Tag: umesh jadhav

  • ಅಪ್ಪ-ಅಮ್ಮನ ಮೇಲೆ ಪ್ರಿಯಾಂಕ್ ಖರ್ಗೆ ಆಣೆ ಮಾಡಲಿ – ಉಮೇಶ್ ಜಾಧವ್ ಸವಾಲು

    ಅಪ್ಪ-ಅಮ್ಮನ ಮೇಲೆ ಪ್ರಿಯಾಂಕ್ ಖರ್ಗೆ ಆಣೆ ಮಾಡಲಿ – ಉಮೇಶ್ ಜಾಧವ್ ಸವಾಲು

    ಕಲಬುರಗಿ: ಜಾಧವ್ ಬಿಜೆಪಿಗೆ ಹೋಗುವುದಕ್ಕೆ 50 ಕೋಟಿ ಹಣ ತೆಗೆದುಕೊಂಡಿದ್ದಾರೆ ಎಂದು ಪ್ರೀಯಾಂಕ್ ಖರ್ಗೆ ಅವರ ಅಪ್ಪ-ಅಮ್ಮ ಮತ್ತು ಮಕ್ಕಳ ಮೇಲೆ ಆಣೆ ಮಾಡಲಿ. ನಾನು ಬೇಕಾದವರ ಮೇಲೆ ಆಣೆ ಮಾಡಲು ಸಿದ್ಧನಿದ್ದೇನೆ ಎಂದು ಬಿಜೆಪಿ ಸಂಭವನೀಯ ಅಭ್ಯರ್ಥಿ ಉಮೇಶ್ ಜಾಧವ್ ಸವಾಲು ಹಾಕಿದ್ದಾರೆ.

    ಕಲಬುರಗಿಯಲ್ಲಿ ಮಾತನಾಡಿದ ಉಮೇಶ ಜಾಧವ್, ಸುಮ್ಮನೆ ಕೆಳಮಟ್ಟದ ರಾಜಕಾರಣ ಮಾಡಬಾರದು. ಒಂದೇ ಕಥೆಯನ್ನು ಎಲ್ಲ ಕಡೆ ಹೇಳಿಕೊಂಡು ತಿರಾಗುಡುತ್ತಿದ್ದಾರೆ. ಅವರು ಸರ್ಕಾರದ ಬಗ್ಗೆ, ಪೃಧಾನಿ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೂ ಟೀಕೆ ಮಾಡುತ್ತಿದ್ದಾರೆ. ನಾನು ಬಿಜೆಪಿಯಿಂದ 50 ಕೋಟಿ ಹಣ ಪಡೆದಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಪ್ರಮಾಣ ಮಾಡಿ ಹೇಳಲಿ. ನಾನು ಪ್ರಮಾಣ ಮಾಡಲು ಸಿದ್ಧನಿದ್ದೇನೆ. ನಾನು ಜಗತ್ತಿನ ಯಾವುದೇ ತನಿಖಾ ಸಂಸ್ಥೆಯಿಂದ ತನಿಖೆ ಎದುರಿಸಲು ಸಿದ್ಧ ಎಂದು ಸವಾಲು ಹಾಕಿದ್ದಾರೆ.

    ಇದುವರೆಗೆ ಆಗದ ಅಭಿವೃದ್ದಿ ಒಂದೇ ವರ್ಷದಲ್ಲಿ ಮಾಡಿ ತೋರಿಸುವೆ. ನಮ್ಮಲ್ಲಿ ದೊಡ್ಡ ದೊಡ್ಡ ನಾಯಕರಿದ್ದಾರೆ. ಆದರೆ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ. ಸ್ಪೀಕರ್ ಒಬ್ಬ ಪ್ರಿನ್ಸಿಪಲ್ ವ್ಯಕ್ತಿಯಾಗಿದ್ದು, ಅವರ ಮೇಲೆ ನಂಬಿಕೆ ಇದೆ. ಇದನ್ನು ಅವರನ್ನು ಖುಷಿ ಪಡಿಸಲು ಹೇಳುತ್ತಿಲ್ಲ. ಆರು ವರ್ಷದಿಂದ ಅವರನ್ನು ನಾನು ಕಂಡಿದ್ದೇನೆ. ಹೀಗಾಗಿ ಹೃದಯದಿಂದ ಈ ಮಾತು ಹೇಳುತ್ತಿದ್ದೇನೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೇ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಉಮೇಶ್ ಜಾಧವ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸಚಿವ ಪ್ರಿಯಾಂಕ್ ಖರ್ಗೆಗೆ ಉಮೇಶ್ ಜಾಧವ್ ಸವಾಲು

    ಸಚಿವ ಪ್ರಿಯಾಂಕ್ ಖರ್ಗೆಗೆ ಉಮೇಶ್ ಜಾಧವ್ ಸವಾಲು

    ಕಲಬುರಗಿ: ತಾಕತ್ತಿದ್ದರೆ ಮುಂಬರುವ ಚಿಂಚೋಳಿ ಬೈ ಎಲೆಕ್ಷನ್‍ಗೆ ಪ್ರಿಯಾಂಕ್ ನಿಲ್ಲಲಿ. ನಮ್ಮ ಅಭ್ಯರ್ಥಿಯನ್ನು ಸೋಲಿಸಲಿ. ಒಂದು ಕೈ ನೋಡಿಯೇ ಬಿಡೋಣ ಎಂದು ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಶಾಸಕ ಉಮೇಶ್ ಜಾಧವ್ ಅವರು ಸಚಿವ ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮುಂಬರುವ ಬೈ ಎಲೆಕ್ಷನ್‍ನಲ್ಲಿ ಚಿಂಚೊಳ್ಳಿ ಕ್ಷೇತ್ರದಿಂದ ಪ್ರಿಯಾಂಕ್ ನಿಂತು ಗೆಲ್ಲಲಿ ಎಂದು ಬಹಿರಂಗವಾಗಿ ಸವಾಲ್ ಹಾಕಿದ್ದಾರೆ. ದತ್ತು ಪುತ್ರನಾಗಿ ಚಿಂಚೋಳಿಗೆ ಬರಲು ಸಿದ್ಧವೆಂಬ ಸಚಿವ ಪ್ರೀಯಾಂಕ್ ಖರ್ಗೆ ಹೇಳಿಕೆ ವಿಚಾರ ಪ್ರತಿಕ್ರಿಯಿಸಿ, ದತ್ತು ಪುತ್ರನಾಗಿ ಬರುವ ಬದಲು ರಾಜನಾಗಿ ಬರಲಿ. ಮುಂಬರುವ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಸೋಲಿಸಲಿ, ಒಂದು ಕೈ ನೋಡಿಯೇ ಬಿಡೋಣ ಎಂದಿದ್ದಾರೆ.

    ಹಾಗೆಯೇ ಪದೇ ಪದೇ ಆಪರೇಷನ್ ಕಮಲದ ಕುರಿತು ಪ್ರಿಯಾಂಕ್ ಅವರು ಮಾತನಾಡುವುದು ಸರಿಯಲ್ಲ. ನಾನು 50 ಲಕ್ಷ ಹಣ ಪಡೆದಿದ್ದೇನೆ ಎಂದು ಪ್ರಿಯಾಂಕ್ ಅವರ ಮಕ್ಕಳ ಮೇಲೆ ಆಣೆ ಮಾಡಿ ಹೇಳಲಿ. ನಾನು ತಪ್ಪು ಮಾಡಿಲ್ಲ. ಸಿಬಿಐ ಸೇರಿದಂತೆ ಯಾವುದೇ ಉನ್ನತ ತನಿಖೆಗೂ ನಾನು ಸಿದ್ಧ. ಸುಮ್ಮನೆ ಸುಳ್ಳು ಆರೋಪ ಮಾಡೋದು ಪ್ರಿಯಾಂಕ್ ಅವರಿಗೆ ಶೋಭೆತರಲ್ಲ. ಸುಳ್ಳು ಹೇಳಿ ಸಣ್ಣತನ ಮಾಡಬಾರದು ಎಂದು ಆಕ್ರೋಶ ಹೊರಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಖರ್ಗೆಗೆ ಪುತ್ರ ವ್ಯಾಮೋಹ – ನಾವು ನಿಮ್ಮ ಮಕ್ಕಳಂತೆ ಅಲ್ವಾ ಎಂದ್ರು ಉಮೇಶ್ ಜಾಧವ್

    ಖರ್ಗೆಗೆ ಪುತ್ರ ವ್ಯಾಮೋಹ – ನಾವು ನಿಮ್ಮ ಮಕ್ಕಳಂತೆ ಅಲ್ವಾ ಎಂದ್ರು ಉಮೇಶ್ ಜಾಧವ್

    – ಹೊಟ್ಟೆ ಕಿಚ್ಚಿಗೆ ಔಷಧಿ ಇಲ್ಲ ಎಂದಿದ್ದ ಖರ್ಗೆಗೆ ತಿರುಗೇಟು!

    ಕಲಬುರಗಿ: ಹೊಟ್ಟೆ ಕಿಚ್ಚಿಗೆ ಔಷಧಿ ಇಲ್ಲ ಎಂದು ಕಿಡಿಕಾರಿದ್ದ ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಚಿಂಚೋಳಿ ಶಾಸಕ ಡಾ. ಉಮೇಶ್ ಜಾಧವ್ ತಿರುಗೇಟು ನೀಡಿದ್ದು, ಜಾಧವ್ ಡೈರಿಯಲ್ಲಿ ಹೊಟ್ಟೆ ಕಿಚ್ಚಿನ ಶಬ್ದ ಇಲ್ಲ. ಖರ್ಗೆ ಅವರು ಪುತ್ರ ವ್ಯಾಮೋಹದಿಂದ ಪ್ರಿಯಾಂಕ್ ಖರ್ಗೆ ಅವರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

    ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಾಸಕರು, ಖರ್ಗೆಯವರು ಪುತ್ರ ವ್ಯಾಮೋಹದಿಂದ ಪ್ರಿಯಾಂಕ್ ಖರ್ಗೆಯವರನ್ನು ರಕ್ಷಿಸುತ್ತಿದ್ದಾರೆ. ಆದರೆ ಉಮೇಶ್ ಜಾಧವ್ ಮತ್ತು ಅಜಯ್ ಸಿಂಗ್ ಇಬ್ಬರು ಕೂಡ ನಿಮ್ಮ ಮಕ್ಕಳ ಇದ್ದಂತೆ. ಸಾಮಾಜಿಕ ನ್ಯಾಯದ ಪರವಾಗಿ ಮಾತಾಡುವ ಖರ್ಗೆಯವರಿಗೆ ನಾನು, ಅಜಯ್ ಸಿಂಗ್, ಖನೀಜ್ ಫಾತಿಮಾ ಕಾಣಿಸಲಿಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.

    ತಮ್ಮ ಹೇಳಿಕೆಯಲ್ಲಿ ಅಜಯ್ ಸಿಂಗ್ ಅವರ ಹೆಸರನ್ನು ಪ್ರಸ್ತಾಪ ಮಾಡುವ ಮೂಲಕ ತಮ್ಮ ಬೆಂಬಲಕ್ಕೆ ಅಜಯ್ ಇದ್ದಾರೆ ಎಂದು ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ಅಲ್ಲದೇ ಹಲವರು ನಾಯಕರು ದೈಹಿಕವಾಗಿ ಕಾಂಗ್ರೆಸ್ ಪಕ್ಷದಲ್ಲಿ ಇದ್ದರೂ ಕೂಡ ನನ್ನ ಜೊತೆ ಮಾನಸಿಕವಾಗಿ ಇದ್ದಾರೆ. ಜಾರಕಿಹೊಳಿ ಅವರು ನನ್ನ ಸ್ನೇಹಿತರು ನಿಜ. ಆದರೆ ಸದ್ಯಕ್ಕೆ ನನ್ನ ಜೊತೆ ಯಾರು ಸಂಪರ್ಕ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

    ಜಾಧವ್ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿರುವ ಖರ್ಗೆ ಅವರೆ ಮತ್ತೆ ನನ್ನ ಬಗ್ಗೆ ಮಾತನಾಡುತ್ತಾರೆ. ದೆಹಲಿಯಲ್ಲಿ ಕೂತು ತಮಗೆ ಬೇಕಾದವರಿಗೆ ಸಚಿವ ಸ್ಥಾನ ಕೊಡಿಸುತ್ತಾರೆ. ಕೇಳಿದರೆ ನನಗೆ ಅಷ್ಟು ಶಕ್ತಿ ಇಲ್ಲ ಎನ್ನುತ್ತಾರೆ. ಆದರೆ ನಮ್ಮ ಜಿಲ್ಲೆಯಲ್ಲಿ ಸೇರಿದಂತೆ ಬಳ್ಳಾರಿ ಬೇರೆ ಜಿಲ್ಲೆಗಳಲ್ಲಿ ಯಾರು ಎಂಎಲ್‍ಸಿ, ಸಚಿವರು ಆಗಿದ್ದಾರೆ ಎನ್ನುವುದು ತಿಳಿದಿದೆ. ಬೇರೆ ನಾಯಕರು ಏಕೆ ಸಚಿವ ಸ್ಥಾನ ಪಡೆಯಲಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಅವಗಿಂತ ಮೇಲಿನ ಅಧಿಕಾರಕ್ಕೆ ಬರಲು ಬೇರೆ ಯಾರಿಗೂ ಅವಕಾಶವಿಲ್ಲ ಎಂಬುವುದು ಎಲ್ಲರಿಗೂ ತಿಳಿದಿದೆ ಎಂದರು.

    ಇದೇ ವೇಳೆ ತಮ್ಮ ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಕುರಿತು ಸ್ಪಷ್ಟನೆ ನೀಡಿದ ಅವರು, ವಿಧಾನಸಭಾ ಸ್ಪೀಕರ್ ಅವರ ಮೇಲೆ ನನಗೆ ಸಂಪೂರ್ಣ ಭರವಸೆ ಇದೆ. ಹೀಗಾಗಿ ನನ್ನ ರಾಜೀನಾಮೆ ಅಂಗಿಕಾರ ಆಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಚುನಾವಣೆ ಘೋಷಣೆಯಾಗ್ತಿದ್ದಂತೆ ಮುಂಬೈಗೆ ತೆರಳಿದ್ರು ಉಮೇಶ್ ಜಾಧವ್

    ಚುನಾವಣೆ ಘೋಷಣೆಯಾಗ್ತಿದ್ದಂತೆ ಮುಂಬೈಗೆ ತೆರಳಿದ್ರು ಉಮೇಶ್ ಜಾಧವ್

    ಕಲಬುರಗಿ: ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಮುಂಬೈಗೆ ಹಾರಿದ್ದಾರೆ.

    ಜಾಧವ್ ಮುಂಬೈನಲ್ಲಿ ಎರಡನೇ ದಿನವೂ ಬೆಂಬಲಿಗರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದು, ಅಫಜಲ್‍ಪುರ, ಚಿತ್ತಾಪುರ, ಗುರುಮಠಕಲ್ ಭಾಗದ ಮತದಾರೊಂದಿಗೆ ನಿರಂತರ ಮೀಟಿಂಗ್ ಮಾಡಲಿದ್ದಾರೆ. ಕೆಲಸದ ನಿಮಿತ್ತ ಮುಂಬೈನಲ್ಲಿ ಒಂದು ಲಕ್ಷಕ್ಕೂ ಅಧಿಕ ಮತದಾರರು ನೆಲೆಸಿದ್ದು, ಅವರ ಮನವೊಲಿಕೆಗೆ ರಣತಂತ್ರ ರೂಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

    ಉಮೇಶ್ ಜಾಧವ್ ಅವರು ಸತತ 11 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಪಣತೊಟ್ಟು ನಿಂತಿದ್ದಾರೆ. ಹೀಗಾಗಿ ಚುನಾವಣೆಗೂ ಮುನ್ನ ಎಲ್ಲಾ ಮತದಾರರನ್ನ ಕಲಬುರಗಿಗೆ ಕರೆತರುವ ವ್ಯವಸ್ಥೆ ಮಾಡುತ್ತಿದ್ದಾರೆ. ಅದಕ್ಕಾಗಿ ಈಗಾಗಲೇ ಮತದಾರರಿಗೊಸ್ಕರ ರೈಲ್ವೆ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಕೂಡ ಮಾಡಲಾಗಿದೆ.

    ಜಾಧವ್ ಪ್ರಮುಖವಾಗಿ ಬಂಜಾರ ಸಮುದಾಯದ ಮತದಾರರನ್ನ ಭೇಟಿಯಾಗುತ್ತಿದ್ದು, ಇನ್ನು ಮತದಾರರನ್ನು ತರಲು ಹಲವು ಮುಖಂಡರನ್ನು ನೇಮಕ ಮಾಡಿದ್ದಾರೆ. ಈ ಮೂಲಕ ಶಾತಾಯಗತಾಯ ಲೋಕಸಭಾ ಚುನಾವಣೆ ಗೆಲ್ಲಲು ಜಾಧವ್ ತಂತ್ರ ರೂಪಿಸುತ್ತಿದ್ದಾರೆ. ಇಂದು ಸಹ ಸಭೆ ನಡೆಸಿ ಮಧ್ಯಾಹ್ನ ಅಥವಾ ಸಂಜೆ ನೇರವಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಸ್ಪೀಕರ್ ರಮೇಶ್ ಕುಮಾರ್ ಅವರು ಶಾಸಕರ ಅನರ್ಹತೆ ಕುರಿತು ನಡೆಸುತ್ತಿರುವ ವಿಚಾರಣೆಯಲ್ಲಿ ಭಾಗಿಯಾಗಲ್ಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಒಂದು ಕ್ಷೇತ್ರಕ್ಕೆ ಬರೋಬ್ಬರಿ 200 ಕೋಟಿ ಖರ್ಚು -ರಾಷ್ಟ್ರಮಟ್ಟದ ಟಾಪ್ 10 ಕ್ಷೇತ್ರಗಳಲ್ಲಿ ಒಂದಾದ ಕಲಬುರಗಿ

    ಒಂದು ಕ್ಷೇತ್ರಕ್ಕೆ ಬರೋಬ್ಬರಿ 200 ಕೋಟಿ ಖರ್ಚು -ರಾಷ್ಟ್ರಮಟ್ಟದ ಟಾಪ್ 10 ಕ್ಷೇತ್ರಗಳಲ್ಲಿ ಒಂದಾದ ಕಲಬುರಗಿ

    ಕಲಬುರಗಿ: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎದುರು ಡಾ.ಉಮೇಶ್ ಜಾಧವ್ ಸ್ಪರ್ಧೆಯಿಂದ ಕಲಬುರಗಿ ಲೋಕಸಭೆ ಇದೀಗ ಸ್ಟಾರ್ ಕ್ಷೇತ್ರವಾಗಿದೆ. ಈ ಕ್ಷೇತ್ರದಲ್ಲಿ ಈ ಬಾರಿ ಕನಿಷ್ಟ ಅಂದ್ರು 200 ಕೋಟಿಗೂ ಅಧಿಕ ಕುರುಡು ಕಾಂಚಾಣ ಹರಿಯಲ್ಲಿದೆಯಂತೆ. ಹೀಗಾಗಿ ಚುನಾವಣಾ ಆಯೋಗ ಈ ಕ್ಷೇತ್ರದ ಮೇಲೆ ಹದ್ದಿನ ಕಣ್ಣಿಟ್ಟಿದೆ.

    ಕಲಬುರಗಿ ಲೋಕಸಭೆ ಮೀಸಲು ಕ್ಷೇತ್ರ ಇದೀಗ ರಾಷ್ಟ್ರಮಟ್ಟದ ಟಾಪ್ 10 ಕ್ಷೇತ್ರಗಳಲ್ಲಿ ಒಂದಾಗಿದೆ. ಯಾಕಂದ್ರೆ ಈ ಕ್ಷೇತ್ರದಿಂದ ಕಾಂಗ್ರೆಸ್ ಸಂಸದ ಹಾಗೂ ಸೋಲಿಲ್ಲದ ಸರ್ದಾರ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿಯಾದ್ರೆ, ಇತ್ತ ಬಿಜೆಪಿಯಿಂದ ಕಾಂಗ್ರೆಸ್ ಚಿಂಚೋಳಿ ಶಾಸಕ ಉಮೇಶ್ ಜಾಧವ್ ಬಹುತೇಕ ಅಧಿಕೃತ ಅಭ್ಯರ್ಥಿಯಾಗಿದ್ದಾರೆ. ಇವರಿಬ್ಬರ ನಡುವಿನ ಫೈಟ್ ಜಿಲ್ಲೆಯ ರಾಜಕಾರಣದಲ್ಲಿ ಹುಬ್ಬೆರಿಸುವಂತೆ ಮಾಡಿದೆ. ಚುನಾವಣೆಯ ದಿನಾಂಕ ನಿಗದಿಯಾಗದಿದ್ರು ಈ ಇಬ್ಬರು ಅಭ್ಯರ್ಥಿಗಳು ಇದೀಗ ಜಿಲ್ಲೆಯ ಗಲ್ಲಿ ಗಲ್ಲಿಗಳಿಗೆ ತೆರಳಿ ಮತ ಬೇಟೆ ಶುರು ಮಾಡಿದ್ದಾರೆ.

    ಶತಾಯಗತಾಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋಲಿಸಬೇಕೆಂದು ಬಿಜೆಪಿ ಟೊಂಕ ಕಟ್ಟಿ ನಿಂತಿದೆ. ಇತ್ತ ಸೋಲಿಲ್ಲದ ಸರ್ದಾರ ಪಟ್ಟ ಉಳಿಸಿಕೊಳ್ಳಲು ಖರ್ಗೆ ಸಹ ಫೀಲ್ಡ್ ಗಿಳಿದಿದ್ದಾರೆ. ಈ ಮದಗಜಗಳ ಜಗಳದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳೇ ಗೆಲ್ಲಬೇಕು ಅಂತಾ ಎರಡು ರಾಷ್ಟ್ರೀಯ ಪಕ್ಷಗಳು ಪ್ರತಿಷ್ಟೆಯಾಗಿ ತೆಗೆದುಕೊಂಡಿವೆ. ಪರಿಣಾಮ ಕಲಬುರಗಿ ಲೋಕಸಭಾ ಕ್ಷೇತ್ರವೊಂದರಲ್ಲೇ 200 ಕೋಟಿಗೂ ಹೆಚ್ಚು ಹಣದ ಹೊಳೆ ಹರಿಸಲು ಎರಡು ಪಕ್ಷಗಳ ಸಿದ್ದತೆ ನಡೆಸಿವೆಯಂತೆ. ಜಿಲ್ಲೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು, ಪ್ರತಿ ಕ್ಷೇತ್ರಕ್ಕೆ ಕನಿಷ್ಟ ಅಂದ್ರು 12 ರಿಂದ 15 ಕೋಟಿ ರೂಪಾಯಿ ಹಂಚಲು ಎರಡು ಪಕ್ಷಗಳು ನಿರ್ಧರಿಸಿದ್ದು, ಈಗಾಗಲೇ ಹಣ ಹಂಚಿಕೆಯ ಬ್ಲೂ ಪ್ರಿಂಟ್ ಕೂಡ ರೆಡಿಯಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

    ಕುರುಡು ಕಾಂಚಾಣಾ ಹರಿಯುವ ಹಿನ್ನೆಲೆ ಕಲಬುರಗಿ ಲೋಕಸಭೆ ಮೇಲೆ ಕೇಂದ್ರ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದ್ದು, ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಬೇಟೆಯಾಡಲು ಸಜ್ಜಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ನನ್ನ ಬಳಿಯೂ ಅಸ್ತ್ರಗಳಿದ್ದು, ಸಮಯ ಬಂದಾಗ ಪ್ರಯೋಗಿಸ್ತೀನಿ: ಉಮೇಶ್ ಜಾಧವ್

    ನನ್ನ ಬಳಿಯೂ ಅಸ್ತ್ರಗಳಿದ್ದು, ಸಮಯ ಬಂದಾಗ ಪ್ರಯೋಗಿಸ್ತೀನಿ: ಉಮೇಶ್ ಜಾಧವ್

    ಕಲಬುರಗಿ: ನನ್ನ ಬಳಿ ಕೂಡ ಅಸ್ತ್ರಗಳಿವೆ ಸಮಯ ಬಂದಾಗ ಪ್ರಯೋಗಿಸ್ತೇನೆ ಎಂದು ಶಾಸಕ ಉಮೇಶ್ ಜಾಧವ್ ಅವರು ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಹಿರಿಯ ಮುಖಂಡ ಖರ್ಗೆ ಸೋಲಿಸಲು ಸಿದ್ದರಾಮಯ್ಯನವರೇ ಜಾಧವ್ ಛೂ ಬಿಟ್ಟಿದ್ದಾರೆಂಬ ವಿಚಾರದ ಕುರಿತು ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕುತಂತ್ರ ರಾಜಕಾರಣ ಮಾಡುವ ಜಾಯಮಾನದವರಲ್ಲ ಎಂದು ತಿರುಗೇಟು ನೀಡಿದ್ದಾರೆ.

    ನನ್ನನ್ನು ‘ಅಮಿಶ್’ ಜಾಧವ್ ಎಂದು ಹೋದ ಕಡೆಯಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ದಾಳಿ ಮಾಡಲು ಬಂದಾಗ ನಾನೇನೂ ಕೈಕಟ್ಟಿ ಕುಳಿತುಕೊಳ್ಳಬೇಕಾ? ಸಮಯ ಸಂದರ್ಭ ನೋಡಿ ಅಸ್ತ್ರಗಳನ್ನು ಬಿಡುತ್ತೇನೆ ಎಂದು ಕಿಡಿಕಾರಿದ್ದಾರೆ.

    ಪ್ರಧಾನಿ ಮೋದಿ ಸೌಜನ್ಯಕ್ಕಾದರೂ ಜಾಧವ್ ಹೆಸರು ಪ್ರಸ್ತಾಪಿಸಿಲ್ಲಂಬ ಪ್ರೀಯಾಂಕ್ ಖರ್ಗೆ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಇತ್ತೀಚೆಗೆ ಕಲಬುರಗಿಗೆ ಭೇಟಿ ನೀಡಿದಾಗ ಪ್ರಧಾನಿ ಅವರು ನನಗೆ ತುಂಬಾ ಗೌರವ ಕೊಟ್ಟಿದ್ದಾರೆ. ಅಷ್ಟಕ್ಕೂ ಪ್ರಧಾನಿ ಮೋದಿ ನನಗೆ ಎಷ್ಟು ಗೌರವ ನೀಡಿದ್ದಾರೆ ಎಂದು ನಿಮಗೇನು ಗೊತ್ತು. ಅದೆಲ್ಲ ನಿಮಗೆ ಬಾಯಿಬಿಟ್ಟು ಹೇಳಬೇಕೇ ಎಂದು ಪ್ರಶ್ನಿಸಿದರು.

    ಜಾಧವ್‍ರಂತಹ ನೂರು ಜನರನ್ನ ಸೃಷ್ಟಿಸುತ್ತೆವೆಂದು ಸಚಿವ ಪ್ರಿಯಾಂಕ್ ಹೇಳಿದ್ದು, ಸೃಷ್ಟಿ ಮಾಡೋದು ಮೇಲಿರುವ ಸೃಷ್ಟಿಕರ್ತ. ಹಾಗೊಂದು ವೇಳೆ ಸೃಷ್ಟಿ ಮಾಡ್ತೀನಿ ಅಂದರೆ ದೇವರು ಒಳ್ಳೆಯದು ಮಾಡಲಿ. ಲೋಕಸಭೆ ಚುನಾವಣೆ ಅಖಾಡದಲ್ಲಿ ಫೈಟ್ ಮಾಡೋಕೆ ಸನ್ನದ್ಧನಾಗಿದ್ದೇನೆ ಅಂದ್ರು. ಇದನ್ನೂ ಓದಿ: ನಾನು ತೆಗೆದುಕೊಳ್ಳಲಿರೋ ನಿರ್ಧಾರ ಮೈಲಿಗಲ್ಲಾಗಬೇಕು: ಸ್ಪೀಕರ್ ರಮೇಶ್ ಕುಮಾರ್

    ಜಾಧವ್ ಬಿಜೆಪಿಗೆ ಸೇಲ್ ಎಂಬ ಆರೋಪ ಸಂಬಂಧ ಜಗತ್ತಿನ ಯಾವುದೇ ತನಿಖಾ ಏಜೆನ್ಸಿಯಿಂದ ಈ ಬಗ್ಗೆ ವಿಚಾರಣೆ ಮಾಡಲಿ. ಬಾಯಿಗೆ ಬಂದಂತೆ ಮಾತಾಡೋದು ಸರಿಯಲ್ಲ ಎಂದು ಪ್ರಿಯಾಂಕ್ ಖರ್ಗೆಗೆ ಎಚ್ಚರಿಕೆ ನೀಡಿದ ಅವರು, ಹಣ ಪಡೆದಿಲ್ಲ ಎಂದು ಯಾವುದೇ ದೇವಸ್ಥಾನದಲ್ಲೂ ಆಣೆ ಮಾಡೋಕೆ ರೆಡಿ ಎಂದರು.

    ರಾಜೀನಾಮೆ ಅಂಗೀಕಾರ ಆಗದೇ ಇರುವ ವಿಚಾರದ ಕುರಿತು ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಕಾನೂನಿನ ಪ್ರಕಾರ ನನ್ನ ರಾಜೀನಾಮೆ ಅಂಗೀಕಾರವಾಗುತ್ತದೆ. ಬೆಂಗಳೂರಿನಿಂದ ದೆಹಲಿವರೆಗೆ ಈ ಬಗ್ಗೆ ಎಲ್ಲರನ್ನ ಕೇಳಿದ್ದೀನಿ. ಸ್ಪೀಕರ್ ರಮೇಶ್ ಕುಮಾರ್ ಯಾರ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಗೊತ್ತಿದೆ. ರಾಜೀನಾಮೆ ಅಂಗೀಕಾರ ಬಗ್ಗೆ ಸ್ಪಷ್ಟನೆ ಪಡೆಯುತ್ತಿದ್ದಾರೆ. ಮಾರ್ಚ್ 12 ರಂದು ವಿಚಾರಣೆಗೆ ಹಾಜರಾಗುತ್ತೆನೆ. ನನ್ನ ರಾಜೀನಾಮೆ ಅಂಗೀಕರವಾಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮೂವರು ಉದ್ಭವ ಮೂರ್ತಿಗಳು ಚುನಾವಣೆ ಮುಗಿದ್ಮೇಲೆ ಮನೆಗೆ ಹೋಗ್ತಾರೆ: ಪ್ರಿಯಾಂಕ್ ಖರ್ಗೆ

    ಮೂವರು ಉದ್ಭವ ಮೂರ್ತಿಗಳು ಚುನಾವಣೆ ಮುಗಿದ್ಮೇಲೆ ಮನೆಗೆ ಹೋಗ್ತಾರೆ: ಪ್ರಿಯಾಂಕ್ ಖರ್ಗೆ

    – ರಾಜ್ಯ ಸರ್ಕಾರದ ಬಗ್ಗೆ ಪ್ರಧಾನಿ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು

    ಕಲಬುರಗಿ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಉಮೇಶ್ ಜಾಧವ್, ಮಾಲೀಕಯ್ಯ ಗುತ್ತೇದಾರ್ ಹಾಗೂ ಬಾಬುರಾವ್ ಚಿಂಚನಸೂರು ಉದ್ಭವ ಮೂರ್ತಿಗಳಾಗಿದ್ದು, ಚುನಾವಣೆ ಬಳಿಕ ಮನೆಗೆ ವಾಪಸ್ ಹೋಗ್ತಾರೆ ಎಂದು ಸಮಾಜಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ಕೊಟ್ಟಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಸಕ ಉಮೇಶ್ ಜಾಧವ್, ಮಾಲೀಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚನಸೂರು ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ಈ ಮೂರು ಶಾಸಕರು ತ್ರಿಮೂರ್ತಿಗಳು ಒಂದು ರೀತಿ ಉದ್ಭವಮೂರ್ತಿಗಳ ಹಾಗೆ. ಈ ಚುನಾವಣೆ ಮುಗಿದ ನಂತರ ಉದ್ಭವ ಮೂರ್ತಿಗಳು ಪತನವಾಗ್ತಾರೆ ಎಂದಿದ್ದಾರೆ. ಹಾಗೆಯೇ ಚಿಂಚೋಳಿಯಲ್ಲಿ ಯಾವ ಪ್ರೈವೇಟ್ ಲಿಮಿಟೆಡ್ ಕಂಪನಿಯಿದೆ ಗೊತ್ತಿಲ್ವಾ ಎಂದು ಉಮೇಶ್ ಜಾಧವ್ ಅವರಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.

    ಜಾಧವ್ ಅವರಿಗೆ ಬಿಜೆಪಿಯಲ್ಲಿ ದೊಡ್ಡ ಅವಮಾನ ಆಗಿದೆ. ಮೋದಿ ಕಲಬುರಗಿಯಲ್ಲಿ ಭಾಷಣ ಮಾಡಿದಾಗ ಜಾಧವ್ ಹೆಸರನ್ನಾದರು ಹೇಳಿದ್ದಾರಾ? ಹಾಗಾದರೇ ಅವರಿಗೆ ಏನು ಮರ್ಯಾದೆ ಉಳಿಯಿತು? ಬಿಜೆಪಿಯವರು ಲೋಕಸಭೆಗೆ ಜಾಧವ್ ಹೆಸರು ಘೋಷಿಸಿಲ್ಲ. ಜಾಧವ್ ಅವರೇ ಸ್ವಯಂ ಘೋಷಿತ ಅಭ್ಯರ್ಥಿ ಎನ್ನುವ ರೀತಿಯಲ್ಲಿ ಮಾತಾಡಿದ್ದಾರೆ. ಜಾಧವ್ ಸೇರಿದಂತೆ ಯಾರೇ ಸ್ಪರ್ಧೆ ಮಾಡಿದರೂ ನಮಗೆ ಚುನಾವಣೆ ಮಾಡೋದು ಗೊತ್ತು. ಹಿಂದೆ ಎಂ.ವೈ.ಪಾಟೀಲ್‍ಗೆ ಕೈಕೊಟ್ಟಂತೆ ಬಿಜೆಪಿ ಜಾಧವಗೂ ಕೈಕೊಡಬಹುದು. ಕೈಕೊಡೋ ಗುಣ ಬಿಜೆಪಿ ಸ್ವಭಾವದಲ್ಲಿಯೇ ಇದೆ ಎಂದು ಕಿಡಿಕಾರಿದ್ದಾರೆ.

    ಕೇಂದ್ರದ ಯೋಜನೆಗಳು ರೈತರಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಅಡ್ಡಗೋಡೆ ಎಂಬ ಮೋದಿ ಹೇಳಿಕೆಗೆ ಆಕ್ರೋಶ ವ್ಯಕ್ತಿಪಡಿಸಿದ್ದಾರೆ. ಈ ರೀತಿ ಹೇಳಿಕೆ ನೀಡಲು ಪ್ರಧಾನಿ ನರೇಂದ್ರ ಮೋದಿಯವರಿಗೆ ನಾಚಿಕೆಯಾಗಬೇಕು. ನಿಜವಾಗಿ ರೈತರ ಪರವಾಗಿ ಮೋದಿ ಏನು ಕೆಲಸ ಮಾಡಿದ್ದಾರೆ? ಸಾಲ ಮನ್ನಾ ಬಗ್ಗೆ ಎಷ್ಟೇ ಒತ್ತಡ ಇದ್ದರೂ ಕ್ರಮ ತೆಗೆದುಕೊಂಡಿಲ್ಲ. ಸ್ವತಃ ನರೇಂದ್ರ ಮೋದಿ ಆರ್.ಎಸ್‍.ಎಸ್ ಕೈಗೊಂಬೆಯಾಗಿದ್ದಾರೆ  ಎಂದು ಕರ್ನಾಟಕದ ಸಿಎಂ ರಿಮೋಟ್ ಕಂಟ್ರೋಲ್ ಸಿಎಂ ಎಂಬ ಮೋದಿ ಅವರ ಹೇಳಿಕೆಗೆ ತಿರುಗೇಟು ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಧಿಕೃತವಾಗಿ ಬಿಜೆಪಿ ಸೇರಿದ ಉಮೇಶ್ ಜಾಧವ್ ಮೊದಲ ಮಾತು

    ಅಧಿಕೃತವಾಗಿ ಬಿಜೆಪಿ ಸೇರಿದ ಉಮೇಶ್ ಜಾಧವ್ ಮೊದಲ ಮಾತು

    ಕಲಬುರಗಿ: ನನಗೆ ಬಹಳ ಸಂತೋಷ ಹಾಗೂ ಹೆಮ್ಮೆಯಾಗುತ್ತಿದೆ. ನಿಮ್ಮ ಭರವಸೆಯ ಮೇಲೆ ಬಂದಿದ್ದೇನೆ. ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕು ಎಂದು ಉಮೇಶ್ ಜಾಧವ್ ಹೇಳಿದ್ದಾರೆ.

    ನಗರದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು, ಇವತ್ತು ಬಹಳ ಸಂತೋಷ ಹಾಗು ಹೆಮ್ಮೆಯಿಂದ ಬಿಜೆಪಿ ಸೇರಿದ್ದೇನೆ. ಇಂದು ನನ್ನನ್ನು ಬಹಳ ಚೆನ್ನಾಗಿ ಬರಮಾಡಿಕೊಂಡಿದ್ದಾರೆ. ನನಗೆ ಒಂದು ಅವಕಾಶ ನೀಡಿ ಅಂತಾ ನಿಮಗೆ ಕೈ ಜೋಡಿಸುತ್ತೆನೆ. ಮೋದಿ ಅವರು ಇನ್ನೊಮ್ಮೆ ಪ್ರಧಾನಿ ಆಗಲು ನಿಮ್ಮ ಬೆಂಬಲ ನನಗೆ ಬೇಕು ಅಂದ್ರು.

    ಬಿಜೆಪಿಯವರು ಕೋಲಿ ಸಮಾಜ ಗುರುತಿಸಿ ರಾಷ್ಟ್ರಪತಿ ಮಾಡಿದ್ದಾರೆ. ಇವತ್ತು ಮಲ್ಲಿಕಾರ್ಜುನ ಖರ್ಗೆ ನಮ್ಮ ಸಮಾಜಕ್ಕೆ ಎಸ್ ಟಿ ಸೇರಿಸದೇ ಕೊಡಲಿ ಪೆಟ್ಟು ಹಾಕಿದ್ದಾರೆ. ಇವತ್ತಿನ ದಿನ ಮಲ್ಲಿಕಾರ್ಜುನ ಖರ್ಗೆ ಕುದುರೆ ಓಡುವುದಿಲ್ಲ. ಉಮೇಶ್ ಜಾಧವ್ ಅವರ ಕುದುರೆ ಓಡುತ್ತದೆ. ಇಂದು ನನಗೊಂದು ಅವಕಾಶ ಮಾಡಿಕೊಡಿ ಎಂದು ನಾನು ನಿಮ್ಮಲ್ಲಿ ಕೈಮುಗಿದು ವಿನಂತಿ ಮಾಡಿಕೊಳ್ಳುತ್ತೇನೆ ಅಂದ್ರು.

    ಈ ಮೈದಾನದಲ್ಲಿ ಅಟಲಜೀ ಸೇರಿದಂತೆ ಹಲವರು ಬಂದು ಹೋಗಿದ್ದಾರೆ. ಈ ಹಿಂದೆ ನಾನು 8 ವರ್ಷದವನಿದ್ದಾಗ ವಾಜಪೇಯಿ ಭಾಷಣ ಕೇಳಲು ಬಂದಿದ್ದೆ ಎಂದು ಹೇಳಿದ್ರು. ಜಾಧವ್ ಭಾಷಣ ಆರಂಭಿಸುತ್ತಿದ್ದಂತೆ ಮೋದಿ ಮೋದಿ ಅಂತಾ ಜನರ ಹರ್ಷೋದ್ಗಾರ ಕೂಗಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಲ್ಲಿಕಾರ್ಜುನ ಖರ್ಗೆ ಸೋಲಿಸಲು ಪಣ ತೊಟ್ಟರಾ ಮೋದಿ?

    ಮಲ್ಲಿಕಾರ್ಜುನ ಖರ್ಗೆ ಸೋಲಿಸಲು ಪಣ ತೊಟ್ಟರಾ ಮೋದಿ?

    -ಖರ್ಗೆ ಕೋಟೆಯಲ್ಲಿ ಮೋದಿ ರಣ ಕಹಳೆ
    -ಖರ್ಗೆ ಸೋಲಿಗೆ ಕಾದು ಕುಳಿತು ತ್ರಿಮೂರ್ತಿಗಳು!

    ಕಲಬುರಗಿ: ಪಾಕಿಸ್ತಾನಕ್ಕೆ ಮಧ್ಯರಾತ್ರಿಯಲ್ಲಿ ಸರ್ಜಿಕಲ್ ಸ್ಟ್ರೈಕ್ ಮುಖಾಂತರ ಅದರ ಬೆನ್ನು ಮುಳೆ ಮುರಿದ ಮೋದಿ, ಇದೀಗ ಸಂಸತ್ತಿನಲ್ಲಿ ಅವರಿಗೆ ಪ್ರಬಲವಾಗಿ ದಿಟ್ಟ ಉತ್ತರ ನೀಡುವ ಮಲ್ಲಿಕಾರ್ಜುನ ಖರ್ಗೆ ಮಣಿಸಲು ಬುಧವಾರ ಮಧ್ಯಾಹ್ನವೇ ಖುದ್ದು ಮೋದಿ ಕಲಬುರಗಿಗೇ ಆಗಮಿಸುತ್ತಿದ್ದಾರೆ.

    ಸದ್ಯ ಸಂಸತ್ತಿನಲ್ಲಿ ಪ್ರಧಾನಿ ಮೋದಿಯ ಪ್ರತಿ ಮಾತಿಗೂ ಹರಿತವಾಗಿ ದಿಟ್ಟ ಉತ್ತರ ನೀಡುತ್ತಿದ್ದ ಮಲ್ಲಿಕಾರ್ಜುನ ಖರ್ಗೆಗೇ, ಈ ಬಾರಿ ಶತಾಯಗತಾಯ ಸೋಲಿಸಲು ಪ್ರಧಾನಿ ಮೋದಿ ಟೀಂ ಇದೀಗ ಸಿದ್ಧವಾಗಿದೆ. ಈ ಬಾರಿ ಕಲಬುರಗಿ ಕ್ಷೇತ್ರದಲ್ಲಿ ಖರ್ಗೆರನ್ನು ಸೋಲಿಸಿ ಕಮಲ ಅರಳಿಸಲು ಖುದ್ದು ಮೋದಿ ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದು, ಖರ್ಗೆ ಸೋಲಿಸಲು ಕೈ ಶಾಸಕ ಡಾ.ಉಮೇಶ್ ಜಾಧವ್ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಈ ಮೂಲಕ ಖರ್ಗೆ ಅವರ ಕಲಬುರಗಿ ಕೋಟೆ ಭೇಧಿಸಲು ಮೋದಿ ಆ್ಯಂಡ್ ಟೀಂ ಸಜ್ಜಾಗಿದ್ದಾರೆ. ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಲಬುರಗಿಯ ನೂತನ ವಿದ್ಯಾಲಯ ಮೈದಾನದಲ್ಲಿ ಬಿಜೆಪಿಯ ಬೃಹತ ಸಮಾವೇಶ ನಡೆಯಲ್ಲಿದ್ದು, ಕಾರ್ಯಕರ್ತರನ್ನು ಪ್ರಧಾನಿ ಮೋದಿ ತಮ್ಮ ಮಾತುಗಳಿಂದ ಹುರಿದುಂಬಿಸಲಿದ್ದಾರೆ.

    ಮಲ್ಲಿಕಾರ್ಜುನ ಖರ್ಗೆ ಅವರ ಕಲಬುರಗಿ ಕೋಟೆಯ ಮೇಲೆ ಕಮಲ ಅರಳಿಸಲು ತ್ರಿಮೂತ್ರಿಗಳಾದ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ, ಬಾಬುರಾವ್ ಚಿಂಚನಸೂರ್ ಮತ್ತು ಉಮೇಶ್ ಜಾಧವ್ ರಣತಂತ್ರ ರಚಿಸುತ್ತಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಾಳಯ ಸೇರುತ್ತಿರುವ ಡಾ.ಉಮೇಶ್ ಜಾಧವ್ ಅವರನ್ನು ಖರ್ಗೆ ಎದುರಿಗೆ ನಿಲ್ಲಿಸಲು ಎಲ್ಲ ರೀತಿಯ ತಯಾರಿಗಳು ನಡೆದಿವೆ. ಈ ಚುನಾವಣೆಯನ್ನು ಬಿಜೆಪಿಯ ಮೂರು ಜನ ಶಾಸಕರು ಸೇರಿದಂತೆ ರಾಜ್ಯ ಮತ್ತು ರಾಷ್ಟ್ರೀಯ ನಾಯಕರಿಗೆ ಮೋದಿ ಕರೆ ಕೊಟ್ಟಿದ್ದು, ಈ ಬಾರಿ ಶತಾಯ ಗತಾಯ ಖರ್ಗೆ ಸೋಲಿಸಲು ಕೇಸರಿ ಪಕ್ಷ ಪಣ ತೊಟ್ಟಿದೆ ಎನ್ನಲಾಗುತ್ತಿದೆ.

    ಒಂದೆಡೆ ಜಿಲ್ಲೆಯ ಕೋಲಿ ಸಮಾಜದ ಮುಖಂಡ ಬಾಬುರಾವ್ ಚಿಂಚನಸೂರ್, ಇನ್ನೊಂದಡೆ ಮಾಲೀಕಯ್ಯ ಗುತ್ತೇದಾರ ಖರ್ಗೆ ಸಹ ಸೋಲಿಸಲು ಮುಂದಾಗಿದ್ದಾರೆ. ಇತ್ತ ಖಮರುಲ್ ಅವರನ್ನ ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ವಂಚಿತರಾಗಿ ಮಾಡಿರುವ ಹಿನ್ನೆಲೆ ಮುಸ್ಲಿಂ ಮತದಾರರು ಸಹ ಖರ್ಗೆ ಪರ ಮತ ಚಲಾಯಿಸದೇ ತಟಸ್ಥರಾಗಿರಲು ಯೋಚಿಸುತ್ತಿದ್ದಾರೆ. ಸೋಲಿನ ಹತಾಶೆಯಲ್ಲಿರುವ ಖರ್ಗೆ ಇದು ನನ್ನ ಕೊನೆಯ ಚುನಾವಣೆ ಅಂತಾ ಜನರಿಗೆ ಎಮೋಷನಲ್ ಮಾಡಿ ಮತಗಳಿಸಲು ಮುಂದಾಗಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡುತ್ತಿದೆ.

    ಸದ್ಯ ಮೇಲನೋಟಕ್ಕೆ ಖರ್ಗೆ ಪ್ರಬಲವಾಗಿದ್ರು ಬದಲಾದ ರಾಜಕೀಯದಲ್ಲಿ ಅವರು ಇದೀಗ ಒಂಟಿಯಾದಂತಾಗಿದೆ. ಇನ್ನು ಧರಂಸಿಂಗ್ ಮತ್ತು ಖಮರುಲ್ ಇಸ್ಲಾಂ ಇಲ್ಲದ ಈ ಚುನಾವಣೆಯಲ್ಲಿ ಖರ್ಗೆ ಏಕಾಂಗಿಯಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರ ಆಗುತ್ತಾ?

    ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರ ಆಗುತ್ತಾ?

    -ಸ್ಪೀಕರ್ ಅಂಗಳದಲ್ಲಿ ಜಾಧವ್ ಚೆಂಡು!

    ಬೆಂಗಳೂರು: ಚಿಂಚೋಳಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರೋ ಉಮೇಶ್ ಜಾಧವ್, ಬುಧವಾರ ಕಲಬುರಗಿಯಲ್ಲಿ ನಡೆಯೋ ಬಿಜೆಪಿಯ ಬೃಹತ್ ಸಮಾವೇಶದಲ್ಲಿ ಪ್ರಧಾನಿ ಮೋದಿ ಸಮ್ಮುಖದಲ್ಲಿ ಕಮಲ ಹಿಡಿಯಲು ಸಜ್ಜಾಗಿದ್ದಾರೆ. ಈ ಸಮಯದಲ್ಲಿ ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರವಾಗುತ್ತಾ ಎಂಬ ಅನುಮಾನಗಳು ಮೂಡಿವೆ.

    ಉಮೇಶ್ ಜಾಧವ್ ವಿರುದ್ಧ ವಾಗ್ದಾಳಿ ನಡೆಸಿರೋ ಮಾಜಿ ಸಿಎಂ ಸಿದ್ದರಾಮಯ್ಯ, ಜಾಧವ್ ಸೇರಿ ನಾಲ್ವರ ಶಾಸಕರನ್ನು ಅನರ್ಹಗೊಳಿಸುವಂತೆ ದೂರು ನೀಡಿದ್ದೇವೆ. ಅದು ಇತ್ಯರ್ಥವಾಗುವವರೆಗೂ ಜಾಧವ್ ರಾಜೀನಾಮೆ ಅಂಗೀಕಾರವಾಗುವಂತಿಲ್ಲ. ಈ ಬಗ್ಗೆ ಸ್ಪೀಕರ್ ಏನು ನಿರ್ಣಯ ತೆಗೆದುಕೊಳ್ಳುತ್ತಾರೋ ನೋಡೋಣ. ಜಾಧವ್ ಆಪರೇಷನ್ ಕಮಲದ ದಾಳಕ್ಕೆ ಸಿಲುಕಿರೋದು ಸ್ಪಷ್ಟವಾಗಿ ಗೊತ್ತಾಗ್ತಿದೆ ಎಂದು ಕಿಡಿಕಾರಿದ್ದಾರೆ.

    ಸಿದ್ದರಾಮಯ್ಯರ ಹೇಳಿಕೆಗೆ ಕಲಬುರಗಿಯಲ್ಲಿ ತಿರುಗೇಟು ನೀಡಿದ ಉಮೇಶ್ ಜಾಧವ್, ನಾಳೆ ಬಿಜೆಪಿ ಸೇರುತ್ತಿದ್ದು, ಯಾರೇನೇ ಮಾಡಿದರೂ ಏನು ಆಗೋದಿಲ್ಲ ಅಂದ್ರು. ಸ್ಪೀಕರ್ ಪ್ರಾಮಾಣಿಕರಿದ್ದು, ಅವರು ನಮ್ಮ ರಾಜೀನಾಮೆ ಅಂಗೀಕಾರ ಮಾಡುವ ಬಗ್ಗೆ ವಿಶ್ವಾಸವಿದೆ. ಉಮೇಶ್ ಜಾಧವ್, ಬಿಜೆಪಿಗೆ ಸೇರ್ಪಡೆ ಆಗ್ತಿರೋದನ್ನು ಕಲಬರಗಿಯ ಬಿಜೆಪಿ ಮುಖಂಡ ಸುನಿಲ್ ವಲ್ಯಾಪುರೆ ಸ್ವಾಗತಿಸಿದ್ದಾರೆ. ನನಗೆ ಯಾವ ಅಸಮಾಧಾನವೂ ಇಲ್ಲ ಎಂದಿದ್ದಾರೆ.

    ಉಮೇಶ್ ಜಾಧವ್ ಭವಿಷ್ಯ ಸ್ಪೀಕರ್ ರಮೇಶ್ ಕುಮಾರ್ ಕೈಯಲ್ಲಿದೆ. ರಮೇಶ್ ಕುಮಾರ್ ಕೈಗೊಳ್ಳುವ ನಿರ್ಧಾರದ ಮೇಲೆ ನಾಳೆ ಉಮೇಶ್ ಜಾಧವ್, ಬಿಜೆಪಿ ಸೇರ್ಪಡೆ ಆಗ್ತಾರೋ ಇಲ್ವೋ ಅನ್ನೋದು ನಿರ್ಧಾರ ಆಗಲಿದೆ.

    ಸ್ಪೀಕರ್ ಅಂಗಳದಲ್ಲಿ ಚೆಂಡು: ನಾಳೆಯೊಳಗೆ ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡುತ್ತಾರಾ ಎಂಬ ಅನುಮಾನ ಮೂಡಿದೆ. ಈ ಮೊದಲೇ ಕಾಂಗ್ರೆಸ್ ಜಾಧವ್ ಸೇರಿ ನಾಲ್ವರ ಶಾಸಕರನ್ನು ಅನರ್ಹಗೊಳಿಸುವಂತೆ ದೂರು ನೀಡಿದೆ. ಕಾಂಗ್ರೆಸ್ ದೂರಿನ ಆಧಾರದ ಮೇಲೆ ಶಾಸಕರಿಗೆ ನೋಟಿಸ್ ನೀಡಬೇಕಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಬಗ್ಗೆ ಎಲ್ಲರಿಂದ ವಿವರಣೆ ಪಡೆಯಬೇಕಿದೆ. ಅನರ್ಹತೆ ದೂರಿನ ವಿಚಾರಣೆಯ ಕಾರಣ ನೀಡಿ ರಾಜೀನಾಮೆ ಸ್ವೀಕೃತಿ ವಿಳಂಬವಾಗುವ ಸಾಧ್ಯತೆಗಳಿವೆ. ಒಂದು ವೇಳೆ ರಾಜೀನಾಮೆ ಅಂಗೀಕಾರವಾಗದೇ ಇದ್ದಲ್ಲಿ ಉಮೇಶ್ ಜಾಧವ್ ಬಿಜೆಪಿ ಸೇರೋದು ವಿಳಂಬ ಆಗಬಹುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv