Tag: Umesh

  • ವಿಜಯೇಂದ್ರ ಮಾಡಿದ ಭ್ರಷ್ಟಾಚಾರಕ್ಕೆ ಈ ದಾಳಿ ಸಾಕ್ಷಿ: ಎಚ್. ವಿಶ್ವನಾಥ್

    ವಿಜಯೇಂದ್ರ ಮಾಡಿದ ಭ್ರಷ್ಟಾಚಾರಕ್ಕೆ ಈ ದಾಳಿ ಸಾಕ್ಷಿ: ಎಚ್. ವಿಶ್ವನಾಥ್

    – ಇದು ವಿಜಯೇಂದ್ರನ ಮೇಲೆ ಆದ ಐಟಿ ದಾಳಿ
    – ದಾಳಿಗೆ ಒಳಗಾದವರೆಲ್ಲಾ ವಿಜಯೇಂದ್ರ ಕಂಪನಿಯವರು
    – ಇದರ ಟಾರ್ಗೆಟ್ ಬಿಎಸ್‍ವೈ ಅಲ್ಲ, ಕರಪ್ಷನ್ ಟಾರ್ಗೆಟ್

    ಮೈಸೂರು: ಇದು ಟಾರ್ಗೆಟ್ ಯಡಿಯೂರಪ್ಪ ಅಲ್ಲ. ಇದು ಟಾರ್ಗೆಟ್ ಕರಪ್ಷನ್. ನಾನು ಹಿಂದೆ ಮಾಡಿದ ಆರೋಪಗಳು ಈ ದಾಳಿ ಮೂಲಕ ಸತ್ಯವಾಗಿದೆ. ವಿಜಯೇಂದ್ರ ಮಾಡಿದ ಮಹಾ ಭ್ರಷ್ಟಾಚಾರಕ್ಕೆ ಈ ದಾಳಿ ಇನ್ನೊಂದು ಸಾಕ್ಷಿ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

    ಮೈಸೂರಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗೆ ಇಳಿದಿದ್ದು ವಯಸ್ಸಿನ ಕಾರಣಕ್ಕೆ ಅಲ್ಲ. ಮಗ ಮಾಡಿದ ಭ್ರಷ್ಟಾಚಾರದ ಕಾರಣಕ್ಕೆ ಅವರು ಅಧಿಕಾರದಿಂದ ಕೆಳಗೆ ಇಳಿದರು. ಈ ದಾಳಿ ಪರೋಕ್ಷವಾಗಿ ವಿಜಯೇಂದ್ರ ಮೇಲೆ ಆದ ದಾಳಿ. ತಂದೆಯ ಪೆನ್, ನಾಲಗೆ ಎಲ್ಲವನ್ನೂ ಕಿತ್ತುಕೊಂಡು ತಂದೆಯ ಮರ್ಯಾದೆಯನ್ನು ಕಳೆದು ಪಕ್ಷದ ಮರ್ಯಾದೆಯನ್ನೂ ಕಳೆದರು ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಬಿಎಸ್‍ವೈ ಆಪ್ತನ ಮನೆ ಮೇಲೆ ಐಟಿ ರೇಡ್

    ಇಂದು ಬೆಳಗ್ಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದ ಉಮೇಶ್ ಸಹಿತ 30ಕ್ಕೂ ಹೆಚ್ಚು ಕಾಂಟ್ರ್ಯಾಕ್ಟರ್ ಗಳ ಮನೆ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಎಂಟಿಸಿ ಕಂಡೆಕ್ಟರ್ ಆಗಿದ್ದ ಉಮೇಶ್ ಬಳಿಕ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಅವರ ಆಪ್ತ ಸಹಾಯಕನಾಗಿ ಕಾರ್ಯನಿರ್ವಹಿಸಿದರು. ಬಳಿಕ ವಿಜಯೇಂದ್ರ ಹಾಗೂ ಬಿಎಸ್‍ವೈ ಇಬ್ಬರ ವ್ಯವಹಾರಗಳನ್ನು ಉಮೇಶ್ ನೋಡಿಕೊಳ್ಳುತ್ತಿದ್ದರು. ಇದನ್ನೂ ಓದಿ: ನಿಮ್ಮ ಪಕ್ಷದ ಫ್ಯಾಮಿಲಿ ಬ್ಯುಸಿನೆಸ್‍ಗೆ ಸಂಘದಲ್ಲಿಯೇ ತರಬೇತಿ ನೀಡಲಾಗ್ತಿದೆಯೇ: ಕಟೀಲ್‍ಗೆ ಹೆಚ್.ಕೆ.ಕುಮಾರಸ್ವಾಮಿ ಪ್ರಶ್ನೆ

    ಮೂಲತಃ ಶಿವಮೊಗ್ಗ ಜಿಲ್ಲೆ ಆಯನೂರಿನವರಾಗಿರುವ ಉಮೇಶ್, ಬಿಎಸ್‍ವೈ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. 2008ರಲ್ಲಿ ಬಿಎಸ್‍ವೈ ಸಿಎಂ ಆಗಿದ್ದಾಗ ಸಿಎಂ ಆಪ್ತ ಶಾಖೆಯಲ್ಲಿ ಕೆಲಸ ಮಾಡಿದ್ದ ಬಳಿಕ ಅಧಿಕಾರ ಕಳೆದುಕೊಂಡರೂ ಬಿಎಸ್‍ವೈ ನಂಟು ಬಿಟ್ಟೇ ಇರಲಿಲ್ಲ. ಬಿಎಸ್‍ವೈ ವಿರೋಧ ಪಕ್ಷದ ನಾಯಕರಾಗಿದ್ದಾಗಲೂ ಆಪ್ತ ಸಹಾಯಕನಾಗಿ ಕೆಲಸ ಮಾಡಿದ್ದರು. ಬಿಎಸ್‍ವೈ ಎಲ್ಲಾ ಆಪ್ತ ಖಾಸಗಿ ಕೆಲಸಗಳನ್ನು ನಿರ್ವಹಿಸುತ್ತಿದ್ದ ಉಮೇಶ್ ಇದೀಗ ಬಿಎಸ್‍ವೈ ರಾಜೀನಾಮೆ ಬಳಿಕ ಹಾಲಿ ಸಿಎಂ ಕಚೇರಿಯಲ್ಲಿ ಸಹಾಯಕನಾಗಿ ಸೇರ್ಪಡೆಗೊಂಡಿದ್ದರು. ಇದನ್ನೂ ಓದಿ: ಬಿಎಸ್‍ವೈ ಆಪ್ತನ ಮೇಲೆ ಐಟಿ ರೇಡ್- ಬಿಜೆಪಿಯ ಆಂತರಿಕ ಕಿತ್ತಾಟ ಇದಕ್ಕೆ ಕಾರಣ: ಎಚ್‍ಡಿಕೆ

    ಸಿಎಂ ಆಪ್ತ ಸಹಾಯಕನಾದ್ರೂ ಬಿಎಸ್‍ವೈ ಮನೆಯಲ್ಲೇ ಕೆಲಸ ನಿರ್ವಹಿಸುತ್ತಿದ್ದು, ಯಡಿಯೂರಪ್ಪ ವಿಧಾನಸಭೆ ವಿಪಕ್ಷ ನಾಯಕರಾದಾಗಿಂದಲೂ ಜೊತೆಗೆ ಇರುವ ಉಮೇಶ್ ಶಿವಮೊಗ್ಗ, ಬೆಂಗಳೂರಿನಲ್ಲಿ ನೂರಾರು ಕೋಟಿ ಆಸ್ತಿ ಮಾಡಿರುವ ಆರೋಪ ಕೇಳಿ ಬಂದಿದ್ದು, ವಿಜಯನಗರದಲ್ಲಿ ಒಂದು ಭವ್ಯ ಮನೆಯ ನಿರ್ಮಾಣ ಮಾಡುತ್ತಿರುವ ಉಮೇಶ್ ಅವರ ಮೇಲೆ ಐಟಿ ರೇಡ್ ಆಗಿದೆ.

  • ಬಿಜೆಪಿಯಲ್ಲಿ ಆಂತರಿಕ ಕಿತ್ತಾಟ, ಬಿಎಸ್‌ವೈ ಮನೆ ಮೇಲೆ ಐಟಿ ದಾಳಿ: ಎಚ್‍ಡಿಕೆ

    ಬಿಜೆಪಿಯಲ್ಲಿ ಆಂತರಿಕ ಕಿತ್ತಾಟ, ಬಿಎಸ್‌ವೈ ಮನೆ ಮೇಲೆ ಐಟಿ ದಾಳಿ: ಎಚ್‍ಡಿಕೆ

    -ಈಗಿನ RSS ದೇಶವನ್ನು ಹಾಳು ಮಾಡುವ ಸಂಘಟನೆ

    ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತರ ಮನೆ ಮೇಲೆ ಐಟಿ ರೇಡ್ ಬಿಜೆಪಿಯ ಆಂತರಿಕ ಕಿತ್ತಾಟದಿಂದ ಬೆಳಕಿಗೆ ಬಂದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

    ಮಾಜಿ ಸಿಎಂ ಬಿಎಸ್‍ವೈ ಹಾಗೂ ಡಿಕೆಶಿ ಆಪ್ತರ ಮೇಲೆ ಐಟಿ ದಾಳಿ ಸಂಬಂಧಿಸಿದಂತೆ ಕಲಬುರಗಿ ಏರ್‌ಪೋರ್ಟ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಐಟಿ ದಾಳಿ ಬಗ್ಗೆ ನನಗೆ ಯಾವುದೇ ರೀತಿಯ ಪ್ರತಿಕ್ರಿಯೆ ಇಲ್ಲ. ಆದರೆ ಉಪಚುನಾಣೆ ಸಂದರ್ಭದಲ್ಲಿ ಐಟಿ ದಾಳಿ ಸರ್ವೇ ಸಾಮಾನ್ಯ. ಆದರೆ ಬಿಎಸ್‍ವೈ ಆಪ್ತರ ಮೇಲೆ ದಾಳಿ ನಡೆದಿರುವುದು ಕುತೂಹಲ ಮೂಡಿಸಿದೆ. ಇದರಿಂದ ಅವರ ಪಕ್ಷದಲ್ಲಿ ಆಂತರಿಕ ಕಚ್ಚಾಟ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ ಎಂದು ದೂರಿದರು. ಇದನ್ನೂ ಓದಿ: ಬಿಎಸ್‍ವೈ ಆಪ್ತನ ಮನೆ ಮೇಲೆ ಐಟಿ ರೇಡ್

    ಉಪಚುನಾಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿ, ಯಾರು ಇವರು ನನಗೆ ಹೇಳೋಕೆ? ಅವರ ಯಾವ ಡೊಣ್ಣೆ ನಾಯಕ? ಅವರ ಪರ್ಮಿಷನ್ ತಗೋಂಡು ಅಭ್ಯರ್ಥಿ ಹಾಕಬೇಕಾ? ಎಲ್ಲಿ ಯಾವ ಅಭ್ಯರ್ಥಿ ನಿಲ್ಲಿಸಬೇಕೋ ಅಲ್ಲಿ ನಿಲ್ಲಿಸುತ್ತೇವೆ. ಅವರಿಗೆ ಪರಿಜ್ಞಾನ ಇದ್ದರೆ ನನ್ನ ಪಕ್ಷದ ಅಭ್ಯರ್ಥಿ ಬಗ್ಗೆ ಮಾತನಾಡಬಾರದು ಎಂದು ಕಿಡಿಕಾರಿದರು.

    ಆರ್‌ಎಸ್‌ಎಸ್‌ ಕುರಿತು ಎಚ್‍ಡಿ ದೇವೆಗೌಡರ ಹೇಳಿಕೆ ವಿಚಾರವಾಗಿ, ಸ್ವಾತಂತ್ರ ಪೂರ್ವದ ಆರ್‌ಎಸ್‌ಎಸ್‌ ಬೇರೆ, ಈಗಿನ ಆರ್‌ಎಸ್‌ಎಸ್‌ ಬೇರೆ. ಈಗಿನ ಆರ್‌ಎಸ್‌ಎಸ್‌ ದೇಶವನ್ನು ಹಾಳು ಮಾಡುವ ಸಂಘಟನೆ. ದೇವೆಗೌಡರು ಹೇಳಿದ್ದು ಆರ್‌ಎಸ್‌ಎಸ್‌ ಸ್ವಾತಂತ್ರ ಪೂರ್ವದ ಸಂಘಟನೆ ಬಗ್ಗೆ ಎಂದರು. ಇದನ್ನೂ ಓದಿ: ದಿಢೀರ್‌ ಆರ್‌ಎಸ್‌ಎಸ್‌ ವಿರುದ್ಧ ಎಚ್‌ಡಿಕೆ ಮುಗಿಬಿದ್ದಿದ್ದು ಯಾಕೆ?

  • ಬಿಎಸ್‍ವೈ ಆಪ್ತನ ಮನೆ ಮೇಲೆ ಐಟಿ ರೇಡ್

    ಬಿಎಸ್‍ವೈ ಆಪ್ತನ ಮನೆ ಮೇಲೆ ಐಟಿ ರೇಡ್

    – ಮಾಜಿ ಸಿಎಂ ಯಡಿಯೂರಪ್ಪಗೆ ಶಾಕ್

    ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದ ಉಮೇಶ್ ಸಹಿತ 30ಕ್ಕೂ ಹೆಚ್ಚು ಕಾಂಟ್ರ್ಯಾಕ್ಟರ್ ಗಳ ಮನೆ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಯಾರು ಈ ಉಮೇಶ್?
    ಬಿಎಂಟಿಸಿ ಕಂಡೆಕ್ಟರ್ ಆಗಿದ್ದ ಉಮೇಶ್ ಬಳಿಕ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಅವರ ಆಪ್ತ ಸಹಾಯಕನಾಗಿ ಕಾರ್ಯನಿರ್ವಹಿಸಿದರು. ಬಳಿಕ ವಿಜಯೇಂದ್ರ ಹಾಗೂ ಬಿಎಸ್‍ವೈ ಇಬ್ಬರ ವ್ಯವಹಾರಗಳನ್ನು ಉಮೇಶ್ ನೋಡಿಕೊಳ್ಳುತ್ತಿದ್ದರು. ಮೂಲತಃ ಶಿವಮೊಗ್ಗ ಜಿಲ್ಲೆ ಆಯನೂರಿನವರಾಗಿರುವ ಉಮೇಶ್, ಬಿಎಸ್‍ವೈ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. 2008ರಲ್ಲಿ ಬಿಎಸ್‍ವೈ ಸಿಎಂ ಆಗಿದ್ದಾಗ ಸಿಎಂ ಆಪ್ತ ಶಾಖೆಯಲ್ಲಿ ಕೆಲಸ ಮಾಡಿದ್ದ ಬಳಿಕ ಅಧಿಕಾರ ಕಳೆದುಕೊಂಡರೂ ಬಿಎಸ್‍ವೈ ನಂಟು ಬಿಟ್ಟೇ ಇರಲಿಲ್ಲ. ಬಿಎಸ್‍ವೈ ವಿರೋಧ ಪಕ್ಷದ ನಾಯಕರಾಗಿದ್ದಾಗಲೂ ಆಪ್ತ ಸಹಾಯಕನಾಗಿ ಕೆಲಸ ಮಾಡಿದ್ದರು. ಬಿಎಸ್‍ವೈ ಎಲ್ಲಾ ಆಪ್ತ ಖಾಸಗಿ ಕೆಲಸಗಳನ್ನು ನಿರ್ವಹಿಸುತ್ತಿದ್ದ ಉಮೇಶ್ ಇದೀಗ ಬಿಎಸ್‍ವೈ ರಾಜೀನಾಮೆ ಬಳಿಕ ಹಾಲಿ ಸಿಎಂ ಕಚೇರಿಯಲ್ಲಿ ಸಹಾಯಕನಾಗಿ ಸೇರ್ಪಡೆಗೊಂಡಿದ್ದರು. ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ಮಾಜಿ ಸಿಎಂ ಎಸ್.ಎಂ ಕೃಷ್ಣ

    ಸಿಎಂ ಆಪ್ತ ಸಹಾಯಕನಾದ್ರೂ ಬಿಎಸ್‍ವೈ ಮನೆಯಲ್ಲೇ ಕೆಲಸ ನಿರ್ವಹಿಸುತ್ತಿದ್ದು, ಯಡಿಯೂರಪ್ಪ ವಿಧಾನಸಭೆ ವಿಪಕ್ಷ ನಾಯಕರಾದಾಗಿಂದಲೂ ಜೊತೆಗೆ ಇರುವ ಉಮೇಶ್ ಶಿವಮೊಗ್ಗ, ಬೆಂಗಳೂರಿನಲ್ಲಿ ನೂರಾರು ಕೋಟಿ ಆಸ್ತಿ ಮಾಡಿರುವ ಆರೋಪ ಕೇಳಿ ಬಂದಿದ್ದು, ವಿಜಯನಗರದಲ್ಲಿ ಒಂದು ಭವ್ಯ ಮನೆಯ ನಿರ್ಮಾಣ ಮಾಡುತ್ತಿರುವ ಉಮೇಶ್ ಅವರ ಮೇಲೆ ಐಟಿ ರೇಡ್ ಆಗಿದೆ.

    ಉಮೇಶ್ ಸಹಿತ 6 ಜನ ಆಪ್ತರ ಮೇಲೂ ದಾಳಿ ನಡೆದಿದ್ದು, ಉಮೇಶ್ ಸ್ನೇಹಿತ ಗುತ್ತಿಗೆದಾರ ಮನೆ ಮೇಲೂ ದಾಳಿ ನಡೆದಿದ್ದು, 30ಕ್ಕೂ ಹೆಚ್ಚು ಸರ್ಕಾರಿ ಕಾಂಟ್ರ್ಯಾಕ್ಟರ್ ಗಳ ಮನೆ ಮೇಲೆ ದಾಳಿ ನಡೆದಿದೆ. ನೀರಾವರಿ ಇಲಾಖಡ ಸಹಿತ ಕೆಲ ಕಾಂಟ್ರ್ಯಾಕ್ಟರ್ ಗಳ ಮನೆ ಮೇಲೆ ಐಟಿ ರೇಡ್ ಆಗಿದ್ದು, ಎಲ್ಲರೂ ಕೂಡ ಬಿಎಸ್‍ವೈಗೆ ಆಪ್ತರಾಗಿದ್ದರು. ಇದನ್ನೂ ಓದಿ: 2023ರಲ್ಲೂ ಬೊಮ್ಮಾಯಿ ಸಿಎಂ ಆಗಿ ದಸರಾ ಉದ್ಘಾಟಿಸಲಿದ್ದಾರೆ: ಪ್ರತಾಪ್ ಸಿಂಹ

  • ಬಳೆಪೇಟೆ ಟೀಸರ್ ಸೌಂಡ್ ಬಲು ಜೋರು

    ಬಳೆಪೇಟೆ ಟೀಸರ್ ಸೌಂಡ್ ಬಲು ಜೋರು

    ‘ಬಳೆಪೇಟೆ’ ಚಿತ್ರದ ಟೀಸರ್ ಬಿಡುಗಡೆಯಾಗಿ ಸ್ಯಾಂಡಲ್​ವುಡ್​​ ಅಂಗಳದಲ್ಲಿ ಸಖತ್ ಟಾಕ್ ಕ್ರಿಯೇಟ್ ಮಾಡಿದೆ. ಟೀಸರ್ ತುಣುಕು ಇಂಟ್ರಸ್ಟಿಂಗ್ ಆಗಿ ಮೂಡಿ ಬಂದಿದ್ದು ಚಿತ್ರತಂಡದ ಕುಸುರಿ ಕೆಲಸ ಸಿನಿ ಪ್ರಿಯರ ಮನಸೆಳೆದಿದೆ.

    ಕನ್ನಡದ ಹೊಸ ಮುಖಗಳು, ಕ್ರಿಯಾಶೀಲ ಪ್ರತಿಭೆಗಳು ಸೇರಿ ತುಂಬಾ ಕಾಳಜಿ, ಪ್ರೀತಿಯಿಂದ ತೆಗೆದಿರುವ ಸಿನಿಮಾ ‘ಬಳೆಪೇಟೆ’. ‘ಬಳೆಪೇಟೆ’ ಬೆಂಗಳೂರಿನಲ್ಲಿ ಕೇಳಿ ಬರುವ ಏರಿಯಾವೊಂದರ ಹೆಸರು. ಇದೀಗ ಈ ಹೆಸರು ಸಿನಿಮಾ ಟೈಟಲ್​ ಆಗಿ ಬಿಡುಗಡೆಗೂ ಸಜ್ಜಾಗಿದೆ.

    ಟೀಸರ್ ಝಲಕ್ ಮೂಲಕ ಎಲ್ಲರ ಗಮನ ತಮ್ಮ ಸಿನಿಮಾದತ್ತ ಸೆಳೆದಿರುವ ಈ ಚಿತ್ರದ ಸೂತ್ರದಾರ ರಿಷಿಕೇಶ್. ಇದು ರಿಷಿಕೇಶ್ ಚೊಚ್ಚಲ ಚಿತ್ರ ಎನ್ನುವ ಮಾತೇ ಬಾರದಂತೆ ಟೀಸರ್ ತುಣುಕು ಮೂಡಿಬಂದಿದೆ. ಚಿತ್ರಕ್ಕೆ ಕಥೆ, ಚಿತ್ರಕಥೆ, ನಿರ್ದೇಶನ ಮಾತ್ರವಲ್ಲದೆ ಕ್ಯಾಮೆರಾ ನಿರ್ದೇಶಕನಾಗಿ, ಎಡಿಟರ್, ಕಲರಿಸ್ಟ್ ಆಗಿಯೂ ರಿಷಿಕೇಶ್ ಬಹುಮುಖ ಪ್ರತಿಭೆಯನ್ನ ಇಲ್ಲಿ ಪ್ರದರ್ಶಿಸಿದ್ದಾರೆ.

    ಚಿತ್ರತಂಡ ಮೊದಲೇ ಹೇಳಿದಂತೆ ಇದೊಂದು ಸಿನಿಮಾವಲ್ಲ ಅದಕ್ಕಿಂತ ಹೆಚ್ಚು ಎನ್ನುವ ಮಾತಿನಂತೆ ಟೀಸರ್ ಮೂಡಿಬಂದಿದ್ದು ಟೀಸರ್ ನೋಡಿದವರು ವಾವ್ ಎನ್ನುತ್ತಿದ್ದಾರೆ. ಕರೊನಾ ಲಾಕ್​ಡೌನ್ ಸಮಯದಲ್ಲೂ ಜಗ್ಗದೇ ಬಳೆಪೇಟೆಯಲ್ಲಿ ಯಶಸ್ವಿಯಾಗಿ ಚಿತ್ರೀಕರಣ ಮಾಡಿ ಸೈ ಎನಿಸಿಕೊಂಡು ಸಿನಿಮಾ ಪ್ರೀತಿ ಮೆರೆದಿದೆ ಚಿತ್ರತಂಡ.

    ಸೈಕೋ ಸಿನಿಮಾ ಖ್ಯಾತಿಯ ಗ್ಲಾಮರ್ ಗೊಂಬೆ ಅನಿತಾ ಭಟ್, ಯುವ ನಟ ಪ್ರಮೋದ್ ಬೋಪಣ್ಣ ಬಳೆಪೇಟೆ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಮಯೂರ್ ಪಟೇಲ್, ಉಮೇಶ್ ಬಣಕಾರ್, ಅಭಿಷೇಕ್ ಮಠದ್, ಚೇತನ್, ಲೋಕೇಶ್ ರೇವಣ್ಣ, ಅಪೂರ್ವ, ಉಗ್ರಂ ರವಿ ಸೇರಿದಂತೆ ಹಲವು ನುರಿತ ಕಲಾವಿದರ ಬಳಗ ‘ಬಳೆಪೇಟೆ’ ಅಂಗಳದಲ್ಲಿ ಬಣ್ಣಹಚ್ಚಿದ್ದಾರೆ.

    ಆರ್ ವಿ ಎಸ್ ಪ್ರೊಡಕ್ಷನ್ಸ್ ಬ್ಯಾನರ್ ಮುಖಾಂತರ ಬನಾನ ಶಿವರಾಂ ಬಳೆಪೇಟೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಉತ್ತಮ್, ಲೋಹಿತ್ ಸಂಗೀತ ನಿರ್ದೇಶನ ಬಳೆಪೇಟೆ ಚಿತ್ರಕ್ಕಿದೆ.