೆ. ಇದನ್ನೂ ಓದಿ: ಕರ್ಕಿವ್‍ನಲ್ಲಿ ಗ್ಯಾಸ್ ಪೈಪ್‍ಲೈನ್ ಸ್ಫೋಟಿಸಿದ ರಷ್ಯಾ ಸೇನೆ..!

    ತುಂಬಾ ತೊಂದರೆಯಲ್ಲಿ ಇರುವ ಪೂರ್ವಭಾಗದ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ಸರ್ಕಾರ ಮೊದಲು ಆದ್ಯತೆ ಕೊಡಬೇಕು. ಮೂರು ದಿನಗಳಿಂದ ನಿದ್ದೆ ಮಾಡಲು ಆಗಿಲ್ಲ. ಬರೀ ಬಾಂಬ್ ಸದ್ದು ಕೇಳುತ್ತಿದೆ. ಮೆಟ್ರೋ ಬಿಟ್ಟು ಹೊರಗೆ ಹೋಗಲು ಆಗುತ್ತಿಲ್ಲ. ಮೆಟ್ರೋದಲ್ಲಿ ಯಾವ ಕ್ಷಣದಲ್ಲಿ ಏನು ಆಗುತ್ತೋ ತಿಳಿತಿಲ್ಲ. ಮಹಿಳೆಯರಿಗೂ ರಕ್ಷಣೆ ಇಲ್ಲವಾಗಿದೆ. ಮೆಟ್ರೋದಲ್ಲಿ ಬಹಳ ಕಠಿಣ ಪರಿಸ್ಥಿತಿ ಇದೆ ಎಂದಿದ್ದಾರೆ. ಇದನ್ನೂ ಓದಿ: ಅಪ್ಪ-ಅಮ್ಮ ನಿಮ್ಮ ಆರೋಗ್ಯದ ಬಗ್ಗೆ ಗಮನಕೊಡಿ, ನನ್ನ ಬಗ್ಗೆ ಯೋಚಿಸ್ಬೇಡಿ- ಯೋಧನ ಭಾವುಕ ವೀಡಿಯೋ ವೈರಲ್

    ಸರ್ಕಾರ ಮತ್ತು ಮಾಧ್ಯಮಗಳ ಎದುರು ನಮ್ಮ ಕಷ್ಟ ಹೇಳಿಕೊಳ್ತಿದ್ದೇವೆ. ಮೂರು ದಿನಗಳ ವರೆಗೂ ಪೂರ್ವ ಭಾಗದಲ್ಲಿ ಕಠಿಣ ಪರಿಸ್ಥಿತಿಯಲ್ಲಿ ಇರುವ ನಮಗೆ ಯಾವುದೇ ಸಹಾಯ ಆಗಿಲ್ಲ. ಕಠಿಣ ಸ್ಥಿತಿಯಲ್ಲಿ ಇರುವ ಕೀವ್, ಖಾರ್ಕೀವ್ ಪ್ರದೇಶದ ವಿದ್ಯಾರ್ಥಿಗಳನ್ನ ಸ್ಥಳಾಂತರ ಮಾಡಲು ಸರ್ಕಾರಕ್ಕೆ ಆಗ್ರಹಿಸಿರುವ ವಿದ್ಯಾರ್ಥಿಗಳು ಹೇಳಿದ್ದಾರೆ.

  • ಉಕ್ರೇನ್‍ನಲ್ಲಿ ಹಸಿದ ವಿದ್ಯಾರ್ಥಿಗಳಿಗೆ ಆಹಾರ ನೀಡಿದ ಸಿಖ್ ವ್ಯಕ್ತಿ – ಹೃದಯಸ್ಪರ್ಶಿ ವೀಡಿಯೋ ವೈರಲ್

    ಉಕ್ರೇನ್‍ನಲ್ಲಿ ಹಸಿದ ವಿದ್ಯಾರ್ಥಿಗಳಿಗೆ ಆಹಾರ ನೀಡಿದ ಸಿಖ್ ವ್ಯಕ್ತಿ – ಹೃದಯಸ್ಪರ್ಶಿ ವೀಡಿಯೋ ವೈರಲ್

    ಕೀವ್: ರಷ್ಯಾ ಆಕ್ರಮಣದಿಂದ ಉಕ್ರೇನ್ ತತ್ತರಿಸಿ ಹೋಗಿದೆ. ಈ ಮಧ್ಯೆ ಉಕ್ರೇನ್‍ನಲ್ಲಿ ಸಿಲುಕಿರುವ ಅನೇಕ ವಿದ್ಯಾರ್ಥಿಗಳಿ ಸಿಖ್ ಧರ್ಮದ ವ್ಯಕ್ತಿಯೊಬ್ಬ ರೈಲಿನಲ್ಲಿ ಆಹಾರ ನೀಡುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಉಕ್ರೇನ್‍ನ ಶಿಕ್ಷಣ ಸಚಿವಾಲಯದ ಪ್ರಕಾರ ದೇಶದಲ್ಲಿ ಸುಮಾರು 80,000 ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮೊರಾಕೊ, ಅಜೆರ್ಬೈಜಾನ್, ತುರ್ಕಮೆನಿಸ್ತಾನ್ ಮತ್ತು ನೈಜೀರಿಯಾ ಅದರಲ್ಲಿಯೂ ಹೆಚ್ಚಾಗಿ ಭಾರತೀಯರು ಉಕ್ರೇನ್‍ನಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಸದ್ಯ ರಷ್ಯಾದ ಆಕ್ರಮಣದಿಂದ ಉಕ್ರೇನ್‍ನಲ್ಲಿ ಕಠೋರ ಪರಿಸ್ಥಿತಿಯಲ್ಲಿದ್ದು, ಅನೇಕವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ ಮತ್ತು ಅವರ ಸುರಕ್ಷತೆಯ ಬಗ್ಗೆ ಭಯಪಡುವಂತೆ ಆಗಿದೆ. ಇದನ್ನೂ ಓದಿ: ಅಲಿಯಾಗೆ ನನ್ನ ಮೇಲೆ ಕೈ ಮಾಡಲು 20 ಟೇಕ್ ತೆಗೆದುಕೊಂಡಿದ್ರು: ‘ಗಂಗೂಬಾಯಿ’ನಲ್ಲಿ ಶಂತನು

    ಕಳೆದ ಎರಡು ದಿನಗಳಿಂದ ವಿದ್ಯಾರ್ಥಿಗಳು ಅವರ ಕುಟುಂಬಗಳಿಗೆ ಸೋಶಿಯಲ್ ಮೀಡಿಯಾದಲ್ಲಿ ಉಕ್ರೇನ್‍ನಲ್ಲಿ ತಾವು ಇರುವ ಲೋಕೆಶನ್‍ಗಳನ್ನು ಶೇರ್ ಮಾಡಿದ್ದಾರೆ. ತಮ್ಮನ್ನು ಆದಷ್ಟು ಬೇಗ ತಮ್ಮ ದೇಶಗಳಿಗೆ ಸ್ಥಳಾಂತರಗೊಳಿಸುವಂತೆ ಆಯಾ ರಾಷ್ಟ್ರೀಯ ಸರ್ಕಾರಗಳನ್ನು ವಿನಂತಿಸಿಕೊಳ್ಳುತ್ತಿದ್ದಾರೆ.

    ಈ ನಡುವೆ ಉಕ್ರೇನ್‍ನ ಪೋಲೆಂಡ್‍ನ ಗಡಿಗೆ ಪ್ರಯಾಣಿಸುವ ವೇಳೆ ರೈಲಿನಲ್ಲಿ ಹಸಿದ ವಿದ್ಯಾರ್ಥಿಗಳಿಗೆ ಆಹಾರವನ್ನು ನೀಡುತ್ತಿರುವ ಹೃದಯ ಸ್ಪರ್ಶಿ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋವನ್ನು ಟ್ವಿಟರ್‍ನಲ್ಲಿ ರವೀಂದರ್ ಸಿಂಗ್ (ಖಾಲ್ಸಾ ಎಐಡಿ ಸ್ಥಾಪಕ-ಸಿಇಒ) ಹಂಚಿಕೊಂಡಿದ್ದು, ಚಲಿಸುವ ರೈಲಿನಲ್ಲಿ ವಿದ್ಯಾರ್ಥಿಗಳಿಗೆ ಆಹಾರ ವಿತರಿಸುತ್ತಿರುವುದನ್ನು ಮತ್ತು ತಿನ್ನುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ:  ಸೋದರಸಂಬಂಧಿ ಮದುವೆಯಲ್ಲಿ ಯಶ್ ಫ್ಯಾಮಿಲಿ ಫುಲ್ ಮಿಂಚಿಂಗ್!

    ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರಿಂದ ಹಲವಾರು ಲೈಕ್ಸ್ ಹಾಗೂ ಕಾಮೆಂಟ್‍ಗಳ ಸುರಿಮಳೆಯೇ ಹರಿದು ಬರುತ್ತಿದೆ. ಒಟ್ಟಾರೆ ಜಾಗತಿಕ ಬಿಕ್ಕಟ್ಟಿನ ಸಮಯದಲ್ಲಿ ಜನರ ಜಾತಿ, ಧರ್ಮ ಮತ್ತು ಸಾಮಾಜಿಕ ಸ್ಥಾನಮಾನವನ್ನು ಲೆಕ್ಕಿಸದೇ ಸಿಖ್ ಧರ್ಮದ ವ್ಯಕ್ತಿ ಆಹಾರವನ್ನು ಹಂಚಿರುವುದು ಮಾನವೀಯತೆಯನ್ನು ಎತ್ತಿ ತೋರಿಸುವಂತಿದೆ ಎಂದರೆ ತಪ್ಪಾಗಲಾರದು.

  • ಕರ್ಕಿವ್‍ನಲ್ಲಿ ಗ್ಯಾಸ್ ಪೈಪ್‍ಲೈನ್ ಸ್ಫೋಟಿಸಿದ ರಷ್ಯಾ ಸೇನೆ..!

    ಕರ್ಕಿವ್‍ನಲ್ಲಿ ಗ್ಯಾಸ್ ಪೈಪ್‍ಲೈನ್ ಸ್ಫೋಟಿಸಿದ ರಷ್ಯಾ ಸೇನೆ..!

    ಕೀವ್: ಉಕ್ರೇನ್ ಮೇಲೆ ರಷ್ಯಾ ಸೈನಿಕರ ಆಕ್ರಮಣ ದಾಳಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಉಕ್ರೇನ್‍ನ ಎರಡನೇ ಅತಿ ದೊಡ್ಡ ನಗರ ಕರ್ಕಿವ್‍ನಲ್ಲಿರುವ ಗ್ಯಾಸ್ ಪೈಪ್‍ಲೈನ್ ಅನ್ನು ರಷ್ಯಾ ಸೇನೆ ಸ್ಫೋಟಿಸಿದೆ.

    ಈ ವಿಚಾರವನ್ನು ಉಕ್ರೇನ್ ಅಧ್ಯಕ್ಷರ ಕಚೇರಿ ಅಧಿಕೃತವಾಗಿ ತಿಳಿಸಿದೆ. ಸ್ಫೋಟದ ಪರಿಣಾಮ ಆಯಿಲ್ ಟ್ಯಾಂಕ್ ಸ್ಫೋಟಗೊಂಡು ಆಗಸದಲ್ಲಿ ದೊಡ್ಡ ಅಣಬೆಯಾಕಾರದ ಮೋಡ ಆವರಿಸಿಕೊಂಡಿದೆ. ಇದು ಪರಿಸರಕ್ಕೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟು ಮಾಡಲಿದೆ ಎಂದು ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ.

    https://twitter.com/WW32022/status/1497721984339349512

    ನಗರದಲ್ಲಿ ವಾಸಿಸುತ್ತಿರುವ ನಿವಾಸಿಗಳು ಮನೆ ಕಿಟಕಿಗಳನ್ನು ಬಟ್ಟೆಯಲ್ಲಿ ಮುಚ್ಚಬೇಕು. ಜೊತೆಗೆ ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ದ್ರವ ಪದಾರ್ಥಗಳನ್ನು ಹೆಚ್ಚು ಸೇವಿಸುವಂತೆ ಉಕ್ರೇನ್ ಸರ್ಕಾರ ಸೂಚಿಸಿದೆ. ಇದನ್ನೂ ಓದಿ: ಅಪ್ಪ-ಅಮ್ಮ ನಿಮ್ಮ ಆರೋಗ್ಯದ ಬಗ್ಗೆ ಗಮನಕೊಡಿ, ನನ್ನ ಬಗ್ಗೆ ಯೋಚಿಸ್ಬೇಡಿ- ಯೋಧನ ಭಾವುಕ ವೀಡಿಯೋ ವೈರಲ್

    https://twitter.com/WW32022/status/1497758655407665165

    ಕರ್ಕಿವ್ ನಗರದಲ್ಲಿ ಉಕ್ರೇನ್ ಹಾಗೂ ರಷ್ಯಾ ಸೇನೆಗಳ ನಡುವೆ ಭಾರೀ ಯುದ್ಧ ನಡೆಯುತ್ತಿದೆ ಎಂದು ತಿಳಿದುಬಂದಿದೆ. ರಷ್ಯಾ ಗಡಿಯಿಂದ ಈ ನಗರ 40 ಕಿಲೋ ಮೀಟರ್ ದೂರದಲ್ಲಿದ್ದು, ಇಲ್ಲಿ ಸುಮಾರು 15 ಲಕ್ಷ ಜನರು ವಾಸಿಸುತ್ತಿದ್ದಾರೆ. ಇದನ್ನೂ ಓದಿ:‌ ಪ್ರಧಾನಿಗೆ ಕರೆ ಮಾಡಿ ರಾಜಕೀಯ ಬೆಂಬಲ ಕೋರಿದ ಉಕ್ರೇನ್ ಅಧ್ಯಕ್ಷ

  • ಅಪ್ಪ-ಅಮ್ಮ ನಿಮ್ಮ ಆರೋಗ್ಯದ ಬಗ್ಗೆ ಗಮನಕೊಡಿ, ನನ್ನ ಬಗ್ಗೆ ಯೋಚಿಸ್ಬೇಡಿ- ಯೋಧನ ಭಾವುಕ ವೀಡಿಯೋ ವೈರಲ್

    ಅಪ್ಪ-ಅಮ್ಮ ನಿಮ್ಮ ಆರೋಗ್ಯದ ಬಗ್ಗೆ ಗಮನಕೊಡಿ, ನನ್ನ ಬಗ್ಗೆ ಯೋಚಿಸ್ಬೇಡಿ- ಯೋಧನ ಭಾವುಕ ವೀಡಿಯೋ ವೈರಲ್

    ಕೀವ್: ರಷ್ಯಾ ರಣೋತ್ಸಾಹ 4ನೇ ದಿನಕ್ಕೆ ಕಾಲಿಟ್ಟಿದ್ದು, ರಷ್ಯಾ ದಾಳಿಗೆ ಪುಟ್ಟ ದೇಶವಾಗಿರುವ ಉಕ್ರೇನ್ ಪತರಗುಟ್ಟಿದೆ. ಇದರ ಮಧ್ಯೆ ಉಕ್ರೇನ್ ಸೈನಿಕರೊಬ್ಬರು ತಮ್ಮ ಪೋಷಕರನ್ನು ನೆನಪು ಮಾಡಿಕೊಂಡು ಭಾವುಕರಾದ ವೀಡಿಯೋ ಇದೀಗ ವೈರಲ್ ಆಗುತ್ತಿದೆ.

    ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದ್ದು, ಈಗಾಗಲೇ ಉಭಯ ದೇಶಗಳ ಹಲವಾರು ಸೈನಿಕರು ಹತರಾಗಿದ್ದಾರೆ. ಉಕ್ರೇನ್ ರಾಜಧಾನಿ ಕೀವ್‍ನ ಫೋಟೋಬ್ರಿಡ್ಜ್ ನಲ್ಲಿ ಏಕಾಂಗಿಯಾಗಿ ಗಡಿ ರಕ್ಷಣೆ ಮಾಡುತ್ತಿರುವ 21 ವರ್ಷದ ಸೆರ್ಗಿ ಪೆಟ್ರೋಶೆಂಕೊ ಯೋಧ ಇದೀಗ ತನ್ನ ಪೋಷಕರನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ:‌ ಪ್ರಧಾನಿಗೆ ಕರೆ ಮಾಡಿ ರಾಜಕೀಯ ಬೆಂಬಲ ಕೋರಿದ ಉಕ್ರೇನ್ ಅಧ್ಯಕ್ಷ

    ಯೋಧನ ಪೋಷಕರು ವಾಸವಾಗಿರುವ ಸ್ಥಳದಲ್ಲಿ ರಷ್ಯಾ ಯೋಧರು ದಾಳಿ ನಡೆಸಿದ್ದಾರೆ. ಈ ಮಾಹಿತಿ ಲಭ್ಯವಾಗುತ್ತಿದ್ದಂತೆ ಯೋಧ ತಮ್ಮ ಹೆತ್ತವರನ್ನು ನೆನೆದು ಗದ್ಗದಿತರಾಗಿದ್ದಾರೆ. ನಾನು ಜೀವಂತವಾಗಿ ಉಳಿಯುತ್ತೇನೋ ಇಲ್ಲವೋ ಗೋತ್ತಿಲ್ಲ. ಆದರೆ ನಿಮ್ಮ ಆರೋಗ್ಯದ ಬಗ್ಗೆ ಗಮನ ನೀಡಿ, ನನ್ನ ಬಗ್ಗೆ ಯಾವುದೇ ಕಾರಣಕ್ಕೂ ಯೋಚನೆ ಮಾಡಬೇಡಿ ಎಂದು ಹೇಳಿ ಕಣ್ಣೀರು ಹಾಕಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ:‌ ಶೀಘ್ರವೇ ಉಕ್ರೇನ್‍ಗೆ ಟ್ಯಾಂಕ್ ವಿರೋಧಿ ಶಸ್ತ್ರಾಸ್ತ್ರಗಳನ್ನು ಕಳುಹಿಸಲಿರುವ ಜರ್ಮನಿ

    https://twitter.com/Yashika1Keswani/status/1497555000314445828

    ಇತ್ತ ಉಕ್ರೇನ್‍ನ ರಸ್ತೆಗಳಲ್ಲಿ ಬಾಂಬ್ ದಾಳಿ, ಅಪಾರ್ಟ್‍ಮೆಂಟ್‍ಗಳ ಮೇಲೆ ರಷ್ಯಾ ಸೈನಿಕರು ಮಿಸೈಲ್ ದಾಳಿ ಮಾಡುತ್ತಿದ್ದಾರೆ. ಬಂಕರ್‍ಗಳ ಹೊರಗೆ ಬಾಂಬ್ ಸದ್ದು ಕೇಳಿಸುತ್ತಿದ್ದು, ಜನ ಜೀವ ಭಯದಲ್ಲಿದ್ದಾರೆ. ಉಕ್ರೇನ್‍ನ ಕಾರ್ಕೀವ್ ಹಾಗೂ ಕೀವ್‍ನಲ್ಲಿ ರಾತ್ರಿಯೂ ಗುಂಡಿನ ಮೊರೆತ ಕೇಳಿಸಿತ್ತು. ಕಗ್ಗತ್ತಲ ರಾತ್ರಿಯಲ್ಲಿ ಆಗಸದಲ್ಲಿ ಬಾಂಬ್, ಮಿಸೈಲ್‍ಗಳ ಆರ್ಭಟ ಇತ್ತು. ಉಕ್ರೇನ್ ರಕ್ಷಣೆ ಮಾಡಲು ಸಾವಿರಾರು ಯೋಧರು ರಷ್ಯಾ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಇದನ್ನೂ ಓದಿ:‌ ಅಪ್ಪ-ಅಮ್ಮ ಬಳಿ ಸುಳ್ಳು ಹೇಳಿದ್ದೆವು- ಉಕ್ರೇನ್ ಅನುಭವ ಹಂಚಿಕೊಂಡ ವಿದ್ಯಾರ್ಥಿನಿ

  • ಪ್ರಧಾನಿಗೆ ಕರೆ ಮಾಡಿ ರಾಜಕೀಯ ಬೆಂಬಲ ಕೋರಿದ ಉಕ್ರೇನ್ ಅಧ್ಯಕ್ಷ

    ಪ್ರಧಾನಿಗೆ ಕರೆ ಮಾಡಿ ರಾಜಕೀಯ ಬೆಂಬಲ ಕೋರಿದ ಉಕ್ರೇನ್ ಅಧ್ಯಕ್ಷ

    ನವದೆಹಲಿ: ಉಕ್ರೇನ್‍ನ ಮೇಲೆ ರಷ್ಯಾ ದಾಳಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‍ಸ್ಕಿ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಸಹಾಯವನ್ನು ಕೋರಿದ್ದಾರೆ.

    ವಿಶ್ವಸಂಸ್ಥೆಯಲ್ಲಿ ಉಕ್ರೇನ್ ವಿರುದ್ಧ ರಷ್ಯಾದ ಆಕ್ರಮಣವನ್ನು ಖಂಡಿಸುವ ನಿರ್ಣಯದಿಂದ ದೂರವುಳಿದ ನಿರ್ಧಾರವನ್ನು ರಷ್ಯಾ ಶ್ಲಾಘಿಸಿತ್ತು. ಇದಾದ ಬಳಿಕ ಉಕ್ರೇನ್ ಅಧ್ಯಕ್ಷ ಅವರು ಪ್ರಧಾನಿ ಅವರೊಂದಿಗೆ ಮಾತನಾಡಿ ರಾಜಕೀಯ ಬೆಂಬಲ ಕೋರಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

    1 ಲಕ್ಷಕ್ಕೂ ಹೆಚ್ಚು ಸೈನಿಕರಿಂದ ರಷ್ಯಾ ದಾಳಿ ಮಾಡುತ್ತಿದೆ. ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ವಿವರಿಸಿದ್ದೇನೆ. ಜೊತೆಗೆ ಶಾಂತಿಯುತ ಪ್ರಯತ್ನಗಳಿಗೆ ಭಾರತ ಸರ್ಕಾರ ಸಹಕರಿಸಲು ಸಿದ್ಧ ಎಂದು ತಿಳಿಸಿದೆ ಎಂದು ಉಕ್ರೇನ್ ಅಧ್ಯಕ್ಷ ಟ್ವೀಟ್ ಮಾಡಿದ್ದಾರೆ.

    ಈ ಬಗ್ಗೆ ಪ್ರಧಾನಿ ಕಚೇರಿ ಪ್ರಕಟನೆ ಹೊರಡಿಸಿದ್ದು, ಉಕ್ರೇನ್ ರಷ್ಯಾ ನಡುವಿನ ಯುದ್ಧದಲ್ಲಿ ಉಂಟಾದ ಸಾವು, ನೋವು ಆಸ್ತಿ-ಪಾಸ್ತಿ ಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದರು. ಉಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಕಾಳಜಿ ವ್ಯಕ್ತಪಡಿಸಿ, ಅವರನ್ನು ತವರಿಗೆ ಕರೆತರಲು ಉಕ್ರೇನ್ ಅಧಿಕಾರಿಗಳ ಸಹಾಯವನ್ನು ಕೋರಿದರು ಎಂದು ತಿಳಿಸಿದೆ.

    ಉಕ್ರೇನ್ ವಿರುದ್ಧದ ರಷ್ಯಾ ಆಕ್ರಮಣವನ್ನು ಖಂಡಿಸುವ ಯುಎನ್‍ಎಸ್‍ಸಿ ನಿರ್ಣಯದಿಂದ ಭಾರತ ದೂರ ಉಳಿದಿದೆ. ರಷ್ಯಾ ವಿರುದ್ಧ 11 ರಾಷ್ಟ್ರಗಳು ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದರೆ, ಭಾರತ ಸೇರಿ ಮೂರು ರಾಷ್ಟ್ರಗಳು ನಿರ್ಣಯದಿಂದ ದೂರ ಉಳಿದು ತಟಸ್ಥ ನೀತಿ ಅನುಸರಿಸಿವೆ. ಇದನ್ನೂ ಓದಿ: ಉಕ್ರೇನ್‍ನಿಂದ 2ನೇ ವಿಮಾನದಲ್ಲಿ ದೆಹಲಿಗೆ ಬಂದ 250 ಭಾರತೀಯರು

    ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ನಿರ್ಣಯ ಮಂಡಿಸಲಾಗಿತ್ತು. ಭಾರತ, ಚೀನಾ, ಯುಎಇ ಈ ಮೂರು ರಾಷ್ಟ್ರಗಳು ಯುಎನ್‍ಎಸ್‍ಸಿ ನಿರ್ಣಯದಿಂದ ದೂರ ಉಳಿದಿವೆ. ಆದರೆ 11 ರಾಷ್ಟ್ರಗಳು ರಷ್ಯಾ ವಿರುದ್ಧ ಮತ ಚಲಾಯಿಸಿವೆ. ಈ ವೇಳೆ ರಷ್ಯಾ ತನ್ನ ವಿಟೋ ಅಧಿಕಾರವನ್ನು ಬಳಸಿದೆ. ಇದನ್ನೂ ಓದಿ: ಶೀಘ್ರವೇ ಉಕ್ರೇನ್‍ಗೆ ಟ್ಯಾಂಕ್ ವಿರೋಧಿ ಶಸ್ತ್ರಾಸ್ತ್ರಗಳನ್ನು ಕಳುಹಿಸಲಿರುವ ಜರ್ಮನಿ

    ಯುಎನ್‍ಎಸ್‍ಸಿ ನಿರ್ಣಯದಿಂದ ದೂರ ಉಳಿದ ಭಾರತ ಸೇರಿ ಮೂರು ರಾಷ್ಟ್ರಗಳಿಗೆ ರಷ್ಯಾ ಧನ್ಯವಾದ ತಿಳಿಸಿದೆ. ರಷ್ಯಾ ವಿರುದ್ಧದ ಮತದಾನದಿಂದ ಭಾರತ, ಚೀನಾ, ಯುಎಇ ದೂರ ಉಳಿದಿದ್ದು, ತಟಸ್ಥವಾಗಿವೆ. ಹೀಗಾಗಿ ರಷ್ಯಾ ಕೃತಜ್ಞತೆ ಸಲ್ಲಿಸಿದೆ.