Tag: Union Minister Harshvardhan

  • ಕೊರೊನಾ 2ನೇ ಅಲೆ ಮುಗಿದಿಲ್ಲ, ಮೈ ಮರೆಯುವಂತಿಲ್ಲ: ಹರ್ಷವರ್ಧನ್

    ಕೊರೊನಾ 2ನೇ ಅಲೆ ಮುಗಿದಿಲ್ಲ, ಮೈ ಮರೆಯುವಂತಿಲ್ಲ: ಹರ್ಷವರ್ಧನ್

    ನವದೆಹಲಿ: ಕೊರೊನಾ 2ನೇ ಅಲೆ ಇನ್ನೂ ಮುಗಿದಿಲ್ಲ, ನಿರಾಳರಾಗಬಾರದು. ವೈಯಕ್ತಿಕ ಸುರಕ್ಷತೆಯನ್ನು ಯಾವುದೇ ಸಂದರ್ಭದಲ್ಲೂ ಮರೆಯಬಾರದು ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಎಚ್ಚರಿಸಿದ್ದಾರೆ.

    ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್, ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹಾಗೂ ಇತರರೊಂದಿಗೆ ವೀಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದರು. ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯಬಾರದು ಎಂದು ತಿಳಿಸಿದರು.

    ಕೊರೊನಾ 2ನೇ ಅಲೆ ಇನ್ನೂ ಮುಗಿದಿಲ್ಲ. ದೆಹಲಿಯಲ್ಲಿ ಕೊರೊನಾ ಸೋಂಕಿನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿರಬಹುದು. ಆದರೆ ನಮ್ಮ ಒಂದೂವರೆ ವರ್ಷದ ಅನುಭವವನ್ನು ಗಮನದಲ್ಲಿರಿಸಿಕೊಂಡು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವುದನ್ನು ಯಾವುದೇ ಸಂದರ್ಭದಲ್ಲಿಯೂ ಮರೆಯಬಾರದು. ಸಾರ್ವಜನಿಕರು ಹಾಗೂ ಸಮುದಾಯವನ್ನು ಸಹ ವಿಶ್ರಾಂತಿಯಿಂದ ಇರಲು ಬಿಡಬೇಡಿ, ಎಲ್ಲ ಸಂದರ್ಭಗಳಲ್ಲಿಯೂ ನಾವು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದ್ದಾರೆ.

    ಅದೃಷ್ಟವಶಾತ್ ಕಳೆದ 6 ತಿಂಗಳಿಂದ ಲಸಿಕೆ ಲಭ್ಯವಿದೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಹೆಚ್ಚು ಜನರಿಗೆ ಲಸಿಕೆ ನೀಡಿದ್ದರಿಂದ ಕೊರೊನಾ ವಿರುದ್ಧದ ಹೋರಾಟದಲ್ಲಿ ನಾವು ಯಶಸ್ವಿಯಾಗಿದ್ದೇವೆ. ಈಗಲೂ ನಾವು ಮೈ ಮರೆಯಬಾರದು ಸದಾ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಕರೆ ನೀಡಿದ್ದಾರೆ.