Tag: UP Police

  • ಐಸಿಸ್‌ ಮಾದರಿಯಲ್ಲಿ ಧಾರ್ಮಿಕ ಮತಾಂತರ ದಂಧೆ – 6 ರಾಜ್ಯಗಳಲ್ಲಿ 10 ಮಂದಿ ಅರೆಸ್ಟ್‌, ಬೃಹತ್‌ ಜಾಲ ಭೇದಿಸಿದ UP ಪೊಲೀಸ್‌

    ಐಸಿಸ್‌ ಮಾದರಿಯಲ್ಲಿ ಧಾರ್ಮಿಕ ಮತಾಂತರ ದಂಧೆ – 6 ರಾಜ್ಯಗಳಲ್ಲಿ 10 ಮಂದಿ ಅರೆಸ್ಟ್‌, ಬೃಹತ್‌ ಜಾಲ ಭೇದಿಸಿದ UP ಪೊಲೀಸ್‌

    – ಭಾರತದಲ್ಲಿ ಮತಾಂತರಕ್ಕೆ ಅಮೆರಿಕ, ಕೆನಾಡ ಸೇರಿದಂತೆ ವಿದೇಶಗಳಿಂದ ಫಂಡಿಂಗ್‌

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಸ್ವಯಂ ಘೋಷಿತ ದೇವಮಾನವ ಜಮಾಲುದ್ದೀನ್ ಅಲಿಯಾಸ್ ಛಂಗೂರ್ ಬಾಬಾ ಮತಾಂತರದ ಸೀಕ್ರೆಟ್‌ ಬಯಲಾದ ಬೆನ್ನಲ್ಲೇ ಉತ್ತರ ಪ್ರದೇಶದ ಪೊಲೀಸರು ಮತ್ತೊಂದು ಮತಾಂತರದ ಬೃಹತ್‌ ಜಾಲವನ್ನ ಭೇದಿಸಿದ್ದಾರೆ.

    ಹೌದು. ಅಂತಾರಾಷ್ಟ್ರೀಯ ಹಣಕಾಸು ನೆರವು ಪಡೆದು ಐಸಿಸ್‌ ಮಾದರಿಯಲ್ಲಿ ಮತಾಂತರ (ISIS-Style’ Religious Conversion) ದಂಧೆ ನಡೆಸುತ್ತಿದ್ದ ಬೃಹತ್‌ ಜಾಲ ಭೇದಿಸಿರುವ ಪೊಲೀಸರು 6 ವಿಭಿನ್ನ ರಾಜ್ಯಗಳಲ್ಲಿ 10 ಮಂದಿಯನ್ನ ಬಂಧಿತರನ್ನ ಗೋವಾದ ಆಯೇಷಾ (ಅಲಿಯಾಸ್ ಎಸ್.ಬಿ. ಕೃಷ್ಣ), ಕೋಲ್ಕತ್ತಾದ ಅಲಿ ಹಸನ್ (ಅಲಿಯಾಸ್ ಶೇಖರ್ ರಾಯ್) ಮತ್ತು ಒಸಾಮಾ, ಆಗ್ರಾದ ರೆಹಮಾನ್ ಖುರೇಷಿ, ಖಲಾಪರ್, ಮುಜಫರ್‌ನಗರದ ಅಬ್ಬು ತಾಲಿಬ್, ಡೆಹ್ರಾಡೂನ್‌ನ ಅಬುರ್ ರೆಹಮಾನ್, ದೆಹಲಿಯ ಮುಸ್ತಫಾ (ಅಲಿಯಾಸ್ ಮನೋಜ್), ಜೈಪುರದ ಮೊಹಮ್ಮದ್ ಅಲಿ ಮತ್ತು ಜುನೈದ್ ಖುರೇಷಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: Uttar Pradesh | ಸ್ಕೂಲ್ ವ್ಯಾನ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ರೇಪ್ – ಡ್ರೈವರ್ ಬಂಧನ

    ಬೆನ್ನುಬಿದ್ದದ್ದು ಹೇಗೆ?
    ಕಳೆದ ಮಾರ್ಚ್‌ ತಿಂಗಳಲ್ಲಿ 33 ಮತ್ತು 18 ವರ್ಷದ ಇಬ್ಬರು ಸಹೋದರಿಯರು ಕಾಣೆಯಾಗಿದ್ದರು. ಈ ಪ್ರಕರಣದ ಬೆನ್ನತ್ತಿದ್ದ ಪೊಲೀಸರಿಗೆ ಅವರನ್ನು ತಮ್ಮ ಧರ್ಮ ಬದಲಾಯಿಸಲು ಒತ್ತಾಯಿಸಲಾಗಿದೆ ಜೊತೆಗೆ ಮೂಲಭೂತ ವಾದಕ್ಕೆ ಒಳಗಾಗುತ್ತಿದ್ದಾರೆ ಎಂಬುದು ಗೊತ್ತಾಯಿತು. ಅಲ್ಲದೇ ‘ಲವ್ ಜಿಹಾದ್’ ಮತ್ತು ಮೂಲಭೂತವಾದದಲ್ಲಿ ತೊಡಗಿರುವ ಗ್ಯಾಂಗ್ ಈ ಸಹೋದರಿಯರನ್ನ ಗುರಿಯಾಗಿಸಿಕೊಂಡಿದೆ ಎಂಬುದನ್ನೂ ಕಂಡುಕೊಂಡರು. ಇಲ್ಲಿಂದ ತನಿಖೆ ಶುರು ಮಾಡಿದ ಪೊಲೀಸರು ದಂಧೆಯನ್ನ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರ ಗುಂಪು ಐಸಿಸ್‌ ಮಾದರಿಯಲ್ಲಿ ಕಾರ್ಯ ನಿರ್ವಹಿಸುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮಗಳಿಂದಿಗೆ ಮಾತನಾಡಿದ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರಾಜೀವ್ ಕೃಷ್ಣ, ಮತಾಂತರ ದಂಧೆ ತಡೆಯುವ ನಿಟ್ಟಿನಲ್ಲಿ ಪೊಲೀಸರು ʻಮಿಷನ್ ಅಸ್ಮಿತಾʼಕಾರ್ಯಾಚರಣೆ ಆರಂಭಿಸಿದ್ದು, ಮತಾಂತರ ಸಿಂಡಿಕೇಟ್‌ನ ಪ್ರಮುಖರಾದ ಮೊಹಮ್ಮದ್ ಉಮರ್ ಗೌತಮ್ ಮತ್ತು ಮುಫ್ತಿ ಜಹಾಂಗೀರ್ ಆಲಂ ಖಾಸ್ಮಿನನ್ನ ವಿಶೇಷ ತಂಡ ಬಂಧಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿಯನ್ನ TRF ನಡೆಸಿದೆ ಅನ್ನೋದಕ್ಕೆ ಸಾಕ್ಷಿ ತೋರಿಸಿ – ಉಗ್ರ ಸಂಘಟನೆಗೆ ಪಾಕ್‌ ನೇರ ಬೆಂಬಲ

    ಛಂಗೂರ್ ಬಾಬಾ ನೇತೃತ್ವದ ಸಿಂಡಿಕೇಟ್ ವಿಚಾರಣೆಯನ್ನ ಎಸ್ ಐಟಿ ಮತ್ತು ವಿಶೇಷ ಕಾರ್ಯಪಡೆ ಮುಂದುವರೆಸಿವೆ. ಲವ್ ಜಿಹಾದ್, ಅಕ್ರಮವಾಗಿ ಮತಾಂತರ ದಂಧೆ ನಡೆಸುವವರು, ತೀವ್ರವಾದಿಗಳು ಮತ್ತು ಜಾಗತಿಕ ಮಟ್ಟದಲ್ಲಿರುವ ಜಿಹಾದಿಗಳ ಜೊತೆಗೆ ಸೇರಿಕೊಂಡು ರಾಷ್ಟ್ರದ ಭದ್ರತೆಗೆ ಧಕ್ಕೆ ತರಲು ಪ್ರಯತ್ನಿಸುವ ಜಾಲದೊಂದಿಗೆ ಕೈ ಜೋಡಿಸುತ್ತಿರುವುದು ಕಂಡುಬಂದಿದೆ. ಈ ಸಂಬಂಧ ಆರು ರಾಜ್ಯಗಳಾದ್ಯಂತ 10 ಜನರನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    ಅಮೆರಿಕ, ಕೆನಡಾದಿಂದ ಫಂಡಿಂಗ್‌
    ಪ್ರಕರಣದ ತನಿಖೆ ನಡೆಸುತ್ತಿದ್ದಂತೆ ಇನ್ನಷ್ಟು ಸ್ಫೋಟಕ ಸಂಗತಿಗಳು ಬೆಳಕಿಗೆ ಬಂದಿವೆ. ಈ ಕುರಿತು ಮಾಹಿತಿ ನೀಡಿರುವ ಆಗ್ರಾ ಪೊಲೀಸ್‌ ಆಯುಕ್ತ, ಈ ಮತಾಂತರ ದಂಧೆಗೆ ಅಮೆರಿಕ ಮತ್ತು ಕೆನಡಾ ಸೇರಿದಂತೆ ವಿದೇಶಗಳಿಂದ ಹಣೆ ಹೊಳೆಯೇ ಹರಿದುಬಂದಿದೆ. ಸದ್ಯಕ್ಕೆ ಅಮೆರಿಕ ಮತ್ತು ಕೆನಡಾದ ಹಣದ ಮೂಲದ ಬಗ್ಗೆ ಸುಳಿವು ಸಿಕ್ಕಿದೆ. ಉಳಿದ ದೇಶಗಳಿಂದ ಹಣ ಸಂದಾಯವಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಪುಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ – ಕೆಲಸದ ಒತ್ತಡವೇ ಕಾರಣ ಅಂತ ಡೆತ್ ನೋಟ್ ಬರೆದಿಟ್ಟು ಸೂಸೈಡ್

    ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉತ್ತರ ಪ್ರದೇಶ ಪೊಲೀಸರು ಹೆಚ್ಚಿನ ತನಿಖೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆ ವಿಶೇಷ ಕಾರ್ಯಪಡೆ (STF) ಮತ್ತು ಭಯೋತ್ಪಾದನಾ ನಿಗ್ರಹ ದಳ (ATS) ಸೇರಿದಂತೆ ವಿಶೇಷ ಘಟಕಗಳನ್ನು ಕರೆಸಿಕೊಂಡಿದ್ದಾರೆ. ಇದನ್ನೂ ಓದಿ: 10 ವರ್ಷಗಳಿಂದ ಭಾರತದಲ್ಲಿ ಮಂಗಳಮುಖಿ ವೇಷದಲ್ಲಿದ್ದ ಅಬ್ದುಲ್ ಕಲಾಂ ಅರೆಸ್ಟ್‌

  • ಆರ್ಥಿಕ ನೆರವು, ವಿವಾಹದ ಭರವಸೆ ನೀಡಿ ಹಿಂದೂಗಳನ್ನ ಇಸ್ಲಾಂಗೆ ಮತಾಂತರ – ಮಾಸ್ಟರ್‌ ಮೈಂಡ್‌ ಸೇರಿ ಇಬ್ಬರು ಅರೆಸ್ಟ್‌

    ಆರ್ಥಿಕ ನೆರವು, ವಿವಾಹದ ಭರವಸೆ ನೀಡಿ ಹಿಂದೂಗಳನ್ನ ಇಸ್ಲಾಂಗೆ ಮತಾಂತರ – ಮಾಸ್ಟರ್‌ ಮೈಂಡ್‌ ಸೇರಿ ಇಬ್ಬರು ಅರೆಸ್ಟ್‌

    – ಬಡವರು, ಅಸಹಾಯಕ ಕಾರ್ಮಿಕರು, ವಿಧವೆಯರೇ ಟಾರ್ಗೆಟ್‌

    ಲಕ್ನೋ: ಆರ್ಥಿಕ ನೆರವು, ವಿವಾಹ ಸೇರಿದಂತೆ ಹತ್ತು ಹಲವು ಭರವಸೆಗಳನ್ನ ಹಿಂದೂಗಳನ್ನ ಇಸ್ಲಾಂಗೆ ಮತಾಂತರ ಮಾಡುತ್ತಿದ್ದ ಧಾರ್ಮಿಕ ಮತಾಂತರ ತಂಡದ (Religious Conversion Gang) ಮಾಸ್ಟರ್‌ ಮೈಂಡ್‌ ಮತ್ತು ಆತನ ಸಹಾಯಕನನ್ನ ಉತ್ತರ ಪ್ರದೇಶ ಪೊಲೀಸರ (Uttar Pradesh Police) ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.

    ಜಲಾಲುದ್ದೀನ್ ಅಲಿಯಾಸ್ ಛಂಗೂರ್ ಬಾಬಾ ಮತ್ತು ಸಹಯಾಕ ನೀತು ಅಲಿಯಾಸ್ ನಸ್ರೀನ್ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಬ್ಬರು ಬಲರಾಂಪುರ ಜಿಲ್ಲೆಯ ಮಧಪುರ ನಿವಾಸಿಗಳೆಂದು ತಿಳಿದುಬಂದಿದೆ. ಇದನ್ನೂ ಓದಿ: ʻಆಪರೇಷನ್ ಸಿಂಧೂರʼ ಯಶಸ್ಸಿನ ಬೆನ್ನಲ್ಲೇ 1 ಲಕ್ಷ ಕೋಟಿ ಮೊತ್ತದ ರಕ್ಷಣಾ ಯೋಜನೆಗಳಿಗೆ ಮೋದಿ ಸರ್ಕಾರ ಅಸ್ತು

    ಜಲಾಲುದ್ದೀನ್ ವಿರುದ್ಧ ಉತ್ತರ ಪ್ರದೇಶ ಕೋರ್ಟ್‌ (UP Court) ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಈ ಬೆನ್ನಲ್ಲೇ ಆತನ ಸುಳಿವು ನೀಡಿದವರಿಗೆ ಯುಪಿ ಪೊಲೀಸರು 50,000 ರೂ. ನಗದು ಬಹುಮಾನ ಘೋಷಿಸಿದ್ದರು ಎಂದು ವರದಿಗಳು ತಿಳಿಸಿವೆ. ಸದ್ಯ ಇಬ್ಬರನ್ನು ಬಂಧಿಸಿರುವ ಪೊಲೀಸರು ಲಕ್ನೋ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

    ಬಿಎನ್‌ಎಸ್‌ ಹಾಗೂ ಉತ್ತರ ಪ್ರದೇಶ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆ, 2021ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಹಿಂದೂ ಮತ್ತು ಇತರ ಮುಸ್ಲಿಮೇತರ ಸಮುದಾಯದ ಜನರನ್ನು ಇಸ್ಲಾಂಗೆ ಮತಾಂತರ ಮಾಡಲು ಸಂಘಟಿತವಾಗಿ ಕೆಲಸ ಮಾಡುತ್ತಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಕಳಪೆ ಹೆಲ್ಮೆಟ್‌ಗೆ ಕೇಂದ್ರ ತಡೆ – BIS ಪ್ರಮಾಣೀಕರಿಸಿದ ISI ಗುರುತಿನ ಹೆಲ್ಮೆಟ್‌ ಕಡ್ಡಾಯ

    ಮುಖ್ಯವಾಗಿ ಬಡವರು, ಅಸಹಾಯಕ ಕಾರ್ಮಿಕರು, ದುರ್ಬಲ ವರ್ಗದವರು ಮತ್ತು ವಿಧವೆಯರಿಗೆ ಪ್ರೋತ್ಸಾಹ ಧನ, ಆರ್ಥಿಕ ನೆರವು ಹಾಗೂ ವಿವಾಹದ ಭರವಸೆ ನೀಡಿ ಮತಾಂತರಗೊಳಿಸುತ್ತಿದ್ದರು. ಅದು ಸಾಧ್ಯವಾಗದೇ ಇದ್ದಾಗ ಬೆದರಿಸಿ ಬಲವಂತವಾಗಿ ಮತಾಂತರ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇದು ಮತಾಂತರದ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ಹೇಳಲಾಗಿದೆ.

    ಇದೇ ಪ್ರಕರಣದಲ್ಲಿ ಕಳೆದ ಏಪ್ರಿಲ್‌ 8ರಂದು ಇಬ್ಬರು ಆರೋಪಿಗಳನ್ನ ಬಂಧಿಸಲಾಗಿತ್ತು. ಉಳಿದ ಇಬ್ಬರನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದಲೈಲಾಮಾ ಉತ್ತರಾಧಿಕಾರಿ ಸಂಘರ್ಷ- ದಲೈಲಾಮಾ ಜೊತೆ ಭಾರತದ ಸಂಬಂಧ ಹೇಗಿತ್ತು; ಚೀನಾ ಎಚ್ಚರಿಕೆ ಏನು?

  • ಮೆಟ್ರೋ ನಿಲ್ದಾಣದ ಕೆಳಗೆ ಪೋಷಕರೊಟ್ಟಿಗೆ ಮಲಗಿದ್ದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ

    ಮೆಟ್ರೋ ನಿಲ್ದಾಣದ ಕೆಳಗೆ ಪೋಷಕರೊಟ್ಟಿಗೆ ಮಲಗಿದ್ದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ

    ಲಕ್ನೋ: ಮೆಟ್ರೋ ನಿಲ್ದಾಣದ (Metro Station) ಕೆಳಗೆ ಪೋಷಕರೊಟ್ಟಿಗೆ ಮಲಗಿದ್ದ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪೊಲೀಸರ ಪ್ರಕಾರ, ಬುಧವಾರ ತಡರಾತ್ರಿ ದಿನಗೂಲಿ ಕಾರ್ಮಿಕರ (Daily Wage Labourers) ಮಗಳಾದ ಬಾಲಕಿ ಮೆಟ್ರೋ ನಿಲ್ದಾಣದ ಕೆಳಗೆ ಮಲಗಿದ್ದಾಗ ಘಟನೆ ನಡೆದಿದೆ. ಆರೋಪಿಯು ಬಾಲಕಿ ಪೋಷಕರೊಟ್ಟಿಗೆ ಮಲಗಿದ್ದಾಗಲೇ ಹೊತ್ತೊಯ್ದು ಏಕಾಂತ ಸ್ಥಳದಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಅತ್ಯಂತ ಕರಾಳ ದಿನ, ಡಿಸಿಎಂ ಅಪರಾಧಿ ಅನ್ನೋದು ರಾಜ್ಯಕ್ಕೆ ಗೊತ್ತಿದೆ: ಭಾಸ್ಕರ್‌ ರಾವ್‌ ಆಕ್ರೋಶ

    ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಉಪ ಪೊಲೀಸ್ ಆಯುಕ್ತ (ಕೇಂದ್ರ) ಆಶಿಶ್ ಕುಮಾರ್ ಶ್ರೀವಾಸ್ತವ್ ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ಬಾಲಕಿಯನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್‌, ಉಳಿದವರು ಎಸ್ಕೇಪ್‌

    ಬಳಿಕ ಮಾತನಾಡಿರುವ ಡಿಸಿಪಿ, ಅಲಂಬಾಗ್ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಘಟನೆ ಬಳಿಕ ಆರೋಪಿಯನ್ನ ಬಂಧಿಸಲು ಐದು ವಿಶೇಷ ತಂಡಗಳನ್ನ ರಚಿಸಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ

  • ಮದ್ವೆಗೆ ಹುಡ್ಗಿ ನೋಡಲು ಹೋಗಿದ್ದ ಯುವಕ – ಇಷ್ಟವಿಲ್ಲ ಅಂದಿದ್ದಕ್ಕೆ ಹುಡುಗಿ ತಲೆಗೆ ಗುಂಡಿಟ್ಟ..!

    ಮದ್ವೆಗೆ ಹುಡ್ಗಿ ನೋಡಲು ಹೋಗಿದ್ದ ಯುವಕ – ಇಷ್ಟವಿಲ್ಲ ಅಂದಿದ್ದಕ್ಕೆ ಹುಡುಗಿ ತಲೆಗೆ ಗುಂಡಿಟ್ಟ..!

    ಲಕ್ನೋ: ಮಗ ಅಥವಾ ಮಗಳು ಅರೇಂಜ್ ಮ್ಯಾರೇಜ್ (Arrange Marriage) ಆಗ್ತಿದ್ದಾರೆ ಅಂದ್ರೆ ಮನೆಮಂದಿಗೆ ತುಂಬಾನೇ ಖುಷಿ, ಏಕೆಂದ್ರೆ ನಾವೇ ಇಷ್ಟಪಟ್ಟ ಸಂಬಂಧದೊಂದಿಗೆ ಮದುವೆಯಾಗುತ್ತಿದ್ದಾರೆ, ಇಲ್ಲಿ ಜಾತಿ, ಸಂಪ್ರದಾಯ ಅಂತ ತೊಂದರೆ ಇರುವುದಿಲ್ಲ, ಇನ್ನು ಜಾತಕ ನೋಡಿಸಿದಾಗಲಂತೂ ತುಂಬಾ ಹೊಂದಾಣಿಕೆ ಕಂಡು ಬಂದಿರುತ್ತದೆ, ಮನೆಯವರಿಗೆ ಖುಷಿಯೋ ಖುಷಿ. ಆದ್ರೆ ಹುಡುಗಿ ನೋಡುವ ಶಾಸ್ತ್ರಕ್ಕೆ ಹೋದಾಗ ಆಕೆ ತನನ್ನ ನಿರಾಕರಿಸಿದ್ದಕ್ಕೆ ಹಣೆಗೆ ಗುಂಡು ಹಾರಿಸಿ ಯುವಕ ಎಸ್ಕೇಪ್‌ ಆಗಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಮೈನ್‌ಪುರಿನಲ್ಲಿ ನಡೆದಿದೆ.

    ಹೌದು.. ಎರಡು ಕುಟುಂಬಸ್ಥರು ಹುಡುಗ – ಹುಡುಗಿ ನೋಡುವ ಶಾಸ್ತ್ರ ಇಟ್ಟುಕೊಂಡಿದ್ದರು. ಇಬ್ಬರಿಗೂ ಒಪ್ಪಿಗೆಯಾದ್ರೆ ಮದುವೆ (Marriage) ನಿಶ್ಚಯ ಮಾಡಿಯೇ ಬಿಡೋಣ ಅಂತ ನಿರ್ಧರಿಸಿದ್ದರು, ಆದ್ರೆ ಅಲ್ಲಿ ನಡೆದಿದ್ದೇ ಬೇರೆ. ಹುಡುಗಿ ತನಗೆ ಹುಡುಗ ಇಷ್ಟವಿಲ್ಲ ಅಂತ ಹೇಳಿದ್ದಾಳೆ. ಇದರಿಂದ ಕೋಪಗೊಂಡ ಹುಡುಗ ತಲೆಗೆ ಗುಂಡು ಹಾರಿಸಿದ್ದಾನೆ. ಇದನ್ನೂ ಓದಿ: ಟ್ರಂಪ್‌ ನೀತಿಯನ್ನು ಟೀಕಿಸಿದ ಬೆನ್ನಲ್ಲೇ DOGE ಮುಖ್ಯಸ್ಥ ಪಟ್ಟದಿಂದ ಇಳಿದ ಮಸ್ಕ್‌

    ಹುಡುಗಿಯ ತಲೆಗೆ ಗುಂಡು ಹಾರಿಸಿ (Gun Shoot) ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿ ಯುವಕನನ್ನ ಸಗಾಮೈ ಪೊಲೀಸ್ ಠಾಣೆಯ ಎಲಾವ್ ಗ್ರಾಮದ ನಿವಾಸಿ ಅಮುಕ್ ಮಗ ರಾಜೇಶ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಇಬ್ಬರು ಕನ್ನಡಿಗರು ಸೇರಿ 26 ಮೃತ ಪ್ರವಾಸಿಗರ ನೆನಪಿಗೆ ಪಹಲ್ಗಾಮ್‌ನಲ್ಲಿ ಸ್ಮಾರಕ – ಒಮರ್ ಅಬ್ದುಲ್ಲಾ

    ಗುಂಡು ಹಾರಿಸಿದ ನಂತರ, ಆರೋಪಿ ಪಿಸ್ತೂಲ್, ಬೈಕ್ ಮತ್ತು ಮೊಬೈಲ್ ಅನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಭೋಗಾಂವ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹುಡುಗಿ ಕುಟುಂಬಸ್ಥರಿಂದ ಹೇಳಿಕೆ ಪಡೆದಿದ್ದಾರೆ. ನಂತರ ಸ್ಥಳದಿಂದ ಒಂದು ಪಿಸ್ತೂಲ್, ಮೊಬೈಲ್ ಫೋನ್ ಮತ್ತು ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.

    ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಪಾಕ್‌ ಪರ ಬೇಹುಗಾರಿಕೆ – 7 ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ರಾಜಸ್ಥಾನದ ಸರ್ಕಾರಿ ನೌಕರ ಅರೆಸ್ಟ್‌

  • ಯುಪಿಯಲ್ಲಿ ರೇಪಿಸ್ಟ್, ಕೊಲೆಗಾರರ ವಿರುದ್ಧ ‘ಆಪರೇಷನ್ ಲಂಗ್ಡಾ’ – 11 ಕ್ರಿಮಿನಲ್ಸ್ ಕಾಲಿಗೆ ಗುಂಡೇಟು

    ಯುಪಿಯಲ್ಲಿ ರೇಪಿಸ್ಟ್, ಕೊಲೆಗಾರರ ವಿರುದ್ಧ ‘ಆಪರೇಷನ್ ಲಂಗ್ಡಾ’ – 11 ಕ್ರಿಮಿನಲ್ಸ್ ಕಾಲಿಗೆ ಗುಂಡೇಟು

    – ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿರುವವರ ಬೇಟೆಗಿಳಿದ ಯೋಗಿ ಸರ್ಕಾರ

    ಲಕ್ನೋ: ಉತ್ತರ ಪ್ರದೇಶದಲ್ಲಿ `ಆಪರೇಷನ್ ಬುಲ್ಡೋಜರ್’ ಬಳಿಕ ಈಗ `ಆಪರೇಷನ್ ಲಂಗ್ಡಾ’ (Operation Langda) ಸದ್ದು ಮಾಡಿದೆ. ರಾಜ್ಯದಲ್ಲಿ ಕ್ರಿಮಿನಲ್‌ಗಳು, ರೇಪಿಸ್ಟ್‌ಗಳು, ಕೊಲೆಗಾರರು, ದರೋಡೆಕೋರರ ವಿರುದ್ಧ ಸಮರ ಸಾರಿರುವ ಉತ್ತರ ಪ್ರದೇಶ ಪೊಲೀಸರು 8 ನಗರಗಳಲ್ಲಿ 24 ಗಂಟೆಯಲ್ಲಿ 11 ಜನರಿಗೆ ಗುಂಡೇಟು ಹೊಡೆದಿದ್ದಾರೆ.

    ಅಪರಾಧ ಕೃತ್ಯ ನಿಯಂತ್ರಣಕ್ಕೆ ಪೊಲೀಸರು ಆರಂಭಿಸಿರುವ ವಿಶೇಷ ಕಾರ್ಯಾಚರಣೇಯೇ ಆಪರೇಷನ್ ಲಂಗ್ಡಾ. ಪದೇ ಪದೇ ಅಪರಾಧ ಕೃತ್ಯ ಎಸಗುವವರು, ಕ್ರಿಮಿನಲ್‌ಗಳು, ರೌಡಿಗಳು, ಪರೋಡಿಗಳಿಗೆ ಗುಂಡೇಟು ಹೊಡೆಯುವ ಮೂಲಕ ಪೊಲೀಸರು ಭೀತಿ ಹುಟ್ಟಿಸಿದ್ದಾರೆ. ಆಪರೇಷನ್ ಲಂಗ್ಡಾ ಕಾರ್ಯಾಚರಣೆಯಲ್ಲಿ ಕ್ರಿಮಿನಲ್ಸ್‌ಗಳನ್ನು ಕೊಲ್ಲುವುದಿಲ್ಲ. ಬದಲಿಗೆ ಅವರ ಕಾಲಿಗೆ ಗುಂಡೇಟು ಹೊಡೆದು ಅರೆಸ್ಟ್ ಮಾಡಲಾಗುತ್ತದೆ. ಇದನ್ನೂ ಓದಿ: Hassan | ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

    ಬಂಧಿತರೆಲ್ಲರೂ ಉತ್ತರ ಪ್ರದೇಶ ಪೊಲೀಸರ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿರುವವರೇ ಆಗಿದ್ದಾರೆ. ಈ ಎನ್‌ಕೌಂಟರ್ ವೇಳೆ ಕೆಲ ಕ್ರಿಮಿನಲ್‌ಗಳು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

    ಗುಂಡೇಟು ತಿಂದವರು ಯಾರು?
    * ಲಖನೌದಲ್ಲಿ ರೇಪ್ ಆರೋಪಿ.
    * ಘಾಜಿಯಾಬಾದ್‌ನಲ್ಲಿ ಕೊಲೆಗಾರ.
    * ಶಾಮ್ಲಿಯಲ್ಲಿ ಗೋವು ಅಕ್ರಮ ಸಾಗಾಟಗಾರ.
    * ಝಾನ್ಸಿಯಲ್ಲಿ ಕ್ರಿಮಿನಲ್.
    * ಬುಲಂದ್‌ಶಹರ್‌ನಲ್ಲಿ ಅತ್ಯಾಚಾರಿ.
    * ಬಾಘಪತ್‌ನಲ್ಲಿ ದರೋಡೆಕೋರ.
    * ಬಲಿಯಾದಲ್ಲಿ ಎಸ್ಕೇಪ್ ಆಗ್ತಿದ್ದ ಕ್ರಿಮಿನಲ್.
    * ಆಗ್ರಾದಲ್ಲಿ ಕಳ್ಳ.
    * ಜಲೌನ್‌ನಲ್ಲಿ ದರೋಡೆಕೋರ.
    * ಉನ್ನಾವೋದಲ್ಲಿ ರೌಡಿಶೀಟರ್.

  • ಶ್ರದ್ಧಾ ವಾಕರ್ ಮಾದರಿ ಮಾಜಿ ಸೈನಿಕನ ಹತ್ಯೆ – ಪ್ರಿಯಕರನ ಜೊತೆ ಸೇರಿ ಪತಿಗೆ ಚಟ್ಟ ಕಟ್ಟಿದ ಪತ್ನಿ

    ಶ್ರದ್ಧಾ ವಾಕರ್ ಮಾದರಿ ಮಾಜಿ ಸೈನಿಕನ ಹತ್ಯೆ – ಪ್ರಿಯಕರನ ಜೊತೆ ಸೇರಿ ಪತಿಗೆ ಚಟ್ಟ ಕಟ್ಟಿದ ಪತ್ನಿ

    ಲಕ್ನೋ: 2022ರಲ್ಲಿ ದೆಹಲಿಯಲ್ಲಿ ನಡೆದಿದ್ದ ಲಿವ್‌ ಇನ್‌ ಗೆಳತಿ ಶ್ರದ್ಧಾವಾಕರ್‌ (Shraddha walkar) ಹತ್ಯೆ ದೇಶಾದ್ಯಂತ ಭಾರೀ ಸದ್ದು ಮಾಡಿತ್ತು. ಇದೀಗ ಅದೇ ರೀತಿಯ ಪ್ರಕರಣ ಉತ್ತರ ಪ್ರದೇಶದ (Uttar Pradesh) ಬಾಲಿಯಾ ಜಿಲ್ಲೆಯಲ್ಲಿ ನಡೆದಿದೆ.

    ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಮಾಜಿ ಸೈನಿಕ (Ex-Army Soldier) ಪತಿಯನ್ನ ಹತ್ಯೆ ಮಾಡಿದ್ದಲ್ಲದೇ ದೇಹವನ್ನ 6 ತುಂಡುಗಳಾಗಿ ಕತ್ತರಿಸಿ ವಿವಿಧ ಸ್ಥಳಗಳಲ್ಲಿ ಎಸೆದಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 50 ವರ್ಷದ ಮಹಿಳೆ, ಆಕೆಯ ಪ್ರಿಯಕರ ಮತ್ತು ಇಬ್ಬರು ಸಹಚರರನ್ನ ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಏನಿದು ಕೇಸ್‌?
    ಉತ್ತರ ಪ್ರದೇಶದ ಬಹದ್ದೂರ್‌ ಪುರ ನಿವಾಸಿಯಾಗಿರುವ ಆರೋಪಿ ಮಹಿಳೆ ಮಾಯಾದೇವಿ ಪ್ರಿಯಕರ ಅನಿಲ್‌ ಯಾದವ್‌ ಜೊತೆ ಸೇರಿ ತನ್ನ ಮಾಜಿ ಸೈನಿಕ ಪತಿ ದೇವೇಂದ್ರ ಕುಮಾರ್‌ನನ್ನ ಹತ್ಯೆ ಮಾಡಿದ್ದಾಳೆ. ಈ ಪ್ರಕರಣದಲ್ಲಿ ಇವರಿಬ್ಬರಿಗೆ ಸಹಾಯ ಮಾಡಿದ್ದಕ್ಕಾಗಿ ಸತೀಶ್ ಯಾದವ್ ಮತ್ತು ಮಿಥಿಲೇಶ್ ಇಬ್ಬರು ಸಹಚರರನ್ನೂ ಬಂಧಿಸಲಾಗಿದೆ.

    ಏನಾಗಿತ್ತು?
    ಪೊಲೀಸರ ಮಾಹಿತಿ ಪ್ರಕಾರ, ಕಳೆದ ಮೇ 10 ರಂದು ಉತ್ತರ ಪ್ರದೇಶದ ಖರೀದ್‌ ಗ್ರಾಮದಲ್ಲಿ ಕತ್ತರಿಸಿದ ಶವ ಪತ್ತೆಯಾಗಿತ್ತು. ಒಂದು ಕಡೆ ಕೈ-ಕಾಲುಗಳು ತುಂಡಾಗಿ ಬಿದ್ದಿರುವುದು ಕಂಡುಬಂದಿತ್ತು. 2 ದಿನಗಳ ನಂತರ ಹತ್ತಿರದ ಬಾವಿಯಲ್ಲಿ ತಲೆ, ಕೈಕಾಲುಗಳಿಲ್ಲದ ದೇಹ ಪತ್ತೆಯಾಗಿತ್ತು. ಆದ್ರೆ ಮೃತ ವ್ಯಕ್ತಿಯ ತಲೆ ಇನ್ನೂ ಪತ್ತೆಯಾಗಿಲ್ಲ. ಅದಕ್ಕಾಗಿ ಡೈವರ್‌ಗಳಿಂದ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

    ಇತ್ತ ಪತಿಯನ್ನ ಕೊಂದಿದ್ದ ಮಾಯಾದೇವಿ ಠಾಣೆಗೆ ಬಂದು ನಾಪತ್ತೆ ಆಗಿದ್ದಾರೆಂದು ದೂರು ನೀಡಿದ್ದಳು. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದರು. ಪ್ರಾಥಮಿಕ ವಿಚಾರಣೆ ವೇಳೆ ಮಾಯಾದೇವಿ, ನನ್ನ ಪತಿ ಮಗಳನ್ನು ಕರೆದುಕೊಂಡು ಬರಲು ಬಿಹಾರದ ಬಕ್ಸಾರ್ ರೈಲ್ವೆ ನಿಲ್ದಾಣಕ್ಕೆ ಹೋಗಿದ್ದರು, ವಾಪಸ್‌ ಮನೆಗೆ ಬರಲಿಲ್ಲ. ಅವರ ಫೋನ್‌ ಕೂಡ ಸ್ವಿಚ್‌ ಆಫ್‌ ಆಗಿದೆ ಅಂತ ಕಥೆ ಕಟ್ಟಿದ್ದಳು. ಆದ್ರೆ ಮೃತದೇಹ ಪತ್ತೆಯಾದ ನಂತರ ಅನುಮಾನಗೊಂಡ ಪೊಲೀಸರು ಮತ್ತೆ ಪತ್ನಿಯನ್ನ ವಿಚಾರಣೆಗೆ ಒಳಪಡಿಸಿದಾಗ ನಾಟಕ ಬಯಲಾಯಿತು.

    ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ್ದಲ್ಲದೇ ಪತಿಯ ತಲೆಯನ್ನ ಘಾಘರ್‌ ನದಿಯಲ್ಲಿ ಎಸೆದಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.

  • ಡುಮ್ಮ ಅಂದಿದ್ದಕ್ಕೆ ಅತಿಥಿಗಳಿಗೆ ಗುಂಡಿಕ್ಕಿದ ಭೂಪ

    ಡುಮ್ಮ ಅಂದಿದ್ದಕ್ಕೆ ಅತಿಥಿಗಳಿಗೆ ಗುಂಡಿಕ್ಕಿದ ಭೂಪ

    ಲಕ್ನೋ (ಗೋರಖ್‌ಪುರ): ತನ್ನನ್ನು ಡುಮ್ಮ, ಬೊಬ್ಬು ಎಂದು ಕರೆದಿದ್ದಕ್ಕೆ ಕೋಪಗೊಂಡ ಯುವಕ, ಇಬ್ಬರು ಅತಿಥಿಗಳ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಗೋರಖ್‌ಪುರ (Gorakhpur) ಜಿಲ್ಲೆಯಲ್ಲಿ ನಡೆದಿದೆ.

    ಘಟನೆ ನಡೆದ ಮರುದಿನ ಖಜ್ನಿ ಪೊಲೀಸ್ ಠಾಣೆಯಲ್ಲಿ (Khajni police Station) ದೂರು ದಾಖಲಾಗಿದ್ದು, ನಂತರ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಬೆಲ್‌ಘಾಟ್ ಪ್ರದೇಶದ ನಿವಾಸಿ ಅರ್ಜುನ್ ಚೌಹಾಣ್ ಬಂಧಿತ ಆರೋಪಿ. ಇದನ್ನೂ ಓದಿ: ನಾಗ್ರೋಟಾದಲ್ಲಿ ಭಾರತೀಯ ಸೇನೆ & ಶಂಕಿತ ಉಗ್ರರ ನಡುವೆ ಗುಂಡಿನ ಚಕಮಕಿ

    ಅಷ್ಟಕ್ಕೂ ಆಗಿದ್ದೇನು?
    ಅರ್ಜುನ್‌ ಇತ್ತೀಚೆಗೆ ತನ್ನ ಚಿಕ್ಕಪ್ಪನೊಂದಿಗೆ ದೇವಸ್ಥಾನವೊಂದರಲ್ಲಿ ನಡೆಯುತ್ತಿದ್ದ ಔತಣಕೂಟಕ್ಕೆ ಹೋಗಿದ್ದ. ಈ ವೇಳೆ ಮಂಜರಿಯಾದ ಅನಿಲ್ ಚೌಹಾಣ್ ಮತ್ತು ಶುಭಮ್ ಚೌಹಾಣ್ ಎಂಬ ಇಬ್ಬರು ಅತಿಥಿಗಳು ತಾನು ಡುಮ್ಮ, ಬೊಜ್ಜು ಅಂತ ಸಿಕ್ಕಾಪಟ್ಟೆ ಅಪಹಾಸ್ಯ ಮಾಡುತ್ತಿದ್ದರು. ಇದರಿಂದ ಕೋಪಗೊಂಡ ಅರ್ಜುನ್‌ ತನ್ನ ಸ್ನೇಹಿತ ಆಸಿಫ್‌ ಖಾನ್‌ ಜೊತೆಗೆ ಆ ಇಬ್ಬರು ಅತಿಥಿಗಳನ್ನ ಹಿಂಬಾಲಿಸಿದ್ದ. ಗೋರಖ್‌ಪುರದ ತೆನುವಾ ಟೋಲ್ ಪ್ಲಾಜಾ ಬಳಿ ಕಾರು ನಿಲ್ಲಿಸಿ, ಇಬ್ಬರನ್ನೂ ಹೊರಗೆಳೆದು ಗುಂಡು ಹಾರಿಸಿ ಪರಾರಿಯಾಗಿದ್ದ ಎಂದು ದಕ್ಷಿಣ ಎಸ್ಪಿ ಜಿತೇಂದ್ರ ಕುಮಾರ್‌ ತಿಳಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಯನ್ನು ಚೀನಾ ಖಂಡಿಸುತ್ತದೆ: ಅಜಿತ್‌ ದೋವಲ್‌ಗೆ ಫೋನ್‌ ಕರೆಯಲ್ಲಿ ಚೀನಾ ಸ್ಪಷ್ಟನೆ

    ಗುಂಡೇಟು ಬಿದ್ದಿದ್ದ ಇಬ್ಬರನ್ನೂ ಅಲ್ಲಿನ ದಾರಿಹೋಕರು ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದರು, ಹೆಚ್ಚುವರಿ ಚಿಕಿತ್ಸೆಗಾಗಿ ಅವರನ್ನ ಗೋರಖ್‌ ಪುರ ಜಿಲ್ಲಾ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು. ಸದ್ಯ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಶುಭಂ ಚೌಹಾಣ್ ಅವರ ತಂದೆಯ ದೂರಿನ ಆಧಾರದ ಮೇಲೆ, ಎಫ್‌ಐಆರ್ ದಾಖಲಿಸಲಾಗಿದ್ದು, ಶುಕ್ರವಾರ ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಪದ್ಮಶ್ರೀ ಪುರಸ್ಕೃತ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢ ಸಾವು – ಕಾವೇರಿ ನದಿಯಲ್ಲಿ ಶವ ಪತ್ತೆ

  • ಅಡ್ರೆಸ್ ಕೇಳುವ ನೆಪದಲ್ಲಿ ಬಂದು ಬಾಲಕಿ ಕಿಡ್ನ್ಯಾಪ್‌ – ವಿವಿಧೆಡೆ ಕರೆದೊಯ್ದು ಅತ್ಯಾಚಾರ, ಓರ್ವ ಅರೆಸ್ಟ್‌

    ಅಡ್ರೆಸ್ ಕೇಳುವ ನೆಪದಲ್ಲಿ ಬಂದು ಬಾಲಕಿ ಕಿಡ್ನ್ಯಾಪ್‌ – ವಿವಿಧೆಡೆ ಕರೆದೊಯ್ದು ಅತ್ಯಾಚಾರ, ಓರ್ವ ಅರೆಸ್ಟ್‌

    ಲಕ್ನೋ: ತರಕಾರಿ (Vegetables) ಖರೀದಿಸಲು ಹೊರಗೆ ಹೋಗಿದ್ದ 13 ವರ್ಷದ ಬಾಲಕಿಯನ್ನ ಕಿಡ್ನ್ಯಾಪ್‌ ಮಾಡಿ ವಿವಿಧ ಸ್ಥಳಗಳಿಗೆ ಕರೆದೊಯ್ದು ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಿರುವುದಾಗಿ ಪೊಲೀಸರು (UP Police) ತಿಳಿಸಿದ್ದಾರೆ.

    ಏನಿದು ಘಟನೆ?
    ಕಳೆದ ಏಪ್ರಿಲ್‌ 26ರಂದು ಸಂಜೆ ಬಾಲಕಿ ತರಕಾರಿ ಖರೀದಿಸಲು ಮನೆಯಿಂದ ಹೊರಗೆ ಹೋಗಿದ್ದಳು. ಸ್ವಲ್ಪ ದೂರ ಹೋಗುತ್ತಿದ್ದಂತೆ ಅಲ್ಲೇ ಕಾರಿನಲ್ಲಿ ಕುಳಿತಿದ್ದ ವ್ಯಕ್ತಿ‌ ಅಡ್ರಸ್‌ ಕೇಳುವ ನೆಪದಲ್ಲಿ ಬಾಲಕಿಯನ್ನ ಮಾತನಾಡಿಸಿದ್ದಾನೆ. ಆಕೆ ಅಡ್ರಸ್‌ ಹೇಳಲು ಮುಂದಾಗುತ್ತಿದ್ದಂತೆ ಕಾರಿನಲ್ಲಿದ್ದ ವಿಷ್ಣು ಎನ್ನುವ ವ್ಯಕ್ತಿ ಆಕೆಯನ್ನ ಕಾರಿನೊಳಗೆ ಎಳೆದುಕೊಂಡು ಕಿಡ್ನ್ಯಾಪ್‌ (Kidnapped) ಮಾಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಬುಡಕ್ಕೆ `ಜಲ’ಬಾಂಬ್ ಹಾಕಿದ ಭಾರತ!

    ಸ್ವಲ್ಪ ಮುಂದೆ ಹೋದ ನಂತ್ರ ಮೆಡಿಕಲ್‌ ಸ್ಟೋರ್‌ನಲ್ಲಿ ನೀರು ಮತ್ತು ಔಷಧಿಗಳನ್ನ ತೆಗೆದುಕೊಂಡಿದ್ದಾರೆ. ಬಳಿಕ ನೀರಿನಲ್ಲಿ ಪ್ರಜ್ಞೆ ತಪ್ಪುವ ಔಷಧ ಬೆರಸಿ ಬಲವಂತವಾಗಿ ಬಾಲಕಿಗೆ ಕುಡಿಸಿದ್ದಾರೆ. ಕುಡಿದ ಬಳಿಕ ಬಾಲಕಿ ಪ್ರಜ್ಞೆ ತಪ್ಪಿದ್ದಾಳೆ. ನಂತರ ಹೋಟೆಲ್‌ಗೆ ಕರೆದೊಯ್ದು ನಕಲಿ ಐಡಿ ಕೊಟ್ಟು, ಬೆರಳಚ್ಚಿನಿಂದ ಸಹಿ ಪಡೆದಿದ್ದಾರೆ. ಬಳಿಕ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ 2 ಜಲವಿದ್ಯುತ್ ಯೋಜನೆಗಳಿಗೆ ಚಾಲನೆ – ಪಾಕ್‌ಗೆ ಶಾಕ್‌

    ಮರುದಿನ ಆರೋಪಿ ವಿಷ್ಣು ಮತ್ತು ಸಹವರ್ತಿ ನಾರಾಯಣ್‌ ಇಬ್ಬರೂ ಸೇರಿ ಬಾಲಕಿಯನ್ನ ದಾರಿಯಲ್ಲಿ ಬಿಟ್ಟುಬಂದಿದ್ದಾರೆ. ನಂತರ ಸಂಜಯ್‌ ಎಂಬಾತ ಆಕೆಯನ್ನ ತನ್ನ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಆಕೆಗೆ‌ ಕೂಲ್‌ಡ್ರಿಂಗ್ಸ್‌ ಕೊಟ್ಟಿದ್ದಾನೆ, ಕುಡಿಯುತ್ತಿದ್ದಂತೆ ಆಕೆ ಪ್ರಜ್ಞೆತಪ್ಪಿದ್ದು, ಆತನೂ ಅತ್ಯಾಚಾರ ಎಸಗಿದ್ದಾನೆ. ಮರುದಿನ ಬೆಳಗ್ಗೆ ಆಕೆ ಎಚ್ಚರಗೊಂಡು ತನ್ನ ಫೋನ್‌ ಕೇಳಿದಾಗ ಸಿಮ್‌ಕಾರ್ಡ್‌ ಇಲ್ಲದೇ ಬರೀ ಫೋನ್‌ ಕೊಟ್ಟು ಕಳಿಸಿದ್ದಾನೆ.

    ಹುಡುಗಿಯ ಪ್ರಕಾರ, ಆರೋಪಿ ವಿಷ್ಣು ತನ್ನ ಸಹಚರ ನಾರಾಯಣ್‌ಗೆ ಕರೆ ಮಾಡಿ, ಇಬ್ಬರೂ ಸೇರಿ ಹುಡುಗಿಯನ್ನು ದಾರಿಯಲ್ಲಿ ಬಿಟ್ಟು ಬಂದನು. ಸಂಜಯ್ ಎಂಬ ಮತ್ತೊಬ್ಬ ವ್ಯಕ್ತಿ ಅವಳನ್ನು ಕರೆದುಕೊಂಡು ಹೋಗಿ ತನ್ನ ಮನೆಗೆ ಕರೆದೊಯ್ದನು. ಅಲ್ಲಿಂದ ಸಂಜಯ್‌ ಬಾಲಕಿಯನ್ನ ತನ್ನ ಸಹೋದರನ ಮನೆಗೆ ಕರೆದೊಯ್ದು ತನ್ನ ಸಹೋದರನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ. ಇದನ್ನೂ ಓದಿ: ಜಡ್ಜ್‌ ನಿವಾಸದಲ್ಲಿ ಕಂತೆ ಕಂತೆ ನಗದು ಪತ್ತೆ ಕೇಸ್ – ಸಿಜೆಐ ಕೈ ಸೇರಿದ ತನಿಖಾ ವರದಿ

    ಸಂತ್ರಸ್ತ ಬಾಲಕಿಯ ಪೋಷಕರು ದೆಹಲಿಯಲ್ಲಿ ವಾಸಿಸುತ್ತಿದ್ದಾರೆ. ಬಾಲಕಿ ತನ್ನ ಅಜ್ಜಿಯೊಂದಿಗೆ ಹಳ್ಳಿಯಲ್ಲಿದ್ದಳು. ಏಪ್ರಿಲ್‌ 26ರಂದು ಕಾಣೆಯಾಗಿ ಮೇ 1ರಂದು ಪತ್ತೆಯಾಗಿದ್ದಳು. ಈ ಸಮಯದಲ್ಲಿ ಅನೇಕ ಸ್ಥಳಗಳಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿಯ ತಂದೆ ಶಿವರಾಮ್ ಸಿಂಗ್ ಹೇಳಿದ್ದಾರೆ.

    ಬಾಲಕಿ ಹಾಗೂ ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಓರ್ವನನ್ನ ಬಂಧಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಭಾರತ-ಪಾಕ್‌ ನಡುವೆ ಯುದ್ಧ ಛಾಯೆ – ಮೇ 7ರಂದು ದೇಶಾದ್ಯಂತ ಮಾಕ್ ಡ್ರಿಲ್

  • ರಾಹುಲ್ಲನನ್ನ ಬಿಟ್ಟು ಬದುಕಲ್ಲ – ಭಾವಿ ಅಳಿಯನೊಂದಿಗೆ ಒಟ್ಟಿಗೆ ಜೀವನ ನಡೆಸಲು ಮುಂದಾದ ಮಹಿಳೆ

    ರಾಹುಲ್ಲನನ್ನ ಬಿಟ್ಟು ಬದುಕಲ್ಲ – ಭಾವಿ ಅಳಿಯನೊಂದಿಗೆ ಒಟ್ಟಿಗೆ ಜೀವನ ನಡೆಸಲು ಮುಂದಾದ ಮಹಿಳೆ

    – 12 ಗಂಟೆ ಕೌನ್ಸೆಲಿಂಗ್‌ ಬಳಿಕವೂ ನಿರ್ಧಾರದಿಂದ ಹಿಂದೆ ಸರಿಯದ ಭಾವಿ ಅತ್ತೆ

    ಲಕ್ನೋ: ಉತ್ತರ ಪ್ರದೇಶದ ಅಲಿಘರ್‌ನಲ್ಲಿ (Uttar Pradesh’s Aligarh) ಭಾವಿ ಅಳಿಯ ಮತ್ತು ಅತ್ತೆಯ ಪ್ರೇಮ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದೆ. 10 ದಿನಗಳ ಬಳಿಕ ಪೊಲೀಸರ ಎದುರು ಶರಣಾದ ಸಪ್ನಾ ದೇವಿ ಮತ್ತು ಭಾವಿ ಅಳಿಯ ರಾಹುಲ್‌ ಈಗ ಒಟ್ಟಿಗೆ ಜೀವನ ಕಳೆಯಲು ನಿರ್ಧರಿಸಿದ್ದಾರೆ.

    ತನ್ನ ಮಗಳಿಗೆ ನಿಶ್ಚಯವಾಗಿದ್ದ ಭಾವಿ ಅಳಿಯನೊಂದಿಗೆ ಮನೆಯಲ್ಲಿದ್ದ 3.5 ಲಕ್ಷ ರೂ.ಗೂ ಹೆಚ್ಚು ನಗದು ಮತ್ತು 5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳನ್ನು ಸಹ ತೆಗೆದುಕೊಂಡು ಪರಾರಿಯಾಗಿದ್ದಳು. ಇದೀಗ ಪೊಲೀಸರಿಗೆ ಶರಣಾಗಿದ್ದು, ತಾನು ಓಡಿಹೋಗಲು ಕಾರಣ ಏನೆಂಬುದನ್ನ ತಿಳಿಸಿದ್ದಾಳೆ.

    UP Women 2

    12 ಗಂಟೆಗಳ ಕಾಲ ಕೌನ್ಸೆಲಿಂಗ್‌:
    ರಾಹುಲ್‌ ಮತ್ತು ಸಪ್ನಾ ದೇವಿ ಪೊಲೀಸರಿಗೆ ಶರಣಾದಾಗ ಸಪ್ನಾ ತನ್ನ ಕುಟುಂಬಸ್ಥರಿಂದ ಅನುಭವಿಸುತ್ತಿದ್ದ ತೊಂದರೆಗಳನ್ನು ಹೇಳಿಕೊಂಡಿದ್ದಳು. ಪತಿ ನಿತ್ಯ ಥಳಿಸುತ್ತಿದ್ದ, ಮಗಳೂ ಸಹ ಜಗಳ ಆಡುತ್ತಿದ್ದಳು, ಇದರಿಂದ ನನ್ನ ಮಾನಸಿಕ ನೆಮ್ಮದಿ ಹಾಳಾಗಿತ್ತು ಎಂದು ಹೇಳಿದ್ದಳು. ಅಲ್ಲದೇ ರಾಹುಲ್‌ ಸಹ ನಾನು ಇಲ್ಲದೇ ಇದ್ದಿದ್ದರೇ ಅವಳು ಬದುಕುತ್ತಿರಲಿಲ್ಲ ಎಂದು ಹೇಳಿದ್ದ. ಇದಾದ ಬಳಿಕ ಪೊಲೀಸರು ಸಪ್ನಾ ಮತ್ತು ಪತಿಗೆ 12 ಗಂಟೆಗಳ ಕಾಲ ಕೌನ್ಸೆಲಿಂಗ್‌ ನಡೆಸಿದರು. ಸಪ್ನಾಳ ಪತಿ ಮತ್ತು ಆತನ ಕುಟುಂಬಸ್ಥರೊಂದಿಗೆ ಮಾತನಾಡಿಸಿ, ಮನವೊಲಿಸುವ ಪ್ರಯತ್ನ ಮಾಡಿದರು. ಆದ್ರೆ ಸಪ್ನಾ ಮಾತ್ರ ರಾಹುಲ್‌ ಜೊತೆಗೇ ಜೀವನ ಕಳೆಯುವ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ಕೊನೆಗೆ ಪೊಲೀಸರು ಸಪ್ನಾಳನ್ನ ರಾಹುಲ್‌ ಜೊತೆಗೆ ಕಳುಹಿಸಿದ್ರು ಎಂದು ವರದಿಗಳು ತಿಳಿಸಿವೆ. ಆದ್ರೆ ಸಪ್ನಾ ದೇವಿ ಪತಿ, ಅವಳು ದೋಚಿರುವ ಎಲ್ಲಾ ಹಣ ಮತ್ತು ಚಿನ್ನಾಭರಣ ಹಿಂದಿರುಗಿಸುವವರೆಗೆ ಇಬ್ಬರನ್ನೂ ಬಿಡಲ್ಲ ಎಂದು ಹೇಳಿದ್ದಾನೆ.

    UP Women

    ಏನಿದು ಪ್ರಕರಣ?
    ಸಪ್ನಾಳ ಮಗಳು ಅನಿತಾಳಿಗೆ ಯುವಕನೊಂದಿಗೆ ವಿವಾಹ ನಿಶ್ಚಯವಾಗಿತ್ತು. 10 ದಿನಗಳಲ್ಲಿ ಮದುವೆ ನಡೆಯಬೇಕಿತ್ತು. ಆಮಂತ್ರಣ ಪತ್ರಿಕೆಗಳನ್ನು ಸಹ ಮುದ್ರಿಸಿ, ಸಂಬಂಧಿಕರಿಗೆ ಆಹ್ವಾನ ನೀಡಲಾಗಿತ್ತು. ಆದರೆ, ತನ್ನ ಮಗಳನ್ನು ಮದುವೆಯಾಗಬೇಕಿದ್ದ ಯುವಕನೊಂದಿಗೆ ಸಪ್ನಾ ಓಡಿ ಹೋಗಿದ್ದಳು. ಇದು ಇಡೀ ಕುಟುಂಬವನ್ನು ದಿಗ್ಭ್ರಮೆಗೊಳಿಸಿತ್ತು.

    uttar pradesh man

    ನಾನು ಏಪ್ರಿಲ್ 16 ರಂದು ರಾಹುಲ್ ಜೊತೆ ಮದುವೆಯಾಗಬೇಕಿತ್ತು. ಆದರೆ ನನ್ನ ತಾಯಿ ಭಾನುವಾರ ಅವನೊಂದಿಗೆ ಓಡಿಹೋದರು. ರಾಹುಲ್ ಮತ್ತು ನನ್ನ ತಾಯಿ ಕಳೆದ ಮೂರು ನಾಲ್ಕು ತಿಂಗಳಿನಿಂದ ಫೋನ್‌ನಲ್ಲಿ ಸಾಕಷ್ಟು ಮಾತನಾಡುತ್ತಿದ್ದರು. ನಮ್ಮ ಅಲ್ಮಾರಾದಲ್ಲಿ 3.5 ಲಕ್ಷ ರೂ. ನಗದು ಮತ್ತು 5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳಿದ್ದವು. ಅವನು ಕೇಳಿದ್ದನ್ನೆಲ್ಲಾ ಅವಳು ಮಾಡಿದ್ದಾಳೆ. ನನ್ನ ತಾಯಿ ನಮ್ಮ ಎಲ್ಲಾ ಹಣವನ್ನು ತೆಗೆದುಕೊಂಡು ಓಡಿ ಹೋಗಿದ್ದಾಳೆಂದು ವಧು ಅನಿತಾ ನೊಂದು ನುಡಿದಿದ್ದಳು.

    ಸಪ್ನಾಳ ಪತಿ ಕುಮಾರ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪೊಲೀಸರು ಸಪ್ನಾ ಮತ್ತು ರಾಹುಲ್ ಪತ್ತೆಗೆ ಬಲೆಬೀಸಿದ್ದರು.

  • ನಾನು ಅವನನ್ನೇ ಮದ್ವೆಯಾಗ್ತೀನಿ – ಭಾವಿ ಅಳಿಯನೊಂದಿಗೆ ಓಡಿಹೋಗಿದ್ದ ಯುಪಿ ಮಹಿಳೆ ಪಟ್ಟು

    ನಾನು ಅವನನ್ನೇ ಮದ್ವೆಯಾಗ್ತೀನಿ – ಭಾವಿ ಅಳಿಯನೊಂದಿಗೆ ಓಡಿಹೋಗಿದ್ದ ಯುಪಿ ಮಹಿಳೆ ಪಟ್ಟು

    – ಏನೇ ಆಗಲಿ ರಾಹುಲ್ಲನೊಂದಿಗೆ ಬದುಕುತ್ತೀನಿ ಅಂದ್ಳು ಸಪ್ನೋಂಕಿ ರಾಣಿ

    ಲಕ್ನೋ: ಪ್ರೀತಿ (Love) ಎಂಬುದು ಮಾಯೆ.. ಅದು ಹುಟ್ಟಿದಾಗ ಗಾಳಿಯಲ್ಲಿ ತೇಲಾಡುವ ಅನುಭವ… ಎದೆಯಲ್ಲಿ ಪುಳಕ, ಅಸಹನೀಯ ಭಾರ. ಇದರ ಕೊನೆಯ ಹಂತವೇ ಮದುವೆ. ಆದ್ರೆ ಈ ಪ್ರೀತಿ ಅದು ಯಾರಿಗೆ ಯಾವಾಗ ಹೇಗೆ, ಯಾರ ಮೇಲೆ ಹುಟ್ಟುತ್ತೆ? ಅನ್ನೋ ಕಾರಣವೇ ನಿಗೂಢ.. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಕೆಲ ವಿವಾಹಿತ ಮಹಿಳೆಯರು ಯುವಕರನ್ನು ವರಿಸುತ್ತಿರುವ ಪ್ರಸಂಗ ಆಗಾಗ್ಗೆ ಕಂಡುಬರುತ್ತಿವೆ. ಇದಕ್ಕೆ ಉತ್ತರ ಪ್ರದೇಶದ (Uttar Pradesh) ಘಟನೆ ತಾಜಾ ಉದಾಹರಣೆಯಾಗಿದೆ.

    UP Women

    ತನ್ನ ಮಗಳಿಗೆ ನಿಶ್ಚಯವಾಗಿದ್ದ (daughter’s fiance) ಭಾವಿ ಅಳಿಯನೊಂದಿಗೆ ಮನೆಯಲ್ಲಿದ್ದ 3.5 ಲಕ್ಷ ರೂ.ಗೂ ಹೆಚ್ಚು ನಗದು ಮತ್ತು 5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳನ್ನು ಸಹ ತೆಗೆದುಕೊಂಡು ಪರಾರಿಯಾಗಿದ್ದಳು. ಇದೀಗ ಪೊಲೀಸರಿಗೆ ಶರಣಾಗಿದ್ದು, ತಾನು ಓಡಿಹೋಗಲು ಕಾರಣ ಏನೆಂಬುದನ್ನ ತಿಳಿಸಿದ್ದಾಳೆ. ಅಲ್ಲದೇ ಅವನನ್ನೇ ಮದುವೆಯಾಗುತ್ತೇನೆಂದು ಪಟ್ಟು ಹಿಡಿದಿದ್ದಾಳೆ. ಇದನ್ನೂ ಓದಿ: ಪಿಯುಸಿ ಹುಡುಗನ ಮದುವೆಯಾದ ಮೂರು ಮಕ್ಕಳ ತಾಯಿ!

    ಓಡಿ ಹೋಗಿದ್ದ ಮಹಿಳೆ ಸಪ್ನಾ, ಭಾವಿ ಅಳಿಯ ರಾಹುಲ್‌ ಕುಮಾರ್. ತನ್ನ ಪತಿ ಕುಡಿದು ಥಳಿಸುತ್ತಿದ್ದ, ಮಗಳು ಕೂಡ ಪದೇ ಪದೇ ಜಗಳವಾಡುತ್ತಿದ್ದಳು ಇದರಿಂದ ಬೇಸತ್ತು ಅವನೊಂದಿಗೆ ಓಡಿ ಹೋದೆ. ನನ್ನ ಕಥೆಯನ್ನು ಕೇಳಿ ರಾಹುಲ್‌ ಓಡಿ ಹೋಗಲು ಒಪ್ಪಿಕೊಂಡ. ಇಲ್ಲದಿದ್ದರೆ, ಆತ್ಮಹತ್ಯೆ ಒಂದೇ ದಾರಿಯಾಗಿತ್ತು. ಪೊಲೀಸರು ಹುಡುಕಾಡುತ್ತಿರುವುದು ಗೊತ್ತಾಗಿ ಮರಳಿ ಬಂದೆ. ಏನೇ ಆಗಲಿ ನಾನು ರಾಹುಲ್‌ ಜೊತೆಗೇ ಬದುಕುತ್ತೇನೆ, ಅವನನ್ನೇ ಮದುವೆಯಾಗುತ್ತೇನೆ ಅಂತ ಹೇಳಿಕೊಂಡಿದ್ದಾಳೆ. ಇದನ್ನೂ ಓದಿ: ತನ್ನ ಮಗಳನ್ನು ಮದುವೆಯಾಗಬೇಕಿದ್ದ ಭಾವಿ ಅಳಿಯನೊಂದಿಗೆ ಮಹಿಳೆ ಜೂಟ್‌

    ಅಲ್ಲದೇ ಲಕ್ಷಗಟ್ಟಲೇ ಚಿನ್ನಾಭರಣ, ಹಣ ಕದ್ದೊಯ್ದಿದ್ದಾರೆ ಎನ್ನುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಹೋಗುವಾಗ ನನ್ನ ಮೊಬೈಲ್‌, 200 ರೂ.ಪಾಯಿ ಮಾತ್ರ ತೆಗೆದುಕೊಂಡು ಹೋಗಿದ್ದೆ. ಆಕೆಯ ಮತ್ತೊಬ್ಬ ಮಗಳು ಶಿವಾನಿ ಮನೆಯಲ್ಲಿದ್ದ 3.5 ಲಕ್ಷ ರೂಪಾಯಿ ನಗದು ಮತ್ತು 5 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.

    ಇದೇ ಸಂದರ್ಭದಲ್ಲಿ ರಾಹುಲ್‌ ಕುಮಾರ್‌ನನ್ನು ವಿವಾಹವಾಗುತ್ತೀಯಾ ಎಂದು ಕೇಳಿದ್ದಕ್ಕೆ ಆತ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ನಡುವೆ ಸಪ್ನಾಳ ಕುಟುಂಬಸ್ಥರು ಅವಳು ಮನೆಗೆ ವಾಪಸ್‌ ಬರೋದು ಬೇಡ ತೆಗೆದುಕೊಂಡು ಹೋಗಿರುವ ಚಿನ್ನಾಭರಣ ಕೊಟ್ಟರೆ ಸಾಕು ಅಂತ ಹೇಳಿದ್ದಾರೆ. ಇದನ್ನೂ ಓದಿ: ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾದರೆ ಪೊಲೀಸ್ ರಕ್ಷಣೆ ಇಲ್ಲ: ಹೈಕೋರ್ಟ್

    uttar pradesh man

    ಏನಿದು ಪ್ರಕರಣ?
    ಸಪ್ನಾಳ ಮಗಳು ಅನಿತಾಳಿಗೆ ಯುವಕನೊಂದಿಗೆ ವಿವಾಹ ನಿಶ್ಚಯವಾಗಿತ್ತು. 10 ದಿನಗಳಲ್ಲಿ ಮದುವೆ ನಡೆಯಬೇಕಿತ್ತು. ಆಮಂತ್ರಣ ಪತ್ರಿಕೆಗಳನ್ನು ಸಹ ಮುದ್ರಿಸಿ, ಸಂಬಂಧಿಕರಿಗೆ ಆಹ್ವಾನ ನೀಡಲಾಗಿತ್ತು. ಆದರೆ, ತನ್ನ ಮಗಳನ್ನು ಮದುವೆಯಾಗಬೇಕಿದ್ದ ಯುವಕನೊಂದಿಗೆ ಸಪ್ನಾ ಓಡಿ ಹೋಗಿದ್ದಳು. ಇದು ಇಡೀ ಕುಟುಂಬವನ್ನು ದಿಗ್ಭ್ರಮೆಗೊಳಿಸಿತ್ತು.

    ನಾನು ಏಪ್ರಿಲ್ 16 ರಂದು ರಾಹುಲ್ ಜೊತೆ ಮದುವೆಯಾಗಬೇಕಿತ್ತು. ಆದರೆ ನನ್ನ ತಾಯಿ ಭಾನುವಾರ ಅವನೊಂದಿಗೆ ಓಡಿಹೋದರು. ರಾಹುಲ್ ಮತ್ತು ನನ್ನ ತಾಯಿ ಕಳೆದ ಮೂರು ನಾಲ್ಕು ತಿಂಗಳಿನಿಂದ ಫೋನ್‌ನಲ್ಲಿ ಸಾಕಷ್ಟು ಮಾತನಾಡುತ್ತಿದ್ದರು. ನಮ್ಮ ಅಲ್ಮಾರಾದಲ್ಲಿ 3.5 ಲಕ್ಷ ರೂ. ನಗದು ಮತ್ತು 5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳಿದ್ದವು. ಅವನು ಕೇಳಿದ್ದನ್ನೆಲ್ಲಾ ಅವಳು ಮಾಡಿದ್ದಾಳೆ. ನನ್ನ ತಾಯಿ ನಮ್ಮ ಎಲ್ಲಾ ಹಣವನ್ನು ತೆಗೆದುಕೊಂಡು ಓಡಿ ಹೋಗಿದ್ದಾಳೆಂದು ವಧು ಅನಿತಾ ನೊಂದು ನುಡಿದಿದ್ದಳು.

    ಸಪ್ನಾಳ ಪತಿ ಕುಮಾರ್ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪೊಲೀಸರು ಸಪ್ನಾ ಮತ್ತು ರಾಹುಲ್ ಪತ್ತೆಗೆ ಬಲೆಬೀಸಿದ್ದರು. ಇದನ್ನೂ ಓದಿ: Mandya | ಅಪರಿಚಿತ ವಾಹನ ಡಿಕ್ಕಿ – ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು