Tag: Unlock

  • ಇನ್ನು ಮುಂದೆ ಮಾಸ್ಕ್ ಹಾಕಿಕೊಂಡೇ ಐಫೋನ್ ಫೇಸ್ ಐಡಿ ಅನ್‍ಲಾಕ್ ಮಾಡ್ಬೋದು!

    ವಾಷಿಂಗ್ಟನ್: ನೀವು ಮಾಸ್ಕ್ ಧರಿಸಿರುವಾಗ ನಿಮ್ಮ ಫೋನ್ ಅನ್ನು ಫೇಸ್ ಐಡಿ ಮೂಲಕ ಅನ್‍ಲಾಕ್ ಮಾಡುವುದು ಇಲ್ಲಿಯವರೆಗೆ ಅಸಾಧ್ಯವಾಗಿತ್ತು. ಆದರೆ ಈಗ ಐಫೋನ್ ಹೊಸ ಫೀಚರ್ ಒಂದನ್ನು ಪರೀಕ್ಷಿಸುತ್ತಿದೆ. ಇದರ ಪ್ರಕಾರ ನೀವು ನಿಮ್ಮ ಮಾಸ್ಕ್ ಧರಿಸಿರುವಾಗಲೂ ಫೇಸ್ ಐಡಿಯಲ್ಲಿ ಫೋನ್ ಅನ್‍ಲಾಕ್ ಮಾಡಬಹುದು.

    ಈ ಹಿಂದೆ ಇದೇ ರೀತಿಯಾಗಿ ಐಫೋನ್ ಆಪಲ್ ವಾಚ್‍ನ ಮುಖಾಂತರ ಮಾಸ್ಕ್ ಧರಿಸಿಕೊಂಡೇ ಫೋನ್ ಅನ್‍ಲಾಕ್ ಮಾಡುವ ಫೀಚರ್ ತಂದಿತ್ತು. ಆದರೆ ಇದಕ್ಕೆ ಆಪಲ್ ವಾಚ್‍ನ ಅಗತ್ಯ ಬೀಳುತ್ತಿತ್ತು. ಕೇವಲ ಆಪಲ್ ವಾಚ್ ಹೊಂದಿದವರು ಮಾತ್ರವೇ ಈ ಫೀಚರ್ ಬಳಸಬಹುದಿತ್ತು. ಇದೀಗ ಆಪಲ್ ವಾಚ್‍ನ ಅಗತ್ಯ ಇಲ್ಲದೇ ಫೋನ್ ಅನ್ನು ಮಾಸ್ಕ್ ಧರಿಸಿಕೊಂಡೇ ಅನ್‍ಲಾಕ್ ಮಾಡಲು ಐಫೋನ್ ಸಾಧ್ಯವಾಗಿಸಲಿದೆ. ಇದನ್ನೂ ಓದಿ: ಏರ್‌ಟೆಲ್‌ನಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಗೂಗಲ್

    ಐಒಎಸ್ 15.4ರ ಬೀಟಾದಲ್ಲಿ ಈ ಫೀಚರ್ ಅನ್ನು ಪರೀಕ್ಷಿಸಬಹುದು. ಫೇಸ್ ಮಾಸ್ಕ್ ಧರಿಸಿಕೊಂಡೇ ನಿಮ್ಮ ಮುಖ ಪರಿಚಯವನ್ನು ಪತ್ತೆ ಹಚ್ಚುವಂತೆ ನಿಮ್ಮ ಐಫೋನ್ ಅನ್ನು ಹೊಂದಿಸಬಹುದು. ಇದಕ್ಕಾಗಿ ನೀವು ಫೋನ್‍ನ ಸೆಟ್ಟಿಂಗ್ಸ್‍ಗೆ ಹೋಗಿ ಫೇಸ್ ಐಡಿ ಹಾಗೂ ಪಾಸ್‍ಕೋಡ್ ಸೆಟ್ಟಿಂಗ್‍ನಲ್ಲಿ ಯೂಸ್ ಫೇಸ್ ಐಡಿ ವಿತ್ ಮಾಸ್ಕ್ ಆಯ್ಕೆಗೆ ಅನುಮತಿ ನೀಡಬೇಕು.

    ಇದರಲ್ಲಿ ಕೆಲವು ಎಚ್ಚರಿಕೆಗಳು ಇವೆ. ಫಾರ್ ಫುಲ್ ಫೇಸ್ ರೆಕೊಗ್ನಿಶನ್ ಓನ್ಲಿ ಆಯ್ಕೆಯಲ್ಲಿ ಮಾತ್ರವೇ ಫೇಸ್ ಐಡಿ ನಿಖರವಾಗಿ ಕಾರ್ಯ ನಿರ್ವಹಿಸುತ್ತದೆ. ನೀವು ಮಾಸ್ಕ್ ಹಾಕಿಕೊಂಡು ನಿಮ್ಮ ಫೇಸ್ ಐಡಿ ಭದ್ರತೆಯಿಂದ ಕಾರ್ಯ ನಿರ್ವಹಿಸುತ್ತದೆ ಎನ್ನಲಾಗುವುದಿಲ್ಲ. ಐಡಿ ವಿತ್ ಮಾಸ್ಕ್‍ನಲ್ಲಿ ಫೋನ್ ನಿಮ್ಮ ಕಣ್ಣಿನ ಸುತ್ತಲಿನ ಭಾಗವನ್ನು ಚೆನ್ನಾಗಿ ಗುರುತಿಸಬಹುದು. ಆದರೆ ಈ ಫೀಚರ್ ಕೇವಲ ಹೊಸ ಐಫೋನ್‍ಗಳಲ್ಲಿ ಮಾತ್ರವೇ ಲಭ್ಯವಾಗಲಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮಿಲ್ಕಿ ವೇಯಲ್ಲಿ 18 ನಿಮಿಷಗಳಿಗೊಮ್ಮೆ ಸ್ಫೋಟವಾಗುವ ವಸ್ತು ಪತ್ತೆ

    ಕೊರೊನಾ ಹಾವಳಿ ಪ್ರಾರಂಭವಾದಾಗಿನಿಂದ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಕಡ್ಡಾಯ. ಈ ನಿಯಮ 2 ವರ್ಷಗಳ ಹಿಂದೆ ಪ್ರಾರಂಭವಾಗಿದ್ದರೂ ಆಪಲ್ ಈ ಹೊಸ ಫೀಚರ್ ಬಗ್ಗೆ ಪರೀಕ್ಷೆ ನಡೆಸುತ್ತಿರುವ ಪ್ರಯತ್ನ ಮೊದಲನೆಯದ್ದೇ. ಆಪಲ್ ಕನ್ನಡಕ ಹಾಕಿಕೊಂಡು ಫೇಸ್ ಐಡಿ ಅನ್‍ಲಾಕ್ ಮಾಡುವ ವೈಶಿಷ್ಟ್ಯವನ್ನು ಸುಧಾರಿಸುತ್ತಿದೆ. ಆದರೆ ಸನ್‍ಗ್ಲಾಸ್ ನೊಂದಿಗೆ ಫೇಸ್ ಮಾಸ್ಕ್ ಬಳಸಿದಾಗ ಈ ಫೀಚರ್ ಕಾರ್ಯ ನಿರ್ವಹಿಸುವುದಿಲ್ಲ ಎಂದು ಎಚ್ಚರಿಸಿದೆ.

  • ನವೆಂಬರ್‌ನಲ್ಲಿ 1.31 ಲಕ್ಷ ಕೋಟಿ ರೂ. ಆದಾಯ ಸಂಗ್ರಹ – GST ಜಾರಿಯಾದ ಬಳಿಕ ಎರಡನೇ ಅತಿ ಹೆಚ್ಚು ಕಲೆಕ್ಷನ್

    ನವೆಂಬರ್‌ನಲ್ಲಿ 1.31 ಲಕ್ಷ ಕೋಟಿ ರೂ. ಆದಾಯ ಸಂಗ್ರಹ – GST ಜಾರಿಯಾದ ಬಳಿಕ ಎರಡನೇ ಅತಿ ಹೆಚ್ಚು ಕಲೆಕ್ಷನ್

    ನವದೆಹಲಿ: ಅನ್‍ಲಾಕ್ ಬಳಿಕ ದೇಶದ ಆರ್ಥಿಕತೆ ಚೇತರಿಕೆಯತ್ತ ಸಾಗುತ್ತಿದ್ದು, ನವೆಂಬರ್‌ನಲ್ಲಿ ದಾಖಲೆ ಪ್ರಮಾಣದ ಜಿಎಸ್‍ಟಿ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ. ಹಣಕಾಸು ಇಲಾಖೆಯ ಅಂಕಿ ಅಂಶಗಳ ಪ್ರಕಾರ ನವೆಂಬರ್ ತಿಂಗಳಲ್ಲಿ 1,31,526 ಕೋಟಿ ರೂ. ಆದಾಯ ಜಿಎಸ್‍ಟಿ ಮೂಲಕ ಸಂಗ್ರಹವಾಗಿದೆ.

    ದೇಶದಲ್ಲಿ ಜಿಎಸ್‍ಟಿ ಜಾರಿಯಾದ ಬಳಿಕ ಎರಡನೇ ಬಾರಿ ಅತಿ ಹೆಚ್ಚಿನ ಪ್ರಮಾಣದ ಆದಾಯ ಸಂಗ್ರಹವಾಗಿದೆ ಎಂದು ಇಲಾಖೆ ಹೇಳಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ 25% ಮತ್ತು 2019-20ಕ್ಕೆ ಹೋಲಿಸಿದರೆ 27% ನಷ್ಟು ಜಿಎಸ್‍ಟಿ ಹೆಚ್ಚು ಸಂಗ್ರಹವಾಗಿದೆ.

    ನವೆಂಬರ್‌ನಲ್ಲಿ ಕೇಂದ್ರದ ಮೂಲಕ 23,978 ಕೋಟಿ ರೂ. ಮತ್ತು 31,127 ಕೋಟಿ ರೂ. ರಾಜ್ಯಗಳ ಮೂಲಕ ಸಂಗ್ರಹವಾಗಿದೆ. ಸರಕುಗಳ ಆಮದಿನ ಮೇಲೆ ಹೇರಲಾದ ತೆರಿಗೆಯಿಂದ 32,165 ಕೋಟಿ ರೂ., ಸೆಸ್ ಮೂಲಕ ಸಂಗ್ರಹಿಸಲಾದ 9,606 ಕೋಟಿ ರೂ. ಸೇರಿದಂತೆ ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ 653 ಕೋಟಿ ರೂ. ಸೇರಿ ಅಂತರಾಷ್ಟ್ರೀಯ ವ್ಯವಹಾರಗಳ ಮೂಲಕ 66,815 ಕೋಟಿ ರೂ. ಜಿಎಸ್‍ಟಿ ಸಂಗ್ರಹವಾಗಿದೆ. ಇದನ್ನೂ ಓದಿ: ಎವರ್ ಗ್ರೀನ್ ಹೀರೋಯಿನ್ ಸುಧಾರಾಣಿ ಇನ್ಮುಂದೆ ಡಾ.ಸುಧಾರಾಣಿ

    ಜಿಎಸ್‍ಟಿ ಆದಾಯ ಏರಿಕೆಗೆ ಸರ್ಕಾರ ಇತ್ತೀಚೆಗೆ ತೆಗೆದುಕೊಂಡ ಆಡಳಿತತ್ಮಾಕ ಕ್ರಮಗಳು ಎನ್ನಲಾಗಿದೆ. ಅನುಮಾನಾಸ್ಪದ ತೆರಿಗೆದಾರರನ್ನು ಹುಡುಕಲು ರಿಟರ್ನ್, ಇನ್‍ವಾಯ್ಸ್ ಮತ್ತು ಇ-ವೇ ಬಿಲ್ ತಂತ್ರಜ್ಞಾನ ಬಳಸಿದ್ದು, ಇದು ದೊಡ್ಡ ತೆರಿಗೆ ವಂಚನೆ ಪ್ರಕರಣಗಳನ್ನು ಪತ್ತೆ ಮಾಡಿದೆ ಎಂದು ಸಹ ಕೊರೊನಾ ಕಾರಣದಿಂದ 2019-20 ರಲ್ಲಿ ಜಿಎಸ್‍ಟಿ ಒಂದು ಲಕ್ಷ ಕೋಟಿಯ ಗಡಿಯನ್ನು ದಾಟಿರಲಿಲ್ಲ. ಆದರೆ ಅನ್‍ಲಾಕ್ ಬಳಿಕ 2020-21ರ ಅವಧಿಯಲ್ಲಿ ಜಿಎಸ್‍ಟಿ ಆದಾಯ ಸಂಗ್ರಹ ಸುಧಾರಿಸಿದ್ದು, ಒಂದು ಲಕ್ಷ ಕೋಟಿಯ ಗಡಿ ದಾಟಿತ್ತು ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

  • ಕಾಲೇಜು, ಸಿನಿಮಾ ಹಾಲ್ ಓಪನ್- ರಾಜ್ಯದಲ್ಲಿ ಲಾಕ್‍ಡೌನ್ ಮತ್ತಷ್ಟು ಸಡಿಲಿಕೆ

    ಕಾಲೇಜು, ಸಿನಿಮಾ ಹಾಲ್ ಓಪನ್- ರಾಜ್ಯದಲ್ಲಿ ಲಾಕ್‍ಡೌನ್ ಮತ್ತಷ್ಟು ಸಡಿಲಿಕೆ

    – ದೇವಸ್ಥಾನಗಳಲ್ಲಿ ತೀರ್ಥ, ಪ್ರಸಾದಕ್ಕೂ ಅನುಮತಿ

    ಬೆಂಗಳೂರು: ಕೊರೊನಾ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ವಾರದಿಂದ ಲಾಕ್‍ಡೌನ್ ಮತ್ತಷ್ಟು ಸಡಿಲಿಕೆ ಮಾಡಲಾಗಿದೆ. ಕಾಲೇಜು ಹಾಗೂ ಸಿನಿಮಾ ಹಾಲ್‍ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

    ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ತಮ್ಮ ಕಾವೇರಿ ನಿವಾಸದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಲಾಕ್‍ಡೌನ್ ಸಡಿಲಿಕೆ ಕುರಿತು ಚರ್ಚೆ ನಡೆಸಿದ್ದು, ಬಳಿಕ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಲಾಕ್‍ಡೌನ್ ಸಡಿಲಿಕೆ ಮಾಡಿ ಆದೇಶಿಸಿದ್ದಾರೆ. ಕೊರೊನಾ ನಿಯಮವನ್ನು ಪಾಲಿಸಿಕೊಂಡು ಜುಲೈ 26ರಿಂದ ಕಾಲೇಜು ಆರಂಭಿಸಲು ಸರ್ಕಾರ ಸೂಚನೆ ನೀಡಿದೆ. ಆದರೆ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕನಿಷ್ಠ 1 ಡೋಸ್ ಆದರೂ ಕೊರೊನಾ ಲಸಿಕೆ ಪಡೆದಿರುವುದು ಕಡ್ಡಾಯವಾಗಿದೆ.

    ತರಬೇತಿ ಕೇಂದ್ರಗಳನ್ನು ತೆರೆಯಲು ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕನಿಷ್ಟ ಒಂದು ಡೋಸ್ ಕೊರೊನಾ ಲಸಿಕೆ ಪಡೆಯುವುದು ಕಡ್ಡಾಯವಾಗಿದೆ.

    ಮೂರು ತಿಂಗಳಿನಿಂದ ಬಂದ್ ಆಗಿದ್ದ ಚಿತ್ರ ಮಂದಿರಗಳ ಆರಂಭಕ್ಕೆ ಸಹ ಸರ್ಕಾರ ಅನುಮತಿ ನೀಡಿದೆ. ಆದರೆ ಶೇ.50ರಷ್ಟು ಸಾಮರ್ಥ್ಯದೊಂದಿಗೆ ಹಾಗೂ ಕೊರೊನಾ ನಿಯಮಗಳನ್ನು ಪಾಲಿಸಿ ನಾಳೆಯಿಂದ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ನೈಟ್ ಕರ್ಫ್ಯೂ ಅವಧಿಯನ್ನು ರಾತ್ರಿ 10 ರಿಂದ ಬೆಳಗ್ಗೆ 5ರ ವರಗೆ ನಿಗದಿ ಮಾಡಲಾಗಿದೆ.

    ಸಿಎಂ ಜೊತೆ ಸಭೆ ಬಳಿಕ ಈ ಕುರಿತು ಮಾಹಿತಿ ನೀಡಿದ ಸಚಿವ ಆರ್.ಅಶೋಕ್, ಮದುವೆಗೆ 100 ಜನರ ಮಿತಿ, ಅಂತ್ಯ ಸಂಸ್ಕಾರಕ್ಕೆ 20 ಜನರ ಮಿತಿ ಮುಂದುವರಿಸಿದ್ದೇವೆ. ಸಿನಿಮಾ ಥಿಯೇಟರ್ ಗಳಿಗೆ ಶೇ.50ರಷ್ಟು ಸಾಮರ್ಥ್ಯದೊಂದಿಗೆ ಅನುಮತಿ ನೀಡಿದ್ದೇವೆ. ನೈಟ್ ಕರ್ಫ್ಯೂ ಅವಧಿ ಕಡಿಮೆ ಮಾಡಿದ್ದೇವೆ. ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರಗಳಿಗೆ ಅನುಮತಿ ಕೊಟ್ಟಿದ್ದೇವೆ. ದೇವಸ್ಥಾನಗಳಿಗಿದ್ದ ನಿರ್ಬಂಧ ತೆರವು ಮಾಡಲಾಗಿದೆ. ದೇವಸ್ಥಾನಗಳಲ್ಲಿ ಇದುವರೆಗೆ ದರ್ಶನಕ್ಕೆ ಮಾತ್ರ ಅವಕಾಶ ಇತ್ತು. ಈಗ ಪೂಜಾ ಕೈಂಕರ್ಯ, ಪ್ರಸಾದ ವಿತರಣೆಗೂ ಅವಕಾಶ ನೀಡಲಾಗಿದೆ. ಅರ್ಚನೆ, ಹರಕೆ, ತೀರ್ಥ, ಪ್ರಸಾದ ಸೇರಿದಂತೆ ಹಲವು ಪೂಜಾ ಕಾರ್ಯಗಳಿಗೆ ಅನುಮತಿ ನೀಡಲಾಗಿದೆ. ಸಭೆಯಲ್ಲಿ ಸ್ವಿಮ್ಮಿಂಗ್ ಪೂಲ್ ಗಳ ಬಗ್ಗೆ ಚರ್ಚೆ ನಡೆದಿಲ್ಲ, ಜನರಿಗೆ ಕಷ್ಟವಾಗದಂತೆ ಸಡಿಲಿಕೆ ಕೊಟ್ಟಿದ್ದೇವೆ. ಮೂರನೇ ಅಲೆಗೆ ಬೇಕಾದ ತಯಾರಿ ಕೈಗೊಳ್ಳಲು ಸಿಎಂ ಸೂಚಿಸಿದ್ದಾರೆ ಎಂದು ತಿಳಿಸಿದರು.

    ಜುಲೈ 26ಕ್ಕೆ ಸರ್ಕಾರಕ್ಕೆ ಎರಡು ವರ್ಷ ತುಂಬುತ್ತದೆ. ಸರ್ಕಾರದ ಸಾಧನೆಗಳ ಬಗ್ಗೆ ಇಲಾಖಾವಾರು ಮಾಹಿತಿ ಬಿಡುಗಡೆ ಮಾಡಲಾಗುತ್ತದೆ. ಜುಲೈ 26ರಂದು ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ, ಸಂಜೆ ಶಾಸಕರಿಗೆ ಔತಣ ಕೂಟ ಇದೆ ಎಂದು ಇದೇ ವೇಳೆ ಮಾಹಿತಿ ನೀಡಿದರು.

    ಡಿಸಿಎಂ ಅಶ್ವತ್ಥ ನಾರಾಯಣ, ಸಿಎಸ್ ಪಿ.ರವಿಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆಗಮನ, ಆರೋಗ್ಯ, ಕಂದಾಯ ಇಲಾಖೆ ಅಧಿಕಾರಿಗಳು ಸಚಿವ ಅರವಿಂದ್ ಲಿಂಬಾವಳಿ ಸಭೆಯಲ್ಲಿ ಭಾಗಿಯಾಗಿದ್ದರು.

  • ಬೇಲೂರು ಚೆನ್ನಕೇಶವ ದೇಗುಲ ಓಪನ್ – ಭಕ್ತರ ದರ್ಶನಕ್ಕೆ ಅವಕಾಶ

    ಬೇಲೂರು ಚೆನ್ನಕೇಶವ ದೇಗುಲ ಓಪನ್ – ಭಕ್ತರ ದರ್ಶನಕ್ಕೆ ಅವಕಾಶ

    ಹಾಸನ: ವಿಶ್ವ ವಿಖ್ಯಾತ ಹಾಗೂ ಶಿಲ್ಪ ಕಲೆಗೆ ಹೆಸರು ಮಾಡಿರುವ ದೇಶ ವಿದೇಶದ ಪ್ರವಾಸಿಗರನ್ನು ತನ್ನೆಡೆಗೆ ಸೆಳೆಯುತ್ತಿರುವ ಬೇಲೂರಿನ ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯದ ಬಾಗಿಲನ್ನು ವಿಶೇಷ ಪೂಜಾ ವಿಧಿ ವಿಧಾನಗಳೊಂದಿಗೆ ಸೋಮವಾರ ತೆರೆದು ಭಕ್ತರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಯಿತು.

    ಈ ಸಂದರ್ಭ ಹಾಜರಿದ್ದ ಶಾಸಕ ಕೆ.ಎಸ್.ಲಿಂಗೇಶ್ ಮತ್ತು ದೇಗುಲದ ಕಾರ್ಯನಿರ್ವಾಹಣಾಧಿಕಾರಿ ವಿದ್ಯಲ್ಲತಾ ದ್ವಾರಬಾಗಿಲಿಗೆ ಪೂಜೆ ಸಲ್ಲಿಸಿದರು. ಆ ನಂತರ ಚೆನ್ನಕೇಶವ ಸ್ವಾಮಿ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಶಾಸಕರು ದೇವರ ದರ್ಶನ ಪಡೆದು, ಅರ್ಚಕ ಸಮೂಹವನ್ನು ಗೌರವಿಸಿದರು.

    ಬಳಿಕ ಮಾತನಾಡಿದ ಶಾಸಕ ಕೆ.ಎಸ್.ಲಿಂಗೇಶ್, ಕೊರೊನಾ ಒಂದು ಮತ್ತು ಎರಡನೇ ಅಲೆ ಕಾರಣದಿಂದ ದೇಗುಲದ ಬಾಗಿಲನ್ನು ಮುಚ್ಚಲಾಗಿತ್ತು. ಇದೀಗ ಕೊರೊನಾ ಪ್ರಕರಣ ಇಳಿಮುಖ ಕಂಡಿರುವುದರಿಂದ ರಾಜ್ಯ ಸರ್ಕಾರದ ಆದೇಶದಂತೆ ದೇವಾಲಯದ ಬಾಗಿಲನ್ನು ತೆರೆಯಲಾಗಿದೆ. ದೇಗುಲಕ್ಕೆ ಆಗಮಿಸುವ ಭಕ್ತರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುದನ್ನು ಮರೆಯಬಾರದು, ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಿದರು.

    ದೇಗುಲದ ಕಾರ್ಯನಿರ್ವಹಣಾಧಿಕಾರಿ ವಿದ್ಯುಲ್ಲತಾ, ದೇವರ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಆದರೆ ದಾಸೋಹದ ವ್ಯವಸ್ಥೆಗೆ ಸರ್ಕಾರದಿಂದ ಆದೇಶ ಬರಬೇಕಿದೆ. ದೇಗುಲಕ್ಕೆ ಬರುವ ಭಕ್ತರು ಕೊರೊನಾ ನಿಯಮ ಪಾಲಿಸಬೇಕೆಂದರು. ಆಗಮಿಕ ಅರ್ಚಕರಾದ ಕೃಷ್ಣ ಸ್ವಾಮಿ ಭಟ್ಟರ್, ಶ್ರೀನಿವಾಸ ಭಟ್ಟರ್ ದರ್ಶನಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಸಾಮಾಜಿಕ ಅಂತರ ಕಾಪಾಡಿ ದೇವರ ದರ್ಶನ ಪಡೆಯಬೇಕೆಂದು ಮನವಿ ಮಾಡಿದರು. ಇದನ್ನೂ ಓದಿ:ರಾಜಕೀಯಕ್ಕೆ ನಾನು ಬರಲ್ಲ – ಸಂಘವನ್ನು ವಿಸರ್ಜಿಸಿದ ರಜನಿಕಾಂತ್

  • ಕೊಡಗಿನಲ್ಲಿ ಅನ್‍ಲಾಕ್ – ಪ್ರವಾಸೋದ್ಯಮ ಬೇಕು, ಬೇಡ ಅನ್ನೋ ಚರ್ಚೆ

    ಕೊಡಗಿನಲ್ಲಿ ಅನ್‍ಲಾಕ್ – ಪ್ರವಾಸೋದ್ಯಮ ಬೇಕು, ಬೇಡ ಅನ್ನೋ ಚರ್ಚೆ

    ಮಡಿಕೇರಿ: ಕಳೆದ ಮೂರುವರೆ ತಿಂಗಳಿನಿಂದ ಲಾಕ್‍ಡೌನ್‍ನಿಂದಾಗಿ ಕೊಡಗಿನ ಪ್ರವಾಸೋದ್ಯಮ ನೆಲಕಚ್ಚಿದ್ದು, ಇದೀಗ ಕೊಡಗು ಜಿಲ್ಲೆಯನ್ನು ರಾಜ್ಯ ಸರ್ಕಾರ ಅನ್‍ಲಾಕ್ ಮಾಡಿದೆ. ಹೀಗಾಗಿ ಕೊಡಗಿನ ಜಲತೊರೆಗಳನ್ನು ವೀಕ್ಷಿಸಲು ಹಾಗೂ ಇಲ್ಲಿನ ಪ್ರಕೃತಿ ಸೌಂದರ್ಯ ಅನುಭವಿಸಲು ಮತ್ತೆ ಕೊಡಗಿನತ್ತ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಹರಿದು ಬರುವ ಸಾಧ್ಯತೆ ಹೆಚ್ಚಾಗಿದೆ. ಇದರಿಂದಾಗಿ ಮತ್ತೆ ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗುತ್ತದೆ. ಹೀಗಾಗಿ ಜಿಲ್ಲೆಯ ಪ್ರವಾಸೋದ್ಯಮ ಬೇಕು, ಬೇಡ ಅನ್ನೋ ಚರ್ಚೆ ಆರಂಭವಾಗಿದೆ.

    ಕೊಡಗು ಜಿಲ್ಲೆ ಅನ್‍ಲಾಕ್ ಅಗಿರುವುದರಿಂದ ರಾಜ್ಯ ಮತ್ತು ಅಂತರ್ ರಾಜ್ಯದ ಜನರು ಕೊಡಗಿನತ್ತ ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಅದರೆ ಕೊಡಗಿನ ಜನರು ಕಳೆದ ಮೂರು ವರ್ಷಗಳಿಂದ ನಿರಂತರ ನೆರೆಹಾವಳಿ, ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ಸಂಕಷ್ಟದಲ್ಲಿದ್ದು, ಇದೀಗ ಕೊರೊನಾ ಸಾವು-ನೋವುಗಳು ಹಾಗೂ ಲಾಕ್‍ಡೌನ್‍ನಿಂದ ಜನರು ತತ್ತರಿಸಿದ್ದಾರೆ. ಅನೇಕ ಜನರು ತಮ್ಮವರನ್ನು ಕಳೆದುಕೊಂಡ ನೋವಿನಲ್ಲಿದ್ದು, ಇದೀಗ ಒಂದಷ್ಟು ಚೇತರಿಸಿಕೊಳ್ಳುತ್ತಿದ್ದಾರೆ, ಹೀಗಿರುವಾಗ ಮತ್ತೆ ಪ್ರವಾಸೋದ್ಯಮ ತೆರೆದುಕೊಂಡರೆ ಹೆಮ್ಮಾರಿ ಕೊರೊನಾ ಅಲೆ ಬಂದು ಅಪ್ಪಳಿಸಲಿದೆ ಎಂಬ ಭಯ ಆವರಿಸಿದೆ.

    ಪ್ರವಾಸೋದ್ಯಮದಿಂದಲೇ ಪುಟ್ಟ ಜಿಲ್ಲೆ ಕೊಡಗು ಡೇಂಜರ್ ವಲಯಕ್ಕೆ ತಲುಪಿದ್ದು, ಇದೀಗ ಜಿಲ್ಲೆ ಒಂದಷ್ಟು ಚೇತರಿಸಿಕೊಂಡಿದೆ ಹೊರತು ಸಂಪೂರ್ಣವಾಗಿ ಕೊರೊನಾ ಮುಕ್ತವಾಗಿಲ್ಲ. ಹಳ್ಳಿಹಳ್ಳಿಗಳಿಗೂ ವ್ಯಾಪಿಸಿರುವ ಕೊರೊನಾ ಸೋಂಕು ಅದೆಷ್ಟೋ ಮುಗ್ಧ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಮತ್ತೆ ನಮ್ಮವರನ್ನು ಸಾವಿನ ದವಡೆಗೆ ತಳ್ಳಲು ನಾವು ಸಿದ್ಧರಿಲ್ಲ ಯಾವುದೇ ಕಾರಣಕ್ಕೂ ಮಳೆಗಾಲ ಮುಗಿಯುವವರೆಗೂ ಹೋಂಸ್ಟೇ, ರೆಸಾರ್ಟ್ ಸೇರಿದಂತೆ ಪ್ರವಾಸೋದ್ಯಮಗಳು ಸಂಪೂರ್ಣ ಬಂದ್ ಆಗಿಯೇ ಇರಬೇಕು ಎಂದು ಸಂಘ ಸಂಸ್ಥೆಯ ಪ್ರಮುಖರು ಹೇಳುತ್ತಿದ್ದಾರೆ. ಇದನ್ನೂ ಓದಿ: ಕೊಡಗಿನ ಎಸ್‍ಪಿ ಖಜಾನೆಯಿಂದ 16.96 ಲಕ್ಷ ಕಳ್ಳತನ- ಪೊಲೀಸರಿಂದಲೇ ದರೋಡೆ

    ಪ್ರವಾಸೋದ್ಯಮವನ್ನೇ ಅವಲಂಬಿಸಿ ಬದುಕು ನಡೆಸುತ್ತಿರುವ ಕೊಡಗಿನ 70% ಜನರು ಕೊರೊನಾ ಕಾಲದಿಂದಲೂ ಸಾಕಷ್ಟು ನಷ್ಟ ಅನುಭವಿಸಿದ್ದೇವೆ. ರೆಸಾರ್ಟ್ ಹೋಂಸ್ಟೇಗಳಿಗೆ ಅಗಮಿಸುವ ಪ್ರವಾಸಿಗರಿಂದ ಕೊರೊನಾ ಸ್ಫೋಟ ಆಗುವುದಿಲ್ಲ. ಸರ್ಕಾರದ ಗೈಡ್‍ಲೈನ್ಸ್ ಬಿಡುಗಡೆ ಮಾಡಿದೆ ಅದನ್ನು ಪಾಲನೆ ಮಾಡಿ ಪ್ರವಾಸಿಗರಿಗೆ ಬರಲು ಹೇಳುತ್ತೇವೆ. ವ್ಯಾಕ್ಸಿನ್ ಹಾಗೂ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ರೆಸಾರ್ಟ್ ಹೋಂಸ್ಟೇ ಗಳಲ್ಲಿ ವಾಸ್ತವ್ಯ ಹೋಡಲು ಅನುಕೂಲ ಮಾಡಿಕೊಡುತ್ತೇವೆ. ಈಗಾಗಲೇ ಪ್ರವಾಸೋದ್ಯಮವನ್ನೇ ಅವಲಂಬಿಸಿ ಬದುಕು ನಡೆಸುತ್ತಿದ್ದವರಿಗೆ ನೂರಾರು ಕೋಟಿ ನಷ್ಟ ಅಗಿದೆ. ಹೀಗಿರುವಾಗ ಪ್ರವಾಸೋದ್ಯಮ ಬೇಡ ಎಂದರೆ ಕಷ್ಟ. ಸರ್ಕಾರದ ರೂಲ್ಸ್ ಗಳನ್ನು ಪಾಲನೆ ಮಾಡುವವರಿಗೆ ಪ್ರವಾಸೋದ್ಯಮಕ್ಕೆ ಅನುವು ಮಾಡಿಕೊಡಿ ಎಂದು ರೆಸಾರ್ಟ್, ಹೋಟೆಲ್, ಹೋಂಸ್ಟೇ ಮಾಲೀಕರು ಹೇಳುತ್ತಿದ್ದಾರೆ.

    ಜಿಲ್ಲೆಯಲ್ಲಿ ಅನ್‍ಲಾಕ್ ಅಗಿರುವಾಗ ಪ್ರವಾಸೋದ್ಯಮ ಇಲ್ಲದೆ ಸಂಕಷ್ಟ ಅನುಭವಿಸುವ ಜನರು ಪ್ರವಾಸೋದ್ಯಮ ಬೇಕು ಎಂದರೆ. ಪ್ರವಾಸೋದ್ಯಮದಿಂದ ಕೊರೊನಾ ಸ್ಫೋಟವಾಗುತ್ತದೆ ಹಾಗಾಗಿ ಪ್ರವಾಸೋದ್ಯಮ ಕೆಲದಿನಗಳವರೆಗೆ ನಿಷೇಧ ಮುಂದುವರಿಸೋಣ ಎಂಬ ಅಭಿಪ್ರಾಯ ಕೇಳಿಬಂದಿದೆ.

  • ಕೊಡಗಿಗೆ ಲಾಕ್‍ಡೌನ್‍ನಿಂದ ಮುಕ್ತಿ

    ಕೊಡಗಿಗೆ ಲಾಕ್‍ಡೌನ್‍ನಿಂದ ಮುಕ್ತಿ

    ಮಡಿಕೇರಿ: ಇಂದಿನಿಂದ ಕೊಡಗು ಅನ್‍ಲಾಕ್ ಆಗಿದ್ದು, ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ.

    ಲಾಕ್‍ಡೌನ್ ತೆರವುಗೊಳಿಸಿದರೂ ಸೋಂಕು ಕಡಿಮೆಯಾಗದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಮಾತ್ರ ನಿರ್ಬಂಧ ಮುಂದುವರೆಸಲಾಗಿತ್ತು. ಪ್ರವಾಸೋದ್ಯಮವೇ ಮೂಲ ಆದಾಯವಾಗಿರುವ ಕೊಡಗಿನಲ್ಲಿ ಲಾಕ್‍ಡೌನ್ ನಿಂದಾಗಿ ಸಾಕಷ್ಟು ನಷ್ಟ ಉಂಟಾಗಿದೆ. ಅಲ್ಲದೆ ಜನ ಕೂಡ ಉದ್ಯೋಗ, ಆದಾಯವಿಲ್ಲದೇ ಕಂಗೆಟ್ಟಿದ್ದಾರೆ. ಈ ಹಿನ್ನಲೆ ಇಂದಿನಿಂದ ಕೊಡಗಿನಲ್ಲಿ ಅನ್‍ಲಾಕ್ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

    ಕೊಡಗು ಪ್ರವಾಸ ಕೈಗೊಂಡಿದ್ದ ಸಚಿವರಿಗೆ ಈ ಕುರಿತು ಸಾಕಷ್ಟು ಮನವಿಗಳು ಬಂದ ಹಿನ್ನೆಲೆ ರಾಜ್ಯದ ಇತರ ಜಿಲ್ಲೆಗಳಲ್ಲಿರುವ ಅನ್‍ಲಾಕ್ ಮಾರ್ಗಸೂಚಿಯನ್ನು ಕೊಡಗು ಜಿಲ್ಲೆಗೆ ವಿಸ್ತರಣೆ ಮಾಡಲಾಗುತ್ತದೆ. ಆದರೆ ಕೊರೊನಾ ನಿಯಮವಾಳಿಗಳನ್ನು ಪಾಲಿಸುವುದು ಕಡ್ಡಾಯ ಎಂದು ಎಚ್ಚರಿಸಿದ್ದಾರೆ.

    ಅನ್‍ಲಾಕ್ ಕುರಿತು ಶಾಸಕ ಕೆಜಿ ಬೋಪಯ್ಯ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಈಗಿರುವ ಕೋವಿಡ್ ಮಾರ್ಗಸೂಚಿ ಸರಿ ಇದೆ. ಕನಿಷ್ಠ ಜುಲೈ 12ರ ವರೆಗೆ ಲಾಕ್‍ಡೌನ್ ವಿಸ್ತರಣೆ ಮಾಡುವುದು ಉತ್ತಮ ಎಂದರು.

    ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾತನಾಡಿ, ರಾಜ್ಯ ಸರ್ಕಾರದ ಅದೇಶವನ್ನು ಜಿಲ್ಲೆಯಲ್ಲಿ ಅನುಷ್ಠಾನ ಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಜಿಲ್ಲೆಯನ್ನು ಅನ್‍ಲಾಕ್ ಮಾಡಿದರೆ ಪ್ರವಾಸೋದ್ಯಮ, ರೆಸಾರ್ಟ್, ಹೋಟೆಲ್ ಗಳಿಗೆ ಅನುಕೂಲವಾಗುತ್ತದೆ. ಆದರೆ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿವೆ ಎಂಬ ಆತಂಕ ಕಾಡುತ್ತಿದೆ.

  • ಅನಂತೇಶ್ವರ, ಕೊಲ್ಲೂರಿನಲ್ಲಿ ಭಕ್ತರ ದಂಡು – ಕಠಿಣ ನಿಯಮ ಜಾರಿಗೊಳಿಸಿರುವ ದೇವಸ್ಥಾನಗಳು

    ಅನಂತೇಶ್ವರ, ಕೊಲ್ಲೂರಿನಲ್ಲಿ ಭಕ್ತರ ದಂಡು – ಕಠಿಣ ನಿಯಮ ಜಾರಿಗೊಳಿಸಿರುವ ದೇವಸ್ಥಾನಗಳು

    ಉಡುಪಿ: ದೇವಾಲಯಗಳ ನಗರಿ ಉಡುಪಿಯಲ್ಲಿ ದೇಗುಲಗಳ ಬಾಗಿಲು ತೆಗೆದು ಭಕ್ತರಿಗೆ ದರ್ಶನಾವಕಾಶ ಮಾಡಿಕೊಡಲಾಗಿದೆ. ತುಂತುರು ಮಳೆಯ ನಡುವೆಯೇ ಭಕ್ತರು ದೇವಸ್ಥಾನಗಳತ್ತ ಧಾವಿಸಿ ಬರುತ್ತಿದ್ದಾರೆ.

    ಮಹಾಮಾರಿ ಕೊರೊನಾದ ಅಟ್ಟಹಾಸ ಕಡಿಮೆಯಾಗುತ್ತಿದ್ದಂತೆ ರಾಜ್ಯದಲ್ಲಿ ಅನ್‍ಲಾಕ್ ಪ್ರಕ್ರಿಯೆ ನಡೆಯುತ್ತಿದೆ. ಸೋಮವಾರ ಆಗಿರೋದ್ರಿಂದ ಶಿವನ ದೇಗುಲ ಭಕ್ತರನ್ನು ಸೆಳೆಯುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಒಂದು ಸಾವಿರಕ್ಕಿಂತಲೂ ಹೆಚ್ಚು ಧಾರ್ಮಿಕ ಕೇಂದ್ರಗಳಿದ್ದು, ಭಕ್ತರು ಸುಮಾರು ಎರಡು ತಿಂಗಳ ನಂತರ ದೇವಸ್ಥಾನಗಳಿಗೆ ಭೇಟಿ ಕೊಡುತ್ತಿದ್ದಾರೆ.

    ಮುಂಜಾನೆಯಿಂದ ತುಂತುರು ಮಳೆಯಾಗುತ್ತಿದ್ದು, ಭಕ್ತರು ಮಳೆಯ ನಡುವೆ ದೇವರ ದರ್ಶನ ಮಾಡುತ್ತಿದ್ದಾರೆ. ದೇವಸ್ಥಾನಗಳಲ್ಲಿ ಎಂದಿನಂತೆ ಮಹಾಪೂಜೆ ನಡೆಯುತ್ತಿದ್ದು ಭಕ್ತರಿಗೆ ಸದ್ಯ ಯಾವುದೇ ಸೇವೆಗಳನ್ನು ನೀಡುವ ಅವಕಾಶ ಇಲ್ಲ. ಉಡುಪಿ ಕೃಷ್ಣ ಮಠ ಒಂದು ವಾರದ ಬಳಿಕ ಭಕ್ತರಿಗೆ ಸರಿಯುತ್ತದೆ. ದೇವರ ದರ್ಶನದ ಅವಕಾಶ ಸಿಗುತ್ತದೆ. ಇದನ್ನೂ ಓದಿ: ಹೆಣ್ಣಿನ ಬಗ್ಗೆ ಹೇಗೆ ಮಾತಾಡ್ಬೇಕು ಅಂತ ಮಾಜಿ ಸಿಎಂ ಅರ್ಥ ಮಾಡಿಕೊಳ್ಳಬೇಕು: ಸುಮಲತಾ ಕಿಡಿ

    ಉಡುಪಿ ನಗರದಲ್ಲಿರುವ ಅನಂತೇಶ್ವರ, ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನೂರಾರು ಸಂಖ್ಯೆಯಲ್ಲಿ ಭಕ್ತರು ಬಂದು ದೇವರ ದರ್ಶನ ಮಾಡಿದರು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತರಿಗೆ ದೇವರ ದರ್ಶನ ಸಿಕ್ಕಿತು. ದೇವಸ್ಥಾನದ ಹೊರ ಭಾಗದಲ್ಲಿ ಸಾಮಾಜಿಕ ಅಂತರದ ಸರತಿ ಸಾಲು ಸ್ಯಾನಿಟೈಸರ್ ಥರ್ಮಾಮೀಟರ್ ಗಳ ತಪಾಸಣೆ ನಡೆಸಿ ದೇಗುಲದ ಒಳಗೆ ಬಿಡಲಾಯಿತು. ಕೊಲ್ಲೂರಿನಲ್ಲಿ ಧಾರ್ಮಿಕ ಸೇವೆ ಮಧ್ಯಾಹ್ನದ ಅನ್ನಸಂತರ್ಪಣೆಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ. ಇದನ್ನೂ ಓದಿ: ನಟ ದುನಿಯಾ ವಿಜಯ್ ತಾಯಿ ಆರೋಗ್ಯ ಗಂಭೀರ

  • ಎರಡೂವರೆ ತಿಂಗಳ ಬಳಿಕ ಅನ್‍ಲಾಕ್ – ಮಾಲ್, ಶಾಪಿಂಗ್ ಕಾಂಪ್ಲೆಕ್ಸ್‌ಗಳು ಓಪನ್

    ಎರಡೂವರೆ ತಿಂಗಳ ಬಳಿಕ ಅನ್‍ಲಾಕ್ – ಮಾಲ್, ಶಾಪಿಂಗ್ ಕಾಂಪ್ಲೆಕ್ಸ್‌ಗಳು ಓಪನ್

    ಬೆಂಗಳೂರು: ಇಂದಿನಿಂದ ಇಡೀ ಕರ್ನಾಟಕ ಕಂಪ್ಲೀಟ್ ಅನ್‍ಲಾಕ್ ಆಗ್ತಿದೆ. ಇಂದು ಬೆಳಗ್ಗೆ 5 ಗಂಟೆಯಿಂದ ಹೆಚ್ಚು ಕಡಿಮೆ ಇಡೀ ರಾಜ್ಯ ಸಂಪೂರ್ಣ ಅನ್‍ಲಾಕ್ ಆಗಿದೆ. ಬರೋಬ್ಬರಿ ಎರಡೂವರೆ ತಿಂಗಳ ಬಳಿಕ ರಾಜ್ಯ ಸಂಪೂರ್ಣ ಸಹಜ ಸ್ಥಿತಿಗೆ ಮರಳಿದೆ. ಕೊರೋನಾ ಎರಡನೇ ಅಲೆ ಇಳಿಕೆ ಬೆನ್ನಲ್ಲೇ ಲಾಕ್ ನಿಯಮಗಳನ್ನು ಸರ್ಕಾರ ಸಡಿಲ ಮಾಡಿದ್ದು, ಮಾರ್ಗಸೂಚಿ ಹೊರಡಿಸಿದೆ. ಅದರ ಅನ್ವಯ ಒಂದೆರಡನ್ನು ಬಿಟ್ರೆ ಬಹುತೇಕ ಎಲ್ಲಾ ರೀತಿಯ ಚಟುವಟಿಕೆಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಳ್ಳಲಿವೆ.

    ಸತತ 2 ತಿಂಗಳ ಬಳಿಕ ಶಾಪಿಂಗ್ ಮಾಲ್, ಶಾಪಿಂಗ್ ಕಾಂಪ್ಲೆಕ್ಸ್‌ಗಳು ಓಪನ್ ಆಗ್ತಿವೆ. ಮಾಲ್ ಸೇರಿದಂತೆ ಇತರೆ ಮಳಿಗೆಗಳನ್ನು ರಾತ್ರಿ 9 ಗಂಟೆವರೆಗೂ ತೆರೆಯಬಹುದಾಗಿದೆ. ಇತ್ತ ಬಾರ್, ರೆಸ್ಟೋರೆಂಟ್‍ಗಳಲ್ಲಿ ರಾತ್ರಿ 9 ಗಂಟೆವರೆಗೂ ಕುಳಿತು ಕುಡಿಯಲು ಸರ್ಕಾರ ಅನುಮತಿ ನೀಡಿದೆ. ಅಲ್ಲದೆ ಹೋಟೆಲ್‍ಗಳಲ್ಲೂ ರಾತ್ರಿ 9 ಗಂಟೆವರೆಗೂ ಕುಳಿತು ಅಲ್ಲೇ ಆಹಾರ ಸೇವಿಸಬಹುದಾಗಿದೆ.

    ಇಂದಿನಿಂದ ಬೆಂಗಳೂರಿನ ಜೀವನಾಡಿ ಬಿಎಂಟಿಸಿಯ 4,500 ಬಸ್‍ಗಳು ರಸ್ತೆಗೆ ಇಳಿಯಲಿವೆ. ಸರ್ಕಾರ ಶೇ.100ರಷ್ಟು ಸೀಟ್ ಭರ್ತಿಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಆಗಂತ ಬಸ್ಸಿನಲ್ಲಿ ಸೀಟಿಲ್ಲ ಅಂತ ನಿಂತ್ಕೊಂಡು ಪ್ರಯಾಣ ಮಾಡುವಂತಿಲ್ಲ. ಎಷ್ಟು ಸೀಟ್ ಇದ್ಯೋ ಅಷ್ಟೆ ಪ್ರಯಾಣಿಕರಿಗೆ ಅವಕಾಶ. ಇತ್ತ ಮೆಟ್ರೋದಲ್ಲಿ 100 ಪರ್ಸೆಂಟ್ ಸೀಟ್ ಭರ್ತಿಗೆ ಒಪ್ಪಿಗೆ ಸಿಕ್ಕಿದೆ. ವಾರ ಪೂರ್ತಿ ಮೆಟ್ರೋ ಸೇವೆ ಸಿಗಲಿದೆ.

    ಬೇಜಾರ್ ಆದ್ರೆ ಮನರಂಜನಾ ಪಾರ್ಕ್‍ಗಳಿಗೂ ಇಂದಿನಿಂದ ಹೋಗಬಹುದಾಗಿದೆ. ನೂರು ಮಂದಿ ಬಂಧು ಬಾಂಧವರನ್ನು ಕರೆಯಿಸಿ ಮದ್ವೆಗಳನ್ನು ಕೂಡ ಮಾಡಬಹುದಾಗಿದೆ. ಅಂತ್ಯಕ್ರಿಯೆಗೆ 20 ಜನರಷ್ಟೇ ಭಾಗಿಯಾಗಬಹುದಾಗಿದೆ. ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಶೇ.100ರಷ್ಟು ಸಿಬ್ಬಂದಿ ಕಾರ್ಯ ನಿರ್ವಹಿಸಬಹುದಾಗಿದೆ. ಕೈಗಾರಿಕೆಗಳಲ್ಲೂ ಶೇ.100ರಷ್ಟು ಕಾರ್ಮಿಕರ ಬಳಕೆಗೆ ಅವಕಾಶವಿದೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ನಿಧಿ ಔಟ್

    ಎಲ್ಲಾ ವಲಯಗಳು ಅನ್‍ಲಾಕ್ ಆದ್ರೂ ಥಿಯೇಟರ್, ಪಬ್, ಶಾಲಾ-ಕಾಲೇಜು, ಕೋಚಿಂಗ್ ಸೆಂಟರ್, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಸಭೆ-ಸಮಾರಂಭಗಳಿಗೆ ನಿರ್ಬಂಧವಿದೆ. ಈಜುಕೊಳಕ್ಕೂ ನಿರ್ಬಂಧ ಇದೆ. ಆದ್ರೆ ಕ್ರೀಡಾಪಟುಗಳು ಅಭ್ಯಾಸಕ್ಕೆ ಅನುಮತಿ ಇದೆ. ಅಲ್ಲದೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೂ ನೈಟ್‍ ಕರ್ಫ್ಯೂ ಇರಲಿದೆ. ವೀಕೆಂಡ್ ಕರ್ಫ್ಯೂ ವಾಪಸ್ ಪಡೆಯಲಾಗಿದೆ.

    ಒಟ್ಟಿನಲ್ಲಿ ಇಂದಿನಿಂದ ರಾಜ್ಯದಲ್ಲಿ ಒಂಥರಾ ಬಿಂದಾಸ್ ದುನಿಯಾ ಅನಾವರಣಗೊಳ್ಳಲಿದೆ. ಆಗಂತ ಮೈಮರೆತ್ರೆ ಕಂಟಕ ತಪ್ಪಿದ್ದಲ್ಲ. ಈಗಾಗಲೇ ಡೆಲ್ಟಾ ಹಾಗೂ 3ನೇ ಅಲೆಯ ಭೀತಿ ಕಾಡುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರಬೇಡಿ. ಮಾಸ್ಕ್, ಸಾಮಾಜಿಕ ಅಂತರ ಪಾಲಿಸಿ. ಮಕ್ಕಳನ್ನು ಹೊರಗೆ ಕರ್ಕೊಂಡ್ ಹೋಗೋದು ಆದಷ್ಟು ಅವಾಯ್ಡ್ ಮಾಡಿ.

  • ನಾಳೆಯಿಂದ ಮಾಲ್ ಓಪನ್ – ಶುಚಿಗೊಳಿಸುತ್ತಿದ್ದಾರೆ ಸಿಬ್ಬಂದಿ

    ನಾಳೆಯಿಂದ ಮಾಲ್ ಓಪನ್ – ಶುಚಿಗೊಳಿಸುತ್ತಿದ್ದಾರೆ ಸಿಬ್ಬಂದಿ

    ಬೆಂಗಳೂರು: ಕೊರೊನಾ ಎರಡನೇ ಅಲೆಯ ಆರ್ಭಟದಿಂದ ಕ್ಲೋಸ್ ಆಗಿದ್ದ ಮಾಲ್ ಗಳು ನಾಳೆಯಿಂದ ಓಪನ್ ಆಗಲಿದೆ.

    ಸದ್ಯ ಮಾಲ್ ಸ್ವಚ್ಚಗೊಳಿಸುವುದರಲ್ಲಿ ಸಿಬ್ಬಂದಿ ತೊಡಗಿದ್ದಾರೆ. ಮಾಲ್ ನ ಪ್ರತಿಯೊಂದು ಭಾಗವನ್ನು ಸ್ಯಾನಿಟೈಸರ್ ಮಾಡಿ ಶುದ್ಧಗೊಳಿಸುವ ಕಾರ್ಯ ಬರದಿಂದ ನಡೆಯುತ್ತಿದೆ. ಜೊತೆಗೆ ಮಾಲ್ ನಲ್ಲಿರುವ ಶಾಪ್ ಗಳ ಮಾಲೀಕರು ಮತ್ತು ಸಿಬ್ಬಂದಿ ಸಹ ಬಂದು ತಮ್ಮ ತಮ್ಮ ಶಾಪ್ ಗಳನ್ನು ಸಿದ್ಧ ಪಡಿಸಿಕೊಳ್ಳುತ್ತಿದ್ದಾರೆ.

    ಎರಡು ತಿಂಗಳಿಂದ ಕ್ಲೋಸ್ ಆಗಿದ್ದ ಕಾರಣ ಶಾಪ್ ಮಾಲೀಕರು ಹಾಗೂ ಸಿಬ್ಬಂದಿ, ಇಂದೇ ಆಗಮಿಸಿ ನಾಳೆ ಓಪನ್ ಮಾಡಲು ಅಂತಿಮ ಹಂತದ ಸಿದ್ಧತೆಯಲ್ಲಿ ತೊಡಗಿದ್ದಾರೆ. ನಾಳೆಯಿಂದ ಓಪನ್ ಆಗುವ ಮಾಲ್ ಗಳಲ್ಲಿ ಜನ ಸಾಮಾಜಿಕ ಅಂತರ, ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಕೆಯನ್ನು ಕಡ್ಡಾಯವಾಗಿ ಮಾಡುವಂತೆ ಸೂಚನೆ ಫಲಕವನ್ನು ಸಹ ಹಾಕಿದ್ದಾರೆ. ಇದನ್ನೂ ಓದಿ:ನಾಳೆಯಿಂದ ಮಾದಪ್ಪನ ದರ್ಶನಕ್ಕೆ ಅವಕಾಶ – ಬೆಟ್ಟದಲ್ಲಿ ಭಕ್ತರು ವಾಸ್ತವ್ಯ ಹೂಡುವಂತಿಲ್ಲ

  • ನಾಳೆಯಿಂದ ಮಾದಪ್ಪನ ದರ್ಶನಕ್ಕೆ ಅವಕಾಶ – ಬೆಟ್ಟದಲ್ಲಿ ಭಕ್ತರು ವಾಸ್ತವ್ಯ ಹೂಡುವಂತಿಲ್ಲ

    ನಾಳೆಯಿಂದ ಮಾದಪ್ಪನ ದರ್ಶನಕ್ಕೆ ಅವಕಾಶ – ಬೆಟ್ಟದಲ್ಲಿ ಭಕ್ತರು ವಾಸ್ತವ್ಯ ಹೂಡುವಂತಿಲ್ಲ

    ಚಾಮರಾಜನಗರ: ಲಾಕ್‍ಡೌನ್ ಸಡಿಲಗೊಂಡ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ದೇವರ ದರ್ಶನಕ್ಕೆ ಅವಕಾಶ ಇರಲಿದೆ.

    ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ದೇವರ ದರ್ಶನಕ್ಕೆ ಮಾತ್ರ ಅವಕಾಶವಿದೆ. ತೀರ್ಥಪ್ರಸಾದ, ದಾಸೋಹ, ಯಾವುದೇ ಸೇವೆ, ಉತ್ಸವ, ಮುಡಿ ಕೊಡಲು ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.

    ಪ್ರಾಧಿಕಾರದ ಬಸ್ ಸೇವೆಯೂ ಸದ್ಯಕ್ಕೆ ಇರುವುದಿಲ್ಲ. ಬೇಡಿಕೆಗನುಸಾರ ಬಸ್ ಓಡಿಸುವ ಬಗ್ಗೆ ಪರಿಶೀಲಿಸಲಾಗುವುದು. ಭಕ್ತಾದಿಗಳು ಕಡ್ಡಾಯವಾಗಿ ರಂಗಮಂದಿರಕ್ಕೆ ಬಂದು ಕೋವಿಡ್ ಮಾರ್ಗಸೂಚಿಯಂತೆ ವ್ಯವಸ್ಥೆ ಮಾಡಲಾಗುವ ಆಸನಗಳಲ್ಲಿ ಕುಳಿತುಕೊಂಡು ತಮ್ಮ ಸರದಿ ಬಂದಾಗ ದರ್ಶನ ಪಡೆಯಬೇಕು.

    ಯಾವುದೇ ನೂಕು ನುಗ್ಗಲಿಗೆ ಅವಕಾಶ ಇರುವುದಿಲ್ಲ. ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲನೆ ಮಾಡಲಾಗುವುದು. ಜೊತೆಗೆ ಬೆಟ್ಟದಲ್ಲಿ ವಾಸ್ತವ್ಯ ಹೂಡಲು ಅವಕಾಶವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರಕ್ಕೆ ವಂಚನೆ ಮಾಡಿಲ್ಲ, ಕ್ಷಮೆ ಕೇಳದಿದ್ದರೆ, ಕಾನೂನು ಹೋರಾಟದ ಎಚ್ಚರಿಕೆ: ವಿಜಯ್ ನಿರಾಣಿ ಸ್ಪಷ್ಟನೆ