ಭೋಪಾಲ್: ಮಧ್ಯಪ್ರದೇಶದ ಮಾಜಿ ಸಿಎಂ ಉಮಾಭಾರತಿ ಅವರು ಭೋಪಾಲ್ನಲ್ಲಿ ಮದ್ಯದಂಗಡಿಯೊಂದನ್ನು ಧ್ವಂಸಗೊಳಿಸಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರು ಟ್ವಿಟ್ಟರ್ನಲ್ಲಿ ಮದ್ಯದ ಅಂಗಡಿಯೊಂದಕ್ಕೆ ಕಲ್ಲು ಎಸೆಯುವ ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಭೋಪಾಲ್ನ ಬರ್ಖೇಡಾ ಪಠಾನಿ ಆಜಾದ್ ನಗರದ ಲೇಬರ್ ಕಾಲೋನಿಯಲ್ಲಿನ ಮದ್ಯದ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಡಳಿತವನ್ನು ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ.
1) बरखेड़ा पठानी आझाद नगर, बीएचईएल भोपाल , यहाँ मज़दूरों की बस्ती में शराब की दुकानों की शृंखला हैं जो की एक बड़े आहाता में लोगों को शराब परोसते हैं । pic.twitter.com/dNAXrh1jRY
ಭೋಪಾಲ್ನ ಬರ್ಖೇಡಾ ಪಠಾನಿ ಆಜಾದ್ ನಗರದ, ಲೇಬರ್ ಕಾಲೋನಿಯಲ್ಲಿ ಮದ್ಯದ ಅಂಗಡಿಗಳ ಸಾಲು ಇದೆ. ಇಲ್ಲಿನ ನಿವಾಸಿಗಳು, ಮಹಿಳೆಯರು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದರು. ನಾನು ಒಂದು ವಾರದೊಳಗೆ ಅಂಗಡಿ ಮತ್ತು ಅಂಗಳವನ್ನು ಮುಚ್ಚುವಂತೆ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದೇನೆ ಉಮಾಭಾರತಿ ಹೇಳಿದ್ದಾರೆ. ಇದನ್ನೂ ಓದಿ: ರಣಬೀರ್ ಕಪೂರ್ ಸ್ಟೆಷಲ್ ಸಾಂಗ್ಗೆ ರಶ್ಮಿಕಾ ಸ್ಟೆಪ್
2) मज़दूरों की बस्ती हैं, पास में मंदिर हैं, छोटे बच्चों के स्कूल हैं । जब लड़कियाँ और महिलायें छतों पर खड़ी होती हैं तो शराब पिये हुए लोग उनके तरफ़ मुँह करके लघुशंका करने के लिए खड़े होकर उनको लज्जित करते हैं ।
ಕಳೆದ ವರ್ಷ, ಮಾಜಿ ಕೇಂದ್ರ ಸಚಿವೆ ಜನವರಿ 15ರೊಳಗೆ ರಾಜ್ಯದಲ್ಲಿ ಮದ್ಯವನ್ನು ನಿಷೇಧಿಸದಿದ್ದರೆ ಬೀದಿಗಿಳಿಯುವುದಾಗಿ ಘೋಷಿಸಿದ್ದರು. ಆದರೆ ಅವರ ಬೇಡಿಕೆಗೆ ವಿರುದ್ಧವಾಗಿ, ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ನೇತೃತ್ವದ ಸರ್ಕಾರವು ಹೊಸ ಅಬಕಾರಿ ನೀತಿಯನ್ನು ಘೋಷಿಸಿತು.
– ಹೇಳಿಕೆ ವಿವಾದಕ್ಕೀಡಾದ ನಂತ್ರ ವಿಷಾದವ್ಯಕ್ತಪಡಿಸಿದ ಮಾಜಿ ಸಿಎಂ
ಭೋಪಾಲ್: ಅಧಿಕಾರಿಗಳು ಇರುವುದೇ ನಮ್ಮ ಚಪ್ಪಲಿ ಎತ್ತಿಕೊಳ್ಳಲು ಎಂದು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಸಚಿವೆ ಉಮಾಭಾರತಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಉಮಾ ಭಾರತಿ ಅವರ ಈ ವಿವಾದಾತ್ಮಕ ಹೇಳಿಕೆಯ ವೀಡಿಯೋ ವೈರಲ್ ಆಗಿದೆ. ಅಧಿಕಾರಿಗಳು ಏನೂ ಅಲ್ಲ, ಅವರು ಇರುವದೇ ನಮ್ಮ ಚಪ್ಪಲ್ಗಳನ್ನು (ಚಪ್ಪಲಿ) ತೆಗೆದುಕೊಳ್ಳಲು. ನಾನು 11 ವರ್ಷಗಳ ಕಾಲ ಅಧಿಕಾರದಲ್ಲಿದ್ದೇನೆ, ಮಧ್ಯ ಪ್ರದೇಶ ಸಿಎಂ ಆಗಿ ಮತ್ತು ನಂತರ ಕೇಂದ್ರ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಅಧಿಕಾರಶಾಹಿ ಎಂದರೆ ಏನು ಎಂದು ನನಗೆ ಚೆನ್ನಾಗಿ ತಿಳಿದಿದೆ ಎಂದಿದ್ದಾರೆ.
ನಾವು(ರಾಜಕಾರಣಿಗಳು) ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಅದರ ನಂತರವೇ ಫೈಲ್ ಪ್ರಕ್ರಿಯೆಗೆ ಮುಂದಾಗುತ್ತದೆ ಎಂದು ಉಮಾ ಭಾರತಿ ಅವರು ಶನಿವಾರ ಭೋಪಾಲ್ ನ ತಮ್ಮ ನಿವಾಸದಲ್ಲಿ ಒಬಿಸಿ ನಿಯೋಗದೊಂದಿಗೆ ನಡೆದ ಸಂವಾದದಲ್ಲಿ ಹೇಳಿದ್ದಾರೆ. ವಿವಾದಾತ್ಮಕ ಹೇಳಿಕೆಯ ವೀಡಿಯೋ ಸೋಮವಾರ ವೈರಲ್ ಆಗಿದ್ದು, ತಮ್ಮ ಹೇಳಿಕೆಗೆ ತೀವ್ರ ಟೀಕೆ ವ್ಯಕ್ತವಾಗುತ್ತಿದಂತೆ ಬಿಜೆಪಿ ನಾಯಕಿ ವಿಷಾದ ವ್ಯಕ್ತಪಡಿಸಿದ್ದಾರೆ.
१) परसों भोपाल में मेरे निवास पर पिछड़े वर्गों का एक प्रतिनिधि मण्डल मुझे मिला । यह मुलाक़ात औपचारिक नही थी । उस पूरी बातचीत का विडीओ मीडिया में वायरल हुआ है ।
ನವದೆಹಲಿ: ಈ ತೀರ್ಪು ಬಹಳ ಸಂತಸ ತಂದಿದೆ ಎಂದು ಬಿಜೆಪಿಯ ಹಿರಿಯ ನಾಯಕ ಎಲ್ಕೆ ಅಡ್ವಾಣಿ ಪ್ರತಿಕ್ರಿಯೆ ನೀಡಿದ್ದಾರೆ.
ಸಿಬಿಐ ವಿಶೇಷ ನ್ಯಾಯಾಲಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಿದ ಬಳಿಕ ಪ್ರತಿಕ್ರಿಯಿಸಿದ ಅವರು, ಈ ತೀರ್ಪು ರಾಮ ಜನ್ಮಭೂಮಿ ಚಳವಳಿಯ ಬಗ್ಗೆ ನನ್ನ ವೈಯಕ್ತಿಕ ಮತ್ತು ಬಿಜೆಪಿಯ ನಂಬಿಕೆ ಮತ್ತು ಬದ್ಧತೆಯನ್ನು ಸಮರ್ಥಿಸುತ್ತದೆ ಎಂದು ಹೇಳಿದ್ದಾರೆ.
ಮತ್ತೊಬ್ಬ ಹಿರಿಯ ನಾಯಕ ಮುರಳಿ ಮನೋಹರ ಜೋಶಿ ಪ್ರತಿಕ್ರಿಯಿಸಿ, ನ್ಯಾಯಾಲಯದಿಂದ ಐತಿಹಾಸಿಕ ನಿರ್ಧಾರ ಪ್ರಕಟವಾಗಿದೆ. ಅಯೋಧ್ಯೆಯಲ್ಲಿ ಡಿಸೆಂಬರ್ 6ರ ಘಟನೆಗೆ ಯಾವುದೇ ಪಿತೂರಿ ನಡೆದಿಲ್ಲ ಎಂಬುದು ಈ ತೀರ್ಪಿನಿಂದ ಸಾಬೀತಾಗಿದೆ. ಅಂದು ನಡೆಸಿದ ಕಾರ್ಯಕ್ರಮ ಪಿತೂರಿಯ ಭಾಗವಾಗಿರಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ಭಾರತ ನ್ಯಾಯಾಂಗ ವ್ಯವಸ್ಥೆಯ ಕರಾಳ ದಿನ: ಓವೈಸಿ
28ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪೂರ್ವನಿಯೋಜಿತ ಕೃತ್ಯ ಅಲ್ಲ. ಇದೊಂದು ಆಕಸ್ಮಿಕ ಘಟನೆ ಎಂದು ಅಭಿಪ್ರಾಯ ಪಟ್ಟ ಸಿಬಿಐ ವಿಶೇಷ ಕೋರ್ಟ್ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಈ ಆರೋಪಿಗಳು ಮಸೀದಿಯನ್ನು ಧ್ವಂಸಗೊಳಿಸಲು ಕರ ಸೇವಕರಿಗೆ ಪ್ರಚೋದನೆ ನೀಡಿದ್ದರು ಎಂದು ಸಿಬಿಐ ವಾದಿಸಿದ್ದರೆ ಆರೋಪಿಗಳು ತಮ್ಮ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ನಮ್ಮನ್ನು ಸಿಕ್ಕಿ ಹಾಕಿಸಲು ರೂಪಿಸಿದ ರಾಜಕೀಯ ಸಂಚು ಎಂದು ವಾದಿಸಿದ್ದರು.
ಅಂದಿನ ಉತ್ತರ ಪ್ರದೇಶ ಸರ್ಕಾರ ಬಿಜೆಪಿ ನಾಯಕರು ಮತ್ತು ಕರ ಸೇವಕರ ವಿರುದ್ಧ ಐಪಿಸಿ ಸೆಕ್ಷನ್ 120, 153, 295, 149, 395ರ ಅಡಿ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿತ್ತು.
ಲಕ್ನೋ: ಬಿಜೆಪಿ ಭೀಷ್ಮ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಖಲಾಸೆಯಾಗಿದ್ದಾರೆ.
28ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯ ಅಂತಿಮ ತೀರ್ಪಿನಲ್ಲಿ ಇದು ಪೂರ್ವನಿಯೋಜಿತ ಕೃತ್ಯ ಅಲ್ಲ. ಇದೊಂದು ಆಕಸ್ಮಿಕ ಘಟನೆ ಎಂದು ಅಭಿಪ್ರಾಯ ಪಟ್ಟ ಸಿಬಿಐ ವಿಶೇಷ ಕೋರ್ಟ್ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿದೆ.
ನ್ಯಾ.ಸುರೇಂದ್ರ ಕುಮಾರ್ ಯಾದವ್ ಅವರು 2,300 ಪುಟಗಳು ಇರುವ ತೀರ್ಪನ್ನು ಬರೆದಿದ್ದಾರೆ. ಈ ತೀರ್ಪಿನಿಂದಾಗಿ ಎಲ್ಕೆ ಅಡ್ವಾಣಿ ಅವರಿಗಿದ್ದ ಎಲ್ಲ ಕಂಟಕ ಈಗ ದೂರವಾಗಿದೆ.
ಈ ಆರೋಪಿಗಳು ಮಸೀದಿಯನ್ನು ಧ್ವಂಸಗೊಳಿಸಲು ಕರ ಸೇವಕರಿಗೆ ಪ್ರಚೋದನೆ ನೀಡಿದ್ದರು ಎಂದು ಸಿಬಿಐ ವಾದಿಸಿದ್ದರೆ ಆರೋಪಿಗಳು ತಮ್ಮ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ನಮ್ಮನ್ನು ಸಿಕ್ಕಿ ಹಾಕಿಸಲು ರೂಪಿಸಿದ ರಾಜಕೀಯ ಸಂಚು ಎಂದು ವಾದಿಸಿದ್ದರು.
ಅಂದಿನ ಉತ್ತರ ಪ್ರದೇಶ ಸರ್ಕಾರ ಬಿಜೆಪಿ ನಾಯಕರು ಮತ್ತು ಕರ ಸೇವಕರ ವಿರುದ್ಧ ಐಪಿಸಿ ಸೆಕ್ಷನ್ 120, 153, 295,149, 395ರ ಅಡಿ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿತ್ತು.
ಖುಲಾಸೆಗೆ ಕಾರಣ ಏನು?
ಆರೋಪಿಗಳು ಯಾರು ಬಾಬ್ರಿ ಮಸೀದಿಯನ್ನು ಧ್ವಂಸ ಮಾಡುವ ಉದ್ದೇಶವನ್ನು ಹೊಂದಿರಲಿಲ್ಲ. ಇದೊಂದು ಆಕಸ್ಮಿಕ ಘಟನೆಯಾಗಿದೆ. ಅಶೋಕ್ ಸಿಂಘಾಲ್ ಮತ್ತು ಇತರ ಸಂಘ ಪರಿವಾರದ ನಾಯಕರು ಒಳಗಡೆಯಿಂದ ಮಸೀದಿ ರಕ್ಷಣೆಗೆ ಮುಂದಾಗಿದ್ದರು. ಈಗ ನೀಡಿರುವ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಗಳ ಮೇಲೆ ಹೊರಿಸಲಾಗಿರುವ ಆರೋಪಗಳನ್ನು ಸಾಬೀತು ಪಡಿಸಲು ಸಾಧ್ಯವಿಲ್ಲ.
ಐಪಿಸಿ ಸೆಕ್ಷನ್ 120 ಬಿ(ಒಳ ಸಂಚು) ಅಡಿ ಪ್ರಕರಣ ದಾಖಲಾಗಿದೆ. ಆದರೆ ಆರೋಪಿಗಳು ಪೂರ್ವಭಾವಿಯಾಗಿ ಒಟ್ಟಿಗೆ ಕುಳಿತುಕೊಂಡು ಒಳಸಂಚು ಮಾಡಿ ಈ ಕೃತ್ಯ ಎಸಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳನ್ನು ನೀಡಿಲ್ಲ.
ಸೆಕ್ಷನ್ 153 ಬಿ (ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ತರುವ ಹೇಳಿಕೆ) ಆರೋಪವನ್ನು ಒಪ್ಪಿಕೊಳ್ಳಲು ಬರುವುದಿಲ್ಲ. ವಿಚಾರಣೆ ವೇಳೆ ಕೋರ್ಟ್ಗೆ ಸಲ್ಲಿರುವ ವಿಡಿಯೋ ತಿರುಚಲಾಗಿದೆ. ಈ ವಿಡಿಯೋಗೆ ಸಂಬಂಧಿಸಿದ ನೆಗೆಟಿವ್ ಸಲ್ಲಿಸುವಂತೆ ಕೋರ್ಟ್ ಕೇಳಿತ್ತು. ಆದರೆ ತನಿಖಾ ತಂಡ ನೆಗೆಟಿವ್ ನೀಡಿಲ್ಲ.
ಸೆಕ್ಷನ್ 295(ಯಾವುದೇ ವರ್ಗದವರ ಮತಕ್ಕೆ ಅವಮಾನ ಮಾಡುವ ಉದ್ದೇಶದಿಂದ ಪೂಜಾ ಸ್ಥಾನಕ್ಕೆ ಧಕ್ಕೆ ಉಂಟು ಮಾಡುವುದು ಅಥವಾ ಅಪವಿತ್ರಗೊಳಿಸುವುದು) ಅಡಿಯಲ್ಲಿ ಆರೋಪ ಮಾಡಲಾಗಿದೆ. ಆದರೆ ಈ ಜಾಗದಲ್ಲಿ ಮುಸ್ಲಿಮರು ಹಲವು ವರ್ಷಗಳಿಂದ ನಮಾಜ್ ಮಾಡುತ್ತಿರಲಿಲ್ಲ. ಪ್ರಾರ್ಥನೆ ಮಾಡದ ಕಾರಣ ಈ ಸ್ಥಳ ಅಪವಿತ್ರಗೊಂಡಿಲ್ಲ.
ಸೆಕ್ಷನ್ 149( ಒಂದೇ ಉದ್ದೇಶಕ್ಕಾಗಿ ಅಕ್ರಮ ಗುಂಪು ಸೇರುವುದು) ಅಡಿಯ ಮಾಡಲಾಗಿರುವ ಆರೋಪ ಒಪ್ಪಲು ಬರುವುದಿಲ್ಲ. ಈ ಘಟನೆಯ ನಡೆದ ಸ್ಥಳದಲ್ಲಿ ಸರ್ಕಾರ ಸೆಕ್ಷನ್ 144 ಹಾಕಿರಲಿಲ್ಲ. ಹೀಗಾಗಿ ಗುಂಪು ಸೇರುವುದು ಅಕ್ರಮವಾಗುದಿಲ್ಲ. ಸಭೆ ನಡೆಸುವುದು ಕಾನೂನುಬಾಹಿರವಾಗುವುದಿಲ್ಲ.
ಆರೋಪಿಗಳ ದರೋಡೆ ಮಾಡಿದ್ದಕ್ಕೆ ಸೆಕ್ಷನ್ 395ರ ಅಡಿ ಕೇಸ್ ಹಾಕಲಾಗಿದೆ. ಆರೋಪಿಗಳು ದರೋಡೆ ಮಾಡಿ ಸ್ಥಳದಿಂದ ಕಲಾಕೃತಿಗಳೊಂದಿಗೆ ಓಡಿ ಹೋಗುವುದನ್ನು ಯಾರು ನೋಡಿಲ್ಲ. ಈ ಕಾರಣಕ್ಕೆ ಈ ಆರೋಪವನ್ನು ಒಪ್ಪಲು ಬರುವುದಿಲ್ಲ ಎಂದು ಅಭಿಪ್ರಾಯಪಟ್ಟ ಕೋರ್ಟ್ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಏನಿದು ಪ್ರಕರಣ?
1992 ಡಿಸೆಂಬರ್ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 351 ಸಾಕ್ಷಿಗಳನ್ನು ಹಾಗೂ 600 ದಾಖಲೆ ಪ್ರತಿಗಳನ್ನು ವಿಶೇಷ ನ್ಯಾಯಾಲಯಕ್ಕೆ ನೀಡಿದೆ. ಆರಂಭಿಕವಾಗಿ 48 ಮಂದಿಯನ್ನು ಆರೋಪಿಗಳೆಂದು ಸಿಬಿಐ ಚಾರ್ಜ್ಶೀಟ್ ಸಲ್ಲಿಸಿತ್ತು. ಆದರೆ ಮೂರು ದಶಕಗಳಿಂದ ವಿಚಾರಣೆ ನಡೆಯುತ್ತಿದ್ದ ಕಾರಣ 48 ಜನ ಆರೋಪಿಗಳ ಪೈಕಿ 16 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 32 ಆರೋಪಿಗಳ ವಿರುದ್ಧ ವಿಚಾರಣೆ ನಡೆಯುತ್ತಿತ್ತು.
ಖಲಾಸೆಯಾದ 32 ಮಂದಿ ಯಾರು?
ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಧೀರ್ ಕಕ್ಕರ್, ಸತೀಶ್ ಪ್ರಧಾನ್, ರಾಮ್ ಚಂದ್ರ ಖತ್ರಿ, ಸಂತೋಷ್ ದುಬೆ, ಓಂ ಪ್ರಕಾಶ್ ಪಾಂಡೆ, ಕಲ್ಯಾಣ್ ಸಿಂಗ್, ಉಮಾ ಭಾರತಿ, ರಾಮ್ ವಿಲಾಸ್ ವೇದಾಂತಿ, ವಿನಯ್ ಕಟಿಯಾರ್, ಪ್ರಕಾಶ್ ಶರ್ನಾ, ಗಾಂಧಿ ಸಿಂಗ್ ಕಮಲೇಶ್ ತ್ರಿಪಾಠಿ, ಬ್ರಿಜ್ ಭೂಷಣ್ ಸಿಂಗ್, ರಾಮ್ಜಿ ಗುಪ್ತಾ, ಮಹಂತ್ ನೃತ್ಯ ಗೋಪಾಲ್ ದಾಸ್, ಚಂಪತ್ ರಾಯ್, ಸಾಕ್ಷಿ ಮಹಾರಾಜ್, ವಿನಯ್ ಕುಮಾರ್ ರೈ, ನವೀನ್ ಭಾಯ್ ಶುಕ್ಲಾ, ಧರ್ಮದಾಸ್, ಜೈ ಭಗವಾನ್ ಗೋಯೆಲ್, ಅಮರನಾಥ್ ಗೋಯೆಲ್, ಸಾಧ್ವಿ ರಿತಂಬರ, ಪವನ್ ಪಾಂಡೆ, ವಿಜಯ್ ಬಹದ್ದೂರ್ ಸಿಂಗ್, ಆರ್ಎಂ ಶ್ರೀವತ್ಸ, ಧರ್ಮೇಂದ್ರ ಸಿಂಗ್ ಗುಜ್ಜರ್.
ಲಕ್ನೋ: ಬಾಬ್ರಿ ಮಸೀದಿ ಧ್ವಂಸ ಪೂರ್ವ ನಿಯೋಜಿತ ಅಲ್ಲ. ಇದೊಂದು ಆಕಸ್ಮಿಕ ಘಟನೆ ಎಂದು ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.
ಕೋರ್ಟ್ ಈ ತೀರ್ಪು ಪ್ರಕಟಿಸುವ ಮೂಲಕ 28ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ ಸೇರಿದಂತೆ ಎಲ್ಲ ಆರೋಪಿಗಳನ್ನು ಕೋರ್ಟ್ ಖುಲಾಸೆಗೊಳಿಸಿದೆ.
ತೀರ್ಪು ನೀಡುವ ದಿನದಂದು ಎಲ್ಲ 32 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ನ್ಯಾ.ಸುರೇಂದ್ರ ಕುಮಾರ್ ಯಾದವ್ ಸೆ.16 ರಂದು ಸೂಚಿಸಿದ್ದ ಹಿನ್ನೆಲೆಯಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು. ಉಳಿದಂತೆ ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್, ಸಾಕ್ಷಿ ಮಹಾರಾಜ್, ಲಾಲು ಸಿಂಗ್, ಬಿಬಿ ಶರಣ್ ಸಿಂಗ್ ಸೇರಿದಂತೆ ಎಲ್ಲ ಆರೋಪಿಗಳು ಕೋರ್ಟ್ ಕೊಠಡಿಯಲ್ಲಿ ಹಾಜರಿದ್ದರು.
ತೀರ್ಪು ಪ್ರಕಟಿಸುವ ಹಿನ್ನೆಲೆಯಲ್ಲಿ ಕೋರ್ಟ್ ಸುತ್ತ ಮುತ್ತ ಬ್ಯಾರಿಕೇಡ್ ಅಳವಡಿಸಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಕೋರ್ಟ್ ಇರುವ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಬದಲಾವಣೆ ಮಾಡಲಾಗಿತ್ತು.
ಸುಪ್ರೀಂ ಸೂಚನೆ ಏನಿತ್ತು?
2017ರ ಏಪ್ರಿಲ್ 19 ಎಂದು ಪ್ರತಿನಿತ್ಯ ವಿಚಾರಣೆ ನಡೆಸಿ 2 ವರ್ಷದ ಒಳಗಡೆ ತೀರ್ಪು ಪ್ರಕಟಿಸುವಂತೆ ಸಿಬಿಐ ವಿಶೇಷ ಕೋರ್ಟ್ಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿತ್ತು. ಲಕ್ನೋ ಸಿಬಿಐ ನ್ಯಾಯಾಲಯದಲ್ಲಿ ಕರಸೇವಕರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೆ 8 ವಿಐಪಿಗಳ ವಿರುದ್ಧ ರಾಯಬರೇಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. 2017ರ ಏಪ್ರಿಲ್ನಲ್ಲಿ ರಾಯಬರೇಲಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ಲಕ್ನೋ ಸಿಬಿಐ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ವರ್ಗಾಯಿಸಿತ್ತು.
ಏನಿದು ಪ್ರಕರಣ?
1992 ಡಿಸೆಂಬರ್ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 351 ಸಾಕ್ಷಿಗಳನ್ನು ಹಾಗೂ 600 ದಾಖಲೆ ಪ್ರತಿಗಳನ್ನು ವಿಶೇಷ ನ್ಯಾಯಾಲಯಕ್ಕೆ ನೀಡಿದೆ. ಆರಂಭಿಕವಾಗಿ 48 ಮಂದಿಯನ್ನು ಆರೋಪಿಗಳೆಂದು ಸಿಬಿಐ ಚಾರ್ಜ್ಶೀಟ್ ಸಲ್ಲಿಸಿತ್ತು. ಆದರೆ ಮೂರು ದಶಕಗಳಿಂದ ವಿಚಾರಣೆ ನಡೆಯುತ್ತಿದ್ದ ಕಾರಣ 48 ಜನ ಆರೋಪಿಗಳ ಪೈಕಿ 16 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 32 ಆರೋಪಿಗಳ ವಿರುದ್ಧ ವಿಚಾರಣೆ ನಡೆಯುತ್ತಿತ್ತು.
Senior bjp leader and accused in Babri Masjid demolition case joining the court via video conference. pic.twitter.com/IDTV07qsQ7
ಯಾವೆಲ್ಲ ಸೆಕ್ಷನ್?
ಸೆಕ್ಷನ್ 153 ಎ(ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು),ಸೆಕ್ಷನ್ 153 ಬಿ(ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ತರುವ ಹೇಳಿಕೆ), ಸೆಕ್ಷನ್ 505( ಸಾರ್ವಜನಿಕ ಕಿಡಿಗೇಡಿತನಕ್ಕೆ ಕೇಡಿಗೆ ಕಾರಣವಾಗುವ ಹೇಳಿಕೆ) ಅಡಿ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿತ್ತು.
ವಾದ ಏನಿತ್ತು?
ಈ ಆರೋಪಿಗಳು ಮಸೀದಿಯನ್ನು ಧ್ವಂಸಗೊಳಿಸಲು ಕರ ಸೇವಕರಿಗೆ ಪ್ರಚೋದನೆ ನೀಡಿದ್ದರು ಎಂದು ಸಿಬಿಐ ವಾದಿಸಿದ್ದರೆ ಆರೋಪಿಗಳು ತಮ್ಮ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ನಮ್ಮನ್ನು ಸಿಕ್ಕಿ ಹಾಕಿಸಲು ರೂಪಿಸಿದ ರಾಜಕೀಯ ಸಂಚು ಎಂದು ವಾದಿಸಿದ್ದರು.
32 ಮಂದಿಆರೋಪಿಗಳು ಯಾರು?
ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಧೀರ್ ಕಕ್ಕರ್, ಸತೀಶ್ ಪ್ರಧಾನ್, ರಾಮ್ ಚಂದ್ರ ಖತ್ರಿ, ಸಂತೋಷ್ ದುಬೆ, ಓಂ ಪ್ರಕಾಶ್ ಪಾಂಡೆ, ಕಲ್ಯಾಣ್ ಸಿಂಗ್, ಉಮಾ ಭಾರತಿ, ರಾಮ್ ವಿಲಾಸ್ ವೇದಾಂತಿ, ವಿನಯ್ ಕಟಿಯಾರ್, ಪ್ರಕಾಶ್ ಶರ್ನಾ, ಗಾಂಧಿ ಸಿಂಗ್ ಕಮಲೇಶ್ ತ್ರಿಪಾಠಿ, ಬ್ರಿಜ್ ಭೂಷಣ್ ಸಿಂಗ್, ರಾಮ್ಜಿ ಗುಪ್ತಾ, ಮಹಂತ್ ನೃತ್ಯ ಗೋಪಾಲ್ ದಾಸ್, ಚಂಪತ್ ರಾಯ್, ಸಾಕ್ಷಿ ಮಹಾರಾಜ್, ವಿನಯ್ ಕುಮಾರ್ ರೈ, ನವೀನ್ ಭಾಯ್ ಶುಕ್ಲಾ, ಧರ್ಮದಾಸ್, ಜೈ ಭಗವಾನ್ ಗೋಯೆಲ್, ಅಮರನಾಥ್ ಗೋಯೆಲ್, ಸಾಧ್ವಿ ರಿತಂಬರ, ಪವನ್ ಪಾಂಡೆ, ವಿಜಯ್ ಬಹದ್ದೂರ್ ಸಿಂಗ್, ಆರ್ಎಂ ಶ್ರೀವತ್ಸ, ಧರ್ಮೇಂದ್ರ ಸಿಂಗ್ ಗುಜ್ಜರ್.
ಲಕ್ನೋ: 28ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು ಇಂದು ಸಿಬಿಐ ವಿಶೇಷ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ.
ತೀರ್ಪು ನೀಡುವ ದಿನದಂದು ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ನ್ಯಾ.ಸುರೇಂದ್ರ ಕುಮಾರ್ ಯಾದವ್ ಸೆ.16 ರಂದು ಸೂಚಿಸಿದ್ದರು.
ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿದಂತೆ 32 ಮಂದಿ ಆರೋಪಿಗಳಿದ್ದಾರೆ.
ಸುಪ್ರೀಂ ಸೂಚನೆ ಏನಿತ್ತು?
2017ರ ಏಪ್ರಿಲ್ 19 ಎಂದು ಪ್ರತಿನಿತ್ಯ ವಿಚಾರಣೆ ನಡೆಸಿ 2 ವರ್ಷದ ಒಳಗಡೆ ತೀರ್ಪು ಪ್ರಕಟಿಸುವಂತೆ ಸಿಬಿಐ ವಿಶೇಷ ಕೋರ್ಟ್ಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿತ್ತು. ಲಕ್ನೋ ಸಿಬಿಐ ನ್ಯಾಯಾಲಯದಲ್ಲಿ ಕರಸೇವಕರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೆ 8 ವಿಐಪಿಗಳ ವಿರುದ್ಧ ರಾಯಬರೇಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. 2017ರ ಏಪ್ರಿಲ್ನಲ್ಲಿ ರಾಯಬರೇಲಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ಲಕ್ನೋ ಸಿಬಿಐ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ವರ್ಗಾಯಿಸಿತ್ತು.
ಏನಿದು ಪ್ರಕರಣ?
1992 ಡಿಸೆಂಬರ್ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 351 ಸಾಕ್ಷಿಗಳನ್ನು ಹಾಗೂ 600 ದಾಖಲೆ ಪ್ರತಿಗಳನ್ನು ವಿಶೇಷ ನ್ಯಾಯಾಲಯಕ್ಕೆ ನೀಡಿದೆ. ಆರಂಭಿಕವಾಗಿ 48 ಮಂದಿಯನ್ನು ಆರೋಪಿಗಳೆಂದು ಸಿಬಿಐ ಚಾರ್ಜ್ಶೀಟ್ ಸಲ್ಲಿಸಿತ್ತು. ಆದರೆ ಮೂರು ದಶಕಗಳಿಂದ ವಿಚಾರಣೆ ನಡೆಯುತ್ತಿದ್ದ ಕಾರಣ 48 ಜನ ಆರೋಪಿಗಳ ಪೈಕಿ 16 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 32 ಆರೋಪಿಗಳ ವಿರುದ್ಧ ವಿಚಾರಣೆ ನಡೆಯುತ್ತಿತ್ತು.
ಯಾವೆಲ್ಲ ಸೆಕ್ಷನ್?
ಸೆಕ್ಷನ್ 153 ಎ(ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು),ಸೆಕ್ಷನ್ 153 ಬಿ(ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ತರುವ ಹೇಳಿಕೆ), ಸೆಕ್ಷನ್ 505( ಸಾರ್ವಜನಿಕ ಕಿಡಿಗೇಡಿತನಕ್ಕೆ ಕೇಡಿಗೆ ಕಾರಣವಾಗುವ ಹೇಳಿಕೆ) ಅಡಿ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿತ್ತು.
ವಾದ ಏನಿತ್ತು?
ಈ ಆರೋಪಿಗಳು ಮಸೀದಿಯನ್ನು ಧ್ವಂಸಗೊಳಿಸಲು ಕರ ಸೇವಕರಿಗೆ ಪ್ರಚೋದನೆ ನೀಡಿದ್ದರು ಎಂದು ಸಿಬಿಐ ವಾದಿಸಿದ್ದರೆ ಆರೋಪಿಗಳು ತಮ್ಮ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ನಮ್ಮನ್ನು ಸಿಕ್ಕಿ ಹಾಕಿಸಲು ರೂಪಿಸಿದ ರಾಜಕೀಯ ಸಂಚು ಎಂದು ವಾದಿಸಿದ್ದರು.
32 ಮಂದಿಆರೋಪಿಗಳು ಯಾರು?
ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಧೀರ್ ಕಕ್ಕರ್, ಸತೀಶ್ ಪ್ರಧಾನ್, ರಾಮ್ ಚಂದ್ರ ಖತ್ರಿ, ಸಂತೋಷ್ ದುಬೆ, ಓಂ ಪ್ರಕಾಶ್ ಪಾಂಡೆ, ಕಲ್ಯಾಣ್ ಸಿಂಗ್, ಉಮಾ ಭಾರತಿ, ರಾಮ್ ವಿಲಾಸ್ ವೇದಾಂತಿ, ವಿನಯ್ ಕಟಿಯಾರ್, ಪ್ರಕಾಶ್ ಶರ್ನಾ, ಗಾಂಧಿ ಸಿಂಗ್ ಕಮಲೇಶ್ ತ್ರಿಪಾಠಿ, ಬ್ರಿಜ್ ಭೂಷಣ್ ಸಿಂಗ್, ರಾಮ್ಜಿ ಗುಪ್ತಾ, ಮಹಂತ್ ನೃತ್ಯ ಗೋಪಾಲ್ ದಾಸ್, ಚಂಪತ್ ರಾಯ್, ಸಾಕ್ಷಿ ಮಹಾರಾಜ್, ವಿನಯ್ ಕುಮಾರ್ ರೈ, ನವೀನ್ ಭಾಯ್ ಶುಕ್ಲಾ, ಧರ್ಮದಾಸ್, ಜೈ ಭಗವಾನ್ ಗೋಯೆಲ್, ಅಮರನಾಥ್ ಗೋಯೆಲ್, ಸಾಧ್ವಿ ರಿತಂಬರ, ಪವನ್ ಪಾಂಡೆ, ವಿಜಯ್ ಬಹದ್ದೂರ್ ಸಿಂಗ್, ಆರ್ಎಂ ಶ್ರೀವತ್ಸ, ಧರ್ಮೇಂದ್ರ ಸಿಂಗ್ ಗುಜ್ಜರ್.
ನವದೆಹಲಿ: ಲೋಕಸಭೆ ಚುನಾವಣೆಗೆ ಸ್ಪರ್ಧಿಸದಿರಲು ಬಿಜೆಪಿಯ ನಾಯಕಿ, ಕೇಂದ್ರ ಸಚಿವೆ ಉಮಾ ಭಾರತಿ ನಿರ್ಧರಿಸಿದ್ದಾರೆ.
ಕೇವಲ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಇಚ್ಛೆ ಹೊಂದಿರುವೆ. ಹೀಗಾಗಿ ಲೋಕಸಭೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಉಮಾ ಭಾರತಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರಂತೆ. ಈ ಮೂಲಕ ತಮ್ಮ ನಿರ್ಧಾರವನ್ನು ಪುರಸ್ಕರಿಸುವಂತೆ ಕೇಳಿಕೊಂಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಉಮಾ ಭಾರತಿ ಅವರು, ಎರಡು ಬಾರಿ ಶಾಸಕಿಯಾಗಿ ಹಾಗೂ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ಸಚಿವೆಯಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಉಮಾ ಭಾರತಿ ಅವರು, ಗಂಗಾ ತೀರದಲ್ಲಿ ತೀರ್ಥಯಾತ್ರೆ ಕೈಗೊಳ್ಳಲು ನಿರ್ಧರಿಸಿರುವೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು 2016ರಲ್ಲಿಯೇ ತಿಳಿಸಿದ್ದೆ. ಒಂದು ವೇಳೆ ನಾನು ಸ್ಪರ್ಧಿಸಬೇಕಾದರೆ ಝಾನ್ಸಿ ಕ್ಷೇತ್ರದಿಂದಲೇ ಕಣಕ್ಕೆ ಇಳಿಯುತ್ತೇನೆ. ಯಾವುದೇ ಕಾರಣಕ್ಕೂ ಕ್ಷೇತ್ರವನ್ನು ಬದಲಾಯಿಸುವುದಿಲ್ಲ. ಕ್ಷೇತ್ರದ ಜನರಿಗೆ ನನ್ನ ಬಗ್ಗೆ ಹೆಮ್ಮೆಯಿದೆ. ಅವರು ನನ್ನನ್ನು ತಮ್ಮ ಮಗಳೆಂದು ತಿಳಿದುಕೊಂಡಿದ್ದಾರೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎನ್ನುವ ಭರವಸೆ ಇದೆ. ಆದರೆ ಈ ಬಾರಿ ನಾನು ಸ್ಪರ್ಧೆ ಮಾಡುವುದಿಲ್ಲ. 2024ರ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದರು.
ತೀರ್ಥಯಾತ್ರೆಗೆ ಹೋಗುತ್ತಿರುವ ಹಿನ್ನೆಲೆಯಲ್ಲೆ ಮೇ 5ರ ವರೆಗೆ ಬಿಜೆಪಿ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತೇನೆ. ಪಕ್ಷವು ನನಗಾಗಿ ಎಲ್ಲವನ್ನೂ ನೀಡಿದೆ. ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವೆಯಾಗಿ ಕಾರ್ಯನಿರ್ವಹಿಸಲು ಅವಕಾಶ ಸಿಕ್ಕಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ನೀಡಿರುವ ಜವಾಬ್ದಾರಿ ಹೊರತಾಗಿ ಎಲ್ಲವನ್ನೂ ನಿಬಾಯಿಸಿದ್ದೇನೆ. ಪಕ್ಷದ ಪರ ಪ್ರಚಾರ ಮಾಡುವುದು ನನ್ನ ಕರ್ತವ್ಯ ಎಂದು ಉಮಾ ಭಾರತಿ ತಿಳಿಸಿದರು.
ಲಖನೌ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರಾದ ಲಾಲ್ ಕೃಷ್ಣ ಅಡ್ವಾಣಿ, ಕೇಂದ್ರ ಸಚಿವೆ ಉಮಾಭಾರತಿ ಹಾಗೂ ಮುರಳಿ ಮನೋಹರ ಜೋಷಿ ಸೇರಿದಂತೆ ಪ್ರಕರಣದ 12 ಆರೋಪಿಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.
ಉತ್ತರ ಪ್ರದೇಶದ ಲಖನೌನಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನ್ಯಾಯಮೂರ್ತಿ ಎಸ್ ಕೆ ಯಾದವ್ ನೇತೃತ್ವದಲ್ಲಿ ವಿಚಾರಣೆ ನಡೆಯಿತು. ಈ ಹಿಂದಿನ ವಿಚಾರಣೆಯಲ್ಲಿ ಆರೋಪಿಗಳು ಖುದ್ದಾಗಿ ಹಾಜರಾಗಬೇಕು. ಇಲ್ಲದಿದ್ದರೆ ಯಾವುದೇ ರೀತಿಯ ಮನವಿ ಮತ್ತು ಅರ್ಜಿಗಳನ್ನು ಸ್ಪೀಕರಿಸುವುದಿಲ್ಲ ಎಂದು ನ್ಯಾಯಮೂರ್ತಿ ಎಸ್.ಕೆ. ಯಾದವ್ ಸ್ಪಷ್ಟಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲ ಆರೋಪಿಗಳು ಇಂದು ವಿಚಾರಣೆಗೆ ಖುದ್ದು ಹಾಜರಾಗಿ, ಜಾಮೀನು ಅರ್ಜಿ ಸಲ್ಲಿಸಿದ್ದರು.
ಬಾಬರಿ ಮಸೀದಿ ಧ್ವಂಸಕ್ಕೆ ಸಂಚು ರೂಪಿಸಿದ್ದರು ಎಂಬ ಆರೋಪದ ಮೇಲೆ ಕಳೆದ ಏಪ್ರಿಲ್ 19ರಂದು ಪ್ರಕರಣ ದಾಖಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಪ್ರಕರಣದ ತನಿಖೆಯನ್ನು ಲಖನೌನಲ್ಲಿ ನಡೆಸಿ 2 ವರ್ಷದಲ್ಲಿ ತೀರ್ಪು ನೀಡುವಂತೆ ಆದೇಶ ನೀಡಿತ್ತು.
ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಎಲ್ಕೆ ಅಡ್ವಾಣಿ ಸೇರಿದಂತೆ 13 ಜನರ ವಿರುದ್ಧ ವಿಚಾರಣೆಗೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಮರುಜೀವ ನೀಡಬೇಕೆಂದು ಕೋರ್ಟ್ಗೆ ಸಿಬಿಐ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಅಡ್ವಾಣಿ, ಉಮಾಭಾರತಿ, ಮುರಳಿ ಮನೋಹರ್ ಜೋಶಿ ಸೇರಿದಂತೆ 13 ಜನರ ವಿರುದ್ಧ ವಿಚಾರಣೆಗೆ ಅನುಮತಿ ಸಿಕ್ಕಿದೆ. ಪ್ರಕರಣದ ಕುರಿತಂತೆ ದೈನಂದಿನ ವಿಚಾರಣೆ ನಡೆಸಲು ನ್ಯಾಯಾಧೀಶರು ಆದೇಶಿಸಿದ್ದು, ತೀರ್ಪಿಗೆ 2 ವರ್ಷಗಳ ಗಡುವು ನೀಡಿದ್ದಾರೆ.
1992ರಲ್ಲಿ ಲಕ್ಷಾಂತರ ಕರಸೇವಕರು ಬಾಬ್ರೀ ಮಸೀದಿಯನ್ನು ಕೆಡವಲು ಪ್ರೇರಣೆಯಾಗುವಂತೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಎಲ್ಕೆ ಅಡ್ವಾಣಿ, ಉಮಭಾರತಿ ಹಾಗೂ ಮುರಳಿ ಮನೋಹರ್ ಜೋಷಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದರ ವಿಚಾರಣೆ ರಾಯ್ ಬರೇಲಿಯಲ್ಲಿ ನಡೆಯುತ್ತಿತ್ತು.
ಇದೀಗ ಗಂಭೀರ ಆರೋಪ ಎದುರಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಲಕ್ನೋದಲ್ಲಿ ವಿಚಾರಣೆ ನಡೆಯಲಿದೆ. ಮಸೀದಿ ಧ್ವಂಸಗೊಳಿಸಿದ ಆರೋಪದ ಮೇಲೆ 20 ಜನರ ವಿರುದ್ಧ ಮೊತ್ತೊಂದು ಕೇಸ್ನ ವಿಚಾರಣೆಯೂ ನಡೆಯುತ್ತಿದ್ದು, ಎರಡೂ ವಿಚಾರಣೆಗಳು ಪೂರ್ಣಗೊಂಡು ಇನ್ನೆರಡು ವರ್ಷಗಳಲ್ಲಿ ತೀರ್ಪು ನೀಡಬೇಕೆಂದು ನ್ಯಾಯಾಧೀಶರು ಹೇಳಿದ್ದಾರೆ.
ಮಸೀದಿ ಧ್ವಂಸ ಸಂದರ್ಭದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್ ಸಿಂಗ್ ಸದ್ಯ ರಾಜಸ್ಥಾನದ ರಾಜ್ಯಪಾಲರಾಗಿದ್ದು, ಅಧಿಕಾರದಲ್ಲಿರುವಾಗ ಅವರ ವಿಚಾರಣೆ ಸಾಧ್ಯವಿಲ್ಲ. ಹೀಗಾಗಿ ರಾಜ್ಯಪಾಲರಾಗಿ ಕಲ್ಯಾಣ್ ಸಿಂಗ್ ಅಧಿಕಾರಾವಧಿ ಪೂರ್ಣಗೊಂಡ ಬಳಿಕ ಅವರ ವಿಚಾರಣೆ ಆರಂಭವಾಗಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸಿಬಿಐ ವಾದವೇನು?: ಬಿಜೆಪಿ ನಾಯಕರು ಮಸೀದಿ ಕೆಡವಲು ಪೂರ್ವ ಸಿದ್ಧತೆ ಮಾಡಿದ್ದರು. ಮಸೀದಿ ಕೆಡವಿದ ದಿನ ಸ್ಟೇಜ್ ಮೇಲೆ ಭಾಷಣ ಮಾಡಿದ್ದು ಕೂಡ ಇದರ ಭಾಗವಾಗಿತ್ತು. ಅಡ್ವಾಣಿ ಹಾಗೂ ಇತರೆ ಬಿಜೆಪಿ ನಾಯಕರು ಮಸೀದಿ ಕೆಡವಿದ ಹಿಂದಿನ ದಿನ ಭೇಟಿಯಾಗಿ ಮಸೀದಿ ಧ್ವಂಸಗೊಳಿಸಬೇಕೆಂದು ನಿರ್ಧರಿಸಿದ್ದರು ಎಂಬುದಕ್ಕೆ ನಮ್ಮ ಬಳಿ ಸಾಕ್ಷಿ ಇದೆ. ಆದ್ದರಿಂದ ಇದೊಂದು ಪೂರ್ವ ಯೋಜಿತ, ಉದ್ದೇಶಪೂರ್ವಕ ಘಟನೆ ಎಂದು ಸಿಬಿಐ ಹೇಳಿತ್ತು.
ಆದ್ರೆ 2010ರಲ್ಲಿ ಅಲಹಾಬಾದ್ ಹೈ ಕೋರ್ಟ್, ಬಿಜೆಪಿ ನಾಯಕರ ವಿರುದ್ಧ ಒಳಸಂಚು ಅರೋಪ ಮಾಡಿದ ಸಿಬಿಐ ವಾದವನ್ನು ತಿರಸ್ಕರಿಸಿತ್ತು. ಹೀಗಾಗಿ ರಾಯ್ಬರೇಲಿಯಲ್ಲಿಯೇ ಬಿಜೆಪಿ ನಾಯಕರ ವಿಚಾರಣೆ ಮುಂದುವರೆದಿತ್ತು. ಕೋರ್ಟ್ನ ಈ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಉನ್ನತ ನ್ಯಾಯಾಲಯದ ಮೊರೆ ಹೋಗಿತ್ತು.
ಮಸೀದಿ ಇದ್ದ ಜಾಗದಲ್ಲಿ ಮಂದಿರ ಕಟ್ಟಬೇಕೆಂದು ಎಲ್ಕೆ ಅಡ್ವಾಣಿ ಅವರ ನೇತೃತ್ವದಲ್ಲಿ ಆರಂಭವಾದ ಚಳುವಳಿಯ ಬೆನ್ನಲ್ಲೇ ಬಾಬ್ರಿ ಮಸೀದಿಯನ್ನು ಕೆಡವಲಾಗಿತ್ತು. ರಾಮ ಜನ್ಮ ಭೂಮಿಯ ಸ್ಥಳದಲ್ಲಿ ಮಸೀದಿ ಕಟ್ಟಲಾಗಿದೆ ಎಂದು ಹಿಂದೂಗಳು ನಂಬಿದ್ದು, ಈ ಜಾಗದಲ್ಲಿ ರಾಮ ಮಂದಿರ ಕಟ್ಟಬೇಕೆಂದು ಒತ್ತಾಯಿಸಿದ್ದಾರೆ. ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಸಂದರ್ಭದಲ್ಲಿ ದೇಶದಾದ್ಯಂತ ಹಿಂದೂ ಹಾಗೂ ಮುಸ್ಲಿಮರ ನಡುವೆ ಘರ್ಷಣೆಗಳು ನಡೆದು ಸುಮಾರು 2 ಸಾವಿರ ಮಂದಿ ಸಾವನ್ನಪ್ಪಿದ್ದರು.
ಏನಿದು ಪ್ರಕರಣ?: ಬಾಬ್ರಿ ಮಸೀದಿ ದ್ವಂಸ ಪ್ರಕರಣದಲ್ಲಿ ಅಡ್ವಾಣಿ ಸೇರಿದಂತೆ ಬಿಜೆಪಿ ಮುಖಂಡರ ಮೇಲಿದ್ದ ಆರೋಪವನ್ನು ಅಲಹಾಬಾದ್ ಹೈಕೋರ್ಟ್ 2010ರ ಮೇ 20 ರಂದು ತಾಂತ್ರಿಕ ಕಾರಣ ಹೇಳಿ ಕೈಬಿಟ್ಟಿದ್ದನ್ನು ಹಾಜಿ ಮೆಹಬೂಬ್ ಅಹಮ್ಮದ್ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಸಿಬಿಐ ಕೂಡ ಈ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಬಿಜೆಪಿ ಹಾಗೂ ಸಂಘ ಪರಿವಾರದ ಮುಖಂಡರಾದ ಅಶೋಕ್ ಸಿಂಘಾಲ್, ಗಿರಿರಾಜ್ ಕಿಶೋರ್, ಉಮಾ ಭಾರತಿ, ಮಹಂತ ಅವೈದ್ಯನಾಥ್, ವಿನಯ್ ಕಟಿಯಾರ್, ವಿಷ್ಣು ಹರಿ ದಾಲ್ಮಿಯಾ, ಸಾಧ್ವಿ ರಿತಂಬರಾ, ಕಲ್ಯಾಣ್ ಸಿಂಗ್ ಅವರು ಈ ಪಟ್ಟಿಯಲ್ಲಿ ಸೇರಿದ್ದಾರೆ.
ಬಿಜೆಪಿಗೆ ಹಿನ್ನಡೆ: ರಾಷ್ಟ್ರಪತಿ ಹುದ್ದೆಗೆ ಬಿಜೆಪಿ ಎಲ್ಕೆ ಅಡ್ವಾಣಿ ಅವರನ್ನು ಬಿಜೆಪಿ ಆಯ್ಕೆ ಮಾಡುತ್ತದೆ ಎನ್ನುವ ಒಂದು ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಈಗ ಸುಪ್ರೀಂ ಕೋರ್ಟ್ ವಿಚಾರಣೆಗೆ ಹಾಜರುಗುವಂತೆ ಆದೇಶ ಪ್ರಕಟಿಸಿರುವುದು ಬಿಜೆಪಿ ಮತ್ತು ಎಲ್ಕೆ ಅಡ್ವಾಣಿ ಅವರಿಗೆ ಹಿನ್ನಡೆಯಾಗಿದೆ.