Tag: unde

  • ಮಕ್ಕಳಿಗೆ ಇಷ್ಟವಾದ ‘ತಂಬಿಟ್ಟಿನ ಉಂಡೆ’ ಮಾಡಿ ಸವಿಯಿರಿ

    ಮಕ್ಕಳಿಗೆ ಇಷ್ಟವಾದ ‘ತಂಬಿಟ್ಟಿನ ಉಂಡೆ’ ಮಾಡಿ ಸವಿಯಿರಿ

    ಮಕ್ಕಳಿಗೆ ಸಿಹಿ ತಿಂಡಿಗಳು ಎಂದರೆ ತುಂಬಾ ಇಷ್ಟ. ಆದರೆ ಪೋಷಕರು ಸಿಹಿ ತಿಂಡಿ ಕೊಟ್ರೆ ಎಲ್ಲಿ ಮಕ್ಕಳ ಹಲ್ಲಿಗೆ ತೊಂದರೆ ಆಗುತ್ತೆ ಎಂದು ಭಯಪಡುತ್ತಾರೆ. ಆದರೆ ಇಂದು ನಾವು ಹೇಳಿಕೊಡುತ್ತಿರುವ ಸಿಹಿ ತಿಂಡಿ ಆರೋಗ್ಯಕ್ಕೂ ಒಳ್ಳೆಯದು ಮತ್ತು ಮಕ್ಕಳು ಸಹ ಆಟಾಡಿಕೊಂಡು ಇಷ್ಟಪಟ್ಟು ತಿನ್ನುತ್ತಾರೆ. ಅದು ಯಾವ ತಿಂಡಿ ಎಂದು ಯೋಚನೆ ಮಾಡುತ್ತಿದ್ದೀರಾ ಅದೇ ‘ತಂಬಿಟ್ಟಿನ ಉಂಡೆ’. ಈ ಉಂಡೆಯನ್ನು ಧಾನ್ಯಗಳನ್ನು ಬಳಸಿ ಮಾಡುವುದರಿಂದ ಮಕ್ಕಳ ಆರೋಗ್ಯಕ್ಕೆ ಮತ್ತು ದೊಡ್ಡವರಿಗೆ ಶಕ್ತಿ ಹೆಚ್ಚಿಸಲು ಸಹಾಯವಾಗುತ್ತೆ.

    ಬೇಕಾಗುವ ಪದಾರ್ಥಗಳು:
    * ಕಡಲೆ ಕಾಳು – 1 ಕಪ್
    * ಹೆಸರು ಕಾಳು – 1 ಕಪ್
    * ಅಕ್ಕಿ – 1/3 ಕಪ್
    * ಉದ್ದಿನ ಬೇಳೆ – 1/8 ಕಪ್


    * ಬೆಲ್ಲ – ಒಂದುವರೆ ಕಪ್
    * ತೆಂಗಿನ ತುರಿ – 1 ಕಪ್
    * ಹುರಿದು ಸಿಪ್ಪೆ ತೆಗೆದ ಶೇಂಗಾ ಬೀಜ – 1/2 ಕಪ್
    * ಏಲಕ್ಕಿ ಪುಡಿ – 1/2 ಟೀಸ್ಪೋನ್

    ಮಾಡುವ ವಿಧಾನ:
    * ಮೊದಲು ಒಂದು ಬಾಣಲೆಗೆ ಕಡಲೆ ಕಾಳು ಹಾಕಿ 5 ರಿಂದ 6 ನಿಮಿಷ ಮಧ್ಯಮ ಉರಿಯಲ್ಲಿ ಹುರಿದು ತೆಗೆಯಿರಿ. ನಂತರ ಅದೇ ಬಾಣಲೆಗೆ ಹೆಸರು ಕಾಳು ಹಾಕಿ 5 ರಿಂದ 6 ನಿಮಿಷ ಮಧ್ಯಮ ಉರಿಯಲ್ಲಿ ಹುರಿದು ತೆಗೆಯಿರಿ. ಅದೇ ರೀತಿ ಕ್ರಮವಾಗಿ ಅಕ್ಕಿ, ಉದ್ದಿನ ಬೇಳೆ ಹಾಕಿ 5 ನಿಮಿಷ ಮಧ್ಯಮ ಉರಿಯಲ್ಲಿ ಹುರಿದು ತೆಗೆಯಿರಿ.
    * ಹುರಿದ ಶೇಂಗಾಬೀಜಗಳನ್ನೊಂದು ಹೊರತು ಪಡಿಸಿ ಉಳಿದೆಲ್ಲವುಗಳನ್ನು ಒಂದು ಪಾತ್ರೆಗೆ ಹಾಕಿ ಕಲಸಿ. ಒಂದು ಮಿಕ್ಸಿ ಜಾರಿಗೆ ಈ ಸಾಮಾಗ್ರಿಗಳನ್ನು ಹಾಕಿ ನುಣ್ಣಗೆ ರುಬ್ಬಿ ಪುಡಿ ಮಾಡಿಕೊಳ್ಳಿ.
    * ಒಂದು ಬಾಣಲೆಯಲ್ಲಿ ಒಂದು ಮುಕ್ಕಾಲು ಕಪ್ ಬೆಲ್ಲ, ಅರ್ಧ ಕಪ್ ನೀರು ಹಾಕಿ ಕಲಕಿ. ಮಧ್ಯಮ ಉರಿಯಲ್ಲಿ 4 ರಿಂದ 5 ನಿಮಿಷ ಬೆಲ್ಲ ಕರಗುವ ತನಕ ಕುದಿಸಿ. ತೆಂಗಿನ ತುರಿ ಹಾಕಿ ಕಲಸಿ.
    * ಬೆಲ್ಲ ಸ್ವಲ್ಪ ಅಂಟಿಕೊಳ್ಳಲು ಪ್ರಾರಂಭಿಸಿದಾಗ ಇದಕ್ಕೆ 2 ಕಪ್ ರುಬ್ಬಿದ ಹಿಟ್ಟು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಕೊನೆಯಲ್ಲಿ ಅರ್ಧ ಕಪ್ ಶೇಂಗಾ ಬೀಜ, ಅರ್ಧ ಚಮಚ ಏಲಕ್ಕಿ ಪುಡಿ ಹಾಕಿ ಚೆನ್ನಾಗಿ ಕಲಸಿ.
    * ಈಗ ಇದನ್ನು ಚಿಕ್ಕ, ಚಿಕ್ಕ ಉಂಡೆಗಳನ್ನು ಮಾಡಿ.

    – ಪೌಷ್ಟಿಕವಾದ ತಂಬಿಟ್ಟಿನ ಉಂಡೆ ತಿನ್ನಲು ಸಿದ್ಧ.

    Live Tv

  • ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ 1.20ಲಕ್ಷ ಉಂಡೆ, ಚಕ್ಕುಲಿ ಸಿದ್ಧ

    ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ 1.20ಲಕ್ಷ ಉಂಡೆ, ಚಕ್ಕುಲಿ ಸಿದ್ಧ

    ಉಡುಪಿ: ಕಡೆಗೋಲು ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಆಚರಣೆಗೆ 1.20ಲಕ್ಷ ಉಂಡೆ, ಚಕ್ಕುಲಿ ಸಿದ್ಧಮಾಡಲಾಗಿದೆ. 2ದಿನ ಸರಳವಾಗಿ ಆಚರಣೆ ನಡೆಯಲಿದೆ.

    ಉಡುಪಿಯಲ್ಲಿ ಅಷ್ಟಮಿ ಆಚರಣೆಗೆ ಕೊರೊನಾ ಈ ಬಾರಿ ಅಡ್ಡಗಾಲು ಹಾಕಿದೆ. ಅಗಸ್ಟ್ 30 ಮತ್ತು 31 ಕ್ಕೆ ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀಕೃಷ್ಣ ಲೀಲೋತ್ಸವ ಕಾರ್ಯಕ್ರಮಗಳು ನಡೆಯಲಿದೆ. ಅಗಸ್ಟ್ 30 ಬೆಳಗ್ಗೆಯಿಂದಲೇ ಶ್ರೀಕೃಷ್ಣ ಭಕ್ತರು ಉಪವಾಸ ಇರುತ್ತಾರೆ. ಅಂದು ರಾತ್ರಿ 12. 17ಕ್ಕೆ ಸರಿಯಾಗಿ ಶ್ರೀಕೃಷ್ಣನಿಗೆ ಅಘ್ರ್ಯ ಪ್ರದಾನವಾಗಲಿದೆ. ಆ ನಂತರ ಲೀಲೋತ್ಸವ ಚಟುವಟಿಕರ ಆರಂಭ ಆಗುತ್ತವೆ. ಇದನ್ನೂ ಓದಿ:  ಪಿ.ವಿ. ಸಿಂಧುಗೆ ಮೆಗಾ ಸ್ಟಾರ್ ಸನ್ಮಾನ

    ಅಗಸ್ಟ್ 31 ರಥಬೀದಿಯಲ್ಲಿ ಶ್ರೀ ಕೃಷ್ಣನ ಲೀಲೋತ್ಸವ ಕಾರ್ಯಕ್ರಮ ನಡೆಯುತ್ತದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಿದ್ದರು, ಆದರೆ ಕೊರೊನಾ ಸಾಂಕ್ರಾಮಿಕ ಇರುವ ಕಾರಣ ಈ ಬಾರಿ ನಿಗದಿತ ಭಕ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ. ಧಾರ್ಮಿಕ ವಿಧಿ-ವಿಧಾನಗಳು ಪ್ರತಿವರ್ಷದಂತೆ ನಡೆಯುತ್ತದೆ ಎಂದು ಪರ್ಯಾಯ ಅದಮಾರು ಮಠ ತಿಳಿಸಿದೆ. ಇದನ್ನೂ ಓದಿ:  ಟಿವಿ, ರೇಡಿಯೋಗಳಲ್ಲಿ ಮಹಿಳೆಯ ಧ್ವನಿ ಬ್ಯಾನ್- ತಾಲಿಬಾನ್ ಆದೇಶ

    ಈ ಬಾರಿ ಕೃಷ್ಣ ಭಕ್ತರಿಗೆ ವಿತರಣೆ ಮಾಡಲು 40 ಸಾವಿರ ಅಕ್ಕಿಯ ಚಕ್ಕುಲಿಗಳನ್ನು ಸಿದ್ಧ ಮಾಡಿಕೊಳ್ಳಲಾಗಿದೆ. 80 ಸಾವಿರ ವಿವಿಧ ಬಗೆಯ ಉಂಡೆಗಳನ್ನು ಮಠದ ಸಿಬ್ಬಂದಿ ರೆಡಿ ಮಾಡಿದ್ದಾರೆ. ರಥಬೀದಿಯಲ್ಲಿ ಗುರ್ಜಿಗಳನ್ನು ಹಾಕಲಾಗಿದೆ. ಗೊಲ್ಲ ವೇಷದಾರಿಗಳು ಮಡಕೆ ಒಡೆಯುವ ಸಂಪ್ರದಾಯವನ್ನು ಮಾಡಲಿದ್ದಾರೆ. ಶ್ರೀಕೃಷ್ಣನ ಮಣ್ಣಿನ ಮೂರ್ತಿಯನ್ನು ರಥಬೀದಿಯಲ್ಲಿ ಉತ್ಸವ ಮಾಡಲಾಗುತ್ತದೆ.

    ಕೃಷ್ಣ ಮಠ ಪರ್ಯಾಯ ಅದಮಾರು ಮಠ ಮತ್ತು ಅಷ್ಟ ಮಠಗಳಿಗೆ ಸಂಬಂಧಪಟ್ಟಂತ ಸ್ವಾಮೀಜಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು. ಭಕ್ತರಿಗೆ ಕೃಷ್ಣ ಲೀಲೋತ್ಸವ ಕಾರ್ಯಕ್ರಮಕ್ಕೆ ರಥಬೀದಿಗೆ ಪ್ರವೇಶ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಸೂಚನೆ ಹೊರಡಿಸಿದೆ. ಜನಜಂಗುಳಿ ಸೇರುವ ಅವಕಾಶ ಇಲ್ಲ ಎಂದು ಪೊಲೀಸ್ ಇಲಾಖೆ ಸೂಚಿಸಿದೆ.