Tag: Union Budget 2023-24

  • Budget 2023: ಮನೆ ಕಟ್ಟೋರಿಗೆ ಗುಡ್‌ ನ್ಯೂಸ್‌ – ಪ್ರಧಾನಮಂತ್ರಿ ಆವಾಸ್ ಯೋಜನೆಗಾಗಿ 79,000 ಕೋಟಿ ಅನುದಾನ

    Budget 2023: ಮನೆ ಕಟ್ಟೋರಿಗೆ ಗುಡ್‌ ನ್ಯೂಸ್‌ – ಪ್ರಧಾನಮಂತ್ರಿ ಆವಾಸ್ ಯೋಜನೆಗಾಗಿ 79,000 ಕೋಟಿ ಅನುದಾನ

    ನವದೆಹಲಿ: ಮನೆ ಕಟ್ಟೋರಿಗೆ ಕೇಂದ್ರ ಸರ್ಕಾರ ಬಜೆಟ್ ಮೂಲಕ ಗುಡ್‌ನ್ಯೂಸ್ ಕೊಟ್ಟಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಗಾಗಿ (Pradhan Mantri Awas Yojana) 79 ಸಾವಿರ ಕೋಟಿ ಅನುದಾನ ಘೋಷಿಸಿದೆ.

    ಬುಧವಾರ 2023-24ನೇ ಸಾಲಿನ ಬಜೆಟ್‌ (Union Budget 2023) ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು, ಪ್ರಧಾನಮಂತ್ರಿ ಆವಾಸ್ ಯೋಜನೆಗಾಗಿ (PMAY) 79 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ. ಇದು ಕಳೆದ ವರ್ಷದ ಅನುದಾನಕ್ಕೆ ಹೋಲಿಸಿದರೆ ಶೇಕಡಾ 66ರಷ್ಟು ಹೆಚ್ಚು. ಈ ಯೋಜನೆಯಡಿ 80 ಲಕ್ಷ ಮಂದಿಗೆ ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Union Budget 2023: ಎಲ್ಲಾ ರಾಜ್ಯಗಳಲ್ಲೂ ʼಯೂನಿಟಿ ಮಾಲ್‌ʼ

    ಕಳೆದ ಬಜೆಟ್‌ನಲ್ಲಿ ಎಲ್ಲರಿಗೂ ಮನೆ ಎಂದು ನಿರ್ಮಲಾ ಸೀತಾರಾಮನ್‌ ಅವರು ಹೇಳಿದ್ದರು. ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ 84 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ಕಳೆದ ವರ್ಷದ ಬಜೆಟ್‌ನಲ್ಲಿ ಸಚಿವರು 48,000 ಕೋಟಿ ಮೀಸಲಿಟ್ಟಿದ್ದರು. ಪ್ರಸ್ತುತ ಬಜೆಟ್‌ನಲ್ಲಿ ಈ ಯೋಜನೆಗಾಗಿ ಸುಮಾರು ಶೇ.65 ಹೆಚ್ಚಿನ ಹಣವನ್ನು ಮೀಸಲಿಡಲಾಗಿದೆ. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ಬಂಪರ್ – ಏನಿದು ಯೋಜನೆ? ಯಾರಿಗೆಲ್ಲ ಲಾಭ?

    ಪ್ರಧಾನಮಂತ್ರಿ ಆವಾಸ್ ಯೋಜನೆಯು ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಇದು ಸಮಾಜದ ದುರ್ಬಲ ವರ್ಗಗಳಿಗೆ (EWS/LIG and MIG) ಕೈಗೆಟುಕುವ ದರದಲ್ಲಿ ವಸತಿ ಒದಗಿಸುವ ಗುರಿ ಹೊಂದಿದೆ. ಇದನ್ನು 2015 ರಲ್ಲಿ ಪ್ರಾರಂಭಿಸಲಾಯಿತು. ಇದನ್ನೂ ಓದಿ: ಜಾತ್ರೆಯಲ್ಲಿ ಬಾಂಬೆ, ಕೋಲ್ಕತ್ತಾ ತೋರಿಸುವ ರೀತಿ ಬಜೆಟ್: ಸಿದ್ದರಾಮಯ್ಯ ವಾಗ್ದಾಳಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Union Budget 2023: ಎಲ್ಲಾ ರಾಜ್ಯಗಳಲ್ಲೂ ʼಯೂನಿಟಿ ಮಾಲ್‌ʼ

    Union Budget 2023: ಎಲ್ಲಾ ರಾಜ್ಯಗಳಲ್ಲೂ ʼಯೂನಿಟಿ ಮಾಲ್‌ʼ

    ನವದೆಹಲಿ: ದೇಶದ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ʼಯೂನಿಟಿ ಮಾಲ್‌ʼಗಳನ್ನು (Unity Mall) ತೆರೆದು, ದೇಶೀಯ ಹಾಗೂ ಪ್ರಾದೇಶಿಕ ಉತ್ಪನ್ನಗಳ ಮಾರಾಟಕ್ಕೆ ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆದಿದೆ.

    ಏನಿದು ‌ʼಯೂನಿಟಿ ಮಾಲ್ʼ?
    2023-24ನೇ ಸಾಲಿನ ಬಜೆಟ್‌ (Union Budget) ಮಂಡಿಸಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman), ಯೂನಿಟಿ ಮಾಲ್‌ಗಳನ್ನು ತೆರೆದು ಆಯಾ ರಾಜ್ಯದ ಪ್ರಾದೇಶಿಕ (ODOP- ಒಂದು ಜಿಲ್ಲೆ, ಒಂದು ಉತ್ಪನ್ನ), ಭೌಗೋಳಿಕ ಸೂಚಿಕೆ ಮಾನ್ಯತೆ ಪಡೆದ ಉತ್ಪನ್ನಗಳು ಮತ್ತು ಇತರ ಕರಕುಶಲ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು. ಜೊತೆಗೆ ಎಲ್ಲಾ ರಾಜ್ಯಗಳ ಉತ್ಪನ್ನಗಳಿಗೆ ಸ್ಥಳಾವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Union Budget 2023 – ಮಧ್ಯ ಕರ್ನಾಟಕ, ಮಲೆನಾಡು, ಹಳೇ ಮೈಸೂರು ಮತಗಳ ಮೇಲೆ ಬಿಜೆಪಿ ಕಣ್ಣು

    ಯೂನಿಟಿ ಮಾಲ್‌ಗಳಲ್ಲಿ ದೇಶೀಯ ಹಾಗೂ ಆಯಾ ರಾಜ್ಯದ ಪ್ರಾದೇಶಿಕ ಪ್ರಸಿದ್ಧವಾಗಿರುವ ಉತ್ಪನ್ನಗಳನ್ನು ಪ್ರತ್ಯೇಕವಾಗಿ ಮಾರಾಟ ಮಾಡಲಾಗುತ್ತದೆ. ಉದಾಹರಣೆಗೆ, ಬೆಂಗಳೂರಿನಲ್ಲಿ ಯೂನಿಟಿ ಮಾಲ್‌ ತೆರೆದರೆ, ಅಲ್ಲಿ ಚನ್ನಪಟ್ಟಣದ ಗೊಂಬೆ, ಮೈಸೂರು ರೇಷ್ಮೆ ಸೀರಿ, ಬ್ಯಾಡಗಿ ಮೆಣಸಿನಕಾಯಿ ಹೀಗೆ ಹಲವು ಉತ್ಪನ್ನಗಳನ್ನು ಮಾರಾಟ ಮಾಡಬಹುದು.

    ODOP ಹಾಗಂದ್ರೇನು?
    ಒಂದು ಜಿಲ್ಲೆ, ಒಂದು ಉತ್ಪನ್ನವು (One District, One Product) ಸರ್ಕಾರದ ಒಂದು ಉಪಕ್ರಮವಾಗಿದೆ. ಇದು ಪ್ರಾದೇಶಿಕ ಉತ್ಪನ್ನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಗುರಿಯನ್ನು ಹೊಂದಿದೆ. ಅವುಗಳನ್ನು ಉತ್ಪಾದಿಸುವವರಿಗೆ ಬಂಡವಾಳ ನೀಡುತ್ತದೆ. ಯೋಜನೆಯಡಿಯಲ್ಲಿ, ರಾಜ್ಯವು ಜಿಲ್ಲೆಯ ಮುಖ್ಯ ಉತ್ಪನ್ನವನ್ನು ಗುರುತಿಸುತ್ತದೆ. ಅದರ ಸಂಸ್ಕರಣೆ, ಸಂಗ್ರಹಣೆ ಮತ್ತು ಮಾರುಕಟ್ಟೆಗೆ ಬೆಂಬಲ ನೀಡುತ್ತದೆ. ಇದನ್ನೂ ಓದಿ: Union Budget 2023: ಕ್ರೀಡೆಗೆ ದಾಖಲೆಯ 3,397.22 ಕೋಟಿ ರೂ. ಅನುದಾನ

    ಭೌಗೋಳಿಕ ಸೂಚಿಕೆ ಎಂದರೇನು?
    ನಿರ್ದಿಷ್ಟ ಊರು/ಸ್ಥಳದಲ್ಲಿಯೇ ಉತ್ಪಾದಿಸುವ ಪದಾರ್ಥಕ್ಕೆ, ಅದರ ನೈಸರ್ಗಿಕ ಗುಣಮಟ್ಟ, ವೈಶಿಷ್ಟ್ಯತೆಯನ್ನು ಆಧರಿಸಿ ಭೌಗೋಳಿಕ ಸೂಚಿಕೆ (GI) ಟ್ಯಾಗ್ ನೀಡಲಾಗುತ್ತದೆ. ಅಂತಹ ಉತ್ಪನ್ನಗಳಿಗೆ ಕೇಂದ್ರ ಸರ್ಕಾರವು ಜಿಐ (ಜಿಯೋಗ್ರಫಿಕಲ್‌ ಇಂಡಿಕೇಶನ್‌ ಟ್ಯಾಗ್-‌ ಜಿಐ ಟ್ಯಾಗ್) ಮಾನ್ಯತೆ ನೀಡುತ್ತದೆ.‌ ಜಿಐ ಟ್ಯಾಗ್‌ ಲಭಿಸಿರುವ ಪದಾರ್ಥಗಳನ್ನು ಉತ್ಪಾದಿಸುವ ಅಥವಾ ಬೆಳೆಯುವವರಿಗೆ ಅವುಗಳ ಮಾರಾಟ ಸಂದರ್ಭದಲ್ಲಿ ಹೆಚ್ಚು ಅನುಕೂಲವಾಗಲಿದೆ. ಇಂತಹ ಉತ್ಪನ್ನಗಳಿಗೆ ಹೆಚ್ಚು ದರ ನಿಗದಿಗೆ ಅವಕಾಶ ಇರುತ್ತದೆ. ಇವುಗಳ ಹೆಸರುಗಳನ್ನು ಬೇರೆಯವರು ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಂತಿಮ ಹಂತದಲ್ಲಿ ಕೇಂದ್ರ ಬಜೆಟ್ – ಹಲ್ವಾ ಹಂಚಿದ ನಿರ್ಮಲಾ ಸೀತಾರಾಮನ್

    ಅಂತಿಮ ಹಂತದಲ್ಲಿ ಕೇಂದ್ರ ಬಜೆಟ್ – ಹಲ್ವಾ ಹಂಚಿದ ನಿರ್ಮಲಾ ಸೀತಾರಾಮನ್

    ನವದೆಹಲಿ: ಕೇಂದ್ರ ಬಜೆಟ್ (Union Budget 2023-24) ಸಿದ್ಧತೆ ಅಂತಿಮ ಹಂತಕ್ಕೆ ಬಂದಿದ್ದು, ದೆಹಲಿಯ (New Delhi) ನಾರ್ಥ್ ಬ್ಲಾಕ್‍ನಲ್ಲಿರುವ ಹಣಕಾಸು ಸಚಿವಾಲಯದ ಮುಖ್ಯ ಕಚೇರಿಯಲ್ಲಿ ಸಿಬ್ಬಂದಿಗೆ ಹಲ್ವಾ ಹಂಚಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸಂಭ್ರಮಿಸಿದ್ದಾರೆ.

    ಫೆ.1 ರಂದು ಬಜೆಟ್ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಸಿಬ್ಬಂದಿಗೆ ಹಲ್ವಾ ಹಂಚುವ ಮೂಲಕ ಅಂತಿಮ ಹಂತದ ಸಿದ್ಧತೆಗೆ ಚಾಲನೆ ನೀಡಲಾಯಿತು. ಈ ವೇಳೆ ಹಣಕಾಸು ಖಾತೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಮತ್ತು ಭಾಗವತ್ ಕಿಸನ್‍ರಾವ್ ಕರದ್ ಉಪಸ್ಥಿತರಿದ್ದರು.

    ಬಜೆಟ್‍ನ ಸಿದ್ಧತೆಯನ್ನು ಗುಪ್ತವಾಗಿರಿಸುವ ಹಿನ್ನೆಲೆಯಲ್ಲಿ ಬಜೆಟ್‍ನಲ್ಲಿ ಸಿದ್ಧಪಡಿಸಲು ಭಾಗಿಯಾಗಿರುವ ಹಣಕಾಸು ಅಧಿಕಾರಿಗಳು ಸುಮಾರು 10 ದಿನಗಳ ಕಾಲ ಉತ್ತರ ಬ್ಲಾಕ್‍ನ ನೆಲಮಾಳಿಗೆಯಲ್ಲೇ ಇರಬೇಕು. ಆ ಸಿಬ್ಬಂದಿ ಎಲ್ಲರೂ ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಾರ್ಷಿಕ ಬಜೆಟ್ ಮಂಡಿಸುವವರೆಗೂ ಅಲ್ಲಿಯೇ ಇರುತ್ತಾರೆ. ಬಜೆಟ್‍ನಲ್ಲಿರುವ ವಿಷಯಗಳು ಯಾವುದೇ ರೀತಿಯಲ್ಲೂ ಸೋರಿಕೆಯಾಗದಂತೆ ನೋಡಿಕೊಳ್ಳಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಕಾಗಿನೆಲೆ ಈಶ್ವರಾನಂದ ಸ್ವಾಮೀಜಿ ಮೇಲೆ ಸಿಡಿಮಿಡಿಗೊಂಡ ಸಿಎಂ

    ಹಲ್ವಾ ಸಮಾರಂಭದ ನಂತರ, ಬಜೆಟ್ ದಾಖಲೆಗಳನ್ನು ಮುದ್ರಿಸಲಾಗುತ್ತದೆ. ಆದರೆ 2021ರಿಂದ ಬಜೆಟ್ ಕಾಗದ ರಹಿತವಾಗಿರುವುದರಿಂದ, ಬಜೆಟ್‍ನ್ನು ಮುದ್ರಣ ಮಾಡಲಾಗುವುದಿಲ್ಲ. ಈ ವರ್ಷವೂ, ಹಿಂದಿನ ಎರಡು ಬಜೆಟ್‍ಗಳಂತೆ, 2023-24ರ ಕೇಂದ್ರ ಬಜೆಟ್ ಅನ್ನು ಸಹ ಕಾಗದರಹಿತ ರೂಪದಲ್ಲಿ ವಿತರಿಸಲಾಗುತ್ತದೆ. ಇದನ್ನೂ ಓದಿ: ಜಪಾನ್-ದಕ್ಷಿಣ ಕೊರಿಯಾ ಜಲಮಾರ್ಗದಲ್ಲಿ ಮುಳುಗಿದ ಹಡಗು; 8 ಮಂದಿ ಸಾವು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜ.31ಕ್ಕೆ ಸಂಸತ್ ಅಧಿವೇಶನ; ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ

    ಜ.31ಕ್ಕೆ ಸಂಸತ್ ಅಧಿವೇಶನ; ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ

    ನವದೆಹಲಿ: ಈ ಬಾರಿ ಸಂಸತ್ ಬಜೆಟ್ ಅಧಿವೇಶನ (Parliament’s Budget Session) ಜನವರಿ 31 ರಿಂದ ಪ್ರಾರಂಭವಾಗಿ ಏಪ್ರಿಲ್ 6 ರಂದು ಮುಕ್ತಾಯವಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಈ ಬಗ್ಗೆ ಸರ್ಕಾರ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ನೀಡುವ ನಿರೀಕ್ಷೆ ಇದೆ.

    ಕೇಂದ್ರ ಬಜೆಟ್ 2023-24 (Union Budget 2023-24) ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ಭಾಗ ಫೆಬ್ರವರಿ 10 ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಉತ್ತರ ಕರ್ನಾಟಕದ ನಡೆದಾಡುವ ದೇವರು ಸಿದ್ದೇಶ್ವರ ಶ್ರೀ

    ಬಜೆಟ್ ಅಧಿವೇಶನದ ಮೊದಲ ದಿನ ಸಂಸತ್ತಿನ ಉಭಯ ಸದನದಲ್ಲಿ ಆರ್ಥಿಕ ಸಮೀಕ್ಷೆಯನ್ನೂ ಮಂಡಿಸುವ ಸಾಧ್ಯತೆಯಿದೆ. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಿ, ಅಧಿವೇಶನವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ.

    ಪ್ರತಿ ವರ್ಷ ಕೇಂದ್ರ ಬಜೆಟ್ ಅನ್ನು ಅಧಿವೇಶನಗಳಲ್ಲಿ ಮಂಡಿಸಲಾಗುತ್ತದೆ. ವರದಿಯ ಪ್ರಕಾರ, ಅಧಿವೇಶನದ 2ನೇ ಭಾಗವು ಮಾರ್ಚ್ 6 ರಂದು ಪ್ರಾರಂಭವಾಗಿ ಏಪ್ರಿಲ್ 6ಕ್ಕೆ ಕೊನೆಗೊಳ್ಳುವ ಸಾಧ್ಯತೆಯಿದೆ. ಇದನ್ನೂ ಓದಿ: 9 ದಿನದ ಬ್ರೇಕ್ ಬಳಿಕ ಜೋಡೋ ಯಾತ್ರೆ ಪುನರಾರಂಭ

    Live Tv
    [brid partner=56869869 player=32851 video=960834 autoplay=true]