ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ (Arjun Sarja) ಪುತ್ರಿ ಐಶ್ವರ್ಯಾ ಹಸೆಮಣೆ ಏರಲು ರೆಡಿಯಾಗಿದ್ದಾರೆ. ತಮಿಳಿನ ಖ್ಯಾತ ನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ (Umapathy ramaiah) ಜೊತೆ ನಟಿ ಮದುವೆಯಾಗಲಿದ್ದಾರೆ. ಮಗಳ ಮದುವೆಗೆ ಖುದ್ದು ನಟ ನಟಿಯರ ಮನೆಗೆ ತೆರಳಿ ಅರ್ಜುನ್ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸುತ್ತಿದ್ದಾರೆ. ಜಗ್ಗೇಶ್ ಸೇರಿದಂತೆ ಹಲವರಿಗೆ ಆಹ್ವಾನ ನೀಡಿದ್ದಾರೆ.
ನಟಿ ಐಶ್ವರ್ಯಾ ಸರ್ಜಾ (Aishwarya Sarja) ಅವರು ಜೂನ್ 10ಕ್ಕೆ ಚೆನ್ನೈನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ಜರುಗಲಿದೆ. ಎರಡು ಕುಟುಂಬವು ಕಲಾವಿದರ ಕುಟುಂಬವೇ ಆಗಿರುವ ಕಾರಣ, ಕನ್ನಡ ಮತ್ತು ಸೌತ್ನ ನಟ, ನಟಿಯರಿಗೆ ಈ ಮದುವೆಗೆ ಆಹ್ವಾನ ಇರಲಿದೆ.
ತಮಿಳು ನಟ ಉಮಾಪತಿ ಮತ್ತು ಐಶ್ವರ್ಯಾ ಇಬ್ಬರೂ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕಳೆದ ಅಕ್ಟೋಬರ್ 27ರಂದು ಚೆನ್ನೈನಲ್ಲಿ ಅದ್ಧೂರಿಯಾಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಈ ಸಂಭ್ರಮದಲ್ಲಿ ಧ್ರುವ ಸರ್ಜಾ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಅಂದಹಾಗೆ, ಐಶ್ವರ್ಯಾ ಅವರು 2018ರಲ್ಲಿ ‘ಪ್ರೇಮ ಬರಹ’ (Prema Baraha) ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಚಂದನ್ ಕುಮಾರ್ಗೆ ನಾಯಕಿಯಾಗಿದ್ದರು. ಮಗಳ ಚಿತ್ರಕ್ಕೆ ಅರ್ಜುನ್ ಸರ್ಜಾ ನಿರ್ದೇಶನ ಮಾಡಿದ್ದರು. ಈ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ತೆರೆಕಂಡಿತ್ತು.
ಕನ್ನಡಿಗ, ದಕ್ಷಿಣ ಭಾರತದ ಹೆಸರಾಂತ ನಟ ಅರ್ಜುನ್ ಸರ್ಜಾ (Arjun Sarja) ಅವರು ತಮ್ಮ ಪುತ್ರಿ ಐಶ್ವರ್ಯ ಸರ್ಜಾ ಅವರ ಮದುವೆ (Marriage) ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಮಾತು ತಮಿಳು ಚಿತ್ರೋದ್ಯಮದಲ್ಲಿ ಕೇಳಿ ಬಂದಿತ್ತು. ಅದೀಗ ನಿಜವಾಗಿದೆ. ತಮ್ಮ ಮಗನ ಜೊತೆ ಐಶ್ವರ್ಯರ ಮದುವೆ ಆಗುತ್ತಿರುವುದು ನಿಜ ಎಂದು ಹುಡುಗನ ತಂದೆಯೇ ಅಧಿಕೃತ ಹೇಳಿಕೆ ನೀಡಿದ್ದಾರೆ.
ಪ್ರೇಮ ಬರಹ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ತಮ್ಮ ಪುತ್ರಿ ಐಶ್ವರ್ಯ (Aishwarya Sarja) ಅವರನ್ನು ಪರಿಚಯ ಮಾಡಿಕೊಟ್ಟಿದ್ದರು ಅರ್ಜುನ್ ಸರ್ಜಾ. ಈ ಸಿನಿಮಾವನ್ನು ತಾವೇ ನಿರ್ಮಾಣ ಮಾಡಿ, ನಿರ್ದೇಶನವನ್ನೂ ಮಾಡಿದ್ದರು. ಅದು ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿತ್ತು. ಹೇಳಿಕೊಳ್ಳುವಂತೆ ಸಿನಿಮಾ ಪ್ರೇಕ್ಷಕರ ಮನಸ್ಸು ಗೆಲ್ಲಲಿಲ್ಲ. ಆನಂತರ ಐಶ್ವರ್ಯ ಸಿನಿಮಾ ರಂಗದಲ್ಲಿ ಅಷ್ಟೇನೂ ಸಕ್ರೀಯರಾಗಲಿಲ್ಲ. ಇದನ್ನೂ ಓದಿ:ಕಿಚ್ಚನ ಮುಂದಿನ ಚಿತ್ರಕ್ಕೆ ಹೊಸ ನಿರ್ದೇಶಕ: ಅವರನ್ನ ಬಿಟ್ಟು ಇವರಾರು?
ಇದೀಗ ತಮ್ಮ ಪುತ್ರಿಯನ್ನು ತಮಿಳಿನ ಖ್ಯಾತ ಹಾಸ್ಯ ನಟ ತಂಬಿ ರಾಮಯ್ಯ (Thambi Ramaiah) ಅವರ ಪುತ್ರ ಉಮಾಪತಿ ರಾಮಯ್ಯ (Umapati Ramaiah) ಜೊತೆ ಮದುವೆ ಮಾಡಲು ತಯಾರಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಹಾಗಂತ ತಮಿಳು ಮಾಧ್ಯಮಗಳು ಸುದ್ದಿ ಮಾಡಿದ್ದವು. ಒಂದು ಮೂಲದ ಪ್ರಕಾರ ಉಮಾಪತಿ ಮತ್ತು ಐಶ್ವರ್ಯ ಹಲವು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎಂದೂ ಹೇಳಲಾಗಿತ್ತು. ಮದುವೆಗೆ ಎರಡೂ ಮನೆಯ ಒಪ್ಪಿಗೆಯೂ ಇದೆ ಎಂದು ಹೇಳಲಾಗಿತ್ತು. ಈಗ ಎಲ್ಲವೂ ನಿಜ ಎಂದು ತಂಬಿ ರಾಮಯ್ಯ ತಿಳಿಸಿದ್ದಾರೆ.
ನನ್ನ ಮಗನ ಜೊತೆ ಐಶ್ವರ್ಯ ಅವರ ಮದುವೆ ಆಗುತ್ತಿರುವುದು ನಿಜ. ಇಬ್ಬರೂ ಒಬ್ಬರಿಗೊಬ್ಬರು ಇಷ್ಟಪಟ್ಟಿದ್ದಾರೆ. ಒಪ್ಪಿಕೊಂಡಿದ್ದಾರೆ. ಮದುವೆ ದಿನಾಂಕವನ್ನು ಗೊತ್ತು ಪಡಿಸಬೇಕಿದೆ. ಜನವರಿಯಲ್ಲಿ ಮದುವೆ ಮಾಡಲು ನಿಶ್ಚಿಯ ಮಾಡಲಾಗಿದೆ ಎಂದು ಮಾಧ್ಯಮಗಳಿಗೆ ತಂಬಿ ರಾಮಯ್ಯ ತಿಳಿಸಿದ್ದಾರೆ.
ತಂಬಿ ರಾಮಯ್ಯ ತಮಿಳಿನ ಸುಪ್ರಸಿದ್ದ ಹಾಸ್ಯ ನಟರು. ರಾಷ್ಟ್ರ ಪ್ರಶಸ್ತಿ ವಿಜೇತರು ನಟರು. ಇವರ ಪುತ್ರ ಉಮಾಪತಿ ರಾಮಯ್ಯ ಕೂಡ ನಟರಾಗಿ 2017ರಲ್ಲೇ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದಾರೆ. ಆದರೆ, ಅವರಿಗೂ ಇನ್ನೂ ಬ್ರೇಕ್ ಎನ್ನುವಂತಹ ಸಿನಿಮಾ ಬಂದಿಲ್ಲ. ದೇವದಾಸ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಉಮಾಪತಿ ನಟಿಸಿದ್ದಾರೆ.
ದಕ್ಷಿಣ ಭಾರತದ ಹೆಸರಾಂತ ನಟ, ಕನ್ನಡಿಗ ಅರ್ಜುನ್ ಸರ್ಜಾ (Arjun Sarja) ಅವರು ತಮ್ಮ ಪುತ್ರಿ ಐಶ್ವರ್ಯ ಸರ್ಜಾ ಅವರ ಮದುವೆ (Marriage) ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಮಾತು ತಮಿಳು ಚಿತ್ರೋದ್ಯಮದಲ್ಲಿ ಕೇಳಿ ಬರುತ್ತಿದೆ. ಮಗಳನ್ನು ಚಿತ್ರೋದ್ಯಮಕ್ಕೆ ತಾವೇ ಪರಿಚಯ ಮಾಡಿಕೊಟ್ಟಿದ್ದರು. ಇದೀಗ ಮಗಳಿಗೆ ತಾವೇ ಹುಡುಗನನ್ನು ಹುಡುಕಿಯೇ ಮದುವೆ ಮಾಡುತ್ತಿದ್ದಾರೆ ಎನ್ನುವುದು ಸದ್ಯದ ವರ್ತಮಾನ.
ಪ್ರೇಮ ಬರಹ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ತಮ್ಮ ಪುತ್ರಿ ಐಶ್ವರ್ಯ (Aishwarya Sarja) ಅವರನ್ನು ಪರಿಚಯ ಮಾಡಿಕೊಟ್ಟಿದ್ದರು ಅರ್ಜುನ್ ಸರ್ಜಾ. ಈ ಸಿನಿಮಾವನ್ನು ತಾವೇ ನಿರ್ಮಾಣ ಮಾಡಿ, ನಿರ್ದೇಶನವನ್ನೂ ಮಾಡಿದ್ದರು. ಅದು ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿತ್ತು. ಹೇಳಿಕೊಳ್ಳುವಂತೆ ಸಿನಿಮಾ ಪ್ರೇಕ್ಷಕರ ಮನಸ್ಸು ಗೆಲ್ಲಲಿಲ್ಲ. ಆನಂತರ ಐಶ್ವರ್ಯ ಸಿನಿಮಾ ರಂಗದಲ್ಲಿ ಅಷ್ಟೇನೂ ಸಕ್ರೀಯರಾಗಲಿಲ್ಲ. ಇದನ್ನೂ ಓದಿ: ಹೃದಯ ಕಿತ್ತು ಎದೆಗೆ ಹಚ್ಚಿಕೊಂಡು ಪಾರ್ಟಿಗೆ ಬಂದ ಉರ್ಫಿ ಜಾವೇದ್
ಇದೀಗ ತಮ್ಮ ಪುತ್ರಿಯನ್ನು ತಮಿಳಿನ ಖ್ಯಾತ ಹಾಸ್ಯ ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ (Umapati Ramaiah) ಜೊತೆ ಮದುವೆ ಮಾಡಲು ತಯಾರಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಂತ ತಮಿಳು ಮಾಧ್ಯಮಗಳು ಸುದ್ದಿ ಮಾಡಿವೆ. ಒಂದು ಮೂಲದ ಪ್ರಕಾರ ಉಮಾಪತಿ ಮತ್ತು ಐಶ್ವರ್ಯ ಹಲವು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎಂದೂ ಹೇಳಲಾಗುತ್ತಿದೆ. ಮದುವೆ ಎರಡೂ ಮನೆಯ ಒಪ್ಪಿಗೆಯೂ ಇದೆಯಂತೆ.
ತಂಬಿ ರಾಮಯ್ಯ ತಮಿಳಿನ ಸುಪ್ರಸಿದ್ದ ಹಾಸ್ಯ ನಟರು. ರಾಷ್ಟ್ರ ಪ್ರಶಸ್ತಿ ವಿಜೇತರು ನಟರು. ಇವರ ಪುತ್ರ ಉಮಾಪತಿ ರಾಮಯ್ಯ ಕೂಡ ನಟರಾಗಿ 2017ರಲ್ಲೇ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದಾರೆ. ಆದರೆ, ಅವರಿಗೂ ಇನ್ನೂ ಬ್ರೇಕ್ ಎನ್ನುವಂತಹ ಸಿನಿಮಾ ಬಂದಿಲ್ಲ. ದೇವದಾಸ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಉಮಾಪತಿ ನಟಿಸಿದ್ದಾರೆ.