Tag: Umesh Reddy

  • ವಿಕೃತಕಾಮಿ ಉಮೇಶ್‌ ರೆಡ್ಡಿಗೆ ರಿಲೀಫ್‌ – ಸುಪ್ರೀಂನಿಂದ ಗಲ್ಲು ಶಿಕ್ಷೆ ರದ್ದು

    ವಿಕೃತಕಾಮಿ ಉಮೇಶ್‌ ರೆಡ್ಡಿಗೆ ರಿಲೀಫ್‌ – ಸುಪ್ರೀಂನಿಂದ ಗಲ್ಲು ಶಿಕ್ಷೆ ರದ್ದು

    ನವದೆಹಲಿ: ವಿಕೃತ ಕಾಮಿ ಉಮೇಶ್‌ ರೆಡ್ಡಿ(Umesh Reddy) ಮರಣ ದಂಡನೆ(Death Sentence)‌ ಶಿಕ್ಷೆಯನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ.

    ಕರ್ನಾಟಕ ಹೈಕೋರ್ಟ್‌ ಉಮೇಶ್ ರೆಡ್ಡಿಗೆ ಮರಣದಂಡನೆ ಖಾಯಂಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಉಮೇಶ್‌ ರೆಡ್ಡಿ ಸುಪ್ರೀಂ(Supreme Court) ಮೆಟ್ಟಿಲೇರಿದ್ದ. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸಿಜೆಐ ಉದಯ್‌ ಲಲಿತ್‌ ಅವರಿದ್ದ ತ್ರಿಸದಸ್ಯ ಪೀಠ ಮರಣದಂಡನೆ ಶಿಕ್ಷೆಯನ್ನು ರದ್ದುಗೊಳಿಸಿದೆ.

    ಕಾನೂನನ್ನು ಉಲ್ಲಂಘಿಸಿ 10 ವರ್ಷಗಳ ಕಾಲ ಏಕಾಂಗಿಯಾಗಿ ಬೆಳಗಾವಿ ಜೈಲಿನಲ್ಲಿ ಇರಿಸಲಾಗಿದೆ. ಅಪರಾಧಿ ಯೋಗಕ್ಷೇಮದ ಮೇಲೆ ದುಷ್ಪರಿಣಾಮ ಬೀರಿದೆ. ಹೀಗಾಗಿ ಈತನ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಾಡಿಸಲಾಗಿದೆ ಎಂದು ಪೀಠ  ತನ್ನ ಆದೇಶದಲ್ಲಿ ತಿಳಿಸಿದೆ.

    ಯಾರು ಉಮೇಶ್‌ ರೆಡ್ಡಿ?
    ಸೈನಿಕನಾಗಿ ವೃತ್ತಿ ಜೀವನ ಆರಂಭಿಸಿದ್ದ ಈತ ಪೊಲೀಸ್‌ ಇಲಾಖೆಯಲ್ಲೂ ಕೆಲಸ ಮಾಡಿದ್ದಾನೆ. ಈತ ಬರೋಬ್ಬರಿ 18 ಕೊಲೆ, ಕನಿಷ್ಠ 20 ಅತ್ಯಾಚಾರ ಮಾಡಿದ್ದು, 9 ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದಾನೆ. ಈತನ ಕೃತ್ಯಗಳು ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ, ಗುಜರಾತ್‌ನಲ್ಲೂ ಬೆಳಕಿಗೆ ಬಂದಿವೆ. ಇನ್ನೂ ಕೆಲವು ಪ್ರಕರಣಗಳು ಹೊರ ಜಗತ್ತಿಗೆ ಪರಿಚಯವೇ ಆಗಿಲ್ಲ ಎನ್ನುವುದು ಪೊಲೀಸರ ಅಭಿಪ್ರಾಯ.

    1969ರಲ್ಲಿ ಚಿತ್ರದುರ್ಗದಲ್ಲಿ ಜನಿಸಿದ್ದ ಉಮೇಶ್‌ ರೆಡ್ಡಿ, ಸಿಆರ್‌ಪಿಎಫ್‌ಗೆ ಆಯ್ಕೆಯಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕನಾಗಿ ಸೇವೆಗೆ ನಿಯೋಜನೆಗೊಂಡಿದ್ದ. ಕಮಾಂಡರ್‌ ಮನೆಯಲ್ಲಿ ಡ್ಯೂಟಿಯಲ್ಲಿದ್ದಾಗ ಅವರ ಮಗಳ ಮೇಲೆಯೆ ಅತ್ಯಾಚಾರಕ್ಕೆ ಯತ್ನಿಸಿ, ಸೇನೆಯಿಂದ ಹೊರಬಿದ್ದಿದ್ದ. ಬಳಿಕ ಚಿತ್ರದುರ್ಗ ಜಿಲ್ಲಾ ಸಶಸ್ತ್ರಮೀಸಲು ಪಡೆ ಸೇರಿ ಅಪಘಾತ ಪ್ರಕರಣವೊಂದರಲ್ಲಿ ಸಿಕ್ಕಿ ಹಾಕಿಕೊಂಡಿದ್ದ. ಇದು ಸಣ್ಣ ಅಪರಾಧ ಎಂದು ಆತನನ್ನು ಬಿಟ್ಟು ಕಳಿಸಲಾಗಿತ್ತು.

    ಇದಾದ ಬಳಿಕ ಈತ ತನ್ನ ಕೃತ್ಯ ಆರಂಭಿಸಿದ್ದ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಪುರುಷರು ಮನೆಯಲ್ಲಿ ಇಲ್ಲದ ಸಮಯದಲ್ಲಿ ಕೃತ್ಯ ನಡೆಸುತ್ತಿದ್ದ. ನೀರು ಕೇಳುವ ನೇಪದಲ್ಲಿ ಮನೆ ಪ್ರವೇಶಿಸಿ ಮಹಿಳೆಯರಿಗೆ ಚಾಕು ತೋರಿಸಿ ಬಟ್ಟೆ ಬಿಚ್ಚುವಂತೆ ಹೇಳಿ ಅತ್ಯಾಚಾರ ನಡೆಸಿ ಹತ್ಯೆಗೈದು ಚಿನ್ನಗಳೊಂದಿಗೆ ಪರಾರಿಯಾಗುತ್ತಿದ್ದ. ಸಂತ್ರಸ್ತೆಯ ಒಳ ಉಡುಪಿನೊಂದಿಗೆ ತೆರಳುತ್ತಿದ್ದ. ಪೊಲೀಸರು ಬಂಧಿಸುವ ಸಮಯದಲ್ಲಿ ಆತ ತನ್ನ ಉಡುಪಿನ ಒಳಗಡೆ ಮಹಿಳೆಯರ ಒಳ ಉಡುಪು ಧರಿಸಿ ಸಿಕ್ಕಿ ಬೀಳುತ್ತಿದ್ದ.

    Live Tv
    [brid partner=56869869 player=32851 video=960834 autoplay=true]

  • ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಪ್ರಕಟಿಸಿದ ಹೈಕೋರ್ಟ್

    ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಪ್ರಕಟಿಸಿದ ಹೈಕೋರ್ಟ್

    ಬೆಂಗಳೂರು: 1998ರಲ್ಲಿ ಬೆಂಗಳೂರಿನ ಜಯಶ್ರೀ ಎಂಬಾಕೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ಕೋರ್ಟ್ ವಿಕೃತಿಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಆ ತೀರ್ಪನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತನೆಗೆ ಉಮೇಶ್ ರೆಡ್ಡಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದನು. ಇದೀಗ ಕರ್ನಾಟಕ ಹೈಕೋರ್ಟ್ ಉಮೇಶ್ ರೆಡ್ಡಿ ಅರ್ಜಿಯನ್ನು ವಜಾಗೊಳಿಸಿ ಗಲ್ಲು ಶಿಕ್ಷೆ ತೀರ್ಪು ನೀಡಿದೆ.


    ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸುವಂತೆ ಉಮೇಶ್ ರೆಡ್ಡಿ ಸುಪ್ರೀಂಕೋರ್ಟ್‍ಗೂ ಮನವಿ ಸಲ್ಲಿಸಿದ್ದ. ಸುಪ್ರೀಂಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಆದೇಶ ಎತ್ತಿ ಹಿಡಿದಿತ್ತು. ಆ ಬಳಿಕ 2013ರಲ್ಲಿ ರಾಷ್ಟ್ರಪತಿ ಅವರಿಗೂ ಕ್ಷಮಾಧಾನ ಕೋರಿ ಅರ್ಜಿ ಸಲ್ಲಿಸಿದ್ದ. ಈ ಬಗ್ಗೆ ಪರೀಕ್ಷಿಸಿದ ರಾಷ್ಟ್ರಪತಿ ಕೂಡ ಉಮೇಶ್ ರೆಡ್ಡಿ ಅರ್ಜಿ ವಜಾಗೊಳಿಸಿದ್ದರು. ನಂತರ ಸುಪ್ರೀಂಕೋರ್ಟ್ ಅರ್ಜಿಯನ್ನು ಹೈಕೋರ್ಟ್‍ಗೆ ವರ್ಗಾಯಿಸಿತ್ತು. ಇದನ್ನೂ ಓದಿ: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರ – ಶಿವನ ಭಕ್ತನಾಗಿದ್ದ ಗಾಂಜಾ ಆರೋಪಿ

    ಕ್ಷಮಾಧಾನ ವಿಲೇವಾರಿಯಲ್ಲಿ ತಡವಾಗಿದ್ದ ಹಿನ್ನೆಲೆ ಹೈಕೋರ್ಟ್ ಮೊರೆ ಹೋಗಿದ್ದ ಉಮೇಶ್ ರೆಡ್ಡಿ ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾ.ಅರವಿಂದ್ ಕುಮಾರ್, ನ್ಯಾ. ಪ್ರದೀಪ್ ಸಿಂಗ್ ಯೆರೂರ್‍ ರವರ ದ್ವಿಸದಸ್ಯ ಪೀಠ ಗಲ್ಲು ಶಿಕ್ಷೆಯಿಂದ ವಿನಾಯಿತಿ ಕೋರಿದ್ದ ಉಮೇಶ್ ರೆಡ್ಡಿ ಅರ್ಜಿ ವಜಾಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ. ಸದ್ಯ ಈತ ಬೆಳಗಾವಿಯ ಹಿಂಡಲಗ ಜೈಲಿನಲ್ಲಿದ್ದು, ಈತನ ಮೇಲೆ 21 ಮಹಿಳೆಯರ ಮೇಲೆ ಅತ್ಯಾಚಾರ ಕೊಲೆ ಕೇಸ್ ಇದೆ. 21ರಲ್ಲಿ 9 ಕೇಸ್‍ನಲ್ಲಿ ಈತ ದೋಷಿ ಎಂದು ಸಾಬೀತಾಗಿದೆ. ಇದನ್ನೂ ಓದಿ: ಸುಳ್ಯದಲ್ಲಿ ಯುವತಿಯ ಅತ್ಯಾಚಾರಕ್ಕೆ ಯತ್ನ- ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು