Tag: United Nations Security Council

  • ಭಾರತದ ವಿರುದ್ಧ ಸುಳ್ಳು ಆರೋಪ – ಪಾಕ್‌ಗೆ ಹಿಗ್ಗಾಮುಗ್ಗಾ ಜಾಡಿಸಿದ ವಿಶ್ವಸಂಸ್ಥೆ

    ಭಾರತದ ವಿರುದ್ಧ ಸುಳ್ಳು ಆರೋಪ – ಪಾಕ್‌ಗೆ ಹಿಗ್ಗಾಮುಗ್ಗಾ ಜಾಡಿಸಿದ ವಿಶ್ವಸಂಸ್ಥೆ

    – ಕಾಶ್ಮೀರ ವಿಚಾರ ಮುಂದಿಟ್ಟು ಸಿಂಪಥಿ ಗಿಟ್ಟಿಸಲು ಮಾಡಿದ್ದ ಪ್ಲ್ಯಾನ್‌ ವಿಫಲ

    ನ್ಯೂಯಾರ್ಕ್: ಪಾಕಿಸ್ತಾನದ ಕೋರಿಕೆಯ ಮೇರೆಗೆ ಕರೆಯಲಾಗಿದ್ದ ವಿಶ್ವಸಂಸ್ಥೆಯ (United Nations) ಭದ್ರತಾ ಮಂಡಳಿಯ ರಹಸ್ಯ ಸಭೆಯಲ್ಲಿ ಪಾಕ್ ಬೆವರಿಳಿಸಿಕೊಂಡಿದೆ. ಭಾರತದ ವಿರುದ್ಧ ಸುಳ್ಳು ಆರೋಪ ಮಾಡಿದ್ದ ಪಾಕಿಸ್ತಾನಕ್ಕೆ (Pakistan) ವಿಶ್ವಸಂಸ್ಥೆ ಹಿಗ್ಗಾಮುಗ್ಗಾ ಜಾಡಿಸಿದೆ.

    ಭಾರತ (India) ಮತ್ತು ಪಾಕಿಸ್ತಾನದ (Pakistan) ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪಾಕ್ ಮನವಿಯ ಮೇರೆಗೆ ತುರ್ತು ಸಭೆ ನಡೆಯಿತು. ಸಭೆಯಲ್ಲಿ ಪಾಕಿಸ್ತಾನ ಪಹಲ್ಗಾಮ್ ವಿಚಾರವನ್ನು ಬದಿಗೆ ಸರಿಸಿ ಕಾಶ್ಮೀರದ ವಿಚಾರವನ್ನು ಮುಂದಿಟ್ಟು ಭಾರತ ಮಿಲಿಟರಿ ಪಡೆಯನ್ನು ಸಿದ್ಧವಾಗಿಟ್ಟುಕೊಂಡಿರುವ ಬಗ್ಗೆ ಸಿಂಪಥಿ ಗಿಟ್ಟಿಸಲು ಪ್ಲ್ಯಾನ್‌ ಮಾಡಿತ್ತು. ಆದರೆ ಪಾಕ್ ನಾಟಕಕ್ಕೆ ವಿಶ್ವಸಂಸ್ಥೆ ಸೊಪ್ಪು ಹಾಕದೇ ಛೀಮಾರಿ ಹಾಕಿದೆ.ಇದನ್ನೂ ಓದಿ: ಭಾರತದ ವಿರುದ್ಧ ಸುಳ್ಳು ಆರೋಪ ಮಾಡಿದ್ದ ಪಾಕಿಗೆ ಮತ್ತೆ ವಿಶ್ವಸಂಸ್ಥೆಯಲ್ಲಿ ಮುಖಭಂಗ

    ಇದೇ ವೇಳೆ ವಿಶ್ವಸಂಸ್ಥೆ ಪಾಕಿಸ್ತಾನಕ್ಕೆ ಪಹಲ್ಗಾಮ್ ಹತ್ಯಾಕಾಂಡದ ಹಿಂದೆ ಲಷ್ಕರ್ ನಂಟಿನ ಬಗ್ಗೆಯೂ ಪ್ರಸ್ತಾಪಿಸಿ ಹಾಗೂ ಬಹಿರಂಗವಾಗಿ ನ್ಯೂಕ್ಲಿಯರ್ ಬಾಂಬ್ ದಾಳಿಯ ಹೇಳಿಕೆ, ಕ್ಷಿಪಣಿ ಪ್ರಯೋಗದ ಬಗ್ಗೆ ಪ್ರಶ್ನಿಸಿ ಬೆವರಿಳಿಸಿದೆ.

    ಸಭೆಯಲ್ಲಿ ಭಯೋತ್ಪಾದಕ ದಾಳಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಕೆಲವು ಸದಸ್ಯರು ನಿರ್ದಿಷ್ಟವಾಗಿ ತಮ್ಮ ಧಾರ್ಮಿಕ ನಂಬಿಕೆಯ ಆಧಾರದ ಮೇಲೆ ಪ್ರವಾಸಿಗರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಹೇಳಿ ಟೀಕಿಸಿತು. ಕೊನೆಗೆ ಭಾರತದೊಂದಿಗೆ ನೀವೇ ಮಾತುಕತೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸೂಚಿಸಲಾಯಿತು.

    ಯಾವೆಲ್ಲ ದೇಶಗಳು ಭಾಗಿ?
    ಚೀನಾ, ಫ್ರಾನ್ಸ್, ರಷ್ಯನ್ ಒಕ್ಕೂಟ, ಯುನೈಟೆಡ್ ಕಿಂಗ್‌ಡಮ್ ಮತ್ತು ಅಮೆರಿಕ ಶಾಶ್ವತ ಸದಸ್ಯ ದೇಶಗಳ ಜೊತೆ ಸಾಮಾನ್ಯ ಸಭೆಯಿಂದ ಎರಡು ವರ್ಷಗಳ ಅವಧಿಗೆ ಆಯ್ಕೆಯಾದ 10 ದೇಶಗಳ ಪ್ರತಿನಿಧಿಗಳು ಭದ್ರತಾ ಸಮಿತಿಯ ಸಭೆಯಲ್ಲಿ ಭಾಗಿಯಾದರು. ಅಲ್ಜೀರಿಯಾ, ಡೆನ್ಮಾರ್ಕ್, ಗ್ರೀಸ್, ಗಯಾನಾ, ಪಾಕಿಸ್ತಾನ, ಪನಾಮ, ಕೊರಿಯಾ ಗಣರಾಜ್ಯ, ಸಿಯೆರಾ ಲಿಯೋನ್, ಸ್ಲೊವೇನಿಯಾ, ಸೊಮಾಲಿಯಾ ಭಾಗಿಯಾಗಿತ್ತು.ಇದನ್ನೂ ಓದಿ: ಕಾಶ್ಮೀರದಲ್ಲಿ ಮದ್ದುಗುಂಡುಗಳ ಸಹಿತ ಇಬ್ಬರು ಉಗ್ರರು ಅರೆಸ್ಟ್‌

  • ಭದ್ರತಾ ಮಂಡಳಿ ಜೊತೆ ಎನ್‍ಎಸ್‍ಜಿಯಲ್ಲೂ ಭಾರತ ಇರಬೇಕು: ಬೈಡನ್

    ಭದ್ರತಾ ಮಂಡಳಿ ಜೊತೆ ಎನ್‍ಎಸ್‍ಜಿಯಲ್ಲೂ ಭಾರತ ಇರಬೇಕು: ಬೈಡನ್

    ವಾಷಿಂಗ್ಟನ್: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ(ಯುಎನ್‍ಎಸ್‍ಸಿ) ಭಾರತಕ್ಕೆ ಖಾಯಂ ಸದಸ್ಯತ್ವ ಕಲ್ಪಿಸಬೇಕು ಎಂಬ ಭಾರತದ ಬೇಡಿಕೆಗೆ ಈಗ ಮತ್ತಷ್ಟು ಬಲ ಬಂದಿದ್ದು ಅಮೆರಿಕ ಮತ್ತೆ ಬೆಂಬಲ ಘೋಷಿಸಿದೆ.

    ಆಗಸ್ಟ್‌ನಲ್ಲಿ ಯುಎನ್‍ಎಸ್‍ಸಿ ಅಧ್ಯಕ್ಷತೆ ವಹಿಸಿದ್ದ ಭಾರತ, ಅಫ್ಘಾನ್ ಬಿಕ್ಕಟ್ಟಿನ ಸಂದರ್ಭದಲ್ಲಿ ಸಮರ್ಥವಾಗಿ ಕೆಲಸ ಮಾಡಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡಬೇಕು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

    ನರೇಂದ್ರ ಮೋದಿಯವರೊಂದಿಗಿನ ಮೊದಲ ವೈಯಕ್ತಿಕ ದ್ವಿಪಕ್ಷೀಯ ಸಭೆಯ ಬಳಿಕ ಶ್ವೇತ ಭವನ ಹೇಳಿಕೆ ಬಿಡುಗಡೆ ಮಾಡಿದೆ. ಭಾರತದ ಬಲವಾದ ನಾಯಕತ್ವವನ್ನು ಶ್ಲಾಘಿಸಿದ ಬೈಡನ್ ಪರಮಾಣು ಪೂರೈಕೆದಾರರ ಗುಂಪಿಗೂ(ಎನ್‍ಎಸ್‍ಜಿ) ಸೇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.

    ಭದ್ರತಾ ಮಂಡಳಿಯ ತುರ್ತು ದೀರ್ಘಾವಧಿಯ ಬಾಕಿ ಇರುವ ಸುಧಾರಣೆಗೆ ಭಾರತ ಮೊದಲಿನಿಂದಲೂ ಆಗ್ರಹಿಸುತ್ತಿದೆ. ಪ್ರಸ್ತುತ ಈಗ ಅಮೆರಿಕ, ಚೀನಾ, ರಷ್ಯಾ, ಇಂಗ್ಲೆಂಡ್, ಫ್ರಾನ್ಸ್ ಸದಸ್ಯ ರಾಷ್ಟ್ರಗಳಾಗಿದ್ದು ವಿಶೇಷ ವಿಟೋ ಅಧಿಕಾರವನ್ನು ಹೊಂದಿದೆ. ಇದನ್ನೂ ಓದಿ: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ 

    ಇಂದು ಜಗತ್ತು ಬದಲಾಗುತ್ತಿರುವ ಹಿನ್ನೆಲೆಯಲ್ಲಿ 5 ರಾಷ್ಟ್ರಗಳ ಜೊತೆ ಬಲಾಢ್ಯ ರಾಷ್ಟ್ರಗಳಿಗೂ ಸದಸ್ಯ ಸ್ಥಾನ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ. ಭಾರತ ಅಲ್ಲದೇ ಜಪಾನ್, ಬ್ರೆಜೆಲ್, ಜರ್ಮನಿಯೂ ತಮಗೆ ಸ್ಥಾನ ನೀಡಬೇಕೆಂದು ಬೇಡಿಕೆ ಇಟ್ಟಿದೆ.