Tag: United Nations

  • ಹಿಂದಿಯನ್ನು ವಿಶ್ವಸಂಸ್ಥೆಯ ಅಧಿಕೃತ ಭಾಷೆಯನ್ನಾಗಿಸಲು ಪ್ರಯತ್ನಿಸಲಾಗುತ್ತಿದೆ: ಎಸ್. ಜೈಶಂಕರ್

    ಹಿಂದಿಯನ್ನು ವಿಶ್ವಸಂಸ್ಥೆಯ ಅಧಿಕೃತ ಭಾಷೆಯನ್ನಾಗಿಸಲು ಪ್ರಯತ್ನಿಸಲಾಗುತ್ತಿದೆ: ಎಸ್. ಜೈಶಂಕರ್

    ನವದೆಹಲಿ: ಹಿಂದಿಯನ್ನು ಅಧಿಕೃತ ಭಾಷೆಯನ್ನಾಗಿ ಗುರುತಿಸಲು ವಿಶ್ವಸಂಸ್ಥೆಯಲ್ಲಿ (United Nations) ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಮತ್ತು ಈ ನಿಟ್ಟಿನಲ್ಲಿ ಪ್ರಗತಿ ಸಾಧಿಸಲಾಗುತ್ತಿದೆ. ಆದರೆ ಇದಕ್ಕಾಗಿ ಕೊಂಚ ಸಮಯ ಬೇಕಾಗುತ್ತದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ (S. Jaishankar) ಗುರುವಾರ ಹೇಳಿದ್ದಾರೆ.

    ದೆಹಲಿಯಲ್ಲಿ (Delhi) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಎಸ್. ಜೈಶಂಕರ್ ಅವರು, ಮುಂದಿನ ವರ್ಷ ಫೆಬ್ರವರಿ 15-17 ರವರೆಗೆ ಫಿಜಿಯ ನಾಡಿನಲ್ಲಿ 12ನೇ ವಿಶ್ವ ಹಿಂದಿ ಸಮ್ಮೇಳನವನ್ನು (World Hindi Conference) ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ರಸ್ತೆ ಅಪಘಾತ – ಮೂವರು ಭಾರತೀಯರು ಸೇರಿದಂತೆ 20 ಮಂದಿ ಸಾವು

    ಯುನೈಟೆಡ್ ನೆಷನ್‍ನ ಅಧಿಕೃತ ಭಾಷೆಗಳಲ್ಲಿ ಹಿಂದಿಯನ್ನು ಸೇರಿಸುವ ಪ್ರಯತ್ನಗಳು ನಡೆಯುತ್ತಿದೆ. ಹಿಂದಿಯನ್ನು ಯುನೆಸ್ಕೋದಲ್ಲಿ ಈಗಾಗಲೇ ಬಳಸಲಾಗುತ್ತಿದೆ ಎಂಬ ವಿಚಾರ ಎಲ್ಲರಿಗೂ ತಿಳಿದಿದೆ. ಯುನೆಸ್ಕೋ ಪ್ರಧಾನ ಕಛೇರಿಯಲ್ಲಿ ಹಿಂದಿ ಭಾಷೆ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ (ಎಂಒಯು) ಒಪ್ಪಂದ ಮಾಡಿಕೊಂಡಿದ್ದೇವೆ. ಸೋಶಿಯಲ್ ಮೀಡಿಯಾದ ಮತ್ತು ಸುದ್ದಿಪತ್ರಗಳಲ್ಲಿ ಹಿಂದಿಯನ್ನು ಈಗಾಗಲೇ ಬಳಸಲಾಗುತ್ತಿದೆ. ಇದನ್ನು ವಿಸ್ತರಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಯುನೈಟೆಡ್ ನೆಷನ್‍ನ ಪ್ರಕ್ರಿಯೆಯಲ್ಲಿ ಭಾಷೆಯನ್ನು ಪರಿಚಯಿಸುವುದು ಅಷ್ಟು ಸುಲಭವಲ್ಲ ಎಂದಿದ್ದಾರೆ.

    ಇಂಗ್ಲಿಷ್, ರಷ್ಯನ್, ಸ್ಪ್ಯಾನಿಷ್, ಚೈನೀಸ್, ಅರೇಬಿಕ್ ಮತ್ತು ಫ್ರೆಂಚ್ ಎಂಬ ಆರು ಅಧಿಕೃತ ಭಾಷೆಗಳನ್ನು ಯುಎನ್ ಹೊಂದಿದೆ. ಇದನ್ನೂ ಓದಿ: ‘ಹೆಂಡ್ತಿ ಮಕ್ಳನ್ನು ಬಿಟ್ ಬಂದಿದ್ದೀನಿ, ಸೇಫ್ ಆಗಿ ಮನೆಗೆ ಹೋಗ್ತೀನಾ?’: ಗಂಧದ ಗುಡಿಯಲ್ಲಿ ಕಣ್ಣೀರು ತರಿಸುತ್ತೆ ಅಪ್ಪು ಡೈಲಾಗ್

    Live Tv
    [brid partner=56869869 player=32851 video=960834 autoplay=true]

  • ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿಗೆ ಏಷ್ಯಾದಿಂದಲೇ ಮೊದಲು, ಕೋಲಾರದ ಮಹಿಳೆ ನೇಮಕ

    ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿಗೆ ಏಷ್ಯಾದಿಂದಲೇ ಮೊದಲು, ಕೋಲಾರದ ಮಹಿಳೆ ನೇಮಕ

    ಕೋಲಾರ: ವಿಶ್ವಸಂಸ್ಥೆಯ (United Nations) ಮಾನವ ಹಕ್ಕು ಸಮಿತಿ ಯುಎನ್‌ಹೆಚ್‌ಆರ್‌ಸಿಗೆ (Special Repporeteur) ಏಷ್ಯಾದಿಂದಲೇ ಪ್ರಥಮ ಬಾರಿಗೆ ಕೋಲಾರ ಜಿಲ್ಲೆಯ ಮಹಿಳೆ ಡಾ.ಕೆ.ಪಿ ಅಶ್ವಿನಿ (Dr. KP Ashwini) ನೇಮಕವಾಗಿದ್ದಾರೆ.

    ಕೋಲಾರ (Kolar) ತಾಲೂಕಿನ ಕಸಬಾ ಕುರುಬರಹಳ್ಳಿ ಗ್ರಾಮದ ವಿ. ಪ್ರಸನ್ನ ಕುಮಾರ್ ಹಾಗೂ ಜಯಮ್ಮ ದಂಪತಿಯ ಜೇಷ್ಠ ಪುತ್ರಿ ಕೆ.ಪಿ ಅಶ್ವಿನಿ ಯವರು ತಮ್ಮ ಪದವಿ ವಿಧ್ಯಾಭ್ಯಾಸವನ್ನು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜು, ಸ್ನಾತಕೋತ್ತರ ಪದವಿಯನ್ನು ಸೇಂಟ್ ಜೋಸೆಫ್ ಕಾಲೇಜು ಹಾಗೂ ಎಂ.ಪಿಲ್, ಪಿಹೆಚ್.ಡಿ ಪದವಿಯನ್ನು ದೆಹಲಿಯ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಪಡೆದಿದ್ದಾರೆ.

    ಅಶ್ವಿನಿ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಕೆಲ ಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದು, ನಂತರ ಅಮೃಸ್ಟಿ ಇಂಟರ್‌ನ್ಯಾಷನಲ್ ಸಂಸ್ಥೆಯಲ್ಲಿ ಸೇವೆ ಮಾಡುತ್ತಾ ಒಡಿಸ್ಸಾ ಮತ್ತು ಛತ್ತೀಸ್‌ಗಢ ರಾಜ್ಯಗಳ ಆದಿವಾಸಿಗಳ ಪ್ರದೇಶಗಳಲ್ಲಿ ಗಣಿಗಾರಿಕೆಯಿಂದ ಅವರ ಮೇಲೆ ಬೀರಿರುವ ಪರಿಣಾಮಗಳ ಬಗ್ಗೆ ವಿಶೇಷ ಅಧ್ಯಯನ ಮಾಡಿದ್ದಾರೆ. ಇದನ್ನೂ ಓದಿ: ತಕ್ಷಣ ಉಕ್ರೇನ್‌ನಿಂದ ಹೊರಟುಬಿಡಿ – ವಿದ್ಯಾರ್ಥಿಗಳು, ನಾಗರಿಕರಿಗೆ ಭಾರತ ತುರ್ತು ಸಲಹೆ

    ಕಳೆದ 4 ವರ್ಷಗಳಿಂದ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಅಶ್ವಿನಿ, ಮೂಲತಃ ಅಂಬೇಡ್ಕರ್‌ವಾದಿಯಾಗಿದ್ದು, ದಲಿತ ಚಳುವಳಿಗಳಲ್ಲಿ ಕರ್ನಾಟಕ ಮತ್ತು ವಿದೇಶಗಳಲ್ಲಿ ಹೋರಾಟದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದಾರೆ.

    ಪ್ರಸ್ತುತ ಇವರು ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿ ಯುಎನ್‌ಹೆಚ್‌ಆರ್‌ಸಿ (Special Repporeteur)ಗೆ ನೇಮಕವಾಗಿದ್ದಾರೆ. ಜಿನೀವಾ ಮೂಲದ 47 ಸದಸ್ಯರ ವಿಶ್ವಸಂಸ್ಥೆಯ ಮಾನವ ಹಕ್ಕು ಸಂಸ್ಥೆ, ಡಾ. ಅಶ್ವಿನಿ ಅವರ ನೇಮಕಾತಿಯನ್ನು ಅನುಮೋದಿಸಿದೆ. ಇದೀಗ ಅಶ್ವಿನಿ ವರ್ಣಬೇಧ, ಕೈನೋಫೋಬಿಯಾ ಅಸಹಿಷ್ಣುತೆಗೆ ಸಂಬಂಧಿಸಿದ ವಿಷಯಗಳನ್ನು ನಿರ್ವಹಿಸಲಿದ್ದಾರೆ.

    ಕೋಲಾರ ಜಿಲ್ಲೆಯ ನಿವಾಸಿ ಡಾ.ಕೆ.ಪಿ ಅಶ್ವಿನಿ ಅವರು ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿ ಯುಎನ್‌ಹೆಚ್‌ಆರ್‌ಸಿಗೆ ನೇಮಕವಾಗಿರುವುದು ಕೋಲಾರ ಜಿಲ್ಲೆಯ ಜನತೆಗೆ ಹೆಮ್ಮೆಯ ವಿಷಯವಾಗಿದೆ. ಇವರು ಇನ್ನಷ್ಟು ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಲಿ ಎಂದು ಕೋಲಾರ ಜಿಲ್ಲೆಯ ಜನತೆ ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ದೀಪಾವಳಿಯಲ್ಲಿ ನಿಷೇಧಿತ ಪಟಾಕಿ ಸಿಡಿಸಿದ್ರೆ 6 ತಿಂಗಳು ಜೈಲು ಶಿಕ್ಷೆ

    Live Tv
    [brid partner=56869869 player=32851 video=960834 autoplay=true]

  • ರಷ್ಯಾ-ಉಕ್ರೇನ್ ನಡುವೆ ಶಾಂತಿ ಸ್ಥಾಪನೆಗೆ ಮೋದಿಯನ್ನೊಳಗೊಂಡ ಸಮಿತಿ ರಚಿಸಿ: ಮೆಕ್ಸಿಕೋ

    ರಷ್ಯಾ-ಉಕ್ರೇನ್ ನಡುವೆ ಶಾಂತಿ ಸ್ಥಾಪನೆಗೆ ಮೋದಿಯನ್ನೊಳಗೊಂಡ ಸಮಿತಿ ರಚಿಸಿ: ಮೆಕ್ಸಿಕೋ

    ವಿಶ್ವಸಂಸ್ಥೆ: ರಷ್ಯಾ ಮತ್ತು ಉಕ್ರೇನ್ ನಡುವೆ (Russia Ukraine War) ಶಾಂತಿಯನ್ನು ಸ್ಥಾಪಿಸಲು ಮಧ್ಯಸ್ಥಿಕೆ ವಹಿಸಲು ಭಾರತದ (India) ಪ್ರಧಾನಿ ನರೇಂದ್ರ ಮೋದಿ (Narendra Modi), ಪೋಪ್ ಫ್ರಾನ್ಸಿಸ್ ಮತ್ತು ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಬೇಕು ಎಂದು ಮೆಕ್ಸಿಕೋ ವಿಶ್ವಸಂಸ್ಥೆಯಲ್ಲಿ (United Nations) ಪ್ರಸ್ತಾಪಿಸಿದೆ.

    ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸೆಕ್ಯುರಿಟಿ ಕೌನ್ಸಿಲ್ ಚರ್ಚೆಯಲ್ಲಿ ಭಾಗವಹಿಸಿದ ಮೆಕ್ಸಿಕೊದ ವಿದೇಶಾಂಗ ಸಚಿವ ಮಾರ್ಸೆಲೊ ಲೂಯಿಸ್ ಎಬ್ರಾಡ್ ಕ್ಯಾಸೌಬಾನ್ ಅವರು ಈ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ.

     

    ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಉಜ್ಬೇಕಿಸ್ತಾನ್‌ನ ಸಮರ್‌ಕಂಡ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ 22 ನೇ ಶೃಗಸಭೆಯಲ್ಲಿ ಭೇಟಿಯಾಗಿ, ಇದು ಯುದ್ಧದ ಸಮಯವಲ್ಲ ಎಂದು ತಿಳಿಹೇಳಿದ್ದಾರೆ. ಇದರ ಬೆನ್ನಲ್ಲೇ ಮೆಕ್ಸಿಕೋ ಈ ಪ್ರಸ್ತಾಪವನ್ನು ಮುಂದಿಟ್ಟಿದೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧ: ತಕ್ಷಣವೇ ಅಂತ್ಯಗೊಳಿಸಲು ವಿಶ್ವಸಂಸ್ಥೆಯಲ್ಲಿ ಭಾರತ ಕರೆ

    ನರೇಂದ್ರ ಮೋದಿ ಪುಟಿನ್ ಅವರಿಗೆ ಇದು ಯುದ್ಧದ ಸಮಯವಲ್ಲ ಎಂದು ಹೇಳಿರುವುದಕ್ಕೆ ಅಮೆರಿಕ, ಫ್ರಾನ್ಸ್, ಬ್ರಿಟನ್ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳು ಮೆಚ್ಚುಗೆ ವ್ಯಕ್ತಪಡಿಸಿವೆ.

    ಇದೀಗ ಉಕ್ರೇನ್ ಹಾಗೂ ರಷ್ಯಾ ನಡುವೆ ಶಾಂತಿಯನ್ನು ಸ್ಥಾಪಿಸಲು ನಾವು ಅತ್ಯುತ್ತಮವಾದ ಪ್ರಯತ್ನವನ್ನು ಮಾಡುವುದು ಮುಖ್ಯವಾಗಿದೆ. ಇದಕ್ಕಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ, ಪೋಪ್ ಫ್ರಾನ್ಸಿಸ್ ಸೇರಿದಂತೆ ಇತರ ರಾಷ್ಟ್ರಗಳ ಮುಖ್ಯಸ್ಥರನ್ನು ಒಟ್ಟುಗೂಡಿಸಿ ಸಮಿತಿಯನ್ನು ಸ್ಥಾಪಿಸಬೇಕು ಎಂದು ಕ್ಯಾಸೌಬಾನ್ ವಿಶ್ವಸಂಸ್ಥೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಪತ್ರಕರ್ತೆ ಹಿಜಬ್ ಧರಿಸದ್ದಕ್ಕೆ ಸಂದರ್ಶನವನ್ನೇ ರದ್ದುಗೊಳಿಸಿದ ಇರಾನ್ ಅಧ್ಯಕ್ಷ

    ಮಾತುಕತೆ, ರಾಜತಾಂತ್ರಿಕತೆ ಹಾಗೂ ಪರಿಣಾಮಕಾರಿ ರಾಜಕೀಯ ಮಾರ್ಗಗಳನ್ನು ನಿರ್ಮಿಸುವುದರಿಂದ ಮಾತ್ರವೇ ಶಾಂತಿಯನ್ನು ಸ್ಥಾಪಿಸಬಹುದು ಎಂದು ಮೆಕ್ಸಿಕನ್ ವಿದೇಶಾಂಗ ಸಚಿವ ವಿಶ್ವಸಂಸ್ಥೆಯಲ್ಲಿ ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ರಷ್ಯಾ-ಉಕ್ರೇನ್ ಯುದ್ಧ: ತಕ್ಷಣವೇ ಅಂತ್ಯಗೊಳಿಸಲು ವಿಶ್ವಸಂಸ್ಥೆಯಲ್ಲಿ ಭಾರತ ಕರೆ

    ರಷ್ಯಾ-ಉಕ್ರೇನ್ ಯುದ್ಧ: ತಕ್ಷಣವೇ ಅಂತ್ಯಗೊಳಿಸಲು ವಿಶ್ವಸಂಸ್ಥೆಯಲ್ಲಿ ಭಾರತ ಕರೆ

    ವಿಶ್ವಸಂಸ್ಥೆ: ರಷ್ಯಾ (Russia) ಉಕ್ರೇನ್ (Ukraine) ಮೇಲೆ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ತಕ್ಷಣವೇ ಕೊನೆಗೊಳಿಸಿ ಶಾಂತಿಯುತ ಮಾತುಕತೆಗೆ ಮರಳುವುದು ಇದೀಗ ಅಗತ್ಯವಾಗಿದೆ ಎಂದು ಭಾರತ ವಿಶ್ವಸಂಸ್ಥೆಯಲ್ಲಿ (UN)  ತಿಳಿಸಿದೆ.

    ರಷ್ಯಾ ಉಕ್ರೇನ್ ಮೇಲೆ ಪರಮಾಣು ಶಸ್ತ್ರಾಸ್ತ್ರವನ್ನು ಬಳಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತ, ಈಗಾಗಲೇ ನರೇಂದ್ರ ಮೋದಿಯವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಇದು ಯುದ್ಧದ ಸಮಯವಲ್ಲ ಎಂದು ಹೇಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ (S Jaishankar) ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ದೇಶದ ಹೊರಗೆ ಎಷ್ಟು ಆಸ್ತಿ ಮಾಡಿದ್ದಾರೆ?: ಪಾಕ್ ಮಾಜಿ ಪ್ರಧಾನಿ

    ರಷ್ಯಾ ಉಕ್ರೇನ್‌ನ ಸಂಘರ್ಷ ಇಡೀ ವಿಶ್ವಕ್ಕೆ ಆಳವಾದ ಕಾಳಜಿಯ ವಿಷಯವಾಗಿದೆ. ಮುಖ್ಯವಾಗಿ ಪರಮಾಣು ದಾಳಿಯ ಸಾಧ್ಯತೆ ಭವಿಷ್ಯದ ದೃಷ್ಟಿಕೋನಕ್ಕೆ ಇನ್ನಷ್ಟು ಭೀತಿಯ ಸಂಗತಿಯಾಗಿದೆ. ಆದರೆ ಭಾರತ ಇದನ್ನು ಖಂಡಿಸಿಲ್ಲ. ಇದನ್ನು ಈ ಕೂಡಲೇ ರಾಜತಾಂತ್ರಿಕತೆ ಹಾಗೂ ಮಾತುಕತೆಯ ಮೂಲಕ ಪರಿಹರಿಸಬೇಕು ಎಂಬುದೇ ಭಾರತದ ಉದ್ದೇಶ ಎಂದು ತಿಳಿಸಿದರು. ಇದನ್ನೂ ಓದಿ: 18-65 ವಯಸ್ಸಿನ ಪುರುಷರಿಗೆ ಟಿಕೆಟ್ ಮಾರಾಟ ನಿಲ್ಲಿಸಲು ರಷ್ಯಾದ ಏರ್‌ಲೈನ್ಸ್ ಆದೇಶ

    Live Tv
    [brid partner=56869869 player=32851 video=960834 autoplay=true]

  • ಫಸ್ಟ್‌ ಟೈಂ ರಷ್ಯಾ ವಿರುದ್ಧ ಮತ ಚಲಾಯಿಸಿದ ಭಾರತ

    ಫಸ್ಟ್‌ ಟೈಂ ರಷ್ಯಾ ವಿರುದ್ಧ ಮತ ಚಲಾಯಿಸಿದ ಭಾರತ

    ನ್ಯೂಯಾರ್ಕ್: ಇದೇ ಮೊದಲ ಬಾರಿಗೆ ಭಾರತ ರಷ್ಯಾ ವಿರುದ್ಧ ವಿಶ್ವಸಂಸ್ಥೆಯಲ್ಲಿ ಮತದಾನ ಮಾಡಿದೆ.

    ಉಕ್ರೇನ್‌ನ 31ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಉಕ್ರೇನ್-ರಷ್ಯಾ ಯುದ್ಧಕ್ಕೆ 6 ತಿಂಗಳು ತುಂಬಿದ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಸಮಿತಿ ಸಭೆ ಆಯೋಜಿಸಿತ್ತು.

    ಒಟ್ಟು 15 ಸದಸ್ಯ ದೇಶಗಳ ಪೈಕಿ ಚೀನಾ ಮತದಾನಕ್ಕೆ ಗೈರಾದರೆ, ರಷ್ಯಾ ವಿಟೋ ಚಲಾಯಿಸಿತು. ಭಾರತ ಸೇರಿ 13 ದೇಶಗಳು ಉಕ್ರೇನ್ ಪರ ಮತ ಚಲಾಯಿಸಿದವು.  ಇದನ್ನೂ ಓದಿ: ನಮಗೆ ನಿಮ್ಮ ಸಲಹೆ ಬೇಡ: ನೆದರ್ಲೆಂಡ್‌ಗೆ ತಿರುಗೇಟು ನೀಡಿದ ಭಾರತ

    ಸಭೆ ಪ್ರಾರಂಭವಾಗುತ್ತಿದ್ದಂತೆ, ವಿಶ್ವಸಂಸ್ಥೆಯ ರಷ್ಯಾದ ರಾಯಭಾರಿ ವಾಸಿಲಿ ಎ ನೆಬೆಂಜಿಯಾ ಅವರು ವೀಡಿಯೊ ಟೆಲಿ-ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಉಕ್ರೇನಿಯನ್ ಅಧ್ಯಕ್ಷರ ಭಾಗವಹಿಸುವಿಕೆಯ ಬಗ್ಗೆ ಕಾರ್ಯವಿಧಾನದ ಮತವನ್ನು ಕೇಳಿದರು. ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಲು ಭಾರತ ಬೆಂಬಲ ಸೂಚಿಸಿತು.

    ಈ ಹಿಂದೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಹಾಗೂ ಸಾಮಾನ್ಯ ಸಭೆಯಲ್ಲಿ ರಷ್ಯಾ ವಿರುದ್ಧದ ನಿರ್ಣಯದಿಂದ ಭಾರತ ದೂರ ಉಳಿದಿತ್ತು. ಮಾತುಕತೆ ಮೂಲಕ ಭಿನ್ನಾಭಿಪ್ರಾಯ ಸರಿಪಡಿಸಿಕೊಳ್ಳುವಂತೆ ಸಲಹೆ ನೀಡಿತ್ತು. ಇದನ್ನೂ ಓದಿ: ಕೊರೊನಾ ಲಸಿಕೆಯಂತೆ ಗೋಧಿ ರಫ್ತು ಮಾಡಲಾಗುದಿಲ್ಲ: ಭಾರತ

    ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಅಮೆರಿಕ, ಇಂಗ್ಲೆಂಡ್‌, ರಷ್ಯಾ, ಚೀನಾ, ಫ್ರಾನ್ಸ್‌ ಖಾಯಂ ದೇಶಗಳಾಗಿದ್ದರೆ 10 ರಾಷ್ಟ್ರಗಳು 2 ವರ್ಷಗಳ ಕಾಲ ಶಾಶ್ವತವಲ್ಲದ ಸದಸ್ಯ ರಾಷ್ಟ್ರವಾಗಿರುತ್ತದೆ. ಶಾಶ್ವತವಲ್ಲದ ಸದಸ್ಯ ರಾಷ್ಟ್ರವಾಗಿರುವ ಭಾರತದ ಅಧಿಕಾರಾವಧಿಯು 2021ರ ಜನವರಿ 1ರಿಂದ ಆರಂಭವಾಗಿದೆ. ಈ ವರ್ಷದ ಡಿಸೆಂಬರ್‌ನಲ್ಲಿ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನ ಭಾರತಕ್ಕೆ ಸಿಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಅಂತಾರಾಷ್ಟ್ರೀಯ ಒಪ್ಪಿಗೆ ಸಿಗಬೇಕಾದರೆ ಮಾನವ ಹಕ್ಕು ಗೌರವಿಸಿ: ತಾಲಿಬಾನ್‍ಗೆ UN ಖಡಕ್ ಎಚ್ಚರಿಕೆ

    ಅಂತಾರಾಷ್ಟ್ರೀಯ ಒಪ್ಪಿಗೆ ಸಿಗಬೇಕಾದರೆ ಮಾನವ ಹಕ್ಕು ಗೌರವಿಸಿ: ತಾಲಿಬಾನ್‍ಗೆ UN ಖಡಕ್ ಎಚ್ಚರಿಕೆ

    ಕಾಬೂಲ್: ಅಂತಾರಾಷ್ಟ್ರೀಯ ಒಪ್ಪಿಗೆ ಬಯಸುವ ತಾಲಿಬಾನ್ ಮೊದಲು ತಮ್ಮ ದೇಶದ ಜನರ ಮಾನವ ಹಕ್ಕುಗಳನ್ನು ಗೌರವಿಸಿಬೇಕು ಎಂದು ವಿಶ್ವಸಂಸ್ಥೆ ತಾಲಿಬಾನ್‍ಗೆ ಸಂದೇಶವನ್ನು ನೀಡಿದೆ.

    ತಾಲಿಬಾನ್ ಸರ್ಕಾರ ಅಂತರಾಷ್ಟ್ರೀಯ ಒಪ್ಪಿಗೆ ಪಡೆಯಬೇಕು ಎಂದು ವಿಶ್ವಸಂಸ್ಥೆಗೆ ಮನವಿ ಮಾಡಿತ್ತು. ಯುಎಸ್ ಮಿಷನ್ ಮುಖ್ಯಸ್ಥ ಇಯಾನ್ ಮೆಕ್ಕಾರಿ ಈ ಕುರಿತು ಟ್ವಿಟ್ಟರ್‍ನಲ್ಲಿ ಉತ್ತರ ಕೊಟ್ಟಿದ್ದು, ಕಳೆದ ವರ್ಷ ದೋಹಾದಲ್ಲಿ, ನಾವು ನಿರ್ಣಾಯಕ ಸಮಸ್ಯೆಗಳನ್ನು ಪರಿಹರಿಸಲು ತಾಲಿಬಾನ್‍ನೊಂದಿಗೆ ಸಂವಾದವನ್ನು ನಡೆಸಿದ್ದೇವೆ. ನಾವು ಯುಎನ್ ನಾಗರಿಕರು ಮತ್ತು ಅಫ್ಘಾನ್ ಜನರೊಂದಿಗೆ ವ್ಯಾಪಕವಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಹಲವು ಸವತ್ತುಗಳನ್ನು ಒದಗಿಸಿದ್ದೇವೆ. ನಾವು ಸಹಾಯ ಮಾಡಲು ಸಾಧ್ಯವಾಗಿದೆ ಎಂದು ನನಗೆ ಸಂತೋಷವಾಗಿದೆ. ಆದರೆ ಅಫ್ಘಾನಿಸ್ತಾನದಲ್ಲಿ ನಾವು ಇನ್ನೂ ಹಲವು ಸವಾಲುಗಳನ್ನು ಎದುರಿಸುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮಂಕಿಪಾಕ್ಸ್‌ಗೆ ಭಾರತದಲ್ಲಿ ಮೊದಲ ಬಲಿ

    ಅಂತಾರಾಷ್ಟ್ರೀಯ ಪಾಲುದಾರರು ಮತ್ತು ಸಮಾನಮನಸ್ಕ ಸಮುದಾಯದ ಅಸಾಧಾರಣ ಬೆಂಬಲವನ್ನು ನಾನು ಪ್ರಶಂಸಿಸುತ್ತೇನೆ. ನಾವು ಒಟ್ಟಾಗಿ ಒಂದು ಸ್ಪಷ್ಟ ಸಂದೇಶವನ್ನು ಕಳುಹಿಸಿದ್ದೇವೆ. ತಾಲಿಬಾನ್ ಅಂತರಾಷ್ಟ್ರೀಯ ಸಮುದಾಯದ ಅಂಗೀಕಾರವನ್ನು ಪಡೆಯಲು ಆಶಿಸಿದರೆ, ಅವರು ಎಲ್ಲ ಆಫ್ಘನ್ ಜನರ ಅಭಿಪ್ರಾಯಗಳನ್ನು ಕೇಳಬೇಕು ಮತ್ತು ಗೌರವಿಸಬೇಕು. ಅದರ ಜೊತೆಗೆ ಮಾನವ ಹಕ್ಕುಗಳನ್ನು ಗೌರವಿಸಬೇಕು ಎಂದು ಸಂದೇಶವನ್ನು ಕಳುಹಿಸಿದರು.

    ಬಾಲಕಿಯರಿಗೆ ಮಾಧ್ಯಮಿಕ ಶಾಲೆಗಳಿಗೆ ಪ್ರವೇಶ ನೀಡಲು ತಾಲಿಬಾನ್‍ನ ನಿರಂತರವಾಗಿ ನಿರಾಕರಣೆ ಮಾಡುತ್ತಿದೆ. ಅಲ್ಲದೇ ಮಾಧ್ಯಮ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ತೆಗೆದುಕೊಂಡಿದೆ. ಮಹಿಳೆಯರ ಹಕ್ಕುಗಳ ಮೇಲೆ ಸ್ವೀಕಾರಾರ್ಹವಲ್ಲದ ನಿರ್ಬಂಧಗಳು ಸೇರಿದಂತೆ ಮಾನವ ಹಕ್ಕುಗಳ ಉಲ್ಲಂಘನೆಯ ವರದಿಗಳ ಬಗ್ಗೆ ಅವರು ನಿರಾಶೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಸಿಕ್ಕ-ಸಿಕ್ಕವರ ಮೇಲೆ ಚಾಕು ಇರಿದು ಪರಾರಿಯಾಗಿದ್ದವ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

  • 2023ರ ವೇಳೆ ಜನಸಂಖ್ಯೆಯಲ್ಲಿ ಭಾರತ ಚೀನಾವನ್ನು ಮೀರಿಸಲಿದೆ: ವಿಶ್ವಸಂಸ್ಥೆ

    2023ರ ವೇಳೆ ಜನಸಂಖ್ಯೆಯಲ್ಲಿ ಭಾರತ ಚೀನಾವನ್ನು ಮೀರಿಸಲಿದೆ: ವಿಶ್ವಸಂಸ್ಥೆ

    ನ್ಯೂಯಾರ್ಕ್: ಮುಂದಿನ ವರ್ಷದಲ್ಲಿ ಭಾರತ ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕಲಿದೆ. 2022ರ ನವೆಂಬರ್ ವೇಳೆಗೆ ವಿಶ್ವದ ಜನಸಂಖ್ಯೆ 8 ಶತಕೋಟಿ ತಲುಪಲಿದೆ ಎಂದು ವಿಶ್ವಸಂಸ್ಥೆ ಸೋಮವಾರ ವರದಿಯಲ್ಲಿ ತಿಳಿಸಿದೆ.

    ಜಾಗತಿಕ ಜನಸಂಖ್ಯೆ 1950 ರಿಂದ ನಿಧಾನಗತಿಯಲ್ಲಿ ಬೆಳೆಯುತ್ತಿದೆ. 2030ರಲ್ಲಿ ವಿಶ್ವದ ಜನಸಂಖ್ಯೆ 8.5 ಶತಕೋಟಿ ಹಾಗೂ 2050ರ ವೇಳೆಗೆ 9.7 ಶತಕೋಟಿಗೆ ಏರಿಕೆಯಾಗಬಹುದು ಎಂದು ವಿಶ್ವಸಂಸ್ಥೆ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಕೆಆರ್‌ಎಸ್‌ನಿಂದ 50 ಸಾವಿರ ಕ್ಯೂಸೆಕ್‌ ನೀರು ಹೊರಕ್ಕೆ – ರಂಗನತಿಟ್ಟು ಪಕ್ಷಿಧಾಮದ ನಡುಗಡ್ಡೆಗಳು ಮುಳಗಡೆ

    2080ರ ವೇಳೆಗೆ ಜನಸಂಖ್ಯೆ 10.4 ಶತಕೋಟಿಗೆ ಏರಿಕೆಯಾಗಿ, 2100ರ ವರೆಗೆ ಈ ಸಂಖ್ಯೆ ಉಳಿದುಕೊಳ್ಳಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಸಚಿವರಾಗಿರುವ ಪುಣ್ಯಾತ್ಮರು ಸರಿಯಾಗಿ ಕೆಲಸ ಮಾಡಲಿ: ಯತ್ನಾಳ್ ಟಾಂಗ್

    2023ರಲ್ಲಿ ಭಾರತ ಜನಸಂಖ್ಯೆಯಲ್ಲಿ ಚೀನಾವನ್ನು ಮೀರಿಸಲಿದೆ. ಸದ್ಯದ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶಗಳೆಂದರೆ ಚೀನಾ ಹಾಗೂ ಭಾರತ. ಚೀನಾ ಸದ್ಯ 2.3 ಶತಕೋಟಿ ಜನಸಂಖ್ಯೆ ಹೊಂದಿದ್ದು, ಜಾಗತಿಕ ಜನಸಂಖ್ಯೆಯ ಶೇ.29 ರಷ್ಟು ಪಾಲನ್ನು ಹೊಂದಿದೆ. ಭಾರತ 2.3 ಶತಕೋಟಿ ಜನಸಂಖ್ಯೆ ಹೊಂದಿದ್ದು, ವಿಶ್ವದ ಒಟ್ಟು ಜನಸಂಖ್ಯೆಯ ಶೇ.26 ರಷ್ಟು ಪಾಲನ್ನು ಹೊಂದಿದೆ ಎಂದು ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಪತ್ರಕರ್ತರು ಏನೇ ಬರೆದ್ರೂ ಅರೆಸ್ಟ್ ಮಾಡುವಂತಿಲ್ಲ: ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ವಕ್ತಾರ

    ಪತ್ರಕರ್ತರು ಏನೇ ಬರೆದ್ರೂ ಅರೆಸ್ಟ್ ಮಾಡುವಂತಿಲ್ಲ: ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ವಕ್ತಾರ

    ವಾಷಿಂಗ್ಟನ್: ಪತ್ರಕರ್ತರು ಏನು ಬರೆಯುತ್ತಾರೆ, ಅವರು ಏನು ಟ್ವೀಟ್ ಮಾಡುತ್ತಾರೆ ಈ ಕಾರಣಕ್ಕೆ ಅವರನ್ನು ಜೈಲಿಗೆ ಹಾಕಬಾರದು ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರ ವಕ್ತಾರರು ಹೇಳಿದ್ದಾರೆ.

    ಭಾರತದಲ್ಲಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಬಂಧನವನ್ನು ಉಲ್ಲೇಖಿಸಿ ಆಂಟೋನಿಯೊ ವಕ್ತಾರ ಸ್ಟೀಫನ್ ಡುಜಾರಿಕ್ ಪ್ರತಿಕ್ರಿಯಿಸಿ, ಮೊದಲನೆಯದಾಗಿ ನಾನು ಪ್ರಪಂಚದಾದ್ಯಂತ ಯಾವುದೇ ಸ್ಥಳದಲ್ಲಿ ಜನರು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ನೀಡುವುದು ಬಹಳ ಮುಖ್ಯ ಎಂದು ಭಾವಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: AltNews ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್ ಅರೆಸ್ಟ್‌

    ಪತ್ರಕರ್ತರು ಮುಕ್ತವಾಗಿ ಮತ್ತು ಯಾವುದೇ ಕಿರುಕುಳ, ಬೆದರಿಕೆಯಿಲ್ಲದೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ಮಾಡಿಕೊಡಬೇಕು. ಪತ್ರಕರ್ತರು ಏನು ಬರೆಯುತ್ತಾರೆ, ಅವರು ಏನು ಟ್ವೀಟ್ ಮಾಡುತ್ತಾರೆ ಎಂದು ಅವರನ್ನು ಜೈಲಿಗೆ ಹಾಕಬಾರದು. ಪತ್ರಕರ್ತ ಮೊಹಮ್ಮದ್ ಜುಬೇರ್ ಬಂಧನವು ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ ಬಂದಂತಾಗಿದೆ ಎಂದು ಹೇಳಿದರು.

    ಫ್ಯಾಕ್ಟ್ ಚೆಕ್ ವೆಬ್‍ಸೈಟ್ AltNews ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್ ಅವರನ್ನು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಮತ್ತು ದ್ವೇಷವನ್ನು ಉತ್ತೇಜಿಸುವ ಆರೋಪದ ಅಡಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: 3 ದಿನದ ಮಗುವನ್ನು ಆಸ್ಪತ್ರೆಯಿಂದ ಹೊತ್ತೊಯ್ದು ಕಚ್ಚಿ ಕೊಂದ ಬೀದಿನಾಯಿ

    Live Tv

  • ವಿಶ್ವವೇ ಆಹಾರ ಕೊರತೆ ಎದುರಿಸುತ್ತಿದೆ, ಜಗತ್ತಿಗೆ ಸಂಕಷ್ಟ ಎದುರಾಗಲಿದೆ: ವಿಶ್ವಸಂಸ್ಥೆ ಎಚ್ಚರಿಕೆ

    ವಿಶ್ವವೇ ಆಹಾರ ಕೊರತೆ ಎದುರಿಸುತ್ತಿದೆ, ಜಗತ್ತಿಗೆ ಸಂಕಷ್ಟ ಎದುರಾಗಲಿದೆ: ವಿಶ್ವಸಂಸ್ಥೆ ಎಚ್ಚರಿಕೆ

    ಬರ್ಲಿನ್: ಇಡೀ ವಿಶ್ವದಾದ್ಯಂತ ಆಹಾರದ ಕೊರತೆ ಎದುರಾಗುತ್ತಿದ್ದು, ಇದರಿಂದ ಜಗತ್ತು ಸಂಕಷ್ಟ ಎದುರಿಸಲಿದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೋ ಗುಟೆರಸ್ ಎಚ್ಚರಿಸಿದ್ದಾರೆ.

    ಹವಾಮಾನ ವೈಪರೀತ್ಯದಿಂದಾಗಿ ಜಗತ್ತು ಎದುರಿಸುತ್ತಿರುವ ಸಮಸ್ಯೆ, ಈಗ ಉಕ್ರೇನ್ ಯುದ್ಧದಿಂದಾಗಿ ಮತ್ತಷ್ಟು ತೀವ್ರಗೊಂಡಿದೆ. ಕೋವಿಡ್ ಪಿಡುಗು ಸಹ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ಈಗಾಗಲೇ 10 ಕೋಟಿ ಜನರ ಮೇಲೆ ಅಹಾರ ಕೊರತೆಯ ಪರಿಣಾಮ ಬೀರಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಆಫ್ಘನ್‌ನಲ್ಲಿ ಭೂಕಂಪನ: ಸಾವಿನ ಸಂಖ್ಯೆ 1,150ಕ್ಕೆ ಏರಿಕೆ, 3 ಸಾವಿರ ಮನೆಗಳು ನಾಶ

    WHEAT EXPORT

    2022ರಲ್ಲಿ ಬಹುಕ್ಷಾಮಗಳು ಅಪ್ಪಳಿಸುವ ಸಾಧ್ಯತೆಗಳಿವೆ. ಈ ವರ್ಷದಲ್ಲಾಗಿರುವ ಆಹಾರ ಸಮಸ್ಯೆಯಿಂದಾಗಿ ಮುಂದಿನ ವರ್ಷದಲ್ಲೂ ಜಾಗತಿಕ ಮಟ್ಟದಲ್ಲಿ ಆಹಾರದ ಕೊರತೆಯಾಗಬಹುದು. ಸಾಮಾಜಿಕ, ಆರ್ಥಿಕತೆಯ ಮೇಲೂ ಇದರ ಪರಿಣಾಮ ಬೀರಬಹುದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಪಾಸ್‍ಪೋರ್ಟ್ ಸುಟ್ಟುಹಾಕಿದ್ದಕ್ಕೆ ಪತ್ನಿ ಕತ್ತು ಸೀಳಿದ – ಆಕೆ ಕೈ ಹಿಡಿದು ಇಷ್ಟವಾದ ಹಾಡು ನುಡಿಸಿದ ಪಾಗಲ್

    ಇದರೊಂದಿಗೆ ರಸಗೊಬ್ಬರ ಮತ್ತು ಇಂಧನ ಬೆಲೆಗಳು ಹೆಚ್ಚಿತ್ತಿರುವ ಕಾರಣ ಪ್ರಪಂಚದಾದ್ಯಂತ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ವಿದ್ಯಮಾನದಿಂದಾಗಿ ಏಷ್ಯಾ, ಆಫ್ರಿಕಾ ಮತ್ತು ಅಮೆರಿಕದಲ್ಲಿ ಕೃಷಿ ಉತ್ಪಾದನೆ ಕುಂಠಿತಗೊಳ್ಳಲಿದೆ ಎಂದೂ ಅವರು ಹೇಳಿದ್ದಾರೆ.

    Live Tv

  • ಇಂಟರ್‌ನೆಟ್ ಸ್ಥಗಿತ ಅಪಾಯಕಾರಿ, ನಿರ್ಬಂಧ ಹೇರುವುದನ್ನು ನಿಲ್ಲಿಸಿ: ವಿಶ್ವಸಂಸ್ಥೆ

    ಇಂಟರ್‌ನೆಟ್ ಸ್ಥಗಿತ ಅಪಾಯಕಾರಿ, ನಿರ್ಬಂಧ ಹೇರುವುದನ್ನು ನಿಲ್ಲಿಸಿ: ವಿಶ್ವಸಂಸ್ಥೆ

    ನ್ಯೂಯಾರ್ಕ್: ಇಂಟರ್‌ನೆಟ್ ಸ್ಥಗಿತಗೊಳಿಸುವುದು ಅಥವಾ ಅಡೆತಡೆಗಳನ್ನು ಹೇರುವುದರಿಂದ ತೀವ್ರವಾದ ಪರಿಣಾಮಗಳು ಉಂಟಾಗಬಹುದು. ಹೀಗಾಗಿ ದೇಶಗಳು ಇಂಟರ್‌ನೆಟ್ ಮೇಲೆ ನಿರ್ಬಂಧ ಹೇರುವುದನ್ನು ಕೂಡಲೇ ನಿಲ್ಲಿಸಬೇಕೆಂದು ವಿಶ್ವಸಂಸ್ಥೆ ಕರೆ ನೀಡಿದೆ.

    ಇಂಟರ್‌ನೆಟ್ ಸ್ಥಗಿತಗೊಳಿಸುವಿಕೆಯಿಂದ ಲಕ್ಷಾಂತರ ಜನರ ಜೀವನ ಹಾಗೂ ಮಾನವ ಹಕ್ಕುಗಳ ಮೇಲೆ ಭೀಕರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವಿಶ್ವಸಂಸ್ಥೆ ಎಚ್ಚರಿಸಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಬೆಂಕಿಗಾಹುತಿ

    ಇಂಟರ್‌ನೆಟ್ ಹಾಗೂ ದೂರಸಂಪರ್ಕ ಸೇವೆಗಳು ಸ್ಥಗಿತಗೊಂಡರೆ, ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗಳು ತಮ್ಮ ವೈದ್ಯರನ್ನು ಸಂಪರ್ಕಿಸಲು ಸಾಧ್ಯವಾಗದಿರುವುದು, ಮತದಾರರು ಅಭ್ಯರ್ಥಿಗಳ ಮಾಹಿತಿಯಿಂದ ವಂಚಿತರಾಗುವುದು, ಕರಕುಶಲ ತಯಾರಕರು ಗ್ರಾಹಕರಿಂದ ದೂರ ಉಳಿಯುವುದು ಹಾಗೂ ಹಿಂಸಾತ್ಮಕ ದಾಳಿಯ ಸಂದರ್ಭ ಶಾಂತಿಯನ್ನು ಸ್ಥಾಪಿಸಲು ಸಹಾಯಕ್ಕೆ ಅಧಿಕಾರಿಗಳನ್ನು ಕರೆಸುವುದು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದೆ.

    ಈ ಬಗ್ಗೆ ವಿಶ್ವಸಂಸ್ಥೆ ಹಕ್ಕುಗಳ ಮುಖ್ಯಸ್ಥ ಮಿಚೆಲ್ ಬ್ಯಾಚೆಲೆಟ್, ಡಿಜಿಟಲ್ ಜಗತ್ತು ಮಾನವ ಜಗತ್ತಿಗೆ ಅತ್ಯಗತ್ಯವಾಗಿದೆ. ಇಂತಹ ಸಮಯದಲ್ಲಿ ಸ್ಥಗಿತಗಳಾದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದಿದ್ದಾರೆ. ಇದನ್ನೂ ಓದಿ: ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾಗೆ ಝೆಡ್ ಶ್ರೇಣಿ ಭದ್ರತೆ

    ಇಂಟರ್‌ನೆಟ್ ಸ್ಥಗಿತಗೊಂಡರೆ, ಲೆಕ್ಕಿಸಲಾಗದಷ್ಟು ಹಾನಿ ಉಂಟಾಗುತ್ತದೆ. ಇದಕ್ಕೆ ಉದಾಹರಣೆ ಎಂಬಂತೆ ಜಾಗತಿಕ ಗಮನವನ್ನು ಸೆಳೆದ ಮೊದಲ ಮುಖ್ಯ ಇಂಟರ್‌ನೆಟ್ ಸ್ಥಗಿತ 2011ರಲ್ಲಿ ಈಜಿಪ್ಟ್‌ನಲ್ಲಿ ನಡೆದಿತ್ತು. ತಹ್ರೀರ್ ಸ್ಕ್ವೇರ್ ಪ್ರದರ್ಶನದ ಸಮಯದಲ್ಲಿ ಇಂಟರ್‌ನೆಟ್ ಸ್ಥಗಿತಗೊಂಡು, ಹಿಂಸಾತ್ಮಕ ಘಟನೆಗಳು ನಡೆದವು. ಹಲವು ಹತ್ಯೆಗಳು ನಡೆದು, ನೂರಾರು ಜನರು ಬಂಧನಕ್ಕೊಳಗಾಗಿದ್ದರು ಎಂದು ತಿಳಿಸಿದರು.

    ಇಂತಹ ಸ್ಥಗಿತಗಳು ಸಂಭವಿಸಿತು ಎಂದಾದಲ್ಲಿ, ಜನರು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಳೆದುಕೊಳ್ಳುತ್ತಾರೆ. ಇದರಿಂದ ಜನರನ್ನು ನಿಯಂತ್ರಿಸಲಾಗದಷ್ಟು ಮಟ್ಟದಲ್ಲಿ ಹಕ್ಕುಗಳ ಉಲ್ಲಂಘನೆ, ಹತ್ಯೆಗಳು ನಡೆಯಬಹುದು ಎಂದು ಹೇಳಿದ್ದಾರೆ.

    Live Tv