Tag: uncle

  • ಅಪ್ರಾಪ್ತೆ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ – ಬಾಲಕಿ 6 ತಿಂಗಳ ಗರ್ಭಿಣಿ

    ಅಪ್ರಾಪ್ತೆ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ – ಬಾಲಕಿ 6 ತಿಂಗಳ ಗರ್ಭಿಣಿ

    ಮೈಸೂರು: ಅಪ್ರಾಪ್ತೆ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ ನಡೆದು ಬಾಲಕಿ ಗರ್ಭಿಣಿ ಆಗಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ. ಈ ಸಂಬಂಧ ಕಾಮುಕ ಚಿಕ್ಕಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

    ನಂಜುಂಡಸ್ವಾಮಿ ಅತ್ಯಾಚಾರವೆಸಗಿದ ಕಾಮುಕ ಚಿಕ್ಕಪ್ಪ. ಶಾಲೆಗೆ ತೆರಳಿದ್ದ ವಿದ್ಯಾರ್ಥಿನಿಯನ್ನು ಮನೆಗೆ ಕರೆದುಕೊಂಡು ಬಂದು ಅತ್ಯಾಚಾರ ಮಾಡಿದ್ದಾನೆ. ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: Uttar Pradesh | ಪತ್ನಿಯ ಅಕ್ರಮ ಸಂಬಂಧ ತಿಳಿದು ಪ್ರಿಯಕರನೊಂದಿಗೇ ಮದ್ವೆ ಮಾಡಿಸಿದ ಪತಿ

    10ನೇ ತರಗತಿ ಓದುತ್ತಿದ್ದ ಅಪ್ರಾಪ್ತೆ ಮೇಲೆ ಪಾಪಿ ಚಿಕ್ಕಪ್ಪ ಅತ್ಯಾಚಾರವೆಸಗಿದ್ದಾನೆ. ಕಳೆದ ಎರಡು ತಿಂಗಳಿಂದ ಪೀರಿಯೆಡ್ಸ್ ಆಗಿಲ್ಲವೆಂಬ ಕಾರಣಕ್ಕೆ ಬಾಲಕಿಯನ್ನ ವೈದ್ಯರು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಯತ್ನಾಳ್‌ ಉಚ್ಛಾಟನೆ ಬೆನ್ನಲ್ಲೇ ಬಿಜೆಪಿಯ ಮತ್ತೊಬ್ಬ ಮುಖಂಡ ರಾಜೀನಾಮೆ – ಬೆಂಬಲಿಗರಿಂದ ಪ್ರತಿಭಟನೆಗೆ ಸಜ್ಜು!

    ಕಳೆದ ಜನವರಿಯಲ್ಲಿ ವಿದ್ಯಾರ್ಥಿನಿಯನ್ನ ಪುಸಲಾಯಿಸಿ ಮನೆಗೆ ಕರೆತಂದಿದ್ದ ಕಾಮುಕ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿ ಯಾರಿಗೂ ತಿಳಿಸಬಾರದೆಂದು ತಿಳಿಸಿ ಅಮಾಯಕನಂತೆ ಮತ್ತೆ ಶಾಲೆಗೆ ಬಿಟ್ಟಿದ್ದಾನೆ. ಪಿರಿಯಡ್ಸ್‌ನಲ್ಲಿ ವ್ಯತ್ಯಾಸ ಕಂಡುಬಂದು ಹೊಟ್ಟೆ ನೋವಿದೆ ಎಂದು ವೈದ್ಯರ ಬಳಿ ತೆರಳಿದಾಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಹಾಲಿನ ದರ ಏರಿಕೆ – ಇಂದು ಕ್ಯಾಬಿನೆಟ್‌ನಲ್ಲಿ ತೀರ್ಮಾನ, 2-3 ರೂ. ಹೆಚ್ಚಳ ಸಾಧ್ಯತೆ?

    ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳು ಬಾಲಕಿಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ನಂಜುಂಡಸ್ವಾಮಿ ವಿರುದ್ದ ಪೋಕ್ಸೋ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ನೊಂದ ಬಾಲಕಿಯನ್ನು ಬಾಲಮಂದಿರದಿಂದ ಪರೀಕ್ಷಾ ಕೇಂದ್ರಕ್ಕೆ ಪೊಲೀಸರ ಭದ್ರತೆಯೊಂದಿಗೆ ಕರೆತರಲಾಗುತ್ತಿದೆ ಎಂದು ಹೇಳಲಾಗಿದೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಏಕನಾಥ್‌ ಶಿಂಧೆ ʻದೇಶದ್ರೋಹಿʼ ಎಂದಿದ್ದ ಕಾಮೆಡಿಯನ್‌ ಕುನಾಲ್ ಕಮ್ರಾಗೆ 2ನೇ ಸಮನ್ಸ್‌

  • ಚಿಕ್ಕಪ್ಪನನ್ನೇ ಕೊಂದ ಪ್ರಕರಣ – ಜ್ಯೂಸ್ ಅಂತ ಹೇಳಿ ಮದ್ಯ ಕುಡಿಸಿದ್ದಕ್ಕೆ ಬರ್ಬರ ಹತ್ಯೆ

    ಚಿಕ್ಕಪ್ಪನನ್ನೇ ಕೊಂದ ಪ್ರಕರಣ – ಜ್ಯೂಸ್ ಅಂತ ಹೇಳಿ ಮದ್ಯ ಕುಡಿಸಿದ್ದಕ್ಕೆ ಬರ್ಬರ ಹತ್ಯೆ

    ಚಿಕ್ಕಬಳ್ಳಾಪುರ: ಚಿಕ್ಕಪ್ಪನನ್ನೇ (Uncle) ಅಣ್ಣನ ಮಗ ಕೊಚ್ಚಿ ಕೊಲೆ (Murder) ಮಾಡಿದ ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಗೌರಿಬಿದನೂರು (Gauribidanur) ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ಚಿಕ್ಕಪ್ಪ ಮೋಸದಿಂದ ಮದ್ಯ (Alcohol) ಕುಡಿಸಿದ್ದಕ್ಕೆ ಕೊಲೆ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾನೆ.

    ಅಂದಹಾಗೆ ಸೋಮವಾರ ಬೆಳಗ್ಗೆ ಗೌರಿಬಿದನೂರು ತಾಲೂಕಿನ ಚೋಳಶೆಟ್ಟಿಹಳ್ಳಿ ಗ್ರಾಮದಲ್ಲಿ ಹಾಲು ತರಲು ಡೈರಿ ಬಳಿ ಬಂದಿದ್ದ ರಾಮಕೃಷ್ಣಪ್ಪನನ್ನು ಆತನ ಅಣ್ಣನ ಮಗ ನಾಗರಾಜು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ. ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಇದೀಗ ಪೊಲೀಸರ ಬಳಿ ಆರೋಪಿ ಕೊಲೆಯ ಕಾರಣವನ್ನು ಬಿಚ್ಚಿಟ್ಟಿದ್ದಾನೆ.

    ಕೊಲೆಗಾರ ನಾಗರಾಜು ಈ ಹಿಂದೆ ಮದ್ಯವ್ಯಸನಿಯಾಗಿದ್ದು ಕುಟುಂಬಸ್ಥರು ಮದ್ಯಪಾನ ಮುಕ್ತ ಕೇಂದ್ರಕ್ಕೆ ಸೇರಿಸಿ ಮದ್ಯ ಸೇವನೆ ಬಿಡಿಸಿದ್ದರು. ಕಳೆದ 8 ವರ್ಷಗಳಿಂದ ಸಂತೋಷದ ಜೀವನ ಮಾಡಿಕೊಂಡಿದ್ದ ನಾಗರಾಜುಗೆ ರಾಮಕೃಷ್ಣಪ್ಪ ಕೊಲೆಯಾದ ಹಿಂದಿನ ದಿನ ಜ್ಯೂಸ್ (Juice) ಬಾಟಲಿಗೆ ಮದ್ಯ ಬೆರೆಸಿ ನೀಡಿದ್ದ. ಇದನ್ನೂ ಓದಿ: ಉತ್ತರಕಾಶಿ ಸುರಂಗದಲ್ಲಿ ಗ್ರೇಟ್ ಆಪರೇಷನ್ – 17 ದಿನಗಳ ಬಳಿಕ ಸಾವು ಗೆದ್ದ 41 ಕಾರ್ಮಿಕರು

    ಬಾಟಲಿಯಲ್ಲಿರುವುದು ಜ್ಯೂಸ್ ಎಂದು ನಂಬಿಸಿ ನಾಗರಾಜುಗೆ ಮೋಸದಿಂದ ಮದ್ಯ ಕುಡಿಸಿದ್ದರಿಂದ ಅಮಲೇರಿದ ಆತ ರಾತ್ರಿ ಮನೆಯಲ್ಲಿ ಹೆಂಡತಿ ಜೊತೆ ಗಲಾಟೆ ಮಾಡಿಕೊಂಡಿದ್ದಾನೆ. ಮರುದಿನ ಬೆಳಗ್ಗೆ ನಡೆದ ಘಟನೆ ಬಗ್ಗೆ ಸಾಕಷ್ಟು ವಿಚಲಿತನಾದ ನಾಗರಾಜು ಚಿಕ್ಕಪ್ಪ ರಾಮಕೃಷ್ಣಪ್ಪ ಹಾಲು ತರಲು ಬರುವುದನ್ನೇ ಕಾದು ಕುಳಿತು ಬಳಿಕ ಬರ್ಬರ ಹತ್ಯೆ ನಡೆಸಿ ಪರಾರಿಯಾಗಿದ್ದ.

    ಘಟನೆ ನಂತರ ಕಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಗೌರಿಬಿದನೂರು ಗ್ರಾಮಾಂತರ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದಾಗ ನಡೆದ ಘಟನೆಯನ್ನು ವಿವರಿಸಿದ್ದಾನೆ. ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: 41 ಕಾರ್ಮಿಕರ ರಕ್ಷಣೆಗೆ ವರವಾಯ್ತು ನಿಷೇಧಿತ ರ‍್ಯಾಟ್ ಹೋಲ್ ಮೈನಿಂಗ್ – ನಿಷೇಧಿಸಿದ್ದು ಯಾಕೆ?

  • ಕುಡಿಯಲು ನೀರು ತರಲು ಹೋದಾಗ ಕೆರೆಯಲ್ಲಿ ಮುಳುಗಿ ಚಿಕ್ಕಪ್ಪ, ಮಗ ಸಾವು

    ಕುಡಿಯಲು ನೀರು ತರಲು ಹೋದಾಗ ಕೆರೆಯಲ್ಲಿ ಮುಳುಗಿ ಚಿಕ್ಕಪ್ಪ, ಮಗ ಸಾವು

    ರಾಯಚೂರು: ಕುಡಿಯಲು ನೀರು ತರಲು ಹೋಗಿ ಕೆರೆಯಲ್ಲಿ (Lake) ಮುಳುಗಿ ಚಿಕ್ಕಪ್ಪ (Uncle) ಹಾಗೂ ಮಗ (Son) ಸಾವನ್ನಪ್ಪಿರುವ ಘಟನೆ ರಾಯಚೂರು (Raichur) ತಾಲೂಕಿನ ಕೊರ್ತಕುಂದಾ ಗ್ರಾಮದ ಹೊರವಲಯದಲ್ಲಿ ನಡೆದಿದೆ.

    ಚಿಕ್ಕಪ್ಪ ಸಲೀಂ ಹುಸೇನಸಾಬ್ (32) ಹಾಗೂ ಅಣ್ಣನ ಮಗ ಯಾಸೀನ್ ರಫಿ (13) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನರೇಗಾ ಕೆಲಸಕ್ಕೆ ಚಿಕ್ಕಪ್ಪನ ಜೊತೆಯಲ್ಲಿ ಹೋಗಿದ್ದ ಬಾಲಕ ಕೆರೆಯಲ್ಲಿ ಕುಡಿಯಲು ನೀರು ತುಂಬಿಕೊಂಡು ಬರಲು ಹೋಗಿದ್ದಾಗ ಕಾಲು ಜಾರಿ ಬಿದ್ದಿದ್ದಾನೆ. ಬಾಲಕನ ಚೀರಾಟ ಕೇಳಿ ರಕ್ಷಣೆಗೆ ಹೋದ ಚಿಕ್ಕಪ್ಪನೂ ಕೆರೆಯಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ಶವವನ್ನು ಕಾರಿನಲ್ಲೇ ತಂದಿದ್ದ ಪಾಪಿ ತಂದೆ!

    ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: 20 ಟನ್ ಅಕ್ಕಿ ಕದ್ದೊಯ್ದ ಪ್ರಕರಣ – ಕಳುವಾದ ಲಾರಿಯಲ್ಲಿ ಇರಲೇ ಇಲ್ಲ GPS

  • ಸುದೀಪ್ ಗೆ ‘ಬಾಸ್’ ಎಂದ ಸಿಎಂ ಬೊಮ್ಮಾಯಿ : ವಿಡಿಯೋ ವೈರಲ್

    ಸುದೀಪ್ ಗೆ ‘ಬಾಸ್’ ಎಂದ ಸಿಎಂ ಬೊಮ್ಮಾಯಿ : ವಿಡಿಯೋ ವೈರಲ್

    ಮೊನ್ನೆಯಷ್ಟೇ ಕಿಚ್ಚ ಸುದೀಪ್ (Kiccha Sudeep) ತಾವು ಬಸವರಾಜ ಬೊಮ್ಮಾಯಿ (Basavaraja Bommai) ಅವರನ್ನು ‘ಮಾಮ’ (Maama)ಎಂದು ಕರೆಯುವುದಾಗಿ ಹೇಳಿಕೊಂಡಿದ್ದರು. ಚಿಕ್ಕ ವಯಸ್ಸಿನಿಂದಲೇ ಬೊಮ್ಮಾಯಿ ಅವರ ಜೊತೆ ಒಡನಾಟ ಹೊಂಡಿದ್ದೇನೆ. ಆವತ್ತಿನಿಂದಲೂ ಅವರನ್ನು ಮಾಮ ಎಂದೇ ಕರೆಯುತ್ತೇನೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟ ಪಡಿಸಿದ್ದರು. ಈ ಮಾತು ಸಾಕಷ್ಟು ಟ್ರೋಲ್ ಆಗಿತ್ತು.

    ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುದೀಪ್ ಗೆ ‘ಬಾಸ್’ (Boss) ಎಂದು ಕರೆದಿದ್ದಾರೆ. ಈ ಮಾತು ಕೂಡ ಟ್ರೋಲ್ ಆಗುತ್ತಿದೆ. ಸಾಕಷ್ಟು ಸಂಖ್ಯೆಯಲ್ಲಿ ಸುದೀಪ್ ಅಭಿಮಾನಿಗಳು ಈ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಸುದೀಪ್ ಅಭಿಮಾನಿಗಳು ಈ ವಿಡಿಯೋ ಹಂಚಿಕೊಳ್ಳುವುದಕ್ಕೆ ಕಾರಣವೂ ಇದೆ. ಬಾಸ್ ಅನ್ನುವ ಪದಕ್ಕಾಗಿ ಹಲವು ವರ್ಷಗಳಿಂದ ಗಾಂಧಿನಗರದಲ್ಲಿ ಕಿತ್ತಾಟ ಶುರುವಾಗಿದೆ. ಇದನ್ನೂ ಓದಿ: ಕರಣ್ ಜೋಹಾರ್ ವಿರುದ್ಧ ಮತ್ತೆ ಕೆಂಡಕಾರಿದ ಕಂಗನಾ ರಣಾವತ್

    ತಮ್ಮನ್ನು ಬೆಂಬಲಿಸಿದ ಕಾರಣಕ್ಕಾಗಿ ಸುದೀಪ್ ಸಾಕಷ್ಟು ಟೀಕೆಗೆ ಒಳಗಾಗಿದ್ದಾರೆ. ಈ ಕುರಿತು ಏನು ಹೇಳುತ್ತೀರಿ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆ ಉತ್ತರಿಸಿದ ಬೊಮ್ಮಾಯಿ, ‘ನಾನೇನಪ್ಪ ಮಾಡ್ಲಿ? ಬೆಂಬಲದ ವಿಷಯವಾಗಿ ಬಾಸ್ (ಸುದೀಪ್) ಮೊನ್ನೆ ಎಲ್ಲವನ್ನೂ ಸ್ಪಷ್ಟ ಪಡಿಸಿದ್ದಾರಲ್ಲ. ಮತ್ತೆ ಏನು ಹೇಳೋದು’ ಎಂದಷ್ಟೇ ಉತ್ತರಿಸಿದ್ದಾರೆ. ಈ ಮಾತಿನ ಮಧ್ಯ ಬಂದ ‘ಬಾಸ್’ ಪದವು ಸಾಕಷ್ಟು ವೈರಲ್ ಆಗಿದೆ.

    ಸುದೀಪ್ ಅವರ ಖಾಸಗಿ ವಿಡಿಯೋ ವಿಚಾರವಾಗಿಯೂ ಸಿಎಂ ಪ್ರತಿಕ್ರಿಯೆ ನೀಡಿದ್ದು, ಅದಕ್ಕೂ ಅವರು ಬೆಂಬಲಿಸಿದ್ದಕ್ಕೂ ಯಾವುದೇ ಸಂಬಂಧವಿಲ್ಲ. ಅದು ಮುಗಿದ ನಂತರವೇ ಅವರು ಪತ್ರಿಕಾಗೋಷ್ಠಿಗೆ ಬಂದಿದ್ದು. ಬೆಂಬಲಿಸಿದ್ದಕ್ಕೆ ವಿಡಿಯೋ ಬೆದರಿಕೆ ಹಾಕಿಲ್ಲ ಎನ್ನುವುದನ್ನು ಸ್ಪಷ್ಟ ಪಡಿಸಿದ್ದಾರೆ.

  • ಕೆಳಮನೆ ಆಂಟಿ ಜೊತೆ ಎಸ್ಕೇಪ್ ಆಗಿದ್ದ ಲವರ್‌ಬಾಯ್ ಅಂಕಲ್ ತಡರಾತ್ರಿ ದಿಢೀರ್ ಪ್ರತ್ಯಕ್ಷ

    ಕೆಳಮನೆ ಆಂಟಿ ಜೊತೆ ಎಸ್ಕೇಪ್ ಆಗಿದ್ದ ಲವರ್‌ಬಾಯ್ ಅಂಕಲ್ ತಡರಾತ್ರಿ ದಿಢೀರ್ ಪ್ರತ್ಯಕ್ಷ

    ಬೆಂಗಳೂರು: ಕೆಳಮನೆ ಆಂಟಿ ಜೊತೆ ಎಸ್ಕೇಪ್ ಆಗಿದ್ದ ಲವರ್ ಬಾಯ್ ಅಂಕಲ್ ಮಂಗಳವಾರ ತಡರಾತ್ರಿ ದಿಢೀರ್ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷವಾಗಿದ್ದಾನೆ. ನವೀದ್ ತಡರಾತ್ರಿ ವಕೀಲರ ಜೊತೆ ಜ್ಞಾನಭಾರತಿ ಪೊಲೀಸ್ ಠಾಣೆಗೆ ಹಾಜರಾಗಿದ್ದು, ಪೊಲೀಸ್ ಠಾಣೆಗೆ ಹಾಜರಾಗಿ ಕಾಣೆಯಾಗಿದ್ದಾನೆಂದು ನವೀದ್ ಪತ್ನಿ ನೀಡಿದ್ದ ದೂರಿನ ಸಂಬಂಧ ಠಾಣೆಗೆ ಭೇಟಿ ನೀಡಿ ಪ್ರಕರಣ ಮುಗಿಸಿಕೊಂಡು ನವೀದ್ ಪತ್ನಿ ಝೀನತ್ ಜೊತೆ ಹೋಗದೆ ವಕೀಲರೊಟ್ಟಿಗೆ ಹೋಗಿದ್ದಾನೆ.

    ಇತ್ತ ನವೀದ್ ಪೊಲೀಸ್ ಠಾಣೆಗೆ ಹಾಜರಾಗುತ್ತಿದ್ದಂತೆ ನವೀದ್ ಜೊತೆ ಹೋಗಿರೋ ಶಾಜಿಯಾ ವಕೀಲರು ಡಿವೋರ್ಸ್ ನೋಟಿಸ್ ಹಿಡಿದುಕೊಂಡು ಜ್ಞಾನಭಾರತಿ ಪೊಲೀಸ್ ಠಾಣೆಗೆ ಬಂದಿದ್ದಾರೆ. ನವೀದ್ ಪೊಲೀಸರ ಮುಂದೆ ನಾನು ಶಾಜಿಯಾಳನ್ನ ಕರೆದುಕೊಂಡು ಹೋಗಿಲ್ಲ. ನನ್ನ ಕೆಲಸದ ಮೇಲೆ ಹೋಗಿದ್ದಾಗಿ ಪೊಲೀಸರ ಮುಂದೆ ಹೇಳಿ ವಕೀಲರೊಟ್ಟಿಗೆ ಹೋಗಿದ್ದಾನೆ ಎಂದು ಪತ್ನಿ ಝೀನತ್ ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದಾರೆ.

    ನವೀದ್ ಪತ್ನಿ ಝೀನತ್ ನನ್ನ ಗಂಡ (Husband Missing) ಕಾಣೆಯಾಗಿದ್ದಾನೆಂದು ನಾನು ದೂರು ಕೊಟ್ಟಿದ್ದೆ. ನನ್ನ ಗಂಡನನ್ನ ಕರೆದುಕೊಂಡು ಬಂದಿರೋ ಪೊಲೀಸರು ನನ್ನ ಜೊತೆ ಕಳಿಸಿದೆ ವಕೀಲರೊಟ್ಟಿಗೆ ಕಳಿಸಿದ್ದಾರೆಂದು ಪೊಲೀಸರ ಮೇಲೆ ದೂರುತ್ತಿದ್ದಾರೆ. ನವೀದ್ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷವಾಗುತ್ತಿದ್ದಂತೆ ಶಾಜಿಯ ಡಿವೋರ್ಸ್ ಪೇಪರ್ ಕಳಿಸಿಕೊಟ್ಟಿದ್ದಾಳೆ. ಗಂಡ ಮುಬಾರಕ್ ಗೆ ಡಿವೋರ್ಸ್ ಪೇಪರ್ (Divorce Letter) ವಕೀಲರೊಟ್ಟಿಗೆ ಕಳಿಸಿಕೊಟ್ಟಿದ್ದಾಳೆ. ಡಿವೋರ್ಸ್ ಪೇಪರ್ ನವೀದ್ ಒಟ್ಟಿಗೆ ಬಂದಿದ್ದರಿಂದ ನವೀದ್ ಮತ್ತು ಶಾಜಿಯ ಒಟ್ಟಿಗೆ ಇರುವುದರ ಬಗ್ಗೆ ಎರಡು ಮನೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

    ನವೀದ್ ಜೊತೆ ಹೋಗಿರೋ ಶಾಜಿಯ ಈ ಹಿಂದೆ ಕೂಡ ಬೇರೊಬ್ಬನ ಜೊತೆ ಓಡಿ ಹೋಗಿದ್ದರು ಎನ್ನಲಾಗಿದೆ. ನವೀದ್ ಹಾಗೂ ಮುಬಾರಕ್ ದಂಪತಿಗೆ ಇಬ್ಬಿಬ್ಬರು ಮಕ್ಕಳಿದ್ದಾರೆ. ಕೆಳ ಮಹಡಿಯಲ್ಲಿ ಮುಬಾರಕ್ ಮತ್ತು ಶಾಜಿಯಾ, ಎರಡನೇ ಮಹಡಿಯಲ್ಲಿ ನವೀದ್, ಝೀನತ್ ದಂಪತಿ ವಾಸವಾಗಿದ್ದರು. ಇದನ್ನೂ ಓದಿ: ಕೆಳ ಮನೆಯಲ್ಲಿದ್ದ ವಿವಾಹಿತೆ, ಮೇಲಿನ ಮನೆಯಲ್ಲಿದ್ದ ವಿವಾಹಿತನ ಜೊತೆಗೆ ಎಸ್ಕೇಪ್!

    ಮುಬಾರಕ್ ಪತ್ನಿ ಶಾಜಿಯಾ ಜೊತೆಗೆ ಝೀನತ್ ಪತಿ ನವೀದ್ ಗೆ ಅನೈತಿಕ ಸಂಬಂಧ ಆರೋಪ ಮಾಡಲಾಗಿತ್ತು. ಇಬ್ಬರಿಂದ ಜ್ಞಾನಭಾರತಿ ಪೊಲೀಸ್ ಠಾಣೆ (JnanaBharati Police Station) ಯಲ್ಲಿ ಪ್ರತ್ಯೇಕ ದೂರು ದಾಖಲು ಮಾಡಿದ್ದರು. ಒಂದು ಮಿಸ್ಸಿಂಗ್ ಕೇಸ್ ಪತ್ತೆ ಮಾಡಿರೋ ಪೊಲೀಸರು ಶಾಜಿಯಾಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 17ರ ಹುಡುಗಿ ಮೇಲೆ ತಂದೆ, ಚಿಕ್ಕಪ್ಪ, ಅಜ್ಜನಿಂದಲೇ ಅತ್ಯಾಚಾರ!

    ಮುಂಬೈ: 17 ವರ್ಷದ ಹುಡುಗಿ ಮೇಲೆ ಸ್ವಂತ ತಂದೆ, ಚಿಕ್ಕಪ್ಪ ಮತ್ತು ಅಜ್ಜನೇ ಹಲವಾರು ಬಾರಿ ಅತ್ಯಾಚಾರವೆಸಗಿರುವ ಘಟನೆ ಪುಣೆಯಲ್ಲಿ (Pune) ನಡೆದಿದೆ.

    ತಾನು ಪ್ರಸ್ತುತ ಓದುತ್ತಿರುವ ಪುಣೆಯ ಕಾಲೇಜಿನಲ್ಲಿ ಲೈಂಗಿಕ ಕಿರುಕುಳದ ಕುರಿತು ವಿಶಾಖಾ ಸಮಿತಿಯ ಸದಸ್ಯರ ಮುಂದೆ ಹುಡುಗಿ ಇತ್ತೀಚೆಗೆ ತನಗಾದ ಸಂಕಷ್ಟವನ್ನು ಹೇಳಿಕೊಂಡ ನಂತರ ಘಟನೆ ಬೆಳಕಿಗೆ ಬಂದಿದೆ. ಇದೀಗ ನಗರದಲ್ಲಿದ್ದ ಸಂತ್ರಸ್ತೆಯ ತಂದೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬುಧವಾರ ಪುಣೆ ಪೊಲೀಸರು ಈ ಘಟನೆ ಸಂಬಂಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ವಿಭಾಗಗಳು ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ ಕಾಯ್ದೆ) ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ಪ್ರಯಾಣಿಕನನ್ನು ಹೊರಗೆ ತಳ್ಳಿದ ಟಿಟಿಇ – ಕಾಲು ಕಳೆದುಕೊಂಡ ವ್ಯಕ್ತಿ ಸ್ಥಿತಿ ಗಂಭೀರ

    ಸಂತ್ರಸ್ತ್ರ ಹುಡುಗಿ, 2016 ಮತ್ತು 2018 ರ ನಡುವೆ ಉತ್ತರ ಪ್ರದೇಶದಲ್ಲಿ (Uttar Pradesh) ತನ್ನ ತವರು ಮನೆಯಲ್ಲಿದ್ದಾಗ, ತನ್ನ ಚಿಕ್ಕಪ್ಪನಿಂದ ಅನೇಕ ಬಾರಿ ಅತ್ಯಾಚಾರವೆಸಗಿದ್ದು, ಅಜ್ಜ ಕಿರುಕುಳ ನೀಡಿದ್ದಾನೆ ಎಂದು ದೂರಿನ ಮೂಲಕ ಆರೋಪಿಸಿದ್ದಾಳೆ. ಇದನ್ನೂ ಓದಿ: ಗುಂಡಿಗೆ ಬಿದ್ದು ಕೋಮಾಗೆ ಜಾರಿದ್ದ ಸಂದೀಪ್- ಪ್ರಜ್ಞಾವಸ್ಥೆಗೆ ಬಂದ ಸವಾರನಿಗೆ ಸಿಗ್ತಿಲ್ಲ ಆಸ್ಪತ್ರೆ ಬೆಡ್

    2018ರಲ್ಲಿ ಹುಡುಗಿ ಪುಣೆಗೆ ಬಂದ ನಂತರ, ತನ್ನ ತಂದೆಗೆ ಲೈಂಗಿಕ ದೌರ್ಜನ್ಯದ ಘಟನೆ ಕುರಿತಂತೆ ಚೀಟಿಯಲ್ಲಿ ಬರೆದು ತಿಳಿಸಿದಳು. ಆದರೆ, ಪೀಡಕರ ವಿರುದ್ಧ ವರ್ತಿಸುವ ಬದಲು, ಆಕೆಯ ತಾಯಿ ಮನೆಯಲ್ಲಿ ಇಲ್ಲದಿದ್ದಾಗ ತಂದೆ ಕೂಡ ಹಲವಾರು ಬಾರಿ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಇದೀಗ ನಾವು ಬಾಲಕಿಯ ತಂದೆ, ಅಜ್ಜ ಮತ್ತು ಚಿಕ್ಕಪ್ಪನ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಮತ್ತು ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಿಕ್ಕಪ್ಪನಿಂದ 15ರ ಬಾಲಕಿಯ ಮೇಲೆ ಅತ್ಯಾಚಾರ- ಗಂಡು ಮಗುವಿಗೆ ಜನ್ಮ ಕೊಟ್ಟ ಅಪ್ರಾಪ್ತೆ

    ಚಿಕ್ಕಪ್ಪನಿಂದ 15ರ ಬಾಲಕಿಯ ಮೇಲೆ ಅತ್ಯಾಚಾರ- ಗಂಡು ಮಗುವಿಗೆ ಜನ್ಮ ಕೊಟ್ಟ ಅಪ್ರಾಪ್ತೆ

    ಲಕ್ನೋ: ಚಿಕ್ಕಪ್ಪನೇ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅವಳನ್ನು ಗರ್ಭಿಣಿಯಾಗಿಸಿದ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

    ಉತ್ತರಾಖಂಡದ ವಲಸೆ ಕಾರ್ಮಿಕನೊಬ್ಬ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ್ದಾನೆ. ಇದರ ಪರಿಣಾಮ ಬಾಲಕಿಯು ಗುರುಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

    ಬಾಲಕಿ ಹಾಗೂ ಅವಳ ತಂದೆ, ತಾಯಿ ವಾಸಿಸುತ್ತಿದ್ದರು. ಬಾಲಕಿಯ ತಂದೆ, ತಾಯಿಯಿಬ್ಬರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇದನ್ನೇ ದುರುಪಯೋಗ ಪಡಿಸಿಕೊಂಡ ಅಲ್ಲೇ ಪಕ್ಕ ಮನೆಯಲ್ಲಿ ವಾಸಿಸುತ್ತಿದ್ದ ಆಕೆಯ ಚಿಕ್ಕಪ್ಪ ಬಾಲಕಿಯನ್ನು ಯಾವುದೋ ನೆಪ ಹೇಳಿ ಮನೆಗೆ ಕರೆದಿದ್ದಾನೆ. ನಂತರ ಅಲ್ಲಿ ಅತ್ಯಾಚಾರವೆಸಗಿದ್ದಾನೆ. ದನ್ನೂ ಓದಿ: ಅಕ್ರಮ ಆಸ್ತಿ ಪತ್ತೆಯಾದರೆ ಬುಲ್ಡೋಜರ್ ನುಗ್ಗಿಸಿ – ಅಧಿಕಾರಿಗಳಿಗೆ ಮಮತಾ ಬ್ಯಾನರ್ಜಿ ಸವಾಲು

    ಕೆಲ ತಿಂಗಳ ಬಳಿಕ ಬಾಲಕಿಯ ಆರೋಗ್ಯ ಹದಗೆಟ್ಟಿದೆ. ಹೀಗಾಗಿ ಬಾಲಕಿಯನ್ನು ಅಲ್ಲಿಯೇ ಹತ್ತಿರದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಆಕೆಯ ತಾಯಿ ಕರೆದೊಯ್ದಿದ್ದಾರೆ. ಅಲ್ಲಿ ಬಾಲಕಿ ಗರ್ಭಿಣಿ ಆಗಿರುವ ವಿಷಯವನ್ನು ತಾಯಿಗೆ ತಿಳಿದಿದೆ. ಇದಾದ ನಂತರ ಬಾಲಕಿಯು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

    ಘಟನೆಗೆ ಸಂಬಂಧಿಸಿ ಸಂತ್ರಸ್ತೆಯ ತಾಯಿಯು ನೀಡಿದ ದೂರಿನ ಆದರಾದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಪೊಲೀಸರು ಬಾಲಕಿಯ ಚಿಕ್ಕಪ್ಪನಿಗಾಗಿ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಗಣೇಶೋತ್ಸವವನ್ನು ಸ್ವಾಗತಿಸಲ್ಲ, ಹುಬ್ಬಳ್ಳಿ ಆಯುಕ್ತರ ವಿರುದ್ಧ ಕ್ರಿಮಿನಲ್ ಕೇಸ್‌ : ಅಂಜುಮನ್ ಸಂಸ್ಥೆ

    Live Tv
    [brid partner=56869869 player=32851 video=960834 autoplay=true]

  • ಒಳಚರಂಡಿಗೆ ಬಿದ್ದ ಬಾಲಕ – ರಕ್ಷಿಸಲು ಹೋದ ಅಪ್ಪ, ಚಿಕ್ಕಪ್ಪ ಕೂಡ ಬಾಲಕನೊಂದಿಗೆ ಸಾವು

    ಒಳಚರಂಡಿಗೆ ಬಿದ್ದ ಬಾಲಕ – ರಕ್ಷಿಸಲು ಹೋದ ಅಪ್ಪ, ಚಿಕ್ಕಪ್ಪ ಕೂಡ ಬಾಲಕನೊಂದಿಗೆ ಸಾವು

    ಚಂಡೀಗಢ: ಒಳಚರಂಡಿಯೊಳಗೆ ಬಿದ್ದು ಎಂಟು ವರ್ಷದ ಬಾಲಕ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದಿದೆ.

    ಮಂಗಳವಾರ ಜಿಲ್ಲೆಯ ಬಿಚೋರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಬಾಲಕ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಒಳಚರಂಡಿಯೊಳಗೆ ಬಿದ್ದಿದ್ದಾನೆ. ನಂತರ ಬಾಲಕನನ್ನು ರಕ್ಷಿಸಲು ಆತನ ತಂದೆ ಮತ್ತು ಮತ್ತೋರ್ವ ವ್ಯಕ್ತಿ ಪ್ರಯತ್ನಿಸಿದ್ದು, ಮೂವರು ಕೂಡ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಗ್ರಾಮದ ನಿವಾಸಿ ದಿನು ಅವರ ಮನೆಯ ಹೊರಗೆ 20 ಅಡಿ ಆಳದ ಒಳಚರಂಡಿಯನ್ನು ನಿರ್ಮಿಸಲಾಗಿತ್ತು. ಒಳಚರಂಡಿಯನ್ನು ಕಲ್ಲಿನ ಚಪ್ಪಡಿಯಿಂದ ಮುಚ್ಚಲಾಗಿತ್ತು. ಆದರೆ ದಿನು ಅವರ ಮೊಮ್ಮಗ ಆರಿಜ್ ಆಟವಾಡುತ್ತಿದ್ದ ವೇಳೆ ಒಳಚರಂಡಿ ಮೇಲೆ ಮುಚ್ಚಲಾಗಿದ್ದ ಕಲ್ಲು ಮುರಿದು ಹೋಗಿದ್ದರಿಂದ ಬಾಲಕ ಬಿದ್ದಿದ್ದಾನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಾಸನ ಕಟ್ಟಿನಕೆರೆ ಮಾರುಕಟ್ಟೆ ಬಂದ್ – 500ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್

    ಇದೇ ವೇಳೆ ಬಾಲಕನನ್ನು ರಕ್ಷಿಸಲು ಒಳಚರಂಡಿಗೆ ಇಳಿದ ಬಾಲಕನ ತಂದೆ ಸಿರಾಜು (30) ಮತ್ತು ಆತನ ಚಿಕ್ಕಪ್ಪ ಸಲಾಮು (35) ಕೂಡ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ನಂತರ ಒಳಗೆ ಹೋದವರು ಹೊರಗೆ ಬರದೇ ಇದ್ದದ್ದನ್ನು ಕಂಡು ಕುಟುಂಬಸ್ಥರು ಕೂಗಾಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಿನ್ನಿದಾಂಡು ಆಟದಿಂದ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

  • ಅಂಕಲ್ ಅಂದಿದ್ದೇ ತಪ್ಪಾಯ್ತು – ಯುವತಿಗೆ ಹಿಗ್ಗಾಮುಗ್ಗಾ ಥಳಿಸಿದ ಅಂಗಡಿ ಮಾಲೀಕ

    ಅಂಕಲ್ ಅಂದಿದ್ದೇ ತಪ್ಪಾಯ್ತು – ಯುವತಿಗೆ ಹಿಗ್ಗಾಮುಗ್ಗಾ ಥಳಿಸಿದ ಅಂಗಡಿ ಮಾಲೀಕ

    ಡೆಹ್ರಾಡೂನ್: ಅಂಕಲ್ ಎಂದು ಕರೆದಿದ್ದಕ್ಕೆ 18 ವರ್ಷದ ಯುವತಿಗೆ 35 ವರ್ಷದ ಅಂಗಡಿ ಮಾಲೀಕನೊಬ್ಬ ಹಿಗ್ಗಾಮುಗ್ಗಾ ಥಳಿಸಿರುವ ಆಘಾತಕಾರಿ ಘಟನೆ ಉಧಮ್ ಸಿಂಗ್ ನಗರ ಜಿಲ್ಲೆಯ ಸಿತಾರ್‌ಗಂಜ್ ಪಟ್ಟಣದಲ್ಲಿ ಘಟನೆ ನಡೆದಿದೆ.

    ಈ ಘಟನೆ ಮಂಗಳವಾರ ನಡೆದಿದ್ದು, ತಲೆಗೆ ತೀವ್ರವಾಗಿ ಗಾಯಗೊಂಡಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಆರೋಪಿಯನ್ನು ಮೋಹಿತ್ ಕುಮಾರ್ ಎಂದು ಗುರುತಿಸಲಾಗಿದ್ದು, ಐಪಿಸಿ ಸೆಕ್ಷನ್ 354 ಮಹಿಳೆಯೊಬ್ಬಳು ತನ್ನ ನಮ್ರತೆಗೆ ಆಕ್ರೋಶ ವ್ಯಕ್ತಪಡಿಸಲು ಹಲ್ಲೆ, ಸೆಕ್ಷನ್ 323 ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು ಮತ್ತು ಸೆಕ್ಷನ್ 506 ಕ್ರಿಮಿನಲ್ ಬೆದರಿಕೆ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: 29 ವರ್ಷದ ಬಳಿಕ ಪಾಕಿಸ್ತಾನದ ಜೈಲಿನಿಂದ ತಾಯಿನಾಡಿಗೆ ಕಾಲಿಟ್ಟ ಕುಲದೀಪ್ ಸಿಂಗ್

    ಘಟನೆಯ ಕುರಿತಂತೆ ಪ್ರತಿಕ್ರಿಯಿಸಿದ ಎಸ್‍ಎಚ್‍ಒ, ಯುವತಿ ಡಿಸೆಂಬರ್ 19 ರಂದು ಬ್ಯಾಡ್ಮಿಂಟನ್ ರಾಕೆಟ್ ಖರೀದಿಸಿದ್ದಳು. ಮಂಗಳವಾರ ಅದನ್ನು ಬದಲಾಯಿಸಿಕೊಳ್ಳಲು ಹೋಗಿದ್ದಳು. ರಾಕೆಟ್ ನ ಕೆಲವು ತಂತಿಗಳು ಮುರಿದು ಹೋಗಿದ್ದವು. ಈ ವೇಳೆ ಅಂಗಡಿಯವನನ್ನು ಯುವತಿ ಅಂಕಲ್ ಎಂದು ಕರೆದಿದ್ದಾಳೆ. ಇಷ್ಟಕ್ಕೆ ರೊಚ್ಚಿಗೆದ್ದ ಮೋಹಿತ್ ಯುವತಿಗೆ ಅಮಾನುಷವಾಗಿ ಥಳಿಸಿದ್ದಾನೆ. ಇದೀಗ ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಲ್ಲದೇ ಈ ಘಟನೆ ಸಂಬಂಧ ಯುವತಿ ತಂದೆ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬರೋಬ್ಬರಿ 10 ಕೋಟಿ ರೂ. ಮೌಲ್ಯದ ತಿಮಿಂಗಿಲ ವಾಂತಿ ವಶ

  • ಪಾರ್ಕಿಗೆ ಬಾ ಅಂತಿದ್ಳು – ಅಂಕಲ್‍ಗಳೇ ಈಕೆಯ ಟಾರ್ಗೆಟ್!

    ಪಾರ್ಕಿಗೆ ಬಾ ಅಂತಿದ್ಳು – ಅಂಕಲ್‍ಗಳೇ ಈಕೆಯ ಟಾರ್ಗೆಟ್!

    – ಕೊನೆಗೂ ವೀಡಿಯೋ ಲೇಡಿ ಅಂದರ್

    ಭೋಪಾಲ್: ಪಾರ್ಕ್ ನಲ್ಲಿ ಮಧ್ಯ ವಯಸ್ಕ ಮತ್ತು 60 ವರ್ಷ ಮೇಲ್ಪಟ್ಟ ಪುರುಷರನ್ನ ಕರೆಸಿ, ವೀಡಿಯೋ ಮಾಡಿಕೊಂಡು ಬ್ಲ್ಯಾಕ್‍ಮೇಲ್ ಮಾಡುತ್ತಿದ್ದ ಮಹಿಳೆ ಮತ್ತು ಓರ್ವ ಯುವಕನನ್ನು ಮಧ್ಯಪ್ರದೇಶದ ಭೋಪಾಲ್ ಪೊಲೀಸರು ಬಂಧಿಸಿದ್ದಾರೆ.

    ಕೆಲ ದಿನಗಳ ಹಿಂದೆ 65 ವರ್ಷದ ವೃದ್ಧರೊಬ್ಬರು ಪುತ್ರನೊಂದಿಗೆ ಆಗಮಿಸಿ ಮಹಿಳೆ ಮತ್ತು ಯುವಕನ ವಿರುದ್ಧ ದೂರು ದಾಖಲಿಸಿದ್ದರು. ಇಬ್ಬರು ತಮಗೆ 2 ಲಕ್ಷ ರೂ. ನೀಡಬೇಕೆಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ವೃದ್ಧ ಆರೋಪಿಸಿದ್ದರು. ದೂರಿನಲ್ಲಿ ಇಬ್ಬರ ಪರಿಚಯ ತಮಗಿಲ್ಲ ಎಂದು ಕರೆ ಮಾಡುತ್ತಿದ್ದ ಮೊಬೈಲ್ ಸಂಖ್ಯೆ ನೀಡಿದ್ದರು. ದೂರಿನ ಅನ್ವಯ ಪೊಲೀಸರು ಮಹಿಳೆ ಮತ್ತು ಓರ್ವ ಯುವಕನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

    ವೃದ್ಧ ವಿಮೆ ಮಾಡಿಸಲು ಮಹಿಳೆಗೆ ಫೋನ್ ಮಾಡಿದ್ದರು. ಇದೇ ವಿಚಾರವಾಗಿ ಇಬ್ಬರ ಮಧ್ಯೆ ಮಾತುಕತೆ ನಡೆದಿತ್ತು. ಕಳೆದ ತಿಂಗಳು ಇಂದೋರ್ ನಲ್ಲಿರುವ ಮೇಘಧೂತ ಪಾರ್ಕ್ ನಲ್ಲಿ ಭೇಟಿಯಾಗುವಂತೆ ಮಹಿಳೆ ಹೇಳಿದ್ದಾಳೆ. ವೃದ್ಧ ಸಹ ವಿಮೆ ಮಾಡಿಸಲು ದಾಖಲೆಗಳೊಂದಿಗೆ ತೆರಳಿದ್ದರು. ಈ ವೇಳೆ ಇಬ್ಬರು ಕುಳಿತಿರುವ ವೀಡಿಯೋ ಮಾಡಿಕೊಂಡ ಆಕೆಯ ಜೊತೆಗಾರ ಯುವಕ ಬ್ಲ್ಯಾಕ್‍ಮೇಲ್ ಮಾಡಲಾರಂಭಿಸಿ ಎರಡು ಲಕ್ಷ ರೂ. ನೀಡುವಂತೆ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ಆಕ್ಟೀವ್ ಆಗಿದೆಯಾ ಓಜಿಕುಪ್ಪಂ ಗ್ಯಾಂಗ್? ಒಂಟಿ ಮಹಿಳೆಯರೇ ಇವರ ಟಾರ್ಗೆಟ್!

    ಮಹಿಳೆ ಮತ್ತು ಯುವಕ ನಿವೃತ್ತಿ ಪಡೆದ ಪುರುಷರನ್ನೇ ಟಾರ್ಗೆಟ್ ಮಾಡುತ್ತಿದ್ದರು. ಸೋಶಿಯಲ್ ಮೀಡಿಯಾ ಮೂಲಕ ತನ್ನನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ಮಹಿಳೆ, ಉಪಾಯವಾಗಿ ಮೊಬೈಲ್ ನಂಬರ್ ಪಡೆದುಕೊಳ್ಳುತ್ತಿದ್ದಳು. ತದನಂತರ ಉಪಾಯವಾಗಿ ಪಾರ್ಕ್ ಗಳಿಗೆ ಕರೆಸಿಕೊಂಡು ವೀಡಿಯೋ ಚಿತ್ರೀಕರಿಸಿ ಹಣಕ್ಕಾಗಿ ಪೀಡಿಸುತ್ತಿದ್ದಳು ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಇದನ್ನೂ ಓದಿ: ಬಾಲಕಿಗೆ ಸೆಕ್ಸ್ ವೀಡಿಯೋ ಕಳಿಸ್ತಿದ್ದ ಆಂಟಿ ವಿರುದ್ಧ ಎಫ್‍ಐಆರ್