Tag: UP Election

  • ಸಮಾಜವಾದಿ ಪಕ್ಷದಿಂದ ಸನಾತನ ಧರ್ಮಕ್ಕೆ ಅವಮಾನ: ಯೋಗಿ

    ಸಮಾಜವಾದಿ ಪಕ್ಷದಿಂದ ಸನಾತನ ಧರ್ಮಕ್ಕೆ ಅವಮಾನ: ಯೋಗಿ

    ಲಕ್ನೋ: ಸಮಾಜವಾದಿ ಪಕ್ಷದ ನಾಯಕಿ ಅವರು ಕೇಸರಿ ಬಣ್ಣವನ್ನು ತುಕ್ಕು ಹಿಡಿದಿರುವ ಬಣ್ಣಕ್ಕೆ ಹೋಲಿಸಿರುವ ಹೇಳಿಕೆಯು ಸನಾತನ ಧರ್ಮಕ್ಕೆ ಹಾಗೂ ದಾರ್ಶನಿಕರಿಗೆ ಮಾಡಿದ ಅವಮಾನವಾಗಿದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಿಡಿಕಾರಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಕೆಲವು ಸಮಾಜವಾದಿ ಪಕ್ಷದವರು ಕೇಸರಿ ಬಣ್ಣವನ್ನು ತುಕ್ಕಿಗೆ ಹೋಲಿಸಿದ್ದರು. ಇದರಿಂದ ಸನಾತನ ಧರ್ಮಕ್ಕೆ ಅವಮಾನವಾಗಿದೆ. ಆದರೆ ಈ ಕೇಸರಿ ಬಣ್ಣಕ್ಕೆ ಹಿಂದೂ ಧರ್ಮದಲ್ಲಿ ಅದರದ್ದೇ ಆದ ಮಹತ್ವವಿದೆ. ಇದಕ್ಕೆ ನಾನು ಸನ್ಯಾಸಿಯೆಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ ಎಂದು ತಿರುಗೇಟು ನೀಡಿದರು.

    ಉತ್ತರಪ್ರದೇಶದ ಪ್ರತಿಯೊಬ್ಬ ನಿವಾಸಿಯು ನಮ್ಮನ್ನು ಸನ್ಯಾಸಿಯೆಂದು ಕರೆಯುತ್ತಾರೆ. ಕೇಸರಿ ಬಣ್ಣದ ಶಕ್ತಿಯಿಂದಲೇ ಇಷ್ಟೊಂದು ಹೆಸರು ಸಂಪಾದಿಸಿದ್ದೇನೆ. ಸೂರ್ಯೋದಯವಾದಾಗ ಸೂರ್ಯನ ಬಣ್ಣವು ಕೇಸರಿಯಾಗಿರುತ್ತದೆ. ಅಷ್ಟೇ ಅಲ್ಲದೇ ಸ್ವಾಮಿ ವಿವೇಕಾನಂದರೂ ನಾವು ಹಿಂದುಗಳೆಂದು ಹೆಮ್ಮೆಯಿಂದ ಹೇಳಿದ್ದರು. ಅವರು ಧರಿಸುತ್ತಿದ್ದದ್ದು ಕೇಸರಿ ಬಣ್ಣದ್ದೇ ಆಗಿತ್ತು. ಏಕೆಂದರೆ ನಾವು ಸನ್ಯಾಸಿಗಳು ಇದು ನಮ್ಮ ಗುರುತಾಗಿದೆ ಎಂದರು. ಇದನ್ನೂ ಓದಿ: ಮಣಿಪುರದಲ್ಲಿ ಇಂದು ಮೊದಲ ಹಂತದ ಮತದಾನ

    ಸಿರುತುದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಸಮಾಜವಾದ ಪಕ್ಷದ ನಾಯಕಿ ಡಿಂಪಲ್ ಯಾದವ್ ಮಾತನಾಡಿ, ಬಿಜೆಪಿಯ ಡಬಲ್ ಇಂಜಿನ್ ಸರ್ಕಾರಕ್ಕೆ ತುಕ್ಕು ಹಿಡಿದಿದೆ. ಯೋಗಿ ಆದಿತ್ಯನಾಥ್ ಅವರು ತುಕ್ಕು ಹಿಡಿದಿರುವ ಬಣ್ಣದ ಕಾವಿಯನ್ನು ಧರಿಸುತ್ತರೆ ಎಂದು ಟೀಕಿಸಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ- ಇಂದು ಬಿಡದಿಯಿಂದ ಮತ್ತೆ ಆರಂಭ

  • ರಷ್ಯಾ, ಉಕ್ರೇನ್ ಯುದ್ಧದಲ್ಲಿ ಮೋದಿ ಮಧ್ಯಸ್ಥಿಕೆಯನ್ನ ಎಲ್ಲರೂ ಬಯಸುತ್ತಿದ್ದಾರೆ: ಹೇಮಾಮಾಲಿನಿ

    ರಷ್ಯಾ, ಉಕ್ರೇನ್ ಯುದ್ಧದಲ್ಲಿ ಮೋದಿ ಮಧ್ಯಸ್ಥಿಕೆಯನ್ನ ಎಲ್ಲರೂ ಬಯಸುತ್ತಿದ್ದಾರೆ: ಹೇಮಾಮಾಲಿನಿ

    ಲಕ್ನೋ: ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ಉಕ್ರೇನ್ ಹಾಗೂ ರಷ್ಯಾ ನಡುವೆ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಿದ್ದಾರೆ ಎಂದು ಬಿಜೆಪಿ ಸಂಸದೆ ಹೇಮಾಮಾಲಿನಿ ತಿಳಿಸಿದರು.

    ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಮೋದಿ ಅವರಿಂದ ಇಡೀ ಜಗತ್ತೇ ಬೆರಗಾಗುವಂತೆ ಭಾರತವನ್ನು ಅಭಿವೃದ್ಧಿಯಾಗುತ್ತಿದೆ. ಮೋದಿ ಅವರನ್ನು ವಿಶ್ವದ ಬಲಿಷ್ಠ ನಾಯಕರಲ್ಲಿ ಒಬ್ಬರೆಂದು ಪರಿಗಣಿಸಲಾಗುತ್ತಿದೆ ಎಂದ ಅವರು, ಈಗ ರಷ್ಯಾ ಉಕ್ರೇನ್ ಯುದ್ಧವನ್ನು ತಡೆಯಲು ಅವರು ಮಧ್ಯಸ್ಥಿಕೆ ವಹಿಸಬೇಕು ಎಂದು ಎಲ್ಲರೂ ಬಯಸುತ್ತಿದ್ದಾರೆ ಎಂದರು.

    ಈ ಹಿಂದೆ ರಷ್ಯಾವು ಉಕ್ರೇನ್‍ನ ನಗರಗಳ ಮೇಲೆ ದಾಳಿ ನಡೆಸುತ್ತಿದ್ದಂತೆ ಪ್ರಧಾನಿ ಮೋದಿ ಕರೆ ಮಾಡಿ ಹಿಂಸಾಚಾರವನ್ನು ನಿಲ್ಲಿಸುವಂತೆ ಮನವಿ ಮಾಡಿದ್ದರು. ಜೊತೆಗೆ ಉಕ್ರೇನ್‍ನಿಂದ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರಲು ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ ಎಂದು ತಿಳಿಸಿದ್ದರು. ಇದನ್ನೂ ಓದಿ: ವಿಶ್ವವೇ ನಮ್ಮೊಂದಿಗಿದೆ, ಜಯ ನಮ್ಮದೆ: ಉಕ್ರೇನ್ ಅಧ್ಯಕ್ಷ

    ಉತ್ತರಪ್ರದೇಶದ ವಿಧಾನಸಭೆ ಚುನಾವಣೆ 7 ಹಂತದಲ್ಲಿ ನಡೆಯಲಿದ್ದು, ಈಗಾಗಲೇ 4 ಹಂತದ ಮತದಾನ ನಡೆದಿದೆ. ಮಾರ್ಚ್ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿದ ಉಕ್ರೇನ್‌ ಸೇನೆ

  • UP Election- ಮತ ನೀಡಿ ಪ್ರಜಾಪ್ರಭುತ್ವವನ್ನು ಬಲಪಡಿಸಿ: ಮೋದಿ

    UP Election- ಮತ ನೀಡಿ ಪ್ರಜಾಪ್ರಭುತ್ವವನ್ನು ಬಲಪಡಿಸಿ: ಮೋದಿ

    ಲಕ್ನೋ: ಎಲ್ಲಾ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಬಳಸಿಕೊಂಡು ಪ್ರಜಾಪ್ರಭುತ್ವವನ್ನು ಬಲಪಡಿಸಲು ತಮ್ಮ ಕೊಡುಗೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿ ಕರೆ ನೀಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ 4ನೇ ಹಂತದ ಮತದಾನದ ದಿನವಾಗಿದೆ. ಪ್ರತಿಯೊಬ್ಬರೂ ಮತದಾನ ಮಾಡಿ ಎಂದು ಎಲ್ಲ ಮತದಾರರಲ್ಲಿ ಕೇಳಿಕೊಳ್ಳುತ್ತೇನೆ. ಎಲ್ಲಾ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಬಳಸಿಕೊಂಡು ಪ್ರಜಾಪ್ರಭುತ್ವವನ್ನು ಬಲಪಡಿಸಲು ತಮ್ಮ ಕೊಡುಗೆ ನೀಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

    ಉತ್ತರಪ್ರದೇಶ ವಿಧಾನಸಭೆ ಚುನಾವಣೆಯ 9 ಜಿಲ್ಲೆಗಳಿಗೆ ನಾಲ್ಕನೇ ಹಂತದ ಮತದಾನ ಇಂದು ನಡೆಯುತ್ತಿದೆ. ಇಂದು ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾದ ಮತದಾನವು 6 ಗಂಟೆಗೆ ಮುಕ್ತಾಯವಾಗಲಿದೆ. ಕೊರೊನಾ ನಿಯಮಗಳೊಂದಿಗೆ ಮತದಾನ ನಡೆಯಲಿದ್ದು, ಸಾಮಾಜಿಕ ಅಂತರ ಕಾಪಾಡಲು 1 ಗಂಟೆ ಹೆಚ್ಚಿನ ಸಮಯ ನೀಡಲಾಗಿದೆ. 9 ಜಿಲ್ಲೆಗಳ 60 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಪಿಲಿಭಿತ್, ಲಖಿಂಪುರ ಖೇರಿ, ಸೀತಾಪುರ್, ಹರ್ದೋಯಿ, ಉನ್ನಾವೋ, ಲಕ್ನೋ, ರಾಯ್ ಬರೇಲಿ, ಬಂದಾ ಮತ್ತು ಫತೇಪುರ್ ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ಆರಂಭವಾಗಲಿದೆ. ಇದನ್ನೂ ಓದಿ: ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ

    ಕಳೆದ ಬಾರಿ 60 ಸ್ಥಾನಗಳಲ್ಲಿ ಬಿಜೆಪಿ 51 ಸೀಟು ಗೆದ್ದಿತ್ತು. 9 ಜಿಲ್ಲೆಗಳ ಪೈಕಿ 4 ಜಿಲ್ಲೆಗಳಲ್ಲಿ ಎಲ್ಲಾ ಕ್ಷೇತ್ರಗಳನ್ನು ಗೆದ್ದಿತ್ತು. ಈಗ ಆಡಳಿತ ವಿರೋಧಿ ಅಲೆ ನಡುವೆ ಮತ್ತೆ ಗೆಲ್ಲುವ ಸಂಕಷ್ಟದಲ್ಲಿ ಬಿಜೆಪಿಯಿದೆ. ಮೊದಲ 3 ಹಂತಗಳಲ್ಲಿ ಎಸ್‍ಪಿ-ಆರ್‌ಎಲ್‍ಡಿ ಮೈತ್ರಿ ಮುನ್ನಡೆ ಸಾಧ್ಯತೆಯಿದೆ. 4ನೇ ಹಂತದಲ್ಲಿ ಬಿಜೆಪಿ ತನ್ನ ಭದ್ರಕೋಟೆ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಉತ್ತರಪ್ರದೇಶದಲ್ಲಿ 4ನೇ ಹಂತದ ಮತದಾನವೂ ರಾಜಕಾರಣದಲ್ಲಿ ನಿರ್ಣಾಯಕ ಪಾತ್ರವಹಿಸಲಿದೆ. ಇದನ್ನೂ ಓದಿ: ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಕಹಳೆ – ರಷ್ಯಾ ಮೇಲೆ ಹಣಕಾಸು ಸೇರಿ ವಿವಿಧ ನಿರ್ಬಂಧ ಹೇರಿದ ಅಮೆರಿಕ!

  • ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ

    ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ

    ನವದೆಹಲಿ: ಕಳೆದ 5 ವರ್ಷಗಳಲ್ಲಿ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ ಶಿಕ್ಷಣಕ್ಕಾಗಿ ಯಾವುದೇ ಅಭಿವೃದ್ಧಿಯನ್ನು ಮಾಡಿಲ್ಲ. ಒಂದೇ ಒಂದು ಶಾಲೆಯನ್ನು ನಿರ್ಮಿಸಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದರು.

    ಉತ್ತರಪ್ರದೇಶದ ರುಧಾಲಿಯಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಅವರು, ರಾಷ್ಟ್ರ ರಾಜಧಾನಿಯಲ್ಲಿ ಶಾಲಾ ಮೂಲಸೌಕರ್ಯ ಮತ್ತು ಶಿಕ್ಷಣವನ್ನು ಸುಧಾರಿಸುವುದಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದ್ದೇವೆ. ಅದಕ್ಕಾಗಿ ಅಭಿಯಾನವನ್ನು ಪ್ರಾರಂಭಿಸಿದ್ದೇವೆ. ಕಳೆದ ವಾರ ದೆಹಲಿ ಸರ್ಕಾರವು 240 ಸರ್ಕಾರಿ ಶಾಲೆಗಳಲ್ಲಿ 12,000ಕ್ಕೂ ಹೆಚ್ಚು ಸ್ಮಾರ್ಟ್ ರೂಮ್‍ಗಳನ್ನು ಉದ್ಘಾಟಿಸಿದ್ದೇವೆ ಎಂದು ಹೇಳಿದರು.

    ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪತ್ನಿ ಮೆಲಾನಿಯಾ ಟ್ರಂಪ್ ಫೆಬ್ರವರಿ 2020ರಲ್ಲಿ ಭಾರತಕ್ಕೆ ಬಂದಾಗ ಸರ್ಕಾರಿ ಶಾಲೆಗಳನ್ನು ನೋಡಬೇಕು ಎಂದು ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದ್ದರು. ನಾನು ಕೇಜ್ರಿವಾಲ್ ಅವರ ಸರ್ಕಾರಿ ಶಾಲೆಗಳನ್ನು ನೋಡಲು ಹೋಗುತ್ತೇನೆ ಎಂದಿದ್ದರು. ಅವರು ಪ್ರಪಂಚದಾದ್ಯಂತ ಸುತ್ತಿದ್ದಾರೆ. ಆದರೆ ಅವರು ಎಲ್ಲಿಯೂ ಶಾಲೆಗಳಿಗೆ ಭೇಟಿ ನೀಡಿರಲಿಲ್ಲ ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಭೂ ಕುಸಿತ – ಆತಂಕದಲ್ಲಿ ಗ್ರಾಮಸ್ಥರು

    ಆದರೆ ಮೋದಿ, ಮೆಲಾನಿಯಾ ಟ್ರಂಪ್ ಬಳಿ ಯೋಗಿ ಆದಿತ್ಯನಾಥ್ ಅವರ ಶಾಲೆ ಹಾಗೂ ಮಧ್ಯಪ್ರದೇಶದ ಶಾಲೆಗಳನ್ನು ನೋಡಿ ಎಂದು ಮನವೊಲಿಸಲು ಪ್ರಯತ್ನಿಸಿದ್ದರು. ಆದರೆ ಮೆಲಾನಿಯಾ ಇದಕ್ಕೆ ಒಪ್ಪದೇ ಕೇಜ್ರಿವಾಲ್ ಅವರ ಶಾಲೆಯನ್ನು ಮಾತ್ರ ನೋಡುತ್ತೇನೆ ಎಂದು ಹೇಳಿದ್ದರು ಎಂದರು. ಇದನ್ನೂ ಓದಿ: ಆನ್‍ಲೈನ್‍ನಲ್ಲಿ ದೇಗುಲಕ್ಕೆ ಕಾಣಿಕೆ – ಯೋಜನೆಗೆ ಬುಧವಾರ ಸಿಎಂ ಚಾಲನೆ

    ವಿಶ್ವದ ಪ್ರಮುಖ ವ್ಯಕ್ತಿಯ ಪತ್ನಿ ನಮ್ಮ ಶಾಲೆಯನ್ನು ನೋಡಲು ಬಂದಿದ್ದರು. ಸುಮಾರು ಒಂದು ಗಂಟೆಗಳ ಕಾಲ ವಿದ್ಯಾರ್ಥಿಗಳೊಂದಿಗೆ ಕಳೆದರು. ಇದು ನಮಗೆ ಹೆಮ್ಮೆಯ ವಿಷಯ ಎಂದು ಹೇಳಿದರು.

  • ಉಗ್ರರ ಪತ್ತೆಗೆ ಗಾಜಿಯಾಬಾದ್ ಕವಿಯನ್ನು ನೇಮಿಸಿಕೊಳ್ಳಿ: ಕೇಜ್ರಿವಾಲ್ ವ್ಯಂಗ್ಯ

    ಉಗ್ರರ ಪತ್ತೆಗೆ ಗಾಜಿಯಾಬಾದ್ ಕವಿಯನ್ನು ನೇಮಿಸಿಕೊಳ್ಳಿ: ಕೇಜ್ರಿವಾಲ್ ವ್ಯಂಗ್ಯ

    ಲಕ್ನೋ: ಪ್ರಧಾನಿ ಮೋದಿ ಅವರು ಎಲ್ಲಾ ತನಿಖಾ ಸಂಸ್ಥೆಗಳನ್ನು ತೆಗೆದು ಹಾಕಿ ಕುಮಾರ್ ವಿಶ್ವಾಸ್ ಅವರನ್ನು ಮಾತ್ರ ನೇಮಿಸಿಕೊಳ್ಳಿ. ಅವರೇ ಉಗ್ರರನ್ನು ಹುಡುಕಿಕೊಡುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವ್ಯಂಗ್ಯವಾಡಿದರು.

    ಚುನಾವಣಾ ರ‍್ಯಾಲಿಯಲ್ಲಿ  ಮಾತನಾಡಿದ ಅವರು, ಬಿಜೆಪಿಯು ತನ್ನ ಎಲ್ಲಾ ತನಿಖಾ ಸಂಸ್ಥೆಯಿಂದ ದಾಳಿ ನಡೆಸಿತ್ತು. ಆದರೆ ಅವರಿಗೆ ಏನೂ ಸಿಗಲಿಲ್ಲ. ಆದರೆ ಗಾಜಿಯಾಬಾದ್‍ನ ಕವಿ ಕೇಜ್ರಿವಾಲ್ ಉಗ್ರ ಎಂಬ ಕನಸನ್ನು ಕಾಣುತ್ತಿದ್ದಾರೆ. ನಾನು ಮೋದಿ ಅವರಲ್ಲಿ ಕೇಳಿಕೊಳ್ಳುತ್ತೇನೆ. ಎಲ್ಲಾ ತನಿಖಾ ಸಂಸ್ಥೆಗಳನ್ನು ತೆಗೆದು ಹಾಕಿ ಗಾಜಿಯಾಬಾದ್‍ನ ಕವಿಯನ್ನು ಮಾತ್ರ ನೇಮಿಸಿ. ಅವರು ಯಾರು ಉಗ್ರರು ಎಂದು ಹೇಳುತ್ತಾರೆ ಎಂದು ಟೀಕಿಸಿದರು.

    ಇತ್ತೀಚೆಗೆ ಪ್ರಧಾನಿ ಮೋದಿ ಅವರು ಮಾತನಾಡಿ, ಈ ರೀತಿ ದೇಶದ್ರೋಹದಲ್ಲಿ ತೊಡಗಿರುವವರ ವಿರುದ್ಧ ಗಂಭೀರ ಪ್ರಕರಣ ದಾಖಲಿಸಬೇಕು. ಈ ಬಗ್ಗೆ ಸರಿಯಾಗಿ ತನಿಖೆ ನಡೆಸುತ್ತೇವೆ ಎಂದಿದ್ದರು. ಅಷ್ಟೇ ಅಲ್ಲದೇ ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ಗಂಭೀರವಾಗಿ ತನಿಖೆ ನಡೆಸಲು ಒತ್ತಾಯಿಸಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ, ಈ ಪ್ರಕರಣದ ಕುರಿತು ತಾವೇ ಖುದ್ದಾಗಿ ತನಿಖೆ ನಡೆಸುತ್ತೇನೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಐದು ರಾಜ್ಯಗಳಲ್ಲಿ ಬಿಜೆಪಿಗೆ ಬಹುಮತ ಸಿಗುವುದಿಲ್ಲ: ಪೃಥ್ವಿರಾಜ್ ಚವಾಣ್

    ಈ ಹಿಂದೆ ಅರವಿಂದ್ ಕೇಜ್ರಿವಾಲ್ ಪಂಜಾಬ್‍ನ್ನು ಬೇರೆ ರಾಷ್ಟ್ರವಾಗಿ ಅಲ್ಲಿಯ ಪ್ರಧಾನಿ ಆಗಲು ಬಯಸುತ್ತಿದ್ದಾರೆ. ಅವರಿಗೆ ಖಾಲಿಸ್ತಾನಿದ ಉಗ್ರರ ನಂಟಿದೆ ಎಂದು ಎಂದು ಆಪ್‍ನ ಮಾಜಿ ನಾಯಕ ಕುಮಾರ್ ವಿಶ್ವಾಸ್ ಆರೋಪಿಸಿದ್ದರು. ಅಲ್ಲದೇ ಆಪ್‍ಗೆ ಸಿಖ್ ಫಾರ್ ಜಸ್ಟಿಸ್ ಎಂಬ ಖಾಲಿಸ್ತಾನ ಸಂಘಟನೆ ಬೆಂಬಲ ವ್ಯಕ್ತಪಡಿಸಿ ಬರೆದಿರುವ ಪತ್ರವನ್ನು ಗಮನ ಸೆಳೆದಿದ್ದರು. ಇದನ್ನೂ ಓದಿ: ಹಿಜಬ್‌ ವಿವಾದ – ಶೀರೂರು ಮಠ, ಶಬರಿ ಮಲೆ, ತ್ರಿವಳಿ ತಲಾಖ್‌ ಪ್ರಕರಣ ಪ್ರಸ್ತಾಪಿಸಿ ಎಜಿ ವಾದ

  • ಭಯೋತ್ಪಾದಕ ಒಸಾಮಾನನ್ನು ʼಜೀʼ ಎನ್ನುತ್ತಿದ್ದರು: ಕಾಂಗ್ರೆಸ್‌, ಎಸ್‌ಪಿ ವಿರುದ್ಧ ಮೋದಿ ಆರೋಪ

    ಭಯೋತ್ಪಾದಕ ಒಸಾಮಾನನ್ನು ʼಜೀʼ ಎನ್ನುತ್ತಿದ್ದರು: ಕಾಂಗ್ರೆಸ್‌, ಎಸ್‌ಪಿ ವಿರುದ್ಧ ಮೋದಿ ಆರೋಪ

    ಲಕ್ನೋ: ಸಮಾಜವಾದಿ ಪಾರ್ಟಿ ಹಾಗೂ ಕಾಂಗ್ರೆಸ್‌ ಪಕ್ಷದ ನಾಯಕರು, ಉಗ್ರರ ಮೇಲೆ ಮೃದು ಧೋರಣೆ ಹೊಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

    ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ ಹಿನ್ನೆಲೆ ಹಾರ್ಡೋಯಿಯಲ್ಲಿ ಆಯೋಜಿಸಿದ್ದ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ ನಾಯಕರ ವರ್ತನೆ ಇನ್ನಷ್ಟು ಆತಂಕಕಾರಿಯಾಗಿದೆ. ಇವರು ಒಸಾಮಾ ಅವರಂತಹ ಭಯೋತ್ಪಾದಕರನ್ನು ʼಜೀʼ ಎಂದು ಸಂಬೋಧಿಸುತ್ತಾರೆ. ಬಾಟ್ಲಾ ಹೌಸ್‌ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರ ನಿರ್ಮೂಲನೆಗಾಗಿ ಇವರು ಕಣ್ಣೀರು ಹಾಕಿದರು ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಚುನಾವಣೆ ನಂತರ ಪಂಜಾಬ್‌ನಲ್ಲಿ ಕಾಂಗ್ರೆಸ್ ನಿರ್ನಾಮ: ಅಮರಿಂದರ್ ಸಿಂಗ್

    2008ರ ಅಹಮದಾಬಾದ್‌ ಸರಣಿ ಸ್ಫೋಟದಲ್ಲಿ 56 ಮಂದಿ ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನೆನಪಿಸಿಕೊಂಡ ಮೋದಿ, ಕೆಲವು ಪಕ್ಷಗಳು ಭಯೋತ್ಪಾಕರ ಬಗ್ಗೆ ಸಹಾನುಭೂತಿ ಹೊಂದಿವೆ ಎಂದು ಕುಟುಕಿದ್ದಾರೆ.

    ಉತ್ತರ ಪ್ರದೇಶದಲ್ಲಿ ನಡೆದಿದ್ದ 14 ಭಯೋತ್ಪಾದಕ ದಾಳಿ ಪ್ರಕರಣಗಳಲ್ಲಿ ಆಗಿನ ಸಮಾಜವಾದಿ ಸರ್ಕಾರ ಹಲವು ಭಯೋತ್ಪಾದಕರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಆದೇಶ ನೀಡಿತ್ತು. ಈ ಭಯೋತ್ಪಾದಕರು ಸ್ಫೋಟದ ಮೇಲೆ ಸ್ಫೋಟಗಳನ್ನು ನಡೆಸುತ್ತಿದ್ದಾರೆ. ಅಂತಹವರ ಮೇಲೆ ಕ್ರಮ ಜರುಗಿಸಲು ಸಮಾಜವಾದಿ ಪಕ್ಷ ಬಿಡುತ್ತಿಲ್ಲ ಎಂದು ದೂರಿದ್ದಾರೆ. ಇದನ್ನೂ ಓದಿ:  ಪಂಜಾಬ್ ರಾಜ್ಯವನ್ನು ಇಷ್ಟ ಪಡುವವರು, ಮಾಫಿಯಾ ನಡುವಿನ ಚುನಾವಣೆ ಸ್ಪರ್ಧೆಯಾಗಿದೆ: ಸಿಧು

    ಅಖಿಲೇಶ್‌ ಯಾದವ್‌ ಅವರ ಪಕ್ಷವು ಪಾಕಿಸ್ತಾನ ಮತ್ತು ಮಹಮ್ಮದ್‌ ಅಲಿ ಜಿನ್ನಾ ಅವರ ಬೆಂಬಲಿಗರು ಎಂದು ಚುನಾವಣಾ ಪ್ರಚಾರದ ಪೂರ್ವದಲ್ಲಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆರೋಪಿಸಿದ್ದರು. ಎಸ್‌ಪಿ ಮುಖ್ಯಸ್ಥ ಮುಲಾಯಂ ಸಿಂಗ್‌ ಯಾದವ್‌ ಅವರನ್ನು ʼಮೌಲಾನಾ ಮುಲಾಯಂʼ ಎಂದು ಬಿಜೆಪಿ ನಾಯಕರು ಕರೆದಿದ್ದರು. ಇದನ್ನೂ ಓದಿ: ತೃಣಮೂಲ ಕಾಂಗ್ರೆಸ್ ಹಿರಿಯ ನಾಯಕ ಸಾಧನ್ ಪಾಂಡೆ ಇನ್ನಿಲ್ಲ

  • ಬಾಬಾಗೆ ಏನೂ ತಿಳಿದಿಲ್ಲ: ಯೋಗಿ ಆದಿತ್ಯನಾಥ್‌ಗೆ ಅಖಿಲೇಶ್ ಯಾದವ್ ತಿರುಗೇಟು

    ಬಾಬಾಗೆ ಏನೂ ತಿಳಿದಿಲ್ಲ: ಯೋಗಿ ಆದಿತ್ಯನಾಥ್‌ಗೆ ಅಖಿಲೇಶ್ ಯಾದವ್ ತಿರುಗೇಟು

    ಲಕ್ನೋ: ಉತ್ತರಪ್ರದೇಶದ ಮುಖ್ಯಮಂತ್ರಿ ಬಾಬಾ ಅವರಿಗೆ ಏನೂ ತಿಳಿದಿಲ್ಲ ಎನ್ನುವುದರ ಮೂಲಕ ಯೋಗಿ ಆದಿತ್ಯನಾಥ್ ಅವರ ಆರೋಪಕ್ಕೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ತಿರುಗೇಟು ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಬಾಬಾ ಸಿಎಂ ಅವರು ಅದ್ಭುತವಾಗಿದ್ದಾರೆ. ಈ ಹಿಂದೆಯೂ ಅವರಿಗೆ ಏನೂ ತಿಳಿದಿರಲಿಲ್ಲ. ಈಗಲೂ ಏನು ತಿಳಿದಿಲ್ಲ. ಉತ್ತರ ಪ್ರದೇಶ ಚುನಾವಣೆ ರೈತರ ಹಕ್ಕು ಹಾಗೂ ಯುವಕರ ಉದ್ಯೋಗ ಮತ್ತು ಅಭಿವೃದ್ಧಿಗಾಗಿ ನಡೆಯುತ್ತಿದೆ ಎಂದು ತಿಳಿಸಿದರು.

    ಈ ಹಿಂದೆ ಚುನಾವಣಾ ರ‍್ಯಾಲಿಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿ, ಅಹಮದಾಬಾದ್ ಸ್ಫೋಟದ ಆರೋಪಿಯ ಸಂಬಂಧಿಕರು ಎಸ್‌ಪಿಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿದ ಅವರು, 2008ರ ಸರಣಿ ಸ್ಫೋಟ ಪ್ರಕರಣದಲ್ಲಿ 38 ಭಯೋತ್ಪಾದಕರಿಗೆ ಅಹಮದಾಬಾದ್ ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಘೋಷಿಸಿದೆ. ಅವರಲ್ಲಿ ಉತ್ತರಪ್ರದೇಶದ ಕೆಲವು ಭಯೋತ್ಪಾದಕರೂ ಸೇರಿದ್ದಾರೆ. ಮತ್ತು ಅವರಲ್ಲಿ ಒಬ್ಬರ ಕುಟುಂಬವು ಎಸ್‌ಪಿ ಮುಖ್ಯಸ್ಥರೊಂದಿಗೆ ಪಕ್ಷಕ್ಕೆ ಮತ ಕೇಳುತ್ತಿರುವುದು ಕಂಡುಬಂದಿದೆ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ಚೀನಾ-ಭಾರತದ ಸಂಬಂಧ ಬಿಗಡಾಯಿಸುತ್ತಿದೆ: ಜೈಶಂಕರ್

    ಅಲ್ಲದೆ, ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಎಸ್‌ಪಿ 2008ರ ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಭಯೋತ್ಪಾದಕರಿಗೆ ರಕ್ಷಣೆ ನೀಡುತ್ತಾರೆ ಎಂದು ಹೇಳಿದ್ದರು. ಇದನ್ನೂ ಓದಿ: ಉತ್ತರ ಪ್ರದೇಶಕ್ಕೆ 3ನೇ ಹಂತ, ಪಂಜಾಬ್ ಮತದಾನ ಇಂದು – ಅಖಿಲೇಶ್ ಯಾದವ್ ಭವಿಷ್ಯ ನಿರ್ಧಾರ

  • ಉತ್ತರ ಪ್ರದೇಶಕ್ಕೆ 3ನೇ ಹಂತ, ಪಂಜಾಬ್ ಮತದಾನ ಇಂದು – ಅಖಿಲೇಶ್ ಯಾದವ್ ಭವಿಷ್ಯ ನಿರ್ಧಾರ

    ಉತ್ತರ ಪ್ರದೇಶಕ್ಕೆ 3ನೇ ಹಂತ, ಪಂಜಾಬ್ ಮತದಾನ ಇಂದು – ಅಖಿಲೇಶ್ ಯಾದವ್ ಭವಿಷ್ಯ ನಿರ್ಧಾರ

    ನವದೆಹಲಿ: ಉತ್ತರ ಪ್ರದೇಶದ 16 ಜಿಲ್ಲೆಗಳ 59 ಕ್ಷೇತ್ರಗಳಿಗೆ ಇಂದು ಮೂರನೇ ಹಂತದ ಮತದಾನ ನಡೆಯಲಿದ್ದು, ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಕಾಂಗ್ರೆಸ್ ಆಡಳಿತವಿರುವ ಪಂಜಾಬ್‌ನಲ್ಲೂ ಇಂದು ಒಂದೇ ಹಂತದಲ್ಲಿ ಮತದಾನವಾಗಲಿದ್ದು, ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ನಡೆಯಲಿದೆ.

    ಉತ್ತರಪ್ರದೇಶದಲ್ಲಿ 2.15 ಕೋಟಿ ಮತದಾರರು 3ನೇ ಹಂತದಲ್ಲಿ 627 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಮೈನ್‌ಪುರಿಯ ಕರ್ಹಾಲ್ ವಿಧಾನಸಭಾ ಕ್ಷೇತ್ರಕ್ಕೂ ಇಂದೇ ಮತದಾನ ನಡೆಯುತ್ತಿದ್ದು, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಭವಿಷ್ಯವೂ ನಿರ್ಧಾರವಾಗಲಿದೆ.

    ಉತ್ತರಪ್ರದೇಶದ ಹತ್ರಾಸ್, ಫಿರೋಜಾಬಾದ್, ಇಟಾಹ್, ಕಾಸ್ಗಂಜ್, ಮೈನ್‌ಪುರಿ, ಫರೂಕಾಬಾದ್, ಕನೌಜ್, ಇಟಾವಾ, ಔರೈಯಾ, ಕಾನ್ಪುರ್ ದೇಹತ್, ಕಾನ್ಪುರ್ ನಗರ್, ಜಲೌನ್, ಝಾನ್ಸಿ, ಲಲಿತ್‌ಪುರ, ಹಮೀರ್‌ಪುರ್ ಮತ್ತು ಮಹೋಬಾ ಜಿಲ್ಲೆಗಳಲ್ಲಿ ಮತದಾನ ನಡೆಯುತ್ತಿದೆ.

    ಈಗಾಗಲೇ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಸಹೋದರ ಅಭಯ್ ರಾಮ್ ಯಾದವ್ ಇಟಾವಾ ಜಿಲ್ಲೆಯ ಸೈಫೈನಲ್ಲಿ ಈಗಾಗಲೇ ಮತ ಚಲಾಯಿಸಿದರು. ಇದನ್ನೂ ಓದಿ:  ಕೇಜ್ರಿವಾಲ್ ವಿರುದ್ಧ ಎಫ್‌ಐಆರ್ ದಾಖಲು!

    ಪಂಜಾಬ್‌ನಲ್ಲಿ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, 93 ಮಹಿಳೆಯರು ಸೇರಿದಂತೆ 1,304 ಅಭ್ಯರ್ಥಿಗಳ ಭವಿಷ್ಯವನ್ನು 2.14 ಕೋಟಿ ಮತದಾರರು ನಿರ್ಧರಿಸಲಿದ್ದಾರೆ. ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ರವರೆಗೆ ನಡೆಯಲಿದೆ. ಪಂಜಾಬ್‌ನ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಭಗವಂತ್ ಮಾನ್, ಮಾಜಿ ಸಿಎಂಗಳಾದ ಅಮರಿಂದರ್ ಸಿಂಗ್ ಮತ್ತು ಪ್ರಕಾಶ್ ಸಿಂಗ್ ಬಾದಲ್ ಮತ್ತು ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಅವರ ಭವಿಷ್ಯವೂ ಇಂದೇ ನಿರ್ಧಾರವಾಗಲಿದೆ. ಇದನ್ನೂ ಓದಿ: ದೇಶದ ಮೊದಲ ಪ್ರಧಾನಿ ಶಂಕುಸ್ಥಾಪನೆ ಮಾಡಿದ್ದ ಯೋಜನೆಗಳು ಮೋದಿ ಸರ್ಕಾರದಿಂದ ಪೂರ್ಣ: ಅಮಿತ್ ಶಾ

    bjp - congress

    2017ರ ಚುನಾವಣೆಯಲ್ಲಿ, ಬಿಜೆಪಿಯು ಈ 59 ಸ್ಥಾನಗಳಲ್ಲಿ 49 ಸ್ಥಾನಗಳನ್ನು ಗೆದ್ದಿದ್ದರೆ, ಸಮಾಜವಾದಿ ಪಕ್ಷ 9 ಸ್ಥಾನ ಹಾಗೂ ಕಾಂಗ್ರೆಸ್ 1 ಸ್ಥಾನ ಪಡೆದಿತ್ತು. ಆದರೆ ಬಹುಜನ ಸಮಾಜವಾದಿ ಪಕ್ಷವೂ ಈ ಕ್ಷೇತ್ರಗಳಲ್ಲಿ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ.

  • ದೇಶದ ಮೊದಲ ಪ್ರಧಾನಿ ಶಂಕುಸ್ಥಾಪನೆ ಮಾಡಿದ್ದ ಯೋಜನೆಗಳು ಮೋದಿ ಸರ್ಕಾರದಿಂದ ಪೂರ್ಣ: ಅಮಿತ್ ಶಾ

    ದೇಶದ ಮೊದಲ ಪ್ರಧಾನಿ ಶಂಕುಸ್ಥಾಪನೆ ಮಾಡಿದ್ದ ಯೋಜನೆಗಳು ಮೋದಿ ಸರ್ಕಾರದಿಂದ ಪೂರ್ಣ: ಅಮಿತ್ ಶಾ

    ಲಕ್ನೋ: ನೀರಾವರಿ ಯೋಜನೆಗಳಿಗೆ ದೇಶದ ಮೊದಲ ಪ್ರಧಾನಿ ಮಾಡಿದ್ದ ಶಂಕುಸ್ಥಾಪನೆಯನ್ನು ಪೂರ್ಣಗೊಳಿಸಲು ಮೋದಿ ಸರ್ಕಾರವೇ ಬರಬೇಕಾಯಿತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.

    ಪ್ರಬುದ್ಧ ವರ್ಗ ಸಮ್ಮೇಳನದಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಬಹುಕಾಲದಿಂದ ಬಾಕಿ ಉಳಿದಿರುವ ನೀರಾವರಿ ಯೋಜನೆಗಳ ಭೂಮಿ ಪೂಜೆಯನ್ನು 1961ರಲ್ಲಿ ಪಂಡಿತ್ ಜವಾಹರ್ ಲಾಲ್ ನೆಹರು ಅವರು ಮಾಡಿದ್ದರು. ಆದರೆ ಅದನ್ನು ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು ಎಂದರು.

    ನೆಹರು ಅವರು ಶಂಕುಸ್ಥಾಪನೆ ಮಾಡಿದ್ದ ಯೋಜನೆಗಳನ್ನು ಪೂರ್ಣಗೊಳಿಸಲು ೫೯ ವರ್ಷಗಳನ್ನು ತೆಗೆದುಕೊಂಡಿತು. ಅಂದು ಹಾಕಲಾಗಿದ್ದ ಯೋಜನೆಯ ಅಡಿಗಲ್ಲು ಕೂಡ ಕೈ ತಪ್ಪಿದೆ. ಜವಾಹರಲಾಲ್ ನೆಹರು ಅವರ ಹೆಸರಿನ ಕಲ್ಲು ಸ್ಥಾಪಿಸಲು ನಾವು ಕೆಲಸ ಮಾಡಿದ್ದೇವೆ ಎಂದು ವ್ಯಂಗ್ಯವಾಡಿದರು.

    ಉತ್ತರ ಪ್ರದೇಶವನ್ನು ಮತ್ತೊಮ್ಮೆ ಹೆಮ್ಮೆಯ ರಾಜ್ಯವನ್ನಾಗಿ ಮಾಡುವುದೇ ಬಿಜೆಪಿಯ ಉದ್ದೇಶವಾಗಿದೆ. ಉತ್ತರ ಪ್ರದೇಶವನ್ನು ಮತ್ತೊಮ್ಮೆ ಅತ್ಯಂತ ಸಮೃದ್ಧ, ಹಾಗೂ ಹೆಚ್ಚು ಸಾಕ್ಷರತೆಯನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಕೊಂಡೊಯ್ಯುವುದು ಬಿಜೆಪಿಯ ಅಜೆಂಡಾವಾಗಿದೆ ಎಂದು ಹೇಳಿದರು.

    ಜಾತೀಯತೆ, ರಾಜವಂಶದ ಆಧಾರದ ಮೇಲೆ ನಡೆಯುತ್ತಿರುವ ಸರ್ಕಾರಗಳು ಉತ್ತರ ಪ್ರದೇಶಕ್ಕೆ ಎಂದಿಗೂ ಒಳ್ಳೆಯದನ್ನು ಮಾಡಲು ಸಾಧ್ಯವಿಲ್ಲ. ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸಿದೆ. ಜೊತೆಗೆ ಅಜಮ್ ಖಾನ್, ಅತೀಕ್ ಅಹ್ಮದ್ ಮತ್ತು ಮುಖ್ತಾರ್ ಅನ್ಸಾರಿ ಅವರಿಗೆ 15 ವರ್ಷಗಳ ನಂತರ ಬಂಧಿಸಲಾಗಿದೆ ಎಂದು ನುಡಿದರು. ಇದನ್ನೂ ಓದಿ: ಕೂಚ್ ಬೆಹಾರ್ ಪ್ರತ್ಯೇಕ ರಾಜ್ಯದ ಬೇಡಿಕೆ ಇಡುವವರ ಮೊಣಕಾಲು ಮುರಿಯುತ್ತೇವೆ: ಉದಯನ್ ಗುಹಾ

    ಉತ್ತರಪ್ರದೇಶದಲ್ಲಿ ಬಿಜೆಪಿಯು ಅಧಿಕಾರಕ್ಕೆ ಬಂದ ಮೇಲೆ ಅಪರಾಧದ ರಾಜಕಾರಣ ಅಂತ್ಯಗೊಂಡಿದೆ. ಇದರಿಂದಾಗಿ ಇಂದು ಅಧಿಕಾರಿಗಳು ಸಂವಿಧಾನ, ಕಾನೂನುಗಳು ಮತ್ತು ನಿಯಮಗಳ ಪ್ರಕಾರ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ, ಇದರಿಂದಾಗಿ ಅನೇಕ ವಿಷಯಗಳನ್ನು ಸರಿ ಮಾಡಲಾಗುತ್ತಿದೆ ಎಂದರು.

    ಕಳೆದ ಐದು ವರ್ಷಗಳಲ್ಲಿ ಕೇಂದ್ರ ಸರ್ಕಾರದ ಆರ್ಥಿಕ ನೆರವಿನೊಂದಿಗೆ ಉತ್ತರ ಪ್ರದೇಶದಲ್ಲಿ ಆರೋಗ್ಯ, ಶಿಕ್ಷಣ ಮತ್ತು ಮೂಲಸೌಕರ್ಯ ನೀಡಿ ಅಭಿವೃದ್ಧಿಪಡಿಸಲಾಗಿದೆ. ಜೊತೆಗೆ ಉತ್ತರ ಪ್ರದೇಶದಲ್ಲಿ ರಾಮ ಜನ್ಮಭೂಮಿ ವಿವಾದ, ಕಾಶಿ ವಿಶ್ವನಾಥನ ದೇವಸ್ಥಾನ ಮತ್ತು ಮಾ ವಿಂಧ್ಯವಾಸಿನಿ ದೇವಸ್ಥಾನದ ಮೂರು ದೊಡ್ಡ ಸಮಸ್ಯೆಗಳನ್ನು ಸರಿಪಡಿಸಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ತುಂಗಾಭದ್ರಾ ಆರತಿಯಿಂದ ಹರಿಹರದ ಗತವೈಭವ ಮರಳಿ ಪಡೆಯುವ ಗುರಿ: ವಚನಾನಂದ ಸ್ವಾಮೀಜಿ

    ಅಖಿಲೇಶ್ ಯಾದವ್ ಅವರು ಲಕ್ನೋಗೆ ೨೪ ಗಂಟೆಗಳ ವಿದ್ಯುತ್ ನೀಡುತ್ತಿದ್ದರು. ಆದರೆ ಯೋಗಿ ಸರ್ಕಾರವು ಪ್ರತಿ ಹಳ್ಳಿ ಮತ್ತು ನಗರಕ್ಕೆ ವಿದ್ಯುತ್ ನೀಡಿದೆ ಎಂದು ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದರು.

  • ಮುಲಾಯಂ ಸಿಂಗ್ ಯಾದವ್ ಮನಃಪೂರ್ವಕವಾಗಿ ಸಮಾಜವಾದಿ ಪಕ್ಷದೊಂದಿಗಿಲ್ಲ: ಬಿಜೆಪಿ

    ಮುಲಾಯಂ ಸಿಂಗ್ ಯಾದವ್ ಮನಃಪೂರ್ವಕವಾಗಿ ಸಮಾಜವಾದಿ ಪಕ್ಷದೊಂದಿಗಿಲ್ಲ: ಬಿಜೆಪಿ

    ಲಕ್ನೋ: ಮುಲಾಯಂ ಸಿಂಗ್ ಯಾದವ್ ಅವರು ಮನಃಪೂರ್ವಕವಾಗಿ ಸಮಾಜವಾದಿ ಪಕ್ಷದೊಂದಿಗಿಲ್ಲ ಹಾಗೂ ಅವರ ಆಶೀರ್ವಾದವು ಅವರ ಸೊಸೆಯ ಪಕ್ಷಕ್ಕೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರೇಮ್ ಶುಕ್ಲ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಮೈನ್‍ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಸಮಾಜವಾದಿ ಪಕ್ಷದ ಪರಿಸ್ಥಿತಿ ಹೇಗಿದೆ ಎಂದರೆ ಅಖಿಲೇಶ್ ಯಾದವ್ ಅವರು ತಮ್ಮ ಕ್ಷೇತ್ರದ ಪ್ರಚಾರಕ್ಕಾಗಿ ಮುಲಾಯಂ ಸಿಂಗ್ ಯಾದವ್ ಅವರನ್ನು ಪ್ರಚಾರಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ಟೀಕಿಸಿದರು.

    ಅಖಿಲೇಶ್ ಯಾದವ್ ಅವರು ಮುಲಾಯಂ ಸಿಂಗ್ ಯಾದವ್ ಅವರನ್ನು ಸರಿಯಾಗಿ ನಡೆಸಿಕೊಳ್ಳದ ಕಾರಣ ಅವರು ಮನಃಪೂರ್ವಕವಾಗಿ ಸಮಾಜವಾದಿಪಕ್ಷದೊಂದಿಗೆ ಇಲ್ಲ ಹಾಗೂ ಅವರ ಆಶೀರ್ವಾದವು ಅವರ ಸೊಸೆ ಅಪರ್ಣಾ ಯಾದವ್ ಅವರ ಪಕ್ಷಕ್ಕಿದೆ ಎಂದರು. ಇದನ್ನೂ ಓದಿ: ಬಾಂಬ್‌ ಸ್ಫೋಟ ಪ್ರಕರಣದ ಅಪರಾಧಿ ಸಂಬಂಧಿ ಜೊತೆ ಅಖಿಲೇಶ್‌ ಮತಯಾಚನೆ: ಯೋಗಿ ಆದಿತ್ಯನಾಥ್

    ಇತ್ತೀಚೆಗಷ್ಟೇ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಕಳೆದ ಚುನಾವಣೆಯಲ್ಲಿ ಅವರು ಲಕ್ನೋ ಕ್ಯಾಂಟ್ ವಿಧಾನಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿದ್ದರು, ಆದರೆ ಬಿಜೆಪಿಯ ರೀಟಾ ಬಹುಗುಣ ಜೋಶಿ ಅವರನ್ನು ಸೋಲಿಸಿದರು. ಇದನ್ನೂ ಓದಿ: ಅಹ್ಮದಾಬಾದ್ ಸರಣಿ ಬಾಂಬ್ ಸ್ಫೋಟ – 38 ಮಂದಿಗೆ ಮರಣ ದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ