Tag: Under 19

  • ಅಂಡರ್ 19 ವಿಶ್ವಕಪ್ ಗೆದ್ದು ಬೀಗಿದ ಭಾರತ- ಯುವಪಡೆಗೆ ಮೋದಿ ಅಭಿನಂದನೆ

    ಅಂಡರ್ 19 ವಿಶ್ವಕಪ್ ಗೆದ್ದು ಬೀಗಿದ ಭಾರತ- ಯುವಪಡೆಗೆ ಮೋದಿ ಅಭಿನಂದನೆ

    ನವದೆಹಲಿ: 2022ರ ಅಂಡರ್-19 ವಿಶ್ವಕಪ್ ಫೈನಲ್‍ನಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್ ತಂಡವನ್ನು 4 ವಿಕೆಟ್‍ಗಳಿಂದ ಬಗ್ಗು ಬಡಿದು ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಯುವಪಡೆಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಮ್ಮ ಯುವ ಕ್ರಿಕೆಟಿಗರ ಬಗ್ಗೆ ಅತ್ಯಂತ ಹೆಮ್ಮೆಯಿದೆ. ಐಸಿಸಿ ಅಂಡರ್- 19 ಕ್ರಿಕೆಟ್ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು. ಅವರು ಈ ಪಂದ್ಯಾವಳಿಯಲ್ಲಿ ಉತ್ತಮ ಸ್ಥೈರ್ಯವನ್ನು ತೋರಿಸಿದ್ದಾರೆ. ಭಾರತದ ಕ್ರಿಕೆಟ್ ಭವಿಷ್ಯವು ಸುರಕ್ಷಿತವಾಗಿದೆ ಎಂಬುದನ್ನು ಇದು ತೋರಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಭಾರತದ ಕಿರಿಯರ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ ಅಂಡರ್ 19 ವಿಶ್ವಕಪ್ ಗೆದ್ದು ಬೀಗಿದೆ. ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಅಂಡರ್-19 ವಿಶ್ವಕಪ್ ಅನ್ನು ತನ್ನದಾಗಿಸಿಕೊಂಡಿದೆ. ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡ ಬ್ಯಾಟ್ಸ್‍ಮನ್‍ಗಳಿಗೆ ಭಾರತೀಯ ಬೌಲರ್‍ಗಳು ಸವಾಲಾಗಿ ಪರಿಣಮಿಸಿದ್ರು. ಆಂಗ್ಲರು 44.5 ಓವರ್‍ಗಳಿಗೆ 189 ರನ್ ಗಳಿಸಲಷ್ಟೇ ಶಕ್ತವಾಯ್ತು. ಭಾರತದ ಪರ ಬೌಲಿಂಗ್ ವಿಭಾಗದಲ್ಲಿ ರವಿ ಕುಮಾರ್ 34 ರನ್‍ಗಳನ್ನು ನೀಡಿ 4 ವಿಕೆಟ್ ಹಾಗೂ ರಾಜ್ ಬಾವ 31 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದರು, ಇಬ್ಬರೂ ಬೌಲರ್ ಗಳು ತಲಾ 1 ಮೇಡಿನ್ ಓವರ್ ಮಾಡಿದರು.  ಇದನ್ನೂ ಓದಿ: 5ನೇ ಬಾರಿ ಅಂಡರ್-19 ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತ

    ಇಂಗ್ಲೆಂಡ್‍ನ ಸಾಧಾರಣ ಮೊತ್ತ ಬೆನ್ನಟ್ಟಿದ ಭಾರತ ತಂಡಕ್ಕೆ ಆಂಗ್ಕ್ರಿಶ್ ರಘುವಂಶಿ ಎರಡು ಎಸೆತಗಳನ್ನು ಎದುರಿಸಿ ಯಾವುದೇ ರನ್ ಗಳಿಸದೇ ವಿಕೆಟ್ ನೀಡಿದ್ದು ಆರಂಭಿಕ ಆಘಾತವಾಯಿತು. ಮತ್ತೋರ್ವ ಆರಂಭಿಕ ಆಟಗಾರ ಹರ್ನೂರ್ ಸಿಂಗ್ ಸಹ 46 ಎಸೆತಗಳನ್ನು ಎದುರಿಸಿ 21 ರನ್ ಗಳ ಸಾಧಾರಣ ಮೊತ್ತವನ್ನು ಕಲೆಹಾಕಿದ್ದು, 2 ನೇ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ಮೇಲೆ ಒತ್ತಡ ಹೆಚ್ಚಿಸಿತ್ತು. ನಂತರ 84 ಎಸೆತಗಳನ್ನು ಎದುರಿಸಿ 50 ರನ್ ಗಳಿಸುವ ಮೂಲಕ ಶೇಖ್ ರಶೀದ್ ತಂಡಕ್ಕೆ ಚೇತರಿಕೆ ನೀಡಿದರಾದರೂ ಯಶ್ ಧುಲ್ ಉತ್ತಮ ಜೊತೆಯಾಟ ನೀಡಲು ಸಾಧ್ಯವಾಗಲಿಲ್ಲ.

    ನಿಶಾಂತ್ ಸಿಂಧು 54 ಎಸೆತಗಳಲ್ಲಿ 50 ರನ್ ಗಳಿಸಿ ತಂಡದ ಗೆಲುವಿನ ಕನಸನ್ನು ಜೀವಂತವಾಗಿರಿಸಿದರು. ರಾಜ್ ಬಾವ 54 ಎಸೆತಗಳಲ್ಲಿ 34 ರನ್ ಗಳಿಸಿದರೆ, ನಿಶಾಂತ್ ಸಿಂಧು ಹಾಗೂ ದಿನೇಶ್ ಬನಾ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದರು. ಭಾರತ ಇಂಗ್ಲೆಂಡ್ ತಂಡದ ವಿರುದ್ಧ 6 ವಿಕೆಟ್ ಗಳ ಜಯ ಸಾಧಿಸುವ ಮೂಲಕ ಮತ್ತೊಮ್ಮೆ ಐಸಿಸಿ ಅಂಡರ್-19 ಕ್ರಿಕೆಟ್ ವಿಶ್ವಕಪ್ ನ್ನು ಮುಡಿಗೇರಿಸಿಕೊಂಡಿತು.

  • ನಿವೃತ್ತಿ ಘೋಷಿಸಿದ 2008ರ ಅಂಡರ್-19 ವಿಶ್ವಕಪ್ ಹೀರೋ

    ನಿವೃತ್ತಿ ಘೋಷಿಸಿದ 2008ರ ಅಂಡರ್-19 ವಿಶ್ವಕಪ್ ಹೀರೋ

    – ಕೊಹ್ಲಿ ನಾಯಕತ್ವದ ತಂಡದಲ್ಲಿ ಮಿಂಚಿದ್ದ ಆಟಗಾರ

    ನವದೆಹಲಿ: 2008ರ ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ಟಾಪ್ ರನ್ ಗಳಿಸಿದ್ದ ಆಟಗಾರ ಎಂಬ ದಾಖಲೆ ಬರೆದಿದ್ದ ತನ್ಮಯ್ ಶ್ರೀವಾಸ್ತವ ತಮ್ಮ ಕ್ರಿಕೆಟ್ ವೃತ್ತಿ ಜೀವನಕ್ಕೆ ಇಂದು ನಿವೃತ್ತಿ ಘೋಷಣೆ ಮಾಡಿದ್ದಾರೆ.

    30 ವರ್ಷದ ತನ್ಮಯ್ ಶ್ರೀವಾಸ್ತವ ಎಡಗೈ ಆರಂಭ ಆಟಗಾರನಾಗಿದ್ದು, 2008ರಲ್ಲಿ ಮಲೇಷಿಯಾದಲ್ಲಿ ನಡೆದಿದ್ದ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ 262 ರನ್ ಸಿಡಿಸಿದ್ದರು. ಟೀಂ ಇಂಡಿಯಾ ಕಪ್ ಗೆದ್ದ ಪಂದ್ಯದಲ್ಲಿ ಶ್ರಿವಾಸ್ತವ 46 ರನ್ ಗಳಿಸಿದ್ದರು.

    ಐಪಿಎಲ್‍ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಶ್ರೀವಾಸ್ತವ ಆಡಿದ್ದರು. ಉತ್ತರ ಪ್ರದೇಶದ ಪರ 2008-9ರ ಅವಧಿಯಲ್ಲಿ ಫಸ್ಟ್ ಕ್ಲಾಸ್ ಕ್ರಿಕೆಟ್‍ನಲ್ಲಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದರು. ಉತ್ತರ ಪ್ರದೇಶ ಕ್ರಿಕೆಟ್ ತಂಡದ ನಾಯಕರಾಗಿದ್ದ ಶ್ರೀವಾಸ್ತವ ಅವರ ಸ್ಥಾನದಲ್ಲಿ ಕಳೆದ ವರ್ಷ ಉನ್ಮುಖ್ ಚಂದ್ ಅವರನ್ನು ಆಯ್ಕೆ ಮಾಡಲಾಗಿತ್ತು.

    90 ಫಸ್ಟ್ ಕ್ಲಾಸ್ ಕ್ರಿಕೆಟ್ ಪಂದ್ಯಗಳನ್ನು ಆಡಿರುವ ಶ್ರೀವಾಸ್ತವ ಅವರು 34.39ರ ಸರಾಸರಿಯಲ್ಲಿ 4,918 ರನ್ ಗಳಿಸಿದ್ದಾರೆ. ಇದರಲ್ಲಿ 10 ಶತಕ, 27 ಅರ್ಧ ಶತಕಗಳು ಸೇರಿದೆ. ಲಿಸ್ಟ್ ಎ ಕ್ರಿಕೆಟ್‍ನಲ್ಲಿ 44.30 ಸರಾಸರಿಯಲ್ಲಿ 44 ಪಂದ್ಯಗಳಲ್ಲಿ 1,728 ರನ್ ಗಳಿಸಿದ್ದಾರೆ. ಇದರಲ್ಲಿ 10 ಅರ್ಧ ಶತಕಗಳು ಸೇರಿದೆ.

    ತಮ್ಮ ನಿವೃತ್ತಿಯ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ತನ್ಮಯ್ ಶ್ರೀವಾಸ್ತವ ಅವರು, ನನ್ನ ಕ್ರಿಕೆಟ್ ವೃತ್ತಿ ಜೀವನದ ಅಂತ್ಯಕ್ಕೆ ಇದು ಸಮಯ. ನಾನು ಇಲ್ಲಿ ಹಲವು ನೆನಪು ಹಾಗೂ ಸ್ನೇಹಿತರನ್ನು ಪಡೆದುಕೊಂಡಿದ್ದೇನೆ. ಜೂನಿಯರ್ ಕ್ರಿಕೆಟ್, ರಣಜಿ ಟ್ರೋಫಿ ಆಡಿದ್ದೇನೆ. ಮುಖ್ಯವಾಗಿ 2008ರ ಅಂಡರ್-19 ವಿಶ್ವಕಪ್‍ನಲ್ಲಿ ಉತ್ತಮ ಪ್ರದರ್ಶನ ನೀಡಿ, ತಂಡದೊಂದಿಗೆ ಕಪ್ ತಂದಿದ್ದೇನೆ ಎಂದು ಹೇಳಿದ್ದಾರೆ.

  • ಮಾಜಿ ರಣಜಿ ಕ್ರಿಕೆಟಿಗ, ಎಡಗೈ ಸ್ಪಿನ್ನರ್ ಶವ ಮನೆಯಲ್ಲಿ ಪತ್ತೆ

    ಮಾಜಿ ರಣಜಿ ಕ್ರಿಕೆಟಿಗ, ಎಡಗೈ ಸ್ಪಿನ್ನರ್ ಶವ ಮನೆಯಲ್ಲಿ ಪತ್ತೆ

    – ದ್ರಾವಿಡ್‍ರೊಂದಿಗೆ ಅಂಡರ್ -19 ತಂಡದಲ್ಲಿದ್ರು

    ತಿರುವನಂತಪುರಂ: ರಾಹುಲ್ ದ್ರಾವಿಡ್ ಅವರೊಂದಿಗೆ ಅಂಡರ್ -19 ತಂಡದ ಭಾಗವಾಗಿದ್ದ ಮಾಜಿ ರಣಜಿ ಕ್ರಿಕೆಟಿಗ ಎಂ.ಸುರೇಶ್ ಕುಮಾರ್ ಶುಕ್ರವಾರ ರಾತ್ರಿ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

    ಸುರೇಶ್ ಕುಮಾರ್ (47) ಕೇರಳದ ಆಲಪ್ಪುಳ ಬಳಿಯ ತಮ್ಮ ನಿವಾಸದಲ್ಲಿ ಬೆಡ್ ರೂಮಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುರೇಶ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕ್ರಿಕೆಟಿಗ ಸುರೇಶ್ ಕುಮಾರ್ ಶವವನ್ನು ಅವರ ಮಗ ಮೊದಲು ನೋಡಿದ್ದಾರೆ. ಇದು ಆತ್ಮಹತ್ಯೆ ಎನ್ನಲಾಗಿದೆ. ಆದರೆ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

    ಪ್ರಥಮ ದರ್ಜೆ ಕ್ರಿಕೆಟಿಗ ಸುರೇಶ್ ಕುಮಾರ್ ರಣಜಿ ಟ್ರೋಫಿಯಲ್ಲಿ ಕೇರಳ ಪರ ಆಡಿದ್ದರು. ಆಲಪ್ಪುಳ ಮೂಲದ ಸುರೇಶ್ ಕುಮಾರ್ ಎಡಗೈ ಸ್ಪಿನ್ನರ್ ಆಗಿ ಮಿಂಚಿದ್ದಾರೆ. 1991-92 ರಿಂದ 2005-06ರವರೆಗೆ 72 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದು, 1,657 ರನ್ ಗಳಿಸಿ 196 ವಿಕೆಟ್ ಪಡೆದುಕೊಂಡಿದ್ದಾರೆ. ಅಲ್ಲದೇ 1995-96ರ ರಾಜಸ್ಥಾನ ವಿರುದ್ಧದ ರಣಜಿ ಟ್ರೋಫಿ ಕಪ್‍ನಲ್ಲಿ ಕೇರಳ ಪರ ಆಡಿದ ಸುರೇಶ್ ಕುಮಾರ್ ಹ್ಯಾಟ್ರಿಕ್ ವಿಕೆಟ್ ಪಡೆದು ಸಾಧನೆ ಮಾಡಿದ್ದರು.

    ಕೇರಳದ ಪರ 52 ಪಂದ್ಯಗಳನ್ನು ಮತ್ತು ರಣಜಿ ಟ್ರೋಫಿಯಲ್ಲಿ ರೈಲ್ವೆ ಪರ 17 ಪಂದ್ಯಗಳನ್ನು ಆಡಿದ್ದರು. ಅಲ್ಲದೇ ದಕ್ಷಿಣ ವಲಯ ಮತ್ತು ಕೇಂದ್ರ ವಲಯವನ್ನು ಪ್ರತಿನಿಧಿಸುವ ದುಲೀಪ್ ಟ್ರೋಫಿಯಲ್ಲೂ ಸಹ ಆಡಿದ್ದರು. 1992 ರಲ್ಲಿ ನಡೆದ ಭಾರತ ಅಂಡರ್ -19 ಟೆಸ್ಟ್ ಮತ್ತು ಏಕದಿನ ತಂಡಗಳಲ್ಲೂ ಅವರು ಕಾಣಿಸಿಕೊಂಡಿದ್ದರು.

    ‘ಉಂಬ್ರಿ’ ಎಂದು ಸುರೇಶ್ ಕುಮಾರ್ ಖ್ಯಾತಿ ಪಡೆದುಕೊಂಡಿದ್ದು, 90ರ ದಶಕದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಅಂಡರ್ -19 ತಂಡವನ್ನು ಪ್ರತಿನಿಧಿಸುವ ಮೂಲಕ ಅಂತಾರಾಷ್ಟ್ರೀಯ ಕಿಕೆಟ್‍ನಲ್ಲಿ ಕೇರಳವನ್ನು ಪ್ರತಿನಿಧಿಸಿದ ಮೊದಲ ಆಟಗಾರ ಎಂಬ ಖ್ಯಾತಿಯನ್ನು ಪಡೆದುಕೊಂಡಿದ್ದರು.

    1994-95ರ ರಣಜಿ ಆವೃತ್ತಿಯಲ್ಲಿ ಕೇರಳದ ಮೊದಲ ಬಾರಿಗೆ ರಣಜಿ ಟ್ರೋಫಿ ಗೆಲ್ಲಲು ಸುರೇಶ್ ಕುಮಾರ್ ಪಾತ್ರ ದೊಡ್ಡದಿತ್ತು. ಇವರು ದಕ್ಷಿಣ ಭಾರತದ ಅತ್ಯುತ್ತಮ ಎಡಗೈ ಸ್ಪಿನ್ನರ್‌ಗಳಲ್ಲಿ ಒಬ್ಬರಾಗಿದ್ದರು. 2005ರಲ್ಲಿ ಜಾರ್ಖಾಂಡ್ ವಿರುದ್ಧ ಪಾಲಕ್ಕಾಡ್ ಕ್ರಿಕೆಟ್‍ನಲ್ಲಿ ನಡೆದ ಪಂದ್ಯದ ಬಳಿಕ ಕ್ರಿಕೆಟ್‍ಗೆ ವಿದಾಯವನ್ನು ಘೋಷಿಸಿದ್ದರು. ನಂತರ ಅವರು ಭಾರತೀಯ ರೈಲ್ವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

  • ರಾಹುಲ್ ದ್ರಾವಿಡ್ ಸಲಹೆಯೇ ಯಶಸ್ಸಿಗೆ ಕಾರಣ: ಜೈಸ್ವಾಲ್

    ರಾಹುಲ್ ದ್ರಾವಿಡ್ ಸಲಹೆಯೇ ಯಶಸ್ಸಿಗೆ ಕಾರಣ: ಜೈಸ್ವಾಲ್

    ನವದೆಹಲಿ: 2020 ಐಸಿಸಿ ಅಂಡರ್-19 ವಿಶ್ವಕಪ್ ಭಾಗವಾಗಿ ಟೀಂ ಇಂಡಿಯಾ ಪರ ಆಯ್ಕೆಯಾದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಸಂತಸ ವ್ಯಕ್ತಪಡಿಸಿದ್ದು, ತನ್ನ ಆಯ್ಕೆ ಹಿಂದೆ ಮಾಜಿ ಕೋಚ್, ಎನ್‍ಸಿಎ ಮುಖ್ಯಸ್ಥರಾಗಿರುವ ರಾಹುಲ್ ದ್ರಾವಿಡ್ ಅವರ ಶ್ರಮ ಸಾಕಷ್ಟಿದೆ ಎಂದಿದ್ದಾರೆ.

    ಆಡುವ ಪ್ರತಿಯೊಂದು ಎಸೆತದ ಮೇಲೂ ಫೋಕಸ್ ಮಾಡುವಂತೆ ದ್ರಾವಿಡ್ ಯಾವಾಗಲೂ ಹೇಳುತ್ತಿದ್ದರು. ಯಾವ ಎಸೆತವನ್ನು ನಾವು ಎದುರಿಸುತ್ತೇವೆ, ಆದರ ಬಗ್ಗೆ ಗಮನ ನೀಡಿ ಎಂದು ಸಲಹೆ ನೀಡಿದ್ದರು ಎಂದು ಜೈಸ್ವಾಲ್ ತಿಳಿಸಿದ್ದಾರೆ.

     

    ತರಬೇತಿಯ ವೇಳೆ ರಾಹುಲ್ ದ್ರಾವಿಡ್ ಅವರು ಆಟಗಾರರ ವೈಫಲ್ಯದ ಬಗ್ಗೆ ಗಮನ ಹರಿಸಿ ಸಲಹೆ ನೀಡುತ್ತಿದ್ದರು. ಅವರು ಹೇಳಿದ ಪ್ರತಿಯೊಂದು ವಿಚಾರ ನನಗೆ ಹೆಚ್ಚು ಉಪಯುಕ್ತವಾಗುತ್ತಿತ್ತು. ನಾನು ಪ್ರತಿ ಪಂದ್ಯವನ್ನು ಒಂದೇ ರೀತಿ ಸ್ವೀಕರಿಸುತ್ತೇನೆ. ಅಲ್ಲದೇ ಆಟದ ಬಗ್ಗೆ ಮಾತ್ರ ಗಮನ ಹರಿಸಿ, ಫಲಿತಾಂಶದ ಬಗ್ಗೆ ಹೆಚ್ಚು ಗಮನ ನೀಡುವುದಿಲ್ಲ. ದಿ ಬೆಸ್ಟ್ ಪ್ರದರ್ಶನ ನೀಡಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.

    ವಿಜಯ್ ಹಜಾರೆ ಟ್ರೋಫಿಯಲ್ಲಿ ಮೂರು ಶತಕಗಳಿಸಿ ಗಮನ ಸೆಳೆದ ಜೈಸ್ವಾಲ್, ದ್ವಿಶತಕದ ಸಾಧನೆಯನ್ನು ಮಾಡಿದ್ದಾರೆ. ಆ ಮೂಲಕ ಅಂಡರ್-19 ವಿಶ್ವಕಪ್ ಟೂರ್ನಿಗೆ ಆಯ್ಕೆಯಾಗಲು ಆಯ್ಕೆ ಸಮಿತಿಯ ಗಮನ ಸೆಳೆದಿದ್ದರು. ಅಕ್ಟೋಬರ್ ನಲ್ಲಿ ಜಾರ್ಖಂಡ್‍ನಲ್ಲಿ ನಡೆದಿದ್ದ ಪಂದ್ಯದಲ್ಲಿ ಜೈಸ್ವಾಲ್ 203 ರನ್ ಗಳಿಸಿದ್ದರು. ಅಲ್ಲದೇ ಲಿಸ್ಟ್-ಎ ಪಂದ್ಯದಲ್ಲಿ ಅತಿ ಕಡಿಮೆ ವಯಸ್ಸಿನಲ್ಲಿ (17 ವರ್ಷ 292 ದಿನ) ದ್ವಿಶತಕದ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆ ಪಡೆದರು. ಇದನ್ನೂ ಓದಿ: ಪಾನಿಪುರಿ ಮಾರುತ್ತಿದ್ದ 17ರ ಪೋರನಿಂದ ಹಜಾರೆ ಟ್ರೋಫಿಯಲ್ಲಿ ದ್ವಿಶತಕ ಸಾಧನೆ

  • ತಂದೆ ದಾರಿಯನ್ನೇ ತುಳಿದ ಪುತ್ರ ಅರ್ಜುನ್ ತೆಂಡೂಲ್ಕರ್

    ತಂದೆ ದಾರಿಯನ್ನೇ ತುಳಿದ ಪುತ್ರ ಅರ್ಜುನ್ ತೆಂಡೂಲ್ಕರ್

    ನವದೆಹಲಿ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಅಂಡರ್ 19 ಯೂತ್ ಟೆಸ್ಟ್ ಪಂದ್ಯದ ಬ್ಯಾಂಟಿಂಗ್ ಅರ್ಜುನ್ ಕೂಡ ರನ್ ಖಾತೆ ತೆಗೆಯಲು ವಿಫಲರಾಗಿದ್ದು, ತಂದೆ ಸಚಿನ್ ತೆಂಡೂಲ್ಕರ್ ರಂತೆ ತಮ್ಮ ವೃತ್ತಿ ಜೀವನದ ಮೊದಲ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದಾರೆ.

    ಕೊಲಂಬೊದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ಬೌಲರ್ ಶಶಿಕಾ ದುಲ್ಶನ್ ಬೌಲಿಂಗ್ ನಲ್ಲಿ ಅರ್ಜುನ್ ಶೂನ್ಯಕ್ಕೆ ಔಟಾದರು. ಇದಕ್ಕೂ ಮುನ್ನ ಅರ್ಜುನ್ 11 ಎಸೆತಗಳನ್ನು ಎದುರಿಸಿದರೂ ಸಹ ರನ್ ಖಾತೆ ತೆಗೆಯಲು ವಿಫಲರಾಗಿ ನಿರಾಸೆ ಮೂಡಿಸಿದರು.

    ಈ ಪಂದ್ಯದಲ್ಲೇ ಅರ್ಜುನ್ ತಮ್ಮ ಮೊದಲ ವಿಕೆಟ್ ಪಡೆದ ಸಾಧನೆಯನ್ನು ಮಾಡಿರುವ ಅರ್ಜುನ್, ತಮ್ಮ ಬೌಲಿಂಗ್ ನ 12 ಎಸೆತಗಳಲ್ಲಿ ಶ್ರೀಲಂಕಾ ಆಟಗಾರ ಕಮಿಲ್ ಮಿಶ್ರಾರನ್ನು ಎಲ್‍ಬಿ ಬಲೆಗೆ ಕೆಡವಿ ಮೊದಲ ವಿಕೆಟ್ ಪಡೆದು ಮಿಂಚಿದ್ದರು. ಇದಕ್ಕೂ ಮುನ್ನ ತಮ್ಮ ಮೊದಲ ಎಸೆತದ ರನ್ ಆಫ್ ಮಾಡುವ ವೇಳೆ ಅರ್ಜುನ್ ಎಡವಿದ್ದರು. ಅಂದಹಾಗೇ ಅರ್ಜುನ್ ಎಡಗೈ ವೇಗಿಯಾಗಿದ್ದು, ಇನ್ ಸ್ವೀಂಗ್ ಮಾಡುವ ಕೌಶಲ್ಯ ಹೊಂದಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 11 ಓವರ್ ಬೌಲ್ ಮಾಡಿರುವ ಅರ್ಜುನ್ 33 ರನ್ ನೀಡಿ 1 ವಿಕೆಟ್ ಪಡೆದಿದ್ದಾರೆ. ಇದರಲ್ಲಿ 2 ಮೆಡಿನ್ ಓವರ್ ಗಳು ಸಹ ಸೇರಿದೆ.

    1989 ರ ವೇಳೆ 16 ವರ್ಷದ ಸಚಿನ್ ಕೂಡ ತಮ್ಮ ಏಕದಿನ ಪಂದ್ಯದ ಪಾದಾರ್ಪಣೆ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆಗಿದ್ದರು. ಪಾಕ್ ಬೌಲರ್ ವಕಾರ್ ಯೂನಿಸ್ ಬೌಲಿಂಗ್ ನಲ್ಲಿ ಸಚಿನ್ ವಿಕೆಟ್ ಒಪ್ಪಿಸಿದ್ದರು.

    ಟೀಂ ಇಂಡಿಯಾ ಅಂಡರ್ 19 ತಂಡದಲ್ಲಿ 18 ವರ್ಷದ ಅರ್ಜನ್ ಮೊದಲ ಬಾರಿಗೆ ಸ್ಥಾನ ಪಡೆದಿದ್ದರು. ಬಳಿಕ ಶ್ರೀಲಂಕಾ ಸರಣಿ ತರಬೇತಿ ಶಿಬಿರಕ್ಕೆ ಹಾಜರಾಗಿದ್ದರು. ಟೀಂ ಇಂಡಿಯಾ ಸದ್ಯ ಶ್ರೀಲಂಕಾ ವಿರುದ್ಧ ಯೂತ್ ಟೆಸ್ಟ್ ಟೂರ್ನಿಯಲ್ಲಿ 2 ಪಂದ್ಯಗಳನ್ನು ಆಡಲಿದೆ. ಬಳಿಕ 2 ಪಂದ್ಯಗಳ ಏಕದಿನ ಟೂರ್ನಿಯಲ್ಲಿ ಭಾಗವಹಿಸಲಿದೆ.

    https://twitter.com/KSKishore537/status/1019143288685776896?

  • ಡೈವ್ ಮಾಡಿ ಸೂಪರ್ ಕ್ಯಾಚ್ ಪಡೆದ ಹಾರ್ವಿಕ್- ವೈರಲ್ ವಿಡಿಯೋ ನೋಡಿ

    ಡೈವ್ ಮಾಡಿ ಸೂಪರ್ ಕ್ಯಾಚ್ ಪಡೆದ ಹಾರ್ವಿಕ್- ವೈರಲ್ ವಿಡಿಯೋ ನೋಡಿ

    ನವದೆಹಲಿ: ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಭಾರತೀಯ ಆಟಗಾರು ಆಮೋಘ ಪ್ರದರ್ಶನ ನೀಡುವ ಮೂಲಕ ವಿಶ್ವ ಕ್ರಿಕೆಟ್ ಅಭಿಮಾನಿಗಳ ಮನ ಗೆದಿದ್ದಾರೆ. ಹಲವು ಗಣ್ಯರಿಂದ ಟೀಂ ಇಂಡಿಯಾಗೆ ಶುಭಾಶಯಗಳ ಮಹಾಪುರ ಹರಿದುಬಂದಿದೆ.

    ವಿಶ್ವಕಪ್ ಗೆಲುವು ಪಡೆಯಲು ತಂಡದ ಪ್ರತಿಯೊಬ್ಬ ಆಟಗಾರ ಸಹ ಸ್ಥಿರ ಪ್ರದರ್ಶನವೇ ಕಾರಣ ಎನ್ನಬಹುದು. ಅದರಲ್ಲೂ ಪ್ರಮುಖವಾಗಿಯೂ ವಿಕೆಟ್ ಕೀಪರ್ ಆಗಿ ಕಾರ್ಯನಿರ್ವಹಿಸಿದ ಹಾರ್ವಿಕ್ ದೇಸಾಯಿ ಪ್ರದರ್ಶನ ಹೆಚ್ಚಿನ ಅಭಿಮಾನಿಗಳ ಗಮನ ಸೆಳೆದಿದೆ.  ಇದನ್ನೂ ಓದಿ: ನಾಲ್ಕನೇಯ ಬಾರಿ ಅಂಡರ್ 19 ವಿಶ್ವಕಪ್ ಜಯಿಸಿದ ಟೀಂ ಇಂಡಿಯಾ

    ಫೈನಲ್ ಪಂದ್ಯದಲ್ಲಿ ಹಾರ್ವಿಕ್ ದೇಸಾಯಿ ಪಡೆದ ಕ್ಯಾಚ್ ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಟೀಂ ಇಂಡಿಯಾ ವೇಗಿ ಕಮಲೇಶ್ ನಾಗರಕೋಟಿ ಬೌಲಿಂಗ್ ನಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಜೇಸನ್ ಸಂಗಾ ಬ್ಯಾಟ್ ಗೆ ತಗಿದ ಆದ ಚೆಂಡ್ ಕೀಪರ್ ಬಲಕ್ಕೆ ಸಿಡಿಯಿತು. ಈ ವೇಳೆ ದೇಸಾಯಿ ಡೈವ್ ಮಾಡುವ ಮೂಲಕ ಕ್ಯಾಚ್ ಪಡೆದು ಸಂಗಾ ಪೆವಿಲಿಯನ್ ಕಡೆ ಮುಖಮಾಡಲು ಕಾರಣರಾದರು. ಆಸ್ಟ್ರೇಲಿಯಾ ಬ್ಯಾಂಟಿಂಗ್ ಪಟ್ಟಿಯಲ್ಲಿ ಸಂಗಾ ಅವರ ವಿಕೆಟ್ ಪ್ರಮುಖವಾಗಿದ್ದು ಈ ಮೂಲಕ ಆಸ್ಟ್ರೇಲಿಯಾ ಅಲ್ಪ ಮೊತ್ತಕ್ಕೆ ಕುಸಿಲು ಕಾರಣವಾಯಿತು. ಈ ಪಂದ್ಯದಲ್ಲಿ ವಿಕೆಟ್ ಹಿಂದೆ ಮೂರು ಕ್ಯಾಚ್‍ಗಳನ್ನು ಹಿಡಿದಿರುವ ದೇಸಾಯಿ ಒಂದು ರನೌಟ್ ಮಾಡಿ ಆಸ್ಟ್ರೇಲಿಯಾ ಕುಸಿತಕ್ಕೆ ಕಾರಣರಾಗಿದ್ದಾರೆ. ಇದನ್ನೂ ಓದಿ: 2003ರ ಸೋಲಿಗೆ ಸೇಡು ತೀರಿಸಿಕೊಂಡ ದ್ರಾವಿಡ್!

    ವಿಶ್ವ ಕ್ರಿಕೆಟ್‍ನಲ್ಲಿ ಸ್ಮರಣಿಯ ಸಾಧನೆ ಮಾಡುವ ಮೂಲಕ ಅಪಾರ ಅಭಿಮಾನಿಗಳನ್ನು ಪಡೆದಿರುವ ಧೋನಿ ಅವರಂತೆ ಆಗಬೇಕೆಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ದ್ರಾವಿಡ್ ಖಡಕ್ ಸೂಚನೆಗೆ ಒಲಿಯಿತು ಅಂಡರ್ 19 ವಿಶ್ವಕಪ್!

    ಇದನ್ನೂ ಓದಿ: ವಿಶ್ವಕಪ್ ಗೆದ್ದ ಅಂಡರ್-19 ತಂಡಕ್ಕೆ ಬಿಸಿಸಿಐ ನಗದು ಬಹುಮಾನ ಘೋಷಣೆ

  • ವಿಶ್ವಕಪ್ ಗೆದ್ದ ಅಂಡರ್-19 ತಂಡಕ್ಕೆ ಬಿಸಿಸಿಐ ನಗದು ಬಹುಮಾನ ಘೋಷಣೆ

    ವಿಶ್ವಕಪ್ ಗೆದ್ದ ಅಂಡರ್-19 ತಂಡಕ್ಕೆ ಬಿಸಿಸಿಐ ನಗದು ಬಹುಮಾನ ಘೋಷಣೆ

    ಮುಂಬೈ: ಐಸಿಸಿ ಅಂಡರ್ 19 ವಿಶ್ವಕಪ್ ನಲ್ಲಿ ಆಮೋಘ ಪ್ರದರ್ಶನ ನೀಡಿದ ಟೀಂ ಇಂಡಿಯಾ ಅಂಡರ್ 19 ಆಟಗಾರರ ತಂಡ ಪ್ರಶಸ್ತಿ ಗೆದ್ದ ಕೆಲವೇ ಕ್ಷಣಗಳಲ್ಲಿ ಬಿಸಿಸಿಐ ನಗದು ಬಹುಮಾನ ಘೋಷಿಸಿದೆ.

    ವಿಶ್ವಕಪ್ ಟೂರ್ನಿಯಲ್ಲಿ ಪೃಥ್ವಿ ಶಾ ನಾಯಕತ್ವದ ತಂಡ ಎಲ್ಲ ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್ ಪ್ರವೇಶಿಸಿ ಆಸ್ಟ್ರೇಲಿಯಾ ವಿರುದ್ಧ ಪಂದ್ಯ ಗೆದ್ದು ವಿಶ್ವಕಪ್ ಎತ್ತಿದೆ. ಇದನ್ನೂ ಓದಿ: ನಾಲ್ಕನೇಯ ಬಾರಿ ಅಂಡರ್ 19 ವಿಶ್ವಕಪ್ ಜಯಿಸಿದ ಟೀಂ ಇಂಡಿಯಾ

    ವಿಶ್ವಕಪ್ ಗೆದ್ದ ಬೆನ್ನಲ್ಲೇ ಬಿಸಿಸಿಐ ತಂಡದ ಎಲ್ಲಾ ಆಟಗಾರರಿಗೆ ತಲಾ 30 ಲಕ್ಷ ರೂ. ಬಹುಮಾನ ಘೋಷಿಸಿದೆ. ಅಲ್ಲದೇ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸಿದ್ದ ರಾಹುಲ್ ಡ್ರಾವಿಡ್ ಅವರಿಗೆ 50 ಲಕ್ಷ ರೂ. ಬಹುಮಾನ ನೀಡಿದೆ. ತಂಡದ ಬೆಂಬಲವಾಗಿ ನಿಂತಿದ್ದ ಇತರೇ ಸಿಬ್ಬಂದಿ ಹಾಗೂ ಬೌಲಿಂಗ್ ಕೋಚ್ ಆಭಯ್ ಶರ್ಮಾ ಅವರು ತಲಾ 20 ಲಕ್ಷ ರೂ. ಪಡೆಯಲಿದ್ದಾರೆ.  ಇದನ್ನೂ ಓದಿ: 2003ರ ಸೋಲಿಗೆ ಸೇಡು ತೀರಿಸಿಕೊಂಡ ದ್ರಾವಿಡ್!

    ಅಜೇಯ ತಂಡ: ಟೀಂ ಇಂಡಿಯಾ-19 ತಂಡ ಈ ಬಾರಿಯ ವಿಶ್ವಕಪ್‍ನಲ್ಲಿ ಎಲ್ಲ ತಂಡಗಳಿಗೂ ಪೈಪೋಟಿ ನೀಡಿ ಆಜೇಯವಾಗಿ ವಿಶ್ವಕಪ್ ಗೆದ್ದು ಬಿಗಿದೆ. ಟೂರ್ನಿಯ ಲೀಗ್ ಹಂತದಲ್ಲಿ ಯಾವುದೇ ಪಂದ್ಯವನ್ನು ಸೋತಿಲ್ಲ. ಟೀಂ ಇಂಡಿಯಾ ಬ್ಯಾಟಿಂಗ್, ಬೌಲಿಂಗ್ ಫಿಲ್ಡೀಂಗ್ ಸೇರಿದಂತೆ ಎಲ್ಲಾ ಪ್ರಕಾರಗಳಲ್ಲೂ ಉತ್ತಮ ಪ್ರದರ್ಶನವನ್ನು ನೀಡಿತ್ತು. ತಂಡದ ಪ್ರತಿಯೊಬ್ಬ ಆಟಗಾರರನ ಸ್ಥಿರ ಪ್ರದರ್ಶನ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದೆ. ಇದನ್ನೂ ಓದಿ: ದ್ರಾವಿಡ್ ಖಡಕ್ ಸೂಚನೆಗೆ ಒಲಿಯಿತು ಅಂಡರ್ 19 ವಿಶ್ವಕಪ್!

  • 2003ರ ಸೋಲಿಗೆ ಸೇಡು ತೀರಿಸಿಕೊಂಡ ದ್ರಾವಿಡ್!

    2003ರ ಸೋಲಿಗೆ ಸೇಡು ತೀರಿಸಿಕೊಂಡ ದ್ರಾವಿಡ್!

    ಬೆಂಗಳೂರು: 2003ರ ಫೈನಲ್‍ನಲ್ಲಿ ಭಾರತವನ್ನು ಸೋಲಿಸಿದ್ದ ಆಸ್ಟ್ರೇಲಿಯಾವನ್ನು ರಾಹುಲ್ ದ್ರಾವಿಡ್ ಕೊನೆಗೂ ಸೋಲಿಸುವ ಮೂಲಕ ವಿಶ್ವಕಪ್ ಗೆಲ್ಲುವ ಕನಸನ್ನು ನನಸು ಮಾಡಿದ್ದಾರೆ.

    ಪ್ರತಿಯೊಬ್ಬ ಕ್ರಿಕೆಟ್ ಆಟಗಾರನಿಗೆ ವಿಶ್ವಕಪ್ ಗೆಲ್ಲುವ ಆಸೆ ಇರುತ್ತದೆ. ಈ ಆಸೆಯ ಸಮೀಪ ದ್ರಾವಿಡ್ ಬಂದಿದ್ದರು. 2003ರಲ್ಲಿ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್‍ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ರಿಕ್ಕಿ ಪಾಂಟಿಂಗ್ ನೇತೃತ್ವದ ಆಸ್ಟ್ರೇಲಿಯಾ 125 ರನ್ ಗಳಿಂದ ಜಯಗಳಿಸಿತ್ತು. ರಿಕ್ಕಿ ಪಾಟಿಂಗ್ ಔಟಾಗದೇ 140 ರನ್(121 ಎಸೆತ, 4 ಬೌಂಡರಿ, 8 ಸಿಕ್ಸರ್) ಸಿಡಿಸಿ ತಂಡವನ್ನು ಗೆಲ್ಲಿಸಿಕೊಟ್ಟಿದ್ದರು.

    ಈ ಪಂದ್ಯದಲ್ಲಿ ದ್ರಾವಿಡ್ 47 ರನ್(57 ಎಸೆತ, 2 ಬೌಂಡರಿ) ಹೊಡೆದಿದ್ದರು. ಉಪನಾಯಕನಾಗಿದ್ದುಕೊಂಡು ವಿಶ್ವಕಪ್ ಗೆಲ್ಲುವ ಕನಸು ನನಸಾಗದೇ ಇದ್ದರೂ 2018ರಲ್ಲಿ ಅಂಡರ್ 19 ಕ್ರಿಕೆಟ್ ತಂಡಕ್ಕೆ ಮಾರ್ಗದರ್ಶನ ನೀಡಿ ಆಸ್ತ್ರೇಲಿಯಾ ತಂಡವನ್ನು ಸೋಲಿಸಿ ದ್ರಾವಿಡ್ ವಿಶ್ವಕಪ್ ಗೆದ್ದಷ್ಟೇ ಸಂಭ್ರಮಿಸಿದ್ದಾರೆ.

    1999ರಲ್ಲಿ ರಾಹುಲ್ ದ್ರಾವಿಡ್ ಮೊದಲ ವಿಶ್ವಕಪ್ ಕ್ರಿಕೆಟ್ ಆಡಿದ್ದರು. ನಯನ್ ಮೊಂಗಿಯಾ ಕೀಪರ್ ಆಗಿದ್ದರೆ, ರಾಹುಲ್ ದ್ರಾವಿಡ್ ಅವರನ್ನು ಎರಡನೇ ಕೀಪರ್ ಆಗಿ ಆಯ್ಕೆ ಮಾಡಲಾಗಿತ್ತು. ಈ ಸರಣಿಯಲ್ಲಿ ದ್ರಾವಿಡ್ 8 ಪಂದ್ಯಗಳಲ್ಲಿ 8 ಇನ್ನಿಂಗ್ಸ್ ಆಡಿ 65.85 ಸರಾಸರಿಯಲ್ಲಿ 461 ರನ್ ಹೊಡೆದಿದ್ದರು. ಎರಡು ಶತಕ, 3 ಅರ್ಧ ಶತಕ ಹೊಡೆದಿದ್ದರು. ಈ ಮೂಲಕ ಟೂರ್ನಿಯನ್ನು ಅತಿ ಹೆಚ್ಚು ರನ್ ಹೊಡೆದ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

    2007ರ ವೆಸ್ಟ್ ಇಂಡೀಸ್ ನಲ್ಲಿ ನಡೆದ ವಿಶ್ವಕಪ್ ವೇಳೆ ದ್ರಾವಿಡ್ ಟೀಂ ಇಂಡಿಯಾವನ್ನು ಮುನ್ನಡೆಸಿದ್ದರು. ಇದನ್ನೂ ಓದಿ: ದ್ರಾವಿಡ್ ಖಡಕ್ ಸೂಚನೆಗೆ ಒಲಿಯಿತು ಅಂಡರ್ 19 ವಿಶ್ವಕಪ್!

  • ದ್ರಾವಿಡ್ ಖಡಕ್ ಸೂಚನೆಗೆ ಒಲಿಯಿತು ಅಂಡರ್ 19 ವಿಶ್ವಕಪ್!

    ದ್ರಾವಿಡ್ ಖಡಕ್ ಸೂಚನೆಗೆ ಒಲಿಯಿತು ಅಂಡರ್ 19 ವಿಶ್ವಕಪ್!

    ಬೆಂಗಳೂರು: ಕನ್ನಡಿಗ ರಾಹುಲ್ ಡ್ರಾವಿಡ್ ಅವರ ಮಾರ್ಗರ್ದಶನದಲ್ಲಿ ಟೀಂ ಇಂಡಿಯಾ – 19 ತಂಡ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿ ವಿಶ್ವಕಪ್ ಮುಡಿಗೆರಿಸಿಕೊಂಡಿದೆ.

    ಫೈನಲ್ ನಲ್ಲಿ ಆಸ್ಟ್ರೇಲಿಯಾವನ್ನು 8 ವಿಕೆಟ್ ಗಳಿಂದ ಬಗ್ಗು ಬಡಿದು ಭಾರತ ನಾಲ್ಕನೇಯ ಬಾರಿ ಅಂಡರ್ 19 ವಿಶ್ವಕಪ್ ಜಯಿಸಲು ದ್ರಾವಿಡ್ ಟಿಪ್ಸ್ ಜೊತೆಗೆ ಕೆಲ ಖಡಕ್ ಸೂಚನೆಗಳು ಕಾರಣ ಎಂದರೆ ತಪ್ಪಾಗಲಾರದು.

    ಹೌದು. ಭಾರತ ಫೈನಲ್ ಪಂದ್ಯದ ಮುನ್ನ ತಂಡದ ಕೋಚ್ ಎಲ್ಲಾ ಆಟಗಾರಿರಗೂ ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು. ಡ್ರಾವಿಡ್ ಮಾತನ್ನು ತಂಡದ ಎಲ್ಲಾ ಆಟಗಾರರು ತಪ್ಪದೇ ಪಾಲಿಸಿದ್ದ ಕಾರಣ ಈಗ ವಿಶ್ವಕಪ್ ಎತ್ತಿ ಸಂಭ್ರಮಿಸಿದ್ದಾರೆ.

    ಕಳೆದ ವಾರ ಐಪಿಎಲ್ ಹರಾಜು ನಡೆದಿತ್ತು. ಈ ಸಂದರ್ಭದಲ್ಲೂ ದ್ರಾವಿಡ್ ಹರಾಜು ಪ್ರಕ್ರಿಯೆಗಳಿಗೆ ತಲೆ ಕೆಡಿಸಿಕೊಳ್ಳಬೇಡಿ ಸೆಮಿಫೈನಲ್ ನಲ್ಲಿ ನಮ್ಮ ಎದುರಾಳಿ ಇರುವುದು ಪಾಕಿಸ್ತಾನ. ಆ ಪಂದ್ಯದತ್ತ ಗಮನ ಹರಿಸಿ ಎಂದು ಸೂಚಿಸಿದ್ದರು.

    ಐಪಿಎಲ್ ಹರಾಜು ಪ್ರಕ್ರಿಯೆ ನಡೆಯುತ್ತಲೇ ಇರುತ್ತದೆ. ಆದರೆ ವಿಶ್ವಕಪ್ ಗೆಲ್ಲುವ ಅವಕಾಶ ಮಾತ್ರ ಕ್ರಿಕೆಟ್ ಆಟಗಾರರಿಗೆ ಒಮ್ಮೆ ಮಾತ್ರ ಬರುತ್ತದೆ. ದೇಶಕ್ಕಾಗಿ ಆಡಿ ವಿಶ್ವಕಪ್ ಗೆದ್ದು ತೋರಿಸಿ ಎಂದು ಆಟಗಾರರಿಗೆ ಸ್ಫೂರ್ತಿಯುತ ಮಾತನ್ನು ಆಡಿದ್ದರು.

    ಆಟಗಾರರು ದ್ರಾವಿಡ್ ಸೂಚನೆಯನ್ನು ಚಾಚು ತಪ್ಪದೆ ಪಾಲಿಸುತ್ತಿದ್ದರು ಎಂಬುದಕ್ಕೆ ತಂಡದ ಪ್ರಮುಖ ವೇಗಿ ಶಿವಂ ಮಾವಿ ಅವರ ತಂದೆ ಪಂಕಜ್ ಮಾವಿ, ನಾವು ಭಾನುವಾರ ಕೊನೆಯ ಬಾರಿ ಕೆಲವೇ ಕ್ಷಣ ಮಾತ್ರ ಶಿವಂ ಜತೆ ಮಾತಾಡಿದ್ದೆವು. ಈ ವೇಳೆ ಸೆಮಿಫೈನಲ್ ಹಾಗೂ ಫೈನಲ್ ತನಕ ಮೊಬೈಲ್ ಸ್ವಿಚ್ ಆಫ್ ಮಾಡಲು ಕೋಚ್ ಸೂಚಿಸಿದ್ದಾರೆ ಎಂಬುದಾಗಿ ಶಿವಂ ತಿಳಿಸಿದ್ದ ಎಂದು ಹೇಳಿದ್ದಾರೆ.

    ರಾಹುಲ್ ಡ್ರಾವಿಡ್ ಅವರ ತರಬೇತಿ ಪ್ರಭಾವ ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾಗವಹಿಸಿದ್ದ ಇತರೇ ತಂಡಗಳ ಆಟಗಾರರ ಮೇಲು ಬಿದ್ದಿತ್ತು. ಇದಕ್ಕೆ ಉದಾಹರಣೆ ಎಂಬಂತೆ ಪಾಕಿಸ್ತಾನದ ವಿರುದ್ಧ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಪಡೆದಿತ್ತು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಪಾಕ್ ಮಾಜಿ ಆಟಗಾರ ರಮೀಜ್ ರಾಜಾ ರಾಹುಲ್ ರಂತಹ ಕೋಚ್ ನಮ್ಮ ತಂಡಕ್ಕೂ ಇದ್ದಿದ್ದರೆ ನಾವು ಉತ್ತಮ ಪ್ರದರ್ಶನ ನೀಡಬಹುದಿತ್ತು ಎಂದು ಹೇಳಿ ಹೊಗಳಿದ್ದರು.

    ಟೀಂ ಇಂಡಿಯಾ ವಿಶ್ವಕಪ್ ಗೆದ್ದ ಬಳಿಕ #INDvAUS, #U19CWC ಜೊತೆಗೆ #RahulDravid ಹ್ಯಾಶ್ ಟ್ಯಾಗ್ ಟಾಪ್ ಟ್ರೆಂಡಿಂಗ್ ನಲ್ಲಿತ್ತು.

  • ನಾಲ್ಕನೇಯ ಬಾರಿ ಅಂಡರ್ 19 ವಿಶ್ವಕಪ್ ಜಯಿಸಿದ ಟೀಂ ಇಂಡಿಯಾ

    ನಾಲ್ಕನೇಯ ಬಾರಿ ಅಂಡರ್ 19 ವಿಶ್ವಕಪ್ ಜಯಿಸಿದ ಟೀಂ ಇಂಡಿಯಾ

    ಮೌಂಟ್ ಮೌಂಗನೂಯಿ: ಫೈನಲ್ ನಲ್ಲಿ ಆಸ್ಟ್ರೇಲಿಯಾವನ್ನು 8 ವಿಕೆಟ್ ಗಳಿಂದ ಬಗ್ಗು ಬಡಿದು ಭಾರತ ನಾಲ್ಕನೇಯ ಬಾರಿ ಅಂಡರ್ 19 ವಿಶ್ವಕಪ್ ಜಯಿಸಿದೆ.

    ಗೆಲ್ಲಲು 217 ರನ್ ಗಳ ಗುರಿಯನ್ನು ಬೆನ್ನಟ್ಟಿದ್ದ ಭಾರತ 2 ವಿಕೆಟ್ ನಷ್ಟಕ್ಕೆ 38.5 ಓವರ್ ಗಳಲ್ಲಿ 220 ರನ್ ಗಳಿಸಿ ಗುರಿಯನ್ನು ಮುಟ್ಟಿತು. ಮನೋಜ್ ಕರ್ಲಾ ಆಕರ್ಷಕ ಅಜೇಯ ಶತಕ 101 ರನ್(102 ಎಸೆತ, 8 ಬೌಂಡರಿ, 3 ಸಿಕ್ಸರ್) ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.

    ಆರಂಭಿಕ ಆಟಗಾರ ನಾಯಕ ಪೃಥ್ವಿ ಶಾ ಮತ್ತು ಮನೋಜ್ ಕರ್ಲಾ ಮೊದಲ ವಿಕೆಟ್ ಗೆ 11.4 ಓವರ್ ಗಳಲ್ಲಿ 71 ರನ್ ಗಳ ಜೊತೆಯಾಟವಾಡಿದರು. ಪೃಥ್ವಿ ಶಾ 29 ರನ್(51 ಎಸೆತ, 4 ಬೌಂಡರಿ) ಹೊಡೆದು ಬೌಲ್ಡ್ ಆದರು. ಶುಭಮನ್ ಗಿಲ್ 31 ರನ್(30 ಎಸೆತ, 4 ಬೌಂಡರಿ) ಹೊಡೆದು ಔಟಾದರು. ಹಾರ್ವಿಕ್ ದೇಸಾಯಿ ಮತ್ತು ಮನಜೋತ್ ಕರ್ಲಾ ಮುರಿಯ ಮೂರನೇ ವಿಕೆಟ್ ಗೆ 89 ರನ್ ಪೇರಿಸಿ ಜಯವನ್ನು ತಂದುಕೊಟ್ಟರು. ಹಾರ್ವಿಕ್ ದೇಸಾಯಿ ಅಜೇಯ 47 ರನ್( 61 ಎಸೆತ, 5 ಬೌಂಡರಿ) ಹೊಡೆದರು.

    59 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡಿದ್ದ ಆಸ್ತ್ರೇಲಿಯಾ ಪರ ಜೊನಾಥನ್ ಮರ್ಲೊ 76 ರನ್(102 ಎಸೆತ, 6 ಬೌಂಡರಿ) ಪರಮ್ ಉಪ್ಪಲ್ 34 ರನ್(58 ಎಸೆತ, 3 ಬೌಂಡರಿ), ಜಾಕ್  28 ರನ್(29 ಎಸೆತ, 5 ಬೌಂಡರಿ), ನಥನ್ ಮೆಕ್ ಸ್ವೀನಿ 23 ರನ್(29 ಎಸೆತ, 2 ಬೌಂಡರಿ) ಹೊಡೆದರು.

    ಭಾರತದ ಪರ ಇಶಾನ್ ಪೊರೆಲ್, ಶಿವ ಸಿಂಗ್, ಕಮಲೇಶ್ ನಾಗರಕೋಟಿ, ಅನುಕೂಲ್ ರಾಯ್ ತಲಾ ಎರಡು ವಿಕೆಟ್ ಪಡೆದರೆ, ಶಿವಂ ಮಾವಿ ತಲಾ ಒಂದು ವಿಕೆಟ್ ಪಡೆದರು.

    ನಾಲ್ಕು ಬಾರಿ ಚಾಂಪಿಯನ್
    2000 – ಮಹಮ್ಮದ್ ಕೈಫ್ ಸಾರಥ್ಯದಲ್ಲಿ ಭಾರತ ಶ್ರೀಲಂಕಾವನ್ನು 6 ವಿಕೆಟ್ ಗಳಿಂದ ಸೋಲಿಸಿ ಮೊದಲ ಬಾರಿಗೆ ಕಪ್ ಗೆದ್ದಿತ್ತು.
    2006 – ರವಿಕಾಂತ್ ಶುಕ್ಲಾ ನೇತೃತ್ವದ ತಂಡ ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ 38 ರನ್ ಗಳಿಂದ ಸೋತಿತ್ತು
    2008 – ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 12 ರನ್ ಗಳಿಂದ ಗೆಲ್ಲುವ ಮೂಲಕ ಎರಡನೇ ಬಾರಿ ಕಪ್ ಗೆದ್ದಿತ್ತು.
    2012 – ಉನ್ಮುಕ್ತ್ ಚಾಂದ್ ನೇತೃತ್ವದಲ್ಲಿ ಆಸ್ತ್ರೇಲಿಯಾ ವಿರುದ್ಧ 6 ವಿಕೆಟ್ ಗಳಿಂದ ಗೆದ್ದುಕೊಂಡಿತ್ತು.
    2016 – ಇಶಾನ್ ಕಿಶನ್ ನಾಯಕರಾಗಿದ್ದ ವೇಳೆ ವಿಂಡೀಸ್ ವಿರುದ್ಧ 5 ವಿಕೆಟ್ ಗಳಿಂದ ಸೋತಿತ್ತು.
    2017 – ಪೃಥ್ವಿ ಶಾ ನೇತೃತ್ವದಲ್ಲಿ ಆಸೀಸ್ ವಿರುದ್ಧ 8 ವಿಕೆಟ್ ಗಳ ಜಯ