Tag: Ukraine

  • ನನಗೆ ಸ್ಥಳಾಂತರ ಬೇಡ, ಮದ್ದುಗುಂಡುಗಳು ಬೇಕು – ಅಮೆರಿಕ ಆಫರ್ ತಿರಸ್ಕರಿಸಿದ ಉಕ್ರೇನ್ ಅಧ್ಯಕ್ಷ

    ನನಗೆ ಸ್ಥಳಾಂತರ ಬೇಡ, ಮದ್ದುಗುಂಡುಗಳು ಬೇಕು – ಅಮೆರಿಕ ಆಫರ್ ತಿರಸ್ಕರಿಸಿದ ಉಕ್ರೇನ್ ಅಧ್ಯಕ್ಷ

    ಕೀವ್: ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ತೀವ್ರಗೊಳ್ಳುತ್ತಿದ್ದು, ಇದೀಗ ಅಮೆರಿಕ ನೀಡಿರುವ ಆಫರ್ ಅನ್ನು ಅಧ್ಯಕ್ಷ ವೊಲೊಡಿಮಿರ್ ಝೆಲೆನ್‍ಸ್ಕಿ ತಿರಸ್ಕರಿಸಿದ್ದಾರೆ. ನನಗೆ ಸ್ಥಳಾಂತರ ಬೇಡ. ಇಲ್ಲೇ ಇದ್ದು ಹೋರಾಟ ಮಾಡುತ್ತೇನೆ ಎಂದು ವೀರಾವೇಶದ ಮಾತುಗಳನ್ನು ಆಡಿದ್ದಾರೆ.

    ಕೀವ್ ತೊರೆಯುವಂತೆ ಅಮೆರಿಕ ಝೆಲೆನ್‍ಸ್ಕಿಗೆ ಸಲಹೆ ನಿಡಿತ್ತು. ಆದರೆ ದೊಡ್ಡಣ್ಣನ ಸಲಹೆಯನ್ನು ಉಕ್ರೇನ್ ಅಧ್ಯಕ್ಷ ಧಿಕ್ಕರಿಸಿದ್ದಾರೆ. ನಾನು ನನ್ನ ದೇಶದಲ್ಲಿಯೇ ಇರುತ್ತೇನೆ. ನನಗ್ಯಾವ ಜೀವ ಭಯ ಇಲ್ಲ. ಹೀಗಾಗಿ ನನಗೆ ಸ್ಥಳಾಂತರ ಬೇಡ, ಮದ್ದುಗುಂಡುಗಳು ಬೇಕು. ರಷ್ಯಾ ಸೇನೆ ವಿರುದ್ಧ ನಾನು ಕೊನೆಯವರೆಗೂ ಹೋರಾಟ ಮಾಡುತ್ತೇನೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಈ ಹಿಂದೆ ಟ್ವೀಟ್ ಮಾಡಿದ್ದ ಅವರು, ರಷ್ಯಾದ ಪಡೆಗಳು ರಾತ್ರಿ ಸಮಯದಲ್ಲಿ ರಾಜಧಾನಿ ಕೀವ್ ಅನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ನಾನು ಬಹಿರಂಗವಾಗಿ ಹೇಳಬೇಕಾಗಿದೆ. ಈ ರಾತ್ರಿ, ಹಗಲಿಗಿಂತಲೂ ಹೆಚ್ಚು ಕಷ್ಟಕರವಾಗಿರುತ್ತದೆ. ನಮ್ಮ ರಾಜ್ಯದ ಅನೇಕ ನಗರಗಳು ದಾಳಿಗೆ ಒಳಗಾಗಿವೆ ಎಂದಿದ್ದಾರೆ. ಇದನ್ನೂ ಓದಿ: ಶಾಂತಿಯುತವಾಗಿ ಬಿಕ್ಕಟ್ಟು ಪರಿಹರಿಸಿಕೊಳ್ಳಿ: ಉಕ್ರೇನ್‌, ರಷ್ಯಾಗೆ ತಾಲಿಬಾನ್‌ ಸಲಹೆ

    ಕೀವ್‍ನಲ್ಲಿ ವಿಶೇಷ ಗಮನ ಹರಿಸಿದ್ದೇವೆ. ನಾವು ರಾಜಧಾನಿಯನ್ನು ಕಳೆದುಕೊಳ್ಳುವುದಿಲ್ಲ. ನಾನು ನಮ್ಮ ರಕ್ಷಕರೊಂದಿಗೆ ಎಲ್ಲಾ ಪ್ರದೇಶಗಳಿಗೂ ಹೋಗುತ್ತಿದ್ದೇನೆ. ಈ ರಾತ್ರಿ ಶತ್ರುಗಳು ಅಮಾನವೀಯ ರೀತಿಯಲ್ಲಿ ನಮ್ಮನ್ನು ಹತ್ತಿಕ್ಕಲು ಎಲ್ಲಾ ಶಕ್ತಿಗಳನ್ನು ಬಳಸುತ್ತಾರೆ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ರಷ್ಯಾ ವಿರುದ್ಧದ UNSC ನಿರ್ಣಯದಿಂದ ದೂರ ಉಳಿದ ಭಾರತ – ಧನ್ಯವಾದ ತಿಳಿಸಿದ ರಷ್ಯಾ

    ಈಗಾಗಲೇ ಕೀವ್ ನಗರವನ್ನು ರಷ್ಯಾ ಸೇನೆ ಸಂಪೂರ್ಣವಾಗಿ ಸುತ್ತವರಿದಿದ್ದು, ಕ್ಷಣಕ್ಷಣಕ್ಕೂ ಆತಂಕ ಸೃಷ್ಟಿಯಾಗುತ್ತಿದೆ. ಕೀವ್ ನಲ್ಲಿ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಇಂಟರ್ ನೆಟ್ ಸೇವೆ ಕೂಡ ಸ್ಥಗಿತಗೊಂಡಿದೆ. ಈ ಮಧ್ಯೆಯೂ ಉಕ್ರೇನ್ ಅಧ್ಯಕ್ಷ ದಿಟ್ಟತನದ ಮಾತಗಳನ್ನಾಡಿದ್ದಾರೆ.

  • ಶಾಂತಿಯುತವಾಗಿ ಬಿಕ್ಕಟ್ಟು ಪರಿಹರಿಸಿಕೊಳ್ಳಿ: ಉಕ್ರೇನ್‌, ರಷ್ಯಾಗೆ ತಾಲಿಬಾನ್‌ ಸಲಹೆ

    ಶಾಂತಿಯುತವಾಗಿ ಬಿಕ್ಕಟ್ಟು ಪರಿಹರಿಸಿಕೊಳ್ಳಿ: ಉಕ್ರೇನ್‌, ರಷ್ಯಾಗೆ ತಾಲಿಬಾನ್‌ ಸಲಹೆ

    ಕಾಬೂಲ್:‌ ರಷ್ಯಾ ಹಾಗೂ ಉಕ್ರೇನ್‌ ದೇಶಗಳು ತಮ್ಮ ನಡುವಿನ ಬಿಕ್ಕಟ್ಟನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ತಾಲಿಬಾನ್‌ ಸಲಹೆ ನೀಡಿದೆ.

    ಸಂವಾದ ಮತ್ತು ಶಾಂತಿಯುತ ವಿಧಾನಗಳ ಮೂಲಕ ಬಿಕ್ಕಟ್ಟನ್ನು ಪರಿಹರಿಸಿಕೊಳ್ಳಬೇಕು. ಹಿಂಸಾಚಾರವನ್ನು ತೀವ್ರಗೊಳಿಸುವ ನಿಲುವು ತೆಗೆದುಕೊಳ್ಳುವುದನ್ನು ಎಲ್ಲಾ ದೇಶಗಳು ತ್ಯಜಿಸಬೇಕಾಗಿದೆ ಎಂದು ತಾಲಿಬಾನ್‌ ಕರೆ ನೀಡಿದೆ. ಇದನ್ನೂ ಓದಿ: ರಷ್ಯಾ ವಿರುದ್ಧದ UNSC ನಿರ್ಣಯದಿಂದ ದೂರ ಉಳಿದ ಭಾರತ – ಧನ್ಯವಾದ ತಿಳಿಸಿದ ರಷ್ಯಾ

    ಉಕ್ರೇನ್‌ನಲ್ಲಿನ ಪರಿಸ್ಥಿತಿಯನ್ನು ಅಫ್ಘಾನಿಸ್ತಾನದ ಇಸ್ಲಾಮಿಕ್‌ ಎಮಿರೇಟ್ಸ್‌ ನಿಕಟವಾಗಿ ಗಮನಿಸುತ್ತಿದೆ. ನಾಗರಿಕರ ಸಾವು-ನೋವುಗಳ ಸಾಧ್ಯತೆಗಳ ಬಗ್ಗೆ ಕಳವಳ ಇದೆ. ಎರಡೂ ರಾಷ್ಟ್ರಗಳು ಸಂಯಮದಿಂದ ಇರುವುದು ಒಳಿತು ಎಂದು ತಾಲಿಬಾನ್‌ ತಿಳಿಸಿದೆ.

    ಅಫ್ಘಾನ್‌ ವಿದ್ಯಾರ್ಥಿಗಳು ಮತ್ತು ಉಕ್ರೇನ್‌ನಲ್ಲಿರುವ ವಲಸಿಗರ ಸುರಕ್ಷತೆಗಾಗಿ ಉಕ್ರೇನ್‌ ಮತ್ತು ರಷ್ಯಾ ದೇಶಗಳಿಗೆ ತಾಲಿಬಾನ್‌ ಮನವಿ ಮಾಡಿದೆ. ಇದನ್ನೂ ಓದಿ: ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿದ ಉಕ್ರೇನ್‌ ಸೇನೆ

    ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧದ ಯುಎನ್‌ಎಸ್‌ಸಿ ನಿರ್ಣಯದಿಂದ ಸಂಯುಕ್ತ ಅರಬ್‌ ಒಕ್ಕೂಟ (ಯುಎಇ) ಕೂಡ ದೂರ ಉಳಿದಿದೆ. ಆದರೆ ಬಿಕ್ಕಟ್ಟನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿದೆ. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಮಗಳಿಂದ ವಾಯ್ಸ್ ಮೆಸೇಜ್- ಪೋಷಕರಲ್ಲಿ ಆತಂಕ

  • ಉಕ್ರೇನ್‍ನಿಂದ ವಿದ್ಯಾರ್ಥಿಗಳನ್ನು ಕರೆ ತರಲು ಅಗತ್ಯ ಕ್ರಮ: ಗೋಪಾಲಯ್ಯ

    ಉಕ್ರೇನ್‍ನಿಂದ ವಿದ್ಯಾರ್ಥಿಗಳನ್ನು ಕರೆ ತರಲು ಅಗತ್ಯ ಕ್ರಮ: ಗೋಪಾಲಯ್ಯ

    ಮಂಡ್ಯ: ಯುದ್ಧ ಪೀಡಿತ ಉಕ್ರೇನ್ ದೇಶದಲ್ಲಿರುವ ಮಂಡ್ಯ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಸುರಕ್ಷಿತವಾಗಿ ಕರೆ ತರುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿ ಮತ್ತು ರಾಜ್ಯ ಸರ್ಕಾರ ನಿಯೋಜಿಸಿರುವ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಎಲ್ಲಾ ವಿದ್ಯಾರ್ಥಿಗಳನ್ನು ಕರೆತರುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಭರವಸೆ ನೀಡಿದರು.

    ಕೇವಲ ಮಂಡ್ಯ ಅಲ್ಲದೆ ರಾಜ್ಯದ 29 ಜಿಲ್ಲೆಗಳ ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಕೂಡ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲಾ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿರುವ ತುಮಕೂರಿನ ಅಕ್ಕ, ತಮ್ಮ

    ಈಗಾಗಲೇ ಉಕ್ರೇನ್‍ನಲ್ಲಿ ಭಾರತೀಯರನ್ನು ಪಾರುಮಾಡುವ ಸಾಹಸಗಳು ನಡೆಯುತ್ತಿವೆ. ರಷ್ಯಾ- ಉಕ್ರೇನ್ ಮೇಲೆ ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿರುವ ಭಾರತೀಯರನ್ನು ರೊಮೇನಿಯಾಗೆ ಸ್ಥಳಾಂತರಿಸುವ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ. ಕೆಲ ಭಾರತೀಯರನ್ನು ಏರ್‌ಲಿಫ್ಟ್‌ ಮೂಲಕ ವಾಪಸ್‌ ಕರೆಸಿಕೊಂಡಿದ್ದಾರೆ. ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರು ಇಲ್ಲಿಯವರೆಗೆ ತಮ್ಮ ಜೀವ ಉಳಿಸಿಕೊಳ್ಳಲು ಮೆಟ್ರೋ ಸುರಂಗಗಳಲ್ಲಿ ಅಡಗಿ ಕುಳಿತಿದ್ದಾರೆ. ಇದನ್ನೂ ಓದಿ: ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿದ ಉಕ್ರೇನ್‌ ಸೇನೆ

  • ಉಕ್ರೇನ್‍ನಲ್ಲಿರುವ ಮಗಳಿಂದ ವಾಯ್ಸ್ ಮೆಸೇಜ್- ಪೋಷಕರಲ್ಲಿ ಆತಂಕ

    ಉಕ್ರೇನ್‍ನಲ್ಲಿರುವ ಮಗಳಿಂದ ವಾಯ್ಸ್ ಮೆಸೇಜ್- ಪೋಷಕರಲ್ಲಿ ಆತಂಕ

    ಬಾಗಲಕೋಟೆ: ರಷ್ಯಾದಾಳಿಯ ಬೆನ್ನಲ್ಲೆ ಇಡೀ ಉಕ್ರೇನ್ ದೇಶ ಸ್ಮಶಾನದಂತೆ ಆವರಿಸಿದೆ. ಇತ್ತ ವ್ಯಾಸಂಗಕ್ಕಾಗಿ ಉಕ್ರೇನ್‍ಗೆ ತೆರಳಿದ ಭಾರತೀಯ ಮೂಲದ ವಿದ್ಯಾರ್ಥಿಗಳ ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಬಾಗಲಕೋಟೆ ಜಿಲ್ಲೆಯಿಂದ ಸುಮಾರು 23 ವಿದ್ಯಾರ್ಥಿಗಳು ರಕ್ಷಣೆಗಾಗಿ ಪರದಾಟ ನಡೆಸುತ್ತಿದ್ದಾರೆ.

    ಬಾಗಲಕೋಟೆ ನಿವಾಸಿಯಾಗಿರುವ ಅಪೂರ್ವ ಕದಾಂಪುರ ಪ್ರಥಮ ವರ್ಷದ ಎಂ.ಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ. ಅವರ ಫೋನ್ ಸಂಪರ್ಕ ಬಂದ್ ಆಗಿದೆ. ಅಲ್ಲದೇ ಅಪೂರ್ವ ಅವರ ಪೋಷಕರಿಗೆ ಕಳುಹಿಸಿದ ವಾಯ್ಸ್ ಮೆಸೇಜ್ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ. ಇದನ್ನೂ ಓದಿ: ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿದ ಉಕ್ರೇನ್‌ ಸೇನೆ

    ವಾಯ್ಸ್ ಮಸೇಜ್‍ನಲ್ಲಿ ಏನಿದೆ?: ನಾನು ಇರುವ ಬಂಕರ್ ಪಕ್ಕವೇ ಬಾಂಬ್ ಬ್ಲಾಸ್ಟಿಂಗ್ ಆಗುತ್ತಿದೆ. ಹೀಗಾಗಿ ನಾವು ಬಂಕರ್ ಒಳಗೆ ಹೋಗುತ್ತಿದ್ದೇವೆ. ನಮ್ಮನ್ನು ಟ್ರ್ಯಾಕ್ ಮಾಡಬಾರದು ಎಂದು ಮೊಬೈಲ್ ಸ್ವೀಚ್ ಆಫ್ ಮಾಡುತ್ತಿದ್ದೇವೆ. ನನ್ನ ಮೊಬೈಲ್ ಫ್ಲೈಟ್ ಮೋಡ್‌ನಲ್ಲಿರುತ್ತದೆ. ಮತ್ತೆ ನಾನು ಮೆಸೇಜ್ ಮಾಡುತ್ತೇನೆ ಎಂದು ಹೇಳಿದ್ದಾರೆ. ಮಗಳ ಈ ಮೆಸೇಜ್ ಪೋಷಕರಲ್ಲಿ ಆತಂಕ ಮನೆ ಮಾಡಿದೆ.

    ಅಪೂರ್ವ ಇರೋದು ಪೂರ್ವ ಉಕ್ರೇನಲ್ಲಿ ಇರೋದ್ರಿಂದ, ಪಶ್ಚಿಮ ಉಕ್ರೇನ್‍ಗೆ ಬರಲು ಯಾವುದೇ ವ್ಯವಸ್ಥೆ ಇಲ್ಲ. ಹೀಗಾಗಿ ಭಯಭೀತರಾಗಿರುವ ಪೋಷಕರು, ಅಲ್ಲಿರುವ ಮಕ್ಕಳನ್ನ ಸುರಕ್ಷಿತವಾಗಿ ಕರೆತನ್ನಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

  • ರಷ್ಯಾ, ಉಕ್ರೇನ್ ಯುದ್ಧದಲ್ಲಿ ಮೋದಿ ಮಧ್ಯಸ್ಥಿಕೆಯನ್ನ ಎಲ್ಲರೂ ಬಯಸುತ್ತಿದ್ದಾರೆ: ಹೇಮಾಮಾಲಿನಿ

    ರಷ್ಯಾ, ಉಕ್ರೇನ್ ಯುದ್ಧದಲ್ಲಿ ಮೋದಿ ಮಧ್ಯಸ್ಥಿಕೆಯನ್ನ ಎಲ್ಲರೂ ಬಯಸುತ್ತಿದ್ದಾರೆ: ಹೇಮಾಮಾಲಿನಿ

    ಲಕ್ನೋ: ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ಉಕ್ರೇನ್ ಹಾಗೂ ರಷ್ಯಾ ನಡುವೆ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಿದ್ದಾರೆ ಎಂದು ಬಿಜೆಪಿ ಸಂಸದೆ ಹೇಮಾಮಾಲಿನಿ ತಿಳಿಸಿದರು.

    ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಮೋದಿ ಅವರಿಂದ ಇಡೀ ಜಗತ್ತೇ ಬೆರಗಾಗುವಂತೆ ಭಾರತವನ್ನು ಅಭಿವೃದ್ಧಿಯಾಗುತ್ತಿದೆ. ಮೋದಿ ಅವರನ್ನು ವಿಶ್ವದ ಬಲಿಷ್ಠ ನಾಯಕರಲ್ಲಿ ಒಬ್ಬರೆಂದು ಪರಿಗಣಿಸಲಾಗುತ್ತಿದೆ ಎಂದ ಅವರು, ಈಗ ರಷ್ಯಾ ಉಕ್ರೇನ್ ಯುದ್ಧವನ್ನು ತಡೆಯಲು ಅವರು ಮಧ್ಯಸ್ಥಿಕೆ ವಹಿಸಬೇಕು ಎಂದು ಎಲ್ಲರೂ ಬಯಸುತ್ತಿದ್ದಾರೆ ಎಂದರು.

    ಈ ಹಿಂದೆ ರಷ್ಯಾವು ಉಕ್ರೇನ್‍ನ ನಗರಗಳ ಮೇಲೆ ದಾಳಿ ನಡೆಸುತ್ತಿದ್ದಂತೆ ಪ್ರಧಾನಿ ಮೋದಿ ಕರೆ ಮಾಡಿ ಹಿಂಸಾಚಾರವನ್ನು ನಿಲ್ಲಿಸುವಂತೆ ಮನವಿ ಮಾಡಿದ್ದರು. ಜೊತೆಗೆ ಉಕ್ರೇನ್‍ನಿಂದ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರಲು ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ ಎಂದು ತಿಳಿಸಿದ್ದರು. ಇದನ್ನೂ ಓದಿ: ವಿಶ್ವವೇ ನಮ್ಮೊಂದಿಗಿದೆ, ಜಯ ನಮ್ಮದೆ: ಉಕ್ರೇನ್ ಅಧ್ಯಕ್ಷ

    ಉತ್ತರಪ್ರದೇಶದ ವಿಧಾನಸಭೆ ಚುನಾವಣೆ 7 ಹಂತದಲ್ಲಿ ನಡೆಯಲಿದ್ದು, ಈಗಾಗಲೇ 4 ಹಂತದ ಮತದಾನ ನಡೆದಿದೆ. ಮಾರ್ಚ್ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿದ ಉಕ್ರೇನ್‌ ಸೇನೆ

  • ರಷ್ಯಾ ವಿರುದ್ಧದ UNSC ನಿರ್ಣಯದಿಂದ ದೂರ ಉಳಿದ ಭಾರತ – ಧನ್ಯವಾದ ತಿಳಿಸಿದ ರಷ್ಯಾ

    ರಷ್ಯಾ ವಿರುದ್ಧದ UNSC ನಿರ್ಣಯದಿಂದ ದೂರ ಉಳಿದ ಭಾರತ – ಧನ್ಯವಾದ ತಿಳಿಸಿದ ರಷ್ಯಾ

    ನವದೆಹಲಿ: ಉಕ್ರೇನ್‌ ವಿರುದ್ಧದ ರಷ್ಯಾ ಆಕ್ರಮಣವನ್ನು ಖಂಡಿಸುವ ಯುಎನ್‌ಎಸ್‌ಸಿ ನಿರ್ಣಯದಿಂದ ಭಾರತ ದೂರ ಉಳಿದಿದೆ. ರಷ್ಯಾ ವಿರುದ್ಧ 11 ರಾಷ್ಟ್ರಗಳು ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದರೆ, ಭಾರತ ಸೇರಿ ಮೂರು ರಾಷ್ಟ್ರಗಳು ನಿರ್ಣಯದಿಂದ ದೂರ ಉಳಿದು ತಟಸ್ಥ ನೀತಿ ಅನುಸರಿಸಿವೆ.

    ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ನಿರ್ಣಯ ಮಂಡಿಸಲಾಗಿತ್ತು. ಭಾರತ, ಚೀನಾ, ಯುಎಇ ಈ ಮೂರು ರಾಷ್ಟ್ರಗಳು ಯುಎನ್‌ಎಸ್‌ಸಿ ನಿರ್ಣಯದಿಂದ ದೂರ ಉಳಿದಿವೆ. ಆದರೆ 11 ರಾಷ್ಟ್ರಗಳು ರಷ್ಯಾ ವಿರುದ್ಧ ಮತ ಚಲಾಯಿಸಿವೆ. ಈ ವೇಳೆ ರಷ್ಯಾ ತನ್ನ ವಿಟೋ ಅಧಿಕಾರವನ್ನು ಬಳಸಿದೆ. ಇದನ್ನೂ ಓದಿ: ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿದ ಉಕ್ರೇನ್‌ ಸೇನೆ

    ಅಮೆರಿಕ, ಅಲ್ಬೇನಿಯಾ ಸೇರಿದಂತೆ ಪೋಲ್ಯಾಂಡ್‌, ಇಟಲಿ, ಜರ್ಮನಿ, ಎಸ್ಟೋನಿಯಾ, ಲಕ್ಸೆಂಬರ್ಗ್‌, ಜರ್ಮನಿ ಸೇರಿದಂತೆ 11 ರಾಷ್ಟ್ರಗಳು ರಷ್ಯಾ ಆಕ್ರಮಣ ಖಂಡಿಸುವ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿವೆ.

    ಉಕ್ರೇನ್‌ನಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಭಾರತವು ವಿಚಲಿತವಾಗಿದೆ. ಹಿಂಸಾಚಾರ ಮತ್ತು ಹಗೆತನವನ್ನು ತಕ್ಷಣವೇ ನಿಲ್ಲಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ಕೇವಲ ಪರಿಹಾರಗಳಿಂದಾಗಿ ನಾವು ಮನುಷ್ಯ ಜೀವಗಳಿಗೆ ಬೆಲೆ ಕೊಡಲು ಸಾಧ್ಯವಿಲ್ಲ ಎಂದು UN ರಾಯಭಾರದ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್.ತಿರುಮೂರ್ತಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವವೇ ನಮ್ಮೊಂದಿಗಿದೆ, ಜಯ ನಮ್ಮದೆ: ಉಕ್ರೇನ್ ಅಧ್ಯಕ್ಷ

    ರಾಜತಾಂತ್ರಿಕತೆಯ ಹಾದಿ ಕೈಬಿಟ್ಟಿರುವುದು ವಿಷಾದದ ಸಂಗತಿ. ನಾವು ಮತ್ತೆ ಅದಕ್ಕೆ ಹಿಂತಿರುಗಬೇಕು. ಈ ಎಲ್ಲಾ ಕಾರಣಗಳಿಗಾಗಿ, ಭಾರತವು ಈ ನಿರ್ಣಯದಿಂದ ದೂರವಿರಲು ನಿರ್ಧರಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಭಾರತವು ಎಲ್ಲಾ ಸದಸ್ಯ ರಾಷ್ಟ್ರಗಳಿಗೆ ಅಂತರರಾಷ್ಟ್ರೀಯ ಕಾನೂನು ಮತ್ತು ಯುಎನ್‌ ಚಾರ್ಟರ್‌ನ ತತ್ವಗಳನ್ನು ಗೌರವಿಸಲು ಕರೆ ನೀಡಿದೆ. ಭಾರತೀಯ ಸಮುದಾಯದ ಭದ್ರತೆ, ಉಕ್ರೇನ್‌ನಲ್ಲಿ ಸಿಕ್ಕಿರುವ ವಿದ್ಯಾರ್ಥಿಗಳನ್ನು ಅಲ್ಲಿಂದ ಸ್ಥಳಾಂತರಿಸುವುದು ತಕ್ಷಣದ ಆದ್ಯತೆಯಾಗಿದೆ. ಇದನ್ನೂ ಓದಿ: ಉಕ್ರೇನ್‌ ಯುದ್ಧ ಭೀಕರತೆ ನಡುವೆಯೂ ಹಸೆಮಣೆ ಏರಿ ಜೋಡಿ ಸಂಭ್ರಮ

    ಭಾರತಕ್ಕೆ ರಷ್ಯಾ ಧನ್ಯವಾದ
    ಯುಎನ್‌ಎಸ್‌ಸಿ ನಿರ್ಣಯದಿಂದ ದೂರ ಉಳಿದ ಭಾರತ ಸೇರಿ ಮೂರು ರಾಷ್ಟ್ರಗಳಿಗೆ ರಷ್ಯಾ ಧನ್ಯವಾದ ತಿಳಿಸಿದೆ. ರಷ್ಯಾ ವಿರುದ್ಧದ ಮತದಾನದಿಂದ ಭಾರತ, ಚೀನಾ, ಯುಎಇ ದೂರ ಉಳಿದಿದ್ದು, ತಟಸ್ಥವಾಗಿವೆ. ಹೀಗಾಗಿ ರಷ್ಯಾ ಕೃತಜ್ಞತೆ ಸಲ್ಲಿಸಿದೆ.

  • ಉಕ್ರೇನ್‍ನಲ್ಲಿ ಸಿಲುಕಿರುವ ತುಮಕೂರಿನ ಅಕ್ಕ, ತಮ್ಮ

    ಉಕ್ರೇನ್‍ನಲ್ಲಿ ಸಿಲುಕಿರುವ ತುಮಕೂರಿನ ಅಕ್ಕ, ತಮ್ಮ

    ತುಮಕೂರು: ಉಕ್ರೇನ್ ಹಾಗೂ ರಷ್ಯಾ ಯುದ್ದ ಸಂಘರ್ಷ ವಿಶ್ವದಲ್ಲಿಯೇ ಭಾರಿ ಆತಂಕವನ್ನುಂಟು ಮಾಡಿದೆ. ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರ ಆಕ್ರಂದನ ಮುಗಿಸಲು ಮುಟ್ಟಿದೆ. ಹಲವು ಜಿಲ್ಲೆಯ ವಿದ್ಯಾರ್ಥಿಗಳು ಅಲ್ಲಿ ಸಿಲುಕಿಕೊಂಡು ತವರಿಗೆ ಬರಲಾರದೆ ಸ್ಥಿತಿ ನಿರ್ಮಾಣವಾಗಿದೆ.  ಉಕ್ರೇನ್‍ನಲ್ಲಿ ಸಿಲುಕಿಕೊಂಡವರಲ್ಲಿ ತುಮಕೂರಿನ ಅಕ್ಕ, ತಮ್ಮ ಕೂಡ ಇದ್ದಾರೆ.

    ರೂಪಶ್ರೀ ಹಾಗೂ ಸುಮಂತ್ ಇಬ್ಬರು ಒಡಹುಟ್ಟಿದವರಾಗಿದ್ದಾರೆ. ಇವರು ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಉಕ್ರೇನ್‍ನಲ್ಲಿ ವಿದ್ಯಾರ್ಥಿಗಳು ಸಿಲುಕಿಕೊಂಡಿರುವ ಹಿನ್ನೆಲೆಯಲ್ಲಿ, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಭೇಟಿ ನೀಡಿ ವಿದ್ಯಾರ್ಥಿಗಳ ಪೋಷಕರಿಗೆ ಸಮಾಧಾನ ಹೇಳಿದ್ದಾರೆ. ಇದನ್ನೂ ಓದಿ: ವಿಶ್ವವೇ ನಮ್ಮೊಂದಿಗಿದೆ, ಜಯ ನಮ್ಮದೆ: ಉಕ್ರೇನ್ ಅಧ್ಯಕ್ಷ

    ಕಂಬತ್ತನಹಳ್ಳಿ ನಿವಾಸಿ ಮಂಜುನಾಥ್ ಅವರ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದಲ್ಲದೆ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜೊತೆ ಮಾತನಾಡಿ ವಿದ್ಯಾರ್ಥಿಗಳನ್ನು ಕರೆತರುವ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಜ್ಯೋತಿ ಗಣೇಶ್ ಭರಸವೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ಜ್ಯೋತಿ ಗಣೇಶ್, ಪೋಷಕರ ಜೊತೆ ಮಾತನಾಡಿದ್ದೇನೆ. ಮಕ್ಕಳ ಜೊತೆ ಪೋಷಕರು ಮಾತನಾಡಿದ್ದಾರೆ ಎಂದು ಹೇಳಿದ್ದಾರೆ. ನಾನೂ ಕೂಡ ಜಿಲ್ಲಾಡಳಿತ ಜೊತೆ ಮಾತನಾಡಿ ಸರ್ಕಾರದ ಗಮನ ಸೆಳೆದು ನಗರದ 7 ಮಂದಿ ಇದ್ದಾರೆ. ಜಿಲ್ಲೆಯ ಒಟ್ಟು 16 ಮಂದಿಯನ್ನು ಕರೆತರುವ ಪ್ರಯತ್ನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಉಕ್ರೇನ್‌ ಯುದ್ಧ ಭೀಕರತೆ ನಡುವೆಯೂ ಹಸೆಮಣೆ ಏರಿ ಜೋಡಿ ಸಂಭ್ರಮ

  • ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿದ ಉಕ್ರೇನ್‌ ಸೇನೆ

    ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿದ ಉಕ್ರೇನ್‌ ಸೇನೆ

    ಕೀವ್:‌ ಉಕ್ರೇನ್‌ ಮೇಲಿನ ರಷ್ಯಾ ದಾಳಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನ್‌ ರಾಜಧಾನಿ ಕೀವ್‌ ಮೇಲೆ ರಷ್ಯಾ ಸೈನಿಕರು ದಾಳಿ ಮುಂದುವರಿಸಿದ್ದಾರೆ. ಈ ವೇಳೆ ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿಯಲಾಗಿದೆ ಎಂದು ಉಕ್ರೇನ್‌ ಸೇನೆ ತಿಳಿಸಿದೆ.

    ಉಕ್ರೇನ್‌ನ ಸಶಸ್ತ್ರ ಪಡೆಗಳ ಜನರಲ್‌ ಸ್ಟಾಫ್‌, ರಷ್ಯಾದ ಇಬ್ಬರು ಸೈನಿಕರ ಚಿತ್ರಗಳನ್ನು ಪೋಸ್ಟ್‌ ಮಾಡಿದ್ದಾರೆ. ಅವರು ಯಾಂಪೋಲ್‌ ಮೋಟಾರೈಸ್ಡ್‌ ರೈಫಲ್‌ನ 91701ನೇ ಘಟಕದಿಂದ ಬಂದವರು ಎಂದು ಹೇಳುತ್ತಿದ್ದಾರೆಂದು ತಿಳಿಸಿದ್ದಾರೆ. ಅಲ್ಲದೆ ಉಕ್ರೇನ್‌ ಸೇನೆಯಲ್ಲಿರುವ ರಷ್ಯಾ ಯೋಧರಿಗೆ ತಮ್ಮ ಕುಟುಂಬದವರ ಜೊತೆ ಪೋನಿನಲ್ಲಿ ಮಾತಾಡಲು ಅವಕಾಸ ಕೊಟ್ಟಿದ್ದಾರೆ. ಈ ವೇಳೆ ರಷ್ಯಾ ಯೋಧರು, ತಾವು ಉಕ್ರೇನ್‌ ಯೋಧರ ಸೆರೆಯಲ್ಲಿರುವುದಾಗಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.  ಇದನ್ನೂ ಓದಿ: ವಿಶ್ವವೇ ನಮ್ಮೊಂದಿಗಿದೆ, ಜಯ ನಮ್ಮದೆ: ಉಕ್ರೇನ್ ಅಧ್ಯಕ್ಷ

    ಉಕ್ರೇನ್‌ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಗುರುವಾರ ಯುದ್ಧ ಘೋಷಿಸಿದ್ದಾರೆ. ರಷ್ಯಾ ಸೈನಿಕರು ಆಕ್ರಮಣ ಮುಂದುವರಿಸಿದ್ದು, ಉಕ್ರೇನ್‌ ರಾಜಧಾನಿ ಕೀವ್‌ ವಶಕ್ಕೆ ಮುಂದಾಗಿದ್ದಾರೆ.

    ರಷ್ಯಾದ ಆಕ್ರಮಣ ನೀತಿಗೆ ಅಮೆರಿಕ ಸೇರಿದಂತೆ ವಿಶ್ವದ ಅನೇಕ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ. ಇದೇ ವೇಳೆ ರಷ್ಯಾ ಮೇಲೆ ಪಾಶ್ಚಿಮಾತ್ಯ ಹಣಕಾಸು ನಿರ್ಬಂಧವನ್ನು ಅಮೆರಿಕ ಘೋಷಿಸಿದೆ. ಇದನ್ನೂ ಓದಿ: ಉಕ್ರೇನ್‌ ಯುದ್ಧ ಭೀಕರತೆ ನಡುವೆಯೂ ಹಸೆಮಣೆ ಏರಿ ಜೋಡಿ ಸಂಭ್ರಮ

  • ವಿಶ್ವವೇ ನಮ್ಮೊಂದಿಗಿದೆ, ಜಯ ನಮ್ಮದೆ: ಉಕ್ರೇನ್ ಅಧ್ಯಕ್ಷ

    ಮಾಸ್ಕೋ: ವಿಶ್ವವೇ ನಮ್ಮೊಂದಿಗಿದೆ, ಸತ್ಯ ನಮ್ಮೊಂದಿಗಿದೆ. ಹೀಗಾಗಿ ಜಯ ನಮ್ಮದಾಗುತ್ತದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‍ಸ್ಕಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಷ್ಯಾ ಕೀವ್ ಮೇಲಿನ ದಾಳಿ ಮುಂದುವರಿಸಿರುವುದರಿಂದ ಕರಡು ನಿರ್ಣಯವು ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಿಂದ ಸಹ ಪ್ರಾಯೋಜಿತವಾಗಿದೆ. ಇದು ಈಗಾಗಲೇ ಸಾಬೀತಾಗಿದೆ ಎಂದು ಕಿಡಿಕಾರಿದ್ದಾರೆ.

    ಇದಕ್ಕೂ ಮೊದಲು, ರಷ್ಯಾದ ಪಡೆಗಳು ರಾತ್ರಿ ಸಮಯದಲ್ಲಿ ರಾಜಧಾನಿ ಕೀವ್ ಅನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ನಾನು ಬಹಿರಂಗವಾಗಿ ಹೇಳಬೇಕಾಗಿದೆ. ಈ ರಾತ್ರಿ, ಹಗಲಿಗಿಂತಲೂ ಹೆಚ್ಚು ಕಷ್ಟಕರವಾಗಿರುತ್ತದೆ. ನಮ್ಮ ರಾಜ್ಯದ ಅನೇಕ ನಗರಗಳು ದಾಳಿಗೆ ಒಳಗಾಗಿವೆ ಎಂದಿದ್ದಾರೆ.

    ಕೀವ್‍ನಲ್ಲಿ ವಿಶೇಷ ಗಮನ ಹರಿಸಿದ್ದೇವೆ. ನಾವು ರಾಜಧಾನಿಯನ್ನು ಕಳೆದುಕೊಳ್ಳುವುದಿಲ್ಲ. ನಾನು ನಮ್ಮ ರಕ್ಷಕರೊಂದಿಗೆ ಎಲ್ಲಾ ಪ್ರದೇಶಗಳಿಗೂ ಹೋಗುತ್ತಿದ್ದೇನೆ. ಈ ರಾತ್ರಿ ಶತ್ರುಗಳು ಅಮಾನವೀಯ ರೀತಿಯಲ್ಲಿ ನಮ್ಮನ್ನು ಹತ್ತಿಕ್ಕಲು ಎಲ್ಲಾ ಶಕ್ತಿಗಳನ್ನು ಬಳಸುತ್ತಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಉಕ್ರೇನ್‌ ಯುದ್ಧ ಭೀಕರತೆ ನಡುವೆಯೂ ಹಸೆಮಣೆ ಏರಿ ಜೋಡಿ ಸಂಭ್ರಮ

    ನಿನ್ನೆ ಅಧ್ಯಕ್ಷ ಭವನದ ಎದುರು ಸ್ವಯಂ ವೀಡಿಯೋ ಮಾಡಿದ್ದ ಅವರು, ರಷ್ಯಾಕ್ಕೆ ಹೆದರಿ ನಾವೆಲ್ಲೂ ಓಡಿ ಹೋಗಿಲ್ಲ. ನಮ್ಮ ಸ್ವಾತಂತ್ರ್ಯವನ್ನು, ನಮ್ಮ ದೇಶವನ್ನು ರಕ್ಷಿಸುತ್ತಿದ್ದೇವೆ. ನಾವೆಲ್ಲರೂ ಇಲ್ಲೇ ಇದ್ದೇವೆ. ನಮ್ಮ ಮಿಲಿಟರಿಯೂ ಇಲ್ಲೇ ಇದೆ. ರಷ್ಯಾ ಆಕ್ರಮಣದ ವಿರುದ್ಧ ದೇಶವನ್ನು ಉಳಿಸಲು ಮತ್ತು ರಕ್ಷಿಸಲು ಪ್ರಮುಖ ಸಹಾಯಕರೊಂದಿಗೆ ಪ್ರತಿಜ್ಞೆ ಮಾಡಿದ್ದೇವೆ ಎಂದು ಹೇಳಿದ್ದರು. ಇದನ್ನೂ ಓದಿ: ಕಣ್ಣಲ್ಲಿ ನೀರು ತರಿಸುತ್ತಿದೆ 80 ವರ್ಷದ ವ್ಯಕ್ತಿ ಉಕ್ರೇನ್ ಸೇನೆಗೆ ಸೇರಲು ನಿಂತಿರುವ ಫೋಟೋ!

    ವೀಡಿಯೋದಲ್ಲಿ ಮಿಲಿಟರಿ ಶೈಲಿಯ ಉಡುಪನ್ನು ಧರಿಸಿರುವ ಉಕ್ರೇನ್ ಅಧ್ಯಕ್ಷ ತನ್ನ ಸಿಬ್ಬಂದಿ, ಮುಖ್ಯಸ್ಥ ಹಾಗೂ ಇತರ ಹಿರಿಯ ಸಹಾಯಕ ಅಧಿಕಾರಿಯೊಂದಿಗೆ ನಿಂತು ಮಾತನಾಡಿದ್ದಾರೆ.

  • ಉಕ್ರೇನ್‌ ಯುದ್ಧ ಭೀಕರತೆ ನಡುವೆಯೂ ಹಸೆಮಣೆ ಏರಿ ಜೋಡಿ ಸಂಭ್ರಮ

    ಉಕ್ರೇನ್‌ ಯುದ್ಧ ಭೀಕರತೆ ನಡುವೆಯೂ ಹಸೆಮಣೆ ಏರಿ ಜೋಡಿ ಸಂಭ್ರಮ

    ಕೀವ್‌: ಅತ್ತ ರಷ್ಯಾದ ದಾಳಿಯಿಂದ ಉಕ್ರೇನ್‌ ಕಂಗೆಟ್ಟಿದ್ದರೆ, ಇತ್ತ ಜೋಡಿಯೊಂದು ಮದುವೆ ಸಂಭ್ರಮದಲ್ಲಿದೆ. ಯುದ್ಧದ ಆತಂಕದ ನಡುವೆಯೇ ಉಕ್ರೇನ್‌ ರಾಜಧಾನಿ ಕೀವ್‌ನ ಕಲ್ಯಾಣ ಮಂಟಪವೊಂದರಲ್ಲಿ ಜೋಡಿಯೊಂದು ನವಜೀವನಕ್ಕೆ ಕಾಲಿಟ್ಟಿದೆ.

    ಹೌದು, ಕೀವ್‌ ಸಿಟಿ ಕೌನ್ಸಿಲ್‌ನ ಡೆಪ್ಯೂಟಿ ಆಗಿರುವ 21 ವರ್ಷದ ಅರಿವಾ, ಸಾಫ್ಟ್‌ವೇರ್‌ ಇಂಜಿನಿಯರ್ ಆಗಿರುವ ಫರ್ಸಿನ್‌ ಅವರನ್ನು ವಿವಾಹವಾಗಿದ್ದಾರೆ. ಯಾರಿನಾ ಅರಿವಾ ಮತ್ತು ಆಕೆಯ ಸಂಗಾತಿ ಸ್ವ್ಯಾಟೋಸ್ಲಾವ್‌ ಫರ್ಸಿನ್‌ ಮೇ ತಿಂಗಳಲ್ಲಿ ಉಕ್ರೇನ್‌ ರಾಜಧಾನಿ ಕೀವ್‌ನಲ್ಲಿರುವ ರೆಸ್ಟೋರೆಂಟ್‌ವೊಂದರಲ್ಲಿ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಉಕ್ರೇನ್‌ ಮೇಲೆ ರಷ್ಯಾ ಯುದ್ಧ ಘೋಷಿಸಿರುವ ಪರಿಣಾಮ ಅವರು ತಮ್ಮ ಯೋಜನೆಯನ್ನು ಬದಲಾಯಿಸಿಕೊಳ್ಳಬೇಕಾಯಿತು. ಯುದ್ಧದ ನಡುವೆಯೇ ಅವರು ಅವಸರದಲ್ಲಿ ಹಸೆಮಣೆ ಏರಿದ್ದಾರೆ. ಇದನ್ನೂ ಓದಿ: ಕಣ್ಣಲ್ಲಿ ನೀರು ತರಿಸುತ್ತಿದೆ 80 ವರ್ಷದ ವ್ಯಕ್ತಿ ಉಕ್ರೇನ್ ಸೇನೆಗೆ ಸೇರಲು ನಿಂತಿರುವ ಫೋಟೋ!

    ರಷ್ಯಾ ಆಕ್ರಮಣದಿಂದಾಗಿ ಉಕ್ರೇನ್‌ ಯುದ್ಧದ ನೆಲೆಯಾಗಿ ಮಾರ್ಪಟ್ಟಿದೆ. ಎಲ್ಲೆಡೆ ಗುಂಡು, ಕ್ಷಿಪಣಿ, ಬಾಂಬ್‌ಗಳ ಸದ್ದು ಕೇಳುತ್ತಿದೆ. ಜನ ಪ್ರಾಣಭೀತಿಯಲ್ಲಿ ಸಮಯ ಕಳೆಯುತ್ತಿದ್ದಾರೆ. ಎಷ್ಟೋ ಮಂದಿ ವಿದೇಶಿಗರು ತಮ್ಮ ತವರುಗಳಿಗೆ ಕಾಲ್ಕಿತ್ತಿದ್ದಾರೆ. ಇಂತಹ ಸಂದಿಗ್ಧ ಸಂದರ್ಭದಲ್ಲೂ ಜೋಡಿಯೊಂದು ನಿರಾತಂಕವಾಗಿ ಮದುವೆ ಸಮಾರಂಭ ಏರ್ಪಡಿಸಿದ್ದು ಎಲ್ಲೆಡೆ ಚರ್ಚೆಯಾಗುತ್ತಿದೆ. ಮದುವೆ ಸಮಾರಂಭದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದೆ.

    ರಷ್ಯಾ ಪಡೆಗಳು ಈಗಾಗಲೇ ಉಕ್ರೇನ್‌ ದೇಶದಲ್ಲಿ ಕಾಣಿಸಿಕೊಂಡಿವೆ. ಉಕ್ರೇನ್‌ನಲ್ಲಿ ಈಗ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಭವಿಷ್ಯ ಹೇಗಿರುತ್ತದೋ ಗೊತ್ತಿಲ್ಲ. ನಾವಿಬ್ಬರು ಈಗಲೇ ಮದುವೆಯಾಗೋಣ ಎಂದು ಯಾರಿನಾ ಅರಿವಾ ಮತ್ತು ಸ್ವ್ಯಾಟೋಸ್ಲಾವ್‌ ಫರ್ಸಿನ್‌ ಜೋಡಿ ನಿರ್ಧರಿಸಿ ಕ್ರೈಸ್ತ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ಇದನ್ನೂ ಓದಿ: ಅಪ್ಪ, ಅಮ್ಮಾ ಐ ಲವ್ ಯೂ – ಯೋಧನ ಕರುಳು ಹಿಂಡುವ ಸಂದೇಶ

    ಉಕ್ರೇನ್‌ ನಗರಗಳಿಂದ ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ. ರಸ್ತೆಗಳು ಮತ್ತು ಸುರಂಗ ಮಾರ್ಗಗಳಲ್ಲಿ ಜನರು ಉಸಿರುಗಟ್ಟಿ ಸಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸನ್ನಿವೇಶಗಳು ಈ ಜೋಡಿ ತರಾತುರಿಯಲ್ಲಿ ಮದುವೆಯಾಗಲು ಕಾರಣವಾಯಿತು.

    ಈ ಸಂದರ್ಭ ತುಂಬಾ ಭಯಾನಕವಾಗಿದೆ. ಆದರೂ ಪ್ರತಿಯೊಬ್ಬರ ಬದುಕಿನಲ್ಲೂ ಇದು ಸಂತೋಷದ ಕ್ಷಣ. ನಾವು ಹೊರಗೆ ಹೋದರೆ ಗುಂಡು ಸೈರನ್‌ ಶಬ್ದಗಳನ್ನು ಕೇಳುತ್ತೇವೆ. ನಮ್ಮ ಭೂಮಿಗಾಗಿ ಹೋರಾಡುವ ಕ್ಷಣವಿದು. ಈ ಸಂದರ್ಭದಲ್ಲಿ ನಾವು ಸಾಯಲೂಬಹುದು. ಅದೆಲ್ಲಕ್ಕಿಂತ ಮೊದಲು ನಾವು ಒಟ್ಟಿಗೆ ಇರಲು ಬಯಸಿದ್ದೇವೆ ಎಂದು ಅರಿವಾ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಗಡಿ ಪ್ರವೇಶಿಸಿದ ಶಸ್ತ್ರಸಜ್ಜಿತ ರಷ್ಯಾ ಸೈನಿಕನಿಗೆ ಉಕ್ರೇನ್‌ ಮಹಿಳೆ ಛೀಮಾರಿ – ವೀಡಿಯೋ ವೈರಲ್‌